ದಿನದ ಸುದ್ದಿ
ರಾಜ್ಯ ಸರಕಾರಿ ನೌಕರರಿಗೆ 2022 ಕ್ಕೆ ಪರಿಷ್ಕೃತ ವೇತನ ಕೊಡಿಸಲು ಹಾಗೂ ಎಪಿಎಸ್ ರದ್ದುಗೊಳಿಸಲು ಬದ್ಧ; ಅಗತ್ಯಬಿದ್ದರೆ ರಾಜ್ಯದಾದ್ಯಂತ ಉಗ್ರ ಹೋರಾಟ: ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ
ಸುದ್ದಿದಿನ,ಧಾರವಾಡ : ಕರ್ನಾಟಕ ರಾಜ್ಯ ಸರಕಾರದಿಂದ 2022 ರ ಆರಂಭದಲ್ಲಿ ವೇತನ ಆಯೋಗದ ಶಿಫಾರಸ್ಸು ಅನ್ವಯ ರಾಜ್ಯ ಸರಕಾರಿ ನೌಕರರಿಗೆ ಪರಿಷ್ಕೃತ ವೇತನ ಜಾರಿಗೊಳಿಸಲು ಮತ್ತು ನೂತನ ಪಿಂಚಣಿ (ಎನ್.ಪಿ.ಎಸ್) ಯೋಜನೆ ರದ್ದುಗೊಳಿಸಲು ಸರಕಾರದ ಮೇಲೆ ಒತ್ತಡ ಹೇರಿ ಕ್ರಮಜರುಗಿಸಲು ರಾಜ್ಯ ಸರಕಾರಿ ನೌಕರರ ಸಂಘ ಬದ್ದವಾಗಿದೆ. ಈ ನಿಟ್ಟಿನಲ್ಲಿ ರಾಜ್ಯ ಸರಕಾರ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ರಾಜ್ಯದಾದ್ಯಂತ ಉಗ್ರ ಹೋರಾಟ ಮಾಡಲಾಗುವುದು ಎಂದು ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಹೇಳಿದರು.
ಅವರು ಇಂದು ಮಧ್ಯಾಹ್ನ ರಾಜ್ಯ ನೌಕರ ಸಂಘದ ಧಾರವಾಡ ಜಿಲ್ಲಾ ಘಟಕವು ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ಪರೀಕ್ಷೆಗಳಲ್ಲಿ ಗರಿಷ್ಟ ಅಂಕ ಪಡೆದಿರುವ ಜಿಲ್ಲೆಯ ಸರಕಾರಿ ನೌಕರ ಮಕ್ಕಳಿಗೆ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಹಾಗೂ 2020-21 ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಸಾಮಾನ್ಯ ಸಭೆ ಉದ್ಘಾಟಿಸಿ, ಮಾತನಾಡಿದರು.
ರಾಜ್ಯ ಸರಕಾರಿ ನೌಕರರ ವೇತನ ತಾರತಮ್ಯ ಹೊಗಲಾಡಿಸಲು ವೇತನ ಆಯೋಗ ಪರಿಷ್ಕೃತ ವೇತನ ನೀಡಲು ಶಿಪಾರಸ್ಸು ಮಾಡಿದೆ. ಕೇಂದ್ರ ಹಾಗೂ ಇತರೆ ರಾಜ್ಯಗಳ ಸರಕಾರಿ ನೌಕರರು ಪಡೆಯುತ್ತಿರುವ ವೇತನಕ್ಕಿಂತ ನಮ್ಮ ರಾಜ್ಯ ಸರಕಾರಿ ನೌಕರರಿಗೆ ಕಡಿಮೆ ವೇತನವಿದೆ.
ಪರಿಷ್ಕೃತ ವೇತನ ಜಾರಿಗೊಳಿಸಲು ಸರಕಾರಕ್ಕೆ ಸಂಘದಿಂದ ಹಲವು ಬಾರಿ ಮನವಿ ಸಲ್ಲಿಸಿ, ಒತ್ತಾಯಿಸಲಾಗಿದೆ. ಸರಕಾರ ಪರೀಶಿಲಿಸಿ, ಜಾರಿಗೊಳಿಸುವ ಭರವಸೆ ನೀಡುತ್ತಾ ಬರುತ್ತಿದೆ. ಆದ್ದರಿಂದ ಸಂಘವು ವೇತನ ಆಯೋಗದ ಶಿಫಾರಸುಗಳನ್ನು ಮತ್ತು ಕೇಂದ್ರ ಹಾಗೂ ಇತರೆ ರಾಜ್ಯಗಳ ಸರಕಾರಿ ನೌಕರರ ವೇತನ ಕುರಿತು ಅಧ್ಯಯನ ಮಾಡಿ ವರದಿಸಲ್ಲಿಸಲು ತಜ್ಞರ ಸಮಿತಿ ರಚಿಸಿದ್ದು, ಸದ್ಯದಲ್ಲೆ ಆ ಸಮಿತಿ ವರದಿ ನೀಡಲಿದೆ.
ರಾಜ್ಯ ಸರಕಾರ ಬರುವ 2022 ರ ಆರಂಭದಲ್ಲಿ ಪರಿಷ್ಕೃತ ವೇತನ ನೀಡದಿದ್ದಲ್ಲಿ ರಾಜ್ಯದಾದ್ಯಂತ ಸಂಘವು ಉಗ್ರ ಹೋರಾಟ ಮಾಡಲು ನಿರ್ಧರಿಸಿದೆ. ಈ ಕುರಿತು ಬರುವ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಚರ್ಚಿಸಿ, ಹೋರಾಟದ ರೂಪುರೇμÉಗಳನ್ನು ನಿರ್ಧರಿಸಲಾಗುತ್ತಿದೆ ಎಂದು ಅವರು ಹೇಳಿದರು.
ತಮ್ಮ ಅಧ್ಯಕ್ಷತೆಯಲ್ಲಿ ರಾಜ್ಯ ನೌಕರರ ಸಂಘವು ಸಲ್ಲಿಸಿದ್ದ ಬಹುತೇಕ ಬೇಡಿಕೆಗಳನ್ನು ಯಾವುದೇ ಹೊರಾಟಗಳಿಗೆ ಆಸ್ಪದವಿಲ್ಲದಂತೆ ರಾಜ್ಯ ಸರಕಾರವು ಸಕಾರಾತ್ಮಕವಾಗಿ ಸ್ಪಂದಿಸಿ, ಈಡೆರಿಸಿದೆ.ಕೋವಿಡ್ದಂತ ವಿಷಮ ಪರಿಸ್ಥಿತಿಯಲ್ಲಿಯೂ ಯಾವುದೇ ರೀತಿಯಲ್ಲಿ ವೇತನ ಕಡಿತಗೊಳಿಸದೆ ನೌಕರರ ವಿಶ್ವಾಸ ಗಳಿಸಿದೆ. ಆರೋಗ್ಯ ಯೋಜನೆ, ಹೆಣ್ಣುಮಕ್ಕಳಿಗೆ 6 ತಿಂಗಳ ವೇತನ ಸಹಿತ ರಜೆ, ಬಾಕಿ ಉಳಿದಿದ್ದ ಅರಿಯರ್ಸ್ ಹಣ ಬಿಡುಗಡೆ, ಗಳಿಕೆ ರಜೆ ನಗದೀಕರಣಕ್ಕೆ ಅವಕಾಶ, ಕೋವಿಡ್ ನಿಂದ ಉಂಟಾದ ನೌಕರನ ಸಾವಿಗೆ ಪರಿಹಾರಧನ ಹೀಗೆ ಹತ್ತು ಹಲವು ಯೋಜನೆಗಳನ್ನು ರಾಜ್ಯ ಸರಕಾರಿ ನೌಕರರ ಹಿತಾಸಕ್ತಿ ಕಾಪಾಡಲು ರಾಜ್ಯ ಸರಕಾರದಿಂದ ಸಂಘವು ಜಾರಿಗೊಳಿಸಿದೆ ಎಂದು ಅವರು ತಿಳಿಸಿದರು.
ರಾಜ್ಯ ಸರಕಾರ ಜಾರಿಗೊಳಿಸಿರುವ ನೂತನ ಪಿಂಚಣಿ ಯೋಜನೆ (ಎನ್.ಪಿ.ಎಸ್)ಯು ತಾರತಮ್ಯದಿಂದ ಕೂಡಿದ್ದು, ಇದರಿಂದಾಗಿ 2006 ರಿಂದ ನೇಮಕವಾದ ಎಲ್ಲ ನೌಕರಿಗೆ ಅನ್ಯಾಯವಾಗುತ್ತದೆ. ಎನ್.ಪಿ.ಎಸ್. ರದ್ದುಗೊಳಿಸುವುದು ನಮ್ಮ ನೌಕರರ ಬಹುದಿನಗಳ ಬೇಡಿಕೆಯಾಗಿದ್ದು, ಸಂಘವು ಈ ಕುರಿತು ಉಗ್ರ ಹೋರಾಟ ಮಾಡಲು ಸಿದ್ದತೆ ನಡೆಸಿದೆ ಎಂದು ಸಿ.ಎಸ್.ಷಡಾಕ್ಷರಿ ಹೇಳಿದರು.
ಕೋವಿಡ್ ಸಾಂಕ್ರಾಮಿಕ ರೋಗವನ್ನು ತಡೆಗಟ್ಟವ ಕಾರ್ಯದಲ್ಲಿ ತೊಡಗಿದ್ದ ನಮ್ಮ ಅನೇಕ ಸರಕಾರಿ ನೌಕರರರು ತಮ್ಮ ಪ್ರಾಣ ಕಳೆದುಕೊಂಡುದ್ದಾರೆ. ಅನೇಕ ಅಧಿಕಾರಿ, ಸಿಬ್ಬಂದಿಗಳು ರಾತ್ರಿ,ಹಗಲು ಎನ್ನದೆ ಕೋವಿಡ್ ನಿಯಂತ್ರಣಕ್ಕಾಗಿ ಕರ್ತವ್ಯ ನಿರ್ವಹಿಸಿದ್ದರಿಂದ ಅದು ನಿಯಂತ್ರಣವಾಗಿದೆ. ಸರಕಾರದ ಆದೇಶ, ಯೋಜನೆಗಳನ್ಬು ಜನಸಾಮಾನ್ಯರಿಗೆ ತಲುಪಿಸುವ ಮೂಲಕ ಸರಕಾರದ ಬಗ್ಗೆ ಸಾರ್ವಜನಿಕರಲ್ಲಿ ಉತ್ತಮ ಭಾವನೆ, ಗೌರವ ಮೂಡಿಸುತ್ತಾರೆ. ಆದ್ದರಿಂದ ಸರಕಾರಗಳು ನೌಕರರ ಬೇಡಿಕೆಗಳಿಗೆ ಸ್ಪಂದಿಸುವ ಮೂಲಕ ವಿಶ್ವಾಸ ಉಳಿಸಿಕೊಳ್ಳಬೇಕು. ಇಲ್ಲದಿದ್ದರೆ ಹೋರಾಟ ಅನಿವಾರ್ಯವಾಗುತ್ತದೆ ಎಂದು ಅವರು ಎಚ್ಚರಿಸಿದರು.
ಮುಖ್ಯ ಅತಿಥಿಗಳಾಗಿದ್ದ ಶಾಸಕ ಅಮೃತ ದೇಸಾಯಿ ಅವರು ಮಾತನಾಡಿ, ಕಾರ್ಯಾಂಗ ಮತ್ತು ಶಾಸಕಾಂಗ ಎರಡು ಎತ್ತುಗಳಿದ್ದಂತೆ. ಅವುಗಳು ಜೊತೆಯಾಗಿ, ಹಿತವಾಗಿ ಕೂಡಿ ಕೆಲಸ ಮಾಡಿದರೆ ಮಾತ್ರ ಅಭಿವೃದ್ಧಿ ಸಾಧ್ಯವಾಗುತ್ತದೆ. ತಮ್ಮ ಶಾಸಕತ್ವ ಅವಧಿಯಲ್ಲಿ ಸರಕಾರಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಶ್ರಮಿಸಿ, ಸರಕಾರದ ಸೌಲಭ್ಯಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸಿದ್ದಾರೆ. ಅವರ ಕಾರ್ಯದಿಂದ ಸರಕಾರ ಮತ್ತು ತಮ್ಮ ಬಗ್ಗೆ ಜನರಲ್ಲಿ ವಿಶ್ವಾಸ, ಗೌರವ ಇನ್ನಷ್ಟು ಹೆಚ್ಚಿದೆ. ನಾನು ಜನತೆಯ ಪರವಾಗಿ ಎಲ್ಲ ಸರಕಾರಿ ನೌಕರರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.
ಕಾರ್ಯಕ್ರಮದಲ್ಲಿ ಪ್ರೇರಣಾ ನುಡಿಗಳನ್ನಾಡಿದ ಉಪವಿಭಾಗಾಧಿಕಾರಿ ಡಾ.ಗೋಪಶಲ ಕೃಷ್ಣ ಬಿ., ಸಾಧನೆಗೆ ಛಲ ಬೇಕು. ವಿದ್ಯಾರ್ಥಿಗಳು ಸ್ವಯಂ ನಿಯಂತ್ರಣ, ಓದಿನ ಬಗ್ಗೆ ಆಸಕ್ತಿ, ವಿಷಯಗಳನ್ನು ತಿಳಿಯುವ ಕುತೂಹಲ ಮತ್ತು ಆಳವಾದ ಅಧ್ಯಯನ ಅಳವಡಿಸಿಕೊಳ್ಳಬೇಕು. ಆಶಾಭಾವನೆಯಿಂದ ಕಷ್ಟಪಟ್ಟು ಪ್ರಾಮಾಣಿಕವಾಗಿ ಪ್ರಯತ್ನಿಸಿದರೆ ಎಲ್ಲವೂ ಸಾಧ್ಯ. ಪ್ರಾಮಾಣಿಕವಾಗಿ ಓದಿ ಪ್ರಯತ್ನ ಪಡುವವರಿಗೆ ಐಎಎಸ್, ಐಪಿಎಸ್, ಕೆಎಎಸ್ ಯಾವುದು ಕಷ್ಟವಲ್ಲ. ತಮಗೆ ಆಸಕ್ತಿ ಇರುವ ಕ್ಷೇತ್ರಗಳಲ್ಲಿ ಬೆಳೆಯಬೇಕು ಎಂದು ಅವರು ಹೇಳಿದರು.
ಎಐಪಿಟಿಎಪ್ ಉಪಾಧ್ಯಕ್ಷ ಬಸವರಾಜ ಗುರಿಕಾರ ಅವರು ಮಾತನಾಡಿ, ಸಂಘದ ಬೆಳವಣಿಗೆ, ಕಾರ್ಯಚಟುವಟಿಕೆ ಮತ್ತು ಸಾಧನೆಗಳ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು. ರಾಜ್ಯ ಘಟಕದ ಖಜಾಂಚಿ ಶ್ರೀನಿವಾಸ ಆರ್, ರುದ್ರಪ್ಪ, ಮತ್ತು ಜಿಲ್ಲಾ ಖಜಾಂಚಿ ರಾಜಶೇಖರ ಬಾಣದ, ನೌಕರ ಭವನದ ಕಾರ್ಯದರ್ಶಿ ಗಿರೀಶ ಚೌಡಕಿ, ವಿವಿಧ ತಾಲೂಕಾ ಅಧ್ಯಕ್ಷರಾದ ಪ್ರಹ್ಲಾದ ಗೆಜ್ಜಿ, ವಿ.ಎಪ್.ಚುಳಕಿ, ಎ.ಬಿ.ಕೊಪ್ಪದ, ಎಸ್.ಎನ್.ಅರಳಿಕಟ್ಟಿ, ಆರ್.ಎಮ್.ಹೊಲ್ತಿಕೋಟಿ ಸೇರಿದಂತೆ ಇತರರು ವೇದಿಕೆಯಲ್ಲಿದ್ದರು.
ಸಂಘದ ಕಾರ್ಯದರ್ಶಿ ಮಂಜುನಾಥ ಯಡಳ್ಳಿ ಅವರು ಎಸ್.ಎಸ್.ಎಲ್.ಸಿ ಸಾಧಕ ವಿದ್ಯಾರ್ಥಿಗಳನ್ನು ಮತ್ತು ಸಂಘದ ಉಪಾಧ್ಯಕ್ಷ ಎಪ್.ವಿ.ಮಂಜಣ್ಣವರ ಅವರು ಪಿಯುಸಿ ಪರೀಕೆಯ ಸಾಧಕ ವಿದ್ಯಾರ್ಥಿಗಳನ್ನು ವೇದಿಕೆಗೆ ಆಹ್ವಾನಿಸಿ, ಅವರ ಸಾಧನೆಯನ್ನು ಕಾರ್ಯಕ್ರಮದಲ್ಲಿ ಪ್ರಸ್ತುತಪಡಿಸಿದರು.
ಜಿಲ್ಲಾ ಅಧ್ಯಕ್ಷ ಎಸ್.ಎಫ್.ಸಿದ್ದನಗೌಡ್ರ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ಪ್ರಧಾನಕಾರ್ಯದರ್ಶಿ ಎಸ್.ಜಿ.ಸುಬ್ಬಾಪುರಮಠ ಸ್ವಾಗತಿಸಿದರು. ಗೌರವಉಪಾಧ್ಯಕ್ಷ ಆರ್.ಬಿ.ಲಿಂಗದಾಳ ಹಾಗೂ ಶಾಂತಾ ಶೀಲವಂತರ ಕಾರ್ಯಕ್ರಮ ನಿರೂಪಿಸಿದರು. ರಾಜ್ಯ ಪರಿಷತ್ ಸದಸ್ಯ ದೇವಿದಾಸ ಶಾಂತಿಕರ ವಂದಿಸಿದರು.ಕಾರ್ಯಕ್ರಮದಲ್ಲಿ ರಾಜ್ಯ,ಜಿಲ್ಲಾ ಮತ್ಯು ತಾಲೂಕಾ ಘಟಕಗಳ ಪದಾಧಿಕಾರಿಗಳು, ಸರಕಾರಿ ನೌಕರರು, ಸಾಧಕ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಜುಲೈ 1 ರಿಂದ ಹೊಸ ಕ್ರಿಮಿನಲ್ ಕಾನೂನು ಜಾರಿ
ಸುದ್ದಿದಿನಡೆಸ್ಕ್:ಹೊಸ ಕ್ರಿಮಿನಲ್ ಕಾನೂನುಗಳನ್ನು ಜಾರಿಗೆ ತರುವ ನಿರ್ಧಾರವನ್ನು ಕೇಂದ್ರ ಸರ್ಕಾರ ಮರು ಪರಿಶೀಲಿಸುತ್ತಿಲ್ಲ ಎಂದು ಕೇಂದ್ರ ಕಾನೂನು ಮತ್ತು ನ್ಯಾಯ ಖಾತೆ ರಾಜ್ಯ ಸಚಿವ ಅರ್ಜುನ್ ರಾಮ್ ಮೇಘವಾಲ್ ಸ್ಪಷ್ಟಪಡಿಸಿದ್ದಾರೆ.
ಭಾರತೀಯ ದಂಡ ಸಂಹಿತೆ 1860, ಭಾರತೀಯ ಸಾಕ್ಷ್ಯ ಕಾಯ್ದೆ 1872 ಮತ್ತು ಅಪರಾಧ ಪ್ರಕ್ರಿಯಾ ಸಂಹಿತೆ 1973 ಅನ್ನು ಬದಲಿಸುವ ಕಾನೂನುಗಳು ಜುಲೈ 1 ರಿಂದ ಜಾರಿಗೆ ಬರಲಿವೆ ಎಂದು ಅವರು ಹೇಳಿದ್ದಾರೆ. ಭಾರತೀಯ ನ್ಯಾಯ್ ಸಂಹಿತಾ, ಭಾರತೀಯ ಸುರಕ್ಷಾ ಸಂಹಿತಾ ಮತ್ತು ಭಾರತೀಯ ಸಾಕ್ಷ್ಯ ಅಧಿನಿಯಮ್ ಎಂಬ ಹೊಸ ಕ್ರಿಮಿನಲ್ ಕಾನೂನುಗಳು ಜುಲೈ 1 ರಿಂದ ಜಾರಿಗೆ ಬರಲಿವೆ ಎಂದು ತಿಳಿಸಿದ್ದಾರೆ.
“ಐಪಿಸಿ, ಸಿಆರ್ಪಿಸಿ ಹಾಗೂ ಭಾರತೀಯ ಸಾಕ್ಷ್ಯ ಕಾಯ್ದೆಗಳು ಬದಲಾಗುತ್ತಿವೆ. ಸೂಕ್ತ ಸಮಾಲೋಚನೆ ಪ್ರಕ್ರಿಯೆ ಅನುಸರಣೆ ಹಾಗೂ ಕಾನೂನು ಆಯೋಗದ ವರದಿಗಳನ್ನು ಗಮನದಲ್ಲಿಟ್ಟುಕೊಂಡು ಈ ಮೂರು ಕಾನೂನುಗಳನ್ನು ಬದಲಾಯಿಸಲಾಗಿದೆ” ಎಂದು ಮೇಘವಾಲ್ ತಿಳಿಸಿದರು.”
ಈ ಮೂರು ಕಾನೂನುಗಳನ್ನು ಜುಲೈ 1 ರಿಂದ ಭಾರತೀಯ ನ್ಯಾಯ್ ಸಂಹಿತಾ, ಭಾರತೀಯ ಸುರಕ್ಷಾ ಸಂಹಿತಾ ಮತ್ತು ಭಾರತೀಯ ಸಾಕ್ಷ್ಯ ಅಧಿನಿಯಮ್ ಎಂಬ ಹೆಸರಿನಲ್ಲಿ ಜಾರಿಗೆ ತರಲಾಗುವುದು. ಮೂರು ಹೊಸ ಕಾನೂನುಗಳ ತರಬೇತಿ ಸೌಲಭ್ಯಗಳನ್ನು ಎಲ್ಲಾ ರಾಜ್ಯಗಳಿಗೂ ಒದಗಿಸಲಾಗುತ್ತಿದೆ” ಎಂದು ಮೇಘವಾಲ್ ವಿವರಿಸಿದ್ದಾರೆ.”
ನಮ್ಮ ನ್ಯಾಯಾಂಗ ಅಕಾಡೆಮಿಗಳು, ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯಗಳು ಸಹ ಈ ಬಗ್ಗೆ ತರಬೇತಿ ನೀಡುತ್ತಿವೆ. ಎಲ್ಲವೂ ಜೊತೆಜೊತೆಯಾಗಿ ಸಾಗುತ್ತಿದೆ ಮತ್ತು ಜುಲೈ 1 ರಿಂದ, ಕ್ರಿಮಿನಲ್ ನ್ಯಾಯ ವ್ಯವಸ್ಥೆಗೆ ನಿರ್ಣಾಯಕವಾದ ಈ ಎಲ್ಲಾ ಮೂರು ಕಾನೂನುಗಳನ್ನು ದೇಶದಲ್ಲಿ ಜಾರಿಗೆ ತರಲಾಗುವುದು” ಎಂದು ಅವರು ಸ್ಪಷ್ಟಪಡಿಸಿದರು.
ದೇಶದಲ್ಲಿ ಅಪರಾಧ ನ್ಯಾಯ ಸುಧಾರಣೆಯು ದೇಶದ ನ್ಯಾಯದಾನ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಯನ್ನು ಇದು ಸೂಚಿಸುತ್ತದೆ. ಮಹಿಳೆಯರು, ಮಕ್ಕಳು ಮತ್ತು ರಾಷ್ಟ್ರದ ವಿರುದ್ಧದ ಅಪರಾಧಗಳನ್ನು ಇದು ಮುಂಚೂಣಿಯಲ್ಲಿರಿಸುತ್ತದೆ. ಅಲ್ಲದೆ ಇದು ವಸಾಹತುಶಾಹಿ ಯುಗದ ಕಾನೂನುಗಳಿಗೆ ಸಂಪೂರ್ಣವಾಗಿ ವಿರುದ್ಧವಾಗಿದೆ ಎಂದು ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಕರ್ನಾಟಕದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ; ವ್ಯಾಪಕ ಟೀಕೆ
ಸುದ್ದಿದಿನಡೆಸ್ಕ್: ಕರ್ನಾಟಕದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಸರ್ಕಾರದ ಕ್ರಮವನ್ನು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ಟೀಕಿಸಿದ್ದಾರೆ.
ರಾಜ್ಯ ಸರ್ಕಾರ ಮೊನ್ನೆಯಿಂದ ಜಾರಿಗೆ ಬರುವಂತೆ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಮಾರಾಟ ತೆರಿಗೆಯನ್ನು ಹೆಚ್ಚಿಸಿದ ನಂತರ ರಾಜ್ಯದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 3 ರೂಪಾಯಿ ಹಾಗೂ ಡೀಸೆಲ್ 3.5 ರೂಪಾಯಿಗಳಷ್ಟು ಹೆಚ್ಚಿಸಲಾಗಿದೆ. ಪ್ರತಿ ಕುಟುಂಬದ ಮಹಿಳೆಗೆ ತಿಂಗಳಿಗೆ 8 ಸಾವಿರದ 500 ರೂಪಾಯಿಗಳನ್ನು ವರ್ಗಾವಣೆ ಮಾಡುವ ಭರವಸೆಯನ್ನು ಈಡೇರಿಸುವ ಬದಲು, ಕಾಂಗ್ರೆಸ್ ಆಡಳಿತದ ಕರ್ನಾಟಕ ಸರ್ಕಾರವು, ರಾಜ್ಯದ ಜನರಿಗೆ ಹೊರೆಯಾಗಿದೆ ಎಂದು ಹರ್ದೀಪ್ ಸಿಂಗ್ ಪುರಿ ಸಾಮಾಜಿಕ ಜಾಲತಾಣದಲ್ಲಿ ದೂರಿದ್ದಾರೆ. ಇಂತಹ ನಿರ್ಧಾರ ಹಣದುಬ್ಬರದ ಬಗ್ಗೆ ಮಾತನಾಡುವ ಕಾಂಗ್ರೆಸ್ನ ಬೂಟಾಟಿಕೆ ಬಹಿರಂಗಪಡಿಸುತ್ತದೆ. ಆದರೆ ಬಿಜೆಪಿ ಆಡಳಿತವಿರುವ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದ ಕಾಂಗ್ರೆಸ್ ಸರ್ಕಾರ ಪ್ರತಿ ಲೀಟರ್ಗೆ ಸುಮಾರು 8 ರೂಪಾಯಿಗಳಿಂದ 12 ರೂಪಾಯಿಗಳಷ್ಟು ಹೆಚ್ಚುವರಿ ವ್ಯಾಟ್ ಅನ್ನು ವಿಧಿಸುತ್ತಿದೆ ಎಂದು ಸಚಿವರು ಆರೋಪಿಸಿದ್ದಾರೆ.
ಈ ವಿಚಾರದ ಕುರಿತು ಪ್ರತಿಕ್ರಿಯಿಸಿರುವ ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಖಾತೆ ಸಚಿವ ಪ್ರಲ್ಹಾದ್ ಜೋಶಿ, ರಾಜ್ಯ ಸರ್ಕಾರ ಮುಂದಾಲೋಚನೆ ಇಲ್ಲದೇ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು, ಈಗ ಆರ್ಥಿಕ ಹೊರೆ ತಡೆಯಲು ಪೆಟ್ರೋಲ್ ಡಿಸೇಲ್ ಬೆಲೆ ಏರಿಕೆ ಮಾಡಿದೆ ಎಂದು ಹುಬ್ಬಳ್ಳಿಯಲ್ಲಿ ಆರೋಪಿಸಿದ್ದಾರೆ.
ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಿಂದ ಬಸ್ ದರ, ಹಾಲಿನ ದರ, ಅಗತ್ಯ ವಸ್ತುಗಳ ದರ ಹೆಚ್ಚಲಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ಆಡಳಿತದ ವ್ಯವಸ್ಥೆ ಕುಸಿದುಹೋಗಿದೆ ಎಂದು ದೂರಿದ ಅವರು, ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ಹೋರಾಟ ನಡೆಸಲಾಗುವುದು ಎಂದು ಪ್ರಲ್ಹಾದ್ ಜೋಶಿ ಎಚ್ಚರಿಕೆ ನೀಡಿದ್ದಾರೆ.
ಮತ್ತೊಂದೆಡೆ, ರಾಜ್ಯದಲ್ಲಿ ಪೆಟ್ರೋಲ್, ಡಿಸೇಲ್ ದರ ಏರಿಕೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸಮರ್ಥಿಸಿಕೊಂಡಿದ್ದಾರೆ. ವ್ಯಾಟ್ ಹೆಚ್ಚಳ ಬಳಿಕ ದಕ್ಷಿಣ ಭಾರತದ ರಾಜ್ಯಗಳಿಗಿಂತ ಕರ್ನಾಟಕದಲ್ಲಿಯೇ ದರ ಕಡಿಮೆ ಇದೆ. ಆರ್ಥಿಕವಾಗಿ ಬಲಿಷ್ಠವಾಗಿರುವ ಮಹಾರಾಷ್ಟ್ರಕ್ಕಿಂತಲ್ಲೂ ಹಾಗೂ ಗುಜರಾತ್ ಮತ್ತು ಮಧ್ಯಪ್ರದೇಶಕ್ಕಿಂತಲ್ಲೂ ನಮ್ಮ ರಾಜ್ಯದಲ್ಲಿ ದರ ಕಡಿಮೆ ಇದೆ ಎಂದು ಹೇಳಿದ್ದಾರೆ.
ಈ ಹಿಂದಿನ ಬಿಜೆಪಿ ಸರ್ಕಾರ ತೆರಿಗೆ ಕಡಿಮೆ ಮಾಡಿದ್ದರೂ, ಕೇಂದ್ರ ಸರ್ಕಾರ ಪದೇ ಪದೆ ವ್ಯಾಟ್ ಹೆಚ್ಚಳ ಮಾಡಿತ್ತು ಎಂದು ಆರೋಪಿಸಿದ್ದಾರೆ. ರಾಜ್ಯದ ತೆರಿಗೆ ಹೆಚ್ಚಳದಿಂದ ಅಭಿವೃದ್ಧಿ ಕೆಲಸಗಳಿಗೆ ಹೆಚ್ಚು ಒತ್ತು ನೀಡಲಾಗುವುದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ವಿಷಹಾರ | ಹೋಟೆಲ್, ರೆಸ್ಟೋರೆಂಟ್ ತಪಾಸಣೆಗೆ ಕ್ರಮ
ಸುದ್ದಿದಿನಡೆಸ್ಕ್: ಸಾರ್ವಜನಿಕರ ಆರೋಗ್ಯದ ಹಿತದೃಷ್ಠಿಯಿಂದ ಉತ್ತಮ ಗುಣಮಟ್ಟ, ಸ್ವಚ್ಚತೆ ಕಾಪಾಡುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಹೋಟೇಲ್, ರೆಸ್ಟೋರೆಂಟ್ ಹಾಗೂ ಲಘು ಉಪಹಾರ ಕೇಂದ್ರಗಳಲ್ಲಿ The Food Safety and Standards Act-2006 ಮತ್ತು 2011 ನಿಯಮಗಳಲ್ಲಿ ಸೂಚಿಸಿರುವ ಮಾರ್ಗಸೂಚಿಯಂತೆ ತಪಾಸಣೆ ನಡೆಸಿ ಸೂಕ್ತ ರೀತಿಯ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ ಎಂದು ಆಹಾರ ಸುರಕ್ಷತೆ ಮತ್ತು ಗುಣಮಟ್ಟದ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೋಟೆಲ್, ರೆಸ್ಟೋರೆಂಟ್ ಹಾಗೂ ಲಘು ಉಪಹಾರ ಕೇಂದ್ರಗಳಲ್ಲಿ ಸ್ವಚ್ಚತೆ ಇಲ್ಲದೆ, ಕಲುಷಿತ, ವಿಷಹಾರ ಸೇವನೆ, ಕಲಬೆರಕೆ ಪದಾರ್ಥಗಳು, ಅವಧಿ ಮೀರಿದ ಪದಾರ್ಥಗಳ ಉಪಯೋಗಿಸುತ್ತಿರುವಂತೆ ಘಟನೆಗಳು ಸಂಭವಿಸುತ್ತಿದ್ದು, ರಾಮೇಶ್ವರ ಕೆಫೆ, ಇಂದಿರಾನಗರ ಬೆಂಗಳೂರು ಹಾಗೂ ಇನ್ನಿತರೆ ಸಮಸ್ಯೆಗಳಿಗೆ ಸಂಬಂಧಿಸಿದಂತೆ, ಮಾಧ್ಯಮಗಳಲ್ಲಿ ಹಾಗೂ ಸಾಮಾಜಿಕ ಜಾಲತಂಡದಲ್ಲಿ ವರದಿಯಾಗಿರುತ್ತದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ7 days ago
JOB NEWS | ಡಿ.ಇಡಿ ಮತ್ತು ಬಿ.ಇಡಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
-
ಅಂತರಂಗ7 days ago
ನಾಳೆ ಡಾ.ಅಂಬೇಡ್ಕರ್ ಬರಹಗಳು ಮತ್ತು ಅವರ ಪ್ರಭಾವಿತ ಸಾಧಕರ ಸಂದರ್ಶನ ಸರಣಿ ಕಾರ್ಯಕ್ರಮ
-
ದಿನದ ಸುದ್ದಿ6 days ago
ಕೊಲೆ ಕೇಸ್ ; ನಾಳೆ ಚಿತ್ರದುರ್ಗದಲ್ಲಿ ನಟ ದರ್ಶನ್ ವಿರುದ್ಧ ಪ್ರತಿಭಟನೆ
-
ದಿನದ ಸುದ್ದಿ7 days ago
ಮಸ್ಕಿ | ಬಿಜೆಪಿ ಕಚೇರಿಯಲ್ಲಿ ಆತ್ಮಾವಲೋಕನ ಸಭೆ
-
ದಿನದ ಸುದ್ದಿ6 days ago
ಖ್ಯಾತ ಸರೋದ್ ವಾದಕ ಪಂಡಿತ್ ರಾಜೀವ ತಾರಾನಾಥ್ ಇನ್ನಿಲ್ಲ
-
ದಿನದ ಸುದ್ದಿ7 days ago
ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ6 days ago
ಭಾರೀ ಮಳೆ ; ಡ್ಯಾಂಗಳಿಗೆ ಹರಿದು ಬಂದ ನೀರೆಷ್ಟು..? ಇಲ್ಲಿದೆ ಸಂಪೂರ್ಣ ಮಾಹಿತಿ
-
ಅಂತರಂಗ5 days ago
ದಾವಣಗೆರೆ | ಪ್ರೊ. ಎಸ್.ಬಿ. ರಂಗನಾಥ್ ಅವರಿಗೆ ಕೇಂದ್ರ ಕ ಸಾ ಪ ದತ್ತಿ ಪ್ರಶಸ್ತಿ ಪ್ರದಾನ