Connect with us

ಬಹಿರಂಗ

ಕಾರ್ಪೋರೇಟ್ ಆಧಿಪತ್ಯವೂ ಮಾಧ್ಯಮವೆಂಬೋ ಉದ್ಯಮವೂ

Published

on


ನವ ಉದಾರವಾದದ ಮಾರುಕಟ್ಟೆ ವ್ಯವಸ್ಥೆಯಲ್ಲಿ ದೃಶ್ಯ ಮಾಧ್ಯಮಗಳೂ ಸಂವಹನದ ಸರಕುಗಳು


  • ನಾ ದಿವಾಕರ

ಆಧುನಿಕ ತಂತ್ರಜ್ಞಾನ ಯುಗದಲ್ಲಿ ಸಾರ್ವಜನಿಕ ಸಂವಹನ ಸೇತುವೆಯಾಗಿ ಕಾರ್ಯನಿರ್ವಹಿಸಬೇಕಾದ ವಿದ್ಯುನ್ಮಾನ ಮಾಧ್ಯಮಗಳ ಸ್ವರೂಪ ಹೇಗಿರಬೇಕು ? ಡಿಜಿಟಲೀಕರಣದತ್ತ ದಾಪುಗಾಲು ಹಾಕುತ್ತಿರುವ ಭಾರತದಲ್ಲಿ ಈ ಪ್ರಶ್ನೆ ಇನ್ನೂ ಹೆಚ್ಚು ಪ್ರಸ್ತುತ ಎನಿಸುತ್ತದೆ. ಮುದ್ರಣ ಮಾಧ್ಯಮ ಎಷ್ಟೇ ವ್ಯಾಪಕವಾದರೂ ಅದು ಅಕ್ಷರಸ್ತರನ್ನು ತಲುಪುವ ಒಂದು ಸಾಧನ. ಆದರೆ ದೃಶ್ಯ ಮಾಧ್ಯಮ ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ತಲುಪಬಹುದಾದ ಒಂದು ಸಂವಹನ ಸಾಧನವಾಗಿದೆ. ಕಳೆದ ಎರಡು ದಶಕಗಳಲ್ಲಿ ಭಾರತದ ರಾಜಕಾರಣ, ಸಾಮಾಜಿಕ ಪಲ್ಲಟಗಳು, ಸಾಂಸ್ಕೃತಿಕ ತಲ್ಲಣಗಳು ಮತ್ತು ಸಾರ್ವಜನಿಕ ಜೀವನದ ಏಳುಬೀಳುಗಳನ್ನು ದಾಖಲಿಸುತ್ತಲೇ ಬಂದಿರುವ ವಿದ್ಯುನ್ಮಾನ ದೃಶ್ಯ ಮಾಧ್ಯಮಗಳ ಸ್ವರೂಪ ಮತ್ತು ಕಾರ್ಯವೈಖರಿ ಇಂದಿನ ಸನ್ನಿವೇಶದಲ್ಲಿ ಹೆಚ್ಚು ಚರ್ಚೆಗೊಳಗಾಗಬೇಕಿದೆ.

ಇದೇ ಫೆಬ್ರವರಿ 19ರಂದು ಬೆಂಗಳೂರಿನಲ್ಲಿ ನಡೆದ ಬೃಹತ್ ಪ್ರತಿಭಟನಾ ಮೆರವಣಿಗೆಯ ಸಂದರ್ಭದಲ್ಲಿ ದೃಶ್ಯ ಮಾಧ್ಯಮಗಳ, ವಿಶೇಷವಾಗಿ ಕನ್ನಡ ಸುದ್ದಿಮನೆಗಳ, ನೈತಿಕತೆ ಮತ್ತು ವೃತ್ತಿಪರತೆಯೇ ಪ್ರಶ್ನಾರ್ಹವಾಗಿದೆ. ಗಣರಾಜ್ಯೋತ್ಸವ ಸಂದರ್ಭದಲ್ಲಿ ರಾಯಚೂರಿನ ಜಿಲ್ಲಾ ನ್ಯಾಯಾಧೀಶರು, ಅಂಬೇಡ್ಕರ್ ಭಾವಚಿತ್ರವನ್ನು ತೆಗೆಯಲು ಒತ್ತಾಯಿಸುವ ಮೂಲಕ ಅಂಬೇಡ್ಕರರಿಗೆ ಮತ್ತು ಸಂವಿಧಾನಕ್ಕೆ ಅಪಚಾರ ಎಸಗಿದ್ದು ರಾಜ್ಯಾದ್ಯಂತ ಜನರ ಆಕ್ರೋಶಕ್ಕೆ ತುತ್ತಾಗಿದ್ದು ಸಹಜ. ಅಂಬೇಡ್ಕರ್ ಅವರನ್ನು ಅಪಮಾನಿಸಿದ ನ್ಯಾ ಮಲ್ಲಿಕಾರ್ಜುನ ಗೌಡ್ ಅವರನ್ನು ವಜಾ ಮಾಡಲು ಒತ್ತಾಯಿಸಿ ರಾಜ್ಯದ ಎಲ್ಲ ದಲಿತ ಸಂಘಟನೆಗಳು, ಪ್ರಗತಿಪರ ಗುಂಪುಗಳು ಮತ್ತು ವಿಚಾರವಂತರು ಬೆಂಗಳೂರಿನಲ್ಲಿ ಹಮ್ಮಿಕೊಂಡಿದ್ದ ವಿಧಾನಸೌಧ ಚಲೋ ಕಾರ್ಯಕ್ರಮ ಅಭೂತಪೂರ್ವ ಯಶಸ್ಸು ಕಂಡಿದೆ.

ಬಹುಶಃ ಇತ್ತೀಚೆಗೆ ತಾನೇ ಅಂತ್ಯಗೊಂಡ ದೆಹಲಿಯ ರೈತಮುಷ್ಕರವನ್ನು ಹೊರತುಪಡಿಸಿದರೆ, ಫೆಬ್ರವರಿ 19ರ ಪ್ರತಿಭಟನಾ ಮೆರವಣಿಗೆ ಒಂದು ಚಾರಿತ್ರಿಕ ಗಳಿಗೆಯಾಗಿ ಕಾಣುತ್ತದೆ. ಸಾಗರೋಪಾದಿಯಲ್ಲಿ ನೆರೆದ ಜನರ ಆಕ್ರೋಶದ ದನಿಗಳು ಆಳುವವರನ್ನು ತಲುಪಿದ್ದರೂ, ರಸ್ತೆಗಳನ್ನು ನೀಲಿಮಯವಾಗಿಸಿದ ಈ ಜನಸ್ತೋಮ ಕನ್ನಡದ ಸುದ್ದಿಮನೆಗಳನ್ನು ತಲುಪದೆ ಹೋದದ್ದು, ಕನ್ನಡ ವಿದ್ಯುನ್ಮಾನ ಮಾಧ್ಯಮಗಳ ಕ್ಯಾಮರಾ ಕಣ್ಣುಗಳಿಗೆ ಕಾಣದೆ ಹೋದದ್ದು ಸಹಜವಾಗಿಯೇ ಜನಾಕ್ರೋಶಕ್ಕೆ ಗುರಿಯಾಗಿದೆ. ಕನ್ನಡದ ಸುದ್ದಿಮನೆಗಳು ಏಕೆ ಶೋಷಿತ ಜನರ ದನಿಗೆ ಕಿವುಡಾಗಿವೆ ? ಏಕೆ ಶೋಷಿತ ಆಕ್ರೋಶಕ್ಕೆ, ಸಮಸ್ಯೆಗಳಿಗೆ, ಬಿಕ್ಕಟ್ಟುಗಳಿಗೆ ಕುರುಡಾಗಿವೆ ? ಹಿಜಾಬ್ ತೊಟ್ಟ ಪುಟ್ಟ ಹುಡುಗಿಯನ್ನು ಅಟ್ಟಿಸಿಕೊಂಡು ಹೋಗುವ ಕ್ಯಾಮರಾಗಳಿಗೆ, ಬೈಟ್‍ಗಳಿಗಾಗಿ ಪೀಡಿಸುವ, ರೋಚಕ ಸುದ್ದಿಗಾಗಿ ಹಪಹಪಿಸುವ ಸುದ್ದಿಮನೆಗಳ ಕ್ಯಾಮರಾವಾಹಕರಿಗೆ ಈ ಸಾವಿರಾರು ನೀಲವಸ್ತ್ರದ ಜನರು ಏಕೆ ಗೋಚರಿಸುವುದಿಲ್ಲ. ದೇಶಾದ್ಯಂತ ಬೀದಿಗಿಳಿದು ಪ್ರತಿಭಟಿಸುತ್ತಿರುವ ಲಕ್ಷಾಂತರ ಕಾರ್ಮಿಕರು, ಶ್ರಮಜೀವಿಗಳು, ಮಹಿಳೆಯರು, ಆದಿವಾಸಿಗಳು ಏಕೆ ಕಾಣುವುದಿಲ್ಲ ?

ಬಂಡವಾಳಶಾಹಿ ಅರ್ಥವ್ಯವಸ್ಥೆ ಮತ್ತು ಭಾರತದ ಶ್ರೇಣೀಕೃತ ಜಾತಿ ವ್ಯವಸ್ಥೆ ಹಾಗೂ ಭಾರತೀಯ ಸಮಾಜದಲ್ಲಿ ಇಂದಿಗೂ ಬೇರೂರಿರುವ ಊಳಿಗಮಾನ್ಯ ಧೋರಣೆಯ ಮೇಲರಿಮೆ ಈ ಮೂರೂ ವಿದ್ಯಮಾನಗಳನ್ನು ಭಾರತದ ಮಾಧ್ಯಮಗಳ ಕಾರ್ಯವೈಖರಿಯಲ್ಲಿ ಗುರುತಿಸಬಹುದು. ವಿದ್ಯುನ್ಮಾನ ಮಾಧ್ಯಮಗಳ ಅಸೂಕ್ಷ್ಮತೆಗೆ ಮಾರುಕಟ್ಟೆ ಪ್ರೇರಿತ ಟಿಆರ್‍ಪಿ ಗಣನೆಯೊಂದೇ ಕಾರಣವಲ್ಲ. ಈ ಮಾಧ್ಯಮಗಳನ್ನು ನಿಯಂತ್ರಿಸುವ ಬಂಡವಳಿಗ ಸಮೂಹ, ನಿರ್ವಹಿಸುವ ಮೇಲ್ಜಾತಿಯ ಮನಸುಗಳು ಮತ್ತು ಇವೆರಡನ್ನೂ ಪ್ರಭಾವಿಸುವ ಮಾರುಕಟ್ಟೆಯ ಅನಿವಾರ್ಯತೆಗಳು ವಿದ್ಯುನ್ಮಾನ ಮತ್ತು ಮುದ್ರಣ ಮಾಧ್ಯಮಗಳ ಜನಸ್ಪಂದನೆಯ ಪ್ರಮಾಣವನ್ನೂ ನಿರ್ಧರಿಸುತ್ತವೆ. ಕನ್ನಡದ ಸುದ್ದಿಮನೆಗಳು ಮತ್ತು ವಾರ್ತಾಭಾರತಿಯನ್ನು ಹೊರತುಪಡಿಸಿ ಉಳಿದೆಲ್ಲಾ ಪತ್ರಿಕೆಗಳೂ ಬೆಂಗಳೂರಿನ ಪ್ರತಿಭಟನೆಯ ಸುದ್ದಿಗೆ ಪ್ರಾಶಸ್ತ್ಯ ನೀಡದಿರುವುದನ್ನು ಈ ನೆಲೆಯಲ್ಲೇ ವ್ಯಾಖ್ಯಾನಿಸಬೇಕಿದೆ.

ಮಾಧ್ಯಮಗಳು ದಲಿತ ಸಮುದಾಯಗಳ ದನಿಗೆ ದನಿಯಾಗುತ್ತಿಲ್ಲ ಎಂಬ ಹಲುಬುವಿಕೆಯ ನಡುವೆಯೇ ಈ ಮಾಧ್ಯಮಗಳ ಮೂಲ ಸ್ವರೂಪವನ್ನೂ ಪರಾಮರ್ಶಿಸಬೇಕಾಗುತ್ತದೆ. ಪ್ರಜಾಪ್ರಭುತ್ವದ ನಾಲ್ಕನೆಯ ಅಂಗ ಸಂಸ್ಥೆಯಾಗಿ, ಸಾಮಾನ್ಯ ಪ್ರಜೆಗಳ ಸಾರ್ವಜನಿಕ ಧ್ವನಿಯಾಗಿ ಕಾರ್ಯನಿರ್ವಹಿಸಬೇಕಾದ ಮಾಧ್ಯಮಗಳು ತಮ್ಮ ಹೊಣೆಗಾರಿಕೆಯನ್ನು ಮರೆತಿರುವುದಷ್ಟೇ ಅಲ್ಲದೆ, ಆಡಳಿತ ವ್ಯವಸ್ಥೆಯೊಡನೆ, ಆಡಳಿತಾರೂಢ ಅಧಿಕಾರ ಕೇಂದ್ರಗಳೊಡನೆ ಮತ್ತು ಸ್ಥಾಪಿತ ಸಾಮಾಜಿಕ ವ್ಯವಸ್ಥೆಯೊಡನೆ ಗುರುತಿಸಿಕೊಳ್ಳುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಬೇಕಿದೆ. ಒಂದು ವರ್ಷದ ಕಾಲ ದೆಹಲಿ ಗಡಿಗಳಲ್ಲಿ ನಡೆದ ಚಾರಿತ್ರಿಕ ರೈತ ಮುಷ್ಕರದ ಸಂದರ್ಭದಲ್ಲೂ ವಿದ್ಯುನ್ಮಾನ ಮಾಧ್ಯಮಗಳು ಇದೇ ನಿಷ್ಕ್ರಿಯತೆ ಮತ್ತು ಅಸೂಕ್ಷ್ಮತೆಯನ್ನು ಪ್ರದರ್ಶಿಸಿದ್ದವು. 2019-20ರಲ್ಲಿ ಸಿಎಎ-ಎನ್‍ಆರ್‍ಸಿ ವಿರುದ್ಧ ನಡೆದ ಜನಾಂದೋಲನಗಳ ಸಂದರ್ಭದಲ್ಲೂ ಬಹುಪಾಲು ಸುದ್ದಿಮನೆಗಳು ಆಡಳಿತ ವ್ಯವಸ್ಥೆಯ ವಕ್ತಾರರಂತೆ ವರ್ತಿಸಿದ್ದವು.

ಇಲ್ಲಿ ಬಂಡವಾಳಶಾಹಿ ಮಾರುಕಟ್ಟೆ ವ್ಯವಸ್ಥೆ ಮತ್ತು ಈ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲು ಸಜ್ಜಾಗಿರುವ ಔದ್ಯಮಿಕ ವಲಯದ ಹಿತಾಸಕ್ತಿಗಳು ಮುನ್ನೆಲೆಗೆ ಬರುತ್ತವೆ. ದೇಶದ ಪ್ರಜೆಗಳ ದನಿಗೆ ದನಿಯಾಗಬೇಕಾದ ಮಾಧ್ಯಮ ವಲಯ ಪ್ರಭುತ್ವದ ದನಿಗೆ ದನಿಗೂಡಿಸಿದರೆ ಏನಾಗಬಹುದು ಎಂಬ ಪ್ರಶ್ನೆಗೆ ಭಾರತದ ವಿದ್ಯುನ್ಮಾನ ಮಾಧ್ಯಮಗಳು, ವಿಶೇಷವಾಗಿ ಕನ್ನಡದ ಸುದ್ದಿಮನೆಗಳು ನಿದರ್ಶನವಾಗಿ ಕಾಣುತ್ತವೆ. ಮುದ್ರಣ ಮತ್ತು ದೃಶ್ಯ ಮಾಧ್ಯಮಗಳು ಇಂದು ತಮ್ಮ ವೃತ್ತಿಧರ್ಮದ ಚೌಕಟ್ಟನ್ನು ದಾಟಿ, ಮಾರುಕಟ್ಟೆಯ ಒಂದು ಭಾಗವಾಗಿವೆ. ಕಾರ್ಪೋರೇಟ್ ಉದ್ಯಮಿಗಳ ಒಡೆತನದಲ್ಲೇ ಇರುವ ಬಹುಪಾಲು ಸುದ್ದಿಮನೆಗಳು ಮತ್ತು ವಾಹಿನಿಗಳು ಒಂದೆಡೆ ಮಾರುಕಟ್ಟೆ ವ್ಯಾಪ್ತಿಯನ್ನು ಹಿಗ್ಗಿಸಿಕೊಳ್ಳುವ ಪ್ರಯತ್ನದಲ್ಲಿದ್ದರೆ ಮತ್ತೊಂದೆಡೆ ಆಡಳಿತಾರೂಢ ಬಿಜೆಪಿ ಮತ್ತು ಅದರ ಹಿಂದುತ್ವ ರಾಜಕಾರಣದೊಂದಿಗೆ ಗುರುತಿಸಿಕೊಳ್ಳುವ ಮೂಲಕ ತಮ್ಮ ಅಸ್ತಿತ್ವವನ್ನೂ ಕಾಪಾಡಿಕೊಳ್ಳಲು ಶ್ರಮಿಸುತ್ತವೆ.

ಬಹುಪಾಲು ಮಾಧ್ಯಮ ಸಮೂಹಗಳ ಒಡೆತನವನ್ನು ಹಿಂದುತ್ವ ರಾಜಕಾರಣದ ಕಾಲಾಳು ಉದ್ಯಮಿಗಳೇ ಹೊಂದಿರುವುದರಿಂದಲೇ ಇಂದು ಕನ್ನಡದ ಮತ್ತು ಹಿಂದಿಯ ಸುದ್ದಿಮನೆಗಳು ಭಟ್ಟಂಗಿತನದ ಪರಾಕಾಷ್ಠೆ ತಲುಪಿವೆ. ಕನ್ನಡದ ಮಟ್ಟಿಗೆ ಹೇಳುವುದಾದರೆ ಕೋವಿದ್ ಸಾಂಕ್ರಾಮಿಕದ ಸಂದರ್ಭದಲ್ಲೇ ಕನ್ನಡದ ಸುದ್ದಿಮನೆಗಳ ಭ್ರಷ್ಟಾತಿಭ್ರಷ್ಟ ಅವತಾರವನ್ನು ಕಂಡಿದ್ದಾಗಿದೆ. ಹಿಂದುತ್ವ ರಾಜಕಾರಣವನ್ನು ವಿರೋಧಿಸುವ ಅಥವಾ ಜನಪರ ಧ್ವನಿಯನ್ನು ಪ್ರತಿನಿಧಿಸುವ ಯಾವುದೇ ಒಂದು ಪ್ರತಿಭಟನೆ, ಪ್ರತಿರೋಧ, ಆಂದೋಲನ ಅಥವಾ ಮುಷ್ಕರ ಈ ವಾಹಿನಿಗಳ ಪಾಲಿಗೆ ನಗಣ್ಯ ಎನಿಸುತ್ತದೆ. ಪ್ರಸ್ತುತ ಹಿಜಾಬ್ ವಿವಾದದಲ್ಲೂ ಇದೇ ಮಾದರಿಯನ್ನು ಗಮನಿಸುತ್ತಿದ್ದೇವೆ. ತಮ್ಮ ಮಾರುಕಟ್ಟೆ ಟಿಆರ್‍ಪಿ ಹೆಚ್ಚಿಸಿಕೊಳ್ಳುವುದರೊಂದಿಗೇ, ಅತಿಯಾದ ಸ್ವಾಮಿನಿಷ್ಠೆಯನ್ನು ಪ್ರದರ್ಶಿಸುವ ಮೂಲಕ ಕನ್ನಡದ ಸುದ್ದಿಮನೆಗಳು ಜನಸಮೂಹಗಳ ಸಾರ್ವತ್ರಿಕ ಸಮಸ್ಯೆಗಳಿಗೆ ವಿಮುಖವಾಗುತ್ತಿವೆ.

ಒಂದು ಔದ್ಯಮಿಕ ಸಂಸ್ಥೆಯಾಗಿ ಯಾವುದೇ ಮಾಧ್ಯಮ ಸಮೂಹ/ವಾಹಿನಿ/ಸುದ್ದಿಮನೆ ಮಾರುಕಟ್ಟೆಯ ಅನಿವಾರ್ಯತೆಗಳಿಗೆ ತಕ್ಕಂತೆ ವರ್ತಿಸುವುದು ಸಹಜವೇ ಆದರೂ, ಈ ಮಾಧ್ಯಮಗಳನ್ನು ಪ್ರತಿನಿಧಿಸುವ ಪತ್ರಿಕೋದ್ಯೋಗಿಗಳು, ಪತ್ರಕರ್ತರು, ಸುದ್ದಿ ಸಂಪಾದಕರು ಮತ್ತು ವರದಿಗಾರರು ತಮ್ಮ ವೃತ್ತಿಧರ್ಮವನ್ನು ಪಾಲಿಸಬೇಕಲ್ಲವೇ ? ಸಂಘಪರಿವಾರದ ವಕ್ತಾರರಂತೆ ಮಾತನಾಡುವ ಕನ್ನಡದ ಸುದ್ದಿಮನೆಗಳ ಸಂಪಾದಕರು, ನಿರೂಪಕರು ಮತ್ತು ವರದಿಗಾರರು ಈ ವೃತ್ತಿಧರ್ಮವನ್ನು ಮರೆತಿರುವುದರಿಂದಲೇ ಕನ್ನಡದ ಮಾಧ್ಯಮ ಲೋಕ ನೈತಿಕವಾಗಿ ಅಧೋಗತಿಗಿಳಿದಿದೆ. ಈ ಅಧಃಪತನದ ಮೂಲ ಕಾರಣ ಇರುವುದು ಮಾಧ್ಯಮಗಳನ್ನು ಪ್ರತಿನಿಧಿಸುವ ವ್ಯಕ್ತಿಗಳ ಜಾತಿ ಶ್ರೇಷ್ಠತೆಯ ಮೇಲರಿಮೆ ಮತ್ತು ಅಹಮಿಕೆಯಲ್ಲಿ. ತಳಸಮುದಾಯಗಳೊಡನೆ, ಶೋಷಿತ, ತುಳಿತಕ್ಕೊಳಗಾದ, ದಮನಿತ ಜನತೆಯೊಡನೆ ಗುರುತಿಸಿಕೊಳ್ಳಲಾಗದಂತಹ ಒಂದು ತಾತ್ವಿಕ ನೆಲೆಗಳಲ್ಲಿ ಈ ಸಂಪಾದಕರ ವರ್ಗ ತನ್ನ ಅಸ್ತಿತ್ವ ಮತ್ತು ಅಸ್ಮಿತೆಯನ್ನು ಕಂಡುಕೊಂಡಿರುತ್ತದೆ.

ಪತ್ರಿಕಾವಲಯದಲ್ಲಿ ಅಥವಾ ವಿದ್ಯುನ್ಮಾನ ಮಾಧ್ಯಮ ವಲಯದಲ್ಲಿರುವ ಪತ್ರಿಕೋದ್ಯೋಗಿಗಳಿಗೆ ಸಮಷ್ಟಿ ಪ್ರಜ್ಞೆ ಸದಾ ಜಾಗೃತಾವಸ್ಥೆಯಲ್ಲಿರಬೇಕಾದ್ದು ಅತ್ಯವಶ್ಯ. ತಾವು ಪ್ರತಿನಿಧಿಸುವ ಮಾಧ್ಯಮ ಸಮೂಹದ ಒಡೆತನಕ್ಕೂ ತಾವು ನಿರ್ವಹಿಸುವ ಸಮಾಜಮುಖಿ ಚಟುವಟಿಕೆಗೂ ನಡುವೆ ಒಂದು ಗೋಡೆ ಅತ್ಯವಶ್ಯವಾಗಿ ಇರಬೇಕು. ಸುದ್ದಿ ವಾಹಕರಾಗಿ, ಸುದ್ದಿ ಸಂಪಾದಕರಾಗಿ ಮತ್ತು ಟಿವಿ ವಾಹಿನಿಯ ನಿರೂಪಕರಾಗಿ ಲಕ್ಷಾಂತರ ಜನರನ್ನು ಕ್ಷಣಮಾತ್ರದಲ್ಲಿ ತಲುಪುವ ಜವಾಬ್ದಾರಿಯನ್ನು ಹೊತ್ತಿರುವ ವ್ಯಕ್ತಿಗಳಲ್ಲಿ ಸಮಷ್ಟಿ ಪ್ರಜ್ಞೆಯೊಡನೆ ಸಮಾಜದ ಆಂತರಿಕ ತುಮುಲಗಳನ್ನು ಗ್ರಹಿಸುವ ತೀಕ್ಷ್ಣತೆಯೂ ಇರಬೇಕಾಗುತ್ತದೆ. ಒಬ್ಬ ಜನಪ್ರತಿನಿಧಿಯಲ್ಲಿ ಇರಬೇಕಾದ ಸೂಕ್ಷ್ಮ ಸಂವೇದನೆಯೇ ಸುದ್ದಿವಾಹಕರಲ್ಲೂ ಇರಬೇಕಾಗುತ್ತದೆ.(ಇಲ್ಲ ಎನ್ನುವುದು ವಾಸ್ತವ.)ಏಕೆಂದರೆ ತಮ್ಮ ಜೀವನೋಪಾಯಕ್ಕಾಗಿ ಮಾಧ್ಯಮದ ಒಡೆಯನನ್ನು ಆಶ್ರಯಿಸಬೇಕಾದರೂ, ಈ ಸುದ್ದಿವಾಹಕರು ಬೌದ್ಧಿಕವಾಗಿ ಜನಸಾಮಾನ್ಯರನ್ನೇ ಪ್ರತಿನಿಧಿಸುತ್ತಾರೆ. ಜನಸಮೂಹಗಳನ್ನು ಕಾಡುವ ಜ್ವಲಂತ ಸಮಸ್ಯೆಗಳು, ಸಂದಿಗ್ಧತೆಗಳು ಮತ್ತು ಜಟಿಲ ಬಿಕ್ಕಟ್ಟುಗಳು ಪ್ರತಿಯೊಬ್ಬ ಸುದ್ದಿವಾಹಕರಲ್ಲೂ ಪ್ರಕ್ಷುಬ್ಧತೆಯನ್ನು ಸೃಷ್ಟಿಸದೆ ಹೋದರೆ, ಅಂಥವರನ್ನು ಸ್ಥಾಪಿತ ವ್ಯವಸ್ಥೆಯ ಏಜೆಂಟರೆಂದಷ್ಟೇ ಪರಿಗಣಿಸಲು ಸಾಧ್ಯ.

ಇಂದು ಕನ್ನಡದ ಸುದ್ದಿಮನೆಗಳಲ್ಲಿ ಇಂತಹ ಏಜೆಂಟರೇ ಪ್ರಧಾನವಾಗಿ ಕಂಡುಬರುತ್ತಿದ್ದಾರೆ. ನೋಟು ಅಮಾನ್ಯೀಕರಣದಿಂದ ಸಿಎಎ-ಎನ್‍ಆರ್‍ಸಿವರೆಗೆ, ಜೆಎನ್‍ಯು ವಿವಾದದಿಂದ ಮೈಸೂರಿನ ರಂಗಾಯಣದವರೆಗೆ, ಕೋವಿದ್ ಸಾಂಕ್ರಾಮಿಕದಿಂದ ಹಿಜಾಬ್ ವಿವಾದದವರೆಗೆ, ಕನ್ನಡದ ಸುದ್ದಿಮನೆಗಳ ಸುದ್ದಿವಾಹಕರು ತಮ್ಮ ವೃತ್ತಿಧರ್ಮಕ್ಕಿಂತಲೂ ಸ್ವಾಮಿನಿಷ್ಠೆಗೇ ಹೆಚ್ಚು ಪ್ರಾಮುಖ್ಯತೆ ನೀಡಿರುವುದನ್ನು ಗಮನಿಸಬೇಕು. ಇದಕ್ಕೆ ಕಾರಣ ಈ ಸುದ್ದಿವಾಹಕರು ತಮ್ಮ ಜಾತಿ ಅಸ್ಮಿತೆಯ ಚೌಕಟ್ಟಿನಿಂದ ಹೊರಬರುವ ಪ್ರಯತ್ನವನ್ನೇ ಮಾಡದಿರುವುದು. ಒಂದೆಡೆ ಧನದಾಹಿ ಬಂಡವಾಳ ವ್ಯವಸ್ಥೆಯ ಆರಾಧಕರಾಗಿ ತಮ್ಮ ಜೀವನೋಪಾಯ ಕಂಡುಕೊಳ್ಳುತ್ತಲೇ ಮತ್ತೊಂದೆಡೆ ತಮ್ಮ ವ್ಯಕ್ತಿಗತ ಜಾತಿ ಅಸ್ಮಿತೆಯ ಚೌಕಟ್ಟಿನಿಂದ ಹೊರಬರಲಾರದೆ, ಮನುಜ ಸೂಕ್ಷ್ಮತೆ ಮತ್ತು ಸಂವೇದನೆಯನ್ನೂ ಕಳೆದುಕೊಂಡು, ಹಿಂದುತ್ವ ರಾಜಕಾರಣದ ಸಾಂಸ್ಕೃತಿಕ ನೆಲೆಗಳಿಗೆ ಮೇವುಣಿಸುತ್ತಿರುವುದು ಕನ್ನಡ ಸುದ್ದಿಮನೆಗಳ ಸುದ್ದಿವಾಹಕರ ಲಕ್ಷಣ.

ಹಾಗಾಗಿಯೇ ಕನ್ನಡದ ಸುದ್ದಿಮನೆಗಳಿಗೆ ಕೊಪ್ಪಳದ ದೇವಸ್ಥಾನದ ಘಟನೆಯಂತಹ ಅಸ್ಪೃಶ್ಯತೆಯ ದೌರ್ಜನ್ಯಗಳು, ಹಾಥ್ರಸ್‍ನಂತಹ ಶೋಷಿತ ಮಹಿಳೆಯರ ಮೇಲಿನ ಅತ್ಯಾಚಾರಗಳು, ಹಿಜಾಬ್ ವಿವಾದದಲ್ಲಿ ಮುಸ್ಲಿಂ ಹೆಣ್ಣು ಮಕ್ಕಳ ಶಿಕ್ಷಣದ ಹಕ್ಕುಚ್ಯುತಿ, ದಿನನಿತ್ಯ ನಡೆಯುತ್ತಿರುವ ಜಾತಿ ದೌರ್ಜನ್ಯದ ಪ್ರಕರಣಗಳು ಪ್ರಮುಖ ಸುದ್ದಿಯಾಗಿ ಕಾಣುವುದಿಲ್ಲ. ಈ ಸುದ್ದಿಮನೆಗಳ ಕ್ಯಾಮರಾ ಕಣ್ಣುಗಳಿಗೆ ಶೋಷಣೆಯ ನೆಲೆಗಳು ಗೋಚರಿಸುವುದಿಲ್ಲ ಹಾಗೆಯೇ ಶೋಷಣೆಯ ವಿರುದ್ಧ ಸಮಾಜದಲ್ಲಿ ಗಟ್ಟಿಯಾಗಿಯೇ ಕೇಳಿಬರುವ ಪ್ರತಿರೋಧದ ಧ್ವನಿಗಳೂ ಕೇಳಿಸುವುದಿಲ್ಲ. ಹಾಗಾಗಿಯೇ ದೆಹಲಿಯ ರೈತಮುಷ್ಕರದಲ್ಲಿ ಆಳುವ ವರ್ಗಗಳಿಗೆ ಕಂಡ ಕಲ್ಪಿತ ಭಯೋತ್ಪಾದಕರು, ಖಲಿಸ್ತಾನಿಗಳು, ಉಗ್ರಗಾಮಿಗಳೇ ಈ ಸುದ್ದಿಮನೆಯ ಸಂಪಾದಕರಿಗೂ ಹಾಗೆಯೇ ಕಾಣುತ್ತಾರೆ. ಸುದ್ದಿಮನೆಗಳ ಸಂಪಾದಕರಿಗೆ ತಮ್ಮದೇ ಆದ ಕಣ್ಣೋಟ/ಮುನ್ನೋಟ ಇದ್ದಿದ್ದರೆ ದೆಹಲಿಯ ಗಡಿಗಳಲ್ಲಿ ರೈತರೇ ಕಾಣುತ್ತಿದ್ದರು. ಆದರೆ ಈ ಮಾಧ್ಯಮ ವಕ್ತಾರರರ ದೃಷ್ಟಿಗೆ ಮಾರುಕಟ್ಟೆಯ ಪರದೆ, ಜಾತಿ ಶ್ರೇಷ್ಠತೆಯ ಮಸುಕು ಕವಿದಿರುತ್ತದೆ.

ಬಂಡವಾಳಶಾಹಿ ಅರ್ಥವ್ಯವಸ್ಥೆ ತನ್ನ ಪ್ರಾಬಲ್ಯವನ್ನು ಹೆಚ್ಚಿಸಿಕೊಳ್ಳಲು ಸ್ಥಾಪಿತ ವ್ಯವಸ್ಥೆಯೊಳಗಿನ ಇಂತಹ ಒಳಬಿರುಕುಗಳನ್ನೇ ಹೆಚ್ಚಾಗಿ ಆಶ್ರಯಿಸುತ್ತದೆ. ಭಾರತದ ಸಂದರ್ಭದಲ್ಲಿ ಇಲ್ಲಿನ ಜಾತಿ ವ್ಯವಸ್ಥೆ, ಅದರೊಳಗಿನ ಶ್ರೇಷ್ಠತೆಯ ವ್ಯಸನ ಮತ್ತು ಅದು ಉಂಟುಮಾಡುವ ಬಿರುಕುಗಳು, ಈ ಜಾತಿ ವ್ಯವಸ್ಥೆಯನ್ನು ಪೋಷಿಸುವ ವೈದಿಕಶಾಹಿ ಸಾಂಸ್ಕೃತಿಕ ರಾಜಕಾರಣ ಇವೆಲ್ಲವೂ ಮಾರುಕಟ್ಟೆಯನ್ನು ಮತ್ತಷ್ಟು ಬಲಪಡಿಸುವ ಸಾಧನಗಳಾಗಿ ಬಳಕೆಯಾಗುತ್ತವೆ. ಹಾಗಾಗಿಯೇ ಪ್ರಜಾವಾಣಿಯಂತಹ ಪತ್ರಿಕೆಯೂ ಸಹ ತನ್ನ ಅಸೂಕ್ಷ್ಮತೆಯನ್ನು ಆಗಿಂದಾಗ್ಗೆ ಪ್ರದರ್ಶಿಸುತ್ತಲೇ ಇರುತ್ತದೆ. ಬಂಡವಾಳಶಾಹಿಯು ತನ್ನ ಉಳಿವಿಗಾಗಿ ಅವಲಂಬಿಸುವ ಪ್ರತಿಯೊಂದು ಸಾಮಾಜಿಕ ನೆಲೆಗಳನ್ನೂ ತನ್ನ ಬಂಡವಾಳದ ಮೂಲಕವೇ ಬಲಪಡಿಸುತ್ತಿರುತ್ತದೆ. ಇದರಲ್ಲಿ ಜಾತಿ ವ್ಯವಸ್ಥೆ ಮತ್ತು ಅದು ಪ್ರತಿನಿಧಿಸುವ ವೈದಿಕಶಾಹಿಯ ಶೋಷಕ ವ್ಯವಸ್ಥೆಯೂ ಒಂದು.

ತನಗೆ ಅತ್ಯವಶ್ಯವಾದ ಸಂವಹನ ಮಾಧ್ಯಮಗಳನ್ನು ಸಂರಕ್ಷಿಸಲು ಬಂಡವಾಳಶಾಹಿ ಮಾರುಕಟ್ಟೆ ಸಮಾಜದ ಬೌದ್ಧಿಕ ನೆಲೆಗಳನ್ನೂ ತನ್ನ ಬಾಹುಗಳಲ್ಲಿ ಬಂಧಿಸಲಾರಂಭಿಸುತ್ತದೆ. ಸಾಮಾನ್ಯ ಅಧ್ಯಯನ, ಸಂಶೋಧನೆ ಮತ್ತು ಪರಿಶೋಧನೆಯ ನೆಲೆಗಳನ್ನೂ ಸಹ ವಾಣಿಜ್ಯೀಕರಣಗೊಳಿಸುವ ಮೂಲಕ, ಸಂವಹನದ ಸೇತುವೆಗಳಲ್ಲಿ ತನ್ನದೇ ಆದ ನಿಯಂತ್ರಕ ಶಕ್ತಿಗಳನ್ನು ರೂಪಿಸುತ್ತಾ ಹೋಗುತ್ತದೆ. ಮಾಧ್ಯಮಗಳು ಏಕೆ ಹೀಗಾಗಿವೆ ? ಶೈಕ್ಷಣಿಕ ವಲಯ, ಬೌದ್ಧಿಕ ವಲಯ, ಅಕಾಡೆಮಿಕ್ ವಲಯ ಏಕೆ ನಿಷ್ಕ್ರಿಯವಾಗಿವೆ ಎಂಬ ಪ್ರಶ್ನೆಗಳಿಗೆ ಉತ್ತರ ಇಲ್ಲಿ ಕಂಡುಕೊಳ್ಳಬೇಕಿದೆ. ಸಂಸ್ಕೃತಿ, ಕಲೆ, ಜ್ಞಾನ ಮತ್ತು ಬೌದ್ಧಿಕ ಸಂಪತ್ತನ್ನು ಮಾರುಕಟ್ಟೆಯ ಸರಕುಗಳಂತೆಯೇ ಪರಿಗಣಿಸುವ ಮಾರುಕಟ್ಟೆ ವ್ಯವಸ್ಥೆ ಈ ವಲಯಗಳ ಸಂವಹನ ಸೇತುವೆಗಳನ್ನೂ ಹರಾಜು ಮಾರುಕಟ್ಟೆಯ ಜಗುಲಿಯಂತೆಯೇ ಪರಿವರ್ತಿಸಿಬಿಡುತ್ತದೆ. ಹಾಗಾಗಿಯೇ ವಿಶ್ವವಿದ್ಯಾಲಯದಲ್ಲಿ ಡಾಕ್ಟರೇಟ್ ಪದವಿಗಳು ಬಿಕರಿಯಾಗುವಂತೆಯೇ ಸಂವಹನ ವಾಹಿನಿಗಳ ಸಂಪಾದಕ, ನಿರೂಪಕ, ಸುದ್ದಿವಾಹಕ ಹುದ್ದೆಗಳೂ ಬಿಕರಿಯಾಗತೊಡಗುತ್ತವೆ.

ಭಾರತದ ಸಂದರ್ಭದಲ್ಲಿ ಇಲ್ಲಿನ ಜಾತಿ ಶ್ರೇಷ್ಠತೆಯ ನೆಲೆಗಳು ಮಾರುಕಟ್ಟೆ ಬಂಡವಾಳದೊಡನೆ ಸುಲಭವಾಗಿ ರಾಜಿಯಾಗುವುದರಿಂದಲೇ ಬಹುತೇಕ ಸಂವಹನದ ನೆಲೆಗಳು ತಮ್ಮ ಸೂಕ್ಷ್ಮ ಸಂವೇದನೆಯನ್ನು ಕಳೆದುಕೊಂಡು ದಿನದಿಂದ ದಿನಕ್ಕೆ ಬೆತ್ತಲಾಗುತ್ತಿವೆ. ಆಳುವ ವರ್ಗಗಳ ಸುಳ್ಳುಗಳನ್ನು ವೈಭವೀಕರಿಸುವಷ್ಟೇ ರೋಚಕವಾಗಿ, ವಿನಾಶಕಾರಿ ಯುದ್ಧವನ್ನೂ ವೈಭವೀಕರಿಸುವ, ಕ್ರೂರ ಅತ್ಯಾಚಾರವನ್ನೂ ರಂಜನೀಯವಾಗಿಸುವ ಒಂದು ವಿಕೃತ ಧೋರಣೆಯನ್ನು ಭಾರತದ ಸುದ್ದಿವಾಹಿನಿಗಳಲ್ಲಿ ಕಾಣಬಹುದಾದರೆ ಅದಕ್ಕೆ ಕಾರಣ ಈ ರಾಜೀ ಸೂತ್ರವೇ ಆಗಿರುತ್ತದೆ. ಹಾಗಾಗಿಯೇ ಆಳುವ ವರ್ಗಗಳ, ಪ್ರಭುತ್ವದ ಮತ್ತು ಸ್ಥಾಪಿತ ಹಿತಾಸಕ್ತಿಗಳ ಪರಿಭಾಷೆಯೇ ಮಾಧ್ಯಮದ ಪರಿಭಾಷೆಯೂ ಆಗುತ್ತದೆ. ಜೆಎನ್‍ಯು ಸಂಘರ್ಷದಲ್ಲಿ, ಹಾಥ್ರಸ್ ಅತ್ಯಾಚಾರ ಪ್ರಕರಣದಲ್ಲಿ, ಕೋವಿದ್ ನಿರ್ವಹಣೆಯಲ್ಲಿ ಇದನ್ನು ನೇರವಾಗಿಯೇ ಕಂಡಿದ್ದೇವೆ. ಹಿಜಾಬ್ ವಿವಾದದಲ್ಲೂ ಕಾಣುತ್ತಿದ್ದೇವೆ.

ಇಲ್ಲಿ ಆಧುನಿಕ ವಿದ್ಯುನ್ಮಾನ ಲೋಕದ ಸಾಮಾಜಿಕ ಮಾಧ್ಯಮಗಳ ಪಾತ್ರವನ್ನು ಗಂಭೀರವಾಗಿ ಪರಿಗಣಿಸಬೇಕಿದೆ. ಬಂಡವಾಳಶಾಹಿ ಮಾರುಕಟ್ಟೆಯ ಹಂಗಿಲ್ಲದೆ ಸಮಾಜಮುಖಿಯಾಗಿ, ಜನಸ್ಪಂದನೆಯೊಂದಿಗೆ, ಜನಸಮೂಹಗಳಿಗೆ ದನಿಗೆ ದನಿಯಾಗುವ ನೂತನ ಸಂವಹನ ಸೇತುವೆಗಳನ್ನು ನಾವಿಂದು ನಿರ್ಮಿಸಬೇಕಿದೆ. ಇಲ್ಲಿಯೂ ಸಹ ವ್ಯವಸ್ಥೆಯನ್ನು ಪ್ರತಿನಿಧಿಸುವ ಸಾಮಾಜಿಕ ಮಾಧ್ಯಮಗಳು ಮತ್ತಷ್ಟು ಒಳಬಿರುಕುಗಳನ್ನು ಸೃಷ್ಟಿಸುತ್ತಲೇ ಹೋಗುವ ಸಾಧ್ಯತೆಗಳಿರುತ್ತವೆ. ಇವೆಲ್ಲವನ್ನೂ ಮೀರಿ ಜನಪರ ವಾಹಿನಿಗಳು ವೈಚಾರಿಕತೆಯ ನೆಲೆಯಲ್ಲಿ, ವೈಜ್ಞಾನಿಕ ಮನೋಭಾವದೊಂದಿಗೆ, ಸಾಂವಿಧಾನಿಕ ಬದ್ಧತೆಯೊಂದಿಗೆ, ಪ್ರಜಾಸತ್ತಾತ್ಮಕ ಪ್ರಜ್ಞಾವಂತಿಕೆಯೊಂದಿಗೆ, ಜನಸಮುದಾಯಗಳ ನೋವಿನ ದನಿಗೆ ದನಿಯಾಗಿ ರೂಪುಗೊಳ್ಳಬೇಕಿದೆ. ಭಾರತದ ಸಂವಿಧಾನದ ಆಶಯದಂತೆ ದೇಶವನ್ನು ಒಂದು ಸರ್ವಜನಾಂಗದ ಶಾಂತಿಯ ತೋಟದಂತೆ ರೂಪಿಸಬೇಕಾದರೆ, ಈ ಸಂವಹನ ಸೇತುವೆಗಳು ಬಲಿಷ್ಠವಾಗುವುದು ಅತ್ಯವಶ್ಯ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಮಾದಕ ವಸ್ತುಗಳಿಗೆ ಕಡಿವಾಣ ; ಸ್ವಾಸ್ಥ್ಯ ಬದುಕಿಗೆ ಸೋಪಾನ

Published

on

  • ಡಾ.ಗೀತಾ ಬಸವರಾಜು, ಉಪನ್ಯಾಸಕರು, ಎ.ವಿ.ಕೆ ಮಹಿಳಾ ಕಾಲೇಜು, ದಾವಣಗೆರೆ

ಗತ್ತಿನಲ್ಲಿರುವ 84 ಕೋಟಿ ಜೀವರಾಶಿಗಳಲ್ಲಿ ಮಾನವ ಶ್ರೇಷ್ಟ ಪ್ರಾಣಿ. ಏಕೆಂದರೆ ಮಾತನಾಡುವ, ಆಲೋಚಿಸುವ, ಭಾವನೆಗಳನ್ನು ಅಭಿವ್ಯಕ್ತಿಸುವ ವಿಶೇಷವಾದ ಸಾಮರ್ಥ್ಯ ಅವನಿಗಿದೆ.

ಈ ಶಕ್ತಿಯ ಮೂಲಕ ತುಂಬಾ ಶ್ರೇಷ್ಟನಾಗಬೇಕಾದ ಮಾನವ ನಗರೀಕರಣ, ಕೈಗಾರಿಕೀಕರಣ, ಪಾಶ್ಚಾತ್ಯೀಕರಣದ ಪ್ರಭಾವದಿಂದ ಪ್ರೇರಿತನಾಗಿ ಮೂಲ ಸಂಸ್ಕೃತಿಯನ್ನು ಮರೆತು ಮೃಗೀಯ ವರ್ತನೆಗೆ ದಾಸನಾಗಿದ್ದಾನೆ. ಪ್ರಸ್ತುತ ವೈಜ್ಞಾನಿಕವಾಗಿ, ತಾಂತ್ರಿಕವಾಗಿ ಎಷ್ಟೇ ಮುಂದುವರೆದಿದ್ದರೂ, 20ನೇ ಶತಮಾನದಿಂದೀಚೆಗೆ ಜಗತ್ತನ್ನೇ ತಲ್ಲಣಗೊಳಿಸುವ ಸಾಮಾಜಿಕ ಪಿಡುಗುಗಳಾದ ಬಡತನ, ಭಿಕ್ಷಾಟನೆ, ನಿರುದ್ಯೋಗ, ವರದಕ್ಷಿಣೆ, ಅಪರಾಧ ಮಾದಕ ವಸ್ತು ವ್ಯಸನವು ಸಮಾಜದ ಸ್ವಾಸ್ಥ್ಯವನ್ನು ಹಾಳು ಮಾಡುತ್ತಿವೆ.

ಈ ಸಮಸ್ಯೆಗಳನ್ನು ಪರಿಹರಿಸಬೇಕಾಧ ಯುವಜನತೆ ಇಂತಹ ದುಶ್ಚಟಗಳ ಸೆಲೆಯಲ್ಲಿ ಸಿಕ್ಕು ತಮ್ಮ ಅಮೂಲ್ಯ ಬದುಕನ್ನು ಹಾಳು ಮಾಡಿಕೊಳ್ಳುತ್ತಿರುವುದು ಆತಂಕಕಾರಿ.
ಯುವಶಕ್ತಿಯೇ ದೇಶದ ಶಕ್ತಿಯಾಗಿದ್ದು ಭವ್ಯಭಾರತ ನಿರ್ಮಾಣದಲ್ಲಿ ತೊಡಗಿಸಿಕೊಳ್ಳಬೇಕಾದ ಯುವಜನತೆ ಮಾದಕ ವಸ್ತುಗಳ ದುಶ್ಚಟಕ್ಕೆ ಒಳಗಾಗಿ ಮಾನವೀಯ ಮೌಲ್ಯಗಳನ್ನು ಕಳೆದುಕೊಂಡು ಅಂಧಕಾರದಲ್ಲಿ ಜೀವನ ನಡೆಸುತ್ತ ಚಿಕ್ಕ ವಯಸ್ಸಿನಲ್ಲಿಯೇ ಮರಣ ಹೊಂದುತ್ತಿರುವುದು ಆಘಾತದ ವಿಷಯ.

ಜೋಸೆಫ್ ಜ್ಯೂಲಿಯನ್ ರವರ ಪ್ರಕಾರ ಮಾದಕ ವಸ್ತುಗಳೆಂದರೆ ಯಾವುದೇ ರಾಸಾಯನಿಕ ವಸ್ತುವಾಗಿದ್ದು ಅದರ ಸೇವನೆಯಿಂದ ದೈಹಿಕ ಕಾರ್ಯ, ಮನಸ್ಥಿತಿ, ಗ್ರಹಣ ಶಕ್ತಿಯ ಮೇಲೆ ಪರಿಣಾಮ ಬೀರುತ್ತದೆ. ಇದನ್ನು ಪದೇ ಪದೇ ಬಳಸುವುದರಿಂದ ವ್ಯಕ್ತಿ ಮಾದಕ ವಸ್ತು ವ್ಯಸನಿಯಾಗುತ್ತಾನೆ. ಮಾದಕ ವಸ್ತುವು ಮನಸ್ಸಿಗೆ ಗೊಂದಲವನ್ನು ತರುವ ಪದಾರ್ಥವಾಗಿದ್ದು ಅಮಲು ರೋಗವಾಗಿದೆ. ಭಾರತದ ನಗರ ಪ್ರದೇಶಗಳಲ್ಲಷ್ಟೇ ಅಲ್ಲದೆ ಹಳ್ಳಿ ಹಳ್ಳಿಗಳಲ್ಲಿಯೂ ಇದರ ಬಳಕೆ ಕಂಡುಬರುತ್ತದೆ. ಶ್ರೀಮಂತರು, ಮಧ್ಯಮ ವರ್ಗದವರು, ವಿದ್ಯಾವಂತರು, ಯುವಕರು, ಮಹಿಳೆಯರು ಎಂಬ ಭೇದವಿಲ್ಲದೆ ದುಶ್ಚಟಗಳಿಗೆ ಬಲಿಯಾಗಿ ತಮ್ಮ ಆರೋಗ್ಯವನ್ನು ಕಳೆದುಕೊಳ್ಳುತ್ತಿದ್ದಾರೆ.

ವಿಶ್ವ ಆರೋಗ್ಯ ಸಂಸ್ಥೆಯವರು ನಡೆಸಿದ ಸಮೀಕ್ಷೆಯ ಪ್ರಕಾರ ಭಾರತದ ವಿದ್ಯಾರ್ಥಿಗಳಲ್ಲಿ ಶೇ 10 ರಷ್ಟು ಒಂದಿಲ್ಲೊAದು ದುಶ್ಚಟಕ್ಕೆ ಒಳಗಾಗಿದ್ದು ಅದರಲ್ಲಿ 14 ರಿಂದ 22 ರ ವಯೋಮಾನದವರು ಹೆಚ್ಚಿದ್ದಾರೆ. ಸ್ವಾತಂತ್ಯç ಪೂರ್ವದಲ್ಲಿ ಶೇ 2 ರಷ್ಟಿದ್ದ ವ್ಯಸನಿಗಳು ಪ್ರಸ್ತುತ ಶೇ 30 ಕ್ಕಿಂತ ಹೆಚ್ಚಿದ್ದಾರೆ. ಜಗತ್ತಿನ ಸುಮಾರು 20 ಕೋಟಿಯಷ್ಟು ಇರುವ ಮಾದಕ ವ್ಯಸನಿಗಳಲ್ಲಿ ಭಾರತದಲ್ಲಿ ಶೇ 7.5 ಕೋಟಿ ವ್ಯಸನಿಗಳಿದ್ದಾರೆಂದು ಅಂದಾಜಿಸಲಾಗಿದೆ.

ನಶೆಯ ಅಲೆ ಸಾವಿನ ಬಲೆಯಾಗುತ್ತಿದ್ದರೂ ಕೂಡ ಈ ದೇಶದಲ್ಲಿ ಊಟವಿಲ್ಲದೆ ಸಾಯುವವರ ಸಂಖ್ಯೆಗಿAತಲೂ ಚಟವನ್ನು ಬೆಳೆಸಿಕೊಂಡು ಸಾಯುವವರು ಹೆಚ್ಚಾಗಿದ್ದಾರೆ.
ಮಾದಕ ವಸ್ತು ಬಳಸುವ ಆತಂಕದ ರಾಷ್ಟçಗಳಲ್ಲಿ ಭಾರತ ಪ್ರಥಮ ಸ್ಥಾನದಲ್ಲಿದೆ. ಅಮಲು ಪದಾರ್ಥಗಳಿಗೆ ಬಲಿಯಾಗುತ್ತಿರುವವರಲ್ಲಿ ವಿದ್ಯಾರ್ಥಿಗಳನ್ನೂ ಒಳಗೊಂಡAತೆ ಯುವಜನತೆ ಹೆಚ್ಚಾಗಿದ್ದು ಇದು ದೇಶದ ಭವಿಷ್ಯಕ್ಕೆ ಮಾರಕವಾಗಿದೆ.

ಡಾ.ಗೀತಾ ಬಸವರಾಜು, ಉಪನ್ಯಾಸಕರು,
ಎ.ವಿ.ಕೆ ಮಹಿಳಾ ಕಾಲೇಜು, ದಾವಣಗೆರೆ

ದುಶ್ಚಟಗಳ ಆರಂಭಕ್ಕೆ ಕಾರಣಗಳು

• ಕ್ಷಣಕಾಲ ಸುಖ ಅನಂತಕಾಲ ದು:ಖಕ್ಕೆ ಕಾರಣ ಎನ್ನುವುದು ಗೊತ್ತಿದ್ದೂ ಅಫೀಮು, ಹೆರಾಯಿನ್, ಬೀಡಿ, ಸಿಗರೇಟು, ಮದ್ಯಪಾನ ಮುಂತಾದ ದುಶ್ಚಟಗಳಿಗೆ ವಿದ್ಯಾವಂತ ಯುವಕರೇ ಬಲಿಯಾಗುತ್ತಿದ್ದಾರೆ.
• ಉಲ್ಲಾಸಕ್ಕಾಗಿ, ಫ್ಯಾಷನ್‌ಗಾಗಿ, ದುರ್ಬಲ ಮನಸ್ಸು, ಏಕಾಂಗಿತನ, ಒತ್ತಡ ನಿವಾರಣೆ ಮಾಡಿಕೊಳ್ಳಲು
• ನೋವು, ದು:ಖಕ್ಕೆ ಪರಿಹಾರವೆಂಬ ಭ್ರಮೆಗೆ ಒಳಗಾಗಿ ತನಗೆ ಅರಿವಿಲ್ಲದಂತೆ ದೊಡ್ಡ ಕಂದಕಕ್ಕೆ ಬಿದ್ದು ನರಳಾಡುವಂತ ಸಂದರ್ಭ ತಂದುಕೊಂಡು ಮಾದಕ ವಸ್ತುಗಳ ಮಾಯಾಜಾಲಕ್ಕೆ ಒಳಗಾಗುತ್ತಿದ್ದಾರೆ. ತೆರಣಿಯ ಹುಳು ತಾನು ಸುತ್ತಿದ ಬಲೆಯಲ್ಲಿ ತಾನೇ ಬಿದ್ದು ಹೊರಳಾಡುವಂತೆ ಅವರ ಪರಿಸ್ಥಿತಿಯಾಗಿದೆ.

ದುಶ್ಚಟಗಳಿಂದಾಗುವ ಪರಿಣಾಮಗಳು

• ದೇಹ ಮತ್ತು ಮನಸ್ಸಿನ ಸಮತೋಲನ ಕಳೆದುಕೊಳ್ಳುವುದು.
• ವ್ಯಕ್ತಿ ತನ್ನನ್ನು ದಹಿಸಿಕೊಳ್ಳುವುದರ ಜೊತೆಗೆ ಕುಟುಂಬದ ನೆಮ್ಮದಿಗಿ ಭಂಗ ತರುತ್ತಾನೆ.
• ಕುಟುಂಬ, ಸಮಾಜದಿಂದ ನಿಂದನೆಗೆ ಒಳಗಾಗುವನು.
• ಜ್ಞಾನೇಂದ್ರಿಯಗಳ ಮೇಲೆ ಹತೋಟಿ ಕಳೆದುಕೊಳ್ಳುವನು
• ಸಮಾಜಬಾಹಿರ ಚಟುವಟಿಕೆಗಳಾದ ಕಳ್ಳತನ, ಅತ್ಯಾಚಾರ, ಕೊಲೆ ಇಂತಹ ದುಷ್ಕೃತ್ಯಗಳನ್ನು ಮಾಡುವನು.
• ದಾಂಪತ್ಯದಲ್ಲಿ ವಿರಸವುಂಟಾಗಿ ವಿಚ್ಚೇದನಗಳಾಗುವ ಸಾಧ್ಯತೆ.
• ರಸ್ತೆ ಅಪಘಾತಗಳಲ್ಲಿ ಶೇ 1/3 ರಷ್ಟು ಮದ್ಯಪಾನ ಮತ್ತು ಮಾದಕ ವಸ್ತು ಸೇವನೆಯಿಂದಾಗುತ್ತದೆ. ಈ ಹಿನ್ನೆಲೆಯಲ್ಲಿ ಮಹಾತ್ಮ ಗಾಂಧೀಜಿಯವರು ಬೆಂಕಿ ದೇಹವನ್ನು ನಾಶ ಮಾಡಿದರೆ ಕುಡಿತ ದೇಹ ಮತ್ತು ಆತ್ಮಗಳೆರಡನ್ನೂ ನಾಶ ಮಾಡುತ್ತದೆ ಎಂದಿದ್ದಾರೆ.

ಪರಿಹಾರ ಕ್ರಮಗಳು

• ಮಾದಕ ವಸ್ತುಗಳ ಹಿಡಿತಕ್ಕೆ ಸಿಲುಕದೆ ಅದರಿಂದ ದೂರವಿರುವುದು.
• ಮಾದಕ ವಸ್ತು ಸೇವಿಸುವುದಿಲ್ಲವೆಂದು ಪ್ರತಿಜ್ಞೆ ಮಾಡುವುದು.
• ಸಹೋದ್ಯೋಗಿ, ಸ್ನೇಹಿತರಿಗೆ ತಿಳುವಳಿಕೆ ನೀಡುವುದು.
• 18 ವರ್ಷ ವಯಸ್ಸಿನವರೆಗೂ ಪೋಷಕರು ಮಕ್ಕಳ ಬಗ್ಗೆ ಗಮನ ನೀಡಿ ಮಾರ್ಗದರ್ಶನ ಮಾಡುವುದು.
• ಶಾಲೆ ಕಾಲೇಜುಗಳಲ್ಲಿ ಶಿಕ್ಷಕರು ಮಕ್ಳಳಲ್ಲಿ ಜೀವನ ಕೌಶಲಗಳನ್ನು ಬೆಳೆಸುವ ರಾಯಭಾರಿಗಳಾಗಿ ಕಾರ್ಯನಿರ್ವಹಿಸುವುದು.
• ವಿದ್ಯಾರ್ಥಿಗಳನ್ನು ಸಹಪಠ್ಯ ಚಟುವಟಿಕೆಗಳಲ್ಲಿ ತೊಡಗಿಸಿ ಆರೋಗ್ಯಕರವಾದ ಹವ್ಯಾಸಗಳನ್ನು ಬೆಳೆಸುವುದು.

ಭಾರತ ಸರ್ಕಾರವು 1951ರಲ್ಲಿ ಅಪಾಯಕಾರಿ ವಸ್ತುಗಳ ಕಾಯ್ದೆಯನ್ನು ಜಾರಿಗೆ ತಂದಿತು. ಈ ಕಾಯ್ದೆ ಮಾದಕ ವಸ್ತು ತಯಾರಿಕೆ, ಸಾಗಾಣಿಕೆ, ಮಾರಾಟ ಮತ್ತು ಬಳಕೆಯ ಮೇಲೆ ನಿರ್ಬಂಧ ಹೇರಿದೆ. 1985 ರಲ್ಲಿ ಡ್ರಗ್ಸ್ ಆಕ್ಟ್ ಜಾರಿಗೊಳಿಸಿದೆ. ಈ ಕಾಯ್ದೆ ಮಾದಕ ವಸ್ತುಗಳ ಕಳ್ಳ ವ್ಯಾಪಾರದಲ್ಲಿ ತೊಡಗಿದ ಅಪರಾಧಿಗಳಿಗೆ ಕನಿಷ್ಠ 10 ರಿಂದ 20 ವರ್ಷ ಕಠಿಣ ಶಿಕ್ಷೆ, 1 ರಿಂದ 2 ಲಕ್ಷದವರೆಗೆ ದಂಡ ಘೋಷಿಸಿದೆ.

ಡಿಸೆಂಬರ್-7 1987 ರ ವಿಶ್ವ ಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮಾದಕ ವಸ್ತುಗಳ ದುರ್ಬಳಕೆಯನ್ನು ತಡೆಗಟ್ಟುವ ನಿಯಮಾವಳಿಗಳ ಅಂಗೀಕಾರವನ್ನು ಹಲವಾರು ರಾಷ್ಟçಗಳು ಒಪ್ಪಿಕೊಂಡು ವಿಶ್ವದಾದ್ಯಂತ ಮಾದಕ ವಸ್ತುಗಳ ದುರ್ಬಳಕೆ ನಿಯಂತ್ರಿಸುವ ತೀರ್ಮಾನವನ್ನು ಮಾಡಿದವು.

ಜೂನ್-26 ವಿಶ್ವಸಂಸ್ಥೆಯು ಮಾದಕ ವಸ್ತು ದುರ್ಬಳಕೆ ಮತ್ತು ಕಳ್ಳಸಾಗಣೆ ವಿರುದ್ಧದ ಅಂತರರಾಷ್ಟ್ರೀಯ ದಿನವನ್ನು ಆಚರಿಸಿ ಈ ಸಮಸ್ಯೆಯ ನಿಯಂತ್ರಣ ಮತ್ತು ಪರಿಹಾರದ ಕುರಿತು ನಿವಾರಣೆಯಲ್ಲಿ ಸಮುದಾಯ, ಸಮವಯಸ್ಕರು, ಕುಟುಂಬ, ಸಂಘ ಸಂಸ್ಥೆಗಳವರು ಪ್ರಮುಖ ಪಾತ್ರ ವಹಿಸಬೇಕಾಗಿದೆಎಂದು ಮನವರಿಕೆ ಮಾಡಿತು. ಮಾದಕ ವಸ್ತು ದುರ್ಬಳಕೆ ಒಂದು ಮಾನಸಿಕ, ಸಾಮಾಜಿಕ ಸಮಸ್ಯೆಯಾಗಿದ್ದು ಇಡೀ ಸಮುದಾಯವೇ ಇದರ ನಿವಾರಣೋಪಾಯದಲ್ಲಿ ಪಾಲ್ಗೊಳ್ಳಬೇಕೆಂದು ಸೂಚಿಸಿತು.

ವ್ಯಕ್ತಿ ಒಮ್ಮೆ ಈ ಚಕ್ರವ್ಯೂಹದಲ್ಲಿ ಸಿಲುಕಿಕೊಂಡರೆ ಹೊರಬರುವುದು ಕಷ್ಟಸಾಧ್ಯ. ಆರೋಗ್ಯ ಜೀವನ ನಡೆಸಲು ಮಾದಕ ವಸ್ತುಗಳನ್ನು ತ್ಯಜಿಸಿ ಸುಂದರ ಜೀವನ ನಡೆಸಿ ಎಂಬ ಸಂದೇಶ ಸಾರುತ್ತ ನಾವೆಲ್ಲರೂ ಸಂಘಟಿತರಾಗಿ ಸಮಾಜದಲ್ಲಿ ಜಾಗೃತಿ ಮೂಡಿಸಿದಾಗ ದುಶ್ಚಟಮುಕ್ತ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ. (ಜೂನ್-26 ರಂದು ಅಂತರರಾಷ್ಟೀಯ ಮಾದಕ ವಸ್ತುಗಳ ದುರ್ಬಳಕೆ ವಿರೋಧಿ ದಿನ ತನ್ನಿಮಿತ್ತ ಈ ಲೇಖನ – ಡಾ. ಗೀತಾ ಬಸವರಾಜು,ಉಪನ್ಯಾಸಕರು,ಎ.ವಿ.ಕೆ ಮಹಿಳಾ ಕಾಲೇಜು,ದಾವಣಗೆರೆ)

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ರೇಣುಕಾಸ್ವಾಮಿ ಕೊಲೆ ಮತ್ತು ಗಂಡುಹೆಣ್ಣಿನ ನಡುವಿನ ಸಂಬಂಧ

Published

on

  • ರಾಜೇಂದ್ರ ಬುರಡಿಕಟ್ಟಿ

ರೇಣುಕಾಸ್ವಾಮಿ ಕೊಲೆ ಕೇಸನ್ನು ಸಾಮಾಜಿಕ ಜಾಲತಾಣಗಳಲ್ಲಿ ಚರ್ಚಿಸುವ ಅನೇಕ ಸ್ನೇಹಿತರು ಈ ಕೇಸಿನಲ್ಲಿ ಮೊದಲನೆಯ ಮತ್ತು ಎರಡನೆಯ ಆರೋಪಿಗಳೆಂದು ಹೆಸರಿಸಲ್ಪಟ್ಟ ದರ್ಶನ್ ಮತ್ತು ಪವಿತ್ರ ಗೌಡ ಅವರ ನಡುವಿನ ಸಂಬಂಧದ ಬಗ್ಗೆ ಅನಗತ್ಯವಾಗಿ ಚರ್ಚಿಸಿ ಪವಿತ್ರಗೌಡ ಅವರನ್ನು ‘ಇಟ್ಟುಕೊಂಡವಳು’ ಇತ್ಯದಿ ಪದಬಳಸಿ ಹಿಯ್ಯಾಳಿಸಿದ್ದಾರೆ.

ಒಂದು ಟಿವಿ ಚಾನೆಲ್ ನವರು ಅವರನ್ನು ‘ಸೆಕೆಂಡ್ ಹ್ಯಾಂಡ್ ಸುಂದರಿ’ ಎಂದೂ ಕರೆದದ್ದು ವರದಿಯಾಗಿದೆ. ಇದನ್ನು ಮಾಡುವ ಹಕ್ಕು ಯಾರಿಗೂ ಇಲ್ಲ. ನಮ್ಮ ವಿರೋಧ ಇರಬೇಕಾದದ್ದು ಅವರು ರೂಪಿಸಿದ್ದಾರೆ ಎನ್ನಲಾದ ಕೊಲೆಯ ಕೇಸಿನ ಬಗ್ಗೆಯೇ ಹೊರತು ಅವರಿಬ್ಬರ ನಡುವಿನ ವೈಯಕ್ತಿಕ ಸಂಬಂಧದ ಬಗ್ಗೆ ಅಲ್ಲ.

ಗಂಡು ಹೆಣ್ಣಿನ ನಡುವಿನ ಸಂಬಂಧ ಎಂಬುದು ಅತ್ಯಂತ ಸಹಜವಾದದ್ದು. ಯಾರಿಗೆ ಯಾರ ಮೇಲೆ ಯಾವಾಗ ಆಕರ್ಷಣೆ ಉಂಟಾಗಿ ಸಂಬಂಧಗಳು ಬೆಸೆದುಕೊಳ್ಳುತ್ತವೆ ಎಂಬುದನ್ನು ಹೇಳಲಾಗದು. ಇದಕ್ಕೆ ‘ನೈತಿಕ’ ‘ಅನೈತಿಕ’ ಎಂಬ ಹಣೆಪಟ್ಟಿ ಹಚ್ಚಿ ಗೌರವಿಸುವ ಅಥವಾ ಅವಹೇಳನ ಮಾಡುವ ಕ್ರಮ ಸರಿಯಾದದ್ದಲ್ಲ. ಪ್ರತಿಯೊಬ್ಬರಿಗೂ ಆಯ್ಕೆಗಳಿರುತ್ತವೆ. ತಮಗೆ ಬೇಕಾದ ಗಂಡನ್ನು ಅಥವಾ ಹೆಣ್ಣನ್ನು ಆಯ್ದುಕೊಳ್ಳುವ ಅವರೊಡನೆ ಲೈಂಗಿಕ ಸಂಬಂಧವನ್ನು ಇಟ್ಟುಕೊಳ್ಳುವ ಸ್ವಾತಂತ್ರ್ಯವಿದೆ. ಎಲ್ಲರಿಗೂ ಇದೆ. ಅದನ್ನು ಪ್ರಶ್ನಿಸುವ ಹಕ್ಕು ಇತರರಿಗೆ ಇಲ್ಲ. ಪರಸ್ಪರ ಒಪ್ಪಿತ ಲೈಂಗಿಕ ಸಂಬಂಧವು ದೇಶದ ಕಾನೂನಿನ ಪ್ರಕಾರವೂ ಅಪರಾಧವಲ್ಲ.

ಕನ್ನಡಕ್ಕೆ ಜ್ಞಾನಪೀಠ ಪ್ರಶಸ್ತಿ ತಂದುಕೊಟ್ಟ ಹಿರಿಯ ಸಾಹಿತಿ ಡಾ. ಶಿವರಾಮ ಕಾರಂತರು ತಮ್ಮ ಅನೇಕ ಕಾದಂಬರಿಗಳ ಮೂಲಕ ಇದಕ್ಕೆ ಸಂಬಂಧಿಸಿದಂತೆ ಒಂದು ತಾತ್ವಿಕತೆಯನ್ನು ನಮಗೆ ರೂಪಿಸಿಕೊಡುತ್ತಾರೆ. ಅದೆಂದರೆ ‘ಲೈಂಗಿಕ ಸುಖ ಎನ್ನುವುದು ಮನುಷ್ಯನ ಬದುಕು ಮನುಷ್ಯನಿಗೆ ನೀಡುವ ಅತ್ಯಂತ ಸುಖದ ಸಂಗತಿಗಳಲ್ಲಿ ಒಂದು. ಅದರಿಂದ ಯಾರೂ ವಂಚಿತರಾಗಬಾರದು. ಪರಸ್ಪರ ಒಪ್ಪಿಕೊಂಡ ಗಂಡು ಹೆಣ್ಣುಗಳ ನಡುವಿನ ಲೈಂಗಿಕ ಸಂಬಂಧದಲ್ಲಿ ಒಂದು ಚೆಲುವು ಇರುತ್ತದೆ. ಇಂತಹ ಒಂದು ಒಳ್ಳೆಯ ಸಂಬಂಧಕ್ಕೆ ಮದುವೆ ಎಂಬುದು ಒಂದು ‘ಪೂರ್ವಾಗತ್ಯ’ವಾಗಬೇಕಿಲ್ಲ. ಗಂಡುಹೆಣ್ಣಿನ ನಡುವಿನ ಒಂದು ಒಳ್ಳೆಯ ಸಂಬಂಧವು ವಿವಾಹದ ಒಳಗೂ ಇರಬಹುದು; ಹೊರಗೂ ಇರಬಹುದು. ಅದೇ ರೀತಿ ಒಂದು ಕೆಟ್ಟ ಸಂಬಂಧವು ವಿವಾಹದ ಒಳಗೂ ಇರಬಹುದು ಹೊರಗೂ ಇರಬಹುದು. ವಿವಾಹದ ಚೌಕಟ್ಟಿನ ಒಳಗಿನ ಒಂದು ಕೆಟ್ಟ ಸಂಬಂಧಕ್ಕಿಂತ ವಿವಾಹದ ಚೌಕಟ್ಟಿನ ಹೊರಗಿನ ಒಳ್ಳೆಯ ಸಂಬಂಧ ಬೆಲೆಯುಳ್ಳದ್ದು.

ಹೀಗಾಗಿ ಯಾರೊಡನೆ ಎಂತಹ ಸಂಬಂಧ ಇಟ್ಟುಕೊಳ್ಳಬೇಕು ಎಂಬುದು ಅವರವರ ವೈಯಕ್ತಿಕ ವಿಚಾರ. ಅದರಲ್ಲಿ ಇತರರು ತಲೆಹಾಕುವುದು ಅವಿವೇಕತನ. ‘ಮದುವೆ ಎಂಬುದು ಏಳೇಳು ಜನ್ಮಗಳ ಸಂಬಂಧ’ ಏನೇ ಆದರೂ ಅದರ ಗೆರೆದಾಟಿ ಬೇರೆಯವರೊಡನೆ ಲೈಂಗಿಕ ಸಂಬಂಧ ಇಟ್ಟುಕೊಳ್ಳಬಾರದು’ ಎನ್ನುವವರು ಹಾಗೆಯೇ ಇರಬಹುದು. ಅದಕ್ಕೂ ಅವರಿಗೆ ಸ್ವಾತಂತ್ರ್ಯವಿದೆ. ಆದರೆ ಮದುವೆಯ ಚೌಕಟ್ಟಿನ ಹೊರಗಿನ ಸಂಬಂಧಗಳನ್ನು ಟೀಕಿಸುವ ಸ್ವಾತಂತ್ರ್ಯ ಹಕ್ಕು ಅವರಿಗಿಲ್ಲ. ಈ ವಿಷಯದಲ್ಲಿ ನಮ್ಮ ಆಲೋಚನಾ ಕ್ರಮ ಸಾಕಷ್ಟು ಬದಲಾಗಬೇಕಿದೆ. ಒಂದು ಗಂಡು ಮತ್ತು ಒಂದು ಹೆಣ್ಣಿನ ನಡುವಿನ ಸಂಬಂಧ ಎಂಥದ್ದೇ ಇರಲಿ ಅದು ಅವರಿಬ್ಬರಿಗೂ ಸಂತೋಷವನ್ನು ಕೊಡುತ್ತಿದ್ದರೆ ಅದನ್ನು ಕಂಡು ನಾವು ಸಂತೋಷ ಪಡಬೇಕೆ ಹೊರತು ಹೊಟ್ಟೆಕಿಚ್ಚು ಪಡಬಾರದು. ಅದನ್ನು ಗೌರವಿಸುವುದನ್ನು ನಾವು ಮೊದಲು ಕಲಿಯಬೇಕು. ಈ ಹಿನ್ನಲೆಯಲ್ಲಿ ನಮ್ಮ ವಿರೋಧವಿರಬೇಕಾದದ್ದು ಅವರಿಬ್ಬರು ಸೇರಿ ವ್ಯಕ್ತಿಯೊಬ್ಬರ ಕೊಲೆಮಾಡಿದ್ದಾರೆ ಎನ್ನಲಾದ ವಿಚಾರಕ್ಕೆ ಹೊರತು ಅವರ ನಡುವಿನ ವೈಯಕ್ತಿಕ ಸಂಬಂಧದ ಬಗ್ಗೆ ಅಲ್ಲ. ಇಂತದ್ದೇ ವಿಚಾರವನ್ನು ಬೇರೆ ರೀತಿಯಲ್ಲಿ ಹೇಳಿರುವ ಸುಹಾಸಿನಿ ಶ್ರೀ Suhasini Shree ಅವರ ಒಂದು ಪೋಸ್ಟನ್ನೂ ಆಸಕ್ತಿ ಇರುವವರು ಗಮನಿಸಬಹುದು.(ರಾಬು (23-06-2024)
(ರಾಜೇಂದ್ರ ಬುರಡಿಕಟ್ಟಿ ಅವರ ಫೇಸ್ ಬುಕ್ ಬರೆಹ)

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಇವರೇ ನೋಡಿ ಟ್ವೀಟ್ಟರ್, ಪೇಸ್ಬುಕ್ ಮೀಮ್ಸ್ ಸ್ಟಾರ್ ಕ್ಸೇವಿಯರ್ ಉರ್ಫ್ ಓಂಪ್ರಕಾಶ್

Published

on

  • ~ ಸಿದ್ದು ಸತ್ಯಣ್ಣನವರ್

ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯವಾಗಿದ್ದವರಿಗೆ ನೋಡಿದ ಕೂಡಲೇ ನಗು ಉಕ್ಕಿಸಿ, ಉಲ್ಲಸಿತಗೊಳಿಸುವ ಕ್ಸೇವಿಯರ್ ಮೀಮ್ಸ್ ಗಳ ಪರಿಚಯ ಇದ್ದೇ ಇರುತ್ತದೆ. ಕ್ಸೇವಿಯರ್ ಎಂದರೆ ಯಾರು? ಎಂದು ಹೆಸರೇಳಿದರೆ ಗೊತ್ತಾಗದಿರುವವರು ಅವರ ಫೋಟೊ ನೋಡಿದರೆ ಕೂಡಲೇ ಮುಖದ ಮೇಲೆ ನಗು ಮೂಡಿರುತ್ತದೆ.

ತುಂಟ ಕಾಮೆಂಟ್ ಹಾಗೂ ಹಾಸ್ಯದ ತಿರುಳುಗಳ ಪೋಸ್ಟ್ ಮೂಲಕ ಗಮನ ಸೆಳೆಯುವ‌ ಕ್ಸೇವಿಯರ್ ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಹಾಸ್ಯಪ್ರಜ್ಞೆಯಿಂದ ಸಾಕಷ್ಟು ಪ್ರಸಿದ್ಧ. ಕ್ಸೇವಿಯರ್ ಹೆಸರಿನಿಂದ ಜನಪ್ರಿಯರಾದ ಇವರ ನಿಜವಾದ ಹೆಸರು ಓಂಪ್ರಕಾಶ್. ಅಸಂಖ್ಯ ಟ್ವೀಟರ್, ಫೇಸ್ಬುಕ್ ಪ್ರೋಫೈಲ್ ಗಳಲ್ಲಿ ಓಂಪ್ರಕಾಶ್ ಅವರ ಫೋಟೊ ಕ್ಸೇವಿಯರ್ ಎಂದೇ ಹಂಚಲ್ಪಟ್ಟಿದೆ.

ಮೀಮ್ಸ್ ಸ್ಟಾರ್ ಎಂದೇ ಪ್ರಖ್ಯಾತರಾಗಿರುವ ಇವರು ಮಧ್ಯವಯಸ್ಕ ಭಾರತೀಯರು ಹೆಚ್ಚಾಗಿ ಇಷ್ಟಪಡುವ ದಪ್ಪಮೀಸೆಯ ಫೋಟೊ ಹೊಂದಿರುವ ಪ್ರೋಫೈಲ್ ಮೂಲಕ ಟ್ವೀಟ್ಟರ್ ಮತ್ತು ಫೇಸ್ಬುಕ್ಕಿನ ಸಾಕಷ್ಟು ಟ್ರೋಲ್, ಮೀಮ್ ಪೇಜುಗಳಲ್ಲಿ ಕಾಣಸಿಗುತ್ತಾರೆ. ಕ್ಸೇವಿಯರ್ ಅಂಕಲ್, ಕ್ಸೇವಿಯರ್ ಮೀಮ್ಸ್, ಕ್ಸೇವಿಯರ್ ಪಾಂಡಾ, ಕ್ಸೇವಿಯರ್ ಮಿಮ್ ಬಾಯ್ ಹೀಗೆ ಇವರ ಹೆಸರಿನ ಮೂಲಕ ಸಾವಿರಾರು ಮೀಮ್ಸ್ ಮೇಕಿಂಗ್ ಪ್ರೋಫೈಲ್ ಗಳು ಲಕ್ಷಾಂತರ ಹಿಂಬಾಲಕರನ್ನು ಹೊಂದಿವೆ. ಮೀಮ್ಸ್ ಗಾಗಿಯೇ ವಿನ್ಯಾಸಗೊಳಿಸಲಾಗಿರುವ, ವಿದೇಶಗಳಲ್ಲೂ ಕೋಟ್ಯಂತರ ಜನರು ಹಿಂಬಾಲಿಸುವ 9gag ಎಂಬ ವೆಬ್ಸೈಟಿನಲ್ಲಿ ಇವರ ಸಾಕಷ್ಟು ಮೀಮ್ಸ್ ಗಳು ಜನಪ್ರಿಯವಾಗಿವೆ. ಫೇಸ್ಬುಕ್, ಟ್ವಿಟ್ಟರ್ ಬಳಸುವವರಿಗೆ ಕ್ಸೇವಿಯರ್ ಹಾಸ್ಯಪ್ರಜ್ಞೆ ಎಂಥದ್ದು ಎಂಬುದನ್ನ ಕೇಳಿದರೆ ನಗುವೇ ಅವರ ಉತ್ತರವಾಗಿರುತ್ತದೆ ಎಂಬುದಕ್ಕೆ ಸಹ ಚೆಂದದ ಮೀಮ್ ಒಂದಿದೆ.

ಕಾನ್ಪುರ ಐಐಟಿ ಸಿಬ್ಬಂದಿಯಾದ ಓಂಪ್ರಕಾಶ್ ಅವರು ಅಲ್ಲಿನ ಭೌತಶಾಸ್ತ್ರ ವಿಭಾಗದ ತಾಂತ್ರಿಕ ಮೇಲ್ವಿಚಾರಕ ಹುದ್ದೆಯಲ್ಲಿದ್ದಾರೆ. ಕ್ಸೇವಿಯರ್ ಎಂದು ಅವರು ಪ್ರಸಿದ್ಧರಾಗಲು ಕಾರಣ ಅವರ ಅಪರಿಮಿತ ಹಾಸ್ಯಪ್ರಜ್ಞೆಯ ‘ಪಕಾಲು ಪಾಪಿಟೋ’ ಎಂಬ ಕಾಲ್ಪನಿಕ ಗುಮಾಸ್ತನ ಪಾತ್ರವನ್ನು ಸೃಷ್ಟಿಸಿದ್ದಕ್ಕಾಗಿ. ಆ ಗುಮಾಸ್ತನ ಮೊದಲ ಟ್ವೀಟ್ ಟ್ವೀಟ್ಟರಿನಲ್ಲಿ ಹೆಚ್ಚುಕಡಿಮೆ 18 ಸಾವಿರ ರೀಟ್ವೀಟ್ ಆಗಿತ್ತು.

ಟ್ವೀಟ್ಟರ್ ನಿಯಮಗಳ ತಾಂತ್ರಿಕ ಕಾರಣಗಳಿಂದ ಸುಮಾರು ಲಕ್ಷ ಹಿಂಬಾಲಕರಿದ್ದ ಈ ಅಕೌಂಟ್ ಸ್ಥಗಿತಗೊಂಡಿತು. ನಂತರ ಕಾಮಿಕ್ ಮೀಮ್ ಗಳಿಂದ ಆರಂಭದಲ್ಲಿ ಪ್ರಸಿದ್ಧರಾಗಿದ್ದ ಓಂಪ್ರಕಾಶ್ ಅವರು ಕೊನೆಗೆ ಕ್ಸೇವಿಯರ್ ಹೆಸರಿನ ಮೂಲಕ ಮೀಮ್ ಪ್ರಿಯರಿಗೆ ಮನೆಮಾತಾದರು. ಓಂಪ್ರಕಾಶ್ ಅವರು ಫೇಸ್ಬುಕ್ ಮತ್ತು ಟ್ವಿಟ್ಟರ್ ನಲ್ಲಿ ಕ್ರಮವಾಗಿ 1.4 ಮಿಲಿಯನ್ ಹಾಗೂ 3 ಲಕ್ಷ ಹಿಂಬಾಲಕರನ್ನು ಹೊಂದಿದ್ದಾರೆ. ‘ಪಕಾಲು ಪಾಪಿಟೋ’ ಅಕೌಂಟ್ ತಾಂತ್ರಿಕವಾಗಿ ಸ್ಥಗಿತಗೊಂಡ ಕಾರಣ ಕ್ಸೇವಿಯರ್ ಎಂಬ ಹೆಸರಿನ ತಮಾಷೆಯ ಮೀಮ್ಸ್ ಮೂಲಕ ಇನ್ಸ್ಟಾಗ್ರಾಂ, ಫೇಸ್ಬುಕ್, ಟ್ವಿಟ್ಟರ್ ಎಲ್ಲ ಕಡೆಗಳಲ್ಲಿ ಕಾಣಿಸುತ್ತಾರೆ. ( ಸಿದ್ದು ಸತ್ಯಣ್ಣನವರ್ ಅವರ ಫೇಸ್ ಬುಕ್ ಪೇಜ್ ನಿಂದ)

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending