ದಿನದ ಸುದ್ದಿ
ದಾವಣಗೆರೆ – ಹರಿಹರ ನಗರಾಭಿವೃದ್ದಿ ಪ್ರಾಧಿಕಾರ 2022-23ನೇ ಸಾಲಿನ ಆಯ-ವ್ಯಯ ಸಭೆ ; ಇಲ್ಲಿದೆ ಕಂಪ್ಲೀಟ್ ಡೀಟೆಲ್ಸ್
ಸುದ್ದಿದಿನ,ದಾವಣಗೆರೆ : ದಾವಣಗೆರೆ-ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಕೆ.ಎಂ.ಸುರೇಶ್ ಇವರ ಅಧ್ಯಕ್ಷತೆಯಲ್ಲಿ ಶುಕ್ರವಾರ ಪ್ರಾಧಿಕಾರದ 2022-23ನೇ ಸಾಲಿನ ಯೋಜಿತ ಆಯವ್ಯಯ ಸಭೆ ನಡೆಸಲಾಯಿತು.
ದೂಡಾ ಕಚೇರಿಯಲ್ಲಿ ನಡೆದ ಆಯವ್ಯಯ ಸಭೆಯಲ್ಲಿ ಆಯುಕ್ತರಾದ ಕುಮಾರಸ್ವಾಮಿಯವರು ರೂ.18258.76 ಲಕ್ಷಗಳ ಆದಾಯದ ಹಾಗೂ 18136.03 ಲಕ್ಷಗಳ ನಿರೀಕ್ಷಿತ ವೆಚ್ಚದ ಅಂದಾಜನ್ನು ಮಂಡಿಸಿದರು.
ಈ ಕೆಳಕಂಡಂತೆ 2022-23ರ ಆಯ-ವ್ಯಯದ ಪ್ರಮುಖ ಅಂಶ
- 2022-23ನೇ ಸಾಲಿನಲ್ಲಿ ಪ್ರಾಧಿಕಾರವು ತನ್ನ ವಿವಿಧ ಬ್ಯಾಂಕ್ಗಳಲ್ಲಿ ನಿಶ್ಚಿತ ಠೇವಣಿ ಒಳಗೊಂಡಂತೆ ಪ್ರಸಕ್ತ ಸಾಲಿನಲ್ಲಿನ ಆದಾಯವು ರೂ.18258.76 ಲಕ್ಷಗಳು ಬರುವುದಾಗಿ ನಿರೀಕ್ಷಿಸಿರುತ್ತದೆ.
- 2022-23ನೇ ಸಾಲಿನಲ್ಲಿ ಪ್ರಾಧಿಕಾರವು ತನ್ನ ಸಾಮಾನ್ಯ ಆಡಳಿತದ ನಿಶ್ಚಿತ ವೆಚ್ಚಗಳನ್ನು ಒಳಗೊಂಡಂತೆ ಪ್ರಾಧಿಕಾರದ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗಾಗಿ ರೂ.18136.03 ಲಕ್ಷಗಳ ವೆಚ್ಚವನ್ನು ವಹಿಸಲು ಉದ್ದೇಶಿಸಲಾಗಿದೆ.
- 2022-23ನೇ ಸಾಲಿನಲ್ಲಿ ಪ್ರಾಧಿಕಾರವು ರೂ.122.73 ಲಕ್ಷಗಳ ಉಳಿತಾಯದ ಆಯಾವ್ಯಯವನ್ನು ಮಂಡಿಸಲಾಗಿರುತ್ತದೆ.
- 2022-23ನೇ ಸಾಲಿನಲ್ಲಿ ಉದ್ದೇಶಿಸಲಾಗಿರುವ ಅಭಿವೃದ್ಧಿ ಕಾಮಗಾರಿಗಳ ವಿವರ
2021-22ನೇ ಸಾಲಿನಲ್ಲಿ ಕೈಗೊಂಡ ಕಾಮಗಾರಿಗಳು, ಕಾಮಗಾರಿಗಳು ಚಾಲ್ತಿಯಲ್ಲಿದ್ದು ಮುಂದುವರೆದ ಕಾಮಗಾರಿಗಳಾಗಿರುವುದರಿಂದ ದಾವಣಗೆರೆ ಹಾಗೂ ಹರಿಹರ ವ್ಯಾಪ್ತಿಯಲ್ಲಿನ ವಿವಿಧ ಕಾಮಗಾರಿಗಳಿಗೆ ಒಟ್ಟು ರೂ.10543.37 ಲಕ್ಷಗಳ ಮೊತ್ತವನ್ನು ಕಾಯ್ದಿರಿಸಲಾಗಿದೆ.
- ಪ್ರಾಧಿಕಾರವು ಪ್ರಸಕ್ತ ಸಾಲಿನಲ್ಲಿ ಕುಂದುವಾಡ ಗ್ರಾಮದಲ್ಲಿ ಅಂದಾಜು 53.00 ಎಕರೆಯಲ್ಲಿ ನೂತನ ವಸತಿ ಬಡಾವಣೆ ನಿರ್ಮಾಣಕ್ಕಾಗಿ 2021-22ನೇ ಸಾಲಿನಲ್ಲಿ ರೂ.6000.00ಲಕ್ಷಗಳನ್ನು ಕಾಯ್ದಿರಿಸಿದ್ದು, ಇದರೊಂದಿಗೆ ಪ್ರಸಕ್ತ ಅವಧಿಯಲ್ಲಿ ರೂ.4000.00 ಲಕ್ಷಗಳನ್ನು ಕಾಯ್ದಿರಿಸಿದ್ದು, ಒಟ್ಟು ರೂ.10,000-00 ಲಕ್ಷಗಳ ಮೊತ್ತವನ್ನು ಕಾಯ್ದಿರಿಸಲಾಗಿರುತ್ತದೆ.
- ಪ್ರಾಧಿಕಾರದ ವ್ಯಾಪ್ತಿಯಲ್ಲಿರುವ ಬಾತಿ ಕೆರೆಯನ್ನು ಕೆರೆ ಸಂರಕ್ಷಣಾ ಪ್ರಾಧಿಕಾರದ ಅನುಮೋದನೆಯಂತೆ ಅಭಿವೃದ್ಧಿ ಪಡಿಸಿ ಸೌಂದರ್ಯಕರಣಗೊಳಿಸಿ ಹಾಗೂ ಆಕರ್ಷಕ ಪ್ರವಾಸೋದ್ಯಮ ತಾಣವನ್ನಾಗಿ ಅಭಿವೃದ್ದಿ ಪಡಿಸುವ ಸಲುವಾಗಿ ರೂ.846.00 ಲಕ್ಷಗಳ ಮೊತ್ತವನ್ನು ಮುಂದುವರೆದ ಕಾಮಗಾರಿಯಲ್ಲಿ ಕಾಯ್ದಿರಿಸಿದ್ದು, ಈಗ ದರಗಳ ಏರಿಳಿತದಿಂದ 2022-23ನೇ ಸಾಲಿನ ಆಯಾವ್ಯಯದಲ್ಲಿ ರೂ.44.00 ಲಕ್ಷಗಳನ್ನು ಸೇರಿಸಿಕೊಂಡು ಒಟ್ಟು ರೂ.890.00 ಲಕ್ಷಗಳ ಮೊತ್ತವನ್ನು ಕಾಯ್ದಿರಿಸಲಾಗಿರುತ್ತದೆ.
- ಪ್ರಾಧಿಕಾರದ ವ್ಯಾಪ್ತಿಯಲ್ಲಿರುವ ಹಾಗೂ ದಾವಣಗೆರೆ ಮಹಾನಗರಕ್ಕೆ ಕುಡಿಯುವ ನೀರಿನ ಜಲ ಮೂಲವಾದ ಟಿ.ವಿ.ಸ್ಟೇಷನ್ ಕೆರೆಯನ್ನು ಅಭಿವೃದ್ಧಿ ಪಡಿಸುವ ಸಲುವಾಗಿ ರೂ.275.00 ಲಕ್ಷಗಳನ್ನು ಮುಂದುವರೆದ ಕಾಮಗಾರಿಯಲ್ಲಿ ಕಾಯ್ದಿರಿಸಲಾಗಿದೆ.
- ಪ್ರಾಧಿಕಾರದ ವ್ಯಾಪ್ತಿಯಲ್ಲಿರುವ ಹೊನ್ನೂರು ಕೆರೆಯನ್ನು ಅಭಿವೃದ್ಧಿ ಪಡಿಸುವ ಸಲುವಾಗಿ ರೂ.35.00 ಲಕ್ಷಗಳ ಮೊತ್ತವನ್ನು ಮುಂದುವರೆದ ಕಾಮಗಾರಿಯಲ್ಲಿ ಕಾಯ್ದಿರಿಸಲಾಗಿದೆ.
- ದಾ-ಹ ನಗರಾಭಿವೃದ್ಧಿ ಪ್ರಾಧಿಕಾರವು ಮಹಾಯೋಜನೆ ವ್ಯಾಪ್ತಿಯಲ್ಲಿರುವ ಅಂದಾಜು 25.00 ಎಕರೆ ಭೂಮಿಯನ್ನು ಪ್ರಾಧಿಕಾರ ಮಹಾಯೋಜನೆಯಲ್ಲಿ ಉದ್ಯಾನವನಕ್ಕೆ ಕಾಯ್ದಿರಿಸಿರುವ ಜಮೀನುಗಳಲ್ಲಿ ಅಂದಾಜು 25.00 ಎಕರೆ ಜಮೀನನ್ನು ಭೂ ಸ್ವಾಧೀನ/ನೇರ ಖರೀದಿ ಮಾಡಿಕೊಂಡು ದಾವಣಗೆರೆ ನಾಗರೀಕರಿಗೆ ಒಂದು ಬೃಹತ್ ಅತ್ಯುತ್ತಮ ಉದ್ಯಾನವನ್ನು ನಿರ್ಮಿಸುವ ಸಲುವಾಗಿ ರೂ.1050.00 ಲಕ್ಷಗಳ ಮೊತ್ತವನ್ನು ಕಾಯ್ದಿರಿಸಲಾಗಿದೆ.
- ಶ್ರೀ ಜೆ.ಹೆಚ್.ಪಟೇಲ್ ಬಡಾವಣೆಯಲ್ಲಿ ಪ್ರಾಧಿಕಾರದ ವಶದಲ್ಲಿರುವ ನಿವೇಶನದಲ್ಲಿ ಅಧಿಕಾರಿ/ನೌಕರರಿಗಾಗಿ ವಸತಿ ಸಮುಚ್ಛಯ ಹಾಗೂ ಅತಿಥಿ ಗೃಹ ನಿರ್ಮಾಣಕ್ಕಾಗಿ ರೂ.500.00 ಲಕ್ಷಗಳ ಮೊತ್ತವನ್ನು ಮುಂದುವರೆದ ಕಾಮಗಾರಿಯಲ್ಲಿ ಕಾಯ್ದಿರಿಸಲಾಗಿದೆ.
- ಆರ್.ಟಿ.ಓ. ಕಛೇರಿ ಎದುರುಗಡೆಯಲ್ಲಿರುವ ಪ್ರಾಧಿಕಾರದ ಜಾಗದಲ್ಲಿ ನೂತನ ವಾಣಿಜ್ಯ ಸಂಕೀರ್ಣ ನಿರ್ಮಾಣಕ್ಕಾಗಿ ರೂ.500.00 ಲಕ್ಷಗಳ ಮೊತ್ತವನ್ನು ಮುಂದುವರೆದ ಕಾಮಗಾರಿಯಲ್ಲಿ ಕಾಯ್ದಿರಿಸಲಾಗಿದೆ.
- ಪ್ರಾಧಿಕಾರದ ವ್ಯಾಪ್ತಿಯ ಪಿ.ಬಿ. ರಸ್ತೆಯ ಡಿ.ಸಿ.ಎಂ. ಟೌನ್ಶಿಫ್ನ ರೈಲ್ವೆ ಅಂಡರ್ ಪಾಸ್ ನಿಂದ ಚಿಂದೋಡಿಲೀಲಾ ರಂಗ ಮಂದಿರದವರೆಗೆ ದ್ವಿಪಥ ರಸ್ತೆಯ ರಸ್ತೆ ವಿಭಜಕದಲ್ಲಿ ಅಲಂಕಾರಿಕ ಕೋನಿಕಲ್ ವಿದ್ಯುತ್ ದೀಪಗಳನ್ನು ಅಳವಡಿಸುವ ಕಾಮಗಾರಿಗೆ ರೂ.179.00 ಲಕ್ಷಗಳ ಮೊತ್ತವನ್ನು ಕಾಯ್ದಿರಿಸಲಾಗಿದೆ.
- ಪ್ರಾಧಿಕಾರ ವ್ಯಾಪ್ತಿಯಲ್ಲಿ ಪ್ರಾಧಿಕಾರದ ಮಹಾಯೋಜನೆಯಲ್ಲಿರುವ ಶ್ರೀ ಜಿ. ಮಲ್ಲಿಕಾರ್ಜುನಪ್ಪ ದ್ವಿಪಥ ರಸ್ತೆಯು ಪಿ.ಬಿ. ರಸ್ತೆಗೆ ಕೂಡುವ ಶ್ರೀ ಜಿ.ಮಲ್ಲಿಕಾರ್ಜುನ ವೃತ್ತದ ಅಭಿವೃದ್ಧಿ ಪಡಿಸುವ ಕಾಮಗಾರಿಗೆ ರೂ.50.00 ಲಕ್ಷಗಳ ಮೊತ್ತವನ್ನು ಕಾಯ್ದಿರಿಸಲಾಗಿದೆ.
- ಪ್ರಾಧಿಕಾರದಿಂದ ನಿರ್ಮಾಣ ಮಾಡಲಾದ ಶ್ರೀ ಜೆ.ಹೆಚ್.ಪಟೇಲ್ ಬಡಾವಣೆಯ ಸಂಪೂರ್ಣ ಅಭಿವೃದ್ಧಿ ರಸ್ತೆಗಳ ಡಾಂಬರೀಕರಣ, ವೃತ್ತಗಳ ಅಭಿವೃದ್ಧಿ, ಉದ್ಯಾನವನಗಳ ಅಭಿವೃದ್ಧಿ ಮತ್ತು ಸೋಲಾರ್ ದೀಪ ಅಳವಡಿಸಲು, ವಿದ್ಯುತ್ ದೀಪಗಳ ಅಳವಡಿಕೆ, ಕುಡಿಯುವ ನೀರು ಒಳಚರಂಡಿ ಹಾಗೂ ಸ್ವಚ್ಛತೆ ಸಂಬಂಧಿಸಿದ ಕಾಮಗಾರಿಗಳಿಗಾಗಿ ರೂ.975.00 ಲಕ್ಷಗಳ ಮೊತ್ತವನ್ನು ಕಾಯ್ದಿರಿಸಲಾಗಿದೆ.
- ದಾವಣಗೆರೆ-ಹರಿಹರ ಮಹಾಯೋಜನೆ ಪರಿಷ್ಕøತ-2 ತಯಾರಿಕೆಗೆ ರೂ.50.00 ಲಕ್ಷಗಳ ಮೊತ್ತವನ್ನು ಕಾಯ್ದಿರಿಸಲಾಗಿದೆ.
- ಪ್ರಾಧಿಕಾರದ ವ್ಯಾಪ್ತಿಯ ಹರಿಹರ ನಗರಕ್ಕೆ ಸಂಬಂಧಿಸಿದಂತೆ ವಿವಿಧ ರಸ್ತೆ ನಿರ್ಮಾಣ ಕಾಮಗಾರಿಗಳಿಗಾಗಿ ರೂ.100.00 ಲಕ್ಷಗಳ ಮೊತ್ತವನ್ನು ಕಾಯ್ದಿರಿಸಲಾಗಿದೆ.
- ಪ್ರಾಧಿಕಾರದ ವ್ಯಾಪ್ತಿಯಲ್ಲಿರುವ ನಾಗನೂರು, ಶಿರಮಗೊಂಡನಹಳ್ಳಿ ಕೆರೆ ಅಭಿವೃದ್ಧಿ ಪಡಿಸುವ ಸಲುವಾಗಿ ರೂ.200.00 ಲಕ್ಷಗಳ ಮೊತ್ತವನ್ನು ಕಾಯ್ದಿರಿಸಲಾಗಿದೆ.
- ಪ್ರಾಧಿಕಾರದ ವ್ಯಾಪ್ತಿಯ ತರಳಬಾಳು ಬಡಾವಣೆಯಲ್ಲಿ 10ನೇ ಕ್ರಾಸ್ನಲ್ಲಿ ಸಿ.ಸಿ. ರಸ್ತೆ ನಿರ್ಮಾಣಕ್ಕಾಗಿ ರೂ.75.00 ಲಕ್ಷಗಳ ಮೊತ್ತವನ್ನು ಕಾಯ್ದಿರಿಸಲಾಗಿದೆ.
- ಪ್ರಾಧಿಕಾರದ ವ್ಯಾಪ್ತಿಯ ತರಳಬಾಳು ಬಡಾವಣೆಯಲ್ಲಿ 11ನೇ ಕ್ರಾಸ್ನಲ್ಲಿ ಸಿ.ಸಿ. ರಸ್ತೆ ನಿರ್ಮಾಣಕ್ಕಾಗಿ ರೂ.75.00 ಲಕ್ಷಗಳ ಮೊತ್ತವನ್ನು ಕಾಯ್ದಿರಿಸಲಾಗಿದೆ.
- ದಾವಣಗೆರೆ ಮಹಾನಗರಪಾಲಿಕೆ ವ್ಯಾಪ್ತಿಯ ವಾರ್ಡ್ ನಂ.33 ರಲ್ಲಿ ಬರುವ ದುರ್ಗಾಂಭಿಕಾ ಬಡಾವಣೆಯ ಮುಖ್ಯ ಮತ್ತು ಅಡ್ಡ ರಸ್ತೆ ಹಾಗೂ ಡಾಬಾ ಸ್ಟಾಪ್ ಎದುರಿನ ಮುಖ್ಯ ರಸ್ತೆಗಳಲ್ಲಿ ಸಿ.ಸಿ ರಸ್ತೆ ಅಭಿವೃದ್ದಿ ಕಾಮಗಾರಿ ಮತ್ತು ನಿಟುವಳ್ಳಿ ಮುಖ್ಯ ರಸ್ತೆಯಲ್ಲಿ ಹದಡಿ ರಸ್ತೆಯಿಂದ ಎಸ್.ಬಿ.ಐ. ಬ್ಯಾಂಕ್ ವರೆಗೂ ಮಳೆ ನೀರು ಚರಂಡಿ ನಿರ್ಮಾಣ ಕಾಮಗಾರಿಗೆ ರೂ.140.00 ಲಕ್ಷಗಳ ಮೊತ್ತವನ್ನು ಕಾಯ್ದಿರಿಸಲಾಗಿದೆ.
- ದಾವಣಗೆರೆ ಮಹಾನಗರಪಾಲಿಕೆ ವ್ಯಾಪ್ತಿಯ ವಿಜಯನಗರ ಬಡಾವಣೆಯ 1ನೇ ಮೇನ್, 2ನೇ ಕ್ರಾಸ್ ರಸ್ತೆಯಲ್ಲಿ ಸಿ.ಸಿ. ಚರಂಡಿ ಮತ್ತು ಸಿ.ಸಿ. ರಸ್ತೆ ನಿರ್ಮಾಣ ಕಾಮಗಾರಿಗೆ ರೂ.50.00 ಲಕ್ಷಗಳ ಮೊತ್ತವನ್ನು ಕಾಯ್ದಿರಿಸಲಾಗಿದೆ.
- ದಾವಣಗೆರೆ ನಗರದ ಶ್ರೀ ಎಸ್.ನಿಜಲಿಂಗಪ್ಪ ಬಡಾವಣೆಯ ಅಮೃತಮಯಿ ಶಾಲೆಯ ಪಕ್ಕದಲ್ಲಿರುವ ಆಟದ ಮೈದಾನಕ್ಕೆ ಆವರಣ ಗೋಡೆ ನಿರ್ಮಿಸುವ ಕಾಮಗಾರಿಗೆ ರೂ.10.00 ಲಕ್ಷಗಳ ಮೊತ್ತವನ್ನು ಕಾಯ್ದಿರಿಸಲಾಗಿದೆ.
- ದಾವಣಗೆರೆ ನಗರದ ಪಿ.ಬಿ. ರಸ್ತೆಯಿಂದ ಕುಂದುವಾಡ ರಸ್ತೆ ಕೂಡುವ ರಸ್ತೆಯಲ್ಲಿ ಅಡ್ಡಲಾಗಿ ಬಂದಿರುವ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸಲು ರೂ.10.00 ಲಕ್ಷಗಳ ಮೊತ್ತವನ್ನು ಕಾಯ್ದಿರಿಸಲಾಗಿದೆ.
- ಮಹಾಯೋಜನೆಯಲ್ಲಿರುವ ದಾವಣಗೆರೆ ನಗರದ ವಾರ್ಡ್ ನಂ: 28 ಕಸ್ತೂರಿ ಬಾ ಬಡಾವಣೆ ಅಜ್ಜಂಪುರ ಶೆಟ್ರು ಲೇಔಟ್ ನಲ್ಲಿರುವ ರಸ್ತೆಯನ್ನು ಶಿವಪ್ಪ ಸರ್ಕಲ್ನಿಂದ ನಿಟುವಳ್ಳಿಗೆ ಹೋಗುವ ರಸ್ತೆಯಿಂದ ಕೆ.ಬಿ. ಬಡಾವಣೆಗೆ ಹೋಗುವ ರಸ್ತೆಯ ವರೆಗೆ ಅಭಿವೃದ್ಧಿ ಪಡಿಸುವ ಕಾಮಗಾರಿಗೆ ರೂ.23.00 ಲಕ್ಷಗಳ ಮೊತ್ತವನ್ನು ಕಾಯ್ದಿರಿಸಲಾಗಿದೆ.
- ಮಹಾಯೋಜನೆಯಲ್ಲಿರುವ ದಾವಣಗೆರೆ ನಗರದ ವಾರ್ಡ್ ನಂ: 33ರ ಸರಸ್ವತಿ ನಗರ ಬಿ ಬ್ಲಾಕ್ನಲ್ಲಿ ಮನೆ ನಂ: 780/83/2ರ ಮುಂಭಾಗದ ರಸ್ತೆ ಹಾಗೂ ಪಂಚಮುಖಿ ಆಂಜನೇಯ ದೇವಸ್ಥಾನದ ಮುಂಭಾಗದ ರಸ್ತೆಗಳನ್ನು ಅಭಿವೃದ್ಧಿ ಪಡಿಸುವ ಕಾಮಗಾರಿಗೆ ರೂ.27.00 ಲಕ್ಷಗಳ ಮೊತ್ತವನ್ನು ಕಾಯ್ದಿರಿಸಲಾಗಿದೆ.
- ದಾವಣಗೆರೆ ಮಹಾಯೋಜನೆಯಲ್ಲಿರುವ ವಾರ್ಡ್ ನಂ: 33 ಸರಸ್ವತಿ ನಗರ ಬಿ ಬ್ಲಾಕ್ 9ನೇ ಕ್ರಾಸ್ನಲ್ಲಿ ಕೆ.ಎಸ್.ಎಸ್. ಕಾಲೇಜು ಹತ್ತಿರ ಇರುವ ಪಾರ್ಕ್ ಅಭಿವೃದ್ಧಿಗಾಗಿ ರೂ.50.00 ಲಕ್ಷಗಳ ಮೊತ್ತವನ್ನು ಕಾಯ್ದಿರಿಸಲಾಗಿದೆ.
- ದಾವಣಗೆರೆ ಮಹಾಯೋಜನೆಯಲ್ಲಿರುವ ವಾರ್ಡ್ ನಂ: 13 ಶ್ರೀ ಡಿ.ದೇವರಾಜ ಕ್ವಾಟರ್ಸ್ ಹತ್ತಿರ ಇರುವ ಮುಖ್ಯ ರಸ್ತೆಯಲ್ಲಿ ಬೇತೂರು ಮುಖ್ಯ ರಸ್ತೆಯಿಂದ ಇಂದಿರಾ ನಗರ, ಎ.ಕೆ. ಹಟ್ಟಿಯವರೆಗೂ ಸಿ.ಸಿ. ರಸ್ತೆ ನಿರ್ಮಿಸಿ ಎರಡು ಬದಿಯಲ್ಲಿ ಸಿ.ಸಿ. ಚರಂಡಿ ನಿರ್ಮಿಸಿ ಪಾದಚಾರಿ ರಸ್ತೆ ನಿರ್ಮಿಸುವ ಕಾಮಗಾರಿಗಾಗಿ ರೂ.50.00 ಲಕ್ಷಗಳ ಮೊತ್ತವನ್ನು ಕಾಯ್ದಿರಿಸಲಾಗಿದೆ.
- ಶ್ರೀ ಎಸ್.ನಿಜಲಿಂಗಪ್ಪ ಬಡಾವಣೆಯ ಅಮರ್ ಜವಾನ್ ಉದ್ಯಾನವನದಲ್ಲಿ ಬಯಲು ವೇದಿಕೆ ಮುಂಭಾಗದಲ್ಲಿ ಪೇವರ್ ಅಳವಡಿಸಿ ಅಭಿವೃದ್ಧಿ ಪಡಿಸುವ ಕಾಮಗಾರಿಗಾಗಿ ರೂ.8.00 ಲಕ್ಷಗಳ ಮೊತ್ತವನ್ನು ಕಾಯ್ದಿರಿಸಲಾಗಿದೆ.
- ಮಹಾಯೋಜನೆಯಲ್ಲಿರುವ ದಾವಣಗೆರೆ ವಾರ್ಡ್ ನಂ: 29 ಆನಗೋಡು ಹೋಟೇಲ್ ನಿಂದ ಡಿ.ಸಿ.ಎಂ. ಕಾಂಪೌಂಡ್ ವರೆಗೂ (ಕೊಟ್ಟೂರೇಶ್ವರ ಬಡಾವಣೆ) ರಸ್ತೆ ಅಭಿವೃದ್ಧಿ ಕಾಮಗಾರಿಗೆ ರೂ.30.00 ಲಕ್ಷಗಳ ಮೊತ್ತವನ್ನು ಕಾಯ್ದಿರಿಸಲಾಗಿದೆ.
- ಮಹಾಯೋಜನೆಯಲ್ಲಿರುವ ದಾವಣಗೆರೆ ನಗರದ ಬಾಡಾ ಕ್ರಾಸ್ನಿಂದ ಬೇತೂರು ಗ್ರಾಮದವರೆಗೆ ರಿಂಗ್ ರಸ್ತೆ ನಿರ್ಮಿಸಲು ಡಿ.ಪಿ.ಆರ್. ತಯಾರಿಸಲು ರೂ.10.00 ಲಕ್ಷಗಳ ಮೊತ್ತವನ್ನು ಕಾಯ್ದಿರಿಸಲಾಗಿದೆ.
ಸಭೆಯಲ್ಲಿ ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಸ್.ಎ.ರವೀಂದ್ರನಾಥ್, ದೂಡಾ ಸದಸ್ಯರುಗಳಾದ ಮಾರುತಿರಾವ್ ಘಾಟ್ಗೆ, ಲಕ್ಷ್ಮಣ, ಬಾತಿ ಚಂದ್ರಶೇಖರ್, ಗೌರಮ್ಮ.ವಿ.ಪಾಟೀಲ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಾಮಗೊಂಡ ಬಸರಗಿ, ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಕೆ.ಹೆಚ್.ಶ್ರೀಕರ್, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಪ್ರಾಧಿಕಾರದ ಜಂಟಿ ನಿರ್ದೇಶಕರು, ಸಹಾಯಕ ನಿರ್ದೇಶಕರು ಮತ್ತು ಲೆಕ್ಕಪರಿಶೋಧನಾಧಿಕಾರಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಈಜುಕೊಳದಲ್ಲಿ ಸಾವು ; ಪರಿಹಾರಕ್ಕೆ ಆದೇಶ
ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ಮೊಹಮ್ಮದ್ ಮುಕ್ತಿಯಾರ್ ಬಿನ್ ಎಸ್. ಆರ್ ಸಮೀವುಲ್ಲ ಇವರ ಮಗ ಮೊಹಮ್ಮದ್ ಮುಬಾರಕ್ @ ಮುಬಾರಕ್ ಈತ ಮತ್ತು ನಿಸಾರ್ ಅಹಮದ್ ಬಿನ್ ಮಹಮ್ಮದ್ ಅಬಿದ್ ಮತ್ತು ಇನ್ನೊಬ್ಬರು, ಬೇತೂರು ರೋಡ್, ಸಿದ್ಧರಾಮೇಶ್ವರ ಬಡಾವಣೆ ಇವರು ತಮ್ಮ ಮಗ ತಾಜು @ ತಾಜುದ್ದೀನ್ ಇವರು ಸ್ವಿಮ್ಮಿಂಗ್ ಪೂಲ್ನಲ್ಲಿ ಈಜಾಡುವ ಸಂಧರ್ಭದಲ್ಲಿ ಮರಣ ಹೊಂದಿರುತ್ತಾರೆ.
ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು 4ನೇ ಎದುರುದಾರರಾದ ಸದಾನಂದ ವಗಲೆ ಹಾಗೂ 1 ರಿಂದ 3ನೇ ಎದುರುದಾರರ ವಿರುದ್ಧ, ತಮ್ಮ ಸೇವೆಯಲ್ಲಿನ ನಿರ್ಲಕ್ಷತೆಯಿಂದ ಘಟನೆ ಸಂಭವಿಸಿದ್ದು ಎಂಬ ತೀರ್ಮಾನಕ್ಕೆ ಆಯೋಗವು ಬಂದಿದ್ದು, ಈಗಾಗಲೇ, 1 ರಿಂದ 3ನೇ ಎದುರುದಾರರು, ದೂರುದಾರರಿಗೆ ರೂ.500,000/- ಲಕ್ಷವನ್ನು ಪರಿಹಾರವಾಗಿ ಈಗಾಗಲೆ ಕೊಟ್ಟಿದ್ದು, ಆದ್ದರಿಂದ 1 ರಿಂದ 3ನೇ ಎದುರುದಾರರ ವಿರುದ್ಧ ಪ್ರಕರಣವನ್ನು ವಜಾ ಮಾಡಿದೆ.
4ನೇ ಎದುರುದಾರರಾದ ಸದಾನಂದ ವಗಲೆ, ಕಾಂಟ್ರಕ್ಟರ್, ಇವರು ಈ ಎರಡು ಪ್ರಕರಣದ ದೂರುದಾರರಿಗೆ ಆದೇಶಿಸಿದ ದಿನದಿಂದ ಒಂದು ತಿಂಗಳೊಳಗೆ ಆದೇಶದ ಪ್ರಕಾರ ಪಾವತಿಸುವಂತೆ ಮೇ.19 ರಂದು ಆದೇಶಿಸಿ ರೂ. 5 ಲಕ್ಷಗಳನ್ನು ಶೇಕಡಾ 6 ವಾರ್ಷಿಕ ಬಡ್ಡಿಯೊಂದಿಗೆ ಹಾಗೂ ದೂರು ಖರ್ಚು ಹಾಗೂ ಮಾನಸಿಕ ಯಾತನೆಗೆ ತಲಾ ರೂ.5 ಸಾವಿರದಂತೆ, ಒಟ್ಟು ರೂ.10,000/-ಗಳನ್ನು ಪರಿಹಾರ ರೂಪವಾಗಿ ದೂರುದಾರರಿಗೆ ನೀಡುವಂತೆ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಪ್ರತ್ಯೇಕವಾಗಿ ಪಾವತಿಸುವಂತೆ ಜಿಲ್ಲಾ ಗ್ರಾಹಕರ ಆಯೋಗದ ಅಧ್ಯಕ್ಷರಾದ ಹೆಚ್.ಎನ್.ಮೀನಾ ಮತ್ತು ಸದಸ್ಯರಾದ ಸಿ.ಎಸ್. ತ್ಯಾಗರಾಜನ್ ಆದೇಶಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸ್ವಾಮಿ ವಿವೇಕಾನಂದರ ಚಿಂತನೆಗಳಿಂದ ಯುವಜನತೆಗೆ ಪ್ರೇರಣೆ ; ವಿಶ್ವನಾಥ.ಡಿ. ಅರ್
ಸುದ್ದಿದಿನ,ಬನ್ನಿಕೋಡು:ಮಾ.ಸ.ಬ. ಕಾಲೇಜ್, ದಾವಣಗೆರೆ ಹಾಗೂ ಬನ್ನಿಕೋಡು ಗ್ರಾಮದ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ ಎನ್.ಎಸ್.ಎಸ್. (ರಾಷ್ಟ್ರೀಯ ಸೇವಾ ಯೋಜನೆ) ವಿಶೇಷ ಶಿಬಿರದ ಎರಡನೇ ದಿನದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರೊ. ರಂಗಸ್ವಾಮಿ ಟಿ.ಆರ್. ವಹಿಸಿ, ವಿದ್ಯಾರ್ಥಿಗಳಿಗೆ ಲಭ್ಯವಾಗಿರುವ ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಕರೆ ನೀಡಿದರು.
ವಿಶೇಷ ಉಪನ್ಯಾಸದಲ್ಲಿ ಶ್ರೀ ವಿಶ್ವನಾಥ್ ಡಿ.ಆರ್., ಉಪನ್ಯಾಸಕರು ಹಾಗೂ ಪತ್ರಿಕಾ ವರದಿಗಾರರು, ಕೆ. ಬೇವಿನಹಳ್ಳಿ ಅವರು “ಸ್ವಾಮಿ ವಿವೇಕಾನಂದ ಮತ್ತು ಯುವಜನತೆ” ವಿಷಯದ ಕುರಿತು ಪ್ರೇರಣಾದಾಯಕ ಉಪನ್ಯಾಸ ನೀಡಿದರು. ಸ್ವಾಮಿ ವಿವೇಕಾನಂದರ ಜೀವನ ಸಾಧನೆ, ವ್ಯಕ್ತಿತ್ವ ಹಾಗೂ ದೇಶಭಕ್ತಿ ಕುರಿತು ವಿವರಿಸಿ, ಮಹಾನ್ ವ್ಯಕ್ತಿಗಳ ಆದರ್ಶಗಳನ್ನು ಅನುಸರಿಸಿ ಉತ್ತಮ ಆಚಾರ-ವಿಚಾರಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು. ಯುವಜನತೆ ತಮ್ಮ ಶಕ್ತಿಯನ್ನು ಸಮಾಜಸೇವೆ ಹಾಗೂ ದೇಶದ ಅಭಿವೃದ್ಧಿಗೆ ಬಳಸಬೇಕು ಎಂದು ಕರೆ ನೀಡಿದರು.
“ಎದ್ದು ನಿಲ್ಲಿ, ಜಾಗ್ರತವಾಗಿರಿ, ಗುರಿ ಸಾಧಿಸುವ ತನಕ ನಿಲ್ಲಬೇಡಿ” ಎಂಬ ಸ್ವಾಮಿ ವಿವೇಕಾನಂದರ ಅಮೂಲ್ಯ ವಾಕ್ಯವನ್ನು ಉಲ್ಲೇಖಿಸಿ, ಯುವಕರಲ್ಲಿ ಆತ್ಮವಿಶ್ವಾಸ ಮತ್ತು ಗುರಿನಿಷ್ಠೆ ಬೆಳೆಸುವಂತೆ ಪ್ರೇರೇಪಿಸಿದರು.
ಶ್ರೀ ಎ. ಜಯಪ್ಪ ಅವರು ಎನ್.ಎಸ್.ಎಸ್. ಕಾರ್ಯಚಟುವಟಿಕೆಗಳು ಸಮಾಜಸೇವೆ ಹಾಗೂ ಸಾಮಾಜಿಕ ಅರಿವು ಮೂಡಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ ಎಂದು ತಿಳಿಸಿದರು.
ಶ್ರೀ ಪಿ.ವಿ. ಸತೀಶ್ ಅವರು ಹಳ್ಳಿ ಜೀವನದ ಮಹತ್ವ ಹಾಗೂ ಸ್ವಚ್ಛತೆ ಬಗ್ಗೆ ಜಾಗೃತಿ ಮೂಡಿಸಿದರು.
ಉಪನ್ಯಾಸಕಿ ಕಾವ್ಯ ಶ್ರೀ ಅವರು ಮಹಿಳಾ ಸಬಲೀಕರಣದ ಕುರಿತು ಮಾತನಾಡಿ, ಮಹಿಳೆಯರು ಶಿಕ್ಷಣ ಹಾಗೂ ಆತ್ಮವಿಶ್ವಾಸದಿಂದ ಸಮಾಜದಲ್ಲಿ ತಮ್ಮದೇ ಆದ ಸ್ಥಾನಮಾನವನ್ನು ಪಡೆಯಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಗ್ರಾಮದ ಹಿರಿಯರು ಹಾಗೂ ಮುಖಂಡರಾದ ವಾಗೀಶ್ ಸುದರ್ಶನ ಎಸ್.ಸಿ., ವಿಜಯ, ಹನುಮಂತಪ್ಪ ಯು., ಕೆ.ಎಸ್. ಬಸವರಾಜು, ಕೆ. ರೇವಣಸಿದ್ಧಪ್ಪ ಮುಂತಾದವರು ಭಾಗವಹಿಸಿದ್ದರು.
ಶಿಬಿರಾಧಿಕಾರಿಗಳಾದ ಡಾ. ರಾಘವೇಂದ್ರ ಹಾಗೂ ಡಾ. ಪ್ರವೀಣಕುಮಾರ್, ದೈಹಿಕ ನಿರ್ದೇಶಕರಾದ ಧನಂಜಯ್ ಹಾಗೂ ಉಪನ್ಯಾಸಕರಾದ ಶ್ರೀ ಶಾಂತಕುಮಾರ್ ಉಪಸ್ಥಿತರಿದ್ದರು.
ವೇದಿಕೆ ಕಾರ್ಯಕ್ರಮದ ನಂತರ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುವ ಮೂಲಕ ಎರಡನೇ ದಿನದ ಶಿಬಿರವು ಮುಕ್ತಾಯಗೊಂಡಿತು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಲೋಕಾಯುಕ್ತ ಪೋಲಿಸ್ ಇನ್ಸ್ಪೆಕ್ಟರ್ ಪ್ರಭು ಬಿ. ಸೂರಿನ ಅವರಿಂದ ಕಾನೂನು ಅರಿವು
ಸುದ್ದಿದಿನ,ಬನ್ನಿಕೋಡು: ಮಾ.ಸ.ಬ. ಕಾಲೇಜು, ದಾವಣಗೆರೆ ಹಾಗೂ ಬನ್ನಿಕೋಡು ಗ್ರಾಮದ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ ಎನ್.ಎಸ್.ಎಸ್. (ರಾಷ್ಟ್ರೀಯ ಸೇವಾ ಯೋಜನೆ) ವಿಶೇಷ ಶಿಬಿರದ ಅಧ್ಯಕ್ಷತೆಯನ್ನು ಮಾ.ಸ.ಬ. ಕಾಲೇಜಿನ ವಾಣಿಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ವಿಜಯಕುಮಾರ್ ಎ.ಬಿ. ವಹಿಸಿದ್ದರು.
ಮುಖ್ಯ ಉಪನ್ಯಾಸಕರಾಗಿ ಕರ್ನಾಟಕ ಲೋಕಾಯುಕ್ತ, ದಾವಣಗೆರೆ ಇವರ ಪೋಲಿಸ್ ಇನ್ಸ್ಪೆಕ್ಟರ್ ಶ್ರೀ ಪ್ರಭು ಬಿ. ಸೂರಿನ ಭಾಗವಹಿಸಿ “ಕರ್ನಾಟಕ ಲೋಕಾಯುಕ್ತ ಕಾಯ್ದೆ ಮತ್ತು ಭ್ರಷ್ಟಾಚಾರ ನಿಗ್ರಹ ಕಾಯ್ದೆ” ಕುರಿತು ಸಮಗ್ರ ಮಾಹಿತಿ ನೀಡಿದರು. ಕರ್ನಾಟಕ ಲೋಕಾಯುಕ್ತದ ಸ್ಥಾಪನೆ ಮತ್ತು ಹಿನ್ನೆಲೆ, ಸಂಸ್ಥೆಯ ವ್ಯಾಪ್ತಿ, ದೂರು ಸಲ್ಲಿಸುವ ವಿಧಾನ, ವಿಚಾರಣೆ ಕ್ರಮ, ಭ್ರಷ್ಟಾಚಾರ ತಡೆ ಕಾಯ್ದೆಯ ಪ್ರಮುಖ ಅಂಶಗಳು, ಲೋಕಾಯುಕ್ತ ಸಂಸ್ಥೆಯ ವೈಶಿಷ್ಟ್ಯತೆಗಳು, ಹಗರಣಗಳ ತನಿಖಾ ವಿಧಾನ ಹಾಗೂ ಸರ್ಕಾರಿ ಹಣದ ದುರುಪಯೋಗ ತಡೆ ಕ್ರಮಗಳ ಬಗ್ಗೆ ವಿವರಿಸಿದರು. ಉಪನ್ಯಾಸದ ಅಂತ್ಯದಲ್ಲಿ ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಉತ್ತರ ನೀಡಿದರು.
ಜಿಲ್ಲಾ ನೋಡಲ್ ಅಧಿಕಾರಿಗಳಾದ ಡಾ. ಹೆಚ್.ಆರ್. ತಿಪ್ಪೇಸ್ವಾಮಿ ಅವರು ಯುವಜನತೆ ಹಾಗೂ ಸಾಮಾಜಿಕ ಸಾಮರಸ್ಯ ಕುರಿತು ಪ್ರೇರಣಾದಾಯಕ ಸಂದೇಶ ನೀಡಿದರು.
ಶಿಬಿರಾಧಿಕಾರಿಗಳಾದ ಡಾ. ರಾಘವೇಂದ್ರ ಮತ್ತು ಡಾ. ಪ್ರವೀಣಕುಮಾರ್, ದೈಹಿಕ ನಿರ್ದೇಶಕರಾದ ಧನಂಜಯ್, ಗ್ರಾಮದವರಾದ ಬಸವರಾಜ್, ಹಾಲಪ್ಪ, ಮಹದೇವಪ್ಪ, ಕುರಿಯರ್ ದುರುಗಪ್ಪ ಸೇರಿದಂತೆ ಅನೇಕರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ಕಾನೂನು ಜಾಗೃತಿ ಹಾಗೂ ಭ್ರಷ್ಟಾಚಾರ ವಿರೋಧಿ ಮನೋಭಾವ ಬೆಳೆಸುವಲ್ಲಿ ಯಶಸ್ವಿಯಾಯಿತು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days agoನಕಲಿ ಬಿಲ್ಲುಗಳ ಮೂಲಕ ಲಕ್ಷಾಂತರ ರೂಪಾಯಿ ಅವ್ಯವಹಾರ | ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲ ನಾಗರಾಜ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ6 days agoಬ್ಯಾಕ್ಲಾಗ್ ನಿಯಮಾವಳಿ ಉಲ್ಲಂಘನೆ ; ಶಾಲಾ ಶಿಕ್ಷಣ ಇಲಾಖೆ ನಿರ್ದೇಶಕ ಕರಿಚಣ್ಣನವರ್ ವಿರುದ್ಧ ಲೋಕಾಗೆ ದೂರು
-
ಅಂಕಣ4 days agoನೀಟ್ ಸೃಷ್ಟಿಸಿದ ಅವಾಂತರಗಳು ಮತ್ತು ಅದರ ಬಹುಮುಖಿ ಬಿಕ್ಕಟ್ಟುಗಳು: ಒಂದು ವಿಮರ್ಶಾತ್ಮಕ ನೋಟ
-
ದಿನದ ಸುದ್ದಿ4 days agoಲಾರಿ, ಟ್ರಾಕ್ಟರ್ ಗಳಿಗೆ ಟ್ರಿಪ್ ಚೀಟಿ ಇಲ್ಲದೆ ಅಕ್ರಮ ಸಾಗಾಣಿಕೆ ; ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳೊಂದಿಗೆ ಶಾಮೀಲು..!?
-
ದಿನದ ಸುದ್ದಿ6 days ago‘ಹಿಟ್ಲರ್ ಕಲ್ಯಾಣ’ದ ನಾಯಕನ ಬದುಕಿನ ಪಯಣ ಹೀಗಿತ್ತು
-
ದಿನದ ಸುದ್ದಿ4 days agoಕೆ. ಶಿವರಾಜಕುಮಾರ್ ಅವರಿಗೆ ಪಿಎಚ್ ಡಿ ಪದವಿ
-
ದಿನದ ಸುದ್ದಿ3 days agoಶಿಕ್ಷಕರು, ವಾರ್ಡನ್ಗಳಿಗೆ ಪೋಕ್ಸೊ ಕಾಯ್ದೆ ತರಬೇತಿ ನೀಡಿ
-
ದಿನದ ಸುದ್ದಿ2 days agoಲೋಕಾಯುಕ್ತ ಪೋಲಿಸ್ ಇನ್ಸ್ಪೆಕ್ಟರ್ ಪ್ರಭು ಬಿ. ಸೂರಿನ ಅವರಿಂದ ಕಾನೂನು ಅರಿವು

