ನಿತ್ಯ ಭವಿಷ್ಯ
ಈ ರಾಶಿಯವರಿಗೆ ನಿಮ್ಮ ಅಜಾಗರೂಕತೆಯಿಂದ ಬೆಲೆಬಾಳುವ ವಸ್ತುಗಳ ಕಳೆದುಕೊಳ್ಳುವ ಸಾಧ್ಯತೆ! ತಂತ್ರಜ್ಞಾನ ಪದವಿ ಹೊಂದಿದವರಿಗೆ ಕೆಲಸ ಸಿಗುವ ಭಾಗ್ಯ! ಮದುವೆ ವಿಳಂಬ ಏಕೆ? ಎಂಬ ಚಿಂತೆ.. ಮಂಗಳವಾರರಾಶಿ ಭವಿಷ್ಯ-ಜೂನ್-1,2021
ಸೂರ್ಯೋದಯ: 05:50 AM, ಸೂರ್ಯಸ್ತ: 06:41 PM
ಸ್ವಸ್ತಿ ಶ್ರೀ ಮನೃಪ ಶಾಲಿವಾಹನ ಶಕೆ1943, ಸಂವತ್2077,
ಪ್ಲವ ನಾಮ ಸಂವತ್ಸರ
ವೈಶಾಖ ಮಾಸ, ವಸಂತ ಋತು, ಉತ್ತರಾಯಣ, ಕೃಷ್ಣ ಪಕ್ಷ,
ತಿಥಿ: ಸಪ್ತಮೀ ( 24:46 )
ನಕ್ಷತ್ರ: ಧನಿಷ್ಠ ( 16:07 )
ಯೋಗ: ವೈಧೃತಿ ( 27:00 )
ಕರಣ: ವಿಷ್ಟಿ ( 12:50 )
ಬವ ( 24:46 )
ರಾಹು ಕಾಲ: 03:00 – 4:30
ಯಮಗಂಡ: 09:00 – 10:30
ಜಾತಕ ಆಧಾರ, ಮುಖಲಕ್ಷಣ, ಹಸ್ತಸಾಮುದ್ರಿಕೆ, ಜನ್ಮದಿನಾಂಕ, ಜನ್ಮ ವಾರದ ಮೇಲೆ ನಿಮ್ಮ ಸಮಸ್ಯೆಗಳಾದ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮೇಷ ರಾಶಿ
ತಮಗೆ ಬರಬೇಕಾದ ಬಾಕಿ ಸಾಲದ ಮೊತ್ತ ಕೈಸೇರುವುದು. ಈ ಹಿಂದೆ ನೀವು ಪಟ್ಟಿದ್ದ ಶ್ರಮಕ್ಕೆ ಈಗ ಪ್ರತಿಫಲ ದೊರೆಯಲಿದೆ. ವ್ಯಾಪಾರ- ವ್ಯವಹಾರ ಮಾಡುವವರಿಗೆ ಹೊಸ ಆದಾಯ ಮೂಲ ಗೋಚರಿಸಲಿದೆ, ಅಷ್ಟೇ ಅಲ್ಲದೆ ಬೇರೆ ಉದ್ಯಮ ಪ್ರಾರಂಭದ ಚಿಂತನೆ ಕೂಡ ಮಾಡುವಿರಿ. ನವ ಯುವಕರಿಗೆ ರಾಜಕೀಯದಲ್ಲಿ ಸಕ್ರಿಯವಾಗಿ ಸಾಮಾಜಿಕವಾಗಿ ಮನ್ನಣೆ ದೊರೆತು, ಗೌರವ- ಸಮ್ಮಾನ ಹುಡುಕಿಕೊಂಡು ಬರಲಿವೆ. ವಿದೇಶಕ್ಕೆ ಹೋಗುವ ಕನಸು ನನಸಾಗಲಿದೆ.
ಉದ್ಯೋಗ ಬದಲಾವಣೆಗೆ ಇದು ಸರಿಯಾದ ಸಮಯವಲ್ಲ. ಸರಕಾರಿ ನೌಕರಿ ಪಡೆಯುವವರಿಗೆ ಶ್ರಮ ಅವಶ್ಯಕ. ಶಿಕ್ಷಕ ವೃಂದದ ಮಕ್ಕಳಿಗೆ ಕಂಕಣಬಲದ ಭಾಗ್ಯ.
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿ B.Sc
ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob.93534 88403
ವೃಷಭ ರಾಶಿ
ಆಕಸ್ಮಿಕವಾಗಿ ಧನಪ್ರಾಪ್ತಿ. ಅರ್ಧಕ್ಕೆ ನಿಂತಿದ್ದ ಗ್ರಹ ಕಟ್ಟಡದ ಕೆಲಸಗಳನ್ನುಶುರು ಮಾಡಬೇಕಾಗುತ್ತದೆ. ಸಂಗಾತಿಯ ಸಹಕಾರದಿಂದ ದೂರಪ್ರಯಾಣದ ಯೋಜನೆ ಹಾಕಿಕೊಳ್ಳಲಿದ್ದೀರಿ. ಬಂಧುಗಳ ಆಗಮನದಿಂದ ಮನೆಯಲ್ಲಿ ಮನಸ್ತಾಪ ಆಗಲಿದೆ. ಮನರಂಜನೆಗಾಗಿ ಎಲೆಕ್ಟ್ರಾನಿಕ್ ಉಪಕರಣಗಳು ಖರೀದಿಸುವಿರಿ. ಮಗಳ ಸಂಸಾರದ ಬಗ್ಗೆ ಹೆಚ್ಚು ಚಿಂತನೆ ಮಾಡಲಿದ್ದೀರಿ.ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿರಿ.ಸೋಮಶೇಖರ್ ಗುರೂಜಿ B.Sc
ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob.93534 88403
ಮಿಥುನ ರಾಶಿ
ಸಂಗಾತಿಯ ಜೊತೆ ಮಿಲನ ಸಂತೋಷವಾಗಿರುವುದು.
ಸಂಗಾತಿ ಜತೆಗೆ ಸರಸ ಸಲ್ಲಾಪ ಮಾಡುವಾಗ ಭಿನ್ನಾಭಿಪ್ರಾಯ ಮೂಡದಂತೆ ನೋಡಿಕೊಳ್ಳಿ. ಮೂಲ ಕಸುಬುದಾರರಿಗೆ ವ್ಯಾಪಾರ- ವ್ಯವಹಾರ ಮಾಡುತ್ತಿರುವವರಿಗೆ ಲಾಭದ ಪ್ರಮಾಣದಲ್ಲಿ ಹೆಚ್ಚಳ ಆಗಲಿದೆ. ಕಾಯಕವೇ ಕೈಲಾಸ ಎಂದು ನಂಬಿರುವ ನಿಮಗೆ ಜವಾಬ್ದಾರಿಯೊಂದು ಹೆಗಲೇರಲಿದೆ.
ಕೆಲಸದಲ್ಲಿ ಸ್ವಲ್ಪ ಮಟ್ಟಿಗೆ ಒತ್ತಡ ಕಾಣಿಸಿಕೊಳ್ಳಲಿದೆ. ಹಣದ ಒಳಹರಿವು ಉತ್ತಮವಾಗಿದೆ. ಕೆಲಸದ ವಿಚಾರದಲ್ಲಿ ಸಹೋದ್ಯೋಗಿಗಳ ಜೊತೆ ವಾಗ್ವಾದ ಸಂಭವ. ನಿಮ್ಮ ಮದುವೆ ವಿಳಂಬ ಸಾಧ್ಯತೆಯಿದೆ.
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿ B.Scಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob.93534 88403
ಕರ್ಕಾಟಕ ರಾಶಿ
ದುಡ್ಡಿನ ವಿಚಾರದಲ್ಲಿ ಮನಸ್ತಾಪ ಸಹಜ ಮುಂದುವರೆಯಲಿದೆ. ಪ್ರೇಮಿಗಳ ಮನಸ್ಸು ಚಂಚಲಚಿತ್ತತೆ ಇರುತ್ತದೆ. ಲಕ್ಷ್ಮಿ ತಾಂಡವ ಆದರೆ ಕೈಯಲ್ಲಿ ಹಣ ನಿಲ್ಲುವುದಿಲ್ಲ. ನಿಮಗೆ ಸಂಬಂಧ ಪಡದ ಸಂಗತಿಗಳಿಂದ ನಿಮ್ಮ ಮೇಲೆ ಅಪವಾದ ಬರಲಿದೆ. ಕುಟುಂಬದ ಸಂಬಂಧಿಗಳ ಚುಚ್ಚು ಮಾತುಗಳಿಂದ ಮನಸಿಗೆ ಬೇಸರ ಆಗಲಿದೆ.
ದೂರ ಪ್ರಯಾಣ ಬೇಡ. ವಿದೇಶ ಪ್ರವಾಸ ಮಾಡುವ ಮುನ್ನ ಫಲಿತಾಂಶದ ಬಗ್ಗೆ ಮುಂಚಿತವಾಗಿಯೇ ಆಲೋಚಿಸಿದ ಮೇಲೆ ಹೆಜ್ಜೆ ಇಡಿ. ಆಮಿಷಕ್ಕೆ ಒಳಗಾಗಬೇಡಿ. ತಾವು ನೆಲೆಸಿರುವ ಊರಿನಲ್ಲಿಯೇ ಹೊಸ ಉದ್ಯಮ ಪ್ರಾರಂಭ ಮಾಡುವಿರಿ. ಮದುವೆ ವಿಳಂಬ ಏಕೆ ?ಎಂಬ ಪ್ರಶ್ನೆ ಕಾಡುತ್ತಿದೆ
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿ B.Sc
ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob.93534 88403
ಸಿಂಹ ರಾಶಿ
ದಂಪತಿಗಳಿಗೆ ಸಂತಾನ ಏಕೆ ಆಗುತ್ತಿಲ್ಲ ಎಂಬ ಪ್ರಶ್ನೆ ಕಾಡುತ್ತಿದೆ?ಮಾತಾಪಿತೃ ಆರೋಗ್ಯದ ಕಡೆ ಹೆಚ್ಚಿನ ನಿಗಾ ವಹಿಸಿ. ನಿಮ್ಮದಲ್ಲದ ತಪ್ಪಿಗ ಶಿಕ್ಷೆ ನುಭವಿಸಬೇಕಾದಿತು, ಇದು ಮಧ್ಯಸ್ಥಿಕೆ ಜನರ ಕುತಂತ್ರ. ದುಡುಕು ಮಹಾ ಕೆಡುಕು ಇದರಿಂದ ಸಾಲದ ಜವಾಬ್ದಾರಿ ಹೊರಬೇಕಾಗುತ್ತದೆ. ಸರ್ಕಾರಿ ಕೆಲಸ ಸೇರುವುದಕ್ಕಾಗಿ ಯಾರಿಂದಲೋ ಸಹಾಯ ನಿರೀಕ್ಷೆ ಮಾಡುತ್ತಿದ್ದಲ್ಲಿ ಅದು ದೊರೆಯುವುದು ಕಷ್ಟವಾಗಲಿದೆ. ಯಾವುದೇ ನಿರೀಕ್ಷೆ ಇಟ್ಟುಕೊಳ್ಳಬೇಡಿ ಏಕೆಂದರೆ ಆರ್ಥಿಕ ಪರಿಸ್ಥಿತಿ ಸರಿಯಿಲ್ಲ.
ನಿಮ್ಮ ಯೋಚನೆ ಸರಿಯಾಗಿದೆ ಆದರೆ ನಿಮಗೆ ಮಾನ್ಯತೆ ಇಲ್ಲ.ಯಾವುದು ಹೇಗೋ ಬರುತ್ತದೋ ಹಾಗೇ ಸ್ವೀಕರಿಸಿ ಗುರಿ ಮುಟ್ಟಲು ಹೋರಾಡಿರಿ. ಹಣಕಾಸಿನ ಸಮಸ್ಯೆ ಕಾಡುತ್ತಿದೆಯೇ? ಮದುವೆ ವಿಳಂಬ ಏಕೆ?
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿರಿ.ಸೋಮಶೇಖರ್ ಗುರೂಜಿ B.Scಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob.93534 88403
ಕನ್ಯಾ ರಾಶಿ
ನಿಮ್ಮ ಸ್ವಂತ ದುಡಿಮೆಯಿಂದ ವಾಹನ ಖರೀದಿ. ಕೃಷಿ ಉತ್ಪನ್ನ ವ್ಯವಹಾರಗಳಲ್ಲಿ ಬೆಳವಣಿಗೆ ಇದೆ. ಹಣಕಾಸಿನ ವ್ಯವಹಾರ ಸುಗಮವಾಗಲಿದೆ. ಸರ್ಕಾರದ ಕೆಲಸ- ಕಾರ್ಯಗಳಿಗಾಗಿ ಹೋರಾಟ ಮುಂದುವರೆಯಲಿದೆ.
ನಿಮ್ಮ ಸಹನೆದಿಂದ ವಿರೋಧಿಗಳು ಒಳಸಂಚು ಮಾಡಲಿದ್ದಾರೆ. ವಿರೋಧಿಗಳು ನಾಶವಾಗಲು ಮಿತಿ ಹಾಕಿಕೊಳ್ಳಿ, ಇಲ್ಲದಿದ್ದಲ್ಲಿ ನಿಮ್ಮನ್ನು ದುರುಪಯೋಗ ಮಾಡಿಕೊಳ್ಳುವ ಸಾಧ್ಯತೆ ಇದೆ. ನಿಮ್ಮ ಹಣ ಮರಳಿ ಬರಲು ಹರಸಾಹಸ ಪಡುವಿರಿ. ಸಾಲಗಾರರಿಂದ ವೈಷಮ್ಯ.ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿರಿ.ಸೋಮಶೇಖರ್ ಗುರೂಜಿ B.Scಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob.93534 88403
ತುಲಾ ರಾಶಿ
ಬಹುದಿನದಿಂದ ಕಣ್ಣಿಗೆ ಸಂಬಂಧಿಸಿದ ಸಮಸ್ಯೆಗಳು ನಿವಾರಣೆಯಾಗಲಿದೆ. ಮದುವೆಗಾಗಿ ಹಣದ ಸಹಾಯ ಕೇಳಲು ಬರುವವರಿದ್ದಾರೆ. ದಾನ- ಧರ್ಮಾದಿ ಕಾರ್ಯಗಳಿಂದ ಮನಸಿಗೆ ನೆಮ್ಮದಿ ದೊರೆಯಲಿದೆ. ದೇವಸ್ಥಾನ ಪ್ರತಿಷ್ಠಾಪನ ದ ಚಿಂತನೆ ಮಾಡುವಿರಿ. ಒಗ್ಗಟ್ಟಿನ ಕುಟುಂಬದ ವಿಚಾರದಲ್ಲಿ ಮೂಗು ತೂರಿಸುತ್ತಿದ್ದಾರೆ ಎಂದು ಬಲವಾಗಿ ಅನಿಸುತ್ತದೆ.
ಸೋದರ- ಸೋದರಿಯರ ಜತೆ ಆಸ್ತಿ ವಿಚಾರ ಮಾತನಾಡುವಾಗ ನಾಲಗೆ ಮೇಲೆ ಹಿಡಿತ ಇರಲಿ, ಸಾವಧಾನವಾಗಿ ಬಗೆಹರಿಸಿಕೊಳ್ಳಿ. ವಾಹನ ಓಡಿಸುವಾಗ ಮೊಬೈಲಲ್ಲಿ ಮಾತನಾಡಬೇಡಿ ಇದರಿಂದ ಅಪಘಾತ ಸಂಭವ. ವಾಹನಕ್ಕೆ ಸಂಬಂಧಿಸಿದ ದಾಖಲಾತಿಗಳನ್ನು ಪರೀಕ್ಷಿಸಿ ವಾಹನ ಚಲಾಯಿಸಿ.ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿ B.Sc
ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob.93534 88403
ವೃಶ್ಚಿಕ ರಾಶಿ
ಪಿತ್ರಾರ್ಜಿತ ಆಸ್ತಿ ವಿಚಾರದಲ್ಲಿ ಗೊಂದಲ ಸೃಷ್ಟಿ.
ತಾಯಿಯ ಆರೋಗ್ಯದ ಬಗ್ಗೆ ಗಮನ ವಹಿಸಿ. ವಿದೇಶದಲ್ಲಿ ಕಾರ್ಯ ನಿರ್ವಹಿಸುವವರಿಗೆ ಉದ್ಯೋಗದ ಸಮಸ್ಯೆ ಕಾಡಲಿದೆ. ನವದಂಪತಿಗಳಿಗೆ ಸಂತಾನ ಅಪೇಕ್ಷಿತರಿಗೆ ಶುಭ ಸುದ್ದಿ ಕೇಳಿಬರಲಿದ್ದು.ದೇಹದ ತೂಕ ಹೆಚ್ಚಾಗದಂತೆ ಆರೋಗ್ಯದ ಸಮಸ್ಯೆ ಹೆಚ್ಚಾಗಲಿದೆ. ಥೈರಾಯ್ಡ್ ಸಮಸ್ಯೆಯಿಂದ ಎಚ್ಚರಿಕೆ ವಹಿಸಿ.
ಗೃಹಪಯೋಗಿ ಕರಣಗಳು ಖರೀದಿಸುವ ಚಿಂತನೆ. ತಂತ್ರಜ್ಞಾನ ಪದವಿ ಹೊಂದಿದವರು ಉದ್ಯೋಗಕ್ಕಾಗಿ ಆಲೋಚನೆ ಮಾಡಲಿದ್ದೀರಿ.ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿ B.Sc
ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob.93534 88403
ಧನಸ್ಸು ರಾಶಿ
ಪ್ರಯತ್ನ ತಕ್ಕಂತೆ ಫಲ ಸಿಗುವುದು,ಹಗಲುಗನಸು ಕಾಣುವುದನ್ನು ಬಿಡಬೇಕು. ನಿಮ್ಮ ಸಾಮರ್ಥ್ಯವನ್ನು ಮೀರಿದ ಹಣಕಾಸು ವ್ಯವಹಾರ ಮೈಮೇಲೆ ಎಳೆದುಕೊಳ್ಳಬೇಡಿ. ಹಿತಶತ್ರುಗಳಿಂದ ಕಿರುಕುಳ ಇರುತ್ತದೆ, ಇದರ ಶಾಶ್ವತ ಪರಿಹಾರಕ್ಕಾಗಿ ಕರೆ ಮಾಡಿರಿ. ವಿರೋಧಿಗಳು ಪ್ರೇಮದಿಂದ ಗೆಲ್ಲುವುದು ಉತ್ತಮ.
ಉದರ ಸಂಬಂಧಿಸಿದ ಕಾಯಿಲೆ ಉಳ್ಳವರು ಆಹಾರ ಪಥ್ಯದಲ್ಲಿ ಕಡ್ಡಾಯವಾಗಿ ವೈದ್ಯರ ಸಲಹೆಯನ್ನು ಪಾಲಿಸಿ. ಮೇಲಧಿಕಾರಿಗಳ ಜತೆಗೆ ಮಾತುಕತೆ ಆಡುವಾಗ ವಿನಮ್ರತೆ ತುಂಬಿರಲಿ, ಇದು ಮುಂದಿನ ದಿನ ಪ್ರಮೋಷನ್ ಭಾಗ್ಯ ನಿಮ್ಮದಾಗಲಿದೆ.ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿ B.Sc
ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob.93534 88403
ಮಕರ ರಾಶಿ
ವಾಹನಕ್ಕೆ ಸಂಬಂಧಿಸಿದ ದಾಖಲಾತಿಗಳು ನಿಮ್ಮ ಹತ್ತಿರ ಇರಲಿ,ವಾಹನ ಚಾಲನೆ ವೇಳೆ ಎಚ್ಚರಿಕೆಯಿಂದ ಇರಬೇಕು. ನಿಮ್ಮ ಅಜಾಗೃಕತೆಯಿಂದ ಬೆಲೆಬಾಳುವ ವಸ್ತುಗಳು ಕಳೆದುಕೊಳ್ಳುವ ಸಂಭವ. ನಿಮ್ಮ ಅತಿಯಾದ ಕೋಪ ನಡವಳಿಕೆಯಿಂದ ಆಪ್ತರ ಜತೆಗೆ ಮನಸ್ತಾಪ ಆಗಬಹುದು. ಹಣಕಾಸು ವಿಚಾರದಲ್ಲಿ ಸಮತೋಲನ ಕಾಪಾಡಿಕೊಳ್ಳಿ.
ನಿಮ್ಮ ಸಂಗಾತಿ ಜೊತೆ ಭಾವನಾತ್ಮಕವಾದ ವಿಚಾರದಲ್ಲಿ ಸೂಕ್ತವಾದ ತೀರ್ಮಾನವನ್ನು ತೆಗೆದುಕೊಳ್ಳಿ.
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿ B.Sc
ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob.93534 88403
ಕುಂಭ ರಾಶಿ
ಲೇವಾದೇವಿಗಾರರರಿಗೆ ಸ್ವಲ್ಪಮಟ್ಟಿಗೆ ನೆಮ್ಮದಿ ಸಿಗಲಿದೆ.
ಹಣದ ಬಾಕಿ ಬರಬೇಕಾದಲ್ಲಿ ಹೆಚ್ಚು ಶ್ರಮ ಹಾಕಿ ಪ್ರಯತ್ನಿಸಿ. ದೀರ್ಘಾವಧಿ ಹೂಡಿಕೆ ಬೇಡ. ಹಿರಿಯರಲ್ಲಿ ದಯಾ- ದಾಕ್ಷಿಣ್ಯ ತೋರಿಸಿ, ಮಾತಿನಲ್ಲಿ ಸೌಜನ್ಯ ಇರಲಿ. ಯಾರದೋ ಮೇಲಿನ ಸಿಟ್ಟು ಮತ್ಯಾರ ಮೇಲೋ ತೋರಿಸಬೇಡಿ, ಇದರಿಂದ ತುಂಬಾ ಕಷ್ಟ ಅನುಭವಿಸಬೇಕಾದಿತು.
ಪ್ರೇಯಸಿ ಜೊತೆ ತುಂಬಾ ಸೌಜನ್ಯವಾಗಿ ವರ್ತಿಸಿ. ಅವರು ತುಂಬಾ ಮೃದು ಸ್ವಭಾವದವರು.ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿರಿ.ಸೋಮಶೇಖರ್ ಗುರೂಜಿ B.Scಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob.93534 88403
ಮೀನ ರಾಶಿ
ತಂತ್ರಜ್ಞಾನ ಪದವಿ ಓದಿದವರಿಗೆ ಬೇಡಿಕೆ ಹೆಚ್ಚಾಗಲಿದೆ, ಎಲ್ಲಾ ದಾಖಲೆಗಳು ಭದ್ರವಾಗಿ ಜೋಡಿಸಿ.ಉದ್ಯೋಗಸ್ಥರಿಗೆ ಪ್ರಾಮುಖ್ಯ ಹೆಚ್ಚಾಗಲಿದೆ. ಪ್ರೇಯಸಿ ಜೊತೆ ರುಚಿಕಟ್ಟಾದ ಊಟ- ತಿಂಡಿಯನ್ನು ಸವಿಯಲಿದ್ದೀರಿ. ದಂಪತಿಗಳಿಗೆ ಸಂಬಂಧಿಕರಿಂದ ಔತಣಕೂಟಕ್ಕೆ ಆಹ್ವಾನ ಬರಲಿದೆ. ದೇವತಾರಾಧನೆಗೆ ಕುಟುಂಬ ಸಮೇತ ಭಾಗವಹಿಸುವಿರಿ. ಕುಟುಂಬದೊಳಗೆ ಮದುವೆ ವಿಚಾರ ಪ್ರಸ್ತಾವ ಆಗಲಿದೆ.
ದಂಪತಿ ಮಧ್ಯೆ ಸಣ್ಣ- ಪುಟ್ಟ ಭಿನ್ನಾಭಿಪ್ರಾಯ ಮಧ್ಯಸ್ಥಿಕೆ ಜನರಿಂದ ಕಾಣಿಸಿಕೊಳ್ಳಬಹುದು. ಅನುಮಾನಕ್ಕೆ ಕುಟುಂಬದಲ್ಲಿ ಅಶಾಂತಿ. ಮದುವೆ ವಿಳಂಬವೇಕೆ? ಹಣಕಾಸಿನಲ್ಲಿ ತೊಂದರೆಯೇ?
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿ B.Sc
ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob.93534 88403

ಅಂಕಣ
ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ
ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.
ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು
ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.
ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.
ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.
ಇತ್ತೀಚಿನ ಪಾಸ್ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.
ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.
ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.
ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.
ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.
ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.
ಆಗಸ್ಟ್ 30ರೊಳಗೆ ಬರಹಗಳನ್ನು ಇ-ಮೇಲ್: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.
ಕಚೇರಿ ವಿಳಾಸ
ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ
ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು
ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು
1. ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ ತಲುಪಿದ್ದಾರೆ. ಇಂದು ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, 5 ಪ್ರಮುಖ ಮಸೂದೆಗಳಿಗೆ ಅಂಗೀಕಾರ ನೀಡುವಂತೆ ಮನವಿ ಮಾಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ, ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ, ಕೇಂದ್ರದ ಜಲಶಕ್ತಿ ಖಾತೆ ಸಚಿವರನ್ನು ಕೋರುವುದಾಗಿ, ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
2. ರಾಜ್ಯದ ಗ್ರಾಮ ಪಂಚಾಯ್ತಿಗಳ ಹಂತದಲ್ಲಿ ಜುಲೈ 15ರಿಂದ, ಸಾರ್ವಜನಿಕರ ಆಸ್ತಿಗಳ ಇ-ಖಾತೆ ರೂಪಿಸುವ ಅಭಿಯಾನವನ್ನು ಕಂದಾಯ ಇಲಾಖೆ ಆಯೋಜಿಸಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
3. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ ಸಂಬಂಧಿಸಿ, ಇಲ್ಲಿಯವರೆಗೆ ಹೆಸರು ನೋಂದಾಯಿಸದವರು, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ, ಈ ತಿಂಗಳ 30ರವರೆಗೆ ಮಾಹಿತಿ ನೀಡಲು ಅವಕಾಶವಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.
4. ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆ ಭಾಗಶ: ಭರ್ತಿಯಾಗಿದ್ದು, ಒಳ ಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಣೆಕಟ್ಟೆಯಿಂದ 5 ಸಾವಿರದಿಂದ 15 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ.
5. ಕತಾರ್ನಲ್ಲಿರುವ ಅಲ್ ಉದೈದ್ ಅಮೇರಿಕ ವಾಯುನೆಲೆಯ ಮೇಲೆ ಇರಾನ್ ನಡೆಸಿದ ದಾಳಿಯ ನಂತರ ಜಾಗತಿಕ ತೈಲ ಬೆಲೆಗಳು ಐದು ವರ್ಷಗಳಲ್ಲಿ ನಿನ್ನೆ ಒಂದೇ ದಿನದಲ್ಲಿ ತೀವ್ರ ಕುಸಿತವನ್ನು ದಾಖಲಿಸಿದೆ.
6. ಕರ್ನಾಟಕ, ಮಧ್ಯಪ್ರದೇಶ, ಬಿಹಾರ, ಜಾಖಂಡ್, ಒಡಿಶಾ, ಛತ್ತೀಸ್ಗಢ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಕೊಂಕಣ, ಗೋವಾ, ಮಹಾರಾಷ್ಟ್ರ, ಗುಜರಾತ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನ, ಕೇರಳದ ಕೆಲವು ಸ್ಥಳಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
7. ಅಯೋವಾದಲ್ಲಿ ನಾಳೆ ಆರಂಭವಾಗಲಿರುವ ಯುಎಸ್ ಓಪನ್ 2025 ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಹರಿಹರನ್ ಅಂಶಕರುಣನ್ ಮತ್ತು ರೂಬನ್ ಕುಮಾರ್ ರೆಥಿನಸಬಪತಿ, ಭಾರತವನ್ನು ಮುನ್ನಡೆಸಲಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಈರುಳ್ಳಿ ಕೇವಲ ತರಕಾರಿಯಲ್ಲ ; ಅದ್ಭುತ ಔಷಧ
ನಾವು ನಿತ್ಯವೂ ತಯಾರಿಸುವ ಅಡುಗೆ ಪದಾರ್ಥಗಳಿಗೆ ಈರುಳ್ಳಿಯನ್ನು ಹಾಕದಿದ್ದಾಗ ಒಂದು ರುಚಿಯಾದರೆ ಅದನ್ನು ಹಾಕಿದಾಗ ಆ ಪದಾರ್ಥದ ರುಚಿಯೇ ಬೇರೆಯಾಗುತ್ತದೆ. ನಾವು ಈರುಳ್ಳಿಯ ಗುಣಗಳು, ಅದರ ಉಪಯೋಗಗಳು ಮತ್ತು ಮನೆ ಮದ್ದುಗಳ ಬಗ್ಗೆ ತಿಳಿದುಕೊಳ್ಳೋಣ.
ಆಯುರ್ವೇದದಲ್ಲಿ ಈರುಳ್ಳಿಯ ಬಗ್ಗೆ ವಿಸ್ತೃತ ವಿವರಣೆ ಇದೆ. ಆಯುರ್ವೇದ ಗ್ರಂಥಗಳ ಪ್ರಕಾರ ಈರುಳ್ಳಿಗೆ ಬೆಳ್ಳುಳ್ಳಿಯ ಗುಣಗಳಿವೆ. ಆದರೆ ಬೆಳ್ಳುಳ್ಳಿಯಂತೆ ಇದು ಉಷ್ಣವಲ್ಲ. ಹಾಗಾಗಿ ಬೆಳ್ಳುಳ್ಳಿಯ ಅದ್ಭುತ ಗುಣಗಳನ್ನು ಪಡೆಯಬೇಕು ಎಂದಾದರೆ ಮತ್ತು ಬೆಳ್ಳುಳ್ಳಿಯನ್ನು ಸೇವಿಸಿದರೆ ಉಷ್ಣವಾಗುತ್ತದೆ ಎಂಬ ಯೋಚನೆ ಇದ್ದರೆ ಬದಲಿಗೆ ಈರುಳ್ಳಿಯನ್ನು ಬಳಸಬಹುದು.
ಭಾವ ಪ್ರಕಾಶ ನಿಘಂಟು ಎಂಬ ಗ್ರಂಥದಲ್ಲಿ “ಬಲವೀರ್ಯ ಕೈರೋ ಗುರುಃ” ಎಂದಿದ್ದಾರೆ. ಅಂದರೆ ಈರುಳ್ಳಿಯು ದೇಹದ ಬಲವನ್ನು, ವೀರ್ಯದ ಗುಣಮಟ್ಟವನ್ನು, ಲೈಂಗಿಕ ಶಕ್ತಿಯನ್ನು ಹೆಚ್ಚಿಸುತ್ತದೆ ಎಂದರ್ಥ. ಬಹುತೇಕ ಎಲ್ಲಾ ಆಯುರ್ವೇದ ಗ್ರಂಥಗಳಲ್ಲಿಯೂ ಈರುಳ್ಳಿಯಿಂದ ಲೈಂಗಿಕ ಶಕ್ತಿ ವೃದ್ಧಿಯಾಗುತ್ತದೆ ಎಂಬುದನ್ನು ಹೇಳಲಾಗಿದೆ. ಇದು ಚರ್ಮಕ್ಕೆ ಕೂಡ ಅತ್ಯಂತ ಅನುಕೂಲಕರವಾದದ್ದು. ಚರ್ಮವನ್ನು ಸ್ನಿಗ್ಧಗೊಳಿಸಿ ಒರಟುತನವನ್ನು ಹೋಗಲಾಡಿಸುತ್ತದೆ; ಚರ್ಮಕ್ಕೆ ಕಾಂತಿಯನ್ನು ಕೊಡುತ್ತದೆ; ಜೊತೆಗೆ ಚರ್ಮದ ಶುದ್ಧಿಯನ್ನೂ ಮಾಡುತ್ತದೆ ಎಂದು ವಿವರಿಸಲಾಗಿದೆ. ಈರುಳ್ಳಿಯನ್ನು ನಿಯಮಿತವಾಗಿ ಸೇವಿಸುವುದರಿಂದ ದೇಹದ ಬಾಹ್ಯ ಮತ್ತು ಆಂತರಿಕ ಕಾಂತಿ ಹೆಚ್ಚುತ್ತದೆ.
ಅಂದರೆ ಕೇವಲ ಸೌಂದರ್ಯವೃದ್ಧಿಯಷ್ಟೇ ಅಲ್ಲ ದೇಹದೊಳಗಿನ ರೋಗನಿರೋಧಕ ಶಕ್ತಿ ತುಂಬಾ ಚೆನ್ನಾಗಿ ಹೆಚ್ಚುತ್ತದೆ. ಈರುಳ್ಳಿಯು ಧ್ವನಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಹೋಗಲಾಡಿಸಿ ಒಳ್ಳೆಯ ಧ್ವನಿಯನ್ನು ನೀಡುತ್ತದೆ ಎಂದು ವಿವರಿಸಲಾಗಿದೆ. ಹೀಗಾಗಿ ಹಾಡುಗಾರರು, ಅಧ್ಯಾಪಕರಂಥವರಿಗೆ ನಿಯಮಿತ ಈರುಳ್ಳಿ ಸೇವನೆ ಅನುಕೂಲಕರ. ಇದು ಕಣ್ಣಿನ ಆರೋಗ್ಯವನ್ನು ಹೆಚ್ಚಿಸುವುದರಿಂದ ಹತ್ತರಿಂದ ಹದಿನೈದು ಮಿಲೀ ಈರುಳ್ಳಿ ರಸವನ್ನು ಸುಮಾರು ಒಂದು ತಿಂಗಳು ದಿನಕ್ಕೊಮ್ಮೆ ಸೇವಿಸುವುದರಿಂದ ಚಿಕ್ಕಪುಟ್ಟ ಕಣ್ಣಿನ ತೊಂದರೆಗಳು ನಿವಾರಣೆಯಾಗುತ್ತವೆ. ಸ್ವಲ್ಪ ಸಿಹಿ ಇರುವ ಅಂದರೆ ಖಾರ ಕಡಿಮೆ ಇರುವ ಈರುಳ್ಳಿಯನ್ನು ಚಿಕ್ಕ ಚಿಕ್ಕ ತುಂಡುಗಳನ್ನಾಗಿ ಕತ್ತರಿಸಿ ತುಪ್ಪದಲ್ಲಿ ಹುರಿದು ನಿಯಮಿತವಾಗಿ ಸೇವಿಸಿದರೆ ಲೈಂಗಿಕ ಶಕ್ತಿಯ ವೃದ್ಧಿಯಾಗುತ್ತದೆ.
ಕೂದಲು ಉದುರುವುದನ್ನು ಕಡಿಮೆ ಮಾಡಲು ಈರುಳ್ಳಿಯು ಸಹಕಾರಿ. ಈರುಳ್ಳಿಯ ರಸ ತೆಗೆದು ತಲೆ ಸ್ನಾನ ಮಾಡುವ ಹತ್ತು ನಿಮಿಷ ಮೊದಲು ಕೂದಲಿನ ಬುಡಕ್ಕೆ ಹಚ್ಚಬೇಕು. ಇದರಿಂದ ಕೂದಲಿನ ಬೆಳವಣಿಗೆ ಚೆನ್ನಾಗಿ ಆಗಲು ಮತ್ತು ಕೂದಲು ಉದುರುವುದು ನಿಲ್ಲಲು ಸಹಾಯವಾಗುತ್ತದೆ. ಬೊಜ್ಜನ್ನು ಕಡಿಮೆ ಮಾಡಲು ಕೂಡ ಈರುಳ್ಳಿಯು ಸಹಕಾರಿ. ಬೆಳ್ಳುಳ್ಳಿಯ ಇನ್ನೊಂದು ಅದ್ಭುತ ಗುಣವೆಂದರೆ ಅದು ನರದ ಶಕ್ತಿಯನ್ನು ಹೆಚ್ಚಿಸುತ್ತದೆ. ಹಾಗಾಗಿ ಸಯಾಟಿಕಾದಂತಹ ಸಮಸ್ಯೆಗಳನ್ನು ಅನುಭವಿಸುತ್ತಿರುವವರಿಗೆ ಈರುಳ್ಳಿ ತುಂಬಾ ಲಾಭದಾಯಕ.
ಕಫದ ಸಮಸ್ಯೆಯಿಂದ ಬಳಲುತ್ತಿದ್ದು ಕಫ ಹೊರಗೆ ಬರುತ್ತಿಲ್ಲದಿದ್ದರೆ ಎರಡು ಚಮಚದಷ್ಟು ಈರುಳ್ಳಿ ರಸ, ಅರ್ಧ ಚಮಚದಷ್ಟು ಶುಂಠಿ ರಸ, ಅರ್ಧ ಚಮಚದಷ್ಟು ತುಳಸಿ ಎಲೆಗಳ ರಸ ಮತ್ತು ಒಂದು ಚಮಚ ಜೇನುತುಪ್ಪವನ್ನು ಸೇರಿಸಿ ದಿನಕ್ಕೆ ಒಂದು ಅಥವಾ ಎರಡು ಬಾರಿ ಸೇವಿಸಿದರೆ ಕಫ ಹೊರಗೆ ಬಂದು ಸಮಸ್ಯೆ ನಿವಾರಣೆಯಾಗುತ್ತದೆ.
ಈರುಳ್ಳಿ ಒಳ್ಳೆಯ ಜೀರ್ಣಕಾರಿಯೂ ಹೌದು ಹಾಗಾಗಿ ಅಜೀರ್ಣ ಇರುವವರಿಗೆ ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿಯನ್ನು ಹಾಕಿ ಹೆಸರುಬೇಳೆಯ ತಿಳಿಸಾರು ಮಾಡಿ ಊಟಕ್ಕೆ ನೀಡಿದರೆ ಅಜೀರ್ಣದ ಸಮಸ್ಯೆ ತುಂಬಾ ಚೆನ್ನಾಗಿ ಹತೋಟಿಗೆ ಬರುತ್ತದೆ. ಜೊತೆಗೆ ಶಕ್ತಿ ವೃದ್ಧಿಯೂ ಆಗುತ್ತದೆ. ಒಟ್ಟಿನಲ್ಲಿ ಈರುಳ್ಳಿಯನ್ನು ಸರಿಯಾಗಿ ಬಳಸಿಕೊಂಡರೆ ಅದು ಕೇವಲ ತರಕಾರಿಯಲ್ಲ ಅದ್ಭುತ ಔಷಧ.(ಬರಹ-ಡಾ|| ವೆಂಕಟ್ರಮಣ ಹೆಗಡೆ
ವೇದ ವೆಲ್ನೆಸ್ ಸೆಂಟರ್, ನಿಸರ್ಗಮನೆ, ಶಿರಸಿ, ಉ.ಕನ್ನಡ)
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ4 days agoಅನುದಾನ ದುರುಪಯೋಗ | ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ನಿರ್ದೇಶಕ ಡಾ. ಅಶೋಕ್ ಡಿ.ಆರ್ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ4 days agoತುರ್ತು ಕುಡಿಯುವ ನೀರಿನ ಯೋಜನೆ ; 7 ಕೋಟಿ ಅನುದಾನದಲ್ಲಿ ಅವ್ಯವಹಾರ : ತನಿಖೆಗೆ ಆದೇಶಿಸಿ ವಕೀಲ ಡಾ.ಕೆ.ಎ.ಓಬಳಪ್ಪ ಲೋಕಾಗೆ ದೂರು
-
ದಿನದ ಸುದ್ದಿ4 days agoಸುಶೋಭನ್ ಸೋನು ರಾಯ್ ಬೆಳ್ಳಿತೆರೆಗೆ
-
ದಿನದ ಸುದ್ದಿ2 days agoಡಾ. ಪ್ರೀತಿ ಅವರಿಗೆ ‘ಪರಮ್ ಭೂಷಣ್ ನ್ಯಾಷನಲ್ ಎಕ್ಸಲೆನ್ಸ್ ಅವಾರ್ಡ್


