Connect with us

ದಿನದ ಸುದ್ದಿ

ದಾವಣಗೆರೆ | ಜಿಲ್ಲೆಯಲ್ಲಿ ಸೋಂಕಿತ 142 ಮಂದಿ ಗರ್ಭಿಣಿಯರಿಗೆ ಸುರಕ್ಷಿತ ಹೆರಿಗೆ : ಎರಡನೆ ಅಲೆಯ ನಡುವೆ ಕೋವಿಡ್ ಸೋಂಕು ಗೆದ್ದ ಬಾಣಂತಿಯರು, ಹಸುಗೂಸುಗಳು

Published

on

ಸುದ್ದಿದಿನ,ದಾವಣಗೆರೆ : ಕೋವಿಡ್ ಸೋಂಕಿನ ಭೀತಿ ಗಟ್ಟಿಮುಟ್ಟಾಗಿರುವವರನ್ನೇ ಹೈರಾಣಾಗಿಸುವಂತಹ ಪರಿಸ್ಥಿತಿ ಇರುವ ಈ ಸಂದರ್ಭದಲ್ಲಿ, ಜಿಲ್ಲೆಯಲ್ಲಿ ಕೋವಿಡ್ ಸೋಂಕಿತ ಗರ್ಭಿಣಿಯರು, ಬಾಣಂತಿಯರು ಮತ್ತು ಹಸುಗೂಸುಗಳು ಗುಣಮುಖರಾಗುವ ಮೂಲಕ ಕೊರೊನಾವನ್ನು ಗೆದ್ದಿದ್ದಾರೆ.

ದಾವಣಗೆರೆಯ ಚಿಗಟೇರಿ ಜಿಲ್ಲಾ ಆಸ್ಪತ್ರೆಯಲ್ಲಿ ಕೋವಿಡ್ ಸೋಂಕಿತ ಗರ್ಭಿಣಿಯರ ಚಿಕಿತ್ಸೆಗಾಗಿಯೇ ಪ್ರತ್ಯೇಕ ಐಸೋಲೇಷನ್ ವಾರ್ಡ್ ಪ್ರಾರಂಭಿಸಲಾಗಿದೆ. ಇಲ್ಲಿಯೂ ಕೂಡ ಬೆಡ್ ನಡುವೆ ಸಾಮಾಜಿಕ ಅಂತರ ಕಾಯ್ದುಕೊಂಡು, ವಿಶೇಷವಾಗಿ ಕೋವಿಡ್ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಸೊಂಕಿತ ಗರ್ಭಿಣಿಯರಲ್ಲಿ ಮಾನಸಿಕ ಸ್ಥೈರ್ಯ ತುಂಬುವ ಹಾಗೂ ಉತ್ತಮ ಚಿಕಿತ್ಸೆ ನೀಡುವುದರ ಜೊತೆಗೆ ಸುರಕ್ಷಿತ ಹೆರಿಗೆಯನ್ನೂ ಇಲ್ಲಿನ ವೈದ್ಯರು ಕೈಗೊಂಡು ಪ್ರಶಂಸೆಗೆ ಪಾತ್ರರಾಗಿದ್ದಾರೆ.

ಕೊರೊನಾ ಮೂರನೆ ಅಲೆ ಮಕ್ಕಳಿಗೆ ತೀವ್ರ ಸಂಕಷ್ಟ ತರುವ ಸಾಧ್ಯತೆ ಇದೆ ಎನ್ನುವಂತಹ ಅಭಿಪ್ರಾಯವನ್ನು ತಜ್ಞರು ವ್ಯಕ್ತಪಡಿಸಿರುವ ಸಂದರ್ಭದಲ್ಲಿಯೇ, ಕೊರೋನಾ ಸೋಂಕಿತ ಗರ್ಭಿಣಿಯರಿಗೆ ಸುರಕ್ಷಿತ ಹೆರಿಗೆ ಮಾಡಿಸಿ, ಬಾಣಂತಿಯರು ಹಾಗೂ ಹಸುಗೂಸುಗಳು ಕೊರೋನಾ ಸೋಂಕಿನಿಂದ ಗುಣಮುಖರಾಗಿರುವುದು, ಆತಂಕದ ನಡುವಿನ ಒಳ್ಳೆಯ ಸುದ್ದಿ.

ಸೋಂಕು ಗೆದ್ದ 142 ಬಾಣಂತಿಯರು

ಕೋವಿಡ್‍ನ ಎರಡನೆ ಅಲೆ ಪ್ರಾರಂಭವಾದ ಏಪ್ರಿಲ್ ನಿಂದ ಈವರೆಗೆ ಜಿಲ್ಲೆಯಲ್ಲಿ ಕೋವಿಡ್ ಸೋಂಕಿತ ಒಟ್ಟು 124 ಗರ್ಭಿಣಿಯರಿಗೆ ದಾವಣಗೆರೆಯ ಚಿಗಟೇರಿ ಜಿಲ್ಲಾ ಆಸ್ಪತ್ರೆಯಲ್ಲಿ ಸುರಕ್ಷಿತವಾಗಿ ಹೆರಿಗೆ ಮಾಡಿಸಲಾಗಿದೆ. ಈ ಪೈಕಿ 70 ಸೋಂಕಿತ ಗರ್ಭಿಣಿಯರಿಗೆ ನಾರ್ಮಲ್ ಹೆರಿಗೆಯಾಗಿದ್ದರೆ, 54 ಸಿಸೇರಿಯನ್ ಹೆರಿಗೆಗಳಾಗಿವೆ. 18 ಹಸುಗೂಸುಗಳಿಗೆ ಸೋಂಕು ತಗುಲಿದ್ದು, ಈ ಪೈಕಿ 16 ಶಿಶುಗಳು ಕೊರೊನಾ ಸೋಂಕಿನಿಂದ ಗುಣಮುಖವಾಗಿವೆ.

ತೀವ್ರ ಕ್ಲಿಷ್ಟಕರ ಪರಿಸ್ಥಿತಿಯ ಕಾರಣದಿಂದ ಕೇವಲ 02 ಶಿಶುಗಳು ಮಾತ್ರ ಸೋಂಕು ಗೆಲ್ಲಲಾರದೆ ಸಾವಿಗೆ ಶರಣಾಗಿವೆ. ‘ಜಿಲ್ಲಾ ಆಸ್ಪತ್ರೆಯಲ್ಲಿನ ವೈದ್ಯರು ಹಾಗೂ ಶುಶ್ರೂಷಕರು ಸೋಂಕಿತ ಗರ್ಭಿಣಿಯರು, ಬಾಣಂತಿಯರ ಹಾಗೂ ಹಸುಗೂಸುಗಳ ಆರೋಗ್ಯ ಸುರಕ್ಷತೆಗಾಗಿ ಕೈಗೊಂಡ ವಿಶೇಷ ಕಾಳಜಿಯಿಂದಾಗಿ, ಇವರು ಸೋಂಕಿನಿಂದ ಗುಣಮುಖರಾಗಲು ಸಾಧ್ಯವಾಯಿತು.

ಗರ್ಭಿಣಿಯರು, ಬಾಣಂತಿಯರು ಕೊರೊನಾ ವಿಷಯದಲ್ಲಿ ಎಚ್ಚರಿಕೆ ವಹಿಸುವುದು ಒಳ್ಳೆಯದು, ಯಾವುದೇ ಆರೋಗ್ಯ ಸಮಸ್ಯೆ ಕಂಡುಬಂದರೂ, ತಕ್ಷಣ ವೈದ್ಯರ ಗಮನಕ್ಕೆ ತಂದು ಚಿಕಿತ್ಸೆ ಪಡೆದರೆ ಯಾವುದೇ ಸಮಸ್ಯೆಯಾಗುವುದಿಲ್ಲ’ ಎನ್ನುತ್ತಾರೆ ಜಿಲ್ಲಾಸ್ಪತ್ರೆಯ ತಜ್ಞ ವೈದ್ಯ ಡಾ. ಗಿರಿಧರ್ ಅವರು.

ಜಿಲ್ಲೆಯಲ್ಲಿ ಖಾಸಗಿ ಆಸ್ಪತ್ರೆಗಳಲ್ಲಿಯೂ ಒಟು 18 ಸೋಂಕಿತ ಗರ್ಭಿಣಿಯರಿಗೆ ಸುರಕ್ಷಿತ ಹೆರಿಗೆಯಾಗಿದ್ದು, ಈ ಪೈಕಿ 07 ಸಹಜ ಹೆರಿಗೆ ಹಾಗೂ 11 ಸಿಸೇರಿಯನ್ ಹೆರಿಗೆ ಮಾಡಿಸಲಾಗಿದೆ.
ಎದೆ ಹಾಲಿನಿಂದ ಸೊಂಕು ಹರಡಲ್ಲ : ಕೊರೊನಾ ಇದ್ದರೂ ಕೂಡ ಮಾಸ್ಕ್ ಧರಿಸಿ, ತಾಯಂದಿರು ಹಸುಗೂಸುಗಳಿಗೆ ಹಾಲುಣಿಸಬಹುದು. ತಾಯಿಯ ಎದೆ ಹಾಲಿನಿಂದ ಕೊರೊನಾ ಸೋಂಕು ಮಗುವಿಗೆ ಹರಡುವುದಿಲ್ಲ.

ಆದರೆ ಹಾಲುಣಿಸುವಾಗ ತಾಯಂದಿರು ಅತ್ಯಂತ ಎಚ್ಚರಿಕೆ ವಹಿಸಬೇಕು. ಮಾಸ್ಕ್ ಧರಿಸದೆ ಕೆಮ್ಮುವುದು, ಸೀನುವುದು ಮಾಡುವುದರಿಂದ ಮಗುವಿಗೆ ಸೋಂಕು ತಗಲುವ ಸಾಧ್ಯತೆಗಳಿರುತ್ತವೆ. ಹೀಗಾಗಿ ತಾಯಂದಿರು ತಪ್ಪದೆ ಮಾಸ್ಕ್ ಧರಿಸಿಯೇ ಮಗುವಿಗೆ ಹಾಲುಣಿಸಬೇಕು, ಬಳಿಕ ಮಗುವನ್ನು ಸುರಕ್ಷಿತ ಅಂತರದಲ್ಲಿ ಪ್ರತ್ಯೇಕವಾಗಿ ಮಲಗಿಸಬೇಕು, ಹಾಲುಣಿಸುವ ಮೊದಲು ಹಾಗೂ ನಂತರ, ಪ್ರತಿ ಬಾರಿಯೂ ತಾಯಿ ಕೈಯನ್ನು ಸಾಬೂನಿನಿಂದ ಸ್ವಚ್ಛವಾಗಿ ತೊಳೆದುಕೊಳ್ಳಬೇಕು.

ಒಂದು ವೇಳೆ ಬಾಟಲಿಯಿಂದ ಮಗುವಿಗೆ ಹಾಲುಣಿಸುತ್ತಿದ್ದರೆ, ಪ್ರತಿ ಬಾರಿಯೂ ನಿಪ್ಪಲ್ ಅನ್ನು ಬಿಸಿ ನೀರಿನಿಂದ ತಪ್ಪದೆ ಸ್ವಚ್ಛಗೊಳಿಸಬೇಕು. ಸೊಂಕು ಮುಕ್ತವಾಗುವವರೆಗೂ ತಾಯಂದಿರು ಈ ನಿಯಮವನ್ನು ಕಟ್ಟುನಿಟ್ಟಾಗಿ ಪಾಲಿಸಿದಲ್ಲಿ, ತಾಯಿ, ಮಗುವಿನ ಆರೋಗ್ಯಕ್ಕೆ ಯಾವುದೇ ತೊಂದರೆಯಾಗುವುದಿಲ್ಲ ಎನ್ನುತ್ತಾರೆ ಜಿಲ್ಲಾ ಆರ್‍ಸಿಹೆಚ್ ಅಧಿಕಾರಿ ಡಾ. ಮೀನಾಕ್ಷಿ ಅವರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಕಾಲೇಜು ಶಿಕ್ಷಣ ಇಲಾಖೆ ಪ್ರಾದೇಶಿಕ ಜಂಟಿ ನಿರ್ದೇಶಕ ಹೆಚ್. ಕೇಶವ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ಶಿವಮೊಗ್ಗ:ಎಸ್.ಜೆ.ಎಂ ವಿದ್ಯಾಪೀಠ (ರಿ), ಚಿತ್ರದುರ್ಗ ಇಲ್ಲಿ ಬ್ಯಾಕ್‌ಲಾಗ್ ಅಡಿಯಲ್ಲಿ ನೇಮಕ ಮಾಡಿಕೊಳ್ಳಲಾದ ಹುದ್ದೆಗಳನ್ನು ಇಲಾಖಾ ತನಿಖೆ ನಡೆಸುವಂತೆ ಕೋರಿ ಅರ್ಜಿ ಸಲ್ಲಿಸಿ 2 ತಿಂಗಳು ಕಳೆದರೂ ಯಾವುದೇ ತನಿಖಾ ವರದಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದೆ ನಿರ್ಲಕ್ಷ್ಯ ತೋರಿದ ಕಾಲೇಜು ಶಿಕ್ಷಣ ಇಲಾಖೆ, ಶಿವಮೊಗ್ಗ ಇಲ್ಲಿಯ ಜಂಟಿ ನಿರ್ದೇಶಕರಾದ ಶ್ರೀ ಕೇಶವ ಹೆಚ್. ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಎಸ್.ಜೆ.ಎಂ ವಿದ್ಯಾಪೀಠ (ರಿ), ಚಿತ್ರದುರ್ಗ ಇಲ್ಲಿ 2022ನೇ ಸಾಲಿನಲ್ಲಿ ಬ್ಯಾಕ್‌ಲಾಗ್ ಅಡಿಯಲ್ಲಿ ಅರ್ಥಶಾಸ್ತç (ಎಸ್.ಟಿ), ರಾಜ್ಯಶಾಸ್ತç (ಎಸ್.ಸಿ), ಗ್ರಂಥಪಾಲಕರು (ಎಸ್.ಟಿ) ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲಾಗಿದ್ದು, ಇಲ್ಲಿ ಅಂತಿಮವಾಗಿ ಆಯ್ಕೆ ಮಾಡಿಕೊಳ್ಳಲಾದ ನೇಮಕಾತಿ ಪ್ರಕ್ರಿಯೆಯು ಪಾರದರ್ಶಕವಾಗಿ ನಡೆದಿರುವ ಬಗ್ಗೆ ಅನುಮಾನ ವ್ಯಕ್ತವಾಗಿ ಜಂಟಿ ನಿರ್ದೇಶಕರು, ಕಾಲೇಜು ಶಿಕ್ಷಣ ಇಲಾಖೆ, ಶಿವಮೊಗ್ಗ ಇವರಿಗೆ ದಿನಾಂಕ: 24-11-2025 ರಂದು ಅರ್ಜಿ ಸಲ್ಲಿಸಿ, ಬ್ಯಾಕ್ ಲಾಗ್ ನೇಮಕಾತಿಯ ಬಗ್ಗೆ ತನಿಖೆ ನಡೆಸಿ, ತನಿಖಾ ವರದಿಯನ್ನು ನೀಡುವಂತೆ ಕೋರಲಾಗಿತ್ತು.

ಅರ್ಜಿ ಸಲ್ಲಿಸಿ ಒಂದು ತಿಂಗಳಾದರೂ ಯಾವುದೇ ಮಾಹಿತಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದೆ ಇರುವ ಕಾರಣ ಜ್ಞಾಪನ ನೀಡಿ 7 ದಿನಗಳ ಒಳಗಾಗಿ ತನಿಖಾ ವರದಿಯನ್ನು ನೀಡುವಂತೆ ವಿನಂತಿಸಲಾಗಿತ್ತು. ಆದರೆ ಜಂಟಿ ನಿರ್ದೇಶಕರು, ಕಾಲೇಜು ಶಿಕ್ಷಣ ಇಲಾಖೆ, ಶಿವಮೊಗ್ಗ ಇವರು ಅರ್ಜಿ ಸಲ್ಲಿಸಿ 2 ತಿಂಗಳಾದರೂ ಕನಿಷ್ಠ ಹಿಂಬರಹವನ್ನಾದರೂ ನೀಡದೆ ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುವ ಮೂಲಕ ಕರ್ತವ್ಯ ಲೋಪ ಎಸಗಿದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದೇವದಾಸಿ ಪುನರ್‍ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್‍ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಇಲಾಖೆ, 14ನೇ ಮುಖ್ಯ ರಸ್ತೆ, ಕುವೆಂಪು ನಗರ, ಎಮ್.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಇಲ್ಲಿ ಅರ್ಜಿಗಳನ್ನು ಪಡೆದು ಫೆಬ್ರವರಿ 12 ರೊಳಗಾಗಿ ಕಚೇರಿ ಸಲ್ಲಿಸಬೇಕು.

ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ಯೋಜನಾಧಿಕಾರಿಗಳ ಹುದ್ದೆ ಸಂಖ್ಯೆ-1, ನಿವೃತ್ತ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಎಂಎಸ್‍ಡಬ್ಲ್ಯೂ, ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಮನಃಶಾಸ್ತ್ರದಲ್ಲಿ ಎಂ.ಎಸ್ಸಿ, ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.

ಚನ್ನಗಿರಿ ತಾಲ್ಲೂಕು ಯೋಜನಾ ಅನುಷ್ಟಾನಾಧಿಕಾರಿಗಳು ಹುದ್ದೆ ಸಂಖ್ಯೆ-1, ಬಿಎಸ್‍ಡಬ್ಲ್ಯೂ, ಬಿಎ ಇನ್ ಸೋಶಿಯಲಾಜಿ, ಎಂಎಸ್‍ಸಿ ಇನ್ ಸೈಕೋಲಾಜಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.

ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ದಾಖಲಾಧಿಕಾರಿಗಳ ಹುದ್ದೆ ಸಂಖ್ಯೆ-1, ಬಿಕಾಂ ಪದವಿ ಅಥವಾ ತತ್ಸಮಾನ ಪದವಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-222117 ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ  ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ಘಟಕಗಳಿಂದ ರಾಜ್ಯದಾದ್ಯಂತ ಬರುವ ಭಕ್ತಾಧಿಗಳ ಅನುಕೂಲಕ್ಕಾಗಿ 25 ಹೆಚ್ಚುವರಿ ವಿಶೇಷ ವಾಹನ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

Continue Reading

Trending