Connect with us

ದಿನದ ಸುದ್ದಿ

ಮೊಣಕಾಲ್ಮೂರು | ಪರಿಶಿಷ್ಟ ಪಂಗಡದ ಪಟ್ಟಿಯಿಂದ ‘ನಾಯಕ’ ಪದ ಕೈಬಿಟ್ಟಿರುವುದನ್ನು ವಿರೋಧಿಸಿ ನಾಳೆ ಪ್ರತಿಭಟನೆ

Published

on

ಸುದ್ದಿದಿನ, ಚಿತ್ರದುರ್ಗ (ಮೊಣಕಾಲ್ಮೂರು) : ಪರಿಶಿಷ್ಟ ಪಂಗಡದ ಪಟ್ಟಿಯಿಂದ ಕೈಬಿಟ್ಟಿರುವ “ನಾಯಕ’ ಪದವನ್ನು ಕೂಡಲೇ ನಾಡ ಕಛೇರಿ ಕೇಂದ್ರದ ಅಂತರ್ಜಾಲದಲ್ಲಿ ಸೇರಿಸಿ “ನಾಯಕ” (ಪರಿಶಿಷ್ಟ ಪಂಗಡ) ಪ್ರಮಾಣ ಪತ್ರ ನೀಡಲು ಸರ್ಕಾರವನ್ನು ಒತ್ತಾಯಿಸಿ ನಾಳೆ ಮಂಗಳವಾರ ಮೊಣಕಾಲ್ಮೂರು ತಹಶೀಲ್ದಾರರ ಕಛೇರಿ ಮುಂದೆ ಮ್ಯಾಸ ಬುಡಕಟ್ಟು ಸಂರಕ್ಷಣಾ ಸಮಿತಿಯು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಕರ್ನಾಟಕದ ಬಳ್ಳಾರಿ, ವಿಜಯನಗರ, ಹಾಗೂ ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಲ್ಲಿ ನಾಯ್ಕಡ ಬುಡಕಟ್ಟಿಗೆ ಸೇರಿದ ನಾಯಕ ಅಥವಾ ನಾಯ್ಕ ಪಂಗಡದವರಾದ ಮಾಸ ನಾಯಕ ಅಥವಾ ಮಾಸ ಬೇಡರಿಗೆ 1976 ಮತ್ತು 1991 ನೇ ಸಾಲಿನಿಂದ 2021ನೇ ಸಾಲಿನವರೆಗೂ ಪರಿಶಿಷ್ಟ ಪಂಗಡದ “ನಾಯಕ” ಪ್ರಮಾಣ ಪತ್ರ ಕೋರಿ ಅರ್ಜಿ ಸಲ್ಲಿಸಿದರೆ ಪರಿಶಿಷ್ಟ ಪಂಗಡದ “ನಾಯಕ ಪ್ರಮಾಣ ಪತ್ರವನ್ನು ನೀಡಲಾಗುತ್ತಿತ್ತು. ಆದರೆ ಈಗ ಸುಮಾರು 5-6 ತಿಂಗಳಿಂದ ನಾಡ ಕಛೇರಿ (ಅಟಲ್ ಜಿ ಜನಸ್ನೇಹಿ ಕೇಂದ್ರದ ಅಂತರ್ಜಾಲದಲ್ಲಿ ಪರಿಶಿಷ್ಟ ಪಂಗಡದ ನಾಯಕ ” ಎಂಬ ಪದವನ್ನು ಕೈ ಬಿಡಲಾಗಿದೆ ಮತ್ತು ನಾಯಕ ಎಂದು ಎಸ್ ಟಿ ಪ್ರಮಾಣ ಪತ್ರವನ್ನು ನೀಡುತ್ತಿಲ್ಲ.

ನಾಯಕ Nayaka’ ಬದಲಾಗಿ (Nayaka (Including Parivara and Talawara)) (ನಾಯಕ(ಪರಿವಾರ ತಳವಾರ ಸೇರಿದಂತೆ)) ಅಥವಾ ನಾಯಕ(ಪರಿವಾರ) ಅಥವಾ ನಾಯಕ (ತಳವಾರ) ಎಂದು ನೀಡಲಾಗುತ್ತಿದೆ. ಸರ್ಕಾರದ ಈ ಸಂವಿಧಾನ ವಿರೋಧಿ ಕ್ರಮವು ನಿಜವಾದ ನಾಯ್ಕಡ-ನಾಯಕ ಪಂಗಡದವರಿಗೆ ಕಾನೂನಿನ ಹಾನಿಯುಂಟು ಮಾಡಿದೆ.

“ಯಾರು ತಳವಾರ ಮತ್ತು ಪರಿವಾರ ಪರಿಶಿಷ್ಟ ಪಂಗಡಕ್ಕೆ ಸೇರಿಸಿ ಎಂದು ಬೇಡಿಕೆಯನ್ನು ಇಟ್ಟರೂ, ಯಾರು ತಳವಾರ ಮತ್ತು ಪರಿವಾರ ಎಂದು ಎಸ್ ಟಿ ಪ್ರಮಾಣ ಪತ್ರ ಕೋರಿ ಅರ್ಜಿಸಲ್ಲಿಸುತ್ತಾರೋ ಅವರಿಗೆ ನೀಡಲಿ.” ಅದು ಬಿಟ್ಟು ಮೂಲ ನಾಯಕ ಪಂಗಡದವರಾದ ನಮಗೆ ನಾಯಕ ಪುಮಾಣ ಪತ್ರವನ್ನು ಕೊಡದ ಹೊಸ ಜಾತಿಯನ್ನು ಬರೆದುಕೊಳ್ಳುವಂತೆ ಮಾಡಿರುವುದನ್ನು ನಾವು ಉಗ್ರವಾಗಿ ಖಂಡಿಸುತ್ತೇವೆ. ಕೂಡಲೇ ಸರ್ಕಾರ ನಾಯಕ (ಪರಿಶಿಷ್ಟ ಪಂಗಡ) ಎಂದು ಪ್ರಮಾಣ ಪತ್ರವನ್ನು ನೀಡುವಂತೆ ಕೋರುತ್ತೇವೆ ಎಂದು ತಿಳಿಸಿದ್ದಾರೆ.

1976 ರಿಂದ ಮಾಸ ನಾಯಕರ ಬುಡಕಟ್ಟು, ಲಕ್ಷಣಗಳನ್ನು ಆಧಾರಿಸಿ ಪರಿಶಿಷ್ಟ ಪಂಗಡಕ್ಕೆ ಸೇರಿದವರೆಂದು ಮಾಸ ನಾಯಕರಿಗೆ “ನಾಯಕ” ಎಂದೇ ಎಸ್ ಟಿ ಪ್ರಮಾಣ ಪತ್ರ ಕೊಡಲಾಗುತ್ತಿತ್ತು. ಆದರೆ ನಮಗೆ ನಮ್ಮ ಪಂಗಡದ ಹೆಸರನ್ನು ಬದಲಾವಣೆ ಮಾಡಿ ನಾಯಕ (ಪರಿವಾರ ಮತ್ತು ತಳವಾರ) ಎಂದು ನಮೂದಿಸಿ ನಮ್ಮ ಬುಡಕಟ್ಟಿನ ಮೂಲ ಹೆಸರನ್ನೆ ಇಲ್ಲದಂತೆ ಮಾಡಿರುತ್ತಿರಿ. ನಮಗೂ ಪರಿವಾರ ಮತ್ತು ತಳವಾರ ಜಾತಿಯವರಿಗೂ ಯಾವುದೇ ಸಂಬಂಧವಿರುವುದಿಲ್ಲ. ದುರುದ್ದೇಶದಿಂದ ಈ ರೀತಿ ಕಾನೂನನ್ನು ಮಾಡಿ ಮೂಲ ಬುಡಕಟ್ಟು ಜನರಿಗೆ ಕಾನೂನು ತೊಡಕನ್ನು ಉಂಟು ಮಾಡುತ್ತಿರುವುದಲ್ಲದೆ ನಮ್ಮ ಮೂಲ ಪಂಗಡದ ಹೆಸರನ್ನು ನಿರ್ನಾಮ ಮಾಡಲು ಹೊರಟಿರುತ್ತೀರಿ ಎಂದಿದ್ದಾರೆ.

ಆದ್ಯರಿಂದ ಮಾಸ ನಾಯಕರಾದ ನಮಗೆ “ನಾಯಕ’ ಎಂದೇ ಪರಿಶಿಷ್ಟ ಪಂಗಡದ ಪ್ರಮಾಣ ಪತ್ರವನ್ನು ಮಾತ್ರ ನೀಡಲು ಒತ್ತಾಯಪೂರ್ವಕವಾಗಿ ವಿನಂತಿಸುತ್ತಿದ್ದೇವೆ. ನಮ್ಮ ಪರಿಶಿಷ್ಟ ಪಂಗಡದ ಪ್ರಮಾಣ ಪತ್ರಗಳಲ್ಲಿ ತಳವಾರ ಪರಿವಾರ ಎಂಬ ಹೆಸರಗಳನ್ನು ನಮೂದಿಸುವಂತಿಲ್ಲ. ಇತ್ತೀಚೆಗೆ ಸಂಸತ್ ನಲ್ಲಿ ಮಾಡಿರುವ The Counstitution (Scheduled Tribes) Order (Amendment) Act,2020ರ ಪುಕಾರ ನಮ್ಮ ಮೂಲ ನಾಯ್ಕಡ ನಾಯಕ ಪಂಗಡದ ಹೆಸರನ್ನು ಬದಲಾವಣೆ ಮಾಡುವ ಬಗ್ಗೆ ಯಾವುದೇ ಕಾನೂನನ್ನು ಮಾಡಿರುವುದಿಲ್ಲ. ಆದರೂ ಸಹ ತಪ್ಪು ತಪ್ಪಾಗಿ ಕಾನೂನನ್ನು ಅರ್ಥೈಸಿ ಬುಡಕಟ್ಟು ಜನರ ಅಸ್ತಿತ್ವವನ್ನು ನಿರ್ನಾಮ ಮಾಡುತ್ತಾ ಹಕ್ಕುಗಳನ್ನು ಅಪಹರಿಸಲು ಸಂಚನ್ನು ಮಾಡಲಾಗುತ್ತಿದೆ.

ಆದ್ದರಿಂದ ಎಲ್ಲಾ ರೀತಿಯಿಂದ ಸರ್ಕಾರದ ಈ ನಡೆಯನ್ನು ಪರಿವಾರ ತಳವಾರ ಜಾತಿಯವರ ಕುಯಿಕ್ತಿಯಂತೆ ಮಾಡುತ್ತಿರುವುದು ನಮ್ಮ ವ್ಯಾಸ ನಾಯಕರಿಗೆ ಬಾರಿ ಅನಾವಾಗುತ್ತಿದೆ. ಆದ್ದರಿಂದ ಈ ಕೂಡಲೇ ಮೊದಲಿನ ರೀತಿಯಲ್ಲಿ ನಾಯಕ (ಪರಿಶಿಷ್ಟ ಪಂಗಡ) ಎಂದು ಮಾತ್ರ ಪ್ರಮಾಣ ಪತ್ರ ನೀಡಬೇಕು ಎಂದು ಒತ್ತಾಯಿಸಿ ಸಾಂಕೇತಿಕ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ. ಸದರಿ ಪ್ರತಿಭಟನೆಯ ಮೂಲಕ ಸರ್ಕಾರಕ್ಕೆ ಮನವಿಯನ್ನು ಸಲ್ಲಿಸಲಾಗುವುದು.

ಆದ್ದರಿಂದ ನಮ್ಮ ಬುಡಕಟ್ಟು ಜನಾಂಗದ ಎಲ್ಲಾ ಬಂಧುಗಳು ಈ ಒಂದು ಸಾಂಕೇತಿಕ ಪ್ರತಿಭಟನೆಯಲ್ಲಿ ಭಾಗವಹಿಸಬೇಕೆಂದು ಕೋರಲಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಭಾನುವಾರವೂ ಕ್ಯಾಶ್ ಕೌಟರ್ ಓಪನ್ ; ವಿದ್ಯುತ್ ಬಿಲ್ ಬಾಕಿ ಪಾವತಿಸಿ : ಬೆಸ್ಕಾಂ

Published

on

ಸುದ್ದಿದಿನಡೆಸ್ಕ್:ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿರುವ ಗ್ರಾಹಕರು ವಿದ್ಯುತ್ ಸಂಪರ್ಕದ ಕಡಿತದಿಂದ ತೊಂದರೆಗೊಳಗಾಗದಂತೆ ನಾಳೆ ಮತ್ತು ಇದೇ 15ರ ಭಾನುವಾರವೂ ಬೆಸ್ಕಾಂ ಉಪ ವಿಭಾಗಗಳ ಕ್ಯಾಶ್ ಕೌಂಟರ್‌ಗಳು ತೆರೆದಿರಲಿವೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

ಬಿಲ್ ಬಾಕಿ ಉಳಿಸಿಕೊಂಡಿರುವ ಗ್ರಾಹಕರು ವಿದ್ಯುತ್ ಸಂಪರ್ಕ ಕಡಿತದಿಂದ ತೊಂದರೆಗೆ ಒಳಗಾಗಬಾರದು ಹಾಗೂ ಆನ್‌ಲೈನ್ ಪೇಮೆಂಟ್ ಬಳಸದವರ ಅನಕೂಲಕ್ಕಾಗಿ ಈ ವಿಶೇಷ ವ್ಯವಸ್ಥೆ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಬಿಲ್ ಬಂದ 30 ದಿನದೊಳಗೆ ವಿದ್ಯುತ್ ಶುಲ್ಕ ಪಾವತಿಸದಿದ್ದಲ್ಲಿ ಮತ್ತು ಹೆಚ್ಚುವರಿ ಭದ್ರತಾ ಠೇವಣಿ ಮೊತ್ತ ಪಾವತಿಸದಿದ್ದಲ್ಲಿ ಕೆಇಆರ್‌ಸಿ ನಿಯಮಾವಳಿ ಅನ್ವಯ ಗ್ರಾಹಕರ ವಿದ್ಯುತ್ ಸಂಪರ್ಕ ಕಡಿತಗೊಳಿಸಲು ನಿರ್ಧರಿಸಿದ್ದು, ಸೆಪ್ಟೆಂಬರ್ 1ರಿಂದಲೇ ಈ ನಿಯಮ ಜಾರಿಯಾಗಿದೆ ಎಂದು ಹೇಳಿದೆ.

ವಿದ್ಯುತ್ ಬಿಲ್ ಬಾಕಿ ಮೊತ್ತ ಮತ್ತು ಹೆಚ್ಚುವರಿ ಭದ್ರತಾ ಠೇವಣಿ ಮೊತ್ತ 100 ರೂಪಾಯಿ ಗಳಿಗಿಂತ ಅಧಿಕವಾಗಿದ್ದಲ್ಲಿ, ಅಂತಹ ಸ್ಥಾಪನಗಳ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲಾಗುತ್ತದೆ. ಗೃಹ ಜ್ಯೋತಿಯೋಜನೆ ಅಡಿ ಶೂನ್ಯ ಬಿಲ್ ಪಡೆಯುತ್ತಿರುವ ಗ್ರಾಹಕರ ಹಿಂಬಾಕಿ ಶೂನ್ಯವಿದ್ದಲ್ಲಿ ಈ ಬಗ್ಗೆ ಚಿಂತಿಸಬೇಕಿಲ್ಲ ಎಂದು ಪ್ರಕಟಣೆ ಸ್ಪಷ್ಟಪಡಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಹತ್ತು ವರ್ಷಗಳ ಬಳಿಕ ಕಲಬುರಗಿಯಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಸಲು ಸರ್ಕಾರ ನಿರ್ಧಾರ

Published

on

ಸುದ್ದಿದಿನಡೆಸ್ಕ್:ಹತ್ತು ವರ್ಷಗಳ ಬಳಿಕ ಕಲಬುರಗಿ ಜಿಲ್ಲೆಯಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಸಲು ಸರ್ಕಾರ ನಿರ್ಧರಿಸಿದೆ.

ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿ ಕುರಿತಂತೆ ಚರ್ಚೆ ನಡೆಸಿ, ನಿರ್ಣಯ ತೆಗೆದುಕೊಳ್ಳಲು ಸೆಪ್ಟೆಂಬರ್ 17ಕ್ಕೆ ಸಂಪುಟ ಸಭೆ ನಡೆಯಲಿದೆ.

ಜಿಲ್ಲೆಯ ಮಿನಿ ವಿಧಾನಸೌಧದಲ್ಲಿರುವ ಪ್ರಾದೇಶಿಕ ಆಯುಕ್ತರ ಕಾರ್ಯಾಲಯದ ಸಭಾಂಗಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆಯುವ ಸಂಪುಟ ಸಭೆಯಲ್ಲಿ ಕಲ್ಯಾಣ ಕರ್ನಾಟಕದ ಬಗ್ಗೆ ವಿಶೇಷ ಆದ್ಯತೆ ನೀಡಲು ನಿರ್ಧರಿಸಲಾಗಿದೆ. ಈ ಹಿಂದೆ 2014ರ ನವೆಂಬರ್ 28ರಂದು ಸಿದ್ದರಾಮಯ್ಯ ನೇತೃತ್ವದಲ್ಲಿ ಕಲಬುರಗಿಯಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆದಿತ್ತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಇಂದು ದೇಶಾದ್ಯಂತ ಗಣೇಶ ಹಬ್ಬದ ಸಂಭ್ರಮ

Published

on

ಸುದ್ದಿದಿನಡೆಸ್ಕ್:ಇಂದು ಗಣೇಶ ಚತುರ್ಥಿ, ದೇಶ ಸೇರಿ ನಾಡಿನದ್ಯಂತ ಹಿಂದೂ ಸಂಪ್ರದಾಯದಲ್ಲಿ ನಾಡಿನ ಜನತೆ ತಮ್ಮ ಒಳಿತಿಗಾಗಿ, ಜ್ಞಾನ ಸಮೃದ್ಧಿಗಾಗಿ ಶಿವನ ಪುತ್ರ ಗಣೇಶನ ಮೂರ್ತಿಗಳನ್ನು ಪ್ರತಿಷ್ಠಾಪನೆ ಮಾಡಿ ಅತ್ಯಂತ ಶ್ರದ್ದಾ ಭಕ್ತಿಯಿಂದ ಈ ಹಬ್ಬವನ್ನು ಆಚರಣೆ ಮಾಡುತ್ತಿದ್ದಾರೆ ಅದರಂತೆ ಬೆಂಗಳೂರು ಜನತೆ ಮನೆ ಮನೆಗಳಲ್ಲಿ ಪ್ರತಿಷ್ಠಾಪನೆ ಮಾಡಿರುವ ಗಣೇಶನ ಮೂರ್ತಿಗಳನ್ನು ಜಲ ಮೂಲಗಳಲ್ಲಿ ವಿಸರ್ಜಿಸಲು ಬೆಂಗಳೂರು ಮಹಾ ನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.

ಇನ್ನೂ ಗಣೇಶ ಚತುರ್ಥಿ ವಿಶೇಷವಾಗಿ ನಾಡಿನ ಜನತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸೇರಿದಂತ್ತೆ ಅನೇಕ ಸಚಿವರು ಹಾಗೂ ಗಣ್ಯರು ಶುಭ ಹಾರೈಸಿದ್ದಾರೆ.

ಗಣೇಶ ಹಬ್ಬದ ಆಚರಣೆಯ ಸಂದರ್ಭದಲ್ಲಿ ಮದ್ಯಪಾನಾಸಕ್ತರು ಗಲಭೆಮಾಡುವ ಸಾಧ್ಯತೆ ಇದ್ದು, ಈ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತಿ ಕಾಪಾಡುವ ದೃಷ್ಟಿಯಿಂದ ಕರ್ನಾಟಕ ಅಬಕಾರಿ ನಿಯಮಗಳಡಿ ಇಂದಿನಿಂದ ಉಡುಪಿ ಜಿಲ್ಲೆಯಾದ್ಯಂತ ಹಾಗೂ ಉಡುಪಿ ನಗರಸಭೆ ವ್ಯಾಪ್ತಿಯಲ್ಲಿ ಇದೇ 9 ಮತ್ತು ಸೆಪ್ಟೆಂಬರ್ 11 ರಂದು ಮಧ್ಯಾಹ್ನ 2 ರಿಂದ ಮದ್ಯರಾತ್ರಿ 12.00 ಗಂಟೆಯವರೆಗೆ ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.

ನೈಸರ್ಗಿಕವಾಗಿ ತಯಾರಿಸಿದ ಮಣ್ಣಿನ ಗಣೇಶನ ವಿಗ್ರಹಗಳನ್ನು ಮಾತ್ರ ಬಳಸುವ ಮೂಲಕ ಕೆರೆ, ನದಿ ಮೂಲಗಳು ಕಲುಷಿತಗೊಳಿಸದಂತೆ ಕಾಪಾಡುವುದು ನಮ್ಮ ಕರ್ತವ್ಯ ಎಂದು ಸಣ್ಣ ನೀರಾವರಿ ಖಾತೆ ಸಚಿವ ಎನ್.ಎಸ್.ಬೋಸರಾಜು ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending