ದಿನದ ಸುದ್ದಿ
ಗ್ರಾಹಕರಿಗೆ ಆನ್ಲೈನ್ ಪಯಣವನ್ನು ಹೆಚ್ಚು ಸುರಕ್ಷಿತವಾಗಿಸಲು ಕ್ಯಾಸ್ಪರ್ಸ್ಕೈ ಜತೆ ಕೈಜೋಡಿಸಿದ ಏರ್ಟೆಲ್
ಸುದ್ದಿದಿನ,ಬೆಂಗಳೂರು : ಜಾಗತಿಕ ಸೈಬರ್ ಸೆಕ್ಯುರಿಟಿ ಕಂಪನಿ ಕ್ಯಾಸ್ಪರ್ಸ್ಕೈ ಭಾರತದ ಅಂತರ್ಜಾಲ ಬಳಕೆದಾರರಿಗೆ ತ್ವರಿತ ಭದ್ರತೆ ಒದಗಿಸುವ ಸಲುವಾಗಿ ಭಾರತದ ಪ್ರಮುಖ ಸಂವಹನ ಪರಿಹಾರ ಪೂರೈಕೆದಾರ ಕಂಪನಿಯಾದ ಭಾರ್ತಿ ಏರ್ಟೆಲ್ ಜೊತೆ ಪಾಲುದಾರಿಕೆ ಮಾಡಿಕೊಂಡಿದೆ.
ಎರಡು ಕಂಪನಿಗಳ ನಡುವಿನ ಸಹಯೋಗವು ಏರ್ಟೆಲ್ ಗ್ರಾಹಕರಿಗೆ ಕ್ಯಾಸ್ಪರ್ಸ್ಕೈನ ಒಟ್ಟು ಭದ್ರತಾ ಪರಿಹಾರವನ್ನು ಏರ್ಟೆಲ್ ಥ್ಯಾಂಕ್ಸ್ ಆ್ಯಪ್ನಿಂದ ನೇರವಾಗಿ ಕೆಲವು ಕ್ಲಿಕ್ಗಳಲ್ಲಿ ಖರೀದಿಸಲು ಅನುವು ಮಾಡಿಕೊಡುತ್ತದೆ. ಭಾರತೀಯ ಅಂತರ್ಜಾಲ ಬಳಕೆದಾರರಲ್ಲಿ ಸೈಬರ್ ಸುರಕ್ಷತೆಯ ಅರಿವನ್ನು ಹೆಚ್ಚಿಸುವ ಮತ್ತು ಸೈಬರ್ ಬೆದರಿಕೆಗಳ ಹಿನ್ನೆಲೆಯಲ್ಲಿ ಸೈಬರ್ ಸುರಕ್ಷತೆಯನ್ನು ಅಭ್ಯಾಸ ಮಾಡಲು ಪ್ರೋತ್ಸಾಹಿಸುವ ಗುರಿಯೊಂದಿಗೆ ಈ ಒಕ್ಕೂಟವನ್ನು ರಚಿಸಲಾಗಿದೆ.
ಸೈಬರ್ ಬೆದರಿಕೆಗಳು ನಿರಂತರವಾಗಿ ವಿಕಸನಗೊಳ್ಳುತ್ತಿವೆ ಮತ್ತು ಕಳೆದ 2 ವರ್ಷಗಳಲ್ಲಿ ಸೈಬರ್ ಅಪರಾಧಿಗಳು ಭಾರತದಲ್ಲಿ ಇಂಟರ್ನೆಟ್ ಬಳಕೆದಾರರನ್ನು ಸಕ್ರಿಯವಾಗಿ ಗುರಿಯಾಗಿಸಿಕೊಂಡಿದ್ದಾರೆ. 2021 ರ ಮೊದಲ ತ್ರೈಮಾಸಿPದಲ್ಲಿ ಕ್ಯಾಸ್ಪರ್ಸ್ಕೈ ಉತ್ಪನ್ನಗಳು 37,650,472 ವಿವಿಧ ಅಂತರ್ಜಾಲದಿಂದ ಹರಡುವ ಸೈಬರ್ ಬೆದರಿಕೆಗಳನ್ನು ಪತ್ತೆ ಮಾಡಿವೆ. ಮೊಬೈಲ್ ಬಳಕೆದಾರರು ಕೂಡ ಅಪಾಯದಲ್ಲಿದ್ದಾರೆ, ಏಕೆಂದರೆ ಸೈಬರ್ ಅಪರಾಧಿಗಳು ನಿರಂತರವಾಗಿ ಹಣಕಾಸಿನ ಲಾಭಕ್ಕಾಗಿ ಮತ್ತು ಪ್ರಮುಖ ಖಾಸಗಿ ಡೇಟಾವನ್ನು ಪಡೆಯಲು ಅವರನ್ನು ಗುರಿಯಾಗಿಸಿಕೊಂಡಿದ್ದಾರೆ. ಭಾರತದಲ್ಲಿ ಮೊಬೈಲ್ ಬೆದರಿಕೆಗಳು 2019 ರಿಂದ ತೀವ್ರವಾಗಿ ಹೆಚ್ಚಾಗಿದೆ ಮತ್ತು ಈ ಬಗೆಯ ಗುರಿ ಹೆಚ್ಚು ಅತ್ಯಾಧುನಿಕ ಸ್ವರೂಪದ್ದಾಗುತ್ತಿದೆ. 2020 ರಲ್ಲಿ ಮೊಬೈಲ್ ಬೆದರಿಕೆಗಳಿಂದ ದಾಳಿಗೊಳಗಾದ ದೇಶಗಳಲ್ಲಿ ಭಾರತ 7ನೇ ಸ್ಥಾನದಲ್ಲಿದೆ.
ಜಾಗತಿಕವಾಗಿ ಸ್ಮಾರ್ಟ್ ಫೋನ್ ಬಳಕೆದಾರರನ್ನು ಪ್ರಮುಖ ಮೊಬೈಲ್ ಬೆದರಿಕೆಗಳು ಗುರಿ ಮಾಡಿದ್ದು, ಆ್ಯಡ್ವೇರ್ 57% (3,254,387 ಪತ್ತೆ) ಗಳೊಂದಿಗೆ ಅಗ್ರಸ್ಥಾನದಲ್ಲಿದೆ. ಇತರ ಅಪಾಯಗಳ ಬಗ್ಗೆ ಮಾತನಾಡುತ್ತಾ, ಬ್ಯಾಕ್ಡೋರ್ಸ್ ಪ್ರಕರಣಗಳ ಸಂಖ್ಯೆ ಮೂರು ಪಟ್ಟು ಹೆಚ್ಚಾಗಿದೆ. 2019ರಲ್ಲಿ 28,889 ಇದ್ದುದು 2020 ರಲ್ಲಿ 84,495 ಕ್ಕೆ ಹೆಚ್ಚಿದೆ.
ಪತ್ತೆಯಾದ ಆಂಡ್ರಾಯ್ಡ್ ಶೋಷಣೆಗಳ ಸಂಖ್ಯೆ ಹದಿನೇಳು ಪಟ್ಟು ಹೆಚ್ಚಾಗಿದೆ ಮತ್ತು ಟ್ರೋಜನ್-ಪ್ರಾಕ್ಸಿ ಬೆದರಿಕೆಗಳ ಸಂಖ್ಯೆ ಹನ್ನೆರಡು ಪಟ್ಟು ಹೆಚ್ಚಾಗಿದೆ. ಕ್ಯಾಸ್ಪರ್ಸ್ಕೈ ಪರಿಹಾರಗಳು 2020 ರಲ್ಲಿ ಮೊಬೈಲ್ ಬ್ಯಾಂಕಿಂಗ್ ಟ್ರೋಜನ್ಗಳಿಗಾಗಿ 156,710 ಇನ್ಸ್ಟಾಲೇಶನ್ ಪ್ಯಾಕೇಜ್ಗಳನ್ನು ಪತ್ತೆ ಮಾಡಿವೆ, ಇದು 2019 ರಲ್ಲಿ ಪತ್ತೆಯಾದ ದಾಳಿಗಳ ಎರಡು ಪಟ್ಟು ಅಧಿಕ. ಆದಾಗ್ಯೂ, 2020 ರಲ್ಲಿ ರ್ಯಾನ್ಸಮ್ವೇರ್ ಟ್ರೋಜನ್ಗಳಿಗಾಗಿ 20,708 ಇನ್ಸ್ಟಾಲೇಶನ್ ಪ್ಯಾಕೇಜ್ಗಳನ್ನು ನಾವು ಕಂಡುಕೊಂಡಿದ್ದರಿಂದ ಹಿಂದಿನ ವರ್ಷಕ್ಕೆ ಹೋಲಿಸಿದರೆ ರ್ಯಾನ್ಸಮ್ವೇರ್ ಟ್ರೋಜನ್ಗಳು 3.5 ಪಟ್ಟು ಕುಸಿತ ಕಂಡಿವೆ.
ಕ್ಯಾಸ್ಪರ್ಸ್ಕೈ ಸಿಇಒ ಯುಜೀನ್ ಕಾಸ್ಪರ್ಸ್ಕೈ ಈ ಬಗ್ಗೆ ಮಾತನಾಡಿ, “ತಮ್ಮ ಗ್ರಾಹಕರಿಗೆ ಸುರಕ್ಷೆ ಒದಗಿಸುವ ಸಲುವಾಗಿ ಪ್ರಮುಖ ಜಾಗತಿಕ ದೂರಸಂಪರ್ಕ ಕಂಪನಿ ಮತ್ತು ಅತಿದೊಡ್ಡ ಮೊಬೈಲ್ ಸೇವಾ ಪೂರೈಕೆದಾರರಲ್ಲಿ ಒಬ್ಬರಾದ ಭಾರ್ತಿ ಏರ್ಟೆಲ್ ಜತೆಗೆ ಹೆಚ್ಚು ಸುರಕ್ಷಿತ ಇಂಟರ್ನೆಟ್ ಅನ್ನು ಸೃಷ್ಟಿಸುವುದನ್ನು ನಾವು ಎದುರು ನೋಡುತ್ತಿದ್ದೇವೆ, ಮತ್ತು ಕ್ಯಾಸಪರ್ಸ್ಕೈಯೊಂದಿಗೆ ಸುರಕ್ಷಿತ ಡಿಜಿಟಲ್ ಜಗತ್ತನ್ನು ನಿರ್ಮಿಸುವ ಮೂಲಕ ಈ ಪಾಲುದಾರಿಕೆಯು ಏರ್ಟೆಲ್ ಅನ್ನು ಹೊಸತನದ ಪ್ರವರ್ತಕ ಮತ್ತು ಅದರ ಉದ್ಯಮದಲ್ಲಿ ನಾಯಕನಾಗಿ ಸ್ಥಾಪಿಸಲು ಮತ್ತಷ್ಟು ಕೊಡುಗೆ ನೀಡುತ್ತದೆ ಎಂಬ ವಿಶ್ವಾಸ ನಮಗಿದೆ” ಎಂದು ಹೇಳಿದರು.
ಭಾರ್ತಿ ಏರ್ಟೆಲ್ ಸಿಇಓ ಪ್ರದೀಪ್ ಕಪೂರ್ ಮಾತನಾಡಿ, “ಗ್ರಾಹಕರ ಜೀವನ ಶೈಲಿಯು ಡಿಜಿಟಲ್ ಪ್ಲಾಟ್ಫಾರ್ಮ್ಗಳೊಂದಿಗೆ ಹೆಚ್ಚು ಸಂಯೋಜಿತವಾಗುತ್ತಿದ್ದಂತೆ, ಈ ಪಯಣವನ್ನು ಸರಿಯಾದ ಪರಿಹಾರಗಳೊಂದಿಗೆ ಭದ್ರಪಡಿಸುವುದು ನಮಗೆಲ್ಲರಿಗೂ ಅತಿಮುಖ್ಯವಾಗಿದೆ. ಏರ್ಟೆಲ್ ಜಾಗತಿಕ ಮಟ್ಟದ ಮೂಲಸೌಕರ್ಯ ಮತ್ತು ಪಾಲುದಾರಿಕೆಗಳ ಮೂಲಕ ಸುರಕ್ಷಿತ ನೆಟ್ವರ್ಕ್ ಅನುಭವವನ್ನು ನೀಡಲು ಹಗಲಿರುಳೂ ಕೆಲಸ ಮಾಡುತ್ತಿದೆ.
ಕ್ಯಾಸ್ಪರ್ಸ್ಕೈಯೊಂದಿಗೆ ಪಾಲುದಾರಿಕೆ ಹೊಂದಲು ಮತ್ತು ಅವರ ಪರಿಹಾರಗಳನ್ನು ಏರ್ಟೆಲ್ ಗ್ರಾಹಕರಿಗೆ ಸುಲಭವಾಗಿ ತಲುಪುವಂತೆ ಮಾಡಲು ನಾವು ಸಂತೋಷಪಡುತ್ತೇವೆ, ಅವರು ಇದನ್ನು ಕೆಲವೇ ನಿಮಿಷಗಳಲ್ಲಿ ಖರೀದಿಸಬಹುದು ಮತ್ತು ಸ್ಥಾಪಿಸಬಹುದು ಮತ್ತು ಸಂಪೂರ್ಣ ಮನಸ್ಸಿನ ಶಾಂತಿಯನ್ನು ಆನಂದಿಸಬಹುದು” ಎಂದು ಬಣ್ಣಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ
ಸುದ್ದಿದಿನ,ದಾವಣಗೆರೆ: ದಾವಣಗೆರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಆಧುನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಜೂನ್ 15 ಮತ್ತು 16 ರಂದು ಆಯೋಜಿಸಲಾಗಿದೆ.
ಆಸಕ್ತ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್ ಪೋರ್ಟ್ ಸೈಜ್ ಪೋಟೋ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿಯೊಂದಿಗೆ ಹಾಜರಾಗಬೇಕು. ತರಬೇತಿ ಕಾರ್ಯಕ್ರಮಕ್ಕೆ ಯಾವುದೇ ಪ್ರೋತ್ಸಾಹಧನ ಮತ್ತು ಭತ್ಯೆಗಳನ್ನು ನೀಡಲಾಗುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಪಶುಪಾಲನಾ ಮತ್ತು ಪಶು ವೈದ್ಯಕೀಯ ತರಬೇತಿ ಕೇಂದ್ರ, ದಾವಣಗೆರೆ ಕಚೇರಿ ದೂ.ಸಂ: 08192-233787 ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಪಶುವೈದ್ಯಾಧಿಕಾರಿಗಳು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ವಸತಿ ಯೋಜನೆಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ: ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದ ವಸತಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ಜೂನ್ 12 ಕೊನೆಯ ದಿನವಾಗಿರುತ್ತದೆ.
ಈ ಯೋಜನೆಯಡಿ ಸೌಲಭ್ಯ ಒದಗಿಸಲು ನಿಗಧಿತ ಅರ್ಜಿ ನಮೂನೆಯಲ್ಲಿ ಅವಶ್ಯಕ ದಾಖಲಾತಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು ಗ್ರೇಡ್-1ರವರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಚನ್ನಗಿರಿ ಕಚೇರಿಯನ್ನು ಸಂಪರ್ಕಿಸಬಹುದೆಂದು ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
10 ಮುಖ್ಯ ಅಂಶಗಳನ್ನು ಪಾಲಿಸಿ ; ಸಕ್ಕರೆ ಕಾಯಿಲೆಗೆ ಗುಡ್ ಬೈ ಹೇಳಿ..
1. ಸಮತೋಲಿತ ಆಹಾರ (Balanced Diet): ನಿಮ್ಮ ಆಹಾರದಲ್ಲಿ ಹೆಚ್ಚು ನಾರಿನಂಶವಿರುವ (fiber) ತರಕಾರಿ, ಸೊಪ್ಪು, ಮೊಳಕೆ ಬರಿಸಿದ ಕಾಳುಗಳು ಮತ್ತು ಸಿರಿಧಾನ್ಯಗಳನ್ನು ಬಳಸಿ. ಕಾರ್ಬೋಹೈಡ್ರೇಟ್ ಹಾಗೂ ಎಣ್ಣೆಯಂಶವಿರುವ ಆಹಾರವನ್ನು ಕಡಿಮೆ ಮಾಡಿ.
2. ಸಿಹಿ ಪದಾರ್ಥಗಳ ನಿಯಂತ್ರಣ (Avoid Sweets): ಸಕ್ಕರೆ, ಬೆಲ್ಲ, ಬೇಕರಿ ತಿಂಡಿಗಳು, ಐಸ್ಕ್ರೀಮ್ ಮತ್ತು ಕೃತಕ ಸಕ್ಕರೆ ಇರುವ ತಂಪು ಪಾನೀಯಗಳ ಬಳಕೆಯನ್ನು ಸಂಪೂರ್ಣವಾಗಿ ಕಡಿಮೆ ಮಾಡಿ ಅಥವಾ ದೂರವಿಡಿ.
3. ದಿನನಿತ್ಯದ ವ್ಯಾಯಾಮ (Regular Exercise): ಪ್ರತಿದಿನ ಕನಿಷ್ಠ 30 ರಿಂದ 45 ನಿಮಿಷಗಳ ಕಾಲ ವೇಗದ ನಡಿಗೆ (brisk walking), ಸೈಕ್ಲಿಂಗ್, ಈಜು ಅಥವಾ ಯೋಗ ಮಾಡುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಣಕ್ಕೆ ಬರುತ್ತದೆ.
4. ದೇಹದ ತೂಕದ ನಿರ್ವಹಣೆ (Weight Management): ಅತಿಯಾದ ದೇಹದ ತೂಕವು ಇನ್ಸುಲಿನ್ ಕಾರ್ಯಕ್ಷಮತೆಯನ್ನು ಕುಂಠಿತಗೊಳಿಸುತ್ತದೆ. ಆದ್ದರಿಂದ ತೂಕವನ್ನು ಆರೋಗ್ಯಕರ ಮಿತಿಯಲ್ಲಿ ಇಟ್ಟುಕೊಳ್ಳುವುದು ಅತ್ಯಗತ್ಯ.
5. ನಿಯಮಿತ ರಕ್ತದ ಪರೀಕ್ಷೆ (Regular Blood Sugar Check): ವೈದ್ಯರ ಸಲಹೆಯಂತೆ ಕಾಲಕಾಲಕ್ಕೆ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು (Fasting ಮತ್ತು Post Prandial) ಹಾಗೂ ಮೂರು ತಿಂಗಳ ಸರಾಸರಿ ತಿಳಿಸುವ HbA1c ಪರೀಕ್ಷೆಯನ್ನು ಮಾಡಿಸಿಕೊಳ್ಳಿ.
6. ಸಮಯಕ್ಕೆ ಸರಿಯಾಗಿ ಔಷಧಿ ಸೇವನೆ (Timely Medication): ವೈದ್ಯರು ಸೂಚಿಸಿದ ಮಾತ್ರೆಗಳನ್ನು ಅಥವಾ ಇನ್ಸುಲಿನ್ ಅನ್ನು ನಿಗದಿತ ಸಮಯಕ್ಕೆ ತೆಗೆದುಕೊಳ್ಳಿ. ಸ್ವಂತ ನಿರ್ಧಾರದಿಂದ ಔಷಧಿಯನ್ನು ನಿಲ್ಲಿಸಬೇಡಿ.
7. ಮಾನಸಿಕ ಒತ್ತಡದ ನಿರ್ವಹಣೆ (Stress Management): ಅತಿಯಾದ ಮಾನಸಿಕ ಒತ್ತಡವು ದೇಹದಲ್ಲಿ ಸಕ್ಕರೆ ಮಟ್ಟವನ್ನು ಹೆಚ್ಚಿಸುವ ಹಾರ್ಮೋನ್ಗಳನ್ನು ಬಿಡುಗಡೆ ಮಾಡುತ್ತದೆ. ಒತ್ತಡ ಕಡಿಮೆ ಮಾಡಿಕೊಳ್ಳಲು ಧ್ಯಾನ (Meditation) ಅಥವಾ ಹವ್ಯಾಸಗಳಲ್ಲಿ ತೊಡಗಿಕೊಳ್ಳಿ.
8. ಪೂರಕ ನೀರು ಕುಡಿಯುವುದು (Stay Hydrated): ದಿನವಿಡೀ ಸಾಕಷ್ಟು ಪ್ರಮಾಣದಲ್ಲಿ ನೀರು ಕುಡಿಯಿರಿ. ಇದು ದೇಹದಲ್ಲಿರುವ ಹೆಚ್ಚುವರಿ ಗ್ಲೂಕೋಸ್ ಮೂತ್ರದ ಮೂಲಕ ಹೊರಹೋಗಲು ಸಹಾಯ ಮಾಡುತ್ತದೆ.
9. ಉತ್ತಮ ನಿದ್ರೆ (Good Sleep): ಪ್ರತಿದಿನ ರಾತ್ರಿ 7 ರಿಂದ 8 ಗಂಟೆಗಳ ಕಾಲ ಶಾಂತಿಯುತವಾದ ನಿದ್ರೆ ಮಾಡುವುದು ದೇಹದ ಚಯಾಪಚಯ ಕ್ರಿಯೆ (Metabolism) ಮತ್ತು ಹಾರ್ಮೋನ್ಗಳ ಸಮತೋಲನಕ್ಕೆ ಬಹಳ ಮುಖ್ಯ.
10. ದುರಭ್ಯಾಸಗಳಿಂದ ದೂರವಿರಿ (Avoid Smoking and Alcohol): ಧೂಮಪಾನ ಮತ್ತು ಮದ್ಯಪಾನವು ಸಕ್ಕರೆ ಕಾಯಿಲೆಯ ತೊಂದರೆಗಳನ್ನು (ಹೃದಯ ಮತ್ತು ನರಗಳ ಸಮಸ್ಯೆ) ಮತ್ತಷ್ಟು ಹೆಚ್ಚು ಮಾಡುವುದರಿಂದ ಇವುಗಳಿಂದ ದೂರವಿರುವುದು ಒಳ್ಳೆಯದು.
ಗಮನಿಸಿ: ಈ ಮೇಲಿನ ಮಾಹಿತಿ ರೋಗದ ನಿರ್ವಹಣೆಗೆ ಸಾಮಾನ್ಯ ಮಾರ್ಗದರ್ಶನವಾಗಿದೆ. ಪ್ರತಿಯೊಬ್ಬರ ದೇಹ ಪ್ರಕೃತಿ ವಿಭಿನ್ನವಾಗಿರುವುದರಿಂದ, ನಿಮ್ಮ ವೈದ್ಯರ ವೈಯಕ್ತಿಕ ಸಲಹೆ ಮತ್ತು ಚಿಕಿತ್ಸೆಯ ಕ್ರಮವೇ ಅಂತಿಮ ಹಾಗೂ ಸುರಕ್ಷಿತ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ7 days agoಹೊಳಲ್ಕೆರೆ | ಸ್ಪೀಚ್ ಸಂಸ್ಥೆ ಸಂಸ್ಥಾಪಕ ಹೆಚ್.ರಾಮಚಂದ್ರಪ್ಪ ನಿಧನ ; ಇಂದು ಅಂತ್ಯಕ್ರಿಯೆ
-
ಅಂಕಣ7 days agoಕವಿತೆ | ದೇವರ ಹೂವು
-
ದಿನದ ಸುದ್ದಿ5 days ago10 ಮುಖ್ಯ ಅಂಶಗಳನ್ನು ಪಾಲಿಸಿ ; ಸಕ್ಕರೆ ಕಾಯಿಲೆಗೆ ಗುಡ್ ಬೈ ಹೇಳಿ..
-
ದಿನದ ಸುದ್ದಿ5 days agoರಾಷ್ಟ್ರೀಯ ಖಾದ್ಯ ತೈಲ ಅಭಿಯಾನ – ಎಣ್ಣೆಕಾಳು ಕಾರ್ಯಕ್ರಮದಡಿ ಸೌಲಭ್ಯ: ಅರ್ಜಿ ಆಹ್ವಾನ
-
ದಿನದ ಸುದ್ದಿ4 days agoವಸತಿ ಯೋಜನೆಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ5 days agoಉಚಿತ ಕೋಳಿ ಸಾಕಾಣಿಕೆ ತರಬೇತಿ: ಅರ್ಜಿ ಆಹ್ವಾನ
-
ದಿನದ ಸುದ್ದಿ5 days agoಕೃಷಿ ಪಂಡಿತ ಹಾಗೂ ಆತ್ಮ ಶ್ರೇಷ್ಠ ಕೃಷಿಕ ಪ್ರಶಸ್ತಿ: ಅರ್ಜಿ ಆಹ್ವಾನ
-
ದಿನದ ಸುದ್ದಿ1 day agoದಾವಣಗೆರೆ | ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ

