Connect with us

ದಿನದ ಸುದ್ದಿ

ದಲಿತ ಯುವಕನಿಗೆ ಮೂತ್ರ ಕುಡಿಸಿದ ಪ್ರಕರಣ : ಪಿಎಸ್ಐ ಅರ್ಜುನ್ ಶಿಕ್ಷೆಗೆ ಆಗ್ರಹ

Published

on

ದಲಿತ ಯುವಕ ಪುನೀತ್ | ಪಿಎಸ್ಐ ಅರ್ಜುನ್
  • ನಾಗರಾಜ್ ಹೆತ್ತೂರು

ಕೋವಿಡ್ ನಡುವೆ ಇಡೀ ರಾಜ್ಯವೇ ಬೆಚ್ಚಿ ಬಿಳಿಸುವ ಅಮಾನವೀಯ ಘಟನೆಯೊಂದು ಚಿಕ್ಕಮಗಳೂರಿನಲ್ಲಿ ನಡೆದು ಹೋಯ್ತು. ಪುನೀತ್ ಎಂಬ ಇಪ್ಪತ್ತೆರಡು ವಯಸ್ಸಿನ ಯುವಕನ ಬಾಯಿಗೆ ಮೂತ್ರ ಕುಡಿಸಿ ಕೊನೆಗೆ ನೆಲಕ್ಕೆ ಸುರಿದಿದ್ದ ಮೂತ್ರವನ್ನು ನಾಲಗೆಯಿಂದ ನೆಕ್ಕಿಸಿದ ಗೋಣಿಬೀಡಿದ ಪಿಎಸ್ಐ ಅರ್ಜುನ್ ಎಂಬಾತ ತನ್ನ ವಿಕೃತಿಯನ್ನು ಮರೆದ.

ನಿಜ, ಕೋವಿಡ್ ಇಲ್ಲದಿದ್ದರೆ ಇಡೀ ರಾಜ್ಯಕ್ಕೆ ರಾಜ್ಯವೇ ಈ ಘಟನೆಯನ್ನು ಖಂಡಿಸುತ್ತಿತ್ತು. ನಾನು ಪುನೀತ್ ಪರ `am stand with puneeth ‘ ಎಂದು ಜನ ದಂಗೆ ಏಳುತ್ತಿದ್ದರು ಮೂಡಿಗೆರೆ, ಕಿರಗುಂದ ಚಲೋಗಳು ನಡೆಯುತ್ತಿದ್ದವು.

ಇಂತಹುದೊಂದು ಅಮಾನವೀಯ ಕೃತ್ಯ ನಡೆದರೂ ಅರ್ಜುನ್ ಎಂಬ ಪಿಎಸ್ಐ ಗೆ ಯಾವ ಶಿಕ್ಷೆಯೂ ಆಗಿಲ್ಲ. ಜನರ ಕೋಪ, ಆಕ್ರೋಶ ಶಮನಗೊಳಿಸಲು ಆತನನ್ನು ಎಸ್ಪಿ ಕಚೇರಿಗೆ ವರ್ಗಾವಣೆ ಮಾಡಿಕೊಂಡಿರುವ ಇಲಾಖೆ ಮುಖ್ಯಸ್ಥರು ಕೇವಲ ಕಣ್ಣು ಒರೆಸುವ ಕೆಲಸ ಮಾಡಿದ್ದಾರೆ. ಮೂತ್ರ ಕುಡಿಸಿದಂತ ಅತ್ಯಂತ ಅಮಾನವೀಯ ಪ್ರಕರಣ ನಡೆದರೂ ಮಾನವ ಹಕ್ಕು ಆಯೋಗ ತುಟಿ ಬಿಚ್ಚಿಲ್ಲ…

ಇಡೀ ವ್ಯವಸ್ಥೆ ಎಷ್ಟು ಜಡ್ಡುಗಟ್ಟಿದೆ ಎನ್ನುವುದಕ್ಕೆ ಈ ಪ್ರಕರಣವೇ ಸಾಕ್ಷಿಯಾಗಿದ್ದು ಇದರ ಸಂಪೂರ್ಣ ಡೀಟೆಲ್ ಸ್ಟೋರಿಯನ್ನು ಜನರಿಗೆ ತಿಳಿಸುವ ಪ್ರಯತ್ನವನ್ನು ‘ಭೀಮ ವಿಜಯ ‘ಮಾಡುತ್ತಿದೆ.

ಈತನ ಹೆಸರು ಪುನೀತ್ 22 ವರ್ಷದ ಸ್ತುರದ್ರೂಪಿ ಯುವಕ ಮೂಡಿಗೆರೆ ತಾಲೂಕಿನ ಕಿರಗುಂದ ಗ್ರಾಮದವನು. ಐಟಿಐ ಮಾಡಿಕೊಂಡು ಹೊರಗುತ್ತಿಗೆಯಲ್ಲಿ ಕಂಪ್ಯೂಟರ್ ಕೆಲಸ ಮಾಡಿಕೊಂಡಿರುತ್ತಾನೆ.

ಇದೇ ಗ್ರಾಮದ ಗಂಡ ಹೆಂಡತಿ ವಿಚಾರಕ್ಕೆ ಸಂಬಂಧಪಟ್ಟಂತೆ ಜಗಳವೊಂದು ನಡೆಯಿತು. ಆರು ತಿಂಗಳ ಹಿಂದೆ ಪುನೀತ್ ಕಾಣೆಯಾದ ಹೆಂಗಸಿನ ನಂಬರ್ ಗೆ ಕರೆ ಮಾಡಿರುತ್ತಾನೆ. ಈ ವಿಚಾರ ಅವರ ಮನೆಗೂ ಗೊತ್ತಾಗಿ ಕರೆಸಿ ಮದುವೆಯಾದ ಹೆಣ್ಣುಮಕ್ಕಳಿಗೆ ಕರೆ ಮಾಡಬಾರದೆಂದು ಬುದ್ದಿ ಹೇಳಿ ಕಳಿಸುತ್ತಾರೆ.

ಇದೀಗ ಆ ಹೆಣ್ಣುಮಗಳು ಪಕ್ಕದ ಮನೆಯಾತನೊಂದಿಗೆ ಓಡಿ ಹೋಗಿದ್ದು ಇದರಲ್ಲಿ ಪುನೀತನ ಕೈವಾಡ ಇರಬಹುದೆಂಬ ಶಂಕೆಯಿಂದ ಕೆಲವರು ಆತನ ಮನೆ ಮುಂದೆ ಬಂದು ಜಗಳ ಮಾಡುತ್ತಾರೆ. ಈ ಬಗ್ಗೆ ಮಾಹಿತಿಯೇ ಇಲ್ಲದ ಪುನೀತ್ ಇದರಲ್ಲಿ ನನ್ನ ಪಾತ್ರ ಏನೂ ಇಲ್ಲ ಎಂದು ಎಷ್ಟೇ ಹೇಳಿದರೂ ಜನರು ಒಪ್ಪದಿದ್ದಾಗ ಹೆದರಿದ ಆತ 112 ಪೊಲೀಸರಿಗೆ ಕರೆ ಮಾಡಿ ನಮಗೆ ರಕ್ಷಣೆ ನೀಡುವಂತೆ ಮನವಿ ಮಾಡುತ್ತಾನೆ. ಇದಾದ ನಂತರ ವಿಚಾರಿಸಿದ ಪೊಲೀಸರು ರಕ್ಷಣೆ ಮಾಡುವ ಸಲುವಾಗಿ ಪೊಲೀಸ್ ಠಾಣೆಗೆ ಈತನನ್ನು ಜೀಪಿಗೆ ಕೂರಿಸಿಕೊಳ್ಳುತ್ತಾರೆ.ಅಷ್ಟರಲ್ಲಿ ಪಿಎಸ್ಐ ಅರ್ಜುನ್ ಕೂಡ ಅಲ್ಲಿಗೆ ಬರುತ್ತಾರೆ.

ಈ ನಡುವೆ ಈತನ ಮೇಲೆ ಯಾರೂ ದೂರು ನೀಡದಿರುವುದರಿಂದ ಈತನ ಪಾತ್ರ ಏನೂ ಇಲ್ಲ ಎಂದು ಹೇಳುತ್ತಾರೆ. ಆದರೆ ಅಲ್ಲಿನ ಕೆಲ ಪೊಲೀಸರು “ಸಾರ್ ಈತನದ್ದು ಕೈವಾಡ ಇದೆ . ಅವರು ಓಡಿ ಹೋಗಲು ಈತನೇ ಕಾರಣ ’’ ಎಂದು ಪಿಎಸ್ಐ ಗೆ ಕಿವಿ ಚುಚ್ಚುತ್ತಾರೆ

ಅವರ ಮಾತು ನಂಬಿದ ಪಿಎಸ್ ಐ ` ಗಾಡಿ ಹತ್ತು ಸೂಳೆ ಮಗನೇ’ ಎಂದು ಗಾಡಿ ಹತ್ತಿಸಿಕೊಂಡು ಹೊರಡುತ್ತಾರೆ. ಮಾರ್ಗ ಮದ್ಯೆ 112 ನಿಂದ ತಮ್ಮ ಜೀಪಿಗೆ ಆತನನ್ನು ತುಂಬಿಕೊಳ್ಳುತ್ತಾರೆ. ಅಲ್ಲಿ ಏನೇನು ನಡೆಯಿತು ಎಂಬುದನ್ನು ಪುನೀತ್ ಬಾಯಿಯಿಂದ ಕೇಳೋಣ

ಗೋಣಿ ಬೀಡಿನ ಠಾಣೆಯಲ್ಲಿ ನರಕ ದರ್ಶನ ತೋರಿಸಿದ ಅರ್ಜುನ್

`ನಾನು ಪೊಲೀಸ್ ವಾಹನದಿಂದ ಕೆಳಗೊಳಿದ ತಕ್ಷಣ ಠಾಣೆಯ ಮೇಲಿನ ಕೋಣೆಯೊಂದಕ್ಕೆ ಕರೆದುಕೊಂಡು ಹೋದರು ನನ್ನ ಮೇಲೆ ದೂರಿಲ್ಲ ಎಂದು ಬೇಡಿಕೊಂಡರೂ ಕೇಳಲಿಲ್ಲ. ಬಟ್ಟೆ ಬಿಚ್ಚು ಸೂಳೆ ಮಗನೇ ಎಂದು ಬೈದರು. ನನ್ನ ಕೈ ಕಾಲು ಕಂಬಕ್ಕೆ ಕಟ್ಟಿ ನೇತು ಹಾಕಿದರು. ಮಧ್ಯೆ ಕಬ್ಬಿಣದ ರಾಡು ಇಟ್ಟರು. ಮುಂಗಾಲಿಗೆ, ಅಂಗಾಲಿಗೆ ಹೊಡೆದರು.

ಸುಮಾರು 2 ಗಂಟೆ ಹಿಂಸೆ ಕೊಟ್ಟರು. `ಸಾರ್ ನಾನೇನಾದ್ರೂ ಇದರಲ್ಲಿ ಇದ್ದೀನಿ ಎಂದರೆ ಸತ್ತು ಹೋಗುತ್ತೇನೆ ಅವರನ್ನು ಕರೆಸಿ ಒಂದು ಮಾತು ಕೇಳಿ ಎಂದು ಅತ್ತು ಬೇಡಿಕೊಂಡೆ….ಅವರ ಮನ ಕರಗಲಿಲ್ಲ. ಬದಲಾಗಿ `ನೀನೇ ಮಾಡಿರುವುದು ಎಂದು ಒಪ್ಪಿಕೋ’ ಎಂದು ಮತ್ತೆ ಹೊಡೆದರು ಕೊನೆಗೆ ಇವರ ಹೊಡೆತ, ಹಿಂಸೆ ಹೆಚ್ಚಾದಾಗ ಸಾಯಿಸುತ್ತಾರೆ ಎಂದು ಹೆದರಿ ಒಪ್ಪಿಕೊಂಡೆ .

ಆಗ ಸ್ವಲ್ಪ ಹೊತ್ತು ಸುಮ್ಮನಾದರು. ಗಂಟಲು ಒಣಗಿ ಹೋಗಿತ್ತು ಉಸಿರಾಡಲು ಕಷ್ಟ ಆಗುತ್ತಿತ್ತು ಬಾಯಾರಿಕೆ ಆಗುತ್ತಿದೆ ನೀರು ಕೊಡಿ ಎಂದು ಬೇಡಿಕೊಂಡೆ. ಅಲ್ಲೇ ಇದ್ದ ಪೊಲೀಸನಿಂದ ಖಾಲಿ ಬಾಟಲ್ ನಲ್ಲಿ ಉಳಿದಿದ್ದ ಎರಡೇ ಹನಿ ಹಾಕಿದರು. `ಚೆನ್ನಾಗಿದ್ದೀಯಾ’ ಎಂದು ಅಣಕಿಸಿ ಕೇಳಿದರು .

ನಾನು ನೇತಾಡುತ್ತಲೇ ಇದ್ದೆ. ನೀನು ಅಪ್ಪನಿಗೆ ಹುಟ್ಟಿದ್ದೀಯಾ..? ಎಂದು ಕೇಳಿದರು. ಹೌದು ಎಂದೆ. ಇದಕ್ಕೆ ಗ್ಯಾರಂಟಿ ಏನು..? ಎಂದರು… ಯಾವ ಜಾತಿ..?ಎಂದರು ಎಸ್ಸಿ ಎಂದಿದ್ದಕ್ಕೆ ಮತ್ತೆ ಹೊಡೆದರು. ನಿಮ್ಮದು ಇದೇ ಕೆಲಸ ಸೋಳೆ ಮಕ್ಕಳ ಎಂದು ಪಾದಕ್ಕೆ ಹೊಡೆದರು. ಕೊನೆಗೆ ಬಾಯಿ ಸಂಪೂರ್ಣ ಒಣಗಿದ್ದರಿಂದ ತಡೆಯದೇ ನೀರು ಬೇಕೇ ಬೇಕು ಎಂದು ಎಂದೆ.

ಚೇತನ ಎಂಬುವನಿಂದ ಉಚ್ಚೆ ಕುಡಿಸಿದ ಪಾಪಿ ಅರ್ಜುನ

`ಬಾಯಾರಿಕೆ ತಡೆಯದೆ ಸಾಯುವಂತಾಗುತ್ತಿತ್ತು. ನೀರು ಬೇಕೇ ಬೇಕೆಂದು ಅಂಗಲಾಚಿದೆ. ನನ್ನ ಇರಿಸಿಕೊಂಡಿದ್ದ ಕೋಣೆಯಲ್ಲಿ ಕಳ್ಳತನದ ಆರೋಪದಲ್ಲಿ ಚೇತನ್ ಎಂಬುವನನ್ನು ಕರೆದು ಕೂರಿಸಿಕೊಂಡಿದ್ದರು. ಆತನನ್ನು ಕರೆದ ಅರ್ಜುನ್ ` ಈತನಿಗೆ ನೀರು ಬೇಕೆಂತೆ ಉಚ್ಚೆ ಹೂಯ್ಯೋ ‘ ಎಂದರು ಆತ ಹಿಂಜರಿದ. ಆದರೆ ಆತನಿಗೆ ಭಯ ಹುಟ್ಟಿಸಿ ನಿನಗೂ ಇದೇ ರೀತಿ ಮಾಡುತ್ತೇನೆಂದು ಹೆದರಿಸಿದರು.

ಆಗ ನನ್ನ ಬಳಿ ಬಂದ ಆತ ಜಿಪ್ಪು ಬಿಚ್ಚು ನನ್ನ ಬಾಯಿಗೆ ಮೂತ್ರ ಮಾಡಿದ. ನಾನು ತಲೆ ಎತ್ತಿ ಬೇಡ ಎಂದರೂ ಬಿಡದ ಪಿಎಸ್ಐ ಉಚ್ಚೆ ಹೂಯಿಸಿದರು. ನನಗೆ ಆಗಲೇ ಸಾವು ಬರಬಾರದೆ ಅನಿಸಿತು. ಹೊಡೆದ ಹೊಡೆತಕ್ಕೆ ಕೈಕಾಲುಗಳು ಸಂಪೂರ್ಣ ಬಿದ್ದು ಹೋಗಿದ್ದವು. ನಂತರ ಕೆಲವರು ಕೆಳಗೆ ಇಳಿಸಿದರು. ಆಗಲೂ ಬಿಡದ ಅರ್ಜುನ್ ಅಲ್ಲಿ ಬಿದ್ದಿದ್ದ ಮೂತ್ರವನ್ನು ನಾಲಿಗೆಯಿಂದ ನೆಕ್ಕಿಸಿದರು.

ನಾನು ಇಲ್ಲಿದ್ದೇನೆಂದು ಯಾರಿಗೂ ಗೊತ್ತಿರಲಿಲ್ಲ . 5.30 ಕ್ಕೆ ನನ್ನ ಮಾವ ಬಂದಿದ್ದರೂ ನನ್ನ ಭೇಟಿಯಾಗಲು ಬಿಟ್ಟಿರಲಿಲ್ಲ. ರಾತ್ರಿ 10 ಗಂಟೆಗೆ ಬರಲು ಹೇಳಿದ್ದರು. ಕೊನೆಗೆ 10.30 ಕ್ಕೆ ಮಾವ ಬಂದರು. ನನ್ನ ಸ್ಥಿತಿ ನೋಡಿ ಅತ್ತರು. ಅವರೊಂದಿಗೆ ಬೈಕಲ್ಲಿ ಬರುತ್ತಾ ನಡೆದಿದ್ದೆಲ್ಲವನ್ನೂ ಹೇಳಿದೆ. ಆದರೆ ಅಪ್ಪ ಅಮ್ಮನಿಗೆ ವಿಚಾರ ಹೇಳಿರಲಿಲ್ಲ.

ಮತ್ತೆ ಟಾರ್ಚರ್ ಶುರುವಾಯ್ತು

ಅದಾಗಿ ಮತ್ತೆ ಅರ್ಜುನ್ ಅವರೇ ಕರೆ ಮಾಡಿ ನೀನೇ ಅವರನ್ನು ಎಲ್ಲಿಗೆ ಕಳಿಸಿದ್ದೀಯಾ ಕರೆದುಕೊಂಡು ಬಾ ಎಂದು ಹೆದರಿಸಿದರು. ಆಗ ಭಯ ಇನ್ನೂ ಶುರುವಾಯ್ತು . ಸಾಯಬೇಕೆನಿಸಿತು. ಕೊನೆಗೆ ಮಾವನಿಗೆ ಹೇಳಿದೆ. ನಂತರ ಗೊತ್ತಿರುವ ಪತ್ರಕರ್ತರ ಮೂಲಕ ಎಸ್ಪಿ, ಐಡಿ, ಡಿಐಜಿ , ಎಸ್ಪಿ ಮಾನವ ಹಕ್ಕು ಆಯೋಗಕ್ಕೆ ಪತ್ರ ಬರೆದೆವು. ಮಾಧ್ಯಮಗಳಲ್ಲಿ ಸುದ್ದಿ ಬಂತು. ಘಟನೆ ಬಗ್ಗೆ ನಮ್ಮ ಎಂಎಲ್ ಎ ಎಂಪಿ ಕುಮಾರಸ್ವಾಮಿ, ಮೋಟಮ್ಮ ಮೊದಲಾದವರು ವಿಚಾರಿಸಿಕೊಂಡರು.

ದಲಿತ ಸಂಘಟನೆಗಳೆಲ್ಲ ನಮ್ಮ ಪರ ಬಂದರು. ಈ ನಡುವೆ ಈ ಬಗ್ಗೆ ತನಿಖೆ ನಡೆಸುವಂತೆ ಡಿವೈಎಸ್ಪಿಗೆ ವಹಿಸಲಾಗಿದ್ದು ಅವರು ಬಂದು ನನ್ನ ಹೇಳಿಕೆ ತೆಗೆದುಕೊಂಡಿದ್ದಾರೆ. ಮೂತ್ರ ಕುಡಿಸಿದ ಚೇತನ್ ನಾಪತ್ತೆಯಾಗಿದ್ದಾನೆ. ಆತನಿಗೆ ಹಣ ಮತ್ತು ಬೆದರಿಕೆ ಹಾಕಿ ಎಲ್ಲೋ ಬಚ್ಚಿಡಲಾಗಿದೆ. ಆತ ಯಾರ ಕೈಗೂ ಸಿಗುತ್ತಿಲ್ಲ.

ಕೆಲವು ಪೊಲೀಸರು ಹಾಗೂ ಕೆಲ ಮುಖಂಡರು ನನ್ನ ಮನೆಗೆ ಬಂದಿದ್ದರು ಎರಡು ಲಕ್ಷ ಹಣ ಕೊಡುತ್ತೇವೆ , ಕೆಲಸ ಕೊಡಿಸುತ್ತೇವೆ ರಾಜಿ ಮಾಡಿಕೋ ಎಂದರು. ನಾನು ಒಪ್ಪಿಕೊಳ್ಳಲಿಲ್ಲ. ನನಗೆ ಅವನ ಮೇಲೆ ವಯಕ್ತಿಕ ದ್ವೇಷ ಇಲ್ಲ ನನಗೆ ಆದ ಅವಮಾನ ಯಾರಿಗೂ ಆಗಬಾರದು. ಆತನನ್ನು ಎಸ್ಪಿ ಕಚೇರಿಗೆ ವರ್ಗಾವಣೆ ಮಾಡಿಕೊಂಡಿದ್ದಾರೆ ಆದರೆ ಆತನ ಅಮಾನತ್ತು ಆಗಬೇಕು ನನಗೆ ನ್ಯಾಯ ಬೇಕು ಇಷ್ಟೆ ನಾನು ಕೇಳಿಕೊಳ್ಲುವುದು ಎನ್ನುತ್ತಾನೆ ಪುನೀತ್ .

ನಿಜ ಕೋವಿಡ್ ಸಂದರ್ಭದಲ್ಲಿ ಯಾರೂ ಪ್ರಶ್ನಿಸುವುದಿಲ್ಲ ಎನ್ನುವ ಕಾರಣಕ್ಕೆ ಇಂತಹ ಪ್ರಕರಣಗಳು ಮುಚ್ಚಿ ಹೋಗಬಾರದು ನಿಜವಾಗಿಯೂ ಮನುಷ್ಯತ್ವ , ಮಾನವೀಯತೆ ಯನ್ನೆ ಬೆಚ್ಚಿ ಬೀಳಿಸುವ ಪ್ರಕರಣ. ಒಬ್ಬ ಯುವಕನ ಮೇಲೆ ಯಾವ ದೂರು ಇಲ್ಲದೆ ಆತನನ್ನು ನೇತು ಹಾಕಿ ಮೂತ್ರ ಕುಡಿಸುತ್ತಾರೆಂದರೆ ಇಡೀ ಮಾನವ ಕುಲವೇ ತಲೆ ತಗ್ಗಿಸುವಂತದ್ದು.

ಅರ್ಜುನ್ ಎಂಬ ವಿಕೃತ ಸಬ್ ಇನ್ಸ್ ಪೆಕ್ಟರ್ ತಲೆ ದಂಡವಾಗಲೇಬೇಕು . ಪುನೀತ್ ಎಂಬ ಯುವಕನ ಪರ ನಾಡಿನ ಜನತೆ ನಿಲ್ಲೋಣ. ಪುನೀತ್ ಅವರ ದೂರವಾಣಿ ಸಂಖ್ಯೆ : 63614 70284

ಕೃಪೆ : ಭೀಮ ವಿಜಯ ಪತ್ರಿಕೆ

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ

Published

on

ಸುದ್ದಿದಿನ,ದಾವಣಗೆರೆ:ಫೆಬ್ರವರಿ 23 ರಿಂದ 27 ರವರೆಗೆ ನಡೆಯುವ ದುರ್ಗಾಂಬಿಕಾದೇವಿ ಜಾತ್ರೆ ಪ್ರಯಕ್ತ ದೇವಾಲಯಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಶೌಚಾಲಯಗಳ ವ್ಯವಸ್ಥೆ ಕಲ್ಪಿಸಲಾಗಿದೆ.

ದೊಡ್ಡಪೇಟೆಯ ನಾಮದೇವ ಸಿಂಪಿ ಕಲ್ಯಾಣ ಮಂಟಪ, ವಿರಕ್ತಮಠ ಮತ್ತು ನಗರ ಕುಟುಂಬ ಕಲ್ಯಾಣ ಕೇಂದ್ರ-1, ಎಸ್.ಕೆ.ಪಿ ರಸ್ತೆಯ ಎಸ್.ವಿ.ಎಸ್.ಶಾಲೆ ಮತ್ತು ಕನ್ನಿಕಾಪರಮೇಶ್ವರಿ ದೇವಸ್ಥಾನ ಸಂಘ, ಮಾರ್ಕಂಡೇಶ್ವರ ಕಲ್ಯಾಣ ಮಂಟಪ, ಈ ಸ್ಥಳಗಳಲ್ಲಿರುವ ಶೌಚಾಲಯಗಳನ್ನು ಉಪಯೋಗಿಸುವ ಮೂಲಕ ದೇವಾಲಯದ ಸುತ್ತಮುತ್ತಲಿನ ಆವರಣವನ್ನು ಸ್ವಚ್ಚವಾಗಿಡಲು ಸಹಕರಿಸಬೇಕೆಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ : ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ -2025ಕ್ಕೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನಗಳಿಗೆ ಆಕ್ಷೇಪಣೆ, ತಕರಾರು ಸಲ್ಲಿಸಲು ಅರ್ಜಿ ಆಹ್ವಾನಿಸಲಾಗಿದೆ.

ತಿರಸ್ಕೃತಗೊಂಡ ಅರ್ಜಿಗಳ ಅಭ್ಯರ್ಥಿಗಳ ಆಕ್ಷೇಪಣೆಗಳಿದ್ದಲ್ಲಿ, ಮಾರ್ಚ್ 13 ರೊಳಗೆ ನಿಗದಿಪಡಿಸಿದ ದಿನಾಂಕದೊಳಗಾಗಿ ಪೂರಕ ದಾಖಲಾತಿಗಳನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕೆಂದು ಜಿಲ್ಲಾಧಿಕಾರಿ ಗಂಗಾರ‍್ವಾಮಿ.ಜಿ.ಎಂ.ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ

Published

on

ಸುದ್ದಿದಿನ,ಬೆಂಗಳೂರು: ಜಗತ್ತಿನ ಟೆಕ್ ದೈತ್ಯ ಕಂಪನಿ ಗೂಗಲ್ ತನ್ನ ಉದ್ಯೋಗಿಗಳಿಗೆ ಶಾಕ್ ನೀಡಿದೆ. AI ಕಲಿಯದಿದ್ದರೆ ಉದ್ಯೋಗ ತೊರೆಯುವಂತೆ ಸೂಚಿಸಿದ್ದು, ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಘೋಷಿಸಿದೆ.

ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP)

AI ಕಲಿಯುವುದು ಅನಿವಾರ್ಯ: ಗೂಗಲ್ ಈಗ ಸಂಪೂರ್ಣವಾಗಿ ‘AI ಫಸ್ಟ್’ ಕಂಪನಿಯಾಗಿ ರೂಪಾಂತರಗೊಳ್ಳುತ್ತಿದೆ. ತಂತ್ರಜ್ಞಾನದ ವೇಗಕ್ಕೆ ಹೊಂದಿಕೊಳ್ಳಲು ಸಾಧ್ಯವಾಗದ ಅಥವಾ AI ಕಲಿಯಲು ಆಸಕ್ತಿ ಇಲ್ಲದ ಉದ್ಯೋಗಿಗಳಿಗೆ ಗೌರವಯುತವಾಗಿ ಉದ್ಯೋಗ ತೊರೆಯಲು ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಯನ್ನು ಜಾರಿಗೊಳಿಸಿದೆ.

ಯಾರಿಗೆ ಅನ್ವಯಿಸುತ್ತದೆ?: ಇದು ಮುಖ್ಯವಾಗಿ ಗೂಗಲ್‌ನ ಗ್ಲೋಬಲ್ ಬಿಸಿನೆಸ್ ಆರ್ಗನೈಸೇಷನ್ (GBO) ವಿಭಾಗದ ಉದ್ಯೋಗಿಗಳಿಗೆ (ಸೇಲ್ಸ್, ಕಾರ್ಪೊರೇಟ್ ಡೆವಲಪ್ಮೆಂಟ್ ಮತ್ತು ಸೊಲ್ಯೂಷನ್ಸ್ ಟೀಮ್) ಗೆ ಅನ್ವಯಿಸುತ್ತದೆ. ಆದರೆ, ಗ್ರಾಹಕರೊಂದಿಗೆ ನೇರ ಸಂಪರ್ಕ ಹೊಂದಿರುವ ತಂಡಗಳಿಗೆ ಇದರಿಂದ ವಿನಾಯಿತಿ ನೀಡಲಾಗಿದೆ.

ಇದು ಲೇ-ಆಫ್ ಅಲ್ಲ: ಇದು ಕಡ್ಡಾಯವಾಗಿ ಕೆಲಸದಿಂದ ತೆಗೆದುಹಾಕುವ ಪ್ರಕ್ರಿಯೆಯಲ್ಲ. ಬದಲಾಗಿ, ಸ್ವತಃ ಹೊರಹೋಗಲು ಬಯಸುವ ಉದ್ಯೋಗಿಗಳಿಗೆ ಉತ್ತಮ ಪರಿಹಾರ ಧನ (Severance Package) ಮತ್ತು ಇತರ ಸೌಲಭ್ಯಗಳನ್ನು ನೀಡಿ ಕಳುಹಿಸಿಕೊಡುವ ಯೋಜನೆಯಾಗಿದೆ.

ಕಾರಣವೇನು?: ತಂತ್ರಜ್ಞಾನ ಅತ್ಯಂತ ವೇಗವಾಗಿ ಬದಲಾಗುತ್ತಿದ್ದು, ಕಂಪನಿಗೆ AI ಮಿಷನ್‌ಗೆ ಸಂಪೂರ್ಣವಾಗಿ ಹೊಂದಿಕೊಳ್ಳುವ ಮತ್ತು ಕ್ರಿಯಾತ್ಮಕವಾಗಿ ಕೆಲಸ ಮಾಡುವ ಕಾರ್ಯಪಡೆಯ ಅಗತ್ಯವಿದೆ ಎಂದು ಗೂಗಲ್‌ನ ಚೀಫ್ ಬಿಸಿನೆಸ್ ಆಫೀಸರ್ ಫಿಲಿಪ್ ಶೆಡ್ಲರ್ ತಿಳಿಸಿದ್ದಾರೆ.

ಭವಿಷ್ಯದ ಮುನ್ಸೂಚನೆ: ಅಮೆಜಾನ್, ಮೆಟಾ ಮತ್ತು ಮೈಕ್ರೋಸಾಫ್ಟ್‌ನಂತಹ ಇತರ ಟೆಕ್ ದೈತ್ಯ ಕಂಪನಿಗಳು ಕೂಡ ಇದೇ ಹಾದಿಯಲ್ಲಿ ಸಾಗುವ ಸಾಧ್ಯತೆ ಇದೆ. 2026ರಲ್ಲಿ ಈ ನಾಲ್ಕು ಕಂಪನಿಗಳು AI ತಂತ್ರಜ್ಞಾನಕ್ಕಾಗಿ ಸುಮಾರು 58.92 ಲಕ್ಷ ಕೋಟಿ ರೂಪಾಯಿ ಹೂಡಿಕೆ ಮಾಡುವ ಅಂದಾಜಿದೆ.

ಒಟ್ಟಾರೆಯಾಗಿ, ಭವಿಷ್ಯದ ಉದ್ಯೋಗ ಮಾರುಕಟ್ಟೆಯಲ್ಲಿ AI ಕೌಶಲ್ಯ ಅತ್ಯಂತ ಅನಿವಾರ್ಯ ಎಂಬ ಎಚ್ಚರಿಕೆಯ ಸಂದೇಶವನ್ನು ಗೂಗಲ್ ಈ ಮೂಲಕ ನೀಡಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending