Connect with us

ದಿನದ ಸುದ್ದಿ

ಕನ್ನಡ ವಿಶ್ವವಿದ್ಯಾಲಯಕ್ಕೆ 20ಕೋಟಿ ರೂ. ತಕ್ಷಣ ಬಿಡುಗಡೆ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Published

on


ಕನ್ನಡ ವಿವಿಯಲ್ಲಿ ಎಂ.ಪಿ.ಪ್ರಕಾಶ ಅಧ್ಯಯನ ಪೀಠ ಸ್ಥಾಪನೆ : ಸಿಎಂ ಘೋಷಣೆ


ಸುದ್ದಿದಿನ,ಹೊಸಪೇಟೆ(ವಿಜಯನಗರ) : ಸಾಂಪ್ರಾದಾಯಿಕ ವಿವಿಗಳಿಗಿಂತ ಭಿನ್ನವಾಗಿರುವ ಕನ್ನಡ ಭಾಷೆಗೆ ಸಮೃದ್ಧಿಗೆ ಶ್ರಮಿಸುತ್ತಿರುವ ಕನ್ನಡ ವಿಶ್ವವಿದ್ಯಾಲಯಕ್ಕೆ ಅಗತ್ಯ ಮೂಲಸೌಕರ್ಯ ಹಾಗೂ ಇನ್ನೀತರ ಚಟುವಟಿಕೆಗಳಿಗಾಗಿ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಲ್ಲಿನ ಮುಖ್ಯಮಂತ್ರಿ ವಿವೇಚನಾ ಅನುದಾನದ ಅಡಿ 20 ಕೋಟಿ ರೂ.ಗಳನ್ನು ತಕ್ಷಣ ಬಿಡುಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಹಂಪಿ ಬಳಿಯ ಕನ್ನಡ ವಿವಿಯಲ್ಲಿ ನೂತನ ಐದು ಕಟ್ಟಡಗಳ ಉದ್ಘಾಟನೆ, 128ಪುಸ್ತಕಗಳ ಬಿಡುಗಡೆ ಹಾಗೂ ಸಂಚಾರಿ ವಿವಿ ಪುಸ್ತಕ ಮಾರಾಟ ವಾಹನ ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.

ವಿವಿಗೆ ಈಗ ಒದಗಿಸಲಾಗುವ ಅನುದಾನ ಬಳಸಿಕೊಂಡು ವಿದ್ಯಾರ್ಥಿಗಳ ಶಿಷ್ಯವೇತನ, ಹೊರಗುತ್ತಿಗೆ ಸಿಬ್ಬಂದಿಗಳ ಬಾಕಿ ಇರುವ ವೇತನ ಹಾಗೂ ತುರ್ತು ಅಗತ್ಯ ಕೆಲಸಗಳಿಗೆ ಬಳಸಿಕೊಳ್ಳುವಂತೆ ನಿರ್ದೇಶನ ನೀಡಿದರು.

ಕನ್ನಡ ವಿಶ್ವವಿದ್ಯಾಲಯಕ್ಕೆ ಅಗತ್ಯ ಮೂಲಸೌಕರ್ಯ ಹಾಗೂ ಇನ್ನೀತರ ಚಟುವಟಿಕೆಗಳಿಗಾಗಿ ಕುಲಪತಿ ಡಾ.ಸ.ಚಿ.ರಮೇಶ ಅವರು ತುರ್ತಾಗಿ 80ಕೋಟಿ ರೂ.ಗಳನ್ನು ಒದಗಿಸುವಂತೆ ಬೇಡಿಕೆ ಇಟ್ಟಿದ್ದು, ಈ ಅನುದಾನವನ್ನು ಹಂತಹಂತವಾಗಿ ಜಿಲ್ಲಾಖನಿಜ ನಿಧಿ ಮತ್ತು ಸರಕಾರದ ಅನುದಾನಡಿ ಬಿಡುಗಡೆ ಮಾಡಲಾಗುವುದು ಎಂದು ಭರವಸೆ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕನ್ನಡ ವಿವಿಯು ಕನ್ನಡ ಭಾಷೆ ಸಮೃದ್ಧಿಗೊಳಿಸುವ ಮತ್ತು ಶಕ್ತಿ ತುಂಬುವ ಕೆಲಸ ಮಾಡುವ ಕಾಯಕದಲ್ಲಿ ಇನ್ನಷ್ಟು ಪರಿಣಾಮಕಾರಿಯಾಗಿ ಮುಂದುವರಿಯಲಿ.

ಕನ್ನಡ ವಿವಿಯ 10ವಿಸ್ತರಣಾ ಕೇಂದ್ರಗಳು ರಾಜ್ಯದ 30ಜಿಲ್ಲೆಗಳಲ್ಲಿ ತಲಾ 3ಜಿಲ್ಲೆಗಳನ್ನು ಒಂದೊಂದು ವಿಸ್ತರಣಾ ಕೇಂದ್ರಗಳು ಕನ್ನಡ ಪಸರಿಸುವ,ಕನ್ನಡದ ವಿವಿಧ ಆಯಾಮಗಳಲ್ಲಿ ಸಂಶೋಧಿಸುವ ಮತ್ತು ಅಧ್ಯಯನ ನಡೆಸುವ ಕೆಲಸ ಮಾಡಲಿ ಎಂದು ಅವರು ಸಲಹೆ ನೀಡಿದರು.

ಕನ್ನಡ ವಿವಿಯಲ್ಲಿ ಡಾ.ಎಂ.ಪಿ.ಪ್ರಕಾಶ ಅಧ್ಯಯನ ಪೀಠ ಸ್ಥಾಪನೆ : ಸಿಎಂ ಘೋಷಣೆ

ಕನ್ನಡ ವಿಶ್ವವಿದ್ಯಾಲಯದ ಸ್ಥಾಪನೆಗೆ ಶ್ರಮಿಸಿದ ಹಾಗೂ ಕನ್ನಡ-ಕನ್ನಡ ಸಂಸ್ಕøತಿಗೆ ಸದಾ ದುಡಿಯುತ್ತಿದ್ದ ಮಾಜಿ ಉಪಮುಖ್ಯಮಂತ್ರಿ ದಿಂ.ಎಂ.ಪಿ.ಪ್ರಕಾಶ ಅವರ ಹೆಸರಿನಲ್ಲಿ ಕನ್ನಡ ವಿಶ್ವವಿದ್ಯಾಲಯದಲ್ಲಿ ಅಧ್ಯಯನ ಪೀಠ ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಘೋಷಣೆ ಮಾಡಿದರು.

ಎಂ.ಪಿ.ಪ್ರಕಾಶ ಅಧ್ಯಯನ ಪೀಠ ಹೇಗಿರಬೇಕು ಮತ್ತು ಯಾವ ರೀತಿ ಕಾರ್ಯನಿರ್ವಹಿಸಬೇಕು ಎಂಬುದರ ಯೋಜನಾ ರೂಪುರೇಶೆಗಳನ್ನು ಸಿದ್ದಪಡಿಸುವಂತೆ ಕುಲಪತಿಗಳಿಗೆ ಸೂಚನೆ ನೀಡಿದರು.

ಕನ್ನಡ ವಿವಿ ಸ್ಥಾಪನೆಯಲ್ಲಿ ಎಂಪಿಪಿ ವಹಿಸಿದ ಪಾತ್ರವನ್ನು ಸಿಎಂ ಬೊಮ್ಮಾಯಿ ಅವರು ಈ ಸಂದರ್ಭದಲ್ಲಿ ಬಿಚ್ಚಿಟ್ಟರು.
ವಿಶ್ವ ಭೂಪಟದಲ್ಲಿ ಕನ್ನಡ ಎಲ್ಲಿರಬೇಕು ಕನ್ನಡಿಗರಿ ಎಲ್ಲಿ ನಿಲ್ಲಬೇಕು ಅನ್ನುವುದನ್ನು ನಿರ್ಧರಿಸುವ ಕೆಲಸ ಕನ್ನಡ ವಿವಿ ಮಾಡಬೇಕು; ಪದವಿಗಾಗಿ ಕಟ್ ಅಂಡ್ ಪೇಸ್ಟ್ ಮಾಡುವ ಕೆಲಸ ಬೇಡ ಎಂದು ಅವರು ಹೇಳಿದರು.

ಗೃಹ ಸಚಿವ ಆರಗ ಜ್ಞಾನೇಂದ್ರ,
ಉನ್ನತ ಶಿಕ್ಷಣ, ಐಟಿ-ಬಿಟಿ, ವಿಜ್ಞಾನ- ತಂತ್ರಜ್ಞಾನ, ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಗಳ ಸಚಿವರ ಡಾ.ಸಿ.ಎನ್.ಅಶ್ವಥ್ ನಾರಾಯಣ ಅವರು ಮಾತನಾಡಿದರು.

ಸಂಚಾರಿ ಪುಸ್ತಕ ಮಾರಾಟ ವಾಹನವನ್ನು ವಿವಿಗೆ ದೇಣಿಗೆಯಾಗಿ ನೀಡಿದ ಬಲ್ಡೋಟ ಗ್ರೂಪ್ ಅಧ್ಯಕ್ಷರು ಹಾಗೂ ವ್ಯವಸ್ಥಾಪಕ ನಿರ್ದೇಶಕ ಡಾ.ನರೇಂದ್ರಕುಮಾರ್ ಬಲ್ಡೋಟ ಅವರನ್ನು ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸನ್ಮಾನಿಸಿ ಗೌರವಿಸಿದರು.

ಈ ಸಂದರ್ಭದಲ್ಲಿ ಸಾರಿಗೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವ ಬಿ.ಶ್ರೀರಾಮುಲು, ಮುಜರಾಯಿ,ಹಜ್ ಮತ್ತು ವಕ್ಪ್ ಸಚಿವರು ಹಾಗೂ ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಶಶಿಕಲಾ ಜೊಲ್ಲೆ, ಸಂಸದ ಅಣ್ಣಾಸಾಹೇಬ ಜೊಲ್ಲೆ, ಶಾಸಕರಾದ ಸೋಮಶೇಖರ್ ರೆಡ್ಡಿ, ವೈ.ಎಂ.ಸತೀಶ್, ಕನ್ನಡ ವಿಶ್ವವಿದ್ಯಾಲಯದ ಕುಲಪತಿ ಡಾ.ಸ.ಚಿ.ರಮೇಶ, ವಿಜಯನಗರ ಜಿಲ್ಲಾಧಿಕಾರಿ ಅನಿರುದ್ಧ್ ಶ್ರವಣ್, ಎಸ್ಪಿ ಡಾ.ಅರುಣ್ ಎಸ್.ಕೆ, ಕುಲಸಚಿವ ಡಾ.ಎ.ಸುಬ್ಬಣ್ಣ ರೈ, ಪ್ರಸಾರಂಗ ವಿಭಾಗದ ನಿರ್ದೇಶಕರಾದ ಡಾ.ಶೈಲಜಾ ಎಂ.ಹಿರೇಮಠ, ವಿವಿಯ ತಾಂತ್ರಿಕ ವಿಭಾಗದ ಮುಖ್ಯಸ್ಥ ಜೆ.ಎಸ್.ನಂಜಯ್ಯನವರ್ ಸೇರಿದಂತೆ ಅನೇಕರು ಇದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದಾವಣಗೆರೆ | ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ

Published

on

ಸುದ್ದಿದಿನ,ದಾವಣಗೆರೆ: ದಾವಣಗೆರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಆಧುನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಜೂನ್ 15 ಮತ್ತು 16 ರಂದು ಆಯೋಜಿಸಲಾಗಿದೆ.

ಆಸಕ್ತ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್ ಪೋರ್ಟ್ ಸೈಜ್ ಪೋಟೋ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿಯೊಂದಿಗೆ ಹಾಜರಾಗಬೇಕು. ತರಬೇತಿ ಕಾರ್ಯಕ್ರಮಕ್ಕೆ ಯಾವುದೇ ಪ್ರೋತ್ಸಾಹಧನ ಮತ್ತು ಭತ್ಯೆಗಳನ್ನು ನೀಡಲಾಗುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ಪಶುಪಾಲನಾ ಮತ್ತು ಪಶು ವೈದ್ಯಕೀಯ ತರಬೇತಿ ಕೇಂದ್ರ, ದಾವಣಗೆರೆ ಕಚೇರಿ ದೂ.ಸಂ: 08192-233787 ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಪಶುವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ವಸತಿ ಯೋಜನೆಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದ ವಸತಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ಜೂನ್ 12 ಕೊನೆಯ ದಿನವಾಗಿರುತ್ತದೆ.

ಈ ಯೋಜನೆಯಡಿ ಸೌಲಭ್ಯ ಒದಗಿಸಲು ನಿಗಧಿತ ಅರ್ಜಿ ನಮೂನೆಯಲ್ಲಿ ಅವಶ್ಯಕ ದಾಖಲಾತಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು ಗ್ರೇಡ್-1ರವರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಚನ್ನಗಿರಿ ಕಚೇರಿಯನ್ನು ಸಂಪರ್ಕಿಸಬಹುದೆಂದು ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

10 ಮುಖ್ಯ ಅಂಶಗಳನ್ನು ಪಾಲಿಸಿ ; ಸಕ್ಕರೆ ಕಾಯಿಲೆಗೆ ಗುಡ್ ಬೈ ಹೇಳಿ..

Published

on

1. ಸಮತೋಲಿತ ಆಹಾರ (Balanced Diet): ನಿಮ್ಮ ಆಹಾರದಲ್ಲಿ ಹೆಚ್ಚು ನಾರಿನಂಶವಿರುವ (fiber) ತರಕಾರಿ, ಸೊಪ್ಪು, ಮೊಳಕೆ ಬರಿಸಿದ ಕಾಳುಗಳು ಮತ್ತು ಸಿರಿಧಾನ್ಯಗಳನ್ನು ಬಳಸಿ. ಕಾರ್ಬೋಹೈಡ್ರೇಟ್ ಹಾಗೂ ಎಣ್ಣೆಯಂಶವಿರುವ ಆಹಾರವನ್ನು ಕಡಿಮೆ ಮಾಡಿ.

2. ಸಿಹಿ ಪದಾರ್ಥಗಳ ನಿಯಂತ್ರಣ (Avoid Sweets): ಸಕ್ಕರೆ, ಬೆಲ್ಲ, ಬೇಕರಿ ತಿಂಡಿಗಳು, ಐಸ್‌ಕ್ರೀಮ್ ಮತ್ತು ಕೃತಕ ಸಕ್ಕರೆ ಇರುವ ತಂಪು ಪಾನೀಯಗಳ ಬಳಕೆಯನ್ನು ಸಂಪೂರ್ಣವಾಗಿ ಕಡಿಮೆ ಮಾಡಿ ಅಥವಾ ದೂರವಿಡಿ.

3. ದಿನನಿತ್ಯದ ವ್ಯಾಯಾಮ (Regular Exercise): ಪ್ರತಿದಿನ ಕನಿಷ್ಠ 30 ರಿಂದ 45 ನಿಮಿಷಗಳ ಕಾಲ ವೇಗದ ನಡಿಗೆ (brisk walking), ಸೈಕ್ಲಿಂಗ್, ಈಜು ಅಥವಾ ಯೋಗ ಮಾಡುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಣಕ್ಕೆ ಬರುತ್ತದೆ.

4. ದೇಹದ ತೂಕದ ನಿರ್ವಹಣೆ (Weight Management): ಅತಿಯಾದ ದೇಹದ ತೂಕವು ಇನ್ಸುಲಿನ್ ಕಾರ್ಯಕ್ಷಮತೆಯನ್ನು ಕುಂಠಿತಗೊಳಿಸುತ್ತದೆ. ಆದ್ದರಿಂದ ತೂಕವನ್ನು ಆರೋಗ್ಯಕರ ಮಿತಿಯಲ್ಲಿ ಇಟ್ಟುಕೊಳ್ಳುವುದು ಅತ್ಯಗತ್ಯ.

5. ನಿಯಮಿತ ರಕ್ತದ ಪರೀಕ್ಷೆ (Regular Blood Sugar Check): ವೈದ್ಯರ ಸಲಹೆಯಂತೆ ಕಾಲಕಾಲಕ್ಕೆ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು (Fasting ಮತ್ತು Post Prandial) ಹಾಗೂ ಮೂರು ತಿಂಗಳ ಸರಾಸರಿ ತಿಳಿಸುವ HbA1c ಪರೀಕ್ಷೆಯನ್ನು ಮಾಡಿಸಿಕೊಳ್ಳಿ.

6. ಸಮಯಕ್ಕೆ ಸರಿಯಾಗಿ ಔಷಧಿ ಸೇವನೆ (Timely Medication): ವೈದ್ಯರು ಸೂಚಿಸಿದ ಮಾತ್ರೆಗಳನ್ನು ಅಥವಾ ಇನ್ಸುಲಿನ್ ಅನ್ನು ನಿಗದಿತ ಸಮಯಕ್ಕೆ ತೆಗೆದುಕೊಳ್ಳಿ. ಸ್ವಂತ ನಿರ್ಧಾರದಿಂದ ಔಷಧಿಯನ್ನು ನಿಲ್ಲಿಸಬೇಡಿ.

7. ಮಾನಸಿಕ ಒತ್ತಡದ ನಿರ್ವಹಣೆ (Stress Management): ಅತಿಯಾದ ಮಾನಸಿಕ ಒತ್ತಡವು ದೇಹದಲ್ಲಿ ಸಕ್ಕರೆ ಮಟ್ಟವನ್ನು ಹೆಚ್ಚಿಸುವ ಹಾರ್ಮೋನ್‌ಗಳನ್ನು ಬಿಡುಗಡೆ ಮಾಡುತ್ತದೆ. ಒತ್ತಡ ಕಡಿಮೆ ಮಾಡಿಕೊಳ್ಳಲು ಧ್ಯಾನ (Meditation) ಅಥವಾ ಹವ್ಯಾಸಗಳಲ್ಲಿ ತೊಡಗಿಕೊಳ್ಳಿ.

8. ಪೂರಕ ನೀರು ಕುಡಿಯುವುದು (Stay Hydrated): ದಿನವಿಡೀ ಸಾಕಷ್ಟು ಪ್ರಮಾಣದಲ್ಲಿ ನೀರು ಕುಡಿಯಿರಿ. ಇದು ದೇಹದಲ್ಲಿರುವ ಹೆಚ್ಚುವರಿ ಗ್ಲೂಕೋಸ್ ಮೂತ್ರದ ಮೂಲಕ ಹೊರಹೋಗಲು ಸಹಾಯ ಮಾಡುತ್ತದೆ.

9. ಉತ್ತಮ ನಿದ್ರೆ (Good Sleep): ಪ್ರತಿದಿನ ರಾತ್ರಿ 7 ರಿಂದ 8 ಗಂಟೆಗಳ ಕಾಲ ಶಾಂತಿಯುತವಾದ ನಿದ್ರೆ ಮಾಡುವುದು ದೇಹದ ಚಯಾಪಚಯ ಕ್ರಿಯೆ (Metabolism) ಮತ್ತು ಹಾರ್ಮೋನ್‌ಗಳ ಸಮತೋಲನಕ್ಕೆ ಬಹಳ ಮುಖ್ಯ.

10. ದುರಭ್ಯಾಸಗಳಿಂದ ದೂರವಿರಿ (Avoid Smoking and Alcohol): ಧೂಮಪಾನ ಮತ್ತು ಮದ್ಯಪಾನವು ಸಕ್ಕರೆ ಕಾಯಿಲೆಯ ತೊಂದರೆಗಳನ್ನು (ಹೃದಯ ಮತ್ತು ನರಗಳ ಸಮಸ್ಯೆ) ಮತ್ತಷ್ಟು ಹೆಚ್ಚು ಮಾಡುವುದರಿಂದ ಇವುಗಳಿಂದ ದೂರವಿರುವುದು ಒಳ್ಳೆಯದು.

ಗಮನಿಸಿ: ಈ ಮೇಲಿನ ಮಾಹಿತಿ ರೋಗದ ನಿರ್ವಹಣೆಗೆ ಸಾಮಾನ್ಯ ಮಾರ್ಗದರ್ಶನವಾಗಿದೆ. ಪ್ರತಿಯೊಬ್ಬರ ದೇಹ ಪ್ರಕೃತಿ ವಿಭಿನ್ನವಾಗಿರುವುದರಿಂದ, ನಿಮ್ಮ ವೈದ್ಯರ ವೈಯಕ್ತಿಕ ಸಲಹೆ ಮತ್ತು ಚಿಕಿತ್ಸೆಯ ಕ್ರಮವೇ ಅಂತಿಮ ಹಾಗೂ ಸುರಕ್ಷಿತ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending