Connect with us

ದಿನದ ಸುದ್ದಿ

ಜನಸಾಮಾನ್ಯರ ಗಟ್ಟಿದನಿಯಾಗಿದ್ದ ದೊರೆಸ್ವಾಮಿ

Published

on

  • ಮ ಶ್ರೀ ಮುರಳಿ ಕೃಷ್ಣ, ಬೆಂಗಳೂರು

ಶ್ರೀಯುತ ಹೆಚ್ ಎಸ್ ದೊರೆಸ್ವಾಮಿಯವರು ವಸಾಹತುಶಾಹಿ ಬ್ರಿಟೀಶರ ವಿರುದ್ಧ ಹೋರಾಟ ಮಾಡಿ, ‘ ಭಾರತ ಬಿಟ್ಟು ತೊಲಗಿ’ ಚಳವಳಿಯ ಸಂದರ್ಭದಲ್ಲಿ ಅಂಚೆ ಪೆಟ್ಟಿಗೆಗಳು ಮತ್ತು ರೆಕಾರ್ಡ್ ರೂಂಗಳಲ್ಲಿ ಸಣ್ಣ ಟೈಂಬಾಂಬುಗಳನ್ನು ಇರಿಸಿದ್ದಕ್ಕೆ ಜೈಲುವಾಸವನ್ನು ಅನುಭವಿಸಿದರು. ಆ ಕಾಲದಲ್ಲೇ ಸಮಾಜದ ಅಂಚಿನಲ್ಲಿರುವವರ ಬವಣೆಗಳನ್ನು ಕಂಡು, ಅವರ ಹಿತದಲ್ಲೂ ಕ್ರಿಯಾಶೀಲರಾದರು.

ಕಾರ್ಮಿಕರ ಹೋರಾಟಗಳಲ್ಲೂ ಭಾಗವಹಿಸಿದರು. ತಮ್ಮ ಬೇಡಿಕೆಗಳ ಜೊತೆಗೆ ಕಾರ್ಮಿಕರು ಸ್ವಾತಂತ್ರ್ಯ ಸಂಗ್ರಾಮದಲ್ಲೂ ಪಾಲ್ಗೊಳ್ಳುತ್ತಿದ್ದರು. 1940ರ ದಶಕದಲ್ಲಿ ಕಮ್ಯುನಿಸ್ಟ್ ನಾಯಕರು ಮತ್ತು ಸ್ವಾತಂತ್ರ್ಯ ಹೋರಾಟಗಾರರಾಗಿದ್ದ ಎನ್ ಡಿ ಶಂಕರ್ ಜೊತೆ ಸೇರಿ ಬೆಂಗಳೂರಿನ ರಾಜಾ, ಮಿನರ್ವ ಮತ್ತು ಬಿನ್ನಿ ಮಿಲ್ ಗಳಲ್ಲಿ 14 ದಿನಗಳ ಮುಷ್ಕರವನ್ನು ಹೂಡುವುದರಲ್ಲಿ ಅವರ ಪಾತ್ರವಿತ್ತು.

ನಂತರ ಬೆಂಗಳೂರಿನಲ್ಲಿ ಒಂದು ಪ್ರಕಾಶನ ಸಂಸ್ಥೆ ಮತ್ತು ‘ಸಾಹಿತ್ಯ ಮಂದಿರ’ ಎಂಬ ಪುಸ್ತಕ ಅಂಗಡಿಯನ್ನು ಪ್ರಾರಂಭಿಸಿದರು. ಕೆಲ ಸಮಯದ ನಂತರ ಮೈಸೂರಿನಿಂದ ಪ್ರಕಟವಾಗುತ್ತಿದ್ದ ‘ಪೌರವಾಣಿ’ ಪತ್ರಿಕೆಯ ಸಂಪಾದಕರಾದರು. ಸ್ವಾತಂತ್ರ್ಯ ಗಳಿಸಿದ ಸಮಯದಲ್ಲಿ ಮೈಸೂರು ಸಂಸ್ಥಾನ ಭಾರತದ ಜೊತೆ ವಿಲೀನವಾಗಲು ಹಿಂದೇಟು ಹಾಕುತ್ತಿದ್ದಾಗ ದೊರೆಸ್ವಾಮಿಯವರು ತಮ್ಮ ಪತ್ರಿಕೆಯಲ್ಲಿ ಅಂದಿನ ಮಹಾರಾಜರ ನಡೆಯನ್ನು ಖಂಡಿಸಿದರು.ಇದಕ್ಕಾಗಿ ಅವರು ಕಿರುಕಳವನ್ನು ಅನುಭವಿಸಬೇಕಾಯಿತು.

ವಿನೋಬ ಭಾವೆಯವರ ಭೂದಾನ ಮತ್ತು ಕರ್ನಾಟಕ ಏಕೀಕರಣ ಚಳವಳಿಗಳಲ್ಲಿ ಸಕ್ರಿಯವಾಗಿ ಭಾಗಬಹಿಸಿರು. ತುರ್ತುಪರಿಸ್ಥಿಯ ಕಾಲದಲ್ಲಿ ಇಂದಿರಾ ಗಾಂಧಿಯವರ ಸರ್ವಾಧಿಕಾರಿ ಧೋರಣೆಯ ವಿರುದ್ಧ ಆಕೆಗೆ ನೇರವಾಗಿ ಪತ್ರವನ್ನು ಬರೆದರು. ಆ ಸಮಯದಲ್ಲಿ ನಾಲ್ಕು ತಿಂಗಳ ಕಾಲ ಬಂದೀಖಾನೆಯ ವಾಸಿಯಾದರು.

ಕಳೆದ ಮೂರು ದಶಕಗಳಲ್ಲಿ ಅವರು ಭಾಗವಹಿಸದೇ ಇರದ ಚಳುವಳಿಗಳು ಇರಲೇ ಇಲ್ಲ ಎಂದರೆ ಅತಿಶಯೋಕ್ತಿಯಾಗುವುದಿಲ್ಲ. ಕನ್ನಡ ಭಾಷೆಯ ಉಳಿವು ಮತ್ತು ಬೆಳವಣಿಗೆ, ಕಸ ವಿಲೇವಾರಿ, ವಸತಿಹೀನರಿಗೆ ಸೂರು, ಭೂಕಬಳಿಕೆ, ಕೊಡಗು ಜಿಲ್ಲೆಯ ಬುಡಕಟ್ಟು ಪ್ರದೇಶಗಳಿಂದ ಆದೀವಾಸಿಗಳ ಸ್ಥಳಾಂತರ, ಸಿಎಎ ಕಾನೂನು, ನೂತನ ಕೃಷಿ ಕಾಯಿದೆಗಳು ಇತ್ಯಾದಿ ಹತ್ತು ಹಲವು ಗಹನ ಹಾಗೂ ಜ್ವಲಂತ ವಿಷಯಗಳ ಬಗೆಗೆ ಮಧ್ಯಪ್ರವೇಶವನ್ನು ಮಾಡಿ , ಅನೇಕ ಸಮಾಜಮುಖಿ ಹೋರಾಟಗಳಲ್ಲಿ ಸಕ್ರಿಯ ಪಾತ್ರವನ್ನು ವಹಿಸಿದರು.

ಬ್ರಿಟೀಶ್ ಸರ್ಕಾರದ ದಮನಕಾರಿ ರೀತಿನೀತಿಗಳ ವಿರುದ್ಧ ಹೋರಾಡಿದಂತೆ ಅವರು ಸ್ವಾತಂತ್ರ್ಯದ ತರುವಾಯ ನಮ್ಮನ್ನು ಆಳಿದ ವಿವಿಧ ಸರ್ಕಾರಗಳ ಜನವಿರೋಧಿ ಕ್ರಮಗಳ ವಿರುದ್ಧ ತಮ್ಮ ದನಿಯನ್ನು ಎತ್ತಿದರು. ನುಡಿದಂತೆ ನಡೆದರು; ಸಾರ್ಥಕ, ಸತ್ವಪೂರ್ಣ ಜೀವನವನ್ನು ನಡೆಸಿದರು. ಅವರಿಗೆ ಗೌರವಪೂರ್ವಕ ನಮನಗಳು.

ಲೇಖಕ : ಮ ಶ್ರೀ ಮುರಳಿ ಕೃಷ್ಣ

(ಬರೆದವರು : ಮ ಶ್ರೀ ಮುರಳಿ ಕೃಷ್ಣ
ವಿಳಾಸ : ನಂ 38, 3ನೇ ಕ್ರಾಸ್
ರಾಜಾ ಗಾರ್ಡನಿಯಾ ಲೇಔಟ್
ತುರಹಳ್ಳಿ, ಸುಬ್ರಹ್ಮಣ್ಯಪುರ ಅಂಚೆ
ಬೆಂಗಳೂರು – 560 061
ಜಂಗಮವಾಣಿ :
+919481200960
ಇಮೈಲ್ :
msmurali1961@gmail.com)

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಭೀಕರ | ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ

Published

on

ಸುದ್ದಿದಿನ ಡೆಸ್ಕ್:ಬೆಂಗಳೂರಿನಲ್ಲಿ ಪ್ರೀತಿಯೊಂದು ರಕ್ತಸಿಕ್ತ ಅಂತ್ಯ ಕಂಡಿದೆ. ಮದುವೆಗೆ ನಿರಾಕರಿಸಿದ ಪ್ರೇಯಸಿಯನ್ನು ಪ್ರಿಯಕರನೇ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯ ಪೈಪ್‌ಲೈನ್ ರಸ್ತೆಯಲ್ಲಿ ನಡೆದಿದೆ.

23 ವರ್ಷದ ಅಂಜಲಿ ಕೊಲೆಯಾದ ಯುವತಿಯಾಗಿದ್ದು, ರಾಜೀವ್ ಬಂಧಿತ ಆರೋಪಿ. ಕಳೆದ ಮೂರು-ನಾಲ್ಕು ವರ್ಷಗಳಿಂದ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಈ ಹಿಂದೆ ಕೆಲಸ ಮಾಡುತ್ತಿದ್ದ ಸ್ಥಳದಲ್ಲೇ ಪರಿಚಯವಾಗಿ ಸ್ನೇಹ ಬೆಳೆದು, ಬಳಿಕ ಅದು ಪ್ರೀತಿಗೆ ತಿರುಗಿತ್ತು.

ಆದರೆ ರಾಜೀವ್‌ಗೆ ಕ್ರಿಮಿನಲ್ ಹಿನ್ನೆಲೆ ಇದ್ದ ಕಾರಣ ಅಂಜಲಿ ಕುಟುಂಬಸ್ಥರು ಈ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದರು. ಹಲವು ಬಾರಿ ಕುಟುಂಬಸ್ಥರನ್ನು ಒಪ್ಪಿಸಲು ರಾಜೀವ್ ಪ್ರಯತ್ನಿಸಿದ್ದರೂ ಫಲಿಸಿರಲಿಲ್ಲ. ಇತ್ತೀಚೆಗೆ ಪೋಷಕರ ಒತ್ತಾಯಕ್ಕೆ ಮಣಿದ ಅಂಜಲಿ ರಾಜೀವ್‌ನಿಂದ ದೂರವಾಗಲು ಆರಂಭಿಸಿದ್ದಳು. ಇಂದು ಸಂಜೆ ಅಂಜಲಿಯನ್ನು ಊಟದ ನೆಪದಲ್ಲಿ ಕರೆಸಿಕೊಂಡಿದ್ದ ರಾಜೀವ್, ಮತ್ತೊಮ್ಮೆ ಮದುವೆ ವಿಚಾರ ಪ್ರಸ್ತಾಪಿಸಿದ್ದಾನೆ. ಈ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದು, ಕೋಪಗೊಂಡ ರಾಜೀವ್ ಚಾಕುವಿನಿಂದ ಅಂಜಲಿಯ ಕುತ್ತಿಗೆಗೆ ಇರಿದಿದ್ದಾನೆ.

ರಕ್ತದ ಮಡುವಿನಲ್ಲಿ ಬಿದ್ದಿದ್ದ ಅಂಜಲಿಯನ್ನು ಸ್ಥಳೀಯರು ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೆ ಆಕೆ ಮೃ*ತಪಟ್ಟಿದ್ದಾಳೆ. ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಮಹಾಲಕ್ಷ್ಮಿ ಲೇಔಟ್ ಪೊಲೀಸರು ಪರಿಶೀಲನೆ ನಡೆಸಿ, ಕೆಲವೇ ನಿಮಿಷಗಳಲ್ಲಿ ಆರೋಪಿ ರಾಜೀವ್‌ನನ್ನು ಬಂಧಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನಿಮ್ಮ ಕಥೆಗೆ ಹೊಸ ವೇದಿಕೆ ; ಕಥೆಗಾರರಿಗೆ ಪ್ರಿಯಾ ಸುದೀಪ್‍ ಆಹ್ವಾನ

Published

on

ಸುದ್ದಿದಿನ ಡೆಸ್ಕ್:ಸುಪ್ರಿಯಾನ್ವಿ ಪ್ರೊಡಕ್ಷನ್ಸ್ ಸಂಸ್ಥೆಯಡಿ ಪ್ರಿಯಾ ಸುದೀಪ್‍ ನಿರ್ಮಿಸಿದ ಮೊದಲ ಚಿತ್ರ ‘ಮ್ಯಾಂಗೋ ಪಚ್ಚ’. ಸಂಚಿತ್‍ ಸಂಜೀವ್‍ ಅಭಿನಯದ ಈ ಚಿತ್ರ ಹೆಚ್ಚು ಸದ್ದು ಮಾಡಲಿಲ್ಲ.

ಈ ಸೋಲನ್ನು ಹಿಂದಕ್ಕೆ ಹಾಕಿ, ಪ್ರಿಯಾ ಸುದೀಪ್‍ ಇನ್ನಷ್ಟು ಹೊಸ ಕಥೆಗಳನ್ನು ತೆರೆಗೆ ತರುವುದಕ್ಕೆ, ಹೊಸ ಚಿತ್ರಗಳನ್ನು ನಿರ್ಮಿಸುವುದಕ್ಕೆ ಮುಂದಾಗಿದ್ದಾರೆ. ಕಥೆಗಾರರಿಗೆ ಆಹ್ವಾನ ನೀಡಿದ್ದಾರೆ. ‘ನಾವು ಹುಡುಕುತ್ತಿರುವುದು ಕೇವಲ ಕಥೆಗಳಲ್ಲ. ಮನಸ್ಸುಗಳನ್ನು ಮುಟ್ಟುವ ಭಾವನೆಗಳು, ಚಿಂತನೆಗೆ ಹಚ್ಚುವ ವಿಚಾರಗಳು ಮತ್ತು ಪರದೆಯ ಮೇಲೆ ಹೊಸ ಇತಿಹಾಸ ಬರೆಯುವ ಕಲ್ಪನೆಗಳು.

ನಿಮ್ಮ ಬಳಿ ಮೌಲಿಕ ಕಥೆ-ಚಿತ್ರಕಥೆ ಇದ್ದರೆ ಅಥವಾ ವಿಶಿಷ್ಟ ಕಥಾ ಪರಿಕಲ್ಪನೆ ಇದ್ದರೆ, ಅದನ್ನು ನಮ್ಮೊಂದಿಗೆ ಹಂಚಿಕೊಳ್ಳಿ. ತಮ್ಮದೇ ಆದ ವಿಶಿಷ್ಟ ದೃಷ್ಟಿಕೋನ ಮತ್ತು ಸೃಜನಾತ್ಮಕತೆಯನ್ನು ಹೊಂದಿರುವ ಲೇಖಕರು, ಕಥೆಗಾರರು ಮತ್ತು ಸೃಜನಶೀಲ ಮನಸ್ಸುಗಳನ್ನು ನಾವು ಸ್ವಾಗತಿಸುತ್ತೇವೆ. ಎಲ್ಲಾ ಪ್ರಕಾರಗಳು ಮತ್ತು ಎಲ್ಲಾ ಮಾದರಿಗಳಲ್ಲಿನ ಕಥಾ ಸಲ್ಲಿಕೆಗಳನ್ನು ನಾವು ಸ್ವಾಗತಿಸುತ್ತೇವೆ. ನಿಮ್ಮ ಕಥೆಯೇ ಮುಂದಿನ ದೊಡ್ಡ ಪ್ರಯಾಣದ ಆರಂಭವಾಗಬಹುದು’ ಎಂದು ಪ್ರಿಯಾ ಸುದೀಪ್‍, ಸೋಷಿಯಲ್‍ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

ಜೊತೆಗೆ ಒಂದು ಮೊಬೈಲ್‍ ಸಂಖ್ಯೆಯನ್ನು ಸಹ ಹಂಚಿಕೊಂಡಿದ್ದಾರೆ. ಆದರೆ, ಕರೆ ಮಾಡುವಂತಿಲ್ಲ. ಚಾಟ್‍ ಮಾತ್ರ ಮಾಡಬಹುದು. ಕಥೆಗಳಿದ್ದರೆ 6663307434 ಸಂಖ್ಯೆಯನ್ನು ಸಂಪರ್ಕಿಸಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದುರಂತ | ಮೇಲ್ಛಾವಣಿ ಕುಸಿದು ಮೂವರು ಸಾವು

Published

on

ಸುದ್ದಿದಿನ,ರಾಯಚೂರು: ಕಟ್ಟಡದ ಮೇಲ್ಛಾವಣಿಯ ಸಜ್ಜಾ ಏಕಾಏಕಿ ಕುಸಿದು ಬಿದ್ದು ಮೂವರು ಯುವಕರು ಮೃತಪಟ್ಟ ದುರ್ಘಟನೆ ಭಾನುವಾರ ಜಿಲ್ಲೆಯ ದೇವದುರ್ಗ ಪಟ್ಟಣದ ಹೊಸ ಬಸ್ ನಿಲ್ದಾಣದ ಸಮೀಪ ಸಂಭವಿಸಿದೆ.

ಮೃತರನ್ನು ದೇವದುರ್ಗ ತಾಲೂಕಿನ ಸಮುದ್ರ ಗ್ರಾಮದ ರವಿಚಂದ್ರ (35), ಕ್ಯಾದಿಗೆರಾ ಗ್ರಾಮದ ನಾಗರಾಜ್ (30) ಹಾಗೂ ಕೊತ್ತಿಗುಡ್ಡದ ಅರ್ಜುನ್ (21) ಎಂದು ಗುರುತಿಸಲಾಗಿದೆ.

ಕಟ್ಟಡದ ಅವಶೇಷಗಳಡಿ ಸಿಲುಕಿ ರವಿಚಂದ್ರ ಹಾಗೂ ನಾಗರಾಜ ಸ್ಥಳದಲ್ಲೇ ಮೃತಪಟ್ಟಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಅರ್ಜುನ್‌ ಅವರನ್ನು ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರೂ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು ಎಂದು ಪೊಲೀಸರು ತಿಳಿಸಿದ್ದಾರೆ.

ಮಾಹಿತಿಯ ಪ್ರಕಾರ, ಯುವಕರು ತಾವೇ ನಿರ್ಮಿಸಿದ್ದ ‘ಅಂತ್ಯವಾಯ್ತು’ ಎಂಬ ಕಿರುಚಿತ್ರದ ಪೋಸ್ಟರ್ ಅಂಟಿಸಲು ಕಟ್ಟಡದ ಬಳಿ ತೆರಳಿದ್ದ ವೇಳೆ ಈ ದುರಂತ ಸಂಭವಿಸಿದೆ.

ಕಟ್ಟಡದ ಮೇಲ್ಛಾವಣಿಯ ಒಂದು ಭಾಗವು, ಅದಕ್ಕೆ ಜೋಡಣೆಯಾಗಿದ್ದ ಕಬ್ಬಿಣದ ಮೆಟ್ಟಿಲುಗಳ ಸಹಿತ ಕುಸಿದು ಬಿದ್ದಿದೆ. ಘಟನೆಯಲ್ಲಿ ಉಮೇಶ್, ಪ್ರಭು ಹಾಗೂ ಅಭಿಷೇಕ್ ಎಂಬವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.

ಘಟನಾ ಸ್ಥಳಕ್ಕೆ ದೇವದುರ್ಗ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆಯ ನಂತರ ನಿಖರ ಕಾರಣ ತಿಳಿಯಲಿದೆ. ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ದೇವದುರ್ಗ ಶಾಸಕಿ ಕರೆಮ್ಮ ನಾಯಕ ಭೇಟಿ ನೀಡಿ, ಸಂಬಂಧಪಟ್ಟ ಅಧಿಕಾರಿಗಳಿಂದ ಮಾಹಿತಿ ಪಡೆದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending