ರಾಜಕೀಯ
ಬಿಜೆಪಿಯಲ್ಲಿ ಸಿಎಂ ಸ್ಥಾನ ; ಹರಾಜಿನ ಮೂಲಕ ಮಾರಾಟವಾಗುವ ‘ಪೇಮೆಂಟ್ ಸೀಟು’ : ಸಿದ್ದರಾಮಯ್ಯ ವಾಗ್ದಾಳಿ
![](https://suddidina.com/wp-content/uploads/2020/01/Siddaramaiah-suddidina-009.jpg)
ಸುದ್ದಿದಿನ, ಬೆಂಗಳೂರು : ತಮ್ಮನ್ನು ಮುಖ್ಯಮಂತ್ರಿ ಮಾಡಲು ದೆಹಲಿಯವರು 2,500 ಕೋಟಿ ರೂಪಾಯಿ ಕೇಳಿದ್ದರು ಎಂಬ ಬಿಜೆಪಿ ಶಾಸಕ ಬಸವನಗೌಡ ಪಾಟೀಲ ಯತ್ನಾಳ್ ಅವರ ಆರೋಪ ಗಂಭೀರ ಸ್ವರೂಪದ್ದಾಗಿದ್ದು, ಸೂಕ್ತ ತನಿಖೆಯಿಂದ ಮಾತ್ರ ಇದರ ಹಿಂದಿನ ಸತ್ಯಾಸತ್ಯತೆ ಬಹಿರಂಗವಾಗಲು ಸಾಧ್ಯ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದರು.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಯತ್ನಾಳ್ ಆರೋಪದ ಬಗ್ಗೆ ತನಿಖೆ ನಡೆಸದೆ ಇದ್ದರೆ ಬಿಜೆಪಿ ನಾಯಕರಿಗೆ ಸಾವಿರಾರು ಕೋಟಿ ರೂಪಾಯಿ ತೆತ್ತು ಮುಖ್ಯಮಂತ್ರಿಯಾಗಿರುವುದನ್ನು ಬಸವರಾಜ ಬೊಮ್ಮಾಯಿ ಅವರೇ ಒಪ್ಪಿಕೊಂಡಂತಾಗುತ್ತದೆ. ಅದರ ನಂತರ ಬೊಮ್ಮಾಯಿ ಅವರಿಗೆ ಮುಖ್ಯಮಂತ್ರಿ ಕುರ್ಚಿಯಲ್ಲಿ ಕೂರುವ ಯಾವ ನೈತಿಕತೆ ಇರುವುದಿಲ್ಲ.
ಯತ್ನಾಳ್ ಅವರು ಮಾತನಾಡುತ್ತಿರುವುದನ್ನು ಕೇಳಿದರೆ ಅವರ ಬಳಿ ಬಿಜೆಪಿ ಭ್ರಷ್ಟಾಚಾರದ ಬಗ್ಗೆ ಅಗಾಧವಾದ ಮಾಹಿತಿ ಇದ್ದಂತೆ ಕಾಣುತ್ತಿದೆ. ಅವರನ್ನು ವಿಚಾರಣೆ ನಡೆಸಿ ಆ ಮಾಹಿತಿಯನ್ನು ಪಡೆದರೆ ತನಿಖೆಯೂ ಸಲೀಸಾಗುತ್ತದೆ, ಸತ್ಯವೂ ಹೊರಬರುತ್ತದೆ ಎಂದು ಕಿಡಿಕಾರಿದರು.
ಬಿಜೆಪಿಯಲ್ಲಿ ಮುಖ್ಯಮಂತ್ರಿಯನ್ನು ಶಾಸಕಾಂಗ ಪಕ್ಷ ಆಯ್ಕೆ ಮಾಡುತ್ತದೆ ಎಂದು ಜನ ತಿಳಿದುಕೊಂಡಿದ್ದರು. ಇದು ಹರಾಜಿನ ಮೂಲಕ ಮಾರಾಟವಾಗುವ ‘ಪೇಮೆಂಟ್ ಸೀಟು’ ಎನ್ನುವುದು ಶಾಸಕ ಯತ್ನಾಳ್ ಆರೋಪದಿಂದ ಬಯಲಾಗಿದೆ. ಈ ಸೀಟಿಗಾಗಿ ಹಿಂದಿನ ಮತ್ತು ಈಗಿನ ಮುಖ್ಯಮಂತ್ರಿಗಳು ಎಷ್ಟು ದುಡ್ಡು ಕೊಟ್ಟಿದ್ದಾರೆ ಎನ್ನುವುದೂ ಬಹಿರಂಗವಾಗಬೇಕು.
ಈ “ಪೇಮೆಂಟ್ ಸೀಟುಗಳು” ಕೇವಲ ಮುಖ್ಯಮಂತ್ರಿ ಕುರ್ಚಿಗೆ ಸೀಮಿತವಾಗಿಲ್ಲ, ಸಚಿವ ಸ್ಥಾನಗಳನ್ನೂ ಈ ರೀತಿ ಹರಾಜು ಕೂಗಲಾಗಿದೆ ಎನ್ನುವ ಆರೋಪ ಇದೆ. ಬಿಜೆಪಿಗೆ ಪಕ್ಷಾಂತರ ಮಾಡಿದ ಶಾಸಕರು ಯಾರಿಗೆ ಮತ್ತು ಎಷ್ಟು ದುಡ್ಡು ಸಂದಾಯ ಮಾಡಿದ್ದಾರೆ ಎನ್ನುವುದೂ ತನಿಖೆಯಾಗಬೇಕು ಎಂದು ವಾಗ್ದಾಳಿ ನಡೆಸಿದರು.
ಗುತ್ತಿಗೆದಾರರಿಂದ 40% ಕಮಿಷನ್ ವಸೂಲಿ, ಪಿ.ಎಸ್.ಐ ಮತ್ತಿತರ ಹುದ್ದೆಗಳ ನೇಮಕದ ಅಕ್ರಮ ವ್ಯವಹಾರ, ಆರೋಗ್ಯ ಇಲಾಖೆಯ ಭ್ರಷ್ಟಾಚಾರವೂ ಸೇರಿದಂತೆ ಎಲ್ಲ ಹಗರಣಗಳಿಗೂ ಯತ್ನಾಳ್ ಮಾಡಿರುವ ಆರೋಪಕ್ಕೂ ನೇರವಾದ ಸಂಬಂಧ ಇದೆ. ಇವೆಲ್ಲವುಗಳ ಬಗ್ಗೆ ಸಮಗ್ರ ತನಿಖೆ ನಡೆಯಬೇಕು.
ಮುಖ್ಯಮಂತ್ರಿ ಮತ್ತು ಸಚಿವರಾಗಲು ಪೇಮೆಂಟ್ ಮಾಡಿದವರು ಅದರ ವಸೂಲಿಗಾಗಿಯೇ ಈಗ ಕಮಿಷನ್ ದಂಧೆ ಮತ್ತು ಅಕ್ರಮ ವ್ಯವಹಾರಕ್ಕೆ ಇಳಿದಿದ್ದಾರೆ. ಇದರಿಂದ ಒಬ್ಬ ಅಮಾಯಕ ಗುತ್ತಿಗೆದಾರ ಜೀವ ಕಳೆದುಕೊಂಡ, ಸಾವಿರಾರು ಅಮಾಯಕ ಪಿಎಸ್ಐ ಹುದ್ದೆ ಆಕಾಂಕ್ಷಿಗಳು ಭವಿಷ್ಯ ಕಳೆದುಕೊಂಡರು.
ಬಸವನಗೌಡ ಪಾಟೀಲ್ ಯತ್ನಾಳ್ ಆರೋಪ ಹೊಸದೇನಲ್ಲ. ಕಳೆದ ಎರಡು ವರ್ಷಗಳಿಂದ ಇವರು ತಮ್ಮದೇ ಪಕ್ಷದ ಮುಖ್ಯಮಂತ್ರಿಗಳು, ಸಚಿವರು ಮತ್ತು ನಾಯಕರ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡುತ್ತಿದ್ದಾರೆ. ಬಿಜೆಪಿ ಹೈಕಮಾಂಡ್ ಮೌನವಾಗಿರುವುದು ಸಮ್ಮತಿಯ ಸೂಚನೆಯೇ? ಎಂದು ಪ್ರಶ್ನಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ದಿನದ ಸುದ್ದಿ
ಭಾರತ ಹಿಂದೂ ರಾಷ್ಟ್ರವಲ್ಲ ; ಸಿಎಂ ಸಿದ್ದರಾಮಯ್ಯ
![](https://suddidina.com/wp-content/uploads/2024/06/siddaramaiah_Tweet_suddidina.jpg)
ಸುದ್ದಿದಿನಡೆಸ್ಕ್:ಭಾರತ ಹಿಂದೂ ರಾಷ್ಟ್ರವಲ್ಲ, ಎಲ್ಲರಿಗೂ ಸೇರಿದ ರಾಷ್ಟ್ರವೆಂಬುದಕ್ಕೆ ಲೋಕಸಭಾ ಚುನಾವಣೆಯ ಫಲಿತಾಂಶ ಸಾಕ್ಷಿ ಎಂದು ನೋಬೆಲ್ ಪ್ರಶಸ್ತಿ ಪುರಸ್ಕ್ರತ ಅಮಾರ್ತ್ಯ ಸೇನ್ ಅವರು ಹೇಳಿರುವುದು ಸರಿಯಿದೆ. ನಾವೂ ಅದನ್ನೇ ಮೊದಲಿನಿಂದಲೂ ಪ್ರತಿಪಾದಿಸುತ್ತಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಅವರು ತಮ್ಮ ಫೇಸ್ ಬುಕ್ ಖಾತೆಯಲ್ಲಿ ಹೇಳಿದ್ದಾರೆ.
ಭಾರತ ಬಹುತ್ವದ ದೇಶ, ಯಾವುದೇ ಒಂದು ಸೀಮಿತ ಧರ್ಮಕ್ಕೆ ಸೇರಿದ ರಾಷ್ಟ್ರವಾಗಲು ಸಾಧ್ಯವಿಲ್ಲ. ಹಲವು ಜಾತಿ, ಧರ್ಮ, ಭಾಷೆಯವರು ಇದ್ದು, ಬಹುತ್ವದ ಸಂಸ್ಕೃತಿ ಇರುವ ರಾಷ್ಟವಾಗಿದೆ ಬಂದಿದ್ದಾರೆ.
https://x.com/siddaramaiah/status/1806541235936710672?t=ZkvvqaUNKnoC-p3Ig3X2aA&s=19
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ದಿನದ ಸುದ್ದಿ
ಏಳನೇ ವೇತನ ; ಸರ್ಕಾರಿ ನೌಕರರಿಗೆ ಸಿಎಂ ಸಿಹಿ ಸುದ್ದಿ
![](https://suddidina.com/wp-content/uploads/2024/06/siddaramaiah_suddidina_GST.jpg)
ಸುದ್ದಿದಿನಡೆಸ್ಕ್:ಏಳನೇ ವೇತನ ಆಯೋಗದ ವರದಿ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಈಗಾಗಲೇ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿದ್ದು, ಸಚಿವರು ಅನೌಪಚಾರಿಕವಾಗಿ ಒಪ್ಪಿಗೆ ಸೂಚಿಸಿದ್ದಾರೆ. ಆಯೋಗದ ವರದಿಯನ್ನು ಆದಷ್ಟು ಶೀಘ್ರ ಅನುಷ್ಠಾನಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ದಿನದ ಸುದ್ದಿ
ಜುಲೈ 1 ರಿಂದ ಜಾರಿಗೆ ಬರಲಿರುವ ಮೂರು ಹೊಸ ಕ್ರಿಮಿನಲ್ ಕಾಯ್ದೆಗಳು ಯಾವು ಗೊತ್ತಾ..?
![](https://suddidina.com/wp-content/uploads/2023/05/criminal_suddidina_laws.jpg)
ಸುದ್ದಿದಿನಡೆಸ್ಕ್:ಮೂರು ಹೊಸ ಕ್ರಿಮಿನಲ್ ಕಾಯ್ದೆಗಳಾದ ಭಾರತೀಯ ನ್ಯಾಯ ಸಂಹಿತೆ-2023, ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ-2023 ಹಾಗೂ ಭಾರತೀಯ ಸಾಕ್ಷ್ಯಾ ಅಧಿನಿಯಮ್-2023 ಜುಲೈ 1 ರಿಂದ ಜಾರಿಗೆ ಬರಲಿವೆ.
ಕಳೆದ ವರ್ಷದ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಈ ವಿಧೇಯಕಗಳನ್ನು ಸಂಸತ್ತಿನಲ್ಲಿ ಅಂಗೀಕರಿಸಲಾಗಿತ್ತು. ಹೊಸ ಕ್ರಿಮಿನಲ್ ಕಾನೂನುಗಳು ಭಾರತೀಯ ನಾಗರಿಕರನ್ನು ಸಬಲೀಕರಣಗೊಳಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಿದೆ.
ಈ ಕಾನೂನುಗಳು ಪ್ರತಿಯೊಬ್ಬರಿಗೂ ಸುಲಭವಾಗಿ ಲಭಿಸಬಹುದಾದ, ಬೆಂಬಲ ನೀಡುವ ಹಾಗೂ ಸಮರ್ಥ ನ್ಯಾಯ ವ್ಯವಸ್ಥೆ ಸೃಷ್ಟಿಸುವ ಗುರಿಯನ್ನು ಹೊಂದಿದೆ. ಹೊಸ ಕ್ರಿಮಿನಲ್ ಕಾನೂನುಗಳ ಹೊಸ ನಿಬಂಧನೆಗಳಲ್ಲಿ ಘಟನೆಗಳನ್ನು ಆನ್ಲೈನ್ನಲ್ಲಿ ವರದಿ ಮಾಡುವುದು.
ಯಾವುದೇ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸುವುದು. ಸಂತ್ರಸ್ಥರು ಎಫ್ಐಆರ್ನ ಉಚಿತ ನಕಲನ್ನು ಪಡೆಯಲು ಸಾಧ್ಯವಾಗಿಸಲಿದೆ. ಇದರ ಹೊರತಾಗಿ ಬಂಧನದ ಸಂದರ್ಭದಲ್ಲಿ ವ್ಯಕ್ತಿಯು ತನ್ನ ಪರಿಸ್ಥಿತಿಯ ಬಗ್ಗೆ ಆಯ್ಕೆಯ ವ್ಯಕ್ತಿಗೆ ಮಾಹಿತಿ ನೀಡುವ ಹಕ್ಕನ್ನು ಹೊಂದಿರುತ್ತಾನೆ. ಹೊಸ ಕಾನೂನುಗಳು ಮಹಿಳೆಯರು ಮತ್ತು ಮಕ್ಕಳ ವಿರುದ್ಧದ ಅಪರಾಧಗಳ ತನಿಖೆಗೆ ಆದ್ಯತೆ ನೀಡಿದ್ದು, ಮಾಹಿತಿಯನ್ನು ದಾಖಲಿಸಿದ 2 ತಿಂಗಳೊಳಗೆ ಸಮಯೋಚಿತವಾಗಿ ಪೂರ್ಣಗೊಳಿಸುವುದನ್ನು ಖಚಿತಪಡಿಸುತ್ತದೆ.
ಹೊಸ ಕ್ರಿಮಿನಲ್ ಕಾನೂನುಗಳಲ್ಲಿ ವಿಧಿವಿಜ್ಞಾನ ತಜ್ಞರು ಗಂಭೀರ ಅಪರಾಧಗಳು ಘಟಿಸಿದ ಸ್ಥಳಗಳಿಗೆ ಭೇಟಿ ನೀಡುವುದು ಮತ್ತು ಸಾಕ್ಷ್ಯ ಸಂಗ್ರಹಿಸುವುದು ಕಡ್ಡಾಯವಾಗಿದೆ. ಸಮೆನ್ಸ್ಗಳನ್ನು ಈಗ ವಿದ್ಯುನ್ಮಾನವಾಗಿ ರವಾನಿಸಬಹುದು, ಕಾನೂನು ಪ್ರಕ್ರಿಯೆಗಳನ್ನು ತ್ವರಿತಗೊಳಿಸಬಹುದು, ಕಾಗದಪತ್ರಗಳ ದಾಖಲೆಗಳನ್ನು ಕಡಿಮೆ ಮಾಡಬಹುದು, ಪ್ರಕರಣಕ್ಕೆ ಸಂಬಂಧಪಟ್ಟ ಎಲ್ಲರ ನಡುವೆ ಸಮರ್ಥ ಸಂವಹನ ಖಚಿತಪಡಿಸಿಕೊಳ್ಳಬಹುದು.
ಕೇಂದ್ರ ಸರ್ಕಾರವು ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳೊಂದಿಗೆ ನಿಯಮಿತ ಸಭೆಗಳನ್ನು ನಡೆಸಿದ್ದು, ಜುಲೈ 1 ರಿಂದ ಹೊಸ ಕ್ರಿಮಿನಲ್ ಕಾನೂನುಗಳನ್ನು ಜಾರಿಗೆ ತರಲು ತಂತ್ರಜ್ಞಾನ, ಸಾಮರ್ಥ್ಯವರ್ಧನೆ ಹಾಗೂ ಜಾಗೃತಿ ಮೂಡಿಸುವ ವಿಷಯದಲ್ಲಿ ಸಂಪೂರ್ಣ ಸಜ್ಜುಗೊಂಡಿವೆ ಎಂದು ಮೂಲಗಳು ಹೇಳಿವೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
-
ದಿನದ ಸುದ್ದಿ7 days ago
ನಾಡೋಜೆ ಡಾ. ಕಮಲಾ ಹಂಪನಾಗೆ ರವೀಂದ್ರ ಕಲಾಕ್ಷೇತ್ರದಲ್ಲಿ ಗಣ್ಯರಿಂದ ಅಂತಿಮ ನಮನ
-
ದಿನದ ಸುದ್ದಿ7 days ago
ನಾಡೋಜೆ ಕಮಲಾ ಹಂಪನ ನಿಧನ ; ಮೆಡಿಕಲ್ ಕಾಲೇಜಿಗೆ ದೇಹದಾನ : ಗಣ್ಯರ ಸಂತಾಪ
-
ಅಂತರಂಗ6 days ago
ಆತ್ಮಕತೆ | ತುರ್ತು ಪರಿಸ್ಥಿತಿ ಮತ್ತು ನಮ್ಮೂರಿನ ಭೂ ಹೋರಾಟ
-
ದಿನದ ಸುದ್ದಿ6 days ago
ಇವರೇ ನೋಡಿ ಟ್ವೀಟ್ಟರ್, ಪೇಸ್ಬುಕ್ ಮೀಮ್ಸ್ ಸ್ಟಾರ್ ಕ್ಸೇವಿಯರ್ ಉರ್ಫ್ ಓಂಪ್ರಕಾಶ್
-
ದಿನದ ಸುದ್ದಿ6 days ago
ರೇಣುಕಾಸ್ವಾಮಿ ಕೊಲೆ ಮತ್ತು ಗಂಡುಹೆಣ್ಣಿನ ನಡುವಿನ ಸಂಬಂಧ
-
ದಿನದ ಸುದ್ದಿ7 days ago
ಅರಣ್ಯ ಭೂಮಿ ಒತ್ತುವರಿ ಆರೋಪ ; ಮಸ್ಕಿ ತಹಶೀಲ್ದಾರರಿಗೆ ನೋಟಿಸ್
-
ದಿನದ ಸುದ್ದಿ7 days ago
ನಟ ದರ್ಶನ್ ಪರಪ್ಪನ ಆಗ್ರಹಾರ ಜೈಲು ಪಾಲು
-
ದಿನದ ಸುದ್ದಿ6 days ago
ನಾಳೆಯಿಂದ 18ನೇ ಲೋಕಸಭೆಯ ಮೊದಲ ಅಧಿವೇಶನ