ದಿನದ ಸುದ್ದಿ
ಶಾಸನಭೆಯಲ್ಲಿ ದನಿ ಇಲ್ಲದವರ ಧ್ವನಿಯಾಗಿದ್ದ ಮಾಜಿ ಶಾಸಕ ಜಿವಿ ಶ್ರೀರಾಮರೆಡ್ಡಿ ಅವರಿಗೆ ಸಂತಾಪಗಳು : ಬಿ ಕೆ ಹರಿಪ್ರಸಾದ್
ಸುದ್ದಿದಿನ, ಬೆಂಗಳೂರು : ಕಮ್ಯುನಿಸ್ಟ್ ವಿಚಾರಧಾರೆಗಳಿಗೆ ಇಡೀ ಜೀವನವನ್ನೇ ಮುಡಿಪಾಗಿಟ್ಟಿದ್ದ, ರಾಜ್ಯ ವಿಧಾನಸಭೆಯಲ್ಲಿ ವಿದ್ಯಾರ್ಥಿ-ಯುವಜನರ, ರೈತ-ಕಾರ್ಮಿಕರ ಜನಪರ ಧ್ವನಿಯಾಗಿದ್ದ ಬಾಗೇಪಲ್ಲಿಯ ಮಾಜಿ ಶಾಸಕ ಜಿ ವಿ ಶ್ರೀರಾಮರೆಡ್ಡಿಯವರು ಹೃದಯಾಘಾತದಿಂದ ನಮ್ಮನ್ನಗಲಿದ್ದಾರೆ ಅವರಿಗೆ ನನ್ನ ಕೆಂಪು ನಮನಗಳು ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ಜಿವಿಎಸ್ ಎಂದೇ ಚಿರಪರಿಚಿತರಾದ ಅವರು ಜಾತ್ಯತೀತ ಶಕ್ತಿಗಳ ಒಗ್ಗೂಡಿಸುವಲ್ಲಿ, ಕೋಮುವಾದಿ ಶಕ್ತಿಗಳ ವಿರುದ್ಧ ಹೋರಾಡುತ್ತಿದ್ದ ರಾಜ್ಯದ ಕೊಂಡಿ ಕಳಚಿದಂತಾಗಿದೆ. ಧುರಿತ ಕಾಲದಲ್ಲಿ ಬದ್ಧತೆಯ ಹೋರಾಟಗಾರನನ್ನು ಈ ನೆಲ ಕಳೆದುಕೊಂಡಿದೆ. ಸಂಗಾತಿ ರೆಡ್ಡಿಯವರ ಕುಟುಂಬ ಹಾಗೂ ಅಪಾರ ಅಭಿಮಾನಿಗಳ ದುಃಖದಲ್ಲಿ ನಾನೂ ಭಾಗಿಯಾಗಿದ್ದೇನೆ ಎಂದಿದ್ದಾರೆ.
1999 ಹಾಗೂ 2004 ರಲ್ಲಿ ಬಾಗೇಪಲ್ಲಿ ಕ್ಷೇತ್ರದಿಂದ ಎರಡು ಬಾರಿ ಶಾಸಕರಾಗಿದ್ದ ಅವರು ಅತ್ಯತ್ತಮ ಸಂಸದೀಯ ಪಟುವಾಗಿದ್ದರು. ರಾಜ್ಯದ ಜ್ವಲಂತ ಸಮಸ್ಯೆಗಳ ಬಗ್ಗೆ ವಿಧಾನಸಭೆಯಲ್ಲಿ ಗಟ್ಟಿಧ್ವನಿಯಾಗಿ ಸೇವೆ ಸಲ್ಲಿಸಿದ್ದರು. ವಿದ್ಯಾರ್ಥಿ ದೆಸೆಯಿಂದಲೇ ಹೋರಾಟಗಳಲ್ಲಿ ಭಾಗವಹಿಸಿ, ನೂರಾರು ಬಾರಿ ಬಂ್ದನ, ಜೈಲುವಾಸ ಅನುಭವಿಸಿದ್ದಾರೆ. ವಿದ್ಯಾರ್ಥಿ-ಯುವಜನ,-ರೈತ-ಕೃಷಿ ಕಾರ್ಮಿಕರ ಸಂಗಾತಿಯನ್ನ ಈ ನೆಲ ಕಳೆದುಕೊಂಡು ಬಡವಾಗಿದೆ. ಶ್ರೀರಾಮರೆಡ್ಡಿಯವರಿಗೆ ನನ್ನ ಅಂತಿಮ ಸಂತಾಪ ಹಾಗೂ ಕೆಂಪು ನಮನಗಳು ಎಂದು ಹೇಳಿದ್ದಾರೆ.
ಟ್ವೀಟ್
ಕಮ್ಯುನಿಸ್ಟ್ ವಿಚಾರಧಾರೆಗಳಿಗೆ ಇಡೀ ಜೀವನವನ್ನೇ ಮುಡಿಪಾಗಿಟ್ಟಿದ್ದ, ವಿಧಾನಸಭೆಯಲ್ಲಿ ನೊಂದವರ ಧ್ವನಿಯಾಗಿದ್ದ ಮಾಜಿ ಶಾಸಕ ಜಿ ವಿ ಶ್ರೀರಾಮರೆಡ್ಡಿಯವರು ನಮ್ಮನ್ನಗಲಿದ್ದಾರೆ.
ಜಾತ್ಯಾತೀತ ತತ್ವಗಳಿಗೆ ಬದ್ಧರಾಗಿದ್ದ ಬದ್ಧತೆಯ ಹೋರಾಟಗಾರನನ್ನು ರಾಜ್ಯ ಕಳೆದುಕೊಂಡಿದೆ.ರೆಡ್ಡಿಯವರ ಕುಟುಂಬ ಹಾಗೂ ಅಭಿಮಾನಿಗಳ ದುಃಖದಲ್ಲಿ ನಾನೂ ಭಾಗಿ.ಕೆಂಪು ನಮನ
— Hariprasad.B.K. (@HariprasadBK2) April 15, 2022
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ದಾವಣಗೆರೆ | ಏಪ್ರಿಲ್-ಮೇ ನಲ್ಲಿ 26 ಬಾಲ್ಯ ವಿವಾಹ ಪ್ರಕರಣಗಳು ದಾಖಲು : ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಎಂ.ವಿ
ಸುದ್ದಿದಿನ,ದಾವಣಗೆರೆ:ಪ್ರಸಕ್ತ ವರ್ಷದ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ 26 ಬಾಲ್ಯ ವಿವಾಹ ಪ್ರಕರಣಗಳು ವರದಿಯಾಗಿದ್ದು ಇದರಲ್ಲಿ 25 ನ್ನು ತಡೆಗಟ್ಟಿ 2 ಪ್ರಕರಣಗಳಲ್ಲಿ ನ್ಯಾಯಾಲಯದಿಂದ ತಡೆಯಾಜ್ಞೆ ತರಲಾಗಿದೆ. ಎಲ್ಲಾದರೂ ಬಾಲ್ಯ ವಿವಾಹ ಕಂಡು ಬಂದಲ್ಲಿ, ಅಂತಹ ಪೋಷಕರ ಮೇಲೆ ಪ್ರಕರಣ ದಾಖಲಿಸುವಂತೆ ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ತಿಳಿಸಿದರು.
ಅವರು ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾ ಮಟ್ಟದ ಮಕ್ಕಳ ಕಲ್ಯಾಣ ಹಾಗೂ ರಕ್ಷಣಾ ಸಮಿತಿ ಪರಿಶೀಲನಾ ಸಭೆ, ಬಾಲ್ಯ ವಿವಾಹ ನಿಷೇಧ ಕಾಯ್ದೆ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಬಾಲ್ಯವಿವಾಹ ಒಂದು ಸಾಮಾಜಿಕ ಪಿಡೂಗಾಗಿದ್ದು, ಇದನ್ನು ತಡೆಗಟ್ಟಲು ವ್ಯಾಪಕವಾಗಿ ಜನ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕಾಗಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ಪೊಲೀಸ್ ಇಲಾಖೆ ಹಾಗೂ ಇನ್ನಿತರೆ ಇಲಾಖೆಗಳಿಂದ ಬರುವ ಜುಲೈ ತಿಂಗಳಲ್ಲಿ ಎಲ್ಲಾ ಶಾಲಾ, ಕಾಲೇಜುಗಳಲ್ಲಿ ಬಾಲ್ಯ ವಿವಾಹ ನಿಷೇಧ ಕಾಯ್ದೆ ಕುರಿತು ಜಾಗೃತಿ ಕಾರ್ಯಕ್ರಮಗಳನ್ನು ಅಭಿಯಾನದ ರೀತಿ ಆಯೋಜಿಸಲು ಸೂಚಿಸಿದರು.
ಕಾರ್ಮಿಕರ ಮಕ್ಕಳು, ತಾಂಡಾಗಳಲ್ಲಿ ಮತ್ತು ಪರಿಶಿಷ್ಠ ಜಾತಿ ಹಾಗೂ ಪರಿಶಿಷ್ಠ ಪಂಗಡಗಳ ಕುಟುಂಬಗಳಲ್ಲಿ ಹೆಚ್ಚಾಗಿ ಬಾಲ್ಯ ವಿವಾಹಗಳು ವರದಿಯಾಗುತ್ತಿರುವುದರಿಂದ ಕಾರ್ಮಿಕ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಗಳಿಂದ ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕೆಂದು ತಿಳಿಸಿದರು.
ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಅಭಿವೃದ್ಧಿ ಅಧಿಕಾರಿಗಳು ನರೇಗಾ ಕೂಲಿ ಕಾರ್ಮಿಕರಿಗೆ ಮತ್ತು ಸಾರ್ವಜನಿಕರಿಗೆ ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ತಿಳಿಸಿ, ಬಾಲ್ಯವಿವಾಹ ನಡೆಯದೆ ಇರುವ ಮತ್ತು ಹದಿಹರೆಯದ ಬಾಲಕಿಯರು, ಗರ್ಭಿಣಿ ಆಗದೆ ಇರುವಂತಹ ಪ್ರಕರಣಗಳನ್ನು ಗಮನದಲ್ಲಿ ಇಟ್ಟುಕೊಂಡು ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿರುವ ಗ್ರಾಮ ಪಂಚಾಯಿತಿಗಳಿಗೆ ಪ್ರಶಂಸನಾ ಪತ್ರ ನೀಡಲಾಗುವುದು ಎಂದು ತಿಳಿಸಿದರು.
ಸಭೆಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ ಮಾ. ಕರೆಣ್ಣವರ್ ಮಾತನಾಡಿ ಮಕ್ಕಳ ಬಾಲ್ಯ ವಿವಾಹದಿಂದಾಗುವ ಪರಿಣಾಮಗಳ ಬಗ್ಗೆ ತಿಳಿಸಬೇಕು. ಬಾಲ್ಯ ವಿವಾಹ ಮಾಡುವುದರಿಂದ ಉಂಟಾಗುವ ಕಾನೂನಾತ್ಮಕ ತೊಡಕುಗಳ ಬಗ್ಗೆ ಪೋಷಕರಲ್ಲಿ ಮನವರಿಕೆ ಮಾಡಿಕೊಡಬೇಕೆಂದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರಾದ ವಾಸಂತಿ ಉಪ್ಪಾರ್ ಮಾತನಾಡಿ ಪ್ರಸಕ್ತ ಸಾಲಿನಲ್ಲಿ 2024 ರ ಏಪ್ರಿಲ್, ಮೇ ತಿಂಗಳಲ್ಲಿ ಒಟ್ಟು 26 ದೂರುಗಳು ಬಂದಿದ್ದು, ಅವುಗಳಲ್ಲಿ 25 ಬಾಲ್ಯವಿವಾಹಗಳನ್ನು ತಡೆದು 2 ಪ್ರಕರಣಗಳಲ್ಲಿ ಕೋರ್ಟ್ನಿಂದ ತಡೆಯಾಜ್ಞೆ ಪಡೆಯಲಾಗಿದೆ. 1 ಪ್ರಕರಣದಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಬಾಲ ನ್ಯಾಯ ಮಂಡಳಿಯಲ್ಲಿ ಹಿಂದಿನ 54, ಹೊಸದಾಗಿ 20 ಸೇರಿ 74, ಇದರಲ್ಲಿ 11 ಖುಲಾಸೆಯಾಗಿವೆ. ಪೋಕ್ಸೊದಡಿ 10 ಪ್ರಕರಣಗಳಿದ್ದು 2 ಖುಲಾಸೆಯಾಗಿ 8 ಬಾಕಿ ಇವೆ. ಸರ್ಕಾರಿ ಬಾಲಕಿಯರ ಬಾಲ ಮಂದಿರದಲ್ಲಿ 61 ಹಾಗೂ ಬಾಲಕರ ಬಾಲ ಮಂದಿರದಲ್ಲಿ 32 ಮಕ್ಕಳಿದ್ದಾರೆ. ಇದರಲ್ಲಿ ಅನಾಥ ಮಕ್ಕಳು, ಏಕಪೋಷಕ ಮಕ್ಕಳು, ಇಬ್ಬರು ಪೋಷಕರಿರುವ ಮಕ್ಕಳು ಇದ್ದಾರೆ ಎಂದು ತಿಳಿಸಿದರು.
ಜಿ.ಪಂ. ಉಪಕಾರ್ಯದರ್ಶಿ ಕೃಷ್ಣನಾಯ್ಕ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಷಣ್ಮುಖಪ್ಪ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9989346243
ದಿನದ ಸುದ್ದಿ
ಗ್ರಾಮ ಪಂಚಾಯತಿ ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಜಿಲ್ಲಾ ವ್ಯಾಪ್ತಿಯಲ್ಲಿ 206 ಗ್ರಾಮ ಪಂಚಾಯತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳನ್ನು ಸ್ಥಾಪಿಸಿದ್ದು, ಗ್ರಾಮ ಪಂಚಾಯತಿ ಗ್ರಂಥಾಲಯಗಳಲ್ಲಿ ಪ್ರಸ್ತುತ ಖಾಲಿ ಇರುವ 16 ಗ್ರಾಮ ಪಂಚಾಯತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆ ನೇಮಕ ಮಾಡಿಕೊಳ್ಳಲು ಜೂ.29 ರಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಖಾಲಿ ಇರುವ ಹುದ್ದೆಗಳು : ರಾಜಗೊಂಡನಹಳ್ಳಿ , ಬೇತೂರು, ಕೊಂಡಜ್ಜಿ, ಹೆಬ್ಬಾಳು , ಕಬ್ಬಳ, ಉಕ್ಕಡಗಾತ್ರಿ, ಹಳೆಬಾತಿ, ಪಾಂಡೋಮಟ್ಟಿ, ಕಂದನಕೋವಿ, ಕಕ್ಕರಗೊಳ್ಳ, ಬನ್ನಿಕೋಡು, ವಡೆಯರಹತ್ತೂರು, ಓಬನ್ನನಹಳ್ಳಿ(ನರಗನಹಳ್ಳಿ), ದೊಡ್ಡಬ್ಬಿಹೆರೆ, ಅಣಜಿ, ಗುಡಾಳು ಇಲ್ಲಿ ಖಾಲಿ ಇರುತ್ತವೆ.
ಆಸಕ್ತ ಆಭ್ಯರ್ಥಿಗಳು ದಾಖಲೆಗಳನ್ನು ಪತ್ರಾಂಕಿತ ಅಧಿಕಾರಿಗಳಿಂದ ದೃಢೀಕರಿಸಿ ವೆಬ್ಸೈಟ್ davanagere.nic.in ಮೂಲಕ ಅರ್ಜಿ ಸಲ್ಲಿಸಿ ನಂತರ ಸ್ವೀಕೃತಿ ಪತ್ರದ ಪ್ರತಿಯೊಂದಿಗೆ ದಾಖಲೆಗಳನ್ನು ಲಗತ್ತಿಸಿ ಜಿಲ್ಲಾ ಪಂಚಾಯತ್ ಕಚೇರಿ ಆಡಳಿತ ವಿಭಾಗದ ಕೊಠಡಿ ಸಂ.25 ಗೆ ಜುಲೈ 20 ರೊಳಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಸಂಖ್ಯೆ 08192-226655 ಗೆ ಕರೆ ಮಾಡುವುದು ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಪುಸ್ತಕ ಬಹುಮಾನ ; ಜಾನಪದ ಕೃತಿಗಳ ಆಹ್ವಾನ
ಸುದ್ದಿದಿನಡೆಸ್ಕ್ : ಕರ್ನಾಟಕ ಜಾನಪದ ಅಕಾಡೆಮಿಯು 2022ನೇ ಸಾಲಿನ ಜನವರಿ 01 ರಿಂದ ಡಿಸೆಂಬರ್31ರವರೆಗೆ ಹಾಗೂ 2023ನೇ ಸಾಲಿನ ಜನವರಿ 01 ರಿಂದ ಡಿಸೆಂಬರ್31ರವರೆಗೆ ಪ್ರಥಮ ಆವೃತ್ತಿಯಲ್ಲ ಮುದ್ರಣಗೊಂಡಿರುವ ಕನಿಷ್ಠ 150 ಪುಟಗಳಿಗೂ ಮೇಲ್ಪಟ್ಟಿರುವ ಜನಪದ ಗದ್ಯ, ಜನಪದ ಪದ್ಯ, ಜನಪದ ವಿಚಾರ-ವಿಮರ್ಶೆ-ಸಂಶೋಧನೆ ಹಾಗೂ ಜನಪದ ಸಂಕೀರ್ಣ ಪ್ರಕಾರಗಳ ಅತ್ಯುತ್ತಮ ಜಾನಪದ ಕೃತಿಗಳಿಗೆ ಬಹುಮಾನ ನೀಡುತ್ತಿದ್ದು, ಕೃತಿಗಳನ್ನು ಆಹ್ವಾನಿಸಿದೆ.
ಆಸಕ್ತ ಲೇಖಕರು/ಪ್ರಕಾಶಕರು/ಸಂಪಾದಕರು 4 ಕೃತಿಗಳನ್ನು ದ್ವಿಪ್ರತಿ ಬಿಲ್ಲಿನೊಂದಿಗೆ ರಿಜಿಸ್ಟ್ರಾರ್, ಕರ್ನಾಟಕ ಜಾನಪದ ಅಕಾಡೆಮಿ, 2ನೇ ಮಹಡಿ, ಕನ್ನಡಭವನ, ಜೆ.ಸಿ.ರಸ್ತೆ, ಬೆಂಗಳೂರು-560002 ಇವರಿಗೆ ಜುಲೈ 20 ರೊಳಗಾಗಿ ತಲುಪುವಂತೆ ಖುದ್ದಾಗಿ ಅಥವಾ ಅಂಚೆ/ಕೊರಿಯರ್ ಮೂಲಕ ಕಳುಹಿಸಿಕೊಡುವಂತೆ ಅಕಾಡೆಮಿಯ ರಿಜಿಸ್ಟ್ರಾರ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಅಕಾಡೆಮಿ ಕಚೇರಿಯನ್ನು ಖುದ್ದಾಗಿ ಅಥವಾ ಅಥವಾ ದೂ.ಸಂ.: 080-22215509 ನ್ನು ಸಂಪರ್ಕಿಸುವುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ7 days ago
ನಾಡೋಜೆ ಡಾ. ಕಮಲಾ ಹಂಪನಾಗೆ ರವೀಂದ್ರ ಕಲಾಕ್ಷೇತ್ರದಲ್ಲಿ ಗಣ್ಯರಿಂದ ಅಂತಿಮ ನಮನ
-
ದಿನದ ಸುದ್ದಿ7 days ago
ನಾಡೋಜೆ ಕಮಲಾ ಹಂಪನ ನಿಧನ ; ಮೆಡಿಕಲ್ ಕಾಲೇಜಿಗೆ ದೇಹದಾನ : ಗಣ್ಯರ ಸಂತಾಪ
-
ದಿನದ ಸುದ್ದಿ6 days ago
ರೇಣುಕಾಸ್ವಾಮಿ ಕೊಲೆ ಮತ್ತು ಗಂಡುಹೆಣ್ಣಿನ ನಡುವಿನ ಸಂಬಂಧ
-
ಅಂತರಂಗ6 days ago
ಆತ್ಮಕತೆ | ತುರ್ತು ಪರಿಸ್ಥಿತಿ ಮತ್ತು ನಮ್ಮೂರಿನ ಭೂ ಹೋರಾಟ
-
ದಿನದ ಸುದ್ದಿ6 days ago
ಇವರೇ ನೋಡಿ ಟ್ವೀಟ್ಟರ್, ಪೇಸ್ಬುಕ್ ಮೀಮ್ಸ್ ಸ್ಟಾರ್ ಕ್ಸೇವಿಯರ್ ಉರ್ಫ್ ಓಂಪ್ರಕಾಶ್
-
ದಿನದ ಸುದ್ದಿ7 days ago
ಅರಣ್ಯ ಭೂಮಿ ಒತ್ತುವರಿ ಆರೋಪ ; ಮಸ್ಕಿ ತಹಶೀಲ್ದಾರರಿಗೆ ನೋಟಿಸ್
-
ದಿನದ ಸುದ್ದಿ7 days ago
ನಟ ದರ್ಶನ್ ಪರಪ್ಪನ ಆಗ್ರಹಾರ ಜೈಲು ಪಾಲು
-
ದಿನದ ಸುದ್ದಿ6 days ago
ನಾಳೆಯಿಂದ 18ನೇ ಲೋಕಸಭೆಯ ಮೊದಲ ಅಧಿವೇಶನ