Connect with us

ದಿನದ ಸುದ್ದಿ

ದಾವಣಗೆರೆ ವಿವಿ 09ನೇ ವಾರ್ಷಿಕ ಘಟಿಕೋತ್ಸವ | ದೇಶದ ಏಕತೆ, ಅಖಂಡತೆಗಾಗಿ ಧರ್ಮ, ಸಂಸ್ಕೃತಿಗಳು ಸದೃಢವಾಗಬೇಕು : ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

Published

on

ಸುದ್ದಿದಿನ,ದಾವಣಗೆರೆ : ವಿಶ್ವಶಾಂತಿಗಾಗಿ ಇಡೀ ಜಗತ್ತೇ ಭಾರತ ದೇಶದಿಂದ ಹೆಚ್ಚಿನದನ್ನು ಅಪೇಕ್ಷಿಸುತ್ತಿದ್ದು, ದೇಶದ ಏಕತೆ, ಅಖಂಡತೆಗಾಗಿ ನಮ್ಮಲ್ಲಿನ ಧರ್ಮ, ಸಂಸ್ಕøತಿಗಳು ಸದೃಢವಾಗಬೇಕು, ಈ ದಿಸೆಯಲ್ಲಿ ಯುವ ಪೀಳಿಗೆ ಮಹತ್ವದ ಪಾತ್ರ ವಹಿಸಬೇಕು ಎಂದು ರಾಜ್ಯದ ಘನತೆವೆತ್ತ ರಾಜ್ಯಪಾಲರು ಹಾಗೂ ದಾವಣಗೆರೆ ವಿವಿ ಕುಲಾಧಿಪತಿಗಳಾದ ಥಾವರ್ ಚಂದ್ ಗೆಹ್ಲೋಟ್ ಅವರು ಹೇಳಿದರು.

ದಾವಣಗೆರೆ ವಿಶ್ವವಿದ್ಯಾನಿಲಯದ ಶಿವಗಂಗೋತ್ರಿ ಆವರಣದಲ್ಲಿ ಗುರುವಾರ ಏರ್ಪಡಿಸಲಾದ 09 ನೇ ವಾರ್ಷಿಕ ಘಟಿಕೋತ್ಸವ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ವಸುದೈವ ಕುಟುಂಬಕಂ’, ‘ಸರ್ವೇ ಜನ ಸುಖಿನೋಭವಂತು’ ಎನ್ನುವಂತಹ ಆಲೋಚನೆಗಳೇ ನಮ್ಮ ದೇಶದ ಸಂಸ್ಕøತಿಯಾಗಿದೆ. ವಿಶ್ವ ಶಾಂತಿಗಾಗಿ ಇಡೀ ಜಗತ್ತು ಭಾರತದಿಂದ ಹೆಚ್ಚಿನದನ್ನು ಅಪೇಕ್ಷಿತ್ತಿದೆ. ಜಗತ್ತಿನ ಅಪೇಕ್ಷೆ ಪೂರೈಸಲು ನಾವೆಲ್ಲರು ಸಹಭಾಗಿಗಳಾಗಲು ಪ್ರಯತ್ನ ಮಾಡಬೇಕು. ಭಾರತ ವಿಶ್ವಗುರು ಆಗುವ ನಿಟ್ಟಿನಲ್ಲಿ ಪ್ರಯತ್ನಗಳಾಗಬೇಕಿದೆ.

ಪ್ರಸ್ತುತ ದೇಶದ ಜನಸಂಖ್ಯೆಯಲ್ಲಿ ಯುವಜನತೆ ಹೆಚ್ಚಿದ್ದಾರೆ, ಹೀಗಾಗಿ ಇಪ್ಪತ್ತೊಂದನೇ ಶತಮಾನ ಭಾರತ ದೇಶದ್ದು ಎಂದು ಹೇಳಲಾಗುತ್ತದೆ. ಯುವಶಕ್ತಿಯಿಂದ ಭಾರತ ದೇಶಕ್ಕೆ ಹೆಚ್ಚಿನ ನಿರೀಕ್ಷೆಯಿದೆ. ಅನೇಕ ಸವಾಲುಗಳು ನಮ್ಮ ಮುಂದಿವೆ. ಸಮಸ್ಯೆ, ಸವಾಲುಗಳ ನಿವಾರಣೆಗೆ ಯುವ ಜನತೆ ದೇಶದೊಂದಿಗೆ ಕೈಜೋಡಿಸಬೇಕು. ಅತಿ ದೊಡ್ಡ ಪ್ರಜಾಪ್ರಭುತ್ವ ದೇಶ ನಮ್ಮದು, ನಮ್ಮ ಸಂವಿಧಾನ ದೇಶದ 130 ಕೋಟಿ ಜನರಿಗೂ ಮೂಲಭೂತ ಹಕ್ಕುಗಳನ್ನು ನೀಡಿದೆ.

ಆದರೆ ಕೇವಲ ಕುಟುಂಬ, ಸಮುದಾಯ, ಊರು ಬಗ್ಗೆ ಯೋಚನೆ ಮಾಡುವುದು ಸರಿಯಲ್ಲ. ಮೂಲಭೂತ ಹಕ್ಕುಗಳ ಜೊತೆಗೆ ಮೂಲಭೂತ ಕರ್ತವ್ಯಗಳ ಬಗ್ಗೆಯೂ ಕಾಳಜಿ ಬೇಕು. ದೇಶ, ಸಮಾಜದ ಬಗ್ಗೆಯೂ ಕರ್ತವ್ಯ ಪರಿಪಾಲನೆ ಆಗಬೇಕು. ಹೆಚ್ಚಿನ ಜನಸಂಖ್ಯೆಯಿಂದ ಪರಿಸರ ಹಾಳಾಗುತ್ತಿದೆ. ಭವಿಷ್ಯದಲ್ಲಿ ಇದು ದೊಡ್ಡ ಸವಾಲನ್ನು ಸೃಷ್ಟಿ ಮಾಡಲಿದೆ. ಜಲಸಂರಕ್ಷಣೆ, ಪರಿಸರ ರಕ್ಷಣೆ, ದೇಶದ ಜನಹಿತಕ್ಕಾಗಿ ಸರ್ಕಾರ ಜಾರಿಗೊಳಿಸುವ ಯೋಜನೆಗಳ ಸಮರ್ಪಕ ಅನುಷ್ಠಾನದಲ್ಲಿಯೂ ಜನರ ಸಹಭಾಗಿತ್ವ ಅತ್ಯಗತ್ಯವಾಗಿದೆ ಎಂದರು.

ಘಟಿಕೋತ್ಸವವು ವಿದ್ಯಾರ್ಥಿಗಳು, ಪೋಷಕರು, ಗುರುಗಳ ಪಾಲಿಗೆ ಅತ್ಯಂತ ಮಹತ್ವದ್ದು ಹಾಗೂ ಭಾವನಾತ್ಮಕವಾದ ಸಮಾರಂಭವಾಗಿದೆ. ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ಪಡೆದವರಿಂದ ಭವಿಷ್ಯದಲ್ಲಿ ದೇಶಕ್ಕೆ ಹಾಗೂ ಸಮಾಜಕ್ಕೆ ಇನ್ನಷ್ಟು ಸೇವೆ ದೊರೆಯಲಿ ಎಂದರು.

ಬಂಗಾರದ ಪದಕಗಳು, ಪದವಿ ಪಡೆದವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಅಲ್ಲದೆ ಪ್ರಸ್ತುತ ಅಧ್ಯಯನ ನಿರತ ವಿದ್ಯಾರ್ಥಿಗಳೂ ಕೂಡ, ಬಂಗಾರದ ಪದಕ ಪಡೆದಂತಹ ವಿದ್ಯಾರ್ಥಿಗಳಿಂದ ಪ್ರೇರಣೆ ಪಡೆಯಬೇಕು. ವಿದ್ಯಾರ್ಥಿಗಳು ಪರಿಶ್ರಮ ವಹಿಸಿ ಏಕಾಗ್ರತೆಯಿಂದ ಅಧ್ಯಯನ ಮಾಡಿದಲ್ಲಿ ಭವಿಷ್ಯ ಉಜ್ವಲಗೊಳ್ಳಲಿದೆ ಎಂದು ರಾಜ್ಯಪಾಲರು ಆಶಯ ವ್ಯಕ್ತಪಡಿಸಿದರು.

ಘಟಿಕೋತ್ಸವ ಭಾಷಣ ಮಾಡಿದ ಓರಿಸ್ಸಾ ಕೇಂದ್ರೀಯ ವಿಶ್ವವಿದ್ಯಾನಿಲಯದ ಮಾಜಿ ಕುಲಾಧಿಪತಿ ಡಾ. ಪಿ.ವಿ. ಕೃಷ್ಣಭಟ್ ಅವರು, ಭಾರತದಲ್ಲಿ ವಿಶ್ವವಿದ್ಯಾನಿಲಯ ಶಿಕ್ಷಣಕ್ಕೆ ಸಾವಿರಾರು ವರ್ಷಗಳ ದೀರ್ಘ ಇತಿಹಾಸವಿದೆ. ನಲಂದಾ, ತಕ್ಷಶಿಲಾ, ವಿಕ್ರಮಶಿಲಾ ಮುಂತಾದ ವಿವಿಗಳು ವಿಶ್ವಾದ್ಯಂತ ವಿದ್ಯಾರ್ಥಿಗಳು, ವಿದ್ವಾಂಸರನ್ನು ಆಕರ್ಷಿಸಿದ್ದವು.

ಬಖ್ತಿಯಾಲ್ ಖಿಲ್ಜಿ ನಲಂದಾ ವಿವಿ ಮೆಲೆ ದಾಳಿ ಮಾಡಿ ಅಲ್ಲಿನ ಪುಸ್ತಕ ಭಂಡಾರಕ್ಕೆ ಬೆಂಕಿ ಹಚ್ಚಿದಾಗ, ಆ ಬೆಂಕಿ 6 ತಿಂಗಳ ಕಾಲ ಉರಿಯುತ್ತಿತ್ತೆಂದು ವರ್ಣಿಸಲಾಗಿದೆ. ಹೀಗೆ ನಮ್ಮಲ್ಲಿದ್ದ ಅಪಾರ ಜ್ಞಾನಭಂಡಾ ಮತ್ತು ವಿವಿ ಗಳು ಪರಕೀಯ ಆಕ್ರಮಣದಿಂದ ಉಧ್ವಸ್ಥಗೊಂಡವು. ಸ್ವಾತಂತ್ರ್ಯಾನಂತರ ದೇಶದಲ್ಲಿ ರಾಷ್ಟ್ರೀಯ ಸ್ಫೂರ್ತಿ, ಚಿಂತನೆಯನ್ನು ಉತ್ತೇಜಿಸುವ, ರಾಷ್ಟ್ರೀಯ ಉದ್ದೇಶಗಳಿಗೆ ಪೂರಕವಾದ ಶಿಕ್ಷಣ ವ್ಯವಸ್ಥೆ ರೂಪಿಸುವಲ್ಲಿ ಯಶಸ್ಸು ಕಂಡಿಲ್ಲ.

ದೆಹಲಿಯ ಜೆ.ಎನ್.ಯು ವಿವಿಯಂತಹ ಪ್ರತಿಷ್ಠಿತ ವಿವಿಗಳ ವಿದ್ಯಾರ್ಥಿಗಳು ‘ಭಾರತ್ ತೇರೆ ಟುಕಡೇ ಹೋಂಗೆ’ ಎಂಬ ಘೋಷಣೆ ಹಾಕುವ ಮಟ್ಟಕ್ಕೆ ತಲುಪಿರುವುದು ನಮ್ಮ ಶಿಕ್ಷಣ ವ್ಯವಸ್ಥೆಯ ಘೋರ ದುರಂತವಾಗಿದೆ. ಇಂದಿನ ಶಿಕ್ಷಣ ವ್ಯವಸ್ಥೆಯಲ್ಲಿ ವಿಜ್ಞಾನ, ತಂತ್ರಜ್ಞಾನಕ್ಕೆ ವಿಶೇಷ ಪ್ರಾಮುಖ್ಯತೆ ಕೊಡಲಾಗಿದೆ ಎಂದು ಹೇಳಲಾಗುತ್ತಿದೆ.

ನಮ್ಮ ದೇಶದ ಪ್ರತಿಭಾವಂತರು, ವಿಜ್ಞಾನಿಗಳು, ತಂತ್ರಜ್ಞರು, ಸಂಶೋಧಕರು ತಾವು ವಿಶ್ವದಲ್ಲಿ ಯಾರಿಗೂ ಕಡಿಮೆ ಇಲ್ಲ, ಮುಂದುವರಿದ ದೇಶಗಳನ್ನು ಮಿರಿಸುವ ಸಾಧನೆ ಮಾಡಬಲ್ಲ ಸಾಮಥ್ರ್ಯ ಹೊಂದಿದವರು ಎನ್ನುವುದನ್ನು ಮನವರಿಕೆ ಮಾಡಿಕೊಟ್ಟಿದ್ದಾರೆ. ಜಗತ್ತಿನ ಹಲವು ರಾಷ್ಟ್ರಗಳು ವಿಜ್ಞಾನ, ತಂತ್ರಜ್ಞಾನದಲ್ಲಿ ಹೆಚ್ಚಿನ ಪ್ರಗತಿ ಸಾಧಿಸಿದ್ದರೂ, ಆ ಪ್ರಗತಿ ಮನುಕುಲಕ್ಕೆ ಕಲ್ಯಾಣಕಾರಿಯಾಗುವ ಬದಲಿಗೆ ಹಾನಿಕಾರಕವಾಗುವ ಸಂಭವವನ್ನೇ ಸೂಚಿಸುತ್ತಿದೆ.

ಕೋವಿಡ್ ಸೂಕ್ಷ್ಮಾಣುಗಳನ್ನು ಚೀನಾ ದೇಶದ ಪ್ರಯೋಗ ಶಾಲೆಯಲ್ಲಿ ನಿರ್ಮಾಣ ಮಾಡಲಾಯಿತೆಂಬ ಸಂಗತಿ ಇಡೀ ಜಗತ್ತನ್ನೇ ತಲ್ಲಣಗೊಳಿಸಿದೆ. ಇತ್ತೀಚಿನ ಯುಕ್ರೇನ್ ಮೇಲಿನ ರಷ್ಯಾ ದಾಳಿ ಮತ್ತು ಅದರಿಂದಾಗಿರುವ ಅಪಾರ ಸಾವು ನೋವುಗಳು ಸಂಭವನೀಯ ದುರಂತದ ಮುನ್ಸೂಚನೆಯಾಗಿದೆ.

ಸದ್ಯದ ಜಾಗತಿಕ ಸನ್ನಿವೇಶದಲ್ಲಿ ಜಗತ್ತು ಸಿಡಿಮದ್ದುಗಳ ರಾಶಿಯ ಮೇಲೆಯೇ ಕುಳಿತಿದೆಯೇನೋ ಎನ್ನುವ ಚಿತ್ರ ಕಣ್ಣಿಗೆ ಕಟ್ಟುತ್ತಿದೆ. ವಿಜ್ಞಾನ, ತಂತ್ರಜ್ಞಾನಗಳು ವಿನಾಶಕರವಾಗದಿರಬೇಕಾದರೆ ಸಮಗ್ರ ಜಗತ್ತಿನ ಹಿತವನ್ನು ಸಾಧಿಸುವ ಮನೋಭಾವ, ಜೀವನ ದೃಷ್ಟಿ ಬೆಳೆಸುವಂತಾಗಬೇಕು. ವಿಶ್ವಾದ್ಯಂತ ಗಂಭೀರವಾದ ಸಾಮಾಜಿಕ ತುಮುಲವನ್ನು ನಾವು ವೀಕ್ಷಿಸುತ್ತಿದ್ದೇವೆ. ಹಿಂಸೆ, ಕ್ರೌರ್ಯ, ಶಸ್ತ್ರಸಂಗ್ರಹ, ಯುದ್ಧಭೀತಿಯ ಸನ್ನಿವೇಶಗಳು ವಿಕರಾಳರೂಪವನ್ನು ತಳೆಯುತ್ತಿವೆ. ಭಾರತದ ಶಾಂತಿ ಸಮನ್ವಯತೆಯ ಸಂದೇಶಕ್ಕಾಗಿ ವಿಶ್ವ ಕಾತರಿಸುತ್ತಿರುವಂತೆ ಕಾಣುತ್ತಿದೆ ಎಂದರು.

ಭಾರತೀಯ ಪರಂಪರೆಯಲ್ಲಿ ಎಲ್ಲಾ ಜೀವನಮೌಲ್ಯಗಳ ಸಮುಚ್ಛಯವನ್ನೇ ಧರ್ಮ ಎಂದು ಕರೆಯಲಾಗಿದೆ. ಧರ್ಮ ಶಬ್ದದ ಅರ್ಥವ್ಯಾಪ್ತಿಯನ್ನು ಸರಿಯಾಗಿ ತಿಳಿಯದೆ ಅದನ್ನು ರಿಲೀಜನ್ ಶಬ್ದಕ್ಕೆ ಪರ್ಯಾಯವಾಗಿ ಪರಿಗಣಿಸಿರುವುದು ಬಹಳಷ್ಟು ಅನರ್ಥಗಳಿಗೆ ಕಾರಣವಾಗಿದೆ.

ಕ್ರೈಸ್ತಮತದ ಸರ್ವಶ್ರೇಷ್ಠತೆಯನ್ನು ಸಾರುವ ಉದ್ದೇಶದಿಂದಲೇ 19ನೇ ಶತಮಾನದ ಅಂತ್ಯಭಾಗದಲ್ಲಿ ಆಯೋಜಿಸಲಾಗಿದ್ದ ವಿಶ್ವಧರ್ಮ ಸಮ್ಮೇಳನದಲ್ಲಿ ಸ್ವಾಮಿ ವಿವೇಕನಂದರು ಹಿಂದೂ ಧರ್ಮದ ವೈಶ್ವಿಕ ಚಿಂತನೆ, ವೈಜ್ಞಾನಿಕ ದೃಷ್ಟಿಕೋನವನ್ನು ಅಸಂಧಿಗ್ದವಾಗಿ ಪ್ರತಿಪಾದಿಸಿ ವಿಶ್ವದ ಚಿಂತನಶೀಲ ಸಮೂಹದ ಗಮನ ಆಕರ್ಷಿಸುವಲ್ಲಿ ಯಶಸ್ವಿಯಾದರು, ಪರಿಣಾಮವಾಗಿ ಸಮ್ಮೇಳನದ ಆಯೋಜಕರ ಉದ್ದೇಶ ವಿಫಲಗೊಳ್ಳುವಂತಾಯಿತು ಎಂದರು.

ದಾವಣಗೆರೆ ವಿಶ್ವವಿದ್ಯಾನಿಲಯದ ಕುಲಪತಿ ಸ್ವಾಗತ ಭಾಷಣ ಮಾಡಿ, ಘಟಿಕೋತ್ಸವದಲ್ಲಿ 06 ಪಿಹೆಚ್‍ಡಿ, 04 ಎಂ.ಫಿಲ್, ಪದವಿ, 9724 ಸ್ನಾತಕ ಮತ್ತು 1612 ಸ್ನಾತಕೋತ್ತರ ಪದವಿಧರರಿಗೆ ಪದವಿ ಪ್ರದಾನ ಮಾಡಲಾಗುತ್ತಿದೆ. ಒಟ್ಟು 44 ವಿದ್ಯಾರ್ಥಿಗಳು 79 ಚಿನ್ನದ ಪದಕಗಳನ್ನು ಪಡೆದುಕೊಂಡಿದ್ದಾರೆ. ಸರ್ಕಾರದ ನಿರ್ದೇಶನದಂತೆ ವಿವಿ ಯಲ್ಲೂ ಮಾಹಿತಿ ಸಂವಹನ ತಂತ್ರಜ್ಞಾನದಡಿ ಕೆಲಸಗಳ ನಿರ್ವಹಣೆಯಾಗುತ್ತಿದ್ದು, ಆಡಳಿತದಲ್ಲಿ ಪಾರದರ್ಶಕತೆ ಮತ್ತು ಸ್ವಚ್ಛ ಆಡಳಿತ ತರುವುದೇ ಇದರ ಉದ್ದೇಶವಾಗಿದೆ.

ಈ ಘಟಕಕ್ಕಾಗಿಯೇ ಪ್ರತ್ಯೇಕ ಕಚೇರಿ ಸ್ಥಾಪಿಸಲಾಗಿದ್ದು, ವಿವಿಯಲ್ಲಿ ಮಾಹಿತಿ ತಂತ್ರಜ್ಞಾನ ಕೆಲಸಗಳನ್ನು ಜಾರಿಗೊಳಿಸಿರುವುದನ್ನು ಪ್ರಶಂಸಿಸಿ, ರಾಷ್ಟ್ರ ಮಟ್ಟದ ಪ್ರಶಸ್ತಿ ಬಂದಿರುವುದು ಸಂತೋಷದ ಸಂಗತಿ.

ರಾಷ್ಟ್ರೀಯ ಉಚ್ಛತರ ಶಿಕ್ಷಣ ಅಭಿಯಾನದಡಿ ಕೇಂದ್ರ ಸರ್ಕಾರದಿಂದ ವಿವಿಗೆ 20 ಕೋಟಿ ರೂ. ಅನುದಾನ ಮಂಜೂರಾಗಿದೆ ಎಂದರು.

ಗೌರವ ಡಾಕ್ಟರೇಟ್ ಪ್ರದಾನ

ಆಯರ್ವೇದ ಮತ್ತು ಯೋಗ ಕ್ಷೇತ್ರಗಳಲ್ಲಿ ಗಮನಾರ್ಹ ಸಾಧನೆ ಮಾಡಿದ ಶಶಿಕುಮಾರ್ ವಿ.ಎಂ, ನಿವೃತ್ತ ಪ್ರಾಧ್ಯಾಪಕರು, ಜನಪದ ತಜ್ಞರಾದ ಡಾ. ಮೀರಾ ಸಾಬಿಹಳ್ಳಿ ಶಿವಣ್ಣ ಮತ್ತು ಇತಿಹಾಸಕಾರರಾದ ಲಕ್ಷ್ಮಣ ಎಸ್ ತೆಲಗಾವಿ ಅವರಿಗೆ ಘಟಿಕೋತ್ಸವದಲ್ಲಿ ಕುಲಾಧಿಪತಿಗಳಾದ ಥಾವರ್ ಚಂದ್ ಗೆಹ್ಲೋಟ್ ಅವರು ಗೌರವ ಡಾಕ್ಟರೇಟ್ ಪುರಸ್ಕಾರ ಪ್ರದಾನ ಮಾಡಿದರು.

ಪಿಹೆಚ್‍ಡಿ ಹಾಗೂ ಎಂಫಿಲ್ ಪ್ರದಾನ

ಅರ್ಥಶಾಸ್ತ್ರ ವಿಭಾಗದಲ್ಲಿ ಗುರುಪ್ರಸಾದ್ ಎಂಎಸ್, ಮೈಕ್ರೋಬಯಾಲಜಿ ವಿಭಾಗದಲ್ಲಿ ನವೀನ ಕೆ.ಸಿ. ಹಾಗೂ ಈರಮ್ಮ ಎನ್., ಬಯೋಕೆಮಿಸ್ಟ್ರಿ ವಿಭಾಗದಲ್ಲಿ ಜಾರುಬಂಡಿ ರಾಜಶೇಖರ್, ವಾಣಿಜ್ಯಶಾಸ್ತ್ರ ವಿಭಾಗದಲ್ಲಿ ರಾಜಪ್ಪ ಎಲ್ ಮತ್ತು ಪ್ರಸನ್ನ ಎಸ್.ಹೆಚ್. ಅವರಿಗೆ ಪಿಹೆಚ್‍ಡಿ ಪ್ರದಾನ ಮಾಡಲಾಯಿತು. ಗಣಿತಶಾಸ್ತ್ರ ವಿಭಾಗದಲ್ಲಿ ರೇಖಾ ಎಂ.ಬಿ., ಜೀವಶಾಸ್ತ್ರ ವಿಭಾಗದಲ್ಲಿ ವಿರುಪಾಕ್ಷ ಟಿ.ಆರ್., ರಸಾಯನಶಾಸ್ತ್ರ ವಿಭಾಗದಲ್ಲಿ ಮಧು ಹೆಚ್, ಸಾಮಾಜಿಕ ಸೇವೆ ವಿಭಗದಲ್ಲಿ ಪಾಪಯ್ಯ ಸಿ., ಹಾಗೂ ಶಿಕ್ಷಣ ವಿಭಾಗದಲ್ಲಿ ದೀಪಕ್ ಕೆ.ಎಸ್. ಅವರಿಗೆ ಎಂ.ಫಿಲ್ ಅನ್ನು ಇದೇ ಸಂದರ್ಭದಲ್ಲಿ ಪ್ರದಾನ ಮಾಡಲಾಯಿತು.

ಕಾರ್ಯಕ್ರಮದಲ್ಲಿ ವಿವಿ ಕುಲಪತಿ ಪ್ರೊ. ಎಸ್.ವಿ. ಹಲಸೆ, ಕುಲಸಚಿವರು (ಪರೀಕ್ಷಾಂಗ) ಪ್ರೊ. ಅನಿತಾ ಹೆಚ್.ಎಸ್., ಕುಲಸಚಿವರು (ಆಡಳಿತ) ಪ್ರೊ. ಗಾಯತ್ರಿ ದೇವರಾಜ್, ವಿಶ್ವವಿದ್ಯಾನಿಲಯದ ವಿವಿಧ ನಿಕಾಯಗಳ ಮುಖ್ಯಸ್ಥರು, ಸಿಂಡಿಕೇಟ್ ಸದಸ್ಯರು ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದಾವಣಗೆರೆ | ನಾಳೆ ವಿವಿಧೆಡೆ ವಿದ್ಯುತ್ ವ್ಯತ್ಯಯ

Published

on

ಸುದ್ದಿದಿನ,ದಾವಣಗೆರೆ : 66/11 ಕೆ.ವಿ. ವಿದ್ಯುತ್ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಮತ್ತು ತುರ್ತು ನಿರ್ವಹಣಾ ಕಾಮಗಾರಿಗಳ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಜೂನ್ 23 ರಂದು ಬೆಳಿಗ್ಗೆ 10 ರಿಂದ ಸಂಜೆ 5.30 ರವರೆಗೆÉ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಮಾಮಾಸ್ ಜಾಯಿಂಟ್ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು, ಎಮ್.ಸಿ.ಸಿ.ಬಿ : ಶಾಬನೂರು ರಸ್ತೆ, ಎಸ್.ಎಸ್. ಲೇಔಟ್, ಎ ಬ್ಲಾಕ್, ಕುವೆಂಪು ನಗರ, ಬಾಟ್ಲಿ ಬಿಲ್ಡಿಂಗ್ ಸುತ್ತ ಮುತ್ತ, ಸಿದ್ದವೀರಪ್ಪ ಬಡಾವಣೆ, 1ನೇ ಅಡ್ಡ ರಸ್ತೆ ಯಿಂದ 7ನೇ ಅಡ್ಡರಸ್ತೆವರೆಗೆ, ಗ್ಲಾಸ್ ಹೌಸ್, ಬಾಪೂಜಿ ಬ್ಯಾಂಕ್ ಸಮುದಾಯ ಭವನದ ಹಿಂಭಾಗದ ಪ್ರದೇಶ , ಬಿ.ಐ.ಇ.ಟಿ. ಕಾಲೇಜು ಹಾಗೂ ಸುತ್ತ ಮುತ್ತ ಪ್ರದೇಶಗಳು.

ಮಂಡಿಪೇಟೆ, ಬೆನ್ನೆ ಕಂಪನಿ ರಸ್ತೆ, ಎಮ್ ಜಿ ರಸ್ತೆ, ಎನ್ ಆರ್ ರಸ್ತೆ, ಬೆಲ್ಲೌಡಿಹಲ್ಲಿ, ಮಹಾವೀರ ರಸ್ತೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು, ಬಿ.ಟಿ.: ಮಂಡಕ್ಕಿ ಬಟ್ಟಿ, 1 ರಿಂದ 10 ನೇ ಕ್ರಾಸ್, ಇಂದಿರಾ ನಗರ, ಸಿದ್ದರಾಮೇಶ್ವರ ಬಡಾವಣೆ, ಕಾರ್ಲ್ ಮಾರ್ಸ್ ನಗರ, ಕೋಳಿ ಚನ್ನಪ್ಪ ಬಡಾವಣೆ ಮತ್ತು ಸುತ್ತ ಮುತ್ತಲಿನ ಪ್ರದೇಶಗಳು, ಮೌನೇಶ್ವರ : ಹೆಚ್.ಕೆ. ಆರ್. ಸರ್ಕಲ್, ಕೆ.ಇ.ಬಿ ಕಾಲೋನಿ, ನಿಟುವಳ್ಳಿ ಹಾಗು ನಿಟುವಳ್ಳಿ ಹೊಸಬಡಾವಣೆ, ಮೌನೇಶ್ವರ ಬಡಾವಣೆ, ಸೈಯದ್ ಪೀರ್ ಬಡಾವಣೆ, ಐ.ಟಿ.ಐ. ರಿಂಗ್ ರಸ್ತೆ, ಜಯನಗರ, ದುರ್ಗಾಂಬಿಕ ದೇವಸ್ಥಾನ ಸುತ್ತಮುತ್ತ.

ಎಸ್.ಎಸ್. ಹೈಟೆಕ್ ಆಸ್ಪತ್ರೆ ರಸ್ತೆ, ಭಗೀರಥ ಸರ್ಕಲ್, ಕಾಳಿಕಾಂಬ ದೇವಸ್ಥಾನ, ಶಕ್ತಿನಗರ, ಹಾಗು ಇ.ಎಸ್.ಐ ಆಸ್ಪತ್ರೆ ಮತ್ತು ಸುತ್ತ ಮುತ್ತಲಿನ ಪ್ರದೇಶಗಳ, ಪಿ.ಬಿ. ರಸ್ತೆ., ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು, ಕೆಟಿಜೆ: ಶ್ರೀ ಮುರಘ ರಾಜೇಂದ್ರ ಸ್ವಾಮಿಗಳ ಮಠ, ಜಾಧವ್ ಕ್ಲಿನಿಕ್ ಸುತ್ತ ಮುತ್ತ , ಶಿವಪ್ಪ ವೃತ್ತದಿಂದ ಜಯದೇವ ವೃತ್ತದವರೆಗೆ ಹಾಗು ಸುತ್ತಮುತ್ತ ಪ್ರದೇಶಗಳು, ಪಿಜೆ: ಪೋಲೀಸ್ ಕ್ವಾಟ್ರಸ್, ತುಂಗ, ಭದ್ರ, ಸರಸ್ವತಿ, ಕೃಷ್ಣ ಬ್ಲಾಕ್, ಅರುಣಾ ಸರ್ಕಲ್ ಮತ್ತು ಸುತ್ತಮುತ್ತಲಿನ ಪ್ರದೇಶಗಳು, ಸಿಜಿಹೆಚ್: ಎಮ್.ಸಿ.ಸಿ. ಎ ಬ್ಲಾಕ್, ನ್ಯಾಯಾಧೀಶರ ವಸತಿ ಗೃಹಗಳು, ತೊಗಟವೀರ ಕಲ್ಯಾಣ ಮಂದಿರ, ವಿನೋಬ ನಗರ 1ನೇ ಮುಖ್ಯ ರಸ್ತೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು, ಎಸ್.ಎಸ್. ಬಡಾವಣೆ, ಎ ಬ್ಲಾಕ್, ಶಾಂತಿ ನಗರ, ಕುಂದುವಾಡ ರಸ್ತೆ, ಮಹಾನಗರ ಪಾಲಿಕೆ ಕುಡಿಯುವ ನೀರಿನ ಸ್ಥಾವರ, ಬಸವೇಶ್ವರ ಬಡಾವಣೆ, ಮಹಾಲಕ್ಷ್ಮೀ ಬಡಾವಣೆ, ಬಾಲಾಜಿ ನಗರ, ಕುಂದುವಾಡ ಕೆರೆ ಹಾಗು ಸುತ್ತಮುತ್ತ ಪ್ರದೇಶಗಳು.

ಕರೂರು ಇಂಡಸ್ಟ್ರಿಯಲ್ ಏರಿಯಾ, ಡಿ.ಸಿ. ಕಛೇರಿ, ಜಿ.ಎಂ.ಐ.ಟಿ. ಬಸವೇಶ್ವರ ನಗರ, ರಶ್ಮೀ, ಹರಿಹರ ರಸ್ತೆ, ವಿಜಯ ನಗರ, ಅಶೋಕ ನಗರ, ಆರ್.ಟಿ.ಓ. ಕಛೇರಿ, ಎಸ್.ಪಿ. ಕಛೇರಿ, ರಿಂಗ್ ರಸ್ತೆ, ಶಿಬಾರ, ಎಸ್.ಎಂ.ಕೆ. ನಗರ, ಹಾಗೂ ಚಿತ್ತನಹಳ್ಳಿ, ಕಕ್ಕರಗೊಳ್ಳ, ಆವರಗೊಳ್ಳ, ನೀಲನಹಳ್ಳಿ, ದೇವರಹಟ್ಟಿ, ದೊಡ್ಡಬಾತಿ, ಹಳೆಬಾತಿ, ನಾರಾಯಣ ಕ್ಯಾಂಪ್, ಯರಗುಂಟಾ, ಕೋಡಿಹಳ್ಳಿ, ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು, ಮಾಗಾನಹಳ್ಳಿ, ಮಾಗಾನಹಳ್ಳಿ ಕ್ಯಾಂಪ್, ಓಬಜ್ಜಿಹಳ್ಳಿ, ಓಬಜ್ಜಿಹಳ್ಳಿ ಕ್ಯಾಂಪ್, ಕಡ್ಲೇಬಾಳು, ಹಳೆಕಡ್ಲೆಬಾಳು, ಮಾಳಗೊಂಡನಹಳ್ಳಿ, ಅರಸಾಪುರ, ಬದುನಾಯಕನತಾಂಡ, ಚಿಕ್ಕಓಬಜ್ಜೀಹಳ್ಳಿ, ದೊಡ್ಡಓಬಜ್ಜೀಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳು, ಮ್ಯಾಸರಹಳ್ಳಿ, ಗುಮ್ಮನೂರು, ಹುಣಸೆಕಟ್ಟೆ, ಮುಡೇನಹಳ್ಳಿ, ಕೆಂಚಮ್ಮನಹಳ್ಳಿ, ಹೊಸಹಳ್ಳಿ, ಕಾಟಿಹಳ್ಳಿ.

ಮಂಡಲೂರು ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು ಹನುಮನಹಳ್ಳಿ, ಕೊಗ್ಗÀನೂರು, ಹನುಮನಹಳ್ಳಿ, ಆನಗೋಡು, ಹೆಬ್ಬಾಳು, ನೀರ್ಥಡಿ, ಶಿವಪುರ, ಹಾಲುವರ್ತಿ, ಗಂಗನಕಟ್ಟೆ, ನೇರ್ಲಿಗಿ, ಚಿನ್ನಸಮುದ್ರ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು ಮತ್ತು ಆರಾಧ್ಯಾ ಕೈಗಾರಿಕೆ, ಅತ್ತಿಗೆರೆ, ಕುರ್ಕಿ, ಬಾಡ, ಕಬ್ಬೂರು, ಹೀರೆತೊಗಲೇರಿ, ಗೊಪಾನಾಳು, ಕಂದ್ಗಲ್, ರಾಮಗೊಂಡನಹಳ್ಳಿ, ಕಾಶೀಪುರ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು ಆರ್.ಎಂ.ಸಿ. ಲಿಂಕ್ ರಸ್ತೆ, ಬಿ.ಟಿ. ಲೇಔಟ್, ಗುಜರಿ ಲೈನ್, ಬಂಬೂ ಬಜಾರ್, ಮಟ್ಟಿಕಲ್, ಬಿಡಿಓ ಕಛೇರಿ, ಇಮಾಮ್ ನಗರ, ಅಮರಪ್ಪನ ತೋಟ.

ಆನೆಕೊಂಡ, ಎಲ್.ಬಿ.ಎಸ್. ನಗರ.ಟಿ.ಸಿ. ಲೇಔಟ್, ಬಿಟಿ ಲೇಔಟ್, ಕೆ.ಆರ್. ರಸ್ತೆ, ಇಮಾಮ್ ನಗರ, ಆನೆಕೊಂಡ, ಐನಳ್ಳಿ ಕಾಂಪೌಂಡ್, ಎಪಿಎಂಸಿ, ಭಾರತ್ ಕಾಲೋನಿ, ಶೇಖ್ರಪ್ಪ ನಗರ ಹೆಚ್.ಕೆ.ಆರ್. ನಗರ, ಕಬ್ಬೂರು ಬಸಾಪುರ ನಗರ, ಆಣ್ಣಾ ನಗರ, ಬಸಾಪುರ ರಸ್ತೆ, ಗೋಶಾಲೆ, ಪಿ.ಬಿ. ರಸ್ತೆ, ರವಿ ಮಿಲ್ ಹಾಗೂ ಆವರಗೆರೆ, ಹೊನ್ನೂರು, ಐಗೂರು, ಮಲ್ಲಶೆಟ್ಟಿಹಳ್ಳಿ, ತೊಳಹುಣಸೆ, ದಾವಣಗೆರೆ ವಿಶ್ವವಿದ್ಯಾಲಯ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ವಿದ್ಯಾರ್ಥಿಗಳು ದೊರೆತ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು: ಹೆಚ್ ಎನ್ ಶಿವಕುಮಾರ್

Published

on

ಸುದ್ದಿದಿನ,ರಾಣೇಬೆನ್ನೂರ: ಸಾಮಾಜಿಕ ಹಾಗೂ ಶೈಕ್ಷಣಿಕ ಜವಾಬ್ದಾರಿಗಳ ಅಗತ್ಯವು ವಿದ್ಯಾರ್ಥಿಗಳಿಗೆ ಅವಶ್ಯಕವಾಗಿದೆ. ವಿದ್ಯಾರ್ಥಿಗಳು ತಮಗೆ ದೊರೆತ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು.ಸದಾಕಾಲ ಜ್ಞಾನವನ್ನು ಪಡೆಯುವ ತನಕ ಹೊಂದಿ ಜ್ಞಾನಿಗಳಾಗುವ ಗುರಿ ಹೊಂದಲು ಬಾಪೂಜಿ ಮಹಾವಿದ್ಯಾಲಯ ಉಪ ಪ್ರಾಚಾರ್ಯರಾದ ಎಚ್ ಎನ್ ಶಿವಕುಮಾರ್ ನುಡಿದರು.

ಅವರು ಸ್ಥಳೀಯ ಬಿಎಜೆಎಸ್ಎಸ್ ಪ್ರಥಮ ದರ್ಜೆ ಕಾಲೇಜಿನ ಪ್ರತಿಭಾ ಪುರಸ್ಕಾರ, ಬಿಳ್ಕೋಡಿಗೆ ಕಾರ್ಯಕ್ರಮ ಮತ್ತು ವಿದ್ಯಾರ್ಥಿ ಒಕ್ಕೂಟದ, ಎನ್ ಎಸ್ ಎಸ್ ಚಟುವಟಿಕೆ, ಯುವ ರೆಡ್ ಕ್ರಾಸ್ ಘಟಕದ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು.

ವಿಶೇಷ ಅತಿಥಿಗಳಾಗಿ ಉಪಸ್ಥಿತರಿದ್ದ ಬಿಎ ಜೆಎಸ್ಎಸ್ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಅಧಿಕಾರಿಗಳು ಡಾ.ಆರ್ ಎಂ ಕುಬೇರಪ್ಪ ಮಾತನಾಡಿ ವಿದ್ಯೆಯನ್ನು ವಿನಯದಿಂದ ವಿದ್ಯೆಕಲಿಯಬೇಕು ಸಂಸ್ಕಾರವಂತರಾಗ ಬೇಕು, ಸಂಸ್ಕಾರ ಹೊಂದಿರುವ ವ್ಯಕ್ತಿಗಳು ಪುರಸ್ಕಾರ ಪಡೆದರೆ ಸಂಸ್ಕಾರ ಇಲ್ಲದವರು ಸಮಾಜದಲ್ಲಿ ತಿರಸ್ಕಾರಕ್ಕೆ ಒಳಗಾಗುವರು.ನಿಮ್ಮ ಬದುಕನ್ನು ನೀವೆ ಕಟ್ಟಿಕೊಳ್ಳುವ ನೆಲೆಯಲ್ಲಿ ಪ್ರಯತ್ನಿಸಬೇಕು ಎಂದು ನುಡಿದರು.

ಪ್ರಾಚಾರ್ಯರಾದ ಪ್ರಕಾಶ್ ಬಸಪ್ಪನವರ್ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಎಚ್ ಎನ್ ಭೀಕ್ಷಾವರ್ತಿಮಠ ಹಾಗೂ ಕೆ ಕೆ ಹಾವಿನಾಳ ರವರು ವಿದ್ಯಾರ್ಥಿಗಳಿಗೆ ಹಿತವಚನ ನುಡಿದರು.ಆರಂಭದಲ್ಲಿಪ್ರೋ.ಎಂ ಡಿ ಹೊನ್ನಮ್ಮನವರ ಸ್ವಾಗತಿಸಿದರು.ಪ್ರೋ.ಶ್ರೀಕಾಂತ ಕುಂಚೂರ, ಪ್ರಾಸ್ತಾವಿಕ ಮಾತನಾಡಿ ವಾರ್ಷಿಕ ವರದಿ ವಾಚಿಸಿದರು.

ಕೊನೆಯಲ್ಲಿ ಪ್ರೋ.ಪುಷ್ಟಾ ಕಬ್ಬಿನಾಲೆ ವಂದಿಸಿದರು.ಇದೆ ಸಮಾರಂಭದಲ್ಲಿ ಕ್ರೀಡೆ, ಸಾಂಸ್ಕೃತಿಕ, ಸಾಮಾಜಿಕ ಸೇವೆಗಳಲ್ಲಿವಿದ್ಯಾರ್ಥಿಗಳ ಸಾಧನೆ ಗುರುತಿಸಿ ಪುರಸ್ಕಾರ ಮಾಡಲಾಯಿತು.ವರ್ಷದ ಮಹಾವಿದ್ಯಾಲಯ ಉತ್ತಮ ವಿದ್ಯಾರ್ಥಿಗಳನ್ನು ಗುರುತಿಸಿ ಪುರಸ್ಕಾರ ಪ್ರದಾನ ಮಾಡಲಾಯಿತು.ವಿವಿಧ ವಿಷಯದ ಉಪನ್ಯಾಸಕರು, ವಿದ್ಯಾರ್ಥಿಗಳು, ಸಿಬ್ಬಂದಿ ಭಾಗವಹಿಸಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಪಿಂಚಣಿ ದಾರರು ಸಕಾಲದಲ್ಲಿ ಜೀವಂತ ಪ್ರಮಾಣ ಪತ್ರ ಸಲ್ಲಿಸಿ

Published

on

ಸುದ್ದಿದಿನ,ದಾವಣಗೆರೆ: ಪಿಂಚಣಿ ಪಡೆಯಲು ಜೀವಂತ ಸದಸ್ಯರ ಪ್ರಮಾಣ ಪತ್ರಗಳು ಕಡ್ಡಾಯವಾಗಿರುವುದರಿಂದ ಸಕಾಲಕ್ಕೆ ಸೂಕ್ತ ದಾಖಲಾತಿಗಳನ್ನು ನೀಡುವ ಮೂಲಕ ಸಹಕರಿಸಿ ಎಂದು ಉಪ ಮಹಾಲೇಖಪಾಲರಾದ ಸಚ್ಚಿನ್ ಕೃಷ್ಣ ಕೌಶಿಕ್ ತಿಳಿಸಿದರು.

ಶುಕ್ರವಾರ ಜೂನ್(19) ‌ಬೆಂಗಳೂರಿನ ಮಹಾಲೇಖಪಾಲರು ದಾವಣಗೆರೆ ಜಿಲ್ಲಾ ಖಜಾನೆ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಸಾಮಾನ್ಯ ಭವಿಷ್ಯ ನಿಧಿ ಹಾಗೂ ಲೆಕ್ಕಪತ್ರ ಸಮಸ್ಯೆಗಳ ಕುರಿತು ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಪಿಂಚಣಿದಾರರು ತಮ್ಮ ಎಲ್ಲಾ ಬ್ಯಾಂಕ್‌ಗೆ 2ನೇ ವಾರ ಭೇಟಿ ನೀಡಿದರೆ ನಿಮ್ಮ ಸಮಸ್ಯೆಯನ್ನು ಶೀಘ್ರವಾಗಿ ಬಗೆಹರಿಸಲಾಗುವುದು. ಜೀವಂತ ಸದಸ್ಯರ ದೃಢೀಕರಣ ಪತ್ರವನ್ನು ಪಡೆಯಲು ಸೈಬರ್‌ಕೆಫೆ ಇನ್ನಿತರ ಕೇಂದ್ರಗಳಿಗೆ ಅಲೆಯುವ ಅವಶ್ಯಕತೆ ಇಲ್ಲ. ನೀವು ಮನೆಯಲ್ಲಿ ಮೊಬೈಲ್‌ನಲ್ಲಿ ಅಫ್ ಲೋಡ್ ಮಾಡಿ ಪಡೆಯಬಹುದು. ಮತ್ತು ನಿಮ್ಮ ಸಮಸ್ಯೆಗಳನ್ನು ತಿಳಿಸುವಾಗ ಅರ್ಜಿಯಲ್ಲಿ ಇ-ಮೇಲ್ ವಿಳಾಸ, ಮೊಬೈಲ್ ನಂಬರ್‌ನ್ನು ಕಡ್ಡಾಯವಾಗಿ ನಮೂದಿಸಿದರೆ, ಇದರಿಂದ ನಿಮಗೆ ಮಾಹಿತಿ ನೀಡಲು ಅನುಕೂಲವಾಗುತ್ತದೆ ಎಂದರು.

ಪಿಂಚಣಿ ಅದಾಲತ್ ಎನ್ನುವುದು ನಿವೃತ್ತ ನೌಕರರು ಮತ್ತು ಪಿಂಚಣಿದಾರರ ದೀರ್ಘಕಾಲದ ಬಾಕಿ ಉಳಿದಿರುವ ಸಮಸ್ಯೆಗಳನ್ನು ಅಥವಾ ಕುಂದುಕೊರತೆಗಳನ್ನು ಪರಿಹರಿಸಲು ವಿಶೇಷ ವೇದಿಕೆಯಾಗಿದೆ. ಸ್ಥಳದಲ್ಲೇ ಅರ್ಜಿಗಳನ್ನು ಪರಿಶೀಲಿಸಿ, ಬ್ಯಾಂಕ್‌ ಅಧಿಕಾರಿಗಳ ಸಮ್ಮುಖದಲ್ಲಿ ತ್ವರಿತವಾಗಿ ಸಮಸ್ಯೆಗಳನ್ನು ಬಗೆಹರಿಸುವುದು ಇದರ ಮುಖ್ಯ ಉದ್ದೇಶವಾಗಿದೆ.

ಮಹಾಲೇಖಪಾಲರ ಕಚೇರಿಯ ಹಿರಿಯ ಲೆಕ್ಕಪರಿಶೋಧನಾ ಅಧಿಕಾರಿ ನಾಗಸೇನಾ.ಟಿ.ವಿ, ಮತ್ತು ಪದ್ಮವತಿ, ಜಿಲ್ಲಾ ಖಜಾನೆಯ ಉಪನಿರ್ದೇಶಕರಾದ ರಮೇಶ್ ಅರೆಮಲ್ಲಾಪುರ, ಸಹಾಯಕ ಲೆಕ್ಕಪರಿಶೋಧನಾ ಆಧಿಕಾರಿ ಚಂದನ್ ಮತ್ತು ಜಾಬ್‌ಲೀನೋ, ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending