Connect with us

ದಿನದ ಸುದ್ದಿ

ಸಮೀಪಿಸುತ್ತಿದೆ ಎಸ್.ಎಸ್.ಎಲ್.ಸಿ ಪರೀಕ್ಷೆ ; ಹೆಚ್ಚಾಗುತ್ತಿದೆ ಅಂಕ ಗಳಿಕೆಯ ನಿರೀಕ್ಷೆ..?

Published

on

ಸಾಂದರ್ಭಿಕ ಚಿತ್ರ
  • ಕುಮಾರಸ್ವಾಮಿ.ವಿ.ಕೆ,ಮುಖ್ಯ ಶಿಕ್ಷಕರು,ಸಿದ್ಧಾರ್ಥ ಆಂಗ್ಲ ಪ್ರೌಢಶಾಲೆ,ತೋಟಗೆರೆ, ಬೆಂಗಳೂರು ಉತ್ತರ

ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಈಗ ದಿನಗಣನೆ ಆರಂಭವಾಗಿದೆ. ನಿರಂತರ ಅಭ್ಯಾಸದಲ್ಲಿರುವ ವಿದ್ಯಾರ್ಥಿಗಳು ಕೆಲವೇ ದಿನಗಳಲ್ಲಿ ಪರೀಕ್ಷೆ ಬರೆದು ನಿರಾಳಗೊಳ್ಳಲಿದ್ದಾರೆ. ವರ್ಷಪೂರ್ತಿ ಅಭ್ಯಾಸ ಮಾಡಿದ ಪಾಠಗಳನ್ನು ಕೇವಲ ಮೂರು ಗಂಟೆಗಳ ಪರೀಕ್ಷೆಯಲ್ಲಿ ಬರಯುವುದು ಅತ್ಯಂತ ಸವಾಲಿನ ಕೆಲಸವೂ ಹೌದು. ಹೀಗಾಗಿ ಪರೀಕ್ಷೆ ಬರೆಯುತ್ತಿರುವ ಮಕ್ಕಳಿಗೆ ಇಲ್ಲೊಂದಿಷ್ಟು ಸೂಚನೆಗಳು.

ಪುನರ್ಮನನವಷ್ಟೇ ಬಾಕಿ

ವಿದ್ಯಾರ್ಥಿಗಳು ಈಗಾಗಲೇ ನಿರಂತರ ಅಭ್ಯಾಸದಲ್ಲಿ ತೊಡಗಿದ್ದು, ಪರೀಕ್ಷೆ ಬರೆಯಲು ಸಂಪೂರ್ಣವಾಗಿ ತಯಾರಿ ಮಾಡಿಕೊಂಡಿದ್ದಾರೆ. ಈ ಹಂತದಲ್ಲಿ ಎಲ್ಲವನ್ನೂ ಓದಲು ಸವiಯಾವಕಾಶ ಇಲ್ಲದಿರುವುದರಿಂದ ಈಗಾಗಲೇ ಮಕ್ಕಳು ಕಲಿತಿರುವ ವಿಷಯಗಳನ್ನು ಪುನರರ್ಮನನ ಮಾಡಬೇಕಿದೆ. ತಾವು ತಯಾರಿಸಿಟ್ಟುಕೊಂಡಿರುವ ಮುಖ್ಯಾಂಶಗಳು, ಟಿಪ್ಪಣಿಗಳು ಇತ್ಯಾದಿ ಅಧ್ಯಯನ ಸಾಮಗ್ರಿಗಳನ್ನು ದಿನಕ್ಕೊಮ್ಮೆ ಮೆಲುಕು ಹಾಕುವುದರಿಂದ ಪರೀಕ್ಷೆಗೆ ಸಾಕಷ್ಟು ಅನುಕೂಲವಾಗುತ್ತದೆ.

ಒತ್ತಡ ಬೇಡ

ರಾಜ್ಯ ಮಟ್ಟದ ಪೂರ್ವ ಸಿದ್ಧತಾ ಪರೀಕ್ಷೆಯನ್ನೂ ಸೇರಿ ವಿದ್ಯಾರ್ಥಿಗಳು ಈಗಾಗಲೇ ಸಾಕಷ್ಟು ಪೂರ್ವ ಸಿದ್ಧತಾ ಪರೀಕ್ಷೆಗಳನ್ನು ಎದುರಿಸಿಯಾಗಿದೆ. ಸದರಿ ಪರೀಕ್ಷೆಗಳಲ್ಲಿ ಮಕ್ಕಳಿಗೆ ಮುಖ್ಯ ಪರೀಕ್ಷೆಗೆ ಸಂಬಂಧಿಸಿದ ಸಾಕಷ್ಟು ನಿರ್ದೇಶನಗಳು ದೊರೆತಿರುತ್ತವೆ. ಆದ್ದರಿಂದ ಮಕ್ಕಳು ಯಾವುದೇ ಹಂತದಲ್ಲಿ ತಮ್ಮ ಮೇಲೆ ಒತ್ತಡ ಹಾಕಿಕೊಳ್ಳದೆ ನಿರಾತಂಕವಾಗಿದ್ದಾಗ ಮಾತ್ರ ಹೆಚ್ಚು ಅಂಕ ಗಳಿಸಲು ಸಾಧ್ಯ. ಅಲ್ಲದೇ ಹಿಂದಿನ ಪರೀಕ್ಷೆಗಳಲ್ಲಿ ಮಾಡಿದ ತಪ್ಪುಗಳನ್ನು ಸರಿಪಡಿಸಿಕೊಳ್ಳಲು ಇದು ಸಕಾಲವಾಗಿದೆ.

ಎರಡು ವರ್ಷಗಳ ಅಂತರ

ಹಾಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆಯಲು ತಯಾರಿರುವ ವಿದ್ಯಾರ್ಥಿಗಳು ಶಾಲೆಗಳಲ್ಲಿ ನೇರ ಪರೀಕ್ಷೆ ಬರೆದು ಎರಡು ವರ್ಷಗಳಾಗಿವೆ. ಏಳನೇ ತರಗತಿಯ ಪರೀಕ್ಷೆ ಮುಗಿಸಿದ ನಂತರ ಕೊರೋನಾ ಕಾರಣದಿಂದ ಬಹುತೇಕ ಪರೀಕ್ಷೆಗಳು ಆನ್‌ಲೈನ್‌ನಲ್ಲೇ ನಡೆದಿವೆ. ಹೀಗಾಗಿ ಮಕ್ಕಳಿಗೆ ಸಹಜವಾಗಿಯೇ ಶೈಕ್ಷಣಿಕ ಅಂತರ ಕಾಡುತ್ತಿರುತ್ತದೆ. ಅದೂ ಅಲ್ಲದೇ ಬರವಣಿಗೆ ಶೈಲಿಯೂ ಬದಲಾಗಿರುತ್ತದೆ. ಹೀಗಾಗಿ ಮಕ್ಕಳು ಉಳಿದಿರುವ ಕಾಲಾವಧಿಯಲ್ಲಿ ಹೆಚ್ಚು ಬರವಣಿಗೆಗೆ ಮಹತ್ವ ಕೊಡಬೇಕಿದೆ.

ಪಠ್ಯ ಪುಸ್ತಕವೆಂಬ ಸ್ನೇಹಿತ

ಮಕ್ಕಳಲ್ಲಿ ಹತ್ತಾರು ರೀತಿಯ ಅಧ್ಯಯನ ಸಾಮಗ್ರಿಗಳು ಈಗಾಗಲೇ ಇರಬಹುದು ನಿಜ. ಆದರೆ ಎಲ್ಲಕ್ಕಿಂತ ಮಿಗಿಲಾಗಿ ಯಾವ ವಿದ್ಯಾರ್ಥಿಗಳು ಪಠ್ಯ ಪುಸ್ತಕದ ಓದಿಗೆ ಪ್ರಾಮುಖ್ಯತೆ ನೀಡುತ್ತಾರೋ, ಸಹಜವಾಗಿಯೇ ಅವರ ಅಂಕಗಳಿಕೆ ಹೆಚ್ಚಾಗುತ್ತದೆ. ಪರೀಕ್ಷೆಗೆ ಬರುವ ಯಾವುದೇ ಪ್ರಶ್ನೆಗಳು ಪಠ್ಯ ಪುಸ್ತಕವನ್ನು ಆಧರಿಸಿರುತ್ತವೆ. ಆದ್ದರಿಂದ ಮಕ್ಕಳು ಹೆಚ್ಚಾಗಿ ಪಠ್ಯ ಪುಸ್ತಕವನ್ನು ಒಳ್ಳೆಯ ಸ್ನೇಹಿತನಂತೆ ಬಳಸಿಕೊಳ್ಳಬೇಕಿದೆ.

ಇರುವ ಭಾಗ್ಯವ ನೆನೆದು ಬಾರನೆಂಬುದನು ಬಿಡು! :

ಬಹುತೇಕ ವಿದ್ಯಾರ್ಥಿಗಳು ಮಾಡುತ್ತಿರುವ ದೊಡ್ಡ ತಪ್ಪೇನೆಂದರೆ ಪ್ರಶ್ನೆ ಪತ್ರಿಕೆಯನ್ನು ಓದಿದಾಗ ತಮಗೆ ಗೊತ್ತಿಲ್ಲದಿರುವ ಯಾವುದೋ ಒಂದೆರಡು ಪ್ರಶ್ನೆಗಳ ಬಗ್ಗೆ ಗಾಬರಿಯಾಗಿ ಅದನ್ನೇ ಚಿಂತಿಸುತ್ತಾ ಕುಳಿತು, ಗೊತ್ತಿರುವ ಪ್ರಶ್ನೆಗಳ ಉತ್ತರವನ್ನೂ ಮರೆಯುತ್ತಿದ್ದಾರೆ. ಇದರಿಂದ ಅವರ ಅಂಕ ಗಳಿಕೆಯ ಮೇಲೆ ಋಣಾತ್ಮಕ ಪ್ರಭಾವ ಬೀರುವುದು ಖಚಿತ. ಆದ್ದರಿಂದ ಮೊದಲು ಗೊತ್ತಿರುವ ಪ್ರಶ್ನೆಗಳಿಗೆ ಉತ್ತರ ಬರೆಯುವುದನ್ನು ರೂಢಿಸಿಕೊಳ್ಳಬೇಕಿದೆ.

ಹಳೆಯ ಪ್ರಶ್ನೆ ಪತ್ರಿಕೆಗಳ ವಿಮರ್ಶೆ

ವಿದ್ಯಾರ್ಥಿಗಳಿಗೆ ಅತೀ ಹೆಚ್ಚು ಸಹಾಯ ಮಾಡುವುದೇ ಹಿಂದಿನ ವರ್ಷದ ಪ್ರಶ್ನೆ ಪತ್ರಿಕೆಗಳು. ಅದರಲ್ಲೂ ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳಿಗೆ ಇದು ವರದಾನವೇ ಆಗಿದೆ. ಪ್ರೌಢ ಶಿಕ್ಷಣ ಮಂಡಳಿಯಲ್ಲಿರುವ ಲಭ್ಯವಿರುವ ಹಿಂದಿನ ಮೂರು ನಾಲ್ಕು ವರ್ಷಗಳ ಪ್ರಶ್ನೆ ಪತ್ರಿಕೆಗಳನ್ನು ಮಕ್ಕಳು ಅಭ್ಯಸಿಸಿದಾಗ ಅವರಿಗೆ ಪರೀಕ್ಷೆ ಬರೆಯಲು ಇನ್ನೂ ವಿಶ್ವಾಸ ಹೆಚ್ಚಾಗುತ್ತದೆ. ಅಲ್ಲದೇ ಗೊತ್ತಿಲ್ಲದಿರುವ ಸುಮರು ಪ್ರಶ್ನೆಗಳಿಗೆ ಉತ್ತರವೂ ಸಿಗುತ್ತದೆ.

ಶಿಕ್ಷಕರೊಂದಿಗೆ ಸಂಪರ್ಕ

ವಿದ್ಯಾರ್ಥಿಗಳು ಯಾವುದೇ ವಿಷಯವನ್ನು ಅಭ್ಯಸಿಸುವ ಮುನ್ನ ಸಂಬAಧಿಸಿದ ವಿಷಯ ಶಿಕ್ಷಕರೊಂದಿಗೆ ನಿರಂತರ ಸಂಪರ್ಕದಲ್ಲಿರಬೇಕು. ಸ್ವಯಂ ಅಭ್ಯಾಸ ಮಾಡಿದಾಗ ಎಲ್ಲವೂ ಗೊಂದಲಮಯವಾಗಿ ಪರೀಕ್ಷೆಗೆ ತೊಡಕಾಗುವುದು ಖಚಿತ. ಆದ್ದರಿಂದ ತಮಗೆ ಏನೇ ಸಂದೇಹಗಳು ಬಂದಲ್ಲಿ ಕೂಡಲೇ ಅದನ್ನು ಶಿಕ್ಷಕರಿಂದ ಬಗೆಹರಿಸಿಕೊಂಡು ಮುಂದೆ ಸಾಗಬೇಕು.

ಬಿಡುವಿಲ್ಲದ ಓದು ಬೇಡ

ಹೆಚ್ಚು ಅಂಕಗಳಿಕೆ ನಿರೀಕ್ಷೆಯಲ್ಲಿರುವ ಮಕ್ಕಳು ಎರಡು – ಮೂರು ಗಂಟೆಗಳ ನಿರಂತರ ಅಭ್ಯಾಸದಲ್ಲಿ ತೊಡಗುವುದರಿಂದ ಅವರ ಸ್ಮರಣ ಶಕ್ತಿ ಕಡಿಮೆಯಾಗುವುದು ಖಚಿತ. ಆದ್ದರಿಂದ ಮಕ್ಕಳು ಕನಿಷ್ಠ ಅರ್ಧ ಗಂಟೆ ಓದಿ ನಂತರ ಹತ್ತರಿಂದ ಹದಿನೈದು ನಿಮಿಷಗಳ ಬ್ರೇಕೆ ಪಡೆದಾಗ ಓದಿದ ವಿಚಾರಗಳು ಮನಸ್ಸಿನಲ್ಲೇ ಉಳಿಯುತ್ತವೆ. ಓದುವಾಗ ಯಾವುದೇ ವಿಧಧ ಗದ್ದಲವಿರದ ಸ್ಥಳದ ಆಯ್ಕೆ ಅತಿ ಅಗತ್ಯ.

ಪರೀಕ್ಷೆಗೆ ಅಗತ್ಯವಾದ ಪ್ರಮುಖ ಸೂಚನೆಗಳು

  1. ಬರವಣಿಗೆ ಸ್ಫುಟವಾಗಿರಲಿ ಸಮಯದ ಹೊಂದಾಣಿಕೆ ಅತ್ಯಗತ್ಯ
  2. ಪ್ರಶ್ನೆ ಪತ್ರಿಕೆಯನ್ನು ಚೆನ್ನಾಗಿ ಓದಿ ನೋಂದಣಿ ಸಂಖ್ಯೆಯನ್ನು ತಪ್ಪಿಲ್ಲದೆ ಬರೆಯಿರಿ
  3. ಪ್ರಶ್ನೆಗಳ ಸಂಖ್ಯೆಯನ್ನು ಸರಿಯಾಗಿ ಬರೆಯಿರಿ ಮರೆಯದೆ ಪ್ರವೇಶ ಪತ್ರವನ್ನು ಒಯ್ಯಿರಿ
  4. ಗೊತ್ತಿರುವ ಪ್ರಶ್ನೆಗಳಿಗೆ ಮೊದಲು ಉತ್ತರಿಸಿ ಪರೀಕ್ಷೆಗೆ ಬೇಕಾದ ಉಪಕರಣಗಳನ್ನು ಮರೆಯದೆ ತೆಗೆದುಕೊಂಡು ಹೋಗಿ
  5. ಪರೀಕ್ಷೆಗೆ ಮುನ್ನ ಅನಗತ್ಯ ಚರ್ಚೆ ಬೇಡ ಪರೀಕ್ಷೆಗೆ ಒಂದು ಗಂಟೆಗಿಂತ ಮುಂಚೆ ಓದುವುದನ್ನು ನಿಲ್ಲಿಸಿ
  6. ಸರಿಯಾದ ಸಮಯಕ್ಕೆ ಪರೀಕ್ಷಾ ಕೇಂದ್ರವನ್ನು ತಲುಪಿರಿ
  7. ವದಂತಿಗಳಿಗೆ ಕಿವಿ ಕೊಡಬೇಡಿ
  8. ಸಡಿಲವಾದ ಉಡುಪುಗಳನ್ನು ಧರಿಸಿ ಪರೀಕ್ಷೆಯನ್ನು ಒಂದು ಹಬ್ಬದಂತೆ ಸ್ವೀಕರಿಸಿ
  9. ಪರೀಕ್ಷೆ ಮುಗಿಯವರೆಗೂ ಮೊಬೈಲ್, ಟಿವಿ ವೀಕ್ಷಣೆಯಿಂದ ದೂರವಿರಿ ನಿಯಮಿತ ನಿದ್ದೆ, ಧ್ಯಾನ, ವ್ಯಾಯಾಮಗಳಂತಹ ಕ್ರಿಯೆ ನಿಮ್ಮ ಸ್ಮರಣಯನ್ನು ಹೆಚ್ಚು ಮಾಡುತ್ತದೆ.
  10. ಎಲ್ಲಾ ವಿಷಯದ ಪರೀಕ್ಷೆ ಮುಗಿಯುವವರೆಗೂ ಮಾದರಿ ಉತ್ತರಗಳ ಬಗ್ಗೆ ಚಿಂತಿಸದಿರಿ ಕೇವಲ ಅಂಕಗಳಿಗಾಗಿ ಅಲ್ಲ, ಉತ್ತಮ ಭವಿಷ್ಯಕ್ಕಾಗಿ ಪರೀಕ್ಷೆ ಬರೆಯಿರಿ.
  11. ಮುಖ್ಯಾಂಶಗಳಿಗೆ ಅಡಿಗೆರೆ ಹಾಕಿರಿ ಅಪರಿಚಿತರಿಗೆ ನಿಮ್ಮ ನೋಂದಣಿ ಸಂಖ್ಯೆಯನ್ನು ನೀಡದಿರಿ.
  12. ಕೊರೊನಾ ನಿಯಮಗಳನ್ನು ತಪ್ಪದೇ ಪಾಲಿಸಿ ಉತ್ತರ ಪತ್ರಿಕೆಯನ್ನು ಹಿಂತಿರುಗಿಸುವ ಮುನ್ನ ಗಮನವಿಟ್ಟು ಪರಿಶಿಲೀಸಿ.
  13. ಎಲ್ಲಾ ಪ್ರಶ್ನೆಗಳಿಗೂ ತಪ್ಪದೇ ಉತ್ತರಿಸಿ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷಕರ ನಿರ್ದೇಶನದಂತೆ ಸಹಿ ಮಾಡಲು ಮರೆಯದಿರಿ
    ಓದುವ ಕೋಣೆ ಗಾಳಿ, ಬೆಳಕಿನಿಂದ ಕೂಡಿರಲಿ ಆತ್ಮ ವಿಶ್ವಾಸದಿಂದ ಪರೀಕ್ಷೆಯನ್ನು ಎದುರಿಸಿ

(ಕುಮಾರಸ್ವಾಮಿ.ವಿ.ಕೆ
ಮುಖ್ಯ ಶಿಕ್ಷಕರು,
ಸಿದ್ಧಾರ್ಥ ಆಂಗ್ಲ ಪ್ರೌಢಶಾಲೆ,
ತೋಟಗೆರೆ, ಬೆಂಗಳೂರು ಉತ್ತರ
ಮೊ : ೯೧೧೩೯೦೬೧೨೦)

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಜುಲೈ 1 ಕನ್ನಡ ಪತ್ರಿಕ್ಯೋದ್ಯಮದ ಐತಿಹಾಸಿಕ ದಿನ

Published

on

ಪ್ರತಿ ವರ್ಷ ಕರ್ನಾಟಕದಲ್ಲಿ ಜುಲೈ 1 ರಂದು ‘ಪತ್ರಿಕಾ ದಿನ’ವನ್ನು ಆಚರಿಸಲಾಗುತ್ತದೆ. ಕನ್ನಡದ ಮೊದಲ ಪತ್ರಿಕೆ ಮಂಗಳೂರು ಸಮಾಚಾರ ಪ್ರಕಟಗೊಂಡ ದಿನವಾಗಿದ್ದು ಪತ್ರಿಕೋದ್ಯಮದ ಪರಿಚಯ, ಅದರ ಹಿನ್ನೆಲೆ, ಕಾಲಕ್ಕೆ ತಕ್ಕಂತೆ ಅದು ಬದಲಾದ ವೈಖರಿ ಬಗ್ಗೆ ಜನಸಾಮಾನ್ಯರಿಗೆ ತಿಳಿಸಬೇಕು ಎನ್ನುವ ಉದ್ದೇಶದಿಂದ ಈ ದಿನ ಕರ್ನಾಟದಲ್ಲಿ ಪತ್ರಿಕಾ ದಿನಾಚರಣೆ ಆಚರಿಸಲಾಗುತ್ತದೆ.

ಕನ್ನಡದ ಪ್ರಪ್ರಥಮ ಪತ್ರಿಕೆ ಮಂಗಳೂರು ಸಮಾಚಾರ 1843 ರ ಜುಲೈ 1 ರಂದು ಮಂಗಳೂರಿನಲ್ಲಿ ಬಾಸೆಲ್ ಮಿಷನ್‍ನವರ ಮುದ್ರಣಾಲಯದಿಂದ ಪ್ರಕಟವಾಯಿತು. ರೆವರೆಂಡ್ ಹರ್ಮನ್ ಮೋಗ್ಲಿಂಗ್ ಅವರು ಸಂಪಾದಕರಾಗಿದ್ದರು. ಜರ್ಮನ್‍ನ ಮತ ಪ್ರಚಾರಕರಾದ ಮೋಗ್ಲಿಂಗ್ ಅವರನ್ನು ಕನ್ನಡ ಪತ್ರಿಕೋದ್ಯಮದ ಮೂಲಪುರುಷ, ಕನ್ನಡ ಪತ್ರಿಕೋದ್ಯಮದ ಪಿತಾಮಹ ಎಂದು ಅವರನ್ನು ಕರೆಯಲಾಗುತ್ತದೆ.

ಮಂಗಳೂರು ಸಮಾಚಾರ ಪತ್ರಿಕೆ 8 ತಿಂಗಳ ಕಾಲ ಪಾಕ್ಷಿಕವಾಗಿ ಪ್ರಕಟವಾಯಿತು. ವರ್ತಮಾನಗಳು, ಸರಕಾರಿ ನಿರೂಪಗಳು ಕಾನೂನು, ಸುಬುದ್ಧಿಯನ್ನು ಹೇಳುವ ಸಾಮತಿಗಳು, ಹಾಡುಗಳು, ಕತೆಗಳು, ಅಂತರಾಜ್ಯ ವರ್ತಮಾನಗಳು, ವಾಚಕರ ವಾಣಿಗಳು ಅಂಕಣಗಳಾಗಿದ್ದವೆಂದು ಮಂಗಳೂರು ದರ್ಶನ ದಾಖಲಿಸಿದೆ. ಬಳಿಕ ಈ ಪತ್ರಿಕೆಯ ಹೆಸರನ್ನು ಕನ್ನಡ ಸಮಾಚಾರ ಎಂದು ಬದಲಿಸಿ ಬಳ್ಳಾರಿಯಿಂದ ಪ್ರಕಟಿಸಲು ಆರಂಭಿಸಿದರು.

ಮಂಗಳೂರ ಸಮಾಚಾರ ಪತ್ರಿಕೆ: ಮೋಗ್ಲಿಂಗ್ ಅವರು ಯುರೋಪಿಯನ್ ಪತ್ರಿಕೆಯ ಕುರಿತು ಅಪಾರ ಜ್ಞಾನ ಹೊಂದಿದ್ದರಿಂದ ಕನ್ನಡದ ಮೊದಲ ಪತ್ರಿಕೆಯು ವೃತ್ತಿಪರ ಸ್ಪರ್ಶವನ್ನು ಪಡೆಯಿತು. ಅವರು ಹಲವಾರು ಯುರೋಪಿಯನ್ ಭಾμÉಗಳ ಮೇಲೆ ಪಾಂಡಿತ್ಯವನ್ನು ಹೊಂದಿದ್ದರು. 1840 ರಲ್ಲಿ ಮಂಗಳೂರಿಗೆ ಬಂದಿಳಿದ ಕೂಡಲೇ ತುಳು, ಕೊಂಕಣಿ, ಕನ್ನಡ ಕಲಿತರು. ಅವರು ಮಿಷನರಿಯಾಗಿದ್ದರೂ, ಸ್ಥಳೀಯ ಸಾಹಿತ್ಯ ಮತ್ತು ಶಿಕ್ಷಣದಲ್ಲಿ ತೀವ್ರ ಆಸಕ್ತಿಯನ್ನು ತೋರಿಸಿದರು.

ಮಂಗಳೂರ ಸಮಾಚಾರ ಓದುಗರ ಮೇಲೆ ಪ್ರಭಾವ ಬೀರಿತು. ಹೆಚ್ಚಿನ ಸುದ್ದಿಗಳನ್ನು ವಿದೇಶಿ ಮತ್ತು ಭಾರತೀಯ ಪತ್ರಿಕೆಗಳಿಂದ ಸಂಗ್ರಹಿಸಲಾಗುತ್ತಿತ್ತು. ಇದು ಕಲ್ಲಚ್ಚಿನಲ್ಲಿ ಹದಿನೈದು ದಿನಗಳಿಗೊಮ್ಮೆ ಮಂಗಳೂರಿನಿಂದ ಪ್ರಕಟವಾಗುತ್ತಿತ್ತು. ನಾಲ್ಕು ಪುಟಗಳನ್ನೊಳಗೊಂಡ ಪತ್ರಿಕೆಯ ಬೆಲೆ ಒಂದು ಪೈಸೆ ನಿಗದಿ ಮಾಡಲಾಗಿತ್ತು. ಸಂಪಾದಕರಾಗಿ, ಮೋಗ್ಲಿಂಗ್ ಅವರೇ ಸುದ್ದಿಗಳನ್ನು ಆಯ್ಕೆ ಮಾಡುತ್ತಿದ್ದರು. ಇದರಲ್ಲಿ ಸ್ಥಳೀಯ ಸುದ್ದಿಗಳು, ಸರ್ಕಾರಿ ಅಧಿಸೂಚನೆಗಳು, ಕಾನೂನು ವಿಷಯಗಳು, ಹಾಡುಗಳು, ಕಥೆಗಳು ಮತ್ತು ಇತರ ರಾಜ್ಯಗಳ ಸುದ್ದಿಗಳು ಪ್ರಕಟವಾಗುತ್ತಿತ್ತು. ಭಾರತದ ವಿವಿಧ ಭಾಗಗಳನ್ನು ವಶಪಡಿಸಿಕೊಳ್ಳಲು ಬ್ರಿಟಿಷರು ಮಾಡುತ್ತಿದ್ದ ಪ್ರಯತ್ನಗಳ ಕುರಿತು ಅವರು ವ್ಯಾಪಕವಾಗಿ ಪ್ರಕಟಿಸಿದರು. ಜೊತೆಗೆ ಅಪರಾಧಗಳನ್ನು ಮಾಡಿದರೆ ಅದಕ್ಕೆ ತಕ್ಕ ಶಿಕ್ಷೆಯಾಗುತ್ತದೆ ಎಂಬ ತಿಳಿವಳಿಕೆ ಜನರಲ್ಲಿ ಉಂಟಾಗಬೇಕೆಂಬ ಉದ್ದೇಶದಿಂದ ಕೋರ್ಟಿನ ಪ್ರಕರಣಗಳಿಗೆ ಸಂಬಂಧಿಸಿದ ಸಮಾಚಾರಗಳನ್ನು ಹೆಚ್ಚಾಗಿ ಪ್ರಕಟಿಸಲಾಗುತ್ತಿತ್ತು.
:ಮೋಗ್ಲಿಂಗ್ ಅವರು ಒಬ್ಬ ಮಿಷನರಿಯಾಗಿದ್ದರೂ, ಕೂಡ ಶಿಕ್ಷಣ, ಸಾಹಿತ್ಯಿಕ ಚಟುವಟಿಕೆಗಳು ಮತ್ತು ಪತ್ರಿಕೆ ಪ್ರಕಟಣೆಗಳಿಗೆ ಹೆಚ್ಚಿನ ಸಮಯವನ್ನು ಮೀಸಲಿಟ್ಟರು. ಕನ್ನಡ ಸಾಹಿತ್ಯ ಮತ್ತು ಪತ್ರಿಕೋದ್ಯಮಕ್ಕಾಗಿ ಅವರು ಮಾಡಿದ ಶ್ಲಾಘನೀಯ ಕೆಲಸಕ್ಕಾಗಿ, ಟ್ಯೂಬಿಂಗೆನ್‍ನ ಎಬರ್‍ಹಾರ್ಡ್ ಕಾಲ್ರ್ಸ್ ವಿಶ್ವವಿದ್ಯಾನಿಲಯವು 1858 ರಲ್ಲಿ ಮೋಗ್ಲಿಂಗ್‍ಗೆ ಗೌರವ ಡಾಕ್ಟರೇಟ್ ಅನ್ನು ನೀಡಿದ್ದು ಕನ್ನಡಕ್ಕಾಗಿ ಮಾಡಿದ ಕಾರ್ಯಕ್ಕಾಗಿ ಅಂತಹ ಗೌರವವನ್ನು ಪಡೆದ ಮೊದಲ ವ್ಯಕ್ತಿಯಾಗಿದ್ದಾರೆ.

ಆಗಿನ ಬರಹದ ವ್ಯಾಕರಣ – ಪದ ಬಳಕೆಯ ಶೈಲಿಯಲ್ಲಿ ಈ ಪತ್ರಿಕೆ ಪಾಕ್ಷಿಕವಾಗಿ ಸುಮಾರು 8 ತಿಂಗಳ ಕಾಲ ಸತತವಾಗಿ ಪ್ರಕಟವಾಯಿತು. ಮಂಗಳೂರು ಸಮಾಚಾರ ಪತ್ರಿಕೆಯೊಂದಿಗೆ ಆರಂಭವಾದ ಕನ್ನಡ ಪತ್ರಿಕಾರಂಗ ಇಂದು ಅಧುನಿಕ ತಂತ್ರಜ್ಞಾನದೊಂದಿಗೆ ಬೆಳೆದಿದ್ದು ಈಗ ಅನೇಕ ಪತ್ರಿಕೆಗಳು, ಸ್ಯಾಟಲೈಟ್ ಚಾನೆಲ್‍ಗಳು, ದೇಶದಲ್ಲೇ ಗರಿಷ್ಠ ಎಂಬಂತೆ ಬಹುಭಾಷಾ ಪ್ರಾದೇಶಿಕ ಚಾನೆಲ್‍ಗಳು, ಆನ್‍ಲೈನ್ ಆವೃತ್ತಿಗಳು, ವೆಬ್‍ಸೈಟ್‍ಗಳು, ಸಂಜೆ ಪತ್ರಿಕೆಗಳು, ವೆಬ್ ಪತ್ರಿಕೆಗಳು, ಫೇಸ್‍ಬುಕ್- ವಾಟ್ಸ್ಪ್‍ಪ್ ಮಾಹಿತಿ- ಇಂಟರ್‍ನೆಟ್ ವಿನಿಮಯ ಗ್ರೂಪ್‍ಗಳು, ನೇರ ಪ್ರಸಾರ ನೀಡುವ ಸುದ್ದಿವಾಹಿನಿಗಳು… ಹೀಗೆ ಮಾಧ್ಯಮದ ಕ್ಷಣಕ್ಷಣದ ಸುದ್ದಿಗಳನ್ನು ನೀಡುವ ಮೂಲಕ ಜನಮಾನಸದಲ್ಲಿ ಒಂದಾಗಿದೆ. ಪತ್ರಿಕ್ಯೋದಮದಲ್ಲಿ ಉದ್ಯೋಗ ಅವಕಾಶವೂ ಸೃಷ್ಠಿಯಾಗಿ ಅನೇಕ ಪತ್ರಕರ್ತರು ರಾಜ್ಯ- ದೇಶ – ಅಂತಾರಾಷ್ಟ್ರೀಯ ಮಟ್ಟದಲ್ಲಿ ತಮ್ಮ ಛಾಪನ್ನು ಮೂಡಿಸಿದ್ದಾರೆ.

ಕನ್ನಡದ ಪತ್ರಿಕ್ಯೋದ್ಯಮದ ವಿಷಯದಲ್ಲಿ ಇಂದು ಎಲ್ಲಾ ವಿಶ್ವವಿದ್ಯಾಲಯಗಳಲ್ಲೂ ವೃತ್ತಪರ ಕೋರ್ಸ್ ರೂಪದಲ್ಲಿ ಪತ್ರಿಕ್ಯೊದ್ಯಮ ಪದವಿ, ಸ್ನಾತಕೋತ್ತರ ಪದವಿ, ಪಿಹೆಚ್‍ಡಿ ಸೇರಿದಂತೆ ಪಿಜಿ ಡಿಪ್ಲೋಮಾ ಕೋಸ್ರ್ಗಳನ್ನು ಸಹ ಆರಂಭಿಸಲಾಗಿದ್ದು ಪ್ರತಿವರ್ಷ ಸಾವಿರಾರು ವಿದ್ಯಾರ್ಥಿಗಳು ವಿದ್ಯಾಬ್ಯಾಸ ಮಾಡಿ ಪತ್ರಿಕೋದ್ಯಮದಲ್ಲಿ ಉದ್ಯೋಗವನ್ನು ಕಂಡುಕೊಳ್ಳುತ್ತಿದ್ದು, ಪತ್ರಿಕಾರಂಗ ಪ್ರಜಾಪ್ರಭುತ್ವದ ನಾಲ್ಕನೆ ಅಂಗವಾಗಿ ಅತ್ಯಂತ ಪರಿಣಾಮಕಾರಿಯಾಗಿ ಕಾರ್ಯವನ್ನು ನಿರ್ವಹಿಸುತ್ತಿದೆ. (ಬರಹ-ರಘು ಆರ್.
ಅಪ್ರೆಂಟಿಸ್, ವಾರ್ತಾ ಇಲಾಖೆ ಶಿವಮೊಗ್ಗ.)

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಜನನ ಮರಣ ನೋಂದಣಿ ಪ್ರಕ್ರಿಯೆ ಅನುಷ್ಟಾನ ; ಇಂದಿನಿಂದ ಜಾರಿ

Published

on

ಸುದ್ದಿದಿನಡೆಸ್ಕ್:ಇಂದಿನಿಂದ ಜಾರಿಗೆ ಬರುವಂತೆ ಗ್ರಾಮ ಪಂಚಾಯತಿಗಳಲ್ಲಿ ಜನನ ಮರಣ ನೋಂದಣಿ ಪ್ರಕ್ರಿಯೆ ಅನುಷ್ಟಾನಗೊಳಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಮಾಹಿತಿ ತಂತ್ರಜ್ಞಾನ ಖಾತೆ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಎಂಬಿಬಿಎಸ್ ಸೀಟು

ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ 2025-26ನೇ ಶೈಕ್ಷಣಿಕ ವರ್ಷದಿಂದ ಅನಿವಾಸಿ ಭಾರತೀಯ ಕೋಟಾ ಆರಂಭಿಸಲು ಸೂಪರ್ ನ್ಯೂಮರರಿ ಎಂಬಿಬಿಎಸ್ ಸೀಟುಗಳನ್ನು ಮಂಜೂರು ಮಾಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಪತ್ರ ಬರೆದಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

ದಿನದ ಸುದ್ದಿ

ಗ್ಯಾಸ್ ಸಿಲಿಂಡರ್‌ಗಳ ಬೆಲೆ ಇಳಿಕೆ

Published

on

ಸುದ್ದಿದಿನಡೆಸ್ಕ್:ತೈಲ ಮಾರುಕಟ್ಟೆ ಕಂಪನಿಗಳು ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಬೆಲೆಯನ್ನು 30 ರೂಪಾಯಿ ಕಡಿತಗೊಳಿಸಿವೆ. 19 ಕಿಲೋಗ್ರಾಂ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ಬೆಲೆ ಬದಲಾವಣೆ ಇಂದಿನಿಂದ ಜಾರಿಗೆ ಬರಲಿದೆ.

ಎನ್ ಟಿ ಎ

ರಾಷ್ಟ್ರೀಯ ಪರೀಕ್ಷಾ ಸಂಸ್ಥೆ – ಎನ್‌ಟಿಎ ಇಂದು 1ಸಾವಿರದ 563ಅಭ್ಯರ್ಥಿಗಳ ಪರಿಷ್ಕೃತ ಫಲಿತಾಂಶವನ್ನು ಮತ್ತು ಮರು-ಪರೀಕ್ಷೆಯ ನಂತರ ನೀಟ್ ಪರೀಕ್ಷೆಯ ಎಲ್ಲಾ ಅಭ್ಯರ್ಥಿಗಳ ಶ್ರೇಣಿಯನ್ನು ಪ್ರಕಟಿಸಿದೆ. ಎಲ್ಲಾ ಅಭ್ಯರ್ಥಿಗಳ ಪರಿಷ್ಕೃತ ಸ್ಕೋರ್ ಕಾರ್ಡ್‌ಗಳು ತಮ್ಮ ವೆಬ್‌ಸೈಟ್‌ನಲ್ಲಿ ಲಭ್ಯವಿದೆ ಎಂದು ಎನ್‌ಟಿಎ ಪ್ರಕಟಣೆಯಲ್ಲಿ ತಿಳಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending