Connect with us

ದಿನದ ಸುದ್ದಿ

ದಾವಣಗೆರೆ | ಆ.14 ರಂದು ಬೃಹತ್ ಲೋಕ್ ಆದಾಲತ್ ; ರಾಜಿ ಸಂಧಾನ ಮೂಲಕ ಪ್ರಕರಣಗಳ ಇತ್ಯರ್ಥಕ್ಕೆ ಸದಾವಕಾಶ : ಕೆ.ಬಿ. ಗೀತಾ

Published

on

ಸುದ್ದಿದಿನ,ದಾವಣಗೆರೆ : ಜಿಲ್ಲೆಯಲ್ಲಿ ಆ. 14 ರಂದು ಬೃಹತ್ ಲೋಕ್ ಅದಾಲತ್ ಆಯೋಜಿಸಲಾಗಿದ್ದು, ಪಕ್ಷಗಾರರು ರಾಜಿ ಅಥವಾ ಸಂಧಾನದ ಮೂಲಕ ತಮ್ಮ ಪ್ರಕರಣಗಳನ್ನು ಸುಲಭವಾಗಿ, ಶೀಘ್ರವಾಗಿ ಯಾವುದೇ ಶುಲ್ಕವಿಲ್ಲದೇ ಇತ್ಯರ್ಥಪಡಿಸಿಕೊಳ್ಳಲು ಸದಾವಕಾಶ ಕಲ್ಪಿಸಲಾಗಿದ್ದು, ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳು ಹಾಗೂ ವ್ಯಾಜ್ಯಪೂರ್ವ ಪ್ರಕರಣಗಳನ್ನು ರಾಜಿ ಸಂಧಾನ ಮೂಲಕ ಪರಿಹರಿಸಿಕೊಳ್ಳಬಹುದು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಕೆ.ಬಿ. ಗೀತಾ ಅವರು ಹೇಳಿದರು.

ಜಿಲ್ಲೆಯಲ್ಲಿ ಏರ್ಪಡಿಸಲಾಗಿರುವ ಬೃಹತ್ ಲೋಕ ಅದಾಲತ್ ಕುರಿತಂತೆ ಜಿಲ್ಲಾ ನ್ಯಾಯಾಲಯದಲ್ಲಿ ಮಂಗಳವಾರ ಏರ್ಪಡಿಸಲಾದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

ಆ. 14 ರಂದು ಏರ್ಪಡಿಸಲಾಗಿರುವ ಬೃಹತ್ ಲೋಕ ಅದಾಲತ್‍ನಲ್ಲಿ ಕಕ್ಷಿಗಾರರು ಭೌತಿಕವಾಗಿ ನ್ಯಾಯಾಲಯಕ್ಕೆ ಹಾಜರಾಗಬಹುದು ಅಥವಾ ಇ-ಲೋಕ ಅದಾಲತ್‍ನಲ್ಲಿ ಆನ್‍ಲೈನ್ ಮೂಲಕವೂ ರಾಜಿ ಸಂಧಾನ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಬೃಹತ್ ಲೋಕ್ ಅದಾಲತ್‍ನ ಪ್ರತಿಯೊಂದು ಪೀಠದಲ್ಲಿ ಒಬ್ಬರು ಹಾಲಿ ನ್ಯಾಯಾಧೀಶರು ಹಾಗೂ ಒಬ್ಬರು ಪರಿಣತ ವಕೀಲರು ಸಂಧಾನಕಾರರಾಗಿರುತ್ತಾರೆ.

ನ್ಯಾಯಾಲಯದಲ್ಲಿ ಚಾಲ್ತಿಯಲ್ಲಿರುವ ಹಾಗೂ ದಾಖಲು ಮಾಡದೆ ಇರುವಂತಹ ವಾಹನ ಅಪಘಾತಕ್ಕೆ ಸಂಬಂಧಿಸಿದ ಪರಿಹಾರ ಪ್ರಕರಣಗಳು, ಭೂ-ಸ್ವಾಧೀನ ಪರಿಹಾರಕ್ಕೆ ಸಂಬಂಧಿತ ಪ್ರಕರಣಗಳು, ಪಾಲುವಿಭಾಗ ದಾವೆಗಳು, ಹಣ ವಾಪಾಸಾತಿ ದಾವೆಗಳು, ಬಾಡಿಗೆದಾರ ಮತ್ತು ಮಾಲೀಕರ ನಡುವಿನ ದಾವೆಗಳು, ಇತರೆ ಸಿವಿಲ್ ವ್ಯಾಜ್ಯಗಳು ಹಾಗೂ ರಾಜಿ ಮಾಡಿಕೊಳ್ಳಬಹುದಾದ ಕ್ರಿಮಿನಲ್ ಪ್ರಕರಣಗಳು, ಚೆಕ್ ಬೌನ್ಸ್ ಪ್ರಕರಣಗಳು, ಜೀವನಾಂಶದ ಅರ್ಜಿ ಪ್ರಕರಣಗಳು, ಕೌಟುಂಬಿಕ ಕಲಹಗಳು, (ವಿಚ್ಚೇದನಾ ಹೊರತುಪಡಿಸಿ) ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳಬಹುದು. ಸಾರ್ವಜನಿಕರು ಕಕ್ಷಿಗಾರರು ಪಡೆದುಕೊಂಡು ಅತೀ ಹೆಚ್ಚು ಪ್ರಕರಣಗಳನ್ನು ಬಗೆಹರಿಸಿಕೊಳ್ಳಬೇಕೆಂದು ವಿನಂತಿಸಿದರು.

ಲೋಕ ಅದಾಲತ್ ಅಥವಾ ಜನತಾ ನ್ಯಾಯಾಲಯದ ಮೂಲ ಉದ್ದೇಶವೇನೆಂದರೆ ಪಕ್ಷಗಾರರು ರಾಜಿ ಅಥವಾ ಸಂಧಾನದ ಮೂಲಕ ತಮ್ಮ ಪ್ರಕರಣಗಳನ್ನು ಸುಲಭವಾಗಿ, ಶೀಘ್ರವಾಗಿ ಯಾವುದೇ ಶುಲ್ಕವಿಲ್ಲದೇ ಇತ್ಯರ್ಥಪಡಿಸಿಕೊಳ್ಳಬಹುದು.

ಇದರಿಂದ ಪಕ್ಷಗಾರರ ಮಧ್ಯದಲ್ಲಿರುವ ವೈಮನಸ್ಸು ಕಡಿಮೆಯಾಗಿ ನ್ಯಾಯಾಧೀಶರು ಹೆಚ್ಚು ಅವಶ್ಯಕತೆ ಇರುವಂತಹ, ಕಾನೂನಿನ ಸಂಕೀರ್ಣತೆ ಇರುವಂತಹ ಪ್ರಕರಣಗಳಿಗೆ ಹೆಚ್ಚು ಒತ್ತು ಕೊಟ್ಟು ನ್ಯಾಯಾಲಯದಲ್ಲಿ ಚಾಲ್ತಿಯಲ್ಲಿರುವಂತಹ ಪ್ರಕರಣಗಳನ್ನು ಶೀಘ್ರವಾಗಿ ವಿಲೇವಾರಿ ಮಾಡಲು ಸಾಧ್ಯವಾಗುತ್ತದೆ.

2020ರ ಸೆ.19 ರಂದು ನಡೆದ ಬೃಹತ್ ಲೋಕ್ ಅದಾಲತ್‍ನಲ್ಲಿ ಜಿಲ್ಲೆಯ 4921 ಪ್ರಕರಣಗಳು ಇತ್ಯರ್ಥಗೊಂಡು 4.47 ಕೋಟಿ ರೂ. ಪರಿಹಾರ, 2020 ಡಿ.19 ರಂದು ನಡೆದ ಲೋಕ್ ಅದಾಲತ್‍ನಲ್ಲಿ 3988 ಪ್ರಕರಣಗಳು ಇತ್ಯರ್ಥಗೊಂಡು 10.16 ಕೋಟಿ ರೂ. ಹಾಗೂ ಮಾ.27ರಂದು ನಡೆದ ಬೃಹತ್ ಲೋಕ್ ಅದಾಲತ್‍ನಲ್ಲಿ 6041 ಪ್ರಕರಣಗಳು ಇತ್ಯರ್ಥಗೊಂಡು ರೂ.11.06 ಪರಿಹಾರ ಒದಗಿಸಲಾಗಿದೆ.

ಹೀಗಾಗಿ ದಿನದಿಂದ ದಿನಕ್ಕೆ ಲೋಕ್‍ಅದಾಲತ್‍ಗಳು ಯಶಸ್ವಿಯಾಗುತ್ತಿದ್ದು, ಜನರಿಂದ ಉತ್ತಮ ಸ್ಪಂದನೆ ದೊರೆಯುತ್ತಿದೆ. ಲೋಕ್ ಅದಾಲತ್‍ಗಳು ಯಶಸ್ವಿಯಾಗಲು ಸಮಸ್ತ ವಕೀಲ ವೃಂದದವರು, ಪೊಲೀಸ್ ಇಲಾಖೆಯವರು, ಬ್ಯಾಂಕ್ ಅಧಿಕಾರಿಗಳು, ವಿಮಾ ಅಧಿಕಾರಿಗಳು, ಕಂದಾಯ ಇಲಾಖೆಯವರು, ಕಕ್ಷಿದಾರರು, ಮುಖ್ಯವಾಗಿ ಮಾಧ್ಯಮಗಳು ತುಂಬಾ ಸಹಕಾರ ನೀಡಿದ್ದಾರೆ ಅವರೆಲ್ಲರಿಗೂ ದಾವಣಗೆರೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ ಧನ್ಯವಾದ ಸಲ್ಲಿಸುತ್ತೇವೆ ಎಂದರು.

ಇದೀಗ ಮತ್ತೊಮ್ಮೆ ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರವು ಆ.14 ರಂದು ಬೃಹತ್ ಲೋಕತ್ ಅದಾಲತ್ ಮೂಲಕ ಅತಿ ಹೆಚ್ಚು ಪ್ರಕರಣಗಳನ್ನು ವಿಲೇವಾರಿ ಮಾಡಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕೆಂದು ಉದ್ದೇಶಿಸಿರುತ್ತಾರೆ. ಆ ಪ್ರಕಾರವಾಗಿ ಜಿಲ್ಲೆಗಳಲ್ಲಿರುವ ಎಲ್ಲಾ ತಾಲ್ಲೂಕು ಸೇವಾ ಸಮಿತಿಗಳು ತಮ್ಮ ತಮ್ಮ ವ್ಯಾಪ್ತಿಯಲ್ಲಿ ಬೃಹತ್ ಲೋಕ್ ಅದಾಲತ್‍ನ್ನು ನಡೆಸುವ ಬಗ್ಗೆ ವ್ಯವಸ್ಥೆಯನ್ನು ಮಾಡಿಕೊಂಡಿರುತ್ತೇವೆ. ಅದಾಲತ್ ಅನ್ನು ಯಶಸ್ವಿಗೊಳಿಸಲು ನಿತ್ಯ ಪೂರ್ವಭಾವಿ ಸಭೆಗಳನ್ನು ನಡೆಸಲಾಗುತ್ತಿದೆ ಎಂದರು.

ಪಕ್ಷಗಾರರು ಸ್ವಇಚ್ಚೆಯಿಂದ ರಾಜಿಗೆ ಒಪ್ಪಿಕೊಂಡರೆ ಮಾತ್ರ ಲೋಕ್ ಅದಾಲತ್‍ನಲ್ಲಿ ಪ್ರಕರಣಗಳು ತೀರ್ಮಾನವಾಗುತ್ತದೆ. ಒಂದು ವೇಳೆ ಉಭಯ ಪಕ್ಷಗಾರರಿಗೆ ಒಪ್ಪಿಗೆ ಇಲ್ಲದಿದ್ದರೆ ಯಾವುದೇ ತೀರ್ಮಾನವಾಗುವುದಿಲ್ಲ, ಅಂತಹ ಪ್ರಕರಣಗಳನ್ನು ಪುನ: ನ್ಯಾಯಾಲಯದಲ್ಲಿಯೇ ಕಾನೂನು ಬದ್ದವಾಗಿ ತೀರ್ಮಾನ ಮಾಡಲಾಗುತ್ತದೆ.

ಈ ರೀತಿ ರಾಜಿ ಮಾಡಿಕೊಂಡ ಪ್ರಕರಣಗಳು ನ್ಯಾಯಯುತವಾಗಿ ಮತ್ತು ಕಾನೂನು ಬದ್ಧವಾಗಿದ್ದರೆ ಮಾತ್ರ ಲೋಕ್ ಅದಾಲತ್‍ನಲ್ಲಿ ಇತ್ಯರ್ಥ ಮಾಡುತ್ತಾರೆ. ಲೋಕ್ ಅದಾಲತ್‍ನಲ್ಲಿ ಮಾಡುವ ಅವಾರ್ಡ್ ಕಾನೂನುಬದ್ಧವಾಗಿರುತ್ತದೆ ಮತ್ತು ನ್ಯಾಯಾಲಯದಲ್ಲಿ ತೀರ್ಮಾನವಾದ ಪ್ರಕರಣಗಳಂತೆ ಅದರ ತೀರ್ಪನ್ನು ಜಾರಿಗೊಳಿಸಬಹುದು.

ಕೋವಿಡ್-19ರ ಮೊದಲನೆ ಮತ್ತು ಎರಡನೇ ಅಲೆಯ ಹೊಡೆತಕ್ಕೆ ಸಿಲುಕಿ ಈಗಾಗಲೆ ಪಕ್ಷಗಾರರು ಮತ್ತು ವಕೀಲರು ಸಾಕಷ್ಟು ಸಂಕಷ್ಟ ಅನುಭವಿಸಿದ್ದಾರೆÉ. ಅಲ್ಲದೇ ಇತ್ತೀಚಿನ ಅತೀವೃಷ್ಠಿಯಿಂದ ರೈತರು ಹಾಗೂ ಸಾಮಾನ್ಯ ಜನರು ಬೆಳೆ ಹಾಗೂ ಆಸ್ತಿ-ಪಾಸ್ತಿ ಅನುಭವಿಸಿದ್ದು ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುತ್ತಾರೆ.

ಇಂತಹ ಸಂದರ್ಭದಲ್ಲಿ ಹಾಗೂ ಆದಾಯ ಕಡಿಮೆ ಇರುವಂತಹ ಪರಿಸ್ಥಿತಿಯಲ್ಲಿ ತಮ್ಮ ವ್ಯಾಜ್ಯಗಳನ್ನು ಲೋಕ್‍ಅದಾಲತ್ ಮೂಲಕ ಇತ್ಯರ್ಥಪಡಿಸಿಕೊಂಡರೆ ಕಕ್ಷಿದಾರರಿಗೆ ಮತ್ತು ವಕೀಲರಿಗೆ ಹೆಚ್ಚನ ಅನುಕೂಲವಾಗುತ್ತದೆ. ಅದಾಲತ್‍ನಲ್ಲಿ ರಾಜಿ ಮೂಲಕ ಇತ್ಯರ್ಥ ಪಡಿಸಿಕೊಳ್ಳುವ ಪ್ರಕರಣಗಳ ಸಂಪೂರ್ಣ ಶುಲ್ಕವನ್ನು ನ್ಯಾಯಾಲಯವು ಮರುಪಾವತಿ ಮಾಡುತ್ತದೆ. ವ್ಯಾಜ್ಯಪೂರ್ವ ಪ್ರಕರಣಗಳಿಗೆ ನ್ಯಾಯಾಲಯ ಶುಲ್ಕ ಕೊಡಬೇಕಾಗಿಲ್ಲ.

ಅದಾಲತ್‍ನಲ್ಲಿ ಇತ್ಯರ್ಥ ಮಾಡಿಕೊಂಡ ಪ್ರಕರಣಗಳಿಗೆ ಯಾವುದೇ ಮೆಲ್ಮನವಿ ಹಾಗೂ ರಿವಿಜನ್ ಇರುವುದಿಲ್ಲ. ಮತ್ತು ಇದರಲ್ಲಿ ಆದ ತೀರ್ಮಾನವೆ ಅಂತಿಮ ತೀರ್ಮಾನವಾಗಿರುತ್ತದೆ. ಮತ್ತು ಪಕ್ಷಗಾರರು ಉಭಯತ್ರರು ಒಪ್ಪಿ ರಾಜಿ ಮಾಡಿಕೊಳ್ಳುವುದರಿಂದ ಅವರ ಮಧ್ಯೆ ಸೌಹಾರ್ದತೆ ಹೆಚ್ಚುತ್ತದೆ ಹಾಗೂ ವಿವಾದಗಳು ಕಡಿಮೆಯಾಗುತ್ತದೆ ಇದು ಉತ್ತಮ ಸಮಾಜ ನಿರ್ಮಾಣ ಮಾಡಲು ತುಂಬಾ ಸಹಕಾರಿಯಾಗುತ್ತದೆ.

ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಇಮೇಲ್ dlsadavanagere@gmail.com ಮೂಲಕ ಮತ್ತು ದೂರವಾಣಿ ಸಂಖ್ಯೆ- 08192-296364, 9481167005 ಮೂಲಕ ಜಿಲ್ಲೆಯ ಕಾನೂನು ಸೇವೆಗಳ ಪ್ರಾಧಿಕಾರದ ಕಛೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಧಾನ ಜಿಲ್ಲಾ ಸತ್ರ ನ್ಯಾಯಾಧೀಶರಾದ ಗೀತಾ.ಕೆ.ಬಿ ತಿಳಿಸಿದರು.

ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಪ್ರವೀಣ್ ನಾಯಕ್, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಡಿ.ಪಿ. ಬಸವರಾಜು ಸೇರಿದಂತೆ ವಿವಿಧ ವಕೀಲರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಬಾಷಾ ಒತ್ತಾಯ

Published

on

ಸುದ್ದಿದಿನ,ದಾವಣಗೆರೆ:ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದ್ದು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಗ್ಗೊಲೆ ಮಾಡುತ್ತಿದ್ದೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಭಾಷಾ ಆಕ್ರೋಶ ವ್ಯಕ್ತಪಡಿಸಿದ್ದಾರೆ,

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ನಂತರ 23ಕ್ಕೆ ಹೆಚ್ಚು ವಿದ್ಯಾರ್ಥಿನಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ ರಾಜೀನಾಮೆ ನೀಡಬೇಕು ಎಂದು ಯುವ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ *ಮಹಬೂಬ್ ಭಾಷಾ* ಆಗ್ರಹಿಸಿದ್ದಾರೆ ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ ಯುವಜನರು ಹಾಗೂ ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು, ಸಂವಿಧಾನ ವಿರೋಧಿ ನಡೆ ಹಾಗೂ ಹೋರಾಟವನ್ನು ಹತ್ತಿಕ್ಕು ಹೊನ್ನಾರವಾಗಿದೆ.

ನೀಟ್ ಹಗರಣ ಮತ್ತು ವಿದ್ಯಾರ್ಥಿಗಳ ಆತ್ಮಹತ್ಯೆ ಕಾರ್ಪೊರೇಟರ್ ಶಿಕ್ಷಣ ನೀತಿಗಳ ಕಾರಣ, ಪರೀಕ್ಷೆಯ ಅಕ್ರಮ ವಿರುದ್ಧ ಹೋರಾಟ ಎರಡನೇ ಸ್ವತಂತ್ರ ಸಂಗ್ರಾಯದ ರೀತಿಯಲ್ಲಿ ದೇಶದಿಂದ ವ್ಯಾಪಿಸುತ್ತಿದ್ದು, ಆಳುವ ಸರ್ಕಾರ ರಾಷ್ಟ್ರದ ಭವಿಷ್ಯ ವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದೆಂದು ಹೇಳಿದ್ದಾರೆ.

ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ತಕ್ಷಣವೇ ಸರಿಪಡಿಸಬೇಕು ಹಾಗೂ ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸುದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕೆಂದು ಒತ್ತಾಯಿಸುತ್ತಿದ್ದೇನೆ ಎಂದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ; ವಿದ್ಯಾರ್ಥಿಗಳ ಆತ್ಮಹತ್ಯೆ: ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ವಿನಾಯಕ ಬಿ. ಎನ್ ಆಗ್ರಹ

Published

on

ಸುದ್ದಿದಿನ,ದಾವಣಗೆರೆ :ವಿದ್ಯಾರ್ಥಿಗಳ ಭವಿಷ್ಯದ ಜತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ನಂತರ20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ

ರಾಜಿನಾಮೆ ನೀಡಬೇಕು. ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು’ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೀತಿ ,ಸಂಶೋಧನೆ ಮತ್ತು ತರಬೇತಿ ವಿಭಾಗದ ರಾಜ್ಯ ಸಂಚಾಲಕರಾದ ವಿನಾಯಕ ಬಿ.ಎನ್ ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹ ಮಾಡಿದ್ದಾರೆ.

ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ
ಯುವಜನರು, ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು. ಸೊನಮ್ ವಾಂಗ್ಟಕ್ ಅವರನ್ನು ಏಕಾಏಕಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದು ಸಂವಿಧಾನವಿರೋಧಿ ನಡೆ, ಹೋರಾಟ ಹತ್ತಿಕ್ಕುವ ಹುನ್ನಾರ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನೀಟ್ ಹಗರಣ, ವಿದ್ಯಾರ್ಥಿಗಳ ಆತ್ಮ ಹತ್ಯೆಗೆ ಕಾರ್ಪೊರೇಟ್ ಶಿಕ್ಷಣ ನೀತಿಗಳು ಕಾರಣ. ನೀಟ್ ಪರೀಕ್ಷೆ ಅಕ್ರಮದ ವಿರುದ್ಧದ ಹೋರಾಟ ಎರಡನೇ ಸ್ವಾತಂತ್ರ್ಯ ಸಂಗ್ರಾಮದ ರೀತಿಯಲ್ಲಿ ದೇಶದಾದ್ಯಂತ ವ್ಯಾಪಿಸುತ್ತಿದೆ. ಆಳುವ ಸರ್ಕಾರ ರಾಷ್ಟ್ರದ ಭವಿಷ್ಯವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದು’.ಎಂದು ತಿಳಿಸಿದ್ದಾರೆ.

ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ಸರಿಪಡಿಸಬೇಕು ಮತ್ತು ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ವಂದನೆಗಳೊಂದಿಗೆ

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಎಸ್ ಐ ಆರ್ | ರಾಜ್ಯದಲ್ಲೇ ಮಾಯಾಕೊಂಡ ಕ್ಷೇತ್ರಕ್ಕೆ ಪ್ರಥಮ ಸ್ಥಾನ

Published

on

ಸುದ್ದಿದಿನ,ದಾವಣಗೆರೆ‌ : ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಮಾಯಾಕೊಂಡ ಕ್ಷೇತ್ರವು ನಿಗದಿತ ಅವಧಿಗಿಂತ ಮೊದಲೇ ಗಣತಿ ನಮೂನೆಗಳ ಹಂಚಿಕೆಯನ್ನು ಪೂರ್ಣಗೊಳಿಸಿರುವುದರಿಂದ ಮತ್ತು ಶೇ. 92.31 ರಷ್ಟು ಡಿಜಿಟಲೀಕರಣ ಸಾಧನೆ ಮಾಡಲಾಗಿರುವುದರಿಂದ, ಪ್ರಗತಿಯಲ್ಲಿ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದುಕೊಂಡಿದೆ ಎಂದು 108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದ ಮತದಾರರ ನೋಂದಣಾಧಿಕಾರಿ ಹಾಗೂ ದಾವಣಗೆರೆ ಉಪವಿಭಾಗಾಧಿಕಾರಿ ಸಂತೋಷ್ ಕುಮಾರ್ ಅವರು ತಿಳಿಸಿದರು.

ಅವರು ಮಂಗಳವಾರ ದಾವಣಗೆರೆ ತಾಲ್ಲೂಕು ಕಚೇರಿಯಲ್ಲಿ ದಾವಣಗೆರೆ ಜಿಲ್ಲೆಯ 108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕುರಿತು ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಒಟ್ಟು 1,97,048 ಮತದಾರರನ್ನು ಹೊಂದಿದ್ದು ಎಲ್ಲಾ 1,97,048 ಗಣತಿ ನಮೂನೆಗಳನ್ನು ಹಂಚಿಕೆ ಮಾಡಲಾಗಿದೆ ಇದುವರೆಗೆ ಒಟ್ಟು 1,81,890 ಗಣತಿ ನಮೂನೆಗಳನ್ನು ಡಿಜಿಟಲೀಕರಿಸಲಾಗಿದ್ದು, ಶೇಕಡಾ 92.31 ರಷ್ಟು ಗುರಿಯನ್ನು ತಲುಪಲಾಗಿದೆ ಎಂದು ತಿಳಿಸಿದರು.

ದಾವಣಗೆರೆ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (SIR) ಪ್ರಕ್ರಿಯೆಯಲ್ಲಿ ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ ಗಣತಿ ನಮೂನೆಗಳ ಹಂಚಿಕೆ ಹಾಗೂ ಡಿಜಿಟಲೀಕರಣ ಪ್ರಕ್ರಿಯೆಯು ಬಿರುಸಿನಿಂದ ಸಾಗಿದ್ದು, ಇನ್ನು ಕೇವಲ 4,165 ಫಾರ್ಮ್‌ಗಳು (ಶೇಕಡಾ 2.11) ಮಾತ್ರ ಡಿಜಿಟಲೀಕರಣಕ್ಕೆ ಬಾಕಿ ಇವೆ ಕ್ಷೇತ್ರದಲ್ಲಿ ಯಾವುದೇ ಹಂಚಿಕೆಯಾಗದ ಫಾರ್ಮ್‌ಗಳು ಬಾಕಿ ಉಳಿದಿಲ್ಲ, ಬಾಕಿ ಉಳಿದಿರುವ ಗಣತಿ ನಮೂನೆಗಳ ಗಣಕೀಕರಣ ಶೀಘ್ರವಾಗಿ ಪೂರ್ಣಗೊಳಿಸಲಾಗುವುದು ಎಂದರು.

ಮನೆ ಮನೆ ಭೇಟಿ ಸಂದರ್ಭದಲ್ಲಿ ಇಂದಿನವರೆಗೆ ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 10,993 ಮತದಾರರನ್ನು ಸ್ಥಳಾಂತರ, ವಲಸೆ, ಮರಣ, ದ್ವಿಪತಿ (ಡೂಪ್ಲಿಕೇಟ್) ಸೇರಿದಂತೆ ಇತರೆ ಕಾರಣಗಳಿಗಾಗಿ ಗುರುತಿಸಲಾಗಿದೆ. ಒಟ್ಟಾರೆಯಾಗಿ ಜಿಲ್ಲೆಯಲ್ಲಿ 193 ನಮೂನೆಗಳು ಸಂಗ್ರಹವಾಗದೆ ಉಳಿದಿದ್ದು, 5059 ಶಾಶ್ವತ ವಲಸೆ, 3951 ಮರಣ ಪ್ರಕರಣ, 1760 ದ್ವಿಪ್ರತಿ ನಮೂನೆಗಳು ಹಾಗೂ 30 ಇತರೆ ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ ಎಂದು ತಿಳಿಸಿದರು.

ದಾವಣಗೆರೆ ತಾಲ್ಲೂಕು ತಹಶೀಲ್ದಾರ್‌ ರಾಜೇಶ್‌ ಕುಮಾರ್‌ ಸಿ ಅವರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending