ಸಿನಿ ಸುದ್ದಿ
ಮೀಡಿಯಾ ಸತ್ಯವನ್ನ ನಿರ್ಧಾರ ಮಾಡುತ್ತಾ..? ಇದು ಹೇಳಿದ್ದೆಲ್ಲಾ ಸತ್ಯವಾ..? : ‘ಜನಗಣಮನ’ ಸಿನೆಮಾಂತರಂಗ..!
![](https://suddidina.com/wp-content/uploads/2022/06/janaganamana_cinema_suddidina.jpg)
- ಜಿ.ಟಿ.ತುಮರಿ
ಈ ಪ್ರಶ್ನೆ ಕೇಳುತ್ತಾ ಹೋದಂತೆ ಒಬ್ಬ ಪತ್ರಕರ್ತನಾಗಿ ತಣ್ಣಗೆ ಬೆವರಿಬಿಟ್ಟೆ. ನನ್ನ ಕಣ್ಣಮುಂದೆ ಹಲವು ಸುದ್ದಿ ಚಾನೆಲ್ ಮತ್ತು ವಿಷ ಕಾರುವ ಅದರ ನಿರೂಪಕರು, ಅವರ ನಿಲುವುಗಳ ಹಿಂದಿರುವ ಅಪವಿತ್ರ ಮೈತ್ರಿಗಳು, ಅದರಲ್ಲೂ ಈಚೆಯ ವರ್ಷದಲ್ಲಿ ಪೇಸ್ಭುಕ್, ಟ್ವಿಟರ್, ವ್ಯಾಟ್ಸಪ್ , ಇನ್ಸ್ಟಾಗ್ರಾಮ್ ಇತ್ಯಾದಿ ಮೂಲಕ ಸುಳ್ಳು ಸುರಿಯುವ ರಾಜಕೀಯ ಸಾಮಾಜಿಕ ಹುನ್ನಾರಗಳು ಥಟ್ಟನೆ ಮನಸಿಗೆ ಬಂದವು.
ಮಲಯಾಳಂ ನಟ ಪೃಥ್ವಿರಾಜ್ ಈಚೆಗೆ ಬಿಡುಗಡೆಯಾದ ಜನಗಣಮನ ಸಿನಿಮಾದಲ್ಲಿ ಡೈಲಾಗ್ ಮಾತ್ರ ಹೇಳುತ್ತಾ ಇರಲಿಲ್ಲ ಆ ಕಂಚಿನ ಕಂಠದಲ್ಲಿ ಸಿನಿಮಾ ನೋಡುತ್ತಾ ಇರುವ ಪ್ರತಿ ಭಾರತೀಯನ ಆತ್ಮಸಾಕ್ಷಿ ತಿವಿಯುತ್ತಾ ಹೋಗುತ್ತಾನೆ. ಆ ಮೂಲಕ ನಮ್ಮ ಸುತ್ತಲ ವರ್ತಮಾನದ ಸತ್ಯಗಳಿಗೆ ಕುರುಡಾದ ಕೆಪ್ಪಾದ ಕಣ್ಣು ಕಿವಿಯ ಜತೆ ಸತ್ತ ಹಾಗೆ ಇರುವ ನಮ್ಮೊಳಗಿನ ನಮ್ಮನ್ನು ಬಡಿದೆಬ್ಬಿಸುತ್ತಾ ಹೋಗುತ್ತದೆ ಜನಗಣಮನ ಸಿನಿಮಾ.
” ಒಂದು ನಾಯಿ ಸತ್ತರೂ ಕೇಳೋ ಈ ದೇಶದಲ್ಲಿ ಆ ನಾಲ್ಕು ಜನ ಬೀದಿನಾಯಿಗಳ ಹಾಗೆ ಸತ್ತರು. ಯಾವ ಆಧಾರನೂ ಬೇಡ, ಯಾವ ನ್ಯಾಯ ಕೋರ್ಟ್ ಬೇಡ ಅವರನ್ನ ಕೊಲ್ಲಬೇಕು. ಇದಕ್ಕೆ ಕಾರಣ ಅವರ ಗುರುತು, 2 ನೇ ಕ್ಲಾಸ್ ಮಗುವಿಗೆ ಬಣ್ಣದ ಮೇಲೆ ಚಂದ ಕುರೂಪ ಅಂತ ಚಿತ್ರ ಬರೆದು ತಾರತಮ್ಯವನ್ನ ತುಂಬುವ ಮತದ ರಾಜಕೀಯ, ಅವರನ್ನು ನೋಡಿದ್ರೆ ಗೊತ್ತಾಗಲ್ಲವಾ ಅನ್ನೋ ಜಾತಿ ರಾಜಕೀಯ ಇಲ್ಲಿ ನಡೀತಾ ಇದೆ”
ಯೂನಿವರ್ಸಿಟಿಯೊಂದರಲ್ಲಿ ಜಾತಿಯ ಕಾರಣದಿಂದ ಹತ್ಯೆಗೆ ಒಳಗಾಗುವ ವಿದ್ಯಾರ್ಥಿನಿಗೆ ನ್ಯಾಯ ನೀಡಲು ಮುಂದಾಗುವ ಮಹಿಳಾ ಪ್ರೊಫೆಸರ್ ಒಬ್ಬರನ್ನು ಅಲ್ಲಿನ ವ್ಯವಸ್ಥೆ ಕೊಂದುಹಾಕಿದ ಪ್ರಕರಣವೊಂದನ್ನು ಸತ್ಯದ ಮರೆಮಾಚಿ ನಕಲಿ ಎನ್ ಕೌಂಟರ್ ಹೇಗೆ ಸೃಷ್ಟಿಯಾಗಲು ಇರುವ ಸಾಮಾಜಿಕ ರಾಜಕೀಯ ಕಾರಣಗಳನ್ನ ಜನಗಣಮನ ಸಿನಿಮಾ ಬಿಚ್ಚಿಡುತ್ತಾ ಹೋಗುತ್ತದೆ. ಘಟನೆಯೊಂದರ ರಾಜಕೀಯ ಲಾಭವನ್ನ ಹೇಗೆ ಮಾಧ್ಯಮಗಳು, ಸಮೂಹ ಮಾಧ್ಯಮಗಳ ಮೂಲಕ ಜನರಲ್ಲಿ ಸುಳ್ಳು ಬಿತ್ತಿ ಪರಿಸ್ಥಿತಿ ಲಾಭ ಪಡೆಯಬಹುದು ಎನ್ನುವುದನ್ನು ಇಡೀ ಸಿನಿಮಾ ಎಳೆ ಎಳೆಯಾಗಿ ವಿವರಿಸುತ್ತದೆ.
ಈ ನಿರ್ದೇಶಕರಿಗೆ ಸೆಲ್ಯೂಟ್.. ಒಂದು ಸಿನಿಮಾ ಕೇವಲ ರಂಜನೆ ನೀಡಿದರೆ ಸಾಕು ಎನ್ನುವ ಸೀಮಿತ ಲೆಕ್ಕಾಚಾರದ ನಡುವೆ ಸಿನಿಮಾವೊಂದು ನಮ್ಮ ಸುತ್ತಲಿನ ಸುಡು ವರ್ತಮಾನಕ್ಕೆ ವಿಮರ್ಶೆ ಬರೆದಿದೆ. ಹೇಗೆ ದೇಶದ ಜನರು ವಿಸ್ಮೃತಿಗೆ ಒಳಗಾಗಿ ಹೌದಪ್ಪ ಆಗಿದ್ದೇವೆ ಎನ್ನುವುದನ್ನ ಪ್ರತಿ ದ್ರಶ್ಯ ಕಟ್ಟಿ ಕೊಡುತ್ತದೆ. ಸಿನಿಮಾದ ಮೊದಲು ಅರ್ಧ ಭಾವನಾತ್ಮಕ ಕಥಾಹಂದರ ಕಟ್ಟಿ ಕೊಟ್ಟರೆ. ದ್ವಿತೀಯಾರ್ಧದಲ್ಲಿ ನಾವು ಈ ಮೊದಲು ಸಿನಿಮಾ ಆರಂಭದಲ್ಲಿ ಕಟ್ಟಿಕೊಂಡ ಭಾವುಕತೆ ಎಷ್ಟು ಕೃತಕ ಮತ್ತು ಸುಳ್ಳು ಎನ್ನುವುದನ್ನ ವಕೀಲನಾದ ಸಿನಿಮಾ ನಾಯಕ ಮೂಲಕ ಪ್ರಖರವಾಗಿ ಹೇಳಿಸುವ ಮೂಲಕ ಮಿಥ್ ಗಳನ್ನು ಸೃಷ್ಟಿ ಮಾಡುವ ಹುನ್ನಾರಗಳನ್ನ ಸಿನಿಮಾ ಏಕ ಕಾಲದಲ್ಲಿ ತೆರೆಯಮೇಲೆ ಮತ್ತು ನಮ್ಮೊಳಗೆ ಅನುಭವಕ್ಕೆ ತರಿಸುತ್ತದೆ.
ಇಂತ ಸಿನಿಮಾ ಮಾಡಲು ಪ್ರತಿಭೆ ಮಾತ್ರ ಇದ್ದರೆ ಸಾಕಾಗದು ಅದಕ್ಕೆ ಒಂದು ಬದ್ಧತೆ ಮತ್ತು ದೈರ್ಯ ಬೇಕು. ಸಾಮಾಜಿಕ ಮತ್ತು ರಾಜಕೀಯ ಸತ್ಯವನ್ನ ಹೇಳುವ ಸಮಾಜಮುಖಿ ಸಿನಿಮಾಗಳು ಹಾಗೆ ನೋಡಿದರೆ ಕನ್ನಡ ಚಿತ್ರರಂಗದಲ್ಲಿ 2000 ಕ್ಕಿಂತ ಮೊದಲು ಸಿನಿಮಾಗಳ ಸರಣಿಗಳೇ ಇವೆ. ಬಹಳ ಮುಖ್ಯವಾಗಿ ರಾಜ್ ಕುಮಾರ್ ಸಿನಿಮಾಗಳನ್ನ ಉಲ್ಲೇಖ ಮಾಡಬಹುದು. ಆದರೆ ಕಳೆದ ಒಂದು ದಶಕವನ್ನ ಗಮನಿಸಿದರೆ ಮಲಯಾಳಂ ಮತ್ತು ತಮಿಳು ಚಿತ್ರರಂಗ ಈ ನಡೆಯಲ್ಲಿ ಮುಂದೆ ಇವೆ. ಹುಡುಗ ಹುಡುಗಿ ಮರ ಸುತ್ತಿಸಿ ಮಚ್ಚು ಲಾಂಗು ಹಿಡಿಸಿ ಎರಡು ಮಾಸ್ ಸಾಂಗ್ ಹಾಕಿ ನಾಯಕನನ್ನು ಮೆರೆಸಲು ಮತ್ತೆರೆಡು ಹಾಡು ಬರೆಸುವುದರಲ್ಲಿ ಕನ್ನಡ ಮತ್ತು ತೆಲುಗು ಚಿತ್ರರಂಗ ಪೈಪೋಟಿ ಇದ್ದಂತೆ ಇವೆ. ಆದರೆ ಮಲಯಾಳಿ ಮತ್ತು ತಮಿಳು ಚಿತ್ರರಂಗ ಇದಕ್ಕೆ ಭಿನ್ನ ಇವೆ. ಅಲ್ಲಿನ ಸಿನಿಮಾದಲ್ಲಿ ಭಿನ್ನ ನೆಲೆಯ ನಿರೂಪಣೆಯ ಕಥೆ, ಕಡಿಮೆ ವೈಭವೀಕರಣ, ಕೌಶಲ್ಯದ ನಟನೆಯಂತ ಹಲವು ಕಾರಣ ಇವೆ. ಕರ್ಣನ್, ಅಸುರ, ಜೈ ಭೀಮ್, ಗ್ರೇಟ್ ಇಂಡಿಯನ್ ಕಿಚನ್ ರೂಮ್, ಕೋಲ್ಡ್ ಕೇಸ್, ಬೀಸ್ಟ್, ಬಿಗಿಲ್, ಇಂದ್ರನ್ ನಟನೆ ಸಿನಿಮಾಗಳು, ಡ್ರೈವಿಂಗ್ ಲೈಸೆನ್ಸ್, ಅಯ್ಯಪ್ಪನ್, ಫಾಸಿಲ್ ಸರಣಿ ಸಿನಿಮಾಗಳು ಹೀಗೆ.
ಜನಗಣಮನ….ಈಚೆಯ ವರ್ಷಗಳಲ್ಲಿ ನಾನು ಕಂಡ ಸಿನಿಮಾಗಳಲ್ಲೇ ಶ್ರೇಷ್ಠ ಸಿನಿಮಾ. ರಾಜಕೀಯ ಪೊಲೀಸ್ ವ್ಯವಸ್ಥೆಯನ್ನ ಹೇಗೆ ದುರ್ಬಳಕೆ ಮಾಡಿಕೊಂಡು ತನ್ನ ಬೇಳೆ ಕಾಳು ಬೇಯಿಸಿ ಬಳಸಿ ಬಿಸಾಡುತ್ತದೆ ಎನ್ನುವುದನ್ನು ಕಥಾವಸ್ತು ಒಳಗೊಳ್ಳುವ ಜತೆ ರಾಜಕೀಯ ಪೊಲೀಸ್ ಮತ್ತು ಮಾಧ್ಯಮ ಮೂರು ಭ್ರಷ್ಟ ಮೈತ್ರಿಯಾದರೆ ಸತ್ಯ ಹೇಗೆ ಸುಳ್ಳಾಗಿ ಸಂವಿಧಾನದ ಆಶಯ ವಿರುದ್ಧ ಅಪವಿತ್ರ ಮೈತ್ರಿಯಾಗಿ ಜನಗಣಮನಕ್ಕೆ ವಿಷ ಉಣಿಸಿ ಸ್ವಾರ್ಥ ಸಾಧಿಸುತ್ತದೆ ಎನ್ನುವುದು ಅತ್ಯುತ್ತಮವಾಗಿ ನಿರೂಪಿಸಿ ದೃಶ್ಯವಾಗಿಸಿದೆ ಸಿನಿಮಾ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ದಿನದ ಸುದ್ದಿ
ರೇಣುಕಾಸ್ವಾಮಿ ಕೊಲೆ ಮತ್ತು ಗಂಡುಹೆಣ್ಣಿನ ನಡುವಿನ ಸಂಬಂಧ
![](https://suddidina.com/wp-content/uploads/2024/06/Darshan_pavitra_Gouda_suddidina.jpg)
- ರಾಜೇಂದ್ರ ಬುರಡಿಕಟ್ಟಿ
ರೇಣುಕಾಸ್ವಾಮಿ ಕೊಲೆ ಕೇಸನ್ನು ಸಾಮಾಜಿಕ ಜಾಲತಾಣಗಳಲ್ಲಿ ಚರ್ಚಿಸುವ ಅನೇಕ ಸ್ನೇಹಿತರು ಈ ಕೇಸಿನಲ್ಲಿ ಮೊದಲನೆಯ ಮತ್ತು ಎರಡನೆಯ ಆರೋಪಿಗಳೆಂದು ಹೆಸರಿಸಲ್ಪಟ್ಟ ದರ್ಶನ್ ಮತ್ತು ಪವಿತ್ರ ಗೌಡ ಅವರ ನಡುವಿನ ಸಂಬಂಧದ ಬಗ್ಗೆ ಅನಗತ್ಯವಾಗಿ ಚರ್ಚಿಸಿ ಪವಿತ್ರಗೌಡ ಅವರನ್ನು ‘ಇಟ್ಟುಕೊಂಡವಳು’ ಇತ್ಯದಿ ಪದಬಳಸಿ ಹಿಯ್ಯಾಳಿಸಿದ್ದಾರೆ.
ಒಂದು ಟಿವಿ ಚಾನೆಲ್ ನವರು ಅವರನ್ನು ‘ಸೆಕೆಂಡ್ ಹ್ಯಾಂಡ್ ಸುಂದರಿ’ ಎಂದೂ ಕರೆದದ್ದು ವರದಿಯಾಗಿದೆ. ಇದನ್ನು ಮಾಡುವ ಹಕ್ಕು ಯಾರಿಗೂ ಇಲ್ಲ. ನಮ್ಮ ವಿರೋಧ ಇರಬೇಕಾದದ್ದು ಅವರು ರೂಪಿಸಿದ್ದಾರೆ ಎನ್ನಲಾದ ಕೊಲೆಯ ಕೇಸಿನ ಬಗ್ಗೆಯೇ ಹೊರತು ಅವರಿಬ್ಬರ ನಡುವಿನ ವೈಯಕ್ತಿಕ ಸಂಬಂಧದ ಬಗ್ಗೆ ಅಲ್ಲ.
ಗಂಡು ಹೆಣ್ಣಿನ ನಡುವಿನ ಸಂಬಂಧ ಎಂಬುದು ಅತ್ಯಂತ ಸಹಜವಾದದ್ದು. ಯಾರಿಗೆ ಯಾರ ಮೇಲೆ ಯಾವಾಗ ಆಕರ್ಷಣೆ ಉಂಟಾಗಿ ಸಂಬಂಧಗಳು ಬೆಸೆದುಕೊಳ್ಳುತ್ತವೆ ಎಂಬುದನ್ನು ಹೇಳಲಾಗದು. ಇದಕ್ಕೆ ‘ನೈತಿಕ’ ‘ಅನೈತಿಕ’ ಎಂಬ ಹಣೆಪಟ್ಟಿ ಹಚ್ಚಿ ಗೌರವಿಸುವ ಅಥವಾ ಅವಹೇಳನ ಮಾಡುವ ಕ್ರಮ ಸರಿಯಾದದ್ದಲ್ಲ. ಪ್ರತಿಯೊಬ್ಬರಿಗೂ ಆಯ್ಕೆಗಳಿರುತ್ತವೆ. ತಮಗೆ ಬೇಕಾದ ಗಂಡನ್ನು ಅಥವಾ ಹೆಣ್ಣನ್ನು ಆಯ್ದುಕೊಳ್ಳುವ ಅವರೊಡನೆ ಲೈಂಗಿಕ ಸಂಬಂಧವನ್ನು ಇಟ್ಟುಕೊಳ್ಳುವ ಸ್ವಾತಂತ್ರ್ಯವಿದೆ. ಎಲ್ಲರಿಗೂ ಇದೆ. ಅದನ್ನು ಪ್ರಶ್ನಿಸುವ ಹಕ್ಕು ಇತರರಿಗೆ ಇಲ್ಲ. ಪರಸ್ಪರ ಒಪ್ಪಿತ ಲೈಂಗಿಕ ಸಂಬಂಧವು ದೇಶದ ಕಾನೂನಿನ ಪ್ರಕಾರವೂ ಅಪರಾಧವಲ್ಲ.
ಕನ್ನಡಕ್ಕೆ ಜ್ಞಾನಪೀಠ ಪ್ರಶಸ್ತಿ ತಂದುಕೊಟ್ಟ ಹಿರಿಯ ಸಾಹಿತಿ ಡಾ. ಶಿವರಾಮ ಕಾರಂತರು ತಮ್ಮ ಅನೇಕ ಕಾದಂಬರಿಗಳ ಮೂಲಕ ಇದಕ್ಕೆ ಸಂಬಂಧಿಸಿದಂತೆ ಒಂದು ತಾತ್ವಿಕತೆಯನ್ನು ನಮಗೆ ರೂಪಿಸಿಕೊಡುತ್ತಾರೆ. ಅದೆಂದರೆ ‘ಲೈಂಗಿಕ ಸುಖ ಎನ್ನುವುದು ಮನುಷ್ಯನ ಬದುಕು ಮನುಷ್ಯನಿಗೆ ನೀಡುವ ಅತ್ಯಂತ ಸುಖದ ಸಂಗತಿಗಳಲ್ಲಿ ಒಂದು. ಅದರಿಂದ ಯಾರೂ ವಂಚಿತರಾಗಬಾರದು. ಪರಸ್ಪರ ಒಪ್ಪಿಕೊಂಡ ಗಂಡು ಹೆಣ್ಣುಗಳ ನಡುವಿನ ಲೈಂಗಿಕ ಸಂಬಂಧದಲ್ಲಿ ಒಂದು ಚೆಲುವು ಇರುತ್ತದೆ. ಇಂತಹ ಒಂದು ಒಳ್ಳೆಯ ಸಂಬಂಧಕ್ಕೆ ಮದುವೆ ಎಂಬುದು ಒಂದು ‘ಪೂರ್ವಾಗತ್ಯ’ವಾಗಬೇಕಿಲ್ಲ. ಗಂಡುಹೆಣ್ಣಿನ ನಡುವಿನ ಒಂದು ಒಳ್ಳೆಯ ಸಂಬಂಧವು ವಿವಾಹದ ಒಳಗೂ ಇರಬಹುದು; ಹೊರಗೂ ಇರಬಹುದು. ಅದೇ ರೀತಿ ಒಂದು ಕೆಟ್ಟ ಸಂಬಂಧವು ವಿವಾಹದ ಒಳಗೂ ಇರಬಹುದು ಹೊರಗೂ ಇರಬಹುದು. ವಿವಾಹದ ಚೌಕಟ್ಟಿನ ಒಳಗಿನ ಒಂದು ಕೆಟ್ಟ ಸಂಬಂಧಕ್ಕಿಂತ ವಿವಾಹದ ಚೌಕಟ್ಟಿನ ಹೊರಗಿನ ಒಳ್ಳೆಯ ಸಂಬಂಧ ಬೆಲೆಯುಳ್ಳದ್ದು.
ಹೀಗಾಗಿ ಯಾರೊಡನೆ ಎಂತಹ ಸಂಬಂಧ ಇಟ್ಟುಕೊಳ್ಳಬೇಕು ಎಂಬುದು ಅವರವರ ವೈಯಕ್ತಿಕ ವಿಚಾರ. ಅದರಲ್ಲಿ ಇತರರು ತಲೆಹಾಕುವುದು ಅವಿವೇಕತನ. ‘ಮದುವೆ ಎಂಬುದು ಏಳೇಳು ಜನ್ಮಗಳ ಸಂಬಂಧ’ ಏನೇ ಆದರೂ ಅದರ ಗೆರೆದಾಟಿ ಬೇರೆಯವರೊಡನೆ ಲೈಂಗಿಕ ಸಂಬಂಧ ಇಟ್ಟುಕೊಳ್ಳಬಾರದು’ ಎನ್ನುವವರು ಹಾಗೆಯೇ ಇರಬಹುದು. ಅದಕ್ಕೂ ಅವರಿಗೆ ಸ್ವಾತಂತ್ರ್ಯವಿದೆ. ಆದರೆ ಮದುವೆಯ ಚೌಕಟ್ಟಿನ ಹೊರಗಿನ ಸಂಬಂಧಗಳನ್ನು ಟೀಕಿಸುವ ಸ್ವಾತಂತ್ರ್ಯ ಹಕ್ಕು ಅವರಿಗಿಲ್ಲ. ಈ ವಿಷಯದಲ್ಲಿ ನಮ್ಮ ಆಲೋಚನಾ ಕ್ರಮ ಸಾಕಷ್ಟು ಬದಲಾಗಬೇಕಿದೆ. ಒಂದು ಗಂಡು ಮತ್ತು ಒಂದು ಹೆಣ್ಣಿನ ನಡುವಿನ ಸಂಬಂಧ ಎಂಥದ್ದೇ ಇರಲಿ ಅದು ಅವರಿಬ್ಬರಿಗೂ ಸಂತೋಷವನ್ನು ಕೊಡುತ್ತಿದ್ದರೆ ಅದನ್ನು ಕಂಡು ನಾವು ಸಂತೋಷ ಪಡಬೇಕೆ ಹೊರತು ಹೊಟ್ಟೆಕಿಚ್ಚು ಪಡಬಾರದು. ಅದನ್ನು ಗೌರವಿಸುವುದನ್ನು ನಾವು ಮೊದಲು ಕಲಿಯಬೇಕು. ಈ ಹಿನ್ನಲೆಯಲ್ಲಿ ನಮ್ಮ ವಿರೋಧವಿರಬೇಕಾದದ್ದು ಅವರಿಬ್ಬರು ಸೇರಿ ವ್ಯಕ್ತಿಯೊಬ್ಬರ ಕೊಲೆಮಾಡಿದ್ದಾರೆ ಎನ್ನಲಾದ ವಿಚಾರಕ್ಕೆ ಹೊರತು ಅವರ ನಡುವಿನ ವೈಯಕ್ತಿಕ ಸಂಬಂಧದ ಬಗ್ಗೆ ಅಲ್ಲ. ಇಂತದ್ದೇ ವಿಚಾರವನ್ನು ಬೇರೆ ರೀತಿಯಲ್ಲಿ ಹೇಳಿರುವ ಸುಹಾಸಿನಿ ಶ್ರೀ Suhasini Shree ಅವರ ಒಂದು ಪೋಸ್ಟನ್ನೂ ಆಸಕ್ತಿ ಇರುವವರು ಗಮನಿಸಬಹುದು.(ರಾಬು (23-06-2024)
(ರಾಜೇಂದ್ರ ಬುರಡಿಕಟ್ಟಿ ಅವರ ಫೇಸ್ ಬುಕ್ ಬರೆಹ)
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ದಿನದ ಸುದ್ದಿ
ನಟ ದರ್ಶನ್ ಪರಪ್ಪನ ಆಗ್ರಹಾರ ಜೈಲು ಪಾಲು
![](https://suddidina.com/wp-content/uploads/2024/06/actor_darshan_suddidina_arrested.jpg)
ಸುದ್ದಿದಿನಡೆಸ್ಕ್:ರೇಣುಕಾ ಸ್ವಾಮಿ ಹತ್ಯೆ ಪ್ರಕರಣದ ಎರಡನೇ ಆರೋಪಿ ದರ್ಶನ್ ಹಾಗೂ ಇತರೆ ಆರೋಪಿಗಳಾದ ವಿನಯ್, ಪ್ರದೋಷ್, ಧನರಾಜ್ಗೆ 13 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ವಿಚಾರಣೆ ನಡೆಸಿದ ಬೆಂಗಳೂರಿನ 24ನೇ ಎಸಿಎಂಎಂ ನ್ಯಾಯಾಲಯ ಜುಲೈ 4 ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಈ ಹಿನ್ನೆಲೆಯಲ್ಲಿ 2ನೇ ಆರೋಪಿ ದರ್ಶನ್ ಸೇರಿದಂತೆ ಎಲ್ಲಾ ಆರೋಪಿಗಳು ಪರಪ್ಪನ ಆಗ್ರಹಾರ ಜೈಲು ಪಾಲಾಗಿದ್ದಾರೆ. ಇದೇ ಪ್ರಕರಣದಲ್ಲಿ ಆರೋಪಿಗಳಾದ ಪವಿತ್ರಾ ಹಾಗೂ ಇತರರಿಗೆ 2 ದಿನಗಳ ಹಿಂದೆಯೇ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ಕ್ರೀಡೆ
ಈ ಕ್ಷಣದ ಪ್ರಮುಖ ಸುದ್ದಿಗಳು
![](https://suddidina.com/wp-content/uploads/2024/06/Kannada_news_suddidina.jpg)
ರಾಜ್ಯದಲ್ಲಿ ಜರುಗಿದ ಈ ಕ್ಷಣದ ಕೆಲವು ಸುದ್ದಿಗಳ ಪ್ರಮುಖಾಂಶಗಳು ( ಕನ್ನಡ ನ್ಯೂಸ್; ಕನ್ನಡ ಸುದ್ದಿ)
- ರಾಜ್ಯಾದ್ಯಂತ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತೆ ವಹಿಸದಿದ್ದರೆ ಕುಡಿಯುವ ನೀರು ಕಲುಷಿತಗೊಳ್ಳುವ ಪ್ರಕರಣ ಹೆಚ್ಚಾಗುವ ಸಾಧ್ಯತೆಯಿದೆ. ಹಾಗಾಗಿ ಗ್ರಾಮೀಣ ನೀರು ಸರಬರಾಜು ಇಲಾಖೆಯ ಇಂಜಿನಿಯರ್ಗಳು ಕಟ್ಟೆಚ್ಚರ ವಹಿಸಬೇಕು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಸೂಚಿಸಿದ್ದಾರೆ.
- ಪೆಟ್ರೋಲ್ ಹಾಗೂ ಡೀಸೆಲ್ ಮಾರಾಟ ತೆರಿಗೆ ಏರಿಕೆ ಹಾಗೂ ಇತರ ಬೆಲೆ ಏರಿಕೆ ನೀತಿ ವಿರೋಧಿಸಿ ಬಿಜೆಪಿ ಬೆಂಗಳೂರಿನಲ್ಲಿಂದು ವಿಧಾನಸೌಧದವರೆಗೆ ಸೈಕಲ್ ಜಾಥಾ ನಡೆಸಿತು. ಪಕ್ಷದ ಕಚೇರಿಯಿಂದ ವಿಧಾನಸೌಧದವರೆಗೆ ಜಾಥಾದಲ್ಲಿ ಹೊರಟ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಸೇರಿದಂತೆ ಹಲವು ನಾಯಕರನ್ನು ಪೊಲೀಸರು ವಶಕ್ಕೆ ಪಡೆದು ನಂತರ ಬಿಡುಗಡೆಗೊಳಿಸಿದರು.
- ಪ್ರತಿಯೊಂದು ವಾಹನಗಳಿಗೆ ಕೇಂದ್ರ ಮೋಟಾರು ವಾಹನ ಕಾಯ್ದೆಯಡಿ ನಮೂದಿಸಿರುವ ಮಾನದಂಡದಂತೆ ಎಲ್ಇಡಿ ದೀಪಗಳನ್ನು ಅಳವಡಿಸದಿದ್ದರೆ ವಾಹನಗಳ ಸವಾರರುಗಳ ಮೇಲೆ ಪ್ರಕರಣ ದಾಖಲಿಸಲಾಗುವುದು ಎಂದು ಸಂಚಾರ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಲೋಕ್ ಕುಮಾರ್ ತಿಳಿಸಿದ್ದಾರೆ.
- ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಶುಭ ಕೋರಿದ್ದಾರೆ. ಪ್ರಧಾನಿ ತಮ್ಮ ಸಾಮಾಜಿಕ ಮಾಧ್ಯಮ ಪೋಸ್ಟ್ನಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು, ದೇಶಕ್ಕಾಗಿ ಅಪ್ರತಿಮ ಸೇವೆಯನ್ನು ಸಲ್ಲಿಸುತ್ತಿದ್ದು, ನಮಗೆಲ್ಲರಿಗೂ ಸ್ಫೂರ್ತಿಯಾಗಿದ್ದಾರೆ ಎಂದು ಹೇಳಿದ್ದಾರೆ.
- ತಮಿಳುನಾಡಿನ ಕಲ್ಲಕುರಿಚಿಯಲ್ಲಿ ನಡೆದ ಕಳ್ಳಬಟ್ಟಿ ಸರಾಯಿ ದುರಂತದಲ್ಲಿ 33 ಮಂದಿ ಮೃತಪಟ್ಟಿದ್ದು, 60ಕ್ಕೂ ಅಧಿಕ ಮಂದಿ ನಾನಾ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಳ್ಳಬಟ್ಟಿ ಸರಾಯಿ ಸೇವಿಸಿ ಅಸ್ವಸ್ಥರಾಗಿದ್ದ ಜನರನ್ನು ಕಲ್ಲಕುರಿಚಿ, ಸೆಲಂ ಮತ್ತು ಪುದುಚೇರಿಯ ಜೆಐಪಿಎಂಇಆರ್ ಆಸ್ಪತ್ರೆಗೆ ದಾಖಲಿಸಲಾಗಿದೆ.
- ಕೇಂದ್ರ ಸರ್ಕಾರದ ಆದೇಶದಂತೆ 2019ರ ಏಪ್ರಿಲ್ಗಿಂತ ಮುಂಚಿತವಾಗಿ ನೋಂದಣಿಯಾಗಿರುವ ವಾಹನಗಳಿಗೆ ಹೈಸೆಕ್ಯೂರಿಟಿ ನೋಂದಣಿ ಫಲಕ ಅಳವಡಿಕೆ ಗಡುವನ್ನು ರಾಜ್ಯ ಸರ್ಕಾರ ಸೆಪ್ಟೆಂಬರ್ 15ರವರೆಗೆ ವಿಸ್ತರಿಸಿ ಆದೇಶ ಹೊರಡಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
-
ಕ್ರೀಡೆ6 days ago
ಈ ಕ್ಷಣದ ಪ್ರಮುಖ ಸುದ್ದಿಗಳು
-
ದಿನದ ಸುದ್ದಿ7 days ago
ಗೃಹಲಕ್ಷ್ಮೀ ಹಣ ನಿಮ್ಮ ಖಾತೆಗೆ ಜಮಾ ಆಗಿಲ್ಲವೇ ? ಇವರನ್ನು ಸಂಪರ್ಕಿಸಿ
-
ದಿನದ ಸುದ್ದಿ6 days ago
ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ; 7ನೇ ವೇತನ ಆಯೋಗದ ಶಿಫಾರಸ್ಸು ಜಾರಿಗೆ ಸಿಎಂಗೆ ಅಧಿಕಾರ
-
ದಿನದ ಸುದ್ದಿ7 days ago
ನಿನ್ನೆ ನಡೆದ NET ಪರೀಕ್ಷೆ ರದ್ದು..!
-
ದಿನದ ಸುದ್ದಿ5 days ago
JOB NEWS | ಜಲ ಜೀವನ್ ಮಿಷನ್ ; ಎಂಐಎಸ್ ಸಮಾಲೋಚಕರ ಹುದ್ದೆಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ6 days ago
ಪರಿಶಿಷ್ಟ ಜಾತಿ ಕಾನೂನು ಪದವೀಧರರಿಗೆ ಶಿಷ್ಯ ವೇತನ ; ಅರ್ಜಿ ಆಹ್ವಾನ
-
ದಿನದ ಸುದ್ದಿ5 days ago
ವಿದ್ಯುತ್ ಮೋಟಾರ್ ರಿವೈಂಡಿಂಗ್ ತರಬೇತಿ ; ಸಂಪರ್ಕಿಸಿ
-
ದಿನದ ಸುದ್ದಿ6 days ago
ದಾವಣಗೆರೆಯಲ್ಲಿ ಹೊಸ ಕೆರೆಗಳ ನಿರ್ಮಾಣ : ಜಿಲ್ಲಾಧಿಕಾರಿ ಡಾ: ವೆಂಕಟೇಶ್ ಎಂ.ವಿ