ದಿನದ ಸುದ್ದಿ
ಜನಸ್ಪಂದನ ಸಭೆ ಅಧಿಕಾರಿಗಳು ಸಾರ್ವಜನಿಕ ಮನವಿಗಳಿಗೆ ತ್ವರಿತವಾಗಿ ಸ್ಪಂದಿಸಬೇಕು : ಡಿಸಿ ಮಹಾಂತೇಶ್ ಬೀಳಗಿ
- /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 27
https://suddidina.com/wp-content/uploads/2022/03/dc_janaspandanasabhe.jpg&description=ಜನಸ್ಪಂದನ ಸಭೆ ಅಧಿಕಾರಿಗಳು ಸಾರ್ವಜನಿಕ ಮನವಿಗಳಿಗೆ ತ್ವರಿತವಾಗಿ ಸ್ಪಂದಿಸಬೇಕು : ಡಿಸಿ ಮಹಾಂತೇಶ್ ಬೀಳಗಿ', 'pinterestShare', 'width=750,height=350'); return false;" title="Pin This Post">
- Share
- Tweet /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 72
https://suddidina.com/wp-content/uploads/2022/03/dc_janaspandanasabhe.jpg&description=ಜನಸ್ಪಂದನ ಸಭೆ ಅಧಿಕಾರಿಗಳು ಸಾರ್ವಜನಿಕ ಮನವಿಗಳಿಗೆ ತ್ವರಿತವಾಗಿ ಸ್ಪಂದಿಸಬೇಕು : ಡಿಸಿ ಮಹಾಂತೇಶ್ ಬೀಳಗಿ', 'pinterestShare', 'width=750,height=350'); return false;" title="Pin This Post">
ಸುದ್ದಿದಿನ,ದಾವಣಗೆರೆ : ಸಾರ್ವಜನಿಕರ ಸಮಸ್ಯೆಗಳನ್ನು ಸ್ಥಳೀಯವಾಗಿ ಪರಿಹರಿಸುವ ಸಲುವಾಗಿ ಜನಸ್ಪಂದನಾ ಸಭೆ ನಡೆಸಲಾಗುತ್ತಿದ್ದು, ಅಧಿಕಾರಿಗಳು ವಿಳಂಬಕ್ಕೆ ಅವಕಾಶ ನೀಡದೆ ಸಾರ್ವಜನಿಕ ಮನವಿಗಳಿಗೆ ತ್ವರಿತವಾಗಿ ಸ್ಪಂದಿಸುವ ಮೂಲಕ ಸಮಸ್ಯೆ ಪರಿಹರಿಸಲು ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರು ಸೂಚನೆ ನೀಡಿದರು.
ಗುರುವಾರ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ನಡೆಸಿದ ಜನಸ್ಪಂದನ ಸಭೆಯಲ್ಲಿ ಸಾರ್ವಜನಿಕರ ಅವಹಾಲುಗಳನ್ನು ಸ್ವೀಕರಿಸಿ ಅವರು ಮಾತನಾಡಿದರು.
ಜನಸ್ಪಂದನ ಸಭೆಯ ಮೂಲಕ ಅನೇಕ ಸಮಸ್ಯೆಗಳು ಸ್ಥಳದಲ್ಲಿಯೇ ಇತ್ಯರ್ಥವಾಗುತ್ತವೆ ಅಲ್ಲದೆ ಅಧಿಕಾರಿಗಳ ಕಾರ್ಯವೈಖರಿಯೂ ತಿಳಿಯುತ್ತದೆ. ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸುವ ಉದ್ದೇಶದಿಂದ ಜನಸ್ಪಂದನಾ ಸಭೆಯನ್ನು ಪುನರಾರಂಭಿಸಲಾಗಿದೆ ಎಂದರು.
ಜಗಳೂರು ತಾಲ್ಲೂಕಿನ ಗಡಿ ಭಾಗದ ಚಿಕ್ಕ ಮಂಗನಹೊಳೆ ಗ್ರಾಮದ ವ್ಯಕ್ತಿಯೊಬ್ಬರು ಗ್ರಾಮದಲ್ಲಿ ಸುಮಾರು 200ಕ್ಕೂ ಹೆಚ್ಚು ಕುಟುಂಬಗಳು ವಾಸವಿದ್ದು, ನ್ಯಾಯ ಬೆಲೆ ಅಂಗಡಿ ಹೊರತು ಪಡಿಸಿ ಯಾವುದೇ ಮೂಲಭೂತ ಸೌಕರ್ಯಗಳಿಲ್ಲ, ಬಸ್ ತಂಗುದಾಣ, ಗ್ರಂಥಾಲಯ, ಸಮುದಾಯ ಭವನ, ಚೆಕ್ ಡ್ಯಾಂ ರಿಪೇರಿ, ಬ್ಯಾಂಕ್ ಶಾಖೆ ಸೇರಿದಂತೆ ಅಗತ್ಯವಾದ ಸೌಲಭ್ಯಗಳನ್ನು ಗ್ರಾಮಕ್ಕೆ ಒದಗಿಸುವಂತೆ ಕೋರಿ ಸಲ್ಲಿಸಿದ ಮನವಿ ಸ್ವೀಕರಿಸಿದ ಜಿಲ್ಲಾಧಿಕಾರಿಗಳು, ಗ್ರಾಮಕ್ಕೆ ತಾವೇ ಖುದ್ದಾಗಿ ಭೇಟಿ ನೀಡಿ, ಪರಿಶೀಲನೆ ನಡೆಸಲಾಗುವುದು. ಗ್ರಾಮಕ್ಕೆ ಅಗತ್ಯವಿರುವ ಮೂಲಭೂತ ಸೌಕರ್ಯ ಒದಗಿಸಲು ಅಗತ್ಯ ಕ್ರಮ ಜರುಗಿಸುವ ಭರವಸೆ ನೀಡಿದರು.
ಕರೆಕಟ್ಟೆ ಗ್ರಾಮದ ವೃದ್ದ ವ್ಯಕ್ತಿಯೊಬ್ಬರು ಭತ್ತದ ಅಂಗಡಿ ಮಾಲೀಕನೊಬ್ಬ ಭತ್ತ ಖರೀದಿಸಿ ಹಣ ನೀಡದೆ ಮೋಸ ಮಾಡಿದ್ದು, ನ್ಯಾಯ ದೊರಕಿಸುವಂತೆ ಮನವಿ ಮಾಡಿದರು. ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿಗಳು, ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳ ಜೊತೆಗೆ ಚರ್ಚಿಸಿ, ನ್ಯಾಯ ದೊರಕಿಸಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.
ಚನ್ನಗಿರಿ ತಾಲ್ಲೂಕಿನ ಸೋಮಲಾಪುರ ಗ್ರಾಮಕ್ಕೆ ಕೆಎಸ್ಆರ್ಟಿಸಿ ಬಸ್ ಸಂಚಾರ ಕಲ್ಪಿಸುವಂತೆ ಗ್ರಾಮದ ಮುಖಂಡರೊರ್ವರು ಮಾಡಿದ ಮನವಿಗೆ ಸ್ಪಂದಿಸಿದ ಜಿಲ್ಲಾಧಿಕಾರಿಗಳು, ಕೂಡಲೆ ಸೋಮಲಾಪುರ ಗ್ರಾಮಕ್ಕೆ ಕೆಎಸ್ಆರ್ಟಿಸಿ ಬಸ್ ವ್ಯವಸ್ಥೆ ಕಲ್ಪಿಸುವಂತೆ ಕೆಎಸ್ಆರ್ಟಿಸಿ ದಾವಣಗೆರೆ ವಿಭಾಗದ ಮುಖ್ಯಸ್ಥರಿಗೆ ಸೂಚಿಸಿದರು.
ಶಿರಮಗೊಂಡನಹಳ್ಳಿ ಗ್ರಾಮದ ರವೀಂದ್ರನಾಥ್ ಬಡಾವಣೆಯ ನಿವಾಸಿಯೋರ್ವರು ಮನವಿ ಮಾಡಿ ಬಡಾವಣೆಯಲ್ಲಿ ರಸ್ತೆಗಳು, ಪಾರ್ಕುಗಳು ಹಾಳಾಗಿದ್ದು ಅಭಿವೃದ್ಧಿ ಮಾಡುವಂತೆ ಮನವಿ ಮಾಡಿದರು. ಬಡಾವಣೆಯ ಸಮಸ್ಯೆಗಳನ್ನು ಸರ್ಕಾರ ಬಿಡುಗಡೆ ಮಾಡುವ ಅನುದಾನಕ್ಕೆ ಅನುಗುಣವಾಗಿ ಹಂತ ಹಂತವಾಗಿ ಅನುದಾನ ಒದಗಿಸಿ ಅಭಿವೃದ್ಧಿ ಮಾಡಲಾಗುವುದು ಎಂದು ಜಿಲ್ಲಾಧಿಕಾರಿಗಳು ಭರವಸೆ ನೀಡಿದರು.
ಹರಿಹರದ ವಿದ್ಯಾರ್ಥಿಯೊಬ್ಬರು ಲ್ಯಾಪ್ಟಾಪ್ ಒದಗಿಸುವಂತೆ ಮನವಿ ಮಾಡಿದರು. ಜಿಲ್ಲಾಧಿಕಾರಿಗಳು ತಕ್ಷಣ ಪ್ರತಿಕ್ರಿಯಿಸಿ, ಸರ್ಕಾರದ ಯೋಜನೆಯಡಿ ನಗರಸಭೆ ವತಿಯಿಂದ ನೀಡಲಾಗುವ ಸೌಲಭ್ಯದಡಿ ಲ್ಯಾಪ್ಟಾಪ್ ಒದಗಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಡಿಯುಡಿಸಿ ಯೋಜನಾಧಿಕಾರಿಗೆ ಸೂಚನೆ ನೀಡಿದರು.
ಹೂವಿನಮಡು ಗ್ರಾಮದಲ್ಲಿ ಚೌಡೇಶ್ವರಿ ದೇವಸ್ಥಾನದ ಕಟ್ಟಡ ತೆರವುಗೊಳಿಸಿ, ಜಾಗವನ್ನು ಒತ್ತುವರಿ ಮಾಡಿಕೊಂಡು ಅಡಿಕೆ ತೋಟ ನಿರ್ಮಾಣ ಮಾಡಿಕೊಳ್ಳಲಾಗಿದೆ, ಆದರೆ ಸ್ಥಳವು ದೇವಸ್ಥಾನಕ್ಕೆ ಸೇರಿದ್ದು ಒತ್ತುವರಿ ಜಾಗವನ್ನು ತೆರವುಗೊಳಿಸುವಂತೆ ಗ್ರಾಮಸ್ಥರು ಮನವಿ ಮಾಡಿಕೊಂಡರು. ತಹಸಿಲ್ದಾರ್ ಅವರು ಖುದ್ದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ಒತ್ತುವರಿಯಾಗಿದ್ದಲ್ಲಿ ಪೊಲೀಸ್ ನೆರವು ಪಡೆದು ತೆರವುಗೊಳಿಸುವಂತೆ ತಹಶೀಲ್ದಾರ್ ಅವರಿಗೆ ಸೂಚಿಸಿದರು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿದೇರ್ಶಕ ವಿಜಯ್ಕುಮಾರ ಅವರು ಜಿಲ್ಲಾಡಳಿತ ಭವನದಲ್ಲಿ ಶಿಶುಪಾಲನಾ ಕೇಂದ್ರ ತೆರೆಯಲು ಕೊಠಡಿ ಒದಗಿಸುವಂತೆ ಮನವಿ ಮಾಡಿದರು. ತಕ್ಷಣ ಸ್ಪಂದಿಸಿದ ಜಿಲ್ಲಾಧಿಕಾರಿಗಳು ಭವನದಲ್ಲಿ ಶಿಶುಪಾಲನಾ ಕೇಂದ್ರ ತೆರೆಯುವುದು ಒಳ್ಳೆಯ ಕಾರ್ಯವಾಗಿದೆ, ಶೀಘ್ರ ಕೊಠಡಿ ಒದಗಿಸಲಾಗುವುದು ಎಂದರು.
ಸಭೆಯಲ್ಲಿ ಮುಖ್ಯಮಂತ್ರಿಗಳ ಪರಿಹಾರ ನಿಧಿ, ಬಸ್ ವ್ಯವಸ್ಥೆ, ಪಹಣಿ, ಜಾತಿ ಪ್ರಮಾಣ ಪತ್ರ ಒದಗಿಸುವುದು ಸೇರಿದಂತೆ ಸಾರ್ವಜನಿಕರಿಂದ ಅನೇಕ ಅಹವಾಲುಗಳನ್ನು ಸ್ವೀಕರಿಸಲಾಯಿತು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚನ್ನಪ್ಪ, ಡಿಯುಡಿಸಿ ಯೋಜನಾಧಿಕಾರಿ ನಜ್ಮಾ, ಮಹಾನಗರ ಪಾಲಿಕೆ ಆಯುಕ್ತ ವಿಶ್ವನಾಥ್ ಪಿ ಮುದ್ದಜ್ಜಿ, ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ತಹಸಿಲ್ದಾರರು, ಸಾರ್ವಜನಿಕರು ಹಾಜರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ವಿಜ್ಞಾನ ವಿಭಾಗಕ್ಕೆ ಅಗ್ರಸ್ಥಾನ
ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲೆಯ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಜಿಲ್ಲೆಯು ಒಟ್ಟಾರೆ ಶೇಕಡ 81.99 ರಷ್ಟು ಸಾಧನೆ ಮಾಡಿದ್ದು, ರಾಜ್ಯದಲ್ಲಿ 25 ನೇ ಸ್ಥಾನ ಪಡೆದಿದೆ. ಈ ಬಾರಿಯೂ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಜಿಲ್ಲೆಯಲ್ಲಿ ಅತಿ ಹೆಚ್ಚು ಶೇಕಡ 90.91 ರಷ್ಟು ಫಲಿತಾಂಶ ಪಡೆದು ಮೇಲುಗೈ ಸಾಧಿಸಿದ್ದಾರೆ.
ಜಿಲ್ಲೆಯಲ್ಲಿ ಪರೀಕ್ಷೆಗೆ ಹಾಜರಾದ ಒಟ್ಟು 20,810 ವಿದ್ಯಾರ್ಥಿಗಳ ಪೈಕಿ 16,046 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು ಶೇಕಡ 77.11 ರಷ್ಟು ಹಾಗೂ ಹೊಸದಾಗಿ ಪರೀಕ್ಷೆ ಬರೆದ (Freshers) 18,949 ವಿದ್ಯಾರ್ಥಿಗಳಲ್ಲಿ 15,540 ಮಂದಿ ಉತ್ತೀರ್ಣರಾಗಿದ್ದಾರೆ ಶೇಕಡ 82.01 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ವಿಭಾಗವಾರು ಫಲಿತಾಂಶದ ವಿಶ್ಲೇಷಣೆ
ವಿಜ್ಞಾನ ವಿಭಾಗ (Science): ಜಿಲ್ಲೆಯಲ್ಲಿ ಅತಿ ಹೆಚ್ಚು ಸಾಧನೆ ಈ ವಿಭಾಗದಲ್ಲಿ ದಾಖಲಾಗಿದೆ. ಒಟ್ಟು 12,536 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 10,936 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ (ಶೇ. 87.24). ಹೊಸ ವಿದ್ಯಾರ್ಥಿಗಳ ಪೈಕಿ 11,770 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 10,736 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 90.91 ರಷ್ಟು ಅದ್ಭುತ ಫಲಿತಾಂಶ ಬಂದಿದೆ.
ವಾಣಿಜ್ಯ ವಿಭಾಗ (Commerce)
ಈ ವಿಭಾಗದಲ್ಲಿ ಹಾಜರಾದ 4,295 ವಿದ್ಯಾರ್ಥಿಗಳಲ್ಲಿ 3,075 ಮಂದಿ ಉತ್ತೀರ್ಣರಾಗಿದ್ದಾರೆ (ಶೇ. 71.59). ಹೊಸ ವಿದ್ಯಾರ್ಥಿಗಳ ಪೈಕಿ 3858 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 2960 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 76.72 ರಷ್ಟು ಫಲಿತಾಂಶ ಬಂದಿದೆ.
ಕಲಾ ವಿಭಾಗ (Arts): ಕಲಾ ವಿಭಾಗದಲ್ಲಿ ಒಟ್ಟು 3,979 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 2,035 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ (ಶೇ. 51.14). ಹೊಸ ವಿದ್ಯಾರ್ಥಿಗಳ ಪೈಕಿ 3321 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 1880 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 56.61 ರಷ್ಟು ಫಲಿತಾಂಶ ಬಂದಿದೆ.
ಜಿಲ್ಲೆಯ ಒಟ್ಟಾರೆ ಫಲಿತಾಂಶದಲ್ಲಿ ವಿಜ್ಞಾನ ವಿಭಾಗವು ಪ್ರಥಮ ಸ್ಥಾನದಲ್ಲಿದ್ದರೆ, ವಾಣಿಜ್ಯ ಮತ್ತು ಕಲಾ ವಿಭಾಗಗಳು ನಂತರದ ಸ್ಥಾನ ಪಡೆದಿವೆ ಎಂದು ಉಪ ನಿರ್ದೇಶಕ ಪಳಿನಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆ: ಶೇ. 68.55ರಷ್ಟು ಮತದಾನ
ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಇಂದು ನಡೆದ ಉಪ ಚುನಾವಣೆಯು ಅತ್ಯಂತ ಶಾಂತಿಯುತವಾಗಿ ಮುಕ್ತಾಯಗೊಂಡಿದ್ದು, ಒಟ್ಟಾರೆ ಶೇ. 68.55ರಷ್ಟು ಮತದಾನ ದಾಖಲಾಗಿದೆ.
ಬೆಳಿಗ್ಗೆಯಿಂದಲೇ ಮತಗಟ್ಟೆಗಳ ಮುಂದೆ ಮತದಾರರು ಉತ್ಸಾಹದಿಂದ ಸರದಿಯಲ್ಲಿ ನಿಂತು ತಮ್ಮ ಹಕ್ಕನ್ನು ಚಲಾಯಿಸಿದರು. ಚುನಾವಣಾ ಆಯೋಗದ ಕಟ್ಟುನಿಟ್ಟಿನ ಕ್ರಮಗಳು ಹಾಗೂ ಪೊಲೀಸ್ ಬಂದೋಬಸ್ತ್ನಿಂದಾಗಿ ಯಾವುದೇ ಅಹಿತಕರ ಘಟನೆಗಳಿಲ್ಲದೆ ಮತದಾನ ಪ್ರಕ್ರಿಯೆ ಯಶಸ್ವಿಯಾಗಿ ನಡೆಯಿತು.
ಯುವಕರು ಹಾಗೂ ಹಿರಿಯ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಮತದಾನ ಮಾಡಿದ್ದು ಕಂಡುಬಂದಿತು. ಚುನಾವಣಾ ಸಿಬ್ಬಂದಿ ಹಾಗೂ ಭದ್ರತಾ ಪಡೆಯ ಸಹಕಾರದೊಂದಿಗೆ ಮತದಾನ ಪ್ರಕ್ರಿಯೆಯು ಸುಗಮವಾಗಿ ಜರುಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಮಾನತೆಯ ಸಂಭ್ರಮ | ಹದಡಿಯಲ್ಲಿ ತೃತೀಯ ಲಿಂಗತ್ವ ಮದಾರರಿಂದ ಮತಚಲಾವಣೆ
ಸುದ್ದಿದಿನಡೆಸ್ಕ್:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಹದಡಿ ಗ್ರಾಮದ ಮತಗಟ್ಟೆಯಲ್ಲಿ ತೃತೀಯ ಲಿಂಗತ್ವ ಮತದಾರರು ಮತಗಟ್ಟೆಗೆ ಆಗಮಿಸಿ ಸಂತೋಷದಿಂದ ಮತ ಚಲಾಯಿಸಿದರು.
ಸಮಾಜದ ಪ್ರತಿಯೊಬ್ಬರಿಗೂ ಸಮಾನ ಹಕ್ಕು ಎಂಬ ಸಂದೇಶವನ್ನು ಸಾರಿದ ಕ್ಷಣ! ತಮ್ಮ ಅಮೂಲ್ಯ ಮತದಾನದ ಮೂಲಕ ಪ್ರಜಾಪ್ರಭುತ್ವವನ್ನು ಬಲಪಡಿಸಿದ ತೃತೀಯ ಲಿಂಗತ್ವ ಮತದಾರರಿಗೆ ಅಭಿನಂದನೆಗಳು ಎಂದು ಜಿಲ್ಲಾ ಪಂಚಾಯತ್ ಸಿಇಓ ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂಕಣ6 days agoಸಂಪಾದಕೀಯ | ಯುದ್ಧದ ನರಕ ; ಅಮೆರಿಕಾ-ಇಸ್ರೇಲ್ ಆಕ್ರಮಣ : ಇರಾನ್ ಮೇಲಿನ ಅಮಾನುಷ ಹಲ್ಲೆ
-
ದಿನದ ಸುದ್ದಿ7 days agoಕಾಂಗ್ರೆಸ್ ಸರಕಾರದ ದುರಾಡಳಿತ ; ಆರೋಪ ಪಟ್ಟಿ ಬಿಡುಗಡೆ
-
ಅಂತರಂಗ3 days agoಸಂಪಾದಕೀಯ | ದಾವಣಗೆರೆ ದಕ್ಷಿಣ ಉಪಚುನಾವಣೆ: ಪ್ರತಿಷ್ಠೆಯ ಹೋರಾಟದಲ್ಲಿ ಜನರ ಧ್ವನಿ ಪ್ರಬಲವಾಗಲಿ
-
ದಿನದ ಸುದ್ದಿ6 days agoಕಾಂಗ್ರೆಸ್ ನಿಂದ ಮಾತ್ರ ಜನಪರ ಯೋಜನೆ ನೀಡಲು ಸಾಧ್ಯ: ಡಾ. ಪ್ರಭಾ ಮಲ್ಲಿಕಾರ್ಜುನ
-
ದಿನದ ಸುದ್ದಿ1 day agoಸಮಾನತೆಯ ಸಂಭ್ರಮ | ಹದಡಿಯಲ್ಲಿ ತೃತೀಯ ಲಿಂಗತ್ವ ಮದಾರರಿಂದ ಮತಚಲಾವಣೆ
-
ದಿನದ ಸುದ್ದಿ3 days agoಸುಸೂತ್ರ ಮತದಾನಕ್ಕೆ ಜಿಲ್ಲಾಡಳಿತದ ಸಕಲ ಸಿದ್ಧತೆ
-
ದಿನದ ಸುದ್ದಿ2 days agoಅಗ್ನಿವೀರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ2 days agoಪರಿಶಿಷ್ಟ ಪಂಗಡದ ಮಕ್ಕಳಿಗೆ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರವೇಶ: ಅರ್ಜಿ ಆಹ್ವಾನ

