ದಿನದ ಸುದ್ದಿ
ದಾವಣಗೆರೆ ವಿವಿ 09ನೇ ವಾರ್ಷಿಕ ಘಟಿಕೋತ್ಸವ | ದೇಶದ ಏಕತೆ, ಅಖಂಡತೆಗಾಗಿ ಧರ್ಮ, ಸಂಸ್ಕೃತಿಗಳು ಸದೃಢವಾಗಬೇಕು : ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್
ಸುದ್ದಿದಿನ,ದಾವಣಗೆರೆ : ವಿಶ್ವಶಾಂತಿಗಾಗಿ ಇಡೀ ಜಗತ್ತೇ ಭಾರತ ದೇಶದಿಂದ ಹೆಚ್ಚಿನದನ್ನು ಅಪೇಕ್ಷಿಸುತ್ತಿದ್ದು, ದೇಶದ ಏಕತೆ, ಅಖಂಡತೆಗಾಗಿ ನಮ್ಮಲ್ಲಿನ ಧರ್ಮ, ಸಂಸ್ಕøತಿಗಳು ಸದೃಢವಾಗಬೇಕು, ಈ ದಿಸೆಯಲ್ಲಿ ಯುವ ಪೀಳಿಗೆ ಮಹತ್ವದ ಪಾತ್ರ ವಹಿಸಬೇಕು ಎಂದು ರಾಜ್ಯದ ಘನತೆವೆತ್ತ ರಾಜ್ಯಪಾಲರು ಹಾಗೂ ದಾವಣಗೆರೆ ವಿವಿ ಕುಲಾಧಿಪತಿಗಳಾದ ಥಾವರ್ ಚಂದ್ ಗೆಹ್ಲೋಟ್ ಅವರು ಹೇಳಿದರು.
ದಾವಣಗೆರೆ ವಿಶ್ವವಿದ್ಯಾನಿಲಯದ ಶಿವಗಂಗೋತ್ರಿ ಆವರಣದಲ್ಲಿ ಗುರುವಾರ ಏರ್ಪಡಿಸಲಾದ 09 ನೇ ವಾರ್ಷಿಕ ಘಟಿಕೋತ್ಸವ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
‘ವಸುದೈವ ಕುಟುಂಬಕಂ’, ‘ಸರ್ವೇ ಜನ ಸುಖಿನೋಭವಂತು’ ಎನ್ನುವಂತಹ ಆಲೋಚನೆಗಳೇ ನಮ್ಮ ದೇಶದ ಸಂಸ್ಕøತಿಯಾಗಿದೆ. ವಿಶ್ವ ಶಾಂತಿಗಾಗಿ ಇಡೀ ಜಗತ್ತು ಭಾರತದಿಂದ ಹೆಚ್ಚಿನದನ್ನು ಅಪೇಕ್ಷಿತ್ತಿದೆ. ಜಗತ್ತಿನ ಅಪೇಕ್ಷೆ ಪೂರೈಸಲು ನಾವೆಲ್ಲರು ಸಹಭಾಗಿಗಳಾಗಲು ಪ್ರಯತ್ನ ಮಾಡಬೇಕು. ಭಾರತ ವಿಶ್ವಗುರು ಆಗುವ ನಿಟ್ಟಿನಲ್ಲಿ ಪ್ರಯತ್ನಗಳಾಗಬೇಕಿದೆ.
ಪ್ರಸ್ತುತ ದೇಶದ ಜನಸಂಖ್ಯೆಯಲ್ಲಿ ಯುವಜನತೆ ಹೆಚ್ಚಿದ್ದಾರೆ, ಹೀಗಾಗಿ ಇಪ್ಪತ್ತೊಂದನೇ ಶತಮಾನ ಭಾರತ ದೇಶದ್ದು ಎಂದು ಹೇಳಲಾಗುತ್ತದೆ. ಯುವಶಕ್ತಿಯಿಂದ ಭಾರತ ದೇಶಕ್ಕೆ ಹೆಚ್ಚಿನ ನಿರೀಕ್ಷೆಯಿದೆ. ಅನೇಕ ಸವಾಲುಗಳು ನಮ್ಮ ಮುಂದಿವೆ. ಸಮಸ್ಯೆ, ಸವಾಲುಗಳ ನಿವಾರಣೆಗೆ ಯುವ ಜನತೆ ದೇಶದೊಂದಿಗೆ ಕೈಜೋಡಿಸಬೇಕು. ಅತಿ ದೊಡ್ಡ ಪ್ರಜಾಪ್ರಭುತ್ವ ದೇಶ ನಮ್ಮದು, ನಮ್ಮ ಸಂವಿಧಾನ ದೇಶದ 130 ಕೋಟಿ ಜನರಿಗೂ ಮೂಲಭೂತ ಹಕ್ಕುಗಳನ್ನು ನೀಡಿದೆ.
ಆದರೆ ಕೇವಲ ಕುಟುಂಬ, ಸಮುದಾಯ, ಊರು ಬಗ್ಗೆ ಯೋಚನೆ ಮಾಡುವುದು ಸರಿಯಲ್ಲ. ಮೂಲಭೂತ ಹಕ್ಕುಗಳ ಜೊತೆಗೆ ಮೂಲಭೂತ ಕರ್ತವ್ಯಗಳ ಬಗ್ಗೆಯೂ ಕಾಳಜಿ ಬೇಕು. ದೇಶ, ಸಮಾಜದ ಬಗ್ಗೆಯೂ ಕರ್ತವ್ಯ ಪರಿಪಾಲನೆ ಆಗಬೇಕು. ಹೆಚ್ಚಿನ ಜನಸಂಖ್ಯೆಯಿಂದ ಪರಿಸರ ಹಾಳಾಗುತ್ತಿದೆ. ಭವಿಷ್ಯದಲ್ಲಿ ಇದು ದೊಡ್ಡ ಸವಾಲನ್ನು ಸೃಷ್ಟಿ ಮಾಡಲಿದೆ. ಜಲಸಂರಕ್ಷಣೆ, ಪರಿಸರ ರಕ್ಷಣೆ, ದೇಶದ ಜನಹಿತಕ್ಕಾಗಿ ಸರ್ಕಾರ ಜಾರಿಗೊಳಿಸುವ ಯೋಜನೆಗಳ ಸಮರ್ಪಕ ಅನುಷ್ಠಾನದಲ್ಲಿಯೂ ಜನರ ಸಹಭಾಗಿತ್ವ ಅತ್ಯಗತ್ಯವಾಗಿದೆ ಎಂದರು.
ಘಟಿಕೋತ್ಸವವು ವಿದ್ಯಾರ್ಥಿಗಳು, ಪೋಷಕರು, ಗುರುಗಳ ಪಾಲಿಗೆ ಅತ್ಯಂತ ಮಹತ್ವದ್ದು ಹಾಗೂ ಭಾವನಾತ್ಮಕವಾದ ಸಮಾರಂಭವಾಗಿದೆ. ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ಪಡೆದವರಿಂದ ಭವಿಷ್ಯದಲ್ಲಿ ದೇಶಕ್ಕೆ ಹಾಗೂ ಸಮಾಜಕ್ಕೆ ಇನ್ನಷ್ಟು ಸೇವೆ ದೊರೆಯಲಿ ಎಂದರು.
ಬಂಗಾರದ ಪದಕಗಳು, ಪದವಿ ಪಡೆದವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಅಲ್ಲದೆ ಪ್ರಸ್ತುತ ಅಧ್ಯಯನ ನಿರತ ವಿದ್ಯಾರ್ಥಿಗಳೂ ಕೂಡ, ಬಂಗಾರದ ಪದಕ ಪಡೆದಂತಹ ವಿದ್ಯಾರ್ಥಿಗಳಿಂದ ಪ್ರೇರಣೆ ಪಡೆಯಬೇಕು. ವಿದ್ಯಾರ್ಥಿಗಳು ಪರಿಶ್ರಮ ವಹಿಸಿ ಏಕಾಗ್ರತೆಯಿಂದ ಅಧ್ಯಯನ ಮಾಡಿದಲ್ಲಿ ಭವಿಷ್ಯ ಉಜ್ವಲಗೊಳ್ಳಲಿದೆ ಎಂದು ರಾಜ್ಯಪಾಲರು ಆಶಯ ವ್ಯಕ್ತಪಡಿಸಿದರು.
ಘಟಿಕೋತ್ಸವ ಭಾಷಣ ಮಾಡಿದ ಓರಿಸ್ಸಾ ಕೇಂದ್ರೀಯ ವಿಶ್ವವಿದ್ಯಾನಿಲಯದ ಮಾಜಿ ಕುಲಾಧಿಪತಿ ಡಾ. ಪಿ.ವಿ. ಕೃಷ್ಣಭಟ್ ಅವರು, ಭಾರತದಲ್ಲಿ ವಿಶ್ವವಿದ್ಯಾನಿಲಯ ಶಿಕ್ಷಣಕ್ಕೆ ಸಾವಿರಾರು ವರ್ಷಗಳ ದೀರ್ಘ ಇತಿಹಾಸವಿದೆ. ನಲಂದಾ, ತಕ್ಷಶಿಲಾ, ವಿಕ್ರಮಶಿಲಾ ಮುಂತಾದ ವಿವಿಗಳು ವಿಶ್ವಾದ್ಯಂತ ವಿದ್ಯಾರ್ಥಿಗಳು, ವಿದ್ವಾಂಸರನ್ನು ಆಕರ್ಷಿಸಿದ್ದವು.
ಬಖ್ತಿಯಾಲ್ ಖಿಲ್ಜಿ ನಲಂದಾ ವಿವಿ ಮೆಲೆ ದಾಳಿ ಮಾಡಿ ಅಲ್ಲಿನ ಪುಸ್ತಕ ಭಂಡಾರಕ್ಕೆ ಬೆಂಕಿ ಹಚ್ಚಿದಾಗ, ಆ ಬೆಂಕಿ 6 ತಿಂಗಳ ಕಾಲ ಉರಿಯುತ್ತಿತ್ತೆಂದು ವರ್ಣಿಸಲಾಗಿದೆ. ಹೀಗೆ ನಮ್ಮಲ್ಲಿದ್ದ ಅಪಾರ ಜ್ಞಾನಭಂಡಾ ಮತ್ತು ವಿವಿ ಗಳು ಪರಕೀಯ ಆಕ್ರಮಣದಿಂದ ಉಧ್ವಸ್ಥಗೊಂಡವು. ಸ್ವಾತಂತ್ರ್ಯಾನಂತರ ದೇಶದಲ್ಲಿ ರಾಷ್ಟ್ರೀಯ ಸ್ಫೂರ್ತಿ, ಚಿಂತನೆಯನ್ನು ಉತ್ತೇಜಿಸುವ, ರಾಷ್ಟ್ರೀಯ ಉದ್ದೇಶಗಳಿಗೆ ಪೂರಕವಾದ ಶಿಕ್ಷಣ ವ್ಯವಸ್ಥೆ ರೂಪಿಸುವಲ್ಲಿ ಯಶಸ್ಸು ಕಂಡಿಲ್ಲ.
ದೆಹಲಿಯ ಜೆ.ಎನ್.ಯು ವಿವಿಯಂತಹ ಪ್ರತಿಷ್ಠಿತ ವಿವಿಗಳ ವಿದ್ಯಾರ್ಥಿಗಳು ‘ಭಾರತ್ ತೇರೆ ಟುಕಡೇ ಹೋಂಗೆ’ ಎಂಬ ಘೋಷಣೆ ಹಾಕುವ ಮಟ್ಟಕ್ಕೆ ತಲುಪಿರುವುದು ನಮ್ಮ ಶಿಕ್ಷಣ ವ್ಯವಸ್ಥೆಯ ಘೋರ ದುರಂತವಾಗಿದೆ. ಇಂದಿನ ಶಿಕ್ಷಣ ವ್ಯವಸ್ಥೆಯಲ್ಲಿ ವಿಜ್ಞಾನ, ತಂತ್ರಜ್ಞಾನಕ್ಕೆ ವಿಶೇಷ ಪ್ರಾಮುಖ್ಯತೆ ಕೊಡಲಾಗಿದೆ ಎಂದು ಹೇಳಲಾಗುತ್ತಿದೆ.
ನಮ್ಮ ದೇಶದ ಪ್ರತಿಭಾವಂತರು, ವಿಜ್ಞಾನಿಗಳು, ತಂತ್ರಜ್ಞರು, ಸಂಶೋಧಕರು ತಾವು ವಿಶ್ವದಲ್ಲಿ ಯಾರಿಗೂ ಕಡಿಮೆ ಇಲ್ಲ, ಮುಂದುವರಿದ ದೇಶಗಳನ್ನು ಮಿರಿಸುವ ಸಾಧನೆ ಮಾಡಬಲ್ಲ ಸಾಮಥ್ರ್ಯ ಹೊಂದಿದವರು ಎನ್ನುವುದನ್ನು ಮನವರಿಕೆ ಮಾಡಿಕೊಟ್ಟಿದ್ದಾರೆ. ಜಗತ್ತಿನ ಹಲವು ರಾಷ್ಟ್ರಗಳು ವಿಜ್ಞಾನ, ತಂತ್ರಜ್ಞಾನದಲ್ಲಿ ಹೆಚ್ಚಿನ ಪ್ರಗತಿ ಸಾಧಿಸಿದ್ದರೂ, ಆ ಪ್ರಗತಿ ಮನುಕುಲಕ್ಕೆ ಕಲ್ಯಾಣಕಾರಿಯಾಗುವ ಬದಲಿಗೆ ಹಾನಿಕಾರಕವಾಗುವ ಸಂಭವವನ್ನೇ ಸೂಚಿಸುತ್ತಿದೆ.
ಕೋವಿಡ್ ಸೂಕ್ಷ್ಮಾಣುಗಳನ್ನು ಚೀನಾ ದೇಶದ ಪ್ರಯೋಗ ಶಾಲೆಯಲ್ಲಿ ನಿರ್ಮಾಣ ಮಾಡಲಾಯಿತೆಂಬ ಸಂಗತಿ ಇಡೀ ಜಗತ್ತನ್ನೇ ತಲ್ಲಣಗೊಳಿಸಿದೆ. ಇತ್ತೀಚಿನ ಯುಕ್ರೇನ್ ಮೇಲಿನ ರಷ್ಯಾ ದಾಳಿ ಮತ್ತು ಅದರಿಂದಾಗಿರುವ ಅಪಾರ ಸಾವು ನೋವುಗಳು ಸಂಭವನೀಯ ದುರಂತದ ಮುನ್ಸೂಚನೆಯಾಗಿದೆ.
ಸದ್ಯದ ಜಾಗತಿಕ ಸನ್ನಿವೇಶದಲ್ಲಿ ಜಗತ್ತು ಸಿಡಿಮದ್ದುಗಳ ರಾಶಿಯ ಮೇಲೆಯೇ ಕುಳಿತಿದೆಯೇನೋ ಎನ್ನುವ ಚಿತ್ರ ಕಣ್ಣಿಗೆ ಕಟ್ಟುತ್ತಿದೆ. ವಿಜ್ಞಾನ, ತಂತ್ರಜ್ಞಾನಗಳು ವಿನಾಶಕರವಾಗದಿರಬೇಕಾದರೆ ಸಮಗ್ರ ಜಗತ್ತಿನ ಹಿತವನ್ನು ಸಾಧಿಸುವ ಮನೋಭಾವ, ಜೀವನ ದೃಷ್ಟಿ ಬೆಳೆಸುವಂತಾಗಬೇಕು. ವಿಶ್ವಾದ್ಯಂತ ಗಂಭೀರವಾದ ಸಾಮಾಜಿಕ ತುಮುಲವನ್ನು ನಾವು ವೀಕ್ಷಿಸುತ್ತಿದ್ದೇವೆ. ಹಿಂಸೆ, ಕ್ರೌರ್ಯ, ಶಸ್ತ್ರಸಂಗ್ರಹ, ಯುದ್ಧಭೀತಿಯ ಸನ್ನಿವೇಶಗಳು ವಿಕರಾಳರೂಪವನ್ನು ತಳೆಯುತ್ತಿವೆ. ಭಾರತದ ಶಾಂತಿ ಸಮನ್ವಯತೆಯ ಸಂದೇಶಕ್ಕಾಗಿ ವಿಶ್ವ ಕಾತರಿಸುತ್ತಿರುವಂತೆ ಕಾಣುತ್ತಿದೆ ಎಂದರು.
ಭಾರತೀಯ ಪರಂಪರೆಯಲ್ಲಿ ಎಲ್ಲಾ ಜೀವನಮೌಲ್ಯಗಳ ಸಮುಚ್ಛಯವನ್ನೇ ಧರ್ಮ ಎಂದು ಕರೆಯಲಾಗಿದೆ. ಧರ್ಮ ಶಬ್ದದ ಅರ್ಥವ್ಯಾಪ್ತಿಯನ್ನು ಸರಿಯಾಗಿ ತಿಳಿಯದೆ ಅದನ್ನು ರಿಲೀಜನ್ ಶಬ್ದಕ್ಕೆ ಪರ್ಯಾಯವಾಗಿ ಪರಿಗಣಿಸಿರುವುದು ಬಹಳಷ್ಟು ಅನರ್ಥಗಳಿಗೆ ಕಾರಣವಾಗಿದೆ.
ಕ್ರೈಸ್ತಮತದ ಸರ್ವಶ್ರೇಷ್ಠತೆಯನ್ನು ಸಾರುವ ಉದ್ದೇಶದಿಂದಲೇ 19ನೇ ಶತಮಾನದ ಅಂತ್ಯಭಾಗದಲ್ಲಿ ಆಯೋಜಿಸಲಾಗಿದ್ದ ವಿಶ್ವಧರ್ಮ ಸಮ್ಮೇಳನದಲ್ಲಿ ಸ್ವಾಮಿ ವಿವೇಕನಂದರು ಹಿಂದೂ ಧರ್ಮದ ವೈಶ್ವಿಕ ಚಿಂತನೆ, ವೈಜ್ಞಾನಿಕ ದೃಷ್ಟಿಕೋನವನ್ನು ಅಸಂಧಿಗ್ದವಾಗಿ ಪ್ರತಿಪಾದಿಸಿ ವಿಶ್ವದ ಚಿಂತನಶೀಲ ಸಮೂಹದ ಗಮನ ಆಕರ್ಷಿಸುವಲ್ಲಿ ಯಶಸ್ವಿಯಾದರು, ಪರಿಣಾಮವಾಗಿ ಸಮ್ಮೇಳನದ ಆಯೋಜಕರ ಉದ್ದೇಶ ವಿಫಲಗೊಳ್ಳುವಂತಾಯಿತು ಎಂದರು.
ದಾವಣಗೆರೆ ವಿಶ್ವವಿದ್ಯಾನಿಲಯದ ಕುಲಪತಿ ಸ್ವಾಗತ ಭಾಷಣ ಮಾಡಿ, ಘಟಿಕೋತ್ಸವದಲ್ಲಿ 06 ಪಿಹೆಚ್ಡಿ, 04 ಎಂ.ಫಿಲ್, ಪದವಿ, 9724 ಸ್ನಾತಕ ಮತ್ತು 1612 ಸ್ನಾತಕೋತ್ತರ ಪದವಿಧರರಿಗೆ ಪದವಿ ಪ್ರದಾನ ಮಾಡಲಾಗುತ್ತಿದೆ. ಒಟ್ಟು 44 ವಿದ್ಯಾರ್ಥಿಗಳು 79 ಚಿನ್ನದ ಪದಕಗಳನ್ನು ಪಡೆದುಕೊಂಡಿದ್ದಾರೆ. ಸರ್ಕಾರದ ನಿರ್ದೇಶನದಂತೆ ವಿವಿ ಯಲ್ಲೂ ಮಾಹಿತಿ ಸಂವಹನ ತಂತ್ರಜ್ಞಾನದಡಿ ಕೆಲಸಗಳ ನಿರ್ವಹಣೆಯಾಗುತ್ತಿದ್ದು, ಆಡಳಿತದಲ್ಲಿ ಪಾರದರ್ಶಕತೆ ಮತ್ತು ಸ್ವಚ್ಛ ಆಡಳಿತ ತರುವುದೇ ಇದರ ಉದ್ದೇಶವಾಗಿದೆ.
ಈ ಘಟಕಕ್ಕಾಗಿಯೇ ಪ್ರತ್ಯೇಕ ಕಚೇರಿ ಸ್ಥಾಪಿಸಲಾಗಿದ್ದು, ವಿವಿಯಲ್ಲಿ ಮಾಹಿತಿ ತಂತ್ರಜ್ಞಾನ ಕೆಲಸಗಳನ್ನು ಜಾರಿಗೊಳಿಸಿರುವುದನ್ನು ಪ್ರಶಂಸಿಸಿ, ರಾಷ್ಟ್ರ ಮಟ್ಟದ ಪ್ರಶಸ್ತಿ ಬಂದಿರುವುದು ಸಂತೋಷದ ಸಂಗತಿ.
ರಾಷ್ಟ್ರೀಯ ಉಚ್ಛತರ ಶಿಕ್ಷಣ ಅಭಿಯಾನದಡಿ ಕೇಂದ್ರ ಸರ್ಕಾರದಿಂದ ವಿವಿಗೆ 20 ಕೋಟಿ ರೂ. ಅನುದಾನ ಮಂಜೂರಾಗಿದೆ ಎಂದರು.
ಗೌರವ ಡಾಕ್ಟರೇಟ್ ಪ್ರದಾನ
ಆಯರ್ವೇದ ಮತ್ತು ಯೋಗ ಕ್ಷೇತ್ರಗಳಲ್ಲಿ ಗಮನಾರ್ಹ ಸಾಧನೆ ಮಾಡಿದ ಶಶಿಕುಮಾರ್ ವಿ.ಎಂ, ನಿವೃತ್ತ ಪ್ರಾಧ್ಯಾಪಕರು, ಜನಪದ ತಜ್ಞರಾದ ಡಾ. ಮೀರಾ ಸಾಬಿಹಳ್ಳಿ ಶಿವಣ್ಣ ಮತ್ತು ಇತಿಹಾಸಕಾರರಾದ ಲಕ್ಷ್ಮಣ ಎಸ್ ತೆಲಗಾವಿ ಅವರಿಗೆ ಘಟಿಕೋತ್ಸವದಲ್ಲಿ ಕುಲಾಧಿಪತಿಗಳಾದ ಥಾವರ್ ಚಂದ್ ಗೆಹ್ಲೋಟ್ ಅವರು ಗೌರವ ಡಾಕ್ಟರೇಟ್ ಪುರಸ್ಕಾರ ಪ್ರದಾನ ಮಾಡಿದರು.
ಪಿಹೆಚ್ಡಿ ಹಾಗೂ ಎಂಫಿಲ್ ಪ್ರದಾನ
ಅರ್ಥಶಾಸ್ತ್ರ ವಿಭಾಗದಲ್ಲಿ ಗುರುಪ್ರಸಾದ್ ಎಂಎಸ್, ಮೈಕ್ರೋಬಯಾಲಜಿ ವಿಭಾಗದಲ್ಲಿ ನವೀನ ಕೆ.ಸಿ. ಹಾಗೂ ಈರಮ್ಮ ಎನ್., ಬಯೋಕೆಮಿಸ್ಟ್ರಿ ವಿಭಾಗದಲ್ಲಿ ಜಾರುಬಂಡಿ ರಾಜಶೇಖರ್, ವಾಣಿಜ್ಯಶಾಸ್ತ್ರ ವಿಭಾಗದಲ್ಲಿ ರಾಜಪ್ಪ ಎಲ್ ಮತ್ತು ಪ್ರಸನ್ನ ಎಸ್.ಹೆಚ್. ಅವರಿಗೆ ಪಿಹೆಚ್ಡಿ ಪ್ರದಾನ ಮಾಡಲಾಯಿತು. ಗಣಿತಶಾಸ್ತ್ರ ವಿಭಾಗದಲ್ಲಿ ರೇಖಾ ಎಂ.ಬಿ., ಜೀವಶಾಸ್ತ್ರ ವಿಭಾಗದಲ್ಲಿ ವಿರುಪಾಕ್ಷ ಟಿ.ಆರ್., ರಸಾಯನಶಾಸ್ತ್ರ ವಿಭಾಗದಲ್ಲಿ ಮಧು ಹೆಚ್, ಸಾಮಾಜಿಕ ಸೇವೆ ವಿಭಗದಲ್ಲಿ ಪಾಪಯ್ಯ ಸಿ., ಹಾಗೂ ಶಿಕ್ಷಣ ವಿಭಾಗದಲ್ಲಿ ದೀಪಕ್ ಕೆ.ಎಸ್. ಅವರಿಗೆ ಎಂ.ಫಿಲ್ ಅನ್ನು ಇದೇ ಸಂದರ್ಭದಲ್ಲಿ ಪ್ರದಾನ ಮಾಡಲಾಯಿತು.
ಕಾರ್ಯಕ್ರಮದಲ್ಲಿ ವಿವಿ ಕುಲಪತಿ ಪ್ರೊ. ಎಸ್.ವಿ. ಹಲಸೆ, ಕುಲಸಚಿವರು (ಪರೀಕ್ಷಾಂಗ) ಪ್ರೊ. ಅನಿತಾ ಹೆಚ್.ಎಸ್., ಕುಲಸಚಿವರು (ಆಡಳಿತ) ಪ್ರೊ. ಗಾಯತ್ರಿ ದೇವರಾಜ್, ವಿಶ್ವವಿದ್ಯಾನಿಲಯದ ವಿವಿಧ ನಿಕಾಯಗಳ ಮುಖ್ಯಸ್ಥರು, ಸಿಂಡಿಕೇಟ್ ಸದಸ್ಯರು ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ಪ್ರಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನ : ಸರ್ವ ಕ್ಷೇತ್ರದಲ್ಲಿಯೂ ರಾರಾಜಿಸುವ ಶಿಖರ ಶಿರೋಮಣಿಗಳು
~ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ
ಆಗಸ್ಟ್ ದಿನಾಂಕ 8 ಮತ್ತು 9ನೇ ತಾರೀಕು,ಸಾಹಿತ್ಯದ ಬೃಹತ್ ಹಡಗೊಂದು ಶ್ರೀಮಂತನಗರಿ ದಾವಣಗೆರೆ. ಜ್ಞಾನದ ಗೂಡು ಸಾಹಿತ್ಯ ಕಲಾರಸಿಕರ ಬೀಡು. ವಿವಿಧ ಖಾದ್ಯಗಳ ರಸದೌತಣದ ನಾಡು,ಸರಸ್ವತಿ ನೆಲೆಸಿದ ನಾಡು ದಾವಣಗೆರೆ.
ಎಲ್ಲ ಕ್ಷೇತ್ರದಲ್ಲೂ ಮುಂಚೂಣಿಯಲ್ಲಿರುವ ಬಹು ತಾಳ್ಮೆಯ ಕುಟುಂಬವನ್ನು ನಿರ್ವಹಿಸಿಕೊಂಡು ಸಂಸಾರದ ನೌಕೆಯನ್ನು ಸಾಗಿಸುತ್ತಾ ಅದರ ಜೊತೆಗೆ ತಮ್ಮ ಮನೋರಂಜನೆ ಸಾಹಿತ್ಯ ಸಮಾಜ ಜ್ಞಾನ ವಿಜ್ಞಾನಗಳ ಸಕಲ ಕಲಾವಿದ್ಯೆಗಳಲ್ಲಿ ತೊಡಗಿಸಿಕೊಂಡಿರುವ ನಮ್ಮೆಲ್ಲರ ಮಹಿಳೆಯರ ಪರವಾಗಿ ಈ ನಮ್ಮ ಕನ್ನಡ ಸಾಹಿತ್ಯ ಪರಿಷತ್ತು ಒಂದು ಅತ್ಯದ್ಭುತವಾದ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
ಕನ್ನಡ ಸಾಹಿತ್ಯ ಪರಿಷತ್ ಶ್ರೀ ಬಿ ವಾಮದೇವಪ್ಪ ತೊಗಲೇರಿ ಅಧ್ಯಕ್ಷರ ಸಮ್ಮುಖದಲ್ಲಿ ಈ ಮಹಿಳಾ ಸಾಹಿತ್ಯ ಸಮ್ಮೇಳನ ನಡೆಯುತ್ತಿದ್ದು . ಸಮ್ಮೇಳನದ ಅಧ್ಯಕ್ಷರು ಮಹಾಪೋಷಕರು ಡಾಕ್ಟರ್ ಪ್ರಭಾ ಮಲ್ಲಿಕಾರ್ಜುನ್, ಹಾಗೆಯೇ ಉದ್ಘಾಟಕರಾಗಿ ಮಹಿಳಾ ಆಯೋಗದ ಡಾಕ್ಟರ್ ನಾಗಲಕ್ಷ್ಮಿ ಚೌದರಿ, ಪ್ರಧಾನ ಸಂಚಾಲಕರು ರಾಜ ಯೋಗಿನಿ ಬ್ರಹ್ಮಕುಮಾರಿ ನೀಲಾಜಿ ಅವರೆಲ್ಲರಿಗೂ ಸ್ವಾಗತವನ್ನು ಬಯಸುತ್ತಾ ,
ಸ್ವಾಗತ ಸಮಿತಿ, ಹಣಕಾಸು ಸಮಿತಿ ,ಸಾಹಿತ್ಯ ಸಮಿತಿ, ಆಹಾರ ಸಮಿತಿ ,ಸಾಂಸ್ಕೃತಿಕ ಸಮಿತಿ ,ವೇದಿಕೆ ಸಮಿತಿ, ಸ್ಮರಣ ಸಂಚಿಕೆ ಸಮಿತಿ, ಪ್ರಚಾರ ಸಮಿತಿ, ಶಿಸ್ತು ಸಮಿತಿ ಮೆರವಣಿಗೆ ಸಮಿತಿ,ಪುಸ್ತಕ ಮಳಿಗೆ ಸಮಿತಿ ,ಅತಿಥಿ ಸತ್ಕಾರ ಸಮಿತಿ, ಸ್ಪರ್ಧಾ ಸಮಿತಿ, ಎಲ್ಲದಕ್ಕೂ ಸಹಕಾರ ಕೊಟ್ಟಂತಹ ಶ್ರೀ ಸಮರ್ಥ್ ಶಾಮನೂರ್ ಮಲ್ಲಿಕಾರ್ಜುನ್ ಶಾಸಕರು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ, ಶ್ರೀ ಸೋಮೇಶ್ವರ ಸಮೂಹ ಸಂಸ್ಥೆಗಳು.
ಎಲ್ಲ ಕಾರ್ಯಕ್ರಮಗಳನ್ನು ಸುಸಜ್ಜಿತವಾಗಿ ನಡೆಸಿ ಕೊಡುತ್ತಿರುವ ಶ್ರೀಮತಿ ಸುಮತಿ ಜಯಪ್ಪ, ಶ್ರೀಮತಿ ಯಶಾ ದಿನೇಶ್ ,ಶ್ರೀಮತಿ ವೀಣಾ ಕೃಷ್ಣಮೂರ್ತಿ , ಶ್ರೀಮತಿ ಸತ್ಯಭಾಮ ಮಂಜುನಾಥ್, ಶ್ರೀಮತಿ ಮಲ್ಲಮ್ಮ ಎಂ ಎಸ್ ,ಶ್ರೀಮತಿ ನೀಲಗುಂದ ಜಯಮ್ಮ, ಶ್ರೀಮತಿ ಜಯಲಕ್ಷ್ಮಿ ಮಹೇಶ್, ಶ್ರೀಮತಿ ಪ್ರೇಮ ಸೋಮಶೇಖರ್ ಹೇಮ ಗಣೇಶ್ ಶೇಟ್, ಸುನಿತಾ ಪ್ರಕಾಶ್, ವರದಿಗಾರರಾದ ಭಾರತಿ ಎಚ್ ,ಹಾಗೆ ಎ ಬಿ ರುದ್ರಮ್ಮ, ಆಮಂತ್ರಣ ಪತ್ರಿಕೆ ಎಲ್ಲಾ ಗೆಳತಿಯರು ಇವರೊೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕೊಡುತ್ತಿರುವ ಎಲ್ಲ ಪ್ರತಿಭೆಗಳಿಗೂ ಹಾಗೂ ಕವಿಗೋಷ್ಠಿ ಕವಿತೆಗಳನ್ನು ವಾಚಿಸುವವರೆಗೂ ಹಾಗೆಯೇ ಸಾಹಿತ್ಯ ರತ್ನ ಪ್ರಶಸ್ತಿ ಪ್ರಧಾನ, ಪಡೆಯುತ್ತಿರುವ ಎಲ್ಲ ಸಹೋದರಿಯರಿಗೂ ಅಭಿನಂದನೆಗಳು ಹಾಗೆ ಎಲ್ಲ ಮಹಿಳಾ ಮಣಿಗಳ ಆಗಮನಕ್ಕೆ ಶುಭವನ್ನು ಕೋರುತ್ತಿರುವ ಶ್ರೀಮತಿ ವೀಣಾ ಮಹಂತೇಶ್ ಬಿ ಎಮ್ ದಾವಣಗೆರೆ.
ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ.

ದಿನದ ಸುದ್ದಿ
ನಾನೇ ಮುಖ್ಯಮಂತ್ರಿ ಇದ್ದಂತೆ : ಶಾಸಕ ಶಿವಗಂಗಾ ಬಸವರಾಜ್
ಸುದ್ದಿದಿನ,ದಾವಣಗೆರೆ: “ತಮ್ಮ ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ತಾವು ಮುಖ್ಯಮಂತ್ರಿಯಂತೆ ಜವಾಬ್ದಾರಿಯಿಂದ ಕೆಲಸ ಮಾಡುತ್ತಿದ್ದೇನೆ” ಎಂದು ಶಾಸಕ ಶಿವಗಂಗಾ ಬಸವರಾಜ್ ಹೇಳಿದರು.
ದಾವಣಗೆರೆಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜ್ ಅವರು, ನಾನು ಡಿ.ಕೆ ಶಿವಕುಮಾರ್ ಅವರ ಮನೆಮಗ, ಶಿವನ ಮುಂದೆ ಇರುವ ಬಸವ ನಾನು. ನಾನೇ ಮುಖ್ಯಮಂತ್ರಿ ಇದ್ದಂತೆ, ಮನೆ ಮಗನಿಗೆ ಯಾವಾಗಲೂ ಅವರ ಆಶೀರ್ವಾದ ಇದ್ದೇ ಇರುತ್ತದೆ ಎಂದಿದ್ದಾರೆ.
ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ಹಾಗೂ ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರು ತಮ್ಮ ಮೇಲೆ ಇಟ್ಟಿರುವ ವಿಶ್ವಾಸಕ್ಕೆ ತಕ್ಕಂತೆ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ತಿಳಿಸಿದರು.
“ನಾನು ಮುಖ್ಯಮಂತ್ರಿ ಅಲ್ಲ. ಆದರೆ ನನ್ನ ಕ್ಷೇತ್ರದ ಅಭಿವೃದ್ಧಿ ವಿಚಾರ ಬಂದಾಗ ಮುಖ್ಯಮಂತ್ರಿಯಂತೆ ಜವಾಬ್ದಾರಿ ಹೊತ್ತು ಕೆಲಸ ಮಾಡುತ್ತಿದ್ದೇನೆ. ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುವುದು ನನ್ನ ಮೊದಲ ಕರ್ತವ್ಯವಾಗಿದೆ. ರಸ್ತೆ, ಕುಡಿಯುವ ನೀರು, ಶಿಕ್ಷಣ, ಆರೋಗ್ಯ ಹಾಗೂ ಮೂಲಸೌಕರ್ಯಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದೆ,” ಎಂದು ಅವರು ಹೇಳಿದರು.
ಕ್ಷೇತ್ರದಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳು ಈಗಾಗಲೇ ಪೂರ್ಣಗೊಂಡಿದ್ದು, ಇನ್ನೂ ಅನೇಕ ಯೋಜನೆಗಳು ಪ್ರಗತಿಯಲ್ಲಿವೆ ಎಂದು ತಿಳಿಸಿದ ಅವರು, ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ನಿರಂತರ ಸಮನ್ವಯ ಸಾಧಿಸಿ ಜನರ ಸಮಸ್ಯೆಗಳಿಗೆ ಪರಿಹಾರ ಒದಗಿಸಲಾಗುತ್ತಿದೆ ಎಂದರು.
“ಜನಪ್ರತಿನಿಧಿಯಾಗಿ ಚುನಾಯಿತರಾದ ಬಳಿಕ ಕ್ಷೇತ್ರದ ಪ್ರತಿಯೊಂದು ಹಳ್ಳಿಗೂ ಭೇಟಿ ನೀಡಿ ಅಲ್ಲಿನ ಜನರ ಸಮಸ್ಯೆಗಳನ್ನು ಆಲಿಸಿದ್ದೇನೆ. ಗ್ರಾಮಗಳ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಅಗತ್ಯ ಅನುದಾನ ತರುವ ಪ್ರಯತ್ನ ಮಾಡಲಾಗಿದೆ. ಕುಡಿಯುವ ನೀರಿನ ಯೋಜನೆಗಳು, ರಸ್ತೆ ಅಭಿವೃದ್ಧಿ, ಶಾಲೆಗಳ ಮೂಲಸೌಕರ್ಯ ಸುಧಾರಣೆ ಸೇರಿದಂತೆ ಹಲವು ಕಾಮಗಾರಿಗಳಿಗೆ ವೇಗ ನೀಡಲಾಗಿದೆ,” ಎಂದು ಹೇಳಿದರು.
ಕ್ಷೇತ್ರದ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಕೈಗಾರಿಕೆಗಳನ್ನು ಆಕರ್ಷಿಸುವ ಪ್ರಯತ್ನ ನಡೆಯುತ್ತಿದೆ. ಕೃಷಿ ಕ್ಷೇತ್ರಕ್ಕೆ ಅಗತ್ಯವಾದ ನೀರಾವರಿ ಹಾಗೂ ರೈತರಿಗೆ ಅನುಕೂಲಕರ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.
ಸರ್ಕಾರದ ಅಭಿವೃದ್ಧಿ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಯಾವುದೇ ಅರ್ಹ ವ್ಯಕ್ತಿ ಯೋಜನೆಯಿಂದ ವಂಚಿತರಾಗಬಾರದು ಎಂಬುದು ತಮ್ಮ ಉದ್ದೇಶವಾಗಿದೆ ಎಂದು ಶಾಸಕರು ತಿಳಿಸಿದರು.
ವಿರೋಧ ಪಕ್ಷಗಳ ಟೀಕೆ ಕುರಿತು ಪ್ರತಿಕ್ರಿಯಿಸಿದ ಅವರು, “ಟೀಕೆಗಳು ಪ್ರಜಾಪ್ರಭುತ್ವದ ಭಾಗ. ಆದರೆ ಅಭಿವೃದ್ಧಿಯೇ ನಮ್ಮ ಉತ್ತರ. ಜನರ ಸಮಸ್ಯೆಗಳಿಗೆ ಪರಿಹಾರ ನೀಡುವುದು ಹಾಗೂ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ರೂಪಿಸುವುದೇ ನಮ್ಮ ಗುರಿಯಾಗಿದೆ,” ಎಂದರು.
ಕ್ಷೇತ್ರದ ಜನರು ಅಭಿವೃದ್ಧಿಗೆ ಸಹಕಾರ ನೀಡುತ್ತಿರುವುದಕ್ಕೆ ಕೃತಜ್ಞತೆ ಸಲ್ಲಿಸಿದ ಅವರು, ಸಾರ್ವಜನಿಕರು ಯಾವುದೇ ಸಮಸ್ಯೆಗಳಿದ್ದರೂ ನೇರವಾಗಿ ಸಂಪರ್ಕಿಸಬಹುದು. ಜನಸೇವೆಗಾಗಿ ತಮ್ಮ ಕಚೇರಿ ಸದಾ ತೆರೆದಿರುತ್ತದೆ ಎಂದು ಹೇಳಿದರು.
ಮುಂದಿನ ದಿನಗಳಲ್ಲಿ ಮತ್ತಷ್ಟು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು. ಶಿಕ್ಷಣ, ಆರೋಗ್ಯ, ಕುಡಿಯುವ ನೀರು, ರಸ್ತೆ, ಗ್ರಾಮೀಣ ಅಭಿವೃದ್ಧಿ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಪಕ್ಷದ ಮುಖಂಡರು, ಸ್ಥಳೀಯ ಜನಪ್ರತಿನಿಧಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ ವಿಶ್ವವಿದ್ಯಾಲಯ | ಗುಣಮಟ್ಟದ ಸಂಶೋಧನೆ ಶೈಕ್ಷಣಿಕ ಪ್ರಗತಿ – ಜಾಗತಿಕ ಮಾನ್ಯತೆಯ ಮೂಲಾಧಾರ : ಕುಲಪತಿ ಪ್ರೊ. ಬಿ. ಇ. ರಂಗಸ್ವಾಮಿ
ಸುದ್ದಿದಿನ,ದಾವಣಗೆರೆ: ದಾವಣಗೆರೆ ವಿಶ್ವವಿದ್ಯಾಲಯದ ಶಿವಗಂಗೋತ್ರಿಯ ನೂತನ ವಿಜ್ಞಾನ ಸಭಾಂಗಣದಲ್ಲಿ ಕಂಪ್ಯೂಟರ್ ಅಪ್ಲಿಕೇಷನ್ಸ್ (ಎಮ್.ಸಿ.ಎ) ಹಾಗೂ ಕಂಪ್ಯೂಟರ್ ಸೈನ್ಸ್ (ಎಮ್.ಎಸ್ಸಿ) ವಿಭಾಗಗಳ ಸಂಯುಕ್ತಾಶ್ರಯದಲ್ಲಿ “ಸಂಶೋಧನಾ ಸಮಸ್ಯೆಯನ್ನು ಗುರುತಿಸುವ ವಿವಿಧ ವಿಧಾನಗಳು, ಹೊಸ ಸಂಶೋಧನಾ ಕಲ್ಪನೆಗಳ ಸೃಷ್ಟಿ ಹಾಗೂ ಟೈಯರ್-1 ಸಂಶೋಧನಾ ಲೇಖನಗಳ ಬರಹದ ಪ್ರಮುಖ ಅಂಶಗಳು” ಎಂಬ ವಿಷಯದ ಕುರಿತು ಒಂದು ದಿನದ ರಾಷ್ಟ್ರೀಯ ಮಟ್ಟದ ಕಾರ್ಯಾಗಾರ ಯಶಸ್ವಿಯಾಗಿ ನಡೆಯಿತು.
ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ದಾವಣಗೆರೆ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಿ. ಇ. ರಂಗಸ್ವಾಮಿ, ಗುಣಮಟ್ಟದ ಸಂಶೋಧನೆಯೇ ವಿಶ್ವವಿದ್ಯಾಲಯಗಳ ಶೈಕ್ಷಣಿಕ ಪ್ರಗತಿ ಮತ್ತು ಜಾಗತಿಕ ಮಾನ್ಯತೆಯ ಮೂಲಾಧಾರವಾಗಿದೆ ಎಂದು ಹೇಳಿದರು.
ಸಂಶೋಧನೆ ಕೇವಲ ಪದವಿ ಪಡೆಯುವ ಪ್ರಕ್ರಿಯೆಯಾಗಬಾರದು, ಅದು ಸಮಾಜದ ಸಮಸ್ಯೆಗಳಿಗೆ ಪರಿಹಾರ ನೀಡುವ ದಿಕ್ಕಿನಲ್ಲಿ ಸಾಗಬೇಕು. ಅಂತರರಾಷ್ಟ್ರೀಯ ಮಟ್ಟದಲ್ಲಿ ಗುಣಮಟ್ಟದ ಪ್ರಕಟಣೆಗಳು ವಿಶ್ವವಿದ್ಯಾಲಯದ ಸಂಶೋಧನಾ ಸಾಮರ್ಥ್ಯವನ್ನು ಪ್ರತಿಬಿಂಬಿಸುತ್ತವೆ ಎಂದು ಅಭಿಪ್ರಾಯಪಟ್ಟರು.
ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಯು ಕೆ ಮಾಂಚೆಸ್ಟರ್ನ ‘ಯೂನಿವರ್ಸಿಟಿ ಆಫ್ ಸ್ಯಾಲ್ಫೋರ್ಡ್’ನ ಕಂಪ್ಯೂಟರ್ ಸೈನ್ಸ್ ಪ್ರಾಧ್ಯಾಪಕ ಡಾ. ಶಿವಕುಮಾರ ಪಿ. ಮಾತನಾಡಿ, ಸಂಶೋಧನಾ ಸಮಸ್ಯೆ ಗುರುತಿಸುವಿಕೆ, ಸಂಶೋಧನಾ ಅಂತರ (Research Gap) ಪತ್ತೆ, ಸಾಹಿತ್ಯ ಸಮೀಕ್ಷೆ, ಪ್ರಯೋಗಾತ್ಮಕ ವಿನ್ಯಾಸ (Experimental Design), ಟೈಯರ್-1 ಜರ್ನಲ್ ಲೇಖನ ಬರಹ, ಪ್ರಕಟಣಾ ನೈತಿಕತೆ ಹಾಗೂ ವಿಮರ್ಶಕರ ಅಭಿಪ್ರಾಯಗಳಿಗೆ ಪರಿಣಾಮಕಾರಿಯಾಗಿ ಪ್ರತಿಕ್ರಿಯಿಸುವ ವಿಧಾನಗಳ ಕುರಿತು ಸಮಗ್ರ ಮಾಹಿತಿ ನೀಡಿದರು.
“ಒಂದು ಉತ್ತಮ ಸಂಶೋಧನಾ ಲೇಖನದ ಯಶಸ್ಸು ಅದರ ಹೊಸತನ, ವೈಜ್ಞಾನಿಕ ವಿಧಾನ ಮತ್ತು ಸ್ಪಷ್ಟವಾದ ಪ್ರಸ್ತುತೀಕರಣದಲ್ಲಿ ಅಡಗಿದೆ. ಸಂಶೋಧಕರು ಗುಣಮಟ್ಟದ ಸಮಸ್ಯೆಗಳನ್ನು ಆಯ್ಕೆ ಮಾಡಿಕೊಂಡು ಅಂತರರಾಷ್ಟ್ರೀಯ ಮಟ್ಟದ ಪ್ರಕಟಣೆಗೆ ಸಿದ್ಧರಾಗಬೇಕು,” ಎಂದು ಅವರು ಕರೆ ನೀಡಿದರು.
ಕಾರ್ಯಾಗಾರದಲ್ಲಿ 250ಕ್ಕೂ ಹೆಚ್ಚು ಸಂಶೋಧನಾ ವಿದ್ಯಾರ್ಥಿಗಳು, ಸ್ನಾತಕೋತ್ತರ ವಿದ್ಯಾರ್ಥಿಗಳು ಹಾಗೂ ವಿವಿಧ ವಿಭಾಗಗಳ ಅಧ್ಯಾಪಕರು ಭಾಗವಹಿಸಿದ್ದರು. ಪೋಸ್ಟರ್ ಪ್ರಸೆಂಟೇಷನ್ಗಳು, ಸಂವಾದಾತ್ಮಕ ಚರ್ಚೆಗಳು ಮತ್ತು ಸಂಶೋಧನಾ ಲೇಖನ ಬರಹದ ಪ್ರಾಯೋಗಿಕ ಮಾರ್ಗದರ್ಶನ ಕಾರ್ಯಕ್ರಮದ ವಿಶೇಷ ಆಕರ್ಷಣೆಯಾಗಿತ್ತು. ಭವಿಷ್ಯದಲ್ಲೂ ಇಂತಹ ಕಾರ್ಯಾಗಾರಗಳ ಸರಣಿಯನ್ನು ಆಯೋಜಿಸಲು ವಿಶ್ವವಿದ್ಯಾಲಯ ನಿರ್ಧರಿಸಿದೆ. ಭಾಗವಹಿಸಿದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರಗಳನ್ನು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಕುಲಸಚಿವ ಶ್ರೀ ಎಸ್. ಬಿ. ಗಂಟಿ, ಪರೀಕ್ಷಾಂಗ ಕುಲಸಚಿವ ಡಾ. ಸಿ. ಕೆ. ರಮೇಶ್, ಡಾ. ಬಸವಣ್ಣ ಎಮ್. ಅಧ್ಯಕ್ಷರು, ಎಮ್.ಸಿ.ಎ ವಿಭಾಗ, ಡಾ. ಚಂದ್ರಕಾಂತ ಎನ್. ಅಧ್ಯಕ್ಷರು, ಕಂಪ್ಯೂಟರ್ ಸೈನ್ಸ್ ವಿಭಾಗ, ಹಣಕಾಸು ಅಧಿಕಾರಿ ಡಾ. ಆರ್. ಶಶಿಧರ್ ಹಾಗೂ ವಿವಿಧ ವಿಭಾಗಗಳ ಅಧ್ಯಕ್ಷರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂತರಂಗ4 days agoಪ್ರಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನ : ಸರ್ವ ಕ್ಷೇತ್ರದಲ್ಲಿಯೂ ರಾರಾಜಿಸುವ ಶಿಖರ ಶಿರೋಮಣಿಗಳು
-
ದಿನದ ಸುದ್ದಿ4 days agoನಾನೇ ಮುಖ್ಯಮಂತ್ರಿ ಇದ್ದಂತೆ : ಶಾಸಕ ಶಿವಗಂಗಾ ಬಸವರಾಜ್
-
ದಿನದ ಸುದ್ದಿ5 days agoದಾವಣಗೆರೆ ವಿಶ್ವವಿದ್ಯಾಲಯ | ಗುಣಮಟ್ಟದ ಸಂಶೋಧನೆ ಶೈಕ್ಷಣಿಕ ಪ್ರಗತಿ – ಜಾಗತಿಕ ಮಾನ್ಯತೆಯ ಮೂಲಾಧಾರ : ಕುಲಪತಿ ಪ್ರೊ. ಬಿ. ಇ. ರಂಗಸ್ವಾಮಿ

