Connect with us

ದಿನದ ಸುದ್ದಿ

ದಾವಣಗೆರೆ | ರಾಜನಹಳ್ಳಿ ಸೀತಮ್ಮ ಪದವಿ ಪೂರ್ವ ಕಾಲೇಜಿನಲ್ಲಿ ನೂತನ ಕೊಠಡಿಗಳ ಉದ್ಘಾಟನೆ

Published

on

ಸುದ್ದಿದಿನ,ದಾವಣಗೆರೆ : ವಿದ್ಯಾರ್ಥಿಗಳು ಪರಿಶ್ರಮಪಟ್ಟು ಓದಿ ಉತ್ತಮ ಅಂಕ ಗಳಿಸುವ ಮೂಲಕ ತಮ್ಮ ಕಾಲೇಜು ಹಾಗೂ ಪೆÇೀಷಕರಿಗೆ ಕೀರ್ತಿ ತರಬೇಕು ಎಂದು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಹೇಳಿದರು.

ಶುಕ್ರವಾರ ನಗರದ ರಾಜನಹಳ್ಳಿ ಸೀತಮ್ಮ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ 2019-20 ನೇ ಸಾಲಿನ ರಾಜ್ಯ ಬಂಡವಾಳ ವೆಚ್ಚದಲ್ಲಿ ನಿರ್ಮಿಸಲಾದ ನೂತನ ಕಟ್ಟಡದ ಉದ್ಘಾಟನೆ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪ್ರಸ್ತುತ ದಿನಮಾನಗಳಲ್ಲಿ ಎಲ್ಲ ಕ್ಷೇತ್ರಗಳಲ್ಲೂ ಸಾಕಷ್ಟು ಸ್ಪರ್ಧೆ ಇದೆ. ಆದ್ದರಿಂದ ವಿದ್ಯಾರ್ಥಿಗಳು ಆಸಕ್ತಿಯಿಂದ ಓದಿ ಹೆಚ್ಚಿನ ಅಂಕ ಗಳಿಸುವ ಮೂಲಕ ತಮ್ಮ ಕನಸುಗಳನ್ನು ಸಾಕಾರಗೊಳಿಸಿಕೊಳ್ಳಬೇಕು. ಇಂದು ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲಿ ಸಾಕಷ್ಟು ಸಾಧನೆ ಮಾಡಿದ್ದಾರೆ, ಪುರುಷರಿಗಿಂತ ದೊಡ್ಡ ದೊಡ್ಡ ಕ್ಷೇತ್ರಗಳಲ್ಲಿ ತಮ್ಮನ್ನು ಗುರುತಿಸಿಕೊಂಡಿದ್ದಾರೆ. ಅಂತಹ ಸಾಧಕ ಮಹಿಳೆಯರಿಂದ ಸ್ಫೂರ್ತಿ ಪಡೆದು ತಾವು ಕೂಡ ತಮ್ಮ ಜೀವನದಲ್ಲಿ ಉತ್ತಮ ಸ್ಥಾನಮಾನಗಳಿಸಿಕೊಳ್ಳುವ ನಿಟ್ಟಿನಲ್ಲಿ ನಿರಂತರವಾಗಿ ಶ್ರಮಿಸಬೇಕು ಎಂದು ವಿದ್ಯಾರ್ಥಿನಿಯರಿಗೆ ಹಿತನುಡಿ ಹೇಳಿದರು.

ಮಹಾನಗರ ಪಾಲಿಕೆ ಸದಸ್ಯ ಎಸ್.ಟಿ ವೀರೇಶ್ ಮಾತನಾಡಿ, ಅನೇಕ ವರ್ಷಗಳಿಂದ ಈ ಸಂಸ್ಥೆಯು ಹಲವಾರು ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸಲು ಸಹಕಾರಿಯಾಗಿದೆ. ಸರ್ಕಾರಿ ಶಾಲೆ-ಕಾಲೇಜುಗಳು ಎಂದರೆ ಮೂಗು ಮುರಿಯುವ ಆಧುನಿಕ ಕಾಲದಲ್ಲಿ ಹಲವಾರು ವಿದ್ಯಾರ್ಥಿಗಳು ಸರ್ಕಾರಿ ಕಾಲೇಜಿನಲ್ಲಿ ಅಭ್ಯಾಸ ಮಾಡುತ್ತಿರುವುದು ಸ್ವಾಗತಾರ್ಹ ಬೆಳವಣಿಗೆಯಾಗಿದೆ. ಸತತ ತ್ಯಾಗ, ಪರಿಶ್ರಮದಿಂದ ಯಶಸ್ಸು ಕಾಣಲು ಸಾಧ್ಯ, ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಸಮಾಜದಲ್ಲಿ ಒಂದು ಉತ್ತಮ ಭವಿಷ್ಯ ರೂಪಿಸಿಕೊಂಡು ತಂದೆ-ತಾಯಿ ಹಾಗೂ ಗುರುಗಳು ಗೌರವ ಪಡುವ ಹಾಗೆ ಸಾಧನೆ ಮಾಡಬೇಕು ಎಂದರು.

ಸಮಾರಂಭದಲ್ಲಿ ಮಹಾನಗರ ಪಾಲಿಕೆ ಮಹಾಪೌರರಾದ ಆರ್. ಜಯಮ್ಮ, ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಕೆ.ಜಿ ಶಿವಕುಮಾರ್, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಶಿವರಾಜು.ಎಂ, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಬಿ.ಪಾಲಾಕ್ಷಿ, ನಿರ್ಮಿತಿ ಕೇಂದ್ರದ ಯೋಜನಾ ವ್ಯವಸ್ಥಾಪಕ ಎಸ್.ಓ ರವಿ, ಸೀತಮ್ಮ ಕಾಲೇಜಿನ ಪ್ರಾಚಾರ್ಯ ಟಿ.ಎ ಕುಸಗಟ್ಟಿ, ಪಾಲಿಕೆ ಸದಸ್ಯ ಎ.ನಾಗರಾಜ್, ದಿನೇಶ್.ಕೆ ಶೆಟ್ಟಿ ಸೇರಿದಂತೆ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು, ವಿದ್ಯಾರ್ಥಿ ವೃಂದದವರು ಉಪಸ್ಥಿತರಿದ್ದರು.

ಇದೇ ವೇಳೆ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ಕಲಾ, ವಾಣಿಜ್ಯ, ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಸನ್ಮಾನಿಸಲಾಯಿತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಭಾನುವಾರವೂ ಕ್ಯಾಶ್ ಕೌಟರ್ ಓಪನ್ ; ವಿದ್ಯುತ್ ಬಿಲ್ ಬಾಕಿ ಪಾವತಿಸಿ : ಬೆಸ್ಕಾಂ

Published

on

ಸುದ್ದಿದಿನಡೆಸ್ಕ್:ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿರುವ ಗ್ರಾಹಕರು ವಿದ್ಯುತ್ ಸಂಪರ್ಕದ ಕಡಿತದಿಂದ ತೊಂದರೆಗೊಳಗಾಗದಂತೆ ನಾಳೆ ಮತ್ತು ಇದೇ 15ರ ಭಾನುವಾರವೂ ಬೆಸ್ಕಾಂ ಉಪ ವಿಭಾಗಗಳ ಕ್ಯಾಶ್ ಕೌಂಟರ್‌ಗಳು ತೆರೆದಿರಲಿವೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

ಬಿಲ್ ಬಾಕಿ ಉಳಿಸಿಕೊಂಡಿರುವ ಗ್ರಾಹಕರು ವಿದ್ಯುತ್ ಸಂಪರ್ಕ ಕಡಿತದಿಂದ ತೊಂದರೆಗೆ ಒಳಗಾಗಬಾರದು ಹಾಗೂ ಆನ್‌ಲೈನ್ ಪೇಮೆಂಟ್ ಬಳಸದವರ ಅನಕೂಲಕ್ಕಾಗಿ ಈ ವಿಶೇಷ ವ್ಯವಸ್ಥೆ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಬಿಲ್ ಬಂದ 30 ದಿನದೊಳಗೆ ವಿದ್ಯುತ್ ಶುಲ್ಕ ಪಾವತಿಸದಿದ್ದಲ್ಲಿ ಮತ್ತು ಹೆಚ್ಚುವರಿ ಭದ್ರತಾ ಠೇವಣಿ ಮೊತ್ತ ಪಾವತಿಸದಿದ್ದಲ್ಲಿ ಕೆಇಆರ್‌ಸಿ ನಿಯಮಾವಳಿ ಅನ್ವಯ ಗ್ರಾಹಕರ ವಿದ್ಯುತ್ ಸಂಪರ್ಕ ಕಡಿತಗೊಳಿಸಲು ನಿರ್ಧರಿಸಿದ್ದು, ಸೆಪ್ಟೆಂಬರ್ 1ರಿಂದಲೇ ಈ ನಿಯಮ ಜಾರಿಯಾಗಿದೆ ಎಂದು ಹೇಳಿದೆ.

ವಿದ್ಯುತ್ ಬಿಲ್ ಬಾಕಿ ಮೊತ್ತ ಮತ್ತು ಹೆಚ್ಚುವರಿ ಭದ್ರತಾ ಠೇವಣಿ ಮೊತ್ತ 100 ರೂಪಾಯಿ ಗಳಿಗಿಂತ ಅಧಿಕವಾಗಿದ್ದಲ್ಲಿ, ಅಂತಹ ಸ್ಥಾಪನಗಳ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲಾಗುತ್ತದೆ. ಗೃಹ ಜ್ಯೋತಿಯೋಜನೆ ಅಡಿ ಶೂನ್ಯ ಬಿಲ್ ಪಡೆಯುತ್ತಿರುವ ಗ್ರಾಹಕರ ಹಿಂಬಾಕಿ ಶೂನ್ಯವಿದ್ದಲ್ಲಿ ಈ ಬಗ್ಗೆ ಚಿಂತಿಸಬೇಕಿಲ್ಲ ಎಂದು ಪ್ರಕಟಣೆ ಸ್ಪಷ್ಟಪಡಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಹತ್ತು ವರ್ಷಗಳ ಬಳಿಕ ಕಲಬುರಗಿಯಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಸಲು ಸರ್ಕಾರ ನಿರ್ಧಾರ

Published

on

ಸುದ್ದಿದಿನಡೆಸ್ಕ್:ಹತ್ತು ವರ್ಷಗಳ ಬಳಿಕ ಕಲಬುರಗಿ ಜಿಲ್ಲೆಯಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಸಲು ಸರ್ಕಾರ ನಿರ್ಧರಿಸಿದೆ.

ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿ ಕುರಿತಂತೆ ಚರ್ಚೆ ನಡೆಸಿ, ನಿರ್ಣಯ ತೆಗೆದುಕೊಳ್ಳಲು ಸೆಪ್ಟೆಂಬರ್ 17ಕ್ಕೆ ಸಂಪುಟ ಸಭೆ ನಡೆಯಲಿದೆ.

ಜಿಲ್ಲೆಯ ಮಿನಿ ವಿಧಾನಸೌಧದಲ್ಲಿರುವ ಪ್ರಾದೇಶಿಕ ಆಯುಕ್ತರ ಕಾರ್ಯಾಲಯದ ಸಭಾಂಗಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆಯುವ ಸಂಪುಟ ಸಭೆಯಲ್ಲಿ ಕಲ್ಯಾಣ ಕರ್ನಾಟಕದ ಬಗ್ಗೆ ವಿಶೇಷ ಆದ್ಯತೆ ನೀಡಲು ನಿರ್ಧರಿಸಲಾಗಿದೆ. ಈ ಹಿಂದೆ 2014ರ ನವೆಂಬರ್ 28ರಂದು ಸಿದ್ದರಾಮಯ್ಯ ನೇತೃತ್ವದಲ್ಲಿ ಕಲಬುರಗಿಯಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆದಿತ್ತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಇಂದು ದೇಶಾದ್ಯಂತ ಗಣೇಶ ಹಬ್ಬದ ಸಂಭ್ರಮ

Published

on

ಸುದ್ದಿದಿನಡೆಸ್ಕ್:ಇಂದು ಗಣೇಶ ಚತುರ್ಥಿ, ದೇಶ ಸೇರಿ ನಾಡಿನದ್ಯಂತ ಹಿಂದೂ ಸಂಪ್ರದಾಯದಲ್ಲಿ ನಾಡಿನ ಜನತೆ ತಮ್ಮ ಒಳಿತಿಗಾಗಿ, ಜ್ಞಾನ ಸಮೃದ್ಧಿಗಾಗಿ ಶಿವನ ಪುತ್ರ ಗಣೇಶನ ಮೂರ್ತಿಗಳನ್ನು ಪ್ರತಿಷ್ಠಾಪನೆ ಮಾಡಿ ಅತ್ಯಂತ ಶ್ರದ್ದಾ ಭಕ್ತಿಯಿಂದ ಈ ಹಬ್ಬವನ್ನು ಆಚರಣೆ ಮಾಡುತ್ತಿದ್ದಾರೆ ಅದರಂತೆ ಬೆಂಗಳೂರು ಜನತೆ ಮನೆ ಮನೆಗಳಲ್ಲಿ ಪ್ರತಿಷ್ಠಾಪನೆ ಮಾಡಿರುವ ಗಣೇಶನ ಮೂರ್ತಿಗಳನ್ನು ಜಲ ಮೂಲಗಳಲ್ಲಿ ವಿಸರ್ಜಿಸಲು ಬೆಂಗಳೂರು ಮಹಾ ನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.

ಇನ್ನೂ ಗಣೇಶ ಚತುರ್ಥಿ ವಿಶೇಷವಾಗಿ ನಾಡಿನ ಜನತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸೇರಿದಂತ್ತೆ ಅನೇಕ ಸಚಿವರು ಹಾಗೂ ಗಣ್ಯರು ಶುಭ ಹಾರೈಸಿದ್ದಾರೆ.

ಗಣೇಶ ಹಬ್ಬದ ಆಚರಣೆಯ ಸಂದರ್ಭದಲ್ಲಿ ಮದ್ಯಪಾನಾಸಕ್ತರು ಗಲಭೆಮಾಡುವ ಸಾಧ್ಯತೆ ಇದ್ದು, ಈ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತಿ ಕಾಪಾಡುವ ದೃಷ್ಟಿಯಿಂದ ಕರ್ನಾಟಕ ಅಬಕಾರಿ ನಿಯಮಗಳಡಿ ಇಂದಿನಿಂದ ಉಡುಪಿ ಜಿಲ್ಲೆಯಾದ್ಯಂತ ಹಾಗೂ ಉಡುಪಿ ನಗರಸಭೆ ವ್ಯಾಪ್ತಿಯಲ್ಲಿ ಇದೇ 9 ಮತ್ತು ಸೆಪ್ಟೆಂಬರ್ 11 ರಂದು ಮಧ್ಯಾಹ್ನ 2 ರಿಂದ ಮದ್ಯರಾತ್ರಿ 12.00 ಗಂಟೆಯವರೆಗೆ ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.

ನೈಸರ್ಗಿಕವಾಗಿ ತಯಾರಿಸಿದ ಮಣ್ಣಿನ ಗಣೇಶನ ವಿಗ್ರಹಗಳನ್ನು ಮಾತ್ರ ಬಳಸುವ ಮೂಲಕ ಕೆರೆ, ನದಿ ಮೂಲಗಳು ಕಲುಷಿತಗೊಳಿಸದಂತೆ ಕಾಪಾಡುವುದು ನಮ್ಮ ಕರ್ತವ್ಯ ಎಂದು ಸಣ್ಣ ನೀರಾವರಿ ಖಾತೆ ಸಚಿವ ಎನ್.ಎಸ್.ಬೋಸರಾಜು ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending