Connect with us

ದಿನದ ಸುದ್ದಿ

ಸಾಮರ್ಥ್ಯಾಧಾರಿತ ಕಲಿಕೆಗೆ ಚಟುವಟಿಕೆ ಆಧಾರಿತ ಬೋಧನೆ ಪೂರಕ : ಎಸ್.ಕೆ.ಬಿ.ಪ್ರಸಾದ್

Published

on

ಸುದ್ದಿದಿನ,ಚಿತ್ರದುರ್ಗ: ಮಕ್ಕಳ ಸಾಮರ್ಥ್ಯಾಧಾರಿತ ಕಲಿಕೆಗೆ ಚಟುವಟಿಕೆ ಆಧಾರಿತ ಬೋಧನೆ ಪೂರಕವಾಗುತ್ತದೆ ಎಂದು ಡಯಟ್ ಪ್ರಾಚಾರ್ಯ ಎಸ್.ಕೆ.ಬಿ.ಪ್ರಸಾದ್ ಹೇಳಿದರು.

ನಗರದ ಡಯಟ್‌ನಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಡಿ.ಎಸ್.ಇ.ಆರ್.ಟಿ ಮತ್ತು ಡಯಟ್ ಸಂಯುಕ್ತಾಶ್ರಯದಲ್ಲಿ ಎನ್.ಇ.ಪಿ-2020 ಆಧಾರಿತ 8,9 ಮತ್ತು 10 ನೇ ತರಗತಿ ಸಮಾಜ ವಿಜ್ಞಾನ ‘ಸಂಜೀವಿನಿ’ ಕುರಿತು ಪ್ರೌಢಶಾಲಾ ಶಿಕ್ಷಕರಿಗೆ ಆಯೋಜಿಸಿದ್ದ ಪೈಲೆಟ್ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಮಗುವಿಗೆ ಸಾಮರ್ಥ್ಯಾಧಾರಿತ ಕಲಿಕೆ ಉಂಟು ಮಾಡಲು, ಶಿಕ್ಷಕರ ವೃತ್ತಿಪರ ಸಾಮರ್ಥ್ಯ ಅಭಿವೃದ್ದಿಗೆ ತರಬೇತಿಗಳು ಪೂರಕವಾಗುತ್ತವೆ. ಭವಿಷ್ಯ ಜೀವನದಲ್ಲಿ ಮಕ್ಕಳು ಬೇರೆ ಬೇರೆ ಕ್ಷೇತ್ರದಲ್ಲಿ ಸಾಧನೆ ಮಾಡುತ್ತಾರೆ. ಶಿಕ್ಷಕರು ಏನನ್ನು ಕಲಿಸುತ್ತಾರೆಯೋ ಮಗು ಅದನ್ನು ಕಲಿಯುತ್ತದೆ. ಶಿಕ್ಷಕರು ಬೋಧಿಸುವ ವಿಷಯವನ್ನು ಪ್ರೀತಿಸಬೇಕು. ಮಕ್ಕಳು ಆಸಕ್ತಿದಾಯಕವಾಗಿ ಕಲಿಯುವಂತೆ ಕಲಿಕಾ ಸಾಮಗ್ರಿಗಳೊಂದಿಗೆ ಚಟುವಟಿಕೆ ಆಧಾರಿತವಾಗಿ ಬೋಧಿಸಬೇಕು ಎಂದರು. ಎನ್.ಇ.ಪಿ – 2020 ರಲ್ಲಿ ಸಾಮರ್ಥ್ಯಾಧಾರಿತ ಕಲಿಕೆಗೆ ಒತ್ತು ನೀಡಲಾಗಿದ್ದು ತಂತ್ರಜ್ಞಾನ ಆಧಾರಿತ ಬೋಧನೆ ಮೂಲಕ ನಕಾಶೆ ಓದುವ, ಸ್ಥಳಗಳು, ನದಿಗಳ ಉಗಮ ಸ್ಥಾನ ಗುರುತಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಬೇಕು ಎಂದರು.

ನೋಡಲ್ ಅಧಿಕಾರಿ ಡಿ.ಆರ್.ಕೃಷ್ಣಮೂರ್ತಿ ಮಾತನಾಡಿ, ಕಲಿಕಾ ಫಲಗಳ ಆಧಾರಿತವಾಗಿ ತರಬೇತಿ ಸಾಹಿತ್ಯ ರಚನೆ ಮಾಡಲಾಗಿದೆ. ಶಿಬಿರಾರ್ಥಿಗಳು 5 ದಿನದ ತರಬೇತಿಯಲ್ಲಿ ಆಯೋಜಿಸುವ ಗುಂಪು ಚರ್ಚೆ, ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುವುದರ ಮೂಲಕ ಮುಕ್ತವಾಗಿ ತಮ್ಮ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಳ್ಳಬೇಕು ಎಂದರು.

ಹಿರಿಯ ಉಪನ್ಯಾಸಕರಾದ ಈ.ಹಾಲಮೂರ್ತಿ, ಮಹಮದ್ ಅಯೂಬ್, ಸಯ್ಯದ್ ಮೋಸಿನ್, ಉಪನ್ಯಾಸಕರಾದ ಆರ್.ನಾಗರಾಜು ಎಸ್.ಬಸವರಾಜು, ಕೆ.ಜಿ.ಪ್ರಶಾಂತ್, ಕೆ.ಎಂ. ನಾಗರಾಜು, ತಾಂತ್ರಿಕ ಸಹಾಯಕ ಆರ್.ಲಿಂಗರಾಜು, ಕೆ.ಆರ್.ಲೋಕೇಶ್, ಸಂಪನ್ಮೂಲ ವ್ಯಕ್ತಿಗಳಾದ ಬಿ.ಟಿ.ನಾಗರಾಜು, ಉಮೇಶ್, ಮಾರುತಿ, ಮಲ್ಲಿಕಾರ್ಜುನ ಸ್ವಾಮಿ, ಶ್ರೀನಿವಾಸ, ಪ್ರಸನ್ನ ಕುಮಾರ, ಹುಸೇನ್ ಶರೀಫ್, ಶಿಕ್ಷಕಿ ಉಮಾ ಮತ್ತು ಶಿಬಿರಾರ್ಥಿಗಳು ಇದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

2 ಕೋಟಿ 20 ಲಕ್ಷ ಜನ, ಪಡಿತರ ಚೀಟಿಯ ಪ್ರಯೋಜನ ಪಡೆಯುತ್ತಿಲ್ಲ : ಕೇಂದ್ರ ಸಚಿವ ಪ್ರಲ್ಹಾದ ಜೋಶಿ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನಡೆಸ್ಕ್:ದೇಶಾದ್ಯಂತ 2 ಕೋಟಿ 20 ಲಕ್ಷ ಜನ, ಪಡಿತರ ಚೀಟಿಯ ಪ್ರಯೋಜನ ಪಡೆಯುತ್ತಿಲ್ಲ; ಅಂದಾಜು 34 ಲಕ್ಷ 60 ಸಾವಿರ ಚೀಟಿಗಳು ನಕಲಿ ಎಂಬ ಆರೋಪವಿದೆ.

ಅರ್ಹರನ್ನು ಪಡಿತರ ಚೀಟಿಗೆ ಸೇರಿಸಿ, ಅನರ್ಹರನ್ನು ಕೈಬಿಡುವಂತೆ, ಎಲ್ಲ ರಾಜ್ಯ ಸರ್ಕಾರಗಳಿಗೆ ನಿರ್ದೇಶಿಸಲಾಗಿದೆ ಎಂದು, ಕೇಂದ್ರ ಆಹಾರ ಮತ್ತು ನಾಗರಿಕ ಪೂರೈಕೆ ಖಾತೆ ಸಚಿವ ಪ್ರಲ್ಹಾದ ಜೋಶಿ, ಸ್ಪಷ್ಟಪಡಿಸಿದ್ದಾರೆ.

ಲೋಕಸಭೆಯಲ್ಲಿ ಮಾತನಾಡಿದ ಅವರು, ‘ಅಂತ್ಯೋದಯ ಅನ್ನ ಯೋಜನೆ’ ಅಡಿ, ಕಳೆದ 2000ದಿಂದ ಆರ್ಥಿಕವಾಗಿ ದುರ್ಬಲರು ಹಾಗೂ ವಿಶೇಷ ಚೇತನರಿಗೆ, ಅತಿ ಕಡಿಮೆ ಬೆಲೆಯಲ್ಲಿ, ತಿಂಗಳಿಗೆ 35 ಕಿಲೋ ಆಹಾರ ಧಾನ್ಯ ನೀಡಲಾಗುತ್ತಿದೆ. ಪ್ರತಿ ಕುಟುಂಬಗಳಿಗೆ 35 ಕಿಲೋ ಪಡಿತರ ವಿತರಿಸಲಾಗುತ್ತಿದೆ ಎಂದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಅನ್ನಭಾಗ್ಯ ಯೋಜನೆ | ನೇರ ನಗದು ವರ್ಗಾವಣೆ ಬದಲು ಅಕ್ಕಿ ವಿತರಣೆ

Published

on

ಸುದ್ದಿದಿನಡೆಸ್ಕ್:ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಅನ್ನಭಾಗ್ಯ ಯೋಜನೆಯಡಿ ಪ್ರಸ್ತುತ ರಾಜ್ಯದಲ್ಲಿರುವ ಅಂತ್ಯೋದಯ ಅನ್ನಯೋಜನೆ ಮತ್ತು ಆದ್ಯತಾ ಪಡಿತರ ಚೀಟಿಗಳ ಪ್ರತಿ ಫಲಾನುಭವಿಗೆ ಪ್ರತಿ ತಿಂಗಳು ಪಡಿತರ ಚೀಟಿಯಲ್ಲಿನ ಕುಟುಂಬದ ಮುಖ್ಯಸ್ಥರ ಬ್ಯಾಂಕ್ ಖಾತೆಗೆ ನೇರ ನಗದು ವರ್ಗಾವಣೆ (DBT) ಮುಖಾಂತರ ಹಣವನ್ನು ವರ್ಗಾಯಿಸುವ ಪ್ರಕ್ರಿಯೆಯ ಬದಲಾಗಿ ಫೆಬ್ರವರಿ-2025 ರ ಮಾಹೆಯಿಂದ ಜಾರಿಗೆ ಬರುವಂತೆ ಅರ್ಹ ಫಲಾನುಭವಿಗಳಿಗೆ 05 ಕೆ.ಜಿ ಅಕ್ಕಿಯನ್ನು ಸಾರ್ವಜನಿಕ ವಿತರಣಾ ಪದ್ಧತಿಯಡಿ ವಿತರಿಸಲು ಸರ್ಕಾರ ಆದೇಶಿಸಿದೆ.

ಅದರಂತೆ ಫೆಬ್ರವರಿ-2025 ಮಾಹೆಯಲ್ಲಿ ವಿತರಿಸಬೇಕಾದ ಅಕ್ಕಿ ಪ್ರಮಾಣವನ್ನು ಸೇರಿ ಮಾರ್ಚ್-2025 ಮಾಹೆಯಲ್ಲಿ ವಿತರಿಸಲಾಗುವುದು. ಮಾರ್ಚ್ 1 ರಿಂದ ಮಾರ್ಚ್ 31 ರ ವರಗೆ ಬೆಳಿಗ್ಗೆ 7 ರಿಂದ ರಾ‍ತ್ರಿ 8 ಗಂಟೆಯವರೆಗೆ ಬಾಕಿ ಉಳಿದಿರುವ ಪಡಿತರ ಚೀಟಿಯಲ್ಲಿನ ಸದಸ್ಯರುಗಳು ಇ-ಕೆವೈಸಿ ಮಾಡುವ ಹಾಗೂ ಪಡಿತರ ವಿತರಣೆ ಕಾರ್ಯ ಜರುಗಲಿದ್ದು, ಪಡಿತರ ಚೀಟಿದಾರರು ಬಯೋ ನೀಡಿದ ತಕ್ಷಣವೇ ಪಡಿತರ ಪಡೆಯಬೇಕು.

ಇ-ಕೆವೈಸಿ ಮಾಡಿಸಲು ಪಡಿತರ ಚೀಟಿದಾರರು ಯಾವುದೇ ಶುಲ್ಕ ನೀಡುವಂತಿಲ್ಲ. ಪಡಿತರ ಚೀಟಿದಾರರು ತಮಗೆ ಹಂಚಿಕೆ ಮಾಡಿದ ಆಹಾರಧಾನ್ಯವನ್ನು ಕಾಳಸಂತೆಯಲ್ಲಿ ಮಾರಾಟ ಮಾಡಿದರೆ ಅಂತಹವರ ಪಡಿತರ ಚೀಟಿಯನ್ನು ರದ್ದುಪಡಿಸಿ ಕ್ರಮಕೈಗೊಳ್ಳಲಾಗುವುದು. ಅನಧಿಕೃತವಾಗಿ ಕಾಳಸಂತೆಯಲ್ಲಿ ಆಹಾರಧಾನ್ಯವನ್ನು ದಾಸ್ತಾನು/ಸಾಗಾಣಿಕೆ ಮಾಡುವವರ ವಿರುದ್ಧ ಅಗತ್ಯ ವಸ್ತುಗಳ ಕಾಯ್ದೆ-1955 ರಡಿ ಕ್ರಮ ಕೈಗೊಳ್ಳಲಾಗುವುದು.

ಪಡಿತರ ವಿತರಣೆ ಕುರಿತು ಏನಾದರೂ ದೂರುಗಳು ಇದ್ದಲ್ಲಿ ಸಹಾಯವಾಣಿ ಸಂಖ್ಯೆ 1967 ಕ್ಕೆ ಕರೆ ಮಾಡಿ ದೂರು ಸಲ್ಲಿಸಬಹುದು ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ.ಜಗದೀಶ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ಮನೆ ಬೋರ್ ವೆಲ್ ನೀರು ವಾಣಿಜ್ಯ ಉದ್ದೇಶಕ್ಕೆ ಬಳಕೆ ; ಕ್ರಮ ಕೈಗೊಳ್ಳಲು ಸರಸ್ವತಿ ಬಡಾವಣೆ ನಿವಾಸಿಗಳ ಆಗ್ರಹ

Published

on

ಸುದ್ದಿದಿನ,ದಾವಣಗೆರೆ: ಅಂತರ್ಜಲ ಪ್ರಾಧಿಕಾರದ ನಿರಾಪೇಕ್ಷಣಾ ಪತ್ರವನ್ನು ಪಡೆಯದೆ ಮನೆಯ ಬೋರ್ ವೆಲ್ಲಿನಿಂದ ವಾಣಿಜ್ಯ ಉದ್ದೇಶಕ್ಕಾಗಿ ಸರತಿ ಸಾಲಿನಲ್ಲಿ ಸತತ ನಾಲ್ಕೈದು ವರ್ಷಗಳಿಂದ ಟ್ಯಾಂಕರ್ ಗಳ ಮೂಲಕ ದಿನಕ್ಕೆ 25 ರಿಂದ 50ಕ್ಕೂ ಹೆಚ್ಚು ಟ್ಯಾಂಕರ್ ನೀರನ್ನು ವಾಣಿಜ್ಯ ಉದ್ದೇಶಕ್ಕಾಗಿ ಬಳಸುತ್ತಿದ್ದು, ಈ ಬಗ್ಗೆ ಜಿಲ್ಲಾ ಅಂರ್ತಜಲ ಪ್ರಾಧಿಕಾರದ ಅಧ್ಯಕ್ಷರು, ಜಿಲ್ಲಾಧಿಕಾರಿಗಳು ಗಮನ ಹರಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸರಸ್ವತಿ ನಗರ ‘ಸಿ’ ಬ್ಲಾಕ್ನ ಎಲ್ಲಾ ನಿವಾಸಿಗಳು ಒತ್ತಾಯಿಸಿದ್ದಾರೆ.

ಸರಸ್ವತಿ ನಗರ ಬ್ಲಾಕ್ನ ನಿವಾಸಿ ತಮ್ಮ ಮನೆಯ ಬೋರ್ ವೆಲ್ ನಿಂದ ಒಂದೇ ಸಮನೆ ಸತತವಾಗಿ 4-5 ವರ್ಷಗಳಿಂದ ಸರತಿ ಸಾಲಿನಲ್ಲಿ ಟ್ಯಾಂಕರ್ಗಳ ಮೂಲಕ ದಿನಕ್ಕೆ 25 ರಿಂದ 50ಕ್ಕೂ ಹೆಚ್ಚು ಬಾರಿ ವಾಣಿಜ್ಯ ಉದ್ದೇಶಕ್ಕಾಗಿ ತಮ್ಮ ಪ್ರಾಧಿಕಾರದ ಅನುಮತಿ ಪಡೆಯದೆ ನೀರಿನ ಮಾರಾಟ ಮಾಡುತ್ತಿರುತ್ತಾರೆ. ಈ ವಿಷಯವಾಗಿ ಜಿಲ್ಲಾಧಿಕಾರಿಗಳ ಆದೇಶದ ಅನ್ವಯ ಬೋರ್ ವೆಲ್ ಗಳಲ್ಲಿ ಕಛೇರಿಯ ಹಿರಿಯ ಭೂ ವಿಜ್ಞಾನಿಗಳು ಹಲವು ಬಾರಿ ನೋಟಿಸ್ ನೀಡಿದ್ದರೂ, ಅದನ್ನು ಲೆಕ್ಕಿಸದೆ ದಿನೇದಿನೇ ಹೆಚ್ಚುಹೆಚ್ಚು, ಟ್ಯಾಂಕರ್ ನೀರನ್ನು ಮಾರಾಟ ಮಾಡುತ್ತಿದ್ದಾರೆ.

ಈ ಕುರಿತು ಕಾಲೋನಿಯ ನಿವಾಸಿಗಳು ಪಾಲಿಕೆ ಸದಸ್ಯ ಕೆ.ಎಂ.ವೀರೇಶ್ ಜತೆಗೂಡಿ ಚಂದ್ರಶೇಖರಪ್ಪ ಅವರಲ್ಲಿ ಹಲವು ಬಾರಿ ವಿನಂತಿಸಿದರೂ, ಲೆಕ್ಕಿಸದೆ ತಮ್ಮ ನೀರಿನ ಮಾರಾಟದ ಅರ್ಭಟವನ್ನು ಮುಂದುವರಿಸಿದ್ದಾರೆ. ಇದರಿಂದಾಗಿ ಕಾಲೋನಿಯ ವಸತಿ ಪ್ರದೇಶದಿಂದ ಕೈಗಾರಿಕಾ ಪ್ರದೇಶವಾಗಿ ಮಾರ್ಪಟ್ಟಿದ್ದು, ಇಲ್ಲಿನ ಮಕ್ಕಳು ವೃದ್ಧರು ರಸ್ತೆಗಳಲ್ಲಿ ಓಡಾಡುವುದು ತುಂಬಾ ಕಷ್ಟವಾಗಿರುತ್ತದೆ, ಇದಲ್ಲದೇ ನಮ್ಮ ಕಾಲೋನಿಯ ಬೋರ್ ವೆಲ್ ಗಳಲ್ಲಿ ನೀರಿನ ಮಟ್ಟ ದಿನೇ-ದಿನೇ ಕುಸಿಯುತ್ತಿದ್ದು, ಮುಂದಿನ ದಿನಗಳಲ್ಲಿ ನೀರಿಗಾಗಿ ಪರದಾಡುವ ಪರಿಸ್ಥಿತಿ ಎದುರಾಗಲಿದೆ ಎಂದು ಸ್ಥಳೀಯ ನಿವಾಸಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದೇ ರೀತಿ ದಾವಣಗೆರೆಯ ಬಹಳ ಕಾಲೋನಿಗಳಲ್ಲಿ ಮನೆ ಬೋರ್ ವೆಲ್ ಗಳಿಂದ ನೀರಿನ ಮಾರಾಟ ಹಲವು ವರ್ಷಗಳಿಂದ ನಡೆಯುತ್ತಿದೆ. ಆಯಾ ಕಾಲೋನಿಯ ನಿವಾಸಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಪ್ರಾಧಿಕಾರದ ಅನುಮತಿ ಪಡೆಯದೆ ವಾಣಿಜ್ಯ ಉದ್ದೇಶಕ್ಕಾಗಿ ನೀರು ಮಾರಾಟ ಮಾಡುತ್ತಿರುವ ಚಂದ್ರಶೇಖರಪ್ಪರ ವಿರುದ್ಧ ಕಾನೂನಾತ್ಮಕವಾಗಿ ಕ್ರಮ ಕೈಗೊಳ್ಳಲು ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚಿಸಬೇಕೆಂದು ಸರಸ್ವತಿ ನಗರ ‘ಸಿ’ ಬ್ಲಾಕಿನ ಎಲ್ಲಾ ನಿವಾಸಿಗಳು ಮನವಿ ಮಾಡಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending