Connect with us

ದಿನದ ಸುದ್ದಿ

ಹಿಜಾಬ್ ವಿವಾದ | ಸಂವಿಧಾನದ ಆಶಯದಂತೆ ತೀರ್ಮಾನ ; ಭಾವನೆಗಳನ್ನು ಪಕ್ಕಕ್ಕಿಡಿ : ಹೈಕೋರ್ಟ್ | ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್

Published

on

ಸುದ್ದಿದಿನ,ಬೆಂಗಳೂರು: “ಅನುಚಿತ ಗುಂಪಷ್ಟೇ ವಿವಾದವನ್ನು ಜೀವಂತವಾಗಿಡಬಲ್ಲದು ಮತ್ತು ಸಂವಿಧಾನದ ಮೇಲೆ ಎಲ್ಲರೂ ನಂಬಿಕೆ ಇಡಬೇಕು ಹಾಗೂ ಶಾಂತಿ ಕಾಪಾಡುವಂತೆ ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳಿಗೆ ಮನವಿ” ಇದು ಜನತೆಯಲ್ಲಿ ಕರ್ನಾಟಕ ಹೈಕೋರ್ಟ್(Karnataka High Court) ನ್ಯಾಯಮೂರ್ತಿ ಎಎಸ್ ದೀಕ್ಷಿತ್ ನೇತೃತ್ವದ ಏಕಸದಸ್ಯ ಪೀಠ ಮಾಡಿರುವ ಮನವಿ.

ಕಾಲೇಜಿಗೆ ಹಿಜಬ್(Hijab) ಧರಿಸಿ ಹೋಗಲು ಅವಕಾಶ ನೀಡುವಂತೆ ಕೋರಿ ಉಡುಪಿ ಸರ್ಕಾರಿ ಪಿಯು ಕಾಲೇಜಿನ ವಿದ್ಯಾರ್ಥಿನಿಯರು ಸಲ್ಲಿಸಿದ ಅರ್ಜಿಯ ವಿಚಾರಣೆಯನ್ನು ನಾಳೆ ಮಧ್ಯಾಹ್ನ 2:30ಕ್ಕೆ ಪೀಠ ಮುಂದೂಡಿದೆ. ಇವತ್ತು ವಿದ್ಯಾರ್ಥಿನಿಯರ ಪರ ವಕೀಲ ದೇವದತ್ ಕಾಮತ್ ಅವರಷ್ಟೇ ವಾದ ಮಂಡನೆ ಮಾಡಿದರು. ಮಧ್ಯಹ್ನ 1 ಗಂಟೆಗೆ ಶುರುವಾದ ವಿಚಾರಣೆ ಸಂಜೆ 4:30ರವರೆಗೂ ನಡೆಯಿತು.

ವಾದ-ಪ್ರತಿವಾದದ ಆಲಿಸಿದ ಬಳಿಕ ಇವತ್ತೇ ತೀರ್ಪು ಹೊರಬರಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ ನಾಳೆ ಮಧ್ಯಾಹ್ನ 2:30ಕ್ಕೆ ವಿಚಾರಣೆಯನ್ನು ನ್ಯಾಯಮೂರ್ತಿ ಜೆಎನ್ ದೀಕ್ಷಿತ್ ನೇತೃತ್ವದ ಪೀಠ ಮುಂದೂಡಿದೆ. ರಾಜ್ಯದಲ್ಲಿ ನಡೆಯುತ್ತಿರುವ ಗಲಭೆಗಳ ಬಗ್ಗೆ ನ್ಯಾಯಮೂರ್ತಿಗಳು ತೀವ್ರ ಕಳವಳ ವ್ಯಕ್ತಪಡಿಸಿದರು. ಆದಷ್ಟು ಬೇಗ ತೀರ್ಪು ನೀಡುವುದಾಗಿ ತಿಳಿಸಿದರು.

ಅರ್ಜಿದಾರರ ಪರ ವಕೀಲರ ವಾದದಲ್ಲೇನಿದೆ..?

ಕುರಾನ್ ಪ್ರಕಾರ ಹಿಜಬ್ ಧರಿಸುವುದು ಮೂಲಭೂತ ಆಚರಣೆ. ಶೈಕ್ಷಣಿಕ ವರ್ಷ ಮುಗಿಯಲು 2 ತಿಂಗಳಷ್ಟೇ ಇದೆ. ಹಿಜಬ್ ಧರಿಸಿ ಹೋಗಲು ಅವಕಾಶ ಕೊಡಿ. ಪರೀಕ್ಷೆ ಮುಗಿಯುವವರೆಗೂ ಯೂನಿಫಾರಂ ಬಣ್ಣದ ಹಿಜಬ್ ಧರಿಸಲು ಅವಕಾಶ ಕೊಡಿ. ಆ ಬಳಿಕ ಬೇಕಾದರೆ ಈ ವಿಷಯದ ಬಗ್ಗೆ ಕೋರ್ಟ್ ನಿರ್ಧರಿಸಬಹುದು.

ಹಿಜಬ್ ಧರಿಸುವುದು ಮೂಲಭೂತ ಹಕ್ಕಲ್ಲ ಎಂಬ ಅರ್ಥದಲ್ಲಿ ಸರ್ಕಾರ ಸುತ್ತೋಲೆ ಹೊರಡಿಸಿದೆ. ಸರ್ಕಾರದ ಈ ಸುತ್ತೋಲೆ ಕೇರಳ, ಮದ್ರಾಸ್, ಬಾಂಬೆ ಹೈಕೋರ್ಟ್ ತೀರ್ಪನ್ನು ಪಾಲಿಸಿಲ್ಲ. ಉಡುಪು ಧರಿಸುವುದು ಸುಪ್ರೀಂಕೋರ್ಟ್ ನೀಡಿರುವ ಖಾಸಗಿತನವೂ ಮೂಲಭೂತ ಹಕ್ಕು ವ್ಯಾಪ್ತಿಯಲ್ಲಿ ಬರುತ್ತದೆ.

ಜ್ಯಾತ್ಯಾತೀತತೆ ಚಿಂತನೆಯಡಿ ಧಾರ್ಮಿಕ ಆಚರಣೆಗಳನ್ನು ಪರೀಕ್ಷೆಗೊಳಪಡಿಸಲು ಸಾಧ್ಯವಿಲ್ಲ. ಧರ್ಮದ ಮೂಲಭೂತ ಆಚರಣೆಯನ್ನು ಧಾರ್ಮಿಕತೆಯ ನಂಬಿಕೆ ಮೇಲಷ್ಟೇ ನಿರ್ಧರಿಸಬೇಕು, ಜ್ಯಾತ್ಯಾತೀತ ಭಾವನೆಗಳ ಆಧಾರದಲ್ಲಿ ಅಲ್ಲ. ಅಲ್ಪಸಂಖ್ಯಾತ ಸಂಸ್ಥೆಗಳಲ್ಲಿನ ಮೂಲಭೂತ ಹಕ್ಕಿಗೂ ಸರ್ಕಾರಿ ಸಂಸ್ಥೆಯಲ್ಲಿ ಆಚರಿಸಲಾಗುವ ಮೂಲಭೂತ ಹಕ್ಕಿಗೂ ವ್ಯತ್ಯಾಸ ಇದೆ.

ಹಿಜಬ್ ಧರ್ಮದ ಅವಿಭಾಜ್ಯ ಭಾಗವೆಂದು ಮದ್ರಾಸ್ ಹೈಕೋರ್ಟ್ ತೀರ್ಪು ನೀಡಿದೆ. ಕಾಲೇಜು ಪ್ರವೇಶಾತಿಯ ಆರಂಭದಿಂದಲೂ ವಿದ್ಯಾರ್ಥಿನಿಯರು ಹಿಜಬ್ ಧರಿಸಿಯೇ ಕಾಲೇಜಿಗೆ ಬರುತ್ತಿದ್ದರು. ಹಿಜಬ್ ಧರಿಸುವುದು ಕೆಲವುಗಳ ಉಲ್ಲಂಘನೆ ಎಂದು ಕೆಲವರು ಭಾವಿಸುವವರೆಗೂ ಏನೂ ತೊಂದರೆ ಆಗಿರಲಿಲ್ಲ. ಪ್ರತಿಯೊಂದು ಧಾರ್ಮಿಕ ಆಚರಣೆಗೂ ಸರ್ಕಾರ ಸಾರ್ವಜನಿಕ ಸುವ್ಯವಸ್ಥೆಯ ಬಣ್ಣ ನೀಡಲು ಹೊರಟರೆ ಏನಾಗಬಹುದು? ಬ್ರಾಹ್ಮಣರು ನಾಮ ಧರಿಸಿ ಅಥವಾ ಸಿಖ್ಖರು ಟರ್ಬನ್ ಧರಿಸಿ ಶಾಲೆಗೆ ಹೋದರೆ ಅದು ಸಾರ್ವಜನಿಕ ಸುವ್ಯವಸ್ಥೆಗೆ ಪರಿಣಾಮ ಬೀಳುತ್ತದೆ ಎಂದು ಸರ್ಕಾರ ಹೇಳಲಾದಿತೇ?

ಹಿಜಬ್ ಧರಿಸಿ ಹೊರಗಡೆ ಓಡಾಡಿದ್ರೆ ಸಾರ್ವಜನಿಕ ಸುವ್ಯವಸ್ಥೆ ವಿಷಯವಲ್ಲ, ಮಾರ್ಕೆಟ್‍ಗೆ ಹೋದರೆ ಸಾರ್ವಜನಿಕ ಸುವ್ಯವಸ್ಥೆಯ ವಿಷಯವಲ್ಲ. ಆದರೆ ಹಿಜಬ್ ಧರಿಸಿ ಕಾಲೇಜಿಗೆ ಹೋದರೆ ಸಾರ್ವಜನಿಕ ಸುವ್ಯವಸ್ಥೆ ಹೇಗಾತ್ತದೆ? ಜನರು ತಮ್ಮ ಮೂಲಭೂತ ಹಕ್ಕು ಚಲಾಯಿಸಲು ಸರ್ಕಾರ ವ್ಯವಸ್ಥೆ ಮಾಡಬೇಕು. ಶಾಲೆಗೆ ಹೋಗುವ ವಿದ್ಯಾರ್ಥಿಗಳ ಹಕ್ಕನ್ನು ಸರ್ಕಾರ ರಕ್ಷಣೆ ಮಾಡಬೇಕು.

ಶಾಲೆಗಳಲ್ಲಿ ಯಾರೋ ನಾಮ ಧರಿಸಿ ಬಂದರೆ, ಹಿಜಬ್ ಧರಿಸಿ ಬಂದರೆ, ಕ್ರಾಸ್ ಧರಿಸಿ ಬಂದರೆ ಅದು ಸಕಾರಾತ್ಮಕ ಜ್ಯಾತ್ಯಾತೀತತೆ. ನಾಲ್ಕೈದು ದಿನಗಳಿಂದ ಹಿಜಬ್ ಧರಿಸಿದ ವಿದ್ಯಾರ್ಥಿಗಳಿಗೆ ಪ್ರವೇಶ ನಿರಾಕರಿಸಲಾಗಿದೆ. ಕಾಲೇಜುಗಳಲ್ಲಿ ಪ್ರತ್ಯೇಕ ಕೊಠಡಿಗಳನ್ನು ಮಾಡಲಾಗಿದೆ. ಹಿಜಬ್‌ ಧರಿಸಿದ ವಿದ್ಯಾರ್ಥಿಗಳನ್ನು ಪ್ರತ್ಯೇಕವಾಗಿ ಕೂರಿಸಿದ್ದು `ಧಾರ್ಮಿಕ ಅಸ್ಪ್ರಶ್ಯತೆ’. ಸಮವಸ್ತ್ರಕ್ಕೆ ಸಂಬಂಧಿಸಿದಂತೆ ಕಾನೂನು ಮಾಡಬಹುದು, ಬಾರ್ ಕೌನ್ಸಿಲ್ ರೀತಿಯಲ್ಲೇ. ಆದರೆ ಮೂಲಭೂತ ಹಕ್ಕುಗಳ ಮೇಲೆ ನಿರ್ಬಂಧ ಹೇರಬಹುದೇ ಎಂಬುದೇ ಪ್ರಶ್ನೆ.

ಜಡ್ಜ್‌ ಹೇಳಿದ್ದೇನು..?

ಸಂವಿಧಾನ ಏನು ಹೇಳಿದೆಯೋ ಅದರಂತೆಯೇ ತೀರ್ಮಾನ. ಸಂವಿಧಾನವೇ ನನಗೆ ಭಗವದ್ಗೀತೆ. ಭಾವನೆಗಳ ಆಧಾರದಲ್ಲಿ ಆದೇಶ ಕೊಡಲು ಆಗಲ್ಲ, ಭಾವನೆಗಳನ್ನು ಪಕ್ಕಕ್ಕಿಡಿ. ಎರಡು ತಿಂಗಳ ಬಳಿಕ ನಿಯಮ (ಯೂನಿಫಾರಂ ನಿಯಮ) ಮಾಡಿದರೆ ಪಾಲಿಸುತ್ತೀರಾ?

ಪ್ರತಿ ದಿನ ವಿದ್ಯಾರ್ಥಿಗಳು ಬೀದಿಯಲ್ಲಿ ಹೋರಾಟ ಮಾಡುವುದನ್ನು ನೋಡಲಾಗದು. ಇದು ಒಳ್ಳೆಯ ದೃಶ್ಯ ಅಲ್ಲ. ನಮ್ಮನ್ನು ಅಂತಾರಾಷ್ಟ್ರೀಯ ಸಮುದಾಯ ಗಮನಿಸುತ್ತಿದೆ. ವಾಟ್ಸಾಪ್ ಓಪನ್ ಮಾಡಿದಾಗಲೆಲ್ಲ ಹಲವು ಮೆಸೇಜ್‍ಗಳು ಬರುತ್ತಿವೆ. ಕೋರ್ಟ್ ಆ ಆದೇಶ ಹೊರಡಿಸಿದೆ ಈ ಆದೇಶ ಹೊರಡಿಸಿದೆ ಎಂದು ಅಸಂಖ್ಯಾತ ಸಂಖ್ಯೆಗಳಿಂದ ಮೆಸೇಜ್ ಬರುತ್ತಿದೆ.

`ಹಿಜಬ್’ ಇಸ್ಲಾಂ ಅವಿಭಾಜ್ಯ ಅಂಗವೇ ಎಂಬ ಬಗ್ಗೆಯಷ್ಟೇ ವಿಚಾರಣೆ ಮಾಡುತ್ತೇವೆ. ಉಡುಪು ಧರಿಸುವುದು ಖಾಸಗಿತನ ಹಕ್ಕಿನ ವ್ಯಾಪ್ತಿಗೆ ಬರುತ್ತದೆ. ನಾನು ವಿದ್ಯಾರ್ಥಿಯಾದ ದಿನದಿಂದ ಇಂಥಾ ಸಂಘರ್ಷವನ್ನು ನೋಡಿರಲಿಲ್ಲ. ಪ್ರತಿಭಟನೆ ಮಾಡುವುದು, ಬೀದಿಗಿಳಿಯುವುದು, ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸುವುದು. ವಿದ್ಯಾರ್ಥಿಗಳು ಇತರರ ಮೇಲೆ ಹಲ್ಲೆ ನಡೆಸುವುದು ಒಳ್ಳೆಯದಲ್ಲ. ವಿದ್ಯಾರ್ಥಿಗಳು ಶಾಂತಿ ಕಾಪಾಡಬೇಕು.. ಜನರು ಸುವ್ಯವಸ್ಥೆ ಪಾಲಿಸಬೇಕು. ಕೋರ್ಟ್‍ಗೆ ನಂಬಿಕೆ ಇದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಉದ್ದಿಮೆದಾರರಿಗೆ ನೆರವು ಯೋಜನೆ; ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ವಿಶೇಷ ಘಟಕ ಯೋಜನೆ, ಗಿರಿಜನ ಉಪ ಯೋಜನೆಯಡಿ ವಿವಿಧ ಯೋಜನೆಗಳಾದ ಸಾಫ್ಟ್ ಸೀಡ್ ಕ್ಯಾಪಿಟಲ್, ಶೇ.60 ರಷ್ಟು ಸಹಾಯಧನ ಸಾಲ ಶುಲ್ಕ ಮರುಪಾವತಿ ಮತ್ತು ವಿದ್ಯುಚ್ಚಕ್ತಿ ಸಹಾಯಧನ ಯೋಜನೆಯಡಿ ಅರ್ಹ ಉದ್ದಿಮೆದಾರರಿಗೆ ನೆರವು ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಈಗಾಗಲೇ ಬ್ಯಾಂಕಿನಿಂದ ಸಾಲ ಪಡೆದು ಘಟಕಗಳನ್ನು ಸ್ಥಾಪಿಸಿರುವ ಅರ್ಹ ಉದ್ದಿಮೆದಾರರು ಹಾಗೂ ಬ್ಯಾಂಕ ಸಾಲ ಪಡೆದು ಉದ್ದಿಮೆ ಸ್ಥಾಪಿಸಲು ಇಚ್ಚಿಸಿರುವ ಉದ್ದಿಮೆದಾರರು ಹೆಚ್ಚಿನ ವಿವರಗಳಿಗೆ ಜಂಟಿ ನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ, ಪಿ.ಬಿ ರಸ್ತೆ ದಾವಣಗೆರೆ ಇವರನ್ನು ಸಂಪರ್ಕಿಸಬಹುದೆಂದು ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

Continue Reading

ದಿನದ ಸುದ್ದಿ

ಭರವಸೆ ಕೊಟ್ಟು ಯುವಜನರನ್ನು ಮನೆಗೆ ಕಳುಹಿಸಿದ ಸರ್ಕಾರಕ್ಕೆ ಈಗ ಪ್ರತಿಭಟನೆಯ ಬಿಸಿ: ಸೆ.5ಕ್ಕೆ ದೆಹಲಿಯಲ್ಲಿ CJP ಬೃಹತ್ ಮೆರವಣಿಗೆ!

Published

on

ಯುವಜನರ ಭರವಸೆ ಈಡೇರಿಲ್ಲವೆ? ಸೆ.5ರಂದು ದೆಹಲಿಯಲ್ಲಿ CJP ಶಾಂತಿಯುತ ಪ್ರತಿಭಟನೆ

ಯುವಜನರ ಭರವಸೆ ಈಡೇರಿಲ್ಲವೆ? ಸೆ.5ರಂದು ದೆಹಲಿಯಲ್ಲಿ CJP ಶಾಂತಿಯುತ ಪ್ರತಿಭಟನೆ

  • ಜುಲೈ 25ರ ಭರವಸೆ ಜಾರಿಗೆ ವಿಳಂಬ: CJP ತೀವ್ರ ಆಕ್ರೋಶ
  • ಇಂಡಿಯಾ ಗೇಟ್‌ನಿಂದ ಪೊಲೀಸ್ ಕೇಂದ್ರ ಕಚೇರಿವರೆಗೆ ಮೆರವಣಿಗೆ
  • NEET ಅಭ್ಯರ್ಥಿಗಳ ಕುಟುಂಬಸ್ಥರು, ಪೊಲೀಸ್ ದೌರ್ಜನ್ಯ ಸಂತ್ರಸ್ತರು ಮುಂಚೂಣಿಯಲ್ಲಿ
  • “ನಮ್ಮ ತಾಳ್ಮೆಯನ್ನು ದೌರ್ಬಲ್ಯವೆಂದು ಭಾವಿಸಬೇಡಿ” ಎಂದ CJP 

ಯುವಜನರ ಭರವಸೆ ಈಡೇರಿಲ್ಲವೆ? ಸೆ.5ರಂದು ದೆಹಲಿಯಲ್ಲಿ CJP ಶಾಂತಿಯುತ ಪ್ರತಿಭಟನೆ

ಸುದ್ದಿದಿನ,ನವದೆಹಲಿ: ದೇಶದ ಯುವಜನರಿಗೆ ನೀಡಿರುವ ಭರವಸೆಗಳನ್ನು ಸರ್ಕಾರ ಈಡೇರಿಸಿಲ್ಲ ಎಂಬ ಆರೋಪದ ಹಿನ್ನೆಲೆಯಲ್ಲಿ ಕಾಕ್‌ರೋಚ್ ಜನತಾ ಪಾರ್ಟಿ (CJP) ಸೆಪ್ಟೆಂಬರ್ 5ರಂದು ನವದೆಹಲಿಯಲ್ಲಿ ಶಾಂತಿಯುತ ಪ್ರತಿಭಟನಾ ಮೆರವಣಿಗೆ ನಡೆಸಲು ಕರೆ ನೀಡಿದೆ. ಜುಲೈ 25ರಂದು ಸಾರ್ವಜನಿಕವಾಗಿ ನೀಡಲಾಗಿದ್ದ ಭರವಸೆಗಳಿಗೆ ಒಂದು ತಿಂಗಳು ಕಳೆದರೂ ಅವುಗಳ ಅನುಷ್ಠಾನಕ್ಕೆ ಸ್ಪಷ್ಟ ಕ್ರಮಗಳು ಗೋಚರಿಸುತ್ತಿಲ್ಲ ಎಂಬುದು CJPಯ ಪ್ರಮುಖ ಆರೋಪವಾಗಿದೆ.

CJP ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ಕುರಿತು ಚರ್ಚೆ ನಡೆಸಲಾಗಿದ್ದು, ಸರ್ಕಾರ ಹಾಗೂ ಬಿಜೆಪಿ-ಎನ್‌ಡಿಎ ಆಡಳಿತದ ರಾಜ್ಯಗಳು ಯುವಜನರಿಗೆ ನೀಡಿದ್ದ ಭರವಸೆಗಳ ಅನುಷ್ಠಾನವನ್ನು ಪರಿಶೀಲಿಸಿದ ಬಳಿಕ ಪ್ರತಿಭಟನೆ ನಡೆಸುವ ನಿರ್ಧಾರವನ್ನು ಸರ್ವಾನುಮತದಿಂದ ಕೈಗೊಳ್ಳಲಾಗಿದೆ ಎಂದು ಪಕ್ಷ ತಿಳಿಸಿದೆ.

http://Visit : www.suddidina.com

ಇಂಡಿಯಾ ಗೇಟ್‌ನಿಂದ ಮೆರವಣಿಗೆ

ಸೆಪ್ಟೆಂಬರ್ 5ರಂದು ಇಂಡಿಯಾ ಗೇಟ್‌ನಿಂದ ಪ್ರತಿಭಟನಾ ಮೆರವಣಿಗೆ ಆರಂಭವಾಗಿ ನವದೆಹಲಿ ಪೊಲೀಸ್ ಕೇಂದ್ರ ಕಚೇರಿಯತ್ತ ಸಾಗಲಿದೆ. ಮೃತ NEET ಅಭ್ಯರ್ಥಿಗಳ ಕುಟುಂಬಸ್ಥರು ಹಾಗೂ ಪೊಲೀಸ್ ದೌರ್ಜನ್ಯಕ್ಕೆ ಒಳಗಾದವರು ಮೆರವಣಿಗೆಯ ಮುಂಚೂಣಿಯಲ್ಲಿ ಸಾಗಲಿದ್ದಾರೆ ಎಂದು CJP ಹೇಳಿದೆ.

ದೇಶದ ವಿವಿಧ ಭಾಗಗಳಿಂದ ವಿದ್ಯಾರ್ಥಿಗಳು, ಯುವ ಸಂಘಟನೆಗಳ ಪ್ರತಿನಿಧಿಗಳು ಮತ್ತು ಯುವಜನರು ಪ್ರತಿಭಟನೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ಸರ್ಕಾರ ನೀಡಿದ್ದ ಭರವಸೆಗಳನ್ನು ಜಾರಿಗೆ ತರಬೇಕು ಎಂಬ ಒಂದೇ ಪ್ರಮುಖ ಬೇಡಿಕೆಯೊಂದಿಗೆ ಯುವಜನರು ಶಾಂತಿಯುತವಾಗಿ ಧ್ವನಿ ಎತ್ತಲಿದ್ದಾರೆ ಎಂದು ಪಕ್ಷ ಹೇಳಿದೆ.

ಯುವಜನರ ಭರವಸೆ ಈಡೇರಿಲ್ಲವೆ? ಸೆ.5ರಂದು ದೆಹಲಿಯಲ್ಲಿ CJP ಶಾಂತಿಯುತ ಪ್ರತಿಭಟನೆ

ಯುವಜನರ ಭರವಸೆ ಈಡೇರಿಲ್ಲವೆ? ಸೆ.5ರಂದು ದೆಹಲಿಯಲ್ಲಿ CJP ಶಾಂತಿಯುತ ಪ್ರತಿಭಟನೆ

‘ನಮ್ಮ ತಾಳ್ಮೆಯನ್ನು ದೌರ್ಬಲ್ಯವೆಂದು ಭಾವಿಸಬೇಡಿ’

ಜುಲೈ 25ರಂದು ನೀಡಿದ ಭರವಸೆಗಳನ್ನು ನಂಬಿ ದೇಶಾದ್ಯಂತ ನಡೆದಿದ್ದ ಪ್ರತಿಭಟನೆಗಳನ್ನು ಯುವಜನರು ಉತ್ತಮ ನಂಬಿಕೆಯಿಂದ ಹಿಂಪಡೆದಿದ್ದರು. ಆದರೆ, ಭರವಸೆಗಳ ಅನುಷ್ಠಾನದಲ್ಲಿ ವಿಳಂಬವಾಗುತ್ತಿರುವುದು ಯುವಜನರಲ್ಲಿ ಮತ್ತೆ ಅಸಮಾಧಾನ ಮೂಡಿಸಿದೆ ಎಂದು CJP ಆರೋಪಿಸಿದೆ.

“ನಮ್ಮ ತಾಳ್ಮೆಯನ್ನು ದೌರ್ಬಲ್ಯವೆಂದು ಭಾವಿಸಬೇಡಿ. ನಮ್ಮ ಸದುದ್ದೇಶವನ್ನು ಸರ್ಕಾರ ಯುವಜನರಿಗೆ ದ್ರೋಹ ಮಾಡುವ ಅವಕಾಶವಾಗಿ ಬಳಸಿಕೊಳ್ಳಬಾರದು” ಎಂದು CJP ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಎಚ್ಚರಿಕೆ ನೀಡಿದೆ.

“ಭರವಸೆಗಳನ್ನು ಜಾರಿಗೆ ತರುವ ಬದಲು ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳುವುದನ್ನು ವಿಳಂಬಿಸುತ್ತಿದೆ, ತಾಂತ್ರಿಕ ಕಾರಣಗಳ ಹಿಂದೆ ಅಡಗಿಕೊಳ್ಳುತ್ತಿದೆ ಹಾಗೂ ಸುಪ್ರೀಂ ಕೋರ್ಟ್‌ನ ಮುಂದೆಯೂ ಸ್ಪಷ್ಟ ಭರವಸೆ ನೀಡುವುದನ್ನು ತಪ್ಪಿಸುತ್ತಿದೆ” 

  • CJP ಆರೋಪ

ಮಾತಿನಿಂದ ಹಿಂದೆ ಸರಿಯಲು ಸಾಧ್ಯವಿಲ್ಲ

ಜುಲೈ 25ರಂದು ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಸಾರ್ವಜನಿಕವಾಗಿ ನೀಡಿದ್ದ ಭರವಸೆಗಳನ್ನು ಸರ್ಕಾರ ಈಡೇರಿಸಬೇಕು ಎಂಬುದು CJPಯ ಆಗ್ರಹ. ಮಕ್ಕಳನ್ನು ಕಳೆದುಕೊಂಡ ಕುಟುಂಬಗಳು ಹಾಗೂ ಪೊಲೀಸ್ ದೌರ್ಜನ್ಯಕ್ಕೆ ಒಳಗಾದವರ ನೋವಿನ ನಡುವೆ ನಡೆಯಲಿರುವ ಈ ಮೆರವಣಿಗೆ, ಯುವಜನರ ವಿಶ್ವಾಸ ಮತ್ತು ಸರ್ಕಾರದ ಹೊಣೆಗಾರಿಕೆಯ ಪ್ರಶ್ನೆಯನ್ನು ಮುನ್ನೆಲೆಗೆ ತರುವ ಪ್ರಯತ್ನವಾಗಿದೆ.

ಕೇಂದ್ರ ಸರ್ಕಾರ ಭರವಸೆಗಳನ್ನು ಜಾರಿಗೆ ತರುವ ಬದಲು ಕ್ರಮ ಕೈಗೊಳ್ಳುವುದನ್ನು ವಿಳಂಬಿಸುತ್ತಿದೆ, ತಾಂತ್ರಿಕ ಕಾರಣಗಳ ಹಿಂದೆ ಅಡಗಿಕೊಳ್ಳುತ್ತಿದೆ ಹಾಗೂ ಸುಪ್ರೀಂ ಕೋರ್ಟ್‌ನ ಮುಂದೆಯೂ ಸ್ಪಷ್ಟ ಭರವಸೆ ನೀಡುವುದನ್ನು ತಪ್ಪಿಸುತ್ತಿದೆ ಎಂದು CJP ಆರೋಪಿಸಿದೆ.

ಸೆಪ್ಟೆಂಬರ್ 5ರಂದು ಹೆಚ್ಚಿನ ಸಂಖ್ಯೆಯಲ್ಲಿ ಇಂಡಿಯಾ ಗೇಟ್‌ನಲ್ಲಿ ಸೇರಿ ಶಾಂತಿಯುತ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವಂತೆ ಯುವಜನರು, ವಿದ್ಯಾರ್ಥಿಗಳು ಹಾಗೂ ಯುವ ಸಂಘಟನೆಗಳಿಗೆ CJP ಮನವಿ ಮಾಡಿದೆ. ಪ್ರತಿಭಟನೆ ಸಂಪೂರ್ಣವಾಗಿ ಶಾಂತಿಯುತ ಮತ್ತು ಪ್ರಜಾಸತ್ತಾತ್ಮಕ ರೀತಿಯಲ್ಲಿ ನಡೆಯಲಿದೆ ಎಂದು ಅದು ಪುನರುಚ್ಚರಿಸಿದೆ.

Continue Reading

ದಿನದ ಸುದ್ದಿ

KPSC ಪರೀಕ್ಷಾ ಹಗರಣ: 329 ಅಭ್ಯರ್ಥಿಗಳಿಗೆ CID ನೋಟಿಸ್, IAS ಅಧಿಕಾರಿ ವಿರುದ್ಧ ED ಆರೋಪ

Published

on

KPSC ಹಗರಣಕ್ಕೆ ಬಿಗ್ ಟ್ವಿಸ್ಟ್! 329 ಅಭ್ಯರ್ಥಿಗಳಿಗೆ CID ನೋಟಿಸ್; IAS ಅಧಿಕಾರಿ ವಿರುದ್ಧ ₹1.1 ಕೋಟಿ ಆರೋಪ
KPSC ಹಗರಣಕ್ಕೆ ಬಿಗ್ ಟ್ವಿಸ್ಟ್! 329 ಅಭ್ಯರ್ಥಿಗಳಿಗೆ CID ನೋಟಿಸ್; IAS ಅಧಿಕಾರಿ ವಿರುದ್ಧ ₹1.1 ಕೋಟಿ ಆರೋಪ

KPSC ಪರೀಕ್ಷಾ ಹಗರಣ: 329 ಅಭ್ಯರ್ಥಿಗಳಿಗೆ CID ನೋಟಿಸ್, IAS ಅಧಿಕಾರಿ ವಿರುದ್ಧ ED ಆರೋಪ

  • 329 ಅಭ್ಯರ್ಥಿಗಳಿಗೆ ಏಕಕಾಲದಲ್ಲಿ ವಿಚಾರಣಾ ನೋಟಿಸ್

  • 658 OMR ಕಾರ್ಬನ್ ಶೀಟ್‌ಗಳು FSLಗೆ

  • IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ಗಂಗ್ವಾರ್ ವಿರುದ್ಧ ED ಗಂಭೀರ ಆರೋಪ

  • ₹70–80 ಲಕ್ಷ ಲಂಚದ ಆರೋಪವೂ ತನಿಖೆಯಲ್ಲಿದೆ

  • ಪ್ರಶ್ನೆಪತ್ರ ಸಿದ್ಧತೆ, ಮುದ್ರಣದ CCTV ದೃಶ್ಯಗಳ ಬಗ್ಗೆಯೂ ಅನುಮಾನ 

ಸುದ್ದಿದಿನ,ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ (KPSC) ಪಶುವೈದ್ಯಾಧಿಕಾರಿ ನೇಮಕಾತಿ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮದ ತನಿಖೆ ದಿನದಿಂದ ದಿನಕ್ಕೆ ಹೊಸ ತಿರುವು ಪಡೆಯುತ್ತಿದೆ. ಈಗಾಗಲೇ ಜಾರಿ ನಿರ್ದೇಶನಾಲಯ (ED) ರಾಜ್ಯದ ವಿವಿಧೆಡೆ 21ಕ್ಕೂ ಹೆಚ್ಚು ಸ್ಥಳಗಳಲ್ಲಿ ಶೋಧ ನಡೆಸಿದ್ದು, ಅದರ ಬೆನ್ನಲ್ಲೇ ಅಪರಾಧ ತನಿಖಾ ಇಲಾಖೆ (CID) ಎಲ್ಲಾ 329 ಅಭ್ಯರ್ಥಿಗಳಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದೆ.

http://Visit : www.suddidina.com

329 ಅಭ್ಯರ್ಥಿಗಳಿಗೆ ನೋಟಿಸ್ ಏಕೆ?

ಪರೀಕ್ಷಾ ಅಕ್ರಮಕ್ಕೆ ಸಂಬಂಧಿಸಿದಂತೆ ಅಭ್ಯರ್ಥಿಗಳಿಂದ ಈಗಾಗಲೇ 658 OMR ಕಾರ್ಬನ್ ಶೀಟ್‌ಗಳನ್ನು ವಶಕ್ಕೆ ಪಡೆಯಲಾಗಿದೆ. ಅವುಗಳನ್ನು ಮೂಲ OMR ಉತ್ತರ ಪತ್ರಿಕೆಗಳೊಂದಿಗೆ ಹೋಲಿಕೆ ಮಾಡಲು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ (FSL) ಕಳುಹಿಸಲಾಗಿದೆ. ಅಭ್ಯರ್ಥಿಗಳು ಗುರುತಿಸಿದ್ದ ಉತ್ತರಗಳ ಕಾರ್ಬನ್ ಪ್ರತಿಯಲ್ಲಿ ಮತ್ತು ಮೂಲ OMRನಲ್ಲಿ ವ್ಯತ್ಯಾಸವಿದೆಯೇ ಎಂಬುದನ್ನು ಪರಿಶೀಲಿಸುವುದು ತನಿಖೆಯ ಪ್ರಮುಖ ಭಾಗವಾಗಿದೆ.

ಇದೀಗ 329 ಅಭ್ಯರ್ಥಿಗಳನ್ನೂ ವಿಚಾರಣೆಗೆ ಒಳಪಡಿಸುವ CID ಕ್ರಮ ಪ್ರಕರಣದ ವ್ಯಾಪ್ತಿಯನ್ನು ಮತ್ತಷ್ಟು ವಿಸ್ತರಿಸಿದೆ. ಈ ವಿಚಾರಣೆಯ ಮೂಲಕ ಪರೀಕ್ಷಾ ಪ್ರಕ್ರಿಯೆಯಲ್ಲಿ ಯಾವುದೇ ಅಕ್ರಮ ನಡೆದಿದೆಯೇ, ಅಭ್ಯರ್ಥಿಗಳಿಗೆ ಪ್ರಶ್ನೆಪತ್ರಿಕೆ ಅಥವಾ ಉತ್ತರಗಳ ಮಾಹಿತಿ ಮುಂಚಿತವಾಗಿ ಸಿಕ್ಕಿತೇ, OMR ಉತ್ತರ ಪತ್ರಿಕೆಗಳಲ್ಲಿ ತಿದ್ದುಪಡಿ ನಡೆದಿದೆಯೇ ಎಂಬುದರ ಬಗ್ಗೆ ತನಿಖಾಧಿಕಾರಿಗಳು ಮಾಹಿತಿ ಕಲೆಹಾಕುತ್ತಿದ್ದಾರೆ.

IAS ಅಧಿಕಾರಿಯತ್ತ ತನಿಖೆಯ ಚಿತ್ತ

ಈ ಪ್ರಕರಣದಲ್ಲಿ IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ಗಂಗ್ವಾರ್ ಅವರ ಹೆಸರು ಪ್ರಮುಖವಾಗಿ ಕೇಳಿಬಂದಿದೆ. ಅವರು ಫೆಬ್ರವರಿ 2024ರಿಂದ ಮಾರ್ಚ್ 2026ರವರೆಗೆ KPSCಯ ಪರೀಕ್ಷಾ ನಿಯಂತ್ರಕರಾಗಿ ಕಾರ್ಯನಿರ್ವಹಿಸಿದ್ದರು. ಪ್ರಸ್ತುತ ಅವರು ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯಲ್ಲಿ MSME ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಅವರ ಬೆಂಗಳೂರಿನ ನಿವಾಸ ಸೇರಿದಂತೆ ಉತ್ತರ ಪ್ರದೇಶದ ಬರೇಲಿಯಲ್ಲಿರುವ ನಿವಾಸದ ಮೇಲೂ ED ಶೋಧ ನಡೆಸಿದೆ.

ED ಆರೋಪದ ಪ್ರಕಾರ, ಗಂಗ್ವಾರ್ ಅವರು ತಮ್ಮ ಇಬ್ಬರು ಪುತ್ರರಿಗೆ KPSC ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಹೆಚ್ಚಿನ ಅಂಕಗಳನ್ನು ದೊರಕಿಸಿಕೊಡಲು ವ್ಯಕ್ತಿಯೊಬ್ಬರಿಂದ ಸುಮಾರು ₹1.1 ಕೋಟಿ ಪಡೆದಿದ್ದಾರೆ ಎನ್ನಲಾಗಿದೆ. ಈ ಆರೋಪ ಇನ್ನೂ ತನಿಖೆಯ ಹಂತದಲ್ಲಿದ್ದು, ಆರೋಪ ಸಾಬೀತಾಗಿಲ್ಲ.

ಪ್ರಶ್ನೆಪತ್ರಿಕೆ ಸಿದ್ಧತೆಯಲ್ಲೂ ಅನುಮಾನ

ಪರೀಕ್ಷಾ ನಿಯಂತ್ರಕರಾಗಿದ್ದ ಅವಧಿಯಲ್ಲಿ ಪ್ರಶ್ನೆಪತ್ರಿಕೆ ಸಿದ್ಧಪಡಿಸುವ ಮತ್ತು ಮುದ್ರಿಸುವ ಪ್ರಕ್ರಿಯೆಗೆ ಸಂಬಂಧಿಸಿದ CCTV ದೃಶ್ಯಾವಳಿಗಳ ಅನುಪಸ್ಥಿತಿಯನ್ನೂ ED ಅಧಿಕಾರಿಗಳು ಪ್ರಶ್ನಿಸಿದ್ದಾರೆ ಎನ್ನಲಾಗಿದೆ. ಇಂತಹ ಪ್ರಕ್ರಿಯೆಯಲ್ಲಿ CCTV ದಾಖಲೆಗಳು ಪ್ರಮುಖ ಭದ್ರತಾ ಕ್ರಮವಾಗಿರುವುದರಿಂದ, ಅವುಗಳ ಲಭ್ಯತೆ ಮತ್ತು ನಿರ್ವಹಣೆಯೂ ತನಿಖೆಯ ಪ್ರಮುಖ ಅಂಶವಾಗಿದೆ.

ಇದರ ಜೊತೆಗೆ, ಪಶುವೈದ್ಯಾಧಿಕಾರಿ ನೇಮಕಾತಿಯಲ್ಲಿ ಅಭ್ಯರ್ಥಿಗಳಿಂದ ₹70–80 ಲಕ್ಷದವರೆಗೆ ಲಂಚ ಕೇಳಲಾಗಿದೆ ಎಂಬ ಆರೋಪಗಳೂ ತನಿಖೆಯಲ್ಲಿವೆ. ಪ್ರಶ್ನೆಪತ್ರಿಕೆ ಸೋರಿಕೆ, OMR ತಿದ್ದುಪಡಿ ಮತ್ತು ನೇಮಕಾತಿ ಪ್ರಕ್ರಿಯೆಯ ಮೇಲೆ ಪ್ರಭಾವ ಬೀರಿದ ಆರೋಪಗಳ ಕುರಿತು ತನಿಖೆ ಮುಂದುವರಿದಿದೆ.

KPSCಯಂತಹ ನೇಮಕಾತಿ ಸಂಸ್ಥೆಯ ಮೇಲಿನ ವಿಶ್ವಾಸಕ್ಕೆ ಧಕ್ಕೆ ತರುವ ಆರೋಪಗಳಾಗಿರುವುದರಿಂದ, CID ಮತ್ತು ED ತನಿಖೆಯ ಮುಂದಿನ ಹಂತಗಳು ಮಹತ್ವ ಪಡೆದುಕೊಂಡಿವೆ. 329 ಅಭ್ಯರ್ಥಿಗಳ ವಿಚಾರಣೆ, OMR ಕಾರ್ಬನ್ ಶೀಟ್‌ಗಳ FSL ವರದಿ ಹಾಗೂ ಹಣಕಾಸು ವ್ಯವಹಾರಗಳ ಪರಿಶೀಲನೆಯ ಬಳಿಕ ಪ್ರಕರಣದ ನಿಜವಾದ ಚಿತ್ರಣ ಇನ್ನಷ್ಟು ಸ್ಪಷ್ಟವಾಗುವ ನಿರೀಕ್ಷೆಯಿದೆ.

ಮೇಲಿನ ಹಣ, ಅಕ್ರಮ ಮತ್ತು ಅಧಿಕಾರಿಯ ವಿರುದ್ಧದ ಆರೋಪಗಳು ತನಿಖಾ ಸಂಸ್ಥೆಗಳು ಮುಂದಿಟ್ಟಿರುವ ಆರೋಪಗಳಾಗಿದ್ದು, ನ್ಯಾಯಾಲಯದಲ್ಲಿ ಸಾಬೀತಾಗುವವರೆಗೆ ಆರೋಪಗಳೆಂದೇ ಪರಿಗಣಿಸಬೇಕೆಂದು ಕೋರ್ಟ್ ತಿಳಿಸಿದೆ.

 

Continue Reading

Trending