ದಿನದ ಸುದ್ದಿ
ಕುರಿ ಶೆಡ್ನಿಂದ ಬದುಕು ಕಟ್ಟಿಕೊಂಡ ಯುವಕ ಪ್ರದೀಪ್
ಕೊರೊನಾ ಲಾಕ್ಡೌನ್ ವೇಳೆ ಬೆಂಗಳೂರಿನಲ್ಲಿದ್ದ ಕೆಲಸ ಕಳೆದುಕೊಂಡು ಊರಿಗೆ ವಾಪಸ್ಸಾದ ಪ್ರದೀಪ್ ಕುರಿಗಳನ್ನು ಕೊಂಡು ಕುರಿ ಸಾಕಾಣಿಕೆಯನ್ನೇ ತಮ್ಮ ಉದ್ಯೋಗವಾಗಿಸಿಕೊಂಡರು. ನಂತರ ಮಹಾತ್ಮಾಗಾಂಧಿ ನರೇಗಾ ಯೋಜನೆಯಡಿ ಕುರಿ ಶೆಡ್ ನಿರ್ಮಿಸಿಕೊಂಡು ಉತ್ತಮ ಆದಾಯ ಗಳಿಸುತ್ತಾ ಸ್ವಗ್ರಾಮದಲ್ಲೇ ನೆಲೆ ಕಂಡುಕೊಂಡಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಭಾರಂಗಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಬೆಣ್ಣಿಗೆರೆಯ ಪ್ರದೀಪ್ ಬೆಂಗಳೂರಿನಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಕೋವಿಡ್ ವೇಳೆ ಕೆಲಸವಿಲ್ಲದೇ ಊರಿಗೆ ಬಂದಾಗ ಅವರು ಆರಂಭಿಸಿದ ಉದ್ಯೋಗ ಕುರಿ ಸಾಕಾಣಿಕೆ. ತಮ್ಮ ಉಳಿತಾಯದ ಹಣದಲ್ಲಿ ಮೊದಲಿಗೆ 10 ಕುರಿಗಳನ್ನು ಸಾಕಿದ ಅವರು ಏಳರಿಂದ ಎಂಟು ತಿಂಗಳಲ್ಲಿ ಈ ಕುರಿಗಳನ್ನು ಮಾರಿ ಉತ್ತಮ ಆದಾಯ ಗಳಿಸಿ, ಮತ್ತಷ್ಟು ಹೆಚ್ಚಿನ ಸಂಖ್ಯೆಯಲ್ಲಿ ಕುರಿಗಳನ್ನು ಖರೀದಿಸಿದ್ದಾರೆ.
ಪ್ರಸ್ತುತ 40 ಕುರಿಗಳನ್ನು ಹೊಂದಿದ್ದು, ಕುರಿ ಗೊಬ್ಬರದಿಂದ ಸಹ ಉತ್ತಮ ಆದಾಯ ಬರುತ್ತಿದೆ. ಇದಕ್ಕೆಲ್ಲಾ ಸಹಕಾರಿಯಾಗಿದ್ದು ಮಹಾತ್ಮಾಗಾಂಧಿ ನರೇಗಾ ಯೋಜನೆಯಡಿ ನಿರ್ಮಿಸಿಕೊಂಡ ಕುರಿ ಶೆಡ್. ಸುಸಜ್ಜಿತ ಕುರಿ ಶೆಡ್ನಿಂದಾಗಿ ಕುರಿ ಸಾಕಾಣಿಕೆ ಉದ್ಯೋಗ ವ್ಯವಸ್ಥಿತವಾಗಿದ್ದು, ಸಾಕಾಣಿಕೆ ಕೂಡ ಸುಲಭವಾಗಿದೆ. ಇವರ ಕುರಿ ಶೆಡ್ ಇತರರಿಗೆ ಮಾದರಿಯಾಗಿದ್ದು ಸುತ್ತಮುತ್ತಲಿನ ರೈತರು ಕುರಿ ಶೆಡ್ಗೆ ಭೇಟಿ ನೀಡಿ ಕುರಿ ಸಾಕಾಣಿಕೆ ಬಗ್ಗೆ ಪ್ರದೀಪ್ರಿಂದ ಮಾಹಿತಿ ಪಡೆಯುತ್ತಿದ್ದಾರೆ.
ಬೆಂಗಳೂರಿನಿಂದ ವಾಪಸ್ಸಾದ ಪ್ರದೀಪ್, ನರೇಗಾ ಯೋಜನೆಯ ಸೌಲಭ್ಯಗಳ ಕುರಿತು ಗ್ರಾಮದಲ್ಲಿ ಅಂಟಿಸಲಾದ ಪ್ರಚಾರದ ಪೊಸ್ಟರ್ಗಳನ್ನು ಓದಿಕೊಂಡು, ಗ್ರಾ.ಪಂ ಗೆ ಭೇಟಿ ನೀಡಿ, ಪಿಡಿಓ ಅವರಿಂದ ಕುರಿ ಶೆಡ್ ಕುರಿತು ಹೆಚ್ಚಿನ ಮಾಹಿತಿ ಪಡೆದು ಯೋಜನೆಯ ಸದುಪಯೋಪ ಪಡೆದಿದ್ದಾರೆ.
ಮಹಾತ್ಮಾಗಾಂಧಿ ನರೇಗಾ ಯೋಜನೆಯ ಮಾರ್ಗಸೂಚಿಗಳನ್ವಯ ಕಾಮಗಾರಿಯನ್ನು ಗ್ರಾಮಸಭೆಯಲ್ಲಿ ಅನುಮೋದನೆ ಪಡೆದು ಕ್ರಿಯಾ ಯೋಜನೆ ಸಿದ್ದಪಡಿಸಿ, ಜಿಲ್ಲಾ ಕಾರ್ಯಕ್ರಮ ಸಮನ್ವಯಾಧಿಕಾರಿಗಳಿಂದ ಅನುಮೋದನೆ ಪಡೆದು ಯೋಜನೆ ಅನುಷ್ಟಾನ ಮಾಡಲಾಗಿದೆ.
10 ಮಾನವ ದಿನಗಳಲ್ಲಿ ಅಂದಾಜು ವೆಚ್ಚ ರೂ. 68 ಸಾವಿರದಲ್ಲಿ ಈ ಶೆಡ್ನ್ನು ನಿರ್ಮಿಸಲಾಗಿದ್ದು, ಈ ಸೌಲಭ್ಯದಿಂದಾಗಿ ಸುಸಜ್ಜಿತ ಕುರಿ ಶೆಡ್ ನಿರ್ಮಾಣದೊಂದಿಗೆ ಕುರಿ ಸಾಕಾಣಿಕೆಯಲ್ಲಿ ಹೆಚ್ಚಳ ಮತ್ತು ಆದಾಯದಲ್ಲಿ ಉತ್ತಮ ಪ್ರಗತಿ ಸಾಧಿಸಲು ಸಾಧ್ಯವಾಗಿದೆ.
| ಎಂ.ಎಲ್.ವೈಶಾಲಿ, ಜಿ.ಪಂ, ಸಿಇಓ
ಪ್ರದೀಪ್ರ ನುಡಿ
ತಾನು ಬೆಂಗಳೂರಿನಲ್ಲಿ ಕೆಲಸ ಕಳೆದುಕೊಂಡ ನಂತರ ಉಳಿತಾಯದ ಅಲ್ಪಸ್ವಲ್ಪ ಹಣದಲ್ಲಿ ಮೊದಲಿಗೆ 10 ಕುರಿಗಳನ್ನು ಖರೀದಿಸಿ, ಸಾಕಾಣಿಕೆ ಆರಂಭಿಸಿದೆ. ನಂತರ ನರೇಗಾ ಯೋಜನೆ ನೆರವಿನೊಂದಿಗೆ ಒಂದು ಸುಸಜ್ಜಿತ ಕುರಿ ಶೆಡ್ ನಿರ್ಮಿಸಿಕೊಂಡು, ನಂತರ ಆ 10 ಕುರಿಗಳನ್ನು ಏಳರಿಂದ ಎಂಟು ತಿಂಗಳಲ್ಲಿ ಒಂದು ಲಕ್ಷಕ್ಕೂ ಅಧಿಕ ಹಣಕ್ಕೆ ಮಾರಾಟ ಮಾಡಿ, ಮತ್ತೆ 40 ಕುರಿಗಳನ್ನು ಖರೀದಿಸಿ ಸಾಕಾಣಿಕೆ ಮಾಡುತ್ತಿದ್ದೇನೆ. ಗೊಬ್ಬರದಿಂದಲೂ ಉತ್ತಮ ಆದಾಯ ಇದ್ದು, ಈ ಉದ್ಯೋಗ ನನಗೆ ನೆಮ್ಮದಿ ನೀಡಿದೆ.
| ಪ್ರದೀಪ್, ರೈತ, ಬೆಣ್ಣಿಗೆರೆ
(ಜಿ.ಪಂ ಸಿಇಓ ಮತ್ತು ಪ್ರದೀಪ್ ಫೋಟೊ ಇದೆ)
ವರದಿ : ಭಾಗ್ಯ ಎಂ.ಟಿ, ವಾರ್ತಾ ಸಹಾಯಕರು
ವಾರ್ತಾ ಇಲಾಖೆ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ವಂಚನೆ | ಪ್ರಭಾರ ಕಾರ್ಯಪಾಲಕ ಅಭಿಯಂತರ ಸೋಮ್ಲನಾಯ್ಕ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ: 2023-24 ಮತ್ತು 2024-25ನೇ ಸಾಲಿನಲ್ಲಿ ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕುಗಳಲ್ಲಿ ಬರುವ ಸಮಸ್ಯಾತ್ಮಕ ಗ್ರಾಮಗಳಲ್ಲಿ 4215 ತುರ್ತು ಕುಡಿಯುವ ನೀರಿನ ಕಾಮಗಾರಿಯಲ್ಲಿ ನಡೆದಿರುವ ಅವ್ಯವಹಾರ ಮತ್ತು ನಕಲಿ ಕಾಮಗಾರಿಗಳನ್ನು ತನಿಖೆಗೆ ಒಳಪಡಿಸುವಂತೆ ದೂರು ನೀಡಿ 6 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ತೋರಿದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇಲ್ಲಿನ ಪ್ರಭಾರ ಕಾರ್ಯಪಾಲಕ ಅಭಿಯಂತರರಾದ ಟಿ. ಸೋಮ್ಲನಾಯ್ಕ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ದಾವಣಗೆರೆ ಜಿಲ್ಲಾ ವ್ಯಾಪ್ತಿಯಲ್ಲಿ 2023-24 ಮತ್ತು 2024-25ನೇ ಸಾಲಿನ ತುರ್ತು ಕುಡಿಯುವ ನೀರಿನ ಯೋಜನೆಗೆ ಸಂಬAಧಿಸಿದ ಕಾಮಗಾರಿಗಳಿಗೆ ಸಂಬAಧಿಸಿದAತೆ ಹೊನ್ನಾಳಿ ಉಪವಿಭಾಗದ ಅಡಿಯಲ್ಲಿ ನಡೆದಿರುವ ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕುಗಳಲ್ಲಿ ನಾಲ್ಕು ಹಂತದ ತುರ್ತು ಕುಡಿಯುವ ನೀರಿನ ಯೋಜನೆಯ ಕಾಮಗಾರಿಗಳ ಸಂಪೂರ್ಣ ಕಡತವನ್ನು ಪಡೆದು ಪರಿಶೀಲನೆ ಮಾಡಿದಾಗ, ಇಲ್ಲಿ ಸಾಕಷ್ಟು ಅವ್ಯವಹಾರ ಹಾಗೂ ಲೋಪಗಳು ಕಂಡುಬAದಿರುತ್ತವೆ. ಅಂತಹ ಪ್ರಮುಖ ಲೋಪಗಳನ್ನು ಉಲ್ಲೇಖಿಸಿ ಸೂಕ್ತ ತನಿಖೆಗೆ ಒಳಪಡಿಸುವಂತೆ ದಿನಾಂಕ: 01-12-2025 ರಂದು ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇವರಿಗೆ ದೂರು ನೀಡಲಾಗಿತ್ತು.
ಈ ದೂರು ಅರ್ಜಿಗೆ ಸಂಬಂಧಿಸಿದಂತೆ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇವರು 2 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದ ಕಾರಣ ದಿನಾಂಕ: 27-01-2026 ರಂದು ಜ್ಞಾಪನವನ್ನು ನೀಡಲಾಗಿರುತ್ತದೆ. ಆದರೆ ಜ್ಞಾಪನ ನೀಡಿ 6 ತಿಂಗಳು ಕಳೆಯುತ್ತ ಬಂದರೂ ಈ ದೂರು ಅರ್ಜಿಗೆ ಸಂಬAಧಿಸಿದAತೆ ಕಾರ್ಯಪಾಲಕ ಅಭಿಯಂತರರು (ಪ್ರಭಾರ), ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇವರು ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ತೋರಿರುತ್ತಾರೆ.
ಈ ದೂರು ಅರ್ಜಿಯನ್ನು ತನಿಖೆಗೆ ಒಳಪಡಿಸುವಲ್ಲಿ ತೋರಿದ ನಿರ್ಲಕ್ಷö್ಯಕ್ಕೆ ಪ್ರಮುಖ ಕಾರಣವೆಂದರೆ, ಹೊನ್ನಾಳಿ ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರೇ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇಲ್ಲಿನ ಪ್ರಭಾರ ಕಾರ್ಯಪಾಲಕ ಅಭಿಯಂತರರಾಗಿ ಕಾರ್ಯನಿರ್ವಹಿಸಿರುತ್ತಾರೆ. ಈ ಕಾರಣಕ್ಕಾಗಿ ತನ್ನ ಮೇಲಿನ ಆರೋಪವನ್ನು ತನಿಖೆಗೆ ಒಳಪಡಿಸುವಲ್ಲಿ ನಿರ್ಲಕ್ಷö್ಯ ತೋರಿ, ಈ ದೂರು ಅರ್ಜಿಯನ್ನು ಮೂಲೆ ಗುಂಪಾಗಿಸಿರುತ್ತಾರೆ. ಆದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಭಾರ ಕಾರ್ಯಪಾಲಕ ಅಭಿಯಂತರರಾದ ಸೋಮ್ಲನಾಯ್ಕ ವಿರುದ್ಧ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಇಂಗ್ಲಿಷ್ ಕಲಿಯಲು ಬಂದ ಜಪಾನ್ ಯುವಕ ಜೈಲು ಸೇರಿದ ; 75000 ಪರಿಹಾರ ಪಡೆದ
ಸುದ್ದಿದಿನಡೆಸ್ಕ್:ಜಪಾನ್ನ ಹಿರೋತೋಷಿ ತನಕಾ ಇಂಗ್ಲಿಷ್ ಕಲಿಯಲು ಬೆಂಗಳೂರಿಗೆ ಬಂದಿದ್ದರು. ಆದರೆ ಇಂಗ್ಲಿಷ್ ಅಕಾಡೆಮಿಯಲ್ಲಿ ಸರಿಯಾಗಿ ಇಂಗ್ಲೀಷ್ ಕಲಿಸುತ್ತಿಲ್ಲವೆಂದು ಅಕಾಡೆಮಿ ಮುಖ್ಯಸ್ಥರೊಂದಿಗೆ ಜಗಳ ನಡೆದ ಬಳಿಕ ತನಕಾ ವಿರುದ್ಧ ಪೊಲೀಸ್ ಪ್ರಕರಣ ದಾಖಲಾಗಿತು. ಅವರನ್ನು ಬಂಧಿಸಿ 19 ದಿನ ಜೈಲಿನಲ್ಲಿ ಇರಿಸಲಾಯಿತು.
ತಮ್ಮ ಬಂಧನ ಸರಿಯಲ್ಲ ಎಂದು ತನಕಾ ಮಾನವ ಹಕ್ಕುಗಳ ಆಯೋಗದ ಮೊರೆ ಹೋದರು. ವೀಸಾ ಅವಧಿ ಮುಗಿಯುತ್ತಿದ್ದಂತೆ, ಪ್ರಕರಣ ಮುಗಿಯುವವರೆಗೂ ಭಾರತದಲ್ಲೇ ಇರಲು ವಿಚಿತ್ರ ಪ್ರಯತ್ನವೂ ಮಾಡಿದರು. ಪೊಲೀಸ್ ಠಾಣೆಯಿಂದ ಪ್ಲಾಸ್ಟಿಕ್ ಕುರ್ಚಿಯೊಂದನ್ನು ತೆಗೆದುಕೊಂಡು ಹೋಗಿ, ಮತ್ತೆ ಬಂಧನಕ್ಕೊಳಗಾಗಲು ಪ್ರಯತ್ನಿಸಿದರು!
ಅದು ಆಗದೇ ಇದ್ದಾಗ ಜಪಾನ್ ಗೆ ಮರಳಿ . ಅಲ್ಲಿಂದಲೇ ತಮ್ಮ ಹೋರಾಟ ಮುಂದುವರಿಸಿದ ತನಕಾ ಅವರ ಹೋರಾಟಕ್ಕೆ ಜಯ ಸಿಕ್ಕಿದೆ ಸಿಕ್ಕಿದೆ. ಕರ್ನಾಟಕದಿಂದ 75,000 ಪರಿಹಾರವನ್ನು ಪಡೆದುಕೊಂಡಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಡಾಲಿಯ ಕನಸು ಒಂದೇ ಹೀರೋ ಆಗೋದು
ಮೈಸೂರಿನ ರಂಗಾಯಣದಲ್ಲಿ ನಾಟಕ ತಂಡಗಳಲ್ಲಿ ಗುರುತಿಸಿಕೊಂಡ ದಿನಗಳಿಂದಲೇ ಡಾಲಿ ಧನಂಜಯ್ ಅವರದ್ದು ಒಂದೇ ಕನಸು—ಸಿನಿಮಾ ಹೀರೋ ಆಗಬೇಕು!
ಕಾಲೇಜು ಯುವಕರಾಗಿದ್ದಾಗಲೂ ಮೌನ ಸ್ವಭಾವದ, ವಿಧೇಯ, ಪರಿಶ್ರಮಿ ಮತ್ತು ಗುರಿಯ ಮೇಲೆ ಸಂಪೂರ್ಣ ಗಮನ ಹೊಂದಿದ್ದವರು. ಯಾವುದೇ ಡೈವರ್ಷನ್ ಇಲ್ಲ, ಸಿನಿಮಾ ಕನಸಿನ ಕಡೆ ಮಾತ್ರ ಗಮನ!
ಇಂದು ಬಹುಭಾಷಾ ನಟನಾಗಿ ದೊಡ್ಡ ಎತ್ತರಕ್ಕೇರಿದ್ದರೂ, ತಮ್ಮ ಬೇರುಗಳನ್ನು ಅವರು ಮರೆತಿಲ್ಲ. ಇಂದಿಗೂ ತಮ್ಮ ಹಳೆಯ ಸ್ನೇಹಿತರ ಜೊತೆಗೂಡಿ ಸಿನಿಮಾ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದಾರೆ. ನಿರ್ಮಾಪಕರಾಗಿಯೂ ಗುರುತಿಸಿಕೊಂಡಿರುವ ಅವರು, ಅನೇಕ ಹೊಸ ಪ್ರತಿಭೆಗಳಿಗೆ ಅವಕಾಶ ನೀಡಿದ್ದಾರೆ.
ಅಂದಿನ ಅದೇ ಸರಳತೆ, ಅದೇ ನಡವಳಿಕೆ ಇಂದಿಗೂ ಇದೆ!
ಒಬ್ಬ ಕಾಲೇಜು ಯುವಕನಿಂದ ಬಹುಭಾಷಾ ತಾರೆಯವರೆಗೆ—ಎಂತಹ ಸ್ಪೂರ್ತಿದಾಯಕ ಪಯಣ! ಹ್ಯಾಪಿ ಬರ್ತ್ಡೇ ಡಾಲಿ
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days agoವಿಶ್ವ ವೆಂಕಟೇಶ್ವರ ಸಂಸ್ಥೆಯ ಹೆಸರು ಹಾಳು ಮಾಡುವ ಹುನ್ನಾರ: ವಿಠಲ ರುಕ್ಮಿಣಿ ಮಠದ ವಿರುದ್ಧ ಗಂಭೀರ ಆರೋಪ
-
ಅಂತರಂಗ3 days agoಡಾ. ಆತ್ಮಾರಾಮನ ಆತ್ಮನಿವೇದನೆ | ಮೆಟ್ಟಿಲಿನವನು
-
ದಿನದ ಸುದ್ದಿ23 hours agoಭರವಸೆ ಕೊಟ್ಟು ಯುವಜನರನ್ನು ಮನೆಗೆ ಕಳುಹಿಸಿದ ಸರ್ಕಾರಕ್ಕೆ ಈಗ ಪ್ರತಿಭಟನೆಯ ಬಿಸಿ: ಸೆ.5ಕ್ಕೆ ದೆಹಲಿಯಲ್ಲಿ CJP ಬೃಹತ್ ಮೆರವಣಿಗೆ!
-
ದಿನದ ಸುದ್ದಿ24 hours agoKPSC ಪರೀಕ್ಷಾ ಹಗರಣ: 329 ಅಭ್ಯರ್ಥಿಗಳಿಗೆ CID ನೋಟಿಸ್, IAS ಅಧಿಕಾರಿ ವಿರುದ್ಧ ED ಆರೋಪ
-
ದಿನದ ಸುದ್ದಿ1 day agoಭದ್ರಾ ಡ್ಯಾಂ ನೀರು ಹರಿಸುವಂತೆ ಆಗ್ರಹಿಸಿ ಕರೆ ನೀಡಿದ್ದ ದಾವಣಗೆರೆ ಬಂದ್ ನೀರಸ
-
ದಿನದ ಸುದ್ದಿ1 day agoತುಂಗಭದ್ರಾದಲ್ಲಿ ನೀರಿನ ಹರಿವು ಕುಸಿತ: ಹರಿಹರದ 24×7 ‘ಜಲಸಿರಿ’ಗೆ ಬ್ರೇಕ್, ನೀರು ಪೂರೈಕೆ ಸಮಯ ಕಡಿತ
-
ದಿನದ ಸುದ್ದಿ23 hours agoಉದ್ದಿಮೆದಾರರಿಗೆ ನೆರವು ಯೋಜನೆ; ಅರ್ಜಿ ಆಹ್ವಾನ
-
ದಿನದ ಸುದ್ದಿ1 day agoಸರ್ವರ್ ಡೌನ್, ಅಧಿಕಾರಿಗಳ ವಿಳಂಬ: ‘ಎ-ಖಾತೆ’ಗಾಗಿ ಕಾದು ಕುಳಿತ 60 ಸಾವಿರಕ್ಕೂ ಹೆಚ್ಚು ಅರ್ಜಿದಾರರು!

