Connect with us

ದಿನದ ಸುದ್ದಿ

ಮಧ್ಯಾಹ್ನದ ಪ್ರಮುಖ ಸುದ್ದಿಗಳು

Published

on

ಮಧ್ಯಾಹ್ನದ ಪ್ರಮುಖ ಸುದ್ದಿಗಳು

  1. ತೆಲಂಗಾಣ ಕಾಮರೆಡ್ಡಿ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಉಂಟಾದ ಜೀವ ಹಾನಿಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ವ್ಯಕ್ತ ಪಡಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು ಮೃತರ ಸಂಬಂಧಿಕರಿಗೆ ಪ್ರಧಾನಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ ತಲಾ 50ಸಾವಿರ ರೂಪಾಯಿ ಪರಿಹಾರ ಘೋಷಿಸಿದ್ದಾರೆ.
  2. ದೇಶದಲ್ಲಿ ಕಳೆದ ೨೪ ಗಂಟೆಗಳ ಅವಧಿಯಲ್ಲಿ 3 ಸಾವಿರದ 207ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿದೆ. ಇದೇ ಅವದಿಯಲ್ಲಿ 3 ಸಾವಿರದ 410 ಸೋಂಕಿತರು ಚೇತರಿಸಿಕೊಂಡಿದ್ದು, 29ಮಂದಿ ಮೃತಪಟ್ಟಿದ್ದಾರೆ. ಸದ್ಯ ಸಕ್ರಿಯ ಪ್ರಕರಣಗಳ ಸಂಖ್ಯೆ 20ಸಾವಿರದ 403ಕ್ಕೆ ಏರಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
  3. ಇಸ್ತಾನ್‌ಬುಲ್‌ನಲ್ಲಿ ಇಂದು ಆರಂಭವಾಗಲಿರುವ ಐಬಿಎ ಮಹಿಳೆಯರ ವಿಶ್ವ ಬಾಕ್ಸಿಂಗ್ ಚಾಂಪಿಯನ್ ಷಿಪ್‌ನಲ್ಲಿ ಟೋಕಿಯೊ ಒಲಿಂಪಿಕ್ಸ್ ಕಂಚಿನ ಪದಕ ವಿಜೇತೆ ಲವ್ಲಿನಾ ಬೊರ್ಗೊಹೈನ್ ಭಾರತದ ಪರ ಅಭಿಯಾನ ಆರಂಭಿಸಲಿದ್ದಾರೆ. ಭಾರತೀಯ ಬಾಕ್ಸರ್ ಲವ್ಲಿನಾ ಚಾಂಪಿಯನ್ ಷಿಪ್‌ನಲ್ಲಿ ಮಿಶ್ರ ಡ್ರಾ ಪಡೆದಿದ್ದಾರೆ.
  4. ನ್ಯಾಯಮೂರ್ತಿ ಸುಧಾಂಶು ಧುಲಿಯಾ ಮತ್ತು ನ್ಯಾಯಮೂರ್ತಿ ಜಮ್‌ಶೆಡ್ ಬುರ‍್ಜೋರ್ ಪರ್ದಿವಾಲ ಇಂದು ಸುಪ್ರೀಂಕೋರ್ಟ್‌ನ ನ್ಯಾಯಧೀಶರಾಗಿ ಪ್ರಮಾಣವಚನ ಸ್ವೀಕರಿಸಿದರು. ಸುಪ್ರೀಂಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ಅವರು ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ನೂತನ ನ್ಯಾಯಧೀಶರಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.
  5. ಉತ್ತರಕನ್ನಡ ಜಿಲ್ಲೆಯ ಕಾರವಾರ-ಅಂಕೋಲಾ ತಾಲೂಕಿನ ವಿವಿಧ ದೇವಾಲಯಗಳ ಜೀರ್ಣೋದ್ಧಾರಕ್ಕೆ ರಾಜ್ಯ ಸರ್ಕಾರ 2 ಕೋಟಿ ರೂಪಾಯಿ ಅನುದಾನ ಮಂಜೂರಿ ಮಾಡಿದೆ ಎಂದು ಶಾಸಕಿ ರೂಪಾಲಿ ನಾಯ್ಕ ತಿಳಿಸಿದ್ದಾರೆ.
  6. ಮುಂಬೈನ ಡಿ.ವೈ. ಪಾಟೀಲ್ ಕ್ರೀಡಾ ಅಕಾಡೆಮಿಯಲ್ಲಿ ಇಂದು ರಾತ್ರಿ 7.30ಕ್ಕೆ ಆರಂಭವಾಗಲಿರುವ ಐಪಿಎಲ್ ಟಿ-20 ಕ್ರಿಕೆಟ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಕೋಲ್ಕೊತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗಲಿವೆ.
  7. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯಿತಿಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಲಿದ್ದಾರೆ. ಜಿಲ್ಲಾಡಳಿತಕ್ಕೆ ವೇಗ ನೀಡುವುದು ಸೇರಿದಂತೆ ಹಲವು ಅಭಿವೃದ್ಧಿ ವಿಚಾರಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ.
  8. ಇಂದು ಹೋರಾಟಗಾರ ಮಹಾರಾಣಾ ಪ್ರತಾಪ್ ಅವರ ಜಯಂತಿ. ಇದರ ಅಂಗವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಅಪ್ರತಿಮ ವೀರ, ಅದ್ವಿತೀಯ ಶೌರ್ಯ, ಪರಾಕ್ರಮಗಳ ಮೂಲಕ ಸ್ವದೇಶ, ಸಂಸ್ಕೃತಿ, ಸ್ವಾಭಿಮಾನವನ್ನು ರಕ್ಷಿಸಿದವರ ಪೈಕಿ ಮಹಾರಾಣಾ ಪ್ರತಾಪ್ ಅಪ್ರತಿಮ ಹೋರಾಟಗಾರರಲ್ಲಿ ಒಬ್ಬರಾಗಿದ್ದ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.
  9. ಪಾಕಿಸ್ತಾನ ಮೂಲದ ಗ್ಯಾಂಗ್‌ಸ್ಟರ್ ದಾವೂದ್ ಇಬ್ರಾಹಿಮ್‌ನ ಸಹಚರರು ಮತ್ತು ಕೆಲವು ಹಾವಾಲ ನಿರ್ವಹಕರ ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆ ಎಎನ್‌ಐ ಮುಂಬೈನಲ್ಲಿಂದು 12 ಕ್ಕೂ ಹೆಚ್ಚು ಸ್ಥಳಗಳಲ್ಲಿ ದಾಳಿ ನಡೆಸಿದೆ ಎಂದು ಸುದ್ದಿ ಸಂಸ್ಥೆಗಳು ವರದಿ ಮಾಡಿದೆ.
  10. ಜರ್ಮನಿಯ ಸುಹ್ಲ್ ನಲ್ಲಿ ಇಂದು ಅಂತಾರಾಷ್ಟ್ರೀಯ ಶೂಟಿಂಗ್ ಸ್ಪೋರ್ಟ್ ಫೆಡರೇಷನ್ – ಐಎಸ್ ಎಸ್ ಎಫ್ ಜೂನಿಯರ್ ವಿಶ್ವ ಕಪ್ ಟೂರ್ನಿ ಆರಂಭವಾಗಲಿದೆ. ಸ್ಟಾರ್ ಶೂಟರ್ ಗಳಾದ ಮನು ಭಾಕರ್ ಮತ್ತು ಸೌರಭ್ ಚೌಧರಿ ಟೂರ್ನಿಯಲ್ಲಿ ಭಾರತ ತಂಡವನ್ನು ಮುನ್ನಡೆಸಲಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಗ್ರಾಮ ಸಹಾಯಕ ಹುದ್ದೆಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ದಾವಣಗೆರೆ ತಾಲ್ಲೂಕು ಮಾಯಕೊಂಡ ಹೋಬಳಿಯ ಬಾಡ ವೃತ್ತದ ಗ್ರಾಮ ಸಹಾಯಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿದಾರರು ಓದಲು ಹಾಗೂ ಬರೆಯಲು ಚೆನ್ನಾಗಿ ಬಲ್ಲವರಾಗಿರಬೇಕು ,ಅರ್ಜಿದಾರರು ಖಾಲಿ ಇರುವ ಗ್ರಾಮಸಹಾಯಕ ಹುದ್ದೆಯ ವೃತ್ತದ ನಿವಾಸಿಯಾಗಿರಬೇಕು ಮತ್ತು ಕೇಂದ್ರ ಸ್ಥಾನದಲ್ಲಿಯೇ ವಾಸವಾಗಿರಬೇಕು. ಗ್ರಾಮಸಹಾಯಕ ತಳವಾರರು, ತೋಟೆಗಳು, ನೀರುಗಂಟೆಗಳು ವಾಲಿಕರ್ಸ್, ಮಹರಸ್, ಬಾರಿಕರಸ್, ವೀರಾಡಿಗಳು, ಬಲೂತಿದಾರಸ್ ತಳಿಯಾರಿಸ್ ವೆಟಿಸ್, ಕುಲುವಡಿಸ್, ಉರ್‍ಗಾನಿಸ್ ಕುಟುಂಬದವರಿಗೆ ಆದ್ಯತೆ ನೀಡಲಾಗುವುದು, ಅರ್ಜಿದಾರರು 25 ವರ್ಷ ವಯೋಮಾನದವರಾಗಿರಬೇಕು. ಅರ್ಜಿ ಸಲ್ಲಿಸಲು ಜುಲೈ 5 ಕೊನೆಯ ದಿನವಾಗಿರುತ್ತದೆ.

ಅರ್ಜಿಯೊಂದಿಗೆ ಜನ್ಮ ದಿನಾಂಕ (ವರ್ಗಾವಣೆ ಪತ್ರ, ಎಸ್.ಎಸ್.ಎಲ್ ಸಿ ಅಂಕಪಟ್ಟಿ ಲಗತ್ತಿಸುವುದು ), ವಾಸಸ್ಥಳ ದೃಢೀಕರಣ, (ಸಂಬಂಧಿಸಿದ ಉಪತಹಸೀಲ್ದಾರರಿಂದ ) ಪಡೆದ ಪತ್ರ ಲಗತ್ತಿಸುವುದು, ಚುನಾವಣೆ ಗುರುತಿನ ಚೀಟಿ, ಆಧಾರ್ ಕಾರ್ಡ, ಪಡಿತರ ಚೀಟಿ, ವ್ಯಾಸಾಂಗ ಪೂರೈಸಿದ ಬಗ್ಗೆ ದಾಖಲೆ, ಜಾತಿ ಮತ್ತು ಆದಾಯ ಪ್ರಮಾಣ ಪತ್ರವನ್ನು ಕಚೇರಿ ಸಲ್ಲಿಸಬೇಕೆಂದು ತಹಶೀಲ್ದಾರ್ ಡಾ.ಅಶ್ವಥ್ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ವಿಕಲಚೇತನರಿಗೆ ರಾಷ್ಟ್ರಪ್ರಶಸ್ತಿ ; ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ವಿಕಲಚೇತನರ ಸಬಲೀಕರಣಕ್ಕಾಗಿ ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ ವ್ಯಕ್ತಿ, ಸಂಸ್ಥೆಗಳಿಗೆ 2024ನೇ ಸಾಲಿನ ರಾಷ್ಟ್ರ ಪ್ರಶಸ್ತಿಯನ್ನು ನೀಡಲು ಆನ್‍ಲೈನ್ ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ.

ವೆಬ್‍ಸೈಟ್ ವಿಳಾಸ: www.depwd.gov.in & www.awards.gov.in ರಲ್ಲಿ ಜುಲೈ 31 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಆಯಾ ತಾಲ್ಲೂಕಿನ ಸಂಯೋಜಕರನ್ನು ಸಂಪರ್ಕಿಸಲು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣಾಧಿಕಾರಿ ಡಾ|| ಕೆ.ಕೆ. ಪ್ರಕಾಶ್ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಬೆಂಗಳೂರು – ಚೆನ್ನೈ ಎಕ್ಸ್‌ಪ್ರೆಸ್ ಹೆದ್ದಾರಿ ಕಾಮಗಾರಿ ಶೀಘ್ರದಲ್ಲೇ ಪೂರ್ಣ : ಸಚಿವ ನಿತಿನ್ ಗಡ್ಕರಿ

Published

on

ಸುದ್ದಿದಿನಡೆಸ್ಕ್:ಬಿಜೆಪಿ ಸಂವಿಧಾನ ಬದಲಾವಣೆ ಮಾಡಲಿದೆ ಎಂದು ಚುನಾವಣೆ ಸಂದರ್ಭದಲ್ಲಿ ಅಪ ಪ್ರಚಾರ ಮಾಡಲಾಗಿತ್ತು. ಸ್ವಾರ್ಥಕ್ಕಾಗಿ ಸಂವಿಧಾನವನ್ನು ಬದಲಿಸಿದ, ತುರ್ತು ಪರಿಸ್ಥಿತಿ ಹೇರಿದ್ದ ಕಾಂಗ್ರೆಸ್ ಪಕ್ಷವು ತಮ್ಮ ವಿರುದ್ಧ ಸುಳ್ಳು ಆರೋಪ ಮಾಡಿತ್ತು ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ.

ಬೆಂಗಳೂರಿನ ಅರಮನೆ ಮೈದಾನದಲ್ಲಿ ನಿನ್ನೆ ಏರ್ಪಡಿಸಿದ ಬಿಜೆಪಿ ರಾಜ್ಯ ವಿಶೇಷ ಕಾರ್ಯಕಾರಿಣಿಯಲ್ಲಿ ಸಮಾರೋಪ ಭಾಷಣ ಮಾಡಿದ ಅವರು, ಜನರಲ್ಲಿ ಗೊಂದಲ ಉಂಟು ಮಾಡುವ ಕೆಲಸವನ್ನು ಕಾಂಗ್ರೆಸ್ ಪಕ್ಷ ಮಾಡಿತ್ತು. 1975ರಲ್ಲಿ ತುರ್ತು ಪರಿಸ್ಥಿತಿಯ ಕರಾಳ ದಿನಗಳಿಗೆ ದೇಶ ಸಾಕ್ಷಿಯಾಗಿದೆ. ಬೆಂಗಳೂರಿನ ಸೆರೆಮನೆಯಲ್ಲಿ ಬಿಜೆಪಿಯ ಹಿರಿಯ ಮುಖಂಡರಾದ ಅಟಲ್ ಬಿಹಾರಿ ವಾಜಪೇಯಿ, ಎಲ್ ಕೆ ಅಡ್ವಾಣಿ, ಸಮಾಜವಾದಿ ಮುಖಂಡ ಜಾರ್ಜ್ ಫರ್ನಾಂಡಿಸ್ ಮೊದಲಾದವರನ್ನು ಇರಿಸಲಾಗಿತ್ತು ಎಂದು ವಿವರಿಸಿದರು.

ತುರ್ತು ಪರಿಸ್ಥಿತಿಯ ವಿರುದ್ಧ ಭಾರತೀಯ ಜನಸಂಘ ಹೋರಾಡಿ ಪ್ರಜಾಸತ್ತೆಯನ್ನು ಉಳಿಸುವ ಕೆಲಸ ಮಾಡಿತ್ತು. ಪ್ರಜಾತಂತ್ರವು ೪ ಸ್ಥಂಭಗಳ ಮೇಲೆ ನಿಂತಿದೆ. ಇವೆಲ್ಲವುಗಳ ಬಗ್ಗೆ ಸಂವಿಧಾನದಲ್ಲಿ ಬರೆಯಲಾಗಿದೆ. ಸಂವಿಧಾನವನ್ನು ಕಡೆಗಣಿಸಿ ಹಲವಾರು ತಿದ್ದುಪಡಿಗಳನ್ನು ಮಾಡಲಾಗಿತ್ತು ಎಂದು ಟೀಕಿಸಿದರು.

ಸ್ವಾಮಿ ವಿವೇಕಾನಂದರು ಷಿಕಾಗೋದಲ್ಲಿ ಮಾಡಿದ ಭಾಷಣವನ್ನು ಅವರು ಉಲ್ಲೇಖಿಸಿ. ಮುಂದೆ ಹಿಂದುಸ್ತಾನದ ಜನರ ಶತಮಾನ ಬರಲಿದೆ ಎಂದು ಅವರು ಹೇಳಿದ್ದನ್ನು ನೆನಪಿಸಿದರು. 10 ಕೋಟಿಗೂ ಅಡುಗೆ ಅನಿಲ ಸಂಪರ್ಕ ನೀಡಿರುವುದು ನಮ್ಮ ಸರ್ಕಾರದ ಸಾಧನೆಯಾಗಿದೆ.
ಚೆನ್ನೈ- ಬೆಂಗಳೂರು ಹೆದ್ದಾರಿ ಕಾಮಗಾರಿ ಶೀಘ್ರವೇ ಪೂರ್ಣಗೊಳ್ಳಲಿದೆ. ವರ್ಷಾಂತ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು, ಈ ಹೆದ್ದಾರಿಯನ್ನು ಲೋಕಾರ್ಪಣೆ ಮಾಡಲಿದ್ದಾರೆ. ಬೆಂಗಳೂರಿನಲ್ಲಿ ಪ್ರಾರಂಭವಾಗಿ ಶ್ರೀ ಪರಂಬೂರಿಗೆ ತಲುಪುವ 258ಕಿಲೋಮೀಟರ್ ಉದ್ದದ ಹೆದ್ದಾರಿಗೆ 18 ಸಾವಿರ ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿದೆ ಎಂದು ಸಚಿವ ನಿತಿನ್ ಗಡ್ಕರಿ ತಿಳಿಸಿದರು.

ಕೃಷಿ, ಕೈಗಾರಿಕೆ, ಸೇವಾ ಕ್ಷೇತ್ರಗಳನ್ನು ನಾವು ಬಲಪಡಿಸಬೇಕಿದೆ. ಸ್ವದೇಶಿ, ಸ್ವಾವಲಂಬನೆ ಮೂಲಕ ಅಭಿವೃದ್ಧಿ ಕಡೆ ನಾವು ಗಮನ ಕೊಡುತ್ತಿದ್ದೇವೆ. ಸಮಸ್ಯೆಗಳನ್ನು ಸವಾಲನ್ನಾಗಿ ಪರಿವರ್ತನೆ ಮಾಡಿಕೊಂಡು ಮುನ್ನಡೆಯೋಣ ಎಂದು ಮನವಿ ಮಾಡಿದರು.

ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಎನ್‌ಡಿಎ ಮೂರನೇ ಬಾರಿಗೆ ಅಧಿಕಾರಕ್ಕೆ ಬಂದಿರುವುದು ಮಹತ್ವದ ಸಾಧನೆಯಾಗಿದೆ ಎಂದು ಹೇಳಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending