Connect with us

ದಿನದ ಸುದ್ದಿ

ದಾವಣಗೆರೆ | ಗ್ರಾಮಗಳಲ್ಲಿ ಹೆಚ್ಚುತ್ತಿರುವ ಕೊರೋನಾ ಪ್ರಕರಣಗಳು ; ಜನತೆ ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸದಿರುವುದೇ ಕಾರಣ | ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ

Published

on

ಸುದ್ದಿದಿನ,ದಾವಣಗೆರೆ: ಕೊರೊನಾ ಸೋಂಕು ತಡೆಗಟ್ಟಲು ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕಾಗಿದೆ. ಈಗಾಗಲೇ ಸೋಂಕು ನಿವಾರಣೆಗೆ ಜಿಲ್ಲಾಡಳಿತದಿಂದ ಎಲ್ಲಾ ರೀತಿಯ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದು, ಸರ್ಕಾರದ ಆದೇಶದ ಮೆರೆಗೆ ಮೇ.31 ರವರೆಗೆ ಸಂಪೂರ್ಣ ಲಾಕ್‍ಡೌನ್ ವಿಸ್ತರಣೆ ಮಾಡಿದ್ದೇವೆ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ತಿಳಿಸಿದರು.

ಸೋಮವಾರ ಜಗಳೂರಿನ ತರಳಬಾಳು ಸಮುದಾಯದ ಭವನದಲ್ಲಿ ಹಮ್ಮಿಕೊಂಡಿದ್ದ ಕೋವಿಡ್-19 2ನೇ ಅಲೆಯ ಪ್ರಗತಿ ಪರಿಶೀಲನಾ ಸಭೆಯನ್ನುದ್ದೇಶಿ ಮಾತನಾಡಿದ ಅವರು, ಮೇ.23 ರಂದು ಜಗಳೂರು ತಾಲ್ಲೂಕಿನಲ್ಲಿ ಒಟ್ಟು 852 ಪಾಸಿಟಿವ್ ಪ್ರಕರಣಗಳಿದ್ದು, 390 ಜನರು ಗುಣಮುಖರಾಗಿದ್ದಾರೆ.

167 ಜನರು ಹೋಮ್ ಐಸೋಲೇಷನ್ ಅಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದು, ಒಟ್ಟು 462 ಸಕ್ರಿಯ ಪ್ರಕರಣಗಳು ದಾಖಲಾಗಿವೆ. ಡಿ.ಸಿ.ಹೆಚ್.ಸಿ ಯಲ್ಲಿ 37 ಜನ, ಮೆದಗಿನಕೆರೆ ಕೋವಿಡ್ ಕೇರ್ ಸೆಂಟರ್‍ನಲ್ಲಿ 85 ಜನ, ಜಗಳೂರು ಟೌನ್ (ಲಿಂಗನಹಳ್ಳಿ ರಸ್ತೆ) ಕೋವಿಡ್ ಕೇರ್ ಸೆಂಟರ್‍ನಲ್ಲಿ 9 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಲ್ಲಿಯವರೆಗೂ ಒಟ್ಟು 9 ಜನ ಮೃತಪಟ್ಟಿದ್ದಾರೆ ಎಂದು ಮಾಹಿತಿ ನೀಡಿದರು.

ಕೋವಿಡ್-19 2ನೇ ಅಲೆಯಲ್ಲಿ ಹೆಚ್ಚಾಗಿ ಗ್ರಾಮಾಂತರ ಭಾಗಗಳಲ್ಲೇ ಸೋಂಕು ಹೆಚ್ಚಾಗಿ ಹರಡುತ್ತಿರುವುದಕ್ಕೆ ಕಾರಣವೆಂದರೆ ಗ್ರಾಮದ ಜನರು ನಿಯಮಗಳನ್ನು ಮೀರಿ ಸಭೆ, ಸಮಾರಂಭ, ಮದುವೆ, ಜಾತ್ರೆಗಳು ಸೇರಿದಂತೆ ಇನ್ನಿತರ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಜಲ್ಲಿಕಟ್ಟೆ, ದೇವಸ್ಥಾನದ ಆವರಣಗಳಲ್ಲಿ ಗುಂಪುಗಟ್ಟಿ ಸೇರುವುದಲ್ಲದೇ, ಕೋವಿಡ್ ಮಾರ್ಗಸೂಚಿಗಳನ್ನು ಗಾಳಿಗೆ ತೂರಿಬಿಟ್ಟಿದ್ದಾರೆ.

ಗ್ರಾಮಗಳಲ್ಲಿ ಬಹುತೇಕರು ಮಾಸ್ಕ್ ಧರಿಸುವುದೇ ಇಲ್ಲ. ಧರಿಸಿದರು ಬೇಕಾಬಿಟ್ಟಿ ಹಾಕಿಕೊಳ್ಳುತ್ತಾರೆ.
ಬೆಂಗಳೂರಿನಿಂದ ಬರುವವರು ಅಗತ್ಯ ಮಾಹಿತಿಗಳನ್ನು ಕೊಡದೇ ಮನೆ ಸೇರುತ್ತಾರೆ. ಕೊರೊನಾ ಸೋಂಕಿನ ಲಕ್ಷಣಗಳು ಕಂಡುಬಂದರೆ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳದೇ ಸ್ಥಳೀಯ ವೈದ್ಯರ ಬಳಿಯೋ ಅಥವಾ ಮೆಡಿಕಲ್ ಶಾಪ್‍ಗಳಲ್ಲೋ ಬೇಕಾದ ಮಾತ್ರೆಗಳನ್ನು ತೆಗೆದುಕೊಂಡು ನುಂಗುತ್ತಾರೆ.

ಇದನ್ನೂ ಓದಿ | ದಲಿತ ಯುವಕನಿಗೆ ಮೂತ್ರ ಕುಡಿಸಿದ ಪ್ರಕರಣ : ಎಸ್ಪಿ ಅರ್ಜುನ್ ಅಮಾನತು ; ಸಿಐಡಿ ತನಿಖೆಗೆ ಆದೇಶ

ಸೋಂಕಿನ ಪ್ರಮಾಣ ಹೆಚ್ಚಾಗಿ ಆಕ್ಸಿಜನ್ ಸ್ಯಾಚುರೇಷನ್ ಲೆವೆಲ್ 50-70 ಕ್ಕೆ ಬಂದಾಗ ಬೆಡ್ ಬೇಕು, ವೆಂಟಿಲೇಟರ್ ಬೇಕು ಎಂದು ಕೊನೆಯ ಹಂತದಲ್ಲಿ ಆಸ್ಪತ್ರೆಗಳಿಗೆ ಬರುತ್ತಾರೆ. ಇದರಿಂದ ಜೀವ ಉಳಿಸಲು ಕಷ್ಟವಾಗುತ್ತಿದೆ ಎಂದರು.
ಕೋವಿಡ್ ಕೇರ್ ಸೆಂಟರ್‍ಗಳಲ್ಲಿ ಬೇಕಾದ ಎಲ್ಲಾ ಸವಲತ್ತುಗಳನ್ನು ಒದಗಿಸಿದ್ದು, ಯಾರು ಕೂಡ ಮನೆಯಲ್ಲಿ ಚಿಕಿತ್ಸೆ ಪಡೆಯದೇ ಕೋವಿಡ್ ಕೇರ್ ಸೆಂಟರ್‍ಗೆ ಬರಬೇಕು.

ಮನೆಯಲ್ಲೆ ಚಿಕಿತ್ಸೆ ಪಡೆಯುವ ಸೋಂಕಿತನಿಗೆ ಪ್ರತ್ಯೇಕ ಕೊಠಡಿ ಮತ್ತು ಶೌಚಾಲಯ ಇರಬೇಕು. ಹಾಗೂ ಸೋಂಕಿತ ಮುಟ್ಟಿದ ವಸ್ತುಗಳನ್ನು ಮನೆಯ ಇತರೆ ಸದಸ್ಯರು ಮುಟ್ಟಬಾರದು. ಇಂತಹದೊಂದು ಅಗತ್ಯ ಕಟ್ಟುನಿಟ್ಟಿನ ಕ್ರಮಗಳನ್ನು ಪಾಲಿಸುವವರು ಮಾತ್ರ ಮನೆಯಲ್ಲಿ ಚಿಕಿತ್ಸೆ ಪಡೆಯಬಹುದು ಎಂದರು.

ಸಂಸದ ಡಾ.ಜಿ.ಎಂ.ಸಿದ್ದೇಶ್ವರ ಮಾತನಾಡಿ, ಕೊರೊನಾ ದಿನೇ ದಿನೇ ಹೆಚ್ಚಾಗುತ್ತಿದ್ದು ಗ್ರಾಮೀಣ ಜನರ ಬದುಕು ದುಸ್ತರವಾಗಿದೆ. ಜಗಳೂರಿನಂತಹ ತಾಲ್ಲೂಕಿನಲ್ಲಿ ಕೂಲಿ ಕಾರ್ಮಿಕರು ಹೆಚ್ಚಾಗಿದ್ದು ಅವರು ಜೀವನ ನಡೆಸಲು ನರೇಗ ಕೆಲಸ ಆಧಾರವಾಗಿದೆ. ಆದ್ದರಿಂದ ಉದ್ಯೋಗ ಖಾತ್ರಿಯೊಳಗೆ ಹೆಚ್ಚು ಕೆಲಸ ಕೊಡಿ ಎಂದು ಸಿಇಒಗೆ ಸೂಚನೆ ನೀಡಿದರು.

ಕೊರೊನಾ ಹಿನ್ನೆಲೆಯಲ್ಲಿ ಗುಂಪು ಕೆಲಸ ನಿಲ್ಲಿಸಿ ವೈಯಕ್ತಿಕ ನೆಲೆಯಲ್ಲಿ ಉದ್ಯೋಗ ಕೈಗೊಳ್ಳಲು ಅವಕಾಶ ನೀಡಿದರೆ ಅವರ ಜೀವನ ರೂಪಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದರು.
ಕೃಷಿ ಕೂಲಿಕಾರರು ಅಗತ್ಯ ಕೃಷಿ ಪರಿಕರ ಖರೀದಿಸಲು ಹಾಗೂ ಕೃಷಿ ಚಟುವಟಿಕೆಗಳಿಗೂ ಅವಕಾಶ ಮಾಡಿಕೊಡಿ. ಲಾಕ್‍ಡೌನ್ ಇದ್ದರು ಕೃಷಿ ಚಟುವಟಿಕೆದಾರರಿಗೆ ರಿಯಾಯಿತಿ ಇದ್ದು ಪೊಲೀಸರು ಈ ವರ್ಗದ ಜನರಿಗೆ ಸಹಕಾರ ನೀಡಬೇಕು ಎಂದರು.

ಬೇರೆ ತಾಲ್ಲೂಕುಗಳಿಗೆ ಹೋಲಿಸಿದರೆ ಜಗಳೂರಿನಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ಅತ್ಯಂತ ಕಡಿಮೆ ಇದ್ದು ಪರಿಸ್ಥಿತಿ ಹತೋಟಿಯಲ್ಲಿದೆ. ಇದು ಹೀಗೆ ಮುಂದುವರಿಯಲಿ. ತಾಲ್ಲೂಕು ಆಸ್ಪತ್ರೆಯಲ್ಲಿ 50 ಆಕ್ಸಿಜನ್ ಬೆಡ್‍ಗಳಿದ್ದು ಅಗತ್ಯವಿರುವಷ್ಟು ಆಕ್ಸಿಜನ್ ಬಳಸಿ. ಅನಗತ್ಯವಾಗಿ ಆಕ್ಸಿಜನ್‍ನ್ನು ರೋಗಿಗಳಿಗೆ ಪೂರೈಕೆ ಮಾಡಬೇಡಿ. ಈಗಾಗಲೇ ತಾಲ್ಲೂಕಿನ 13 ಕಡೆ ಕೋವಿಡ್ ಕೇರ್ ಸೆಂಟರ್ ತೆರೆಯಲು ನಿರ್ಧರಿಸಿದ್ದು, ಹೋಮ್ ಐಸೋಲೆಷನ್‍ನ್ನು ಸಂಪೂರ್ಣ ನಿಲ್ಲಿಸಿ ಸೋಂಕಿತರನ್ನು ಈ ಕೇಂದ್ರಗಳಿಗೆ ದಾಖಲಿಸಿ ಎಂದ ಅವರು ಹೆಚ್ಚು ಆಕ್ಸಿಜನ್ ಬಳಸಿದರೆ ಬ್ಲಾಕ್ ಫಂಗಸ್ ಬರುತ್ತದೆ ಎಂದು ವಿಜ್ಞಾನಗಳು ಹೇಳಿದ್ದಾರೆ ಎಂದರು.

ಶಾಸಕರು ಹಾಗೂ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್.ವಿ.ರಾಮಚಂದ್ರ ಮಾತನಾಡಿ, ಸರ್ಕಾರದಿಂದ ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ 50 ಲಕ್ಷ ಅನುದಾನ ಬಿಡುಗಡೆಯಾಗಿದೆ. ಕ್ಷೇತ್ರದಲ್ಲಿ ಕೊರೊನಾ ತಡೆಗೆ ವಿವಿಧ ಪರಿಕರಗಳ ಖರೀದಿಗೆ ಜಿಲ್ಲಾಧಿಕಾರಿಗಳ ಜೊತೆ ಚರ್ಚಿಸಿ ಸುಮಾರು ರೂ.1 ಕೋಟಿ ಅನುದಾನ ನೀಡಲಾಗುವುದು ಎಂದ ಅವರು, ತಾಲ್ಲೂಕಿನ ಕಾಟನಹಳ್ಳಿ ಗ್ರಾಮದಲ್ಲಿ 9 ಮಂದಿ ಮೃತಪಟ್ಟಿದ್ದಾರೆ. ಜೀವ ಅಮೂಲ್ಯವಾದರಿಂದ ಕಾಪಾಡಲು ಎಲ್ಲರೂ ಪ್ರಯತ್ನ ಮಾಡೋಣ ಎಂದು ತಿಳಿಸಿದರು.

ನನಗೆ ಕೊರೊನಾ ಸೋಂಕು ಬಂದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವ ವೇಳೆ ಅನೇಕರು ರಾಮಚಂದ್ರ ಹೋಗಿಬಿಟ್ಟ, ವೆಂಟಿಲೇಟರ್ ಗೆ ಹಾಕಿದ್ದಾರೆ. ಗುಂಡಿ ಸಿದ್ಧವಾಗಿದೆ ಎಂದು ಕೆಲವರು ಟೀಕೆ ಮಾಡಿದರು. ಆದರೆ ನನಗೆ ಅವರ ಟೀಕೆಗಳೇ ಶ್ರೀರಕ್ಷೆ ಎಂದ ಅವರು, ನಾನು ಆಸ್ಪತ್ರೆಯಲ್ಲಿದ್ದರೆ ನನ್ನ ಮನಸ್ಸು ಜಗಳೂರಿನಲ್ಲಿತ್ತು. ಬಹಳ ಮಂದಿ ಆತ್ಮೀಯರು ಅಗಲಿದ್ದಾರೆ. ಅಗಲಿದ್ದ ಕುಟುಂಬದವರೊಂದಿಗೆ ನಾವಿದ್ದೇವೆ, ಅವರ ಯೋಗಕ್ಷೇಮ ನೋಡುತ್ತೇನೆ ಎಂದು ಭಾವುಕರಾಗಿ ನುಡಿದರು. ಪಕ್ಷಾತೀತವಾಗಿ ಕಲ್ಲೆರುದ್ರೇಶ್ ತಮ್ಮ ಜತೆ ಕೈಜೋಡಿಸಿ ಕೆಲಸ ಮಾಡುತ್ತಿದ್ದಾರೆ ಎಂದು ತಿಳಿಸಿದರು.

ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ರಾಘವನ್ ಮಾತನಾಡಿ, ಕೋವಿಡ್-19 ಮೊದಲನೇ ಅಲೆ ಪ್ರಾರಂಭವಾದಾಗ ದಾವಣಗೆರೆಯಲ್ಲಿ ಒಂದೆರೆಡು ಕೇಸ್‍ಗಳು ಇತ್ತು. ಮೇ ತಿಂಗಳಿಂದ ಸೆಪ್ಟೆಂಬರ್ ವರೆಗೂ ಹೆಚ್ಚು ಪ್ರಕರಣಗಳು ದಾಖಲಾದವು. ಅಕ್ಟೋಬರ್ ತಿಂಗಳಲ್ಲಿ ಪ್ರಕರಣಗಳು ಕಡಿಮೆ ಆಗುತ್ತಾ ಬಂದವು. ಈ ಹಂತದಲ್ಲಿ ಕೋವಿಡ್ ಕುರಿತಾದ ಮಾಹಿತಿ ಕೊರತೆ ಇತ್ತು. ಆದರೆ 2ನೇ ಅಲೆಯಲ್ಲಿ ಮಾಹಿತಿ ಹಾಗೂ ಅನುಭವಗಳಡೆರೆಡು ಇದ್ದು ಸೋಂಕಿನ ವಿರುದ್ಧ ಹೋರಾಡಲು ಜನರು ಸ್ಪಂದನೆ ಕೊಡುತ್ತಿಲ್ಲ ಎಂದು ಬೇಸರಿಸಿದರು.

ಮೊದಲ ಹಂತದಲ್ಲಿ ಕೆಮ್ಮು, ಶೀತ, ಜ್ವರ, ತಲೆನೋವು ಬರುವ ಮೂಲಕ ಸೋಂಕಿನ ಲಕ್ಷಣಗಳು ಕಾಣಿಸಿಕೊಳ್ಳುತ್ತಿತ್ತು, 2ನೇ ಅಲೆಯಲ್ಲಿ ಈ ಲಕ್ಷಣಗಳೊಂದಿಗೆ ತಲೆನೋವು, ಕಣ್ಣು ಕೆಂಪಾಗುವುದು, ಉಸಿರಾಟದ ತೊಂದರೆ, ಅಲರ್ಜಿ ಸೇರಿದಂತೆ ಇನ್ನಿತರ ಲಕ್ಷಣಗಳು ಕಾಣಿಸಿಕೊಳ್ಳುತ್ತಿದೆ. ಜನರು ನಿರ್ಲಕ್ಷ್ಯ ಮಾಡದೇ ಮೊದಲ ಹಂತದಲ್ಲೇ ಕೋವಿಡ್ ಪರೀಕ್ಷೆ ಮಾಡಿಸಿಕೊಂಡರೆ ಜೀವ ಉಳಿಸುವ ಎಲ್ಲಾ ಸಾಧ್ಯತೆಗಳಿವೆ. ಆದರೆ ಜನರು ಕೊನೆಯ ಹಂತದಲ್ಲಿ ಸೋಂಕು ಶ್ವಾಸಕೋಶ ತಲುಪಿ ಉಸಿರಾಟದ ತೊಂದರೆಯಾದ ಬಳಿಕ ಬರುತ್ತಿದ್ದಾರೆ. ಇದರಿಂದ ಚಿಕಿತ್ಸೆ ನೀಡುವುದು ಕಷ್ಟವಾಗುತ್ತದೆ ಎಂದರು.

ಪ್ರತೀ ಗ್ರಾಮ ಪಂಚಾಯಿತಿ ಪಟ್ಟಣದಲ್ಲಿ ಹಾಗೂ ಸ್ಥಳೀಯ ಟಾಸ್ಕ್ ಪೋರ್ಸ್ ಸಮಿತಿಯವರು ಒಂದೊಂದು ಥೀಮ್ ಇಟ್ಟುಕೊಂಡು ಜನರಲ್ಲಿ ಕೊರೊನಾ ಸೋಂಕು ಹಾಗೂ ವ್ಯಾಕ್ಸಿನೇಷನ್ ಕುರಿತು ಜಾಗೃತಿ ಮೂಡಿಸಬೇಕು ಎಂದರು.
ಈ ವೇಳೆ ಶಾಸಕ ರಾಮಚಂದ್ರಪ್ಪ ಜಗಳೂರಿನಲ್ಲಿ ಬ್ಲಾಕ್ ಫಂಗಸ್ ಗೆ ತುತ್ತಾದವರು ಎಷ್ಟು ಜನ ಇದ್ದಾರೆ? ಇದಕ್ಕೆ ಬೇಕಾದ ಔಷಧಿಗಳು ಸಿಗುತ್ತಿದ್ದೇಯೇ ಎಂದು ಪ್ರಶ್ನಿಸಿದರು.

ಇದಕ್ಕೆ ಡಾ.ರಾಘವನ್ ಜಗಳೂರು ತಾಲ್ಲೂಕಿನಲ್ಲಿ ಇಲ್ಲಿಯವೆರಗೂ ಯಾರಿಗೂ ಬ್ಲಾಕ್ ಫಂಗಸ್ ಬಂದಿಲ್ಲ. ಈ ಖಾಯಿಲೆ ಬಂದವರಿಗೆ ಪ್ರತ್ಯೇಕವಾಗಿ ಚಿಕಿತ್ಸೆ ನೀಡುತ್ತಿದ್ದು, ಬೇಕಾದ ಔಷಧಿಗಳನ್ನು ಪಡೆದುಕೊಳ್ಳುತ್ತಿದ್ದೇವೆ ಎಂದು ತಿಳಿಸಿದರು.

ಸಭೆಯಲ್ಲಿ ಸಿಇಒ ವಿಜಯ ಮಹಾಂತೇಶ್ ದಾನಮ್ಮನವರ್, ಡಿಹೆಚ್‍ಒ ಡಾ.ನಾಗರಾಜ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ಸೇರಿದಂತೆ ತಾಲ್ಲೂಕು ಅಧಿಕಾರಿಗಳು ಪಾಲ್ಗೊಂಡಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಗೃಹ ಜ್ಯೋತಿ ಯೋಜನೆಗೆ 3 ವರ್ಷಗಳ ಸಂಭ್ರಮ – 1.65 ಕೋಟಿ ಕುಟುಂಬಗಳ ಬದುಕಿಗೆ ಬೆಳಕು!

Published

on

ಆಗಸ್ಟ್ 2023 ರಿಂದ ಜುಲೈ 2026 ರವರೆಗೆ ₹28,759 ಕೋಟಿ ಸಬ್ಸಿಡಿ ಬಿಡುಗಡೆ; ಪ್ರತಿ ತಿಂಗಳು 200 ಯೂನಿಟ್ ಉಚಿತ ವಿದ್ಯುತ್‌ನಿಂದ ಕೋಟ್ಯಂತರ ಕುಟುಂಬಗಳ ಆರ್ಥಿಕ ಸಬಲೀಕರಣ

ಸುದ್ದಿದಿನ, ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆ ತನ್ನ 3 ವರ್ಷಗಳ ಸಾರ್ಥಕ ಪಯಣವನ್ನು ಪೂರ್ಣಗೊಳಿಸಿದೆ. `ಕುಟುಂಬಗಳ ಆರ್ಥಿಕ ಸಬಲೀಕರಣಕ್ಕೆ ಸಹಕಾರ’ ಎಂಬ ಧ್ಯೇಯದೊಂದಿಗೆ ಆರಂಭವಾದ ಈ ಯೋಜನೆ ಇಂದು ಕೋಟ್ಯಂತರ ಕುಟುಂಬಗಳ ಬದುಕಿಗೆ ಬೆಳಕಾಗಿದೆ.

ಹೌದು! 2023ರ ಆಗಸ್ಟ್‌ನಲ್ಲಿ ಜಾರಿಗೆ ಬಂದ ಈ ಯೋಜನೆಯಡಿ ರಾಜ್ಯದ ಪ್ರತಿಯೊಂದು ಕುಟುಂಬಕ್ಕೂ ಪ್ರತಿ ತಿಂಗಳು 200 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದ್ದು, ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಮಾಸಿಕ ಬಜೆಟ್‌ಗೆ ದೊಡ್ಡ ಆಸರೆಯಾಗಿದೆ ಎಂದೇ ಹೇಳಬಹುದು.

http://Visit : www.suddidina.com

ಗೃಹಜ್ಯೋತಿ ಯೋಜನೆಯ ಸಾಧನೆಯ ಗಿರಿ: 

ಇಂಧನ ಇಲಾಖೆ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ, ರಾಜ್ಯದ್ಯಂತ ಬರೋಬ್ಬರಿ 1.65 ಕೋಟಿ. ಫಲಾನುಭವಿಗಳು ಕುಟುಂಬಗಳು ಯೋಜನೆಯ ಪ್ರಯೋಜನ ಪಡೆದುಕೊಳ್ಳುತ್ತಿದ್ದರೆ, ಸೇವಾಸಿಂಧು ಪೋರ್ಟಲ್‌ನಲ್ಲಿ ಒಟ್ಟು 1,76,69,368 ಜನರು ನೋಂದಾಯಿಸಿಕೊಂಡಿದ್ದರೆ. ಒಟ್ಟು 2,06,65,451 ಗೃಹಬಳಕೆ ವಿದ್ಯುತ್ ಗ್ರಾಹಕರಿದ್ದಾರೆ. ಅಂದರೆ ಶೇ.85ಕ್ಕಿಂತ ಹೆಚ್ಚು ಗ್ರಾಹಕರು ಈ ಯೋಜನೆಯಡಿ ನೋಂದಾಯಿಸಿಕೊಂಡು ಲಾಭ ಪಡೆಯುತ್ತಿದ್ದಾರೆ.

ಆರ್ಥಿಕವಾಗಿ ನೋಡುವುದಾದರೆ, 2023ರ ಆಗಸ್ಟ್‌ನಿಂದ 2026ರ ಜುಲೈ ವರೆಗೆ, ಕಳೆದ ಮೂರು ವರ್ಷಗಳಲ್ಲಿ ಸರ್ಕಾರವು ಫಲಾನುಭವಿಗಳಿಗೆ ಒಟ್ಟು ₹28,759.54 ಕೋಟಿ ರೂಪಾಯಿ ಸಬ್ಸಿಡಿ ಬಿಡುಗಡೆ ಮಾಡಿದೆ. ಇದು ಸರ್ಕಾರದ ಬದ್ಧತೆ ಮತ್ತು ಜನಪರ ಕಾಳಜಿಗೆ ಹಿಡಿದ ಕನ್ನಡಿಯಾಗಿದೆ.

ಕುಟುಂಬದ ಬಜೆಟ್‌ಗೆ ಆಸರೆ, ಉಜ್ವಲ ಭವಿಷ್ಯಕ್ಕೆ ಬುನಾದಿ:

ಪ್ರತಿ ತಿಂಗಳು 1000 ದಿಂದ 1500 ರೂಪಾಯಿಗಳವರೆಗೆ ವಿದ್ಯುತ್ ಬಿಲ್ ಕಟ್ಟುತ್ತಿದ್ದ ಸಾಮಾನ್ಯ ಕುಟುಂಬಗಳಿಗೆ ಈಗ ಆ ಹಣ ಸಂಪೂರ್ಣವಾಗಿ ಉಳಿತಾಯವಾಗುತ್ತಿದೆ. ಈ ಉಳಿತಾಯದ ಹಣವನ್ನು ಅವರು ಮಕ್ಕಳ ಶಿಕ್ಷಣ, ಆರೋಗ್ಯ ಮತ್ತು ಇತರ ಅಗತ್ಯಗಳಿಗೆ ಬಳಸಿಕೊಳ್ಳುತ್ತಿದ್ದಾರೆ. ವಿಶೇಷವಾಗಿ ಗೃಹಿಣಿಯರಿಗೆ ಇದು ಆರ್ಥಿಕವಾಗಿ ದೊಡ್ಡ ನೆರವಾಗಿದೆ.

ಕೇವಲ ಉಚಿತ ವಿದ್ಯುತ್ ನೀಡುವುದಷ್ಟೇ ಅಲ್ಲ, ಜನರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡುವುದೇ ಈ ಯೋಜನೆಯ ಮುಖ್ಯ ಗುರಿಯಾಗಿದ್ದು, ರಾಜ್ಯದ ಜನರ ಜೀವನಮಟ್ಟ ಸುಧಾರಿಸಿದೆ. ಗೃಹ ಜ್ಯೋತಿ ಯೋಜನೆಯು ಕೇವಲ ಒಂದು ಯೋಜನೆಯಾಗಿ ಉಳಿಯದೆ, ಕರ್ನಾಟಕದ ಸಾಮಾಜಿಕ ಮತ್ತು ಆರ್ಥಿಕ ಪರಿವರ್ತನೆಯಲ್ಲಿ ಮಹತ್ವದ ಮೈಲಿಗಲ್ಲಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಕುಟುಂಬಗಳನ್ನು ಈ ಯೋಜನೆಯಡಿ ತರಲು ಇಂಧನ ಇಲಾಖೆ ಕ್ರಮ ಕೈಗೊಳ್ಳುತ್ತಿದೆ.

Continue Reading

ದಿನದ ಸುದ್ದಿ

ರೈಲ್ವೆ ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ – 20 ಸಾವಿರ ಕೋಟಿ ರೂ. ವೆಚ್ಚದ 8 ಬಹು ಟ್ರ್ಯಾಕಿಂಗ್ ಯೋಜನೆಗಳಿಗೆ ಕೇಂದ್ರದ ಅಸ್ತು!

Published

on

ಕರ್ನಾಟಕದ ವೈಟ್‌ಫೀಲ್ಡ್-ಬಂಗಾರಪೇಟೆ, ಹೊಸೂರು-ಓಮಲೂರು ಮಾರ್ಗ ಸೇರಿ 9 ರಾಜ್ಯಗಳ 1200 ಕಿ.ಮೀ ರೈಲು ಜಾಲ ವಿಸ್ತರಣೆಗೆ ಪ್ರಧಾನಿ ಮೋದಿ ಅಧ್ಯಕ್ಷತೆಯ ಸಂಪುಟ ಸಭೆಯಲ್ಲಿ ಅನುಮೋದನೆ

ಸುದ್ದಿದಿನ, ಹೊಸದಿಲ್ಲಿ: ದೇಶದ ರೈಲ್ವೆ ಮೂಲಸೌಕರ್ಯಕ್ಕೆ ಬೃಹತ್ ಉತ್ತೇಜನ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಕರ್ನಾಟಕ ಸೇರಿದಂತೆ ಒಂಬತ್ತು ರಾಜ್ಯಗಳ 20ಕ್ಕೂ ಹೆಚ್ಚು ಜಿಲ್ಲೆಗಳನ್ನು ಸಂಪರ್ಕಿಸುವ 20,000 ಕೋಟಿ ರೂಪಾಯಿಗೂ ಅಧಿಕ ಮೊತ್ತದ 8 ಬಹು ಟ್ರ್ಯಾಕಿಂಗ್ (Multi-Tracking) ರೈಲು ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಬುಧವಾರ (ಸೆ.09) ನಡೆದ ಕೇಂದ್ರ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಈ ಯೋಜನೆಗಳು ಪಿಎಂ-ಗತಿ ಶಕ್ತಿ ರಾಷ್ಟ್ರೀಯ ಮಾಸ್ಟರ್ ಪ್ಲಾನ್ ಅಡಿಯಲ್ಲಿ ಅನುಷ್ಠಾನಗೊಳ್ಳಲಿವೆ.

http://Visit : www.suddidina.com

ಈ ಯೋಜನೆಗಳಿಂದ ಭಾರತೀಯ ರೈಲ್ವೆಯ ಅಸ್ತಿತ್ವದಲ್ಲಿರುವ ಜಾಲವು ಬರೋಬ್ಬರಿ 1,200 ಕಿಲೋಮೀಟರ್‌ಗಳಷ್ಟು ವಿಸ್ತರಣೆಯಾಗಲಿದೆ. ಇದರಿಂದ 6,900ಕ್ಕೂ ಹೆಚ್ಚು ಗ್ರಾಮಗಳಿಗೆ ಸುಧಾರಿತ ಸಂಪರ್ಕ ಸಿಗಲಿದ್ದು, ರೈಲುಗಳ ಕಾರ್ಯಾಚರಣೆಯ ದಕ್ಷತೆ ಮತ್ತು ಸೇವಾ ವಿಶ್ವಾಸಾರ್ಹತೆ ಗಣನೀಯವಾಗಿ ಹೆಚ್ಚಾಗಲಿದೆ.

ಯಾವೆಲ್ಲ ಯೋಜನೆಗಳಿಗೆ ಅನುಮೋದನೆ?
ಸಂಪುಟ ಸಭೆಯಲ್ಲಿ ಅನುಮೋದನೆ ಪಡೆದ ಪ್ರಮುಖ ಯೋಜನೆಗಳು ಹೀಗಿವೆ:

1. ಅರಾಕೋಣಂ-ರೇಣಿಗುಂಟಾ ಮತ್ತು ವೈಟ್‌ಫೀಲ್ಡ್-ಬಂಗಾರಪೇಟೆ ನಡುವೆ 3 ಮತ್ತು 4ನೇ ಮಾರ್ಗ: ಇದು ಕರ್ನಾಟಕ ಮತ್ತು ತಮಿಳುನಾಡು, ಆಂಧ್ರಪ್ರದೇಶಕ್ಕೆ ಅತ್ಯಂತ ಮಹತ್ವದ ಯೋಜನೆಯಾಗಿದೆ.

2. ಸಿಕಂದರಾಬಾದ್-ಕಾಜಿಪೇಟೆ ನಡುವೆ ಮಲ್ಟಿ ಟ್ರ್ಯಾಕಿಂಗ್: ತೆಲಂಗಾಣದ ಪ್ರಮುಖ ಮಾರ್ಗದ ದಟ್ಟಣೆ ಕಡಿಮೆ ಮಾಡಲಿದೆ.

3. ಹೊಸೂರು-ಓಮಲೂರು, ಸೇಲಂ-ಕರೂರ್-ದಿಂಡಿಗಲ್ ಜೋಡಿ ಹಳಿ ಯೋಜನೆ: ತಮಿಳುನಾಡು ಮತ್ತು ಕರ್ನಾಟಕದ ಗಡಿ ಭಾಗದ ಸಂಪರ್ಕವನ್ನು ಬಲಪಡಿಸಲಿದೆ.

4. ಖರಗ್‌ಪುರ-ಝಾರ್ಸುಗುಡ ಮತ್ತು ಕತ್ನಿ-ಪೆಂದ್ರ ರಸ್ತೆ ನಡುವೆ 4ನೇ ಮಾರ್ಗ ಮತ್ತು ಬಿಲಾಸ್‌ಪುರ್-ಪೆಂದ್ರ ರಸ್ತೆ ನಡುವೆ 3ನೇ ಮಾರ್ಗ: ಛತ್ತೀಸ್‌ಗಢ, ಒಡಿಶಾ, ಮಧ್ಯಪ್ರದೇಶದ ಕಲ್ಲಿದ್ದಲು ಮತ್ತು ಖನಿಜ ಸಾಗಣೆಗೆ ಸಹಕಾರಿಯಾಗಲಿದೆ.

ಈ ಎಲ್ಲಾ ಯೋಜನೆಗಳು ಕರ್ನಾಟಕ, ಪಶ್ಚಿಮ ಬಂಗಾಳ, ಜಾರ್ಖಂಡ್, ಒಡಿಶಾ, ಮಧ್ಯಪ್ರದೇಶ, ಛತ್ತೀಸ್‌ಗಢ, ತಮಿಳುನಾಡು, ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳನ್ನು ಒಳಗೊಳ್ಳಲಿವೆ.

ಕರ್ನಾಟಕಕ್ಕೆ ಏನು ಲಾಭ?

ಈ ಬಹು ಟ್ರ್ಯಾಕಿಂಗ್ ಯೋಜನೆಗಳಿಂದ ಕರ್ನಾಟಕಕ್ಕೆ ಹಲವು ರೀತಿಯಲ್ಲಿ ಅನುಕೂಲವಾಗಲಿದೆ.ಕೈಗಾರಿಕೆಗಳಿಗೆ ಅನುಕೂಲ: ರಾಜ್ಯದ ಉಕ್ಕು ಕಾರ್ಖಾನೆಗಳಿಗೆ ಕಚ್ಚಾ ವಸ್ತುಗಳಾದ ಖನಿಜ ಸಾಗಿಸಲು ವಾಡಿ-ತಂದೂರು, ಮೋಟುಮಾರಿ-ವಿಷ್ಣುಪುರಂ ಮಾರ್ಗದಲ್ಲಿನ ಅಭಿವೃದ್ಧಿಯಿಂದ ಹೆಚ್ಚಿನ ಅನುಕೂಲವಾಗಲಿದೆ. ಹೂಟಗಿ, ಕೂಡಗಿ, ಯಾದ್ಲಾಪುರ, ಬಳ್ಳಾರಿ ಮತ್ತು ಯರಮರಸ್‌ನಲ್ಲಿರುವ ಉಷ್ಣ ವಿದ್ಯುತ್ ಸ್ಥಾವರಗಳಿಗೆ ಕಲ್ಲಿದ್ದಲು ಸಾಗಣೆ ಇನ್ನಷ್ಟು ವೇಗ ಮತ್ತು ಸುಲಭವಾಗಲಿದೆ.

ಬೆಂಗಳೂರು-ಚೆನ್ನೈ ಮಾರ್ಗದಲ್ಲಿ ದಟ್ಟಣೆ ಕಡಿಮೆ: ವೈಟ್‌ಫೀಲ್ಡ್-ಬಂಗಾರಪೇಟೆ ನಡುವಿನ 47 ಕಿ.ಮೀ ಉದ್ದದ 3 ಮತ್ತು 4ನೇ ಮಾರ್ಗವು ಅತ್ಯಂತ ದಟ್ಟಣೆಯ ಮನ್ಮಾಡ-ಹುಬ್ಬಳ್ಳಿ-ಬೆಂಗಳೂರು-ಜೋಳರಪೇಟೆ ವಿಭಾಗದಡಿ ಬರುತ್ತದೆ. ಇದು ಬೆಂಗಳೂರು-ಚೆನ್ನೈ ನಡುವಿನ ರೈಲು ಸಂಚಾರ ದಟ್ಟಣೆಯನ್ನು ಗಣನೀಯವಾಗಿ ಕಡಿಮೆ ಮಾಡಿ, ಹೆಚ್ಚಿನ ರೈಲುಗಳ ಸಂಚಾರಕ್ಕೆ ಅವಕಾಶ ಮಾಡಿಕೊಡಲಿದೆ.

ಪ್ರವಾಸೋದ್ಯಮ ಮತ್ತು ಸರಕು ಸಾಗಣೆಗೆ ಉತ್ತೇಜನ: ಹೊಸೂರು-ಓಮಲೂರು ಜೋಡಿ ಹಳಿ ಮಾರ್ಗದಿಂದ ಕನ್ಯಾಕುಮಾರಿ, ರಾಮೇಶ್ವರಂನಂತಹ ಪುಣ್ಯಕ್ಷೇತ್ರಗಳಿಗೆ ತೆರಳುವ ಲಕ್ಷಾಂತರ ಯಾತ್ರಿಕರಿಗೆ ಅನುಕೂಲವಾಗಲಿದೆ. ಜೊತೆಗೆ ಬೆಂಗಳೂರು ಸುತ್ತಮುತ್ತಲಿನ ಕೈಗಾರಿಕಾ ಪ್ರದೇಶಗಳಿಗೆ ಸರಕು ಸಾಗಣೆಯೂ ವೇಗವಾಗಲಿದೆ.ಒಟ್ಟಾರೆಯಾಗಿ, ಈ ಯೋಜನೆಗಳು ಕೇವಲ ರೈಲು ಮಾರ್ಗಗಳ ವಿಸ್ತರಣೆಯಷ್ಟೇ ಅಲ್ಲ, ದೇಶದ ಆರ್ಥಿಕ ಬೆಳವಣಿಗೆ, ಉದ್ಯೋಗ ಸೃಷ್ಟಿ ಮತ್ತು ಪ್ರಾದೇಶಿಕ ಸಂಪರ್ಕಕ್ಕೆ ಹೊಸ ಶಕ್ತಿ ತುಂಬಲಿವೆ ಎಂದು ಕೇಂದ್ರ ಸರ್ಕಾರ ಹೇಳಿದೆ.

Continue Reading

ದಿನದ ಸುದ್ದಿ

ಡಿಕೆಶಿ ಸರ್ಕಾರಕ್ಕೆ 100 ದಿನಗಳ ಸಂಭ್ರಮ – `ದೃಢ ಕರ್ನಾಟಕದ ಸಂಕಲ್ಪ’ ಕಾರ್ಯಕ್ರಮಕ್ಕೆ ವಿಧಾನಸೌಧ ಸಜ್ಜು

Published

on

ಸೆ.10 ರಂದು ವಿಧಾನಸೌಧದಲ್ಲಿ ಶತದಿನೋತ್ಸವ ಸಮಾರಂಭ; ಮಾಜಿ ಸಿಎಂ ಸಿದ್ದರಾಮಯ್ಯರಿಂದ ಉದ್ಘಾಟನೆ, ಗ್ಯಾರಂಟಿ ಫಲಾನುಭವಿಗಳೊಂದಿಗೆ ಸಿಎಂ ಡಿ.ಕೆ. ಶಿವಕುಮಾರ್ ಸಂವಾದ

ಸುದ್ದಿದಿನ, ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರವು ತನ್ನ ಆಡಳಿತದ 100 ದಿನಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಈ ಶತಕದ ಸಂಭ್ರಮವನ್ನು ಆಚರಿಸಲು ರಾಜ್ಯ ಸರ್ಕಾರವು `ದೃಢ ಕರ್ನಾಟಕದ ಸಂಕಲ್ಪ – ಶತಕದ ಪಥ, ಪ್ರಗತಿಯ ರಥ’ ಎಂಬ ವಿಶೇಷ ಮತ್ತು ಅದ್ಧೂರಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.

 

ಈ ಕಾರ್ಯಕ್ರಮವು ನಾಳೆ ಅಂದರೆ 2026ನೇ ಸೆಪ್ಟೆಂಬರ್ 10ರ ಗುರುವಾರ ಬೆಳಿಗ್ಗೆ 10 ಗಂಟೆಗೆ ವಿಧಾನಸೌಧದ ಪ್ರತಿಷ್ಠಿತ ಬ್ಯಾಂಕ್ವೇಟ್ ಸಭಾಂಗಣದಲ್ಲಿ ನಡೆಯಲಿದೆ. ಸರ್ಕಾರದ ನೂರು ದಿನಗಳ ಸಾಧನೆ, ಜನಪರ ಯೋಜನೆಗಳ ಅನುಷ್ಠಾನ ಮತ್ತು ಮುಂದಿನ ಅಭಿವೃದ್ಧಿಯ ದೂರದೃಷ್ಟಿಯನ್ನು ಜನರ ಮುಂದಿಡುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ.

ಗಣ್ಯರ ದಂಡು, ಸಿದ್ದರಾಮಯ್ಯರಿಂದ ಉದ್ಘಾಟನೆ:

ಈ ಶತದಿನೋತ್ಸವ ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಇದು ಕಾಂಗ್ರೆಸ್ ಪಕ್ಷದಲ್ಲಿನ ಒಗ್ಗಟ್ಟು ಮತ್ತು ನಾಯಕತ್ವದ ನಿರಂತರತೆಯನ್ನು ಸಂಕೇತಿಸುತ್ತದೆ.

ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಹಾಗೂ ಕಂದಾಯ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ಜಿ. ಪರಮೇಶ್ವರ್, ರಾಜ್ಯ ಸಂಪುಟದ ಎಲ್ಲಾ ಸಚಿವರು, ಎಲ್ಲಾ ಶಾಸಕರು, ವಿಧಾನ ಪರಿಷತ್ ಸದಸ್ಯರು, ರಾಜ್ಯದ ಲೋಕಸಭಾ ಮತ್ತು ರಾಜ್ಯಸಭಾ ಸದಸ್ಯರು ಭಾಗವಹಿಸಲಿದ್ದಾರೆ. ಇದರ ಜೊತೆಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಸೇರಿದಂತೆ ಸರ್ಕಾರದ ಎಲ್ಲಾ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಮತ್ತು ಹಿರಿಯ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ.

http://Visit : www.suddidina.com

ಫಲಾನುಭವಿಗಳೊಂದಿಗೆ ನೇರ ಸಂವಾದ – ಕಾರ್ಯಕ್ರಮದ ಪ್ರಮುಖ ಆಕರ್ಷಣೆ

ಈ ಕಾರ್ಯಕ್ರಮದ ಅತ್ಯಂತ ಪ್ರಮುಖ ಆಕರ್ಷಣೆ ಎಂದರೆ ಮುಖ್ಯಮಂತ್ರಿಗಳೊಂದಿಗೆ ಫಲಾನುಭವಿಗಳ ನೇರ ಸಂವಾದ. ಸರ್ಕಾರದ ಮಹತ್ವಾಕಾಂಕ್ಷೆಯ ಐದು ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಗೃಹಲಕ್ಷ್ಮಿ, ಶಕ್ತಿ, ಯುವನಿಧಿ ಮತ್ತು ಗೃಹಜ್ಯೋತಿ ಯೋಜನೆಗಳ ಫಲಾನುಭವಿಗಳು ಈ ವೇದಿಕೆಯಲ್ಲಿ ತಮ್ಮ ಅನುಭವಗಳನ್ನು ಹಂಚಿಕೊಳ್ಳಲಿದ್ದಾರೆ.

ಕೇವಲ ಗ್ಯಾರಂಟಿ ಯೋಜನೆಗಳಷ್ಟೇ ಅಲ್ಲದೆ, ಸಮಾಜದ ವಿವಿಧ ವರ್ಗಗಳ ಶ್ರಮಿಕರು ಮತ್ತು ಕಾರ್ಮಿಕರು ಕೂಡ ಈ ಸಂವಾದದಲ್ಲಿ ಪಾಲ್ಗೊಳ್ಳಲಿದ್ದಾರೆ. ಕೃಷಿಕರು, ಆಟೋ ಚಾಲಕರು, ಹಮಾಲಿಗಳು, ಗಿಗ್ ಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಪೌರಕಾರ್ಮಿಕರು ತಮ್ಮ ಬದುಕಿನಲ್ಲಿ ಸರ್ಕಾರದ ಯೋಜನೆಗಳಿಂದ ಆಗಿರುವ ಬದಲಾವಣೆಗಳ ಕುರಿತು ಮುಖ್ಯಮಂತ್ರಿಗಳೊಂದಿಗೆ ಮುಕ್ತವಾಗಿ ಮಾತನಾಡಲಿದ್ದಾರೆ.

100 ದಿನಗಳಲ್ಲಿ ಸರ್ಕಾರವು ಕೈಗೊಂಡಿರುವ ಜನಪರ ನಿರ್ಧಾರಗಳು, ಅಭಿವೃದ್ಧಿ ಕಾಮಗಾರಿಗಳು ಮತ್ತು ಆಡಳಿತದಲ್ಲಿ ತಂದಿರುವ ಪಾರದರ್ಶಕತೆಯ ಬಗ್ಗೆ ಈ ವೇದಿಕೆಯಲ್ಲಿ ಚರ್ಚೆ ನಡೆಯಲಿದೆ. ಸರ್ಕಾರದ ಸಾಧನೆಗಳನ್ನು ಕೇವಲ ಭಾಷಣದ ಮೂಲಕವಲ್ಲ, ಬದಲಾಗಿ ಫಲಾನುಭವಿಗಳ ಬಾಯಿಂದಲೇ ಜನರಿಗೆ ತಲುಪಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ಮೂಲಗಳು ತಿಳಿಸಿವೆ.

ಮುಂದಿನ ದಿನಗಳಲ್ಲಿ ದೃಢ ಕರ್ನಾಟಕ’ ನಿರ್ಮಾಣದ ನಿಟ್ಟಿನಲ್ಲಿ ಸರ್ಕಾರದ ಮುಂದಿನ 5 ವರ್ಷಗಳ ಕಾರ್ಯಯೋಜನೆ ಮತ್ತು ರೂಪುರೇಷೆಗಳನ್ನು ಈ ಸಮಾರಂಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಕಟಿಸಲಿದ್ದಾರೆ ಎಂದು ನಿರೀಕ್ಷಿಸಲಾಗಿದೆ.

Continue Reading

Trending