ಕ್ರೀಡೆ
ಇಂದಿನ ಪ್ರಮುಖ ಸುದ್ದಿಗಳು
ಇಂದಿನ ಪ್ರಮುಖ ಸುದ್ದಿಗಳು
- ಮುಂಬೈನಲ್ಲಿ ಇದೀಗ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಪ್ರಥಮ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ಖ್ಯಾತ ಹಿನ್ನೆಲೆ ಗಾಯಕಿ, ಭಾರತರತ್ನ ಪುರಸ್ಕೃತ ಲತಾ ಮಂಗೇಶ್ಕರ್ ಅವರ ಸ್ಮರಣಾರ್ಥ ಈ ಪ್ರಶಸ್ತಿಯನ್ನು ಸ್ಥಾಪಿಸಲಾಗಿದೆ. ರಾಷ್ಟ್ರಕ್ಕೆ ಅನುಕರಣಿಯ ಕೊಡುಗೆ ನೀಡಿರುವ ವ್ಯಕ್ತಿಗೆ ವಾರ್ಷಿಕವಾಗಿ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತಿದೆ ಎಂದು ಪ್ರಕಟಣೆ ತಿಳಿಸಿದೆ.
- ಜಮ್ಮು-ಕಾಶ್ಮೀರ ಕೇಂದ್ರಾಡಳಿತ ಪ್ರದೇಶದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ರಾಷ್ಟ್ರೀಯ ಪಂಚಾಯತ್ ರಾಜ್ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ದೇಶಾದ್ಯಂತ ಎಲ್ಲ ಗ್ರಾಮ ಪಂಚಾಯತ್ಗಳ ಸದಸ್ಯರ ಸಭೆಗಳನ್ನುದ್ದೇಶಿಸಿ ಭಾಷಣ ಮಾಡುವುದರ ಜತೆಗೆ ಸಾಂಬಾ ಜಿಲ್ಲೆಯ ಪಲ್ಲಿ ಪಂಚಾಯತ್ಗೂ ಸಹ ಪ್ರಧಾನಿ ಭೇಟಿ ನೀಡಿ ಸುಮಾರು 20ಸಾವಿರ ಕೋಟಿ ರೂಪಾಯಿ ಮೊತ್ತದ ಹಲವಾರು ಅಭಿವೃಧ್ಧಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.
- ಫಿನ್ ಟೆನ್ ಸಂಬಂಧಿತ ಅನೇಕ ಹೊಸ ಸ್ಟಾರ್ಟ್ ಅಪ್ಗಳು ಕೂಡ ದೇಶದಲ್ಲಿ ಕಾರ್ಯಾರಂಭ ಮಾಡಿವೆ. ದೆಹಲಿಯಲ್ಲಿ ಒಂದು ದಿನ ನಗದು ಬಳಸದೇ ಇಡೀ ದಿನದ ಖರ್ಚನ್ನು ಡಿಜಿಟಲ್ ಪಾವತಿ ಮೂಲವೇ ಮಾಡಿದ ಸಾಗರಿಕ ಮತ್ತು ಪ್ರೇಕ್ಷಾ ಅವರ ಪ್ರಯೋಗವನ್ನು ಪ್ರಧಾನಿ ನರೇಂದ್ರ ಮೋದಿ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಉದಾಹರಣೆ ನೀಡಿದರು.
- ಚುನಾಯಿತ ಪ್ರತಿನಿಧಿಗಳ ಪಕ್ಷಾಂತರ ದೇಶವನ್ನು ಬಾಧಿಸುತ್ತಿದೆ. ಈ ಸಮಸ್ಯೆ ಪರಿಹಾರಕ್ಕೆ ಸಂಬಂಧಿತ ಕಾಯ್ದೆಗೆ ತಿದ್ದುಪಡಿ ತರುವುದು ಅತ್ಯಗತ್ಯವಾಗಿದೆ ಎಂದು ಉಪರಾಷ್ಟ್ರಪತಿ ಎಂ. ವೆಂಕಯ್ಯನಾಯ್ಡು ಬೆಂಗಳೂರಿನಲ್ಲಿ ಆಯೋಜಿಸಿದ್ದ ನವಭಾರತದಲ್ಲಿ ಮಾಧ್ಯಮ ಕುರಿತು ಸಂವಾದದಲ್ಲಿ ಪ್ರತಿಪಾದಿಸಿದರು.
- ಸಫ್ದರ್ಜಂಗ್ ವಿಮಾನ ನಿಲ್ದಾಣದಲ್ಲಿ ನಾಳೆ ನಾಗರಿಕ ವಿಮಾನಯಾನ ಸಚಿವಾಲಯದಿಂದ ಬೃಹತ್ ಯೋಗ ಕಾರ್ಯಕ್ರಮ ಯೋಗ ಪ್ರಭಾ ವನ್ನು ಆಯೋಜಿಸಲಾಗಿದೆ. ಕೇಂದ್ರ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಸಚಿವಾಲಯದ 500ಕ್ಕೂ ಹೆಚ್ಚು ಸಿಬ್ಬಂದಿ ಮತ್ತು ಅದರ ಸಂಬಂಧಿತ ಸಂಸ್ಥೆಗಳ ಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ.
- ದೇಶದಲ್ಲಿ ಇದುವರೆಗೆ 187ಕೋಟಿ 67ಲಕ್ಷಕ್ಕೂ ಹೆಚ್ಚು ಕೋವಿಡ್ ಲಸಿಕಾ ಡೋಸ್ಗಳನ್ನು ನೀಡಲಾಗಿದೆ. ಕಳೆದ 24ಗಂಟೆಗಳಲ್ಲಿ 19ಲಕ್ಷಕ್ಕೂ ಹೆಚ್ಚು ಡೋಸ್ಗಳನ್ನು ಪೂರೈಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ. ಇದೇ ಅವಧಿಯಲ್ಲಿ ದೇಶದಲ್ಲಿ 2ಸಾವಿರದ 593ಹೊಸ ಕೋವಿಡ್ ಸೋಂಕಿನ ಪ್ರಕರಣಗಳು ವರದಿಯಾಗಿವೆ.
- ಖೇಲೋ ಇಂಡಿಯಾ 2021ಕ್ರೀಡಾಕೂಟಕ್ಕೆ ಉಪರಾಷ್ಟ್ರಪತಿ ಎಂ. ವೆಂಕಯ್ಯನಾಯ್ಡು ಚಾಲನೆ ನೀಡಿದರು. 200 ವಿಶ್ವವಿದ್ಯಾಲಯಗಳ ನಾಲ್ಕೂವರೆ ಸಾವಿರ ಕ್ರೀಡಾಪಟುಗಳು 10ದಿನಗಳ ಕಾಲ ನಡೆಯುವ ಖೇಲೋ ಇಂಡಿಯಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕ್ರೀಡಾ ಸಚಿವ ಅನುರಾಗ್ ಸಿಂಗ್ ಠಾಕೂರ್ ಮುಂತಾದವರು ಸಮಾರಂಭದಲ್ಲಿ ಉಪಸ್ಥಿತರಿದ್ದರು.
- ಕೇಂದ್ರ ವಾರ್ತಾ ಮತ್ತು ಪ್ರಸಾರ ಹಾಗೂ ಕ್ರೀಡಾ ಸಚಿವ ಅನುರಾಗ್ ಸಿಂಗ್ ಠಾಕೂರ್ ಬೆಂಗಳೂರಿನ ಜೈನ್ ವಿಶ್ವವಿದ್ಯಾಲಯದ ಗ್ಲೋಬಲ್ ಕ್ಯಾಂಪಸ್ಗೆ ಭೇಟಿ ನೀಡಿ ಕ್ರೀಡಾಕೂಟದ ಕ್ರೀಡಾಪಟುಗಳೊಂದಿಗೆ ಸಂವಾದ ನಡೆಸಿದರು.
- ಮುಂದಿನ ತಿಂಗಳ18 ರಂದು ಅಂತಾರಾಷ್ಟ್ರೀಯ ಸಂಗ್ರಹಾಲಯ ದಿನ ಆಚರಿಸಲಾಗುತ್ತದೆ. ಜನರು ಸ್ಥಳೀಯ ಮ್ಯೂಸಿಯಂಗಳಿಗೆ ಭೇಟಿ ನೀಡಿ ತಮ್ಮ ಅನುಭವಗಳನ್ನು ಹಂಚಿಕೊಳ್ಳುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಜನತೆಯಲ್ಲಿ ಮನವಿ ಮಾಡಿದ್ದಾರೆ. ಗಣಿತದ ಬಗ್ಗೆಯೂ ಮನ್ ಕಿ ಬಾತ್ನಲ್ಲಿ ಪ್ರಧಾನಿ ಪ್ರಸ್ತಾಪಿಸಿದರು. ಕೋಲ್ಕತಾದ ಗೌರವ್ ಟೆಕರೀವಾಲ್ ಅವರೊಂದಿಗೆ ಮಾತನಾಡಿದರು. ವೈದಿಕ ಗಣಿತದ ಕೀರ್ತಿ ಭಾರತಿ ಕೃಷ್ಣ ತೀರ್ಥ ಮಹಾರಾಜ್ ಅವರಿಗೆ ಸಲ್ಲುತ್ತದೆ ಎಂದು ಗೌರವ್ ತಿಳಿಸಿದರು. ಭಾರತಿಕೃಷ್ಣ ತೀರ್ಥ ಮಹಾರಾಜ್ ನೀಡಿದ 16 ಸೂತ್ರಗಳ ಮೂಲಕ ಕ್ಲಿಷ್ಟಕರ ಗಣಿತ ಸಮಸ್ಯೆಗಳನ್ನು ಸುಲಭವಾಗಿ ಪರಿಹರಿಸಬಹುದು ಎಂದು ಹೇಳಿದರು.
- ಚಿತ್ರದುರ್ಗ ಜಿಲ್ಲಾಡಳಿತ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮೇರುನಟ ಡಾ.ರಾಜ್ಕುಮಾರ್ ಅವರ 93ನೇ ಜಯಂತಿ ಆಚರಿಸಲಾಯಿತು. ಉಪವಿಭಾಗಾಧಿಕಾರಿ ಆರ್.ಚಂದ್ರಯ್ಯನವರು ಡಾ.ರಾಜ್ಕುಮಾರ್ ಭಾವಚಿತ್ರಕ್ಕೆ ಪೂಜೆ ನೆರವೇರಿಸಿ ಪುಷ್ಪ ಸಮರ್ಪಿಸಿದರು. ಈ ಸಂದರ್ಭದಲ್ಲಿ ವಾರ್ತಾ ಇಲಾಖೆ ಸಹಾಯಕ ನಿರ್ದೇಶಕರಾದ ಜೆ.ಮಂಜೇಗೌಡ, ಸಿಬ್ಬಂದಿಗಳಾದ ವೆಂಕಟೇಶ್, ವೇಣುಗೋಪಾಲ.ಪಿ.ಎಂ. ಚಂದ್ರಶೇಖರ. ಎಸ್ , ರಮೇಶ್, ಉಮೇಶ್.ಜೆ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ಕ್ರೀಡೆ
ಮಹಿಳಾ ಏಕದಿನ ಕ್ರಿಕೆಟ್ : ದಕ್ಷಿಣ ಆಫ್ರಿಕಾ ವಿರುದ್ಧ ಭಾರತಕ್ಕೆ ಸರಣಿ ಗೆಲುವು
ಸುದ್ದಿದಿನಡೆಸ್ಕ್:ದಕ್ಷಿಣ ಆಫ್ರಿಕಾ ಮಹಿಳೆಯರ ವಿರುದ್ಧ ನಡೆದ ಮೂರನೇ ಹಾಗೂ ಕೊನೆಯ ಏಕದಿನ ಕ್ರಿಕೆಟ್ ಪಂದ್ಯವನ್ನು 6 ವಿಕೆಟ್ಗಳಿಂದ ಗೆಲ್ಲುವ ಮೂಲಕ ಭಾರತದ ಮಹಿಳೆಯರು ಸರಣಿಯನ್ನು 3-0 ಅಂತರದಿಂದ ತಮ್ಮದಾಗಿಸಿಕೊಂಡಿದ್ದಾರೆ.
ಮೂರು ಪಂದ್ಯಗಳ ಏಕದಿನ ಸರಣಿಗೆ ಆತಿಥ್ಯ ವಹಿಸಿದ್ದ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾರತದ ಮಹಿಳೆಯರು ತಮ್ಮ ಶಕ್ತಿಯನ್ನು ಮತ್ತೊಮ್ಮೆ ಪ್ರದರ್ಶಿಸಿದರು. ಸತತ ಮೂರು ಪಂದ್ಯಗಳಲ್ಲಿ ಪಾರಮ್ಯ ಮೆರೆಯುವ ಮೂಲಕ ತಾಯ್ನಾಡಿನಲ್ಲಿ ತಾವು ಎಷ್ಟು ಬಲವಂತರು ಎಂಬುದನ್ನು ಸಾಬೀತು ಮಾಡಿದರು.
ಸರಣಿಯಲ್ಲಿ ದಕ್ಷಿಣ ಆಫ್ರಿಕಾ ವನಿತೆಯರಿಗೆ ಇನ್ನಿಲ್ಲದಂತೆ ಕಾಡಿದ್ದು, ಭಾರತ ತಂಡದ ಹಿರಿಯ ಬ್ಯಾಟರ್ ಸ್ಮೃತಿ ಮಂಧಾನ. ಮೊದಲೆರಡು ಪಂದ್ಯಗಳಲ್ಲಿ ಸತತ ಶತಕ ಬಾರಿಸಿದರು. ಮೂರನೇ ಪಂದ್ಯದಲ್ಲಿ ಶತಕದ ಅಂಚಿಗೆ ಬಂದು ಮೂರನೇ ಶತಕದಿಂದ ತಪ್ಪಿಸಿಕೊಂಡರು. ಮೊದಲ ಪಂದ್ಯದಲ್ಲಿ 117, ಎರಡನೇ ಪಂದ್ಯದಲ್ಲಿ 136 ರನ್ ಗಳಿಸಿದ್ದರು. ಮೂರನೇ ಪಂದ್ಯದಲ್ಲಿ ಭಾರತ ವನಿತೆಯರು ಪ್ರಯಾಸವಿಲ್ಲದೇ ಗೆಲುವು ಸಾಧಿಸಿದರು.
ಮೊದಲು ಬ್ಯಾಟ್ ಮಾಡಿದ ದಕ್ಷಿಣ ಆಫ್ರಿಕಾ ವನಿತೆಯರು 50 ಓವರ್ಗಳಲ್ಲಿ 8 ವಿಕೆಟ್ಗೆ 215 ರನ್ ಗುರಿ ನೀಡಿದರು. ಭಾರತ 40.4 ಓವರ್ಗಳಲ್ಲಿ ನಾಲ್ಕು ವಿಕೆಟ್ಗಳಿಗೆ 220 ರನ್ ಗಳಿಸಿತು. ಕೊನೆಯ ಪಂದ್ಯದಲ್ಲಿ ಸ್ಮೃತಿ ಮಂಧಾನ 83 ಎಸೆತಗಳಲ್ಲಿ 11 ಬೌಂಡರಿಗಳ ಸಮೇತ 90 ರನ್ ಗಳಿಸಿದರು. ಶೆಫಾಲಿ ವರ್ಮಾ 25, ಪ್ರಿಯಾ ಪೂನಿಯಾ 28, ನಾಯಕಿ ಹರ್ಮನ್ಪ್ರೀತ್ ಕೌರ್ 42 ಗಳಿಸಿದರು. ಕೊನೆಯಲ್ಲಿ ಜೆಮಿಮಾ ರೋಡ್ರಿಗಸ್ 19, ರಿಚಾ ಘೋಷ್ 6 ರನ್ ಗಳಿಸಿ ಗೆಲುವಿನ ಶಾಸ್ತ್ರ ಮುಗಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ಕ್ರೀಡೆ
ಹೊನ್ನಾಳಿ | ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ
ಸುದ್ದಿದಿನ,ಹೊನ್ನಾಳಿ:ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕ ಕ್ರೀಡಾಕೂಟವನ್ನು ತಾಲ್ಲೂಕು ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಕ್ರೀಡಾಕೂಟದ ಉದ್ಘಾಟನೆಯನ್ನು ದೇವರಾಜ್ ಸಿ ಪಾಟೀಲ್ ಅವರು ಇಂದು ಮಾಡಿದರು.
ಈ ಕಾರ್ಯಕ್ರಮದಲ್ಲಿ ದೈಹಿಕ ನಿರ್ದೇಶಕರಾದ ಡಾ.ಹರೀಶ್ .ಪಿ.ಎಸ್. ಉಪನ್ಯಾಸಕರಾದ ಡಾ.ಮಹಾಬಲೇಶ್ವರ,ಡಾ. ಕೊಟ್ರೇಶ್ ಬೆಳ್ಳುಳ್ಳಿ. ಮಂಜುನಾಥ್ ಗುರು. ನಾಗರಾಜ್ ನಾಯ್ಕ .ಪ್ರಶಾಂತ್ ಶರ್ಮ. ವಿಶ್ವನಾಥ ಡಿ ಆರ್. ಶ್ರೀನಿವಾಸ್. ಅಮೂಲ್ಯ. ಪುರುಷೋತ್ತಮ್. ಜಗದೀಶ್. ವಾಗೀಶ್. ಕರಿಬಸಪ್ಪ. ಕಿರಣ್ ಎಂ ಅಂಗಡಿ . ಅಶೋಕ್. ಪ್ರಕಾಶ್.ಸಂಜು. ರೆಹಮತ್. ದೊಡ್ಡಪ್ಪ. ಮುಂತಾದವರು ಭಾಗವಹಿಸಿದ್ದರು.
ಈ ಕ್ರೀಡಾಕೂಟದಲ್ಲಿ ಕ್ರೀಡಾಪಟುಗಳು ಆಸಕ್ತಿಯಿಂದ ಪಾಲ್ಗೊಂಡು ಕ್ರೀಡಾಕೂಟದ ಉದ್ಘಾಟನೆಯನ್ನು ಯಶಸ್ವಿಗೊಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ಕ್ರೀಡೆ
ಈ ಕ್ಷಣದ ಪ್ರಮುಖ ಸುದ್ದಿಗಳು
ರಾಜ್ಯದಲ್ಲಿ ಜರುಗಿದ ಈ ಕ್ಷಣದ ಕೆಲವು ಸುದ್ದಿಗಳ ಪ್ರಮುಖಾಂಶಗಳು ( ಕನ್ನಡ ನ್ಯೂಸ್; ಕನ್ನಡ ಸುದ್ದಿ)
- ರಾಜ್ಯಾದ್ಯಂತ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತೆ ವಹಿಸದಿದ್ದರೆ ಕುಡಿಯುವ ನೀರು ಕಲುಷಿತಗೊಳ್ಳುವ ಪ್ರಕರಣ ಹೆಚ್ಚಾಗುವ ಸಾಧ್ಯತೆಯಿದೆ. ಹಾಗಾಗಿ ಗ್ರಾಮೀಣ ನೀರು ಸರಬರಾಜು ಇಲಾಖೆಯ ಇಂಜಿನಿಯರ್ಗಳು ಕಟ್ಟೆಚ್ಚರ ವಹಿಸಬೇಕು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಸೂಚಿಸಿದ್ದಾರೆ.
- ಪೆಟ್ರೋಲ್ ಹಾಗೂ ಡೀಸೆಲ್ ಮಾರಾಟ ತೆರಿಗೆ ಏರಿಕೆ ಹಾಗೂ ಇತರ ಬೆಲೆ ಏರಿಕೆ ನೀತಿ ವಿರೋಧಿಸಿ ಬಿಜೆಪಿ ಬೆಂಗಳೂರಿನಲ್ಲಿಂದು ವಿಧಾನಸೌಧದವರೆಗೆ ಸೈಕಲ್ ಜಾಥಾ ನಡೆಸಿತು. ಪಕ್ಷದ ಕಚೇರಿಯಿಂದ ವಿಧಾನಸೌಧದವರೆಗೆ ಜಾಥಾದಲ್ಲಿ ಹೊರಟ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಸೇರಿದಂತೆ ಹಲವು ನಾಯಕರನ್ನು ಪೊಲೀಸರು ವಶಕ್ಕೆ ಪಡೆದು ನಂತರ ಬಿಡುಗಡೆಗೊಳಿಸಿದರು.
- ಪ್ರತಿಯೊಂದು ವಾಹನಗಳಿಗೆ ಕೇಂದ್ರ ಮೋಟಾರು ವಾಹನ ಕಾಯ್ದೆಯಡಿ ನಮೂದಿಸಿರುವ ಮಾನದಂಡದಂತೆ ಎಲ್ಇಡಿ ದೀಪಗಳನ್ನು ಅಳವಡಿಸದಿದ್ದರೆ ವಾಹನಗಳ ಸವಾರರುಗಳ ಮೇಲೆ ಪ್ರಕರಣ ದಾಖಲಿಸಲಾಗುವುದು ಎಂದು ಸಂಚಾರ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಲೋಕ್ ಕುಮಾರ್ ತಿಳಿಸಿದ್ದಾರೆ.
- ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಶುಭ ಕೋರಿದ್ದಾರೆ. ಪ್ರಧಾನಿ ತಮ್ಮ ಸಾಮಾಜಿಕ ಮಾಧ್ಯಮ ಪೋಸ್ಟ್ನಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು, ದೇಶಕ್ಕಾಗಿ ಅಪ್ರತಿಮ ಸೇವೆಯನ್ನು ಸಲ್ಲಿಸುತ್ತಿದ್ದು, ನಮಗೆಲ್ಲರಿಗೂ ಸ್ಫೂರ್ತಿಯಾಗಿದ್ದಾರೆ ಎಂದು ಹೇಳಿದ್ದಾರೆ.
- ತಮಿಳುನಾಡಿನ ಕಲ್ಲಕುರಿಚಿಯಲ್ಲಿ ನಡೆದ ಕಳ್ಳಬಟ್ಟಿ ಸರಾಯಿ ದುರಂತದಲ್ಲಿ 33 ಮಂದಿ ಮೃತಪಟ್ಟಿದ್ದು, 60ಕ್ಕೂ ಅಧಿಕ ಮಂದಿ ನಾನಾ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಳ್ಳಬಟ್ಟಿ ಸರಾಯಿ ಸೇವಿಸಿ ಅಸ್ವಸ್ಥರಾಗಿದ್ದ ಜನರನ್ನು ಕಲ್ಲಕುರಿಚಿ, ಸೆಲಂ ಮತ್ತು ಪುದುಚೇರಿಯ ಜೆಐಪಿಎಂಇಆರ್ ಆಸ್ಪತ್ರೆಗೆ ದಾಖಲಿಸಲಾಗಿದೆ.
- ಕೇಂದ್ರ ಸರ್ಕಾರದ ಆದೇಶದಂತೆ 2019ರ ಏಪ್ರಿಲ್ಗಿಂತ ಮುಂಚಿತವಾಗಿ ನೋಂದಣಿಯಾಗಿರುವ ವಾಹನಗಳಿಗೆ ಹೈಸೆಕ್ಯೂರಿಟಿ ನೋಂದಣಿ ಫಲಕ ಅಳವಡಿಕೆ ಗಡುವನ್ನು ರಾಜ್ಯ ಸರ್ಕಾರ ಸೆಪ್ಟೆಂಬರ್ 15ರವರೆಗೆ ವಿಸ್ತರಿಸಿ ಆದೇಶ ಹೊರಡಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ಕ್ರೀಡೆ6 days ago
ಈ ಕ್ಷಣದ ಪ್ರಮುಖ ಸುದ್ದಿಗಳು
-
ದಿನದ ಸುದ್ದಿ7 days ago
ಗೃಹಲಕ್ಷ್ಮೀ ಹಣ ನಿಮ್ಮ ಖಾತೆಗೆ ಜಮಾ ಆಗಿಲ್ಲವೇ ? ಇವರನ್ನು ಸಂಪರ್ಕಿಸಿ
-
ದಿನದ ಸುದ್ದಿ6 days ago
ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ; 7ನೇ ವೇತನ ಆಯೋಗದ ಶಿಫಾರಸ್ಸು ಜಾರಿಗೆ ಸಿಎಂಗೆ ಅಧಿಕಾರ
-
ದಿನದ ಸುದ್ದಿ7 days ago
ನಿನ್ನೆ ನಡೆದ NET ಪರೀಕ್ಷೆ ರದ್ದು..!
-
ದಿನದ ಸುದ್ದಿ5 days ago
JOB NEWS | ಜಲ ಜೀವನ್ ಮಿಷನ್ ; ಎಂಐಎಸ್ ಸಮಾಲೋಚಕರ ಹುದ್ದೆಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ6 days ago
ಪರಿಶಿಷ್ಟ ಜಾತಿ ಕಾನೂನು ಪದವೀಧರರಿಗೆ ಶಿಷ್ಯ ವೇತನ ; ಅರ್ಜಿ ಆಹ್ವಾನ
-
ದಿನದ ಸುದ್ದಿ6 days ago
ದಾವಣಗೆರೆಯಲ್ಲಿ ಹೊಸ ಕೆರೆಗಳ ನಿರ್ಮಾಣ : ಜಿಲ್ಲಾಧಿಕಾರಿ ಡಾ: ವೆಂಕಟೇಶ್ ಎಂ.ವಿ
-
ದಿನದ ಸುದ್ದಿ5 days ago
ವಿದ್ಯುತ್ ಮೋಟಾರ್ ರಿವೈಂಡಿಂಗ್ ತರಬೇತಿ ; ಸಂಪರ್ಕಿಸಿ