Connect with us

ದಿನದ ಸುದ್ದಿ

ಭ್ರಷ್ಟಾಚಾರದಲ್ಲಿ ಕರ್ನಾಟಕ ನಂಬರ್ ಒನ್ ಆಗಿದ್ದೇ ಬಿಜೆಪಿ ಸಾಧನೆ : ಪುಷ್ಪಾ ಅಮರನಾಥ್ ಕಿಡಿ

Published

on

ಸುದ್ದಿದಿನ,ದಾವಣಗೆರೆ: ಆಹಾರ ಉತ್ಪನ್ನ ಸೇರಿದಂತೆ ಬೇರೆ ಬೇರೆ ವಸ್ತುಗಳ ಮೇಲಿನ ತೆರಿಗೆ, ಜಿ. ಎಸ್. ಟಿ. ವಿಧಿಸಿರುವ ರಾಜ್ಯ ಸರ್ಕಾರದ ಕ್ರಮ ಸರಿಯಲ್ಲ. ಹೃದಯವಿಲ್ಲದ ಬಿಜೆಪಿ ಸರ್ಕಾರ ಆಡಳಿತ ನಡೆಸುತ್ತಿದೆ. ಭ್ರಷ್ಟಾಚಾರದಲ್ಲಿ ನಂಬರ್ ಒನ್ ಕರ್ನಾಟಕ.‌ ಇದೇ ಬಿಜೆಪಿ ಸಾಧನೆ ಎಂದು ಕೆಪಿಸಿಸಿ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಪುಷ್ಪಾ ಅಮರನಾಥ್ ಆರೋಪಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಚ್ಚೆ ದಿನ್ ಎಂದು ಅಧಿಕಾರಕ್ಕೆ ಬಂದ ಕೇಂದ್ರ ಸರ್ಕಾರ ಬಡವರ, ಮಧ್ಯಮವರ್ಗದವರ ಮೇಲೆ ಗಧಾ ಪ್ರಹಾರ ನಡೆಸುತ್ತಿದೆ. ರಾಜ್ಯದ ಸಂಸದರು ತೆರಿಗೆ ಹೆಚ್ಚಿಸಿದ್ದರೂ, ಪ್ರವಾಹ ಪೀಡಿತ ಪ್ರದೇಶಗಳ ಜನರು ಸಂಕಷ್ಟದಲ್ಲಿದ್ದಾರೆ. ಆದ್ರೆ ಯಾವ ಲೋಕಸಭಾ ಸದಸ್ಯರು ಬಾಯಿ ಬಿಡುತ್ತಿಲ್ಲ. ರಾಜ್ಯ ಸಚಿವರು ದೊಡ್ಡ ತಿಮಿಂಗಲಗಳಿದ್ದಾರೆ. ಅವರು ಜಾಸ್ತಿ ಹಣ ಮಾಡಿದರು, ನಾವು ಮಾಡಬೇಕು ಎಂಬ ಹಪಾಹಪಿತನ ಇದೆ. ಜನರ ಹಿತ, ಕಾಳಜಿ ಬೇಕಾಗಿಲ್ಲ ಎಂದು ಕಿಡಿಕಾರಿದರು‌.

ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗ ಸ್ವಲ್ಪ ಬೆಲೆ ಏರಿಕೆಯಾದರೂ ಶೋಭಾ ಕರಂದ್ಲಾಜೆ, ಮಾಳವಿಕಾ ಅವಿನಾಶ್, ಶೃತಿ, ಸ್ಮುರ್ತಿ ಇರಾನಿ ಸೇರಿದಂತೆ ಬಿಜೆಪಿ ನಾಯಕಿರು ರಸ್ತೆಯಲ್ಲಿ ಬಿದ್ದು ಹೊರಳಾಡುತ್ತಿದ್ದರು. ಯಾಕೆ ಈಗ ಪ್ರತಿಭಟನೆ ನಡೆಸುತ್ತಿಲ್ಲ ಎಂದು ಪ್ರಶ್ನಿಸಿದರು.

ಬೇಳೆ, ಎಣ್ಣೆ, ಗೋಧಿ, ಅಕ್ಕಿ ಹಿಟ್ಟು, ಸಿಲಿಂಡರ್, ಅಕ್ಕಿ, ಹಾಲು, ಮೊಸರು ಸೇರಿದಂತೆ ಎಲ್ಲಾ ವಸ್ತುಗಳ ಬೆಲೆ ಗಗನಕ್ಕೇರುತ್ತಿದೆ. ಇದೇನಾ ಅಚ್ಚೆ ದಿನ್. ಮಹಿಳೆಯರು ಬಿಜೆಪಿ ಸರ್ಕಾರದ ಲೂಟಿ ವಿರೋಧಿಸಿ ಬೀದಿಗೆ ಬರುತ್ತಾರೆ. ಒಳ್ಳೆಯ ಸರ್ಕಾರ ತರುತ್ತಾರೆ ಎಂಬ ವಿಶ್ವಾಸ ಇದೆ. ಲೂಟಿ ಸರ್ಕಾರವನ್ನು ನಾವು ನೋಡೇ ಇಲ್ಲ ಎಂಬುದಾಗಿ ಮಠಾಧೀಶರೇ ಹೇಳಿದ್ದಾರೆ. ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಮಹಿಳೆಯರು ಧ್ವನಿ ಎತ್ತಬೇಕಿದೆ. ತಕ್ಕ ಪಾಠ ಕಲಿಸಬೇಕಿದೆ ಎಂದು ಹೇಳಿದರು‌.

ಮುಂದಿನ ದಿನಗಳಲ್ಲಿ ತಾಲೂಕು ಮಟ್ಟದಲ್ಲಿ ಕಾಂಗ್ರೆಸ್ ಮಹಿಳಾ ಘಟಕ ಉಗ್ರವಾದ ಪ್ರತಿಭಟನೆ ನಡೆಸುತ್ತದೆ. ಬಿಜೆಪಿ ಸರ್ಕಾರದ ವೈಫಲ್ಯ ಹೇಳುತ್ತಾ ಹೋದರೆ ಸಾಲದು. ಹೆಣ್ಣು ಮಕ್ಕಳಿಗೆ ರಕ್ಷಣೆ ಇಲ್ಲ. ಕೋಮುಗಲಭೆ ಹುಟ್ಟು ಹಾಕುವ ಬದಲು, ಜಾತಿ ಜಾತಿಗಳ ಮಧ್ಯೆ ಸಂಘರ್ಷ ಮಾಡುವುದನ್ನು ಬಿಟ್ಟು ಬೆಲೆಯೇರಿಕೆ ನಿಯಂತ್ರಿಸಲಿ ಎಂದು ಹೇಳಿದ ಅವರು ಆಹಾರ ಧಾನ್ಯಗಳ ಮೇಲೆ ವಿಧಿಸಿರುವ ಜಿಎಸ್ ಟಿ ಹಿಂಪಡೆಯಬೇಕು ಎಂದು ಒತ್ತಾಯಿಸಿದರು.

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲುವಂಥ ಶಕ್ತಿ ಇರುವ ಮಹಿಳೆಯರಿಗೆ ಟಿಕೆಟ್ ಕೊಡಿಸಲು ಶಕ್ತಿ‌ಮೀರಿ ಪ್ರಯತ್ನ ಮಾಡುತ್ತೇನೆ. ಚುನಾವಣೆಯಲ್ಲಿ ಸುಮ್ಮನೆ ನಿಂತರೆ ಸಾಲದು. ಪೈಪೋಟಿ ನೀಡುವಂಥವರಿಗೆ ಗುರುತಿಸಿ ಟಿಕೆಟ್ ಕೊಡಿಸಲು ಪ್ರಾಮಾಣಿಕ ಪ್ರಯತ್ನ ನಡೆಸುವುದಾಗಿ ತಿಳಿಸಿದರು‌.

ಮಹಿಳಾ ಸಂಘಟನೆ ಬಲಿಷ್ಠಗೊಳಿಸಬೇಕು. ಚುನಾವಣೆಗೆ ಇನ್ನು ಎಂಟು ತಿಂಗಳಿದೆ. ದಾವಣಗೆರೆ ಜಿಲ್ಲೆಯಲ್ಲಿ ಇದುವರೆಗೆ ಯಾವ ಮಹಿಳೆಯು ವಿಧಾನಸಭಾ ಕ್ಷೇತ್ರಕ್ಕೆ ಕಣಕ್ಕಿಳಿಯುವ ಆಕಾಂಕ್ಷಿಗಳಿಲ್ಲ‌.‌ಇನ್ನು ಮೂರು ತಿಂಗಳ ಬಳಿಕ ಈ ಪ್ರಕ್ರಿಯೆ ಶುರುವಾಗುವ ಸಾಧ್ಯತೆ ಇದೆ ಎಂದು ತಿಳಿಸಿದರು.

ಗೋಷ್ಠಿಯಲ್ಲಿ ಮಹಿಳಾ ಕಾಂಗ್ರೆಸ್ ಘಟಕದ ಜಿಲ್ಲಾಧ್ಯಕ್ಷೆ ಅನಿತಾ ಬಾಯಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುಷ್ಮಾ ಪಾಟೀಲ್, ಸುಮಂಗಳಾ ಮತ್ತಿತರರು ಹಾಜರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಸಾವಿನಲ್ಲೂ ಒಂದಾದ ಪ್ರೇಮಿಗಳು: ಪ್ರೇಮಿಯ ಪಕ್ಕದಲ್ಲೇ ಪ್ರೇಯಸಿಯ ಅಂತ್ಯಸಂಸ್ಕಾರ!

Published

on

ಸುದ್ದಿದಿನ,ಕುಂಬಳೆ: ಪ್ರೀತಿ ಎನ್ನುವುದು ಸಾವಿನ ನಂತರವೂ ಶಾಶ್ವತ ಎಂಬುದಕ್ಕೆ ಕೇರಳದ ಕಾಸರಗೋಡಿನಲ್ಲಿ ನಡೆದ ಈ ಘಟನೆ ಸಾಕ್ಷಿಯಾಗಿದೆ. ನಿಶ್ಚಿತಾರ್ಥವಾಗಿದ್ದ ಯುವಕ ಮೃತಪಟ್ಟ ಬೆನ್ನಲ್ಲೇ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದ ಯುವತಿಯ ಅಂತ್ಯಸಂಸ್ಕಾರವನ್ನು ಆಕೆಯ ಇಚ್ಛೆಯಂತೆ ಯುವಕನ ಸಮಾಧಿಯ ಪಕ್ಕದಲ್ಲೇ ನೆರವೇರಿಸಲಾಗಿದೆ.

ನಡೆದಿದ್ದೇನು?

ಕಿದೂರು ಕುಂಟಂಗೇರಡ್ಕದ ಪ್ರಫುಲ್ಲ (26) ಮತ್ತು ತಮಿಳುನಾಡು ನಿವಾಸಿಯಾದ ಬ್ಯಾಂಕ್ ನೌಕರ ಮಣಿ ಎಂಬವರಿಗೆ ನಾಲ್ಕು ತಿಂಗಳ ಹಿಂದೆ ಅದ್ಧೂರಿಯಾಗಿ ಮದುವೆ ನಿಶ್ಚಿತಾರ್ಥ ನಡೆದಿತ್ತು. ಇನ್ನೇನು ದಾಂಪತ್ಯ ಜೀವನಕ್ಕೆ ಕಾಲಿಡಬೇಕು ಎನ್ನುವಷ್ಟರಲ್ಲಿ, ಒಂದು ತಿಂಗಳ ಹಿಂದೆ ಸಂಭವಿಸಿದ ಬೈಕ್ ಅಪಘಾತದಲ್ಲಿ ಮಣಿ ಮೃತಪಟ್ಟಿದ್ದರು.

ಡೆತ್ ನೋಟ್‌ನಲ್ಲಿತ್ತು ಕೊನೆಯ ಆಸೆ

ತನ್ನ ಭಾವಿ ಪತಿಯ ಅಗಲಿಕೆಯಿಂದ ತೀವ್ರವಾಗಿ ನೊಂದಿದ್ದ ಪ್ರಫುಲ್ಲ, ಕಳೆದ ಭಾನುವಾರ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಸಾವಿಗೂ ಮುನ್ನ ಆಕೆ ಬರೆದಿದ್ದ ಡೆತ್ ನೋಟ್ ಎಲ್ಲರ ಕಣ್ಣಾಲಿಗಳನ್ನು ಒದ್ದೆ ಮಾಡಿದೆ. “ನನ್ನ ಮೃತದೇಹವನ್ನು ಮಣಿಯ ಸಮಾಧಿಯ ಸಮೀಪದಲ್ಲೇ ಅಂತ್ಯಸಂಸ್ಕಾರ ಮಾಡಬೇಕು” ಎಂದು ಆಕೆ ತನ್ನ ಕೊನೆಯ ಆಸೆಯನ್ನು ಬರೆದಿಟ್ಟಿದ್ದರು.

ತಮಿಳುನಾಡಿನಲ್ಲಿ ಅಂತ್ಯಕ್ರಿಯೆ

ಯುವತಿಯ ಆಸೆಯಂತೆ ಉಭಯ ಕುಟುಂಬದವರು ಮಾತುಕತೆ ನಡೆಸಿದರು. ಅದರಂತೆ ನಿನ್ನೆ ಕಾಸರಗೋಡಿನಿಂದ ಪ್ರಫುಲ್ಲರ ಮೃತದೇಹವನ್ನು ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯ ವಳ್ಳಿಯೂರು ಎಂಬಲ್ಲಿಗೆ ಕೊಂಡೊಯ್ಯಲಾಯಿತು. ಅಲ್ಲಿ ಮಣಿಯ ಸಮಾಧಿಯ ಪಕ್ಕದಲ್ಲೇ ಪ್ರಫುಲ್ಲರ ಅಂತ್ಯಸಂಸ್ಕಾರವನ್ನು ನೆರವೇರಿಸುವ ಮೂಲಕ ಪ್ರೇಮಿಗಳಿಬ್ಬರನ್ನು ಸಾವಿನಲ್ಲೂ ಒಂದಾಗಿಸಲಾಯಿತು.

ಅಂತ್ಯಸಂಸ್ಕಾರದ ವೇಳೆ ಎರಡೂ ಕುಟುಂಬದ ಸದಸ್ಯರು ಉಪಸ್ಥಿತರಿದ್ದು, ಮರುಗುವ ಪ್ರೇಮಕಥೆಗೆ ಕಂಬನಿಯ ವಿದಾಯ ಹೇಳಿದರು. ಈ ವಿಡಿಯೋ ಮತ್ತು ಸುದ್ದಿ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದ್ದು, ನೆಟ್ಟಿಗರು ಈ ಜೋಡಿಯ ಆತ್ಮಕ್ಕೆ ಶಾಂತಿ ಕೋರುತ್ತಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನ ಡಿಪ್ಲೋಮಾ ಕೋರ್ಸ್‌; ಪ್ರವೇಶಾತಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: 2026-27ನೇ ಶೈಕ್ಷಣಿಕ ಸಾಲಿಗೆ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿನ ಮೂರು ವರ್ಷಗಳ ಡಿಪ್ಲೋಮಾ (ಡಿ.ಹೆಚ್.ಟಿ.ಟಿ) ಹಾಗೂ ಎರಡನೇ ವರ್ಷದ ನೇರ ಪ್ರವೇಶಕ್ಕೆ (Lateral Entry) ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ 2026 ರ ಜುಲೈ 01ಕ್ಕೆ ಅನ್ವಯಿಸುವಂತೆ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 23 ವರ್ಷ ಹಾಗೂ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 25 ವರ್ಷ ಮೀರಿರಬಾರದು. ಒಟ್ಟು 39 ಅಭ್ಯರ್ಥಿಗಳನ್ನು (ಪುರುಷ ಮತ್ತು ಮಹಿಳಾ) ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಪ್ರತಿಯೊಬ್ಬ ವಿದ್ಯಾರ್ಥಿಗೆ ಪ್ರತಿ ತಿಂಗಳು ರೂ. 2,500/- ಗಳ ಶಿಷ್ಯವೇತನ ನೀಡಲಾಗುವುದು., ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಇಂಗ್ಲಿಷ್ ಅನ್ನು ಒಂದು ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರಬೇಕು.

ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಡಿಪ್ಲೋಮಾ ಕೋರ್ಸ್‌ಗೆ ನೇರ ಪ್ರವೇಶಕ್ಕೆ https://khtigadag.ac.in/AdmissionForm.pdf ಎರಡನೇ ವರ್ಷದ ನೇರ ಪ್ರವೇಶಕ್ಕೆ (Lateral Entry) https://khtigadag.ac.in/Lateralentryadmissionform.pdf ಈ ಲಿಂಕ್‌ಗಳ ಮೂಲಕ ಡೌನ್‌ಲೋಡ್ ಮಾಡಿಕೊಳ್ಳಬಹುದು. ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ಮೇ 30 ರೊಳಗೆ ಪ್ರಾಂಶುಪಾಲರು, ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ನರಸಾಪುರ, ಗದಗ-ಬೆಟಗೇರಿ-582102 ಇವರಿಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿಗಳಿಗಾಗಿ ಉಪ ನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ, ಜಿಲ್ಲಾ ಪಂಚಾಯತ್, ಕಾಲೇಜು ರಸ್ತೆ, ನಿಟ್ಟುವಳ್ಳಿ, ದಾವಣಗೆರೆ ಅಥವಾ ದೂರವಾಣಿ ಸಂಖ್ಯೆ: 08192-262362 ಸಂಪರ್ಕಿಸುವಂತೆ ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Continue Reading

ದಿನದ ಸುದ್ದಿ

ದಾವಣಗೆರೆ| ಅಪರಿಚಿತರು ನೀಡಿದ ಟೆಲಿಗ್ರಾಮ್ ಲಿಂಕ್ ಕ್ಲಿಕ್ ಮಾಡಿ 14 ಲಕ್ಷ ಕಳೆದುಕೊಂಡ ಉಪನ್ಯಾಸಕ

Published

on

ಸುದ್ದಿದಿನ,ದಾವಣಗೆರೆ: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚು ಲಾಭ ಬರುತ್ತದೆ ಎಂಬುದಾಗಿ ಉಪನ್ಯಾಸಕರೊಬ್ಬರಿಗೆ ಆಮಿಷ ತೋರಿಸಿದ ದುಷ್ಕರ್ಮಿಗಳು 14 ಲಕ್ಷ ರೂಪಾಯಿ ವಂಚಿಸಿರುವ ಘಟನೆ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.

ದಾವಣಗೆರೆಯ ಭೂಮಿಕಾ ನಗರದ ನಿವಾಸಿಯಾಗಿರುವ 52 ವರ್ಷದ ಸರ್ಕಾರಿ ಕಾಲೇಜಿನ ಉಪನ್ಯಾಸಕ ಹಣ ಕಳೆದುಕೊಂಡಿದ್ದಾರೆ.

ಉಪನ್ಯಾಸಕರು ಮೊದಲಿಗೆ ಟೆಲಿಗ್ರಾಂ ಮೂಲಕ ಲಿಂಕ್ ಕ್ಲಿಕ್ ಮಾಡಿದ್ದಾರೆ. ಅಲ್ಲಿ ವಂಚಕರು ಹೇಳಿದಂತೆ ಹಲವು ಲಿಂಕ್​ಗಳನ್ನು ಕ್ಲಿಕ್ ಮಾಡುತ್ತಾ ಹೋಗಿದ್ದು, ಹಂತಹಂತವಾಗಿ ಹಣ ಕಳೆದುಕೊಂಡಿದ್ದಾರೆ.

ಲಾಭದ ನಿರೀಕ್ಷೆಯಲ್ಲಿದ್ದ ಉಪನ್ಯಾಸಕರಿಗೆ ಲಾಭ ಹೋಗಲಿ, ಅಸಲೂ ಬಾರದ ಕಾರಣ ಅನುಮಾನಗೊಂಡು ತಾನು ಹಣ ಕಳೆದುಕೊಂಡಿರುವುದು ದೃಢಪಟ್ಟಿದೆ.‌ ನಂತರ ಸೈಬರ್ ಠಾಣೆಗೆ ತೆರಳಿ ಪ್ರಕರಣ ದಾಖಲಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending