Connect with us

ದಿನದ ಸುದ್ದಿ

ದಾವಣಗೆರೆ | ಆ.14 ರಂದು ಬೃಹತ್ ಲೋಕ್ ಆದಾಲತ್ ; ರಾಜಿ ಸಂಧಾನ ಮೂಲಕ ಪ್ರಕರಣಗಳ ಇತ್ಯರ್ಥಕ್ಕೆ ಸದಾವಕಾಶ : ಕೆ.ಬಿ. ಗೀತಾ

Published

on

ಸುದ್ದಿದಿನ,ದಾವಣಗೆರೆ : ಜಿಲ್ಲೆಯಲ್ಲಿ ಆ. 14 ರಂದು ಬೃಹತ್ ಲೋಕ್ ಅದಾಲತ್ ಆಯೋಜಿಸಲಾಗಿದ್ದು, ಪಕ್ಷಗಾರರು ರಾಜಿ ಅಥವಾ ಸಂಧಾನದ ಮೂಲಕ ತಮ್ಮ ಪ್ರಕರಣಗಳನ್ನು ಸುಲಭವಾಗಿ, ಶೀಘ್ರವಾಗಿ ಯಾವುದೇ ಶುಲ್ಕವಿಲ್ಲದೇ ಇತ್ಯರ್ಥಪಡಿಸಿಕೊಳ್ಳಲು ಸದಾವಕಾಶ ಕಲ್ಪಿಸಲಾಗಿದ್ದು, ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳು ಹಾಗೂ ವ್ಯಾಜ್ಯಪೂರ್ವ ಪ್ರಕರಣಗಳನ್ನು ರಾಜಿ ಸಂಧಾನ ಮೂಲಕ ಪರಿಹರಿಸಿಕೊಳ್ಳಬಹುದು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಕೆ.ಬಿ. ಗೀತಾ ಅವರು ಹೇಳಿದರು.

ಜಿಲ್ಲೆಯಲ್ಲಿ ಏರ್ಪಡಿಸಲಾಗಿರುವ ಬೃಹತ್ ಲೋಕ ಅದಾಲತ್ ಕುರಿತಂತೆ ಜಿಲ್ಲಾ ನ್ಯಾಯಾಲಯದಲ್ಲಿ ಮಂಗಳವಾರ ಏರ್ಪಡಿಸಲಾದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

ಆ. 14 ರಂದು ಏರ್ಪಡಿಸಲಾಗಿರುವ ಬೃಹತ್ ಲೋಕ ಅದಾಲತ್‍ನಲ್ಲಿ ಕಕ್ಷಿಗಾರರು ಭೌತಿಕವಾಗಿ ನ್ಯಾಯಾಲಯಕ್ಕೆ ಹಾಜರಾಗಬಹುದು ಅಥವಾ ಇ-ಲೋಕ ಅದಾಲತ್‍ನಲ್ಲಿ ಆನ್‍ಲೈನ್ ಮೂಲಕವೂ ರಾಜಿ ಸಂಧಾನ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಬೃಹತ್ ಲೋಕ್ ಅದಾಲತ್‍ನ ಪ್ರತಿಯೊಂದು ಪೀಠದಲ್ಲಿ ಒಬ್ಬರು ಹಾಲಿ ನ್ಯಾಯಾಧೀಶರು ಹಾಗೂ ಒಬ್ಬರು ಪರಿಣತ ವಕೀಲರು ಸಂಧಾನಕಾರರಾಗಿರುತ್ತಾರೆ.

ನ್ಯಾಯಾಲಯದಲ್ಲಿ ಚಾಲ್ತಿಯಲ್ಲಿರುವ ಹಾಗೂ ದಾಖಲು ಮಾಡದೆ ಇರುವಂತಹ ವಾಹನ ಅಪಘಾತಕ್ಕೆ ಸಂಬಂಧಿಸಿದ ಪರಿಹಾರ ಪ್ರಕರಣಗಳು, ಭೂ-ಸ್ವಾಧೀನ ಪರಿಹಾರಕ್ಕೆ ಸಂಬಂಧಿತ ಪ್ರಕರಣಗಳು, ಪಾಲುವಿಭಾಗ ದಾವೆಗಳು, ಹಣ ವಾಪಾಸಾತಿ ದಾವೆಗಳು, ಬಾಡಿಗೆದಾರ ಮತ್ತು ಮಾಲೀಕರ ನಡುವಿನ ದಾವೆಗಳು, ಇತರೆ ಸಿವಿಲ್ ವ್ಯಾಜ್ಯಗಳು ಹಾಗೂ ರಾಜಿ ಮಾಡಿಕೊಳ್ಳಬಹುದಾದ ಕ್ರಿಮಿನಲ್ ಪ್ರಕರಣಗಳು, ಚೆಕ್ ಬೌನ್ಸ್ ಪ್ರಕರಣಗಳು, ಜೀವನಾಂಶದ ಅರ್ಜಿ ಪ್ರಕರಣಗಳು, ಕೌಟುಂಬಿಕ ಕಲಹಗಳು, (ವಿಚ್ಚೇದನಾ ಹೊರತುಪಡಿಸಿ) ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳಬಹುದು. ಸಾರ್ವಜನಿಕರು ಕಕ್ಷಿಗಾರರು ಪಡೆದುಕೊಂಡು ಅತೀ ಹೆಚ್ಚು ಪ್ರಕರಣಗಳನ್ನು ಬಗೆಹರಿಸಿಕೊಳ್ಳಬೇಕೆಂದು ವಿನಂತಿಸಿದರು.

ಲೋಕ ಅದಾಲತ್ ಅಥವಾ ಜನತಾ ನ್ಯಾಯಾಲಯದ ಮೂಲ ಉದ್ದೇಶವೇನೆಂದರೆ ಪಕ್ಷಗಾರರು ರಾಜಿ ಅಥವಾ ಸಂಧಾನದ ಮೂಲಕ ತಮ್ಮ ಪ್ರಕರಣಗಳನ್ನು ಸುಲಭವಾಗಿ, ಶೀಘ್ರವಾಗಿ ಯಾವುದೇ ಶುಲ್ಕವಿಲ್ಲದೇ ಇತ್ಯರ್ಥಪಡಿಸಿಕೊಳ್ಳಬಹುದು.

ಇದರಿಂದ ಪಕ್ಷಗಾರರ ಮಧ್ಯದಲ್ಲಿರುವ ವೈಮನಸ್ಸು ಕಡಿಮೆಯಾಗಿ ನ್ಯಾಯಾಧೀಶರು ಹೆಚ್ಚು ಅವಶ್ಯಕತೆ ಇರುವಂತಹ, ಕಾನೂನಿನ ಸಂಕೀರ್ಣತೆ ಇರುವಂತಹ ಪ್ರಕರಣಗಳಿಗೆ ಹೆಚ್ಚು ಒತ್ತು ಕೊಟ್ಟು ನ್ಯಾಯಾಲಯದಲ್ಲಿ ಚಾಲ್ತಿಯಲ್ಲಿರುವಂತಹ ಪ್ರಕರಣಗಳನ್ನು ಶೀಘ್ರವಾಗಿ ವಿಲೇವಾರಿ ಮಾಡಲು ಸಾಧ್ಯವಾಗುತ್ತದೆ.

2020ರ ಸೆ.19 ರಂದು ನಡೆದ ಬೃಹತ್ ಲೋಕ್ ಅದಾಲತ್‍ನಲ್ಲಿ ಜಿಲ್ಲೆಯ 4921 ಪ್ರಕರಣಗಳು ಇತ್ಯರ್ಥಗೊಂಡು 4.47 ಕೋಟಿ ರೂ. ಪರಿಹಾರ, 2020 ಡಿ.19 ರಂದು ನಡೆದ ಲೋಕ್ ಅದಾಲತ್‍ನಲ್ಲಿ 3988 ಪ್ರಕರಣಗಳು ಇತ್ಯರ್ಥಗೊಂಡು 10.16 ಕೋಟಿ ರೂ. ಹಾಗೂ ಮಾ.27ರಂದು ನಡೆದ ಬೃಹತ್ ಲೋಕ್ ಅದಾಲತ್‍ನಲ್ಲಿ 6041 ಪ್ರಕರಣಗಳು ಇತ್ಯರ್ಥಗೊಂಡು ರೂ.11.06 ಪರಿಹಾರ ಒದಗಿಸಲಾಗಿದೆ.

ಹೀಗಾಗಿ ದಿನದಿಂದ ದಿನಕ್ಕೆ ಲೋಕ್‍ಅದಾಲತ್‍ಗಳು ಯಶಸ್ವಿಯಾಗುತ್ತಿದ್ದು, ಜನರಿಂದ ಉತ್ತಮ ಸ್ಪಂದನೆ ದೊರೆಯುತ್ತಿದೆ. ಲೋಕ್ ಅದಾಲತ್‍ಗಳು ಯಶಸ್ವಿಯಾಗಲು ಸಮಸ್ತ ವಕೀಲ ವೃಂದದವರು, ಪೊಲೀಸ್ ಇಲಾಖೆಯವರು, ಬ್ಯಾಂಕ್ ಅಧಿಕಾರಿಗಳು, ವಿಮಾ ಅಧಿಕಾರಿಗಳು, ಕಂದಾಯ ಇಲಾಖೆಯವರು, ಕಕ್ಷಿದಾರರು, ಮುಖ್ಯವಾಗಿ ಮಾಧ್ಯಮಗಳು ತುಂಬಾ ಸಹಕಾರ ನೀಡಿದ್ದಾರೆ ಅವರೆಲ್ಲರಿಗೂ ದಾವಣಗೆರೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ ಧನ್ಯವಾದ ಸಲ್ಲಿಸುತ್ತೇವೆ ಎಂದರು.

ಇದೀಗ ಮತ್ತೊಮ್ಮೆ ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರವು ಆ.14 ರಂದು ಬೃಹತ್ ಲೋಕತ್ ಅದಾಲತ್ ಮೂಲಕ ಅತಿ ಹೆಚ್ಚು ಪ್ರಕರಣಗಳನ್ನು ವಿಲೇವಾರಿ ಮಾಡಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕೆಂದು ಉದ್ದೇಶಿಸಿರುತ್ತಾರೆ. ಆ ಪ್ರಕಾರವಾಗಿ ಜಿಲ್ಲೆಗಳಲ್ಲಿರುವ ಎಲ್ಲಾ ತಾಲ್ಲೂಕು ಸೇವಾ ಸಮಿತಿಗಳು ತಮ್ಮ ತಮ್ಮ ವ್ಯಾಪ್ತಿಯಲ್ಲಿ ಬೃಹತ್ ಲೋಕ್ ಅದಾಲತ್‍ನ್ನು ನಡೆಸುವ ಬಗ್ಗೆ ವ್ಯವಸ್ಥೆಯನ್ನು ಮಾಡಿಕೊಂಡಿರುತ್ತೇವೆ. ಅದಾಲತ್ ಅನ್ನು ಯಶಸ್ವಿಗೊಳಿಸಲು ನಿತ್ಯ ಪೂರ್ವಭಾವಿ ಸಭೆಗಳನ್ನು ನಡೆಸಲಾಗುತ್ತಿದೆ ಎಂದರು.

ಪಕ್ಷಗಾರರು ಸ್ವಇಚ್ಚೆಯಿಂದ ರಾಜಿಗೆ ಒಪ್ಪಿಕೊಂಡರೆ ಮಾತ್ರ ಲೋಕ್ ಅದಾಲತ್‍ನಲ್ಲಿ ಪ್ರಕರಣಗಳು ತೀರ್ಮಾನವಾಗುತ್ತದೆ. ಒಂದು ವೇಳೆ ಉಭಯ ಪಕ್ಷಗಾರರಿಗೆ ಒಪ್ಪಿಗೆ ಇಲ್ಲದಿದ್ದರೆ ಯಾವುದೇ ತೀರ್ಮಾನವಾಗುವುದಿಲ್ಲ, ಅಂತಹ ಪ್ರಕರಣಗಳನ್ನು ಪುನ: ನ್ಯಾಯಾಲಯದಲ್ಲಿಯೇ ಕಾನೂನು ಬದ್ದವಾಗಿ ತೀರ್ಮಾನ ಮಾಡಲಾಗುತ್ತದೆ.

ಈ ರೀತಿ ರಾಜಿ ಮಾಡಿಕೊಂಡ ಪ್ರಕರಣಗಳು ನ್ಯಾಯಯುತವಾಗಿ ಮತ್ತು ಕಾನೂನು ಬದ್ಧವಾಗಿದ್ದರೆ ಮಾತ್ರ ಲೋಕ್ ಅದಾಲತ್‍ನಲ್ಲಿ ಇತ್ಯರ್ಥ ಮಾಡುತ್ತಾರೆ. ಲೋಕ್ ಅದಾಲತ್‍ನಲ್ಲಿ ಮಾಡುವ ಅವಾರ್ಡ್ ಕಾನೂನುಬದ್ಧವಾಗಿರುತ್ತದೆ ಮತ್ತು ನ್ಯಾಯಾಲಯದಲ್ಲಿ ತೀರ್ಮಾನವಾದ ಪ್ರಕರಣಗಳಂತೆ ಅದರ ತೀರ್ಪನ್ನು ಜಾರಿಗೊಳಿಸಬಹುದು.

ಕೋವಿಡ್-19ರ ಮೊದಲನೆ ಮತ್ತು ಎರಡನೇ ಅಲೆಯ ಹೊಡೆತಕ್ಕೆ ಸಿಲುಕಿ ಈಗಾಗಲೆ ಪಕ್ಷಗಾರರು ಮತ್ತು ವಕೀಲರು ಸಾಕಷ್ಟು ಸಂಕಷ್ಟ ಅನುಭವಿಸಿದ್ದಾರೆÉ. ಅಲ್ಲದೇ ಇತ್ತೀಚಿನ ಅತೀವೃಷ್ಠಿಯಿಂದ ರೈತರು ಹಾಗೂ ಸಾಮಾನ್ಯ ಜನರು ಬೆಳೆ ಹಾಗೂ ಆಸ್ತಿ-ಪಾಸ್ತಿ ಅನುಭವಿಸಿದ್ದು ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುತ್ತಾರೆ.

ಇಂತಹ ಸಂದರ್ಭದಲ್ಲಿ ಹಾಗೂ ಆದಾಯ ಕಡಿಮೆ ಇರುವಂತಹ ಪರಿಸ್ಥಿತಿಯಲ್ಲಿ ತಮ್ಮ ವ್ಯಾಜ್ಯಗಳನ್ನು ಲೋಕ್‍ಅದಾಲತ್ ಮೂಲಕ ಇತ್ಯರ್ಥಪಡಿಸಿಕೊಂಡರೆ ಕಕ್ಷಿದಾರರಿಗೆ ಮತ್ತು ವಕೀಲರಿಗೆ ಹೆಚ್ಚನ ಅನುಕೂಲವಾಗುತ್ತದೆ. ಅದಾಲತ್‍ನಲ್ಲಿ ರಾಜಿ ಮೂಲಕ ಇತ್ಯರ್ಥ ಪಡಿಸಿಕೊಳ್ಳುವ ಪ್ರಕರಣಗಳ ಸಂಪೂರ್ಣ ಶುಲ್ಕವನ್ನು ನ್ಯಾಯಾಲಯವು ಮರುಪಾವತಿ ಮಾಡುತ್ತದೆ. ವ್ಯಾಜ್ಯಪೂರ್ವ ಪ್ರಕರಣಗಳಿಗೆ ನ್ಯಾಯಾಲಯ ಶುಲ್ಕ ಕೊಡಬೇಕಾಗಿಲ್ಲ.

ಅದಾಲತ್‍ನಲ್ಲಿ ಇತ್ಯರ್ಥ ಮಾಡಿಕೊಂಡ ಪ್ರಕರಣಗಳಿಗೆ ಯಾವುದೇ ಮೆಲ್ಮನವಿ ಹಾಗೂ ರಿವಿಜನ್ ಇರುವುದಿಲ್ಲ. ಮತ್ತು ಇದರಲ್ಲಿ ಆದ ತೀರ್ಮಾನವೆ ಅಂತಿಮ ತೀರ್ಮಾನವಾಗಿರುತ್ತದೆ. ಮತ್ತು ಪಕ್ಷಗಾರರು ಉಭಯತ್ರರು ಒಪ್ಪಿ ರಾಜಿ ಮಾಡಿಕೊಳ್ಳುವುದರಿಂದ ಅವರ ಮಧ್ಯೆ ಸೌಹಾರ್ದತೆ ಹೆಚ್ಚುತ್ತದೆ ಹಾಗೂ ವಿವಾದಗಳು ಕಡಿಮೆಯಾಗುತ್ತದೆ ಇದು ಉತ್ತಮ ಸಮಾಜ ನಿರ್ಮಾಣ ಮಾಡಲು ತುಂಬಾ ಸಹಕಾರಿಯಾಗುತ್ತದೆ.

ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಇಮೇಲ್ dlsadavanagere@gmail.com ಮೂಲಕ ಮತ್ತು ದೂರವಾಣಿ ಸಂಖ್ಯೆ- 08192-296364, 9481167005 ಮೂಲಕ ಜಿಲ್ಲೆಯ ಕಾನೂನು ಸೇವೆಗಳ ಪ್ರಾಧಿಕಾರದ ಕಛೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಧಾನ ಜಿಲ್ಲಾ ಸತ್ರ ನ್ಯಾಯಾಧೀಶರಾದ ಗೀತಾ.ಕೆ.ಬಿ ತಿಳಿಸಿದರು.

ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಪ್ರವೀಣ್ ನಾಯಕ್, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಡಿ.ಪಿ. ಬಸವರಾಜು ಸೇರಿದಂತೆ ವಿವಿಧ ವಕೀಲರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಹೊಳಲ್ಕೆರೆ | ಸ್ಪೀಚ್ ಸಂಸ್ಥೆ ಸಂಸ್ಥಾಪಕ ಹೆಚ್.ರಾಮಚಂದ್ರಪ್ಪ ನಿಧನ ; ಇಂದು ಅಂತ್ಯಕ್ರಿಯೆ

Published

on

ಸುದ್ದಿದಿನ,ಚಿತ್ರದುರ್ಗ:ಜಿಲ್ಲೆಯ ಬ್ಯಾಂಕ್ ಕಾಲೋನಿಯ ಸ್ಪೀಚ್ ಸಂಸ್ಥೆಯ ಸಂಸ್ಥಾಪಕರು ಹಾಗೂ ಎರಡು ಅವಧಿಗೆ ಹೊಳಲ್ಕೆರೆ ತಾಲ್ಲೂಕಿನ ಅರೇಹಳ್ಳಿ ಗ್ರಾಮ ಪಂಚಾಯತ್ ಸದಸ್ಯರಾಗಿದ್ದ ಹೆಚ್.ರಾಮಚಂದ್ರಪ್ಪ (59 ವರ್ಷ) ಶನಿವಾರ ಬೆಳಗ್ಗೆ 10:35 ಕ್ಕೆ ಅನಾರೋಗ್ಯದಿಂದ ನಿಧನರಾದರು.

ಮೃತರು ಪತ್ನಿ, ಸಹೋದರ, ಸಹೋದರಿಯರು ಸೇರಿದಂತೆ ಅಪಾರ ಬಂದು ಮಿತ್ರರನ್ನು ಅಗಲಿದ್ದಾರೆ. ಇವರ ಅಂತ್ಯ ಕ್ರಿಯೆಯನ್ನು ಹೊಳಲ್ಕೆರೆ ಸಮೀಪದ ನೆಹರು ಕಾಲೋನಿಯ ಜಮೀನಿನಲ್ಲಿ ಇಂದು (ಭಾನುವಾರ, ಜೂನ್ 07 ರಂದು ಮಧ್ಯಾಹ್ನ  2 ಗಂಟೆಗೆ) ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ. ಸಂಪರ್ಕ ಮೊಬೈಲ್ ಸಂಖ್ಯೆ : 9740114246

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಆಶ್ರಯ ಯೋಜನೆ – ಆವಧಿ ವಿಸ್ತರಣೆ

Published

on

ಸುದ್ದಿದಿನ,ದಾವಣಗೆರೆ : 2025-26 ನೇ ಸಾಲಿನ ಪ್ರಧಾನ ಮಂತ್ರಿ ಆವಾಸ್ (ನಗರ) 2.0 ಯೋಜನೆಯಡಿ ನಿವೇಶನ ಮತ್ತು ವಸತಿ ರಹಿತ ಫಲಾನುಭವಿಗಳ ಅರ್ಜಿಗಳನ್ನು ಸಲ್ಲಿಸಲು ಜೂನ್‌ 30 ರವರೆಗೆ ಅವಧಿಯನ್ನು ವಿಸ್ತರಿಸಲಾಗಿದೆ.

ದಾವಣಗೆರೆ ಮಹಾ ನಗರಪಾಲಿಕೆ ವ್ಯಾಪ್ತಿಯಲ್ಲಿನ ಅರ್ಹ ನಿವೇಶನ ಹಾಗೂ ವಸತಿ ರಹಿತ ಅಂಗವಿಕಲರು, ಹಿರಿಯ ನಾಗರಿಕರು, ಒಂಟಿ ಮಹಿಳೆಯರು, ಪರಿಶಿಷ್ಟ ಜಾತಿ ಮತ್ತು ಪಂಗಡದವರು, ಹಿಂದುಳಿದ, ಅಲ್ಪಸಂಖ್ಯಾತ ವರ್ಗದವರು, ತೃತೀಯ ಲಿಂಗಿಗಳು, ಸ್ವಚ್ಛತಾ ಕಾರ್ಮಿಕರು, PM SVanidhi (ಪಿ ಎಂ -ಸ್ವ ನಿಧಿ )ಯೋಜನೆಯಡಿ ಗುರುತಿಸಲ್ಪಟ್ಟ ಬೀದಿ ವ್ಯಾಪಾರಿಗಳು ಮತ್ತು ಪ್ರಧಾನ ಮಂತ್ರಿ ವಿಶ್ವ ಕರ್ಮ ಯೋಜನೆಯಡಿ ಗುರುತಿಸಿದ ಕುಶಲ ಕರ್ಮಿಗಳು, ಅಂಗನವಾಡಿ ಕಾರ್ಯಕರ್ತರು, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಹಾಗೂ ವಲಸೆ ಬಂದ ಕುಟುಂಬದವರು ಅಗತ್ಯ ದಾಖಲೆಗಳೊಂದಿಗೆ ತಮ್ಮ ಅರ್ಜಿಗಳನ್ನು http://pmayurban.gov.in ಆನ್ಲೈನ್ ವೆಬ್ ಸೈಟ್ ನಲ್ಲಿ ಸಲ್ಲಿಸಬಹುದು ಅಥವಾ ಖುದ್ದಾಗಿ ಮಹಾನಗರ ಪಾಲಿಕೆಯ ಆಶ್ರಯ ಶಾಖೆಗೆ ಭೇಟಿ ನೀಡಿ ಮಾಹಿತಿಯನ್ನು ಪಡೆದು ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸಬಹುದು ಎಂದು ದಾವಣಗೆರೆ ಮಹಾನಗರ ಪಾಲಿಕೆ ಆಯುಕ್ತರಾದ ಡಾ.ಮಹಾಂತೇಶ್‌ ಅವರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಗರಿಕೆ ಹುಲ್ಲಿನ ಜ್ಯೂಸ್‌ನಲ್ಲಿದೆ ರಕ್ತದ ಕ್ಯಾನ್ಸರ್ ಗುಣಪಡಿಸುವ ಶಕ್ತಿ

Published

on

ಗಿರೀಶ್ ಮುತ್ತು

ಗರಿಕೆ ಹುಲ್ಲಿನ ರಸದ ಸೇವನೆಯಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಸಿನೊಡಾನ್ ಡ್ಯಾಕ್ಟಿಲಾನ್ ಪ್ರೊಟೀನ್ ಎಂಬ ಅಂಶವಿದ್ದು, ಇದು ರೋಗನಿರೋಧಕ ಶಕ್ತಿ ಹೆಚ್ಚಲು ಸಹಾಯ ಮಾಡುತ್ತದೆ. ಇದು ಜ್ವರದಂತಹ ಸಮಸ್ಯೆಗಳ ನಿವಾರಣೆಗೆ ಸಹಾಯ ಮಾಡುತ್ತದೆ. ಹಾಗಾಗೊ ವಾರಕೊಮ್ಮೆ ಅಥವಾ ಹದಿನೈದು ದಿನಕ್ಕೊಮ್ಮೆ ಗರಿಕೆ ಹುಲ್ಲಿನ ರಸ ಅಥವಾ ಕಷಾಯದ ಸೇವನೆ ಮಾಡಬೇಕು

ನಾವು ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಹಲವಾರು ರೀತಿಯ ವ್ಯಾಯಾಮ ಮತ್ತು ಡಯಟ್ ಮಾಡುತ್ತೇವೆ. ಈ ಮಳೆಗಾಲದಲ್ಲಿ ಅನೇಕ ಜನರು ಆರೋಗ್ಯ ಸಮಸ್ಯೆಗಳಿಂದ ದೂರವಿರಲು ಹಲವು ಬಗೆಯ ಜ್ಯೂಸ್ ಕುಡಿಯುತ್ತಾರೆ. ಹಣ್ಣು, ತರಕಾರಿ ರಸ ಕುಡಿದು ಆರೋಗ್ಯವಾಗಿರಲು ಪ್ರಯತ್ನಿಸುತ್ತಾರೆ. ಆದರೆ ಈ ಒಂದು ಜ್ಯೂಸ್ ಅನ್ನು ನೀವು ಕುಡಿದರೆ ನಿಮ್ಮತ್ತ ಕಾಯಿಲೆಗಳು ಸುಳಿಯುವುದೇ ಇಲ್ಲ. ಅದುವೇ ಗರಿಕೆ ಹುಲ್ಲುನ ಜ್ಯೂಸ್.

ಹೌದು… ಆಯುರ್ವೇದ ವೈದ್ಯರು ಈ ಮೂಲಿಕೆಯು ಆರೋಗ್ಯಕ್ಕೆ ಹಲವು ವಿಧಗಳಲ್ಲಿ ಪ್ರಯೋಜನಕಾರಿಯಾಗಿದೆ ಎನ್ನುತ್ತಾರೆ. ಇದನ್ನು ಸೇವಿಸುವುದರಿಂದ ದೇಹದಲ್ಲಿನ ಕ್ಯಾನ್ಸರ್ ಪ್ರಮಾಣವನ್ನು ಕಡಿಮೆ ಮಾಡಬಹುದು. ಅಲ್ಲದೆ ಈ ಹುಲ್ಲಿನ ರಸವನ್ನು ಕುಡಿಯುವುದರಿಂದ ರಕ್ತದಲ್ಲಿರುವ ಕ್ಯಾನ್ಸರ್ ಕೋಶಗಳು ಕಡಿಮೆಯಾಗುವುದು ಮಾತ್ರವಲ್ಲದೆ ರಕ್ತ ಶುದ್ಧವಾಗಿರುತ್ತದೆ.

ಈ ಗರಿಕೆ ಹುಲ್ಲಿನಲ್ಲಿ ವಿಟಮಿನ್ ಎ, ಕೆ, ಸಿ ಮತ್ತು ವಿಟಮಿನ್ ಇ ಗಳು ಸಮೃದ್ಧವಾಗಿದೆ. ಇದು ರಕ್ತವನ್ನು ಶುದ್ಧೀಕರಿಸುತ್ತದೆ ಮತ್ತು ರಕ್ತದೊತ್ತಡ, ರಕ್ತಹೀನತೆ ಮತ್ತು ರಕ್ತ ಸಂಬಂಧಿತ ಕಾಯಿಲೆಗಳನ್ನು ಗುಣಪಡಿಸುತ್ತದೆ. ಹಾಗಾದರೆ ಗರಿಕೆ ಹುಲ್ಲಿನ ಜ್ಯೂಸ್‌ನ ಇತರ ಆರೋಗ್ಯಕರ ಪ್ರಯೋಜನಗಳ ಬಗ್ಗೆ ತಿಳಿಯೋಣ.

ಗರಿಕೆ ರಸದ ಪ್ರಯೋಜನಗಳು

1. ಈ ಗರಿಕೆ ಹುಲ್ಲಿನ ಜ್ಯೂಸ್ ಎಲ್ಲಿಯೂ ಸಿಗುವುದಿಲ್ಲ. ಕೆಲವೆಡೆ ಮಾತ್ರ ಸಿಗುತ್ತದೆ. ಬೇರು ಮತ್ತು ಎಲೆಗಳು ಸೇರಿದಂತೆ ಗರಿಕೆ ಎಲ್ಲಾ ಭಾಗಗಳು ಔಷಧೀಯ ಗುಣಗಳನ್ನು ಹೊಂದಿದೆ. ಇದು ಕೆಲವು ಹಾನಿಕಾರಕ ವ್ಯಾಕ್ಸಿನಿಯಾ ವೈರಸ್ ಎಂಬ ಸೂಕ್ಷ್ಮಜೀವಿಯನ್ನು ನಾಶಪಡಿಸುವ ಗುಣವನ್ನು ಹೊಂದಿದೆ. ಹೀಗಾಗಿ ಈ ಜ್ಯೂಸ್ ಕುಡಿಯುವವರೂ ಇದು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎನ್ನುತ್ತಾರೆ.

2. ಮೂತ್ರಕೋಶದ ಕಲ್ಲುಗಳು, ದೇಹದ ಊತ, ಮಕ್ಕಳಲ್ಲಿ ದೀರ್ಘಕಾಲದ ನೆಗಡಿ, ಮೂಗು ಸೋರುವಿಕೆ, ನೆಗಡಿ, ಅತಿಸಾರ, ಕಣ್ಣಿನ ದೋಷಗಳು, ಮೆದುಳಿನ ರಕ್ತಸ್ರಾವದಂತಹ ಕಾಯಿಲೆಗಳಿಗೆ ಈ ರಸ ತುಂಬಾ ಒಳ್ಳೆಯದು.
3. ಅಲ್ಲದೆ ತೂಕ ನಷ್ಟ, ಕೊಲೆಸ್ಟ್ರಾಲ್ ಕಡಿತ, ನರರೋಗ, ರಕ್ತದ ಕ್ಯಾನ್ಸರ್ ಚಿಕಿತ್ಸೆ, ಕೆಮ್ಮು, ಹೊಟ್ಟೆ ನೋವು, ರಕ್ತಹೀನತೆ, ಸಂಧಿವಾತ, ಹೃದಯ ಅಸ್ವಸ್ಥತೆ, ಚರ್ಮ ರೋಗಗಳು ಇತ್ಯಾದಿಗಳಿಗೆ ಅತ್ಯುತ್ತಮ ಔಷಧವಾಗಿ ಕಾರ್ಯನಿರ್ವಹಿಸುತ್ತದೆ

4. ರಕ್ತದಲ್ಲಿನ ಹಿಮೋಗ್ಲೋಬಿನ್ ಮಟ್ಟವನ್ನು ಹೆಚ್ಚಿಸಲು ಮತ್ತು ರಕ್ತದಿಂದ ವಿಷವನ್ನು ತೆಗೆದುಹಾಕುವಲ್ಲಿ ಗರಿಕೆ ರಸವು ಪರಿಣಾಮಕಾರಿಯಾಗಿದೆ.

5. ಗರಿಕೆ ಹುಲ್ಲಿನ ರಸ ಮತ್ತು ಕೊಬ್ಬರಿ ಎಣ್ಣೆಯನ್ನು ಸಮಪ್ರಮಾಣದಲ್ಲಿ ಬೆರೆಸಿ ಕುದಿಸಬೇಕು.. ನಂತರ ಚರ್ಮರೋಗಗಳಾದ ರಿಂಗ್‌ವರ್ಮ್ ಮತ್ತು ಒಣ ಚರ್ಮವನ್ನು ತ್ವರಿತವಾಗಿ ಗುಣ ಪಡಿಸುತ್ತದೆ.

6. ಗರಿಕೆ ಹುಲ್ಲು ಬೇಕಾದಷ್ಟು ಸಂಗ್ರಹಿಸಿ, ಸ್ವಲ್ಪ ಅರಿಶಿನವನ್ನು ಸೇರಿಸಿ ಪೇಸ್ಟ್ ಮಾಡಿ ದೇಹಕ್ಕೆ ಉಜ್ಜಿಕೊಂಡರೆ, ಒಂದು ಗಂಟೆ ಬಿಟ್ಟು ನಂತರ ಸ್ನಾನ ಮಾಡಿ. ಇದರಿಂದ ದೇಹದ ತುರಿಕೆ ನಿವಾರಣೆಯಾಗುತ್ತದೆ.

ಗರಿಕೆ ಹುಲ್ಲಿನ ರಸ ತಯಾರಿಸುವುದು ಹೇಗೆ?

*ತಾಜಾ ಗರಿಕೆ ಹುಲ್ಲು ಒಂದು ಹಿಡಿಯಷ್ಟು ತೆಗೆದುಕೊಂಡು ಸ್ವಚ್ಚವಾಗಿ ತೊಳೆದುಕೊಳ್ಳಿ.

* ಬಳಿಕ ಇದನ್ನು ಸಣ್ಣ ಸಣ್ಣ ತುಂಡುಗಳನ್ನಾಗಿ ಕತ್ತರಿಸಿಕೊಳ್ಳಿ.

* ಬಳಿಕ ಇದನ್ನು ಮಿಕ್ಸಿಗೆ ಹಾಕಿ ರುಬ್ಬಿಕೊಳ್ಳಬೇಕು.

* ಚೆನ್ನಾಗಿ ಪೇಸ್ಟ್ ಆದ ಬಳಿಕ ಇದನ್ನು ಸೋಸಿಕೊಳ್ಳಬೇಕು.

* ಬಳಿಕ ಇದನ್ನು ಕುಡಿಯಬೇಕು. ಆದರೆ ಇದು ತಕ್ಷಣದ ಮನೆಮದ್ದಾಗಿದೆ. ಆದರೆ ಯಾವುದೇ ಆರೋಗ್ಯ ಸಮಸ್ಯೆಗಳಿಗೆ ಇದು ಕೊನೆಯ ಮದ್ದು ಅಲ್ಲ. ಹೀಗಾಗಿ ಯಾವುದೇ ಆರೋಗ್ಯ ಸಮಸ್ಯೆಗಳು ಉಂಟಾದಾಗ ಮೊದಲು ವೈದ್ಯರನ್ನು ಸಂಪರ್ಕಿಸುವುದು ತುಂಬಾ ಅವಶ್ಯಕ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

Trending