Connect with us

ದಿನದ ಸುದ್ದಿ

ಶಿವಮೊಗ್ಗ ಕ್ಯಾನ್ಸರ್ ಆಸ್ಪತ್ರೆಗೆ ಶೀಘ್ರದಲ್ಲೇ ಶಿಲಾನ್ಯಾಸ : ಸಚಿವ ಡಾ.ಕೆ.ಸುಧಾಕರ್

Published

on

ಸುದ್ದಿದಿನ,ಶಿವಮೊಗ್ಗ : ಶಿವಮೊಗ್ಗಕ್ಕೆ ಕ್ಯಾನ್ಸರ್ ಆಸ್ಪತ್ರೆ ಮಂಜೂರಾಗಿದ್ದು, ಸದ್ಯದಲ್ಲೇ ಶಿಲಾನ್ಯಾಸ ಆಗಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ.ಕೆ.ಸುಧಾಕರ್ ಹೇಳಿದರು.

ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಮುಂಭಾಗದ ಆವರಣದಲ್ಲಿ ಇಂದು ಏರ್ಪಡಿಸಲಾಗಿದ್ದ ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ವಿವಿಧ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕೋವಿಡ್ ಸಮಯದಲ್ಲಿ ಎಲ್ಲ ಮೆಡಿಕಲ್ ಕಾಲೇಜುಗಳಲ್ಲಿ ನರ್ಸಿಂಗ್ ಕಾಲೇಜು ತೆರೆಯಬೇಕೆಂಬ ನೂತನ ನೀತಿ ರೂಪಿಸಲಾದನ್ವಯ ಶಿವಮೊಗ್ಗದಲ್ಲಿ ಇಂದು ಕಾಲೇಜು ಉದ್ಘಾಟನೆಗೊಂಡು 100 ನರ್ಸಿಂಗ್ ವಿದ್ಯಾರ್ಥಿಗಳ ದಾಖಲಾತಿಗೆ ಕೇಂದ್ರದಿಂದ ಅನುಮೋದನೆ ದೊರೆತಿದೆ.

ಅನೇಕ ಸಮಸ್ಯೆಗಳಿಗೆ ಉಪಯುಕ್ತವಾದ 128 ಸ್ಲೈಸ್ ಸಿಟಿ ಯಂತ್ರ ಉದ್ಘಾಟನೆಗೊಂಡಿದೆ. ಕೋವಿಡ್ 2ನೇ ಅಲೆಯಲ್ಲಿ ಆಮ್ಲಜನಕ ಕೊರತೆ ಅತೀವವಾಗಿ ಕಾಡಿದ್ದು, ಅಂತಹ ಸಂದರ್ಭದಲ್ಲಿ ನಿಕಟಪೂರ್ವ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಎಲ್ಲ ಮೆಡಿಕಲ್ ಕಾಲೇಜುಗಳಲ್ಲಿ ಆಮ್ಲಜನಕ ಸ್ಟೋರೇಜ್ ಟ್ಯಾಂಕ್ಸ್‍ನ್ನು ದ್ವಿಗುಣಗೊಳಿಸಲಾಗಿದ್ದು, ರಾಜ್ಯದಲ್ಲಿ 30 ಸಾವಿರಕ್ಕೂ ಹೆಚ್ಚು ಹಾಸಿಗೆಗಳಿಗೆ ಆಕ್ಸಿಜನ್ ಅಳವಡಿಕೆ ಆಗಿರುವುದು ಒಂದು ದಾಖಲೆ ಆಗಿದೆ. ಲಿಕ್ವಿಡ್ ಆಕ್ಸಿಜನ್ ಫಿಲ್ಲಿಂಗ್ ಸ್ಟೇಷನ್ ಶಿವಮೊಗ್ಗದ ವಿಶೇಷ. ಶಿವಮೊಗ್ಗದ ಸಂಸ್ಥೆಗೆ 130 ಐಸಿಯು ಬೆಡ್, 108 ಹೆಚ್‍ಡಿಡಿ ಮತ್ತು 120 ವೆಂಟಿಲೇಟರ್ ನೀಡಲಾಗಿದೆ. ಎನ್‍ಐಸಿಯು ಘಟಕ, ಸ್ಕಿಲ್ ಲ್ಯಾಲ್ ಸೇರಿದಂತೆ ಎಲ್ಲ ರೀತಿಯ ಮೂಲಭೂತ ಸೌಕರ್ಯಗಳ ಅಭಿವೃದ್ದಿಯಾಗುತ್ತಿದ್ದು ಈ ಎಲ್ಲ ಕಾರ್ಯಕ್ರಮಗಳ ಹಿಂದೆ ಬದ್ದತೆಯುಳ್ಳ ನಾಯಕರಿದ್ದಾರೆಂದರು.

50 ಕೋಟಿ ಜನರಿಗೆ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆ ಮೂಲಕ ಉಚಿತವಾಗಿ ಆರೋಗ್ಯ ವಿಮೆ ನೀಡಿದ ಏಕೈಕ ದೇಶ ನಮ್ಮದು. ಪ್ರಾಥಮಿಕ ಮತ್ತು ದ್ವಿತೀಯ ಹಂತದ ಚಿಕಿತ್ಸೆಗಳು ಇತರೆ ಆಸ್ಪತ್ರೆಗಳಲ್ಲಿ ದೊರೆತರೆ ತೃತೀಯ ಹಂತದ ಚಿಕಿತ್ಸೆ ವೈದ್ಯಕೀಯ ಕಾಲೇಜುಗಳಿರುವೆಡೆ ಲಭಿಸುತ್ತದೆ. ಗುಣಮಟ್ಟದ ಸೇವೆ ನೀಡದಿದ್ದಲ್ಲಿ ಜನರು ಖಾಸಗಿ ಆಸ್ಪತ್ರೆಗೆ ಹೋಗುತ್ತಾರೆ. ಹಾಗಾಗದಂತೆ ನೋಡಿಕೊಳ್ಳಬೇಕು ಎಂದರು.


ಸರ್ಕಾರಿ ಆಸ್ಪತ್ರೆಗಳು ಮತ್ತು ವೈದ್ಯಕೀಯ ಕಾಲೇಜಿನ ಆಸ್ಪತ್ರೆಗಳು ಸಂಜೀವಿನಿ ಆಗಿ ಸೇವೆ ಸಲ್ಲಿಸಬೇಕು. ಉತ್ಕøಷ್ಟ ಚಿಕಿತ್ಸೆ ಸರ್ಕಾರದ ಕಾಯಕಲ್ಪವಾಗಿದ್ದು, ಜನರು ಉಪಕಾರ ಸ್ಮರಣೆ ಮಾಡುವ ರೀತಿಯಲ್ಲಿ ವೈದ್ಯರು ಮತ್ತು ಆರೋಗ್ಯ ಸಿಬ್ಬಂದಿಗಳು ಕೆಲಸ ಮಾಡಬೇಕು.

| ಡಾ.ಕೆ.ಸುಧಾಕರ್, ವೈದ್ಯಕೀಯ ಶಿಕ್ಷಣ ಸಚಿವ


ಗೃಹ ಸಚಿವರಾದ ಆರಗ ಜ್ಞಾನೇಂದ್ರ ಮಾತನಾಡಿ, ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಬಡವರ ಆರೋಗ್ಯ ರಕ್ಷಣೆಯ ಕನಸು ನನಸಾಗಬೇಕು. ಮೆಡಿಕಲ್ ಕಾಲೇಜು ಮತ್ತಷ್ಟು ಬೆಳೆಯಬೇಕು. ಪ್ರಸ್ತುತ ನೀಡಿರುವ ಸೌಲಭ್ಯಗಳ ಉಪಯೋಗದ ಆತ್ಮಾವಲೋಕನ ಮಾಡಿಕೊಳ್ಳಬೇಕು. 133 ವೈದ್ಯಾಧಿಕಾರಿಗಳಿರುವ ಕಾಲೇಜಿನಲ್ಲಿ ಯಾರೂ ಚಿಕಿತ್ಸೆಯಿಂದ ಹೊರಗುಳಿಯಂತೆ, ಜನರಿಗೆ ಹೆಚ್ಚು ಓಡಾಡಿಸದೆ ಸೇವೆ ನೀಡಬೇಕು. ಹೆಚ್ಚಿನ ಚಿಕಿತ್ಸೆಗೆ ಜನರು ಮಣಿಪಾಲಕ್ಕೆ ತೆರಳುತ್ತಿರುವುದು ಇಲ್ಲಿ ಹೆಚ್ಚಿನ ಸೌಲಭ್ಯವಿಲ್ಲವೆಂಬುದನ್ನು ತೋರುತ್ತದೆ. ಆದ್ದರಿಂದ ವೈದ್ಯಾಧಿಕಾರಿಗಳಿಂದ ಹಿಡಿದು ಸಿಬ್ಬಂದಿವರೆಗೆ ಕರ್ತವ್ಯಪರತೆಯಿಂದ ಕೆಲಸ ಮಾಡಿದರೆ ನಿಮ್ಮ ಗೌರವ ಸಹ ಹೆಚ್ಚುತ್ತದೆ.

ಸಂಸದರಾದ ಬಿ.ವೈ.ರಾಘವೇಂದ್ರ ಮಾತನಾಡಿ, ಮೆಗ್ಗಾನ್ ಆಸ್ಪತ್ರೆಯಲ್ಲಿ ನರ್ಸಿಂಗ್ ಕಾಲೇಜು ಉದ್ಘಾಟನೆಯೊಂದಿಗೆ ರೂ.38.676 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ರೂ.29.62 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಕಾರ್ಯಕ್ರಮ ಇಂದು ನೆರವೇರಿದೆ. ಕ್ಯಾನ್ಸರ್ ಆಸ್ಪತ್ರೆ ಮಂಜೂರಾಗಿದ್ದು, ಮೆಗ್ಗಾನ್ ಆವರಣದಲ್ಲಿ ಮುಂಭಾಗದಲ್ಲಿ ನಿರ್ಮಿಸುವುದಕ್ಕೆ ಯೋಜನೆ ತಯಾರಿಸಲಾಗುತ್ತಿದೆ ಹಾಗೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮೇಲ್ಮಹಡಿಯಲ್ಲಿ ಸಹ ಕಾರ್ಯ ನಿರ್ವಹಿಸಿದಲ್ಲಿ ಸರ್ಕಾರಕ್ಕೆ ಹಣ ಸಹ ಉಳಿತಾಯವಾಗುತ್ತದೆ.

ಕಿದ್ವಾಯಿಯಿಂದಲೇ ಕ್ಯಾನ್ಸರ್ ತಜ್ಞವೈದ್ಯರಿಂದ ಚಿಕಿತ್ಸೆ ವ್ಯವಸ್ಥೆ ಮಾಡಿದಲ್ಲಿ ಕ್ಯಾನ್ಸರ್ ಆಸ್ಪತ್ರೆ ಶೀಘ್ರವಾಗಿ ಉದ್ಘಾಟಿಸಲು ಅನುಕೂಲವಾಗುತ್ತದೆ. ಆಯುರ್ವೇದಿಕ್ ಆಸ್ಪತ್ರೆಯನ್ನೂ ಬೇಗ ಶುರು ಮಾಡಲು ಆರೋಗ್ಯ ಸಚಿವರ ಸಹಕಾರ ಬೇಕು. ನಗರಾಭಿವೃದ್ದಿ ಸಚಿವರು ಸಹ ಆಸ್ಪತ್ರೆ ಆವರಣದಲ್ಲಿ ಮೂಲಭೂತ ಸೌಕರ್ಯಕ್ಕಗಿ ರೂ.10 ಕೋಟಿ ನೀಡಿದ್ದು ಎಲ್ಲರೂ ಜಿಲ್ಲೆಯ ಅಭಿವೃದ್ದಿಗೆ ಸಹಕರಿಸುತ್ತಿದ್ದಾರೆಂದರು.

ಶಾಸಕರು ಹಾಗೂ ನಿಕಟಪೂರ್ವ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಮಾತನಾಡಿ, ಶಿವಮೊಗ್ಗ ನಮ್ಮ ನಿರೀಕ್ಷೆ ಮೀರಿ ಒಳ್ಳೆಯ ರೀತಿಯಲ್ಲಿ ಬೆಳೆಯುತ್ತಿದೆ. ಇನ್ನು ಆರೇಳು ತಿಂಗಳಲ್ಲಿ ವಿಮಾನ ನಿಲ್ದಾಣ ಕಾಮಗಾರಿ ಮುಗಿಯಲಿದ್ದು, ನಮ್ಮ ಪ್ರಧಾನಿ ಮೋದಿಯವರನ್ನು ಬೆಂಗಳೂರಿನಿಂದ ಶಿವಮೊಗ್ಗಕ್ಕೆ ವಿಮಾನದಲ್ಲೇ ಕರೆತಂದು ಉದ್ಘಾಟನೆ ಮಾಡಿಸುವ ಅಪೇಕ್ಷೆ ಇದೆ.

ನಾನು ಉಪಮುಖ್ಯಮಂತ್ರಿಯಾಗಿದ್ದ ವೇಳೆಯಲ್ಲಿ ಮಂಜೂರಾದ ಶಿವಮೊಗ್ಗ ಮೆಡಿಕಲ್ ಕಾಲೇಜು ಇಂದು ರಾಜ್ಯದಲ್ಲೇ ಟಾಪ್ ಕಾಲೇಜಾಗಿದೆ. ಕೋವಿಡ್ ಸಂಕಷ್ಟದ ಸಮಯದಲ್ಲಿ ಉತ್ತಮ ಸೇವೆ ನೀಡಿದೆ. ಹಿಂದೆ ಹೆಚ್ಚಿನ ಚಿಕಿತ್ಸೆಗಾಗಿ ಜನರು ಮಣಿಪಾಲಕ್ಕೆ ಹೆಚ್ಚು ಹೋಗುತ್ತಿದ್ದರು. ಆದರೆ ಈಗ ಅದು ಶೇ.90 ಕಡಿಮೆ ಆಗಿದೆ. ಆ ರೀತಿಯ ವ್ಯವಸ್ಥೆಗಳು, ಸೌಲಭ್ಯ ಶಿವಮೊಗ್ಗದಲ್ಲೇ ದೊರಕುತ್ತಿದೆ. ಯಾವುದೇ ರೋಗಿಗೆ ಅಗತ್ಯವಾದ ಎಲ್ಲ ರೀತಿಯ ಚಿಕಿತ್ಸೆ ನೀಡುವ ಪ್ರಾಮಣಿಕ ಪ್ರಯತ್ನವನ್ನು ವೈದ್ಯರು ಸೇರಿದಂತೆ ಎಲ್ಲ ಸಿಬ್ಬಂದಿ ಮಾಡಬೇಕೆಂದು ಮನವಿ ಮಾಡಿದರು.

ನಗರಾಭಿವೃದ್ದಿ ಸಚಿವರಾದ ಬೈರತಿ ಬಸವರಾಜ ಮಾತನಾಡಿ, ನಮ್ಮ ಸರ್ಕಾರ ಅಭಿವೃದ್ದಿ ಮತ್ತು ಜನಪರ ಕೆಲಸಗಳನ್ನು ಮಾಡುತ್ತಿದ್ದು ಜನರ ಆಶೋತ್ತರಗಳನ್ನು ಈಡೇರಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ. ಕಾಲೇಜಿಗೆ ಅಗತ್ಯವಾದ ಯುಜಿಡಿ ಸೇರಿದಂತೆ ಇತರೆ ಕೆಲಸಗಳನ್ನು ತ್ವರಿತಗತಿಯಲ್ಲಿ ಮಾಡಲಾಗುವುದು ಎಂಬ ಭರವಸೆ ನೀಡಿದರು.

ಮುಖ್ಯ ಅತಿಥಿಗಳಾಗಿ ಪಾಲಿಕೆ ಮಹಾಪೌರರಾದ ಸುನೀತ ಅಣ್ಣಪ್ಪ, ಜ್ಯೋತಿ ಪ್ರಕಾಶ್ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ, ಜಿ.ಪಂ ಸಿಇಓ ಎಂ.ಎಲ್.ವೈಶಾಲಿ, ಸಿಮ್ಸ್ ನಿರ್ದೇಶಕ ಡಾ.ಸಿದ್ದಪ್ಪ, ಡಾ.ಶ್ರೀಧರ್, ಡಾ.ರಾಜೇಶ್ ಸುರಗಿಹಳ್ಳಿ, ಡಾ.ಸಿದ್ದನಗೌಡ ಪಾಟಿಲ್, ಸಿಮ್ಸ್ ಆಡಳಿತ ಮಂಡಳಿ ಸದಸ್ಯರಾದ ಡಾ.ವಾಣಿ ಕೋರಿ, ಡಾ.ಗೌತಮ್, ದಿವಾಕರ್ ಶೆಟ್ಟಿ, ಇತರರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ವಿಡಿಯೋ | ಕೆಡಿ ಸೆಟ್ಟಲ್ಲಿ ಜೋಗಿ ಪ್ರೇಮ್‌ ಗೆ ಶಿಲ್ಪಾ ಶೆಟ್ಟಿ ಮಾಡಿದ್ದೇನು..?

Published

on

ಸುದ್ದಿದಿನ ಡೆಸ್ಕ್ : ಬಾಲಿವುಡ್‌ ನಟಿ ಶಿಲ್ಪಾ ಶೆಟ್ಟಿ ಶೋ ಮ್ಯಾನ್‌ ಪ್ರೇಮ್‌ ಕತ್ತು ಹಿಸುಕಿ ಕೇಕೆ ಹೊಡೆದಿರೋ ಘಟನೆ ನಡೆದಿದೆ. ಕೆಡಿ ಸಿನಿಮಾದ ಮೂಲಕ ಕನ್ನಡಕ್ಕೆ ಕಂಬ್ಯಾಕ್‌ ಮಾಡಿರೋ ಬಾಲಿವುಡ್‌ ಚೆಲುವೆ ಶಿಲ್ಪಾ ಶೂಟಿಂಗ್‌ನಲ್ಲಿ ಪಾಲ್ಗೊಂಡಿದ್ದರು.

ಕೊನೆಯ ದಿನ ಕಾವೇರಿ ನದಿ ತೀರದಲ್ಲಿ ಕೆಡಿ ಚಿತ್ರೀಕರಣ ನಡೆದಿದ್ದು,ಸತ್ಯವತಿ ಉರುಫ್‌ ಶಿಲ್ಪಾ ಶೆಟ್ಟಿ ಪೋರ್ಷನ್‌ ಶೂಟಿಂಗ್‌ ಕಂಪ್ಲೀಟ್‌ ಆಗಿದೆ. ತಮ್ಮ ಭಾಗದ ಚಿತ್ರೀಕರಣ ಮುಗಿದಿದ್ದೇ ತಡ ಪ್ಯಾಕಪ್‌ ಪ್ಯಾಕಪ್‌ ಅಂತ ಶಿಲ್ಪಾ ಕುಣಿದಾಡಿದ್ದಾರೆ. ಇದೇ ವೇಳೆ ತಮಾಷೆ ಮಾಡುತ್ತಾ ಶೋ ಮ್ಯಾನ್‌ ಪ್ರೇಮ್‌ ಕತ್ತು ಹಿಸುಕಿ ಇವರಿಗೆ ಹಸಿವೇ ಆಗಲ್ಲ ಅನ್ಸುತ್ತೆ. ವಿತೌಟ್‌ ಬ್ರೇಕ್‌ ಕೆಲಸ ಮಾಡ್ತಾರೆ ಅದಕ್ಕೆ ಪ್ರತಿಫಲವಾಗಿ ಸಿನಿಮಾ ಅದ್ಭುತವಾಗಿ ಬಂದಿದೆ ಎಂದಿದ್ದಾರೆ.

ಜೋಗಿ ಪ್ರೇಮ್‌ ಮಿಸ್ಟರ್‌ ಪರ್ಫೆಕ್ಷನಿಸ್ಟ್‌ ಎಂದಿರೋ ಶಿಲ್ಪಾ ಶೆಟ್ಟಿ, ಪ್ರೇಮ್‌ ಕಲ್ಪನೆಯಲ್ಲಿ ಅರಳಿರೋ ಸತ್ಯವತಿ ಪಾತ್ರ ನಂಗೆ ಬಹಳ ಹಿಡಿಸಿದೆ, ಕೆಡಿ ಮೇಲೆ ನಿರೀಕ್ಷೆ ಹೆಚ್ಚಿದೆ ಎಂತಲೂ ತಿಳಿಸಿದ್ದಾರೆ. ಇಡೀ ಕೆಡಿ ಟೀಮ್‌ ಜೊತೆ ಸಂತೋಷವಾಗಿ ಕಾಲ ಕಳೆದು ಮುಂಬೈಗೆ ವಾಪಾಸ್‌ ಆಗಿದ್ದಾರೆ. ಅಂದ್ಹಾಗೇ, ಕೊನೆಯ ದಿನ ಶೂಟಿಂಗ್‌ ಸೆಟ್‌ನಲ್ಲಿ ನಡೆದ ತರ್ಲೆ ತಮಾಷೆಯನ್ನ ವಿಡಿಯೋ ಮೂಲಕ ನಟಿ ಶಿಲ್ಪಾ ಶೆಟ್ಟಿ ತಮ್ಮ ಸೋಷಿಯಲ್‌ ಸೈಟ್‌ನಲ್ಲಿ ಹಂಚಿಕೊಂಡಿದ್ದಾರೆ.

ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ; ವಿಡಿಯೋ ನೋಡಿ

https://www.instagram.com/reel/C7l1UEfNIvA/?igsh=bDQ5NDVhMHpxYWc3

ಶಿಲ್ಪಾ ಶೆಟ್ಟಿ ಇತ್ತೀಚೆಗೆ ‘ಕೆಡಿ’ ಸಿನಿಮಾದ ಶೂಟಿಂಗ್ ಬಿಡುವಿನಲ್ಲಿ ನಂಜನಗೂಡಿನ ನಂಜುಡೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ದೇವರಿಗೆ ಪ್ರಾರ್ಥನೆ ಸಲ್ಲಿಸಿ, ದೇವಾಲಯದ ಆವರಣದಲ್ಲಿ ಕುಳಿತು ಅವರು ಧ್ಯಾನ ಮಾಡಿದ್ದರು. ಆ ಸಂದರ್ಭದ ವಿಡಿಯೋ ಮತ್ತು ಫೋಟೋಗಳು ವೈರಲ್ ಆಗಿದ್ದವು.

ಇದೀಗ ಕೆಡಿ ಕೊನೆಯ ದಿನದ ಶೂಟಿಂಗ್‌ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್‌ ಆಗ್ತಿದೆ. ‘ಪ್ರೀತ್ಸೋದ್ ತಪ್ಪಾ’, ‘ಆಟೋ ಶಂಕರ್’, ‘ಒಂದಾಗೋಣ ಬಾ’ ಚಿತ್ರಗಳಲ್ಲಿ ನಟಿಸಿ ಕನ್ನಡಿಗರ ಮನಗೆದ್ದ ಮಂಗಳೂರು ಚೆಲುವೆ ಇದೀಗ ಕೆಡಿ ಮೂಲಕ ಮತ್ತೊಮ್ಮೆ ಸ್ಯಾಂಡಲ್‌ವುಡ್‌ಗೆ ರೀಎಂಟ್ರಿ ಕೊಟ್ಟಿದ್ದಾರೆ.

19 ವರ್ಷಗಳ ನಂತರ ಮತ್ತೊಮ್ಮೆ ಕರುನಾಡಲ್ಲಿ ದಿಬ್ಬಣ ಹೊರಡಲಿದ್ದಾರೆ. ಕೆಜಿಎಫ್‌ ನಂತರ ಅಧೀರ ಸಂಜಯ್‌ ದತ್ತ್‌ ಮತ್ತೆ ಕನ್ನಡಕ್ಕೆ ಮರಳಿದ್ದಾರೆ.ಕ್ರೇಜಿಸ್ಟಾರ್‌ ರವಿಚಂದ್ರನ್, ರಮೇಶ್ ಅರವಿಂದ್ ಮುಂತಾದ ಕಲಾವಿದರು ಕೂಡ ಈ ಸಿನಿಮಾದ ಪಾತ್ರವರ್ಗದಲ್ಲಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಜೂನ್. 1 ರಿಂದ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ ಕಾರ್ಯಾಗಾರ

Published

on

ಸುದ್ದಿದಿನ,ದಾವಣಗೆರೆ : ಕರ್ನಾಟಕ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಅಂಗ ಸಂಸ್ಥೆಯಾಗಿರುವ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು ಪದವಿ ಪೂರ್ವ ವಿದ್ಯಾರ್ಥಿಗಳಿಗಾಗಿ ಕೆರಿಯರ್ ಗೈಡ್‍ನೆಸ್, ಹೈಯರ್ ಎಜುಕೇಶನ್ ಮತ್ತು ಕೆರಿಯರ್ ಅಪಾರ್ಚುನಿಟಿಸ್‍ಗಾಗಿ ಜೂನ್ 1 ಮತ್ತು 3 ರಂದು ಎರಡು ದಿನಗಳ ಕಾರ್ಯಗಾರವನ್ನು ಆನ್‍ಲೈನ್ ವೆಮಿನಾರ್ ಮೂಲಕ ಆಯೋಜಿಸಲಾಗಿದೆ.

ಜೂನ್.1 ರಂದು ವೆಮಿನಾರ್ ನಂ. 25208106583 ಅಂಡ್ ಪಾಸ್ ವಾರ್ಡ್ qsSKG4Dsh84 ಮತ್ತು ಜೂನ್ 3 ರಂದು ವೆಮಿನಾರ್ ನಂ.25259292738 ಅಂಡ್ ಪಾಸ್ ವಾರ್ಡ್ upW2Vtrxh22 ಇದರೊಂದಿಗೆ ಪದವಿ ಪೂರ್ವ ವಿದ್ಯಾರ್ಥಿಗಳು ಭಾಗವಹಿಸಿ ಉನ್ನತ ವ್ಯಾಸಂಗ ಮತ್ತು ಉತ್ತಮ ಉದ್ಯೋಗಕ್ಕೆ ವಿವರವಾದ ಮಾಹಿತಿಯನ್ನು ಪಡೆಯಬಹುದು.

ಕಾರ್ಯಾಗಾರದಲ್ಲಿ ವಿವಿಧ ಪ್ರತಿಷ್ಠಿತ ಸಂಸ್ಥೆಗಳ ನಾಲ್ಕು ವಿಜ್ಞಾನಿಗಳು ಮೂಲ ವಿಜ್ಞಾನ, ಕೃಷಿ, ವೈದ್ಯಕೀಯ ಮತ್ತು ಇಂಜಿನಿಯರಿಂಗ್ ವ್ಯಾಸಂಗದ ಬಗ್ಗೆ ಸಲಹೆಗಳನ್ನು ನೀಡಲಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಉಮೇಶ ಘಾಟಗೆ – 9743084194 & ಚಂದ್ರಶೇಖರಮೂರ್ತಿ – 9686449019 ಅಥವಾ ವೆಬ್ ಸೈಟ್; www.kstacademy.in ವೀಕ್ಷಿಸಬಹುದಾಗಿದೆಂದು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎ.ಎಂ.ರಮೇಶ್ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ವಿಧಾನ ಪರಿಷತ್ ಚುನಾವಣೆ | ಮತದಾರರಿಗೆ ವಿಶೇಷ ಸಾಂದರ್ಭಿಕ ರಜೆ

Published

on

ಸುದ್ದಿದಿನ,ದಾವಣಗೆರೆ : ವಿಧಾನ ಪರಿಷತ್‍ನ ಆಗ್ನೆಯ ಶಿಕ್ಷಕರ ಕ್ಷೇತ್ರ ಹಾಗೂ ನೈರುತ್ಯ ಶಿಕ್ಷಕರ ಹಾಗೂ ಪದವೀಧರರ ಕ್ಷೇತ್ರಕ್ಕೆ ಜೂನ್ 3 ರಂದು ಬೆಳಿಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದೆ. ಮತದಾರರಾಗಿರುವ ಶಿಕ್ಷಕರಿಗೆ ಹಾಗೂ ಪದವೀಧರರಿಗೆ ಮತದಾನ ಮಾಡಲು ವಿಶೇಷ ಸಾಂದರ್ಭಿಕ ರಜೆಯನ್ನು ನೀಡಲಾಗಿರುತ್ತದೆ.

ಸರ್ಕಾರಿ ಹಾಗೂ ಖಾಸಗಿ ಶಾಲಾ ಕಾಲೇಜುಗಳು, ಅನುದಾನಿತ ಹಾಗೂ ಅನುದಾನ ರಹಿತ ವಿದ್ಯಾ ಸಂಸ್ಥೆಗಳು, ಎಲ್ಲಾ ಶೈಕ್ಷಣಿಕ ಸಂಸ್ಥೆಗಳು, ರಾಜ್ಯ ಹಾಗೂ ಕೇಂದ್ರ ಸರ್ಕಾರದ ಕಚೇರಿಗಳು, ರಾಷ್ಟ್ರೀಕೃತ ಹಾಗೂ ಇತರ ಬ್ಯಾಂಕುಗಳು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಕಾರ್ಖಾನೆಗಳು ಉಳಿದ ಕೈಗಾರಿಕೆ ಸಂಸ್ಥೆಗಳು ಹಾಗೂ ಸಹಕಾರ ರಂಗದ ಸಂಘ ಸಂಸ್ಥೆಗಳಲ್ಲಿ ಎಲ್ಲಾ ವ್ಯವಹಾರಿಕ ಸಂಸ್ಥೆಗಳಲ್ಲಿ ಔದ್ಯಮಿಕ ಸಂಸ್ಥೆಗಳಲ್ಲಿ ಮತ್ತು ಇತರ ಸಂಸ್ಥೆಗಳಲ್ಲಿ ಖಾಯಂ ಆಗಿ ಅಥವಾ ದಿನಗೂಲಿ ಮೇಲೆ ಕೆಲಸ ನಿರ್ವಹಿಸುವ ಪದವೀಧರರು ಹಾಗೂ ಶಿಕ್ಷಕರು ಮತದಾನ ಮಾಡಲು ಅನುಕೂಲವಾಗುವಂತೆ ಅಂತಹ ಅರ್ಹ ಮತದಾರರಿಗೆ ಸೀಮಿತವಾದಂತೆ ಚಲಾಯಿಸಲಿರುವ ಮತದಾರರಿಗೆ ಮತದಾನದ ದಿನವಾದ ಜೂನ್ 3 ರ ಸೋಮವಾರದಂದು ವಿಶೇಷ ಸಾಂದರ್ಭಿಕ ರಜೆ ಯನ್ನು ಮಂಜೂರು ಮಾಡಲು ಆದೇಶಿಸಲಾಗಿದೆ.

ಮತದಾನ ಮಾಡುವ ಸಮಯದಲ್ಲಿ ಮತದಾರರನ್ನು ಗುರುತಿಸಲು ಮತದಾರರ ಭಾವಚಿತ್ರವುಳ್ಳ ಗುರುತಿನ ಚೀಟಿ ಮುಖ್ಯ ದಾಖಲಾತಿಯಾಗಿ ಹಾಜರು ಪಡಿಸಬೇಕು. ಮತದಾರರ ಪಟ್ಟಿಯಲ್ಲಿ ಹೆಸರಿದ್ದವರು ಗುರುತಿನ ಚೀಟಿ ಹೊಂದಿಲ್ಲದಿದ್ದಲ್ಲಿ ಅಂತಹವರು ಭಾರತ ಚುನಾವಣಾ ಆಯೋಗವು ನಿರ್ಧರಿಸಿರುವ ಪೂರಕ ದಾಖಲಾತಿಗಳ ಪೈಕಿ ಒಂದನ್ನು ಹಾಜರುಪಡಿಸಿ ಮತದಾನ ಮಾಡಲು ಅವಕಾಶವಿರುತ್ತದೆ.

ಪೂರಕ ದಾಖಲಾತಿ

ಆಧಾರ್ ಕಾರ್ಡ್, ಡ್ರೈವಿಂಗ್ ಲೈಸೆನ್ಸ್, ಪಾನ್‍ಕಾರ್ಡ್, ಇಂಡಿಯಾನ್ ಪಾಸ್ ಪೋರ್ಟ್, ಕೇಂದ್ರ, ರಾಜ್ಯ ಸರ್ಕಾರದ ಅಡಿಯಲ್ಲಿ ಬರುವ ಸ್ಥಳೀಯ ಸಂಸ್ಥೆಗಳು ಅಥವಾ ಇತರ ಖಾಸಗಿ ಕೈಗಾರಿಕಾ ಮನೆಗಳಿಂದ ಅದರ ಉದ್ಯೋಗಿಗಳಿಗೆ ನೀಡಲಾದ ಸೇವಾ ಗುರುತಿನ ಕಾರ್ಡ್, ಸಂಸದರು, ಶಾಸಕರು, ಎಂಎಲ್‍ಸಿಗಳಿಗೆ ಅಧಿಕೃತ ಗುರುತಿನ ಚೀಟಿ, ಶಿಕ್ಷಣ ಸಂಸ್ಥೆಗಳಿಂದ ನೀಡಲಾದ ಸೇವಾ ಗುರುತಿನ ಕಾರ್ಡ್‍ಗಳು, ಇದರಲ್ಲಿ ಶಿಕ್ಷಕರು, ಪದವೀಧರರ ಕ್ಷೇತ್ರದ ಮತದಾರರನ್ನು ನೇಮಿಸಿಕೊಳ್ಳಬಹುದು, ವಿಶ್ವವಿದ್ಯಾಲಯವು ನೀಡಿದ ಪದವಿ, ಡಿಪ್ಲೋಮಾ ಮೂಲ ಪ್ರಮಾಣ ಪತ್ರ, ಸಕ್ಷಮ ಪ್ರಾಧಿಕಾರದಿಂದ ನೀಡಿದ ದೈಹಿಕನ್ಯೂನತೆಯ ಪ್ರಮಾಣ ಪತ್ರ, ವಿಶಿಷ್ಟ ಅಂಗವೈಕಲ್ಯ ಕಾರ್ಡ್(UDID) ಮೂಲಕ ಮತದಾನ ಮಾಡಬಹುದು ಎಂದು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending