Connect with us

ದಿನದ ಸುದ್ದಿ

ಬೀಜೋಪಚಾರ ಹಾಗೂ ಬೀಜಾಮೃತ ಬಳಕೆ : ರೈತರಿಗೆ ಸಲಹೆ

Published

on

ಸುದ್ದಿದಿನ,ದಾವಣಗೆರೆ : ಮುಂಗಾರು ಹಂಗಾಮು ಪ್ರಾರಂಭಗೊಂಡಿದ್ದು, ರೈತರು ಮುಂಗಾರು ಬೆಳೆ ಬಿತ್ತನೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದು, ಬಿತ್ತನೆ ಬೀಜದಲ್ಲಿ ಬೀಜೋಪಚಾರ ಕೈಗೊಳ್ಳಲು ಹಾಗೂ ಬೀಜಾಮೃತ ಬಳಕೆ ಮಾಡುವಂತೆ ಕೃಷಿ ಇಲಾಖೆಯು ರೈತರಿಗೆ ಸಲಹೆ ನೀಡಿದೆ.

ಅಧಿಕ ಇಳುವರಿ ಪಡೆಯಲು ಉತ್ತಮ ಬೀಜದ ಕೊಡುಗೆ ಅಪಾರವಾಗಿದೆ. ಬೆಳೆಯುವ ಸಿರಿ ಮೊಳೆಕೆಯಲ್ಲಿ ಎಂಬ ನಾಡ್ನುಡಿಯಂತೆ ಉತ್ತಮ ಇಳುವರಿ ಪಡೆಯುವಲ್ಲಿ ಆರೊಗ್ಯವಂತ ಸಸಿಗಳ ಪಾತ್ರ ಪ್ರಮುಖವಾಗಿದೆ. ಆದ್ದರಿಂದ ಮಣ್ಣಿನಿಂದ ಹಾಗೂ ಬೀಜದಿಂದ ಹರಡುವ ರೋಗಗಳನ್ನು ತಡೆಗಟ್ಟಲು, ಸಾರಜನಕ ಮತ್ತು ರಂಜಕ ಪೋಷಕಾಂಶಗಳ ಲಭ್ಯತೆಯನ್ನು ಹೆಚ್ಚಿಸಲು ಬೀಜೋಪಚಾರ ಅವಶ್ಯಕ. ಮುಸುಕಿನಜೋಳ, ಶೇಂಗಾ, ತೊಗರಿ ಜಿಲ್ಲೆಯ ಮುಂಗಾರು ಹಂಗಾಮಿನ ಪ್ರಮುಖ ಬೆಳೆಗಳಾಗಿದ್ದು ಬಿತ್ತನೆ ಕೈಗೊಳ್ಳುವ ಮುನ್ನ ರೈತಬಾಂಧವರು ಕೆಲವು ತಾಂತ್ರಿಕತೆಗಳನ್ನು ಅನುಸರಿಸಬೇಕು.

ಮುಸುಕಿನಜೋಳದ ಬೆಳೆಯಲ್ಲಿ ಎಕರೆಗೆ ಬೇಕಾಗುವ ಬಿತ್ತನೆ ಬೀಜಕ್ಕೆ 200 ಗ್ರಾಂ ಅಝೋಸ್ಪೈರಿಲಂ ಮತ್ತು 200 ಗ್ರಾಂ ರಂಜಕ ಕರಗಿಸುವ ಜೀವಾಣು ಗೊಬ್ಬರದೊಂದಿಗೆ ಬೀಜಪೋಚಾರ ಮಾಡಬೇಕು. ಬೂಜು ರೋಗ ಅಥವಾ ಕೇದಿಗೆ ರೋಗ ಕಂಡುಬರುವ ಪ್ರದೇಶದಲ್ಲಿ ಮೆಟಲಾಕ್ಸಿಲ್+ಮ್ಯಾಂಕೋಜೆಬ್ ಮಿಶ್ರಣವನ್ನು 3 ಗ್ರಾಂ ನಂತೆ ಪ್ರತಿ ಕಿ.ಗ್ರಾಂ ಬೀಜಕ್ಕೆ ಬೆರೆಸಿ ಬೀಜೋಪಚಾರ ಮಾಡಬೇಕು.

ನೆಲಗಡಲೆ ಬಿತ್ತನೆ ಮಾಡುವ ಮೊದಲು ಪ್ರತಿ ಕಿ.ಗ್ರಾಂ ನೆಲಗಡಲೆ ಬೀಜಕ್ಕೆ 5 ಗ್ರಾಂ ಟ್ರೈಕೋಡರ್ಮ ವಿರಿಡೆ ಅಥವ 2.5 ಗ್ರಾಂ ಥೈರಾಮ್‍ನ್ನು ಬೆರೆಸಿ, ನೆರಳಿನಲ್ಲಿ ಒಣಗಿಸಬೇಕು, ನಂತರ ಒಂದು ಎಕರೆ ಬಿತ್ತನೆ ಬೀಜಕ್ಕೆ 150 ಗ್ರಾಂ ರೈಜೋಬಿಯಂ ಮತ್ತು 400 ಗ್ರಾಂ ಪಿ.ಎಸ್.ಬಿ ಜೈವಿಕ ಗೊಬ್ಬರಗಳನ್ನು ಅಂಟು ದ್ರಾವಣ ಬಳಸಿ ಉಪಚರಿಸಿ ಬಿತ್ತನೆಗೆ ಬಳಸಬೇಕು. ಗೊಣ್ಣೆ ಹುಳುವಿನ ಬಾಧೆ ಇದ್ದಲ್ಲಿ ಪ್ರತಿ ಕಿ.ಗ್ರಾಂ ಬಿತ್ತನೆ ಬೀಜಕ್ಕೆ 10 ಮಿ.ಲೀ ಕ್ಲೊರೋಫೈರಿಫಾಸ್ 20 ಇ.ಸಿ ಯನ್ನು ಬೀಜಕ್ಕೆ ಹಾನಿಯಾಗದಂತೆ ಲೇಪಿಸಿ ಬಿತ್ತನೆ ಮಾಡಬೇಕು.

ಕತ್ತು ಕೊಳೆ ರೋಗದ ನಿರ್ವಹಣೆಗೆ ಪ್ರತಿ ಕಿ. ಗ್ರಾಂ ಬಿತ್ತನೆ ಬೀಜಕ್ಕೆ 2 ಗ್ರಾಂ ಕಾರ್ಬೆಂಡಜಿಂ ಅಥವಾ ಕ್ಯಾಪ್ಟಾನ್ ನ್ನು ಬೀಜೋಪಚಾರ ಮಾಡಿ ಬಿತ್ತುವುದು ಸೂಕ್ತ.

ರಾಗಿ ಬೆಳೆಯಲ್ಲಿ ಕಂಡುಬರುವ ಬೆಂಕಿ ರೋಗ/ ಇಳುಕು ರೋಗ ಮತ್ತು ಕಂದು ಚುಕ್ಕೆ ರೋಗದ ಹತೋಟಿಗೆ ಪ್ರತಿ ಕಿ.ಗ್ರಾಂ ಬಿತ್ತನೆ ಬೀಜಕ್ಕೆ 2 ಗ್ರಾಂ. ಕಾರ್ಬೆಂಡಜಿಂ ನಿಂದ ಉಪಚಾರ ಮಾಡಿ ಬಿತ್ತನೆ ಮಾಡಬೇಕು.

ಇದನ್ನೂ ಓದಿ | ಭವಿಷ್ಯನಿಧಿ 2ನೇ ಬಾರಿ ಮುಂಗಡ ಹಣ ಪಡೆಯಲು ಅವಕಾಶ 

ದ್ವಿದಳ ಬೆಳೆಗಳಾದ ತೊಗರಿ, ಹೆಸರು, ಉದ್ದು, ಅವರೆ ಇತರೆ ದ್ವಿದಳ ಧಾನ್ಯಗಳನ್ನು ಬಿತ್ತುವ ಮೊದಲು 200 ಗ್ರಾಂ ರೈಜೋಬಿಯಂ ಮತ್ತು 200 ಗ್ರಾಂ ರಂಜಕ ಕರಗಿಸುವ ಜೀವಾಣು ಗೊಬ್ಬರದೊಂದಿಗೆ ಬೀಜಪೋಚಾರ ಮಾಡಬೇಕು. ತೊಗರಿ ಬೆಳೆಯಲ್ಲಿ ಸೊರಗು ರೋಗದ ಹತೋಟಿಗೆ ಪ್ರತಿ ಕಿ. ಗ್ರಾಂ ಬಿತ್ತನೆ ಬೀಜಕ್ಕೆ 5 ಗ್ರಾಂ ಟ್ರೈಕೋಡರ್ಮ ವಿರಿಡೆ ಅಥವಾ 2 ಗ್ರಾಂ ಕಾರ್ಬೆಂಡಜಿಂ ಅನ್ನು ಬೀಜೋಪಚಾರ ಮಾಡಿ ಬಿತ್ತಬೇಕು.

ಬೀಜಾಮೃತ ತಯಾರಿಕೆಗೆ 20 ಲೀ. ನೀರು, 5 ಕೆ.ಜಿ. ದೇಸಿ ಹಸುವಿನ ಸಗಣಿ, 5 ಲೀಟರ್ ದೇಸಿ ಹಸುವಿನ ಗಂಜಲ, 50 ಗ್ರಾಂ ಸುಣ್ಣ, ಒಂದು ಬೊಗಸೆ ಜಮೀನಿನ ಫಲವತ್ತಾದ ಮಣ್ಣು ಬಳಸಬೇಕು. ಬಿತ್ತನೆ ಹಿಂದಿನ ದಿನ ತೆಳುವಾದ ಹತ್ತಿ ಬಟ್ಟೆಯಲ್ಲಿ 5 ಕೆ. ಜಿ. ಸಗಣಿಯನ್ನು ಕಟ್ಟಿ, 20 ಲೀ. ನೀರಿರುವ ಪ್ಲಾಸ್ಟಿಕ್ ಬಕೆಟ್ / ಡ್ರಮ್‍ನಲ್ಲಿ ತೂಗುಬಿಡಬೇಕು.

ಒಂದು ಲೀ. ನೀರಿನಲ್ಲಿ 50 ಗ್ರಾಂ ಸುಣ್ಣವನ್ನು ಪ್ರತ್ಯೇಕವಾಗಿ ಬೆರೆಸಿ ತಿಳಿಯಾಗಲು ಬಿಡಬೇಕು. ಬಿತ್ತನೆ ಮಾಡುವ ದಿನ ಇಳಿಬಿಟ್ಟಿರುವ ಸಗಣಿ ಗಂಟನ್ನು ಚೆನ್ನಾಗಿ ಕಲಕಿಸಿ, ಐದಾರು ಬಾರಿ ಹಿಂಡಿ ತೆಗೆಯಬೇಕು. ಸುಣ್ಣದ ತಿಳಿ, ಗಂಜಲ ಹಾಗೂ ಮಣ್ಣನ್ನು ಸಗಣಿ ತಿಳಿಗೆ ಹಾಕಿ ಚೆನ್ನಾಗಿ ಕಲೆಸಿ, ನಂತರ ಬೀಜಗಳನ್ನು ಒಂದು ನಿಮಿಷ ಮಾತ್ರ ಬೀಜಾಮೃತದಲ್ಲಿ ಮುಳುಗಿಸಿ ತೆಗೆಯಬೇಕು. ನೆರಳಿನಲ್ಲಿ ಒಣಗಿಸಿ ತೇವ ಆರಿದ ನಂತರ ಬಿತ್ತನೆ ಮಾಡಬೇಕು ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಭಾನುವಾರವೂ ಕ್ಯಾಶ್ ಕೌಟರ್ ಓಪನ್ ; ವಿದ್ಯುತ್ ಬಿಲ್ ಬಾಕಿ ಪಾವತಿಸಿ : ಬೆಸ್ಕಾಂ

Published

on

ಸುದ್ದಿದಿನಡೆಸ್ಕ್:ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿರುವ ಗ್ರಾಹಕರು ವಿದ್ಯುತ್ ಸಂಪರ್ಕದ ಕಡಿತದಿಂದ ತೊಂದರೆಗೊಳಗಾಗದಂತೆ ನಾಳೆ ಮತ್ತು ಇದೇ 15ರ ಭಾನುವಾರವೂ ಬೆಸ್ಕಾಂ ಉಪ ವಿಭಾಗಗಳ ಕ್ಯಾಶ್ ಕೌಂಟರ್‌ಗಳು ತೆರೆದಿರಲಿವೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

ಬಿಲ್ ಬಾಕಿ ಉಳಿಸಿಕೊಂಡಿರುವ ಗ್ರಾಹಕರು ವಿದ್ಯುತ್ ಸಂಪರ್ಕ ಕಡಿತದಿಂದ ತೊಂದರೆಗೆ ಒಳಗಾಗಬಾರದು ಹಾಗೂ ಆನ್‌ಲೈನ್ ಪೇಮೆಂಟ್ ಬಳಸದವರ ಅನಕೂಲಕ್ಕಾಗಿ ಈ ವಿಶೇಷ ವ್ಯವಸ್ಥೆ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಬಿಲ್ ಬಂದ 30 ದಿನದೊಳಗೆ ವಿದ್ಯುತ್ ಶುಲ್ಕ ಪಾವತಿಸದಿದ್ದಲ್ಲಿ ಮತ್ತು ಹೆಚ್ಚುವರಿ ಭದ್ರತಾ ಠೇವಣಿ ಮೊತ್ತ ಪಾವತಿಸದಿದ್ದಲ್ಲಿ ಕೆಇಆರ್‌ಸಿ ನಿಯಮಾವಳಿ ಅನ್ವಯ ಗ್ರಾಹಕರ ವಿದ್ಯುತ್ ಸಂಪರ್ಕ ಕಡಿತಗೊಳಿಸಲು ನಿರ್ಧರಿಸಿದ್ದು, ಸೆಪ್ಟೆಂಬರ್ 1ರಿಂದಲೇ ಈ ನಿಯಮ ಜಾರಿಯಾಗಿದೆ ಎಂದು ಹೇಳಿದೆ.

ವಿದ್ಯುತ್ ಬಿಲ್ ಬಾಕಿ ಮೊತ್ತ ಮತ್ತು ಹೆಚ್ಚುವರಿ ಭದ್ರತಾ ಠೇವಣಿ ಮೊತ್ತ 100 ರೂಪಾಯಿ ಗಳಿಗಿಂತ ಅಧಿಕವಾಗಿದ್ದಲ್ಲಿ, ಅಂತಹ ಸ್ಥಾಪನಗಳ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲಾಗುತ್ತದೆ. ಗೃಹ ಜ್ಯೋತಿಯೋಜನೆ ಅಡಿ ಶೂನ್ಯ ಬಿಲ್ ಪಡೆಯುತ್ತಿರುವ ಗ್ರಾಹಕರ ಹಿಂಬಾಕಿ ಶೂನ್ಯವಿದ್ದಲ್ಲಿ ಈ ಬಗ್ಗೆ ಚಿಂತಿಸಬೇಕಿಲ್ಲ ಎಂದು ಪ್ರಕಟಣೆ ಸ್ಪಷ್ಟಪಡಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಹತ್ತು ವರ್ಷಗಳ ಬಳಿಕ ಕಲಬುರಗಿಯಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಸಲು ಸರ್ಕಾರ ನಿರ್ಧಾರ

Published

on

ಸುದ್ದಿದಿನಡೆಸ್ಕ್:ಹತ್ತು ವರ್ಷಗಳ ಬಳಿಕ ಕಲಬುರಗಿ ಜಿಲ್ಲೆಯಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಸಲು ಸರ್ಕಾರ ನಿರ್ಧರಿಸಿದೆ.

ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿ ಕುರಿತಂತೆ ಚರ್ಚೆ ನಡೆಸಿ, ನಿರ್ಣಯ ತೆಗೆದುಕೊಳ್ಳಲು ಸೆಪ್ಟೆಂಬರ್ 17ಕ್ಕೆ ಸಂಪುಟ ಸಭೆ ನಡೆಯಲಿದೆ.

ಜಿಲ್ಲೆಯ ಮಿನಿ ವಿಧಾನಸೌಧದಲ್ಲಿರುವ ಪ್ರಾದೇಶಿಕ ಆಯುಕ್ತರ ಕಾರ್ಯಾಲಯದ ಸಭಾಂಗಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆಯುವ ಸಂಪುಟ ಸಭೆಯಲ್ಲಿ ಕಲ್ಯಾಣ ಕರ್ನಾಟಕದ ಬಗ್ಗೆ ವಿಶೇಷ ಆದ್ಯತೆ ನೀಡಲು ನಿರ್ಧರಿಸಲಾಗಿದೆ. ಈ ಹಿಂದೆ 2014ರ ನವೆಂಬರ್ 28ರಂದು ಸಿದ್ದರಾಮಯ್ಯ ನೇತೃತ್ವದಲ್ಲಿ ಕಲಬುರಗಿಯಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆದಿತ್ತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಇಂದು ದೇಶಾದ್ಯಂತ ಗಣೇಶ ಹಬ್ಬದ ಸಂಭ್ರಮ

Published

on

ಸುದ್ದಿದಿನಡೆಸ್ಕ್:ಇಂದು ಗಣೇಶ ಚತುರ್ಥಿ, ದೇಶ ಸೇರಿ ನಾಡಿನದ್ಯಂತ ಹಿಂದೂ ಸಂಪ್ರದಾಯದಲ್ಲಿ ನಾಡಿನ ಜನತೆ ತಮ್ಮ ಒಳಿತಿಗಾಗಿ, ಜ್ಞಾನ ಸಮೃದ್ಧಿಗಾಗಿ ಶಿವನ ಪುತ್ರ ಗಣೇಶನ ಮೂರ್ತಿಗಳನ್ನು ಪ್ರತಿಷ್ಠಾಪನೆ ಮಾಡಿ ಅತ್ಯಂತ ಶ್ರದ್ದಾ ಭಕ್ತಿಯಿಂದ ಈ ಹಬ್ಬವನ್ನು ಆಚರಣೆ ಮಾಡುತ್ತಿದ್ದಾರೆ ಅದರಂತೆ ಬೆಂಗಳೂರು ಜನತೆ ಮನೆ ಮನೆಗಳಲ್ಲಿ ಪ್ರತಿಷ್ಠಾಪನೆ ಮಾಡಿರುವ ಗಣೇಶನ ಮೂರ್ತಿಗಳನ್ನು ಜಲ ಮೂಲಗಳಲ್ಲಿ ವಿಸರ್ಜಿಸಲು ಬೆಂಗಳೂರು ಮಹಾ ನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.

ಇನ್ನೂ ಗಣೇಶ ಚತುರ್ಥಿ ವಿಶೇಷವಾಗಿ ನಾಡಿನ ಜನತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸೇರಿದಂತ್ತೆ ಅನೇಕ ಸಚಿವರು ಹಾಗೂ ಗಣ್ಯರು ಶುಭ ಹಾರೈಸಿದ್ದಾರೆ.

ಗಣೇಶ ಹಬ್ಬದ ಆಚರಣೆಯ ಸಂದರ್ಭದಲ್ಲಿ ಮದ್ಯಪಾನಾಸಕ್ತರು ಗಲಭೆಮಾಡುವ ಸಾಧ್ಯತೆ ಇದ್ದು, ಈ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತಿ ಕಾಪಾಡುವ ದೃಷ್ಟಿಯಿಂದ ಕರ್ನಾಟಕ ಅಬಕಾರಿ ನಿಯಮಗಳಡಿ ಇಂದಿನಿಂದ ಉಡುಪಿ ಜಿಲ್ಲೆಯಾದ್ಯಂತ ಹಾಗೂ ಉಡುಪಿ ನಗರಸಭೆ ವ್ಯಾಪ್ತಿಯಲ್ಲಿ ಇದೇ 9 ಮತ್ತು ಸೆಪ್ಟೆಂಬರ್ 11 ರಂದು ಮಧ್ಯಾಹ್ನ 2 ರಿಂದ ಮದ್ಯರಾತ್ರಿ 12.00 ಗಂಟೆಯವರೆಗೆ ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.

ನೈಸರ್ಗಿಕವಾಗಿ ತಯಾರಿಸಿದ ಮಣ್ಣಿನ ಗಣೇಶನ ವಿಗ್ರಹಗಳನ್ನು ಮಾತ್ರ ಬಳಸುವ ಮೂಲಕ ಕೆರೆ, ನದಿ ಮೂಲಗಳು ಕಲುಷಿತಗೊಳಿಸದಂತೆ ಕಾಪಾಡುವುದು ನಮ್ಮ ಕರ್ತವ್ಯ ಎಂದು ಸಣ್ಣ ನೀರಾವರಿ ಖಾತೆ ಸಚಿವ ಎನ್.ಎಸ್.ಬೋಸರಾಜು ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending