ದಿನದ ಸುದ್ದಿ
ಕಳೆದೆರಡು ವರ್ಷಗಳಲ್ಲಿ ಹಾರ್ಟ್ ಅಟ್ಯಾಕ್ ಆಗಿ ತೀರಿಕೊಂಡವರೆಷ್ಟು ಮಂದಿ..?
- ರಾಜಾರಾಂ ತಲ್ಲೂರು
ಈ ಹಿಂದೆ ಹೃದಯದ ರಕ್ತನಾಳಗಳಲ್ಲಿ ಯಾವುದೇ ತೊಂದರೆಯ ಹಿನ್ನೆಲೆ ಇಲ್ಲದ, 20-45ವರ್ಷಗಳ ನಡುವಿನ ಪೀಕ್ ಉತ್ಪಾದಕ ಪ್ರಾಯವರ್ಗದ, ದೈಹಿಕವಾಗಿ ಸದೃಢರೂ-ಚಟುವಟಿಕೆ ಭರಿತರೂ ಆಗಿರುವ ಎಷ್ಟು ಮಂದಿ ನಿಮ್ಮ ಕುಟುಂಬ-ಪರಿಚಿತ ವರ್ಗದಲ್ಲಿ ಕಳೆದ ಎರಡು ವರ್ಷಗಳಲ್ಲಿ ಹಠಾತ್ “ಹೃದಯಾಘಾತ/ಹೃದಯ ಸ್ಥಂಭನ/ಸ್ಟ್ರೋಕ್ (ಲಕ್ವಾ)” ಆಗಿ ಅಗಲಿಹೋಗಿದ್ದಾರೆ? ನನಗೆ ನನ್ನ ಕುಟುಂಬ-ಪರಿಚಯವರ್ಗದಲ್ಲಿ ಕನಿಷ್ಠ 15-20 ಇಂತಹ ಪ್ರಕರಣಗಳು ಗಮನಕ್ಕೆ ಬಂದಿವೆ. ಫೇಸ್ಬುಕ್/ಟ್ವಿಟ್ಟರ್ನಂತಹ ಸೋಷಿಯಲ್ ಮೀಡಿಯಾಗಳಲ್ಲಿ ಪ್ರತೀ ವಾರ ಇಂತಹ ಕನಿಷ್ಠ ಎರಡು ಪೋಸ್ಟ್ಗಳನ್ನು ಗಮನಿಸುತ್ತಿದ್ದೇನೆ.
ನಮ್ಮ ಆರೋಗ್ಯ ವ್ಯವಸ್ಥೆಗೆ ಇದು ಇನ್ನೂ ಯಾಕೆ ಗಂಭೀರ ಸಂಗತಿ ಅನ್ನಿಸುತ್ತಿಲ್ಲ?
ಭಾರತದ ಹೃದ್ರೋಗಗಳ ಸೊಸೈಟಿ (CSI) ಪ್ರಕಾರ ಹತ್ತು ವರ್ಷಗಳ ಹಿಂದೆ ದೇಶದಲ್ಲಿ ಹೃದಯದ ರಕ್ತನಾಳಗಳ ತೊಂದರೆ (CVD)ಇರುವವರ ಸಂಖ್ಯೆ 3.6ಕೋಟಿ ಇದ್ದದ್ದು, ಕೋವಿಡ್ ಬರುವ ಮುನ್ನವೇ 6.2ಕೋಟಿಗೆ ಏರಿದೆ. ಈಗ ಕೋವಿಡ್ ಕಾಲದ ಲೆಕ್ಕಾಚಾರಗಳು ಇನ್ನೂ ಲಭ್ಯವಿಲ್ಲ. ಆದರೆ, ಕೋವಿಡ್ ಮೊದಲ ಅಲೆಯ ಕಾಲದಲ್ಲಿ ಲಾಕ್ಡೌನ್ ಕಾರಣದಿಂದಾಗಿ, ಆಸ್ಪತ್ರೆಗಳು ಕೋವಿಡ್ ಗದ್ದಲದಲ್ಲಿ ಮೈಮರೆತಿದ್ದ ಕಾರಣದಿಂದಾಗಿ ಹೃದ್ರೋಗಗಳು ವರದಿಯಾಗುವ ಪ್ರಮಾಣ ಬಹಳ ಕಡಿಮೆಯಾಗಿತ್ತು. ಇದರಿಂದಾಗಿ ಬಹಳ ಮಂದಿ ಸಕಾಲದಲ್ಲಿ ಚಿಕಿತ್ಸೆ ಸಿಗದೆ ತೊಂದರೆಗೀಡಾಗಿರಬಹುದು, ಅವರ ರೋಗ ಉಲ್ಭಣಗೊಂಡಿರಬಹುದು ಎಂದು ಅಧ್ಯಯನಗಳು ಶಂಕೆ ವ್ಯಕ್ತಪಡಿಸಿದ್ದಿದೆ.
ಕೋವಿಡ್ ರೋಗ ಬಂದವರಲ್ಲಿ ರಕ್ತ ಹೆಪ್ಪುಗಟ್ಟುವ ಸಾಧ್ಯತೆಗಳು ಇದ್ದು, ಅದರಿಂದ ಹೃದಯಾಘಾತ, ಮೆದುಳಿನ ಆಘಾತ (ಲಕ್ವಾ) ಆಗುವ ಸಾಧ್ಯತೆಗಳನ್ನು ಈಗಾಗಲೇ ಗುರುತಿಸಲಾಗಿದೆ. ಹೃದಯ-ಮೆದುಳು ಮಾತ್ರವಲ್ಲದೇ ಶ್ವಾಸಕೋಶ, ಕಾಲುಗಳು, ಪಿತ್ತಜನಕಾಂಗ, ಮೂತ್ರಪಿಂಡಗಳ ಮೇಲೂ ರಕ್ತ ಹೆಪ್ಪುಗಟ್ಟುವಿಕೆ ಪರಿಣಾಮ ಬೀರಬಹುದು ಎಂಬುದು ಖಚಿತವಾಗಿದೆ. ಇದೆಲ್ಲ ವೈಜ್ಞಾನಿಕವಾಗಿಯೇ ಖಚಿತವಾಗಿರುವಾಗ, ಭಾರತದಲ್ಲಿ ಈ ಬಗ್ಗೆ ಆರೋಗ್ಯ ವ್ಯವಸ್ಥೆ ಏನು ಕ್ರಮಗಳನ್ನು ಕೈಗೊಂಡಿದೆ?
1. ದೊಡ್ಡ ಪ್ರಮಾಣದಲ್ಲಿ “ಅಸಿಂಪ್ಟಮ್ಯಾಟಿಕ್” ಕೋವಿಡ್ ಬಂದುಹೋದವರು ದೇಶದಲ್ಲಿದ್ದಾರೆ (ಸರ್ಕಾರದ್ದೇ ಸೀರೊಸರ್ವೇ ಪ್ರಕಾರ ದೇಶದ ಪ್ರತೀ ಮೂವರಲ್ಲಿ ಇಬ್ಬರು ಈಗ ಸೋಂಕು ತಗುಲಿಸಿಕೊಂಡಾಗಿದೆ). ಇವರಲ್ಲಿ ರಕ್ತ ಹೆಪ್ಪುಗಟ್ಟುವ ಮತ್ತು ಅದರ ಪರಿಣಾಮಗಳುಂಟಾಗುವ ಸಾಧ್ಯತೆಗಳ ಬಗ್ಗೆ ಅಧ್ಯಯನ ನಡೆದಿದೆಯೆ?
2. ಈಗಾಗಲೇ ದೊಡ್ಡ ಸಂಖ್ಯೆಯಲ್ಲಿ ಆಗಿರುವ ಅಕಾಲಿಕ ಹೃದಯಾಘಾತ-ಸ್ಟ್ರೋಕ್ ಸಾವುಗಳಲ್ಲಿ ರೋಗಿಗಳ ವಿವರವಾದ ಅಟಾಪ್ಸಿ ನಡೆದಿದೆಯೆ? ಸಾವಿಗೆ ಕಾರಣ ಏನು ಎಂಬುದನ್ನು ಪತ್ತೆಹಚ್ಚುವ ಮತ್ತು ಉಳಿಸಬಹುದಾದ ಜೀವಗಳನ್ನು ಉಳಿಸುವ ಪ್ರಯತ್ನಗಳು ನಡೆದಿವೆಯೆ?
3. ಅಮೆರಿಕದಲ್ಲಿ ಜಾನ್ಸನ್ ಅಂಡ್ ಜಾನ್ಸನ್ ಲಸಿಕೆ ಪ್ರಾಯೋಗಿಕ ಹಂತದಲ್ಲಿ ರಕ್ತ ಹೆಪ್ಪುಗಟ್ಟಿಸಿದ ಕಾರಣಕ್ಕೆ ಒಂದೆರಡು ದಿನ ಅಧ್ಯಯನವನ್ನು ಸ್ಥಗಿತಗೊಳಿಸಲಾಗಿತ್ತು. ಈಗಲೂ ಮಕ್ಕಳ ಮೇಲೆ ಲಸಿಕೆ ಪ್ರಯೋಗದ ವೇಳೆ ಹೆಪ್ಪುಗಟ್ಟುವಿಕೆ ದೂರುಗಳ ಹಿನ್ನೆಲೆಯಲ್ಲಿ ಅಧ್ಯಯನಗಳನ್ನು ಸ್ಥಗಿತಗೊಳಿಸಿರುವ ವರದಿಗಳು ಯುರೋಪಿನಲ್ಲಿ ಕೇಳಿಬರುತ್ತಿವೆ. ಲಸಿಕೆಗಳಿಂದ ಈ ರೀತಿಯ ಅಡ್ಡಪರಿಣಾಮಗಳ ಸಾಧ್ಯತೆಯೇನಾದರೂ ಇದೆಯೇ ಎಂಬುದನ್ನು ಭಾರತದಲ್ಲಿ ಔಷಧಿ ಸುರಕ್ಷಾ ವ್ಯವಸ್ಥೆಗಳು ಖಚಿತಪಡಿಸಿಕೊಂಡಿವೆಯೆ?
4. ಅಕಾಲಿಕವಾಗಿ, ಹಠಾತ್ ಹೃದಯಾಘಾತ-ಸ್ಟ್ರೋಕ್ ಆದವರ ಲಸಿಕೆ ಹಿನ್ನೆಲೆ, ಕೋವಿಡ್ ಸೋಂಕಿನ ಹಿನ್ನೆಲೆಗಳ ಡೇಟಾ ಏನಾದರೂ ಗ್ರಾಮ/ನಗರ ಮಟ್ಟದಲ್ಲಿ ಸಂಗ್ರಹಿಸಿಡಲಾಗಿದೆಯೆ? ಇಂತಹ ದಾಖಲೆಗಳು ಮುಂದೊಂದು ದಿನ ಹಿಂತಿರುಗಿ ನೋಡಿ ವಿಶ್ಲೇಷಿಸುವುದಕ್ಕೆ ಮಹತ್ವದವು ಎಂದು ಆರೋಗ್ಯ ವ್ಯವಸ್ಥೆಗೆ ಅನ್ನಿಸಿಲ್ಲವೆ?
ಅಕಾಲಿಕವಾದ CVD ಸಾವುಗಳೆಲ್ಲವೂ ಅನ್ಯಾಯದ ಸಾವುಗಳು. ಆರೋಗ್ಯ ವ್ಯವಸ್ಥೆ ಪರಿಣಾಮಕಾರಿಯಾಗಿದ್ದರೆ, ಉಳಿಸಿಕೊಳ್ಳಬಹುದಾಗಿದ್ದ ಜೀವಗಳವು. ಜನರ ಜೀವಕ್ಕಿಂತ ದುಡ್ಡು ಮುಖ್ಯವಾದಾಗ ಮಾತ್ರ ಇಂತಹ “ದಿವ್ಯ ನಿರ್ಲಕ್ಷ್ಯ” ಕಾಣಿಸಿಕೊಳ್ಳಲು ಸಾಧ್ಯ. ನಾಳೆ ಜನರೇ ಇಲ್ಲದಿದ್ದರೆ ದುಡ್ಡು ಹಿಡ್ಕೊಂಡು ಏನು ಮಾಡ್ತೀರಿ ಸಾರ್?
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಹೊಳಲ್ಕೆರೆ | ಸ್ಪೀಚ್ ಸಂಸ್ಥೆ ಸಂಸ್ಥಾಪಕ ಹೆಚ್.ರಾಮಚಂದ್ರಪ್ಪ ನಿಧನ ; ಇಂದು ಅಂತ್ಯಕ್ರಿಯೆ
ಸುದ್ದಿದಿನ,ಚಿತ್ರದುರ್ಗ:ಜಿಲ್ಲೆಯ ಬ್ಯಾಂಕ್ ಕಾಲೋನಿಯ ಸ್ಪೀಚ್ ಸಂಸ್ಥೆಯ ಸಂಸ್ಥಾಪಕರು ಹಾಗೂ ಎರಡು ಅವಧಿಗೆ ಹೊಳಲ್ಕೆರೆ ತಾಲ್ಲೂಕಿನ ಅರೇಹಳ್ಳಿ ಗ್ರಾಮ ಪಂಚಾಯತ್ ಸದಸ್ಯರಾಗಿದ್ದ ಹೆಚ್.ರಾಮಚಂದ್ರಪ್ಪ (59 ವರ್ಷ) ಶನಿವಾರ ಬೆಳಗ್ಗೆ 10:35 ಕ್ಕೆ ಅನಾರೋಗ್ಯದಿಂದ ನಿಧನರಾದರು.
ಮೃತರು ಪತ್ನಿ, ಸಹೋದರ, ಸಹೋದರಿಯರು ಸೇರಿದಂತೆ ಅಪಾರ ಬಂದು ಮಿತ್ರರನ್ನು ಅಗಲಿದ್ದಾರೆ. ಇವರ ಅಂತ್ಯ ಕ್ರಿಯೆಯನ್ನು ಹೊಳಲ್ಕೆರೆ ಸಮೀಪದ ನೆಹರು ಕಾಲೋನಿಯ ಜಮೀನಿನಲ್ಲಿ ಇಂದು (ಭಾನುವಾರ, ಜೂನ್ 07 ರಂದು ಮಧ್ಯಾಹ್ನ 2 ಗಂಟೆಗೆ) ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ. ಸಂಪರ್ಕ ಮೊಬೈಲ್ ಸಂಖ್ಯೆ : 9740114246
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಆಶ್ರಯ ಯೋಜನೆ – ಆವಧಿ ವಿಸ್ತರಣೆ
ಸುದ್ದಿದಿನ,ದಾವಣಗೆರೆ : 2025-26 ನೇ ಸಾಲಿನ ಪ್ರಧಾನ ಮಂತ್ರಿ ಆವಾಸ್ (ನಗರ) 2.0 ಯೋಜನೆಯಡಿ ನಿವೇಶನ ಮತ್ತು ವಸತಿ ರಹಿತ ಫಲಾನುಭವಿಗಳ ಅರ್ಜಿಗಳನ್ನು ಸಲ್ಲಿಸಲು ಜೂನ್ 30 ರವರೆಗೆ ಅವಧಿಯನ್ನು ವಿಸ್ತರಿಸಲಾಗಿದೆ.
ದಾವಣಗೆರೆ ಮಹಾ ನಗರಪಾಲಿಕೆ ವ್ಯಾಪ್ತಿಯಲ್ಲಿನ ಅರ್ಹ ನಿವೇಶನ ಹಾಗೂ ವಸತಿ ರಹಿತ ಅಂಗವಿಕಲರು, ಹಿರಿಯ ನಾಗರಿಕರು, ಒಂಟಿ ಮಹಿಳೆಯರು, ಪರಿಶಿಷ್ಟ ಜಾತಿ ಮತ್ತು ಪಂಗಡದವರು, ಹಿಂದುಳಿದ, ಅಲ್ಪಸಂಖ್ಯಾತ ವರ್ಗದವರು, ತೃತೀಯ ಲಿಂಗಿಗಳು, ಸ್ವಚ್ಛತಾ ಕಾರ್ಮಿಕರು, PM SVanidhi (ಪಿ ಎಂ -ಸ್ವ ನಿಧಿ )ಯೋಜನೆಯಡಿ ಗುರುತಿಸಲ್ಪಟ್ಟ ಬೀದಿ ವ್ಯಾಪಾರಿಗಳು ಮತ್ತು ಪ್ರಧಾನ ಮಂತ್ರಿ ವಿಶ್ವ ಕರ್ಮ ಯೋಜನೆಯಡಿ ಗುರುತಿಸಿದ ಕುಶಲ ಕರ್ಮಿಗಳು, ಅಂಗನವಾಡಿ ಕಾರ್ಯಕರ್ತರು, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಹಾಗೂ ವಲಸೆ ಬಂದ ಕುಟುಂಬದವರು ಅಗತ್ಯ ದಾಖಲೆಗಳೊಂದಿಗೆ ತಮ್ಮ ಅರ್ಜಿಗಳನ್ನು http://pmayurban.gov.in ಆನ್ಲೈನ್ ವೆಬ್ ಸೈಟ್ ನಲ್ಲಿ ಸಲ್ಲಿಸಬಹುದು ಅಥವಾ ಖುದ್ದಾಗಿ ಮಹಾನಗರ ಪಾಲಿಕೆಯ ಆಶ್ರಯ ಶಾಖೆಗೆ ಭೇಟಿ ನೀಡಿ ಮಾಹಿತಿಯನ್ನು ಪಡೆದು ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸಬಹುದು ಎಂದು ದಾವಣಗೆರೆ ಮಹಾನಗರ ಪಾಲಿಕೆ ಆಯುಕ್ತರಾದ ಡಾ.ಮಹಾಂತೇಶ್ ಅವರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಗರಿಕೆ ಹುಲ್ಲಿನ ಜ್ಯೂಸ್ನಲ್ಲಿದೆ ರಕ್ತದ ಕ್ಯಾನ್ಸರ್ ಗುಣಪಡಿಸುವ ಶಕ್ತಿ
ಗಿರೀಶ್ ಮುತ್ತು
ಗರಿಕೆ ಹುಲ್ಲಿನ ರಸದ ಸೇವನೆಯಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಸಿನೊಡಾನ್ ಡ್ಯಾಕ್ಟಿಲಾನ್ ಪ್ರೊಟೀನ್ ಎಂಬ ಅಂಶವಿದ್ದು, ಇದು ರೋಗನಿರೋಧಕ ಶಕ್ತಿ ಹೆಚ್ಚಲು ಸಹಾಯ ಮಾಡುತ್ತದೆ. ಇದು ಜ್ವರದಂತಹ ಸಮಸ್ಯೆಗಳ ನಿವಾರಣೆಗೆ ಸಹಾಯ ಮಾಡುತ್ತದೆ. ಹಾಗಾಗೊ ವಾರಕೊಮ್ಮೆ ಅಥವಾ ಹದಿನೈದು ದಿನಕ್ಕೊಮ್ಮೆ ಗರಿಕೆ ಹುಲ್ಲಿನ ರಸ ಅಥವಾ ಕಷಾಯದ ಸೇವನೆ ಮಾಡಬೇಕು
ನಾವು ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಹಲವಾರು ರೀತಿಯ ವ್ಯಾಯಾಮ ಮತ್ತು ಡಯಟ್ ಮಾಡುತ್ತೇವೆ. ಈ ಮಳೆಗಾಲದಲ್ಲಿ ಅನೇಕ ಜನರು ಆರೋಗ್ಯ ಸಮಸ್ಯೆಗಳಿಂದ ದೂರವಿರಲು ಹಲವು ಬಗೆಯ ಜ್ಯೂಸ್ ಕುಡಿಯುತ್ತಾರೆ. ಹಣ್ಣು, ತರಕಾರಿ ರಸ ಕುಡಿದು ಆರೋಗ್ಯವಾಗಿರಲು ಪ್ರಯತ್ನಿಸುತ್ತಾರೆ. ಆದರೆ ಈ ಒಂದು ಜ್ಯೂಸ್ ಅನ್ನು ನೀವು ಕುಡಿದರೆ ನಿಮ್ಮತ್ತ ಕಾಯಿಲೆಗಳು ಸುಳಿಯುವುದೇ ಇಲ್ಲ. ಅದುವೇ ಗರಿಕೆ ಹುಲ್ಲುನ ಜ್ಯೂಸ್.
ಹೌದು… ಆಯುರ್ವೇದ ವೈದ್ಯರು ಈ ಮೂಲಿಕೆಯು ಆರೋಗ್ಯಕ್ಕೆ ಹಲವು ವಿಧಗಳಲ್ಲಿ ಪ್ರಯೋಜನಕಾರಿಯಾಗಿದೆ ಎನ್ನುತ್ತಾರೆ. ಇದನ್ನು ಸೇವಿಸುವುದರಿಂದ ದೇಹದಲ್ಲಿನ ಕ್ಯಾನ್ಸರ್ ಪ್ರಮಾಣವನ್ನು ಕಡಿಮೆ ಮಾಡಬಹುದು. ಅಲ್ಲದೆ ಈ ಹುಲ್ಲಿನ ರಸವನ್ನು ಕುಡಿಯುವುದರಿಂದ ರಕ್ತದಲ್ಲಿರುವ ಕ್ಯಾನ್ಸರ್ ಕೋಶಗಳು ಕಡಿಮೆಯಾಗುವುದು ಮಾತ್ರವಲ್ಲದೆ ರಕ್ತ ಶುದ್ಧವಾಗಿರುತ್ತದೆ.
ಈ ಗರಿಕೆ ಹುಲ್ಲಿನಲ್ಲಿ ವಿಟಮಿನ್ ಎ, ಕೆ, ಸಿ ಮತ್ತು ವಿಟಮಿನ್ ಇ ಗಳು ಸಮೃದ್ಧವಾಗಿದೆ. ಇದು ರಕ್ತವನ್ನು ಶುದ್ಧೀಕರಿಸುತ್ತದೆ ಮತ್ತು ರಕ್ತದೊತ್ತಡ, ರಕ್ತಹೀನತೆ ಮತ್ತು ರಕ್ತ ಸಂಬಂಧಿತ ಕಾಯಿಲೆಗಳನ್ನು ಗುಣಪಡಿಸುತ್ತದೆ. ಹಾಗಾದರೆ ಗರಿಕೆ ಹುಲ್ಲಿನ ಜ್ಯೂಸ್ನ ಇತರ ಆರೋಗ್ಯಕರ ಪ್ರಯೋಜನಗಳ ಬಗ್ಗೆ ತಿಳಿಯೋಣ.
ಗರಿಕೆ ರಸದ ಪ್ರಯೋಜನಗಳು
1. ಈ ಗರಿಕೆ ಹುಲ್ಲಿನ ಜ್ಯೂಸ್ ಎಲ್ಲಿಯೂ ಸಿಗುವುದಿಲ್ಲ. ಕೆಲವೆಡೆ ಮಾತ್ರ ಸಿಗುತ್ತದೆ. ಬೇರು ಮತ್ತು ಎಲೆಗಳು ಸೇರಿದಂತೆ ಗರಿಕೆ ಎಲ್ಲಾ ಭಾಗಗಳು ಔಷಧೀಯ ಗುಣಗಳನ್ನು ಹೊಂದಿದೆ. ಇದು ಕೆಲವು ಹಾನಿಕಾರಕ ವ್ಯಾಕ್ಸಿನಿಯಾ ವೈರಸ್ ಎಂಬ ಸೂಕ್ಷ್ಮಜೀವಿಯನ್ನು ನಾಶಪಡಿಸುವ ಗುಣವನ್ನು ಹೊಂದಿದೆ. ಹೀಗಾಗಿ ಈ ಜ್ಯೂಸ್ ಕುಡಿಯುವವರೂ ಇದು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎನ್ನುತ್ತಾರೆ.
2. ಮೂತ್ರಕೋಶದ ಕಲ್ಲುಗಳು, ದೇಹದ ಊತ, ಮಕ್ಕಳಲ್ಲಿ ದೀರ್ಘಕಾಲದ ನೆಗಡಿ, ಮೂಗು ಸೋರುವಿಕೆ, ನೆಗಡಿ, ಅತಿಸಾರ, ಕಣ್ಣಿನ ದೋಷಗಳು, ಮೆದುಳಿನ ರಕ್ತಸ್ರಾವದಂತಹ ಕಾಯಿಲೆಗಳಿಗೆ ಈ ರಸ ತುಂಬಾ ಒಳ್ಳೆಯದು.
3. ಅಲ್ಲದೆ ತೂಕ ನಷ್ಟ, ಕೊಲೆಸ್ಟ್ರಾಲ್ ಕಡಿತ, ನರರೋಗ, ರಕ್ತದ ಕ್ಯಾನ್ಸರ್ ಚಿಕಿತ್ಸೆ, ಕೆಮ್ಮು, ಹೊಟ್ಟೆ ನೋವು, ರಕ್ತಹೀನತೆ, ಸಂಧಿವಾತ, ಹೃದಯ ಅಸ್ವಸ್ಥತೆ, ಚರ್ಮ ರೋಗಗಳು ಇತ್ಯಾದಿಗಳಿಗೆ ಅತ್ಯುತ್ತಮ ಔಷಧವಾಗಿ ಕಾರ್ಯನಿರ್ವಹಿಸುತ್ತದೆ
4. ರಕ್ತದಲ್ಲಿನ ಹಿಮೋಗ್ಲೋಬಿನ್ ಮಟ್ಟವನ್ನು ಹೆಚ್ಚಿಸಲು ಮತ್ತು ರಕ್ತದಿಂದ ವಿಷವನ್ನು ತೆಗೆದುಹಾಕುವಲ್ಲಿ ಗರಿಕೆ ರಸವು ಪರಿಣಾಮಕಾರಿಯಾಗಿದೆ.
5. ಗರಿಕೆ ಹುಲ್ಲಿನ ರಸ ಮತ್ತು ಕೊಬ್ಬರಿ ಎಣ್ಣೆಯನ್ನು ಸಮಪ್ರಮಾಣದಲ್ಲಿ ಬೆರೆಸಿ ಕುದಿಸಬೇಕು.. ನಂತರ ಚರ್ಮರೋಗಗಳಾದ ರಿಂಗ್ವರ್ಮ್ ಮತ್ತು ಒಣ ಚರ್ಮವನ್ನು ತ್ವರಿತವಾಗಿ ಗುಣ ಪಡಿಸುತ್ತದೆ.
6. ಗರಿಕೆ ಹುಲ್ಲು ಬೇಕಾದಷ್ಟು ಸಂಗ್ರಹಿಸಿ, ಸ್ವಲ್ಪ ಅರಿಶಿನವನ್ನು ಸೇರಿಸಿ ಪೇಸ್ಟ್ ಮಾಡಿ ದೇಹಕ್ಕೆ ಉಜ್ಜಿಕೊಂಡರೆ, ಒಂದು ಗಂಟೆ ಬಿಟ್ಟು ನಂತರ ಸ್ನಾನ ಮಾಡಿ. ಇದರಿಂದ ದೇಹದ ತುರಿಕೆ ನಿವಾರಣೆಯಾಗುತ್ತದೆ.
ಗರಿಕೆ ಹುಲ್ಲಿನ ರಸ ತಯಾರಿಸುವುದು ಹೇಗೆ?
*ತಾಜಾ ಗರಿಕೆ ಹುಲ್ಲು ಒಂದು ಹಿಡಿಯಷ್ಟು ತೆಗೆದುಕೊಂಡು ಸ್ವಚ್ಚವಾಗಿ ತೊಳೆದುಕೊಳ್ಳಿ.
* ಬಳಿಕ ಇದನ್ನು ಸಣ್ಣ ಸಣ್ಣ ತುಂಡುಗಳನ್ನಾಗಿ ಕತ್ತರಿಸಿಕೊಳ್ಳಿ.
* ಬಳಿಕ ಇದನ್ನು ಮಿಕ್ಸಿಗೆ ಹಾಕಿ ರುಬ್ಬಿಕೊಳ್ಳಬೇಕು.
* ಚೆನ್ನಾಗಿ ಪೇಸ್ಟ್ ಆದ ಬಳಿಕ ಇದನ್ನು ಸೋಸಿಕೊಳ್ಳಬೇಕು.
* ಬಳಿಕ ಇದನ್ನು ಕುಡಿಯಬೇಕು. ಆದರೆ ಇದು ತಕ್ಷಣದ ಮನೆಮದ್ದಾಗಿದೆ. ಆದರೆ ಯಾವುದೇ ಆರೋಗ್ಯ ಸಮಸ್ಯೆಗಳಿಗೆ ಇದು ಕೊನೆಯ ಮದ್ದು ಅಲ್ಲ. ಹೀಗಾಗಿ ಯಾವುದೇ ಆರೋಗ್ಯ ಸಮಸ್ಯೆಗಳು ಉಂಟಾದಾಗ ಮೊದಲು ವೈದ್ಯರನ್ನು ಸಂಪರ್ಕಿಸುವುದು ತುಂಬಾ ಅವಶ್ಯಕ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days agoದಾವಣಗೆರೆಯಲ್ಲಿ ಸಂಚಾರಿ ಹೈಕೋರ್ಟ್ ಪೀಠ ಸ್ಥಾಪನೆಗೆ ವಕೀಲ ಎಲ್.ಎಚ್.ಅರುಣಕುಮಾರ್ ಮನವಿ
-
ದಿನದ ಸುದ್ದಿ5 days agoಮೊದಲ ಸಂಪುಟ ಸಭೆಯಲ್ಲೇ ಮಹತ್ವದ 5 ಘೋಷಣೆ ಮಾಡಿದ ಸಿಎಂ ಡಿಕೆಶಿ
-
ಅಂಕಣ4 days agoಕೆಪಿಸಿಸಿಯ ನೂತನ ಸಾರಥಿ ಬಿ.ಕೆ. ಹರಿಪ್ರಸಾದ್ ರಾಜಕೀಯ ಪಯಣ
-
ದಿನದ ಸುದ್ದಿ7 days agoದಾವಣಗೆರೆ ವಿಶ್ವವಿದ್ಯಾಲಯ | ಜೂನ್ 2 ರಿಂದ 4 ರವರೆಗೆ ‘ಭಾಷಾಂತರ ಕೌಶಲ್ಯ ತರಬೇತಿ ಶಿಬಿರ’
-
ದಿನದ ಸುದ್ದಿ4 days agoಬಡವರ ಕಲ್ಯಾಣವೇ ನಮ್ಮ ಆಡಳಿತದ ಕೇಂದ್ರಬಿಂದು : ಸಿಎಂ ಡಿಕೆಶಿ
-
ದಿನದ ಸುದ್ದಿ4 days agoಬಿ.ಕೆ. ಹರಿಪ್ರಸಾದ್ ಕೆಪಿಸಿಸಿ ಅಧ್ಯಕ್ಷರಾಗಿ ನೇಮಕ
-
ದಿನದ ಸುದ್ದಿ4 days agoಧನ್ಯವಾದಗಳು ಕರ್ನಾಟಕ : ಸಿಎಂ ಡಿಕೆ ಶಿವಕುಮಾರ್
-
ದಿನದ ಸುದ್ದಿ2 days agoಆಶ್ರಯ ಯೋಜನೆ – ಆವಧಿ ವಿಸ್ತರಣೆ

