Connect with us

ಅಂತರಂಗ

ವರ್ಕ್ ಹಾರ್ಡ್ , ದೆನ್ ಯು ವಿಲ್ ಸಕ್ಸಸ್ ; ಯುಪಿಎಸ್ಸಿ ಪರೀಕ್ಷೆ ಬಗ್ಗೆ ದಾವಣಗೆರೆ ಎಸ್ಪಿ ರಿಷ್ಯಂತ್ ಮಾತು..!

Published

on


ಹಣ, ಪ್ರಭಾವವಿದ್ದರೆ ಸಿವಿಲ್ ಸರ್ವೀಸ್ ಪಾಸಾಗಲು‌ ಸಾಧ್ಯವಿಲ್ಲ.’ : ಎಸ್ಪಿ ಸಿ ಬಿ ರಿಷ್ಯಂತ್


ಸುದ್ದಿದಿನ,ದಾವಣಗೆರೆ : ನಾನು ಮೊದಲು ಹೇಳೋದಕ್ಕೆ ಇಷ್ಟ ಪಡೋದು ಏನೂ ಅಂದ್ರೆ, ಯುಪಿಎಸ್ಸಿ ಎಕ್ಸಾಂ ಅಂದ್ರೆ ಸಾಕು. ಏನೇನೋ ಊಹಾಪೋಹ ಇರುತ್ತೆ. ಅದನ್ನು ತೆಗೆದು ಹಾಕಬೇಕು. ‘ನೌವ್, ಐ ಎಮ್ ಟೆಲ್ ಎಬೌಟ್ ಯುಪಿಎಸ್ಸಿ ಎಕ್ಸಾಂ. ಯುಪಿಎಸ್ಸಿ ಎಕ್ಸಾಂ ಅಂದ್ರೆ ಅನೇಕರ ತಲೆಯಲ್ಲಿ ‘ಸರ್ಟನ್ ಥಿಂಗ್ಸ್ ಆರ್ ದೇರ್ ಎಂಬ ಕಲ್ಪನೆ ಇರುತ್ತದೆ. ‘ ಇದರಲ್ಲಿ ಏನೋ ನಡೆಯುತ್ತಂತೆ, ಅವರಿಗೆ ಬೇಕಾದವರನ್ನು ಆಯ್ಕೆ ಮಾಡುತ್ತಾರಂತೆ.

ಪ್ರಿಲಿಮ್ಸ್, ಮೇನ್ಸ್ ಕ್ಲಿಯರ್ ಮಾಡಿದ್ರೂ, ಸಂದರ್ಶನದಲ್ಲಿ ಏನೋ ಅಡ್ಜೆಸ್ಟೆಮೆಂಟ್ ಆಗುತ್ತೆ. ನಮ್ಮಂಥವರಿಗೆ ಸಿಗೋದಿಲ್ಲ. ರಾಜಕೀಯ ಪ್ರಭಾವ ಬೇಕು. ನಾನು ಐಪಿಎಸ್ ಆಫೀಸರ್ ಆಗೋಕೆ ಸಾಧ್ಯವಿಲ್ಲ. ಹಣ ಇದ್ದರೆ ಮಾತ್ರ ಯುಪಿಎಸ್ಸಿ. ನಂಥಿಂಗ್. ಡೋಂಟ್ ಬಾದರ್ ಆ್ಯಬೌಟೋ ಧಿಸ್ ಥಿಂಗ್
ಇಂತಹ ಊಹ ಪೋಹ ಬಿಟ್ಟುಬಿಡಿ. ಇವ್ಯಾವೂ ನಡೆಯಲ್ಲ. ಕಷ್ಟಪಟ್ಟು ಓದಬೇಕು. ಯುಪಿಎಸ್ಸಿ ಎಕ್ಸಾಂ ಪಾಸ್ ಆಗಬೇಕು..! ”

ಹೀಗಂಥ ಒಬ್ಬ ಸಾಮಾನ್ಯ ವ್ಯಕ್ತಿ ಹೇಳಿದ್ದರೇ ಯಾರೂ ತಲೆ ಕೆಡಿಸಿಕೊಳ್ಳುವ ಅವಶ್ಯಕತೆ ಇರಲಿಲ್ಲ. ಆದರೆ ಇದನ್ನು ಹೇಳಿದ್ದು 2013 ರ ಬ್ಯಾಚ್ ನ ಯುಪಿಎಸ್ಸಿ ಎಕ್ಸಾಂನಲ್ಲಿ ರಾಜ್ಯದ ಟಾಪರ್ ರಲ್ಲಿ ಒಬ್ಬರಾದ ಸಿ.ಬಿ.ರಿಷ್ಯಂತ್. ‘ಯುಪಿಎಸ್ಸಿ ಎಕ್ಸಾಂ ಅಂದ್ರೆ ಇದರಲ್ಲಿ ಏನೋ ನಡೆಯುತ್ತೆ. ನೆವರ್. ಇದನ್ನು ಶೇ.100 ರಷ್ಟು ತಲೆಯಿಂದ ತೆಗೆದುಬಿಡಿ. ಶ್ರದ್ದೆ, ಪರಿಶ್ರಮ ಇದ್ದರೆ ಸಾಕು’ ಎನ್ನುತ್ತಾರೆ ರಿಷ್ಯಂತ್.

ಯುಪಿಎಸ್ಸಿ ಎಕ್ಸಾಂ ಇಡೀ ದೇಶದಲ್ಲಿ ಉನ್ನತ ಪರೀಕ್ಷೆ. ಪಾರದರ್ಶಕವಾಗಿ ನಡೆಯುತ್ತದೆ. ಮೆರಿಟ್ ಬೇಸ್ ಮೇಲೆ ಎಕ್ಸಾಂ ನಡೆಯುತ್ತದೆ. ಪ್ರಿಮಿಲ್ಸ್ ಆಬ್ಜಿಕ್ಟೀವ್ ಮಾದರಿ ಆಗಿರುತ್ತದೆ. ಸುಮ್ಮನೆ ಮನಸ್ಸಿಗೆ ತೋಚಿದ್ದನ್ನ ರೌಂಡ್ ಮಾರ್ಕ್ ಹಾಕಿದರೆ ಸಾಕು. ಪಾಸ್ ಆಗಬಹುದು ಎಂಬ ಭ್ರಮೆ ಬಿಡಬೇಕು.

ಕೆಎಎಸ್, ಬ್ಯಾಂಕಿಂಗ್, ಕೆಪಿಎಸ್ಸಿಯ ಎಲ್ಲಾ ಎಕ್ಸಾಂ ಬರೆಯೋದು. ಯಾವುದಾದರೂ ಒಂದು ಸಿಗುತ್ತೆ ಎಂದು ಬರೆದರೆ ಅದು ಖಂಡಿತ ಆಗೋದಿಲ್ಲ. ” ಬೈ ಲಕ್ ” ಅನ್ನೊದನ್ನು ಬಿಡಬೇಕು. ಯುಪಿಎಸ್ಸಿಗೆ ಓದು ಒಂದೇ ದಾರಿ. ಹಾಗಂತ ಬುಕ್ ಹಿಡಿದು ಇಡೀ ದಿನ ಓದುವುದಲ್ಲ‌. ಬದಲಾಗಿ ವಾರದಲ್ಲಿ ಯಾವ ವಿಷಯ ಎಷ್ಟು ಓದಬೇಕು ಎಂಬುದನ್ನು ಡಿಸೈಡ್ ಮಾಡ್ಕೊಬೇಕು. ಆಗಾಗ ರೆಸ್ಟ್ ಕೊಡಬೇಕು. ನಾನು ಕೂಡ ಹಾಗೇ ಓದಿದ್ದು, ಸ್ವಲ್ಪ ಹೊತ್ತು ಓದು, ಸ್ವಲ್ಪ ಹೊತ್ತು ಫ್ರೆಂಡ್ಸ್‌ ಜೊತೆ ಹರಟೆ. ನಡು ನಡುವೆ ಸ್ನಾಕ್ಸ್ ತಿನ್ನುತ್ತಿದ್ದೆ. ಹೀಗಾದಾಗ ಮೈಂಡ್ ಫ್ರೀಯಾಗುತ್ತದೆ.

ಯುಪಿಎಸ್ಸಿ ಎಕ್ಸಾಂಗೆ ಸಿಲಿಬಿಸ್ ಇಡುತ್ತಾರೆ. ಪ್ರಿಲಿಮ್ಸ್, ಮೈನ್ಸ್ ಟಾಪಿಕ್ ಇದೆ, ಎಕ್ಸಾಂ ಇದೆ. ಆ ಸಿಲಿಬಸ್ ಪ್ರಕಾರ ಮೆಟಿರಿಯಲ್ ತಗೊಂಡು ಓದಬೇಕು. ಯುಪಿಎಸ್ಸಿ ಎಕ್ಸಾಂ ಪಾಸ್ ಆಗೋದಕ್ಕೆ ಶೇ.95 ರಷ್ಟು ಹಾರ್ಡ್ ವರ್ಕ್ ಮಾಡಬೇಕು.

ಯುಪಿಎಸ್ಸಿಯನ್ನು ಹೆಚ್ಚು ಬುದ್ದಿವಂತರೇ ಪಾಸ್ ಆಗುತ್ತಾರೆ ಎಂಬ ಮಾತು ಸುಳ್ಳು. ನಾನು ಕೂಡ ಆವರೇಜ್ ಅಂಕ ಗಳಿಸಿದವನು. ಮೂಲತಃ ವಾಣಿಜ್ಯ ಶಾಸ್ತ್ರದ ಬಿಕಾಂ ಓದಿ ಸಿಎ ಮಾಡಿದ್ದೇನೆ. ಓದಿದ್ದು ಬೆಂಗಳೂರಿನಲ್ಲಿ. ಪಿಯುಸಿ ಆದ ನಂತರ ಸಿಎ ಮಾಡುವಾಗ ದೆಹಲಿಯಲ್ಲಿ ಆಡಿಟ್ ಗೆ ಹೋಗಿದ್ದೆ. ಅಲ್ಲಿ ಯುಪಿಎಸ್ಸಿ ಬರೆಯಲು ನಿರ್ಧಾರ ಮಾಡಿದೆ. ಮೊದಲು ಪ್ರಿಲಿಮ್ಸ್ ಗೆ ‘ ಕಾಮರ್ಸ್ ಆ್ಯಂಡ್ ಅಕೌಂಟೆನ್ಸ್’ ಐಚ್ಚಿಕ ವಿಷಯ ತಗೊಂಡೆ. ಹೀಗೆ ವಾಣಿಜ್ಯ, ವಿಜ್ಞಾನ, ಕಲೆಯಲ್ಲಿ ಡಿಗ್ರಿ ಮಾಡಿದವರು ತಮ್ಮ ಇಚ್ಚಾನುಸಾರ ಐಚ್ಚಿಕ ವಿಷಯಗಳನ್ನು ಸೆಲೆಕ್ಟ್ ಮಾಡಿಕೊಳ್ಳುತ್ತಾರೆ.

ಪ್ರಿಲಿಮ್ಸ್ ನಲ್ಲಿ ಎರಡು ಪೇಪರ್ . ಒಂದು ಪೇಪರ್ ಗೆ ಎರಡು ಗಂಟೆ ಸಮಯವಕಾಶ. ನೆಗೆಟಿವ್ ಮಾರ್ಕ್ ಇರುತ್ತದೆ. 1:3 ನೆಗೆಟಿವ್ ಮಾರ್ಕ್ ಇರುತ್ತದೆ..ಅಂದರೆ ಮೂರು ತಪ್ಪು ಉತ್ತರ ಬರೆದರೆ, ಒಂದು ಸರಿ ಮಾರ್ಕ್ಸ್ ಹೋಗುತ್ತದೆ. ಪ್ರಿಲಿಮ್ಸ್ ನಲ್ಲಿ ಮೊದಲನೇ ಪೇಪರ್ ನೂರು ಅಂಕಗಳಿಗೆ ಬರೆಯಬೇಕು. ಜನರಲ್ ಸ್ಟೇಡಿಗೆ ಎಕ್ಸಾಂ ಬರೆಯಬೇಕು. ಎರಡನೇ ಪೇಪರ್ ಸಿ-ಸ್ಯಾಟ್ . 80 ಅಂಕಗಳಿಗೆ ಪರೀಕ್ಷೆ ಬರೆಯಬೇಕು. ಎರಡಕ್ಕೂ ಎರಡು ಗಂಟೆ ಸಮಯವಕಾಶವಿರುತ್ತದೆ.

ಜನರಲ್ ಸ್ಟಡಿ ಪೇಪರ್ ಗೋಸ್ಕರ ಸಾಮಾನ್ಯವಾಗಿ ಎಲ್ಲರೂ ತಮ್ಮ ವಿಷಯ ಅನುಸಾರ ಆ ಬಗ್ಗೆಯೇ ಜಾಸ್ತಿ ಓದುವುದು. ಅದರ ಬಗ್ಗೆಯೇ ಹೆಚ್ಚು ಆಸಕ್ತಿ ಕೊಟ್ಟು ಬೇರೆಯದನ್ನ ಓದೋದಿಲ್ಲ. ಆ ರೀತಿ ಮಾಡಬಾರದು. ನಿಮ್ಮ ಆಯ್ಕೆಯ ವಿಷಯದಲ್ಲಿ ಯಾವುದಕ್ಕೆ ಎಷ್ಟು ಅಂಕ ಬರುತ್ತೆ. 2020 ರ ಪ್ರಿಲಿಮ್ಸ್ ನಲ್ಲಿ ಜನರಲ್ ಪೇಪರ್ ಗೆ ಸೈನ್ಸ್ ನಿಂದ 5 ಪ್ರಶ್ನೆಗಳು, ಇತಿಹಾಸದಿಂದ 18 ಪ್ರಶ್ನೆಗಳು ಬಂದಿದ್ದವು‌.

ಇತಿಹಾಸದಲ್ಲಿ ಪುರಾತನ, ಮಧ್ಯಮ, ಪ್ರಸ್ತುತ ಮೂರು ಮಾಡಲ್ ಗಳಿದ್ದು18 ಅಂಕಗಳಿಗೆ ಉತ್ತರ ಬರೆಯಬೇಕು.ಜಿಯಾಗ್ರೋಫಿ 14 ಪ್ರಶ್ನೆಗಳಿಗೆ ಉತ್ತರ ಬರೆಯಬೇಕು. ಅರ್ಥಶಾಸ್ತ್ರ 10 ರಿಂದ 12 ಪ್ರಶ್ನೆಗಳು. ಪ್ರಸ್ತುತ ವಿದ್ಯಮಾನ ಪ್ರಮುಖವಾಗಿದ್ದು 25 ಅಂಕಗಳಿಗೆ ಉತ್ತರ ಬರೆಯಬೇಕು. ಪಾಲಿಟಿಕ್ಸ್ 12 ರಿಂದ 13 ಅಂಕ. ಪರಿಸರ 8 ಪ್ರಶ್ನೆ, ಮಿಸ್ಸೆಲೇನಿಯಸ್ 8 ಪ್ರಶ್ನೆಗಳು ಇರುತ್ತವೆ.

ಸಾಮಾನ್ಯವಾಗಿ ಎಲ್ಲರೂ ಹೆಚ್ಚಿನ ಅಂಕಗಳು ಇರುವ ಪ್ರಶ್ನೆಗಳಿಗೆ ಹೆಚ್ಚು ಗಮನಕೊಡುತ್ತಾರೆ. ಉಳಿದದ್ದ ನೆಗೆಲೇಟ್ ಮಾಡುತ್ತಾರೆ. ಅದು ಆಗಬಾರದು. ಯಾವುದಕ್ಕೆ ಎಷ್ಟು‌ ಸಮಯ ಕೊಡಬೇಕು, ಎಷ್ಟು ಮಾರ್ಕ್ಸ್ ಗೆ ಏನೇನು ಬರುತ್ತದೆ ಆ ಪ್ರಕಾರ ಸ್ಟೇಡಿ ಮಾಡಬೇಕು.ಪ್ರಿಲಿಮ್ಸ್ ಗೆ ದಿನಕ್ಕೆ 20 ಗಂಟೆ ಓದುತ್ತೇನೆ. ತಣ್ಣೀರು ಸ್ನಾನ ಮಾಡುತ್ತೇನೆ, ಮಧ್ಯರಾತ್ರಿ ಎದ್ದು ಓದುತ್ತೇನೆ ಎಂಬದು ಪದ್ದತಿ ಅಲ್ಲ. ಬದಲಾಗಿ ಸ್ಮಾರ್ಟ್ ಆಗಿ ಹಾರ್ಡ್ ವರ್ಕ್ ಮಾಡಬೇಕು.

ಯುಪಿಎಸ್ಸಿ ಪ್ರಿಲಿಮ್ಸ್ ಗೆ 10 ಲಕ್ಷ ಅಭ್ಯರ್ಥಿಗಳು ಅಪ್ಲಿಕೇಶನ್ ಹಾಕುತ್ತಾರೆ. ಇದರಲ್ಲಿ ಎಕ್ಸಾಂ ಬರೆಯೋರು ಐದರಿಂದ ಆರು ಲಕ್ಷ ಜನ ಮಾತ್ರ. ಇದರಲ್ಲಿ ಶೇ 80 ರಷ್ಟು ಜನ ಲಕ್ ನಂಬಿ ಬರೆಯುತ್ತಾರೆ..! ಚಾನ್ಸ್ ಇದ್ದರೆ ಮುಂದೆ ಹೋಗಬಹುದು ಎಂಬ ಭ್ರಮೆಯಲ್ಲಿರುತ್ತಾರೆ. ಐವತ್ತರಿಂದ ಆರವತ್ತು ಸಾವಿರ ಜನ ಮಾತ್ರ ಸೀರಿಯಸ್ ಆಗಿ ಯುಪಿಎಸ್ಸಿ ಎಕ್ಸಾಂ ಬರೆಯುತ್ತಾರೆ. ಇವರ ನಡುವೆ ಮಾತ್ರ ಕಾಂಪಿಟೇಶನ್ ನಡೆಯುತ್ತದೆ.

ಎರಡನೇ ಪೇಪರ್ ಸಿ ಸ್ಯಾಟ್. ಇದು ಕ್ವಾಲಿಫೈಯಿಂಗ್ ಪೇಪರ್ ಆಗಿದ್ದು, ಇದರಲ್ಲಿ ಗಣಿತಕ್ಕೆ ಸಂಬಂಧ ಪಟ್ಟ ಸಾಮಾನ್ಯ ಜ್ಞಾನ ಪ್ರಶ್ನೆ , ಬೇಸಿಕ್ ಇಂಗ್ಲೀಷ್ ಪ್ರಶ್ನೆ ಕೇಳಲಾಗುತ್ತದೆ. ಕನ್ನಡ ಮೀಡಿಯಂ ವಿದ್ಯಾರ್ಥಿಗಳು ಉತ್ತರ ಬರೀಬಹುದು. ಎಂಭತ್ತು ಪ್ರಶ್ನೆಗಳಿಗೆ ಉತ್ತರ ಬರೆಯಬೇಕು. ಇದರಲ್ಲಿ ಸಿಂಪಲ್ ಪ್ರಶ್ನೆಗಳಿರುತ್ತವೆ. ಆದ್ದರಿಂದ ಪ್ರಿಲಿಮ್ಸ್ ಪಾಸ್ ಆಗಬೇಕಾದರೆ ಎಲ್ಲ ವಿಷಯಗಳನ್ನ ಚೆನ್ನಾಗಿ ಓದಬೇಕು.

ಪ್ರಿಲಿಮ್ಸ್ ಪಾಸಾಗಲು ಮೆಟಿರಿಯಲ್ ಬಹಳ ಮುಖ್ಯ. ಎಲ್ಲವನ್ನೂ ಓದುವ ಅಗತ್ಯವಿಲ್ಲ. ನಿಮಗೆ ಅಗತ್ಯವಿರುವ ಮೆಟಿರಿಯಲ್ ಸೆಲೆಕ್ಟ್ ಮಾಡುವುದೂ ಮುಖ್ಯ. ರಿವೀಷನ್ ಇರಬೇಕು. ಆಗ ಮಾತ್ರ ಬಹು ಆಯ್ಕೆ ಪ್ರಶ್ನೆಗಳಿಗೆ ಉತ್ತರಿಸಬಹುದು. ಈ ಮೆಟಿರಿಯಲ್ ನ್ನು ಮಿನಿಮಮ್ ಎರಡು ಸಲ ಓದಬೇಕು. ಪ್ರಸ್ತುತ ವಿದ್ಯಮಾನಗಳ ಪ್ರಶ್ನೆಗೆ ಉತ್ತರಿಸಲು ಕಳೆದ ನಾಲ್ಕೈದು ವರ್ಷಗಳ ಹಿಂದಿನ ಪ್ರಶ್ನೆ ಪತ್ರಿಕೆ ನೋಡಿ, ಓದಬೇಕು.ಅಲ್ಲದೇ ಪರೀಕ್ಷೆ ಬರೆಯುವ ವರ್ಷದ ಪ್ರಸ್ತುತಗಳ ಬಗ್ಗೆ ಹೆಚ್ಚು ತಿಳಿದುಕೊಂಡಿರಬೇಕು.

ದಿನಪತ್ರಿಕೆಯಲ್ಲಿ ಬರುವ ಕ್ರೈಂ, ರಾಜಕೀಯ ಸುದ್ದಿಗಳೇ ಯುಪಿಎಸ್ಸಿಗೆ ಪ್ರಮುಖವಲ್ಲ. ಬಜೆಟ್, ಎಕಾನಿಮಿಕ್, ಸ್ಯಾಟಲೈಟ್, ವಿಜ್ಞಾನ, ಹಣಕಾಸು, ಮಾನ್ಸೂನ್, ಇತಿಹಾಸ, ಇವುಗಳ ಬಗ್ಗೆ ಓದಿ ನೋಟ್ ಮಾಡಿಕೊಳ್ಳಬೇಕು. ದಿನ ಪತ್ರಿಕೆಯ ಈ ಸುದ್ದಿ ಕಲೆಕ್ಟ್ ಮಾಡಿ ಇಟ್ಕೊಬೇಕು. ಕರೆಂಟ್ ಅಫೇರ್ಸ್ ಬುಕ್ ಬರುತ್ತದೆ. ದಿನಪತ್ರಿಕೆ ಯಾಕೆ ಓದಬೇಕು ಎಂದು ಅನೇಕರು ಕೇಳುತ್ತಾರೆ, ಆದರೆ ನಾವು ಸ್ವಂತ ಓದಿ ಪಾಯಿಂಟ್ಸ್ ಮಾಡುವುದಕ್ಕೂ, ಬುಕ್ ನ ಪಾಯಿಂಟ್ಸ್ ಓದುವುದಕ್ಕೂ ವ್ಯತ್ಯಾಸವಿದೆ.

ನಾವು ಸ್ವಂತ ಓದಿದರೆ ನಾಲ್ಕು ಪ್ಯಾರದಲ್ಲಿ ಎರಡು ಪಾಯಿಂಟ್ಸ್ ನೆನಪಿರುತ್ತದೆ. ಶೇ.80ರಷ್ಟು ದಿನಪತ್ರಿಕೆಯಲ್ಲಿನ ಪ್ರಸ್ತುತಗಳ ಸುದ್ದಿ ಬಗ್ಗೆ ಪ್ರಶ್ನೆ ಕೇಳಲಾಗುತ್ತದೆ .ಶೇ.20 ರಷ್ಟು ಮಾತ್ರ ಬುಕ್ ನಲ್ಲಿರುವ ಪ್ರಸ್ತುತಗಳ ಬಗ್ಗೆ ಪ್ರಶ್ನೆ ಕೇಳಲಾಗುತ್ತದೆ.

ಯುಪಿಎಸ್ಸಿಗೆ ಓದುವಾಗ ಏಳು ಗಂಟೆ ನಿದ್ದೆ ಮಾಡಬೇಕು. ಬೆಳಗಿನ ಜಾವ ಎದ್ದಾಗ ಮೈಂಡ್ ಫ್ರೀ ಇದ್ದು, ಆ ಟೈಮ್ ನಲ್ಲಿ ಓದಬೇಕು. ಸ್ವಲ್ಪ ಕಷ್ಟವಾದ ವಿಷಯ ಬೆಳಗ್ಗೆ ಓದಿದರೆ ಒಳ್ಳೆಯದು‌. ಅದಕ್ಕಾಗಿ ನಾನು ಸಂಜೆ ದಿನಪತ್ರಿಕೆಗಳನ್ನು ಓದುತ್ತಿದ್ದೆ. ಒಟ್ಟಾರೆ ವ್ಯವಸ್ಥಿತವಾಗಿ ಓದಬೇಕು. ಒಂದೇ ದಿನ ಎಲ್ಲವನ್ನೂ ಓದಿ ಐದು ದಿನ ಓದದೇ ಇರುವುದು ಸರಿಯಲ್ಲ. ರೆಗ್ಯೂಲರ್ ಆಗಿ‌ ಓದಬೇಕು. 365 ದಿನಗಳಲ್ಲಿ ಹೇಗೆ ಓದಬೇಕೆಂದು ಚಾರ್ಟ್ ಹಾಕಿಕೊಳ್ಳಬೇಕು. ಫ್ರೆಂಡ್ಸ್ ದೂರ ಇಡಬೇಕು. ಆಯಾ ದಿನ ಓದಿದ್ದನ್ನು ರಾತ್ರಿ ಮತ್ತೆ ರಿವಿಷನ್ ಮಾಡಬೇಕು ಆಗ ಮಾತ್ರ ಪ್ರಿಲಿಮ್ಸ್ ಪಾಸಾಗಬಹುದು.

ಮೇನ್ಸ್ ಎಕ್ಸಾಂ

ಪ್ರಿಲಿಮ್ಸ್ ಪಾಸಾದವರು ಮೇನ್ಸ್ ಎಕ್ಸಾಂ ಬರೆಯಬೇಕು. ಇಲ್ಲಿ ಯಾವುದೇ ಬಹು ಆಯ್ಕೆಯ ವಸ್ತುನಿಷ್ಠ ಪ್ರಶ್ನೆಗಳು ಇರೋದಿಲ್ಲ. ಇಲ್ಲಿ ಇಷ್ಟು ಅಂಕದ ಪ್ರಶ್ನೆಗಳಿಗೆ ಉತ್ತರಿಸಿ ಎಂದು ಕೇಳುತ್ತಾರೆ. ಆ ಅಂಕಗಳಿಗೆ ತಕ್ಕಂತೆ ಇಂತಿಷ್ಟು ಪದಗಳಲ್ಲಿ ಉತ್ತರಿಸಬೇಕು. ಇಲ್ಲಿ ಪಾಸಾದವರು ಮೌಖಿಕ ಸಂದರ್ಶನಕ್ಕೆ ಹೋಗಬೇಕು. ಸಂದರ್ಶನದಲ್ಲಿ ಹತ್ತು ಪ್ಯಾನಲ್ ಟೀಮ್ ಇರುತ್ತದೆ. ಒಂದು ಟೀಮ್ ನಲ್ಲಿ ಹತ್ತು ಜನ ಇರುತ್ತಾರೆ.

ಸಂದರ್ಶನಕ್ಕೆ ಹೋಗುವ ವೇಳೆ ಅಭ್ಯರ್ಥಿ ಯಾವ ಟೀಮ್ ಗೆ ಹೋಗಬೇಕೆಂದು ರ್ಯಾಂಡಮ್ ಮೂಲಕ ಆಯ್ಕೆ ಮಾಡಲಾಗುತ್ತದೆ. ಸಂದರ್ಶನದಲ್ಲಿ ಯುಪಿಎಸ್ಸಿ ಬೋರ್ಡ್ ಚೇರ್ಮನ್ ಇದ್ದು, ತಾಳ್ಮೆ, ಸಿಟ್ಟು, ವೈಯಕ್ತಿಕ, ಹಾಬೀಸ್, ಸೇರಿದಂತೆ ಯುಪಿಎಸ್ಸಿ ಫಾರಂ ತುಂಬುವ ವೇಳೆ ಭರ್ತಿ ಮಾಡಿದ ವಿಷಯಗಳ ಬಗ್ಗೆಯೂ ಸಂದರ್ಶನ ನಡೆಯುತ್ತದೆ..!

ಇದಾದ ಬಳಿಕ ಆಯ್ಕೆಯಾದವರಿಗೆ ದೆಹಲಿಯಲ್ಲಿ ಎರಡು ವರ್ಷ ತರಬೇತಿ ನಡೆಯುತ್ತದೆ..ಅಲ್ಲಿಂದ ಪೊಲೀಸ್, ಕಂದಾಯ, ಕೋರ್ಟ್ ಸೇರಿದಂತೆ ಎಲ್ಲ ವಿಭಾಗದಲ್ಲಿ ತರಬೇತಿ ನೀಡಲಾಗುತ್ತದೆ. ಅಂತಿಮವಾಗಿ ಪೊಲೀಸ್ ಠಾಣೆ ಜವಾಬ್ದಾರಿ ನಂತರ ಡಿಎಸ್ಪಿ, ಎಎಸ್ಪಿ, ಎಸ್ಪಿಯಾಗಿ ಸಂಪೂರ್ಣ ಅಧಿಕಾರ ನೀಡಲಾಗುತ್ತದೆ ಎನ್ನುತ್ತಾರೆ ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್.

ಎಷ್ಟು ಜನ ಬರೆಯುತ್ತಾರೆ ?

ಒಂದು ಸಲಕ್ಕೆ 10 ಲಕ್ಷ ಜನ ಎಕ್ಸಾಂ ಕಟ್ಟುತ್ತಾರೆ, 6 ಲಕ್ಷ ಜನ ಎಕ್ಸಾಂ ಬರೆಯುತ್ತಾರೆ. ಅದರಲ್ಲಿ 9 ಸಾವಿರ ಪ್ರಿಲಿಮ್ಸ್ ಪಾಸಾಗುತ್ತಾರೆ. ಇದರಲ್ಲಿ 3 ಸಾವಿರ ಮೇನ್ಸ್ ಪಾಸಾಗುತ್ತಾರೆ. ಆದರೆ ಸಂದರ್ಶನಕ್ಕೆ ಹೋಗೋರು ಮಾತ್ರ ನೂರು ಮಂದಿ ಮಾತ್ರ. ಇದರಲ್ಲಿ 1:3 ಆಧಾರದ ಮೇಲೆ ಆಯ್ಕೆ ಪ್ರಕ್ರಿಯೆ ನಡೆಯುತ್ತದೆ.

ಹುದ್ದೆಗಳು

150- IFS
150- IAS
150- IPS ಹುದ್ದೆಗಳು ಇರುತ್ತವೆ.

ಅವಕಾಶ ಎಷ್ಟು..?

ಜನರಲ್ ಕೆಟಗರಿ ವಿದ್ಯಾರ್ಥಿಗಳಿಗೆ 32 ವರ್ಷ ವಯೋಮಿತಿ. ಈ ಅವಧಿಯಲ್ಲಿ ನಾಲ್ಕು ಅವಕಾಶ ಸಿಗಲಿವೆ. ಇನ್ನು ಎಸ್ಸಿ ಎಸ್ಟಿಗಳಿಗೆ 37 ವರ್ಷ. ಒಟ್ಟು ನಾಲ್ಕು ಅವಕಾಶಗಳಲ್ಲಿ ಯುಪಿಎಸ್ಸಿ ಪಾಸ್ ಮಾಡಬೇಕು.


  • ಸಿವಿಲ್ ಸರ್ವೀಸ್ ಸುಮ್ಮನೇ ಅಲ್ಲ. ಕಷ್ಟ ಪಡಬೇಕು.‌ ಸಂದರ್ಶನಕ್ಕೆ ಹೋಗುವಷ್ಟರಲ್ಲಿ ಸಾಕಷ್ಟು ಓದಿರಬೇಕು. ನನಗೆ ಚೆಸ್ ಆಟ ಇಷ್ಟವಿದ್ದ ಕಾರಣ ಫಾರಂನಲ್ಲಿ ನನಗೆ ಇಷ್ಟವಾದ ಕ್ರೀಡೆ ಎಂದಿದ್ದೆ. ಅದರ ಬಗ್ಗೆ ಪ್ರಶ್ನೆ ಕೇಳಿದ್ದರು. ನನ್ನ ಜತೆ ಏಳು ಜನ ಕರ್ನಾಟಕ ಕೇಡರ್ ಪಾಸಾದರು. ಹೆಚ್ಚು ಅಂಕಗಳು ಬಂದವರಿಗೆ ಹೋಮ್ ಟೌನ್ ನೀಡುತ್ತಾರೆ. ಹಾಗಾಗಿ ನನಗೆ ಹೋಮ್ ಟೌನ್ ಸಿಕ್ಕಿತ್ತು.

| ಸಿ.ಬಿ.ರಿಷ್ಯಂತ್, ದಾವಣಗೆರೆ ಎಸ್ಪಿ


ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ

ಡಾ. ಆತ್ಮಾರಾಮನ ಆತ್ಮನಿವೇದನೆ | ಮೆಟ್ಟಿಲಿನವನು

Published

on

~ ಯೋಗೇಶ್ ಮಾಸ್ಟರ್

ಮೆಟ್ಟಿಲುಗಳ ಮೇಲೆ ನಿಂತು ದಿಟ್ಟಿಸುತ್ತಿರುವವನ ನೋಡುಗರು ಏನೆಂದು ತಿಳಿದಾರು? ಹತ್ತುತ್ತಿರುವನೆಂದೋ, ಇಳಿಯುತ್ತಿರುವನೆಂದೋ? ಯಾರೇನಾದರೂ ಅಂದುಕೊಳ್ಳಲಿ ಹೊರಗೆ ಹತ್ತುತ್ತಿರುವವನು ಇಳಿಯುತ್ತಿರಬಹುದು. ಇಳಿಯುತ್ತಿರುವವನು ಹತ್ತುತ್ತಿರಬಹುದು.

ಈಗ ಯಾರೂ ನೋಡುತ್ತಿಲ್ಲ. ನಾನು ಹತ್ತುತ್ತಿರುವೆನೋ ಇಳಿಯುತ್ತಿರುವೆನೋ ಯಾರೂ ನೋಡುತ್ತಿಲ್ಲ. ಯಾರೊಬ್ಬರೂ ಇಲ್ಲದಿರುವಾಗಲೂ ನಾನು ನನಗೆ ಪ್ರಾಮಾಣಿಕವಾಗಿ ಇರದಿದ್ದರೆ? ‘ಆತ್ಮಾರಾಮ್, ಈಗೇನು ನೀನು ಏರುತ್ತೀಯೋ, ಇಳಿಯುತ್ತೀಯೋ?’ ಬೇರೊಬ್ಬರು ಕೇಳುವ ಪ್ರಶ್ನೆಗಳಿಗೆ ಉತ್ತರಿಸಿಬಿಡಬಹುದು. ನಾನೇ ಹಾಕಿಕೊಳ್ಳುವ ಪ್ರಶ್ನೆಗೆ ನಾನೇ ಉತ್ತರಿಸುವ ಧೈರ್ಯ ಅಷ್ಟು ಸುಲಭದಲ್ಲಿ ಬರುವುದಿಲ್ಲ.
ನೂರಾರು ಆಪ್ತ ಸಮಾಲೋಚನೆಗಳಲ್ಲಿ ಸಾವಿರಾರು ಪ್ರೊಜೆಕ್ಟಿವ್ ಪ್ರಶ್ನೆಗಳನ್ನು ಕೇಳಿದ್ದೇನೆ. ನನಗೆ ನಾನೇ ಪ್ರೊಜೆಕ್ಟ್ ಮಾಡುವ ಪ್ರಶ್ನೆಯನ್ನು ನಾನು ಹಾಕಿಕೊಳ್ಳಲು ಇದುವರೆಗೂ ಆಗಿಲ್ಲ.

ಇವತ್ತು ಹಾಕಿಕೊಂಡೆ. ಅದ್ಯಾಕೋ ಮೆಟ್ಟಿಲುಗಳು ನನ್ನ ಪ್ರಶ್ನಿಸಿದವು. ಹೇ ಆತ್ಮಾರಾಮ್, ಈಗೇನು? ನೀನು ಏರುತ್ತೀಯೋ? ಇಳಿಯುತ್ತೀಯೋ?’ ಏರಿದ್ದೇನೆಂದುಕೊAಡು ಇಳಿದಿರುವ ನಾನು ಹೇಗೆ ಉತ್ತರಿಸಲಿ? ಮೆಲ್ಲನೆ ಕುಳಿತುಬಿಟ್ಟೆ.
ಹೌದು, ಈ ಮೆಟ್ಟಿಲುಗಳು ಬರೀ ಏರಲಲ್ಲ, ಇಳಿಯಲೂ ಅಲ್ಲ. ಕುಳಿತುಕೊಳ್ಳಲೂ ಹೌದು.

ಒಳಗಿರುವ ಮಾತುಗಳು ಹೊರಗೆಡವಲೂ ಅಲ್ಲ, ಒಳಗೆ ನುಂಗಿಕೊಳ್ಳಲೂ ಅಲ್ಲ. ಆದರೆ ಅವು ಬಹುಕಾಲದಿಂದ ಕಾಯುತ್ತಲೇ ಇವೆ. ಕಾದು ಕಾದು ಬಿಸಿಯೇರಿದೆ. ಈಗ ಹೊರಗೆಡಬೇಕು ಅಥವಾ ನುಂಗಬೇಕು. ಹಾಗೆಯೇ ತಣ್ಣಗಾಗುವ ಬಗೆಯೇನಾದರೂ ಇದೆಯಾ?

ನೋಡುಗರ ಕಣ್ಣಲ್ಲಿ ನಾನೊಂದು ಪರಮ ಶಾಂತಿ. ಆದರೆ ಅದು ನನ್ನೊಳಗೆ ಬರೀ ಭ್ರಾಂತಿ. ಒಳಗೆ ಪದೇ ಪದೇ ಪ್ರತಿಧ್ವನಿಸುತ್ತಿರುವ ಸದ್ದುಗಳ ಸೊಲ್ಲಡಗಿಸಿ ಸುಮ್ಮನಿರಿಸಲು ಹೇಗಾದೀತು? ಆಪ್ತ ಸಮಾಲೋಚನೆಗೆ ಬಂದವರು ಇದನ್ನು ಹೇಳಿದರೆ, “ಪದೇ ಪದೇ ಆಲೋಚನೆಗಳು ಬರುತ್ತಿದ್ದರೆ ಅದನ್ನು ಚಿಂತಾಚಕ್ರ ಅಥವಾ ಡಿumiಟಿಚಿಣioಟಿ ಎನ್ನುತ್ತೇವೆ. ಅದರಿಂದ ನೀವು ಹೊರಗೆ ಬರಬೇಕು” ಎಂದು ಎಂತದ್ದೋ ಒಂದಷ್ಟು ಸಲಹೆ ಸೂಚನೆಗಳನ್ನು ಕೊಟ್ಟು ಕಳುಹಿಸುತ್ತಿದ್ದೆ. ಆದರೆ ನನಗೆ ನಾನು ಎಂತದ್ದೋ ಒಂದಷ್ಟು ಸಲಹೆ ಸೂಚನೆಗಳನ್ನು ಕೊಟ್ಟುಕೊಳ್ಳಲು ಆಗದು.

ಸದ್ದಿಲ್ಲದ ಹಗಲಲ್ಲಿ, ಸದ್ದಡಗಿದಾಗ ರಾತ್ರಿಯಲ್ಲಿ ಹಳೆಯ ಮಾತುಕತೆಗಳು, ತಪುö್ಪಗಳು, ಬೇಸರಗಳು, ಪಶ್ಚಾತ್ತಾಪಗಳು ಮತ್ತು ವೈಫಲ್ಯಗಳು ಹಿಂದೆ ಹಿಂದೆಯೇ ಕಡಲ ತಡಿಗೆ ಬಂದಪ್ಪಳಿಸುವ ತಡೆಯಲಾಗದ ಅಲೆಗಳಾಗಿರುತ್ತವೆ. ಬೆಳಗಾದಾಗ ಗತ್ಯಂತರವಿಲ್ಲದೇ ಮಾಡುವ ಗದ್ದಲದಲ್ಲಿ ರಾತ್ರಿಗಾಗಿ ಕಾಯುತ್ತಾ ಒಳಗವಿತಿರುವ ಹೆಗ್ಗಣಗಳಂತೆ, ಜಿರಳೆಗಳಂತೆ ಅದೆಲ್ಲೋ ಬಿದ್ದಿರುತ್ತವೆ. ರಾತ್ರಿಯಾದರೆ ಸಾಕು ಮೆದುಳೆಂಬ ಒಡಕಲು ಪ್ರೊಜೆಕ್ಟರ್ ತನ್ನ ಮಾಸಲು ಸಿನಿಮಾವನ್ನು ತಂತಾನೆ ತೋರಿಸಲಾರಂಭಿಸುತ್ತವೆ.
ಅವರಿಗೆ ಇವರಿಗೆ ನಾನು ಹೇಳುವುದು ಅದೆಷ್ಟು ಕಪಟತನದ್ದು!
‘ಇದು trap of overthinking. ನೀವು ಹೊರಗೆ ಬರಬೇಕು.’
ನನಗೇ ಅವನ್ನು ನೋಡಿಕೊಳ್ಳಲು ಆಗಿಲ್ಲ. ನೋಡಿಕೊಳ್ಳಲು ಆಗಿಲ್ಲ ಎನ್ನುವುದಕ್ಕಿಂತ ನೋಡಿಕೊಳ್ಳಲು ಭಯ. ನನಗೆ ನನ್ನ ಮೇಲೆಯೇ ಜಿಗುಪ್ಸೆ ಬಂದುಬಿಟ್ಟೀತೆAಬ ಭಯ. ಆದರೆ ನೋಡಿಕೊಂಡರೆ ಬಾಧೆ ನಿವಾರಣೆಯಾಗಬಹುದು. ಚಿಂತಾಚಕ್ರ ತಿರುಗುತ್ತಿದ್ದಂತೆ, ಬಹುಕಾಲ ತಿರುಗುತ್ತಲೇ ಇದ್ದಂತೆ ಸವೆಯುವುದು. ಆ ಸವಕಳಿ ಚಿಂತಾಚಕ್ರವನ್ನು ಇಲ್ಲವಾಗಿಸದು. ಆದರೆ ಅದು ಸುತ್ತಲು ಮಧ್ಯದ ಕೀಲಾಗಿರುವ ನನ್ನ ಬಳಲಿಸುವುದು.

ಆ ಬಳಲಿಕೆಯೇ ನನ್ನ ವಯಸ್ಸಿಗಿಂತ ಹೆಚ್ಚು ಆಯಸ್ಸಾದಂತೆ ಕಾಣಿಸುವುದು. ಇರುವುದಕ್ಕಿಂತ ದೇಹ ಭಾರವಾಗಿರುವುದು.
ಹೌದಲ್ಲಾ, ಏರುತ್ತಲೋ, ಇಳಿಯುತ್ತಲೋ ಹೆಣಗಾಡುವ ಬದಲು ಕುಳಿತಾದ ಅಂದೆತದ್ದೋ ಪ್ರಶಾಂತತೆ ಒದಗಿದೆ ಇಂದು! ನನಗೆ ನಾನೇ ಹಳೆಯ ಸ್ನೇಹಿತನಾಗಿ ಕುಳಿತುಕೊಂಡು ನನ್ನದೇ ಮಾತುಗಳಿಗೆ ನಾನೇ ಕಿವಿಯಾಗುವ ಸರತಿ ಇಂದು ಒದಗಿತೇ?
ನನಗೆ ನಾನೇ ಹೇಳಿಕೊಳ್ಳುವುದು ಪರಕೀಯವೆನ್ನಿಸಿದರೂ ಒಂದಿಷ್ಟು ಉಸಿರಾಡಲು ಸರಾಗವೆನಿಸಿದೆ. ಕೈ ಮುಷ್ಟಿಗಟ್ಟಿದರೂ ಒಳಗೇ ಸಡಿಲವಾಯಿತು. ಮಡಿಸಿದ ಮೊಣಕೈ ತೊಡೆಯ ಮೇಲೆ ಒತ್ತುವುದನ್ನು ನಿಲ್ಲಿಸಿ ಹಗುರವಾಗಿ ಹತ್ತಿಯಂತೆ ಊರಿತು. ಮಧ್ಯಾಹ್ನದಲ್ಲೂ ತಂಗಾಳಿಯು ಮುಖಕ್ಕೆ ಮುತ್ತಿಡತೊಡಗಿತು.

ನಾಳೆ ಈ ಚಿಂತಾಚಕ್ರ ಮತ್ತೆ ತಿರುಗಣಿಯಾಗಬಹುದೇನೋ. ಆದರೆ ಚಿಂತೆಗಳ ನಡುನಡುವೆ ಒಂದಿಷ್ಟು ಉಸಿರುತೆಗೆದುಕೊಳ್ಳಲು ಸಾಧ್ಯವಾಗಿದ್ದು, ಏರುವುದನ್ನು, ಇಳಿಯುವುದನ್ನು ಬಿಟ್ಟು ಈ ಮೆಟ್ಟಿಲುಗಳ ಮೇಲೆ ಕೂತಿದ್ದಕ್ಕೆ.
‘ಹೌದು ಕಣೋ ಆತ್ಮಾ, ಹೌದು!’

Continue Reading

ಅಂತರಂಗ

ಡಾ. ಆತ್ಮಾರಾಮನ ಆತ್ಮನಿವೇದನೆ ; ಒಳಗನ್ನಡಿಯಲ್ಲಿ ಮೌನದ ಮುಖ

Published

on

~ಯೋಗೇಶ್ ಮಾಸ್ಟರ್, ಚಿಂತಕರು

ಪ್ತ ಸಮಾಲೋಚಕ ಮತ್ತು ಮನೋವೈದ್ಯ
ಹಾಗಂತಿರುವ ನನ್ನ ಮನೆಯ ಮುಂದಿನ ನನ್ನ ಪರಿಚಯ. ಅದನ್ನೇ ನಾನೆಂದು ತಿಳಿದಿರುವ ಹೊರಗಿನವರಿಗೆಲ್ಲಾ ನನ್ನೊಳಗಿರುವ ಅಪರಿಚಿತನ ಹೇಗೂ ಕಾಣಲಾಗದು.

ಲೋಕ ಕಾಣುವ ಅಥವಾ ನಾನು ತೋರುವ ಮುಖದ ಮುಸುಕನ್ನು ಸರಿಸಿ ಇಣುಕುವಷ್ಟು ಯಾರಿಗಾದರೂ ಅದೆಷ್ಟು ಬಿಡುವಿರುವುದು! ಪರದೆಯ ಮೇಲಿನ ಡಾ. ಆತ್ಮಾರಾಮನ ನೆರಳಿನಾಟವನ್ನು ಮೆಚ್ಚುವರು, ಹೊಗಳುವರು, ತೆಗಳುವರು, ತಿರಸ್ಕರಿಸುವರು; ಅವರವರ ಕಣ್ಣುಗಳ ಅಭಿರುಚಿಗೆ ತಕ್ಕಂತೆ.
ಪರರ ರುಚಿಗೆ ಎಟಕುವುದು ಚಹರೆಗಳೇ ತಾನೇ! ಅವರ ಕಣ್ಣುಗಳಿಂದಲೇ ನನ್ನ ನಾನು ಕಂಡುಕೊಳ್ಳಲು ಅಥವಾ ಕಾಣಿಸಿಕೊಳ್ಳಲು ಸಾಕಾಗಿ ನನ್ನ ಕಣ್ಣುಗಳು ಮುಚ್ಚಿಕೊಂಡವು. ಅದೆಷ್ಟೋ ಹೊತ್ತು ಹಾಗಿದ್ದೆನೋ!

ಚಹರೆಗಳ ನೆರಳುಗಳನ್ನು ನುಂಗಿಕೊAಡ ಕಣ್ಣೊಳಗಿನ ಕತ್ತಲೆಯಲ್ಲಿ ಬೆತ್ತಲೆಯಾಗಿರುವುದು ಸುಖ. ಅದು ನಿರಾಳತೆಯ ಸುಖ. ತರಾವರಿ ತೊಡುಗೆಗಳ ತೂಕವನಿಳಿಸಿಕೊಂಡ ನಿರಾತಂಕದ ನೆಮ್ಮದಿ. ಕತ್ತಲು; ಅದೆಷ್ಟು ಆಳ! ಗೂಢತೆಗಳ ಮೇಳವದೆಷ್ಟಿದ್ದರೂ ತೋರ್ಪಡಿಸಿಕೊಳ್ಳುವ ಕಾತುರವಿಲ್ಲದ ನಿರಹಂಕಾರದ ನಿರಾಳತೆ!

ಬೆಳಕಿನದೇ ಸಮಸ್ಯೆ. ಅದರಲ್ಲದೆಷ್ಟು ಬಣ್ಣಗಳು, ಬಣ್ಣನೆಗಳು. ವ್ಯತ್ಯಾಸಗಳು, ವ್ಯತ್ಯಯಗಳು. ಸಮೀಕರಣಗಳು, ಅಸಮಾನತೆಗಳು. ಉಪಮೆಗಳು, ಉದಾಹರಣೆಗಳು. ಸಾಧಾರಣಗಳು, ಅಸಾಧರಣಗಳು. ಅಸೂಯೆಗಳು, ಆಯಾಸಗಳು. ಕತ್ತಲು ನೆಮ್ಮದಿ. ಮುಚ್ಚಿರುವ ಕಣ್ಣೊಳಗಿನ ಕತ್ತಲಿನಲ್ಲಿ ಕಾಣತೊಡಗಿದ ನನ್ನ ಬಿಂಬವನ್ನು ನೋಡುತ್ತಲೇ ಕುಳಿತುಬಿಟ್ಟೆ. ಹೌದಲ್ಲಾ, ಇಷ್ಟು ಕಾಲ ಮುಚ್ಚಿಟ್ಟಿದವರೇ ಈಗ ಬಿಚ್ಚಿಡುತ್ತಿದ್ದಾರೆ.

ಹೌದು, ಮನಸ್ಸೆಂಬುದೇ ಹಾಗೆ. ಅದು ತನಗೆ ತಾನೇ ತೊಂದರೆಯನ್ನು ಉಂಟುಮಾಡಿಕೊಳ್ಳುತ್ತದೆ. ತಾನೇ ಗೋಗರೆಯುತ್ತದೆ. ತಾನೇ ಸಹಾಯವನ್ನು ನಿರಾಕರಿಸುತ್ತದೆ. ತಾನೇ ಗೋಳಿಡುತ್ತದೆ. ತಾನೇ ಸಂತೈಸುತ್ತದೆ.
ತಿಕ್ಕಲು, ತಾನೇ ಹಾಳು ಮಾಡುವುದು, ತಾನೇ ಗೋಳಿಡುವುದು, ತಾನೇ ಸರಿ ಮಾಡುವುದು. ಈಗ ಸರಿಮಾಡಿಕೊಳ್ಳುವ ಮಗ್ಗುಲಿಗೆ ತಿರುಗಿಕೊಂಡಿದೆ. ಸರಿ ಹೋಗಿಬಿಡಲಿ.
ಸರಿ ಹೋಗುವುದೋ ಬಿಡುವುದೋ, ಸರಿಯಿಲ್ಲ, ಸರಿ ಮಾಡಬೇಕಾಗಿದೆ ಅಂತ ಗೊತ್ತಾಯಿತಲ್ಲಾ ಅಷ್ಟೇ ಸಾಕು.
ರೋಗವಿದೆ ಎಂಬ ಅರಿವು ಬಹುದೊಡ್ಡ ಉಪಶಮನ. ರೋಗವನ್ನೇ ಆರೋಗ್ಯವೆಂದು ಭಾವಿಸಿದ್ದು, ಈಗ ರೋಗ ಎಂದು ತಿಳಿಯಿತಲ್ಲಾ, ಅದೇ ಗುಣಮುಖವಾಗುವ ಮುನ್ಸೂಚನೆ.

ಇಷ್ಟೂ ದಿನಗಳ ಕಾಲ ಕನ್ನಡಿಯೊಳಗೆ ಮುಖ ನೋಡಿಕೊಳ್ಳುತ್ತಿದ್ದದ್ದು, ಇತರರಿಗೆ ಹೇಗೆ ಕಾಣಿಸುತ್ತೇನೆ, ಹೇಗೆ ಕಾಣಿಸಬೇಕು ಎಂದು. ಆದರೆ ಇಂದು ಕತ್ತಲಿನ ಕನ್ನಡಿಯಲ್ಲಿ ಕಾಣುತ್ತಿರುವ ಮುಖದ ಒಳಗಿನ ಮೌನ ತನ್ನ ಗುರುತಿನ ಪರದೆಯನ್ನು ಹರಿಯುತ್ತಿದೆ. ಯಾವ ಅಡಿಗಿದ್ದ ಮೌನ ನನ್ನಾತ್ಮದ ಕವಚವಾಗಿತ್ತೋ ಅದು ಕಾರಾಗೃಹವೆನಿಸಿ ಉಸಿರುಕಟ್ಟಿಸಿದ್ದು ಒಳ್ಳೆಯದೇ ಆಯಿತು.
ಮೌನ ದನಿಯಾಗುತ್ತಿದೆ. ದನಿ ಬನಿಯಾಗುತ್ತಿದೆ.
ಹಾಗಾಗಿಯೇ ಬೆಳಕಿನಲ್ಲಿ ವಿವಿಧ ಬಣ್ಣಗಳನ್ನು ಹಚ್ಚಿ ಬಣ್ಣಿಸಿದ್ದ ಎಲ್ಲಾ ಸಂಬAಧಗಳು, ಸಂಗತಿಗಳು, ಸಂವಹನಗಳು, ಸಂಘರ್ಷಗಳು ಈಗ ನೆನಪಿನ ನೆರಳುಗಳಾಗಿ ಆಳವಾದ ಕತ್ತಲಲ್ಲಿ ಬಣ್ಣ, ಬಣ್ಣನೆಗಳನ್ನು ಕಳೆದುಕೊಂಡಿವೆ.
ಅವರಿವರ ಮನಸ್ಸುಗಳ ಮಸುಕು ಮಾಡುವ ಮುಸುಕುಗಳ ತೆಗೆಯಲು ಸಹಕರಿಸುತ್ತಿದ್ದವನಿಗೆ ಸ್ವಸಹಾಯ ಮಾಡಿಕೊಳ್ಳಲು ಅದೇ ಮನಸ್ಸು ಮನಸ್ಸು ಮಾಡಿದೆ. ಆಗಲಿ, ಅದೂ ಆಗಿ ಹೋಗಲಿ.

ಮನೋವೈದ್ಯ ತನ್ನೊಳಗಿನ ರೋಗವನ್ನು ಪತ್ತೆ ಮಾಡಿಕೊಳ್ಳಲಿ. ಆಪ್ತ ಸಮಾಲೋಚಕ ತನ್ನಿರುವಿಗೆ, ತನ್ನಾಳಕೆ ಒಂದಿಷ್ಟು ಕಾಲ ಆಪ್ತನಾಗಿರುವ ಅವಕಾಶವನ್ನು ದಕ್ಕಿಸಿಕೊಳ್ಳಲಿ. ಮೌನವನ್ನು ಓದುವ ಓರಗೆಯವರಿದ್ದಾರೆ. ಓದಲಿ.
ವೈದ್ಯನೊಬ್ಬ ತಾನು ರೋಗಿಯಾಗಿರಲಿಲ್ಲ, ಅಥವಾ ತನಗೆ ರೋಗ ಬರುವುದಿಲ್ಲ ಎನ್ನುವುದು ಆತ್ಮವಂಚನೆ. ತನಗೆ ತಾನು ವಂಚಿಸಿಕೊಳ್ಳುವವನು ಜಗತ್ತಿನ ಯಾರೊಂದಿಗೆ ವಿಶ್ವಾಸವನ್ನು ಸಂಚಯ ಮಾಡಿಯಾನು!

ಮತ್ತೆ ಸಿಕ್ಕಿದನವನು ಮೌನದಲಿ
ಕಳೆದಿದ್ದವನು ಗದ್ದಲದಲಿ
ಗಾಯಗಳು ಮರೆತಿವೆ
ನೋವಿಲ್ಲದ ಕಲೆಗಳ ಹಿಂದೆ
ಪ್ರತಿ ಉಸಿರು ಆಸೆಗಳ ಬಸಿರು
ಹೆರಲಾಗದೆ ಘನವಾದ ಕಣ್ಣೀರು
ಕರಗುವುದೊಮ್ಮೆ ಹೆಪುö್ಪಗಟ್ಟಿದ ಕಾರ್ಮೋಡ
ಸುರಿವುದಲ್ಲಿ ಒಳಗಣ್ಣಿಂದ ಮಳೆಯು ನೋಡ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂತರಂಗ

ದಿಮಾಗಿ ನಕ್ಸಲ್-ನಗರ ನಕ್ಸಲ್

Published

on

~ರಹಮತ್ ತರೀಕೆರೆ, ಚಿಂತಕರು

ಕಾರ್ನಾಡರಲ್ಲಿ ನನಗೆ ಮೊದಲಿಂದಲೂ ವೈಯಕ್ತಿಕ ಸಂಪರ್ಕ ಇರಲಿಲ್ಲ. ಅನಂತಮೂರ್ತಿ ಅವರಂತೆ ಅವರು ಕಿರಿಯ ಲೇಖಕರ ಜತೆ ನಂಟಿರಿಸಿಕೊಂಡವರಲ್ಲ. ಯಾರಿಗಾದರೂ ಮುನ್ನುಡಿ ಬರೆದಿದ್ದೂ ನನಗೆ ತಿಳಿದಿಲ್ಲ. ತಾವಾಯಿತು ತಮ್ಮ ಬರೆಹ, ಸಿನಿಮಾ ಆಯಿತು ಎಂದಿದ್ದವರು. ಮಹಾರಾಷ್ಟ್ರದಲ್ಲಿ ಹುಟ್ಟಿ, ಜೀವಿತದ ಬಹುಕಾಲ ಕರ್ನಾಟಕದ ಹೊರಗಿದ್ದ ಅವರು, ಕರ್ನಾಟಕದ ಸಾರ್ವಜನಿಕ ಕಾರ್ಯಕ್ರಮಗಳಲ್ಲೂ ಹೆಚ್ಚು ಕಾಣಿಸಿದವರಲ್ಲ. ಸಮಕಾಲೀನರಾದ ತೇಜಸ್ವಿ ಲಂಕೇಶ್ ಅನಂತಮೂರ್ತಿ ಅವರಂತೆ ಪಬ್ಲಿಕ್ ಇಂಟಲೆಕ್ಚುವಲ್ ಕೆಲಸವನ್ನು ಮೈಮೇಲೆ ಹಾಕಿಕೊಂಡು, ಕರ್ನಾಟಕದ ಕಷ್ಟದ ದಿನಗಳಲ್ಲಿ ತಮ್ಮ ಮಾತು ಭಾಷಣ ಬರೆಹಗಳಿಂದ ಜನಾಭಿಪ್ರಾಯ ರೂಪಿಸಿದವರಲ್ಲ.

ಹೀಗಿದ್ದ ಕಾರ್ನಾಡರು ಬಾಳಿನ ಕೊನೆಯ ವರ್ಷಗಳಲ್ಲಿ ಆಶ್ಚರ್ಯಕರವಾಗಿ ಬದಲಾದರು; ಸಾರ್ವಜನಿಕ ಮಹತ್ವದ ಪ್ರಸಂಗಗಳಲ್ಲಿ ಮಾತಾಡಿದರು. ಹಠಬಿದ್ದಂತೆ ಬೀದಿಗಿಳಿದರು. ಈ ರೂಪಾಂತರಕ್ಕೆ ಕಾರಣ, ಪ್ರಭುತ್ವಗಳು ರಾಜಕೀಯ ಸೈದ್ದಾಂತಿಕ ಭಿನ್ನಮತಗಳನ್ನು ದಮನಿಸುವ ನಡೆಗಳಿರಬಹುದು; ಅನಂತಮೂರ್ತಿ ತೇಜಸ್ವಿ ಲಂಕೇಶ್ ತೀರಿಕೊಂಡ ಬಳಿಕ, ಉಂಟಾದ ರಿಕ್ತತೆ ಅವರನ್ನು ಈ ಹೊಸ ಪಾತ್ರ ನಿರ್ವಹಿಸುವಂತೆ ಆಹ್ವಾನಿಸಿರಬಹುದು. ಅವರು ತಮ್ಮ ಮಾತು, ಕೃತಿ, ಕ್ರಿಯೆಗಳಲ್ಲಿ ಭಾರತವನ್ನು ಆವರಿಸುತ್ತಿರುವ ಮತೀಯತೆ ಕುರಿತು ವ್ಯಗ್ರರಾಗಿದ್ದರು.

ಅವರು ಮಾಡಿದ ಸಾರ್ವಜನಿಕ ಪ್ರತಿರೋಧದ ಪ್ರಕರಣಗಳನ್ನು ಗಮನಿಸಬೇಕು. ಬಾಬರಿ ಮಸೀದಿಯ ಧ್ವಂಸವನ್ನು ವಿರೋಧಿಸಿದ್ದು; ನೈಪಾಲರ ಬಲಪಂಥೀಯವಾದ ಬೆಂಬಲಿಸುವ ನಿಲುವನ್ನು ಖಂಡಿಸಿದ್ದು; ಬಾಬಾಬುಡನಗಿರಿ ಚಳುವಳಿಯಲ್ಲಿ ಭಾಗವಹಿಸಿದ್ದು; ಟಿಪ್ಪು ನೆನಪಿನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು; ಟಿಪ್ಪು ಕುರಿತು ನಾಟಕ ಬರೆದಿದ್ದು; ಎಂ. ಎಫ್. ಹುಸೇನರ ಸೃಜನಶೀಲತೆ ಪರವಾಗಿ ನಿಂತಿದ್ದು; ಗೋರಕ್ಷಣೆ ಹೆಸರಲ್ಲಿ ನಡೆಯುತ್ತಿರುವ ಉಪಟಳ ವಿರೋಧಿಸಿ `ನಮ್ಮ ಆಹಾರ ನಮ್ಮ ಹಕ್ಕು’ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು. ಇಲ್ಲಿನ ಕೊನೆಯ ಕಾರ್ಯಕ್ರಮದಲ್ಲಿ ಅವರೊಟ್ಟಿಗೆ ಅನಂತಮೂರ್ತಿಯವರೂ ಇದ್ದರು. ಭಾರತದಲ್ಲಿ ಇಬ್ಬರು ಜ್ಞಾನಪೀಠ ಲೇಖಕರು ಇಂತಹದೊಂದು ಸಾರ್ವಜನಿಕ ಪ್ರತಿರೋಧದ ಕಾರ್ಯಕ್ರಮದಲ್ಲಿ ಒಟ್ಟಿಗೆ ಭಾಗವಹಿಸಿದ್ದು ಅಪೂರ್ವ ಸಂಗತಿ.

ನನಗೆ ಅವರ ಜತೆ ಮೊದಲ ಮುಖಾಬಿಲೆ ಆಗಿದ್ದು ಬಾಬಾಬುಡನಗಿರಿಗೆ ಮಾಡಿದ ಪಯಣದಲ್ಲಿ. ಸೂಫಿಗಳ ಮೇಲೆ ತುಸು ಅಧ್ಯಯನ ಮಾಡಿದವನೆಂದು ನನ್ನನ್ನು ಅವರೊಟ್ಟಿಗೆ ಕೂರಿಸಲಾಗಿತ್ತು. ಅವರ ಗಂಭೀರ ಸ್ವಭಾವದ ಬಗ್ಗೆ ತಿಳಿದಿದ್ದ ನಾನು, ಅವರಾಗಿ ಏನಾದರೂ ಕೇಳಿದರೆ ಮಾತ್ರ ಹೇಳಬೇಕೆಂದು, ಸಹಪಯಣದ ಖುಶಿಯನ್ನು ಅನುಭವಿಸುತ್ತ ಜತೆಗೆ ಕೂತಿದ್ದೆ. ಗಿರಿಯನ್ನು ವಾಹನ ಹತ್ತುವಾಗ, ನೆತ್ತಿಮೇಲಣ ಶಿಖರಗಳನ್ನೂ ಕೆಳಗಿನ ಕಣಿವೆಗಳನ್ನೂ ನೋಡುತ್ತ ಕಾರ್ನಾಡರು `ಓಹ್ ಎಷ್ಟೊಂದು ಸುಂದರವಾಗಿದೆಯಲ್ಲ’’ ಎಂದು ಉದ್ಗರಿಸುತ್ತ ಮಗುವಿನಂತೆ ಪುಟಿಯುತ್ತಿದ್ದರು.

ಅವರೊಬ್ಬ ಸೆಲೆಬ್ರಿಟಿಯಾದರೂ ಸರಳವ್ಯಕ್ತಿ. ಅಭಿನಯ ಅವರ ವೃತ್ತಿಯಾದರೂ ವ್ಯಕ್ತಿಯಾಗಿ ತೋರಿಕೆಯೇ ಇಲ್ಲದ ನೇರಗುಣದವರು. ಗೋಕರ್ಣದಲ್ಲಿ ನಡೆದ ಗೌರೀಶ ಕಾಯ್ಕಿಣಿಯವರ ಶತಮಾನೋತ್ಸವ ಕಾರ್ಯಕ್ರಮದಲ್ಲಿ ನಮ್ಮನ್ನು ತೋಟದ ಮನೆಯೊಂದರಲ್ಲಿ ಉಳಿಸಲಾಗಿತ್ತು. ಕಾರ್ನಾಡರು ನನಗಿಂತಲೂ ವೈದ್ಯೆಯಾದ ನನ್ನ ಮಗಳ ಜತೆ ಹೆಚ್ಚು ಮಾತನಾಡಿದರು. ಆದಿನ ನಾನು ಅವರ `ಆಡಾಡ್ತಾ ಆಯುಷ್ಯ’ ಒಳಗೊಂಡಂತೆ (ಬೆರಗು ಹುಟ್ಟಿಸುವ ಭಾಷೆಯುಳ್ಳ ವಿಶಿಷ್ಟ ಗದ್ಯಶೈಲಿಯ ಕೃತಿಯಿದು) ಕನ್ನಡದ ಆತ್ಮಕತೆಗಳ ಬಗ್ಗೆ ಉಪನ್ಯಾಸ ಮಾಡಿದೆ. ಬಸಳೆಸೊಪ್ಪಿನ ಹೊರೆಯನ್ನು ಅವರ ಕೈಯಿಂದ ಉಡುಗೊರೆ ಕೊಡಿಸಲಾಯಿತು. ಉಪನ್ಯಾಸದ ಬಳಿಕ ಕಾರ್ನಾಡರು ಕೇಳಿದರು: “ಭಾರತದ ಮೊಟ್ಟಮೊದಲ ಆತ್ಮಕಥೆ `ಅರ್ಧಕಥಾನಕ’ ಓದಿದ್ದೀರಾ?” “ಇಲ್ಲ” “ನೀವು ಓದಲೇಬೇಕು. ಅಪರೂಪದ ಪುಸ್ತಕ. 16ನೇ ಶತಮಾನದ್ದು’’. ಬೆಂಗಳೂರಿಗೆ ಹೋದೊಡನೆ ನೆರಳಚ್ಚನ್ನು ಕಳಿಸಿಕೊಟ್ಟರು. ವ್ಯವಹಾರ ಪ್ರಜ್ಞೆಯಿಲ್ಲದವನೂ ಕಾವ್ಯಪ್ರೇಮಿಯೂ ಆದ ಜೈನ ವ್ಯಾಪಾರಿಯೊಬ್ಬನ ರೋಚಕ ಅನುಭವಗಳ ಕಥನವದು.

ಹೀಗೆ ಸಣ್ಣಗೆ ಆರಂಭವಾದ ಪರಿಚಯ `ಅಮೀರ‍ಬಾಯಿ ಕರ್ನಾಟಕಿ’ ಪುಸ್ತಕದ ಸನ್ನಿವೇಶದಲ್ಲಿ ಧಕ್ಕೆಗೊಳಗಾಯಿತು. ನಾನು ಅಮೀರಬಾಯಿ ಸಂಶೋಧನೆಗೆಂದು ಪುಣೆ ಮುಂಬೈ ತಿರುಗಾಡುವಾಗ, ಮಹಾರಾಷ್ಟ್ರದಲ್ಲಿ ಕಾರ್ನಾಡರಿಗೆ ಸಿನಿಮಾ ಮತ್ತು ಸಾಹಿತ್ಯ ಕ್ಷೇತ್ರದಲ್ಲಿರುವ ಮರ್ಯಾದೆಯನ್ನು ಗಮನಿಸಿದ್ದೆ. ಮರಾಠಿ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾಡಿದ ದಿಟ್ಟ ಭಾಷಣವು-ಅದರಲ್ಲಿ ರಾಜಕೀಯ ಪಕ್ಷಗಳು ಸೈನೀಕರಣಗೊಳ್ಳುವುದರ ಬಗ್ಗೆ ಕಟುವಾದ ವಿಮರ್ಶೆಯಿದೆ- ಅಲ್ಲಿನ ಲೇಖಕರು ನೆನಪಿಟ್ಟಿದ್ದರು. ಕನ್ನಡ-ಮರಾಠಿ ಸಾಂಸ್ಕøತಿಕ ಬಾಂಧವ್ಯದ ಕೊಂಡಿಯಾಗಿದ್ದ ಅಮೀರಬಾಯಿ ಕುರಿತ ಹೊತ್ತಗೆಯನ್ನು ಅವರೇ ಬಿಡುಗಡೆ ಮಾಡಿದರೆ ಚೆನ್ನವೆನಿಸಿತು. ಹೇಗೂ `ಸಾಹಿತ್ಯ ಸಂಭ್ರಮ’ದ ಕಾರ್ಯಕ್ರಮಕ್ಕಾಗಿ ದಿನ ಮೊದಲೇ ಧಾರವಾಡಕ್ಕೆ ಬರುತ್ತಿದ್ದರು. ಹಿಂದಿನ ದಿನ ಸಂಜೆ ಬಿಡುಗಡೆ ಮಾಡಲು ಸಾಧ್ಯವೇ ಎಂದು ಕೇಳಿದೆ. ಕೂಡಲೇ ಒಪ್ಪಿದರು.

ಆದರೆ ಸಾಹಿತ್ಯ ಸಂಭ್ರಮ ಕಾರ್ಯಕ್ರಮದ ಸ್ವರೂಪದ ಬಗ್ಗೆ ಭಿನ್ನಮತ ವ್ಯಕ್ತಪಡಿಸಿ ನಾನು ಭಾಗವಹಿಸದೆ ಹೊರಗುಳಿದೆ. ಕಾರ್ನಾಡರು ಕರೆ ಮಾಡಿ “ನೀವು ಸಂಭ್ರಮಕ್ಕೆ ಬರಲು ನಿರಾಕರಿಸಿದರಂತೆ. ನಿಜವೇ?’’ ಎಂದು ಕೇಳಿದರು. ಹೌದೆಂದೆ. `ಹಾಗಿದ್ದಲ್ಲಿ ನಿಮ್ಮ ಕಾರ್ಯಕ್ರಮಕ್ಕೆ ಬರಲಾರೆ, ಕ್ಷಮಿಸಿ’ ಎಂದರು. `ಆಗಲಿ’ ಎಂದೆ. ಅವರಿಗೆ ತಾನು ಹಾಗೆ ಮಾಡಿದ್ದು ಸರಿಯಲ್ಲ ಅನಿಸಿರಬೇಕು. ಧಾರವಾಡದಲ್ಲಿರುವ ತಮ್ಮ ಒಡನಾಡಿ ಸುರೇಶ ಕುಲಕರ್ಣಿಯವರೊಟ್ಟಿಗೆ ತಮ್ಮ ಚಡಪಡಿಕೆ ಹಂಚಿಕೊಂಡರಂತೆ. ಆದರೆ ನಾನು ಕಾರ್ಯಕ್ರಮ ಮುಗಿದ ಬಳಿಕ ಪುಸ್ತಕದ ಗೌರವಪ್ರತಿ ಕಳಿಸಿಕೊಟ್ಟೆ. ಚೆನ್ನಾಗಿ ಬಂದಿದೆ ಎಂದು ಪತ್ರ ಬರೆದರು. ಅವರು ಆ ಘಟನೆಯನ್ನು ಮನಸ್ಸಿನಲ್ಲಿ ಇಟ್ಟುಕೊಂಡಂತೆ ಕಾಣಲಿಲ್ಲ. ತಮ್ಮ ಪರಿಚಿತರು ಯಾರಾದರೂ ಹಂಪಿ ನೋಡಬಯಸಿದರೆ, ನನ್ನ ಸಲಹೆ ಪಡೆಯಲು ಹೇಳುತ್ತಿದ್ದರು. ಒಮ್ಮೆ ಅವರ ನಾಟಕಗಳಲ್ಲಿ ನಟಿಸುವ ಬಂಗಾಳದ ನಟಿ ಹಂಪಿಯಲ್ಲಿ ಹಣ ಪಾಸ್‍ಪೋರ್ಟುಳ್ಳ ಪರ್ಸನ್ನು ಕಳೆದುಕೊಂಡರು. ಕಾರ್ನಾಡರು ಕರೆಮಾಡಿ ಆಕೆಗೆ ಬೆಂಗಳೂರಿನ ತನಕ ಬರಲು ಸಹಾಯ ಮಾಡುವುದು ಸಾಧ್ಯವೇ ಎಂದು ಕೇಳಿದರು.

ಸಂವಾದಕ್ಕೆ ಸದರವಾಗಿ ಸಿಗುವ ಲೇಖಕರಲ್ಲದ ಗಿರೀಶ್, ಬಾಳಿನ ಕೊನೆಯ ದಿನಗಳಲ್ಲಿ ತಮ್ಮ ಲಾಗಾಯ್ತಿನ ಸ್ವಭಾವಕ್ಕೆ ಪ್ರತಿಯಾಗಿ, ಸಾಂಸ್ಕøತಿಕ ನಾಯಕತ್ವದ ದನಿ ಮೊಳಗಿಸಿದರು. ತಮಗೆ ತಪ್ಪೆಂದು ಕಂಡ ವಿಷಯಗಳಲ್ಲಿ ಪರಿಣಾಮ ಲೆಕ್ಕಿಸದೆ ದಿಟ್ಟತನದ ನಿಲುವು ತೆಗೆದುಕೊಂಡರು. ತಮ್ಮ ತಾತ್ವಿಕ ರಾಜಕೀಯ ನಿಲುವಿಗೆ ವಿರುದ್ಧವಿರುವ ದೊಡ್ಡ ಸಾಧಕರನ್ನೂ ಲೆಕ್ಕಿಸದೆ ಶಾಬ್ದಿಕ ಹಿಂಸೆಗೆ ಗುರಿಪಡಿಸುವ ಈಚಿನ ಪದ್ಧತಿಗೆ ಬಲಿಯೂ ಆದರು. ಗೌರಿಲಂಕೇಶ್ ಸ್ಮರಣ ಕಾರ್ಯಕ್ರಮಕ್ಕೆ `ನಾನೂ ನಗರ ನಕ್ಸಲ್’ ಎಂದು ಕೊರಳಿಗೆ ಬೋರ್ಡು ಸಿಕ್ಕಿಸಿಕೊಂಡು ಬಂದ ಸನ್ನಿವೇಶ ನೆನಪಾಗುತ್ತಿದೆ. ಅದು ತೀರಾ ನಾಟಕೀಯವಾಗಿತ್ತು. ಆದರೆ ಅವರ ಸ್ಪಷ್ಟತೆ ಧೈರ್ಯ ಸಿಟ್ಟು ಹತಾಶೆ ಆಕ್ಟಿವಿಸಂಗಳ ಆತ್ಯಂತಿಕ ರೂಪಕವಾಗಿತ್ತು. ಆರೋಗ್ಯ ಸರಿಯಿರಲಿಲ್ಲ. ಕೈಯಲ್ಲಿ ಆಮ್ಲಜನಕದ ಸಿಲಿಂಡರನ್ನು ಹಿಡಿದಿದ್ದರು. ಅಪರಾಧಿಗಳ ಕೊರಳಿಗೆ ಫಲಕ ತೂಗುಹಾಕುವುದು ಕ್ರಮವಿದೆ. ಶಿಲುಬೆಗೇರಿದ ಕ್ರಿಸ್ತನ ಕೊರಳಿಗೂ `ನಜರೇತಿನ ಅರಸ’ ಎಂಬ ವ್ಯಂಗ್ಯದ ಫಲಕ ತೂಗಿಸಲಾಗಿತ್ತು. ಆದರೆ ಕಾರ್ನಾಡರು ಇದನ್ನು ಸ್ವತಃ ಧಾರಣಮಾಡಿದ್ದರು. `ವಿಚಾರ ಮಾಡುವುದು, ಪ್ರಭುತ್ವವನ್ನು ವಿಮರ್ಶಿಸುವುದು, ಮತಧರ್ಮದ ಹಿಂಸೆ ಖಂಡಿಸುವುದು ಅಪರಾಧವಾದರೆ ನಾನೂ ಅಪರಾಧಿ’ ಎಂಬ ನಾಟಕೀಯ ತಪ್ಪೊಪ್ಪಿಗೆಯನ್ನು ಅದು ಒಳಗೊಂಡಿತ್ತು. ಜನಪದ ಮಿತ್ ಮತ್ತು ಪುರಾಣಗಳನ್ನು ನಾಟಕಗಳಿಗೆ ದುಡಿಸಿಕೊಂಡ ಕಾರ್ನಾಡರು ನಾಗರಿಕ ಹಕ್ಕುಗಳ ವಿಷಯ ಬಂದರೆ, ಮುಕ್ತ ಸಮಾಜದ ಪರವಾದ ಆಕ್ಸಫರ್ಡ್ ಪದವೀಧರರೇ. ನಾಗರಿಕ ಸಮಾಜವೊಂದರಲ್ಲಿ ಸಹಜವಾಗಿ ಇರಬೇಕಾದ ಸ್ವಾತಂತ್ರ್ಯದ ಪರವಾಗಿ ಅವರು ಸದಾ ಆಲೋಚಿಸುತ್ತಿದ್ದರು. ಫಲಕದಲ್ಲಿರುವ ಬರೆಹವು ಸ್ವಹಸ್ತಾಕ್ಷರದಲ್ಲಿತ್ತು. ದೇಶದ ಸುದ್ದಿಯಾಗಬೇಕೆಂದೇ ಇಂಗ್ಲೀಶಿನಲ್ಲಿತ್ತು. ಅದರಲ್ಲಿ ದೇಶೀಭಾಷೆಯ ಲೇಖಕ ಎಂಬುದನ್ನು ದಾಖಲಿಸುವಂತೆ `ನಾನು ಕೂಡ’ ಎಂಬ ಎರಡು ಪದಗಳು ಕನ್ನಡದಲ್ಲಿದ್ದವು. ಉಸಿರ್ಗಟ್ಟಿಸುವ ಸನ್ನಿವೇಶಕ್ಕೆ ತುಡಿಯುವಂತೆ ಕೈಯಲ್ಲಿ ಆಕ್ಸಿಜನ್ ಸಿಲಿಂಡರಿತ್ತು.

ಅದೊಂದು ಅಭಿಮಾನ ಉಕ್ಕಿಸುವ ಮತ್ತು ಎದೆಕರಗಿಸುವ ಚಿತ್ರ; ಸಮಾಜದ ಹದುಳಕ್ಕಾಗಿ ತನ್ನ ಬೇನೆಯಲ್ಲೂ ಲೇಖಕ ರಿಸ್ಕ್ ತೆಗೆದುಕೊಳ್ಳುವ ಪ್ರತೀಕ. ಕಾರ್ನಾಡರಲ್ಲಿ ಲೆಕ್ಕಾಚಾರ ದ್ವಂದ್ವ ಇರಲಿಲ್ಲ. ಅಂತರಂಗಕ್ಕೆ ಸರಿಯೆನಿಸಿದ್ದನ್ನು ಹೇಳುವ-ಮಾಡುವ ಪ್ರಾಮಾಣಿಕತೆಯಿತ್ತು. ಇದು ಅವರ ಶವಸಂಸ್ಕಾರದಲ್ಲೂ ವ್ಯಕ್ತವಾಯಿತು. ಅವರು ಸತ್ತು ದೊಡ್ಡವರಾದವರು; ಅವರನ್ನು ಕೆಟ್ಟದಾಗಿ ನಡೆಸಿಕೊಂಡು ಬದುಕಿರುವ ನಾವು ಸಣ್ಣವರಾದೆವು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending