Connect with us

ದಿನದ ಸುದ್ದಿ

ಬಡವರ ಮನೆ ಮಕ್ಕಳ ಕೊಲೆಗಳಾಗಲಿ ಎಂದು ಬಿಜೆಪಿ ಬಯಸುತ್ತದೆ : ಹೆಚ್.ಡಿ.ಕುಮಾರಸ್ವಾಮಿ

Published

on

ಸುದ್ದಿದಿನ,ಮೈಸೂರು: ಮತ ಕ್ರೋಢೀಕರಣಕ್ಕಾಗಿ ಪ್ರವೀಣ್ ನೆಟ್ಟಾರು ಅವರಂಥ ಬಡವರ ಮನೆ ಮಕ್ಕಳ ಮತ್ತಷ್ಟು ಕೊಲೆಗಳಾಗಲಿ ಎಂದು ಬಿಜೆಪಿ ಬಯಸುತ್ತದೆ. ಹಿಂದುತ್ವದ ಕಾರ್ಡ್ ಮೇಲೆ ಮತ್ತೆ ರಾಜ್ಯದಲ್ಲಿ ಅಧಿಕಾರ ಹಿಡಿಯಲು ಬಿಜೆಪಿ ಹವಣಿಸುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಗಂಭೀರ ಆರೋಪ ಮಾಡಿದರು.

ಮಾಧ್ಯಮಗಳ ಜತೆ ಮಾತನಾಡಿದ ಅವರು,‌ಈ ಎರಡು ಬಾರಿ ಆಪರೇಷನ್ ಕಮಲವೆಂಬ ಅನೈತಿಕ ಮಾರ್ಗದೊಂದಿಗೆ ಬಿಜೆಪಿ ಅಧಿಕಾರಕ್ಕೆ ಬಂದಿದೆ. ಮುಂದೆ, ನಡುರಸ್ತೆಗಳಲ್ಲಿ ಅಮಾಯಕರ ನೆತ್ತರು ಹರಿಸಿ ಪಾಪದ ಮಾರ್ಗದಲ್ಲಿ ಅಧಿಕಾರಕ್ಕೆ ಬರಲು ಹೊಂಚು ಹಾಕಿದೆ ಎಂದರು.

ಹಿಂದೂ ಯುವಕರ ಸಾವುಗಳಾದರೆ ರಾಜಕೀಯ ಫಸಲು ಚೆನ್ನಾಗಿ ಬರುತ್ತದೆ ಎಂದು ಬಿಜೆಪಿ ನಂಬಿದೆ. ಮತ ಕ್ರೋಢೀಕರಣಕ್ಕಾಗಿ ಪ್ರವೀಣ್ ರೀತಿಯ ಮತ್ತಷ್ಟು ಕೊಲೆಗಳಾಗಲಿ ಎಂದು ಬಿಜೆಪಿ ಬಯಸುತ್ತದೆ. ಹಿಂದುತ್ವವೇ ಅದಕ್ಕೆ ಮತ ಗಳಿಸುವವ ಮಾರ್ಗ. ಅಭಿವೃದ್ಧಿ ಹೆಸರಿನಲ್ಲಿ ಮತ ಕೇಳಲು ಬಿಜೆಪಿಗೆ ಯೋಗ್ಯತೆ ಇಲ್ಲ. ಹೆಚ್ಚೆಚ್ಚು ಯುವಕರ ಕೊಲೆಗಳು ನಡೆದಷ್ಟೂ ಅವರಿಗೆ ಅನುಕೂಲ. ಆದ್ದರಿಂದಲೇ ಕೊಲೆಯಾದಾಗ ಬಿಜೆಪಿ ನಾಯಕರು ʼಕೃತಕ ಸಂತಾಪʼ ಸೂಚಿಸುತ್ತಾರೆ. ಸಾವಿನ ಮನೆಗಳ ಮುಂದೆ ಪರೇಡ್ ಮಾಡುತ್ತಾರೆ. ಆ ಯುವಕನ ತಾಯಿ ರೋದನೆ ನೋಡಿ ನೋವಾಗಿದೆ ಎಂದು ಸಿಎಂ ಹೇಳಿದ್ದಾರೆ. ವಾರದ ಹಿಂದೆಯೇ ಎಚ್ಚೆತ್ತುಕೊಂಡಿದ್ದಿದ್ದರೆ ಅವರಿಗೆ ಆ ತಾಯಿಯ ರೋದನೆ ತಪ್ಪಿಸಲು ಸಾಧ್ಯವಿತ್ತು ಎಂದು ಮಾಜಿ ಮುಖ್ಯಮಂತ್ರಿಗಳು ಹೇಳಿದರು.

ಉತ್ತರ ಪ್ರದೇಶದಲ್ಲಿಯೂ ಇದೇ ರೀತಿ ನರಮೇಧ ನಡೆಸಿ ಬಿಜೆಪಿ ಅಧಿಕಾರಕ್ಕೆ ಬಂತು. ಮುಜಾಫರ್ ನಗರದಲ್ಲಿ ದೊಡ್ಡ ಹಿಂಸಾಕಾಂಡವೇ ನಡೆಯಿತು. ನೂರಾರು ಕುಟುಂಬಗಳು ಬೀದಿಗೆ ಬಿದ್ದವು. ಹೋಗಲಿ, ಆ ಹಿಂಸಾಚಾಋ ಯಾಕೆ ನಡೆಯಿತು ಎಂಬ ಬಗ್ಗೆ ತನಿಖೆಯಾದರೂ ನಡೆಯಿತಾ? ಅದರ ಹಿಂದೆ ಯಾರಿದ್ದರು? ಸತ್ಯ ಹೊರಗೆ ಬಂತಾ? ಇಲ್ಲ. ಆದರೆ, ಬಣ್ಣ ಬಣ್ಣದ ಜಾಹೀರಾತುಗಳಿಂದ ಜನರಿಗೆ ಮಂಕುಬೂದಿ ಎರಚುತ್ತಿದೆ ಎಂದು ಅವರು ಹೇಳಿದರು.

ನಾನು ಕೂಡ ಎರಡು ಸಲ ರಾಜ್ಯದ ಮುಖ್ಯಮಂತ್ರಿ ಆಗಿದ್ದೆ. ಒಮ್ಮೆಯೇ ಇಂಥ ಕೊಲೆ ಆಯಿತಾ? ಯಾವುದೇ ಪಕ್ಷದ ಕಾರ್ಯಕರ್ತನ ಪ್ರಾಣ ಹೋಯಿತಾ? ಸಾವಿನ ಮನೆಯಲ್ಲಿ ಸಂಭ್ರಮ ಮಾಡುವ ಕೆಲಸ ನಾನು ಮಾಡಲಾರೆ ಎಂದು ಅವರು ಹೇಳಿದರು.

ರಾಜ್ಯದಲ್ಲಿ ಈ ಹಿಂಸಾಕಾಂಡವನ್ನು ಹತ್ತಿಕ್ಕಲು ಕೂಡಲೇ ಸರಕಾರ ಮುಂದಾಗಬೇಕು. ಸರ್ವಧರ್ಮ ಗುರುಗಳ ಸಭೆಯನ್ನು ಕರೆದು ಅವರ ಮಾರ್ಗದರ್ಶನದಲ್ಲಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕು. ನಾಲ್ಕೈದು ತಿಂಗಳ ಹಿಂದೆಯೇ ನಾನು ಈ ಬಗ್ಗೆ ಹೇಳಿದ್ದೆ. ಆದರೆ ಸರಕಾರಕ್ಕೆ ಶಾಂತಿ ನೆಲೆಸುವುದು ಬೇಕಿಲ್ಲ ಎಂದು ಅವರು ಕಿಡಿಕಾರಿದರು.

ತೇಜಸ್ವಿ ಸೂರ್ಯ ಕೊಡುಗೆ ಏನು?

ಪ್ರತಿಯೊಬ್ಬರಿಗೂ ಗನ್‌ ಮ್ಯಾನ್ ನೀಡಲು ಸಾಧ್ಯವೇ ಎಂದು ಹೇಳಿಕೆ ನೀಡಿರುವ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಹರಿಹಾಯ್ದ ಕುಮಾರಸ್ವಾಮಿ ಅವರು, ಬೆಂಗಳೂರು ನಗರಕ್ಕೆ ಹಾಗೂ ರಾಜ್ಯಕ್ಕೆ ತೇಜಸ್ವಿ ಸೂರ್ಯ ಅವರ ಕೊಡುಗೆ ಏನು ಎಂಬುದು ಗೊತ್ತಿಲ್ಲ. ಜನರು ಅಂಥವರಿಗೆ ಮತ ಕೊಟ್ಟು ಗೆಲ್ಲಿಸಿ ಅಂಥವರಿಂದ ಇಂಥ ಮಾತುಗಳನ್ನು ಕೇಳಬೇಕಾಗಿ ಬಂದಿದೆ. ಜನರಿಗೆ ಇದೆಲ್ಲವನ್ನು ಸಹಿಸಿಕೊಳ್ಳದೇ ಬೇರೆ ವಿಧಿ ಇಲ್ಲ. ಇಲ್ಲಿ ಯಾರಿಗೂ ಗನ್ʼಮ್ಯಾನ್ ಬೇಕಿಲ್ಲ. ಆದರೆ ನೆಮ್ಮದಿಯಾಗಿ ಬದುಕಲು ನೆಮ್ಮದಿಯ ವಾತಾವರಣ ಬೇಕಷ್ಟೇ. ಸರಕಾರ ಅಷ್ಟು ಮಾಡಿದರೆ ಸಾಕು ಎಂದರು.

ವರ್ಗಾವಣೆಗೂ ಪೇಮೆಂಟ್ ಕೋಟಾ:

ಅಧಿಕಾರಿಗಳ ವರ್ಗಾವರ್ಗಿಯಲ್ಲಿ ಹಣದ ಹೊಳೆಯೇ ಹರಿಯುತ್ತಿದೆ ಎಂದು ದೂರಿದ ಮಾಜಿ ಮುಖ್ಯಮಂತ್ರಿಗಳು; ಒಬ್ಬ ಸರ್ಕಲ್ ಇನ್ಸ್ಪೆಕ್ಟರ್ 75 ಲಕ್ಷದಿಂದ 1 ಕೋಟಿ ರೂ.ವರೆಗೂ ಲಂಚ ನೀಡಿ ಹುದ್ದೆಗೆ ಬರುತ್ತಾರೆ. ಹಾಗೆ ಬರುವ ಅಧಿಕಾರಿಯಿಂದ ಉತ್ತಮ ಕರ್ತವ್ಯ ನಿರ್ವಹಣೆ ನಿರೀಕ್ಷಿಸಲು ಸಾಧ್ಯವೇ? ನೀವು ಸರಿಯಾಗಿ ಆಡಳಿತ ಮಾಡಿದ್ದರೆ ಯಾಕೆ ಸಾವುಗಳು ಸಂಭವಿಸುತ್ತಿದ್ದವು? ಎಂದು ಎಂದು ಕುಮಾರಸ್ವಾಮಿ ಪ್ರಶ್ನೆ ಮಾಡಿದರು.

ನಾನು ಮುಖ್ಯಮಂತ್ರಿ ಆಗಿದ್ದಾಗ ʼಹಣಕ್ಕಾಗಿ ಹುದ್ದೆʼ ಎನ್ನುವುದು ಇರಲಿಲ್ಲ. ನನ್ನ ಸರಕಾರ ತೆಗೆದು ಬಿಜೆಪಿ ಸರಕಾರ ಬಂದ ಕೂಡಲೇ ಆ ಪರಿಕಲ್ಪನೆ ಹುಟ್ಟಿಕೊಂಡಿತು. ಯಲಹಂಕದ ತಹಸೀಲ್ದಾರ್ ಹುದ್ದೆ ಪೋಸ್ಟಿಂಗ್ ಕೇಳಿಕೊಂಡು ಒಬ್ಬ ಅಧಿಕಾರಿ 1.5 ಕೋಟಿ ರೂ. ಆಫರ್ ಕೊಟ್ಟಿದ್ದ. ಆಮೇಲೆ ಬಿಡಿಎ ಆಯುಕ್ತರಾಗಲು ಅಧಿಕಾರಿ ಮಹಾಶಯನೊಬ್ಬ 15 ಕೋಟಿ ರೂ. ಆಮಿಷ ಒಡ್ಡಿದ್ದರು. ಅವರೆಲ್ಲರಿಗೂ ಚಳಿ ಬಿಡಿಸಿ ಕಳಿಸಿದ್ದೆ. ಆಮೇಲೆ ಯಡಿಯೂರಪ್ಪ ಮುಖ್ಯಮಂತ್ರಿ ಬಂದ ಕೂಡಲೇ ಅಧಿಕಾರಿಗಳಿಬ್ಬರು ಅದೇ ಜಾಗಳಲ್ಲಿ ಬಂದು ಕೂತಿದ್ದರು ಎಂದು ಮಾಹಿತಿ ಬಿಚ್ಚಿಟ್ಟರು ಕುಮಾರಸ್ವಾಮಿ ಅವರು.

ಮಾಜಿ ಸಚಿವ ಸಾ.ರಾ.ಮಹೇಶ್, ಶಾಸಕ ಅಶ್ವಿನ್ ಕುಮಾರ್ ಹಾಗೂ ವಿಧಾನ ಪರಿಷತ್ ಸದಸ್ಯ ಮಂಜೇಗೌಡ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ವಂಚನೆ | ಪ್ರಭಾರ ಕಾರ್ಯಪಾಲಕ ಅಭಿಯಂತರ ಸೋಮ್ಲನಾಯ್ಕ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ದಾವಣಗೆರೆ: 2023-24 ಮತ್ತು 2024-25ನೇ ಸಾಲಿನಲ್ಲಿ ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕುಗಳಲ್ಲಿ ಬರುವ ಸಮಸ್ಯಾತ್ಮಕ ಗ್ರಾಮಗಳಲ್ಲಿ 4215 ತುರ್ತು ಕುಡಿಯುವ ನೀರಿನ ಕಾಮಗಾರಿಯಲ್ಲಿ ನಡೆದಿರುವ ಅವ್ಯವಹಾರ ಮತ್ತು ನಕಲಿ ಕಾಮಗಾರಿಗಳನ್ನು ತನಿಖೆಗೆ ಒಳಪಡಿಸುವಂತೆ ದೂರು ನೀಡಿ 6 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ತೋರಿದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇಲ್ಲಿನ ಪ್ರಭಾರ ಕಾರ್ಯಪಾಲಕ ಅಭಿಯಂತರರಾದ ಟಿ. ಸೋಮ್ಲನಾಯ್ಕ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ದಾವಣಗೆರೆ ಜಿಲ್ಲಾ ವ್ಯಾಪ್ತಿಯಲ್ಲಿ 2023-24 ಮತ್ತು 2024-25ನೇ ಸಾಲಿನ ತುರ್ತು ಕುಡಿಯುವ ನೀರಿನ ಯೋಜನೆಗೆ ಸಂಬAಧಿಸಿದ ಕಾಮಗಾರಿಗಳಿಗೆ ಸಂಬAಧಿಸಿದAತೆ ಹೊನ್ನಾಳಿ ಉಪವಿಭಾಗದ ಅಡಿಯಲ್ಲಿ ನಡೆದಿರುವ ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕುಗಳಲ್ಲಿ ನಾಲ್ಕು ಹಂತದ ತುರ್ತು ಕುಡಿಯುವ ನೀರಿನ ಯೋಜನೆಯ ಕಾಮಗಾರಿಗಳ ಸಂಪೂರ್ಣ ಕಡತವನ್ನು ಪಡೆದು ಪರಿಶೀಲನೆ ಮಾಡಿದಾಗ, ಇಲ್ಲಿ ಸಾಕಷ್ಟು ಅವ್ಯವಹಾರ ಹಾಗೂ ಲೋಪಗಳು ಕಂಡುಬAದಿರುತ್ತವೆ. ಅಂತಹ ಪ್ರಮುಖ ಲೋಪಗಳನ್ನು ಉಲ್ಲೇಖಿಸಿ ಸೂಕ್ತ ತನಿಖೆಗೆ ಒಳಪಡಿಸುವಂತೆ ದಿನಾಂಕ: 01-12-2025 ರಂದು ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇವರಿಗೆ ದೂರು ನೀಡಲಾಗಿತ್ತು.

ಈ ದೂರು ಅರ್ಜಿಗೆ ಸಂಬಂಧಿಸಿದಂತೆ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇವರು 2 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದ ಕಾರಣ ದಿನಾಂಕ: 27-01-2026 ರಂದು ಜ್ಞಾಪನವನ್ನು ನೀಡಲಾಗಿರುತ್ತದೆ. ಆದರೆ ಜ್ಞಾಪನ ನೀಡಿ 6 ತಿಂಗಳು ಕಳೆಯುತ್ತ ಬಂದರೂ ಈ ದೂರು ಅರ್ಜಿಗೆ ಸಂಬAಧಿಸಿದAತೆ ಕಾರ್ಯಪಾಲಕ ಅಭಿಯಂತರರು (ಪ್ರಭಾರ), ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇವರು ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ತೋರಿರುತ್ತಾರೆ.

ಈ ದೂರು ಅರ್ಜಿಯನ್ನು ತನಿಖೆಗೆ ಒಳಪಡಿಸುವಲ್ಲಿ ತೋರಿದ ನಿರ್ಲಕ್ಷö್ಯಕ್ಕೆ ಪ್ರಮುಖ ಕಾರಣವೆಂದರೆ, ಹೊನ್ನಾಳಿ ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರೇ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇಲ್ಲಿನ ಪ್ರಭಾರ ಕಾರ್ಯಪಾಲಕ ಅಭಿಯಂತರರಾಗಿ ಕಾರ್ಯನಿರ್ವಹಿಸಿರುತ್ತಾರೆ. ಈ ಕಾರಣಕ್ಕಾಗಿ ತನ್ನ ಮೇಲಿನ ಆರೋಪವನ್ನು ತನಿಖೆಗೆ ಒಳಪಡಿಸುವಲ್ಲಿ ನಿರ್ಲಕ್ಷö್ಯ ತೋರಿ, ಈ ದೂರು ಅರ್ಜಿಯನ್ನು ಮೂಲೆ ಗುಂಪಾಗಿಸಿರುತ್ತಾರೆ. ಆದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಭಾರ ಕಾರ್ಯಪಾಲಕ ಅಭಿಯಂತರರಾದ ಸೋಮ್ಲನಾಯ್ಕ ವಿರುದ್ಧ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಇಂಗ್ಲಿಷ್ ಕಲಿಯಲು ಬಂದ ಜಪಾನ್ ಯುವಕ ಜೈಲು ಸೇರಿದ ; 75000 ಪರಿಹಾರ ಪಡೆದ

Published

on

ಸುದ್ದಿದಿನಡೆಸ್ಕ್:ಜಪಾನ್‌ನ ಹಿರೋತೋಷಿ ತನಕಾ ಇಂಗ್ಲಿಷ್ ಕಲಿಯಲು ಬೆಂಗಳೂರಿಗೆ ಬಂದಿದ್ದರು. ಆದರೆ ಇಂಗ್ಲಿಷ್ ಅಕಾಡೆಮಿಯಲ್ಲಿ ಸರಿಯಾಗಿ ಇಂಗ್ಲೀಷ್ ಕಲಿಸುತ್ತಿಲ್ಲವೆಂದು ಅಕಾಡೆಮಿ ಮುಖ್ಯಸ್ಥರೊಂದಿಗೆ ಜಗಳ ನಡೆದ ಬಳಿಕ ತನಕಾ ವಿರುದ್ಧ ಪೊಲೀಸ್ ಪ್ರಕರಣ ದಾಖಲಾಗಿತು. ಅವರನ್ನು ಬಂಧಿಸಿ 19 ದಿನ ಜೈಲಿನಲ್ಲಿ ಇರಿಸಲಾಯಿತು.

ತಮ್ಮ ಬಂಧನ ಸರಿಯಲ್ಲ ಎಂದು ತನಕಾ ಮಾನವ ಹಕ್ಕುಗಳ ಆಯೋಗದ ಮೊರೆ ಹೋದರು. ವೀಸಾ ಅವಧಿ ಮುಗಿಯುತ್ತಿದ್ದಂತೆ, ಪ್ರಕರಣ ಮುಗಿಯುವವರೆಗೂ ಭಾರತದಲ್ಲೇ ಇರಲು ವಿಚಿತ್ರ ಪ್ರಯತ್ನವೂ ಮಾಡಿದರು. ಪೊಲೀಸ್ ಠಾಣೆಯಿಂದ ಪ್ಲಾಸ್ಟಿಕ್ ಕುರ್ಚಿಯೊಂದನ್ನು ತೆಗೆದುಕೊಂಡು ಹೋಗಿ, ಮತ್ತೆ ಬಂಧನಕ್ಕೊಳಗಾಗಲು ಪ್ರಯತ್ನಿಸಿದರು!

ಅದು ಆಗದೇ ಇದ್ದಾಗ ಜಪಾನ್ ಗೆ ಮರಳಿ . ಅಲ್ಲಿಂದಲೇ ತಮ್ಮ ಹೋರಾಟ ಮುಂದುವರಿಸಿದ ತನಕಾ ಅವರ ಹೋರಾಟಕ್ಕೆ ಜಯ ಸಿಕ್ಕಿದೆ ಸಿಕ್ಕಿದೆ. ಕರ್ನಾಟಕದಿಂದ 75,000 ಪರಿಹಾರವನ್ನು ಪಡೆದುಕೊಂಡಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಡಾಲಿಯ ಕನಸು ಒಂದೇ ಹೀರೋ ಆಗೋದು

Published

on

ಮೈಸೂರಿನ ರಂಗಾಯಣದಲ್ಲಿ ನಾಟಕ ತಂಡಗಳಲ್ಲಿ ಗುರುತಿಸಿಕೊಂಡ ದಿನಗಳಿಂದಲೇ ಡಾಲಿ ಧನಂಜಯ್ ಅವರದ್ದು ಒಂದೇ ಕನಸು—ಸಿನಿಮಾ ಹೀರೋ ಆಗಬೇಕು!

ಕಾಲೇಜು ಯುವಕರಾಗಿದ್ದಾಗಲೂ ಮೌನ ಸ್ವಭಾವದ, ವಿಧೇಯ, ಪರಿಶ್ರಮಿ ಮತ್ತು ಗುರಿಯ ಮೇಲೆ ಸಂಪೂರ್ಣ ಗಮನ ಹೊಂದಿದ್ದವರು. ಯಾವುದೇ ಡೈವರ್ಷನ್ ಇಲ್ಲ, ಸಿನಿಮಾ ಕನಸಿನ ಕಡೆ ಮಾತ್ರ ಗಮನ!

ಇಂದು ಬಹುಭಾಷಾ ನಟನಾಗಿ ದೊಡ್ಡ ಎತ್ತರಕ್ಕೇರಿದ್ದರೂ, ತಮ್ಮ ಬೇರುಗಳನ್ನು ಅವರು ಮರೆತಿಲ್ಲ. ಇಂದಿಗೂ ತಮ್ಮ ಹಳೆಯ ಸ್ನೇಹಿತರ ಜೊತೆಗೂಡಿ ಸಿನಿಮಾ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದಾರೆ. ನಿರ್ಮಾಪಕರಾಗಿಯೂ ಗುರುತಿಸಿಕೊಂಡಿರುವ ಅವರು, ಅನೇಕ ಹೊಸ ಪ್ರತಿಭೆಗಳಿಗೆ ಅವಕಾಶ ನೀಡಿದ್ದಾರೆ.

ಅಂದಿನ ಅದೇ ಸರಳತೆ, ಅದೇ ನಡವಳಿಕೆ ಇಂದಿಗೂ ಇದೆ!

ಒಬ್ಬ ಕಾಲೇಜು ಯುವಕನಿಂದ ಬಹುಭಾಷಾ ತಾರೆಯವರೆಗೆ—ಎಂತಹ ಸ್ಪೂರ್ತಿದಾಯಕ ಪಯಣ! ಹ್ಯಾಪಿ ಬರ್ತ್ಡೇ ಡಾಲಿ

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending