ದಿನದ ಸುದ್ದಿ
ನೆರೆ ಸಂತ್ರಸ್ತರ ಪರಿಹಾರದಲ್ಲೂ ಸರ್ಕಾರದ ತಾರತಮ್ಯ ಅಮಾನವೀಯ : ಬಿ.ಕೆ. ಹರಿಪ್ರಸಾದ್
ಸುದ್ದಿದಿನ ಡೆಸ್ಕ್ : ನೆರೆ ಸಂತ್ರಸ್ತರ ಪರಿಹಾರದಲ್ಲೂ ಸರ್ಕಾರದಿಂದ ತಾರತಮ್ಯ ಅಮಾನವೀಯ. ನಿರಾಶ್ರಿತರ ನೆರವಿಗೆ ಧಾವಿಸುವಂತೆ ಬಿಕೆ ಹರಿಪ್ರಸಾದ್ ಆಗ್ರಹಿಸಿದ್ದಾರೆ.
ರಾಜ್ಯದ ಬಹುತೇಕ ಜಿಲ್ಲೆಗಳು ಅತಿವೃಷ್ಠಿಯಿಂದ ತತ್ತರಿಸುತ್ತಿವೆ. ವಿಶೇಷವಾಗಿ ಕರಾವಳಿ ಜಿಲ್ಲೆಗಳಲ್ಲಿ ಮುಂಗಾರಿನ ಪ್ರವಾಹ ಅವಾಂತರವನ್ನೇ ಸೃಷ್ಟಿಮಾಡಿದೆ. ಇಂದು ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ, ಸುರತ್ಕಲ್, ಮಂಗಳೂರು ನಗರ ಉತ್ತರದ ನೇರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿಗಳು,ಸಚಿವರುಗಳು “ಬಂದ ಪುಟ್ಟ ಹೋದ ಪುಟ್ಟ” ಎಂಬಂತೆ ನೆರೆ ಪೀಡಿತ ಪ್ರದೇಶಗಳಿಗೆ ಫ್ಯಾಶನ್ ಶೋ ಗೆ ಭೇಟಿ ಕೊಟ್ಟಿದ್ದು ಮಾತ್ರ. ಆದರೆ ಇಲ್ಲಿವರೆಗೂ ನಯಾ ಪೈಸೆ ಬಿಡುಗಡೆ ಮಾಡಲಿಲ್ಲ. ನೊಂದವರಿಗೆ ನೆರವು ನೀಡಲಿಲ್ಲ. ನಿರಾಶ್ರಿತರಿಗೆ ನೀಡಿರುವ ಭರವಸೆಗಳು ನಿರಾಸೆಗೊಳಿಸಿವೆ ಎಂದರು.
ಪಚ್ಚನಾಡಿ, ಗುರುಪುರ, ಮಿನಕಳಿ, ಉಳ್ಳಾಲ, ಸುರತ್ಕಲ್, ಸೋಮೇಶ್ವರ ಗ್ರಾಮ, ಬೆಟ್ಟಂಪಾಡಿ, ಬೈಕಂಪಾಡಿ, ಅದ್ಯಪಾಡಿ ಸೇರಿದಂತೆ ಇನ್ನಿತರೆ ಮಳೆಯಿಂದ ಹಾನಿಗೊಳಿಗಾಗಿರುವ ಹಾಗೂ ಕಡಲ್ಕೊರೆತದಿಂದ ಅಪಾಯದಲ್ಲಿರುವ ಪ್ರದೇಶಗಳಿಗೆ ಭೇಟಿ ಮಾಡಿದೆ. ಬಹುತೇಕ ಕಡೆ ಇಲ್ಲಿವರೆಗೂ ನಿರಾಶ್ರಿತರಿಗೆ ಪ್ರಾಥಮಿಕ ಸೌಲಭ್ಯವೂ ಕಲ್ಪಿಸದೆ ಅಮಾನವೀಯವಾಗಿ ನಡೆದುಕೊಂಡಿರುವುದು ದುರಂತ.
ಇನ್ನೂ ಕಳೆದ ಎರಡು ವರ್ಷಗಳ ಹಿಂದೆ ನೆರೆ ಸಂದರ್ಭದಲ್ಲಿ ಗುರುಪುರದ ಗ್ರಾಮಪಂಚಾಯಿತಿ ವ್ಯಾಪ್ತಿಯ 70ಕ್ಕೂ ಹೆಚ್ಚು ಕುಟುಂಬಗಳ ಸ್ಥಳಾಂತರಿಸಲಾಗಿತ್ತು. ಸ್ಥಳಾಂತರಿಸುವಾಗ ಮನೆ ಕಟ್ಟಿ ಕೊಡುವ ಭರವಸೆಯನ್ನ ನೀಡಿ, ಬಾಡಿಗೆ ಮನೆ ನಿವಾಸಿಗಳಿಗೆ ತಿಂಗಳಿಗೆ ಹತ್ತು ಸಾವಿರ ರೂಗಳ ಸಹಾಯ ನೀಡುವ ಭರವಸೆ ನೀಡಿತ್ತು. ಆದ್ರೆ ಇಲ್ಲಿವರೆಗೂ ಈ ಸರ್ಕಾರ ಹಾಗೂ ಸ್ಥಳೀಯ ಶಾಸಕರು ಇತ್ತ ತಿರುಗಿಯೂ ನೋಡಿಲ್ಲ. ಪರಿಹಾರ ನೀಡುವುದರಲ್ಲಿಯೂ ಬೆರಳಣಿಕೆ ಕುಟುಂಬಗಳಿಗೆ ಪರಿಹಾರ ನೀಡಿ ತಾರತಮ್ಯ ಮಾಡುವ ಮೂಲಕ ಅಮಾನವೀಯವಾಗಿ ನಡೆದುಕೊಂಡಿದೆ. ಕೂಡಲೇ ಮುಖ್ಯಮಂತ್ರಿಗಳು ಮಧ್ಯಪ್ರವೇಶಿಸಿ ನೀಡಿದ್ದ ಭರವಸೆಯನ್ನ ಈಡೇರಿಸಬೇಕೆಂದು ಒತ್ತಾಯಿಸುತ್ತೇನೆ.
ಕಡಲ್ಕೊರೆತ ಪ್ರದೇಶಗಳ ಕುಟುಂಬಗಳು ಪ್ರತಿ ಕ್ಷಣವೂ ಜೀವ ಕೈಲಿ ಹಿಡಿದುಕೊಂಡಿವೆ. ಜಿಲ್ಲಾಡಳಿತ ಕೂಡಲೇ ಅಂತಹ ಪ್ರದೇಶಗಳನ್ನ ಗುರುತಿಸಿ ಪರ್ಯಾಯ ವ್ಯವಸ್ಥೆ ಮಾಡಬೇಕು. ನಿರಾಶ್ರಿತರು ಹಾಗೂ ಅಪಾಯದಲ್ಲಿರುವವರಿಗೆ ಎನ್ಡಿಆರ್ ಎಫ್ ಹಾಗೂ ಎಸ್ಡಿಆರ್ ಎಫ್ ನಿಧಿ ಕೇವಲ ಎರಡೊತ್ತಿನ ಊಟಕ್ಕೆ ಮಾತ್ರ ಸೀಮಿತವಾಗಲಿದೆ. ಆದ್ದರಿಂದ ರಾಜ್ಯ ಸರ್ಕಾರ ವಿಶೇಷ ಪರಿಹಾರ ನಿಧಿಯನ್ನ ಘೋಷಿಸಿ, ಸಂಪೂರ್ಣವಾಗಿ ಆಸ್ತಿ ಪಾಸ್ತಿ ಕಳೆದುಕೊಂಡವರಿಗೆ ಸಂಪೂರ್ಣ ಪರಿಹಾರ ನೀಡಬೇಕು.
ಬಿಜೆಪಿ ಸರ್ಕಾರದ ಶಾಸಕರುಗಳೇ ತಮ್ಮ ಸರ್ಕಾರ ಹಾಗೂ ಮಂತ್ರಿಗಳ ಕಾರ್ಯವೈಖರಿಯನ್ನ ಬಹಿರಂಗವಾಗಿ ಖಂಡಿಸುತ್ತಿದ್ದಾರೆ. ಇಡೀ ಸರ್ಕಾರ ಹಾಗೂ ಮಂತ್ರಿ ಮಂಡಲ ಬರೀ ಕಮಿಷನ್ ವ್ಯವಹಾರಗಳಲ್ಲೇ ಕಾಲ ಕಳೆಯುತ್ತಿದ್ದಾರೆ. ಬಹುತೇಕ ಮಂತ್ರಿಗಳು ಬೆಂಗಳೂರು ಬಿಟ್ಟು ಅಲುಗಾಡುತ್ತಿಲ್ಲ. ಕೂಡಲೇ ಮೈ ಚಳಿ ಬಿಟ್ಟು ನೆರೆಯಿಂದ ನಿರಾಶ್ರಿತರಾಗಿರುವ ಕುಟುಂಬಗಳಿಗೆ ನೆರವಾಗಬೇಕೆಂದು ಆಗ್ರಹಿಸಿದರು.
ಮೊದಲ ದಿನದ ನೆರೆ ಪೀಡಿತ ಪ್ರದೇಶಗಳ ಪ್ರವಾಸದಲ್ಲಿ ಮಾಜಿ ಸಚಿವರು,ಶಾಸಕರಾದ ಯುಟಿ ಖಾದರ್, ಮಾಜಿ ಶಾಸಕ ಮೊಯ್ದೀನ್ ಬಾವಾ, ಮಾಜಿ ಕಾರ್ಪೋರೆಟರ್ ಗಳು, ಜನಪ್ರತಿನಿಧಿಗಳು ಸೇರಿದಂತೆ ಅಧಿಕಾರಿಗಳು ಭಾಗವಹಿಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಬ್ಯಾಕ್ಲಾಗ್ ನಿಯಮಾವಳಿ ಉಲ್ಲಂಘನೆ ; ಶಾಲಾ ಶಿಕ್ಷಣ ಇಲಾಖೆ ನಿರ್ದೇಶಕ ಕರಿಚಣ್ಣನವರ್ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲಾ ಹರಿಹರ ನಗರದ ಮಾತೃಶ್ರೀ ರುದ್ರಮಾಂಬಾ ಬಸವಾರ್ಯ ಪ್ರೌಢಶಾಲೆಯ ಕನ್ನಡ ಶಿಕ್ಷಕರ ಬ್ಯಾಕ್ಲಾಗ್ (ಪರಿಶಿಷ್ಟ ಜಾತಿ) ನೇಮಕಾತಿಯಲ್ಲಿನ ಅಕ್ರಮಗಳನ್ನು ತನಿಖೆಗೆ ಒಳಪಡಿಸಿ ಆಡಳಿತ ಮಂಡಳಿ ಹಾಗೂ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ದೂರು ನೀಡಿ ವರ್ಷಗಳೇ ಕಳೆದರೂ ತಪ್ಪಿತಸ್ಥರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ತೋರಿದ ಶಾಲಾ ಶಿಕ್ಷಣ ಇಲಾಖೆಯ ನಿರ್ದೇಶಕರಾದ ಶ್ರೀ ಕೃಷ್ಣಾಜಿ ಎಸ್. ಕರಿಚಣ್ಣನವರ್ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ದಾವಣಗೆರೆ ಜಿಲ್ಲಾ ಹರಿಹರ ನಗರದ ಮಾತೃಶ್ರೀ ರುದ್ರಮಾಂಬ ಬಸವಾರ್ಯ ಪ್ರೌಢಶಾಲೆಯಲ್ಲಿನ ಕನ್ನಡ ಶಿಕ್ಷಕರ ಬ್ಯಾಕ್ಲಾಗ್ (ಪರಿಶಿಷ್ಟ ಜಾತಿ) ನೇಮಕಾತಿಯು ನಿಯಮಬಾಹಿರವಾಗಿ ನಡೆದಿರುವ ಮಾಹಿತಿಯ ಆಧಾರದ ಮೇಲೆ ಆಯುಕ್ತರು ಹಾಗೂ ನಿರ್ದೇಶಕರು, ಶಾಲಾ ಶಿಕ್ಷಣ ಇಲಾಖೆ, ಆಯುಕ್ತರ ಕಛೇರಿ, ಬೆಂಗಳೂರು ಇವರಿಗೆ ದೂರು ನೀಡಿ, ಬ್ಯಾಕ್ಲಾಗ್ ನಿಯಮಕ್ಕೆ ವಿರುದ್ಧವಾಗಿ ಸಂದರ್ಶನ ನಡೆಸಿ, ನೇಮಕಾತಿ ಪ್ರಕ್ರಿಯೆಗೆ ಮುಂದಾಗಿರುವ ಉಪನಿರ್ದೇಶಕರು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಮೂಖ್ಯೋಪಧ್ಯಾಯರು, ವಿಷಯ ಪರಿವೀಕ್ಷಕರು, ವಿಷಯ ತಜ್ಞರು ಹಾಗೂ ಆಡಳಿತ ಮಂಡಳಿಯ ಸದಸ್ಯರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಂಡು, ಕೈಗೊಂಡ ಕ್ರಮದ ವರದಿಯನ್ನು ದೂರು ಅರ್ಜಿ ತಲುಪಿದ ಒಂದು ತಿಂಗಳ ಒಳಗಾಗಿ ನೀಡುವಂತೆ ಮನವಿ ಮಾಡಲಾಗಿತ್ತು. ಆದರೆ ವರ್ಷಗಳೇ ಕಳೆದರೂ ತಪ್ಪಿತಸ್ಥರ ವಿರುದ್ಧ ಯಾವುದೇ ಕ್ರಮ ಕೈಗೊಂಡಿರುವುದಿಲ್ಲ.
ವಯಸ್ಸು ಮತ್ತು ಮೆರಿಟ್ ಆಧಾರದಲ್ಲಿ ನೇಮಕಾತಿ ನಡೆಸದೆ ಸಂದರ್ಶನ ನಡೆಸಿ ಬ್ಯಾಕ್ಲಾಗ್ ನಿಯಮವನ್ನು ಉಲ್ಲಂಘನೆ ಮಾಡಿರುವುದು ತನಿಖೆಯಲ್ಲಿ ಕಂಡುಬAದಿರುತ್ತದೆ. ಆದರೆ ತಪ್ಪಿತಸ್ಥ ಅಧಿಕಾರಿಗಳು ಹಾಗೂ ಆಡಳಿತ ಮಂಡಳಿಯ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ತೋರಿದ ಕಾರಣ ಶಾಲಾ ಶಿಕ್ಷಣ ಇಲಾಖೆಯ ನಿರ್ದೇಶಕರಾದ ಕೃಷ್ಣಾಜಿ ಎಸ್. ಕರಿಚಣ್ಣನವರ್ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ದೂರು ದಾಖಲಿಸಿ, ಬ್ಯಾಕ್ಲಾಗ್ ನಿಯಮಗಳನ್ನು ಉಲ್ಲಂಘಿಸಿ ಸಂದರ್ಶನ ನಡೆಸಲು ಕಾರಣರಾದವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ ಇವರಿಗೆ ದೂರು ನೀಡಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಕಲಿ ಬಿಲ್ಲುಗಳ ಮೂಲಕ ಲಕ್ಷಾಂತರ ರೂಪಾಯಿ ಅವ್ಯವಹಾರ | ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲ ನಾಗರಾಜ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ: ನಕಲಿ ಬಿಲ್ಲುಗಳ ಮೂಲಕ ಲಕ್ಷಾಂತರ ರೂಪಾಯಿಗಳ ಅವ್ಯವಹಾರ ನಡೆಸಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಕೊಡಚಗೊಂಡನಹಳ್ಳಿ, ನ್ಯಾಮತಿ ತಾಲ್ಲೂಕು ಇಲ್ಲಿನ ಪ್ರಾಂಶುಪಾಲರಾದ ನಾಗರಾಜ ಜಿ.ಎಂ ಇವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ದಾವಣಗೆರೆ ಜಿಲ್ಲೆಯಾದ್ಯಂತ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ವಸತಿ ಶಾಲೆಗಳಲ್ಲಿ ನಕಲಿ ಬಿಲ್ಲುಗಳ ಮೂಲಕ ಸರ್ಕಾರದ ಅನುದಾನವನ್ನು ವಂಚಿಸುತ್ತಿರುವ ವಿಷಯ ತಿಳಿದು ಪ್ರಾಂಶುಪಾಲರು, ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಕೊಡಚಗೊಂಡನಹಳ್ಳಿ, ನ್ಯಾಮತಿ ತಾಲ್ಲೂಕು ಇವರು ನೀಡಿರುವ 37 ಬಿಲ್ಲುಗಳನ್ನು ಪರಿಶೀಲನೆ ಮಾಡಿದಾಗ, ಇವುಗಳಲ್ಲಿನ ಬಹುತೇಕ ಜಿ.ಎಸ್.ಟಿ ಬಿಲ್ಲುಗಳಲ್ಲಿ ದಿನಾಂಕವೇ ಇರುವುದಿಲ್ಲ.
ಇನ್ನೂ ಕೆಲವು ಬಿಲ್ಲುಗಳನ್ನು ಹೊರ ರಾಜ್ಯದಿಂದ ಪಡೆಯಲಾಗಿರುತ್ತದೆ. ಆದ್ದರಿಂದ ಮರು ಲೆಕ್ಕಪರಿಶೋಧನೆ ನಡೆಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಲೋಕಾಯಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಾಳೆ ಹರಿಹರ ರೈಲು ನಿಲ್ದಾಣದಲ್ಲಿ ವಾರ್ಷಿಕ ವಿಪತ್ತು ನಿರ್ವಹಣೆ ಅಣುಕು ಅಭ್ಯಾಸ
ಸುದ್ದಿದಿನ, ಹರಿಹರ :ಇದೇ 14 ರಂದು ಗುರುವಾರ (ನಾಳೆ) ಹರಿಹರ ರೈಲು ನಿಲ್ದಾಣದಲ್ಲಿ ವಾರ್ಷಿಕ ವಿಪತ್ತು ನಿರ್ವಹಣೆಯ ಅಣುಕು ಅಭ್ಯಾಸವನ್ನು ಬೆಳಗ್ಗೆ 8:30 ಕ್ಕೆ ನಡೆಸಲಿದೆ ಎಂದು ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ನೈಋತ್ಯ ರೈಲ್ವೆಯ ಮೈಸೂರು ವಿಭಾಗವು ಎನ್ಡಿಆರ್ಎಫ್, ಎಸ್ಡಿಆರ್ಎಫ್ ಹಾಗೂ ರಾಜ್ಯ ಸರ್ಕಾರದ ಅಧಿಕಾರಿಗಳ ಸಮನ್ವಯದಲ್ಲಿ ಅಣಕು ಅಭ್ಯಾಸವು ನಡೆಸಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ4 days ago2.5 ಕೋಟಿ ಖರೀದಿಯಲ್ಲಿ ಅವ್ಯವಹಾರ ; ಆಯುಕ್ತೆ ಮಂಜುಶ್ರೀ ಸೇರಿ 6 ಅಧಿಕಾರಿಗಳ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ4 days agoದಾವಣಗೆರೆ | ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಸಮಾರೋಪ ಸಮಾರಂಭ
-
ಅಂಕಣ3 days agoಪ್ರಜಾಪ್ರಭುತ್ವ: ಸಮಾನತೆ, ಸಾಮಾಜಿಕ ನ್ಯಾಯ ಮತ್ತು ನೈತಿಕ ಹೊಣೆಗಾರಿಕೆ
-
ದಿನದ ಸುದ್ದಿ3 days agoದಾವಣಗೆರೆ| ಅಪರಿಚಿತರು ನೀಡಿದ ಟೆಲಿಗ್ರಾಮ್ ಲಿಂಕ್ ಕ್ಲಿಕ್ ಮಾಡಿ 14 ಲಕ್ಷ ಕಳೆದುಕೊಂಡ ಉಪನ್ಯಾಸಕ
-
ದಿನದ ಸುದ್ದಿ4 days agoಮಾನಸಿಕ ಆರೋಗ್ಯ ಅರಿವು ಅಗತ್ಯ : ಡಾ. ಪ್ರಭು ಎಂ. ಬಿಸ್ಲೇರಿ
-
ದಿನದ ಸುದ್ದಿ1 day agoನಟ ದಿಲೀಪ್ ರಾಜ್ ಆ ಒಂದು ತಪ್ಪು ಪ್ರಾಣಕ್ಕೆ ಮುಳುವಾಯ್ತು
-
ದಿನದ ಸುದ್ದಿ2 days agoಸಾವಿನಲ್ಲೂ ಒಂದಾದ ಪ್ರೇಮಿಗಳು: ಪ್ರೇಮಿಯ ಪಕ್ಕದಲ್ಲೇ ಪ್ರೇಯಸಿಯ ಅಂತ್ಯಸಂಸ್ಕಾರ!
-
ದಿನದ ಸುದ್ದಿ4 days agoಬದುಕಿನಲ್ಲಿ ಪ್ರಾಮಾಣಿಕತೆ ಮತ್ತು ಪರಿಶ್ರಮವಿದ್ದರೆ ಯಶಸ್ಸು ನಿಶ್ಚಿತ

