Connect with us

ದಿನದ ಸುದ್ದಿ

ನ್ಯಾಯಮೂರ್ತಿ ಅರಳಿ ನಾಗರಾಜ್ ಸರ್ ರವರ ಚಿತ್ತ ಜಾಗೃತ ಭಾರತದತ್ತ..!

Published

on

  • ಕೆ.ಶ್ರೀಧರ್ (ಕೆ.ಸಿರಿ)

“ಸಮಾಜದ ಋಣ ತೀರಿಸಲು ಆದರ್ಶ ನಾಗರೀಕರಾಗೋಣ;” ಎಂಬ ಅದ್ಭುತ ಸಂದೇಶ ಸಾರುವ ವಿಶ್ರಾಂತ ನ್ಯಾಯಮೂರ್ತಿ ಅರಳಿ ನಾಗರಾಜ ಸರ್ ರವರು ಕಂಡ ಭವ್ಯ ಭಾರತದ ಕನಸು.

ನಿಜಕ್ಕೂ ನಮ್ಮಂತಹ ಯುವಕರನ್ನು ಕೂಡಾ ನಾಚಿಸುವಂತದ್ದು “ದೇಶದ ಚಿತ್ತ ಯುವಜನರತ್ತ” ಎಂಬ ಪುಸ್ತಕವನ್ನು ಶ್ರೀಯುತ ಅರಳಿ ನಾಗರಾಜ ಸರ್ ರವರು ದಿನಾಂಕ 21/08/20201 ರಂದು ನಮ್ಮ ಮನೆಗೆ ಬಂದಾಗ ಶುಭಾಶಯಗಳೊಂದಿಗೆ ನೀಡಿದ್ದರು ಪುಸ್ತಕದ ಶೀರ್ಷಿಕೆಯೇ ಹೇಳುವಂತೆ ದೇಶದ ಯುವ ಸಮುದಾಯಕ್ಕೆ ಸ್ಪಷ್ಟವಾದ ಸಂದೇಶ ನೀಡಿವ ಪುಸ್ತಕವಿದು.

ಯಶಸ್ಸಿನೆಡೆಗೆ ನಮ್ಮ ನಡಿಗೆ ಇಂದ ಆರಂಭವಾಗುವ ಈ ಪುಸ್ತಕ ನಮಗೆ ಆದರ್ಶ ಯಾರು? ಎಂಬ ಉಪ ಶೀರ್ಷಿಕೆಯೊಂದಿಗೆ ಮುಕ್ತಾಯವಾಗುತ್ತದೆ. ಬದುಕು ಎಂದರೆ ಬರಿ ಬದುಕುವುದಲ್ಲ ಸ್ಪಷ್ಟ ಗುರಿ, ಸಾಧಿಸುವ ಛಲ,ಕಠಿಣ ಪರಿಶ್ರಮ, ನಿರಂತರ ಅಭ್ಯಾಸ, ಅಚಲವಾದ ಆತ್ಮವಿಶ್ವಾಸ,ಸಮಯದ ಸಾರ್ಥಕ ಬಳಕೆ ಈ ಸಪ್ತ ಸೂತ್ರಗಳು ಮಾತ್ರ ಗೆಲುವು ತಂದುಕೊಡಲು ಸಾಧ್ಯ.

ಡಾ.ಎ.ಪಿ.ಜೆ ಅಬ್ದುಲ್ ಕಲಾಂ ರವರು ಹೇಳುವಂತೆ ಸೆಳೆತಗಳನ್ನು ಮೀರಿ ನಿಲ್ಲುವ ವ್ಯಕ್ತಿ ಮಾತ್ರ ಗುರಿಯನ್ನು ಸಾಧಿಸಬಲ್ಲ, ದೌರ್ಬಲ್ಯಗಳನ್ನು ಮೀರುವವರೆಗೂ ವ್ಯಕ್ತಿ ಪ್ರಬಲನಾಗುವುದಿಲ್ಲ. ಈ ಮಾತು ಅಕ್ಷರಶಃ ಸತ್ಯ ಯಾವುದೋ ಒಂದು ಸೆಳೆತಕ್ಕೆ ನಾವು ಒಳಗಾದರೆ ಬಂಧನಕ್ಕೊಳಗಾದಂತೆ.

ಪರಿಶ್ರಮ ಮೆಟ್ಟಿಲಿಂತೆ ಅದೃಷ್ಟ ಲಿಪ್ಟಿನಂತೆ ಲಿಫ್ಟ್ (ಅದೃಷ್ಟ) ಕೈಕೊಡಬಹುದು ಆದರೆ ಪರಿಶ್ರಮ (ಮೆಟ್ಟಿಲು) ಎಂದಿಗೂ ಕೈ ಕೊಡದು ತಾವು ಬದುಕಿದ ಆಧಾರದ ಮೇಲೆ ಶ್ರೀಯುತರು ಹೇಳಿದ್ದಾರೆ. ಬಸವಣ್ಣನವರ ವಚನಗಳ ಮೂಲಕ ಶರಣರ ತತ್ವಗಳನ್ನು ಪ್ರತಿಪಾದಿಸುವ ಮೂಲಕ ನಮ್ಮಲ್ಲಿರುವ ಸೋಮಾರಿತನವನ್ನು ಬಡಿದೆಬ್ಬಿಸುವಂತಿವೆ ಒಂದೊಂದು ಸಾಲುಗಳು.

ಯಶಸ್ಸಿನೆಡೆಗೆ ನಮ್ಮ ನಡಿಗೆ ಹಾಗೂ ವ್ಯಕ್ತಿತ್ವ ವಿಕಸನ ಮತ್ತು ಸಂವಹನ ಕೌಶಲ್ಯದಲ್ಲಿ ಸಕಾರಾತ್ಮಕ ಗುಣವಿಶೇಷಗಳು ಹಾಗೂ ನಕಾರಾತ್ಮಕ ಗುಣವಿಶೇಷಗಳು ಎರಡನ್ನೂ ತಮ್ಮದೇ ಆದ ದೃಷ್ಟಿಕೋನದಲ್ಲಿ ಚಿಂತಿಸಿದ ವಿವಿಧ ಮಜಲುಗಳನ್ನು ಓದುತ್ತಾ ಕುಳಿತರೆ ಶ್ರೀಯುತರ ಶಿಕ್ಷಣ ತಜ್ಞರಂತೆ ಕಾಣುತ್ತಾರೆ ನಿಜಕ್ಕೂ ಈ ಎಲ್ಲಾ ಅಂಶಗಳನ್ನು ನಾವು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಹಾಗೂ ಮಕ್ಕಳ ಮನಸ್ಸಿನಲ್ಲಿಇಂತಹ ಗುಣಗಳನ್ನು ಬಿತ್ತಬೇಕು.

ಮುಂದುವರೆದು ಹೇಳುತ್ತಾ ಬರಿ ಅಂಶಗಳಿದ್ದರೆ ಸಾಲದು ಸಂವಹನ ಕೌಶಲ್ಯವೂ ಮುಖ್ಯ. ಕರ್ನಾಟಕದ ಉಚ್ಛ ನ್ಯಾಯಾಲಯದ ನ್ಯಾಯಾಧೀಶರಾಗಿ 62 ವರ್ಷ ಪೂರ್ಣಗೊಂಡ ನಂತರ ನಿವೃತ್ತನಾಗಬೇಕಿತ್ತು ಆದರೆ 61 ವರ್ಷ ಮುಗಿಯಲು ಒಂದೆರಡು ತಿಂಗಳು ಇರುವಾಗಲೆ ಸ್ವಯಂ ನಿವೃತ್ತಿ ಪಡೆದು ಅಂದಿನಿಂದಲೇ ರಾಜ್ಯಾದ್ಯಂತ ಸ್ವಂತ ಖರ್ಚಿನಲ್ಲಿ (ನನ್ನ ನಿವೃತ್ತಿ ವೇತನದಲ್ಲಿ) ಸಂಚರಿಸುತ್ತಾ ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿ ಯುವಜನರೊಂದಿಗೆ ಸಂವಾದಿಸುತ್ತಾ “ಯುವ ಜನರ ಚಿತ್ತವನ್ನು ದೇಶದತ್ತ ಹೊರಳಿಸುವ ಪ್ರಯತ್ನದಲ್ಲಿದ್ದೇನೆಂದು” ಮೃತ್ಯು ನಮ್ಮನ್ನಪ್ಪುವ ಮೊದಲೆ ಸಮಾಜದ ಋಣ ತೀರಿಸಬೇಕು ಎಂದು ಬರೆದಿರುವ ಶ್ರೀಯುತರ ಸಾಲುಗಳೇ ಹೇಳುತ್ತವೆ.

ಇವರ ಮನದಲ್ಲಿ ಜಾಗೃತ ಭಾರತವನ್ನು ಕಟ್ಟುವ ಇಂಗಿತವನ್ನು ಇದು ಕೇವಲ ಬರಹಕ್ಕೆ ಸೀಮಿತವಾಗದೆ ಕಾಲಿಗೆ ಚಕ್ರ ಕಟ್ಟಿಕೊಂಡಂತೆ ನಾಡಿನಾದ್ಯಂತ ಸಂಚರಿಸಿ ತಮ್ಮ 70 ರ ಹರೆಯದಲ್ಲೂ ಸಮಾಜಮುಖಿ ಕಾರ್ಯ ನಿರ್ವಹಿಸುತ್ತಿರುವ ನಿಮಗೆ ಸಾವಿರದ ಶರಣು ಸರ್ ನಿವೃತ್ತಿಯಾಗುವವರೆಗೂ ಸಂಬಳ ಪಡೆದು ನಿವೃತ್ತಿ ವೇತನ ಪಡೆದು ಮೊಮ್ಮಕ್ಕಳ ಜೊತೆ ಕಾಲ ಕಳೆದು ಇಹಲೋಕ ತ್ಯಜಿಸುವವರ ಮಧ್ಯೆ ದೇಶದ ಯುವ ಸಮುದಾಯವನ್ನು ದೇಶಕಟ್ಟಬೇಕೆಂದು ಹುರಿದುಂಬಿಸುವ ಈ ಧೈರ್ಯ ಎಲ್ಲರಲ್ಲಿಯೂ ಬರುವುದಿಲ್ಲ.

ಇತ್ತೀಚಿನ ದಿನಗಳಲ್ಲಿ ರಾಜಕಾರಣ ಮತ್ತು ಧರ್ಮ ರಾಜಕಾರಣ ಬಲು ಮುನ್ನಲೆಯಲ್ಲಿರುವ ವಿಷಯಗಳಾಗಿದ್ದು ಶ್ರೀಯುತರು ನಮ್ಮನ್ನ ಸ್ವಾತಂತ್ರ್ಯ ಪೂರ್ವ ಭಾರತದ ಸ್ಥಿತಿ ಗತಿಗಳು ಸ್ವಾತಂತ್ರ್ಯಾನಂತರದ ಭಾರತದ ಪರಿಸ್ಥಿತಿಯ ಬಗ್ಗೆ ಕನ್ನಡಿ ಹಿಡಿದಂತಿದೆ.

ಹಿಂದೆ ರಾಜಪ್ರಭುತ್ವದಲ್ಲಿ “ಯಥಾ ತಥಾ ಪ್ರಜಾ” ಎಂಬ ವಾಡಿಕೆಯಿತ್ತು ಆದರೆ ಅರಳಿ ನಾಗರಾಜ ಸರ್ ರವರ ಕನಸ್ಸಿನ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ “ಯಥಾ ಮತದಾರ ತಥಾ ಜನ ಪ್ರತಿನಿಧಿ” ಅಂದರೆ “ಮತದಾರರಂತೆ ಜನಪ್ರತಿನಿಧಿಗಳು” ನಮಗೆ ಆದರ್ಶಪ್ರಾಯರಾದ ಜನಪ್ರತಿನಿಧಿಗಳು ನಾಯಕರು ಬೇಕೆಂದಾದಲ್ಲಿ ಮೊದಲು ನಾವು ಆದರ್ಶಪ್ರಾಯ ನಾಗರೀಕರಾಗಬೇಕು.

ಅದರಲ್ಲೂ ಗ್ರಾಮ, ತಾಲ್ಲೂಕು, ಜಿಲ್ಲಾ, ರಾಜ್ಯ, ರಾಷ್ಟ್ರ ಆಡಳಿತ ನಡೆಸುವ ನಮ್ಮ ಜನಪ್ರತಿನಿಧಿಗಳು ‘ಎಂಥವರಾಗಬೇಕು?’ ಎಂಬುದನ್ನು ನಿರ್ಧರಿಸುವ ಅಂಶ ನಿಂತಿರುವುದು _”ಮತದಾನದ ಮಾರಾಟದಿಂದಲ್ಲ ನಮ್ಮ ಮತವನ್ನು ಮೌಲ್ಯಯುತ ದೇಶಾಭಿಮಾನದ ರಾಜಕಾರಣಿಗೆ ದಾನ ಮಾಡುವುರ”_ ನಿಂತಿದೆ.

ಸ್ವಾತಂತ್ರ್ಯ ಬಂದು 75 ದಶಕಗಳೆ ಕಳೆದರೂ ಭ್ರಷ್ಟಾಚಾರ, ಜಾತೀಯತೆ, ಅಪರಾಧ, ಅನೈತಿಕತೆ ಮುಂತಾದ ಅಪಮೌಲ್ಯಗಳೇ ಮೌಲ್ಯಗಳಾಗಿ ವಿಜೃಂಭಿಸುತ್ತಿವೆ ಎಂದು ತುಂಬಾ ನೋವಿನಿಂದ ಹೇಳಿದ್ದಾರೆ. ಎಲ್ಲಾ ಹಂತದ ಚುನಾವಣೆಗಳಲ್ಲೂ ಹಣಬಲ,ತೋಳ್ಬಲ,ಜಾತಿ ಬಲ,ಅಧಿಕವಾಗುತ್ತಾ ಬಂದು ಜನಪ್ರತಿನಿಧಿಗಳಾಗಲು ಯಾವುದೇ ಅರ್ಹತೆಗಳು ಇಲ್ಲದವರು ಕಾಳಧನ ಸಂಪತ್ತು ಹೊಂದಿರುವವರು ಜಾತಿವಾದಿಗಳು ಅಪರಾಧದ ಹಿನ್ನೆಲೆ ಇರುವವರು ಚುನಾಯಿತರಾಗುತ್ತಿರುವುದಕ್ಕೆ ದೇಶದಲ್ಲಿ ನೈತಿಕತೆ ಅಧಃಪತನಕ್ಕೆ ಹೋಗಿದೆ ಎಂಬ ನೋವಿನ ಸಂಗತಿಯನ್ನು ನೊಂದುಕೊಂಡು ಪುಸ್ತಕದಲ್ಲಿ ಬರೆದಿದ್ದಾರೆ.

ದೇಶಪ್ರೇಮಿ ಮತ್ತು ದೇಶದ್ರೋಹಿ ಇವರಿಬ್ಬರ ನಡುವಿನ ವ್ಯತ್ಯಾಸವನ್ನು ವಿಜಯ ಮಲ್ಯ ರವರ ಪ್ರಕರಣದ ಮೂಲಕ ವಾಸ್ತವತೆಯ ಕದ ತಟ್ಟಿದ್ದಾರೆ ಶ್ರೀಯುತ ಅರಳಿ ನಾಗರಾಜ್ ಸರ್ ನಮ್ಮ ದೇಶದ ಬ್ಯಾಂಕುಗಳಿಂದ ಹತ್ತು ಸಾವಿರ ಕೋಟಿ ರೂಪಾಯಿಗಳಿಗೂ ಅಧಿಕ ಸಾಲ ಪಡೆದು ಮರುಪಾವತಿ ಮಾಡುಲಾಗದೆ ವಂಚಿಸಿ ವಿದೇಶಕ್ಕೆ ಹಾರಿಹೋಗಿ ಆ ವಿದೇಶಿ ನ್ಯಾಯಾಲಯದಲ್ಲಿ ಆತ “ನನ್ನನ್ನು ಭಾರತಕ್ಕೆ ಒಪ್ಪಿಸಬೇಡಿ ಅಲ್ಲಿ ನನ್ನನ್ನು ಸುರಕ್ಷಿತವಾಗಿ ಇರಿಸುವ ಜೈಲು ಇಲ್ಲ” ಎಂಬುದಾಗಿ ಹೇಳಿಕೆ ಕೊಟ್ಟಂತಹ ಆ ವಿಜಯ ಮಲ್ಯ ಶ್ರೀಮತ ಉದ್ಯಮಿಯನ್ನು ನಮ್ಮ ಕರ್ನಾಟಕದ ಶಾಸಕರು ನಮ್ಮ ರಾಷ್ಟ್ರದ ಸಂಸತ್ತಿನ “ಹಿರಿಯರ ಮನೆ” ಆಗಿರುವ ರಾಜ್ಯಸಭೆಯ ಸದಸ್ಯನನ್ನಾಗಿ ಆರಿಸಿ ಕಳಿಸಿದ್ದರು.

ಆತನಲ್ಲಿ ವಾಮಮಾರ್ಗದಿಂದ ಸಂಪಾದಿಸಿದ ಸಂಪತ್ತು ಬಿಟ್ಟರೆ ಹೇಳಿಕೊಳ್ಳುವಂತಹ ಯಾವ ನೈತಿಕತೆ ಅವರಲ್ಲಿರಲಿಲ್ಲ. ಜವಾಬ್ದಾರಿ ಸ್ಥಾನಕ್ಕೆ ಜವಾಬ್ದಾರಿಕೆ ಹೊಂದಿದ್ದ ಶಾಸಕರಿಂದ ಆಯ್ಕೆಯಾದ ವ್ಯಕ್ತಿ ‘ದೇಶದ್ರೋಹಿ’ ಆಗುತ್ತಾನೆಂದರೆ ಇದು ನಮ್ಮ ದೇಶದ ದುರ್ದೈವ ಮತ್ತು ನಮ್ಮ ಪ್ರಜಾಪ್ರಭುತ್ವ ವ್ಯವಸ್ಥೆಯ ಅಪಹಾಸ್ಯ,ಅಣಕ ಎಂದು ಬಹು ನೋವಿನಿಂದ ನಮ್ಮ ನಿವೃತ್ತ ನ್ಯಾಯಮೂರ್ತಿಗಳು ಬರೆದಿದ್ದಾರೆ.

ತಮಗೆ ಹಕ್ಕಿಲ್ಲದಿದ್ದರೂ ಪಾಂಡವರ ಸಮಸ್ತ ರಾಜ್ಯಕ್ಕೂ ತಾನೇ ಒಡೆಯನಾಗಬೇಕೆಂಬ ದುರ್ವ್ಯಸನ ದುರ್ಯೋಧನಿಗೆ ಇದ್ದರೆ ದ್ಯೂತ (ಜೂಜು) ಆಡುವ ದುರ್ವ್ಯಸನ ಧರ್ಮರಾಯನಿಗೆ ಇದ್ದುದ್ದರಿಂದ ‘ಕುರುಕ್ಷೇತ್ರ’ ನಡೆಯಿತು‌.

ತಮ್ಮದೇಯಾದ ಕಾರಣಗಳಿಗಾಗಿ ದುರ್ಯೋಧನನಿಗೆ ಋಣಿಯಾದ್ದರಿಂದ ಭೀಷ್ಮ,ದ್ರೋಣರು,ಕೃಪಚಾರ್ಯರು, ಅಶ್ವತ್ಥಾಮ,ಕರ್ಣ ಅಧರ್ಮದ ಪರವಾಗಿ ಧರ್ಮದ ವಿರುದ್ಧವಾಗಿ ಕುರುಕ್ಷೇತ್ರ ಯುದ್ದದಲ್ಲಿ ಪಾಲ್ಗೊಂಡಿದ್ದರು ನಮ್ಮ ದೇಶದಲ್ಲಿ ಪ್ರಸ್ತುತ ರಾಜಕಾರಣದಲ್ಲೂ ನಡೆಯುತ್ತಿರುವುದು ಇದೇ ಎಂದು ಇಂಥವರೂ ಯುವಜನರನ್ನು ದಾರಿ ತಪ್ಪಿಸುತ್ತಿದ್ದಾರೆ ಎಂಬ ಆತಂಕವನ್ನು ಕುರುಕ್ಷೇತ್ರದ ಮೂಲಕ ವ್ಯಕ್ತಪಡಿಸಿದ್ದಾರೆ.

ಪ್ರಸ್ತುತ ರಾಜಕಾರಣದಲ್ಲಿ ರಾಜಕಾರಣಿಗಳಲ್ಲಿರುವ ಆಂಗ್ಲ ಭಾಷೆಯ ಮೂರು C ಗಳು ಅಂದರೆ 1-corruption
2-casteism
3crime

ಇವುಗಳನ್ನು ಬಿಟ್ಟು ಐದು C ಸೂತ್ರ ನೀಡಿದ್ದಾರೆ ನಮ್ಮ ನಿವೃತ್ತ ನ್ಯಾಯಮೂರ್ತಿಗಳು.
1-competency
2-charactesr
3-commitment
4-courage
5-compassion

ಈ ಐದು ಅಂಶಗಳು ಪ್ರಸ್ತುತ ರಾಜಕಾರಣದಲ್ಲಿ ಈ ಪುಸ್ತಕದ ಲೇಖಕರು ಹೇಳುವ ಹಾಗೆ ಹಗಲು ಹೊತ್ತಿನಲ್ಲಿ ಹೆಗಲ ಮೇಲೆ ದೀಪವಿಡಿದು ನೋಡಿದರೆ ಒಬ್ಬರೂ ಸಿಗುವುದಿಲ್ಲ.

ಒಬ್ಬ ಪೊಲೀಸ್ ಪೇದೆಯಾಗಲು ಕನಿಷ್ಠ ವಿದ್ಯಾರ್ಹತೆ ಬೇಕು, ದೈಹಿಕ ಸಾಮರ್ಥ್ಯ ಬೇಕು ಆದರೆ ಇಂಥ ಪೇದೇಯಾಗಲು ಅರ್ಹತೆ ಇಲ್ಲವೆಂದು ತಿರಸ್ಕೃತಗೊಂಡ ವ್ಯಕ್ತಿ ಚುನಾವಣೆಯಲ್ಲಿ ಆಯ್ಕೆಯಾಗಿ ಪೊಲೀಸ್ ಇಲಾಖೆಯನ್ನು ತನ್ನ ಹತೋಟಿಯಲ್ಲಿ ಇಟ್ಟುಕೊಳ್ಳುವ ‘ಗೃಹಮಂತ್ರಿ’ ಆಗಬಹುದು ಬರೆಯುತ್ತಾ ಹೋದರೆ ಇಂಥವರ ಪಟ್ಟಿ ಜಾಸ್ತಿಯಾಗುತ್ತದೆ ‘ಆಗಬಹುದು’ ಅಂದರೆ ಇಲ್ಲಿಯವರೆಗೆ ಆಗಿಲ್ಲ’ ಎಂದರ್ಥವಲ್ಲ ವ್ಯಕ್ತಿಗಳ ವಿವರಣೆ ಅಗತ್ಯವಿಲ್ಲ ಎಂದು ಹೇಳುವಲ್ಲಿ ಎಂತಹಾ ಕರಾಳ ಸತ್ಯ ಅಪಮೌಲ್ಯದ ವಿಜೃಂಭಣೆ ಇದೆ ಎಂದು ಓದುಗರು + ಭ್ರಷ್ಟ ಮತದಾರ ಪ್ರಭುಗಳಾದ ನಾವುಗಳು ಅರಿತುಕೊಳ್ಳಬೇಕು.

68 ವರ್ಷಗಳನ್ನು ಪೂರೈಸಿರುವ ನ್ಯಾಯಮೂರ್ತಿಗಳು ವಯಸ್ಕರಾಗಲು ಬೇಕಿದ್ದ 18 ವರ್ಷಗಳನ್ನು ಅದರಲ್ಲೇ ಕಳೆದರೆ “ನನ್ನ ದೇಶದ ದೇಶದ ಆಗು ಹೋಗುಗಳ ಸಂಬಂಧದ ನನ್ನ ಅನುಭವಕ್ಕೆ 50 ವರ್ಷಗಳ ವಯಸ್ಸಾಗಿದೆ” ಅಭಿವೃದ್ಧಿಯ ಮೌಲ್ಯಗಳಿಗಿಂತ ಅಪಮೌಲ್ಯಗಳೇ ಹೆಚ್ಚಿನ ವೇಗದಿಂದ ವೃದ್ದಿಯಾಗುತ್ತಾ ಬಂದಿದೆ ಎಂದು ಹೇಳುವಲ್ಲಿ ರಾಜಕೀಯ ಭ್ರಷ್ಟಾಚಾರ ಅನೈತಿಕತೆಯ ಕ್ರೂರತೆಯನ್ನು ತಮ್ಮ ಮನದ ನೋವನ್ನು ಈ ಪುಸ್ತಕದಲ್ಲಿ ಶ್ರೀಯುತ ನಿವೃತ್ತ ನ್ಯಾಯಮೂರ್ತಿಗಳು ವ್ಯಕ್ತಪಡಿಸಿದ್ದಾರೆ.

ಇಂತಹ ನೋವುಗಳನ್ನು ಹೇಳುತ್ತಲೆ ಲಾಲಾ ಲಜಪತ್ ರಾಯ್, ಬಾಲಗಂಗಾಧರ ತಿಲಕ್,ಬಿಪಿನ್ ಚಂದ್ರಪಾಲ್,ದಾದಾಬಾಯಿ ನವರೋಜಿ,ಮದನಮೋಹನ ಮಾಲವೀಯ, ಗೋಪಾಲಕೃಷ್ಣ ಗೋಖಲೆ, ಶ್ರಿ ಅರವಿಂದರು, ಮಹಾತ್ಮ ಗಾಂಧೀಜಿ,ಸರೋಜಿನಿ ನಾಯ್ಡು, ಗೋವಿಂದ ವಲ್ಲಭ ಪಂತ್, ಲಾಲ್ ಬಹದ್ದೂರ್ ಶಾಸ್ತ್ರಿ ವೀರ ಸಾವಕರ, ಸುಭಾಷ್ ಚಂದ್ರ ಬೋಸ್, ಚಂದ್ರಶೇಖರ ಅಜಾದ್, ಹುತಾತ್ಮ ಭಗತ್ ಸಿಂಗ್, ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರಂತವರು ಯುವ ಜನತೆಗೆ ಆದರ್ಶರಾಗಬೇಕೆಂದು “ದೇಶದ ಚಿತ್ತ ಯುವಜನರತ್ತ ಎಂಬ ಪುಸ್ತಕದ ಮೂಲಕ ಜಾಗೃತ ಭಾರತಕ್ಕೆ ಕರೆ ನೀಡಿ ಅವಿರತವಾಗಿ ಶ್ರಮಿಸುತ್ತಿರುವ ನಿವೃತ್ತ ನ್ಯಾಯಮೂರ್ತಿಗಳಾದ ಅರಳಿ ನಾಗರಾಜ ಸರ್ ರವರ ಈ ಕಾರ್ಯವನ್ನು ಸರ್ಕಾರವು ಪರಿಗಣಿಸಿ ಒಂದು ಜಾಗೃತ ಭಾರತಕ್ಕೆ ಶ್ರೀಯುತ ನಿವೃತ್ತ ನ್ಯಾಯಮೂರ್ತಿಗಳಾದ ಅರಳಿ ನಾಗರಾಜ್ ಸರ್ ರವರ ಕನಸ್ಸನ್ನು ಸಾಕಾರಗೊಳಿಸಲು ಗಮನಹರಿಸಬೇಕು ನಮ್ಮಂತಹ ಯುವ ಸಮುದಾಯ ಈ ಪುಸ್ತಕವನ್ನು ಓದಿದರೆ ದೇಶದ ಆಡಳಿತ ವ್ಯವಸ್ಥೆಯಲ್ಲಿ ಗಣನೀಯ ಬದಲಾವಣೆಯಾಗಿ ಯುವ ಜನತೆಯ ಚಿತ್ತ ಸದಾ ದೇಶತ್ತ ಸೆಳೆಯಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಗೃಹ ಜ್ಯೋತಿ ಯೋಜನೆಗೆ 3 ವರ್ಷಗಳ ಸಂಭ್ರಮ – 1.65 ಕೋಟಿ ಕುಟುಂಬಗಳ ಬದುಕಿಗೆ ಬೆಳಕು!

Published

on

ಆಗಸ್ಟ್ 2023 ರಿಂದ ಜುಲೈ 2026 ರವರೆಗೆ ₹28,759 ಕೋಟಿ ಸಬ್ಸಿಡಿ ಬಿಡುಗಡೆ; ಪ್ರತಿ ತಿಂಗಳು 200 ಯೂನಿಟ್ ಉಚಿತ ವಿದ್ಯುತ್‌ನಿಂದ ಕೋಟ್ಯಂತರ ಕುಟುಂಬಗಳ ಆರ್ಥಿಕ ಸಬಲೀಕರಣ

ಸುದ್ದಿದಿನ, ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆ ತನ್ನ 3 ವರ್ಷಗಳ ಸಾರ್ಥಕ ಪಯಣವನ್ನು ಪೂರ್ಣಗೊಳಿಸಿದೆ. `ಕುಟುಂಬಗಳ ಆರ್ಥಿಕ ಸಬಲೀಕರಣಕ್ಕೆ ಸಹಕಾರ’ ಎಂಬ ಧ್ಯೇಯದೊಂದಿಗೆ ಆರಂಭವಾದ ಈ ಯೋಜನೆ ಇಂದು ಕೋಟ್ಯಂತರ ಕುಟುಂಬಗಳ ಬದುಕಿಗೆ ಬೆಳಕಾಗಿದೆ.

ಹೌದು! 2023ರ ಆಗಸ್ಟ್‌ನಲ್ಲಿ ಜಾರಿಗೆ ಬಂದ ಈ ಯೋಜನೆಯಡಿ ರಾಜ್ಯದ ಪ್ರತಿಯೊಂದು ಕುಟುಂಬಕ್ಕೂ ಪ್ರತಿ ತಿಂಗಳು 200 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದ್ದು, ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಮಾಸಿಕ ಬಜೆಟ್‌ಗೆ ದೊಡ್ಡ ಆಸರೆಯಾಗಿದೆ ಎಂದೇ ಹೇಳಬಹುದು.

http://Visit : www.suddidina.com

ಗೃಹಜ್ಯೋತಿ ಯೋಜನೆಯ ಸಾಧನೆಯ ಗಿರಿ: 

ಇಂಧನ ಇಲಾಖೆ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ, ರಾಜ್ಯದ್ಯಂತ ಬರೋಬ್ಬರಿ 1.65 ಕೋಟಿ. ಫಲಾನುಭವಿಗಳು ಕುಟುಂಬಗಳು ಯೋಜನೆಯ ಪ್ರಯೋಜನ ಪಡೆದುಕೊಳ್ಳುತ್ತಿದ್ದರೆ, ಸೇವಾಸಿಂಧು ಪೋರ್ಟಲ್‌ನಲ್ಲಿ ಒಟ್ಟು 1,76,69,368 ಜನರು ನೋಂದಾಯಿಸಿಕೊಂಡಿದ್ದರೆ. ಒಟ್ಟು 2,06,65,451 ಗೃಹಬಳಕೆ ವಿದ್ಯುತ್ ಗ್ರಾಹಕರಿದ್ದಾರೆ. ಅಂದರೆ ಶೇ.85ಕ್ಕಿಂತ ಹೆಚ್ಚು ಗ್ರಾಹಕರು ಈ ಯೋಜನೆಯಡಿ ನೋಂದಾಯಿಸಿಕೊಂಡು ಲಾಭ ಪಡೆಯುತ್ತಿದ್ದಾರೆ.

ಆರ್ಥಿಕವಾಗಿ ನೋಡುವುದಾದರೆ, 2023ರ ಆಗಸ್ಟ್‌ನಿಂದ 2026ರ ಜುಲೈ ವರೆಗೆ, ಕಳೆದ ಮೂರು ವರ್ಷಗಳಲ್ಲಿ ಸರ್ಕಾರವು ಫಲಾನುಭವಿಗಳಿಗೆ ಒಟ್ಟು ₹28,759.54 ಕೋಟಿ ರೂಪಾಯಿ ಸಬ್ಸಿಡಿ ಬಿಡುಗಡೆ ಮಾಡಿದೆ. ಇದು ಸರ್ಕಾರದ ಬದ್ಧತೆ ಮತ್ತು ಜನಪರ ಕಾಳಜಿಗೆ ಹಿಡಿದ ಕನ್ನಡಿಯಾಗಿದೆ.

ಕುಟುಂಬದ ಬಜೆಟ್‌ಗೆ ಆಸರೆ, ಉಜ್ವಲ ಭವಿಷ್ಯಕ್ಕೆ ಬುನಾದಿ:

ಪ್ರತಿ ತಿಂಗಳು 1000 ದಿಂದ 1500 ರೂಪಾಯಿಗಳವರೆಗೆ ವಿದ್ಯುತ್ ಬಿಲ್ ಕಟ್ಟುತ್ತಿದ್ದ ಸಾಮಾನ್ಯ ಕುಟುಂಬಗಳಿಗೆ ಈಗ ಆ ಹಣ ಸಂಪೂರ್ಣವಾಗಿ ಉಳಿತಾಯವಾಗುತ್ತಿದೆ. ಈ ಉಳಿತಾಯದ ಹಣವನ್ನು ಅವರು ಮಕ್ಕಳ ಶಿಕ್ಷಣ, ಆರೋಗ್ಯ ಮತ್ತು ಇತರ ಅಗತ್ಯಗಳಿಗೆ ಬಳಸಿಕೊಳ್ಳುತ್ತಿದ್ದಾರೆ. ವಿಶೇಷವಾಗಿ ಗೃಹಿಣಿಯರಿಗೆ ಇದು ಆರ್ಥಿಕವಾಗಿ ದೊಡ್ಡ ನೆರವಾಗಿದೆ.

ಕೇವಲ ಉಚಿತ ವಿದ್ಯುತ್ ನೀಡುವುದಷ್ಟೇ ಅಲ್ಲ, ಜನರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡುವುದೇ ಈ ಯೋಜನೆಯ ಮುಖ್ಯ ಗುರಿಯಾಗಿದ್ದು, ರಾಜ್ಯದ ಜನರ ಜೀವನಮಟ್ಟ ಸುಧಾರಿಸಿದೆ. ಗೃಹ ಜ್ಯೋತಿ ಯೋಜನೆಯು ಕೇವಲ ಒಂದು ಯೋಜನೆಯಾಗಿ ಉಳಿಯದೆ, ಕರ್ನಾಟಕದ ಸಾಮಾಜಿಕ ಮತ್ತು ಆರ್ಥಿಕ ಪರಿವರ್ತನೆಯಲ್ಲಿ ಮಹತ್ವದ ಮೈಲಿಗಲ್ಲಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಕುಟುಂಬಗಳನ್ನು ಈ ಯೋಜನೆಯಡಿ ತರಲು ಇಂಧನ ಇಲಾಖೆ ಕ್ರಮ ಕೈಗೊಳ್ಳುತ್ತಿದೆ.

Continue Reading

ದಿನದ ಸುದ್ದಿ

ರೈಲ್ವೆ ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ – 20 ಸಾವಿರ ಕೋಟಿ ರೂ. ವೆಚ್ಚದ 8 ಬಹು ಟ್ರ್ಯಾಕಿಂಗ್ ಯೋಜನೆಗಳಿಗೆ ಕೇಂದ್ರದ ಅಸ್ತು!

Published

on

ಕರ್ನಾಟಕದ ವೈಟ್‌ಫೀಲ್ಡ್-ಬಂಗಾರಪೇಟೆ, ಹೊಸೂರು-ಓಮಲೂರು ಮಾರ್ಗ ಸೇರಿ 9 ರಾಜ್ಯಗಳ 1200 ಕಿ.ಮೀ ರೈಲು ಜಾಲ ವಿಸ್ತರಣೆಗೆ ಪ್ರಧಾನಿ ಮೋದಿ ಅಧ್ಯಕ್ಷತೆಯ ಸಂಪುಟ ಸಭೆಯಲ್ಲಿ ಅನುಮೋದನೆ

ಸುದ್ದಿದಿನ, ಹೊಸದಿಲ್ಲಿ: ದೇಶದ ರೈಲ್ವೆ ಮೂಲಸೌಕರ್ಯಕ್ಕೆ ಬೃಹತ್ ಉತ್ತೇಜನ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಕರ್ನಾಟಕ ಸೇರಿದಂತೆ ಒಂಬತ್ತು ರಾಜ್ಯಗಳ 20ಕ್ಕೂ ಹೆಚ್ಚು ಜಿಲ್ಲೆಗಳನ್ನು ಸಂಪರ್ಕಿಸುವ 20,000 ಕೋಟಿ ರೂಪಾಯಿಗೂ ಅಧಿಕ ಮೊತ್ತದ 8 ಬಹು ಟ್ರ್ಯಾಕಿಂಗ್ (Multi-Tracking) ರೈಲು ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಬುಧವಾರ (ಸೆ.09) ನಡೆದ ಕೇಂದ್ರ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಈ ಯೋಜನೆಗಳು ಪಿಎಂ-ಗತಿ ಶಕ್ತಿ ರಾಷ್ಟ್ರೀಯ ಮಾಸ್ಟರ್ ಪ್ಲಾನ್ ಅಡಿಯಲ್ಲಿ ಅನುಷ್ಠಾನಗೊಳ್ಳಲಿವೆ.

http://Visit : www.suddidina.com

ಈ ಯೋಜನೆಗಳಿಂದ ಭಾರತೀಯ ರೈಲ್ವೆಯ ಅಸ್ತಿತ್ವದಲ್ಲಿರುವ ಜಾಲವು ಬರೋಬ್ಬರಿ 1,200 ಕಿಲೋಮೀಟರ್‌ಗಳಷ್ಟು ವಿಸ್ತರಣೆಯಾಗಲಿದೆ. ಇದರಿಂದ 6,900ಕ್ಕೂ ಹೆಚ್ಚು ಗ್ರಾಮಗಳಿಗೆ ಸುಧಾರಿತ ಸಂಪರ್ಕ ಸಿಗಲಿದ್ದು, ರೈಲುಗಳ ಕಾರ್ಯಾಚರಣೆಯ ದಕ್ಷತೆ ಮತ್ತು ಸೇವಾ ವಿಶ್ವಾಸಾರ್ಹತೆ ಗಣನೀಯವಾಗಿ ಹೆಚ್ಚಾಗಲಿದೆ.

ಯಾವೆಲ್ಲ ಯೋಜನೆಗಳಿಗೆ ಅನುಮೋದನೆ?
ಸಂಪುಟ ಸಭೆಯಲ್ಲಿ ಅನುಮೋದನೆ ಪಡೆದ ಪ್ರಮುಖ ಯೋಜನೆಗಳು ಹೀಗಿವೆ:

1. ಅರಾಕೋಣಂ-ರೇಣಿಗುಂಟಾ ಮತ್ತು ವೈಟ್‌ಫೀಲ್ಡ್-ಬಂಗಾರಪೇಟೆ ನಡುವೆ 3 ಮತ್ತು 4ನೇ ಮಾರ್ಗ: ಇದು ಕರ್ನಾಟಕ ಮತ್ತು ತಮಿಳುನಾಡು, ಆಂಧ್ರಪ್ರದೇಶಕ್ಕೆ ಅತ್ಯಂತ ಮಹತ್ವದ ಯೋಜನೆಯಾಗಿದೆ.

2. ಸಿಕಂದರಾಬಾದ್-ಕಾಜಿಪೇಟೆ ನಡುವೆ ಮಲ್ಟಿ ಟ್ರ್ಯಾಕಿಂಗ್: ತೆಲಂಗಾಣದ ಪ್ರಮುಖ ಮಾರ್ಗದ ದಟ್ಟಣೆ ಕಡಿಮೆ ಮಾಡಲಿದೆ.

3. ಹೊಸೂರು-ಓಮಲೂರು, ಸೇಲಂ-ಕರೂರ್-ದಿಂಡಿಗಲ್ ಜೋಡಿ ಹಳಿ ಯೋಜನೆ: ತಮಿಳುನಾಡು ಮತ್ತು ಕರ್ನಾಟಕದ ಗಡಿ ಭಾಗದ ಸಂಪರ್ಕವನ್ನು ಬಲಪಡಿಸಲಿದೆ.

4. ಖರಗ್‌ಪುರ-ಝಾರ್ಸುಗುಡ ಮತ್ತು ಕತ್ನಿ-ಪೆಂದ್ರ ರಸ್ತೆ ನಡುವೆ 4ನೇ ಮಾರ್ಗ ಮತ್ತು ಬಿಲಾಸ್‌ಪುರ್-ಪೆಂದ್ರ ರಸ್ತೆ ನಡುವೆ 3ನೇ ಮಾರ್ಗ: ಛತ್ತೀಸ್‌ಗಢ, ಒಡಿಶಾ, ಮಧ್ಯಪ್ರದೇಶದ ಕಲ್ಲಿದ್ದಲು ಮತ್ತು ಖನಿಜ ಸಾಗಣೆಗೆ ಸಹಕಾರಿಯಾಗಲಿದೆ.

ಈ ಎಲ್ಲಾ ಯೋಜನೆಗಳು ಕರ್ನಾಟಕ, ಪಶ್ಚಿಮ ಬಂಗಾಳ, ಜಾರ್ಖಂಡ್, ಒಡಿಶಾ, ಮಧ್ಯಪ್ರದೇಶ, ಛತ್ತೀಸ್‌ಗಢ, ತಮಿಳುನಾಡು, ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳನ್ನು ಒಳಗೊಳ್ಳಲಿವೆ.

ಕರ್ನಾಟಕಕ್ಕೆ ಏನು ಲಾಭ?

ಈ ಬಹು ಟ್ರ್ಯಾಕಿಂಗ್ ಯೋಜನೆಗಳಿಂದ ಕರ್ನಾಟಕಕ್ಕೆ ಹಲವು ರೀತಿಯಲ್ಲಿ ಅನುಕೂಲವಾಗಲಿದೆ.ಕೈಗಾರಿಕೆಗಳಿಗೆ ಅನುಕೂಲ: ರಾಜ್ಯದ ಉಕ್ಕು ಕಾರ್ಖಾನೆಗಳಿಗೆ ಕಚ್ಚಾ ವಸ್ತುಗಳಾದ ಖನಿಜ ಸಾಗಿಸಲು ವಾಡಿ-ತಂದೂರು, ಮೋಟುಮಾರಿ-ವಿಷ್ಣುಪುರಂ ಮಾರ್ಗದಲ್ಲಿನ ಅಭಿವೃದ್ಧಿಯಿಂದ ಹೆಚ್ಚಿನ ಅನುಕೂಲವಾಗಲಿದೆ. ಹೂಟಗಿ, ಕೂಡಗಿ, ಯಾದ್ಲಾಪುರ, ಬಳ್ಳಾರಿ ಮತ್ತು ಯರಮರಸ್‌ನಲ್ಲಿರುವ ಉಷ್ಣ ವಿದ್ಯುತ್ ಸ್ಥಾವರಗಳಿಗೆ ಕಲ್ಲಿದ್ದಲು ಸಾಗಣೆ ಇನ್ನಷ್ಟು ವೇಗ ಮತ್ತು ಸುಲಭವಾಗಲಿದೆ.

ಬೆಂಗಳೂರು-ಚೆನ್ನೈ ಮಾರ್ಗದಲ್ಲಿ ದಟ್ಟಣೆ ಕಡಿಮೆ: ವೈಟ್‌ಫೀಲ್ಡ್-ಬಂಗಾರಪೇಟೆ ನಡುವಿನ 47 ಕಿ.ಮೀ ಉದ್ದದ 3 ಮತ್ತು 4ನೇ ಮಾರ್ಗವು ಅತ್ಯಂತ ದಟ್ಟಣೆಯ ಮನ್ಮಾಡ-ಹುಬ್ಬಳ್ಳಿ-ಬೆಂಗಳೂರು-ಜೋಳರಪೇಟೆ ವಿಭಾಗದಡಿ ಬರುತ್ತದೆ. ಇದು ಬೆಂಗಳೂರು-ಚೆನ್ನೈ ನಡುವಿನ ರೈಲು ಸಂಚಾರ ದಟ್ಟಣೆಯನ್ನು ಗಣನೀಯವಾಗಿ ಕಡಿಮೆ ಮಾಡಿ, ಹೆಚ್ಚಿನ ರೈಲುಗಳ ಸಂಚಾರಕ್ಕೆ ಅವಕಾಶ ಮಾಡಿಕೊಡಲಿದೆ.

ಪ್ರವಾಸೋದ್ಯಮ ಮತ್ತು ಸರಕು ಸಾಗಣೆಗೆ ಉತ್ತೇಜನ: ಹೊಸೂರು-ಓಮಲೂರು ಜೋಡಿ ಹಳಿ ಮಾರ್ಗದಿಂದ ಕನ್ಯಾಕುಮಾರಿ, ರಾಮೇಶ್ವರಂನಂತಹ ಪುಣ್ಯಕ್ಷೇತ್ರಗಳಿಗೆ ತೆರಳುವ ಲಕ್ಷಾಂತರ ಯಾತ್ರಿಕರಿಗೆ ಅನುಕೂಲವಾಗಲಿದೆ. ಜೊತೆಗೆ ಬೆಂಗಳೂರು ಸುತ್ತಮುತ್ತಲಿನ ಕೈಗಾರಿಕಾ ಪ್ರದೇಶಗಳಿಗೆ ಸರಕು ಸಾಗಣೆಯೂ ವೇಗವಾಗಲಿದೆ.ಒಟ್ಟಾರೆಯಾಗಿ, ಈ ಯೋಜನೆಗಳು ಕೇವಲ ರೈಲು ಮಾರ್ಗಗಳ ವಿಸ್ತರಣೆಯಷ್ಟೇ ಅಲ್ಲ, ದೇಶದ ಆರ್ಥಿಕ ಬೆಳವಣಿಗೆ, ಉದ್ಯೋಗ ಸೃಷ್ಟಿ ಮತ್ತು ಪ್ರಾದೇಶಿಕ ಸಂಪರ್ಕಕ್ಕೆ ಹೊಸ ಶಕ್ತಿ ತುಂಬಲಿವೆ ಎಂದು ಕೇಂದ್ರ ಸರ್ಕಾರ ಹೇಳಿದೆ.

Continue Reading

ದಿನದ ಸುದ್ದಿ

ಡಿಕೆಶಿ ಸರ್ಕಾರಕ್ಕೆ 100 ದಿನಗಳ ಸಂಭ್ರಮ – `ದೃಢ ಕರ್ನಾಟಕದ ಸಂಕಲ್ಪ’ ಕಾರ್ಯಕ್ರಮಕ್ಕೆ ವಿಧಾನಸೌಧ ಸಜ್ಜು

Published

on

ಸೆ.10 ರಂದು ವಿಧಾನಸೌಧದಲ್ಲಿ ಶತದಿನೋತ್ಸವ ಸಮಾರಂಭ; ಮಾಜಿ ಸಿಎಂ ಸಿದ್ದರಾಮಯ್ಯರಿಂದ ಉದ್ಘಾಟನೆ, ಗ್ಯಾರಂಟಿ ಫಲಾನುಭವಿಗಳೊಂದಿಗೆ ಸಿಎಂ ಡಿ.ಕೆ. ಶಿವಕುಮಾರ್ ಸಂವಾದ

ಸುದ್ದಿದಿನ, ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರವು ತನ್ನ ಆಡಳಿತದ 100 ದಿನಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಈ ಶತಕದ ಸಂಭ್ರಮವನ್ನು ಆಚರಿಸಲು ರಾಜ್ಯ ಸರ್ಕಾರವು `ದೃಢ ಕರ್ನಾಟಕದ ಸಂಕಲ್ಪ – ಶತಕದ ಪಥ, ಪ್ರಗತಿಯ ರಥ’ ಎಂಬ ವಿಶೇಷ ಮತ್ತು ಅದ್ಧೂರಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.

 

ಈ ಕಾರ್ಯಕ್ರಮವು ನಾಳೆ ಅಂದರೆ 2026ನೇ ಸೆಪ್ಟೆಂಬರ್ 10ರ ಗುರುವಾರ ಬೆಳಿಗ್ಗೆ 10 ಗಂಟೆಗೆ ವಿಧಾನಸೌಧದ ಪ್ರತಿಷ್ಠಿತ ಬ್ಯಾಂಕ್ವೇಟ್ ಸಭಾಂಗಣದಲ್ಲಿ ನಡೆಯಲಿದೆ. ಸರ್ಕಾರದ ನೂರು ದಿನಗಳ ಸಾಧನೆ, ಜನಪರ ಯೋಜನೆಗಳ ಅನುಷ್ಠಾನ ಮತ್ತು ಮುಂದಿನ ಅಭಿವೃದ್ಧಿಯ ದೂರದೃಷ್ಟಿಯನ್ನು ಜನರ ಮುಂದಿಡುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ.

ಗಣ್ಯರ ದಂಡು, ಸಿದ್ದರಾಮಯ್ಯರಿಂದ ಉದ್ಘಾಟನೆ:

ಈ ಶತದಿನೋತ್ಸವ ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಇದು ಕಾಂಗ್ರೆಸ್ ಪಕ್ಷದಲ್ಲಿನ ಒಗ್ಗಟ್ಟು ಮತ್ತು ನಾಯಕತ್ವದ ನಿರಂತರತೆಯನ್ನು ಸಂಕೇತಿಸುತ್ತದೆ.

ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಹಾಗೂ ಕಂದಾಯ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ಜಿ. ಪರಮೇಶ್ವರ್, ರಾಜ್ಯ ಸಂಪುಟದ ಎಲ್ಲಾ ಸಚಿವರು, ಎಲ್ಲಾ ಶಾಸಕರು, ವಿಧಾನ ಪರಿಷತ್ ಸದಸ್ಯರು, ರಾಜ್ಯದ ಲೋಕಸಭಾ ಮತ್ತು ರಾಜ್ಯಸಭಾ ಸದಸ್ಯರು ಭಾಗವಹಿಸಲಿದ್ದಾರೆ. ಇದರ ಜೊತೆಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಸೇರಿದಂತೆ ಸರ್ಕಾರದ ಎಲ್ಲಾ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಮತ್ತು ಹಿರಿಯ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ.

http://Visit : www.suddidina.com

ಫಲಾನುಭವಿಗಳೊಂದಿಗೆ ನೇರ ಸಂವಾದ – ಕಾರ್ಯಕ್ರಮದ ಪ್ರಮುಖ ಆಕರ್ಷಣೆ

ಈ ಕಾರ್ಯಕ್ರಮದ ಅತ್ಯಂತ ಪ್ರಮುಖ ಆಕರ್ಷಣೆ ಎಂದರೆ ಮುಖ್ಯಮಂತ್ರಿಗಳೊಂದಿಗೆ ಫಲಾನುಭವಿಗಳ ನೇರ ಸಂವಾದ. ಸರ್ಕಾರದ ಮಹತ್ವಾಕಾಂಕ್ಷೆಯ ಐದು ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಗೃಹಲಕ್ಷ್ಮಿ, ಶಕ್ತಿ, ಯುವನಿಧಿ ಮತ್ತು ಗೃಹಜ್ಯೋತಿ ಯೋಜನೆಗಳ ಫಲಾನುಭವಿಗಳು ಈ ವೇದಿಕೆಯಲ್ಲಿ ತಮ್ಮ ಅನುಭವಗಳನ್ನು ಹಂಚಿಕೊಳ್ಳಲಿದ್ದಾರೆ.

ಕೇವಲ ಗ್ಯಾರಂಟಿ ಯೋಜನೆಗಳಷ್ಟೇ ಅಲ್ಲದೆ, ಸಮಾಜದ ವಿವಿಧ ವರ್ಗಗಳ ಶ್ರಮಿಕರು ಮತ್ತು ಕಾರ್ಮಿಕರು ಕೂಡ ಈ ಸಂವಾದದಲ್ಲಿ ಪಾಲ್ಗೊಳ್ಳಲಿದ್ದಾರೆ. ಕೃಷಿಕರು, ಆಟೋ ಚಾಲಕರು, ಹಮಾಲಿಗಳು, ಗಿಗ್ ಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಪೌರಕಾರ್ಮಿಕರು ತಮ್ಮ ಬದುಕಿನಲ್ಲಿ ಸರ್ಕಾರದ ಯೋಜನೆಗಳಿಂದ ಆಗಿರುವ ಬದಲಾವಣೆಗಳ ಕುರಿತು ಮುಖ್ಯಮಂತ್ರಿಗಳೊಂದಿಗೆ ಮುಕ್ತವಾಗಿ ಮಾತನಾಡಲಿದ್ದಾರೆ.

100 ದಿನಗಳಲ್ಲಿ ಸರ್ಕಾರವು ಕೈಗೊಂಡಿರುವ ಜನಪರ ನಿರ್ಧಾರಗಳು, ಅಭಿವೃದ್ಧಿ ಕಾಮಗಾರಿಗಳು ಮತ್ತು ಆಡಳಿತದಲ್ಲಿ ತಂದಿರುವ ಪಾರದರ್ಶಕತೆಯ ಬಗ್ಗೆ ಈ ವೇದಿಕೆಯಲ್ಲಿ ಚರ್ಚೆ ನಡೆಯಲಿದೆ. ಸರ್ಕಾರದ ಸಾಧನೆಗಳನ್ನು ಕೇವಲ ಭಾಷಣದ ಮೂಲಕವಲ್ಲ, ಬದಲಾಗಿ ಫಲಾನುಭವಿಗಳ ಬಾಯಿಂದಲೇ ಜನರಿಗೆ ತಲುಪಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ಮೂಲಗಳು ತಿಳಿಸಿವೆ.

ಮುಂದಿನ ದಿನಗಳಲ್ಲಿ ದೃಢ ಕರ್ನಾಟಕ’ ನಿರ್ಮಾಣದ ನಿಟ್ಟಿನಲ್ಲಿ ಸರ್ಕಾರದ ಮುಂದಿನ 5 ವರ್ಷಗಳ ಕಾರ್ಯಯೋಜನೆ ಮತ್ತು ರೂಪುರೇಷೆಗಳನ್ನು ಈ ಸಮಾರಂಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಕಟಿಸಲಿದ್ದಾರೆ ಎಂದು ನಿರೀಕ್ಷಿಸಲಾಗಿದೆ.

Continue Reading

Trending