Connect with us

ದಿನದ ಸುದ್ದಿ

ಆತ್ಮ ನಿರ್ಭರ ಯೋಜನೆಯಡಿಯಲ್ಲಿ ಮೀನುಗಾರರಿಗೆ ಆರ್ಥಿಕ ನೆರವು : ಸಚಿವ ಎಸ್. ಅಂಗಾರ

Published

on

ಸುದ್ದಿದಿನ,ರಾಯಚೂರು : ಜಿಲ್ಲೆಯಲ್ಲಿ ದೊರೆಯುವ ಉತ್ತಮ ನೀರು ಬಳಸಿಕೊಂಡು ಭತ್ತ ಹಾಗೂ ಮೀನು ಕೃಷಿ ಮಾಡಿ ರೈತರು ಆರ್ಥಿಕವಾಗಿ ಸದೃಢರಾಗಬೇಕು. ಅಲ್ಲದೆ ಮೀನು ಒಂದು ಪೌಷ್ಟಿಕ ಆಹಾರವಾಗಿದ್ದು, ಇದರಿಂದ ಸುಮಾರು 19 ವಿವಿಧ ಆಹಾರ ಉತ್ಪಾದನೆಗಳನ್ನು ಮಾಡಬಹುದಾಗಿದೆಂದು ಮೀನುಗಾರಿಕೆ, ಬಂದರು, ಒಳನಾಡು ಜಲ ಸಾರಿಗೆ ಸಚಿವ ಎಸ್. ಅಂಗಾರ ಅವರು ಹೇಳಿದರು.

ಅವರು ಏ.19ರ ಮಂಗಳವಾರ ದಂದು ನಗರದ ಯರಮರಸ್ ಹೊರವಲಯದ ಸರ್ಕಿಟ್ ಹೌಸ್‌ನಲ್ಲಿ ಮೀನುಗಾರಿಕೆ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ, ಮಾತನಾಡಿದರು.

ಕಲ್ಯಾಣ ಕರ್ನಾಟಕ ಭಾಗದಲ್ಲಿ ಇತ್ತೀಚೆಗೆ ಸಿರಗುಪ್ಪ ತಾಲೂಕಿನಲ್ಲಿ ಮೊದಲ ಮೀನು ಮಾರುಕಟ್ಟೆ ಪ್ರಾರಂಭಿಸಿದ್ದು, ಕೃಷಿ ಹೊಂಡ, ಮೀನಿನ ಕೆರೆ, ಬಂಜರು ಭೂಮಿ, ಸವಳು ಭೂಮಿಯಲ್ಲಿ ಭತ್ತದ ಬೆಳೆ ಜತೆ ಮೀನುಗಾರಿಕೆ ಕೃಷಿ ಅಳವಡಿಸಿಕೊಂಡರೆ ರೈತರು ಹೆಚ್ಚಿನ ಲಾಭಗಳಿಸಬಹುದಾಗಿದೆ ಎಂದರು.

ಪ್ರಧಾನಮಂತ್ರಿ ನರೇಂದ್ರ ಮೋದಿ ಯವರು ಆತ್ಮ ನಿರ್ಭರ ಯೋಜನೆ ಮೂಲಕ ಆನೇಕ ಗುಂಪು ರಚಿಸಿ ಉದ್ಯೋಗ ಕೈಗೊಳ್ಳಲು ಆರ್ಥಿಕ ನೆರವು ನೀಡುತ್ತಿದ್ದಾರೆ. ಯುವಕರು ಸ್ವಯಂ ಉದ್ಯೋಗ ಕೈಗೊಳ್ಳಬೇಕು, ಕರಾವಳಿ ಭಾಗದ 327ಕಿ.ಮೀ, ಒಳನಾಡಿನ ಭಾಗದ ಮೀನುಗಾರರ ಸಮಸ್ಯೆ ಪರಿಶೀಲಿಸಿ ಇಲಾಖೆಯಿಂದ ಮತ್ತು ನಿಗಮದಿಂದ ಆನೇಕ ಸೌಲಭ್ಯಗಳನ್ನು ನೀಡಲಾಗುವುದು ಎಂದು ತಿಳಿಸಿದ್ದಾರೆ.

ಬಡವರು, ಮಧ್ಯಮ ವರ್ಗದವರು ಮೀನುಗಾರಿಕೆಯಲ್ಲಿ ತೊಡಗಿ ಬದುಕು ರೂಪಿಸಿಕೊಳ್ಳಬೇಕು. ಸುಸಜ್ಜಿತ ಮೀನು ಮಾರುಕಟ್ಟೆಯಲ್ಲಿ ಮೀನಿನ ಗುಣಮಟ್ಟ ಕಾಪಾಡಲು ಕೊಲ್ಡ್ ಸ್ಟೋರೇಜ್ ಘಟಕ, ವ್ಯಾಪಾರಿಗಳಿಗೆ ವಿಶ್ರಾಂತಿ ಘಟಕ, ಮೀನಿನ ದುರಸ್ತಿ ಘಟಕ, ಕಾಪಾಡಲು ಅಭಿವೃದ್ಧಿ ನಿಗಮದಿಂದ ಅನೇಕ ಸೌಲಭ್ಯ ನೀಡಲಾಗುವುದು ಎಂದು ತಿಳಿಸಿದರು.

ಇಲಾಖೆಯ ಉದ್ದೇಶ

ಮೀನುಗಾರಿಕೆ ಇಲಾಖೆಯ ಮುಖ್ಯ ಉದ್ದೇಶ ಮೀನು ಸಂಪತ್ತನ್ನು ಅಭಿವೃದ್ಧಿ ಪಡಿಸುವುದು, ಉತ್ಪಾದಿಸಿದ ಮೀನು ಮರಿಗಳನ್ನು ಹೆಚ್ಚಿನ ನೀರಿನ ಪ್ರಮಾಣ ಇರುವ ಕೆರೆಗಳಿಗೆ ಬಿತ್ತನೆ ಮಾಡುವುದು, ಹೆಚ್ಚಿನ ಮೀನು ಉತ್ಪಾದನೆಗೆ ತಾಂತ್ರಿಕ ಸಲಹೆ ನೀಡಿ ಮೀನು ಸಾಕಾಣಿಕೆ ಮಾಡಲು ಪ್ರೇರೆಪಿಸುವುದು ಮತ್ತು ಮೀನುಗಾರರ ಸಹಕಾರ ಸಂಘಗಳ ಸದಸ್ಯರಿಗೆ ಇಲಾಖಾ ಸೌಲಭ್ಯಗಳನ್ನು ನೀಡಿ ಅವರ ಆರ್ಥಿಕ ಮಟ್ಟ ಸುಧಾರಿಸುವುದಾಗಿದ್ದು, ಜಿಲ್ಲೆಯಲ್ಲಿ 17,089 ಮೀನುಗಾರರ ಸಂಖ್ಯೆ ಇದ್ದು, ಅವರಲ್ಲಿ 4,797 ಖಾಯಂ ವೃತ್ತಿಯಲ್ಲಿ ತೊಡಗಿದ ಮೀನುಗಾರರಾಗಿದ್ದಾರೆ.

ಜಿಲ್ಲೆಯಲ್ಲಿ 23ಮೀನುಗಾರರ ಸಹಕಾರ ಸಂಘಗಳಿದ್ದು, ಸಂಘಗಳಲ್ಲಿ 3,248 ಮೀನುಗಾರರು ಸದಸ್ಯತ್ವವನ್ನು ಹೊಂದಿದ್ದಾರೆ. ಅವರಲ್ಲಿ ಪರಿಶಿಷ್ಟ ಜಾತಿ ಸದಸ್ಯರು 702 ಪರಿಶಿಷ್ಟ ಪಂಗಡ ಸದಸ್ಯರು 616 ಒಳಗೊಂಡಿದೆ ಎಂದರು.

ಜಿಲ್ಲೆಯಲ್ಲಿ 244 ಸಣ್ಣ ಕರೆಗಳು: ಜಿಲ್ಲೆಯಲ್ಲಿ ಒಟ್ಟು 244ಸಣ್ಣ ಕೆರೆಗಳಿದ್ದು, ಈ ಕೆರೆಗಳ ಜಲವಿಸ್ತೀರ್ಣ 1135.12 ಹೊಂದಿದೆ. ಕೆರೆಗಳ ಭರ್ತಿಯನ್ನು ನೋಡಿ ಮೀನುಗಾರಿಕೆ ಅಭಿವೃದ್ಧಿ ಮಾಡಲಾಗುತ್ತಿದೆ. ಮೀನು ಸಾಕಾಣಿಕೆಗಾಗಿ ದೊಡ್ಡ ಕೆರೆಗಳಲ್ಲಿ ನೀರು ಅನುಕೂಲವಾಗಿರುತ್ತದೆ. ಇನ್ನುಳಿದ ಸಣ್ಣ ಕೆರೆಗಳಲ್ಲಿ ಆರು ತಿಂಗಳ ಒಳಗಾಗಿ ನೀರಿನ ಅಭಾವದಿಂದ ಕೆರೆಗಳು ಒಣಗಿ ಹೊಗುತ್ತಿವೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಮೀನುಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷ ನಿಖಿಲ್, ಮೀನುಗಾರಿಕೆ ಇಲಾಖೆಯ ಅಪರ ನಿರ್ದೇಶಕ ಎಮ್.ಎಲ್.ದೊಡ್ಡಮನಿ, ಮೀನುಗಾರಿಕೆ ಇಲಾಖೆಯ ವ್ಯವಸ್ಥಾಪಕ ನಿರ್ದೇಶಕ ದಿನೇಶ್, ಮೀನುಗಾರಿಕೆ ಇಲಾಖೆಯ ಜಿಲ್ಲಾ ಸಹಾಯಕ ನಿರ್ದೇಶಕಿ ಸುಮಾ, ಸಚಿವರ ವಿಶೇಷ ಅಧಿಕಾರಿ ಎಮ್.ಮಲ್ಲಿಕಾರ್ಜುನ ಸೇರಿದಂತೆ ಇತರರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ವಿಜ್ಞಾನ ವಿಭಾಗಕ್ಕೆ ಅಗ್ರಸ್ಥಾನ

Published

on

ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲೆಯ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಜಿಲ್ಲೆಯು ಒಟ್ಟಾರೆ ಶೇಕಡ 81.99 ರಷ್ಟು ಸಾಧನೆ ಮಾಡಿದ್ದು, ರಾಜ್ಯದಲ್ಲಿ 25 ನೇ ಸ್ಥಾನ ಪಡೆದಿದೆ. ಈ ಬಾರಿಯೂ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಜಿಲ್ಲೆಯಲ್ಲಿ ಅತಿ ಹೆಚ್ಚು ಶೇಕಡ 90.91 ರಷ್ಟು ಫಲಿತಾಂಶ ಪಡೆದು ಮೇಲುಗೈ ಸಾಧಿಸಿದ್ದಾರೆ.

ಜಿಲ್ಲೆಯಲ್ಲಿ ಪರೀಕ್ಷೆಗೆ ಹಾಜರಾದ ಒಟ್ಟು 20,810 ವಿದ್ಯಾರ್ಥಿಗಳ ಪೈಕಿ 16,046 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು ಶೇಕಡ 77.11 ರಷ್ಟು ಹಾಗೂ ಹೊಸದಾಗಿ ಪರೀಕ್ಷೆ ಬರೆದ (Freshers) 18,949 ವಿದ್ಯಾರ್ಥಿಗಳಲ್ಲಿ 15,540 ಮಂದಿ ಉತ್ತೀರ್ಣರಾಗಿದ್ದಾರೆ ಶೇಕಡ 82.01 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ವಿಭಾಗವಾರು ಫಲಿತಾಂಶದ ವಿಶ್ಲೇಷಣೆ

ವಿಜ್ಞಾನ ವಿಭಾಗ (Science): ಜಿಲ್ಲೆಯಲ್ಲಿ ಅತಿ ಹೆಚ್ಚು ಸಾಧನೆ ಈ ವಿಭಾಗದಲ್ಲಿ ದಾಖಲಾಗಿದೆ. ಒಟ್ಟು 12,536 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 10,936 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ (ಶೇ. 87.24). ಹೊಸ ವಿದ್ಯಾರ್ಥಿಗಳ ಪೈಕಿ 11,770 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 10,736 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 90.91 ರಷ್ಟು ಅದ್ಭುತ ಫಲಿತಾಂಶ ಬಂದಿದೆ.

ವಾಣಿಜ್ಯ ವಿಭಾಗ (Commerce)

ಈ ವಿಭಾಗದಲ್ಲಿ ಹಾಜರಾದ 4,295 ವಿದ್ಯಾರ್ಥಿಗಳಲ್ಲಿ 3,075 ಮಂದಿ ಉತ್ತೀರ್ಣರಾಗಿದ್ದಾರೆ (ಶೇ. 71.59). ಹೊಸ ವಿದ್ಯಾರ್ಥಿಗಳ ಪೈಕಿ 3858 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 2960 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 76.72 ರಷ್ಟು ಫಲಿತಾಂಶ ಬಂದಿದೆ.

ಕಲಾ ವಿಭಾಗ (Arts): ಕಲಾ ವಿಭಾಗದಲ್ಲಿ ಒಟ್ಟು 3,979 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 2,035 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ (ಶೇ. 51.14). ಹೊಸ ವಿದ್ಯಾರ್ಥಿಗಳ ಪೈಕಿ 3321 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 1880 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 56.61 ರಷ್ಟು ಫಲಿತಾಂಶ ಬಂದಿದೆ.

ಜಿಲ್ಲೆಯ ಒಟ್ಟಾರೆ ಫಲಿತಾಂಶದಲ್ಲಿ ವಿಜ್ಞಾನ ವಿಭಾಗವು ಪ್ರಥಮ ಸ್ಥಾನದಲ್ಲಿದ್ದರೆ, ವಾಣಿಜ್ಯ ಮತ್ತು ಕಲಾ ವಿಭಾಗಗಳು ನಂತರದ ಸ್ಥಾನ ಪಡೆದಿವೆ ಎಂದು ಉಪ ನಿರ್ದೇಶಕ ಪಳಿನಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆ: ಶೇ. 68.55ರಷ್ಟು ಮತದಾನ

Published

on

ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಇಂದು ನಡೆದ ಉಪ ಚುನಾವಣೆಯು ಅತ್ಯಂತ ಶಾಂತಿಯುತವಾಗಿ ಮುಕ್ತಾಯಗೊಂಡಿದ್ದು, ಒಟ್ಟಾರೆ ಶೇ. 68.55ರಷ್ಟು ಮತದಾನ ದಾಖಲಾಗಿದೆ.

ಬೆಳಿಗ್ಗೆಯಿಂದಲೇ ಮತಗಟ್ಟೆಗಳ ಮುಂದೆ ಮತದಾರರು ಉತ್ಸಾಹದಿಂದ ಸರದಿಯಲ್ಲಿ ನಿಂತು ತಮ್ಮ ಹಕ್ಕನ್ನು ಚಲಾಯಿಸಿದರು. ಚುನಾವಣಾ ಆಯೋಗದ ಕಟ್ಟುನಿಟ್ಟಿನ ಕ್ರಮಗಳು ಹಾಗೂ ಪೊಲೀಸ್ ಬಂದೋಬಸ್ತ್ನಿಂದಾಗಿ ಯಾವುದೇ ಅಹಿತಕರ ಘಟನೆಗಳಿಲ್ಲದೆ ಮತದಾನ ಪ್ರಕ್ರಿಯೆ ಯಶಸ್ವಿಯಾಗಿ ನಡೆಯಿತು.

ಯುವಕರು ಹಾಗೂ ಹಿರಿಯ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಮತದಾನ ಮಾಡಿದ್ದು ಕಂಡುಬಂದಿತು. ಚುನಾವಣಾ ಸಿಬ್ಬಂದಿ ಹಾಗೂ ಭದ್ರತಾ ಪಡೆಯ ಸಹಕಾರದೊಂದಿಗೆ ಮತದಾನ ಪ್ರಕ್ರಿಯೆಯು ಸುಗಮವಾಗಿ ಜರುಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಸಮಾನತೆಯ ಸಂಭ್ರಮ | ಹದಡಿಯಲ್ಲಿ ತೃತೀಯ ಲಿಂಗತ್ವ ಮದಾರರಿಂದ ಮತಚಲಾವಣೆ

Published

on

ಸುದ್ದಿದಿನಡೆಸ್ಕ್:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಹದಡಿ ಗ್ರಾಮದ ಮತಗಟ್ಟೆಯಲ್ಲಿ ತೃತೀಯ ಲಿಂಗತ್ವ ಮತದಾರರು ಮತಗಟ್ಟೆಗೆ ಆಗಮಿಸಿ ಸಂತೋಷದಿಂದ ಮತ ಚಲಾಯಿಸಿದರು.

ಸಮಾಜದ ಪ್ರತಿಯೊಬ್ಬರಿಗೂ ಸಮಾನ ಹಕ್ಕು ಎಂಬ ಸಂದೇಶವನ್ನು ಸಾರಿದ ಕ್ಷಣ! ತಮ್ಮ ಅಮೂಲ್ಯ ಮತದಾನದ ಮೂಲಕ ಪ್ರಜಾಪ್ರಭುತ್ವವನ್ನು ಬಲಪಡಿಸಿದ ತೃತೀಯ ಲಿಂಗತ್ವ ಮತದಾರರಿಗೆ ಅಭಿನಂದನೆಗಳು ಎಂದು ಜಿಲ್ಲಾ ಪಂಚಾಯತ್ ಸಿಇಓ ತಿಳಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending