Connect with us

ಸಿನಿ ಸುದ್ದಿ

“ಚಾರ್ಲಿ” ಗೆದ್ದಳು ; ಸಂತಸ ತಂದಳು..!

Published

on

ಸುದ್ದಿದಿನ ಡೆಸ್ಕ್ : ಮನುಷ್ಯ ಹಾಗೂ ಶ್ವಾನದ ನಡುವಿನ ಉತ್ತಮ ಸಂಬಂಧವನ್ನು ಮನಮುಟ್ಟುವಂತೆ ನಿರ್ದೇಶಕ ಕಿರಣ್ ರಾಜ್ “777 ಚಾರ್ಲಿ” ಚಿತ್ರದಲ್ಲಿ ತೋರಿಸಿದ್ದಾರೆ. ಇಡೀ ವಿಶ್ವದಾದ್ಯಂತ ಈ ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ರಕ್ಷಿತ ಶೆಟ್ಟಿ ಅವರ ಅಮೋಘ ಅಭಿನಯಕ್ಕೆ ಅಭಿಮಾನಿಗಳು ಫಿದಾ ಆಗಿದ್ದಾರೆ. “ಚಾರ್ಲಿ” ನಟನೆಗೂ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ಚಿತ್ರ ಯಶಸ್ವಿ 25 ದಿನ ಪೂರೈಸಿ ಮುನ್ನಡೆಯುತ್ತಿದೆ. ಈ ಸಂತಸವನ್ನು ಚಿತ್ರತಂಡ ಹಂಚಿಕೊಂಡಿದ್ದು ಹೀಗೆ.

ಈವರೆಗೂ ಒಟ್ಟಾರೆ 150 ಕೋಟಿ ಗ್ರಾಸ್​ ಗಳಿಕೆಯಾಗಿದೆ. ಅದರಲ್ಲಿ 90ರಿಂದ 100 ಕೋಟಿವರೆಗೂ ಲಾಭ ಬಂದಿದೆ. ಅದರಲ್ಲಿ ಶೇ. 5ರಷ್ಟು ಚಾರ್ಲಿಗೆ ಸಲ್ಲುವಂತದ್ದು. ಅವಳ ಹೆಸರಿನಲ್ಲಿ ಭಾರತದಾದ್ಯಂತ ಶ್ವಾನಗಳ ಇಂಬ್ರಿಡಿಂಗ್​ ವಿರುದ್ಧ ಹೋರಾಡುತ್ತಿರುವ ಹಾಗೂ ಅದನ್ನು ದತ್ತು ಪಡೆಯುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿರುವ ಎನ್​ಜಿಓಗಳಿಗೆ ಸಹಾಯ ಮಾಡುವ ಕುರಿತು ಯೋಚನೆ ಮಾಡಿದ್ದೇವೆ. ಶೇ.5ರಷ್ಟು ಎಂದರೆ ಐದು ಕೋಟಿ ರೂಪಾಯಿಗಳಷ್ಟಾಗುತ್ತದೆ.

ಅದನ್ನು ನೇರವಾಗಿ ಹಂಚಿಕೆ ಮಾಡಬೇಕಾ? ಅಥವಾ ಚಾರ್ಲಿ ಹೆಸರಿನಲ್ಲಿ ಒಂದು ಅಕೌಂಟ್​ ಮಾಡಿ ದುಡ್ಡಿಟ್ಟು, ಪ್ರತಿ ತಿಂಗಳು ಸಿಗುವ ಬಡ್ಡಿಯಲ್ಲಿ ಸಹಾಯ ಮಾಡಬೇಕಾ? ಎಂಬ ವಿಷಯವಾಗಿ ಇನ್ನೂ ತೀರ್ಮಾನವಾಗಿಲ್ಲ. ಜೊತೆಗೆ ಕಲಾವಿದರು ಮತ್ತು ತಂತ್ರಜ್ಞರಿಗೆ ಶೇ. 10ರಷ್ಟು ಲಾಭದಲ್ಲಿ ಹಂಚಿಕೆ ಮಾಡಲಿದ್ದೇವೆ. ಆ ಮೊತ್ತವೇ 10 ಕೋಟಿ ರೂಪಾಯಿಗಳಷ್ಟಾಗುತ್ತದೆ. ಈ ಪಟ್ಟಿಯಲ್ಲಿ ನಾನಿಲ್ಲ. ಏಕೆಂದರೆ, ನಾನು ಒಬ್ಬ ನಟ ಮತ್ತು ನಿರ್ಮಾಪಕನಾಗಿರುವುದರಿಂದ, ನನ್ನನ್ನು ಬಿಟ್ಟು ಮಿಕ್ಕವರಿಗೆ ಹಂಚಲಿದ್ದೇವೆ ಎಂದರು ರಕ್ಷಿತ್ ಶೆಟ್ಟಿ.

25 ದಿನ ಕರ್ನಾಟಕದಲ್ಲಿ 100 ಪ್ಲಸ್​ ಸೆಂಟರ್​ಗಳಲ್ಲಿ ಚಿತ್ರ ಪ್ರದರ್ಶನವಾಗುತ್ತಿದೆ. ಬೇರೆ ದೇಶಗಳಲ್ಲಿ ಚಿತ್ರಗಳ ಬಗ್ಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಚಿತ್ರ ಬಿಡುಗಡೆಯಾಗಿ 15 ದಿನಗಳ ನಂತರ ಚಿತ್ರತಂಡದವರು ದುಬೈಗೆ ಹೋಗಿ ಬಂದಿದ್ದಾರೆ. ಮಾರಿಷಸ್​, ಜಪಾನ್​ ಮುಂತಾದ ಕಡೆ ಸಹ ಚಿತ್ರ ಪ್ರದರ್ಶನವಾಗುತ್ತಿದೆ. ಅಲ್ಲಿ ಪ್ರದರ್ಶನಗಳ ಪ್ರಮಾಣ ಕಡಿಮೆ ಇರಬಹುದು.

ಆದರೆ, ಕನ್ನಡಿಗರು ಎಲ್ಲೆಲ್ಲಿ ಇದ್ದಾರೋ, ಅಲ್ಲೆಲ್ಲ ಪ್ರದರ್ಶನವಾಗುತ್ತಿದೆ. ಸಾಮಾನ್ಯವಾಗಿ ಚಿತ್ರಕ್ಕೆ ಜನ ಬರುತ್ತಿಲ್ಲ ಎಂದು ಆರೋಪ ಮಾಡುತ್ತಾರೆ. ಆದರೆ, ಚಿತ್ರವನ್ನು ಚೆನ್ನಾಗಿ ಪ್ರಮೋಟ್​ ಮಾಡಿದರೆ, ಖಂಡಿತಾ ಜನ ಬರುತ್ತಾರೆ ಎಂದು “777 ಚಾರ್ಲಿ” ತೋರಿಸಿಕೊಟ್ಟಿದೆ. ಚಿತ್ರಕ್ಕೆ ಈಗಲೂ ಜನ ಬರುತ್ತಿದ್ದಾರೆ. ಭಾನುವಾರ 1 ಕೋಟಿಗೂ ಹೆಚ್ಚು ಗಳಿಕೆಯಾಗಿದೆ. ಚಿತ್ರ ಬಿಡುಗಡೆಯಾಗಿ 25 ದಿನಗಳ ನಂತರವೂ ಒಳ್ಳೆಯ ಪ್ರದರ್ಶನ ಕಾಣುತ್ತಿದೆ. ಅದರಲ್ಲೂ ಮಲ್ಟಿಪ್ಲೆಕ್ಸ್​ಗಳಲ್ಲಿ ಬೇಡಿಕೆ ಇದೆ ಎಂದರು ವಿತರಕ ಕಾರ್ತಿಕ್ ಗೌಡ.

ಸಾಮಾನ್ಯವಾಗಿ ನಾಯಕಿ ಅಂದರೆ ಪ್ರೇಮಕಥೆ ಇರುತ್ತದೆ. ಇಲ್ಲಿ ಹಾಗಿಲ್ಲ. ಆದರೂ ನನ್ನ ಪಾತ್ರಕ್ಕೆ ಒಳ್ಳೆಯ ಪ್ರತಿಕ್ರಿಯೆ ಸಿಗುತ್ತಿದೆ. ಚಿತ್ರ ಈಗಲೂ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ ಎನ್ನುವುದೇ ಸಂತೋಷ. ಅವಕಾಶ ಕೊಟ್ಟ ಎಲ್ಲರಿಗೂ ನಾಯಕಿ ಸಂಗೀತ ಶೃಂಗೇರಿ ಧನ್ಯವಾದಗಳನ್ನು ಸಲ್ಲಿಸಿದರು.

ಸ್ನೇಹಿತರು ಮತ್ತು ಸಂಬಂಧಿಕರು ಚಿತ್ರ ನೋಡಿ ಖುಷಿಪಟ್ಟರು. ನಾವು 65 ಜನ ಒಟ್ಟಿಗೆ ಸಿನಿಪೊಲಿಸ್​ಗೆ ಹೋಗಿ ಚಿತ್ರ ನೋಡಿ ಕೇಕ್​ ಕಟ್​ ಮಾಡುವ ಮೂಲಕ ಸಂಭ್ರಮ ಆಚರಿಸಿದ್ದೇವೆ. ನಾನು ಕ್ಲಾಸ್​ಗೆ ಹೋಗುವಾಗ ಚಾರ್ಲಿ ಹುಡುಗಿ ಅಂತ ಎಲ್ಲ ಹೇಳುತ್ತಾರೆ. ಸೆಲ್ಫಿ ತೆಗೆಸಿಕೊಂಡು ಆಲ್​ ದಿ ಬೆಸ್ಟ್​ ಹೇಳುತ್ತಾರೆ ಎಂದು ಪುಟಾಣಿ ಶಾರ್ವರಿ ತಮ್ಮ ಅನುಭವ ಹಂಚಿಕೊಂಡರು.

ಸೋಲು ಹಲವು ಪಾಠ ಕಲಿಸುತ್ತದೆ. ಗೆಲುವು ಹಲವು ದಾರಿಗಳನ್ನು ತೋರಿಸುತ್ತವೆ. ಸಹಾಯಕ ನಿರ್ದೇಶಕನಾಗಿ ಮೂರು ಸಿನಿಮಾಗಳನ್ನು ಮಾಡಿದ್ದೇನೆ. ಸೋಲು, ಗೆಲುವು ಎರಡನ್ನು ನೋಡಿದ್ದೀನಿ. ಸೋಲು ನೋಡಿರುವುದರಿಂದ ಗೆಲುವಿನ ಮಹತ್ವ ಗೊತ್ತಾಯಿತು. ಈ ಜರ್ನಿಯಲ್ಲಿ ಹಲವರಿದ್ದಾರೆ. ಒಂದೇ ಮನಸ್ಥಿತಿಯವರಾದ್ದರಿಂದ ಇಂಥದ್ದೊಂದು ಪ್ರಯತ್ನ ಮಾಡುವುದಕ್ಕೆ ಸಾಧ್ಯವಾಯಿತು.

ಚಿತ್ರ 25 ದಿನ ಪೂರೈಸಿದೆ. ಮುಂದೆ ಸಹ ಇದೇ ಪ್ರಾಮಾಣಿಕ ಪ್ರಯತ್ನ ಮಾಡಿದರೆ ಲಾಭ ಕೊಡುತ್ತದೆ ಎಂಬ ನಂಬಿಕೆ ಇದೆ. ಈ ಗೆಲುವಿನಿಂದ ಇನ್ನಷ್ಟು ಪ್ರಯತ್ನಗಳನ್ನು ಮಾಡುವುದಕ್ಕೆ ಸ್ಫೂರ್ತಿ ಸಿಕ್ಕಿದೆ. ಕಿರಿಕ್​ ಪಾರ್ಟಿ ಮಾಡಿದಾಗ ಹಣದ ಅಭಾವವಿತ್ತು. ಆಗ ರಕ್ಷಿತ್ ಎಲ್ಲರನ್ನೂ ಕರೆದು, ಚಿತ್ರ ಚೆನ್ನಾಗಿ ಹೋದರೆ ಇನ್ನಷ್ಟು ಕೊಡುವುದಾಗಿ ಹೇಳಿದ್ದರು. ಅದರಂತೆ ಚಿತ್ರ ಗೆದ್ದ ಮೇಲೆ ಹಲವರಿಗೆ ಅವರ ಪಾಲು ಕೊಟ್ಟರು. ಇದನ್ನು ನೋಡಿ ಕೆಲವರು ಕಣ್ಣೀರು ಹಾಕಿದ್ದು ನೆನಪಿದೆ. ಈಗಲೂ ರಕ್ಷಿತ್​ ಅದನ್ನೇ ಮುಂದುವರೆಸಿದ್ದಾರೆ ಎಂದರು ನಿರ್ದೇಶಕ ಕಿರಣ್ ರಾಜ್.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ನಟ ದರ್ಶನ್‌ಗೆ ರಾಜಾತಿಥ್ಯ ; ಏಳು ಮಂದಿ ಜೈಲು ಅಧಿಕಾರಿ, ಸಿಬ್ಬಂದಿ ಅಮಾನತು

Published

on

ಸುದ್ದಿದಿನಡೆಸ್ಕ್:ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್‌ಗೆ ರಾಜಾತಿಥ್ಯ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಏಳುಮಂದಿ ಜೈಲು ಅಧಿಕಾರಿ, ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದರು.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೈಲರ್ ಶರಣಬಸವ ಅಮೀನಗಢ, ಸಹಾಯಕ ಜೈಲರ್ ಪುಟ್ಟಸ್ವಾಮಿ, ಜೈಲ್ ಹೆಡ್ ವಾರ್ಡರ್‌ಗಳಾದ ವೆಂಕಪ್ಪ, ಸಂಪತ್, ವಾರ್ಡರ್‌ಗಳಾದ ಬಸಪ್ಪ, ಪ್ರಭು, ಶ್ರೀಕಾಂತ್ ಅವರನ್ನು ಅಮಾನತು ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ಘಟನೆ ಹಿನ್ನೆಲೆಯಲ್ಲಿ ಹಿರಿಯ ಅಧಿಕಾರಿಗಳ ವಿರುದ್ಧವೂ ಸಹ ತನಿಖೆ ನಡೆಯುತ್ತಿದೆ. ಮುಂದೆ ಇಂತಹ ಘಟನೆಗಳು ನಡೆಯದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ತಿಳಿಸಿದರು.

ಇನ್ನೊಂದೆಡೆ, ಜೈಲಿನಲ್ಲಿ ನಟ ದರ್ಶನ್ ಹಾಗೂ ಮತ್ತಿತರರಿಗೆ ರಾಜಾತಿಥ್ಯ ಒದಗಿಸುತ್ತಿರುವ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ದರ್ಶನ್ ಮತ್ತು ಇತರರನ್ನು ಕೂಡಲೇ ಬೇರೆ ಬೇರೆ ಕಾರಾಗೃಹಗಳಿಗೆ ಸ್ಥಳಾಂತರ ಮಾಡುವಂತೆ ನಿರ್ದೇಶಿಸಿದ್ದಾರೆ. ಅಲ್ಲದೆ, ಪ್ರಕರಣದ ಬಗ್ಗೆ ಸಂಪೂರ್ಣ ವರದಿ ನೀಡುವಂತೆ ಅವರು ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಸೂಚಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕನ್ನಡದ ಖ್ಯಾತ ನಿರೂಪಕಿ ಅಪರ್ಣಾ ಇನ್ನಿಲ್ಲ..!

Published

on

ಸುದ್ದಿದಿನ,ಬೆಂಗಳೂರು: ನಟಿ ಹಾಗೂ ಖ್ಯಾತ ನಿರೂಪಕಿ ಅಪರ್ಣ (57) ನಿಧನರಾಗಿದ್ದಾರೆ.ಸ್ಪಷ್ಟ ಕನ್ನಡದ ಮೂಲಕ ನಿರೂಪಣೆ ಮಾಡಿ ಕನ್ನಡಿಗರ ಮನೆಗದ್ದ ಅವರು ಕ್ಯಾನ್ಸರ್‌ನಿಂದ ಬಳಲುತ್ತಿದ್ದರು. ಅಪರ್ಣ ಅವರು ಇಂದು ಸಂಜೆ ಅಪರ್ಣ ಬನಶಂಕರಿ ಸೆಕೆಂಡ್ ಸ್ಟೇಜ್‌ನಲ್ಲಿರುವ ಅವರ ನಿವಾಸದಲ್ಲಿ ಕೊನೆಯುಸಿರೆಳಿದ್ದಾರೆ.

ಹಲವು ಸಿನೆಮಾಗಳಲ್ಲಿ ನಟಿಸಿದ್ದ ಅವರು ಮಜಾಟಾಕೀಸ್ ಮೂಲಕ ಮನೆಮಾತಾಗಿದ್ದರು. ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಭ್ರಷ್ಟಾಚಾರದ ವಿರುದ್ಧ ಶಂಕರ್ ಇನ್ನೊಂದು ಹೋರಾಟ!

Published

on

  • ಚೇತನ್ ನಾಡಿಗೇರ್

ಣಿರತ್ನಂ ಏನೇ ಮಾಡಲಿ, ಯಾವುದೇ ಚಿತ್ರ ತೆಗೆಯಲಿ, ಅದರ ಮೂಲ ಸೆಲೆ ಪ್ರೀತಿಯಾಗಿರುತ್ತದೆ. ಪ್ರೀತಿಯ ಬೇರೆಬೇರೆ ವ್ಯಾಖ್ಯಾನಗಳನ್ನು, ಬೇರೆಬೇರೆ ಹಿನ್ನೆಲೆಯಲ್ಲಿ ಮಣಿರತ್ನಂ ಪ್ರತಿಚಿತ್ರದಲ್ಲೂ ಹೇಳುವ ಪ್ರಯತ್ನ ಮಾಡುತ್ತಲೇ ಇರುತ್ತಾರೆ. ಅದೇ ರೀತಿ, ರಾಮ್‍ಗೋಪಾಲ್‍ ವರ್ಮ ಏನೇ ಚಿತ್ರ ಮಾಡಿದರೂ, ಕ್ರೈಮ್‍ ಹಿನ್ನೆಲೆಯಲ್ಲೇ ಮಾಡುತ್ತಾರೆ. ಹೀಗೆ ಬೇರೆಬೇರೆ ನಿರ್ದೇಶಕರು ಒಂದೇ ವಿಷಯವನ್ನಿಟ್ಟುಕೊಂಡು ಬೇರೆಬೇರೆ ರೀತಿ ವ್ಯಾಖ್ಯಾನಿಸುವ ಪ್ರಯತ್ನ ಮಾಡುತ್ತಲೇ ಇರುತ್ತಾರೆ.

ಈಗ್ಯಾಕಪ್ಪಾ ಈ ಮಾತು ಎಂದರೆ, ಶಂಕರ್ ನಿರ್ದೇಶನದ ‘ಇಂಡಿಯನ್‍ 2’ ನಾಳೆ ಜಗತ್ತಿನಾದ್ಯಂತ ಬಿಡುಗಡೆಯಾಗುತ್ತಿದೆ. ತಮ್ಮದೇ ಯಶಸ್ವಿ ಚಿತ್ರ ‘ಇಂಡಿಯನ್‍’ನ ಮುಂದುವರೆದ ಭಾಗ ಇದು. ಆ ಚಿತ್ರ ಬಿಡುಗಡೆಯಾಗಿ 26 ವರ್ಷಗಳ ನಂತರ ‘ಇಂಡಿಯನ್‍ 2’ ಬಿಡುಗಡೆಯಾಗುತ್ತಿದೆ. ಅಷ್ಟೇ ಅಲ್ಲ, ಭ್ರಷ್ಟಾಚಾರದ ವಿಷಯವನ್ನಿಟ್ಟುಕೊಂಡು ಶಂಕರ್‍ ನಿರ್ದೇಶಿಸುತ್ತಿರುವ ಏಳನೇ ಚಿತ್ರ ಇದು.

ಶಂಕರ್‍ ಚಿತ್ರಗಳೆಂದರೆ ಅದ್ಧೂರಿತನ, ಹಿಟ್‍ ಹಾಡುಗಳು, ದೊಡ್ಡ ಕ್ಯಾನ್ವಾಸ್‍, ಮಾಸ್ ಅಂಶಗಳು ಇವೆಲ್ಲವೂ ಕಾಣುತ್ತದೆ. ಅದೇ ರೀತಿ ಗಮನಸೆಳೆಯುವ ಒಂದು ವಿಷಯವೆಂದರೆ, ಅದು ಭ್ರಷ್ಟಾಚಾರದ ವಿರುದ್ಧ ಶಂಕರ್‍ ನಿರಂತರ ಹೋರಾಟ. ತಮ್ಮ ನಿರ್ದೇಶನದ ಮೊದಲ ಚಿತ್ರದಿಂದಲೂ ಶಂಕರ್‍ ಭ್ರಷ್ಟಾಚಾರದ ವಿರುದ್ಧ ಹೋರಾಟ ಮಾಡುತ್ತಲೇ ಇದ್ದಾರೆ. ಶಂಕರ್‍ ಈ 31 ವರ್ಷಗಳಲ್ಲಿ ನಿರ್ದೇಶಿಸಿರುವುದು ಕೇವಲ 14 ಚಿತ್ರಗಳನ್ನು. ಆ ಪೈಕಿ ಏಳು ಚಿತ್ರಗಳು ಭ್ರಷ್ಟಾಚಾರ ಎಂಬ ವಿಷಯವನ್ನಿಟ್ಟುಕೊಂಡು ಮೂಲವಾಗಿಟ್ಟುಕೊಂಡು ಮಾಡಲಾಗಿದೆ.

ಈ ಪ್ರಯಾಣ ಶುರುವಾಗಿದ್ದು 1993ರಲ್ಲಿ ಬಿಡುಗಡೆಯಾದ ‘ಜಂಟಲ್‍ಮ್ಯಾನ್’ ಚಿತ್ರದಲ್ಲಿ ಶಿಕ್ಷಣ ವ್ಯವಸ್ಥೆಯಲ್ಲಿನ ಭ್ರಷ್ಟಾಚಾರದ ಕುರಿತು ಕಥೆ ಮಾಡಿದ್ದರು. ಶಿಕ್ಷಣ ವ್ಯವಸ್ಥೆಯಲ್ಲಿನ ಭ್ರಷ್ಟಾಚಾರ ಮತ್ತು ಲಂಚಾವತಾರದಿಂದ ಹೇಗೆ ಪ್ರತಿಭಾವಂತ ಯುವಕರು ಅವಕಾಶವಂಚಿತರಾಗುತ್ತಿದ್ದಾರೆ ಎಂದು ಹೇಳಿದರು. ಒಬ್ಬ ಸಾಮಾನ್ಯ ಮನುಷ್ಯ ಹೇಗೆ ಈ ವ್ಯವಸ್ಥೆಯ ವಿರುದ್ಧ ಹೋರಾಡುತ್ತಾನೆ ಎಂದು ತೋರಿಸಿದ್ದರು. ಆ ನಂತರ ‘ಇಂಡಿಯನ್‍’, ‘ಮುದಲ್ವನ್‍’, ‘ಅನ್ನಿಯನ್‍’, ‘ಶಿವಾಜಿ: ದಿ ಬಾಸ್‍’ ಮತ್ತು ‘ಇಂಡಿಯನ್‍ 2’ ಚಿತ್ರಗಳ ಮೂಲಕ ಅವರು ಇದೇ ವಿಷಯವನ್ನು ಹೇಳುವ ಪ್ರಯತ್ನವನ್ನು ಮಾಡಿದ್ದಾರೆ.

ವಿಷಯ ಅದೇ ಭ್ರಷ್ಟಾಚಾರ ಅಥವಾ ಲಂಚಾವತಾರವಿರಬಹುದು. ಅದೇ ವಿಷಯವನ್ನಿಟ್ಟುಕೊಂಡು ಶಂಕರ್‍ ಬೇರೆಬೇರೆ ರೀತಿಯಲ್ಲಿ ಕಮರ್ಷಿಯಲ್‍ ಆಗಿ ಚಿತ್ರಗಳನ್ನು ರೂಪಿಸಿರುವುದಿದೆಯಲ್ಲಾ ಅದು ವಿಶೇಷ ಎನಿಸುತ್ತದೆ. ‘ಇಂಡಿಯನ್‍’ನಲ್ಲಿ ಸ್ವಾತಂತ್ರ್ಯ ಹೋರಾಟಗಾರನೊಬ್ಬ ಭ್ರಷ್ಟಾಚಾರದ ವಿರುದ್ಧ ಹೋರಾಡುತ್ತಾನೆ. ತನ್ನ ಮಗನೇ ದೊಡ್ಡ ಭ್ರಷ್ಟ ಎಂದು ಗೊತ್ತಾದಾಗ ಅವನನ್ನೇ ಸಾಯಿಸುತ್ತಾನೆ. ‘ಮುದಲ್ವನ್’ ಎಂಬ ಚಿತ್ರದಲ್ಲಿ ಒಬ್ಬ ಸಾಮಾನ್ಯ ಮನುಷ್ಯ ಒಂದು ದಿನದ ಮುಖ್ಯಮಂತ್ರಿಯಾಗಿ ಭ್ರಷ್ಟಾಚಾರ ತಡೆಯುವ ಪ್ರಯತ್ನವನ್ನು ತನ್ನದೇ ಶೈಲಿಯಲ್ಲಿ ಮಾಡುತ್ತಾನೆ. ‘ಅನ್ನಿಯನ್‍’ನಲ್ಲಿ ಭ್ರಷ್ಟಾಚಾರ, Multiple Personality Disorder ಮತ್ತು ಗರುಡ ಪುರಾಣವನ್ನು ಶಂಕರ್‍ ಸೇರಿಸಿ ಕಥೆ ಮಾಡಿರುವ ರೀತಿಯೇ ವಿಶಿಷ್ಟ. ‘ಶಿವಾಜಿ’ಯಲ್ಲಿ ನೂರಾರು ಕೋಟಿ ಆಸ್ತಿ ಇರುವ ಶ್ರೀಮಂತನೊಬ್ಬ ಈ ವ್ಯವಸ್ಥೆಯಿಂದ ಬೇಸತ್ತು ಹೋರಾಟಕ್ಕೆ ಇಳಿಯುತ್ತಾನೆ. ಈಗ ‘ಇಂಡಿಯನ್‍ 2’ ಚಿತ್ರದಲ್ಲಂತೂ ಭ್ರಷ್ಟಾಚಾರದ ವಿರುದ್ಧ ಹೋರಾಟವನ್ನು ಎಂದು Second War of Independence ಬಣ್ಣಿಸಿದ್ದಾರೆ. ಅಲ್ಲಿಗೆ ಭ್ರಷ್ಟಾಚಾರದ ವಿರುದ್ಧ ಶಂಕರ್‍ ಮತ್ತೊಂದು ಹೋರಾಟ ಶುರು ಮಾಡಿದ್ದಾರೆ.

ಇಷ್ಟಕ್ಕೂ ಶಂಕರ್‍ ಯಾಕೆ ಈ ವಿಷಯದ ಮೇಲೆ ಮೇಲಿಂದ ಮೇಲೆ ಸಿನಿಮಾ ಮಾಡುತ್ತಾರೆ? ಈ ಕುರಿತು ಸಂದರ್ಶನವೊಂದರಲ್ಲಿ ಮಾತನಾಡಿರುವ ಅವರು, ‘ಯಾವುದೇ ವಿಷಯ ನನ್ನನ್ನು ಕಾಡಿದರೂ, ಆ ಕುರಿತು ಕಥೆ ಮಾಡುವುದಕ್ಕೆ ಪ್ರಯತ್ನ ಮಾಡುತ್ತೇನೆ. ಈ ಭ್ರಷ್ಟಾಚಾರ ನನ್ನನ್ನು ಪದೇಪದೇ ಕಾಡಿದೆ. ಅದನ್ನು ಕಮರ್ಷಿಯಲ್‍ ರೂಪದಲ್ಲಿ, ಮನರಂಜನಾತ್ಮಕವಾಗಿ ಹೇಳುವ ಪ್ರಯತ್ನ ಮಾಡುತ್ತಾ ಬಂದಿದ್ದೇನೆ. ಒಂದು ವಿಷಯ ಸ್ಪಷ್ಟವಾದ ಮೇಲೆ, ಅದನ್ನು ಹೇಗೆ ತರಬೇಕು ಎಂದು ಯೋಚಿಸುತ್ತೇನೆ. ಪ್ರೇಕ್ಷಕರ ದೃಷ್ಟಿಕೋನದಿಂದ ಯೋಚಿಸುವುದಕ್ಕೆ ಪ್ರಯತ್ನಿಸುತ್ತೇನೆ. ಅವರಿಗೆ ಬೋರ್‍ ಆಗಬಾರದು ಎಂಬ ಅಂಶವನ್ನು ಗಮನದಲ್ಲಿಟ್ಟುಕೊಂಡು ಚಿತ್ರಕಥೆ ಮಾಡುತ್ತಾ ಹೋಗುತ್ತೇನೆ’ ಎಂದು ಹೇಳಿಕೊಂಡಿದ್ದಾರೆ ಶಂಕರ್.

ಬಹುಶಃ ಅದೇ ಅವರ ಯಶಸ್ಸು ಎನ್ನಬಹುದೇನೋ? ಶಂಕರ್‍ ಒಂದು ಚಿತ್ರದ ಕಥೆಗೆ ಎಷ್ಟು ಪ್ರಾಮುಖ್ಯತೆ ಕೊಡುತ್ತಾರೋ, ಮನರಂಜನಾತ್ಮಕ ಅಂಶಗಳಿಗೂ ಅಷ್ಟೇ ಪ್ರಾಮುಖ್ಯತೆ ಕೊಡುತ್ತಾರೆ. ಕೆಲವೊಮ್ಮೆ ಶಂಕರ್‍ ಪಾತ್ರಗಳು Larger than life ಎಂದನಿಸಬಹುದು. ಕೆಲವೊಮ್ಮೆ ತುಂಬಾ exaggeration ಅಂತನಿಸಬಹುದು. ಒಂದು ದಿನಕ್ಕೆ ಮುಖ್ಯಮಂತ್ರಿ ಆಗುವುದಕ್ಕೆ ಸಾಧ್ಯವಾ? ಪಾರ್ಥಸಾರಥಿ ರಾಮಾನುಜ ಅಯ್ಯಂಗಾರ್‍ಗೆ ಅನ್ನಿಯನ್‍ ಆಗುವುದಕ್ಕೆ ಸಾಧ್ಯವಾ? 78ರ ವೃದ್ಧನೊಬ್ಬ ಸೇನಾಪತಿಯಾಗಿ ಹಾಗೆ ಹೊಡೆದಾಡುವುದಕ್ಕೆ ಸಾಧ್ಯವೇ? ಈ ಪ್ರಶ್ನೆಗಳು ಬರಬಹುದು. ತಾರ್ಕಿಕವಾಗಿ ನೋಡಿದರೆ ಇದು ಕಷ್ಟ. ಆದರೆ, ಶಂಕರ್ ಲಾಜಿಕ್‍ಗಿಂತ ಮ್ಯಾಜಿಕ್‍ನಲ್ಲಿ ನಂಬಿಕೆ ಇಟ್ಟವರು. ಏನೇನೋ ಮ್ಯಾಜಿಕ್‍ ಮಾಡಿ ಪ್ರೇಕ್ಷಕರನ್ನು ನಂಬಿಸುತ್ತಾರೆ. ತಮ್ಮ ಪ್ರಪಂಚದಲ್ಲಿ ಎಳೆದುಕೊಳ್ಳುತ್ತಾರೆ.

ಈಗೆಲ್ಲಾ Cinematic Universeಗಳ ಕಾಲ. ಯಶ್‍ರಾಜ್‍ ಸ್ಪೈ ಯೂನಿವರ್ಸ್‍, ಲೋಕೇಶ್‍ ಕನಕರಾಜ್‍ ಯೂನಿವರ್ಸ್, ರೋಹಿತ್‍ ಶೆಟ್ಟಿ ಪೊಲೀಸ್‍ ಯೂನಿವರ್ಸ್‍ಗಳು ಹೆಚ್ಚು ಸದ್ದು ಮಾಡುತ್ತಿವೆ. ಆದರೆ, ಕೆಲವು ವರ್ಷಗಳ ಹಿಂದೆಯೇ ‘ಇಂಡಿಯನ್‍’ನ ಸೇತುಪತಿ, ‘ಶಿವಾಜಿ: ದಿ ಬಾಸ್‍’ನ ಶಿವಾಜಿ ಮತ್ತು ‘ಮುದಲ್ವನ್‍’ನ ಪುಗಳೇಂದಿಯನ್ನಿಟ್ಟುಕೊಂಡು ಏಕೆ ಒಂದು ಚಿತ್ರ ಮಾಡಬಾರದು ಎಂದು ಅವರು ಕೆಲವು ವರ್ಷಗಳ ಹಿಂದೆಯೇ ಯೋಚಿಸಿದ್ದರಂತೆ. ಆದರೆ, ಸೂಕ್ತ ಪ್ರೋತ್ಸಾಹ ಸಿಗದ ಕಾರಣ ಸುಮ್ಮನಾದರಂತೆ.

ಈ ಕುರಿತು ಮಾತನಾಡಿರುವ ಅವರು, ‘2008ರಲ್ಲಿ ‘ಎಂದಿರನ್‍’ ಚಿತ್ರ ಮಾಡುವಾಗ, ಯಾಕೆ ನಾನೇ ಸೃಷ್ಟಿಸಿದ ಮೂರು ಪಾತ್ರಗಳನ್ನು ಒಂದೇ ಚಿತ್ರದಲ್ಲಿ ಯಾಕೆ ತರಬಾರದು ಎಂದನಿಸಿತು. ಒಂದು ಕ್ಷಣ ರೋಮಾಂಚನವಾಯ್ತು. ಖುಷಿಯಿಂದ ನನ್ನ ಸಹಾಯಕ ನಿರ್ದೇಕರನ್ನು ಕರೆದು ಐಡಿಯಾ ಹೇಳಿದೆ. ಅವರೆಲ್ಲರೂ ಇದು ಸಾಧ್ಯವಾ? ಎಂದು ಅನುಮಾನದಿಂದ ನೋಡಿದರು. ನಂತರ ಕೆಲವು ಹಿರಿಯ ತಂತ್ರಜ್ಞರಿಗೆ ಮತ್ತು ನನ್ನ ಸ್ನೇಹಿತರಿಗೆ ಹೇಳಿದೆ. ನನ್ನ ಮನಸ್ಸಿಗೆ ನೋವಾಗಬಹುದು ಎಂದು ಚೆನ್ನಾಗಿದೆ ಎಂದಷ್ಟೇ ಹೇಳಿ ಹೊರಟು ಹೋದರು. ಬಹುಶಃ ನನಗೆ ಆಗ ಪ್ರೋತ್ಸಾಹ ಸಿಕ್ಕಿದ್ದರೆ ಚಿತ್ರ ಮಾಡಿಬಿಟ್ಟಿರುತ್ತಿದ್ದೆನೇನೋ? ಕೆಲವು ವರ್ಷಗಳ ನಂತರ ‘ಅವೆಂಜರ್ಸ್’ ಚಿತ್ರ ನೋಡಿದಾಗ, ಅದು ಸಹ Marvel Cinematic Universeನ ಒಂದು ಭಾಗ ಆಗಿತ್ತು. ಒಂದು ಒಳ್ಳೆಯ ಐಡಿಯಾ ಇದ್ದರೆ, ತಕ್ಷಣವೇ ಅದನ್ನು ಕಾರ್ಯರೂಪಕ್ಕೆ ಇಳಿಸಬೇಕು ಎಂದು ನನಗೆ ಆಗ ಅರ್ಥವಾಯ್ತು. ಏಕೆಂದರೆ, ನಮ್ಮ ತರಹವೇ ಜಗತ್ತಿನಾದ್ಯಂತ ಹಲವರು ಹೊಸ ವಿಷಯಗಳ ಬಗ್ಗೆ ಯೋಚಿಸುತ್ತಿರುತ್ತಾರೆ. ಅವರು ಅದನ್ನು ಕಾರ್ಯರೂಪಕ್ಕೆ ತರುವ ಮುನ್ನ, ಮೊದಲು ನಾವು ಆ ಕೆಲಸ ಮಾಡಬೇಕು’ ಎಂದು ಹೇಳಿಕೊಂಡಿದ್ದಾರೆ ಶಂಕರ್‍.

Shankar Cinematic Universe ಯಾವತ್ತು ಕಾರ್ಯರೂಪಕ್ಕೆ ಬರುತ್ತದೋ ಗೊತ್ತಿಲ್ಲ. ಸೇತುಪತಿ, ಶಿವಾಜಿ ಮತ್ತು ಪುಗಳೇಂದಿಯನ್ನು ಒಟ್ಟಿಗೆ ಮುಂದಿಟ್ಟುಕೊಂಡು ಯಾವಾಗ ಭ್ರಷ್ಟಾಚಾರದ ವಿರುದ್ಧ ಹೋರಾಡುತ್ತಾರೋ ಗೊತ್ತಿಲ್ಲ. ಆದರೆ, ಸದ್ಯಕ್ಕಂತೂ ಭ್ರಷ್ಟಾಚಾರದ ವಿರುದ್ಧ ಶಂಕರ್ ತಮ್ಮ ಹೋರಾಟ ಮುಂದುವರೆಸಿದ್ದಾರೆ. ‘ಇಂಡಿಯನ್‍ 2’ ಬಿಡುಗಡೆಯಾಗಿ ಆರು ತಿಂಗಳಲ್ಲೇ ಅದೇ ಸೇತುಪತಿ, ‘ಇಂಡಿಯನ್‍ 3’ ಆಗಿ ಮತ್ತೆ ಬರಲಿದ್ದಾರೆ. ಅದಾಗಿ ಸ್ವಲ್ಪ ದಿನಗಳಿಗೆ ‘ಗೇಮ್‍ ಚೇಂಜರ್‍’ ಎಂಬ ರಾಮ್‍ಚರಣ್‍ ತೇಜ ಅಭಿನಯದ ಇನ್ನೊಂದು ಚಿತ್ರದಲ್ಲಿ ಭ್ರಷ್ಟಾಚಾರದ ವಿರುದ್ಧ ಹೋರಾಟ ಮುಂದುವರೆಸಲಿದ್ದಾರೆ. ಪಾತ್ರಗಳು ಬದಲಾಗಬಹುದು, ಶಂಕರ್‍ ಹೋರಾಟ ಮಾತ್ರ ನಿರಂತರವಾಗಿ ಮುಂದುವರೆಯುತ್ತಿರುವುದು ವಿಶೇಷ. (ಬರಹ : ಚೇತನ್ ನಾಡಿಗೇರ್, ಫೇಸ್‌ಬುಕ್‌ ಬರಹ)ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending