Connect with us

ದಿನದ ಸುದ್ದಿ

ಸಿದ್ದರಾಮಯ್ಯ ಬುಲೆಟ್ ನಂತಹ ಪ್ರಶ್ನೆಗಳಿಗೆ ಉತ್ತರಿಸ್ತಾರಾ ಯಡಿಯೂರಪ್ಪ..? ಏನವು ಪ್ರಶ್ನೆಗಳು..?

Published

on


  • ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಯಡಿಯೂರಪ್ಪ ಅವರಿಗೆ ಪ್ರಶ್ನೆಗಳ ಸುರಿಮಳೆಗೈಯ್ದಿದ್ದಾರೆ. ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಈ ಪ್ರಶ್ನೆಗಳನ್ನು ಅವರು ಹಂಚಿಕೊಂಡಿದ್ದಾರೆ.

ಸುದ್ದಿದಿನ ಡೆಸ್ಕ್ : ಯಡಿಯೂರಪ್ಪನವರು (yeddyurappa) ಇತ್ತೀಚೆಗೆ ಜನಸಂಕಲ್ಪ ಯಾತ್ರೆಯೊಂದರಲ್ಲಿ ಮೋದಿಯವರನ್ನು ( Modi ) ಟೀಕಿಸುವವರ ವಿರುದ್ಧ ಆ ಕ್ಷಣದಲ್ಲಿಯೆ ಪ್ರತಿಭಟಿಸಿ ಎಂದು ಕಾರ್ಯಕರ್ತರಿಗೆ ಆಜ್ಞೆ ಹೊರಡಿಸುವ ಧ್ವನಿಯಲ್ಲಿ ಹೇಳಿದ್ದಾರೆ. ಮಾನ್ಯ ಯಡಿಯೂರಪ್ಪನವರಿಗೆ ಈ ಕೆಳಕಂಡ ಪ್ರಶ್ನೆಗಳನ್ನು ಜವಾಬ್ಧಾರಿಯುತ ವಿರೋಧ ಪಕ್ಷದ ನಾಯಕನಾದ ನಾನು ಕೇಳಬಯಸುತ್ತೇನೆ.

2014ಕ್ಕೂ ಮೊದಲು ಮನಮೋಹನ್ ಸಿಂಗ್ ಸರ್ಕಾರ ರೈತರ ಎಷ್ಟು ಸಾಲವನ್ನು ಮನ್ನಾ ಮಾಡಿತ್ತು? ಅಂಬಾನಿ, ಅದಾನಿ ಮುಂತಾದ ಕಾರ್ಪೊರೇಟ್ ಬಂಡವಾಳಿಗರ ಎಷ್ಟು ಸಾಲವನ್ನು ಮನ್ನಾ ಮಾಡಲಾಗಿತ್ತು? ಮೋದಿಯವರು ಅಧಿಕಾರಕ್ಕೆ ಬಂದ ಮೇಲೆ ಯಾರ್ಯಾರ ಎಷ್ಟು ಸಾಲವನ್ನು ಮನ್ನಾ ಮಾಡಿದ್ದಾರೆ?

ಮೋದಿಯವರು ಅಧಿಕಾರಕ್ಕೆ ಬರುವ ಮೊದಲು ಜನರು ಕಟ್ಟುತ್ತಿದ್ದ ತೆರಿಗೆ ಎಷ್ಟು? ಕಾರ್ಪೊರೇಟ್ ಬಂಡವಾಳಿಗರು ಪಾವತಿಸುತ್ತಿದ್ದ ತೆರಿಗೆ ಎಷ್ಟಿತ್ತು? ಈಗ ಎಷ್ಟಿದೆ? ಜನರ ಮೇಲಿನ ತೆರಿಗೆ ಹೆಚ್ಚಿಸಿ ಅದಾನಿ, ಅಂಬಾನಿ ಮುಂತಾದವರ ಮೇಲಿದ್ದ ತೆರಿಗೆಯನ್ನು ಶೇ.8 ರಷ್ಟು ಇಳಿಸಿದ್ದು ಏಕೆ?

2014 ಕ್ಕೆ ಮೊದಲು ಪೆಟ್ರೋಲ್, ಡೀಸೆಲ್‍ಗಳ ಮೇಲೆ ವಿಧಿಸುತ್ತಿದ್ದ ಸೆಸ್‍ಗಳೆಷ್ಟು? ಮೋದಿಯವರು ವಿಧಿಸುತ್ತಿರುವ ಸೆಸ್‍ಗಳ ಪ್ರಮಾಣವೆಷ್ಟು?
ಇದರಿಂದಾಗಿ ಪೆಟ್ರೋಲ್, ಡೀಸೆಲ್‍ಗಳ ಬೆಲೆ ಹಿಂದೆ ಎಷ್ಟಿತ್ತು? ಈಗ ಎಷ್ಟಿದೆ? 2014 ರ ಮೊದಲು 10 ವರ್ಷಗಳ ಕಚ್ಛಾ ತೈಲದ ಸರಾಸರಿ ಬೆಲೆಗಳು ಎಷ್ಟಿತ್ತು? 2014 ರಿಂದ ಇದುವರೆಗೆ ಕಚ್ಛಾ ತೈಲದ ಸರಾಸರಿ ಬೆಲೆಗಳು ಎಷ್ಟು?

2014 ಕ್ಕೆ ಮೊದಲು ದೇಶದಲ್ಲಿ ನಿರುದ್ಯೋಗದ ಪ್ರಮಾಣ ಎಷ್ಟಿತ್ತು? ಈಗ ಎಷ್ಟಿದೆ?
2014ಕ್ಕೆ ಮೊದಲು ರೈತರ ತಲೆಯ ಮೇಲೆ, ದೇಶದ ಜನರ ತಲೆಯ ಮೇಲೆ ಇದ್ದ ಸಾಲವೆಷ್ಟು? ಈಗ ಎಷ್ಟಿದೆ? ರೈತರ ಹಾಗೂ ಇತರೆ ಜನಸಮುದಾಯಗಳ ಆದಾಯ ಎಷ್ಟಿತ್ತು? ಈಗ ಎಷ್ಟಿದೆ?

2014ಕ್ಕಿಂತ ಮೊದಲು ಮಹಿಳಾ ಕಾರ್ಮಿಕರ ಪ್ರಮಾಣ ಶೇ.32 ಇದ್ದದ್ದು ಈಗ ಶೇ.21 ಕ್ಕೆ ಇಳಿಯಲು ಮೋದಿ ಸರ್ಕಾರದ ಮಹಿಳಾ ವಿರೋಧಿ ನೀತಿಗಳು ಕಾರಣವಲ್ಲವೆ?

2014ಕ್ಕಿಂತ ಮೊದಲು ದೇಶದ ಮೇಲೆ 53 ಲಕ್ಷ ಕೋಟಿ ಇದ್ದದ್ದು, ಈಗ 155 ಲಕ್ಷ ಕೋಟಿಗೆ ಏರಿಸಿ ದೇಶವನ್ನು ದಿವಾಳಿ ಮಾಡಿದ್ದು ಮೋದಿಯವರಲ್ಲವೆ?

2018 ಕ್ಕೆ ಮೊದಲು 2.42 ಲಕ್ಷ ಕೋಟಿ ಇದ್ದ ರಾಜ್ಯದ ಸಾಲವು ಈ ವರ್ಷದ ಕೊನೆಯ ಹೊತ್ತಿಗೆ 5.30 ರಿಂದ 5.40 ಲಕ್ಷ ಕೋಟಿಗಳವರೆಗೆ ಏರಿಕೆಯಾಗಲು ಕಾರಣವೇನು?

2014 ಕ್ಕಿಂತ ಮೊದಲು ಕೇಂದ್ರವು ಕರ್ನಾಟಕದಿಂದ ವಿವಿಧ ಬಾಬತ್ತುಗಳಿಂದ ಸಂಗ್ರಹಿಸುತ್ತಿದ್ದ ತೆರಿಗೆಗಳು, ಸೆಸ್ಸುಗಳು, ಅಡಿಷನಲ್ ಎಕ್ಸೈಜ್ ಡ್ಯೂಟಿಗಳೆಷ್ಟು? ಈಗ ಎಷ್ಟು ಸಂಗ್ರಹಿಸುತ್ತಿದ್ದಾರೆ? ಕರ್ನಾಟಕಕ್ಕೆ ಎಷ್ಟು ಹಂಚಿಕೆ ಮಾಡುತ್ತಿದ್ದಾರೆ? ಕರ್ನಾಟಕದಿಂದ ಪ್ರತಿ ವರ್ಷ 3.5 ಲಕ್ಷ ಕೋಟಿಗಳವರೆಗೆ ದೋಚಿಕೊಂಡು ನಮಗೆ ಕೇವಲ 30 ಸಾವಿರ ಕೋಟಿ ತೆರಿಗೆ ಹಂಚಿಕೆ ಮಾಡುತ್ತಿದ್ದಾರೆ. ಇದನ್ನು ನ್ಯಾಯ ಎನ್ನಬೇಕೆ? ಇದರಿಂದಾಗಿ 2018-19 ಮತ್ತು 2019-20 ಕ್ಕೆ ಹೋಲಿಸಿದರೆ ರಾಜ್ಯವು ಈ ವರ್ಷ ಕನಿಷ್ಟ 60 ಸಾವಿರ ಕೋಟಿ ಕಳೆದುಕೊಳ್ಳುತ್ತಿದೆ.

2014 ಕ್ಕಿಂತ ಮೊದಲು ಕೇಂದ್ರ ಸರ್ಕಾರ ಅಡುಗೆ ಸಿಲಿಂಡರಿನ ಮೇಲೆ ನೀಡುತ್ತಿದ್ದ ಸಬ್ಸಿಡಿಗಳೆಷ್ಟು? ಈಗ ಎಷ್ಟು ಸಬ್ಸಿಡಿಗಳನ್ನು ನೀಡಲಾಗುತ್ತಿದೆ?

1947 ರಿಂದ 2014 ರವರೆಗೆ ಕೇಂದ್ರ ಸರ್ಕಾರವು ಸ್ಥಾಪಿಸಿದ್ದ ಸಾರ್ವಜನಿಕ ವಲಯದ ಕಂಪೆನಿ/ ಸಂಸ್ಥೆ/ಉದ್ದಿಮೆಗಳೆಷ್ಟು? ಹಿಂದಿನವರು ಸ್ಥಾಪಿಸಿದವುಗಳನ್ನು ಖಾಸಗೀಕರಿಸಿದ್ದೆಷ್ಟು?

2014ರ ನಂತರ ಮೋದಿಯವರು ಒಂದು ಕಂಪೆನಿ/ ಸಂಸ್ಥೆಯನ್ನೂ ಸ್ಥಾಪಿಸದೆ ಎಲ್ಲವುಗಳನ್ನೂ ಮಾರಾಟ ಮಾಡುತ್ತಿರುವುದನ್ನು ಒಳ್ಳೆಯ ಆಡಳಿತವೆನ್ನುತ್ತಾರೊ ಅಥವಾ ದಾರಿದ್ರ್ಯಾವಸ್ಥೆ ತಲುಪಿದ ಆಡಳಿತವೆನ್ನುತ್ತಾರೊ ಎಂದು ಯಡಿಯೂರಪ್ಪನವರು ಹೇಳಬೇಕು.

ಸರ್ಕಾರಿ ಸಂಸ್ಥೆಗಳನ್ನು ಮುಚ್ಚುತ್ತಿರುವುದರಿಂದ ದಲಿತರು, ಹಿಂದುಳಿದವರಿಗೆ ಮೀಸಲಾತಿ ಅವಕಾಶಗಳು ಮುಚ್ಚಿ ಹೋಗುತ್ತಿವೆ. ಮೀಸಲಾತಿ ಹೊರಟು ಹೋಗಲಿ ಎಂದು ಭಾವಿಸಿಯೆ ಖಾಸಗೀಕರಣ ಮಾಡುತ್ತಿರುವಂತಿದೆ. ಇದನ್ನು ಮನುವಾದಿ ಸಿದ್ಧಾಂತದ ಮೌನ ಅನುಷ್ಠಾನದ ವಿಧಾನ ಎನ್ನದೆ ಬೇರೆ ದಾರಿ ಇದೆಯೆ?

2014ಕ್ಕೆ ಮೊದಲು ರಾಜ್ಯದ ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಕೇಂದ್ರ ಸರ್ಕಾರ ನೀಡುತ್ತಿದ್ದ ಅನುದಾನದ ಪಾಲೆಷ್ಟು? 2014 ರ ನಂತರ ನೀಡುತ್ತಿರುವ ಪಾಲು ಎಷ್ಟು?

2014 ಕ್ಕೆ ಮೊದಲು ಯುಪಿಎ ಸರ್ಕಾರದ ಅವಧಿಯಲ್ಲಿ ದೇಶದ ಸರಾಸರಿ ಜಿಡಿಪಿ ಬೆಳವಣಿಗೆ ಎಷ್ಟು? ಕಳೆದ 8 ವರ್ಷಗಳ ಸರಾಸರಿ ಬೆಳವಣಿಗೆ ಎಷ್ಟು?

2004-05 ರಿಂದ 2013-14 ರವರೆಗೆ ಕೇಂದ್ರ ಸರ್ಕಾರವು ರೈತರು ಬೆಳೆದ ಕೃಷಿ ಉತ್ಪನ್ನಗಳಿಗೆ ನೀಡಿದ ಬೆಂಬಲ ಬೆಲೆಗಳ ಪ್ರಮಾಣ ಎಷ್ಟು? 2014 ರಿಂದ 2021-22 ರವರೆಗೆ ನೀಡಿದ ಬೆಂಬಲ ಬೆಲೆಗಳೆಷ್ಟು?

2014 ಕ್ಕಿಂತ ಮೊದಲು ದೇಶದ ವ್ಯಾಪಾರದ ಕೊರತೆ ಎಷ್ಟಿತ್ತು? ಈಗ ಎಷ್ಟಿದೆ? ಮೇಕ್ ಇಂಡಿಯಾ ಎಂದವರು ಯಾರು? ಚೀನಾದಿಂದ ಆಮದು ಮಾಡಿಕೊಳ್ಳುವ ಪ್ರಮಾಣವನ್ನು ದುಪ್ಪಟ್ಟು ಮಾಡಿದ್ದು ಏಕೆ?

2014 ಕ್ಕಿಂತ ಮೊದಲು ರೂಪಾಯಿಯ ಮೌಲ್ಯ ಡಾಲರಿನ ಎದುರು ಸರಾಸರಿ 58 ರೂ ಇದ್ದದ್ದು ಎಷ್ಟಿತ್ತು? ಈಗ 82.5 ರೂಗಳಿಗೆ ಬೀಳಿಸಿದ್ದನ್ನು ಮೋದಿಯವರ ಜಗಮೆಚ್ಚುವ ಕೆಲಸ ಎನ್ನಬೇಕೆ?

2014 ಕ್ಕಿಂತ ಮೊದಲು ಭಾರತ ಹಸಿವು ಮತ್ತು ಬಡತನದ ಸೂಚ್ಯಂಕಗಳಲ್ಲಿ ಯಾವ ಸ್ಥಾನದಲ್ಲಿತ್ತು? ಈಗ ಯಾವ ಸ್ಥಾನದಲ್ಲಿದೆ?

2015 ಕ್ಕಿಂತ ಮೊದಲು ಭಾರತೀಯರ ಸ್ವಾತಂತ್ರ್ಯ ಸೂಚ್ಯಂಕವು 75 ನೇ ಸ್ಥಾನದಲ್ಲಿದ್ದದ್ದು 2020ರ ವೇಳೆಗೆ 111 ನೇ ಸ್ಥಾನಕ್ಕೆ ಕುಸಿಯಲು ಮೋದಿ ಕಾರಣರಲ್ಲವೆ?

2013-2019 ರವರೆಗೆ ಮೋದಿಯವರು ಎಷ್ಟು ಭರವಸೆಗಳನ್ನು ದೇಶದ ಜನರಿಗೆ ನೀಡಿದ್ದರು? ಅವುಗಳಲ್ಲಿ ಎಷ್ಟನ್ನು ಈಡೇರಿಸಿದ್ದಾರೆ?

ಜಾಗತಿಕ ಸ್ಪರ್ಧಾತ್ಮಕತೆಯಲ್ಲಿ ಭಾರತದ ಸ್ಥಾನ 2013 ರಲ್ಲಿ 40 ರ‌್ಯಾಂಕ್ ಇದ್ದದ್ದು 2021 ರ ಹೊತ್ತಿಗೆ 43 ಕ್ಕೆ ಸ್ಥಾನಕ್ಕೆ ಕುಸಿಯಲು ಕಾರಣವೇನು?

ವಿಶ್ವ ಸಂಸ್ಥೆಯ ಸಮೀಕ್ಷೆಯಲ್ಲಿ ಭಾರತೀಯರ ಸಂತೋಷದ ಸೂಚ್ಯಂಕವು 2015 ರಲ್ಲಿ 117 ನೇ ಸ್ಥಾನದಲ್ಲಿದ್ದದ್ದು 2021 ರ ಹೊತ್ತಿಗೆ 139 ಸ್ಥಾನಕ್ಕೆ ಕುಸಿದದ್ದು ಯಾಕೆ? ಇದಕ್ಕೆ ಯಾರು ಕಾರಣ?

ಜಾಗತಿಕ ಆರ್ಥಿಕ ಸ್ವಾತಂತ್ರ್ಯದಲ್ಲಿ ಭಾರತದ ಸ್ಥಾನವು 2015 ರಲ್ಲಿ 95 ಸ್ಥಾನದಲ್ಲಿದ್ದದ್ದು 2020 ರ ಹೊತ್ತಿಗೆ 105 ನೇ ಸ್ಥಾನಕ್ಕೆ ಕುಸಿದಿದ್ದು ಯಾಕೆ?

ಟ್ರಾನ್ಸಪೆರೆನ್ಸಿ ಇಂಟರ್ ನ್ಯಾಷನಲ್ ಗ್ಲೋಬಲ್ ಕರಪ್ಷನ್ ಇಂಡೆಕ್ಸ್‌ನಲ್ಲಿ 2014 ರಲ್ಲಿ 85ನೇ ಸ್ಥಾನದಲ್ಲಿದ್ದ ಭಾರತ 2020 ರ ವೇಳೆಗೆ 86 ನೆ ಸ್ಥಾನಕ್ಕೆ ಕುಸಿಯಲು ಕಾರಣವೇನು? ಇದರ ಹೊಣೆಯನ್ನು ಮೋದಿಯವರೆ ಹೊರಬೇಕಲ್ಲವೆ?

ವಿಶ್ವ ಆರ್ಥಿಕ ವೇದಿಕೆಯ ಪ್ರಕಾರ ಜಾಗತಿಕ ಜೆಂಡರ್ ಗ್ಯಾಪ್‍ನ ಸೂಚ್ಯಂಕದಲ್ಲಿ 2014 ರಲ್ಲಿ 114 ನೇ ಸ್ಥಾನದಲ್ಲಿದ್ದ ಭಾರತ 2021 ರಲ್ಲಿ ತೀವ್ರ ಕುಸಿತ ಕಾಣಲು ಕಾರಣ ಯಾರು?

ವಿಶ್ವ ಆರ್ಥಿಕ ವೇದಿಕೆಯ ಪ್ರಕಾರ ಜಾಗತಿಕ ಆರ್ಥಿಕ ಸ್ಪರ್ಧಾತ್ಮಕತೆಯಲ್ಲಿ 2017 ರಲ್ಲಿ ಭಾರತವು 40 ನೇ ರ‌್ಯಾಂಕ್ ನಲ್ಲಿದ್ದದ್ದು 2020 ರ ವೇಳೆಗೆ 68 ನೇ ಸ್ಥಾನಕ್ಕೆ ಕುಸಿಯಲು ಮೋದಿಯವರ ನೇತೃತ್ವದ ಬಿಜೆಪಿ ಸರ್ಕಾರ ಕಾರಣವಲ್ಲವೆ?

ಪಾಸ್ ಪೋರ್ಟ್ ಇಂಡೆಕ್ಸ್‍ನಲ್ಲಿ 2013ರಲ್ಲಿ 74ನೇ ಸ್ಥಾನದಲ್ಲಿದ್ದ ಭಾರತವು 2021ರ ವೇಳೆಗೆ 85 ನೇ ಸ್ಥಾನಕ್ಕೆ ಕುಸಿಯಲು ಕಾರಣ ಯಾರು? ಇದರಿಂದ ಭಾರತೀಯರ ಘನತೆ ಕಡಿಮೆಯಾಗಲು ಮೋದಿಯವರ ಆಡಳಿತ ಕಾರಣವಲ್ಲವೆ?

ವಿಶ್ವ ಆರ್ಥಿಕ ವೇದಿಕೆಯ ಬಂಡವಾಳ ಸೂಚ್ಯಂಕದಲ್ಲಿ 78ನೇ ಸ್ಥಾನದಲ್ಲಿದ್ದ ಭಾರತವು 2017 ರ ವೇಳೆಗೆ 103 ನೇ ಸ್ಥಾನಕ್ಕೆ ಕುಸಿಯಲು ಮೋದಿಯವರು ಕಾರಣರಲ್ಲವೆ?

ಬ್ಲೂಮ್‍ಬರ್ಗ್ ಸಮೀಕ್ಷೆಗಳ ಪ್ರಕಾರ ಭಾರತದ ಆರೋಗ್ಯ ಕ್ಷೇತ್ರದ ಸೂಚ್ಯಂಕವು 2015 ರಲ್ಲಿ 103 ನೇ ಸ್ಥಾನದಲ್ಲಿದ್ದದ್ದು 2020 ರ ವೇಳೆಗೆ 120 ನೇ ಸ್ಥಾನಕ್ಕೆ ಕುಸಿಯಲು ಕಾರಣ ಯಾರು?

ಸುಸ್ಥಿರ ಅಭಿವೃದ್ಧಿ ಸೂಚ್ಯಂಕದಲ್ಲಿ 2016 ರಲ್ಲಿ 110 ನೇ ಸ್ಥಾನದಲ್ಲಿದ್ದ ಭಾರತವು 2021 ರ ವೇಳೆಗೆ 120 ನೇ ಸ್ಥಾನಕ್ಕೆ, ಬಾಂಗ್ಲಾ, ನೇಪಾಳ, ಶ್ರೀ ಲಂಕಾ, ಭೂತಾನ್ ಗಳಿಗಿಂತ ಕೆಳಕ್ಕೆ ಕುಸಿದು ಬೀಳಲು ಕಾರಣ ಮೋದಿಯವರಲ್ಲವೆ?

ಕೋವಿಡ್ ನಿರ್ವಹಣೆಯಲ್ಲಿ ಸಂಪೂರ್ಣ ಎಡವಿ ದೇಶದ ಜನರನ್ನು ಸಾವಿನ ಸಮುದ್ರದಲ್ಲಿ ಮುಳುಗಿಸಿದವರು ಮೋದಿಯವರಲ್ಲವೆ? ಜಾಗತಿಕವಾಗಿ ಕೋವಿಡ್ಡನ್ನು ಅತಿ ಕೆಟ್ಟದಾಗಿ ನಿಭಾಯಿಸಿದ 5 ಕೆಟ್ಟ ನಾಯಕರಲ್ಲಿ ಮೋದಿಯವರೂ ಒಬ್ಬರೆಂದು ಅಂತರರಾಷ್ಟ್ರೀಯ ಮಟ್ಟದ ಪತ್ರಿಕೆಗಳು ವರದಿ ಮಾಡಿದ್ದನ್ನು ದೇಶ ಮರೆತಿದೆಯೆ? ನಿಮಗೂ ಮರೆತು ಹೋಗಿದೆಯೆ ಯಡಿಯೂರಪ್ಪನವರೆ?

2014 ಕ್ಕಿಂತ ಮೊದಲು ಇದ್ದ ಸಣ್ಣ, ಮಧ್ಯಮ, ಗುಡಿ ಕೈಗಾರಿಕೆಗಳೆಷ್ಟು? ಈಗ ಎಷ್ಟಿವೆ? ಶೇ. 60 ರಷ್ಟು ಕಂಪೆನಿಗಳು ಮುಚ್ಚಲು, ಮುಚ್ಚುವ ಹಂತಕ್ಕೆ ಬರಲು ಕಾರಣ ಯಾರು?

ಮನೆಗೆ ಮಾರಿ ಪರರಿಗೆ ಉಪಕಾರಿಯಂತೆ ವರ್ತಿಸುವ ಪ್ರಧಾನಿ ನರೇಂದ್ರ ಮೋದಿವರಿಂದಾಗಿಯೆ ದೇಶ ದುರವಸ್ಥೆಗೆ ಸಿಲುಕಿಕೊಂಡಿದೆ. ಆದರೂ ಅವರನ್ನು ಟೀಕಿಸಬೇಡಿ ಎಂದು ಆಜ್ಞೆ ಹೊರಡಿಸುವ ಯಡಿಯೂರಪ್ಪನವರನ್ನು, ಬೊಮ್ಮಾಯಿಯವರನ್ನು ಹಾಗೂ ಬಿಜೆಪಿಯವರನ್ನು ಏನೆಂದು ಕರೆಯಬೇಕು?

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದಾವಣಗೆರೆ | ನಾಳೆ ವಿವಿಧೆಡೆ ವಿದ್ಯುತ್ ವ್ಯತ್ಯಯ

Published

on

ಸುದ್ದಿದಿನ,ದಾವಣಗೆರೆ : 66/11 ಕೆ.ವಿ. ವಿದ್ಯುತ್ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಮತ್ತು ತುರ್ತು ನಿರ್ವಹಣಾ ಕಾಮಗಾರಿಗಳ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಜೂನ್ 23 ರಂದು ಬೆಳಿಗ್ಗೆ 10 ರಿಂದ ಸಂಜೆ 5.30 ರವರೆಗೆÉ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಮಾಮಾಸ್ ಜಾಯಿಂಟ್ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು, ಎಮ್.ಸಿ.ಸಿ.ಬಿ : ಶಾಬನೂರು ರಸ್ತೆ, ಎಸ್.ಎಸ್. ಲೇಔಟ್, ಎ ಬ್ಲಾಕ್, ಕುವೆಂಪು ನಗರ, ಬಾಟ್ಲಿ ಬಿಲ್ಡಿಂಗ್ ಸುತ್ತ ಮುತ್ತ, ಸಿದ್ದವೀರಪ್ಪ ಬಡಾವಣೆ, 1ನೇ ಅಡ್ಡ ರಸ್ತೆ ಯಿಂದ 7ನೇ ಅಡ್ಡರಸ್ತೆವರೆಗೆ, ಗ್ಲಾಸ್ ಹೌಸ್, ಬಾಪೂಜಿ ಬ್ಯಾಂಕ್ ಸಮುದಾಯ ಭವನದ ಹಿಂಭಾಗದ ಪ್ರದೇಶ , ಬಿ.ಐ.ಇ.ಟಿ. ಕಾಲೇಜು ಹಾಗೂ ಸುತ್ತ ಮುತ್ತ ಪ್ರದೇಶಗಳು.

ಮಂಡಿಪೇಟೆ, ಬೆನ್ನೆ ಕಂಪನಿ ರಸ್ತೆ, ಎಮ್ ಜಿ ರಸ್ತೆ, ಎನ್ ಆರ್ ರಸ್ತೆ, ಬೆಲ್ಲೌಡಿಹಲ್ಲಿ, ಮಹಾವೀರ ರಸ್ತೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು, ಬಿ.ಟಿ.: ಮಂಡಕ್ಕಿ ಬಟ್ಟಿ, 1 ರಿಂದ 10 ನೇ ಕ್ರಾಸ್, ಇಂದಿರಾ ನಗರ, ಸಿದ್ದರಾಮೇಶ್ವರ ಬಡಾವಣೆ, ಕಾರ್ಲ್ ಮಾರ್ಸ್ ನಗರ, ಕೋಳಿ ಚನ್ನಪ್ಪ ಬಡಾವಣೆ ಮತ್ತು ಸುತ್ತ ಮುತ್ತಲಿನ ಪ್ರದೇಶಗಳು, ಮೌನೇಶ್ವರ : ಹೆಚ್.ಕೆ. ಆರ್. ಸರ್ಕಲ್, ಕೆ.ಇ.ಬಿ ಕಾಲೋನಿ, ನಿಟುವಳ್ಳಿ ಹಾಗು ನಿಟುವಳ್ಳಿ ಹೊಸಬಡಾವಣೆ, ಮೌನೇಶ್ವರ ಬಡಾವಣೆ, ಸೈಯದ್ ಪೀರ್ ಬಡಾವಣೆ, ಐ.ಟಿ.ಐ. ರಿಂಗ್ ರಸ್ತೆ, ಜಯನಗರ, ದುರ್ಗಾಂಬಿಕ ದೇವಸ್ಥಾನ ಸುತ್ತಮುತ್ತ.

ಎಸ್.ಎಸ್. ಹೈಟೆಕ್ ಆಸ್ಪತ್ರೆ ರಸ್ತೆ, ಭಗೀರಥ ಸರ್ಕಲ್, ಕಾಳಿಕಾಂಬ ದೇವಸ್ಥಾನ, ಶಕ್ತಿನಗರ, ಹಾಗು ಇ.ಎಸ್.ಐ ಆಸ್ಪತ್ರೆ ಮತ್ತು ಸುತ್ತ ಮುತ್ತಲಿನ ಪ್ರದೇಶಗಳ, ಪಿ.ಬಿ. ರಸ್ತೆ., ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು, ಕೆಟಿಜೆ: ಶ್ರೀ ಮುರಘ ರಾಜೇಂದ್ರ ಸ್ವಾಮಿಗಳ ಮಠ, ಜಾಧವ್ ಕ್ಲಿನಿಕ್ ಸುತ್ತ ಮುತ್ತ , ಶಿವಪ್ಪ ವೃತ್ತದಿಂದ ಜಯದೇವ ವೃತ್ತದವರೆಗೆ ಹಾಗು ಸುತ್ತಮುತ್ತ ಪ್ರದೇಶಗಳು, ಪಿಜೆ: ಪೋಲೀಸ್ ಕ್ವಾಟ್ರಸ್, ತುಂಗ, ಭದ್ರ, ಸರಸ್ವತಿ, ಕೃಷ್ಣ ಬ್ಲಾಕ್, ಅರುಣಾ ಸರ್ಕಲ್ ಮತ್ತು ಸುತ್ತಮುತ್ತಲಿನ ಪ್ರದೇಶಗಳು, ಸಿಜಿಹೆಚ್: ಎಮ್.ಸಿ.ಸಿ. ಎ ಬ್ಲಾಕ್, ನ್ಯಾಯಾಧೀಶರ ವಸತಿ ಗೃಹಗಳು, ತೊಗಟವೀರ ಕಲ್ಯಾಣ ಮಂದಿರ, ವಿನೋಬ ನಗರ 1ನೇ ಮುಖ್ಯ ರಸ್ತೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು, ಎಸ್.ಎಸ್. ಬಡಾವಣೆ, ಎ ಬ್ಲಾಕ್, ಶಾಂತಿ ನಗರ, ಕುಂದುವಾಡ ರಸ್ತೆ, ಮಹಾನಗರ ಪಾಲಿಕೆ ಕುಡಿಯುವ ನೀರಿನ ಸ್ಥಾವರ, ಬಸವೇಶ್ವರ ಬಡಾವಣೆ, ಮಹಾಲಕ್ಷ್ಮೀ ಬಡಾವಣೆ, ಬಾಲಾಜಿ ನಗರ, ಕುಂದುವಾಡ ಕೆರೆ ಹಾಗು ಸುತ್ತಮುತ್ತ ಪ್ರದೇಶಗಳು.

ಕರೂರು ಇಂಡಸ್ಟ್ರಿಯಲ್ ಏರಿಯಾ, ಡಿ.ಸಿ. ಕಛೇರಿ, ಜಿ.ಎಂ.ಐ.ಟಿ. ಬಸವೇಶ್ವರ ನಗರ, ರಶ್ಮೀ, ಹರಿಹರ ರಸ್ತೆ, ವಿಜಯ ನಗರ, ಅಶೋಕ ನಗರ, ಆರ್.ಟಿ.ಓ. ಕಛೇರಿ, ಎಸ್.ಪಿ. ಕಛೇರಿ, ರಿಂಗ್ ರಸ್ತೆ, ಶಿಬಾರ, ಎಸ್.ಎಂ.ಕೆ. ನಗರ, ಹಾಗೂ ಚಿತ್ತನಹಳ್ಳಿ, ಕಕ್ಕರಗೊಳ್ಳ, ಆವರಗೊಳ್ಳ, ನೀಲನಹಳ್ಳಿ, ದೇವರಹಟ್ಟಿ, ದೊಡ್ಡಬಾತಿ, ಹಳೆಬಾತಿ, ನಾರಾಯಣ ಕ್ಯಾಂಪ್, ಯರಗುಂಟಾ, ಕೋಡಿಹಳ್ಳಿ, ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು, ಮಾಗಾನಹಳ್ಳಿ, ಮಾಗಾನಹಳ್ಳಿ ಕ್ಯಾಂಪ್, ಓಬಜ್ಜಿಹಳ್ಳಿ, ಓಬಜ್ಜಿಹಳ್ಳಿ ಕ್ಯಾಂಪ್, ಕಡ್ಲೇಬಾಳು, ಹಳೆಕಡ್ಲೆಬಾಳು, ಮಾಳಗೊಂಡನಹಳ್ಳಿ, ಅರಸಾಪುರ, ಬದುನಾಯಕನತಾಂಡ, ಚಿಕ್ಕಓಬಜ್ಜೀಹಳ್ಳಿ, ದೊಡ್ಡಓಬಜ್ಜೀಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳು, ಮ್ಯಾಸರಹಳ್ಳಿ, ಗುಮ್ಮನೂರು, ಹುಣಸೆಕಟ್ಟೆ, ಮುಡೇನಹಳ್ಳಿ, ಕೆಂಚಮ್ಮನಹಳ್ಳಿ, ಹೊಸಹಳ್ಳಿ, ಕಾಟಿಹಳ್ಳಿ.

ಮಂಡಲೂರು ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು ಹನುಮನಹಳ್ಳಿ, ಕೊಗ್ಗÀನೂರು, ಹನುಮನಹಳ್ಳಿ, ಆನಗೋಡು, ಹೆಬ್ಬಾಳು, ನೀರ್ಥಡಿ, ಶಿವಪುರ, ಹಾಲುವರ್ತಿ, ಗಂಗನಕಟ್ಟೆ, ನೇರ್ಲಿಗಿ, ಚಿನ್ನಸಮುದ್ರ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು ಮತ್ತು ಆರಾಧ್ಯಾ ಕೈಗಾರಿಕೆ, ಅತ್ತಿಗೆರೆ, ಕುರ್ಕಿ, ಬಾಡ, ಕಬ್ಬೂರು, ಹೀರೆತೊಗಲೇರಿ, ಗೊಪಾನಾಳು, ಕಂದ್ಗಲ್, ರಾಮಗೊಂಡನಹಳ್ಳಿ, ಕಾಶೀಪುರ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು ಆರ್.ಎಂ.ಸಿ. ಲಿಂಕ್ ರಸ್ತೆ, ಬಿ.ಟಿ. ಲೇಔಟ್, ಗುಜರಿ ಲೈನ್, ಬಂಬೂ ಬಜಾರ್, ಮಟ್ಟಿಕಲ್, ಬಿಡಿಓ ಕಛೇರಿ, ಇಮಾಮ್ ನಗರ, ಅಮರಪ್ಪನ ತೋಟ.

ಆನೆಕೊಂಡ, ಎಲ್.ಬಿ.ಎಸ್. ನಗರ.ಟಿ.ಸಿ. ಲೇಔಟ್, ಬಿಟಿ ಲೇಔಟ್, ಕೆ.ಆರ್. ರಸ್ತೆ, ಇಮಾಮ್ ನಗರ, ಆನೆಕೊಂಡ, ಐನಳ್ಳಿ ಕಾಂಪೌಂಡ್, ಎಪಿಎಂಸಿ, ಭಾರತ್ ಕಾಲೋನಿ, ಶೇಖ್ರಪ್ಪ ನಗರ ಹೆಚ್.ಕೆ.ಆರ್. ನಗರ, ಕಬ್ಬೂರು ಬಸಾಪುರ ನಗರ, ಆಣ್ಣಾ ನಗರ, ಬಸಾಪುರ ರಸ್ತೆ, ಗೋಶಾಲೆ, ಪಿ.ಬಿ. ರಸ್ತೆ, ರವಿ ಮಿಲ್ ಹಾಗೂ ಆವರಗೆರೆ, ಹೊನ್ನೂರು, ಐಗೂರು, ಮಲ್ಲಶೆಟ್ಟಿಹಳ್ಳಿ, ತೊಳಹುಣಸೆ, ದಾವಣಗೆರೆ ವಿಶ್ವವಿದ್ಯಾಲಯ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ವಿದ್ಯಾರ್ಥಿಗಳು ದೊರೆತ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು: ಹೆಚ್ ಎನ್ ಶಿವಕುಮಾರ್

Published

on

ಸುದ್ದಿದಿನ,ರಾಣೇಬೆನ್ನೂರ: ಸಾಮಾಜಿಕ ಹಾಗೂ ಶೈಕ್ಷಣಿಕ ಜವಾಬ್ದಾರಿಗಳ ಅಗತ್ಯವು ವಿದ್ಯಾರ್ಥಿಗಳಿಗೆ ಅವಶ್ಯಕವಾಗಿದೆ. ವಿದ್ಯಾರ್ಥಿಗಳು ತಮಗೆ ದೊರೆತ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು.ಸದಾಕಾಲ ಜ್ಞಾನವನ್ನು ಪಡೆಯುವ ತನಕ ಹೊಂದಿ ಜ್ಞಾನಿಗಳಾಗುವ ಗುರಿ ಹೊಂದಲು ಬಾಪೂಜಿ ಮಹಾವಿದ್ಯಾಲಯ ಉಪ ಪ್ರಾಚಾರ್ಯರಾದ ಎಚ್ ಎನ್ ಶಿವಕುಮಾರ್ ನುಡಿದರು.

ಅವರು ಸ್ಥಳೀಯ ಬಿಎಜೆಎಸ್ಎಸ್ ಪ್ರಥಮ ದರ್ಜೆ ಕಾಲೇಜಿನ ಪ್ರತಿಭಾ ಪುರಸ್ಕಾರ, ಬಿಳ್ಕೋಡಿಗೆ ಕಾರ್ಯಕ್ರಮ ಮತ್ತು ವಿದ್ಯಾರ್ಥಿ ಒಕ್ಕೂಟದ, ಎನ್ ಎಸ್ ಎಸ್ ಚಟುವಟಿಕೆ, ಯುವ ರೆಡ್ ಕ್ರಾಸ್ ಘಟಕದ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು.

ವಿಶೇಷ ಅತಿಥಿಗಳಾಗಿ ಉಪಸ್ಥಿತರಿದ್ದ ಬಿಎ ಜೆಎಸ್ಎಸ್ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಅಧಿಕಾರಿಗಳು ಡಾ.ಆರ್ ಎಂ ಕುಬೇರಪ್ಪ ಮಾತನಾಡಿ ವಿದ್ಯೆಯನ್ನು ವಿನಯದಿಂದ ವಿದ್ಯೆಕಲಿಯಬೇಕು ಸಂಸ್ಕಾರವಂತರಾಗ ಬೇಕು, ಸಂಸ್ಕಾರ ಹೊಂದಿರುವ ವ್ಯಕ್ತಿಗಳು ಪುರಸ್ಕಾರ ಪಡೆದರೆ ಸಂಸ್ಕಾರ ಇಲ್ಲದವರು ಸಮಾಜದಲ್ಲಿ ತಿರಸ್ಕಾರಕ್ಕೆ ಒಳಗಾಗುವರು.ನಿಮ್ಮ ಬದುಕನ್ನು ನೀವೆ ಕಟ್ಟಿಕೊಳ್ಳುವ ನೆಲೆಯಲ್ಲಿ ಪ್ರಯತ್ನಿಸಬೇಕು ಎಂದು ನುಡಿದರು.

ಪ್ರಾಚಾರ್ಯರಾದ ಪ್ರಕಾಶ್ ಬಸಪ್ಪನವರ್ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಎಚ್ ಎನ್ ಭೀಕ್ಷಾವರ್ತಿಮಠ ಹಾಗೂ ಕೆ ಕೆ ಹಾವಿನಾಳ ರವರು ವಿದ್ಯಾರ್ಥಿಗಳಿಗೆ ಹಿತವಚನ ನುಡಿದರು.ಆರಂಭದಲ್ಲಿಪ್ರೋ.ಎಂ ಡಿ ಹೊನ್ನಮ್ಮನವರ ಸ್ವಾಗತಿಸಿದರು.ಪ್ರೋ.ಶ್ರೀಕಾಂತ ಕುಂಚೂರ, ಪ್ರಾಸ್ತಾವಿಕ ಮಾತನಾಡಿ ವಾರ್ಷಿಕ ವರದಿ ವಾಚಿಸಿದರು.

ಕೊನೆಯಲ್ಲಿ ಪ್ರೋ.ಪುಷ್ಟಾ ಕಬ್ಬಿನಾಲೆ ವಂದಿಸಿದರು.ಇದೆ ಸಮಾರಂಭದಲ್ಲಿ ಕ್ರೀಡೆ, ಸಾಂಸ್ಕೃತಿಕ, ಸಾಮಾಜಿಕ ಸೇವೆಗಳಲ್ಲಿವಿದ್ಯಾರ್ಥಿಗಳ ಸಾಧನೆ ಗುರುತಿಸಿ ಪುರಸ್ಕಾರ ಮಾಡಲಾಯಿತು.ವರ್ಷದ ಮಹಾವಿದ್ಯಾಲಯ ಉತ್ತಮ ವಿದ್ಯಾರ್ಥಿಗಳನ್ನು ಗುರುತಿಸಿ ಪುರಸ್ಕಾರ ಪ್ರದಾನ ಮಾಡಲಾಯಿತು.ವಿವಿಧ ವಿಷಯದ ಉಪನ್ಯಾಸಕರು, ವಿದ್ಯಾರ್ಥಿಗಳು, ಸಿಬ್ಬಂದಿ ಭಾಗವಹಿಸಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಪಿಂಚಣಿ ದಾರರು ಸಕಾಲದಲ್ಲಿ ಜೀವಂತ ಪ್ರಮಾಣ ಪತ್ರ ಸಲ್ಲಿಸಿ

Published

on

ಸುದ್ದಿದಿನ,ದಾವಣಗೆರೆ: ಪಿಂಚಣಿ ಪಡೆಯಲು ಜೀವಂತ ಸದಸ್ಯರ ಪ್ರಮಾಣ ಪತ್ರಗಳು ಕಡ್ಡಾಯವಾಗಿರುವುದರಿಂದ ಸಕಾಲಕ್ಕೆ ಸೂಕ್ತ ದಾಖಲಾತಿಗಳನ್ನು ನೀಡುವ ಮೂಲಕ ಸಹಕರಿಸಿ ಎಂದು ಉಪ ಮಹಾಲೇಖಪಾಲರಾದ ಸಚ್ಚಿನ್ ಕೃಷ್ಣ ಕೌಶಿಕ್ ತಿಳಿಸಿದರು.

ಶುಕ್ರವಾರ ಜೂನ್(19) ‌ಬೆಂಗಳೂರಿನ ಮಹಾಲೇಖಪಾಲರು ದಾವಣಗೆರೆ ಜಿಲ್ಲಾ ಖಜಾನೆ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಸಾಮಾನ್ಯ ಭವಿಷ್ಯ ನಿಧಿ ಹಾಗೂ ಲೆಕ್ಕಪತ್ರ ಸಮಸ್ಯೆಗಳ ಕುರಿತು ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಪಿಂಚಣಿದಾರರು ತಮ್ಮ ಎಲ್ಲಾ ಬ್ಯಾಂಕ್‌ಗೆ 2ನೇ ವಾರ ಭೇಟಿ ನೀಡಿದರೆ ನಿಮ್ಮ ಸಮಸ್ಯೆಯನ್ನು ಶೀಘ್ರವಾಗಿ ಬಗೆಹರಿಸಲಾಗುವುದು. ಜೀವಂತ ಸದಸ್ಯರ ದೃಢೀಕರಣ ಪತ್ರವನ್ನು ಪಡೆಯಲು ಸೈಬರ್‌ಕೆಫೆ ಇನ್ನಿತರ ಕೇಂದ್ರಗಳಿಗೆ ಅಲೆಯುವ ಅವಶ್ಯಕತೆ ಇಲ್ಲ. ನೀವು ಮನೆಯಲ್ಲಿ ಮೊಬೈಲ್‌ನಲ್ಲಿ ಅಫ್ ಲೋಡ್ ಮಾಡಿ ಪಡೆಯಬಹುದು. ಮತ್ತು ನಿಮ್ಮ ಸಮಸ್ಯೆಗಳನ್ನು ತಿಳಿಸುವಾಗ ಅರ್ಜಿಯಲ್ಲಿ ಇ-ಮೇಲ್ ವಿಳಾಸ, ಮೊಬೈಲ್ ನಂಬರ್‌ನ್ನು ಕಡ್ಡಾಯವಾಗಿ ನಮೂದಿಸಿದರೆ, ಇದರಿಂದ ನಿಮಗೆ ಮಾಹಿತಿ ನೀಡಲು ಅನುಕೂಲವಾಗುತ್ತದೆ ಎಂದರು.

ಪಿಂಚಣಿ ಅದಾಲತ್ ಎನ್ನುವುದು ನಿವೃತ್ತ ನೌಕರರು ಮತ್ತು ಪಿಂಚಣಿದಾರರ ದೀರ್ಘಕಾಲದ ಬಾಕಿ ಉಳಿದಿರುವ ಸಮಸ್ಯೆಗಳನ್ನು ಅಥವಾ ಕುಂದುಕೊರತೆಗಳನ್ನು ಪರಿಹರಿಸಲು ವಿಶೇಷ ವೇದಿಕೆಯಾಗಿದೆ. ಸ್ಥಳದಲ್ಲೇ ಅರ್ಜಿಗಳನ್ನು ಪರಿಶೀಲಿಸಿ, ಬ್ಯಾಂಕ್‌ ಅಧಿಕಾರಿಗಳ ಸಮ್ಮುಖದಲ್ಲಿ ತ್ವರಿತವಾಗಿ ಸಮಸ್ಯೆಗಳನ್ನು ಬಗೆಹರಿಸುವುದು ಇದರ ಮುಖ್ಯ ಉದ್ದೇಶವಾಗಿದೆ.

ಮಹಾಲೇಖಪಾಲರ ಕಚೇರಿಯ ಹಿರಿಯ ಲೆಕ್ಕಪರಿಶೋಧನಾ ಅಧಿಕಾರಿ ನಾಗಸೇನಾ.ಟಿ.ವಿ, ಮತ್ತು ಪದ್ಮವತಿ, ಜಿಲ್ಲಾ ಖಜಾನೆಯ ಉಪನಿರ್ದೇಶಕರಾದ ರಮೇಶ್ ಅರೆಮಲ್ಲಾಪುರ, ಸಹಾಯಕ ಲೆಕ್ಕಪರಿಶೋಧನಾ ಆಧಿಕಾರಿ ಚಂದನ್ ಮತ್ತು ಜಾಬ್‌ಲೀನೋ, ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending