Connect with us

ದಿನದ ಸುದ್ದಿ

ಬಹುಜನರು ನಂಬಿರುವ ‘ಕತ್ತೆ ಕಥೆ’..!

Published

on

  • ಪರಶುರಾಮ್. ಎ

ಕತ್ತೆ ಕಥೆ ಇದೇನು ಪಂಚತಂತ್ರ ಕತೆಯೊ ಅಥವಾ ನೀತಿಕತೆಯೋ ಅಲ್ಲ. ನಿಮ್ಮಗಳ ನಿಜ ಜೀವನದಲ್ಲಿ ನೀವುಗಳೇ ನಂಬಿರುವ ಕಥೆಯಿದು. ನಿಮ್ಮ ಇಡೀ ಜೀವನದಲ್ಲಿ ಹಾಸು ಹೊಕ್ಕಾಗಿರುವ ದಿನನಿತ್ಯ ಕೈಮುಗಿದು ಮೂರ್ಖರಾಗಿರುವ ಮೂರ್ಖರನ್ನಾಗಿಸಿರುವ ಕತೆ. ಬಹುಶಃ ಈ ಕಥೆಯಲ್ಲಿ ನೀವುಗಳೇ ನಿಮ್ಮ ನಂಬಕೆಗಳೇ ಪ್ರಧಾನ ಆಗಿವೆ.

ನಂಬಿಕೆ, ಭಕ್ತಿ, ಮೌಲ್ಯಗಳನ್ನು ಬಂಡವಾಳವಾಗಿಸಿಕೊಂಡಿರುವವರೇ ಈ ಕಥೆಯ ಸೃಷ್ಟಿಕರ್ತರು. ಯಾವುದೋ ಒಂದು ಕಾಲದಲ್ಲಿ ಹುಟ್ಟಿರಬಹುದಾದ ಈ ಕಥೆ ಇನ್ನೂ ನಿಮ್ಮನ್ನು ಬಂಧನದಲ್ಲಿ ಇಟ್ಟಿದೆ ಎಂದರೆ ಅದಿನ್ನೆಂತಹ ಕ್ರೂರ ಲಾಭಕೋರ ವ್ಯವಸ್ಥೆ ಇರಬಹುದು ನೀವೇ ಊಹಿಸಿ ಯೋಚಿಸಿ! ಈ ಕಥೆ ಬಗ್ಗೆ ಈಗಾಗಲೇ ಕನ್ನಡದ ಲೇಖಕರು ಭಾಷಣಕಾರರು ಬಹುಜನರಿಗೆ ತಿಳಿಸಿ ಎಚ್ಚರಿಸುತಿದ್ದರು ಬಹುಜನರು ಇನ್ನೂ ಅದೇ ಕುತಂತ್ರ ಷಡ್ಯಂತ್ರಗಳಿಗೆ ಬಲಿಯಾಗಿರುವುದು ಸಮಾಜದ ಅಧೋಗತಿಗೆ ಒಂದು ಕಾರಣವು ಹೌದು. ತಮ್ಮನ್ನು ತಾವು ಶೋಷಿಸಿಕೊಳ್ಳುವುದು ಮತಿಹೀನ ಕೃತ್ಯ ಅಜ್ಞಾನ ಮೌಢ್ಯ ಪ್ರದರ್ಶನವಾಗಿದೆ.

ಡಾ.ಸಿದ್ದಲಿಂಗಯ್ಯ ನವರ “ಕತ್ತೆ ಮತ್ತು ಧರ್ಮ” ಕವನದಲ್ಲಿದೆ ನಾನು ಹೇಳಲು ಹೊರಟ ಸಾರಾಂಶ. (ಬಹುಜನರು ಕತ್ತೆ ಮತ್ತು ಧರ್ಮ ಕವನ ಓದಿ) ನಾನು ಇಲ್ಲಿ ಅದರ ಸಣ್ಣ ಸಾರಾಂಶ ಮಾತ್ರ ಉದಾಹರಿಸುವೆ. ಸಿದ್ದಯ್ಯನೆಂಬ ಅಗಸನಿಗೆ ಕತ್ತೆ ಎಂಬುದು ಜೊತೆಗಾರ, ಅದರೊಂದಿಗೆ ಅಪಾರ ಸ್ನೇಹ ಮಮತೆ ಹೊಂದಿದವನು ಈತ. ಎಷ್ಟರಮಟ್ಟಿಗೆ ಎಂದರೆ ಜನಗಳು ಕತ್ತೆಯನ್ನು ಸಿದ್ದಯ್ಯನ ಸಾಕುಮಗಳು ಅನ್ನುವಷ್ಟು ಪ್ರೀತಿ ಒಬ್ಬರಿಗೊಬ್ಬರಿಗೆ.

ಇಂಥ ತನ್ನ ನೆಚ್ಚಿನ ಕತ್ತೆ ಒಂದು ದಿನ ಇದ್ದಕ್ಕಿದ್ದಂತೆ ಕೊನೆಯುಸಿರೆಳೆದು ಮಲಗಿತು. ದಾರಿಯ ಮೂಲೆಯಲ್ಲಿ ಒಂದು ಕಡೆ ಮಣ್ಣು ಮಾಡಿ ಸಮಾಧಿಗೆ ನಮಿಸಿ ಪೂಜಿಸಿ ನೊಂದ ಸಿದ್ದಯ್ಯ ದೇಶಾಂತರ ಹೊರಟು ಹೋದ. ವ್ಯಾಪಾರಕ್ಕೆ ಅದೇ ದಾರಿಯಲ್ಲಿ ಹೊರಟಿದ್ದ ಜಯಶೆಟ್ಟಿ ಎಂಬುವನು ಅಗಸನ ಪೂಜೆ ನೋಡಿ ಯಾವುದೊ ಮಹಾತ್ಮರ ಸನ್ನಿಧಿಯೆಂದುಕೊಂಡು ಕೈ ಮುಗಿದು ತನ್ನ ವ್ಯಾಪಾರಕ್ಕೆ ಮರಳಿದ.

ಶೆಟ್ಟಿಗೆ ಅವತ್ತು ಲಾಭದ ಮೇಲೆ ಲಾಭ ವ್ಯಾಪಾರ ‘ದಿಲ್ಕುಷ್’ ಆಗಿ ಸಮಾಧಿಗೆ ದೇವರಕಂಬ ಎಣ್ಣೆ ತಂದುಕೊಟ್ಟ. ಈ ಸುದ್ದಿ ಇಡೀ ಊರಿಗೆ ಹರಡಿ ಕೆಲವೇ ದಿನಗಳಲ್ಲಿ ಭಕ್ತರು ಹೆಚ್ಚಾಗಿ ಅಲ್ಲೊಂದು ದೇವಾಲಯ ನಿರ್ಮಾಣವಾಗಿ ಪರಿಷೆ ನಡೆಯೊ ಮಟ್ಟಿಗೆ ಬೆಳೆದಿರುತ್ತೆ. ಆ ದೇವಾಲಯದ ಮುಂದೆ ಭಿಕ್ಷುಕರು ಸಣ್ಣ ಸಣ್ಣ ಅಂಗಡಿಗಳು ಜನಗಳು ವೈದಿಕರು, ದಾನ ನೀಡಲು ಸಾಹುಕಾರರು ಎಲ್ಲರೂ ಸೇರಿರುತ್ತಾರೆ.

ಈ ಸುದ್ದಿ ಅರಮನೆಯ ತಲುಪಿ ರಾಜ ರಾಣಿ ಈ ದೇವಾಲಯ(ಅಲ್ಲಲ್ಲ ಕತ್ತೆ ಸಮಾಧಿ) ನೋಡಲು ಬಯಸಿ ಹೊರಟು ಬರುತ್ತಾರೆ. ವರ್ಷ ಕಳೆದ ನಂತರ ಅಗಸ ಸಿದ್ದಯ್ಯ ತಾನು ಮಾಡಿದ ಕತ್ತೆ ಸಮಾಧಿ ಹುಡುಕಿ ಕಾಣಲು ಬರುತ್ತಾನೆ ಆದರೆ ತಳವಾರರು ಅವನನ್ನು ಕತ್ತು ಹಿಡಿದು ಆಚೆ ತಳ್ಳುತ್ತಾರೆ ಇದಿಷ್ಟು ಕವನದ ಸಾರಾಂಶ.

ಈ ಕವನದಲ್ಲಿ ಬಹುಜನರು ನಂಬಿರಬಹುದಾದ ಅನೇಕ ಮೌಢ್ಯಗಳನ್ನು ಹೊತ್ತಿವೆ. ಜ್ಞಾನದ ಮಾರ್ಗವು ಸಹ ಇದೆ. ನಮಗೆಲ್ಲರಿಗೂ ಗೊತ್ತು ಸಿಂಧೂ ಬಯಲಿನ ನಾಗರೀಕತೆಯಿಂದಲೂ ಇಲ್ಲಿನ ಮೂಲನಿವಾಸಿ ತಳಸಮುದಾಯದ “ಬಹುಜನರು” ಪ್ರಾಣಿ- ಪಕ್ಷಿ. ನಾಯಿ. ಪಶುಸಂಗೋಪನೆ, ಕಾಡು ಪ್ರಾಣಿಗಳ ಬೇಟೆಯಲ್ಲಿ ಬಹು ಪ್ರಸಿದ್ಧರು ನಿಷ್ಣತೆಯುಳ್ಳವರು ಕೂಡಾ.

ಅವು ತಮ್ಮ ಜೀವನದ ಅವಿಭಾಜ್ಯ ಅಂಗವೇನೊ ಎಂಬ ಮಟ್ಟಿಗೆ ಸಹ ಪಳಗಿಸಿ ಸಾಕುತ್ತಿದ್ದರು. ಹೀಗೆಯೇ ಸಿದ್ದಯ್ಯನೆಂಬ ಅಗಸ ತನ್ನ ಕತ್ತೆ ಸಾಕಿದ್ದು ಅದು ಸತ್ತ ನಂತರ ಅದರ ಗುರುತಿಗೆ ಮಣ್ಣು ಮಾಡಿ ಧನ್ಯವಾದಕ್ಕಾಗಿ ಪೂಜೆ ಸಲ್ಲಿಸುವುದು ಸಹ ಈ ನೆಲದ ನೈಜ ಸಂಸ್ಕೃತಿಗಳ ಬಿಂಬವೇ ಅಗಿದೆ.

ಈಗಲೂ ಕೂಡ ನಾವುಗಳು ಸತ್ತವರ ಸಮಾಧಿ ಮೇಲೆ ತುಳಸಿ ಗಿಡ ವಿವಿಧ ಸಸಿ ನೆಟ್ಟು ಪೋಷಿಸುವುದು ಕಾಣಬಹುದು.(ಬೆಂಕಿಯಲ್ಲಿ ದೇಹ ಸುಟ್ಟು ಅದರ ಅಸ್ಥಿಯನ್ನು ನೀರಿನಲ್ಲಿ ಬಿಟ್ಟು ಗುರುತೇ ಇಲ್ಲದಂತೆ ಸಂಬಂಧ ಕಡಿದು ಕೊಳ್ಳುವುದು ಕುತಂತ್ರಿ ಆರ್ಯರ ಸಂಸ್ಕೃತಿಯಾಗಿದೆ ನೆನಪಿರಲಿ).

ಮಹಾನವಮಿ ಅಥವಾ ಮಾರ್ನಾಮಿ ಹಬ್ಬದ ಸಂದರ್ಭದಲ್ಲಿ ತೀರಿ ಹೋದ ಹಿರಿಯರಿಗೆ – ವ್ಯಕ್ತಿಗಳಿಗೆ ಎಡೆ ಇಡುವುದು ಈ ನೆಲ ಮೂಲದ ಸಂಸ್ಕೃತಿ, ಪಿಂಡ ಪ್ರದಾನವಲ್ಲ. ಆದರೆ ಈ ಕುತಂತ್ರಕ್ಕೂ ಬಹುಜನರು ಬಲಿಯಾಗಿದ್ದಾರೆ. ಕತ್ತೆ ಸಮಾಧಿಗೆ ಪೂಜೆ ಸಲ್ಲಿಸುವಾಗ ಜಯಶೆಟ್ಟಿ ಎಂಬುವ ವ್ಯಾಪಾರಸ್ಥ ನೋಡಿ ಕೈಮುಗಿದು ಹೋದ ನಂತರ ಲಾಭವಾಯಿತು ಎಂಬುದು ಇಲ್ಲಿ ಬೇರೆಯವರು ಯಾರು ಏನು ಮಾಡುತ್ತಿದ್ದಾರೆ ತಾನು ಅವರಂತೆ ಅನುಕರಿಸುವುದು ಸಾಬೀತಾಗುತ್ತದೆ.

ಆಗಲೇ ಹೇಳಿದಂತೆ ನಮ್ಮದಲ್ಲದ ಪಿಂಡ ಪ್ರದಾನವೂ ಸಹ. ನಿಮಗೆ ಗೊತ್ತಿರಲಿ ಧ್ಯಾನ ಯೋಗ ಪ್ರಾರ್ಥನೆ ವಿವಿಧ ಚಟುವಟಿಕೆ ಯಿಂದ ಮನಸ್ಸು ಉಲ್ಲಾಸಿತಗೊಂಡು ಪಾಸಿಟಿವ್ ನಿಂದ ಆ ದಿನದ ಚಟುವಟಿಕೆಯ ಎಲ್ಲದರ ಮೇಲೂ ಪ್ರಭಾವ ಬೀರುತ್ತದೆ. ಶೆಟ್ಟಿಗೆ ಇಲ್ಲಾಗಿದ್ದು ಅದೇ. ನಂತರ ತನ್ನ ಸ್ವಪ್ರಯತ್ನ ಸ್ವಂತ ಶಕ್ತಿ ಮರೆತವನೊಬ್ಬ ಸಮಾಧಿಯ ಬಗ್ಗೆ ದೊಡ್ಡ ಪುಕಾರು ಮಾಡಿ ಮೌಢ್ಯ ಪ್ರಸಾರದಲ್ಲಿ ತೊಡಗಿದ.

ಅಲ್ಲೊಂದು ಜಾತ್ರೆ ಪೂಜೆ ನಡೆಯುತ್ತದೆ. ದಾನ ವ್ಯವಹಾರ ಆಗುವಂತೆ ಮಾಡುವಲ್ಲಿ ತಾನು ತೊಡಗಿಸಿಕೊಂಡ. ಇಂತದ್ದೇ ಪರಿಸ್ಥಿತಿ ಈಗಲೂ ಕಾಣಬಹುದು. ವರ್ಷ ಕಳೆದ ನಂತರ ಕತ್ತೆ ಸಮಾಧಿಯ ಜಾಗ ಹುಡುಕಿ ಸತ್ಯ ಅರಿತಿದ್ದ ಸಿದ್ದಯ್ಯ ಅಲ್ಲಿಗೆ ಬಂದ. ತಳವಾರ್ರು ಅವನನ್ನು ಕತ್ತು ಹಿಡಿದು ಆಚೆ ತಳ್ಳಿ ದೇವಾಲಯದ ಹತ್ತಿರವು ಬಿಟ್ಟು ಕೊಳ್ಳಲಿಲ್ಲ.

ಇದು ಈಗಲೂ ಸತ್ಯ ಬೇಕಾದರೆ ನೋಡಿ ದೇವಸ್ಥಾನದಲ್ಲಿ ಇರುವ ಸತ್ಯವನ್ನು ವಿವಿಧ ಸಂಶೋಧಕರು, ಲೇಖಕರು ಮೌಢ್ಯಭಂಜಕರು ಅದನ್ನು ಬಯಲಿಗೆಳೆಯುವರು ಎಂಬ ಭಯ ಆ ವರ್ಗಕ್ಕಿದೆ. ಅದಕ್ಕೆ ಆಳುವ ಜನರ ಸಹಕಾರವು ಸಿಗುತ್ತದೆ. ಕತ್ತೆ ಸಮಾಧಿ ಎಲ್ಲಿಯಾದರೂ ಪವಾಡ ಸೃಷ್ಟಿಸಲು ಸಾಧ್ಯವ? ಇಂತಹ ಅದೆಷ್ಟೋ ನಿರ್ವೀರ್ಯ ಕತ್ತೆಯ ಸಮಾಧಿಗಳು ಓಣಿ ಓಣಿಗಳಲ್ಲಿ ರಸ್ತೆ ರಸ್ತೆಯಲ್ಲಿ ಸಿಗುತ್ತವೆ.

ಅದೆಲ್ಲವೂ ದೇವಾಲಯವೆಂಬ ಮೌಢ್ಯದ ಆಸ್ಥಾನಗಳೆಂದು ತಿಳಿದಿರಲಿ. ಇನ್ನೂ ಕರ್ನಾಟಕದ ವಾಗ್ಮಿಗಳಾದ ಗುರುರಾಜ ಕರ್ಜಗಿಯವರು ಕರುಣಾಳು ಬಾ ಬೆಳಕೆ 2ನೇ ಸಂಪುಟದಲ್ಲಿ ಉಲ್ಲೇಖಿಸಿರುವಂತೆ ‘ಸಮಾಧಿಯ ಮಹಿಮೆ’ ಎಂಬ ಲೇಖನ ಸಹ ಇದೇ ಕತೆಯ ತಿರುಳು ಹೊಂದಿದೆ. ಗುರುಕುಲದಲ್ಲಿ ಲೋಕ ಜ್ಞಾನ ವ್ಯವಹಾರ ಜ್ಞಾನವಿಲ್ಲದ ದಡ್ಡ ವಿದ್ಯಾರ್ಥಿಯೊಬ್ಬನಿಗೆ ಬರಗಾಲ ಬಂದಾಗ ಗುರುಗಳು ಆತನಿಗೆ ಒಂದು ಕತ್ತೆಯನ್ನು ನೀಡಿ ನಿನ್ನ ಜೀವನ ನೀನು ನೋಡಿಕೊ ಎಂದು ಕಳುಹಿಸಿ ಕೊಡುವರು.

ಮುಂದೊಂದು ದಿನ ಆ ಕತ್ತೆ ಸತ್ತಾಗ ಅದನ್ನು ಮಣ್ಣು ಮಾಡಿ ಸಮಾಧಿಗೆ ತನಗೆ ತಿಳಿದಂತೆ ದಿನನಿತ್ಯ ಪೂಜೆ ಸಲ್ಲಿಸುತ್ತಿರುತ್ತಾನೆ. ಈ ದಡ್ಡ ವಿದ್ಯಾರ್ಥಿಯ ಕತ್ತೆ ಸಮಾಧಿ ಮುಂದೆ ಅದೊಂದು ಜಾಗೃತ ಸ್ಥಾನವೆಂಬಂತೆ ಪ್ರಚಲಿತಗೊಂಡು ಹರಕೆ ಹೊತ್ತು ಜನ ಬಂದರು. ಈತನ ಆದಾಯ ಹೆಚ್ಚಿತು. ಸಮಾಧಿಗೊಂದು ದೇವಾಲಯ ಶಿಷ್ಯನಿಗೆ ಒಂದು ಕೊಠಡಿ ಆಯಿತು.

ಶಿಷ್ಯನ ಗುರುಗಳು ಭೇಟಿಯಾಗಿ ಅದು ಯಾವ ಮಹಾತ್ಮನ ಕಂಡು ನಿನ್ನ ಜೀವನ ಉದ್ದರಿಸಿಕೊಂಡೆ ಎಂದು ಪ್ರಶ್ನಿಸಿದಾಗ ಶಿಷ್ಯ ನೀವು ಕೊಟ್ಟ ಕತ್ತೆಯೇ ನನ್ನ ಪಾಲಿನ ಮಹಾತ್ಮ: ಅದರ ಸಮಾಧಿಯೇ ಈ ದೇವಾಲಯ. ಅದ ನಂಬಿದ ಮೂರ್ಖ ಮಂದಿಗಳ ಭಕ್ತಿಯೇ ಇಂದಿನ ನನ್ನ ಆದಾಯ ಎಂದು ಹೇಳಿ ಬೆರಗಾಗಿಸಿದ್ದ. ಒಟ್ಟಾರೆ ಈ ಮೇಲಿನ ಎರಡೂ ಕತೆಗಳು ನಂಬಿಕೆಯನ್ನೇ ಬಂಡವಾಳವಾಗಿಸಿಕೊಂಡ ವರ್ಗವೊಂದು ಅದರ ಹೆಸರಿನಲ್ಲಿ ವ್ಯವಹಾರಕ್ಕಿಳಿದು ಪೂಜೆ ಪುರಸ್ಕಾರ ಜಾತ್ರೆ ಹೋಮ ಹವನ ಅರ್ಚನೆ ದಕ್ಷಿಣೆ ಅಂಗಡಿ ಇತರೆ ಎಲ್ಲರಿಂದಲೂ ಲಾಭಗಳನ್ನು ಪಡೆಯುತ್ತ ಬಂದರು.

ತಮ್ಮ ಬುದ್ದಿ ಸಾಮರ್ಥ್ಯ ಮರೆತು ಸತ್ಯವನ್ನರಿಯದ ಗೋಜಿಗೆ, ಸತ್ಯ ಮಾರ್ಗಕ್ಕೆ ಹೋಗದೇ ತಮ್ಮನ್ನು ತಾವೇ ಶೋಷಣೆಗೆ ಒಡ್ಡಿ ಬಹುಜನರು ಪ್ರಜ್ಞಾಹೀನ ಸ್ಥಿತಿಯ ತಲುಪಿದರು. ಮೌಢ್ಯಕ್ಕೆ ಬಲಿಯಾದರು. ಇಂತಹ ವರ್ಣ ರಂಜಿತ ಕತೆಗಳನ್ನು ಈಗಲೂ ಹಲವಾರು ದೇವರು ನಂಬಿ ನಿಮಗೆ ಒಳ್ಳೆಯದಾಗುತ್ತೆ, ನಾನು ಹೇಳೊದು ಕೇಳಿ: ಹೇಳಿದಂತೆ ಮಾಡಿ ನಿಮ್ಮ ಭವಿಷ್ಯ ಸರಿ ಹೋಗುತ್ತೆ ಎಂದು ಬೊಬ್ಬೆ ಇಡುವವರೇ ಹೆಚ್ಚು. ಇಂತಹವರ ಮದ್ಯದಲ್ಲಿ ಸತ್ಯ ನುಡಿಯುವ ಬಹುಜನರಿಗೆ ವೈಚಾರಿಕತೆ ಬಿತ್ತುವ ಸತ್ಯ ಮಾರ್ಗಕ್ಕೆ ಮಾರ್ಗದರ್ಶನ ನೀಡುವ ಶ್ರೀನಿಜಗುಣಾನಂದ ಸ್ವಾಮಿಗಳೇ ನಮ್ಮೆಲ್ಲರಿಗೂ ಆದರ್ಶ.

ನಿಜಗುಣ ಸ್ವಾಮಿಗಳು ವಿವಿಧ ವೇದಿಕೆಯಲ್ಲಿ ಈ ಮೇಲಿನ ಕತೆಯನ್ನು ಉದಾಹರಿಸಿ ಜನರನ್ನು ಮೌಢ್ಯದಿಂದ ಬಿಡುಗಡೆಗೊಳಿಸಲು ಪ್ರಯತ್ನಿಸಿದ್ದಾರೆ. ಜನರಿಗೆ ತಿಳಿ ಹೇಳಿ ಜ್ಞಾನ ಹಂಚುತ್ತಿದ್ದಾರೆ. ನಮಗೆ ಆದರ್ಶವಾಗಬೇಕಾದವರು ನಿಜಗುಣ ಸ್ವಾಮೀಜಿಗಳೆ ಹೊರತು ಬ್ರಹ್ಮಾಂಡ ಅಂಡ ಪಿಂಡ ದಿನ ವಾರ ವರ್ಷ ಭವಿಷ್ಯ ನುಡಿವ, ಸ್ತ್ರೀವಶ, ಧನಪ್ರಾಪ್ತಿ ಅತ್ತೆ ಸೊಸೆ ಕಿತ್ತಾಟ ಕೋರ್ಟ್ ಕೇಸ್ ಈಡೇರಿಸಿ ಕೊಡುವೆನೆಂಬ ಸಾಧು ಗುರೂಜಿಗಳಲ್ಲ. ನಿಮ್ಮನ್ನು ಮೌಢ್ಯದಿಂದ ಬಿಡುಗಡೆಗೊಳಿಸಿ ಸನ್ಮಾರ್ಗದಲ್ಲಿ ಕೊಂಡೊಯ್ಯುವವರ ಬಳಿ ಸಾಗಿ. ಮೌಢ್ಯದ ಬಾವಿಗೆ ಹಾಕುವವರೆಡೆಯಲ್ಲ. ಈ ಕತ್ತೆ ಕಥೆ ನಿಮಗೆ ಸತ್ಯವನ್ನು ತಿಳಿಯಲು ಸಾಧ್ಯವಾಯಿತು ಎಂದು ಭಾವಿಸಿ ಕುವೆಂಪುರವರ ಈ ಸಾಲು

ಸುಳ್ಳಿನ ಮಾಲೆಯ ಕೊರಳಿಗೆ ಸೂಡಿ
ಕಳ್ಳನೊಬ್ಬನನ್ನು ಗುರುವನು ಮಾಡಿ
ಬಡವರ ಹಣವನು ಕಾಣಿಕೆ ನೀಡಿ
ಧರ್ಮವ ಮೆರೆದರು ನೋಡಯ್ಯ

ಪವಾಡ – ಮೂಢನಂಬಿಕೆಗಳು, ದುರ್ಬಲತೆ ಮತ್ತು ಮೃತ್ಯುವಿನ ಸಂಕೇತಗಳು ಅವುಗಳ ಬಗ್ಗೆ ಎಚ್ಚರಿಕೆಯಿಂದಿರಿ”

ಸ್ವಾಮಿ ವಿವೇಕಾನಂದರು

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ವಿಶ್ವ ಮೊಸಳೆಗಳ ದಿನ ; ಮೊಸಳೆ ಬಗ್ಗೆ ನಿಮಗಿಷ್ಟು ತಿಳಿದಿರಲಿ

Published

on

  • ಸಂಜಯ್ ಹೊಯ್ಸಳ

ಪ್ರತಿ ವರ್ಷದ ಜೂನ್ 17 ನ್ನು ವಿಶ್ವ ಮೊಸಳೆ ದಿನವನ್ನಾಗಿ ಆಚರಿಸಲಾಗುತ್ತದೆ. ವಿಶ್ವದಲ್ಲಿ ಪ್ರಮುಖವಾಗಿ 24 ಜಾತಿಯ ಮೊಸಳೆಗಳಿದ್ದು, ಭಾರತದಲ್ಲಿ ಸದ್ಯಕ್ಕೆ 3 ಪ್ರಬೇಧದ ಮೊಸಳೆ ಸಂತತಿಗಳಿವೆ. ಅವುಗಳೆಂದರೆ..

ಉಪ್ಪು ನೀರಿನ ಮೊಸಳೆ (Saltwater crocodile) 
ಮಗ್ಗರ್/ಮಾರ್ಷ್ (Mugger)
ಘಾರಿಯಲ್ (Gharial)

ಇವುಗಳಲ್ಲಿ ಕರ್ನಾಟಕದಲ್ಲಿನ ನದಿಗಳಲ್ಲಿ, ಕೆಲವು ದೊಡ್ಡ ಕೆರೆಗಳಲ್ಲಿ ಕಂಡುಬರುವ ಮೊಸಳೆಗಳು ಮಗ್ಗರ್/ಮಾರ್ಷ್ ಮೊಸಳೆಗಳಾಗಿವೆ. ಕರ್ನಾಟಕದಲ್ಲಿ ಮೊಸಳೆಗಳು ಹೆಚ್ಚಾಗಿ ಉತ್ತರ ಕನ್ನಡ ಜಿಲ್ಲೆಯ ಕಾಳಿ ನದಿ ಪಾತ್ರದಲ್ಲಿ ಕಂಡುಬರುತ್ತವೆ. ಇತ್ತೀಚೆಗೆ ಮೊಸಳೆಯ ದವಣೆಗೆ ಸಿಲುಕಿ‌ ಕೆಲವು ಸಾವು ನೋವಿನ ಪ್ರಕರಣಗಳು ಆ ಭಾಗದಲ್ಲಿ ವರದಿಯಾಗಿವೆ‌.

ಇನ್ನು ಉತ್ತರ ಕರ್ನಾಟಕದ ಭಾಗದ ಕೆಲವು ಪ್ರಮುಖ ನದಿಗಳ ಪಾತ್ರದಲ್ಲೂ ಮೊಸಳೆಗಳು ಆಗಾಗ್ಗೆ ಕಂಡುಬರುತ್ತವೆ. ನಾನು ನೋಡಿದಂತೆ ಉತ್ತರ ಕರ್ನಾಟಕ ಭಾಗಕ್ಕೆ ಹೋಲಿಸಿದರೆ ದಕ್ಷಿಣ ಕರ್ನಾಟಕ ಭಾಗದಲ್ಲಿ ಮೊಸಳೆಗಳ ದಾಳಿ ಪ್ರಕರಣಗಳು ತುಂಬಾ ಕಡಿಮೆ ಎನ್ನಬಹುದು. ಈ‌ ಭಾಗದ ನದಿಗಳಲ್ಲಿ ಮೊಸಳೆಗಳ ಸಂಖ್ಯೆ ಕಡಿಮೆ ಇರುವುದು ಇದಕ್ಕೆ ಕಾರ ಇರಬಹುದು.

ಕಾವೇರಿ ನದಿಯಲ್ಲಿ ಅತಿಹೆಚ್ಚು ಮೊಸಳೆಗಳು‌ ಕಂಡು ಬರುವುದು ಮಂಡ್ಯದ ಶ್ರೀರಂಗಪಟ್ಟಣ ತಾಲ್ಲೂಕಿನ ವಿಶ್ವವಿಖ್ಯಾತ ಪಕ್ಷಿ ಧಾಮವಾದ ರಂಗನತಿಟ್ಟು ಪಕ್ಷಿಧಾಮದಲ್ಲಿ. ಹಿಂದೆ ಪಂಚತಂತ್ರದಲ್ಲಿ ಮೊಸಳೆ ಮತ್ತು ಕೋತಿ‌ಕತೆಯಲ್ಲಿ ಮೊಸಳೆಯ ಹೆಂಡತಿಗೆ ಕೋತಿ‌ ನೇರಳೆ ಹಣ್ಣುಗಳನ್ನು ಹೊತ್ತೊಯ್ಯುವ ಕತೆಯಲ್ಲಿ ಗಂಡ ಮತ್ತು‌ ಹೆಂಡತಿ‌ ಮೊಸಳೆಯನ್ನು ಕಲ್ಪಿಸಿಕೊಂಡು ಮಾತ್ರ ನಾನು ಮೊದಲು ಅವುಗಳ ಸಹಜ ಆವಾಸಸ್ಥಾನದಲ್ಲಿ ಮೊಸಳೆಯನ್ನು ನೋಡಿದ್ದು ನಾಗರಹೊಳೆ ಅರಣ್ಯ ವ್ಯಾಪ್ತಿಯಲ್ಲಿ ಹರಿಯುವ ಲಕ್ಷ್ಮಣತೀರ್ಥ ನದಿಯಲ್ಲಿ. ನಂತರ ಬಂಡೀಪುರ ದಟ್ಟಡವಿಯಲ್ಲಿ ಹರಿಯುವ ಮೂಲೆಹೊಳೆ/ ನುಗು ನದಿಯಲ್ಲಿ…‌ ನಂತರದ ದಿನಗಳಲ್ಲಿ ಕಬಿನಿ, ಪಾಲರ್ ಸೇರಿ ಬಹಳಷ್ಟು ಕಡೆ ಬಹಳಷ್ಟು ಮೊಸಳೆಗಳನ್ನು ನೋಡುವ ಅವಕಾಶ ಸಿಕ್ಕಿತು.

ಘಾರಿಯಲ್ ಗಳು ತುಂಬಾ ಅಪರೂಪದ ಮೊಸಳೆ ಸಂತತಿಗಳಾಗಿದ್ದು, ಸದ್ಯ ಉತ್ತರ ಭಾರತದ ಕೆಲವು ನದಿಗಳು ಹಾಗೂ ನೇಪಾಳದಲ್ಲಿ ಮಾತ್ರ ಇವು ಕಾಣಸಿಗುತ್ತಿವೆ. ಇವುಳನ್ನು IUCN red list ಗೆ ಸೇರಿಸಿದ್ದು, ಇವುಗಳ ಸಂರಕ್ಷಣೆಗೆ ವಿಶೇಷ ಗಮನ ನೀಡಲಾಗಿದೆ.

ನಮಗೆಲ್ಲಾ ಗೊತ್ತಿರುವಂತೆ ಜೀವವೈವಿಧ್ಯತೆಯ ರಕ್ಷಣೆಯಲ್ಲಿ ಎಲ್ಲಾ ಜೀವಿಗಳ‌ ಇರುವಿಕೆ ಬಹಳ ಮುಖ್ಯ. ಜಲಚರಗಳಲ್ಲಿ ಅಗ್ರ ಪರಪಕ್ಷಕಗಳಲ್ಲಿ ಒಂದೆನಿಸಿದ ಮೊಸಳೆ ಜಲಚರ ಜೀವಿಗಳ ಸಮತೋಲನ ಸಾಧಿಸಿ ಅಲ್ಲಿನ ಜೀವವೈವಿಧ್ಯ ಕಾಪಾಡುವಲ್ಲಿ ಇವು ಪ್ರಮುಖ ಪಾತ್ರ ವಹಿಸುತ್ತವೆ. ಹೀಗಾಗಿ ನಾವು ಮೊಸಳೆಗಳನ್ನು ಕೂಡ ಇತರ ಪ್ರಾಣಿಗಳಂತೆ ರಕ್ಷಿಸಬೇಕು.

ಮುಖ್ಯವಾಗಿ ಅವುಗಳ ಆವಾಸಸ್ಥಾನವಾದ ನದಿ, ಸರೋವರದಂತಹ ಜಲಮೂಲಗಳನ್ನು ಸಂರಕ್ಷಿಸಬೇಕು. ಅಲ್ಲಿ ಅಕ್ರಮ ಮರಳುಗಾರಿಗೆ ತಡೆದು, ಜಲಮಾಲಿನ್ಯ ನಿಯಂತ್ರಣ ಮಾಡಬೇಕು. ಹಾಗೆ ಪ್ಲಾಸ್ಟಿಕ್ ತ್ಯಾಜ್ಯಗಳು ನದಿ, ಸರೋವರಗಳನ್ನು ಸೇರದಂತೆ ಕ್ರಮವಹಿಸಬೇಕು. ಹಾಗೆಯೇ ಎಲ್ಲಾದರೂ ಮೊಸಳೆಗಳು ಕಂಡುಬಂದರೆ ಗಾಬರಿಯಾಗದೆ ತಕ್ಷಣ ಅರಣ್ಯ ಇಲಾಖೆಯ ಗಮನಕ್ಕೆ ತರಬೇಕು. (ಬರಹ:ಸಂಜಯ್ ಹೊಯ್ಸಳ,ಫೇಸ್ ಬುಕ್ ನಿಂದ)

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಜುಲೈ 1 ರಿಂದ ಹೊಸ ಕ್ರಿಮಿನಲ್ ಕಾನೂನು ಜಾರಿ

Published

on

ಸುದ್ದಿದಿನಡೆಸ್ಕ್:ಹೊಸ ಕ್ರಿಮಿನಲ್ ಕಾನೂನುಗಳನ್ನು ಜಾರಿಗೆ ತರುವ ನಿರ್ಧಾರವನ್ನು ಕೇಂದ್ರ ಸರ್ಕಾರ ಮರು ಪರಿಶೀಲಿಸುತ್ತಿಲ್ಲ ಎಂದು ಕೇಂದ್ರ ಕಾನೂನು ಮತ್ತು ನ್ಯಾಯ ಖಾತೆ ರಾಜ್ಯ ಸಚಿವ ಅರ್ಜುನ್ ರಾಮ್ ಮೇಘವಾಲ್ ಸ್ಪಷ್ಟಪಡಿಸಿದ್ದಾರೆ.

ಭಾರತೀಯ ದಂಡ ಸಂಹಿತೆ 1860, ಭಾರತೀಯ ಸಾಕ್ಷ್ಯ ಕಾಯ್ದೆ 1872 ಮತ್ತು ಅಪರಾಧ ಪ್ರಕ್ರಿಯಾ ಸಂಹಿತೆ 1973 ಅನ್ನು ಬದಲಿಸುವ ಕಾನೂನುಗಳು ಜುಲೈ 1 ರಿಂದ ಜಾರಿಗೆ ಬರಲಿವೆ ಎಂದು ಅವರು ಹೇಳಿದ್ದಾರೆ. ಭಾರತೀಯ ನ್ಯಾಯ್ ಸಂಹಿತಾ, ಭಾರತೀಯ ಸುರಕ್ಷಾ ಸಂಹಿತಾ ಮತ್ತು ಭಾರತೀಯ ಸಾಕ್ಷ್ಯ ಅಧಿನಿಯಮ್ ಎಂಬ ಹೊಸ ಕ್ರಿಮಿನಲ್ ಕಾನೂನುಗಳು ಜುಲೈ 1 ರಿಂದ ಜಾರಿಗೆ ಬರಲಿವೆ ಎಂದು ತಿಳಿಸಿದ್ದಾರೆ.

“ಐಪಿಸಿ, ಸಿಆರ್‌ಪಿಸಿ ಹಾಗೂ ಭಾರತೀಯ ಸಾಕ್ಷ್ಯ ಕಾಯ್ದೆಗಳು ಬದಲಾಗುತ್ತಿವೆ. ಸೂಕ್ತ ಸಮಾಲೋಚನೆ ಪ್ರಕ್ರಿಯೆ ಅನುಸರಣೆ ಹಾಗೂ ಕಾನೂನು ಆಯೋಗದ ವರದಿಗಳನ್ನು ಗಮನದಲ್ಲಿಟ್ಟುಕೊಂಡು ಈ ಮೂರು ಕಾನೂನುಗಳನ್ನು ಬದಲಾಯಿಸಲಾಗಿದೆ” ಎಂದು ಮೇಘವಾಲ್ ತಿಳಿಸಿದರು.”

ಈ ಮೂರು ಕಾನೂನುಗಳನ್ನು ಜುಲೈ 1 ರಿಂದ ಭಾರತೀಯ ನ್ಯಾಯ್ ಸಂಹಿತಾ, ಭಾರತೀಯ ಸುರಕ್ಷಾ ಸಂಹಿತಾ ಮತ್ತು ಭಾರತೀಯ ಸಾಕ್ಷ್ಯ ಅಧಿನಿಯಮ್ ಎಂಬ ಹೆಸರಿನಲ್ಲಿ ಜಾರಿಗೆ ತರಲಾಗುವುದು. ಮೂರು ಹೊಸ ಕಾನೂನುಗಳ ತರಬೇತಿ ಸೌಲಭ್ಯಗಳನ್ನು ಎಲ್ಲಾ ರಾಜ್ಯಗಳಿಗೂ ಒದಗಿಸಲಾಗುತ್ತಿದೆ” ಎಂದು ಮೇಘವಾಲ್ ವಿವರಿಸಿದ್ದಾರೆ.”

ನಮ್ಮ ನ್ಯಾಯಾಂಗ ಅಕಾಡೆಮಿಗಳು, ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯಗಳು ಸಹ ಈ ಬಗ್ಗೆ ತರಬೇತಿ ನೀಡುತ್ತಿವೆ. ಎಲ್ಲವೂ ಜೊತೆಜೊತೆಯಾಗಿ ಸಾಗುತ್ತಿದೆ ಮತ್ತು ಜುಲೈ 1 ರಿಂದ, ಕ್ರಿಮಿನಲ್ ನ್ಯಾಯ ವ್ಯವಸ್ಥೆಗೆ ನಿರ್ಣಾಯಕವಾದ ಈ ಎಲ್ಲಾ ಮೂರು ಕಾನೂನುಗಳನ್ನು ದೇಶದಲ್ಲಿ ಜಾರಿಗೆ ತರಲಾಗುವುದು” ಎಂದು ಅವರು ಸ್ಪಷ್ಟಪಡಿಸಿದರು.

ದೇಶದಲ್ಲಿ ಅಪರಾಧ ನ್ಯಾಯ ಸುಧಾರಣೆಯು ದೇಶದ ನ್ಯಾಯದಾನ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಯನ್ನು ಇದು ಸೂಚಿಸುತ್ತದೆ. ಮಹಿಳೆಯರು, ಮಕ್ಕಳು ಮತ್ತು ರಾಷ್ಟ್ರದ ವಿರುದ್ಧದ ಅಪರಾಧಗಳನ್ನು ಇದು ಮುಂಚೂಣಿಯಲ್ಲಿರಿಸುತ್ತದೆ. ಅಲ್ಲದೆ ಇದು ವಸಾಹತುಶಾಹಿ ಯುಗದ ಕಾನೂನುಗಳಿಗೆ ಸಂಪೂರ್ಣವಾಗಿ ವಿರುದ್ಧವಾಗಿದೆ ಎಂದು ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕರ್ನಾಟಕದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ; ವ್ಯಾಪಕ ಟೀಕೆ

Published

on

ಸುದ್ದಿದಿನಡೆಸ್ಕ್: ಕರ್ನಾಟಕದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಸರ್ಕಾರದ ಕ್ರಮವನ್ನು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ಟೀಕಿಸಿದ್ದಾರೆ.

ರಾಜ್ಯ ಸರ್ಕಾರ ಮೊನ್ನೆಯಿಂದ ಜಾರಿಗೆ ಬರುವಂತೆ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಮಾರಾಟ ತೆರಿಗೆಯನ್ನು ಹೆಚ್ಚಿಸಿದ ನಂತರ ರಾಜ್ಯದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 3 ರೂಪಾಯಿ ಹಾಗೂ ಡೀಸೆಲ್ 3.5 ರೂಪಾಯಿಗಳಷ್ಟು ಹೆಚ್ಚಿಸಲಾಗಿದೆ. ಪ್ರತಿ ಕುಟುಂಬದ ಮಹಿಳೆಗೆ ತಿಂಗಳಿಗೆ 8 ಸಾವಿರದ 500 ರೂಪಾಯಿಗಳನ್ನು ವರ್ಗಾವಣೆ ಮಾಡುವ ಭರವಸೆಯನ್ನು ಈಡೇರಿಸುವ ಬದಲು, ಕಾಂಗ್ರೆಸ್ ಆಡಳಿತದ ಕರ್ನಾಟಕ ಸರ್ಕಾರವು, ರಾಜ್ಯದ ಜನರಿಗೆ ಹೊರೆಯಾಗಿದೆ ಎಂದು ಹರ್ದೀಪ್ ಸಿಂಗ್ ಪುರಿ ಸಾಮಾಜಿಕ ಜಾಲತಾಣದಲ್ಲಿ ದೂರಿದ್ದಾರೆ. ಇಂತಹ ನಿರ್ಧಾರ ಹಣದುಬ್ಬರದ ಬಗ್ಗೆ ಮಾತನಾಡುವ ಕಾಂಗ್ರೆಸ್‌ನ ಬೂಟಾಟಿಕೆ ಬಹಿರಂಗಪಡಿಸುತ್ತದೆ. ಆದರೆ ಬಿಜೆಪಿ ಆಡಳಿತವಿರುವ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದ ಕಾಂಗ್ರೆಸ್ ಸರ್ಕಾರ ಪ್ರತಿ ಲೀಟರ್‌ಗೆ ಸುಮಾರು 8 ರೂಪಾಯಿಗಳಿಂದ 12 ರೂಪಾಯಿಗಳಷ್ಟು ಹೆಚ್ಚುವರಿ ವ್ಯಾಟ್ ಅನ್ನು ವಿಧಿಸುತ್ತಿದೆ ಎಂದು ಸಚಿವರು ಆರೋಪಿಸಿದ್ದಾರೆ.

ಈ ವಿಚಾರದ ಕುರಿತು ಪ್ರತಿಕ್ರಿಯಿಸಿರುವ ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಖಾತೆ ಸಚಿವ ಪ್ರಲ್ಹಾದ್ ಜೋಶಿ, ರಾಜ್ಯ ಸರ್ಕಾರ ಮುಂದಾಲೋಚನೆ ಇಲ್ಲದೇ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು, ಈಗ ಆರ್ಥಿಕ ಹೊರೆ ತಡೆಯಲು ಪೆಟ್ರೋಲ್ ಡಿಸೇಲ್ ಬೆಲೆ ಏರಿಕೆ ಮಾಡಿದೆ ಎಂದು ಹುಬ್ಬಳ್ಳಿಯಲ್ಲಿ ಆರೋಪಿಸಿದ್ದಾರೆ.

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಿಂದ ಬಸ್ ದರ, ಹಾಲಿನ ದರ, ಅಗತ್ಯ ವಸ್ತುಗಳ ದರ ಹೆಚ್ಚಲಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ಆಡಳಿತದ ವ್ಯವಸ್ಥೆ ಕುಸಿದುಹೋಗಿದೆ ಎಂದು ದೂರಿದ ಅವರು, ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ಹೋರಾಟ ನಡೆಸಲಾಗುವುದು ಎಂದು ಪ್ರಲ್ಹಾದ್ ಜೋಶಿ ಎಚ್ಚರಿಕೆ ನೀಡಿದ್ದಾರೆ.

ಮತ್ತೊಂದೆಡೆ, ರಾಜ್ಯದಲ್ಲಿ ಪೆಟ್ರೋಲ್, ಡಿಸೇಲ್ ದರ ಏರಿಕೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸಮರ್ಥಿಸಿಕೊಂಡಿದ್ದಾರೆ. ವ್ಯಾಟ್ ಹೆಚ್ಚಳ ಬಳಿಕ ದಕ್ಷಿಣ ಭಾರತದ ರಾಜ್ಯಗಳಿಗಿಂತ ಕರ್ನಾಟಕದಲ್ಲಿಯೇ ದರ ಕಡಿಮೆ ಇದೆ. ಆರ್ಥಿಕವಾಗಿ ಬಲಿಷ್ಠವಾಗಿರುವ ಮಹಾರಾಷ್ಟ್ರಕ್ಕಿಂತಲ್ಲೂ ಹಾಗೂ ಗುಜರಾತ್ ಮತ್ತು ಮಧ್ಯಪ್ರದೇಶಕ್ಕಿಂತಲ್ಲೂ ನಮ್ಮ ರಾಜ್ಯದಲ್ಲಿ ದರ ಕಡಿಮೆ ಇದೆ ಎಂದು ಹೇಳಿದ್ದಾರೆ.

ಈ ಹಿಂದಿನ ಬಿಜೆಪಿ ಸರ್ಕಾರ ತೆರಿಗೆ ಕಡಿಮೆ ಮಾಡಿದ್ದರೂ, ಕೇಂದ್ರ ಸರ್ಕಾರ ಪದೇ ಪದೆ ವ್ಯಾಟ್ ಹೆಚ್ಚಳ ಮಾಡಿತ್ತು ಎಂದು ಆರೋಪಿಸಿದ್ದಾರೆ. ರಾಜ್ಯದ ತೆರಿಗೆ ಹೆಚ್ಚಳದಿಂದ ಅಭಿವೃದ್ಧಿ ಕೆಲಸಗಳಿಗೆ ಹೆಚ್ಚು ಒತ್ತು ನೀಡಲಾಗುವುದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending