ಸಿನಿ ಸುದ್ದಿ
ಮೀಡಿಯಾ ಸತ್ಯವನ್ನ ನಿರ್ಧಾರ ಮಾಡುತ್ತಾ..? ಇದು ಹೇಳಿದ್ದೆಲ್ಲಾ ಸತ್ಯವಾ..? : ‘ಜನಗಣಮನ’ ಸಿನೆಮಾಂತರಂಗ..!
- ಜಿ.ಟಿ.ತುಮರಿ
ಈ ಪ್ರಶ್ನೆ ಕೇಳುತ್ತಾ ಹೋದಂತೆ ಒಬ್ಬ ಪತ್ರಕರ್ತನಾಗಿ ತಣ್ಣಗೆ ಬೆವರಿಬಿಟ್ಟೆ. ನನ್ನ ಕಣ್ಣಮುಂದೆ ಹಲವು ಸುದ್ದಿ ಚಾನೆಲ್ ಮತ್ತು ವಿಷ ಕಾರುವ ಅದರ ನಿರೂಪಕರು, ಅವರ ನಿಲುವುಗಳ ಹಿಂದಿರುವ ಅಪವಿತ್ರ ಮೈತ್ರಿಗಳು, ಅದರಲ್ಲೂ ಈಚೆಯ ವರ್ಷದಲ್ಲಿ ಪೇಸ್ಭುಕ್, ಟ್ವಿಟರ್, ವ್ಯಾಟ್ಸಪ್ , ಇನ್ಸ್ಟಾಗ್ರಾಮ್ ಇತ್ಯಾದಿ ಮೂಲಕ ಸುಳ್ಳು ಸುರಿಯುವ ರಾಜಕೀಯ ಸಾಮಾಜಿಕ ಹುನ್ನಾರಗಳು ಥಟ್ಟನೆ ಮನಸಿಗೆ ಬಂದವು.
ಮಲಯಾಳಂ ನಟ ಪೃಥ್ವಿರಾಜ್ ಈಚೆಗೆ ಬಿಡುಗಡೆಯಾದ ಜನಗಣಮನ ಸಿನಿಮಾದಲ್ಲಿ ಡೈಲಾಗ್ ಮಾತ್ರ ಹೇಳುತ್ತಾ ಇರಲಿಲ್ಲ ಆ ಕಂಚಿನ ಕಂಠದಲ್ಲಿ ಸಿನಿಮಾ ನೋಡುತ್ತಾ ಇರುವ ಪ್ರತಿ ಭಾರತೀಯನ ಆತ್ಮಸಾಕ್ಷಿ ತಿವಿಯುತ್ತಾ ಹೋಗುತ್ತಾನೆ. ಆ ಮೂಲಕ ನಮ್ಮ ಸುತ್ತಲ ವರ್ತಮಾನದ ಸತ್ಯಗಳಿಗೆ ಕುರುಡಾದ ಕೆಪ್ಪಾದ ಕಣ್ಣು ಕಿವಿಯ ಜತೆ ಸತ್ತ ಹಾಗೆ ಇರುವ ನಮ್ಮೊಳಗಿನ ನಮ್ಮನ್ನು ಬಡಿದೆಬ್ಬಿಸುತ್ತಾ ಹೋಗುತ್ತದೆ ಜನಗಣಮನ ಸಿನಿಮಾ.
” ಒಂದು ನಾಯಿ ಸತ್ತರೂ ಕೇಳೋ ಈ ದೇಶದಲ್ಲಿ ಆ ನಾಲ್ಕು ಜನ ಬೀದಿನಾಯಿಗಳ ಹಾಗೆ ಸತ್ತರು. ಯಾವ ಆಧಾರನೂ ಬೇಡ, ಯಾವ ನ್ಯಾಯ ಕೋರ್ಟ್ ಬೇಡ ಅವರನ್ನ ಕೊಲ್ಲಬೇಕು. ಇದಕ್ಕೆ ಕಾರಣ ಅವರ ಗುರುತು, 2 ನೇ ಕ್ಲಾಸ್ ಮಗುವಿಗೆ ಬಣ್ಣದ ಮೇಲೆ ಚಂದ ಕುರೂಪ ಅಂತ ಚಿತ್ರ ಬರೆದು ತಾರತಮ್ಯವನ್ನ ತುಂಬುವ ಮತದ ರಾಜಕೀಯ, ಅವರನ್ನು ನೋಡಿದ್ರೆ ಗೊತ್ತಾಗಲ್ಲವಾ ಅನ್ನೋ ಜಾತಿ ರಾಜಕೀಯ ಇಲ್ಲಿ ನಡೀತಾ ಇದೆ”
ಯೂನಿವರ್ಸಿಟಿಯೊಂದರಲ್ಲಿ ಜಾತಿಯ ಕಾರಣದಿಂದ ಹತ್ಯೆಗೆ ಒಳಗಾಗುವ ವಿದ್ಯಾರ್ಥಿನಿಗೆ ನ್ಯಾಯ ನೀಡಲು ಮುಂದಾಗುವ ಮಹಿಳಾ ಪ್ರೊಫೆಸರ್ ಒಬ್ಬರನ್ನು ಅಲ್ಲಿನ ವ್ಯವಸ್ಥೆ ಕೊಂದುಹಾಕಿದ ಪ್ರಕರಣವೊಂದನ್ನು ಸತ್ಯದ ಮರೆಮಾಚಿ ನಕಲಿ ಎನ್ ಕೌಂಟರ್ ಹೇಗೆ ಸೃಷ್ಟಿಯಾಗಲು ಇರುವ ಸಾಮಾಜಿಕ ರಾಜಕೀಯ ಕಾರಣಗಳನ್ನ ಜನಗಣಮನ ಸಿನಿಮಾ ಬಿಚ್ಚಿಡುತ್ತಾ ಹೋಗುತ್ತದೆ. ಘಟನೆಯೊಂದರ ರಾಜಕೀಯ ಲಾಭವನ್ನ ಹೇಗೆ ಮಾಧ್ಯಮಗಳು, ಸಮೂಹ ಮಾಧ್ಯಮಗಳ ಮೂಲಕ ಜನರಲ್ಲಿ ಸುಳ್ಳು ಬಿತ್ತಿ ಪರಿಸ್ಥಿತಿ ಲಾಭ ಪಡೆಯಬಹುದು ಎನ್ನುವುದನ್ನು ಇಡೀ ಸಿನಿಮಾ ಎಳೆ ಎಳೆಯಾಗಿ ವಿವರಿಸುತ್ತದೆ.
ಈ ನಿರ್ದೇಶಕರಿಗೆ ಸೆಲ್ಯೂಟ್.. ಒಂದು ಸಿನಿಮಾ ಕೇವಲ ರಂಜನೆ ನೀಡಿದರೆ ಸಾಕು ಎನ್ನುವ ಸೀಮಿತ ಲೆಕ್ಕಾಚಾರದ ನಡುವೆ ಸಿನಿಮಾವೊಂದು ನಮ್ಮ ಸುತ್ತಲಿನ ಸುಡು ವರ್ತಮಾನಕ್ಕೆ ವಿಮರ್ಶೆ ಬರೆದಿದೆ. ಹೇಗೆ ದೇಶದ ಜನರು ವಿಸ್ಮೃತಿಗೆ ಒಳಗಾಗಿ ಹೌದಪ್ಪ ಆಗಿದ್ದೇವೆ ಎನ್ನುವುದನ್ನ ಪ್ರತಿ ದ್ರಶ್ಯ ಕಟ್ಟಿ ಕೊಡುತ್ತದೆ. ಸಿನಿಮಾದ ಮೊದಲು ಅರ್ಧ ಭಾವನಾತ್ಮಕ ಕಥಾಹಂದರ ಕಟ್ಟಿ ಕೊಟ್ಟರೆ. ದ್ವಿತೀಯಾರ್ಧದಲ್ಲಿ ನಾವು ಈ ಮೊದಲು ಸಿನಿಮಾ ಆರಂಭದಲ್ಲಿ ಕಟ್ಟಿಕೊಂಡ ಭಾವುಕತೆ ಎಷ್ಟು ಕೃತಕ ಮತ್ತು ಸುಳ್ಳು ಎನ್ನುವುದನ್ನ ವಕೀಲನಾದ ಸಿನಿಮಾ ನಾಯಕ ಮೂಲಕ ಪ್ರಖರವಾಗಿ ಹೇಳಿಸುವ ಮೂಲಕ ಮಿಥ್ ಗಳನ್ನು ಸೃಷ್ಟಿ ಮಾಡುವ ಹುನ್ನಾರಗಳನ್ನ ಸಿನಿಮಾ ಏಕ ಕಾಲದಲ್ಲಿ ತೆರೆಯಮೇಲೆ ಮತ್ತು ನಮ್ಮೊಳಗೆ ಅನುಭವಕ್ಕೆ ತರಿಸುತ್ತದೆ.
ಇಂತ ಸಿನಿಮಾ ಮಾಡಲು ಪ್ರತಿಭೆ ಮಾತ್ರ ಇದ್ದರೆ ಸಾಕಾಗದು ಅದಕ್ಕೆ ಒಂದು ಬದ್ಧತೆ ಮತ್ತು ದೈರ್ಯ ಬೇಕು. ಸಾಮಾಜಿಕ ಮತ್ತು ರಾಜಕೀಯ ಸತ್ಯವನ್ನ ಹೇಳುವ ಸಮಾಜಮುಖಿ ಸಿನಿಮಾಗಳು ಹಾಗೆ ನೋಡಿದರೆ ಕನ್ನಡ ಚಿತ್ರರಂಗದಲ್ಲಿ 2000 ಕ್ಕಿಂತ ಮೊದಲು ಸಿನಿಮಾಗಳ ಸರಣಿಗಳೇ ಇವೆ. ಬಹಳ ಮುಖ್ಯವಾಗಿ ರಾಜ್ ಕುಮಾರ್ ಸಿನಿಮಾಗಳನ್ನ ಉಲ್ಲೇಖ ಮಾಡಬಹುದು. ಆದರೆ ಕಳೆದ ಒಂದು ದಶಕವನ್ನ ಗಮನಿಸಿದರೆ ಮಲಯಾಳಂ ಮತ್ತು ತಮಿಳು ಚಿತ್ರರಂಗ ಈ ನಡೆಯಲ್ಲಿ ಮುಂದೆ ಇವೆ. ಹುಡುಗ ಹುಡುಗಿ ಮರ ಸುತ್ತಿಸಿ ಮಚ್ಚು ಲಾಂಗು ಹಿಡಿಸಿ ಎರಡು ಮಾಸ್ ಸಾಂಗ್ ಹಾಕಿ ನಾಯಕನನ್ನು ಮೆರೆಸಲು ಮತ್ತೆರೆಡು ಹಾಡು ಬರೆಸುವುದರಲ್ಲಿ ಕನ್ನಡ ಮತ್ತು ತೆಲುಗು ಚಿತ್ರರಂಗ ಪೈಪೋಟಿ ಇದ್ದಂತೆ ಇವೆ. ಆದರೆ ಮಲಯಾಳಿ ಮತ್ತು ತಮಿಳು ಚಿತ್ರರಂಗ ಇದಕ್ಕೆ ಭಿನ್ನ ಇವೆ. ಅಲ್ಲಿನ ಸಿನಿಮಾದಲ್ಲಿ ಭಿನ್ನ ನೆಲೆಯ ನಿರೂಪಣೆಯ ಕಥೆ, ಕಡಿಮೆ ವೈಭವೀಕರಣ, ಕೌಶಲ್ಯದ ನಟನೆಯಂತ ಹಲವು ಕಾರಣ ಇವೆ. ಕರ್ಣನ್, ಅಸುರ, ಜೈ ಭೀಮ್, ಗ್ರೇಟ್ ಇಂಡಿಯನ್ ಕಿಚನ್ ರೂಮ್, ಕೋಲ್ಡ್ ಕೇಸ್, ಬೀಸ್ಟ್, ಬಿಗಿಲ್, ಇಂದ್ರನ್ ನಟನೆ ಸಿನಿಮಾಗಳು, ಡ್ರೈವಿಂಗ್ ಲೈಸೆನ್ಸ್, ಅಯ್ಯಪ್ಪನ್, ಫಾಸಿಲ್ ಸರಣಿ ಸಿನಿಮಾಗಳು ಹೀಗೆ.
ಜನಗಣಮನ….ಈಚೆಯ ವರ್ಷಗಳಲ್ಲಿ ನಾನು ಕಂಡ ಸಿನಿಮಾಗಳಲ್ಲೇ ಶ್ರೇಷ್ಠ ಸಿನಿಮಾ. ರಾಜಕೀಯ ಪೊಲೀಸ್ ವ್ಯವಸ್ಥೆಯನ್ನ ಹೇಗೆ ದುರ್ಬಳಕೆ ಮಾಡಿಕೊಂಡು ತನ್ನ ಬೇಳೆ ಕಾಳು ಬೇಯಿಸಿ ಬಳಸಿ ಬಿಸಾಡುತ್ತದೆ ಎನ್ನುವುದನ್ನು ಕಥಾವಸ್ತು ಒಳಗೊಳ್ಳುವ ಜತೆ ರಾಜಕೀಯ ಪೊಲೀಸ್ ಮತ್ತು ಮಾಧ್ಯಮ ಮೂರು ಭ್ರಷ್ಟ ಮೈತ್ರಿಯಾದರೆ ಸತ್ಯ ಹೇಗೆ ಸುಳ್ಳಾಗಿ ಸಂವಿಧಾನದ ಆಶಯ ವಿರುದ್ಧ ಅಪವಿತ್ರ ಮೈತ್ರಿಯಾಗಿ ಜನಗಣಮನಕ್ಕೆ ವಿಷ ಉಣಿಸಿ ಸ್ವಾರ್ಥ ಸಾಧಿಸುತ್ತದೆ ಎನ್ನುವುದು ಅತ್ಯುತ್ತಮವಾಗಿ ನಿರೂಪಿಸಿ ದೃಶ್ಯವಾಗಿಸಿದೆ ಸಿನಿಮಾ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ
ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು
ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು
1. ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ ತಲುಪಿದ್ದಾರೆ. ಇಂದು ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, 5 ಪ್ರಮುಖ ಮಸೂದೆಗಳಿಗೆ ಅಂಗೀಕಾರ ನೀಡುವಂತೆ ಮನವಿ ಮಾಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ, ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ, ಕೇಂದ್ರದ ಜಲಶಕ್ತಿ ಖಾತೆ ಸಚಿವರನ್ನು ಕೋರುವುದಾಗಿ, ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
2. ರಾಜ್ಯದ ಗ್ರಾಮ ಪಂಚಾಯ್ತಿಗಳ ಹಂತದಲ್ಲಿ ಜುಲೈ 15ರಿಂದ, ಸಾರ್ವಜನಿಕರ ಆಸ್ತಿಗಳ ಇ-ಖಾತೆ ರೂಪಿಸುವ ಅಭಿಯಾನವನ್ನು ಕಂದಾಯ ಇಲಾಖೆ ಆಯೋಜಿಸಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
3. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ ಸಂಬಂಧಿಸಿ, ಇಲ್ಲಿಯವರೆಗೆ ಹೆಸರು ನೋಂದಾಯಿಸದವರು, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ, ಈ ತಿಂಗಳ 30ರವರೆಗೆ ಮಾಹಿತಿ ನೀಡಲು ಅವಕಾಶವಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.
4. ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆ ಭಾಗಶ: ಭರ್ತಿಯಾಗಿದ್ದು, ಒಳ ಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಣೆಕಟ್ಟೆಯಿಂದ 5 ಸಾವಿರದಿಂದ 15 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ.
5. ಕತಾರ್ನಲ್ಲಿರುವ ಅಲ್ ಉದೈದ್ ಅಮೇರಿಕ ವಾಯುನೆಲೆಯ ಮೇಲೆ ಇರಾನ್ ನಡೆಸಿದ ದಾಳಿಯ ನಂತರ ಜಾಗತಿಕ ತೈಲ ಬೆಲೆಗಳು ಐದು ವರ್ಷಗಳಲ್ಲಿ ನಿನ್ನೆ ಒಂದೇ ದಿನದಲ್ಲಿ ತೀವ್ರ ಕುಸಿತವನ್ನು ದಾಖಲಿಸಿದೆ.
6. ಕರ್ನಾಟಕ, ಮಧ್ಯಪ್ರದೇಶ, ಬಿಹಾರ, ಜಾಖಂಡ್, ಒಡಿಶಾ, ಛತ್ತೀಸ್ಗಢ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಕೊಂಕಣ, ಗೋವಾ, ಮಹಾರಾಷ್ಟ್ರ, ಗುಜರಾತ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನ, ಕೇರಳದ ಕೆಲವು ಸ್ಥಳಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
7. ಅಯೋವಾದಲ್ಲಿ ನಾಳೆ ಆರಂಭವಾಗಲಿರುವ ಯುಎಸ್ ಓಪನ್ 2025 ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಹರಿಹರನ್ ಅಂಶಕರುಣನ್ ಮತ್ತು ರೂಬನ್ ಕುಮಾರ್ ರೆಥಿನಸಬಪತಿ, ಭಾರತವನ್ನು ಮುನ್ನಡೆಸಲಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಚಿತ್ರ ವಿಮರ್ಶೆ | ಸೂಲಗಿತ್ತಿ ತಾಯವ್ವ
~ಡಾ. ಪುಷ್ಪಲತ ಸಿ ಭದ್ರಾವತಿ
ಚಿತ್ರ – ತಾಯವ್ವ ,ನಿರ್ಮಾಣ – ಅಮರ ಫಿಲಂಸ್, ನಿರ್ದೇಶನ- ಸಾತ್ವಿಕ ಪವನ ಕುಮಾರ್,ತಾರಾಗಣ – ಗೀತಪ್ರಿಯ. ಬೇಬಿ ಯಶಿಕಾ, ಮತ್ತಿತರರು
ನಾವು ಎಷ್ಟೇ ಆಧುನಿಕತೆ, ಸಮಾನತೆ, ಸ್ವಾತಂತ್ರ್ಯ ಎಂದು ಹೆಣ್ಣು ಮಾತನಾಡಿದರೂ, ಈ ಸಮಾಜದ ಸಂಕೋಲೆಯಲ್ಲಿ ಇವತ್ತಿಗೂ ನಾವು ಕಂಡು ಕಾಣದಂತೆ ಬಂಧಿಯಾಗಿದ್ದೇವೆ. ಈ ಪುರುಷ ನಿರ್ಮಿತ ಸಮಾಜದಲ್ಲಿ ಹೆಣ್ಣನ್ನು ತನ್ನ ಸಂಕೂಲೆಯಲ್ಲಿಯೇ ಬಂಧಿಸಿಟ್ಟಿರುವನು. ಅದೊಂದು ಸ್ವೇಚ್ಛಾಚಾರದ, ಸಮಾನತೆಯ, ಹೆಸರಿನ ಮುಖವಾಡ ತೊಟ್ಟಿದೆ ಅಷ್ಟೇ. ಈ ಮುಖವಾಡಗಳ ನಡುವಿನ ಪುರುಷ ನಿಯಂತ್ರಿತ ಬದುಕಿನಲ್ಲಿ ಹೋರಾಟವೆಂಬುದು ಹೆಣ್ಣಿಗೆ ನಿತ್ಯವಾಗಿದೆ.
ಸ್ತ್ರೀ ಅವಳು ಪ್ರಕೃತಿ, ಪ್ರಕೃತಿ ಇಲ್ಲವಾದರೆ ಇನ್ನೂ ನಾವೆಲ್ಲ ತೃಣಮೂಲ. ಇಂತಹ ಸತ್ಯ ಅರಿವಿದ್ದರೂ ನಾವು ಪದೇ ಪದೇ ಈ ಪ್ರಕೃತಿಯನ್ನು ವಿನಾಶದಂಚಿಗೆ ತೆಗೆದುಕೊಂಡು ಹೋಗುತ್ತಿದ್ದೇವೆ. ಹಾಗೆಯೇ ಪ್ರಕೃತಿಯ ಇನ್ನೊಂದು ರೂಪವಾದ ‘ಹೆಣ್ಣನ್ನು’ ನಾವು ವಿನಾಶದಂಚಿಗೆ ತೆಗೆದುಕೊಂಡು ಹೋಗುತ್ತಿದ್ದೇವೆ. ಇದರ ಪರಿಣಾಮವಾಗಿಯೇ ಹೆಣ್ಣಿನ ಸರಾಸರಿ ಗಂಡಿಗಿಂತ ಗಣನೀಯವಾಗಿ ಕಡಿಮೆಯಾಗುತ್ತಿರುವುದು. ” ಹೆಣ್ಣು ಭ್ರೂಣಹತ್ಯೆ” ಎಂಬುದು ಸಮಾಜದ ಅದು ಹಾಗೂ ವಿಶ್ವಕ್ಕೂ ಮಾರಕ. ಇಂತಹ ಒಂದು ವಿಷಯ ವಸ್ತುವನ್ನು ಕೇಂದ್ರಿಕರಿಸಿಕೊಂಡು ಸಮಾಜಕ್ಕೆ ಜಾಗೃತಿ ಮೂಡಿಸುವ ಸಲುವಾಗಿ, ಎಚ್ಚರಿಕೆಯ ಕರೆಘಂಟೆಯೆಂಬಂತೆ “ತಾಯವ್ವ” ಸಿನಿಮಾ ಕರ್ನಾಟಕದಾದ್ಯಂತ ಬಿಡುಗಡೆಗೊಂಡಿದೆ.
ಕಳೆದ ವರ್ಷಗಳಲ್ಲಿಯೇ ಬೆಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಯ ಹಿಂದೆ ಸುಮಾರು 500ಕ್ಕೂ ಹೆಚ್ಚಿನ ಭ್ರೂಣಗಳು ಸಿಕ್ಕವು. ವಿಚಾರ ಪ್ರಚಾರವೂ ಆಯಿತು. ಆದರೆ ಕೇವಲ ಸುದ್ದಿಯಾಗಿ ಕಣ್ಮರೆಯಾಗುತ್ತವೆ. ಇಂದಿನ ಸಮಾಜಕ್ಕೆ ಇಂತಹ ಸೂಕ್ಷ್ಮ ವಿಷಯಗಳನ್ನು ಮುನ್ನೆಲೆಗೆ ತಂದು ಯುವಕರಿಗೆ ಹಾಗೂ ಸಮಾಜಕ್ಕೆ ಜಾಗೃತಿಮೂಡಿಸಬೇಕಾಗಿದೆ. ಇಂತಹ ಕಾರ್ಯದಲ್ಲಿ
” ತಾಯವ್ವ” ಸಿನಿಮಾ ಗೆದ್ದಿದೆ ಎಂದರೆ ಅತಿಶಯೋಕ್ತಿಯೆನಲ್ಲಾ. ಈ ಗೆಲುವು ಚಿತ್ರದ ನಾಯಕಿ ” ಗೀತ ಪ್ರಿಯಾ” ಅವರ ಶ್ರಮ, ಹಾಗೂ ಅವರ ಪೂರ್ಣ ಪ್ರಮಾಣದ ಪಾತ್ರದ ತಲ್ಲೀನತೆಯು ಸಿನಿಮಾದುದ್ದಕ್ಕೂ ಕಾಣುತ್ತದೆ.
ಮೂಲತಃ ” ಗೀತ ಪ್ರಿಯಾ” ಅವರು ಕಳೆದ 35 ವರ್ಷಗಳ ಅಧಿಕವಾಗಿ ತಮ್ಮನ್ನು ತಾವು ಶೈಕ್ಷಣಿಕ ರಂಗದಲ್ಲಿ ತೊಡಗಿಸಿಕೊಂಡು ವಿಧ್ಯಾಸಂಸ್ಥೆಯೊಂದನ್ನು ಕಟ್ಟಿ ಬೆಳೆಸಿದ್ದಾರೆ. ಇವರ ತಾಯಿ ನೆರಳಲ್ಲಿ ಹುಟ್ಟಿದ ಮಗುವೇ ” ಕೃಪಾನಿಧಿ ಗ್ರೂಪ್ ಸಂಸ್ಥೆ”. ಸದಾ ಮಿಡಿವ ತಾಯಿ ಹೃದಯ ಇವರದ್ದಾಗಿದ್ದರಿಂದಲೇ ತಮ್ಮ ಪ್ರಥಮ ಚಿತ್ರದಲ್ಲಿಯೇ ಗಂಭೀರ ವಿಷಯ ವಸ್ತುವಿನ ಆಯ್ಕೆ, ಗಂಭೀರವಾದ ಅಭಿನಯ, ಸಮಾಜಮುಖಿ ಕಾಳಜಿಯಿರುವುದರಿಂದಲೇ ಇದರೆಲ್ಲರ ಫಲಿತಗಳೆಂಬಂತೆೇ “ತಾಯವ್ವ” ರೂಪುಗೊಂಡಿದೆ.
ಸಿನಿಮಾ ಕಲಾಪ್ರಿಯರಿಗೆ ಒಂದೊಳ್ಳೆ ಸುಗ್ಗಿ, ಕುಟುಂಬದ ಸಮೇತ ಸಿನಿಮಾ ವೀಕ್ಷಿಸಬಹುದು. ಗೀತ ಪ್ರಿಯಾ ಅವರು ಈ ಸಿನಿಮಾದಲ್ಲಿ ಅಭಿನಯಿಸಿ, ಹಾಗೂ ಸಂಗೀತಕ್ಕೆ ತಮ್ಮ ಧ್ವನಿಯನ್ನು ನೀಡಿರುವುದು ಇನ್ನೂ ವಿಶೇಷ. ಬೇಬಿ ಯಶೀಕಾ ಮುಂದಿನ ಭವಿಷ್ಯ ಇನ್ನಷ್ಟು ಸಿನಿಮಾರಂಗದಲ್ಲಿ ಉಜ್ವಲವಾಗಿರಲಿ. ನಿರ್ದೇಶಕರ ಪ್ರಯತ್ನ. ಚಿತ್ರಕಥೆಯ ಹಿಡಿತ ಹಾಗೂ ಎಲ್ಲೂ ಸಡಿಲವಿರದೇ ಸಾಗಿರುವುದು ನಮ್ಮ ಕನ್ನಡ ಚಿತ್ರರಂಗಕ್ಕೆ ಪ್ರಸ್ತುತ ಕೊಡುಗೆಯಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮತ್ತೆ ತಾಯಿಯಾಗಬೇಕು : ನಟಿ ಸಮಂತಾ
ಸುದ್ದಿದಿನಡೆಸ್ಕ್:ಇತ್ತೀಚೆಗೆ ನಟಿ ಸಮಂತಾ ಅವರ ಕಮೆಂಟ್ಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಆ ಹೇಳಿಕೆಗಳ ಮೇಲೆ ನಾನಾ ರೀತಿಯ ಅನುಮಾನಗಳೂ ವ್ಯಕ್ತವಾಗಿವೆ.
ಟಾಲಿವುಡ್ ಸ್ಟಾರ್ ಹೀರೋಯಿನ್ ಸಮಂತಾ ಬಗ್ಗೆ ವಿಶೇಷ ಪರಿಚಯ ಅಗತ್ಯವಿಲ್ಲ. ಸದ್ಯ ಸಮಂತಾ ಸತತ ಚಿತ್ರಗಳಲ್ಲಿ ಬ್ಯುಸಿಯಾಗಿರುವುದು ಗೊತ್ತೇ ಇದೆ. ಇತ್ತೀಚಿಗೆ ಸಮಂತಾ ಅವರ ವೆಬ್ ಸಿರೀಸ್ ವಿಚಾರಕ್ಕೆ ಸುದ್ದಿಯಾಗಿದ್ದರು. ನಟಿಯ ಇತ್ತೀಚಿನ ವೆಬ್ ಸಿರೀಸ್ ಸಿಟಾಡೆಲ್ ಸಖತ್ ಸುದ್ದಿಯಾಗಿದೆ. ಸದ್ಯ ಈ ವೆಬ್ ಸೀರೀಸ್ ಒಟಿಟಿಯಲ್ಲಿ ಸ್ಟ್ರೀಮ್ ಆಗುತ್ತಿದೆ ಎಂದು ತಿಳಿದುಬಂದಿದೆ. ಈ ವೆಬ್ ಸರಣಿಯ ಪ್ರಚಾರದ ವೇಳೆ ಮಾಡಿದ ಕಾಮೆಂಟ್ಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.
ಇದರ ಭಾಗವಾಗಿ ಸಮಂತಾ ರಾಜ್ ಮತ್ತು ಡಿಕೆ ಸಂದರ್ಶನವೊಂದರಲ್ಲಿ ಹೇಳಿದ್ದು ದಿ ಫ್ಯಾಮಿಲಿ ಮ್ಯಾನ್ 2 ಚಿತ್ರೀಕರಣದ ವೇಳೆ ನಾನು ಹಲವು ಭಾವನೆಗಳಿಗೆ ಒಳಗಾಗಿದ್ದೆ ಎಂದು ಸಮಂತಾ ಹೇಳಿದ್ದಾರೆ. ಅಲ್ಲದೇ ಅವರ ನಿರ್ದೇಶನದಲ್ಲಿ ನಟಿಸುವುದು ಕಷ್ಟ ಎಂದಿದ್ದಾರೆ. ನಂತರ ಅದೇ ಸಂದರ್ಶನದಲ್ಲಿ ನಟಿ ಬೇರೆ ವಿಚಾರವನ್ನೂ ಹೇಳಿದ್ದಾರೆ.
ಹನಿ ಬನ್ನಿ ವೆಬ್ ಸರಣಿಯಲ್ಲಿ ತಾಯಿ ಪಾತ್ರದ ಬಗ್ಗೆ ಮಾತನಾಡುತ್ತಾ, ಅವರು ಸಂವೇದನಾಶೀಲ ಕಾಮೆಂಟ್ಗಳನ್ನು ಮಾಡಿದ್ದಾರೆ. ನನಗೆ ತಾಯಿಯಾಗುವ ಕನಸು ಇದೆ. ನಾನು ತಾಯಿಯಾಗಲು ಇಷ್ಟಪಡುತ್ತೇನೆ ಎಂದು ಹೇಳಿದ್ದಾರೆ.
ಇದಕ್ಕಾಗಿ ತಡವಾಗಿದೆ ಎಂದು ಅವರು ಭಾವಿಸುವುದಿಲ್ಲ. ನಾನು ಜೀವನದಲ್ಲಿ ತುಂಬಾ ಖುಷಿಯಾಗಿದ್ದೇನೆ ಎಂದು ಸಮಂತಾ ಹೇಳಿದ ಮಾತುಗಳು ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಆದರೆ ಸಮಂತಾ ಈ ಕಾಮೆಂಟ್ ಮಾಡಿದ ನಂತರ ಮತ್ತೊಮ್ಮೆ ಅವರ ಎರಡನೇ ಮದುವೆಯ ಸುದ್ದಿಗೆ ವೇಗ ಸಿಕ್ಕಿದೆ. ಈ ಹಿಂದೆ ರಾಜ್ ಹಾಗೂ ಡಿಕೆಶಿಯಲ್ಲಿ ರಾಜ್ ನನ್ನು ಪ್ರೀತಿಸುತ್ತಿದ್ದು, ಸದ್ಯದಲ್ಲೇ ಮದುವೆಯಾಗಲಿದ್ದಾರೆ ಎಂದು ಹೇಳಲಾಗಿತ್ತು.
ಆದರೆ ಇದೀಗ ಸಮಂತಾ ಎರಡನೇ ಮದುವೆಯ ಸುದ್ದಿ ಮುನ್ನೆಲೆಗೆ ಬಂದಿದ್ದು, ಮತ್ತೆ ತಾಯಿಯಾಗಬೇಕು ಎಂದು ಕಾಮೆಂಟ್ ಮಾಡಿದ್ದಾರೆ. ಇದರೊಂದಿಗೆ ರಾಜ್ ಎರಡನೇ ಮದುವೆಯಾಗಲಿದ್ದಾರೆ ಎಂಬ ಸುದ್ದಿಗೆ ವೇಗ ಸಿಕ್ಕಿದೆ. ಈ ಸುದ್ದಿಯಲ್ಲಿನ ಸತ್ಯಗಳ ಹೊರತಾಗಿ, ಈ ಸುದ್ದಿ ಸಾಮಾಜಿಕ ಮಾಧ್ಯಮದಲ್ಲಿ ಹಾಟ್ ಟಾಪಿಕ್ ಆಗಿದೆ. ಈ ಸುದ್ದಿಗೆ ಸಮಂತಾ ಹೇಗೆ ಪ್ರತಿಕ್ರಿಯಿಸುತ್ತಾರೆ ಎಂಬುದನ್ನು ನೋಡೋಣ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ4 days agoದಾವಣಗೆರೆ | ಜಿಲ್ಲಾ ಪಂಚಾಯಿತಿ ಸಿ.ಇ.ಒ ಗಿತ್ತೆ ಮಾಧವ್ ವಿಠ್ಠಲ್ ರಾವ್ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ5 days agoದುಡಿಯುವ ವರ್ಗಕ್ಕೆ ಸ್ಥಳದಲ್ಲೇ ಉಚಿತ ಚಿಕಿತ್ಸೆ : ಶಾಸಕ ಕೆ.ಎಸ್.ಬಸವಂತಪ್ಪ ‘ಸಂಚಾರಿ ಆರೋಗ್ಯ ಘಟಕ’ಕ್ಕೆ ಚಾಲನೆ
-
ದಿನದ ಸುದ್ದಿ5 days agoಜಿಎಂ ವಿಶ್ವವಿದ್ಯಾಲಯ ರಂಗೋತ್ಸವ -2025 | ವಿದ್ಯಾರ್ಥಿಗಳ ಪ್ರತಿಭೆ ಅನಾವರಣ : ಸ್ಪರ್ಧೆಯಲ್ಲಿ ರಂಗ ಪ್ರೇಮ, ನಟನಾ ಚತುರತೆ ಬೆರಗು
-
ದಿನದ ಸುದ್ದಿ5 days agoಉಳಿಕೆ ಸರ್ಕಾರಿ ನಿವೇಶನ ಇಲಾಖೆಗಳ ವಿವಿಧ ಉದ್ದೇಶಿತ ಕಟ್ಟಡಗಳಿಗೆ ಹಂಚಿಕೆ: ಡಿಸಿ ಜಿ.ಎಂ.ಗಂಗಾಧರಸ್ವಾಮಿ
-
ದಿನದ ಸುದ್ದಿ5 days agoಸಹಾಯಧನಕ್ಕಾಗಿ ಅರ್ಜಿ ಆಹ್ವಾನ
-
ದಿನದ ಸುದ್ದಿ3 days agoದಾವಣಗೆರೆ | ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ1 day agoಮಾನವ ಸಂಪನ್ಮೂಲ ನೀತಿ ಗುತ್ತಿಗೆ ನೌಕರರಿಗೆ ಮಾರಕ | ನೀತಿ ರದ್ದುಗೊಳಿಸಲು ಶಾಸಕ ಜೆ.ಎಸ್.ಬಸವಂತಪ್ಪಗೆ ಮನವಿ
-
ದಿನದ ಸುದ್ದಿ1 day agoದಾವಣಗೆರೆ | ಕನ್ನಡ ಚಳವಳಿ ಸಮಿತಿಯಿಂದ ಇಮ್ಮಡಿ ಪುಲಕೇಶಿ ಜಯಂತಿ ಆಚರಣೆ

