ದಿನದ ಸುದ್ದಿ
ಮತದಾರರ ಪಟ್ಟಿಯಲ್ಲಿ ಆಧಾರ್ ನಮೂದು ಪರೀಕ್ಷಿಸಿಕೊಳ್ಳಿ : ಜಿಲ್ಲಾಧಿಕಾರಿ ಶಿವಾನಂದ ಕಾಪಶಿ
ಸುದ್ದಿದಿನ,ದಾವಣಗೆರೆ : ಭಾರತ ಚುನಾವಣಾ ಆಯೋಗದ ( Election commission) ನಿರ್ದೇಶನದಂತೆ ಜಿಲ್ಲೆಯ ಎಲ್ಲಾ ಮತದಾರರು ಸ್ವಯಂ ಪ್ರೇರಿತರಾಗಿ ತಮ್ಮ ಆಧಾರ್ ಸಂಖ್ಯೆಯನ್ನು ( Adhar card number) ನೀಡಿ, ಮತದಾರರ ಪಟ್ಟಿಯಲ್ಲಿ ನಮೂದಿಸಿರುವುದನ್ನು ದೃಢೀಕರಿಸಿಕೊಳ್ಳಲು ಮುಂದಾಗಬೇಕು. ಈ ಪ್ರಕ್ರಿಯೆ ಯಶಸ್ವಿಗೊಳಿಸಲು ಎಲ್ಲಾ ರಾಜಕೀಯ ಪಕ್ಷಗಳು ಸಹಕಾರ ನೀಡಬೇಕು ಎಂದು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ( shivananda kapashi) ಹೇಳಿದರು.
ಶುಕ್ರವಾರ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ನಡೆದ ಮತದಾರರ ಪಟ್ಟಿಯಲ್ಲಿ ಮತದಾರರ ದೃಢೀಕರಣ, ಆಧಾರ್ ಜೋಡಣೆ ಹಾಗೂ ಮತದಾರರ ಪಟ್ಟಿ ಪರಿಷ್ಕರಣೆ ಕುರಿತಂತೆ ಏರ್ಪಡಿಸಲಾದ ರಾಜಕೀಯ ಪಕ್ಷಗಳೊಂದಿಗಿನ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪ್ರಜಾ ಪ್ರಾತಿನಿಧ್ಯ ಕಾಯ್ದೆ 1951ರ ಮತ್ತು ಮತದಾರರ ನೊಂದಣಿ ನಿಯಮಗಳು 1960 ರ ಪ್ರಕಾರ ಮತದಾರರ ನೋಂದಣಿಯ ನಮೂನೆಗಳಲ್ಲಿ ಪ್ರಸ್ತುತ ಬಹಳಷ್ಟು ಮಾರ್ಪಾಡುಗಳನ್ನು ಮಾಡಲಾಗಿದೆ. ಇದರಲ್ಲಿ ನಮೂನೆ 6-ಬಿ ಅನ್ನು ಹೊಸದಾಗಿ ಪರಿಚಯಿಸಲಾಗಿದ್ದು, ಮತದಾರರ ಪಟ್ಟಿಯಲ್ಲಿ ನಮೂದುಗಳನ್ನು ದೃಢೀಕರಿಸಲು ಸಂಬಂಧಪಟ್ಟ ಮತದಾರರಿಂದ ಆಧಾರ್ ಸಂಖ್ಯೆ ಪಡೆಯಲು ಈ ನಮೂನೆಯಲ್ಲಿ ಅವಕಾಶ ಕಲ್ಪಿಸಲಾಗಿದೆ.
ಆನ್ಲೈನ್ ಅಥವಾ ಆಫ್ಲೈನ್ ಮೂಲಕವೂ ಆಧಾರ್ ಜೋಡಣೆಗೆ ಅವಕಾಶ ಕಲ್ಪಿಸಲಾಗಿದ್ದು. ಆಫ್ಲೈನ್ ನಮೂನೆ 6-ಬಿ ಯನ್ನು ಸಂಬಂಧಪಟ್ಟ ಮತದಾರರ ನೋಂದಾಣಾಧಿಕಾರಿ, ತಹಶೀಲ್ದಾರರ ಕಛೇರಿ ಅಥವಾ ಬೂತ್ ಮಟ್ಟದ ಅಧಿಕಾರಿಗಳಿಂದ ಪಡೆದು ಸಲ್ಲಿಸಬಹುದು.
ಆನ್ಲೈನ್ ಮೂಲಕವೂ ಅವಕಾಶವಿದ್ದು, ಮತದಾರರು ಆಧಾರ್ ಸಂಖ್ಯೆಯನ್ನು ಎನ್ವಿಎಸ್ಪಿ ನ್ಯಾಷನಲ್ ವೋಟರ್ಸ ಸರ್ವಿಸ, ವಿಹೆಚ್ಎ ವೋಟರ್ ಹೆಲ್ಪ್ಲೈನ್ ಆ್ಯಪ್ ಹಾಗೂ ಗರುಡ ಆ್ಯಪ್ಗಳ ಮೂಲಕ ಅಥವಾ ವೋಟರ್ ಪೋರ್ಟಲ್ ಮುಖಾಂತರ ಮೊಬೈಲ್ ಮೂಲಕವೇ ಸ್ವಯಂ ದೃಢೀಕರಣದೊಂದಿಗೆ ಸಲ್ಲಿಸಬಹುದು.
ಮತದಾರರು ಸ್ವಯಂ ದೃಢೀಕರಣ ಬಯಸದಿದ್ದರೆ ಅಥವಾ ಆನ್ಲೈನ್ ಸ್ವಯಂ ದೃಢೀಕರಣ ವಿಫಲವಾದಲ್ಲಿ, ಮತದಾರರು ದೃಢೀಕರಣವಿಲ್ಲದೆ ಆಫ್ಲೈನ್ನಲ್ಲೆ ಅಗತ್ಯ ಲಗತ್ತುಗಳೊಂದಿಗೆ ನಮೂನೆ 6-ಬಿ ನಲ್ಲಿ ಸಲ್ಲಿಸಬಹುದಾಗಿದೆ. ಈ ಕುರಿತಂತೆ ಜಿಲ್ಲೆಯಲ್ಲಿ ಬರುವ ಆಗಸ್ಟ್ 04 ರಿಂದ ವಿಶೇಷ ಜನಜಾಗೃತಿ ಅಭಿಯಾನವನ್ನು ಪ್ರಾರಂಭಿಸಲಾಗುತ್ತಿದ್ದು, ಬೂತ್ ಮಟ್ಟದಲ್ಲಿ, ಗ್ರಾಮ, ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿಯೂ ವ್ಯಾಪಕ ಪ್ರಚಾರ ನೀಡಲಾಗುವುದು.
ಎಲ್ಲಾ ರಾಜಕೀಯ ಪಕ್ಷಗಳು ತಮ್ಮ ಬಿಎಲ್ಎ ರೊಂದಿಗೆ, ಬೂತ್ ಮಟ್ಟದಲ್ಲಿ ವ್ಯಾಪಕ ಪ್ರಚಾರ ಕೈಗೊಂಡು, ಈ ಪ್ರಕ್ರಿಯೆಯ ಯಶಸ್ವಿಗೆ ಸಹಕಾರ ನೀಡಬೇಕು. ಅರ್ಹ ಮತದಾರರನ್ನು ಹೆಚ್ಚಿನ ಸಂಖ್ಯೆಯಲ್ಲಿ ನೊಂದಣಿ ಮಾಡುವ ಮತ್ತು ಅನರ್ಹ ಮತದಾರರನ್ನು ತೆಗೆದುಹಾಕುವ ಹಾಗೂ ಮತದಾರರಿಂದ ಸ್ವಯಂ ಪ್ರೇರಿತ ಆಧಾರ್ ಸಂಗ್ರಹಣೆ ಕಾರ್ಯದಲ್ಲಿ ಸಹಕರಿಸುವುದರೊಂದಿಗೆ ರಾಜಕೀಯ ಪಕ್ಷಗಳು ಭಾರತ ಚುನಾವಣಾ ಆಯೋಗದ ಶುದ್ಧ, ನಿಖರ ಮತ್ತು ದೋಷಮುಕ್ತ ಮತದಾರರ ಪಟ್ಟಿಗಳನ್ನು ತಯಾರಿಸುವ ಕಾರ್ಯವನ್ನು ಜಿಲ್ಲೆಯಲ್ಲಿ ಯಶಸ್ವಿಗೊಳಿಸಲು ಸಹಕರಿಸಬೇಕು ಎಂದು ಹೇಳಿದರು.
ಇದನ್ನೂ ಓದಿ | ಬಿಜೆಪಿ ಕಾರ್ಯಕರ್ತರಿಗೆ ಪ್ರಬುದ್ಧತೆ ಕಡಿಮೆ ; ಅವರನ್ನು ಮನೆಗೆ ಕಳುಹಿಸುವುದು ಐದು ನಿಮಿಷದ ಕೆಲಸ : ಕೆ.ಎಸ್ ಈಶ್ವರಪ್ಪ
ಜಿಲ್ಲೆಯಲ್ಲಿ ಸದ್ಯ 1692 ಮತಗಟ್ಟೆಗಳಿದ್ದು ಪುರುಷರು 7,04,685 ಮಹಿಳೆಯರು 6,98,986 ಇತರೆ 122 ಸೇರಿದಂತೆ ಒಟ್ಟು 14,03,793 ಲಕ್ಷ ಮತದಾರರಿದ್ದಾರೆ. ಆಧಾರ್ ಸಂಖ್ಯೆ ನೀಡಿ ಮತದಾರರ ಪಟ್ಟಿ ದೃಢೀಕರಣ ಪ್ರಕ್ರಿಯೆ ಆಗಸ್ಟ್ 04 ರಿಂದ ಜಾರಿಗೆ ಬರಲಿದ್ದು, ಇದು ನಿರಂತರವಾಗಿ ಜಾರಿಯಲ್ಲಿರುತ್ತದೆ. ಮತದಾರರ ನೊಂದಣಿಗೆ ಜನವರಿ 01, ಏಪ್ರಿಲ್ 01, ಜುಲೈ 01 ಹಾಗೂ ಅಕ್ಟೋಬರ್ 01 ರಂತೆ ಒಟ್ಟು ನಾಲ್ಕು ಅರ್ಹತಾ ದಿನಾಂಕಗಳನ್ನು ನಿಗದಿಪಡಿಸಿದ್ದು, ಮತದಾರರ ಪಟ್ಟಿಗೆ ಅರ್ಹರು ತಮ್ಮ ಹೆಸರು ಸೇರ್ಪಡೆಗೊಳಿಸಲು ಅವಕಾಶ ಕಲ್ಪಿಸಲಾಗಿದೆ.
ಅರ್ಜಿ ನಮೂನೆ 07 ರಲ್ಲಿ ಹೆಸರು ತೆಗೆದುಹಾಕಲು ಅವಕಾಶ ಕಲ್ಪಿಸಲಾಗಿದೆ. ನಮೂನೆ 08 ರಲ್ಲಿ ಮತದಾರರ ನಿವಾಸ ಬದಲಾವಣೆ, ವಿವಿಧ ತಿದ್ದುಪಡಿಗಳು, ಮತದಾರರ ಗುರುತಿನ ಚೀಟಿ ಬದಲಾವಣೆ ಹಾಗೂ ವಿಕಲಚೇತನ ವ್ಯಕ್ತಿ ಗುರುತಿಸುವುದಕ್ಕಾಗಿ ಬಳಸಲಾಗುವುದು.
ಚುನಾವಣಾ ಕ್ಷೇತ್ರದೊಳಗೆ ಒಂದು ಭಾಗ ಸಂಖ್ಯೆಯಿಂದ ಮತ್ತೋಂದು ಭಾಗಸಂಖ್ಯೆಗೆ ವರ್ಗಾವಣೆ ಹೊಂದಲು ಹಾಗೂ ಒಂದು ಕ್ಷೇತ್ರದಿಂದ ಮತ್ತೋಂದು ಕ್ಷೇತ್ರಕ್ಕೆ ಬದಲಾವಣೆ ಹೊಂದಲು ಅವಕಾಶ ಕಲ್ಪಿಸಲಾಗಿದೆ. ಮತಗಟ್ಟೆಗಳ ರ್ಯಾಷಲೈಜೇಷನ್ ಅಥವಾ ಮರು ವ್ಯವಸ್ಥೆ ಕಾರ್ಯ ಆಗಸ್ಟ್ 04 ರಿಂದ ಅಕ್ಟೋಬರ್ 24 ರವರೆಗೆ ನಡೆಯಲಿದ್ದು, ಮತದಾರರ ಕರಡು ಪಟ್ಟಿ ನವೆಂಬರ್ 09 ರಂದು ಪ್ರಕಟವಾಗಲಿದೆ.
ಆಗಸ್ಟ್ 08 ರವರೆಗೆ ಅರ್ಜಿಗಳನ್ನು ಸಲ್ಲಿಸಲು ಅವಕಾಶವಿರುತ್ತದೆ. ಹಕ್ಕು ಮತ್ತು ಆಕ್ಷೇಪಣೆಗಳ ಅರ್ಜಿಗಳನ್ನು ಡಿಸೆಂಬರ್ 26 ರ ಒಳಗೆ ವಿಲೇವಾರಿ ಮಾಡಲಾಗುವುದು, ಮತದಾರರ ಅಂತಿಮ ಪಟ್ಟಿ 2023 ರ ಜನವರಿ 05 ಕ್ಕೆ ಪ್ರಕಟಗೊಳ್ಳಲಿದೆ ಎಂದು ಹೇಳಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಬೆಂಕಿ ರಹಿತ ಕುಕಿಂಗ್ ಕಾರ್ಯಕ್ರಮ
ಸುದ್ದಿದಿನ,ದಾವಣಗೆರೆ: ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ವಿದ್ಯಾರ್ಥಿನಿಯರಿಗಾಗಿ “ಕುಕಿಂಗ್ ವಿಥೌಟ್ ಫೈರ್” ಎಂಬ ಬೆಂಕಿ ರಹಿತ ಆಹಾರ ತಯಾರಿ ಕಾರ್ಯಕ್ರಮವನ್ನು ಇಂದು ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಹಲವಾರು ತಂಡಗಳು ಉತ್ಸಾಹದಿಂದ ಭಾಗವಹಿಸಿ ತಮ್ಮ ಕೌಶಲ್ಯವನ್ನು ಪ್ರದರ್ಶಿಸಿದರು. ಕಾರ್ಯಕ್ರಮದ ಅಂಗವಾಗಿ ಆಹಾರ ಮೇಳವೂ ಏರ್ಪಡಿಸಲಾಯಿತು. ವಿದ್ಯಾರ್ಥಿನಿಯರು ಕಾರಟ್ ಹಲ್ವಾ, ಫ್ರೂಟ್ ಸಲಾಡ್, ಚುರಿ ಮುರಿ, ಮೊಸರು ಅವಲಕ್ಕಿ, ವಿವಿಧ ರುಚಿಯ ಜ್ಯೂಸ್ಗಳು, ಕೊಕೊನೆಟ್ ಬರ್ಫಿ, ಕುಕುಂಬರ್ ಬೋಟ್, ಟೊಮೇಟೊ ಚಾಟ್, ಆಪಲ್ ಪೇಡ ಮತ್ತು ಅವಲಕ್ಕಿ ಚಿತ್ರಾನ್ನ ಸೇರಿದಂತೆ ಹಲವಾರು ಪೌಷ್ಟಿಕ ಹಾಗೂ ರುಚಿಕರ ಆಹಾರಗಳನ್ನು ತಯಾರಿಸಿ ಪ್ರದರ್ಶನೆ ಮತ್ತು ಮಾರಾಟ ಮಾಡಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರು ಮತ್ತು ವಿದ್ಯಾರ್ಥಿನಿಯರು ಪಾಲ್ಗೊಂಡು ಯಶಸ್ವಿ ಕಾರ್ಯಕ್ರಮವನ್ನಾಗಿ ಮಾಡಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮಕ್ಕಳ ಆಧಾರ್ ಬಯೋಮೆಟ್ರಿಕ್ ನವೀಕರಣಕ್ಕೆ ಉಚಿತ ಅವಕಾಶ : ಕೂಡಲೇ ಆಧಾರ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ
ಸುದ್ದಿದಿನ,ದಾವಣಗೆರೆ: ಜಿಲ್ಲೆಯ 5 ರಿಂದ 7 ವರ್ಷ ಹಾಗೂ 15 ರಿಂದ 17 ವರ್ಷದ ವಯೋಮಿತಿಯ ಮಕ್ಕಳಿಗೆ ಕಡ್ಡಾಯ ಬಯೋಮೆಟ್ರಿಕ್ ಅಪ್ಡೇಟ್ (Mandatory Biometric Update) ಮಾಡಿಸಲು ಜಿಲ್ಲಾಡಳಿತವು ವಿಶೇಷ ಅವಕಾಶ ಕಲ್ಪಿಸಿದೆ. ಜಿಲ್ಲೆಯ ಎಲ್ಲಾ ಆಧಾರ್ ಕೇಂದ್ರಗಳಲ್ಲಿ ಸೆಪ್ಟೆಂಬರ್ 30, 2026 ರವರೆಗೆ ಈ ಸೇವೆಯು ಸಂಪೂರ್ಣ ಉಚಿತವಾಗಿ ಲಭ್ಯವಿರಲಿದೆ.
ಆಧಾರ್ ನಿಯಮಗಳ ಪ್ರಕಾರ, ಮಕ್ಕಳಿಗೆ 5 ಮತ್ತು 15 ವರ್ಷ ತುಂಬಿದಾಗ ಬಯೋಮೆಟ್ರಿಕ್ ವಿವರಗಳನ್ನು ನವೀಕರಿಸುವುದು ಕಡ್ಡಾಯವಾಗಿದೆ. ಈ ನವೀಕರಣದಿಂದ ಶಾಲಾ ದಾಖಲಾತಿ, ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳು, ವಿದ್ಯಾರ್ಥಿ ವೇತನ ಹಾಗೂ ಸರ್ಕಾರದ ವಿವಿಧ ಜನಕಲ್ಯಾಣ ಯೋಜನೆಗಳ ಸೌಲಭ್ಯ ಪಡೆಯಲು ಅನುಕೂಲವಾಗಲಿದೆ.
ಪೋಷಕರು ತಮ್ಮ ಮಕ್ಕಳ ಆಧಾರ್ ಕಾರ್ಡ್ ಮತ್ತು ಪೂರಕ ದಾಖಲೆಗಳೊಂದಿಗೆ ಹತ್ತಿರದ ಆಧಾರ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು. ಜಿಲ್ಲೆಯ ಎಲ್ಲಾ ಪೋಷಕರು ಈ ಜವಾಬ್ದಾರಿಯನ್ನು ಅರಿತು, ನಿಗದಿತ ಅವಧಿಯೊಳಗೆ ತಮ್ಮ ಮಕ್ಕಳ ಆಧಾರ್ ನವೀಕರಿಸುವ ಮೂಲಕ ಸರ್ಕಾರದ ಯೋಜನೆಗಳು ತಲುಪಲು ಸಹಕರಿಸಬೇಕೆಂದು ಅಪರ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ
ಹಿರಿಯ ಕ್ರಿಕೆಟ್ ಪಟು ಎನ್ಆರ್ಎಚ್ ರಮೇಶ್ ನಿಧನ
ಸುದ್ದಿದಿನ,ದಾವಣಗೆರೆ: ನಗರದ ಎನ್ಆರ್ಎಚ್ ಸೈಕಲ್ ಮಾರ್ಟ್ ಮಾಲೀಕ, ದಾವಣಗೆರೆ ಫ್ರೆಂಡ್ಸ್ ಕ್ರಿಕೆಟ್ ಕ್ಲಬ್ನ ನಾಯಕನಾಗಿದ್ದ ಎನ್.ಆರ್.ಎಚ್.ರಮೇಶ ಇಲ್ಲಿನ ಕೆಟಿಜೆ ನಗರದ 15ನೇ ಕ್ರಾಸ್, 2ನೇ ಮೇನ್ನಲ್ಲಿರುವ ತಮ್ಮ ನಿವಾಸದಲ್ಲಿ ಬುಧವಾರ ಸಂಜನೆ ನಿಧನರಾಗಿದ್ದಾರೆ. ಅವರಿಗೆ 51 ವರ್ಷ ವಯಸ್ಸಾಗಿತ್ತು.
ಮೃತರು ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರು, ಓರ್ವ ಸಹೋದರ, ಮೂವರು ಸಹೋದರಿಯರು ಸೇರಿದಂತೆ ಬಂಧು-ಬಳಗ ಅಗಲಿದ್ದಾರೆ. ದಾವಣಗೆರೆ ಗಾಂಧಿ ನಗರ ಸಮೀಪದ ವೀರಶೈವ ರುದ್ರಭೂಮಿಯಲ್ಲಿ ಮೇ.7ರಂದು ಮಧ್ಯಾಹ್ನ 2 ಗಂಟೆಗೆ ಅಂತ್ಯಕ್ರಿಯೆ ನಡೆಯಲಿದೆ.
90ರ ದಶಕದಲ್ಲಿ ದಾವಣಗೆರೆ ಸೇರಿದಂತೆ ನೆರೆ ಹೊರೆಯ ಜಿಲ್ಲೆಗಳಲ್ಲಿ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯ, ಪಂದ್ಯಾವಳಿಗಳಲ್ಲಿ ಭರ್ಜರಿ ಸಿಕ್ಸರ್ ಭಾರಿಸುವ ಮೂಲಕ ಕ್ರಿಕೆಟ್ ಪ್ರೇಮಿಗಳ ನೆಚ್ಚಿನ ಆಟಗಾರನಾಗಿ ರಮೇಶ ಸಾಧನೆ ಮಾಡಿದ್ದರು. ಎನ್ಆರ್ಎಚ್ ರಮೇಶ ನಿಧನಕ್ಕೆ ಎಫ್ಸಿಸಿ ತಂಡದ ಹಿರಿಯ ಆಟಗಾರರು, ದಾವಣಗೆರೆ ಕ್ರಿಕೆಟ್ ಕ್ಲಬ್ ಸೇರಿದಂತೆ ವಿವಿಧ ಕ್ರಿಕೆಟ್ ಕ್ಲಬ್ಗಳ ಹಿರಿಯ ಆಟಗಾರರು ತೀವ್ರ ಸಂತಾಪ ಸೂಚಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂಕಣ4 days agoಸಮರ್ಥ್ ಶಾಮನೂರು ಪ್ರಯಾಸದ ಗೆಲುವು ಮತ್ತು ಮುಂದಿನ ಸವಾಲುಗಳು
-
ದಿನದ ಸುದ್ದಿ7 days agoದಾವಣಗೆರೆ | ದೇಗುಲಗಳಲ್ಲಿ ನಿಧಿ ಶೋಧನೆ ಯತ್ನ ; ಆರು ಜನರ ಬಂಧನ
-
ದಿನದ ಸುದ್ದಿ3 days agoಸಂಶೋಧಕರಿಂದ ಪಶ್ಚಿಮ ಘಟ್ಟಗಳಲ್ಲಿ ಮೂರು ಅಣಬೆಯ ಹೊಸ ಶಿಲೀಂಧ್ರ ಜಾತಿಗಳ ಪತ್ತೆ
-
ದಿನದ ಸುದ್ದಿ2 days agoದಾವಣಗೆರೆ | ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಬೆಂಕಿ ರಹಿತ ಕುಕಿಂಗ್ ಕಾರ್ಯಕ್ರಮ
-
ದಿನದ ಸುದ್ದಿ2 days agoಮಕ್ಕಳ ಆಧಾರ್ ಬಯೋಮೆಟ್ರಿಕ್ ನವೀಕರಣಕ್ಕೆ ಉಚಿತ ಅವಕಾಶ : ಕೂಡಲೇ ಆಧಾರ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ
-
ಕ್ರೀಡೆ2 days agoಹಿರಿಯ ಕ್ರಿಕೆಟ್ ಪಟು ಎನ್ಆರ್ಎಚ್ ರಮೇಶ್ ನಿಧನ

