ದಿನದ ಸುದ್ದಿ
ಜಗದ ಗುರು ಡಾ.ಬಿ.ಆರ್. ಅಂಬೇಡ್ಕರ್..!
- ಸನಾವುಲ್ಲಾ ನವಿಲೇಹಾಳು
ಶಿಕ್ಷಣವು ತನ್ನೆದುರಿಗೆ ತೆರದ ಅವಕಾಶಗಳ ಸ್ವರ್ಣಚಿತ್ರ ಎಂದು ಮನಗಂಡಿದ್ದ ಡಾ.ಬಿ.ಆರ್. ಅಂಬೇಡ್ಕರ್ ಅವರ131 ನೆ ಜನ್ಮದಿನದ ಈ ಸಂದರ್ಭದಲ್ಲಿ, ನಮ್ಮ ದೇಶ ಎತ್ತಸಾಗುತ್ತಿದೆ? ಸಂವಿಧಾನ ನಮಗೆ ಎಷ್ಟರ ಮಟ್ಟಿಗೆ ತಿಳಿದಿದೆ ಎಂದು ನಮ್ಮನ್ನು ನಾವೆ ಪ್ರಶ್ನೆ ಮಾಡಿಕೊಳ್ಳಬೇಕಾಗಿದೆ.
ಈಗ ನನ್ನ ಕಣ್ಣೆದರಿಗೆ ಇರುವ ಬಹುಪಾಲು ಜನರು ಸ್ವತಂತ್ರ ನಂತರ ಅಥವಾ ಸಂವಿಧಾನ ಹುಟ್ಟಿದ ನಂತರ ಹುಟ್ಟಿದವರಿರಬಹುದು ಎಂದು ಭಾವಿಸಿದ್ದೇನೆ, ಹಾಗಾಗಿ ನಮ್ಮ ದೇಶಕ್ಕೆ ಈ ತೆರೆನಾದ ಸಂವಿಧಾನ ಬೇಕು ಎಂಬ ಅಂಬೇಡ್ಕರ್ ಅವರ ದನಿಯ ಹಿಂದಿನ ಅನುಭವ ಮತ್ತು ಸಂಕಟ ನಮಗ್ಯಾರಿಗೂ ಇರಲಾರದು, ಇದನ್ನು ಅರ್ಥಮಾಡಿಕೊಳ್ಳ ಬೇಕಾದರೆ ನಾವು ಅಂಬೇಡ್ಕರ್ ಅವರ ಬದುಕನ್ನ ಅಧ್ಯಾಯನ ಮಾಡಬೇಕಾಗಿದೆ,ನಂತರ ಸಂವಿಧಾನ ನಮಗೆ ಅರ್ಥವಾಗ ಬಹುದು.
ದೇಶ ಎಷ್ಟೇ ವೈಜ್ಞಾನಿಕವಾಗಿ ಮುಂದುವರಿದರೂ ಜನರು ಹಿಂದಿಗಿಂತಲೂ ಇಂದು ಮೌಡ್ಯರಾಗುತ್ತಿರುವುದು ಆಧುನಿಕ ಜಗತ್ತು ನಾಚಿಕೆ ಪಟ್ಟುಕೊಳ್ಳಬೇಕಾದ ಸಂಗತಿ. ಆದರೆ ಎಲ್ಲಾ ಧರ್ಮೀಯರು ಮತ್ತೆ ಧರ್ಮಾಂದತೆಗೆ ಒಳಗಾಗುತ್ತಿದ್ದಾರೆ, ಜಾತಿವಿನಾಶ, ಅಂತರ್ಜಾತಿ ವಿವಾಹದ ಮಾತಿರಲಿ ಒಂದು ಧರ್ಮದವನು ಮತ್ತೊಂದು ಧರ್ಮದವನೊಂದಿಗೆ ಮಾತನಾಡುವುದು, ಸಾಮಾಜಿಕವಾಗಿ ಬೆರೆಯುವುದು ಧರ್ಮವಿರೋಧಿನೆಲೆ ಎಂದು ಬಿಂಬಿಸುವ ಮೂಲಭೂತವಾದಿಗಳ ಸಂಖ್ಯೆ ಹೆಚ್ಚುತ್ತಿದೆ.
ಕಾಲೇಜು ವಿದ್ಯಾರ್ಥಿಗಳಲ್ಲಿಯೂ ಸ್ನೇಹತ್ವ ಧರ್ಮವನ್ನು ದಾಟುತ್ತಿಲ್ಲ, ಧರ್ಮವನ್ನು ದಾಟಿದ ಗಂಡು-ಹೆಣ್ಣು ಒಟ್ಟಿಗೆ ಸ್ನೇಹದಿಂದ ನಡೆದುಕೊಳ್ಳುವಂತಿಲ್ಲ, ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಆಧುನಿಕ ಭಾರತವಿದೆ. ಧರ್ಮ ಪ್ರಜ್ಞೆಯನ್ನು ಬೋಧಿಸಬೇಕು, ಮೂಢನಂಬಿಕೆಯನ್ನಾಗಲಿ ಅಥವಾ ಅತೀಂದ್ರಿಯ ಶಕ್ತಿಗಳನ್ನಾಗಲಿ ನಂಬಿಸಬಾರದು, ಧರ್ಮ ಕರುಣೆಯನ್ನು ಬೋಧಿಸಬೇಕು, ಸಮಾನತೆಯನ್ನು ಕಲಿಸಬೇಕು, ಮನುಷ್ಯನಿಗೆ ಭೂಮಿಯ ಮೇಲೆ ಸುಖ ಸಂತೋಷದಿಂದ ಬದುಕುವುದಕ್ಕೆ ಬೇಕಾಗಿರುವುದು ಅದೇನೆ ಎಂದು ಡಾ.ಬಿ.ಆರ್.ಅಂಬೇಡ್ಕರ್ ಅವರೆ ಅಭಿಪ್ರಾಯ ಪಟ್ಟಿದ್ದಾರೆ. ದೇವರಾಗಲಿ, ಆತ್ಮವಾಗಲಿ ಸಮಾಜವನ್ನು ಬದುಕಿಸುವುದಕ್ಕೆ ಆಗುವುದಿಲ್ಲ ಎಂಬುದು ಇದರ ಅರ್ಥ.
ಒಂದು ಧರ್ಮದ ತತ್ವಮೀಮಾಂಸೆ ಏನೇ ಇರಬಹುದು ಆದರೆ ಆ ಧರ್ಮವು ಯಾವ ರೀತಿಯ ಆಚರಣೆಗಳನ್ನು ನಂಬಿಕೊಂಡಿದೆ ಹಾಗೂ ಆ ಧರ್ಮದ ಅನುಯಾಯಿಗಳು ಯಾವ ರೀತಿ ನಡೆದುಕೊಳ್ಳುತ್ತಾರೆ ಎಂಬುದು ಆ ಧರ್ಮದ ನೆಲೆಗಟ್ಟನ್ನು ತಿಳಿಸುತ್ತದೆ. ಆದರೆ ಈ ಕಾಲದಲ್ಲೂ ಕೂಡ ಜಾತಿಪದ್ದತಿಯನ್ನು ಸಮರ್ಥಿಸುವವರು ಇರುವುದು ಬೇಸರದ ಸಂಗತಿ, ಅವರು ಕೊಡುವ ಸಮರ್ಥನೆಗಳು ಹಲವಾರು.
ಆದರೆ ಅಂಬೇಡ್ಕರ್ ಅವರು ಹೇಳುವಂತೆ: ಜಾತಿಪದ್ದತಿ ಕೇವಲ ಶ್ರಮ ವಿಭಜನೆಯಾಗಿರದೆ ಶ್ರಮಜೀವಿಗಳ ವಿಭಾಗವೂ ಆಗಿದೆ. ಸುಧಾರಿತ ಸಮಾಜಕ್ಕೆ ಶ್ರಮ ವಿಭಜನೆ ಅವಶ್ಯಕವೆಂಬುದು ನಿರ್ವಿವಾದ. ಆದರೆ ಶ್ರಮ ವಿಭಜನೆಯಲ್ಲಿ ವಿವಿಧ ಶ್ರಮಿಕ ವರ್ಗಗಳು ಒಂದನ್ನೊಂದು ಸೇರದಂತೆ ಪ್ರತ್ಯೇಕವಾಗಿ ವಿಭಜನೆಗೊಂಡಿರುವುದು ಯಾವ ಸುಧಾರಿತ ಸಮಾಜದಲ್ಲಿಯೂ ಕಾಣದು. (ಅಂ.ಬರಹಗಳು ಮತ್ತು ಭಾಷಣಗಳು ಸಂ.೧.ಪು ೫೮).
ಜಾತಿಪದ್ದತಿ ಶ್ರಮಿಕರ ವಿಭಾಗ ಮಾತ್ರವಲ್ಲ ಅದರಲ್ಲಿ ವಿಭಾಗಗೊಂಡ ವರ್ಗಗಳು, ಕೆಳವರ್ಗ, ಅದಕ್ಕೂ ಕೆಳವರ್ಗ, ಹೀಗೆ ಬಂದು ನಿಚ್ಚೋಚ್ಚಶ್ರೇಣಿಯನ್ನು ಹೊಂದಿವೆ, ಇಂತಹ ಉಚ್ಚ, ನೀಚ ವರ್ಗಿಕರಣ ಬೇರೆಯಾವ ದೇಶದಲ್ಲಿಯೂ ಶ್ರಮವಿಭಾಗದ ಅಂಗವಾಗಿಲ್ಲ. ವ್ಯೆಕ್ತಿಯ ಅಭಿರುಚಿ ಸಾಮರ್ಥ್ಯಗಳನ್ನು ಗಮನಿಸುವ ಬದಲಾಗಿ ಆತನ ತಂದೆ ತಾಯಿಗಳ ಸಾಮಾಜಿಕ ಸ್ಥಾನಮಾನಕ್ಕೆ ಅನುಸಾರವಾಗಿ ಅವನಿಗೆ ಇಂತಹ ಕೆಲಸ ಎಂದು ನಿಗದಿಪಡಿಸಲಾಗುತ್ತದೆ.ಜಾತಿ ಪದ್ದತಿಯಿಂದ ಈ ವೃತ್ತಿವಿಭಜನೆ ಅಥವಾ ಕೆಲಸಗಳ ನೇಮಕವು ಖಂಡಿತವಾಗಿ ವಿನಾಶಕಾರಿಯಾಗಿದೆ.
ಡಾ. ಬಿ.ಆರ್. ಅಂಬೇಡ್ಕರ್ ಅವರು ಕೊಟ್ಟ ಸಂವಿಧಾನ ನಮಗೆ ಜಾತ್ಯಾತೀತವಾಗಿ , ಸಮಾನತೆಯಿಂದ, ಸಮತೆಯಿಂದ, ಸಹೋಧರತೆಯಿಂದ ಬದುಕುವುದನ್ನು ಕಲಿಸುತ್ತದೆ, ಇಂದು ಅಂಬೇಡ್ಕರ್ ನಮಗೆ ಸಂವಿಧಾನರೂಪದಲ್ಲಿ ಎಲ್ಲಾ ಧರ್ಮಗಳ ಆಚೆಯಿರುವ ‘ಮಾನವಧರ್ಮ’ವನ್ನು ಕೊಟ್ಟಿರುವಂತದ್ದು, ಮನುಷ್ಯರನ್ನು ಮನುಷ್ಯರಂತೆ ಕಾಣುವುದನ್ನು ಕಲಿಸಿರುವಂತದ್ದನ್ನು ನಾವು ಅರ್ಥೈಸಿಕೊಂಡು ನಡೆಯಬೇಕಾಗಿದೆ.
ಅಂಬೇಡ್ಕರ್ ಅವರಿಗೆ ಈ ತರಹದ ಆಲೋಚನೆ ಕೇವಲ ಶಿಕ್ಷಣದಿಂದ ಬಂದದ್ದಲ್ಲ ಸ್ವತ: ಅವರು ಇದನ್ನೆಲ್ಲಾ ತಮ್ಮ ಜೀವನದಲ್ಲಿ ಅನುಭವಿಸಿದ್ದರಿಂದ ಬಂದಿರುವಂತದ್ದು, ಮನುಧರ್ಮ ದಲ್ಲಿದ್ದಂತಹ ಸಾಮಾಜಿಕ, ಧಾರ್ಮಿಕ, ಆಚರಣೆಗಳಿಂದ ನೋವುಂಡವರು ಅಂಬೇಡ್ಕರ್.
ಹಾಗಾಗಿ ಇಂತಹ ಒಂದು ವ್ಯವಸ್ಥೆಯ ವಿರುದ್ದ ತಿರುಗಿಬಿದ್ದು ತಾನು ಅನುಭವಿಸಿದ ಸಂಕಟ, ನೋವು,ಅವಮಾನಗಳು ನನ್ನ ಮುಂದಿನ ತಲೆಮಾರು ಅನುಭವಿಸ ಬಾರದು ಎಂಬುದು ಅಂಬೇಡ್ಕರ್ ಅವರ ಕನಸ್ಸಾಗಿತ್ತು. ಆದರೆ ಇವತ್ತು ನಾವು ಯಾವ ಮಾರ್ಗದಲ್ಲಿ ಮುನ್ನಡೆಯುತ್ತಿದ್ದೇವೆಂದು ಆಲೋಚಿಸಿದರೆ ಅಂದಿನ ಆಚರಣೆ,ಸಂಪ್ರದಾಯ, ಧಾರ್ಮಿಕ ನಂಬಿಕೆಗಳ ವಿರುದ್ದ ತಿರುಗಿಬೀಳಲು ಅಂಬೇಡ್ಕರ್ ಅವರ ಹೋರಾಟ ಎಷ್ಟು ಮುಖ್ಯವಾಗಿತ್ತೊ, ಇಂದು ಅವರ ಜಾತಿ ಮತ್ತು ಧರ್ಮದ ಬಗೆಗಿನ ಧೋರಣೆಯನ್ನ ಅಷ್ಟೆ ಮುಖ್ಯವಾಗಿ ಪ್ರಸ್ತುತ ಪಡಿಸಬೇಕಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಚಿತ್ರದುರ್ಗ | ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಡಿ.ಡಿ ಬಿ.ಮಲ್ಲಿಕಾರ್ಜುನ, ಕ್ರೈಸ್ ಇ.ಡಿ ಬಿ.ಶಿವಸ್ವಾಮಿ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ಚಿತ್ರದುರ್ಗ: ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಒಳಪಡುವ ವಸತಿ ಶಾಲೆಗಳಿಗೆ (ಕ್ರೈಸ್) ನಿಯಮಾನುಸಾರ ಆಹಾರ ಸಾಮಾಗ್ರಿಗಳನ್ನು ಸರಬರಾಜು ಮಾಡದೆ ವಂಚಿಸುತ್ತಿರುವ ಶ್ರೀ ಶಿರಡಿ ಪ್ರಾವಿಜನ್ ಸ್ಟೋರ್, ಚಿಕ್ಕಬಳ್ಳಾಪುರ ಇವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ದೂರು ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ತೋರಿದ ಚಿತ್ರದುರ್ಗ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಬಿ. ಮಲ್ಲಿಕಾರ್ಜುನ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಇದರ ಕಾರ್ಯನಿರ್ವಾಹಕ ನಿರ್ದೇಶಕರಾದ ಬಿ.ಶಿವಸ್ವಾಮಿ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯ ವಸತಿ ಶಾಲೆಗಳಿಗೆ ಅಧಿಕೃತ ಟೆಂಡರುದಾರರಾದ ಶ್ರೀ ಶಿರಡಿ ಸಾಯಿ ಪ್ರಾವಿಜನ್ ಸ್ಟೋರ್, ಚಿಕ್ಕಬಳ್ಳಾಪುರ ಇವರು ನಿಯಮಾನುಸಾರ ಆಹಾರ ಸಾಮಾಗ್ರಿಗಳನ್ನು ವಿತರಣೆ ಮಾಡದೆ ಇರುವ ಅಧಿಕೃತ ಮಾಹಿತಿ ತಿಳಿದು, ಸಮಾಜ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಚಿತ್ರದುರ್ಗ ಇವುಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳ ಪ್ರಾಂಶುಪಾಲರುಗಳಿAದ ಮಾಹಿತಿಹಕ್ಕು ಅಡಿಯಲ್ಲಿ ಪಡೆದ ದೃಢೀಕೃತ ದಾಖಲೆಗಳನ್ನು ಪರಿಶೀಲನೆ ಮಾಡಿದಾಗ ಆಹಾರ ಸಾಮಾಗ್ರಿ ಸರಬರಾಜಿನಲ್ಲಿ ಹಲವಾರು ಲೋಪದೋಷಗಳು ಕಂಡು ಬಂದಿರುತ್ತವೆ.
ಆದ ಕಾರಣ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಉಪ ನಿರ್ದೇಶಕರು, ಜಿಲ್ಲಾ ಸಮಾಜ ಕಲ್ಯಾಣ ನಾವು ದೂರು ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಯಾವುದೇ ಪ್ರತ್ಯುತ್ತರವನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದೆ ಇರುವ ಕಾರಣ ದಿನಾಂಕ: 21-04-2026 ರಂದು ಜ್ಞಾಪನವನ್ನು ನೀಡಲಾಗಿತ್ತು. ಆದರೆ ಜ್ಞಾಪನ ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಉಪ ನಿರ್ದೇಶಕರು, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ, ಚಿತ್ರದುರ್ಗ ದೂರು ಅರ್ಜಿಗೆ ಸಂಬAಧಿಸಿದAತೆ ತನಿಖಾ ವರದಿಯನ್ನಾಗಲಿ ಅಥವಾ ಪ್ರತ್ಯುತ್ತರವನ್ನಾಗಲಿ ನೀಡಿರುವುದಿಲ್ಲ.
ಈ ಬಗ್ಗೆ ಕಾರ್ಯನಿರ್ವಾಹಕ ನಿರ್ದೇಶಕರು, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ, ಬೆಂಗಳೂರು ಇವರಿಗೆ ದೂರು ನೀಡಲಾಗಿತ್ತು. ಆದರೆ ಇವರು ಕೂಡ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಕರ್ತವ್ಯ ಲೋಪ ಎಸಗಿದ ಅಧಿಕಾರಿಗಳ ವಿರುದ್ದ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಾಳೆ ʼನಿರಾಕಾರ ವಿಶ್ವಕರ್ಮʼ ಕೃತಿ ಬಿಡುಗಡೆ
ಸುದ್ದಿದಿನ,ಬೆಂಗಳೂರು:ಕಾವ್ಯಸ್ಪಂದನ ಪ್ರಕಾಶನವು ಪ್ರಕಟಿಸಿರುವ ಪತ್ರಕರ್ತ, ಲೇಖಕ ಚಂದ್ರಶೇಖರ ಗಂಧನಹಳ್ಳಿ ಅವರ ʼನಿರಾಕಾರ ವಿಶ್ವಕರ್ಮʼ ಕೃತಿಯು ಸೆಪ್ಟೆಂಬರ್ 17ರಂದು ಬಿಡುಗಡೆಯಾಗಲಿದೆ. ಅಂದು ಬೆಳಗ್ಗೆ 10.30ಕ್ಕೆ ಮೈಸೂರು ಜಿಲ್ಲೆ, ಕೆ.ಆರ್.ನಗರ ತಾಲೂಕು ಆಡಳಿತ ಕಚೇರಿಯ ಸಭಾಂಗಣದಲ್ಲಿ ತಾಲೂಕು ಆಡಳಿತದ ಆಶ್ರಯ, ತಾಲೂಕು ವಿಶ್ವಕರ್ಮ ಸೇವಾ ಸಮಾಜ ಹಾಗೂ ತಾಲೂಕು ವಿಶ್ವಕರ್ಮ ಸಂಘದ ಜಂಟಿ ವತಿಯಿಂದ ಆಯೋಜಿಸಿರುವ ‘ವಿಶ್ವಕರ್ಮ ಜಯಂತಿ’ ಕಾರ್ಯಕ್ರಮದಲ್ಲಿ ಶಾಸಕರಾದ ಡಿ. ರವಿಶಂಕರ್ ಅವರು ಕೃತಿಯನ್ನು ಲೋಕಾರ್ಪಣೆ ಮಾಡಲಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಹಶೀಲ್ದಾರ್ ಜಿ. ಸುರೇಂದ್ರ ಮೂರ್ತಿ ಅವರು ವಹಿಸಲಿದ್ದಾರೆ. ತಾಲೂಕು ವಿಶ್ವಕರ್ಮ ಸೇವಾ ಸಮಾಜದ ಅಧ್ಯಕ್ಷ ರೇವಣ್ಣ, ತಾಲೂಕು ವಿಶ್ವಕರ್ಮ ಸಂಘದ ಅಧ್ಯಕ್ಷ ವೇಣುಗೋಪಾಲ್ ಎನ್., ಪದಾಧಿಕಾರಿಗಳಾದ ಈಶ್ವರಾಚಾರ್, ಚೇತನ್ ಮೂರ್ತಿ ಸೇರಿದಂತೆ ವಿಶ್ವಕರ್ಮ ಸಮುದಾಯದ ಮುಖಂಡರು ಹಾಗೂ ತಾಲೂಕು ಆಡಳಿತದ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ. ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಶ್ರೀ ಕಾಳಿಕಾಂಬಾ ದೇವಾಲಯದಲ್ಲಿ ವಿಶ್ವಕರ್ಮ ಜಯಂತಿ ಪ್ರಯುಕ್ತ ವಿಶೇಷ ಪೂಜೆ ನೆರವೇರಲಿದ್ದು, ಬಳಿಕ ಅಲ್ಲಿಂದ ತಾಲೂಕು ಆಡಳಿತ ಕಚೇರಿಯವರೆಗೆ ಮೆರವಣಿಗೆ ನಡೆಯಲಿದೆ.
ವಿಶೇಷವೆಂದರೆ, ಪ್ರಕಾಶಕರು ಹಾಗೂ ಆಯೋಜಕರ ಆಸಕ್ತಿಯ ಮೇರೆಗೆ ‘ನಿರಾಕಾರ ವಿಶ್ವಕರ್ಮ’ ಕೃತಿಯನ್ನು ತಿಂಗಳ ಅಂತರದಲ್ಲಿ ಮೂರು ಪ್ರತ್ಯೇಕ ಕಾರ್ಯಕ್ರಮಗಳಲ್ಲಿ ಬಿಡುಗಡೆ ಮಾಡಲಾಗುತ್ತಿದೆ. ಸೆಪ್ಟೆಂಬರ್ 17ರಂದು ಕೆ.ಆರ್.ನಗರದಲ್ಲಿ ಕೃತಿ ಬಿಡುಗಡೆಯಾದರೆ, ಸೆಪ್ಟೆಂಬರ್ 20ರಂದು ಬೆಂಗಳೂರಿನ ತಾತಗುಣಿಯ ವಿಶ್ವಕರ್ಮ ನಗರದಲ್ಲಿ ಕರ್ನಾಟಕ ರಾಜ್ಯ ವಿಶ್ವಕರ್ಮ ಮಹಾಮಂಡಳಿಯ ವತಿಯಿಂದ ಹಮ್ಮಿಕೊಂಡಿರುವ ಕಾರ್ಯಕ್ರಮದಲ್ಲಿ ಕೃತಿ ಲೋಕಾರ್ಪಣೆಗೊಳ್ಳಲಿದೆ. ಹಾಗೆಯೇ, ನವೆಂಬರ್ 22ರಂದು ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಕಾವ್ಯಸ್ಪಂದನ ಪ್ರಕಾಶನ ಏರ್ಪಡಿಸಿರುವ ಕಾರ್ಯಕ್ರಮದಲ್ಲಿಯೂ ಈ ಕೃತಿ ಬಿಡುಗಡೆಯಾಗಲಿದೆ.
ಮಾನವ ನಾಗರಿಕತೆಯ ಇತಿಹಾಸವನ್ನು ತೆರೆದರೆ, ಅದರ ಪ್ರತಿಯೊಂದು ಪುಟದ ಹಿಂದೆಯೂ ಶ್ರಮಿಸಿದ ಅನಾಮಿಕ ಕೈಗಳು ಕಾಣಿಸುತ್ತವೆ. ಆ ಕೈಗಳು ಕಲ್ಲನ್ನು ಕೆತ್ತಿ ದೇವಸ್ಥಾನವಾಗಿಸಿವೆ, ಕಬ್ಬಿಣವನ್ನು ಬಡಿದು ಆಯುಧವಾಗಿಸಿವೆ, ಮರಕ್ಕೆ ರೂಪ ಕೊಟ್ಟು ಬಾಗಿಲಾಗಿಸಿವೆ, ಮಣ್ಣಿಗೆ ಜೀವ ತುಂಬಿ ಮಡಕೆಯಾಗಿಸಿವೆ; ಹಾಗೆಯೇ ಬಣ್ಣಗಳ ಮೂಲಕ ಅಚ್ಚಳಿಯದ ಭಾವನೆಗಳನ್ನು ಮೂಡಿಸಿವೆ. ಆ ಸೃಷ್ಟಿಶೀಲ ಕೈಗಳಿಗೆ ಬಹುಶಃ ಇತಿಹಾಸದ ಅಧಿಕೃತ ಪುಟಗಳಲ್ಲಿ, ರಾಜ-ಮಹಾರಾಜರ ಕಥೆಗಳ ನಡುವೆ ದೊಡ್ಡ ಅಕ್ಷರಗಳಲ್ಲಿ ಹೆಸರು ಸಿಕ್ಕಿಲ್ಲದಿರಬಹುದು. ಆದರೆ ಅವರು ನಿರ್ಮಿಸಿದ ಕಲೆ, ಶಿಲ್ಪ, ವಾಸ್ತು, ಉಪಕರಣ ಮತ್ತು ಸೌಂದರ್ಯವೇ ನಮ್ಮ ನಾಗರಿಕತೆಯ ಉಸಿರಾಗಿ, ಜೀವಂತ ಸಾಕ್ಷಿಗಳಾಗಿ ಇಂದಿಗೂ ಉಳಿದಿವೆ. ಅಂತಹ ಸೃಜನಶೀಲ ಕೈಗಳ ಸಮೂಹ ಸ್ಮೃತಿಯನ್ನು, ಪರಂಪರೆಯನ್ನು ಮತ್ತು ಇತಿಹಾಸವನ್ನು ಅರಿಯುವ ಅರ್ಥಪೂರ್ಣ ಪ್ರಯತ್ನವನ್ನು ನಿರಾಕಾರ ವಿಶ್ವಕರ್ಮ ಕೃತಿಯಲ್ಲಿ ಲೇಖಕರಾದ ಚಂದ್ರಶೇಖರ ಗಂಧನಹಳ್ಳಿ ಅವರು ಮಾಡಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಗೃಹ ಜ್ಯೋತಿ ಯೋಜನೆಗೆ 3 ವರ್ಷಗಳ ಸಂಭ್ರಮ – 1.65 ಕೋಟಿ ಕುಟುಂಬಗಳ ಬದುಕಿಗೆ ಬೆಳಕು!
ಸುದ್ದಿದಿನ, ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆ ತನ್ನ 3 ವರ್ಷಗಳ ಸಾರ್ಥಕ ಪಯಣವನ್ನು ಪೂರ್ಣಗೊಳಿಸಿದೆ. `ಕುಟುಂಬಗಳ ಆರ್ಥಿಕ ಸಬಲೀಕರಣಕ್ಕೆ ಸಹಕಾರ’ ಎಂಬ ಧ್ಯೇಯದೊಂದಿಗೆ ಆರಂಭವಾದ ಈ ಯೋಜನೆ ಇಂದು ಕೋಟ್ಯಂತರ ಕುಟುಂಬಗಳ ಬದುಕಿಗೆ ಬೆಳಕಾಗಿದೆ.
ಹೌದು! 2023ರ ಆಗಸ್ಟ್ನಲ್ಲಿ ಜಾರಿಗೆ ಬಂದ ಈ ಯೋಜನೆಯಡಿ ರಾಜ್ಯದ ಪ್ರತಿಯೊಂದು ಕುಟುಂಬಕ್ಕೂ ಪ್ರತಿ ತಿಂಗಳು 200 ಯೂನಿಟ್ಗಳವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದ್ದು, ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಮಾಸಿಕ ಬಜೆಟ್ಗೆ ದೊಡ್ಡ ಆಸರೆಯಾಗಿದೆ ಎಂದೇ ಹೇಳಬಹುದು.
http://Visit : www.suddidina.com
ಗೃಹಜ್ಯೋತಿ ಯೋಜನೆಯ ಸಾಧನೆಯ ಗಿರಿ:
ಇಂಧನ ಇಲಾಖೆ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ, ರಾಜ್ಯದ್ಯಂತ ಬರೋಬ್ಬರಿ 1.65 ಕೋಟಿ. ಫಲಾನುಭವಿಗಳು ಕುಟುಂಬಗಳು ಯೋಜನೆಯ ಪ್ರಯೋಜನ ಪಡೆದುಕೊಳ್ಳುತ್ತಿದ್ದರೆ, ಸೇವಾಸಿಂಧು ಪೋರ್ಟಲ್ನಲ್ಲಿ ಒಟ್ಟು 1,76,69,368 ಜನರು ನೋಂದಾಯಿಸಿಕೊಂಡಿದ್ದರೆ. ಒಟ್ಟು 2,06,65,451 ಗೃಹಬಳಕೆ ವಿದ್ಯುತ್ ಗ್ರಾಹಕರಿದ್ದಾರೆ. ಅಂದರೆ ಶೇ.85ಕ್ಕಿಂತ ಹೆಚ್ಚು ಗ್ರಾಹಕರು ಈ ಯೋಜನೆಯಡಿ ನೋಂದಾಯಿಸಿಕೊಂಡು ಲಾಭ ಪಡೆಯುತ್ತಿದ್ದಾರೆ.
ಆರ್ಥಿಕವಾಗಿ ನೋಡುವುದಾದರೆ, 2023ರ ಆಗಸ್ಟ್ನಿಂದ 2026ರ ಜುಲೈ ವರೆಗೆ, ಕಳೆದ ಮೂರು ವರ್ಷಗಳಲ್ಲಿ ಸರ್ಕಾರವು ಫಲಾನುಭವಿಗಳಿಗೆ ಒಟ್ಟು ₹28,759.54 ಕೋಟಿ ರೂಪಾಯಿ ಸಬ್ಸಿಡಿ ಬಿಡುಗಡೆ ಮಾಡಿದೆ. ಇದು ಸರ್ಕಾರದ ಬದ್ಧತೆ ಮತ್ತು ಜನಪರ ಕಾಳಜಿಗೆ ಹಿಡಿದ ಕನ್ನಡಿಯಾಗಿದೆ.
ಕುಟುಂಬದ ಬಜೆಟ್ಗೆ ಆಸರೆ, ಉಜ್ವಲ ಭವಿಷ್ಯಕ್ಕೆ ಬುನಾದಿ:
ಪ್ರತಿ ತಿಂಗಳು 1000 ದಿಂದ 1500 ರೂಪಾಯಿಗಳವರೆಗೆ ವಿದ್ಯುತ್ ಬಿಲ್ ಕಟ್ಟುತ್ತಿದ್ದ ಸಾಮಾನ್ಯ ಕುಟುಂಬಗಳಿಗೆ ಈಗ ಆ ಹಣ ಸಂಪೂರ್ಣವಾಗಿ ಉಳಿತಾಯವಾಗುತ್ತಿದೆ. ಈ ಉಳಿತಾಯದ ಹಣವನ್ನು ಅವರು ಮಕ್ಕಳ ಶಿಕ್ಷಣ, ಆರೋಗ್ಯ ಮತ್ತು ಇತರ ಅಗತ್ಯಗಳಿಗೆ ಬಳಸಿಕೊಳ್ಳುತ್ತಿದ್ದಾರೆ. ವಿಶೇಷವಾಗಿ ಗೃಹಿಣಿಯರಿಗೆ ಇದು ಆರ್ಥಿಕವಾಗಿ ದೊಡ್ಡ ನೆರವಾಗಿದೆ.
ಕೇವಲ ಉಚಿತ ವಿದ್ಯುತ್ ನೀಡುವುದಷ್ಟೇ ಅಲ್ಲ, ಜನರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡುವುದೇ ಈ ಯೋಜನೆಯ ಮುಖ್ಯ ಗುರಿಯಾಗಿದ್ದು, ರಾಜ್ಯದ ಜನರ ಜೀವನಮಟ್ಟ ಸುಧಾರಿಸಿದೆ. ಗೃಹ ಜ್ಯೋತಿ ಯೋಜನೆಯು ಕೇವಲ ಒಂದು ಯೋಜನೆಯಾಗಿ ಉಳಿಯದೆ, ಕರ್ನಾಟಕದ ಸಾಮಾಜಿಕ ಮತ್ತು ಆರ್ಥಿಕ ಪರಿವರ್ತನೆಯಲ್ಲಿ ಮಹತ್ವದ ಮೈಲಿಗಲ್ಲಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಕುಟುಂಬಗಳನ್ನು ಈ ಯೋಜನೆಯಡಿ ತರಲು ಇಂಧನ ಇಲಾಖೆ ಕ್ರಮ ಕೈಗೊಳ್ಳುತ್ತಿದೆ.




