Connect with us

ದಿನದ ಸುದ್ದಿ

ದಾವಣಗೆರೆ | ಜುಲೈ 5 ರವರೆಗೆ ಲಾಕ್‍ಡೌನ್ ಮುಂದುವರಿಕೆ : ಏನಿರತ್ತೆ..? ಏನಿರಲ್ಲ..?

Published

on

ಸುದ್ದಿದಿನ,ದಾವಣಗೆರೆ : ಜಿಲ್ಲೆಯಲ್ಲಿ ಕೋವಿಡ್-19 ಪ್ರಕರಣಗಳು ಸತತವಾಗಿ ಏರಿಕೆಯಾಗುತ್ತಿರುವುದರಿಂದ ಜೂ.21 ರ ಬೆಳಿಗ್ಗೆ 6 ಗಂಟೆಯಿಂದ ಜುಲೈ 5 ರ ಬೆಳಿಗ್ಗೆ 5 ಗಂಟೆಯವರೆಗೆ ಲಾಕ್‍ಡೌನ್ ಮುಂದುವರೆಯಲಿದ್ದು ಕೋವಿಡ್-19ರ ಮಾರ್ಗಸೂಚಿಗಳ ಪಾಲನೆಯ ಷರತ್ತಿಗೆ ಒಳಪಟ್ಟು ಬಸ್‍ಗಳ ಆಸನದ ಗರಿಷ್ಠ ಶೇ.50ರ ಸಾಮಥ್ರ್ಯದೊಂದಿಗೆ ಬಸ್ ಸಂಚಾರಕ್ಕೆ ಅನುಮತಿಸಿದೆ.ಪ್ರಯಾಣಿಕರು ಬಸ್‍ಗಳಲ್ಲಿ ನಿಂತು ಪ್ರಯಾಣಿಸಲು ಅವಕಾಶವಿರುವುದಿಲ್ಲ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ತಿಳಿಸಿದರು.

ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿ ಕೋವಿಡ್ ನಿಯಂತ್ರಣ ಹಿನ್ನೆಲೆ ಹೊರಡಿಸಲಾಗಿರುವ ನಿರ್ಬಂಧ/ಮಾರ್ಗಸೂಚಿಗಳ ಕುರಿತು ಮಾಹಿತಿ ನೀಡಲು ಕರೆಯಲಾಗಿದ್ದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು.
ಪ್ರತಿ ದಿನ ರಾತ್ರಿ 7 ಗಂಟೆಯಿಂದ ಬೆಳಿಗ್ಗೆ 5 ಗಂಟೆಯವರೆಗೆ ರಾತ್ರಿ ಕಫ್ರ್ಯೂ ಇರಲಿದ್ದು, ಶುಕ್ರವಾರ ರಾತ್ರಿ 7 ಗಂಟೆಯಿಂದ ಸೋಮವಾರ ಬೆಳಿಗ್ಗೆ 5 ಗಂಟೆಯವರೆಗೆ ವಾರಂತ್ಯದ ಕಫ್ರ್ಯೂ ಜಾರಿ ಮಾಡಲಾಗಿದೆ. ಜಿಲ್ಲೆಯಲ್ಲಿ ಪಾಸಿಟಿವಿಟಿ ದರ ಶೇ.6.37 ರಷ್ಟಿದ್ದು ಮುಂದಿನ ಎರಡು ಮೂರು ದಿನಗಳಲ್ಲಿ ಶೇ.5 ರೊಳಗೆ ತರಲು ಪ್ರಯತ್ನಿಸಲಾಗುತ್ತಿದೆ.

ಹೊಸ ನಿಬಂಧನೆಗಳನ್ವಯ ಕೆಲವು ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ಸರ್ಕಾರದ ಆದೇಶದಂತೆ ಬಿಡುಗಡೆ ಮಾಡಿದ್ದು, ಜು.5 ರವರೆಗೆ ಜಾರಿಯಲ್ಲಿರುತ್ತದೆ. ಎಲ್ಲಾ ಅಂಗಡಿ ಮುಂಗಟ್ಟುಗಳು, ವಾಣಿಜ್ಯ ಚಟುವಟಿಕೆಗಳನ್ನು ನಿರ್ಬಂಧಿಸಲಾಗಿದೆ. ಆದರೆ, ಸರಕು ಸಾಗಾಣಿಕೆ ವಾಹನಗಳಿಗೆ ಸಂಚಾರಕ್ಕೆ ಅವಕಾಶವಿರುವ ಹಿನ್ನಲೆಯಲ್ಲಿ ಸದರಿ ವಾಹನಗಳು ಸರಕುಗಳನ್ನು ರಶೀದಿಯಲ್ಲಿ ನಮೂಧಿತ ವಿಳಾಸದ ಅಂಗಡಿ ಮತ್ತು ಗೋದಾಮುಗಳಲ್ಲಿ ಇಳಿಸಲು ಮತ್ತು ತೆಗೆದುಕೊಂಡು ಹೋಗಲು ಮಾತ್ರ ದಿನ ಪೂರ್ತಿ ಅವಕಾಶ ನೀಡಲಾಗಿದೆ.

ಕೃಷಿ ಉಪಕರಣ ಬಾಡಿಗೆ ಕೇಂದ್ರಗಳಿಗೆ, ಯಂತ್ರೋಪಕರಣಗಳಿಗೆ ಸಂಬಂಧಿಸಿದ ಅಂಗಡಿಗಳು ಮತ್ತು ಗೋದಾಮುಗಳು ಸೇರಿದಂತೆ ಎಲ್ಲಾ ಕೃಷಿ ಮತ್ತು ತತ್ಸಂಬಂಧಿತ ಕಾರ್ಯಚಟುವಟಿಕೆಗಳಿಗೆ ಅನುಮತಿಸಿದೆ ಹಾಗೂ ಸಿಬ್ಬಂದಿಗಳು ಕೃಷಿ ಕೈಗಾರಿಕಾ ಸಂಸ್ಥೆಗಳು ನೀಡಿದ ಅರ್ಹ ಗುರುತಿನ ಚೀಟಿ, ಅಧಿಕೃತ ಪತ್ರವನ್ನು ತೋರಿಸುವ ಮೂಲಕ ಓಡಾಡುವುದಕ್ಕೆ ಅನುಮತಿಸಿದೆ.

ಕೃಷಿ ಚಟುವಟಿಕೆಗಳಿಗೆ ಅನುವಾಗುವಂತೆ ಅಗತ್ಯ ವಸ್ತುಗಳಾದ ಬೀಜ, ಗೊಬ್ಬರ, ಕೀಟ ನಾಶಕಗಳು, ಕೃಷಿ ಕೋಯ್ಲು ಯಂತ್ರೋಪಕರಣಗಳ ಸಾಗಣೆ ಮತ್ತು ಸಂಬಂಧಿಸಿದ ಅಂಗಡಿಗಳನ್ನು ಸೋಮವಾರ ದಿಂದ ಶುಕ್ರವಾರದವರೆಗೆ ಬೆಳಿಗ್ಗೆ 6 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ವ್ಯಾಪಾರ ವಹಿವಾಟು ನಡೆಸಲು ಅನುಮತಿಸಿದೆ.

ಸಾರ್ವಜನಿಕರು ತುರ್ತು ಅಗತ್ಯ ಚಟುವಟಿಕೆಗಳಿಗೆ ವಾಹನಗಳಲ್ಲಿ ಸಂಚರಿಸಲು ಅವಕಾಶ ನೀಡಿದೆ. ಅನಗತ್ಯವಾಗಿ ಯಾವುದೇ ವಾಹನ ಸಂಚಾರಕ್ಕೆ ಅವಕಾಶವಿರುವುದಿಲ್ಲ. ನಿಗಧಿತ ಮದುವೆ ಕಾರ್ಯಕ್ರಮಗಳನ್ನು ನಡೆಸಲು, ಸಂಬಂಧಿಸಿದ ಪ್ರಾಧಿಕಾರದಿಂದ ಅನುಮತಿ ಪಡೆದು ಗರಿಷ್ಠ 40 ಹತ್ತಿರದ ಸಂಬಂಧಿಗಳು ಮಾತ್ರ ಭಾಗವಹಿಸಿ ಅವರುಗಳ ಮನೆಯಲ್ಲಿ ಮದುವೆ ಕಾರ್ಯಕ್ರಮ ನಡೆಸಲು ಅವಕಾಶ ನೀಡಲಾಗಿದೆ. ಈ ಮದುವೆಗಳಲ್ಲಿ ಸಾರ್ವಜನಿಕರಿಗೆ ಊಟದ ವ್ಯವಸ್ಥೆಯನ್ನು ನಿರ್ಬಂಧಿಸಲಾಗಿದೆ. ಉಳಿದ ಎಲ್ಲಾ ಸಾಮಾಜಿಕ, ಧಾರ್ಮಿಕ ಸಭೆ ಸಮಾರಂಭಗಳನ್ನು ನಿರ್ಬಂಧಿಸಲಾಗಿದೆ.

ಅಂತ್ಯಸಂಸ್ಕಾರ ಅಥವಾ ಶವ ಸಂಸ್ಕಾರಗಳಲ್ಲಿ ಗರಿಷ್ಟ 5 ಜನರಿಗೆ ಮಾತ್ರ ಭಾಗವಹಿಸಲು ಅನುಮತಿಸಿದೆ. ದಾವಣಗೆರೆ ಜಿಲ್ಲೆಗೆ ಅಗಮಿಸುವವರನ್ನು ಪ್ರತೀ ಚಕ್ ಪೋಸ್ಟ್‍ಗಳಲ್ಲಿ ವಿಚಾರಣೆ ನಡೆಸಿ, ಜಿಲ್ಲೆಯಲ್ಲಿಯೇ ವಾಸ್ತವ್ಯ ಹೂಡುವುದಾದಲ್ಲಿ ಎಲ್ಲಿ ತಂಗುತ್ತಾರೆ ಎಂಬ ಬಗ್ಗೆ ಪೂರ್ಣ ವಿಳಾಸ, ಮೊಬೈಲ್ ಸಂಖ್ಯೆನ್ನು ಪಡೆದುಕೊಳ್ಳುವುದು ಹಾಗೂ ಹೊರ ಜಿಲ್ಲೆಯಿಂದ ಆಗಮಿಸುವವರು ಕಡ್ಡಾಯವಾಗಿ 14 ದಿನಗಳ ಕಾಲ ಹೋಂ ಕ್ವಾರಂಟೈನ್‍ನಲ್ಲಿ ಇರತಕ್ಕದ್ದು.

ವಾಹನ ಬಳಕೆಯನ್ನು ತುರ್ತು ವೈದ್ಯಕೀಯ ಸೇವೆಗಳಿಗೆ ಮಾತ್ರ ಬಳಸಬಹುದು, ವೈದ್ಯಕೀಯ ದಾಖಲೆಗಳನ್ನು ಚೆಕ್ ಪೋಸ್ಟ್‍ಗಳಲ್ಲಿ ತೋರಿಸತಕ್ಕದ್ದು. ಇತರೆ ಎಲ್ಲಾ ಖಾಸಗಿ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ. ವೈದ್ಯಕೀಯ ಹಾಗೂ ಆಯುಷ್ ಹಾಗೂ ಪಶು ವೈದ್ಯಕೀಯ ಆಸ್ಪತ್ರೆಗಳು ಸೇರಿದಂತೆ ತುರ್ತು ಸೇವೆಗಳ ಎಲ್ಲಾ ಅಧಿಕಾರಿಗಳು, ಸಿಬ್ಬಂದಿಗಳು ಕರ್ತವ್ಯ ನಿಮಿತ್ತ ಓಡಾಟಕ್ಕೆ ಯಾವುದೇ ನಿರ್ಬಂಧವಿರುವುದಿಲ್ಲ. ಆದರೆ ಕಡ್ಡಾಯವಾಗಿ ಗುರುತಿನ ಚೀಟಿಯನ್ನು ತಪಾಸಣಾ ಸಿಬ್ಬಂಧಿಗಳಿಗೆ ಹಾಜರುಪಡಿಸಬೇಕಾಗುತ್ತದೆ.

ಖಾಸಗಿ ಭದ್ರತಾ ಸೇವೆಗಳಿಗೆ ಅನುಮತಿಸಲಾಗಿದೆ. ಕ್ಲಿನಿಕ್, ಆಸ್ಪತ್ರೆ, ಲಸಿಕೆ ಹಾಗೂ ಪರೀಕ್ಷೆ ಉದ್ದೇಶಗಳಿಗೆ ಕನಿಷ್ಟ ವೈದ್ಯಕೀಯ ದಾಖಲೆಗಳು, ವೈದ್ಯ ಸಲಹಾ ಚೀಟಿ, ಆಸ್ಪತ್ರೆಯಲ್ಲಿ ದಾಖಲಾದ ವಿವರಗಳ ರುಜುವಾತಿನೊಂದಿಗೆ ಸಂಚರಿಸಲು ಅನುಮತಿಸಿದೆ. ಹೋಟೆಲ್, ರೆಸ್ಟೋರೆಂಟ್‍ಗಳು, ಉಪಹಾರ ಗೃಹಗಳು ಪಾರ್ಸಲ್ ಸೇವೆಗಳನ್ನು ಗ್ರಾಹಕರ ಮನೆ ಬಾಗಿಲಿಗೆ ವಿತರಿಸಲು ಮಾತ್ರ ಅನುಮತಿಸಲಾಗಿದೆ. ಯಾವುದೇ ರೀತಿಯ ಪಾರ್ಸ್‍ಲ್‍ಗಳನ್ನು ಗ್ರಾಹಕರು ನೇರವಾಗಿ ಖರೀದಿಸಲು ಅವಕಾಶವಿರುವುದಿಲ್ಲ.

ಕೋವಿಡ್-19ಕ್ಕೆ ಸಂಬಂಧಿಸಿದ ಕಾರ್ಯಕ್ಕೆ ನಿಯೋಜಿಸಿದ ಎಲ್ಲಾ ಕಛೇರಿಗಳು, ಅಧಿಕಾರಿಗಳು ಹಾಗೂ ಸಿಬ್ಬಂಧಿಗಳು ಸರ್ಕಾರದ ಆದೇಶದಂತೆ ಮೇ.7 ರಂತೆ ಕಾರ್ಯನಿರ್ವಹಿಸಬಹುದು. ಆದರೆ, ಈ ಕಚೇರಿಗಳಿಗೆ ಸಾರ್ವಜನಿಕರ ಭೇಟಿಯನ್ನು ನಿರ್ಬಂಧಿಸಲಾಗಿದೆ. ಜಿಲ್ಲೆಯಲ್ಲಿ ಕಚೇರಿ ವೇಳೆಯನ್ನು ಮೀರಿ ತಮ್ಮ ಕರ್ತವ್ಯಗಳಿಗೆ ಹಾಜರಾಗುವ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಮತ್ತು ಜಿಲ್ಲೆಯ ನ್ಯಾಯಾಂಗದ ಅಧಿಕಾರಿ, ಸಿಬ್ಬಂದಿಗಳು ತಮ್ಮ ಅಧಿಕೃತ ಗುರುತಿನ ಚೀಟಿಯನ್ನು ತೋರಿಸಿ ಸಂಚರಿಸುವುದಕ್ಕೆ ಅನುಮತಿಸಿದೆ.

ಭಾರತ ಸರ್ಕಾರದ, ಅದರ ಸ್ವಾಯತ್ತ, ಅಧೀನ ಸಂಸ್ಥೆಗಳ ಮತ್ತು ಸಾರ್ವಜನಿಕ ನಿಗಮಗಳ ಕಛೇರಿಗಳಾದ ದೂರಸಂಪರ್ಕ, ಅಂಚೆ ಕಛೇರಿ, ಬ್ಯಾಂಕುಗಳು, ಆರ್‍ಬಿಐ ನಿಯಂತ್ರಿತ ಹಣಕಾಸು ಸಂಸ್ಥೆಗಳು, ರೈಲ್ವೇ ಮತ್ತು ತತ್ಸಂಬಂಧಿತ ಕಾರ್ಯಾಚರಣೆಗಳು ಕನಿಷ್ಟ ಸಿಬ್ಬಂದಿಗಳೊಂದಿಗೆ ಮಾತ್ರ ಕಾರ್ಯನಿರ್ವಹಿಸತಕ್ಕದ್ದು.
ಟ್ಯಾಕ್ಸ್ ಅಡಿಟರ್ ಹಾಗೂ ಟ್ಯಾಕ್ಸ್ ಪ್ರಾಕ್ಟಿಷನರಗಳ ಕಚೇರಿಗಳು ಕಾರ್ಯನಿರ್ವಹಿಸಲು ಅನುಮತಿಸಿದೆ.

ಸರ್ಕಾರೇತರ ಸಂಸ್ಥೆಗಳ ಕಚೇರಿಗಳು, ಇತರೆ ಎಲ್ಲಾ ಕಚೇರಿಗಳ ಸಿಬ್ಬಂದಿಗಳು ಮನೆಯಿಂದಲೇ ಕೆಲಸ ನಿರ್ವಹಿಸಬಹುದು. ತುರ್ತು ಸೇವೆಗಳಿಗೆ ಸಂಬಂಧಪಟ್ಟ ಇಲಾಖೆಗಳನ್ನು ಹೊರತುಪಡಿಸಿ ಉಳಿದ ಸರ್ಕಾರಿ ಹಾಗೂ ಅರೆ ಸರ್ಕಾರಿ ಮತ್ತು ಖಾಸಗಿ ಕಚೇರಿಗಳ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂಧಿಗಳು ಮನೆಯಿಂದಲೇ ಕೆಲಸ ನಿರ್ವಹಿಸುವುದು.

ಹಾಲು, ಡೈರಿ, ಹಾಲಿನ ಬೂತು, ಪಶು ಆಹಾರ ಅಂಗಡಿಗಳು, ಕಿರಾಣಿ ಅಂಗಡಿಗಳು, ದಿನಸಿ, ಹಣ್ಣು ತರಕಾರಿಗಳು, ಮಾಂಸ ಮತ್ತು ಮೀನು ಹಾಗೂ ಎಲ್ಲಾ ಮದ್ಯದ ಅಂಗಡಿಗಳು ಮತ್ತು ಸಿಎಲ್-4 ಸನ್ನದು ಹೊಂದಿರುವ ಕ್ಲಬ್‍ಗಳಲ್ಲಿ ಪಾರ್ಸ್‍ಲ್ ಸೇವೆ ಮಾತ್ರ ಅವಕಾಶ.

ಕಟ್ಟಡ ಕಾಮಗಾರಿ, ದುರಸ್ತಿಗೆ ಸಂಬಂಧಿಸಿದ ವಸ್ತುಗಳನ್ನು ಪೂರೈಸುವ ಎಲ್ಲಾ ಅಂಗಡಿಗಳು (ಸಿಮೆಂಟ್, ಕಬ್ಬಿಣ, ಪೇಂಟ್ಸ್, ಹಾರ್ಡವೇರ್, ಗ್ಲಾಸ್, ಪ್ಲೆ-ವುಡ್, ಸಾಮಿಲ್ಸ್, ಎಲೆಕ್ಟ್ರೀಕಲ್ಸ್, ಪೈಪ್ಸ್, ಟೈಲ್ಸ್/ಮಾರ್ಬಲ್ಸ್, ಸ್ಯಾನಿಟರಿ ವೇರ್ಸ್), ಕನ್ನಡಕದ ಅಂಗಡಿಗಳು, ಪಡಿತರ ನ್ಯಾಯಬೆಲೆ ಅಂಗಡಿಗಳು ಕೋವಿಡ್-19 ನಿರ್ವಹಣೆಯ ಸಂಬಂಧ ಹೊರಡಿಸಲಾದ ರಾಷ್ಟ್ರೀಯ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಷರತ್ತಿಗೆ ಒಳಪಟ್ಟು ಸೋಮವಾರ ದಿಂದ ಶುಕ್ರವಾರದವರೆಗೆ ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ತೆರೆಯಲು ಅನುಮತಿಸಲಾಗಿದೆ.

ಔಷಧಿ ಅಂಗಡಿಗಳು ಹಾಗೂ ಅಗತ್ಯ ಸೇವೆಗಳಾದ ಅಂಬುಲೆನ್ಸ್ ಅಗ್ನಿಶಾಮಕ ಮತ್ತು ಇತರೆ ತುರ್ತು ವೈದ್ಯಕೀಯ ಸೇವೆಗಳು, ವಿದ್ಯುತ್, ಪೆಟ್ರೋಲ್ ಪಂಪ್, ಅಮ್ಲಜನಕ ಉತ್ಪದಾನ ಘಟಕ, ನೀರು, ನೈರ್ಮಲ್ಯ ಸೇವೆಗಳಿಗೆ ಅನುಮತಿಸಲಾಗಿದೆ.
ಗರಿಷ್ಠ 02 ಪ್ರಯಾಣಿಕರ ಸಾಮಥ್ರ್ಯದೊಂದಿಗೆ ಆಟೋ ರಿಕ್ಷಾ ಮತ್ತು ಟ್ಯಾಕ್ಸಿಗಳು ಸಂಚರಿಸಲು ಅನುಮತಿಸಿದೆ.

ಕೋವಿಡ್-19 ರ ರಾಷ್ಟ್ರೀಯ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಷರತ್ತಿಗೆ ಒಳಪಟ್ಟು ವಾಕಿಂಗ್ ಮತ್ತು ಜಾಗಿಂಗ್ ಉದ್ದೇಶಕ್ಕಾಗಿ ಮಾತ್ರ ಉದ್ಯಾನವನಗಳನ್ನು ಬೆಳಿಗ್ಗೆ 5 ಗಂಟೆಯಿಂದ 10 ಗಂಟೆಯವರೆಗೆ ಮಾತ್ರ ತೆರೆಯಲು ಅನುಮತಿಸಿದೆ. ಆದರೆ, ಯಾವುದೇ ಗುಂಪು ಚಟುವಟಿಕೆಗಳಿಗೆ ಅವಕಾಶವಿಲ್ಲ.

ಆರೋಗ್ಯ ಕ್ಷೇತ್ರದ ಕೌಶಲ್ಯ ತರಬೇತಿ ಹಾಗೂ ಘನತ್ಯಾಜ್ಯ ನಿರ್ವಹಣೆ ಸಂಬಂಧಿತ ತರಬೇತಿಗೆ ಅವಕಾಶ. ಇಂದಿರಾ ಕ್ಯಾಂಟೀನ್ ತೆರೆಯಲು, ದಿನಪತ್ರಿಕೆ, ದೃಶ್ಯಮಾಧ್ಯಮಗಳ ಸೇವೆಗಳಿಗೆ ಹಾಗೂ ಎಲ್ಲಾ ರೀತಿಯ ಸರಕುಗಳ ಸಾಗಾಣಿಕೆಗೆ ಮತ್ತು ಖಾಲಿ ವಾಹನಗಳಿಗೆ ಅನುಮತಿಸಲಾಗಿದೆ. ವಿಶೇಷವಾಗಿ ಅಮ್ಲಜನಕ ತರುವ ವಾಹನಗಳನ್ನು ತಡೆರಹಿತ ಸಾಗಾಟವನ್ನು ಅನುಮತಿಸಲಾಗಿದೆ.

ನಿರ್ಗತಿಕರ ಕೇಂದ್ರ, ವೃದ್ದಾಶ್ರಮ, ಬಾಲಮಂದಿರ, ಬಾಲಾಶ್ರಮ, ಅನಾಥಶ್ರಮ ಇವುಗಳಿಗೆ ಅನುಮತಿಸಲಾಗಿದೆ. ಅಂತರ ರಾಜ್ಯ ಮತ್ತು ಅಂತರ ಜಿಲ್ಲಾ ವ್ಯಕ್ತಿಗಳ ಸಂಚಾರವನ್ನು ಮೇ.7ರ ಸರ್ಕಾರದ ಆದೇಶದಂತೆ ಅನುಮತಿಸಲಾಗಿದೆ.

ತೋಟಗಾರಿಕೆ ಇಲಾಖೆಗೆ ಸಂಬಂಧಿಸಿದ ಹಾಪ್-ಕಾಮ್ಸ್ ಮೂಲಕ ಮಾತ್ರ ಸಾರ್ವಜನಿಕರಿಗೆ ತರಕಾರಿಗಳನ್ನು ಹಾಗೂ ಹಣ್ಣುಗಳನ್ನು ಸಾರ್ವಜನಿಕರ ಮನೆ ಬಾಗಿಲಿಗೆ ಮಾರಾಟ ಮಾಡಲು ಅನುಮತಿಸಿದೆ. ಹಾಪ್-ಕಾಮ್ಸ್ ಲಭ್ಯವಿಲ್ಲದಿರುವ ಪ್ರದೇಶಗಳಲ್ಲಿ ಆಯುಕ್ತರು, ಮಹಾನಗರಪಾಲಿಕೆ ಮತ್ತು ಸಂಬಂಧಪಟ್ಟ ತಹಶೀಲ್ದಾರರು ಸ್ಥಳೀಯವಾಗಿ ಸೀಮಿತ ಸಂಖ್ಯೆಯಲ್ಲಿ ತಳ್ಳುವ ಗಾಡಿಯ ಮೂಲಕ ಮನೆ ಬಾಗಿಲಿಗೆ ತರಕಾರಿಗಳನ್ನು ಹಾಗೂ ಹಣ್ಣುಗಳನ್ನು ಮಾರಾಟ ವ್ಯವಸ್ಥೆ ಮಾಡಲು ಅನುಮತಿಸಿದೆ.

ಅಡುಗೆ ಅನಿಲ ಕಾರ್ಯನಿರ್ವಹಣೆಯನ್ನು ಮನೆ ಬಾಗಿಲಿಗೆ ತಲುಪಿಸುವ ಷರತ್ತಿಗೊಳಪಟ್ಟು ಕಾರ್ಯನಿರ್ವಹಣೆಯನ್ನು ಅನುಮತಿಸಲಾಗಿದೆ. ಕೃಷಿ ಉತ್ಪನ್ನ ಮಾರುಕಟ್ಟೆಯಿಂದ ಸಗಟು ಮಾರಾಟಗಾರರು ತರಕಾರಿ ಹಾಗೂ ಹಣ್ಣುಗಳನ್ನು ಖರೀದಿಸಲು ಹಾಗೂ ಬೇರೆಡೆ ಸಾಗಿಸಲು ಯಾವುದೇ ನಿರ್ಬಂಧನವಿರುವುದಿಲ್ಲ. ಇ-ಕಾಮರ್ಸ್, ಹೋಮ್ ಡೆಲಿವರಿ ಸೇವೆಗಳ ಮುಖಾಂತರ ಎಲ್ಲಾ ವಸ್ತುಗಳನ್ನು ಮನೆಗೆ ಸರಬರಾಜು ಮಾಡಲು ಅನುಮತಿಸಲಾಗಿದೆ.

ಎಲ್ಲಾ ವಿಧದ ಉತ್ಪಾದಿತ ಘಟಕಗಳು ಸಂಸ್ಥೆಗಳು, ಕೈಗಾರಿಕೆಗಳು, ಕೋವಿಡ್ ನಿಯಮವಾಳಿಯ ಮೇಲೆ ಶೇ.50 ರಷ್ಟು ಸಿಬ್ಬಂದಿಯೊಂದಿಗೆ ಕಾರ್ಯನಿರ್ವಹಿಸಬಹುದು. ಹಾಗೂ ಗಾರ್ಮೆಟ್ಸ್ ಗಳಲ್ಲಿ ಶೇ.30ರ ಸಿಬ್ಬಂದಿಯೊಂದಿಗೆ ಕೋವಿಡ್ ಕ್ರಮವನ್ನು ಅನುಸರಿಸಿ ಕಾರ್ಯನಿರ್ವಹಿಸಬಹುದಾಗಿದೆ. ವಿನಾಯತಿ ನೀಡಿರುವ ಅಗತ್ಯ ಚಟುವಟಿಕೆಗಳಲ್ಲಿ ಕೋವಿಡ್-19ರ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಅನುಸರಿಸಬೇಕೆಂದು ತಿಳಿಸಿದರು.

ಈ ಮೇಲೆ ತಿಳಿಸಿದ ಮಾರ್ಗಸೂಚಿ ಅಥವಾ ನಿಬಂಧನೆಗಳನ್ನು ಉಲ್ಲಂಘಿಸಿದ ಪಕ್ಷದಲ್ಲಿ ಅಂತಹವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು. ಜಿಲ್ಲೆಯಲ್ಲಿ ಪಾಸಿಟಿವಿಟಿ ಮತ್ತು ಡೆತ್ ರೇಟ್ ಜಾಸ್ತಿ ಇದ್ದು, ಇದನ್ನು ಕಡಿಮೆಗೊಳಿಸಲು ಜಿಲ್ಲಾಡಳಿತ ಕಾರ್ಯನ್ಮೂಖವಾಗಿದ್ದು, ಈ ಕಾರ್ಯಕ್ಕೆ ಸಾರ್ವಜನಿಕರು ಸಹಕರಿಸಬೇಕೆಂದರು.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯ ನಿರ್ವಹಣಾಧಿಕಾರಿ ವಿಜಯ ಮಹಾಂತೇಶ ದಾನಮ್ಮನವರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್, ಡಿಹೆಚ್‍ಓ ಡಾ.ನಾಗರಾಜ್ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಸಿಹಿಸುದ್ದಿ: 4,744 ತಾಂತ್ರಿಕೇತರ ಹಾಗೂ ತಾಂತ್ರಿಕ ಹುದ್ದೆಗಳ ನೇಮಕಾತಿಗೆ ಸಿದ್ಧತೆ

Published

on

KEA Recruitment 2026: ಪದವಿ, ಪಿಯುಸಿ ಅಭ್ಯರ್ಥಿಗಳಿಗೆ ಭರ್ಜರಿ ಅವಕಾಶ; 4,744 ಹುದ್ದೆಗಳಿಗೆ ಈ ತಿಂಗಳಲ್ಲೇ ಅಧಿಸೂಚನೆ, ನವೆಂಬರ್-ಡಿಸೆಂಬರ್‌ನಲ್ಲಿ ಪರೀಕ್ಷೆ!

ಸುದ್ದಿದಿನ,ಬೆಂಗಳೂರು: ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಪದವಿ ಹಾಗೂ ಪಿಯುಸಿ-ತತ್ಸಮಾನ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಮಹತ್ವದ ಅವಕಾಶ ಕಲ್ಪಿಸಲು ಸಜ್ಜಾಗಿದೆ. ವಿವಿಧ ಇಲಾಖೆಗಳಲ್ಲಿನ ಒಟ್ಟು 4,744 ತಾಂತ್ರಿಕೇತರ ಹಾಗೂ ತಾಂತ್ರಿಕ ಹುದ್ದೆಗಳ ನೇಮಕಾತಿಗೆ ಈ ತಿಂಗಳಲ್ಲೇ ಅಧಿಸೂಚನೆ ಹೊರಡಿಸಲು ಸಿದ್ಧತೆ ನಡೆದಿದೆ. ನೇಮಕಾತಿ ಪ್ರಕ್ರಿಯೆಯ ಭಾಗವಾಗಿ ನವೆಂಬರ್ ಹಾಗೂ ಡಿಸೆಂಬರ್ ತಿಂಗಳಲ್ಲಿ ಲಿಖಿತ ಪರೀಕ್ಷೆ ನಡೆಸುವ ಸಾಧ್ಯತೆಯೂ ಇದ್ದು, ಅಭ್ಯರ್ಥಿಗಳು ಈಗಿನಿಂದಲೇ ಅಧ್ಯಯನ ಆರಂಭಿಸುವುದು ಸೂಕ್ತವಾಗಿದೆ.

ಹೈಲೈಟ್ಸ್: 4,744 ಹುದ್ದೆಗಳಿಗೆ ನೇಮಕಾತಿ
  • KEAಯಿಂದ ಒಟ್ಟು 4,744 ಹುದ್ದೆಗಳ ನೇಮಕಾತಿಗೆ ಸಿದ್ಧತೆ
  • ಪದವಿ ಮಟ್ಟದ ತಾಂತ್ರಿಕೇತರ ಹುದ್ದೆಗಳು – 2,421
  • ಪಿಯುಸಿ ಮಟ್ಟದ ತಾಂತ್ರಿಕೇತರ ಹುದ್ದೆಗಳು – 2,062
  • ತಾಂತ್ರಿಕ ಹುದ್ದೆಗಳು – 261; ಇನ್ನಷ್ಟು ಹುದ್ದೆಗಳು ಸೇರುವ ಸಾಧ್ಯತೆ
  • ಈ ತಿಂಗಳು ಅಧಿಸೂಚನೆ; ನವೆಂಬರ್-ಡಿಸೆಂಬರ್‌ನಲ್ಲಿ ಲಿಖಿತ ಪರೀಕ್ಷೆಗೆ ಸಿದ್ಧತೆ

http://Visit : www.suddidina.com

ಪದವಿ ಮಟ್ಟದಲ್ಲಿ 2,421 ಹುದ್ದೆಗಳು

ಈ ಬೃಹತ್ ನೇಮಕಾತಿಯಲ್ಲಿ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ಹೆಚ್ಚಿನ ಅವಕಾಶಗಳು ದೊರೆಯಲಿವೆ. ಪದವಿ ಮಟ್ಟದ ತಾಂತ್ರಿಕೇತರ ಹುದ್ದೆಗಳು 2,421 ಇದ್ದು, ವಿವಿಧ ಸರಕಾರಿ ಇಲಾಖೆಗಳ ವ್ಯಾಪ್ತಿಯಲ್ಲಿ ಈ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ.

ಪದವಿ ಪೂರ್ಣಗೊಳಿಸಿರುವ ಉದ್ಯೋಗಾಕಾಂಕ್ಷಿಗಳು ಯಾವ ಇಲಾಖೆಯಲ್ಲಿ ಯಾವ ಹುದ್ದೆಗಳು ಲಭ್ಯವಿರಲಿವೆ, ಹುದ್ದೆವಾರು ವಿದ್ಯಾರ್ಹತೆ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ವಿಧಾನ ಸೇರಿದಂತೆ ಅಧಿಸೂಚನೆಯಲ್ಲಿ ಪ್ರಕಟವಾಗುವ ಸಂಪೂರ್ಣ ವಿವರಗಳನ್ನು ಗಮನಿಸಬೇಕು.

ಪಿಯುಸಿ ಅಭ್ಯರ್ಥಿಗಳಿಗೂ ಅವಕಾಶ

ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರುವವರಿಗೂ ಈ ನೇಮಕಾತಿಯಲ್ಲಿ ಉತ್ತಮ ಅವಕಾಶವಿದೆ. ಪಿಯುಸಿ ಮಟ್ಟದ ತಾಂತ್ರಿಕೇತರ ಹುದ್ದೆಗಳು 2,062 ಇವೆ. ಹೀಗಾಗಿ ಪದವಿ ಮಾತ್ರವಲ್ಲದೆ ಪಿಯುಸಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳೂ ಈ ನೇಮಕಾತಿಯ ಮೇಲೆ ಕಣ್ಣಿಟ್ಟಿದ್ದಾರೆ.

ಪಿಯುಸಿ ಹಂತದ ಹುದ್ದೆಗಳಿಗೆ ಅರ್ಹರಾಗಿರುವವರು ಅಧಿಸೂಚನೆ ಪ್ರಕಟವಾದ ನಂತರ ತಮ್ಮ ವಿದ್ಯಾರ್ಹತೆಗೆ ಹೊಂದುವ ಹುದ್ದೆಗಳನ್ನು ಗುರುತಿಸಿ ಅರ್ಜಿ ಸಲ್ಲಿಸಬಹುದು.

ತಾಂತ್ರಿಕ ಹುದ್ದೆಗಳಿಗೂ ಅವಕಾಶ

ತಾಂತ್ರಿಕ ವಿಭಾಗದಲ್ಲಿಯೂ 261 ಹುದ್ದೆಗಳನ್ನು ಭರ್ತಿ ಮಾಡಲು ಸಿದ್ಧತೆ ನಡೆದಿದೆ. ತಾಂತ್ರಿಕ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ತಮ್ಮ ಅರ್ಹತೆಗೆ ಅನುಗುಣವಾಗಿ ಹುದ್ದೆಗಳನ್ನು ಪರಿಶೀಲಿಸಬೇಕಾಗಿದೆ.

ಒಟ್ಟು 4,744 ಹುದ್ದೆಗಳ ಪೈಕಿ 2,421 ಪದವಿ ಮಟ್ಟದ ತಾಂತ್ರಿಕೇತರ, 2,062 ಪಿಯುಸಿ ಮಟ್ಟದ ತಾಂತ್ರಿಕೇತರ ಹಾಗೂ 261 ತಾಂತ್ರಿಕ ಹುದ್ದೆಗಳು ಸೇರಿವೆ. ಈ ಮೂಲಕ ವಿವಿಧ ವಿದ್ಯಾರ್ಹತೆ ಹೊಂದಿರುವ ಉದ್ಯೋಗಾಕಾಂಕ್ಷಿಗಳಿಗೆ ಅವಕಾಶ ಸಿಗಲಿದೆ.

ಇನ್ನಷ್ಟು ಹುದ್ದೆಗಳು ಸೇರುವ ಸಾಧ್ಯತೆ

ಪ್ರಸ್ತುತ ಪ್ರಕಟಿಸಿರುವ ಹುದ್ದೆಗಳ ಸಂಖ್ಯೆಯೇ ಅಂತಿಮವಾಗಿಲ್ಲ ಎಂಬುದು ಗಮನಾರ್ಹ. ನಂತರದ ದಿನಗಳಲ್ಲಿ ಇನ್ನಷ್ಟು ಹೊಸ ಇಲಾಖೆಗಳು ಮತ್ತು ಹುದ್ದೆಗಳು ನೇಮಕಾತಿ ಪಟ್ಟಿಗೆ ಸೇರುವ ಸಾಧ್ಯತೆ ಇದೆ. ಹೀಗಾಗಿ ಅಭ್ಯರ್ಥಿಗಳು ಕೇವಲ ಈಗಿರುವ ಹುದ್ದೆಗಳನ್ನಷ್ಟೇ ಗಮನಿಸದೆ, ಅಧಿಕೃತ ಅಧಿಸೂಚನೆ ಹೊರಬರುವವರೆಗೆ KEA ಪ್ರಕಟಣೆಗಳನ್ನು ನಿರಂತರವಾಗಿ ಪರಿಶೀಲಿಸಬೇಕು.

ಪರೀಕ್ಷೆಗೆ ಈಗಿನಿಂದಲೇ ತಯಾರಿ

ನವೆಂಬರ್ ಹಾಗೂ ಡಿಸೆಂಬರ್‌ನಲ್ಲಿ ಲಿಖಿತ ಪರೀಕ್ಷೆ ನಡೆಸಲು ಸಿದ್ಧತೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಅಭ್ಯರ್ಥಿಗಳಿಗೆ ತಯಾರಿಗೆ ಸಮಯ ಸೀಮಿತವಾಗಿರಲಿದೆ. ನೇಮಕಾತಿಯ ಪಠ್ಯಕ್ರಮದ ವಿವರಗಳನ್ನೂ ಮುಂಚಿತವಾಗಿ ಪರಿಶೀಲಿಸಿ, ವಿಷಯವಾರು ಅಧ್ಯಯನ ಆರಂಭಿಸುವುದು ಉತ್ತಮ.

ಅಂತಿಮವಾಗಿ, ಹುದ್ದೆಗಳ ಸಂಖ್ಯೆ, ಇಲಾಖೆಗಳ ವಿವರ, ವಿದ್ಯಾರ್ಹತೆ, ಪರೀಕ್ಷಾ ವಿಧಾನ, ಪಠ್ಯಕ್ರಮ, ವಯೋಮಿತಿ ಹಾಗೂ ಅರ್ಜಿ ಸಲ್ಲಿಕೆಯ ದಿನಾಂಕ ಸೇರಿದಂತೆ ಪೂರ್ಣ ಹಾಗೂ ಅಧಿಕೃತ ಮಾಹಿತಿಯನ್ನು ಅಧಿಸೂಚನೆ ಪ್ರಕಟವಾದ ಬಳಿಕವೇ ಖಚಿತಪಡಿಸಿಕೊಳ್ಳಬೇಕು. ಅಭ್ಯರ್ಥಿಗಳು ಪ್ರಕಟಣೆಯ ಲಿಂಕ್ ಪರಿಶೀಲಿಸಿ, ತಮ್ಮ ಅರ್ಹತೆಗೆ ಹೊಂದುವ ಹುದ್ದೆಗಳ ವಿವರಗಳನ್ನು ತಿಳಿದುಕೊಂಡು ಸಿದ್ಧತೆ ಆರಂಭಿಸಬಹುದು.

Continue Reading

ದಿನದ ಸುದ್ದಿ

ಬಿಜೆಪಿ ರೈತ ಮೋರ್ಚಾದಿಂದ ಬಂದ್‌ಗೆ ಕರೆ; ಹಲವು ವೃತ್ತಗಳಲ್ಲಿ ಟೈರ್‌ಗೆ ಬೆಂಕಿ, ಬೆಂಕಿ ನಂದಿಸಿದ ಪೊಲೀಸರು

Published

on

ಮೇಲ್ಭದ್ರ ನೀರಿಗಾಗಿ ದಾವಣಗೆರೆ ಬಂದ್‌: ಗುಟ್ಕಾ–ಪಾನ್‌ ಮಸಾಲಾ ನಿಷೇಧಕ್ಕೂ ಆಗ್ರಹ, ನಗರದಲ್ಲಿ ಪ್ರತಿಭಟನೆ ಕಾವು

ಸುದ್ದಿದಿನ,ದಾವಣಗೆರೆ: ಮೇಲ್ಭದ್ರ ಯೋಜನೆಯ ನೀರನ್ನು ಸಮರ್ಪಕವಾಗಿ ಬಿಡುಗಡೆ ಮಾಡಬೇಕು ಎಂಬ ಬೇಡಿಕೆ ಸೇರಿದಂತೆ ವಿವಿಧ ವಿಚಾರಗಳನ್ನು ಮುಂದಿಟ್ಟುಕೊಂಡು ದಾವಣಗೆರೆಯಲ್ಲಿ ಬಿಜೆಪಿ ರೈತ ಮೋರ್ಚಾ ಬಂದ್‌ಗೆ ಕರೆ ನೀಡಿದೆ. ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು, ನಗರದ ವಿವಿಧ ವೃತ್ತಗಳಲ್ಲಿ ಪ್ರತಿಭಟನಾಕಾರರು ಟೈರ್‌ಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.

ಮೇಲ್ಭದ್ರ ಯೋಜನೆಯ ನೀರು ದಾವಣಗೆರೆ ಭಾಗದ ರೈತರ ಪಾಲಿಗೆ ಅತ್ಯಂತ ಮಹತ್ವದ್ದಾಗಿದೆ. ನೀರಿನ ಲಭ್ಯತೆ ಕೃಷಿ ಚಟುವಟಿಕೆಗಳ ಮೇಲೆ ನೇರ ಪರಿಣಾಮ ಬೀರುವ ಹಿನ್ನೆಲೆಯಲ್ಲಿ, ನೀರು ಬಿಡುಗಡೆ ವಿಚಾರದಲ್ಲಿ ಸರಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. ರೈತರ ಬೇಡಿಕೆಗೆ ತ್ವರಿತವಾಗಿ ಸ್ಪಂದಿಸಬೇಕು ಎಂಬ ಆಗ್ರಹವೂ ಕೇಳಿಬಂತು.

http://Visit : www.suddidina.com

davangere-bandh-upper-bhadra-water-release-gutka-pan-masala-ban-protest-renukacharya

ಗುಟ್ಕಾ, ಪಾನ್‌ ಮಸಾಲಾ ನಿಷೇಧಕ್ಕೂ ಆಗ್ರಹ

ಬಂದ್‌ನ ಮತ್ತೊಂದು ಪ್ರಮುಖ ಬೇಡಿಕೆ ಗುಟ್ಕಾ ಹಾಗೂ ಪಾನ್‌ ಮಸಾಲಾ ನಿಷೇಧಕ್ಕೆ ಸಂಬಂಧಿಸಿದೆ. ಸಾರ್ವಜನಿಕ ಆರೋಗ್ಯದ ದೃಷ್ಟಿಯಿಂದ ಇಂತಹ ಉತ್ಪನ್ನಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ರೈತ ಮೋರ್ಚಾ ಒತ್ತಾಯಿಸಿದೆ.

ಈ ಎರಡು ಪ್ರಮುಖ ವಿಚಾರಗಳನ್ನು ಮುಂದಿಟ್ಟುಕೊಂಡು ಬಂದ್‌ಗೆ ಬೆಂಬಲ ನೀಡುವಂತೆ ವ್ಯಾಪಾರಸ್ಥರು, ವಿದ್ಯಾರ್ಥಿಗಳು, ಶಾಲಾ-ಕಾಲೇಜು ಆಡಳಿತ ಮಂಡಳಿಗಳು ಹಾಗೂ ಸಾರ್ವಜನಿಕರಲ್ಲಿ ಮನವಿ ಮಾಡಲಾಗಿದೆ. ನಗರದ ವಿವಿಧ ಭಾಗಗಳಲ್ಲಿ ಪ್ರತಿಭಟನೆಯ ವಾತಾವರಣ ನಿರ್ಮಾಣವಾಗಿದ್ದು, ಬಂದ್‌ಗೆ ಬೆಂಬಲ ಪಡೆಯಲು ಸಂಘಟಕರು ಕರೆ ನೀಡಿದ್ದಾರೆ.

https://x.com/ians_india/status/2094602342230528256

ಟೈರ್‌ಗೆ ಬೆಂಕಿ; ಪೊಲೀಸರ ಮಧ್ಯಪ್ರವೇಶ

ಪ್ರತಿಭಟನೆಯ ವೇಳೆ ನಗರದ ಹಲವು ವೃತ್ತಗಳಲ್ಲಿ ಟೈರ್‌ಗಳಿಗೆ ಬೆಂಕಿ ಹಚ್ಚಲಾಯಿತು. ಇದರಿಂದ ಕೆಲಕಾಲ ರಸ್ತೆಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಪರಿಸ್ಥಿತಿ ನಿಯಂತ್ರಣದಲ್ಲಿಡಲು ಪೊಲೀಸರು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಿದರು.

ಸಾರ್ವಜನಿಕ ಪ್ರತಿಭಟನೆ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಮುನ್ನೆಚ್ಚರಿಕೆ ವಹಿಸಿದ್ದಾರೆ. ಪ್ರಮುಖ ರಸ್ತೆ ಹಾಗೂ ವೃತ್ತಗಳಲ್ಲಿ ಪರಿಸ್ಥಿತಿಯನ್ನು ಗಮನಿಸಲಾಗಿದ್ದು, ಸಂಚಾರಕ್ಕೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳುವ ಪ್ರಯತ್ನ ನಡೆದಿದೆ.

ಬಂದ್‌ಗೆ ವ್ಯಾಪಾರಸ್ಥರ ಬೆಂಬಲ?

ಬಂದ್ ಯಶಸ್ವಿಗೊಳಿಸುವ ನಿಟ್ಟಿನಲ್ಲಿ ವ್ಯಾಪಾರಸ್ಥರು, ವಿದ್ಯಾರ್ಥಿಗಳು ಹಾಗೂ ಶಿಕ್ಷಣ ಸಂಸ್ಥೆಗಳು ಸಹಕರಿಸಬೇಕು ಎಂದು ಪ್ರತಿಭಟನಾಕಾರರು ಮನವಿ ಮಾಡಿದ್ದಾರೆ. ಆದರೆ ಬಂದ್‌ಗೆ ವಿವಿಧ ವರ್ಗಗಳಿಂದ ಎಷ್ಟರ ಮಟ್ಟಿಗೆ ಬೆಂಬಲ ದೊರೆಯಲಿದೆ ಎಂಬುದು ದಿನದ ಬೆಳವಣಿಗೆಗಳಿಂದ ಸ್ಪಷ್ಟವಾಗಲಿದೆ.

ಮೇಲ್ಭದ್ರ ನೀರಿನ ವಿಚಾರ ದಾವಣಗೆರೆ ಜಿಲ್ಲೆಯ ರೈತರ ಪಾಲಿಗೆ ದೀರ್ಘಕಾಲದ ಪ್ರಮುಖ ವಿಷಯವಾಗಿದ್ದು, ಇದೀಗ ಈ ಬೇಡಿಕೆ ಮತ್ತೊಮ್ಮೆ ರಾಜಕೀಯ ಹಾಗೂ ಸಾರ್ವಜನಿಕ ಚರ್ಚೆಯ ಕೇಂದ್ರಕ್ಕೆ ಬಂದಿದೆ. ಇದರ ಜತೆಗೆ ಗುಟ್ಕಾ ಮತ್ತು ಪಾನ್‌ ಮಸಾಲಾ ನಿಷೇಧದ ಬೇಡಿಕೆಯನ್ನೂ ಮುನ್ನೆಲೆಗೆ ತರುವ ಮೂಲಕ ಬಿಜೆಪಿ ರೈತ ಮೋರ್ಚಾ ಹೋರಾಟಕ್ಕೆ ವ್ಯಾಪಕ ಸ್ವರೂಪ ನೀಡಲು ಮುಂದಾಗಿದೆ.

ಒಟ್ಟಿನಲ್ಲಿ, ಮೇಲ್ಭದ್ರ ನೀರು ಬಿಡುಗಡೆ ಮತ್ತು ಗುಟ್ಕಾ–ಪಾನ್‌ ಮಸಾಲಾ ನಿಷೇಧ ಎಂಬ ಎರಡು ಪ್ರಮುಖ ಬೇಡಿಕೆಗಳೊಂದಿಗೆ ದಾವಣಗೆರೆಯಲ್ಲಿ ಬಂದ್‌ ಹಾಗೂ ಪ್ರತಿಭಟನೆ ಕಾವು ಪಡೆದಿದ್ದು, ಸರಕಾರದ ಮುಂದಿನ ಪ್ರತಿಕ್ರಿಯೆ ಇದೀಗ ಕುತೂಹಲ ಮೂಡಿಸಿದೆ.

Continue Reading

ದಿನದ ಸುದ್ದಿ

ಅಪೌಷ್ಟಿಕತೆ ನಿವಾರಣೆಗೆ ಹೊಸ ಹೆಜ್ಜೆ; ಶಾಲೆ ಮುಗಿಯುವ ಮುನ್ನ ಮಕ್ಕಳಿಗೆ ಪೌಷ್ಟಿಕ ತಿನಿಸು

Published

on

ಗಣಿ ಬಾಧಿತ ಜಿಲ್ಲೆಗಳ ಮಕ್ಕಳಿಗೆ ‘ಸಂಜೆ ಸ್ನ್ಯಾಕ್ಸ್’ ಭಾಗ್ಯ: 24 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಪೌಷ್ಟಿಕ ಆಹಾರ

ಸುದ್ದಿದಿನ,ಹೂವಿನಹಡಗಲಿ: ಗಣಿ ಚಟುವಟಿಕೆಗಳಿಂದ ಬಾಧಿತ ಪ್ರದೇಶಗಳ ಮಕ್ಕಳ ಆರೋಗ್ಯ ಮತ್ತು ಪೌಷ್ಟಿಕತೆ ಸುಧಾರಣೆಗೆ ಕರ್ನಾಟಕ ಗಣಿ ಮತ್ತು ಪರಿಸರ ಪುನಸ್ಥಾಪನೆ ನಿಗಮ (ಕೆಎಂಆರ್‌ಸಿಇ) ಹೊಸ ಹೆಜ್ಜೆ ಇಟ್ಟಿದೆ. ವಿಜಯನಗರ, ಬಳ್ಳಾರಿ, ತುಮಕೂರು ಹಾಗೂ ಚಿತ್ರದುರ್ಗ ಜಿಲ್ಲೆಗಳ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಮಕ್ಕಳಿಗೆ ಶೀಘ್ರದಲ್ಲೇ ಸಂಜೆ ಸ್ನ್ಯಾಕ್ಸ್ ವಿತರಿಸುವ ಯೋಜನೆ ರೂಪಿಸಲಾಗಿದೆ.

ಈ ಸಂಬಂಧ ನಾಲ್ಕು ಜಿಲ್ಲೆಗಳ ಜಿಲ್ಲಾ ಪಂಚಾಯಿತಿಗಳ ಮೂಲಕ ಸಂಬಂಧಿಸಿದ ಶಿಕ್ಷಣ ಇಲಾಖೆ ಅಧಿಕಾರಿಗಳು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸೂಚನೆ ರವಾನೆಯಾಗಿದ್ದು, ಯೋಜನೆಯನ್ನು ಅನುಷ್ಠಾನಗೊಳಿಸಲು ಸಿದ್ಧತೆ ಆರಂಭಿಸಲಾಗಿದೆ. ಹೂವಿನಹಡಗಲಿ ತಾಲೂಕಿನಲ್ಲಿ ಈಗಾಗಲೇ ಮುಖ್ಯಗುರುಗಳ ಸಭೆ ನಡೆಸಿ ಅಗತ್ಯ ಕ್ರಮಗಳ ಕುರಿತು ಚರ್ಚಿಸಲಾಗಿದೆ.

http://Visit : www.suddidina.com

ಅಪೌಷ್ಟಿಕತೆ ತಡೆಗೆ ಪೌಷ್ಟಿಕ ಆಹಾರ

ಗಣಿ ಬಾಧಿತ ಪ್ರದೇಶಗಳಲ್ಲಿ ಮಕ್ಕಳಿಗೆ ಹೆಚ್ಚುವರಿ ಪೌಷ್ಟಿಕ ಆಹಾರ ಒದಗಿಸುವುದು ಯೋಜನೆಯ ಪ್ರಮುಖ ಉದ್ದೇಶವಾಗಿದೆ. ಸಂಜೆ ಸಮಯದಲ್ಲಿ ಮಕ್ಕಳಿಗೆ ನೆನೆಸಿದ ಶೇಂಗಾ, ಮೊಳಕೆಯೊಡೆದ ಹೆಸರುಕಾಳು, ಚಕ್ಕಿ ಸೇರಿದಂತೆ ವಿವಿಧ ಪೌಷ್ಟಿಕ ಆಹಾರಗಳನ್ನು ನೀಡಲು ಉದ್ದೇಶಿಸಲಾಗಿದೆ. ಕೆಲವು ದಿನಗಳಲ್ಲಿ ಮೂಸಂಬಿ, ಕಿತ್ತಳೆ, ಸಪೋಟ ಮತ್ತಿತರ ಹಣ್ಣುಗಳನ್ನೂ ವಿತರಿಸುವ ವ್ಯವಸ್ಥೆ ಇರಲಿದೆ.

ಮಕ್ಕಳಲ್ಲಿ ಕಂಡುಬರುತ್ತಿರುವ ಅಪೌಷ್ಟಿಕತೆ ಹಾಗೂ ಪೌಷ್ಟಿಕಾಂಶದ ಕೊರತೆ ನಿವಾರಣೆಗೆ ಪೂರಕವಾಗುವಂತೆ ಈ ಯೋಜನೆ ರೂಪಿಸಲಾಗಿದೆ. ಶಾಲೆಯಲ್ಲಿ ಶಿಕ್ಷಣದ ಜತೆಗೆ ಮಕ್ಕಳ ಆರೋಗ್ಯಕ್ಕೂ ಆದ್ಯತೆ ನೀಡುವ ಪ್ರಯತ್ನ ಇದಾಗಿದೆ.

24,352 ಮಕ್ಕಳಿಗೆ ಪ್ರಯೋಜನ

ಹೂವಿನಹಡಗಲಿ ತಾಲೂಕಿನಲ್ಲಿ 138 ಸರ್ಕಾರಿ ಪ್ರಾಥಮಿಕ ಹಾಗೂ 27 ಪ್ರೌಢಶಾಲೆಗಳ ಒಟ್ಟು 24,352 ವಿದ್ಯಾರ್ಥಿಗಳು ಈ ಯೋಜನೆಯ ಪ್ರಯೋಜನ ಪಡೆಯಲಿದ್ದಾರೆ. ಯೋಜನೆಗಾಗಿ ಕೆಎಂಆರ್‌ಸಿಇ ವತಿಯಿಂದ ₹10.64 ಕೋಟಿಗೂ ಹೆಚ್ಚು ಮೊತ್ತದ ಅನುದಾನ ಬಿಡುಗಡೆಗೆ ಅನುಮೋದನೆ ನೀಡಲಾಗಿದೆ ಎಂದು ಮಾಹಿತಿ ನೀಡಲಾಗಿದೆ.

ಮೂರು ವರ್ಷಗಳ ಅವಧಿಗೆ ಒಟ್ಟು ಸುಮಾರು ₹33 ಕೋಟಿ ಆಡಳಿತಾತ್ಮಕ ಮಂಜೂರಾತಿ ದೊರೆತಿದ್ದು, ಅಡುಗೆದಾರರು ಮತ್ತು ಸಹಾಯಕಿಯರ ವೆಚ್ಚಕ್ಕೂ ಪ್ರತ್ಯೇಕ ಅನುದಾನ ಮೀಸಲಿಡಲಾಗಿದೆ. ಇದರಿಂದ ಯೋಜನೆ ಕೇವಲ ತಾತ್ಕಾಲಿಕ ಕ್ರಮವಾಗದೆ ನಿರಂತರವಾಗಿ ನಡೆಯುವ ನಿರೀಕ್ಷೆ ಮೂಡಿದೆ.

SATS ಮಾಹಿತಿ ಅಪ್‌ಡೇಟ್‌ ಸವಾಲು

ಆದರೆ ಯೋಜನೆ ಅನುಷ್ಠಾನಕ್ಕೆ ವಿದ್ಯಾರ್ಥಿಗಳ ನಿಖರ ಸಂಖ್ಯೆಯೇ ಪ್ರಮುಖ ಆಧಾರವಾಗಿದ್ದು, SATS ತಂತ್ರಾಂಶದಲ್ಲಿ ವಿದ್ಯಾರ್ಥಿಗಳ ಮಾಹಿತಿ ಅಪ್‌ಡೇಟ್ ಮಾಡುವ ಪ್ರಕ್ರಿಯೆ ನಡೆಯುತ್ತಿದೆ. ಹೊಸ ಪ್ರವೇಶ, ಶಾಲೆ ಬದಲಾವಣೆ ಸೇರಿದಂತೆ ಹಲವು ಕಾರಣಗಳಿಂದ ವಿದ್ಯಾರ್ಥಿಗಳ ಸಂಖ್ಯೆಯಲ್ಲಿ ಬದಲಾವಣೆಯಾಗಿರುವುದರಿಂದ ಅಂತಿಮ ಪಟ್ಟಿ ಸಿದ್ಧಪಡಿಸುವುದು ಸವಾಲಾಗಿದೆ.

ಸೆಪ್ಟೆಂಬರ್ 5ರೊಳಗೆ ಮಾಹಿತಿ ನವೀಕರಣ ಪೂರ್ಣಗೊಳ್ಳುವ ನಿರೀಕ್ಷೆಯಿದ್ದು, ನಂತರ ಸಂಜೆ ಸ್ನ್ಯಾಕ್ಸ್ ವಿತರಣೆಗೆ ವೇಗ ಸಿಗುವ ಸಾಧ್ಯತೆಯಿದೆ.

ಶಿಕ್ಷಕರಿಗೆ ಹೆಚ್ಚುವರಿ ಹೊರೆ?

ಯೋಜನೆಯ ಉದ್ದೇಶ ಉತ್ತಮವಾಗಿದ್ದರೂ, ಅನುಷ್ಠಾನದ ಹೊಣೆಗಾರಿಕೆ ಶಿಕ್ಷಕರ ಮೇಲೆಯೇ ಹೆಚ್ಚಾಗುವ ಆತಂಕವೂ ವ್ಯಕ್ತವಾಗಿದೆ. ಈಗಾಗಲೇ ಎಐ ಹಾಜರಾತಿ, ಬಿಸಿಯೂಟ, ಮೊಟ್ಟೆ, ಬಾಳೆಹಣ್ಣು ಹಾಗೂ ವಿವಿಧ ಡಿಜಿಟಲ್ ದಾಖಲೆಗಳ ನಿರ್ವಹಣೆಯಲ್ಲಿ ಶಿಕ್ಷಕರು ನಿರತರಾಗಿದ್ದಾರೆ. ನೆಟ್‌ವರ್ಕ್ ಸಮಸ್ಯೆಯೂ ಕೆಲವೊಮ್ಮೆ ತೊಂದರೆ ನೀಡುತ್ತಿದೆ.

ಶಾಲೆ ಮುಗಿಯುವ ವೇಳೆಯಲ್ಲಿ ಸ್ನ್ಯಾಕ್ಸ್ ವಿತರಣೆ, ದಾಖಲಾತಿ ಮತ್ತು ಮೇಲ್ವಿಚಾರಣೆ ಮತ್ತೊಂದು ಜವಾಬ್ದಾರಿಯಾಗಬಹುದು ಎಂಬುದು ಶಿಕ್ಷಕರ ಅಭಿಪ್ರಾಯ. ಹೀಗಾಗಿ ಮಕ್ಕಳಿಗೆ ಪೌಷ್ಟಿಕ ಆಹಾರ ತಲುಪಿಸುವ ಯೋಜನೆಯ ಜತೆಗೆ ಶಿಕ್ಷಕರ ಮೇಲಿನ ಆಡಳಿತಾತ್ಮಕ ಒತ್ತಡ ಕಡಿಮೆ ಮಾಡುವ ವ್ಯವಸ್ಥೆಯೂ ಅಗತ್ಯವಾಗಿದೆ.

ವಾರದ ಆರು ದಿನಗಳಲ್ಲಿ ವಿವಿಧ ಪೌಷ್ಟಿಕ ತಿನಿಸುಗಳು ಹಾಗೂ ಶನಿವಾರ ಹಣ್ಣು ವಿತರಿಸುವ ಉದ್ದೇಶವಿದ್ದು, ಸರಕಾರದ ಅಂತಿಮ ಸೂಚನೆ ಬಂದ ಬಳಿಕ ಯೋಜನೆಗೆ ಚಾಲನೆ ಸಿಗಲಿದೆ.

Continue Reading

Trending