ದಿನದ ಸುದ್ದಿ
ಅಮ್ಮನಗುಡ್ಡದ ಶ್ರೀ ಕುಕ್ಕುವಾಡೇಶ್ವರಿ ದೇವಸ್ಥಾನದಲ್ಲಿ ಭ್ರಷ್ಟಾಚಾರ: ಡಿ ಎಸ್ ಎಸ್ ನಿಂದ ತನಿಖೆಗೆ ಒತ್ತಾಯ
ಸುದ್ದಿದಿನ,ದಾವಣಗೆರೆ : ಚನ್ನಗಿರಿ ತಾಲೂಕಿನ ಅಮ್ಮನಗುಡ್ಡದ ದೇವಸ್ಥಾನದ ಪ್ರಮುಖ ಅರ್ಚಕರು ನಡೆಸಿದ್ದಾರೆ ಎನ್ನಲಾದ ಭ್ರಷ್ಟಾಚಾರದ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ. ಬಿ. ಕೃಷ್ಣಪ್ಪ) ಒತ್ತಾಯಿಸಿದೆ.
ಸುದ್ದಿಗೋಷ್ಠಿಯಲ್ಲಿಂದು ಮಾತ ನಾಡಿದ ಜಿಲ್ಲಾ ಸಂಚಾಲಕ ಕುಂದುವಾಡ ಮಂಜುನಾಥ್, ಅಮ್ಮನಗುಡ್ಡದ ಶ್ರೀ ಕುಕ್ಕುವಾಡೇಶ್ವರಿ ದೇವಸ್ಥಾನದ ಪ್ರಮುಖ ಅರ್ಚಕರು ಬ್ರಹ್ಮಾಂಡ ಭ್ರಷ್ಟಾಚಾರ ನಡೆಸಿರುವ ಬಗ್ಗೆ ಅನೇಕ ದಾಖಲೆ, ವೀಡಿಯೋ ಇವೆ. ಈ ಬಗ್ಗೆ ದೇವಸ್ಥಾನದಲ್ಲಿ ಕೆಲಸ ಮಾಡುವ ಸಿಬ್ಬಂದಿಯೊಬ್ಬರು ದಾಖಲೆ ಸಮೇತ ಜಿಲ್ಲಾಡಳಿತ, ತಾಲೂಕು ಆಡಳಿತದ ಗಮನಕ್ಕೆ ತಂದರೂ ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂದು ದೂರಿದರು.ಅಮ್ಮನಗುಡ್ಡದ ಶ್ರೀ ಕುಕ್ಕವಾಡೇಶ್ವರಿ ದೇವಸ್ಥಾನ ಎ ಗ್ರೇಡ್ ಆಗಿರುವುದರಿಂದ ಆಯೋಗ ರಚಿಸಿ ಸಮಗ್ರ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.
ಪ್ರಮುಖ ಅರ್ಚಕರಾಗಿರುವರು ಮೊದಲು ಗುತ್ತಿಗೆ ಆಧಾರದಲ್ಲಿ ಸೇರಿಕೊಂಡಿ ದ್ದರು. ಈಗ ಕೋಟ್ಯಾಧೀಶರಾಗಿದ್ದಾರೆ. ಅವರ ಕುಟುಂಬದವರು ಐಷಾರಾಮಿ ಜೀವನ ನಡೆಸುತ್ತಿದ್ದಾರೆ. ಜಿಲ್ಲಾಡಳಿತಕ್ಕೆ ನಿಜವಾಗಿಯೂ ಸಂವಿಧಾನ ಕಾನೂನು ಬಗ್ಗೆ ಗೌರವ ಇದ್ದಲ್ಲಿ ಆಸ್ತಿಯನ್ನು ವಶಪಡಿಸಿಕೊಳ್ಳಬೇಕು ಎಂದು ಒತ್ತಾಯಿಸಿದರು.
ದೇವಸ್ಥಾನಕ್ಕೆ ಪ್ರತಿ ದಿನ ಬರುವಂತಹ ಸಹಸ್ರಾರು ಭಕ್ತಾದಿಗಳು ಚಿನ್ನ, ಬೆಳ್ಳಿ ಆಭರಣ, ಹಸು ಕಾಣಿಕೆ ರೂಪದಲ್ಲಿ ನೀಡುತ್ತಾರೆ. ಬಹುತೇಕ ಕಾಣಿಕೆಗಳಿಗೆ ಪೂಜಾರಿಯವರು ರಸೀದಿಯೇ ನೀಡುವುದಿಲ್ಲ. ಒಂದಷ್ಟು ಕಾಣಿಕೆಗಳಿಗೆ ರಸೀದಿ ನೀಡಿ ಸರ್ಕಾರಕ್ಕೆ ಲೆಕ್ಕ ಕೊಡುತ್ತಾರೆ. ಇನ್ನುಳಿದವನ್ನು ತಮ್ಮ ಸ್ವಂತದ್ದು ಎಂಬುದಂತೆ ವೈಯಕ್ತಿಕಕ್ಕೆ ಬಳಕೆ ಮಾಡುತ್ತಿದ್ದಾರೆ. ದೇವಸ್ಥಾನದ ಅರ್ಚಕರು ನಡೆಸಿದ್ದಾರೆ ಎನ್ನಲಾದ ಭ್ರಷ್ಟಾಚಾರದ ಬಗ್ಗೆ ಸಮಗ್ರ ತನಿಖೆ ನಡೆಸಬೇಕು.
ಇಲ್ಲವಾದಲ್ಲಿ ಉಗ್ರ ಸ್ವರೂಪದ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.ಅರ್ಚಕರು ನಡೆಸುವ ಭ್ರಷ್ಟಾಚಾರ ಬಯಲಿಗೆ ತಂದಿರುವ ಕಾರಣಕ್ಕಾಗಿ ಡಿ ದರ್ಜೆ ನೌಕರ ರಮೇಶ್ ಎಂಬುವರನ್ನು ಕೆಲಸದಿಂದ ತೆಗೆದು ಹಾಕಲಾಗಿದೆ. ಕೂಡಲೇ ಅವರನ್ನು ಕೆಲಸಕ್ಕೆ ಮರು ಸೇರ್ಪಡೆ ಮಾಡಿಕೊಳ್ಳಬೇಕು ಎಂದು ಒತ್ತಾಯಿಸಿದರು.
ರಮೇಶ್ ಮಾತನಾಡಿ, ಅರ್ಚಕರು ನಡೆಸುವ ಭ್ರಷ್ಟಾಚಾರದ ವೀಡಿಯೋ, ಆಡಿಯೋ ಮಾಡಲಾಗಿದೆ. ಆ ಕಾರಣದಿಂದ ನನ್ಮನ್ನು ಕೆಲಸದಿಂದ ತೆಗೆದು ಹಾಕಲಾಯಿತು.
ತಹಶೀಲ್ದಾರ್ ಅವರನ್ನು ಕೇಳಿದರೆ ಶಾಸಕರ ಕಾಲು ಹಿಡಿಯುವಂತೆ ಹೇಳಿದ್ದಾರೆ ಎಂದರು.
ಸುದ್ದಿಗೋಷ್ಠಿಯಲ್ಲಿ ಎಂ. ಏಳುಕೋಟಿ, ರಮೇಶ್ , ಪರಮೇಶ್, ಪ್ರದೀಪ್, ಬಿ. ಕೃಷ್ಣಪ್ಪ, ನಿಂಗರಾಜ್, ಎರೇಹಳ್ಳಿ ಉಮಾಪತಿ, ವಿಜಯಮ್ಮ, ಚಿತ್ರಲಿಂಗಪ್ಪ ಇತರರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಇಂದು ಕರೆಂಟ್ ಇರಲ್ಲ
ಸುದ್ದಿದಿನ,ದಾವಣಗೆರೆ:ಬೆಸ್ಕಾಂ ಜಗಳೂರು ಉಪವಿಭಾಗದ ವ್ಯಾಪ್ತಿಯಲ್ಲಿ ತುರ್ತು ಜಂಗಲ್ ಕಟಿಂಗ್ ಮತ್ತು ಫೀಡರ್ಗಳ ನಿರ್ವಹಣಾ ಕಾಮಗಾರಿಗಳನ್ನು ಹಮ್ಮಿಕೊಂಡಿರುವುದರಿಂದ ಮೇ 26 ರಂದು ಬೆಳಿಗ್ಗೆ 09-00 ರಿಂದ ಸಂಜೆ 05-00 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಕೊರಚರ ಹಟ್ಟಿ ಸರ್ಕಲ್, ಅಂಜನೆಯ ಬಡಾವಣೆ, ಶಕ್ತಿ ನಗರ, ಭಗೀರಥ ಲೇಔಟ್ ಸರ್ಕಲ್, ಕೊಟ್ಟುರೇಶ್ವರ ಬಡಾವಣೆ, , ಡಿ.ಸಿ.ಎಂ ಎಬಿಸಿ ಬ್ಲಾಕ್, ರಾಜೇಂದ್ರ ಬಡಾವಣೆ, ಭೂಮಿಕಾ ನಗರ, ಎಸ್.ಎಸ್ ಹೈ-ಟೆಕ್ ಮೇನ್ ರೋಡ್, ಶೇಶಾಂ ಲೇಔಟ್, ಹೊಂ ಟೈಲಾರ್ ರೋಡ್, ಬನಶಂಕರಿ ದೇವಸ್ಥಾನ, ಶ್ರೀರಾಮ್ ಬಡಾವಣೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು, ಎಮ್.ಸಿ.ಸಿ. ಎ ಬ್ಲಾಕ್, ನಿಜಲಿಂಗಪ್ಪ ಲೇಔಟ್, ಅಶ್ವಿನಿ ಆರ್ಯುವೇಧಿಕ್ ಆಸ್ಪತ್ರೆ, ಜೊಲ್ಲಿಗುರು ಕಾಂಪೌಡ್, ಮುದ್ದೊಳ್ಳಿ ತೋಟ, ನರಹರಿಶೇಟ ಕಲ್ಯಾಣ ಮಂದಿರ, ಪೊಲೀಸ್ ಹಳೆಯ ವಸತಿ ಗೃಹಗಳು, ವಿನೋಬ ನಗರ 1ನೇ ಮತ್ತು 2ನೇಯ ಮುಖ್ಯ ರಸ್ತೆ ಚರ್ಚ್ ರಸ್ತೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ಹಾಗೂ ಬೆಳಗ್ಗೆ 10:00 ಗಂಟೆಯಿಂದ ಸಂಜೆ 5:00 ಗಂಟೆಯವರೆಗೆ ಬಿದರಕೆರೆ ವಿದ್ಯುತ್ ವಿತರಣಾ ಕೇಂದ್ರಕ್ಕೆ ಒಳಪಡುವ ಎಫ್- ಕಟ್ಟಿಗೆಹಳ್ಳಿ, ಎನ್ಜೆವೈ (NJY) ಜಗಳೂರು ವಿದ್ಯುತ್ ವಿತರಣಾ ಕೇಂದ್ರಕ್ಕೆ ಒಳಪಡುವ ಅರಿಶಿನಗುಂಡಿ ಹಾಗೂ ಜ್ಯೋತಿಪುರ ಎನ್ಜೆವೈ (NJY) 11ಕೆವಿ ಮಾರ್ಗಗಳು ಸೇರಿದಂತೆ ವಿವಿಧ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಅಲ್ಪಸಂಖ್ಯಾತರ ಇಲಾಖೆ ನಿರ್ದೇಶಕ ಜಿಲಾನಿ ಎಚ್. ಮೊಕಾಶಿ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ:ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳಲ್ಲಿ ಇಲಾಖೆಯ ನಿಯಮಾನುಸಾರ ಬಯೋಟ್ರಿಕ್ ಹಾಜರಾತಿ ಅಳವಡಿಸಿಕೊಳ್ಳದೆ ಸರ್ಕಾರಕ್ಕೆ ವಂಚಿಸಿರುವ ಬಗ್ಗೆ ದೂರು ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ತೋರಿದ ಅಲ್ಪಸಂಖ್ಯಾತರ ನಿರ್ದೇಶನಾಲಯದ ನಿರ್ದೇಶಕರಾದ ಜಿಲಾನಿ ಎಚ್. ಮೊಕಾಶಿ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಪ್ರತಿದಿನದ ಹಾಜರಾತಿಯನ್ನು ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆಯ ಮೂಲಕ ಕಡ್ಡಾಯವಾಗಿ ನಿರ್ವಹಿಸಲು ದಿನಾಂಕ: 12-07-2022 ರಂದು ನಿರ್ದೇಶಕರು, ಅಲ್ಪಸಂಖ್ಯಾತರ ನಿರ್ದೇಶನಾಲಯ, ಬೆಂಗಳೂರು ಇವರು ಸುತ್ತೋಲೆ ಹೊರಡಿಸಿದ್ದಾರೆ.
ಸದರಿ ಸುತ್ತೋಲೆಯಲ್ಲಿ ‘ಎಲ್ಲಾ ನಿಲಯಪಾಲಕರು/ ಮೇಲ್ವಿಚಾರಕರು ಬೆಲಗ್ಗೆ ತಿಂಡಿ ಸಮಯದಲ್ಲಿ ಹಾಗೂ ರಾತ್ರಿ ಊಟದ ಸಮಯದಲ್ಲಿ ವಸತಿ ಶಾಲೆ/ಕಾಲೇಜು ಹಾಗೂ ವಿದ್ಯಾರ್ಥಿ ನಿಲಯಗಳಲ್ಲಿ ಕಡ್ಡಾಯವಾಗಿ ಹಾಜರಿದ್ದು, ವಿದ್ಯಾರ್ಥಿಗಳ ಬಯೋಮೆಟ್ರಿಕ್ ಹಾಜರಾತಿಯನ್ನು ಪಡೆಯತಕ್ಕದ್ದು’ ಎಂಬುದಾಗಿ ಸೂಚಿಸಲಾಗಿದೆ.
‘ಬಯೋಮೆಟ್ರಿಕ್ ಹಾಜರಾತಿ ಪಡೆಯದೆ ಆಹಾರ ವೆಚ್ಚ ಭರಿಸಿದ್ದಲ್ಲಿ ಸಂಬAಧಪಟ್ಟ ನಿಲಯಪಾಲಕರು, ಅಲ್ಪಸಂಖ್ಯಾತರ ತಾಲ್ಲೂಕು ವಿಸ್ತರಣಾಧಿಕಾರಿಗಳು/ ಪ್ರಾಂಶುಪಾಲರು, ಜಿಲ್ಲಾ ಅಧಿಕಾರಿಗಳನ್ನು ನೇರವಾಗಿ ಹೊಣೆಗಾರರನ್ನಾಗಿ ಮಾಡಿ ಅವರ ಮೇಲೆ ಶಿಸ್ತಿನ ಕ್ರಮ ಜರುಗಿಸಲಾಗುವುದು’ ಎಂಬುದಾಗಿ ಕಟ್ಟುನಿಟ್ಟಿನ ಆದೇಶ ಹೊರಡಿಸಲಾಗಿರುತ್ತದೆ.
ಆದರೆ ದಾವಣಗೆರೆ ಜಿಲ್ಲೆಯಾದ್ಯಂತ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳಲ್ಲಿ ಬಯೋಮೆಟ್ರಿಕ್ ವ್ಯವಸ್ಥೆಯನ್ನು ಅಳವಡಿಸಿಕೊಳ್ಳದೆ ಸರ್ಕಾರದ ಆದೇಶವನ್ನು ಉಲ್ಲಂಘನೆ ಮಾಡಿರುವ ಮಾಹಿತಿ ಆಧಾರದಲ್ಲಿ ದಿನಾಂಕ: 28-11-2025 ರಂದು ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ದಾವಣಗೆರೆ ಇವರಿಗೆ ದಿನಾಂಕ: 28-11-2025 ರಂದು ದೂರು ನೀಡಿ ‘ದಾವಣಗೆರೆ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆ ಹಾಗೂ ವಸತಿ ನಿಲಯಗಳಲ್ಲಿ ಅಳವಡಿಸಿರುವ ಬಯೋಮೆಟ್ರಿಕ್ ಹಾಜರಾತಿ ನಿರ್ವಹಣೆಯನ್ನು ತನಿಖೆಗೆ ಒಳಪಡಿಸುವಂತೆ’ ಕೋರಲಾಗಿತ್ತು.
ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ದಾವಣಗೆರೆ ಇವರು ನೀಡಿದ ಹಿಂಬರಹದಲ್ಲಿ ‘ಈ ಸಂಬAಧ ಜಿಲ್ಲೆಯ ಕೆಲವು ವಸತಿ ನಿಲಯಗಳಲ್ಲಿ ಬಯೋಮೆಟ್ರಿಕ್ ಯಂತ್ರದಲ್ಲಿನ ತಾಂತ್ರಿಕ ದೋಷದಿಂದ ವಿದ್ಯಾರ್ಥಿಗಳ ಹಾಜರಾತಿಯನ್ನು ದಾಖಲಿಸಲು ಸಾಧ್ಯವಾಗಿರುವುದಿಲ್ಲವೆಂದು ಹಾಗೂ ಮತ್ತೆ ಕೆಲವು ವಸತಿ ಶಾಲೆ ಮತ್ತು ವಸತಿ ನಿಲಯಗಳಿಗೆ ಹೊಸ ಬಯೋಮೆಟ್ರಿಕ್ ಯಂತ್ರವನ್ನು ಪೂರೈಕೆ ಮಾಡುವಂತೆ ಪ್ರಾಂಶುಪಾಲರುಗಳು ಮತ್ತು ತಾಲ್ಲೂಕು ವಿಸ್ತರಣಾಧಿಕಾರಿಗಳು ಕೋರಿರುವ ಪತ್ರವನ್ನು ಲಗತ್ತಿಸಿ’ ನಿರ್ದೇಶಕರು, ಅಲ್ಪಸಂಖ್ಯಾತರ ನಿರ್ದೇಶಕರು, ಬೆಂಗಳೂರು ಇವರಿಗೆ ಪತ್ರ ಬರೆಯಲಾಗಿದೆ ಎಂಬುದಾಗಿ ತಿಳಿಸಿರುತ್ತಾರೆ.
ಆದ ಕಾರಣ ದಿನಾಂಕ: 17-02-2026 ರಂದು ನಿರ್ದೇಶಕರು, ಅಲ್ಪಸಂಖ್ಯಾತರ ನಿರ್ದೇಶನಾಲಯ, ಬೆಂಗಳೂರು ಇವರಿಗೆ ದೂರು ನೀಡಿ ದಾವಣಗೆರೆ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆ ಹಾಗೂ ವಸತಿ ನಿಲಯಗಳಲ್ಲಿ ಇಲಾಖೆಯ ನಿಯಮಾನುಸಾರ ಬಯೋಟ್ರಿಕ್ ಹಾಜರಾತಿ ಅಳವಡಿಸಿಕೊಳ್ಳದೆ ಸರ್ಕಾರಕ್ಕೆ ವಂಚಿಸಿರುವ ಬಗ್ಗೆ ಸೂಕ್ತ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಂಡು, ಕೈಗೊಂಡ ಕ್ರಮದ ವರದಿಯನ್ನು ಒಂದು ತಿಂಗಳ ಒಳಗಾಗಿ ನೀಡುವಂತೆ ಸಾರ್ವಜನಿಕ ಹಿತಾಸಕ್ತಿ ಅಡಿಯಲ್ಲಿ ಕೋರಲಾಗಿತ್ತು. ಆದರೆ ದೂರು ನೀಡಿ 3 ತಿಂಗಳು ಕಳೆದರೂ ಅಲ್ಪಸಂಖ್ಯಾತರ ನಿರ್ದೇಶನಾಲಯ ನಿರ್ದೇಶಕರಾದ ಜಿಲಾನಿ ಎಚ್. ಮೊಕಾಶಿ ಇವರು ಯಾವುದೇ ಕ್ರಮ ಕೈಗೊಳ್ಳದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಬಳ್ಳಾರಿ ಗಾಂಧಿನಗರ ಠಾಣೆಯ ವ್ಯಾಪ್ತಿ ಜೂಜಾಟ | ಠಾಣೆಯ ಅಧಿಕಾರಿಗಳು ಮೌನ ; ಕ್ರಮ ಕೈಗೊಳ್ತಾರಾ ಎಸ್ ಪಿ..?
ಗಿರೀಶ್ ಬಳ್ಳಾರಿ
ಸುದ್ದಿದಿನ,ಬಳ್ಳಾರಿ:ನಗರದ ಗಾಂಧಿ ನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ರಾತ್ರಿ 10 ಗಂಟೆಯ ನಂತರ ಕೊಂಡಯ್ಯ ಫ್ಯಾಕ್ಟರಿಯ ಹುಸೇನ್ ನಗರದ ಜಾಲಿ ಬೇಲಿಯ ಒಳಭಾಗದಲ್ಲಿ ಅಕ್ರಮವಾಗಿ ಇಸ್ಪೀಟ್ ಆಡುತ್ತಿದ್ದಾರೆ ಜೊತೆಗೆ ಆ ಪ್ರದೇಶಕ್ಕೆ ಹೋಗುವ ಈ ಜೂಜಾಟ ಆಡುವವರು ಬೈಕ್ ಗಳ ಶಬ್ದ ಮಾಡಿಕೊಂಡು, ಮನೆಗಳಲ್ಲಿ ಇರುವ ಮಹಿಳೆಯರಿಗೆ ತೊಂದರೆ ಉಂಟು ಮಾಡುತ್ತಿದ್ದಾರೆ ಎನ್ನುವ ಆರೋಪ ಸ್ಥಳೀಯ ನಿವಾಸಿಗಳಿಂದ ಕೇಳಿ ಬಂದಿದೆ.
ಇನ್ನು ಈ ಇಸ್ಪೀಟ್ ಜೂಜಾಟ ಆಡಿಸುತ್ತಿರುವ ವ್ಯಕ್ತಿಗಳು ದುಬ್ಬ ರಾಜು, ದಾದು ಮತ್ತು ಜಾನಿ, ರಘು ಎಂದು ತಿಳಿದು ಬಂದಿದೆ. ಇನ್ನು ಗಾಂಧಿನಗರ ಠಾಣೆಯ ಸಿಪಿಐ ಮತ್ತು ಪಿ.ಎಸ್.ಐ ಮತ್ತು ಕ್ರೈಂ ಸಿಬ್ಬಂದಿಗಳಿಗೆ ಮಾಹಿತಿ ಇದ್ದರು ಅವರಿಂದ ಹಣ ಪಡೆದುಕೊಂಡು ಈ ಜೂಜಾಟ ಆಡಿಸುತ್ತಿರುವ ಮಾಹಿತಿ ಸಹ ಲಭ್ಯವಾಗಿದೆ.
ಸಾಧಿಕ್ ಪೊಲೀಸರಿಗೆ ಸಾಥ್
ಇನ್ನು ಸಾಧಿಕ್ ಎನ್ನುವ ವ್ಯಕ್ತಿ ಗಾಂಧಿನಗರ ಠಾಣೆಯ ಅನೇಕ ಪೊಲೀಸರಿಗೆ ಪರಿಚಯ ಇದ್ದಾನೆ ಅಂತ ಹೇಳಿ ಜನ ಸಾಮಾನ್ಯರ ಮೇಲೆ ದೌರ್ಜನ್ಯ, ದಬ್ಬಾಳಿಕೆ ಮಾಡಿ ಅವರ ವಿರುದ್ಧ ಠಾಣೆಯಲ್ಲಿ ಕೇಸ್ ಹಾಕಿಸುತ್ತೇನೆ ಎಂದು ಹಣ ವಸೂಲಿ ಸಹ ಮಾಡಿದ್ದಾನೆ ಎನ್ನುವ ಆರೋಪ ಕೇಳಿ ಬಂದಿದೆ.
ಇನ್ನು ಬಳ್ಳಾರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ನ ಪನ್ನಿಕರ್ ಪೊಲೀಸ್ ಠಾಣೆಯ ಸಿಪಿಐ ಮತ್ತು ಪಿಎಸ್ಐ ಮತ್ತು ಸಿಬ್ಬಂದಿಗಳ ವಿರುದ್ಧ ಕ್ರಮ ತೆಗೆದುಕೊಳ್ಳುತ್ತಾರೋ ಕಾದು ನೋಡಬೇಕಿದೆ. ಇನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರಿಗೆ ದೂರವಾಣಿ ಮೂಲಕ ಸಂಪರ್ಕಿಸಿದಾಗ ಅವರು ಕರೆಯನ್ನು ಸ್ವೀಕರಿಸಿಲಿಲ್ಲ.
“ಇನ್ನು ಗಾಂಧಿನಗರ ಪೊಲೀಸ್ ಠಾಣೆಯ ಪೊಲೀಸ್ ಸಬ್ ಇನ್ಸ್ಪೆಕ್ಟರ್ ರವಿಚಂದ್ರ ಅವರಿಗೆ ದೂರವಾಣಿ ಮೂಲಕ ಮಾತನಾಡಿಸಿದಾಗ ನಮ್ಮ ಗಮನಕ್ಕೆ ಇಲ್ಲ, ಗೋತ್ತಾದ್ರೆ ರೈಡ್ ಮಾಡುತ್ತೇವೆ ಎಂದರು.”
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ4 days agoಪಂಚಪಾಡಿ ಪದ್ಧತಿಯಲ್ಲಿ ವಿದ್ಯಾಭ್ಯಾಸ | ತ್ಯಾವಣಿಗೆಯ ಮಂದಾರ ಶಾಲೆಯಲ್ಲಿ ಪ್ರವೇಶ ಪ್ರಾರಂಭ
-
ದಿನದ ಸುದ್ದಿ7 days agoಈಜುಕೊಳದಲ್ಲಿ ಸಾವು ; ಪರಿಹಾರಕ್ಕೆ ಆದೇಶ
-
ದಿನದ ಸುದ್ದಿ4 days agoಬಳ್ಳಾರಿ ಗಾಂಧಿನಗರ ಠಾಣೆಯ ವ್ಯಾಪ್ತಿ ಜೂಜಾಟ | ಠಾಣೆಯ ಅಧಿಕಾರಿಗಳು ಮೌನ ; ಕ್ರಮ ಕೈಗೊಳ್ತಾರಾ ಎಸ್ ಪಿ..?
-
ಅಂಕಣ4 days agoಗೆಳೆತನದ ಮಹತ್ವ ಸಾರುವ ಕುಚುಕು ಇಂದಿನಿಂದ ಅಮೋಘ ಪ್ರಾರಂಭ ; ದಾವಣಗೆರೆ ಹುಡುಗ ಅರ್ಜುನ್ ಚೌಹಾಣ್ ಅವರ ಮೂರನೇ ಚಿತ್ರ ತೆರೆಗೆ
-
ದಿನದ ಸುದ್ದಿ3 days agoಅಲ್ಪಸಂಖ್ಯಾತರ ಇಲಾಖೆ ನಿರ್ದೇಶಕ ಜಿಲಾನಿ ಎಚ್. ಮೊಕಾಶಿ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ5 days agoದಾವಣಗೆರೆ | ಇದೇ 22 ರಂದು ಕರ್ನಾಟಕ ಎಜುಕೇಶನ್ ಎಕ್ಸ್ ಪೋ – 2026 ಕಾರ್ಯಕ್ರಮ
-
ದಿನದ ಸುದ್ದಿ5 days agoಕೀಲು ಮತ್ತು ಮೂಳೆ ಚಿಕಿತ್ಸೆ ; ರೋಬೋಟಿಕ್ ಮತ್ತು ಮಿನಿಮಲಿ ಇನ್ನೇಸಿವ್ ಸರ್ಜರಿಗಳಲ್ಲಿ ಮಹತ್ವದ ಬದಲಾವಣೆ : ಡಾ.ಲೋಕೇಶ್ ಎ. ವೀರಪ್ಪ
-
ದಿನದ ಸುದ್ದಿ3 hours agoದಾವಣಗೆರೆ | ಇಂದು ಕರೆಂಟ್ ಇರಲ್ಲ

