Connect with us

ರಾಜಕೀಯ

ನೆಹರೂ ಕುರಿತು ಅಟಲ ಬಿಹಾರಿ ವಾಜಪೇಯಿ ಅವರು ಏನು ಹೇಳಿದ್ದರು ಗೊತ್ತಾ..?

Published

on

  • ಮೂಲ : ಅಟಲ್ ಬಿಹಾರಿ ವಾಜಪೇಯಿ, ಕನ್ನಡಕ್ಕೆ: ಗಿರೀಶ್ ತಾಳಿಕಟ್ಟೆ

ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ಆಧುನಿಕ ಭಾರತದ ನಿರ್ಮಾತೃ, ಸ್ವತಂತ್ರ ಭಾರತದ ಮೊದಲ ಪ್ರಧಾನಿ ಶ್ರೀ ಪಂಡಿತ್ ಜವಾಹರಲಾಲ್ ನೆಹರೂ ಅವರು 27 ಮೇ 1964ರಲ್ಲಿ ನಮ್ಮನ್ನು ಅಗಲಿದಾಗ, ಅಂದಿನ ರಾಜ್ಯಸಭಾ ಸದಸ್ಯರಾಗಿದ್ದ ಭಾರತೀಯ ಜನಸಂಘದ (ಇಂದಿನ ಬಿಜೆಪಿಯ ಪೂರ್ವರೂಪ) ಶ್ರೀ ಅಟಲ್ ಬಿಹಾರಿ ವಾಜಪೇಯಿಯವರು ರಾಜ್ಯಸಭೆಯಲ್ಲಿ ಮಾಡಿದ್ದ ಭಾಷಣ ಹೀಗಿದೆ.

ಶ್ರೀಯುತರೇ, ಇವತ್ತು ಕನಸೊಂದು ಛಿದ್ರವಾಗಿದೆ; ಗಾನವೊಂದು ಮೌನವಾಗಿದೆ; ಜ್ಯೋತಿಯೊಂದು ಅನಂತದೊಳಗೆ ಲೀನವಾಗಿದೆ. ಹಸಿವುಮುಕ್ತ ಮತ್ತು ಭಯರಹಿತ ಜಗತ್ತನ್ನು ಸೃಷ್ಟಿಸಬೇಕೆಂಬ ಕನಸಾಗಿತ್ತು ಅದು. ಗೀತೆಯ ಸಾರವನ್ನು ಧ್ವನಿಸುತ್ತಿದ್ದ, ಗುಲಾಬಿಯ ಸುಗಂಧವನ್ನು ಪಸರಿಸುತ್ತಿದ್ದ ಗಾನವಾಗಿತ್ತು ಅದು. ರಾತ್ರಿಯಿಡೀ ನಿರಂತರವಾಗಿ ಜ್ವಲಿಸುತ್ತಾ, ಪ್ರತಿ ಅಂಧಕಾರದೊಂದಿಗೆ ಹೋರಾಡಿ ನಮಗೆ ದಾರಿತೋರಿ, ಇವತ್ತು ಬೆಳಗಿನ ಜಾವ ನಿರ್ವಾಣಹೊಂದಿದ ಜ್ಯೋತಿ ಅದು.

ಹೌದು, ಸಾವು ನಿಶ್ಚಿತ; ದೇಹ ನಶ್ವರ. ಶ್ರೀಗಂಧದ ಚಿತೆಯ ಜ್ವಾಲೆಗೆ ನಿನ್ನೆ ನಾವು ಅರ್ಪಿಸಿದ ಆ ಸ್ವರ್ಣ ದೇಹ ಕೂಡಾ ಕೊನೆ ಉಳ್ಳಂತದ್ದೆ. ಆದರೆ ಸಾವು ಇಷ್ಟೊಂದು ಕದೀಮನಾಗಬಹುದೇ? ನಾವು ಸ್ನೇಹಿತರೆಲ್ಲ ನಿದ್ರಿಸುತ್ತಿದ್ದಾಗ, ಅಂಗರಕ್ಷಕರೆಲ್ಲ ಮೈಮರೆತಿದ್ದಾಗ, ಸಟ್ಟನೆ ದಾಳಿ ಮಾಡಿ ನಮ್ಮ ಜೀವನದಲ್ಲಿ ನಮಗೆ ಸಿಕ್ಕಿದ್ದ ಒಂದು ಬೆಲೆಕಟ್ಟಲಾಗದ ಉಡುಗೊರೆಯನ್ನು ಕದ್ದೊಯ್ದಿದೆಯಲ್ಲ.

ಇವತ್ತು ಭಾರತಮಾತೆ ಅತೀವ ದುಃಖಿತಳಾಗಿದ್ದಾಳೆ – ಆಕೆ ತನ್ನ ಮುದ್ದಿನ ಕುವರನನ್ನು ಕಳೆದುಕೊಂಡಿದ್ದಾಳೆ. ಇವತ್ತು ಮಾನವೀಯತೆ ಸಂಕಟದಲಿ ಮಿಂದಿದೆ – ಅದು ತನ್ನ ಆರಾಧಕನನ್ನು ಕಳೆದುಕೊಂಡಿದೆ. ಇವತ್ತು ಶಾಂತಿ ನಿತ್ರಾಣಗೊಂಡಿದೆ – ಅದರ ರಕ್ಷಕ ಇನ್ನಿಲ್ಲ. ದಮನಿತರು ತಮ್ಮ ಆಸರೆಯನ್ನು ಕಳೆದುಕೊಂಡಿದ್ದಾರೆ. ಸಾಮಾನ್ಯ ಭಾರತೀಯ ತನ್ನ ಕಣ್ಣಿನ ದೃಷ್ಟಿಯನ್ನೇ ಕಳೆದುಕೊಂಡಿದ್ದಾನೆ. ಎಲ್ಲದಕ್ಕೂ ತೆರೆ ಬಿದ್ದಿದೆ. ನಾಟಕದ ಕಥಾನಾಯಕ ತನ್ನ ಪಾಲಿನ ಕೊನೇ ಅಂಕವನ್ನು ಮುಗಿಸಿ, ಜಗತ್ತಿನ ಮುಂದೆ ಶಿರಬಾಗಿ ನಿರ್ಗಮಿಸಿದ್ದಾನೆ.

ಶ್ರೀರಾಮನ ಬದುಕಿನ ಕುರಿತ ರಾಮಾಯಣವನ್ನು ಬರೆದ ವಾಲ್ಮೀಕಿ ಮಹರ್ಷಿಯು ತಾನು ಅಸಾಧ್ಯವಾದದ್ದನ್ನೆಲ್ಲ ಒಂದುಗೂಡಿಸಿದ್ದೇನೆ ಎಂದು ಹೇಳಿಕೊಂಡಿದ್ದಾರೆ. ಪಂಡಿತ್‌ಜಿ (ನೆಹರೂ) ಅವರ ಬದುಕಿನಲ್ಲೂ ನಾವು ಆ ಮಹಾಕವಿಯ ಉಲ್ಲೇಖದ ಮಿನುಗುಗಳನ್ನು ಕಾಣಬಹುದು. ಅವರು ಶಾಂತಿಯ ಆರಾಧಕರಾಗಿದ್ದರು; ಆದಾಗ್ಯೂ ಕ್ರಾಂತಿಯ ಮುಂಗಾಮಿಯಾಗಿದ್ದರು. ಅವರು ಅಹಿಂಸೆಯ ರೂವಾರಿಯಾಗಿದ್ದರು; ಆದಾಗ್ಯೂ, ಸ್ವಾತಂತ್ರ್ಯ ಮತ್ತು ದೇಶದ ಆತ್ಮಗೌರವದ ರಕ್ಷಣೆಗಾಗಿ ಯಾವುದೇ ಅಸ್ತ್ರವನ್ನು ಬಳಸುವುದಕ್ಕು ಸಿದ್ದವಿದ್ದರು.

ಅವರು ಪ್ರತಿಯೊಬ್ಬರ ವೈಯಕ್ತಿಕ ಸ್ವಾತಂತ್ರ್ಯದ ಪ್ರತಿಪಾದಕರಾಗಿದ್ದರು; ಆದಾಗ್ಯೂ, ಆರ್ಥಿಕ ಸಮಾನತೆಯ ಕನಸಿಗೆ ಬದ್ಧರಾಗಿದ್ದರು. ಪ್ರಗತಿಗಾಗಿ ಅವರು ಯಾರ ಜೊತೆ ಬೇಕಾದರೂ ರಾಜಿಗೆ ಸಿದ್ದವಿದ್ದರು, ಆದರೆ ಯಾರಿಗೋ ಅಂಜಿ ಅವರು ರಾಜಿಗೆ ಮುಂದಾದವರಲ್ಲ. ಪಾಕಿಸ್ತಾನ ಮತ್ತು ಚೀನಾ ದೇಶಗಳ ಕುರಿತಂತೆ ಅವರ ನೀತಿಗಳು ಈ ಗುಣಮಿಶ್ರಣದ ಪ್ರತೀಕವಾಗಿದ್ದವು. ಅದು ಅವರ ಉದಾರತೆಯೂ ಹೌದು, ಬದ್ಧತೆಯೂ ಹೌದು. ಆದರೆ ಕೆಲವರು ಅವರ ಉದಾರತೆಯನ್ನು ಬಲಹೀನತೆಯೆಂತಲೂ, ಅದರ ಬದ್ಧತೆಯನ್ನು ಹಠಮಾರಿತನವೆಂತಲೂ ತಪ್ಪಾಗಿ ಅರ್ಥೈಸಿಕೊಂಡಿದ್ದು ವಿಪರ್ಯಾಸವೇ ಸರಿ.

ಅವರು ಕೋಪಿಷ್ಟರಾಗಿದ್ದನ್ನು ನಾನೊಮ್ಮೆ ಕಂಡಿದ್ದು, ಇನ್ನೂ ಚೆನ್ನಾಗಿ ನೆನಪಿದೆ. ಚೀನಾದೊಟ್ಟಿಗೆ ನಮ್ಮ ಸಂಘರ್ಷ ಉತ್ತುಂಗಕ್ಕೇರಿದ್ದ ದಿನಗಳು ಅವು. ಸಂದರ್ಭದ ಲಾಭ ಪಡೆದ ನಮ್ಮ ಪಾಶ್ಚಾತ್ಯ ಮಿತ್ರರಾಷ್ಟ್ರಗಳು ಕಾಶ್ಮೀರ ವಿಚಾರದಲ್ಲಿ ಒಂದಷ್ಟು ರಾಜಿ ಮಾಡಿಕೊಳ್ಳುವಂತೆ ನಮ್ಮ ಮೇಲೆ ಒತ್ತಡ ತರುತ್ತಿದ್ದರು. ನಾವೀಗ ಒಂದಷ್ಟು ರಾಜಿಗೆ ಸಿದ್ದವಾಗದಿದ್ದರೆ ಏಕಕಾಲಕ್ಕೆ ಎರಡು ಶತ್ರುರಾಷ್ಟ್ರಗಳೊಂದಿಗೆ ಯುದ್ಧ ಮಾಡಬೇಕಾಗಿ ಬಂದೀತು ಎಂಬ ಸಲಹೆ ಬಂದಾಗ, ಅವರು ಕೆಂಡಾಮಂಡಲವಾಗಿ “ಅಗತ್ಯಬಿದ್ದರೆ ನಾವು ಏಕಕಾಲಕ್ಕೆ ಎರಡೂ ಕಡೆ ಯುದ್ಧಕ್ಕೆ ಸಿದ್ಧ” ಎಂದು ಪ್ರತಿಕ್ರಿಯಿಸಿದ್ದರು. ಒತ್ತಡ ತಂದು ಅವರನ್ನು ಮಣಿಸಲು ಸಾಧ್ಯವಿರಲಿಲ್ಲ.

ಶ್ರೀಯುತರೇ, ಅವರ ನೇತೃತ್ವ ಮತ್ತು ಸಂರಕ್ಷಣೆಯಲ್ಲಿ ಪ್ರತಿಷ್ಟಾಪನೆಯಾಗಿದ್ದ ಸ್ವಾತಂತ್ರ್ಯ ಇವತ್ತು ಅಪಾಯಕ್ಕೆ ತುತ್ತಾಗಿದೆ. ನಮ್ಮೆಲ್ಲ ಬಲವನ್ನು ಒಗ್ಗೂಡಿಸಿ ಅದನ್ನು ನಾವು ರಕ್ಷಿಸಿಕೊಳ್ಳಬೇಕಿದೆ. ಅವರು ಆಳವಾಗಿ ಪ್ರತಿಪಾದಿಸಿದ ರಾಷ್ಟ್ರೀಯ ಐಕ್ಯತೆ ಮತ್ತು ಸಮಗ್ರತೆಗಳು ಸಹಾ ಅಪಾಯಕ್ಕೆ ಸಿಲುಕಿವೆ. ಯಾವುದೇ ಬೆಲೆ ತೆತ್ತಾದರೂ ಸರಿ, ಅವುಗಳನ್ನು ನಾವು ಸಂರಕ್ಷಿಸಬೇಕಿದೆ. ಅವರು ಅನುಷ್ಠಾನಗೊಳಿಸಿದ ಭಾರತೀಯ ಪ್ರಜಾಪ್ರಭುತ್ವ, ಮತ್ತು ಅದರ ಮೂಲಕ ಅವರು ಸಾಧಿಸಿದ ಯಶಸ್ಸುಗಳು ಸಹಾ ಮಂಕಾದ ಭವಿಷ್ಯವನ್ನು ಎದುರಿಸುತ್ತಿವೆ. ಒಗ್ಗಟ್ಟು, ಶಿಸ್ತು ಮತ್ತು ಆತ್ಮವಿಶ್ವಾದಿಂದ ನಾವು ಈ ಪ್ರಜಾಪ್ರಭುತ್ವವನ್ನು ಯಶಸ್ವಿಗೊಳಿಸಬೇಕಿದೆ.

ನಾಯಕ ನಿರ್ಗಮಿಸಿರಬಹುದು, ಅನುಯಾಯಿಗಳು ಇನ್ನೂ ಇದ್ದಾರೆ. ಸೂರ್ಯ ಅಸ್ತಮಿಸಿರಬಹುದು, ಆಗಸದಲ್ಲಿ ಮೂಡುವ ತಾರೆಗಳ ಬೆಳಕಿನಲ್ಲೇ ನಾವೀಗ ಮುಂದಿನ ದಾರಿ ಹುಡುಕಿಕೊಳ್ಳಬೇಕಿದೆ. ಇದು ನಮ್ಮ ಪರೀಕ್ಷೆಯ ಉತ್ತುಂಗದ ಕಾಲ. ಜಗತ್ತಿನ ಶಾಂತಿಗಾಗಿ ಗೌರವಯುತವಾದ ಕಾಣಿಕೆ ನೀಡಬಹುದಾದ ಮಾದರಿಯುತ ಸದೃಢ ಮತ್ತು ಸಮೃದ್ಧ ಭಾರತವನ್ನು ನಿರ್ಮಿಸಲು ನಾವು ಪರಸ್ಪರ ಒಗ್ಗೂಡಿ ದುಡಿಯುವುದು ಮಾತ್ರವೇ ಆ ನಾಯಕನಿಗೆ ಸಲ್ಲಿಸುವ ನಿಜವಾದ ಗೌರವ.

ಅವರ ಅಗಲಿಕೆ ಸಂಸತ್ತಿಗೆ ತುಂಬಲಾರದ ನಷ್ಟ. ಆ ಸ್ಪಂದನಶೀಲ ವ್ಯಕ್ತಿತ್ವ, ವಿರೋಧಪಕ್ಷಗಳನ್ನೂ ಜೊತೆಗೆ ಕೊಂಡೊಯ್ಯುವ ಆ ಧೋರಣೆ, ಆ ಸೂಕ್ಷ್ಮ ಸಜ್ಜನಿಕೆ, ಆ ಉದಾತ್ತತೆಗಳನ್ನು ಸದ್ಯೋಭವಿಷ್ಯದಲ್ಲಿ ಮತ್ತೆ ನಾವು ಕಾಣಲು ಸಾಧ್ಯವಿಲ್ಲ. ನಮ್ಮ ನಡುವೆ ವಿಚಾರ ಭೇದಗಳು ಇದ್ದಾಗ್ಯೂ ಕೂಡಾ, ಅವರ ಮಹಾನ್ ಚಿಂತನೆಗಳು, ಅವರ ಸಮಗ್ರತೆ, ಈ ದೇಶದೆಡೆಗೆ ಅವರಿಗಿದ್ದ ಅದ್ವಿತೀಯ ಪ್ರೀತಿ ಮತ್ತು ಅವರ ಆ ಅದಮ್ಯ ಧೈರ್ಯದ ಪ್ರತಿಯಾಗಿ ಅವರ ಬಗ್ಗೆ ನಮ್ಮಲ್ಲಿ ಗೌರವವಲ್ಲದೆ ಮತ್ತೇನೂ ಇರಲು ಸಾಧ್ಯವಿಲ್ಲ.

ಈ ನನ್ನ ನುಡಿಗಳ ಮೂಲಕ, ಆ ಮಹಾನ್ ಚೇತನಕ್ಕೆ ನನ್ನ ನಮ್ರ ಗೌರವವನ್ನು ಅರ್ಪಿಸುತ್ತೇನೆ.

ಅಟಲ್ ಬಿಹಾರಿ ವಾಜಪೇಯಿ
ರಾಜ್ಯಸಭಾ ಸದಸ್ಯರು

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಗೃಹ ಜ್ಯೋತಿ ಯೋಜನೆಗೆ 3 ವರ್ಷಗಳ ಸಂಭ್ರಮ – 1.65 ಕೋಟಿ ಕುಟುಂಬಗಳ ಬದುಕಿಗೆ ಬೆಳಕು!

Published

on

ಆಗಸ್ಟ್ 2023 ರಿಂದ ಜುಲೈ 2026 ರವರೆಗೆ ₹28,759 ಕೋಟಿ ಸಬ್ಸಿಡಿ ಬಿಡುಗಡೆ; ಪ್ರತಿ ತಿಂಗಳು 200 ಯೂನಿಟ್ ಉಚಿತ ವಿದ್ಯುತ್‌ನಿಂದ ಕೋಟ್ಯಂತರ ಕುಟುಂಬಗಳ ಆರ್ಥಿಕ ಸಬಲೀಕರಣ

ಸುದ್ದಿದಿನ, ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆ ತನ್ನ 3 ವರ್ಷಗಳ ಸಾರ್ಥಕ ಪಯಣವನ್ನು ಪೂರ್ಣಗೊಳಿಸಿದೆ. `ಕುಟುಂಬಗಳ ಆರ್ಥಿಕ ಸಬಲೀಕರಣಕ್ಕೆ ಸಹಕಾರ’ ಎಂಬ ಧ್ಯೇಯದೊಂದಿಗೆ ಆರಂಭವಾದ ಈ ಯೋಜನೆ ಇಂದು ಕೋಟ್ಯಂತರ ಕುಟುಂಬಗಳ ಬದುಕಿಗೆ ಬೆಳಕಾಗಿದೆ.

ಹೌದು! 2023ರ ಆಗಸ್ಟ್‌ನಲ್ಲಿ ಜಾರಿಗೆ ಬಂದ ಈ ಯೋಜನೆಯಡಿ ರಾಜ್ಯದ ಪ್ರತಿಯೊಂದು ಕುಟುಂಬಕ್ಕೂ ಪ್ರತಿ ತಿಂಗಳು 200 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದ್ದು, ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಮಾಸಿಕ ಬಜೆಟ್‌ಗೆ ದೊಡ್ಡ ಆಸರೆಯಾಗಿದೆ ಎಂದೇ ಹೇಳಬಹುದು.

http://Visit : www.suddidina.com

ಗೃಹಜ್ಯೋತಿ ಯೋಜನೆಯ ಸಾಧನೆಯ ಗಿರಿ: 

ಇಂಧನ ಇಲಾಖೆ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ, ರಾಜ್ಯದ್ಯಂತ ಬರೋಬ್ಬರಿ 1.65 ಕೋಟಿ. ಫಲಾನುಭವಿಗಳು ಕುಟುಂಬಗಳು ಯೋಜನೆಯ ಪ್ರಯೋಜನ ಪಡೆದುಕೊಳ್ಳುತ್ತಿದ್ದರೆ, ಸೇವಾಸಿಂಧು ಪೋರ್ಟಲ್‌ನಲ್ಲಿ ಒಟ್ಟು 1,76,69,368 ಜನರು ನೋಂದಾಯಿಸಿಕೊಂಡಿದ್ದರೆ. ಒಟ್ಟು 2,06,65,451 ಗೃಹಬಳಕೆ ವಿದ್ಯುತ್ ಗ್ರಾಹಕರಿದ್ದಾರೆ. ಅಂದರೆ ಶೇ.85ಕ್ಕಿಂತ ಹೆಚ್ಚು ಗ್ರಾಹಕರು ಈ ಯೋಜನೆಯಡಿ ನೋಂದಾಯಿಸಿಕೊಂಡು ಲಾಭ ಪಡೆಯುತ್ತಿದ್ದಾರೆ.

ಆರ್ಥಿಕವಾಗಿ ನೋಡುವುದಾದರೆ, 2023ರ ಆಗಸ್ಟ್‌ನಿಂದ 2026ರ ಜುಲೈ ವರೆಗೆ, ಕಳೆದ ಮೂರು ವರ್ಷಗಳಲ್ಲಿ ಸರ್ಕಾರವು ಫಲಾನುಭವಿಗಳಿಗೆ ಒಟ್ಟು ₹28,759.54 ಕೋಟಿ ರೂಪಾಯಿ ಸಬ್ಸಿಡಿ ಬಿಡುಗಡೆ ಮಾಡಿದೆ. ಇದು ಸರ್ಕಾರದ ಬದ್ಧತೆ ಮತ್ತು ಜನಪರ ಕಾಳಜಿಗೆ ಹಿಡಿದ ಕನ್ನಡಿಯಾಗಿದೆ.

ಕುಟುಂಬದ ಬಜೆಟ್‌ಗೆ ಆಸರೆ, ಉಜ್ವಲ ಭವಿಷ್ಯಕ್ಕೆ ಬುನಾದಿ:

ಪ್ರತಿ ತಿಂಗಳು 1000 ದಿಂದ 1500 ರೂಪಾಯಿಗಳವರೆಗೆ ವಿದ್ಯುತ್ ಬಿಲ್ ಕಟ್ಟುತ್ತಿದ್ದ ಸಾಮಾನ್ಯ ಕುಟುಂಬಗಳಿಗೆ ಈಗ ಆ ಹಣ ಸಂಪೂರ್ಣವಾಗಿ ಉಳಿತಾಯವಾಗುತ್ತಿದೆ. ಈ ಉಳಿತಾಯದ ಹಣವನ್ನು ಅವರು ಮಕ್ಕಳ ಶಿಕ್ಷಣ, ಆರೋಗ್ಯ ಮತ್ತು ಇತರ ಅಗತ್ಯಗಳಿಗೆ ಬಳಸಿಕೊಳ್ಳುತ್ತಿದ್ದಾರೆ. ವಿಶೇಷವಾಗಿ ಗೃಹಿಣಿಯರಿಗೆ ಇದು ಆರ್ಥಿಕವಾಗಿ ದೊಡ್ಡ ನೆರವಾಗಿದೆ.

ಕೇವಲ ಉಚಿತ ವಿದ್ಯುತ್ ನೀಡುವುದಷ್ಟೇ ಅಲ್ಲ, ಜನರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡುವುದೇ ಈ ಯೋಜನೆಯ ಮುಖ್ಯ ಗುರಿಯಾಗಿದ್ದು, ರಾಜ್ಯದ ಜನರ ಜೀವನಮಟ್ಟ ಸುಧಾರಿಸಿದೆ. ಗೃಹ ಜ್ಯೋತಿ ಯೋಜನೆಯು ಕೇವಲ ಒಂದು ಯೋಜನೆಯಾಗಿ ಉಳಿಯದೆ, ಕರ್ನಾಟಕದ ಸಾಮಾಜಿಕ ಮತ್ತು ಆರ್ಥಿಕ ಪರಿವರ್ತನೆಯಲ್ಲಿ ಮಹತ್ವದ ಮೈಲಿಗಲ್ಲಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಕುಟುಂಬಗಳನ್ನು ಈ ಯೋಜನೆಯಡಿ ತರಲು ಇಂಧನ ಇಲಾಖೆ ಕ್ರಮ ಕೈಗೊಳ್ಳುತ್ತಿದೆ.

Continue Reading

ದಿನದ ಸುದ್ದಿ

ರೈಲ್ವೆ ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ – 20 ಸಾವಿರ ಕೋಟಿ ರೂ. ವೆಚ್ಚದ 8 ಬಹು ಟ್ರ್ಯಾಕಿಂಗ್ ಯೋಜನೆಗಳಿಗೆ ಕೇಂದ್ರದ ಅಸ್ತು!

Published

on

ಕರ್ನಾಟಕದ ವೈಟ್‌ಫೀಲ್ಡ್-ಬಂಗಾರಪೇಟೆ, ಹೊಸೂರು-ಓಮಲೂರು ಮಾರ್ಗ ಸೇರಿ 9 ರಾಜ್ಯಗಳ 1200 ಕಿ.ಮೀ ರೈಲು ಜಾಲ ವಿಸ್ತರಣೆಗೆ ಪ್ರಧಾನಿ ಮೋದಿ ಅಧ್ಯಕ್ಷತೆಯ ಸಂಪುಟ ಸಭೆಯಲ್ಲಿ ಅನುಮೋದನೆ

ಸುದ್ದಿದಿನ, ಹೊಸದಿಲ್ಲಿ: ದೇಶದ ರೈಲ್ವೆ ಮೂಲಸೌಕರ್ಯಕ್ಕೆ ಬೃಹತ್ ಉತ್ತೇಜನ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಕರ್ನಾಟಕ ಸೇರಿದಂತೆ ಒಂಬತ್ತು ರಾಜ್ಯಗಳ 20ಕ್ಕೂ ಹೆಚ್ಚು ಜಿಲ್ಲೆಗಳನ್ನು ಸಂಪರ್ಕಿಸುವ 20,000 ಕೋಟಿ ರೂಪಾಯಿಗೂ ಅಧಿಕ ಮೊತ್ತದ 8 ಬಹು ಟ್ರ್ಯಾಕಿಂಗ್ (Multi-Tracking) ರೈಲು ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಬುಧವಾರ (ಸೆ.09) ನಡೆದ ಕೇಂದ್ರ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಈ ಯೋಜನೆಗಳು ಪಿಎಂ-ಗತಿ ಶಕ್ತಿ ರಾಷ್ಟ್ರೀಯ ಮಾಸ್ಟರ್ ಪ್ಲಾನ್ ಅಡಿಯಲ್ಲಿ ಅನುಷ್ಠಾನಗೊಳ್ಳಲಿವೆ.

http://Visit : www.suddidina.com

ಈ ಯೋಜನೆಗಳಿಂದ ಭಾರತೀಯ ರೈಲ್ವೆಯ ಅಸ್ತಿತ್ವದಲ್ಲಿರುವ ಜಾಲವು ಬರೋಬ್ಬರಿ 1,200 ಕಿಲೋಮೀಟರ್‌ಗಳಷ್ಟು ವಿಸ್ತರಣೆಯಾಗಲಿದೆ. ಇದರಿಂದ 6,900ಕ್ಕೂ ಹೆಚ್ಚು ಗ್ರಾಮಗಳಿಗೆ ಸುಧಾರಿತ ಸಂಪರ್ಕ ಸಿಗಲಿದ್ದು, ರೈಲುಗಳ ಕಾರ್ಯಾಚರಣೆಯ ದಕ್ಷತೆ ಮತ್ತು ಸೇವಾ ವಿಶ್ವಾಸಾರ್ಹತೆ ಗಣನೀಯವಾಗಿ ಹೆಚ್ಚಾಗಲಿದೆ.

ಯಾವೆಲ್ಲ ಯೋಜನೆಗಳಿಗೆ ಅನುಮೋದನೆ?
ಸಂಪುಟ ಸಭೆಯಲ್ಲಿ ಅನುಮೋದನೆ ಪಡೆದ ಪ್ರಮುಖ ಯೋಜನೆಗಳು ಹೀಗಿವೆ:

1. ಅರಾಕೋಣಂ-ರೇಣಿಗುಂಟಾ ಮತ್ತು ವೈಟ್‌ಫೀಲ್ಡ್-ಬಂಗಾರಪೇಟೆ ನಡುವೆ 3 ಮತ್ತು 4ನೇ ಮಾರ್ಗ: ಇದು ಕರ್ನಾಟಕ ಮತ್ತು ತಮಿಳುನಾಡು, ಆಂಧ್ರಪ್ರದೇಶಕ್ಕೆ ಅತ್ಯಂತ ಮಹತ್ವದ ಯೋಜನೆಯಾಗಿದೆ.

2. ಸಿಕಂದರಾಬಾದ್-ಕಾಜಿಪೇಟೆ ನಡುವೆ ಮಲ್ಟಿ ಟ್ರ್ಯಾಕಿಂಗ್: ತೆಲಂಗಾಣದ ಪ್ರಮುಖ ಮಾರ್ಗದ ದಟ್ಟಣೆ ಕಡಿಮೆ ಮಾಡಲಿದೆ.

3. ಹೊಸೂರು-ಓಮಲೂರು, ಸೇಲಂ-ಕರೂರ್-ದಿಂಡಿಗಲ್ ಜೋಡಿ ಹಳಿ ಯೋಜನೆ: ತಮಿಳುನಾಡು ಮತ್ತು ಕರ್ನಾಟಕದ ಗಡಿ ಭಾಗದ ಸಂಪರ್ಕವನ್ನು ಬಲಪಡಿಸಲಿದೆ.

4. ಖರಗ್‌ಪುರ-ಝಾರ್ಸುಗುಡ ಮತ್ತು ಕತ್ನಿ-ಪೆಂದ್ರ ರಸ್ತೆ ನಡುವೆ 4ನೇ ಮಾರ್ಗ ಮತ್ತು ಬಿಲಾಸ್‌ಪುರ್-ಪೆಂದ್ರ ರಸ್ತೆ ನಡುವೆ 3ನೇ ಮಾರ್ಗ: ಛತ್ತೀಸ್‌ಗಢ, ಒಡಿಶಾ, ಮಧ್ಯಪ್ರದೇಶದ ಕಲ್ಲಿದ್ದಲು ಮತ್ತು ಖನಿಜ ಸಾಗಣೆಗೆ ಸಹಕಾರಿಯಾಗಲಿದೆ.

ಈ ಎಲ್ಲಾ ಯೋಜನೆಗಳು ಕರ್ನಾಟಕ, ಪಶ್ಚಿಮ ಬಂಗಾಳ, ಜಾರ್ಖಂಡ್, ಒಡಿಶಾ, ಮಧ್ಯಪ್ರದೇಶ, ಛತ್ತೀಸ್‌ಗಢ, ತಮಿಳುನಾಡು, ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳನ್ನು ಒಳಗೊಳ್ಳಲಿವೆ.

ಕರ್ನಾಟಕಕ್ಕೆ ಏನು ಲಾಭ?

ಈ ಬಹು ಟ್ರ್ಯಾಕಿಂಗ್ ಯೋಜನೆಗಳಿಂದ ಕರ್ನಾಟಕಕ್ಕೆ ಹಲವು ರೀತಿಯಲ್ಲಿ ಅನುಕೂಲವಾಗಲಿದೆ.ಕೈಗಾರಿಕೆಗಳಿಗೆ ಅನುಕೂಲ: ರಾಜ್ಯದ ಉಕ್ಕು ಕಾರ್ಖಾನೆಗಳಿಗೆ ಕಚ್ಚಾ ವಸ್ತುಗಳಾದ ಖನಿಜ ಸಾಗಿಸಲು ವಾಡಿ-ತಂದೂರು, ಮೋಟುಮಾರಿ-ವಿಷ್ಣುಪುರಂ ಮಾರ್ಗದಲ್ಲಿನ ಅಭಿವೃದ್ಧಿಯಿಂದ ಹೆಚ್ಚಿನ ಅನುಕೂಲವಾಗಲಿದೆ. ಹೂಟಗಿ, ಕೂಡಗಿ, ಯಾದ್ಲಾಪುರ, ಬಳ್ಳಾರಿ ಮತ್ತು ಯರಮರಸ್‌ನಲ್ಲಿರುವ ಉಷ್ಣ ವಿದ್ಯುತ್ ಸ್ಥಾವರಗಳಿಗೆ ಕಲ್ಲಿದ್ದಲು ಸಾಗಣೆ ಇನ್ನಷ್ಟು ವೇಗ ಮತ್ತು ಸುಲಭವಾಗಲಿದೆ.

ಬೆಂಗಳೂರು-ಚೆನ್ನೈ ಮಾರ್ಗದಲ್ಲಿ ದಟ್ಟಣೆ ಕಡಿಮೆ: ವೈಟ್‌ಫೀಲ್ಡ್-ಬಂಗಾರಪೇಟೆ ನಡುವಿನ 47 ಕಿ.ಮೀ ಉದ್ದದ 3 ಮತ್ತು 4ನೇ ಮಾರ್ಗವು ಅತ್ಯಂತ ದಟ್ಟಣೆಯ ಮನ್ಮಾಡ-ಹುಬ್ಬಳ್ಳಿ-ಬೆಂಗಳೂರು-ಜೋಳರಪೇಟೆ ವಿಭಾಗದಡಿ ಬರುತ್ತದೆ. ಇದು ಬೆಂಗಳೂರು-ಚೆನ್ನೈ ನಡುವಿನ ರೈಲು ಸಂಚಾರ ದಟ್ಟಣೆಯನ್ನು ಗಣನೀಯವಾಗಿ ಕಡಿಮೆ ಮಾಡಿ, ಹೆಚ್ಚಿನ ರೈಲುಗಳ ಸಂಚಾರಕ್ಕೆ ಅವಕಾಶ ಮಾಡಿಕೊಡಲಿದೆ.

ಪ್ರವಾಸೋದ್ಯಮ ಮತ್ತು ಸರಕು ಸಾಗಣೆಗೆ ಉತ್ತೇಜನ: ಹೊಸೂರು-ಓಮಲೂರು ಜೋಡಿ ಹಳಿ ಮಾರ್ಗದಿಂದ ಕನ್ಯಾಕುಮಾರಿ, ರಾಮೇಶ್ವರಂನಂತಹ ಪುಣ್ಯಕ್ಷೇತ್ರಗಳಿಗೆ ತೆರಳುವ ಲಕ್ಷಾಂತರ ಯಾತ್ರಿಕರಿಗೆ ಅನುಕೂಲವಾಗಲಿದೆ. ಜೊತೆಗೆ ಬೆಂಗಳೂರು ಸುತ್ತಮುತ್ತಲಿನ ಕೈಗಾರಿಕಾ ಪ್ರದೇಶಗಳಿಗೆ ಸರಕು ಸಾಗಣೆಯೂ ವೇಗವಾಗಲಿದೆ.ಒಟ್ಟಾರೆಯಾಗಿ, ಈ ಯೋಜನೆಗಳು ಕೇವಲ ರೈಲು ಮಾರ್ಗಗಳ ವಿಸ್ತರಣೆಯಷ್ಟೇ ಅಲ್ಲ, ದೇಶದ ಆರ್ಥಿಕ ಬೆಳವಣಿಗೆ, ಉದ್ಯೋಗ ಸೃಷ್ಟಿ ಮತ್ತು ಪ್ರಾದೇಶಿಕ ಸಂಪರ್ಕಕ್ಕೆ ಹೊಸ ಶಕ್ತಿ ತುಂಬಲಿವೆ ಎಂದು ಕೇಂದ್ರ ಸರ್ಕಾರ ಹೇಳಿದೆ.

Continue Reading

ದಿನದ ಸುದ್ದಿ

ಡಿಕೆಶಿ ಸರ್ಕಾರಕ್ಕೆ 100 ದಿನಗಳ ಸಂಭ್ರಮ – `ದೃಢ ಕರ್ನಾಟಕದ ಸಂಕಲ್ಪ’ ಕಾರ್ಯಕ್ರಮಕ್ಕೆ ವಿಧಾನಸೌಧ ಸಜ್ಜು

Published

on

ಸೆ.10 ರಂದು ವಿಧಾನಸೌಧದಲ್ಲಿ ಶತದಿನೋತ್ಸವ ಸಮಾರಂಭ; ಮಾಜಿ ಸಿಎಂ ಸಿದ್ದರಾಮಯ್ಯರಿಂದ ಉದ್ಘಾಟನೆ, ಗ್ಯಾರಂಟಿ ಫಲಾನುಭವಿಗಳೊಂದಿಗೆ ಸಿಎಂ ಡಿ.ಕೆ. ಶಿವಕುಮಾರ್ ಸಂವಾದ

ಸುದ್ದಿದಿನ, ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರವು ತನ್ನ ಆಡಳಿತದ 100 ದಿನಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಈ ಶತಕದ ಸಂಭ್ರಮವನ್ನು ಆಚರಿಸಲು ರಾಜ್ಯ ಸರ್ಕಾರವು `ದೃಢ ಕರ್ನಾಟಕದ ಸಂಕಲ್ಪ – ಶತಕದ ಪಥ, ಪ್ರಗತಿಯ ರಥ’ ಎಂಬ ವಿಶೇಷ ಮತ್ತು ಅದ್ಧೂರಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.

 

ಈ ಕಾರ್ಯಕ್ರಮವು ನಾಳೆ ಅಂದರೆ 2026ನೇ ಸೆಪ್ಟೆಂಬರ್ 10ರ ಗುರುವಾರ ಬೆಳಿಗ್ಗೆ 10 ಗಂಟೆಗೆ ವಿಧಾನಸೌಧದ ಪ್ರತಿಷ್ಠಿತ ಬ್ಯಾಂಕ್ವೇಟ್ ಸಭಾಂಗಣದಲ್ಲಿ ನಡೆಯಲಿದೆ. ಸರ್ಕಾರದ ನೂರು ದಿನಗಳ ಸಾಧನೆ, ಜನಪರ ಯೋಜನೆಗಳ ಅನುಷ್ಠಾನ ಮತ್ತು ಮುಂದಿನ ಅಭಿವೃದ್ಧಿಯ ದೂರದೃಷ್ಟಿಯನ್ನು ಜನರ ಮುಂದಿಡುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ.

ಗಣ್ಯರ ದಂಡು, ಸಿದ್ದರಾಮಯ್ಯರಿಂದ ಉದ್ಘಾಟನೆ:

ಈ ಶತದಿನೋತ್ಸವ ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಇದು ಕಾಂಗ್ರೆಸ್ ಪಕ್ಷದಲ್ಲಿನ ಒಗ್ಗಟ್ಟು ಮತ್ತು ನಾಯಕತ್ವದ ನಿರಂತರತೆಯನ್ನು ಸಂಕೇತಿಸುತ್ತದೆ.

ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಹಾಗೂ ಕಂದಾಯ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ಜಿ. ಪರಮೇಶ್ವರ್, ರಾಜ್ಯ ಸಂಪುಟದ ಎಲ್ಲಾ ಸಚಿವರು, ಎಲ್ಲಾ ಶಾಸಕರು, ವಿಧಾನ ಪರಿಷತ್ ಸದಸ್ಯರು, ರಾಜ್ಯದ ಲೋಕಸಭಾ ಮತ್ತು ರಾಜ್ಯಸಭಾ ಸದಸ್ಯರು ಭಾಗವಹಿಸಲಿದ್ದಾರೆ. ಇದರ ಜೊತೆಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಸೇರಿದಂತೆ ಸರ್ಕಾರದ ಎಲ್ಲಾ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಮತ್ತು ಹಿರಿಯ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ.

http://Visit : www.suddidina.com

ಫಲಾನುಭವಿಗಳೊಂದಿಗೆ ನೇರ ಸಂವಾದ – ಕಾರ್ಯಕ್ರಮದ ಪ್ರಮುಖ ಆಕರ್ಷಣೆ

ಈ ಕಾರ್ಯಕ್ರಮದ ಅತ್ಯಂತ ಪ್ರಮುಖ ಆಕರ್ಷಣೆ ಎಂದರೆ ಮುಖ್ಯಮಂತ್ರಿಗಳೊಂದಿಗೆ ಫಲಾನುಭವಿಗಳ ನೇರ ಸಂವಾದ. ಸರ್ಕಾರದ ಮಹತ್ವಾಕಾಂಕ್ಷೆಯ ಐದು ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಗೃಹಲಕ್ಷ್ಮಿ, ಶಕ್ತಿ, ಯುವನಿಧಿ ಮತ್ತು ಗೃಹಜ್ಯೋತಿ ಯೋಜನೆಗಳ ಫಲಾನುಭವಿಗಳು ಈ ವೇದಿಕೆಯಲ್ಲಿ ತಮ್ಮ ಅನುಭವಗಳನ್ನು ಹಂಚಿಕೊಳ್ಳಲಿದ್ದಾರೆ.

ಕೇವಲ ಗ್ಯಾರಂಟಿ ಯೋಜನೆಗಳಷ್ಟೇ ಅಲ್ಲದೆ, ಸಮಾಜದ ವಿವಿಧ ವರ್ಗಗಳ ಶ್ರಮಿಕರು ಮತ್ತು ಕಾರ್ಮಿಕರು ಕೂಡ ಈ ಸಂವಾದದಲ್ಲಿ ಪಾಲ್ಗೊಳ್ಳಲಿದ್ದಾರೆ. ಕೃಷಿಕರು, ಆಟೋ ಚಾಲಕರು, ಹಮಾಲಿಗಳು, ಗಿಗ್ ಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಪೌರಕಾರ್ಮಿಕರು ತಮ್ಮ ಬದುಕಿನಲ್ಲಿ ಸರ್ಕಾರದ ಯೋಜನೆಗಳಿಂದ ಆಗಿರುವ ಬದಲಾವಣೆಗಳ ಕುರಿತು ಮುಖ್ಯಮಂತ್ರಿಗಳೊಂದಿಗೆ ಮುಕ್ತವಾಗಿ ಮಾತನಾಡಲಿದ್ದಾರೆ.

100 ದಿನಗಳಲ್ಲಿ ಸರ್ಕಾರವು ಕೈಗೊಂಡಿರುವ ಜನಪರ ನಿರ್ಧಾರಗಳು, ಅಭಿವೃದ್ಧಿ ಕಾಮಗಾರಿಗಳು ಮತ್ತು ಆಡಳಿತದಲ್ಲಿ ತಂದಿರುವ ಪಾರದರ್ಶಕತೆಯ ಬಗ್ಗೆ ಈ ವೇದಿಕೆಯಲ್ಲಿ ಚರ್ಚೆ ನಡೆಯಲಿದೆ. ಸರ್ಕಾರದ ಸಾಧನೆಗಳನ್ನು ಕೇವಲ ಭಾಷಣದ ಮೂಲಕವಲ್ಲ, ಬದಲಾಗಿ ಫಲಾನುಭವಿಗಳ ಬಾಯಿಂದಲೇ ಜನರಿಗೆ ತಲುಪಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ಮೂಲಗಳು ತಿಳಿಸಿವೆ.

ಮುಂದಿನ ದಿನಗಳಲ್ಲಿ ದೃಢ ಕರ್ನಾಟಕ’ ನಿರ್ಮಾಣದ ನಿಟ್ಟಿನಲ್ಲಿ ಸರ್ಕಾರದ ಮುಂದಿನ 5 ವರ್ಷಗಳ ಕಾರ್ಯಯೋಜನೆ ಮತ್ತು ರೂಪುರೇಷೆಗಳನ್ನು ಈ ಸಮಾರಂಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಕಟಿಸಲಿದ್ದಾರೆ ಎಂದು ನಿರೀಕ್ಷಿಸಲಾಗಿದೆ.

Continue Reading

Trending