Connect with us

ದಿನದ ಸುದ್ದಿ

ದಾವಣಗೆರೆ | ಗೊಲ್ಲರ ಹಟ್ಟಿಗಳನ್ನು ಕಂದಾಯ ಗ್ರಾಮವಾಗಿಸುವ ಕಾರ್ಯಕ್ಕೆ ಚಾಲನೆ : ಜಿಲ್ಲಾಧಿಕಾರಿ ಶಿವಾನಂದ ಕಾಪಶಿ

Published

on

ಸುದ್ದಿದಿನ,ದಾವಣಗೆರೆ : ಜಿಲ್ಲೆಯಲ್ಲಿರುವ ಗೊಲ್ಲರಹಟ್ಟಿ, ತಾಂಡ( Gollara hatti Tanda ) ಮುಂತಾದ ದಾಖಲೆರಹಿತ ಗ್ರಾಮಗಳನ್ನು ಕಂದಾಯ ಗ್ರಾಮಗಳನ್ನಾಗಿಸುವ ( Revenue Village ) ಕಾರ್ಯಕ್ಕೆ ಚಾಲನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ( District commissioner Shivanand Kapashi )ಹೇಳಿದರು.

ಜಿಲ್ಲಾಡಳಿತ ಭವನದಲ್ಲಿ ಶುಕ್ರವಾರ ನಡೆದ ಶ್ರೀ ಕೃಷ್ಣ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಈಗಾಗಲೇ ಜಿಲ್ಲೆಯಲ್ಲಿ 75 ದಾಖಲೆ ರಹಿತ ಗ್ರಾಮಗಳನ್ನು ಗುರ್ತಿಸಲಾಗಿದ್ದು ಅದರಲ್ಲಿ 39 ಅಂತಿಮ ಸೂಚನೆ ಹಂತಕ್ಕೆ ಬಂದಿವೆ. 25 ಗ್ರಾಮಗಳ ಸರ್ವೆ ನಂ ಬದಲಾಯಿಸಲಾಗುತ್ತಿದೆ, ಖಾಸಗಿ ಸರ್ವೆ ನಂಬರ್‍ಗಳಲ್ಲಿರುವ ಗ್ರಾಮಗಳ ಸರ್ವೆ ನಂ ಸರಿಪಡಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಹಾಗೂ ಗೊಲ್ಲ ಜನಾಂಗವೂ ಸೇರಿದಂತೆ ಎಲ್ಲಾ ಜನಾಂಗಗಳಿಗೆ ಸ್ಮಶಾನ ಭೂಮಿ ಒದಗಿಸಲು ಕ್ರಮ ಕೈಗೊಳ್ಳಲಾಗುವುದೆಂದರು.

ಮಹಾಭಾರತದಲ್ಲಿ ಶ್ರೀ ಕೃಷ್ಣನ ಕೊಡುಗೆ ಅಪಾರ, ಶ್ರೀಕೃಷ್ಣ ಪ್ರತಿ ಭಾರತೀಯನ ಮನಸ್ಸಿನ ಅವಿಭಾಜ್ಯ ಅಂಗ, ತನ್ನ ರಾಜತಾಂತ್ರಿಕ ನಡೆಯಿಂದ ಎಲ್ಲಾ ದಮನಿತರಿಗೂ ನ್ಯಾಯ ಒದಗಿಸಿ ಕೊಟ್ಟವನು ಶ್ರೀ ಕೃಷ್ಣ. ಅಂತಹ ಮೇರು ವ್ಯಕ್ತಿಯ ವ್ಯಕ್ತಿತ್ವ ಅನುಕರಣೀಯ ಎಂದರು.

ಇದನ್ನೂ ಓದಿ | ಸಾಮಾಜಿಕ ಸಾಮರಸ್ಯದಿಂದ ಸಮಾಜದ ಪ್ರಗತಿ : ಎಸ್.ಕೆ.ಬಿ.ಪ್ರಸಾದ್

ಜಿ.ಪಂ.ಸಿಇಒ ಡಾ.ಚೆನ್ನಪ್ಪ ಮಾತನಾಡಿ, ಭಾರತೀಯರ ಕಲ್ಪನೆಯ ಅನಕ್ಷರಸ್ಥ ಸಮಾಜದ, ಅಲಿಖಿತ ಸಂವಿಧಾನ ಭಗವಧ್ಘೀತೆ ನೀಡಿದವನು ಶ್ರೀಕೃಷ್ಣ, ಸಮಾಜವನ್ನ ಹೇಗೆ ಮುನ್ನೆಡೆಸಬೇಕೆಂಬ ಕಲ್ಪನೆ ಗೀತೆಯಲ್ಲಿದೆ. 5 ಸಾವಿರ ವರ್ಷಗಳ ಹಿಂದೆ ನೀಡಿದ ತತ್ವ ಆದರ್ಶಗಳು ಇಂದಿಗೂ ಪ್ರಸ್ತುತ. ಕೃಷ್ಣನನ್ನು ನವನೀತ ಲೋಲ ಎನ್ನುತ್ತೇವೆ, ಅಂದರೆ ಬೆಣ್ಣೆ ಪ್ರಿಯ, ಬೆಣ್ಣೆ ಸಮೃದ್ದಿಯ ಸಂಕೇತ ಹಾಗಾಗಿ ಅವನು ಗೋವುಗಳ ರಕ್ಷಕ ಎನಿಸಿಕೊಂಡ. ಕೃಷ್ಣನು ಯಾವತ್ತೂ ಸುಖವಾಗಿರಲಿಲ್ಲ, ಕಷ್ಟಗಳಲ್ಲಿಯೇ ಬದುಕಿದ. ಅವನ ಕಣ್ಣ ಮುಂದೆಯೇ ಅವನ ವಂಶ ನಿರ್ವಂಶ ಆಯಿತು, ತಾನು ಕಟ್ಟಿದ ನಗರ ಅವನ ಕಣ್ಣ ಮುಂದೆಯೇ ಯಮುನಾ ನದಿಯಲ್ಲಿ ಮುಳುಗಿ ಹೋಯ್ತು, ಇಂತಹ ಕಷ್ಟಗಳ ಮಧ್ಯೆಯು ಧೃತಿಗೆಡದೆ ನಿರ್ಲಿಪ್ತನಾಗಿರುತ್ತದ್ದ ನಿನ್ನ ಗುರಿ ಮುಟ್ಟಲು ವಿಫಲವಾದರೆ ಹಿಂಜರಿಯಬೇಡ, ನಿನ್ನ ತಂತ್ರಗಾರಿಕೆ ಬದಲಾಯಿಸಿಕೋ, ಆತ್ಮ ಸಂಯಮ ಕಳೆದುಕೊಳ್ಳಬೇಡ ಎಂಬುದು ಕೃಷ್ಣನ ವಾಕ್ಯವಾಗಿದೆ ಎಂದರು.

ಉಪನ್ಯಾಸ ನೀಡಿದ ಶ್ರೀಮತಿ ಸೀತಾ ನಾರಾಯಣೆ ಮಾತನಾಡಿ, ಕೃಷಂ ವಂದೇ ಜಗದ್ಗುರು ಎಂಬಂತೆ ಕೃಷ್ಣ ವಿಶ್ವಕ್ಕೇ ಜಗದ್ಗುರು ಎನಿಸಿಕೊಂಡ, ತುಂಟಾಟಕ್ಕೆ ಚೇಷ್ಟೆಗೆ ಹೆಸರಾದವನು ಶ್ರೀ ಕೃಷ್ಣ, ಅದಕ್ಕಾಗಿ ಪೋಷಕರು ತಮ್ಮ ಮಕ್ಕಳ ಚೇಷ್ಟೆಗಳನ್ನು ಇಷ್ಟ ಪಡುತ್ತಾರೆ, ಗೋಪಿಕಾ ಸ್ತ್ರೀಯರಿಗೂ ಅವನ ಚೇಷ್ಟೆ ಇಷ್ಟ, ಅವರು ಮನೆಯಲ್ಲಿ ಚೇಷ್ಟೆ ಮಾಡಿದರೆ ಹೈನು ಸಂಪತ್ತು ವೃದ್ದಿಯಾಗುತ್ತದೆಂಬ ನಂಬಿಕೆ. ಹಾಗಾಗಿಯೇ ಅಮ್ಮಾ ನಾನು ದೇವರಾಣೆ ಬೆಣ್ಣೆ ಕದ್ದಿಲ್ಲಮ್ಮಾ ಎಂಬ ಹಾಡು ಜನಜನಿತವಾಗಿರುವುವುದು. ಕೃಷ್ಣ ಎಂದೂ ರಾಜನಾಗಲಿಲ್ಲ ಆದರೆ ರಾಜಧರ್ಮ ಭೋದಿಸಿದ, ರಾಜತಾಂತ್ರಿಕತೆಯಿಂದ ಶತ್ರುಗಳನ್ನು, ಅಸುರರನ್ನು ಸಂಹಾರ ಮಾಡಿದ, ಭಗವಧ್ಘೀತೆ ಒಂದು ವೈಚಾರಿಕ ಗ್ರಂಥವಾಗಿದ್ದು ಜೀವನದ ಸತ್ಯ ದರ್ಶನ ಮಾಡಿಸುತ್ತದೆ ಎಂದರು.

ಯಾದವ ಸಮಾಜದ ಅಧ್ಯಕ್ಷ ತಿಪ್ಪೇಸ್ವಾಮಿ ಮಾತನಾಡಿ, ಮಹಾಭಾರತದಲ್ಲಿ ಶ್ರೀ ಕೃಷ್ಣನು ತಂತ್ರಗಾರಿಕೆಯ ಜೊತೆಗೆ ರಾಜಕಾರಣಿಯಾಗಿ ಧರ್ಮ ರಕ್ಷಣೆಯ ಕೆಲಸವನ್ನು ಮಾಡಿದ್ದಾರೆ. ಆದೇರೀತಿ ಜಿಲ್ಲಾಧಿಕಾರಿಗಳು ಶ್ರೀ ಕೃಷ್ಣನಂತೆ ಜಿಲ್ಲೆಯಲ್ಲಿ ಕೆಲಸ ನಿರ್ವಹಿಸಿ ಜಿಲ್ಲೆಯ ಎಲ್ಲಾ ಗೊಲ್ಲರ ಹಟ್ಟಿಗಳನ್ನು ಕಂದಾಯ ಗ್ರಾಮವಾಗಿ ಮಾಡಿ ಹಾಗೂ ಶವಸಂಸ್ಕಾರಕ್ಕೆ ರುದ್ರಭೂಮಿಯನ್ನು ಕಲ್ಪಿಸಿಕೊಡುವಂತೆ ಸಮಾಜ ಹಲವು ಬೇಡಿಕೆಗಳನ್ನು ಮಂಡಿಸಿದರು.

ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಮೇಯರ್ ಜಯಮ್ಮ ಗೋಪಿನಾಯ್ಕ, ಅಪರ ಜಿಲ್ಲಾಧಿಕಾರಿ ಪಿ.ಎನ್ ಲೋಕೇಶ್, ಉಪವಿಭಾಗಾಧಿಕಾರಿ ದುರ್ಗಾಶ್ರೀ, ಹುಲ್ಲುಮನಿ ತಿಮ್ಮಣ್ಣ, ಡಿವೈಎಸ್ಪಿ ಕನ್ನಿಕಾ ಸಿಕ್ರಿವಾಣಿ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಜಂಟಿ ನಿರ್ದೇಶಕಿ ನಜ್ಮಾ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ವಾಸಂತಿ ಉಪ್ಪಾರ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ರವಿಚಂದ್ರ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಮಾಜದ ಮುಖಂಡರು ಹಾಜರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಬಾಷಾ ಒತ್ತಾಯ

Published

on

ಸುದ್ದಿದಿನ,ದಾವಣಗೆರೆ:ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದ್ದು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಗ್ಗೊಲೆ ಮಾಡುತ್ತಿದ್ದೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಭಾಷಾ ಆಕ್ರೋಶ ವ್ಯಕ್ತಪಡಿಸಿದ್ದಾರೆ,

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ನಂತರ 23ಕ್ಕೆ ಹೆಚ್ಚು ವಿದ್ಯಾರ್ಥಿನಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ ರಾಜೀನಾಮೆ ನೀಡಬೇಕು ಎಂದು ಯುವ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ *ಮಹಬೂಬ್ ಭಾಷಾ* ಆಗ್ರಹಿಸಿದ್ದಾರೆ ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ ಯುವಜನರು ಹಾಗೂ ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು, ಸಂವಿಧಾನ ವಿರೋಧಿ ನಡೆ ಹಾಗೂ ಹೋರಾಟವನ್ನು ಹತ್ತಿಕ್ಕು ಹೊನ್ನಾರವಾಗಿದೆ.

ನೀಟ್ ಹಗರಣ ಮತ್ತು ವಿದ್ಯಾರ್ಥಿಗಳ ಆತ್ಮಹತ್ಯೆ ಕಾರ್ಪೊರೇಟರ್ ಶಿಕ್ಷಣ ನೀತಿಗಳ ಕಾರಣ, ಪರೀಕ್ಷೆಯ ಅಕ್ರಮ ವಿರುದ್ಧ ಹೋರಾಟ ಎರಡನೇ ಸ್ವತಂತ್ರ ಸಂಗ್ರಾಯದ ರೀತಿಯಲ್ಲಿ ದೇಶದಿಂದ ವ್ಯಾಪಿಸುತ್ತಿದ್ದು, ಆಳುವ ಸರ್ಕಾರ ರಾಷ್ಟ್ರದ ಭವಿಷ್ಯ ವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದೆಂದು ಹೇಳಿದ್ದಾರೆ.

ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ತಕ್ಷಣವೇ ಸರಿಪಡಿಸಬೇಕು ಹಾಗೂ ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸುದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕೆಂದು ಒತ್ತಾಯಿಸುತ್ತಿದ್ದೇನೆ ಎಂದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ; ವಿದ್ಯಾರ್ಥಿಗಳ ಆತ್ಮಹತ್ಯೆ: ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ವಿನಾಯಕ ಬಿ. ಎನ್ ಆಗ್ರಹ

Published

on

ಸುದ್ದಿದಿನ,ದಾವಣಗೆರೆ :ವಿದ್ಯಾರ್ಥಿಗಳ ಭವಿಷ್ಯದ ಜತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ನಂತರ20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ

ರಾಜಿನಾಮೆ ನೀಡಬೇಕು. ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು’ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೀತಿ ,ಸಂಶೋಧನೆ ಮತ್ತು ತರಬೇತಿ ವಿಭಾಗದ ರಾಜ್ಯ ಸಂಚಾಲಕರಾದ ವಿನಾಯಕ ಬಿ.ಎನ್ ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹ ಮಾಡಿದ್ದಾರೆ.

ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ
ಯುವಜನರು, ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು. ಸೊನಮ್ ವಾಂಗ್ಟಕ್ ಅವರನ್ನು ಏಕಾಏಕಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದು ಸಂವಿಧಾನವಿರೋಧಿ ನಡೆ, ಹೋರಾಟ ಹತ್ತಿಕ್ಕುವ ಹುನ್ನಾರ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನೀಟ್ ಹಗರಣ, ವಿದ್ಯಾರ್ಥಿಗಳ ಆತ್ಮ ಹತ್ಯೆಗೆ ಕಾರ್ಪೊರೇಟ್ ಶಿಕ್ಷಣ ನೀತಿಗಳು ಕಾರಣ. ನೀಟ್ ಪರೀಕ್ಷೆ ಅಕ್ರಮದ ವಿರುದ್ಧದ ಹೋರಾಟ ಎರಡನೇ ಸ್ವಾತಂತ್ರ್ಯ ಸಂಗ್ರಾಮದ ರೀತಿಯಲ್ಲಿ ದೇಶದಾದ್ಯಂತ ವ್ಯಾಪಿಸುತ್ತಿದೆ. ಆಳುವ ಸರ್ಕಾರ ರಾಷ್ಟ್ರದ ಭವಿಷ್ಯವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದು’.ಎಂದು ತಿಳಿಸಿದ್ದಾರೆ.

ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ಸರಿಪಡಿಸಬೇಕು ಮತ್ತು ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ವಂದನೆಗಳೊಂದಿಗೆ

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಎಸ್ ಐ ಆರ್ | ರಾಜ್ಯದಲ್ಲೇ ಮಾಯಾಕೊಂಡ ಕ್ಷೇತ್ರಕ್ಕೆ ಪ್ರಥಮ ಸ್ಥಾನ

Published

on

ಸುದ್ದಿದಿನ,ದಾವಣಗೆರೆ‌ : ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಮಾಯಾಕೊಂಡ ಕ್ಷೇತ್ರವು ನಿಗದಿತ ಅವಧಿಗಿಂತ ಮೊದಲೇ ಗಣತಿ ನಮೂನೆಗಳ ಹಂಚಿಕೆಯನ್ನು ಪೂರ್ಣಗೊಳಿಸಿರುವುದರಿಂದ ಮತ್ತು ಶೇ. 92.31 ರಷ್ಟು ಡಿಜಿಟಲೀಕರಣ ಸಾಧನೆ ಮಾಡಲಾಗಿರುವುದರಿಂದ, ಪ್ರಗತಿಯಲ್ಲಿ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದುಕೊಂಡಿದೆ ಎಂದು 108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದ ಮತದಾರರ ನೋಂದಣಾಧಿಕಾರಿ ಹಾಗೂ ದಾವಣಗೆರೆ ಉಪವಿಭಾಗಾಧಿಕಾರಿ ಸಂತೋಷ್ ಕುಮಾರ್ ಅವರು ತಿಳಿಸಿದರು.

ಅವರು ಮಂಗಳವಾರ ದಾವಣಗೆರೆ ತಾಲ್ಲೂಕು ಕಚೇರಿಯಲ್ಲಿ ದಾವಣಗೆರೆ ಜಿಲ್ಲೆಯ 108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕುರಿತು ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಒಟ್ಟು 1,97,048 ಮತದಾರರನ್ನು ಹೊಂದಿದ್ದು ಎಲ್ಲಾ 1,97,048 ಗಣತಿ ನಮೂನೆಗಳನ್ನು ಹಂಚಿಕೆ ಮಾಡಲಾಗಿದೆ ಇದುವರೆಗೆ ಒಟ್ಟು 1,81,890 ಗಣತಿ ನಮೂನೆಗಳನ್ನು ಡಿಜಿಟಲೀಕರಿಸಲಾಗಿದ್ದು, ಶೇಕಡಾ 92.31 ರಷ್ಟು ಗುರಿಯನ್ನು ತಲುಪಲಾಗಿದೆ ಎಂದು ತಿಳಿಸಿದರು.

ದಾವಣಗೆರೆ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (SIR) ಪ್ರಕ್ರಿಯೆಯಲ್ಲಿ ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ ಗಣತಿ ನಮೂನೆಗಳ ಹಂಚಿಕೆ ಹಾಗೂ ಡಿಜಿಟಲೀಕರಣ ಪ್ರಕ್ರಿಯೆಯು ಬಿರುಸಿನಿಂದ ಸಾಗಿದ್ದು, ಇನ್ನು ಕೇವಲ 4,165 ಫಾರ್ಮ್‌ಗಳು (ಶೇಕಡಾ 2.11) ಮಾತ್ರ ಡಿಜಿಟಲೀಕರಣಕ್ಕೆ ಬಾಕಿ ಇವೆ ಕ್ಷೇತ್ರದಲ್ಲಿ ಯಾವುದೇ ಹಂಚಿಕೆಯಾಗದ ಫಾರ್ಮ್‌ಗಳು ಬಾಕಿ ಉಳಿದಿಲ್ಲ, ಬಾಕಿ ಉಳಿದಿರುವ ಗಣತಿ ನಮೂನೆಗಳ ಗಣಕೀಕರಣ ಶೀಘ್ರವಾಗಿ ಪೂರ್ಣಗೊಳಿಸಲಾಗುವುದು ಎಂದರು.

ಮನೆ ಮನೆ ಭೇಟಿ ಸಂದರ್ಭದಲ್ಲಿ ಇಂದಿನವರೆಗೆ ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 10,993 ಮತದಾರರನ್ನು ಸ್ಥಳಾಂತರ, ವಲಸೆ, ಮರಣ, ದ್ವಿಪತಿ (ಡೂಪ್ಲಿಕೇಟ್) ಸೇರಿದಂತೆ ಇತರೆ ಕಾರಣಗಳಿಗಾಗಿ ಗುರುತಿಸಲಾಗಿದೆ. ಒಟ್ಟಾರೆಯಾಗಿ ಜಿಲ್ಲೆಯಲ್ಲಿ 193 ನಮೂನೆಗಳು ಸಂಗ್ರಹವಾಗದೆ ಉಳಿದಿದ್ದು, 5059 ಶಾಶ್ವತ ವಲಸೆ, 3951 ಮರಣ ಪ್ರಕರಣ, 1760 ದ್ವಿಪ್ರತಿ ನಮೂನೆಗಳು ಹಾಗೂ 30 ಇತರೆ ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ ಎಂದು ತಿಳಿಸಿದರು.

ದಾವಣಗೆರೆ ತಾಲ್ಲೂಕು ತಹಶೀಲ್ದಾರ್‌ ರಾಜೇಶ್‌ ಕುಮಾರ್‌ ಸಿ ಅವರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending