ದಿನದ ಸುದ್ದಿ
ಅಂಬೇಡ್ಕರ್ ಚಿಂತನೆಗಳು ಮತ್ತು ಸಮಾಜವಾದ
- ಮ ಶ್ರೀ ಮುರಳಿ ಕೃಷ್ಣ, ಬೆಂಗಳೂರು
ಅಂಬೇಡ್ಕರ್, ಮಾರ್ಕ್ಸ್ವಾದ ಹಾಗೂ ಮಾರ್ಕ್ಸ್ವಾದಿಗಳ ಬಗೆಗೆ ಭಿನ್ನಾಭಿಪ್ರಾಯಗಳನ್ನು ಹೊಂದಿದ್ದರು ಎಂಬುದು ದಿಟ. ಅವರು ತಮ್ಮ ‘ಬುದ್ಧ ಅಥವಾ ಮಾರ್ಕ್ಸ್’ ಕೃತಿಯಲ್ಲಿ ಮೇಲೆ ಪುಸ್ತಾಪಿಸಿರುವ ಭಿನ್ನಾಭಿಪ್ರಾಯಗಳ ಬಗೆಗೆ ವಿಶದವಾಗಿ ಚರ್ಚಿಸಿದ್ದಾರೆ. ಸಂಘಟನಾತ್ಮಕವಾಗಿಯೂ ಅವರಿಗೆ ಭಾರತ ಕಮ್ಯುನಿಸ್ಟ್ ಪಕ್ಷ ಕುರಿತು ಭಿನ್ನಮತವಿತ್ತು. ಇದರ ಹಿನ್ನೆಲೆಯಲ್ಲೇ, ಅವರು 1936ರಲ್ಲಿ ಕಾರ್ಮಿಕ ಪಕ್ಷವನ್ನು ಸ್ಥಾಪಿಸಿದರು. ಆದರೆ ಈ ಎರಡೂ ಪಕ್ಷಗಳ ಗುರಿ ಒಂದೇ ಆಗಿತ್ತು.
ಅದೇ ಭಾರತದಲ್ಲಿ ಸಮಾಜವಾದಿ ವ್ಯವಸ್ಥೆಯ ಸ್ಥಾಪನೆ. ಅವರು 1938ರ ಮೇ 15ರಂದು ಮಹಾರಾಷ್ಟ್ರದ ದೇವರಖ ಎಂಬ ಸ್ಥಳದಲ್ಲಿ ರೈತರನ್ನು ಉದ್ದೇಶಿಸಿ ಮಾತನಾಡುತ್ತ, ” ನಮ್ಮ ದೇಶದಲ್ಲಿ ರೈತರು ಮತ್ತು ಕಾರ್ಮಿಕರೇ ಬಹುಸಂಖ್ಯಾತರು. ಈ ವರ್ಗದವರೇ ಆಡಳಿತ ವರ್ಗವಾಗಿ ಹೊರಹೊಮ್ಮಬೇಕು….” ಹೀಗಾಗಿ ಈ ಎರಡೂ ಪಕ್ಷಗಳ ನಡುವೆ ತಾತ್ವಿಕ ಭಿನ್ನಾಭಿಪ್ರಾಯಗಳು ಇರಲಿಲ್ಲ. ಆದರೆ ಮಾರ್ಗ ಮತ್ತು ಕಾರ್ಯತಂತ್ರಗಳ ವಿಷಯಗಳಲ್ಲಿ ಭಿನ್ನಾಭಿಪ್ರಾಯಗಳಿದ್ದವು.
ಅವರು ತಮ್ಮ ಅನೇಕ ಬರಹಗಳಲ್ಲಿ ಸ್ವಾತಂತ್ರ್ಯ ಮತ್ತು ಸಮಾನತೆ ಎರಡೂ ಸಾಂವಿಧಾನಿಕವಾಗಿ ನಮ್ಮ ಮೂಲಭೂತ ಹಕ್ಕಾಗಬೇಕು ಎಂಬ ವಿಷಯವನ್ನು ಮಂಡಿಸುತ್ತ ಇದಕ್ಕೆ ಸಂಬಂಧಿಸಿದ ಅನೇಕ ವಿಚಾರಗಳ ಬಗೆಗೆ ಬೆಳಕನ್ನು ಚೆಲ್ಲಿದ್ದಾರೆ. ಭೂ ಸುಧಾರಣೆ ಕುರಿತು ಸಂಸತ್ತಿನಲ್ಲಿ ಮಾತನಾಡುತ್ತ ನಮ್ಮ ದೇಶದಲ್ಲಿ ಸಮಾನತೆಯು ನೆಲಸಬೇಕಾದರೇ ರಷ್ಯಾದಲ್ಲಿ ಜರುಗಿದಂತೆ ಭೂಮಿಯ ರಾಷ್ಟ್ರೀಕರಣವಾಗಬೇಕು ಎಂದು ಬಲವಾಗಿ ತಮ್ಮ ವಾದವನ್ನು ಮುಂದಿಟ್ಟಿದ್ದರು.
ಅಂಬೇಡ್ಕರ್ ಅವರು ಒಮ್ಮೆ ಫ್ರೆಂಚ್ ಮತ್ತು ರಷ್ಯಾದಲ್ಲಿ ಜರುಗಿದ ಸಮಾಜವಾದಿ ಕ್ರಾಂತಿಗಳನ್ನು ಒಂದು ಸಿಹಿಖಾದ್ಯದ ಉದಾಹರಣೆಯ ಮೂಲಕ ವಿವರಿಸಿದ್ದರು. ” ಫ್ರೆಂಚ್ ಕ್ರಾಂತಿ ಹೋಳಿಗೆಯ ಹೊರಗಡೆಯ ಪದರಾದರೇ ರಷ್ಯಾದ ಕ್ರಾಂತಿ ಅದರ ಹೂರಣದಂತೆ, ಹೋಳಿಗೆಯ ರುಚಿಗೆ ಎರಡೂ ತುಂಬ ಮುಖ್ಯ. ಒಂದರ ಗೈರುಹಾಜರಿ ಇಡೀ ಹೋಳಿಗೆಯ ರುಚಿಗೆ ಧಕ್ಕೆಯಾಗುತ್ತದೆ.” ಎಂಬ ಮಾತುಗಳನ್ನು ಆಡಿದ್ದರು.
1848ರಲ್ಲಿ ಕಾರ್ಲ್ ಮಾರ್ಕ್ಸ್ ಮತ್ತು ಫುಡ್ರಿಕ್ ಏಂಗಲ್ಸ್ ‘ ಕಮ್ಯುನಿಸ್ಟ್ ಪುಣಾಳಿಕ ‘ (‘ ದಿ ಕಮ್ಯುನಿಸ್ಟ್ ಮ್ಯಾನಿಫೆಸ್ಕೊ) ಯನ್ನು ಪ್ರಕಟಿಸಿದರು. ಇದರಲ್ಲಿ ಒಂದು ಸಂಘಟಿತ ಶ್ರಮಜೀವಿ ವರ್ಗ ಆಳುವ ವರ್ಗವಾಗಿ ಪರಿವರ್ತನೆಯಾಗುವುದರ ನಿಟ್ಟಿನಲ್ಲಿ ಕ್ರಮಗಳನ್ನು ತಿಳಿಸಲಾಗಿದೆ. ಅಂಬೇಡ್ಕರ್ 1946ರಲ್ಲಿ ಘಟನಾ ಸಭೆಗೆ ಸಂವಿಧಾನದ ಕರಡನ್ನು ಸಲ್ಲಿಸಿದರು. ಇದನ್ನು ಅಖಿಲ ಭಾರತ ಪರಿಶಿಷ್ಟ ಜಾತಿಗಳ ಒಕ್ಕೂಟದ ಪರವಾಗಿ ನೀಡಲಾಯಿತು. ಮೇಲೆ ಪ್ರಸ್ತಾಪಿಸಿರುವ ಎರಡೂ ದಸ್ತಾವೇಜುಗಳ ನಡುವಿನ ಅನೇಕ ಅಂಶಗಳಲ್ಲಿ ಸಾಮ್ಯತೆಯಿದೆ.
ಕಾರ್ಲ್ ಮಾರ್ಕ್ಸ್ ಮತ್ತು ಫುಡ್ರಿಕ್ ಏಂಗೆಲ್ಸ್’ ಪತಿಪಾದಿಸಿದ್ದನ್ನು ‘ಸಮಾಜವಾದಿ ಪ್ರಭುತ್ವ’ ಎಂದು ಬಣ್ಣಿಸಬಹುದು. ಅಂಬೇಡ್ಕರ್ ಮಂಡಿಸಿದ್ದು ಪ್ರಭುತ್ವ ಸಮಾಜವಾದಿ’ ಆರ್ಥಿಕ ನೀತಿ ಇದನ್ನು ಅವರು 1947ರಲ್ಲಿ ಬರೆದ ಪಭುತ್ವ ಮತ್ತು ಅಲ್ಪಸಂಖ್ಯಾತರು’ ಎಂಬ ಪುಸ್ತಕದಲ್ಲಿ ಈ ನೀತಿಯ ಉಲ್ಲೇಖವಿದೆ.
ಫೇಬಿಯನ್ ಸಮಾಜವಾದಿಯಾಗಿದ್ದ (ಜವಹರ್ ಲಾಲ್ ನೆಹರೂರವರನ್ನೂ ಹೀಗೆಂದೇ ಕರೆಯಲಾಗುತ್ತದೆ) ಅಂಬೇಡ್ಕರ್, ಕೈಗಾರಿಕೆ, ಶಿಕ್ಷಣ, ಕೃಷಿ, ಆರೋಗ್ಯ ಮುಂತಾದ ಕ್ಷೇತ್ರಗಳಲ್ಲಿ ಸರ್ಕಾರದ ಪಾತ್ರವೇ ಶಿಖರಪ್ರಾಯವಾಗಿರಬೇಕೆಂದು ಅಭಿಪ್ರಾಯಪಟ್ಟಿದ್ದರು. ಪುಸ್ತುತ ಕಾಲಘಟ್ಟದಲ್ಲಿ ಆಳುವ ಸರ್ಕಾರಗಳು ಖಾಸಗೀಕರಣಕ್ಕೆ ಮಣೆಯನ್ನು ಹಾಕುತ್ತಿವೆ. ನಮ್ಮ ದೇಶದಲ್ಲಿರುವ ಸಾರ್ವಜನಿಕ ಕ್ಷೇತ್ರದ, ಜನತೆಯ ಹಣದಿಂದ ರಚಿಸಿರುವ ಆಸ್ತಿಗಳನ್ನು ಖಾಸಗಿಶಕ್ತಿಗಳಿಗೆ ಎಗ್ಗಿಲ್ಲದೆ ಮಾರಾಟ ಮಾಡಲಾಗುತ್ತಿದೆ. ಹೀಗೆ, ಅಂಬೇಡ್ಕರ್ ಪ್ರತಿಪಾದಿಸಿದ ಪ್ರಭುತ್ವ ಸಮಾಜವಾದಿ,ಆರ್ಥಿಕ ನೀತಿ ಈಗ ಮೂಲೆಗುಂಪಾಗಿದೆ.
ಸ್ವಾತಂತ್ರವನ್ನು ಪಡೆದ ಮೊದಲ ವರ್ಷಗಳಲ್ಲಿ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಒಂದು ಮನನಯೋಗ್ಯ ಹೇಳಿಕೆಯನ್ನು ನೀಡಿದ್ದರು. “1947ರಲ್ಲಿ ಭಾರತ ರಾಜಕೀಯ ಪುಜಾಪ್ರಭುತ್ವವನ್ನು ಗಳಿಸಿತು. ಆದರೆ ಸಾಮಾಜಿಕ ಮತ್ತು ಆರ್ಥಿಕ ಪಜಾಪಭುತ್ವವನ್ನು ಪಡೆದಾಗಲೇ ರಾಜಕೀಯ ಪ್ರಜಾಪ್ರಭುತ್ವಕ್ಕೆ ಅರ್ಥ ಬರುತ್ತದೆ.”
ಇಂದು ನಮ್ಮ ದೇಶಾದ್ಯಂತ 131ನೇ ಅಂಬೇಡ್ಕರ್ ಜಯಂತಿಯನ್ನು ನಾನಾ ರೀತಿಗಳಲ್ಲಿ ಆಚರಿಸಲಾಗುತ್ತಿದೆ. ಪುಸ್ತುತ, ನಮ್ಮಲ್ಲಿ ಫ್ಯಾಸಿಸ್ಟ್ ಶಕ್ತಿಗಳು ಅಟ್ಟಹಾಸದಿಂದ ಮುನ್ನಡೆಯುತ್ತಿವೆ. ಇವುಗಳಿಗೆ ಎದುರಾಗಿ ಪ್ರತಿರೋಧದ ನಡೆಗಳೂ ಇವೆ. ಆದರೆ ಅವು ಒಗ್ಗಟ್ಟಿನ ದನಿಗಳಾಗಿಲ್ಲ; ಹಜ್ಜೆಗಳಾಗಿಲ್ಲ. ಅಂಬೇಡ್ಕರ್ ಆಶಯದ ಸಮಾಜವಾದಿ ಸಮಾಜವನ್ನು ಸಾಕಾರಗೊಳಿಸುವುದು ಸಮಸಮಾಜ ವ್ಯವಸ್ಥೆಯಲ್ಲಿ ನಂಬಿಕೆ ಮತ್ತು ಬದ್ಧತೆಯಿರುವ ಎಲ್ಲ ಜನಪರ ಸಂಘಟನೆಗಳ ಆದ್ಯತೆಯಾಗಬೇಕು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ
ಸುದ್ದಿದಿನ,ದಾವಣಗೆರೆ: ದಾವಣಗೆರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಆಧುನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಜೂನ್ 15 ಮತ್ತು 16 ರಂದು ಆಯೋಜಿಸಲಾಗಿದೆ.
ಆಸಕ್ತ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್ ಪೋರ್ಟ್ ಸೈಜ್ ಪೋಟೋ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿಯೊಂದಿಗೆ ಹಾಜರಾಗಬೇಕು. ತರಬೇತಿ ಕಾರ್ಯಕ್ರಮಕ್ಕೆ ಯಾವುದೇ ಪ್ರೋತ್ಸಾಹಧನ ಮತ್ತು ಭತ್ಯೆಗಳನ್ನು ನೀಡಲಾಗುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಪಶುಪಾಲನಾ ಮತ್ತು ಪಶು ವೈದ್ಯಕೀಯ ತರಬೇತಿ ಕೇಂದ್ರ, ದಾವಣಗೆರೆ ಕಚೇರಿ ದೂ.ಸಂ: 08192-233787 ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಪಶುವೈದ್ಯಾಧಿಕಾರಿಗಳು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ವಸತಿ ಯೋಜನೆಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ: ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದ ವಸತಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ಜೂನ್ 12 ಕೊನೆಯ ದಿನವಾಗಿರುತ್ತದೆ.
ಈ ಯೋಜನೆಯಡಿ ಸೌಲಭ್ಯ ಒದಗಿಸಲು ನಿಗಧಿತ ಅರ್ಜಿ ನಮೂನೆಯಲ್ಲಿ ಅವಶ್ಯಕ ದಾಖಲಾತಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು ಗ್ರೇಡ್-1ರವರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಚನ್ನಗಿರಿ ಕಚೇರಿಯನ್ನು ಸಂಪರ್ಕಿಸಬಹುದೆಂದು ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
10 ಮುಖ್ಯ ಅಂಶಗಳನ್ನು ಪಾಲಿಸಿ ; ಸಕ್ಕರೆ ಕಾಯಿಲೆಗೆ ಗುಡ್ ಬೈ ಹೇಳಿ..
1. ಸಮತೋಲಿತ ಆಹಾರ (Balanced Diet): ನಿಮ್ಮ ಆಹಾರದಲ್ಲಿ ಹೆಚ್ಚು ನಾರಿನಂಶವಿರುವ (fiber) ತರಕಾರಿ, ಸೊಪ್ಪು, ಮೊಳಕೆ ಬರಿಸಿದ ಕಾಳುಗಳು ಮತ್ತು ಸಿರಿಧಾನ್ಯಗಳನ್ನು ಬಳಸಿ. ಕಾರ್ಬೋಹೈಡ್ರೇಟ್ ಹಾಗೂ ಎಣ್ಣೆಯಂಶವಿರುವ ಆಹಾರವನ್ನು ಕಡಿಮೆ ಮಾಡಿ.
2. ಸಿಹಿ ಪದಾರ್ಥಗಳ ನಿಯಂತ್ರಣ (Avoid Sweets): ಸಕ್ಕರೆ, ಬೆಲ್ಲ, ಬೇಕರಿ ತಿಂಡಿಗಳು, ಐಸ್ಕ್ರೀಮ್ ಮತ್ತು ಕೃತಕ ಸಕ್ಕರೆ ಇರುವ ತಂಪು ಪಾನೀಯಗಳ ಬಳಕೆಯನ್ನು ಸಂಪೂರ್ಣವಾಗಿ ಕಡಿಮೆ ಮಾಡಿ ಅಥವಾ ದೂರವಿಡಿ.
3. ದಿನನಿತ್ಯದ ವ್ಯಾಯಾಮ (Regular Exercise): ಪ್ರತಿದಿನ ಕನಿಷ್ಠ 30 ರಿಂದ 45 ನಿಮಿಷಗಳ ಕಾಲ ವೇಗದ ನಡಿಗೆ (brisk walking), ಸೈಕ್ಲಿಂಗ್, ಈಜು ಅಥವಾ ಯೋಗ ಮಾಡುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಣಕ್ಕೆ ಬರುತ್ತದೆ.
4. ದೇಹದ ತೂಕದ ನಿರ್ವಹಣೆ (Weight Management): ಅತಿಯಾದ ದೇಹದ ತೂಕವು ಇನ್ಸುಲಿನ್ ಕಾರ್ಯಕ್ಷಮತೆಯನ್ನು ಕುಂಠಿತಗೊಳಿಸುತ್ತದೆ. ಆದ್ದರಿಂದ ತೂಕವನ್ನು ಆರೋಗ್ಯಕರ ಮಿತಿಯಲ್ಲಿ ಇಟ್ಟುಕೊಳ್ಳುವುದು ಅತ್ಯಗತ್ಯ.
5. ನಿಯಮಿತ ರಕ್ತದ ಪರೀಕ್ಷೆ (Regular Blood Sugar Check): ವೈದ್ಯರ ಸಲಹೆಯಂತೆ ಕಾಲಕಾಲಕ್ಕೆ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು (Fasting ಮತ್ತು Post Prandial) ಹಾಗೂ ಮೂರು ತಿಂಗಳ ಸರಾಸರಿ ತಿಳಿಸುವ HbA1c ಪರೀಕ್ಷೆಯನ್ನು ಮಾಡಿಸಿಕೊಳ್ಳಿ.
6. ಸಮಯಕ್ಕೆ ಸರಿಯಾಗಿ ಔಷಧಿ ಸೇವನೆ (Timely Medication): ವೈದ್ಯರು ಸೂಚಿಸಿದ ಮಾತ್ರೆಗಳನ್ನು ಅಥವಾ ಇನ್ಸುಲಿನ್ ಅನ್ನು ನಿಗದಿತ ಸಮಯಕ್ಕೆ ತೆಗೆದುಕೊಳ್ಳಿ. ಸ್ವಂತ ನಿರ್ಧಾರದಿಂದ ಔಷಧಿಯನ್ನು ನಿಲ್ಲಿಸಬೇಡಿ.
7. ಮಾನಸಿಕ ಒತ್ತಡದ ನಿರ್ವಹಣೆ (Stress Management): ಅತಿಯಾದ ಮಾನಸಿಕ ಒತ್ತಡವು ದೇಹದಲ್ಲಿ ಸಕ್ಕರೆ ಮಟ್ಟವನ್ನು ಹೆಚ್ಚಿಸುವ ಹಾರ್ಮೋನ್ಗಳನ್ನು ಬಿಡುಗಡೆ ಮಾಡುತ್ತದೆ. ಒತ್ತಡ ಕಡಿಮೆ ಮಾಡಿಕೊಳ್ಳಲು ಧ್ಯಾನ (Meditation) ಅಥವಾ ಹವ್ಯಾಸಗಳಲ್ಲಿ ತೊಡಗಿಕೊಳ್ಳಿ.
8. ಪೂರಕ ನೀರು ಕುಡಿಯುವುದು (Stay Hydrated): ದಿನವಿಡೀ ಸಾಕಷ್ಟು ಪ್ರಮಾಣದಲ್ಲಿ ನೀರು ಕುಡಿಯಿರಿ. ಇದು ದೇಹದಲ್ಲಿರುವ ಹೆಚ್ಚುವರಿ ಗ್ಲೂಕೋಸ್ ಮೂತ್ರದ ಮೂಲಕ ಹೊರಹೋಗಲು ಸಹಾಯ ಮಾಡುತ್ತದೆ.
9. ಉತ್ತಮ ನಿದ್ರೆ (Good Sleep): ಪ್ರತಿದಿನ ರಾತ್ರಿ 7 ರಿಂದ 8 ಗಂಟೆಗಳ ಕಾಲ ಶಾಂತಿಯುತವಾದ ನಿದ್ರೆ ಮಾಡುವುದು ದೇಹದ ಚಯಾಪಚಯ ಕ್ರಿಯೆ (Metabolism) ಮತ್ತು ಹಾರ್ಮೋನ್ಗಳ ಸಮತೋಲನಕ್ಕೆ ಬಹಳ ಮುಖ್ಯ.
10. ದುರಭ್ಯಾಸಗಳಿಂದ ದೂರವಿರಿ (Avoid Smoking and Alcohol): ಧೂಮಪಾನ ಮತ್ತು ಮದ್ಯಪಾನವು ಸಕ್ಕರೆ ಕಾಯಿಲೆಯ ತೊಂದರೆಗಳನ್ನು (ಹೃದಯ ಮತ್ತು ನರಗಳ ಸಮಸ್ಯೆ) ಮತ್ತಷ್ಟು ಹೆಚ್ಚು ಮಾಡುವುದರಿಂದ ಇವುಗಳಿಂದ ದೂರವಿರುವುದು ಒಳ್ಳೆಯದು.
ಗಮನಿಸಿ: ಈ ಮೇಲಿನ ಮಾಹಿತಿ ರೋಗದ ನಿರ್ವಹಣೆಗೆ ಸಾಮಾನ್ಯ ಮಾರ್ಗದರ್ಶನವಾಗಿದೆ. ಪ್ರತಿಯೊಬ್ಬರ ದೇಹ ಪ್ರಕೃತಿ ವಿಭಿನ್ನವಾಗಿರುವುದರಿಂದ, ನಿಮ್ಮ ವೈದ್ಯರ ವೈಯಕ್ತಿಕ ಸಲಹೆ ಮತ್ತು ಚಿಕಿತ್ಸೆಯ ಕ್ರಮವೇ ಅಂತಿಮ ಹಾಗೂ ಸುರಕ್ಷಿತ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ7 days agoಹೊಳಲ್ಕೆರೆ | ಸ್ಪೀಚ್ ಸಂಸ್ಥೆ ಸಂಸ್ಥಾಪಕ ಹೆಚ್.ರಾಮಚಂದ್ರಪ್ಪ ನಿಧನ ; ಇಂದು ಅಂತ್ಯಕ್ರಿಯೆ
-
ಅಂಕಣ7 days agoಕವಿತೆ | ದೇವರ ಹೂವು
-
ದಿನದ ಸುದ್ದಿ5 days ago10 ಮುಖ್ಯ ಅಂಶಗಳನ್ನು ಪಾಲಿಸಿ ; ಸಕ್ಕರೆ ಕಾಯಿಲೆಗೆ ಗುಡ್ ಬೈ ಹೇಳಿ..
-
ದಿನದ ಸುದ್ದಿ5 days agoರಾಷ್ಟ್ರೀಯ ಖಾದ್ಯ ತೈಲ ಅಭಿಯಾನ – ಎಣ್ಣೆಕಾಳು ಕಾರ್ಯಕ್ರಮದಡಿ ಸೌಲಭ್ಯ: ಅರ್ಜಿ ಆಹ್ವಾನ
-
ದಿನದ ಸುದ್ದಿ4 days agoವಸತಿ ಯೋಜನೆಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ5 days agoಉಚಿತ ಕೋಳಿ ಸಾಕಾಣಿಕೆ ತರಬೇತಿ: ಅರ್ಜಿ ಆಹ್ವಾನ
-
ದಿನದ ಸುದ್ದಿ5 days agoಕೃಷಿ ಪಂಡಿತ ಹಾಗೂ ಆತ್ಮ ಶ್ರೇಷ್ಠ ಕೃಷಿಕ ಪ್ರಶಸ್ತಿ: ಅರ್ಜಿ ಆಹ್ವಾನ
-
ದಿನದ ಸುದ್ದಿ24 hours agoದಾವಣಗೆರೆ | ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ

