Connect with us

ರಾಜಕೀಯ

ರಾಷ್ಟ್ರಪತಿ ಕುರಿತು ಕಾಂಗ್ರೆಸ್ ನಾಯಕ ಅಧೀರ್‌ರಂಜನ್ ಚೌಧರಿ ಅನುಚಿತ ಪದ ಬಳಕೆ; ಸಂಸತ್ತಿನ ಉಭಯ ಸದನಗಳಲ್ಲಿ ಗದ್ದಲ; ಕಲಾಪ ನಾಳೆಗೆ ಮುಂದೂಡಿಕೆ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ ಡೆಸ್ಕ್ : ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಕುರಿತು ಕಾಂಗ್ರೆಸ್ ಸಂಸದ ಅಧೀರ್‌ರಂಜನ್ ಚೌಧರಿ ಅವಹೇಳನಕಾರಿ ಪದ ಬಳಕೆ ಮಾಡಿರುವುದರ ವಿರುದ್ಧ ಆಡಳಿತಾರೂಢ ಬಿಜೆಪಿ ಸಂಸದರು ಲೋಕಸಭೆಯಲ್ಲಿಂದು ಪ್ರತಿಭಟನೆ ನಡೆಸಿದರು.

ಚೌಧರಿ ಹೇಳಿಕೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಕೂಡಲೇ ದೇಶದ ಜನತೆ ಎದುರು ಕ್ಷಮೆ ಯಾಚಿಸಬೇಕು ಎಂದು ಬಿಜೆಪಿ ಸಂಸದರು ಆಗ್ರಹಿಸಿದರು.

ಕೇಂದ್ರ ಸಚಿವೆ ಸ್ಮೃತಿ ಇರಾನಿ, ರಾಷ್ಟ್ರಪತಿ ಸ್ಥಾನ ಕುರಿತು ಅನುಚಿತ ಪದ ಬಳಸುವ ಮೂಲಕ ಅತ್ಯುನ್ನತ ಸಾಂವಿಧಾನಿಕ ಹುದ್ದೆಯನ್ನು ಕಾಂಗ್ರೆಸ್ ಅಪಹಾಸ್ಯ ಮಾಡಿದೆ ಎಂದರು.

ಅಲ್ಲದೆ ದೇಶದ ಮಹಿಳೆಯರು, ಬುಡಕಟ್ಟು ಸಮುದಾಯ, ಆದಿವಾಸಿಗಳು ಮತ್ತು ಬಡಜನರಿಗೆ ಅಗೌರವ ತೋರಿದೆ ಎಂದು ಸಚಿವೆ ಸ್ಮೃತಿ ಇರಾನಿ ಟೀಕಿಸಿದರು. ಚೌಧರಿ ಹೇಳಿಕೆ ಇಡೀ ದೇಶಕ್ಕೆ ಮಾಡಿದ ಅಪಮಾನವಾಗಿದ್ದು, ಜನತೆ ದಿಗ್ಭ್ರಾಂತರಾಗಿದ್ದಾರೆ. ಈ ಬಗ್ಗೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಕೂಡಲೇ ಕ್ಷಮೆ ಯಾಚಿಸಬೇಕು ಎಂದು ಕಾನೂನು ಮತ್ತು ನ್ಯಾಯಾಂಗ ಸಚಿವ ಕಿರಣ್ ರಿಜಿಜು ಆಗ್ರಹಿಸಿದರು.

ಆಯುಷ್ ಸಚಿವ ಸರ್ಬಾನಂದ ಸೋನೋವಾಲ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ರಾಜ್ಯ ಸಚಿವೆ ಭಾರತಿ ಪವಾರ್ ಸೇರಿದಂತೆ ಹಲವು ಸಚಿವರು ಮತ್ತು ಸಂಸದರು ಚೌಧರಿ ಹೇಳಿಕೆಯನ್ನು ಟೀಕಿಸಿದ್ದಾರೆ. ಲೋಕಸಭೆಯಲ್ಲಿ ಬಿಜೆಪಿ ಹಾಗೂ ಪ್ರತಿ ಪಕ್ಷಗಳ ವಾಗ್ವಾದ ಮತ್ತು ಗದ್ದಲದಿಂದಾಗಿ ಸದನದ ಕಲಾಪವನ್ನು ಹಲವು ಬಾರಿ ಮುಂದೂಡಲಾಗಿದ್ದು, ಅಂತಿಮವಾಗಿ ನಾಳೆಗೆ ಮುಂದೂಡಿಕೆ ಮಾಡಲಾಗಿದೆ.

ಆಯೋಗ ಪತ್ರ

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಬಗ್ಗೆ ಅವಹೇಳನಕಾರಿ ಪದ ಬಳಕೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸಂಸದ ಅಧೀರ್‌ರಂಜನ್ ಚೌಧರಿ ಅವರಿಗೆ ರಾಷ್ಟ್ರೀಯ ಮಹಿಳಾ ಆಯೋಗ ನೋಟಿಸ್ ಜಾರಿ ಮಾಡಿದೆ. ಮುಂದಿನ ತಿಂಗಳ 3ರಂದು ಈ ಕುರಿತು ವಿಚಾರಣೆಗೆ ನಡೆಸಲಿದ್ದು, ಖುದ್ದಾಗಿ ಹಾಜರಾಗುವಂತೆ ಚೌಧರಿ ಅವರಿಗೆ ಆಯೋಗ ಸೂಚಿಸಿದೆ. ಅಲ್ಲದೆ ಚೌಧರಿ ಅವರ ವಿರುದ್ಧ ಸೂಕ್ತ ಕ್ರಮ ಜರುಗಿಸುವಂತೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೂ ಆಯೋಗ ಪತ್ರ ಬರೆದಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಹತ್ತು ವರ್ಷಗಳ ಬಳಿಕ ಕಲಬುರಗಿಯಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಸಲು ಸರ್ಕಾರ ನಿರ್ಧಾರ

Published

on

ಸುದ್ದಿದಿನಡೆಸ್ಕ್:ಹತ್ತು ವರ್ಷಗಳ ಬಳಿಕ ಕಲಬುರಗಿ ಜಿಲ್ಲೆಯಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಸಲು ಸರ್ಕಾರ ನಿರ್ಧರಿಸಿದೆ.

ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿ ಕುರಿತಂತೆ ಚರ್ಚೆ ನಡೆಸಿ, ನಿರ್ಣಯ ತೆಗೆದುಕೊಳ್ಳಲು ಸೆಪ್ಟೆಂಬರ್ 17ಕ್ಕೆ ಸಂಪುಟ ಸಭೆ ನಡೆಯಲಿದೆ.

ಜಿಲ್ಲೆಯ ಮಿನಿ ವಿಧಾನಸೌಧದಲ್ಲಿರುವ ಪ್ರಾದೇಶಿಕ ಆಯುಕ್ತರ ಕಾರ್ಯಾಲಯದ ಸಭಾಂಗಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆಯುವ ಸಂಪುಟ ಸಭೆಯಲ್ಲಿ ಕಲ್ಯಾಣ ಕರ್ನಾಟಕದ ಬಗ್ಗೆ ವಿಶೇಷ ಆದ್ಯತೆ ನೀಡಲು ನಿರ್ಧರಿಸಲಾಗಿದೆ. ಈ ಹಿಂದೆ 2014ರ ನವೆಂಬರ್ 28ರಂದು ಸಿದ್ದರಾಮಯ್ಯ ನೇತೃತ್ವದಲ್ಲಿ ಕಲಬುರಗಿಯಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆದಿತ್ತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಪೌತಿ ಖಾತೆ ಆಂದೋಲನ ; ಸಚಿವ ಕೃಷ್ಣ ಬೈರೇಗೌಡ

Published

on

ಸುದ್ದಿದಿನಡೆಸ್ಕ್:ಬಹು ಮಾಲೀಕತ್ವ ಹೊಂದಿರುವ ಖಾಸಗಿ ಜಮೀನುಗಳ ಪೋಡಿ ಕಾರ್ಯ, ಸರ್ಕಾರಿ ಮತ್ತು ಖಾಸಗಿ ಸಹಭಾಗಿತ್ವದಲ್ಲಿನ ದರಾಖಾಸ್ತು ಪೋಡಿ ಕಾರ್ಯ ಹಾಗೂ ಜಮೀನು ಮಾಲೀಕತ್ವವನ್ನು ವಾರಸುದಾರರಿಗೆ ಮಾಡಿಕೊಡುವ ಪೋತಿ ಖಾತೆ ಆಂದೋಲನವನ್ನು ರಾಜ್ಯದಲ್ಲಿ ಹಮ್ಮಿಕೊಳ್ಳಲಾಗುವುದು ಎಂದು ಕಂದಾಯ ಖಾತೆ ಸಚಿವ ಕೃಷ್ಣ ಬೈರೇಗೌಡ ಬೆಂಗಳೂರಿನಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಮುಡಾ ಪ್ರಕರಣ ; ಅರ್ಜಿ ವಿಚಾರಣೆ ಮುಂದೂಡಿಕೆ

Published

on

ಸುದ್ದಿದಿನಡೆಸ್ಕ್:ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ವಿಚಾರಣೆಗೆ ಅನುಮತಿ ನೀಡಿರುವ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಉಚ್ಛ ನ್ಯಾಯಾಲಯ ಮುಂದೂಡಿದೆ.

ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಮನವಿ ಪುರಸ್ಕರಿಸಿದ ನ್ಯಾಯಾಲಯ ವಿಚಾರಣೆಯನ್ನು ಇದೇ ತಿಂಗಳ 9 ಕ್ಕೆ ಮುಂದೂಡಿದೆ.

ಇದೇ ವೇಳೆ ಮಧ್ಯಂತರ ಆದೇಶವನ್ನು ನ್ಯಾಯಾಲಯ ವಿಸ್ತರಿಸಿದೆ. ಇದೇ 9 ರಂದು ಎ.ಜೆ.ಶಶಿಕಿರಣ್ ಶೆಟ್ಟಿ ವಾದ ಮಂಡಿಸಲಿದ್ದು, ಇದೇ 12 ರಂದು ಮುಖ್ಯಮಂತ್ರಿ ಪರ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ವಾದ ಮಂಡನೆ ಮಾಡುವುದಾಗಿ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ವಾದ ಪ್ರತಿವಾದ ಆಲಿಸಿದ ನ್ಯಾಯಮೂರ್ತಿ ನಾಗಪ್ರಸನ್ನ, ಸೆಪ್ಟೆಂಬರ್ 12ರಂದು ಸಂಪೂರ್ಣ ವಿಚಾರಣೆ ಮುಗಿಸೋಣ ಎಂದು ಹೇಳಿ ನ್ಯಾಯಾಲಯದ ಕಲಾಪ ಮುಂದೂಡಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending