Connect with us

ದಿನದ ಸುದ್ದಿ

ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯಕ್ಕೆ ಪಠ್ಯವಾಗಿ ಎಂ.ಕೆ.ಶೇಖ್ ಅವರ ಕಥೆ ಆಯ್ಕೆ

Published

on

ಸುದ್ದಿದಿನ ಡೆಸ್ಕ್ : ಎಂ.ಕೆ.ಶೇಖ್ ಅವರ ‘ನೂಲು’ ಕಥಾ ಸಂಕಲನದಿಂದ ಕರ್ನಾಟಕ ರಾಜ್ಯ ಮಹಿಳಾ ವಿಶ್ವವಿದ್ಯಾಲಯವೂ ‘ಮನುಷ್ಯತ್ವದೆಡೆಗೆ ಅವ್ಹಾನ’ ಎನ್ನುವ ಕಥೆಯನ್ನು ಬಿ.ಕಾಂ. ವಿದ್ಯಾರ್ಥಿಗಳಿಗೆ ಪಠ್ಯಾವಾಗಿ ಸ್ವೀಕರಿಸಿದೆ.ಎಂದು ಕನ್ನಡ ಸಾಂಸ್ಕೃತಿಕ ಗತವೈಭವ ಅಕಾಡೆಮಿಯ ಮುಖ್ಯಸ್ಥರಾದ ಡಾ. ಷಕೀಬ್ ಎಸ್ ಕಣದ್ಮನೆ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ‌.

ಎಂ.ಕೆ.ಶೇಖ್ ಅವರ ಪರಿಚಯ

ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಬಿಜ್ಜರಗಿ ಗ್ರಾಮದಲ್ಲಿ 20-07-1980 ರಂದು ಜನಿಸಿ,ಮೌಕುಶೇ ಎನ್ನುವ ಕಾವ್ಯನಾಮದಿಂದ ಪರಿಚಿತರಾದ ಮೌಲಾಲಿ.ಕುತುಬುದ್ದೀನ್ .ಶೇಖ್ ಅವರು ಶ್ರೀ ಕುತಬುದ್ದೀನ್ ಶೇಖ್ ಹಾಗೂ ಶ್ರೀಮತಿ ಭೂಮಾ ಶೇಖ್ ಇವರ ಎಂಟನೆ ಪುತ್ರ.ಇವರು ತಮ್ಮ ಪ್ರಾಥಮಿಕ,ಪ್ರೌಢ ಹಾಗೂ ಮಾಧ್ಯಮಿಕ ಶಿಕ್ಷಣವನ್ನು ಮಹಾರಾಷ್ಟ್ರ ಗಡಿಯ ಸಾಂಗಲಿ ಜಿಲ್ಲೆಯ ಜತ್ತ ತಾಲೂಕಿನ ಬೆಳ್ಳುಂಡಗಿ ಗ್ರಾಮದಲ್ಲಿ ಓದಿ ಮುಗಿಸುತ್ತಾರೆ.

ತಮ್ಮ ಪ್ರಾಥಮಿಕ ಶಾಲಾ ಪದವಿ (ಡಿ.ಎಡ್) ನ್ನು ಕೋಲಾರ ಜಿಲ್ಲೆಯ ಕೆಜಿಎಫ್ ನಲ್ಲಿ ಓದಿದ್ದಾರೆ. ನಂತರ ಚಡಚಣ ತಾಲೂಕಿನ ದೇವರ ನಿಂಬರಗಿ ಗ್ರಾಮದಲ್ಲಿ ಖಾಸಗಿ ಶಾಲಾ ಶಿಕ್ಷಕ ವೃತ್ತಿಯೊಂದಿಗೆ ತಮ್ಮ ಸಾಹಿತ್ಯ ಕೃಷಿಯನ್ನು ಮಾಡುತ್ತಾರೆ. ಸದ್ಯ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಕುಡಚಿ ಗ್ರಾಮದಲ್ಲಿ ಜುನ್ನೇದಿಯಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕನ್ನಡ ಭಾಷಾ ಶಿಕ್ಷಕರಾಗಿ ಸೇವೆ ಸಲ್ಲಿಸುತಿದ್ದಾರೆ.

ತಮ್ಮ ಪ್ರೌಢ ಶಾಲಾ ಜೀವನದಿಂದಲೂ ಕಾವ್ಯ, ಸಾಹಿತ್ಯದ ಗೀಳು ಹಚ್ಚಿಕೊಂಡ ಇವರು ಇಲ್ಲಿಯವರೆಗೆ ಏಳು ಕೃತಿಗಳನ್ನು ರಚಿಸಿದ್ದಾರೆ. ಭೂಮಾತೆ ನನ್ನ ಮಾತೆ- ಕವನ ಸಂಕಲನ. ನನ್ನೂರಿಗೆ ಬೇಂದ್ರೆ ಹಾಗೂ ಇತರ ಕಥೆಗಳು- ಕಥಾ ಸಂಕಲನ. ಪ್ರತಿಕೃತಿ- ವಿಮರ್ಶಾ ಕೃತಿ. ಜಾತಿಗಳ ಜಾಲದಿಂದ- ಕಾದಂಬರಿ. ಭೂಮಾತೆಯ ಮಡಿಲಲ್ಲಿ- ಆಧುನಿಕ ವಚನ ಸಂಕಲನ. ನೂಲು- ಕಥಾ ಸಂಕಲನ. ಹಾಗೂ ಸಮಭಾವ- ಸಂಪಾದಿತ ಕವನ ಸಂಕಲನ. ಮುಂತಾದ ಕೃತಿಗಳನ್ನು ಹೊರ ತಂದಿದ್ದಾರೆ.ಇವಲ್ಲದೆ ದೇಶ ವಿದೇಶಗಳ ಆಧುನಿಕ ಪ್ರಾಚೀನ ನಾಣ್ಯ ನೋಟುಗಳನ್ನು,ಅಂಚೆ ಚೀಟಿಗಳನ್ನು ಮತ್ತು ವಿಶೇಷ ಚಿತ್ರಗಳನ್ನು ಸಂಗ್ರಹಿಸುವ ಹವ್ಯಾಸ ಹೊಂದಿದ್ದಾರೆ.

ಶ್ರೀ ಎಂ.ಕೆ.ಶೇಖ್ ಇವರಿಗೆ ಇಂಡಿ ತಾಲೂಕ ಕ.ಸಾ.ಪ ಉತ್ತಮ ಶಿಕ್ಷಕ ಪ್ರಶಸ್ತಿ, ವಿಜಯಪುರ ಜಿಲ್ಲಾ ಕಸಾಪ ಉತ್ತಮ ಶಿಕ್ಷಕ ಪ್ರಶಸ್ತಿ, ಚನ್ನಬಸವಶ್ರಿ ಸಂಶೋಧನಾ ಶಿಕ್ಷಕ ಪ್ರಶಸ್ತಿ, ಬಸವಶ್ರೀ ಕಲಾ ಶಿಕ್ಷಕ ಪ್ರಶಸ್ತಿ, ವಿಶ್ವಕವಿ ಕುವೆಂಪು ಕವಿಕಾವ್ಯ ಪ್ರಶಸ್ತಿ, ಕಾಶ್ಮೀರದ ಮೊಕದಮ್ ಸಾಹಿಬ್ ರಾಷ್ಟ್ರೀಯ ಸಾಹಿತ್ಯ ಪುರಸ್ಕಾರ, ವಿವೇಕಾನಂದ ಯುವ ಪುರಸ್ಕಾರ, ಕರ್ನಾಟಕ ಶಿಕ್ಷಣ ರತ್ನ ಪ್ರಶಸ್ತಿ, ಕರ್ನಾಟಕ ಜ್ಯೋತಿ ರಾಜ್ಯ ಪ್ರಶಸ್ತಿ, ಚನ್ನೈನ ಫ್ಯೂಚರ ಕಲಾಂ ಪ್ರಶಸ್ತಿ ಇನ್ನೂ ಹಲವಾರು ಪ್ರಶಸ್ತಿಗಳು ರಾಜ್ಯ ಹಾಗೂ ದೇಶಾದ್ಯಂತ ಅನೇಕ ಸಂಘ ಸಂಸ್ಥೆಗಳಿಂದ ಸಂದಿವೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದೇವದಾಸಿ ಪುನರ್‍ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್‍ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಇಲಾಖೆ, 14ನೇ ಮುಖ್ಯ ರಸ್ತೆ, ಕುವೆಂಪು ನಗರ, ಎಮ್.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಇಲ್ಲಿ ಅರ್ಜಿಗಳನ್ನು ಪಡೆದು ಫೆಬ್ರವರಿ 12 ರೊಳಗಾಗಿ ಕಚೇರಿ ಸಲ್ಲಿಸಬೇಕು.

ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ಯೋಜನಾಧಿಕಾರಿಗಳ ಹುದ್ದೆ ಸಂಖ್ಯೆ-1, ನಿವೃತ್ತ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಎಂಎಸ್‍ಡಬ್ಲ್ಯೂ, ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಮನಃಶಾಸ್ತ್ರದಲ್ಲಿ ಎಂ.ಎಸ್ಸಿ, ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.

ಚನ್ನಗಿರಿ ತಾಲ್ಲೂಕು ಯೋಜನಾ ಅನುಷ್ಟಾನಾಧಿಕಾರಿಗಳು ಹುದ್ದೆ ಸಂಖ್ಯೆ-1, ಬಿಎಸ್‍ಡಬ್ಲ್ಯೂ, ಬಿಎ ಇನ್ ಸೋಶಿಯಲಾಜಿ, ಎಂಎಸ್‍ಸಿ ಇನ್ ಸೈಕೋಲಾಜಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.

ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ದಾಖಲಾಧಿಕಾರಿಗಳ ಹುದ್ದೆ ಸಂಖ್ಯೆ-1, ಬಿಕಾಂ ಪದವಿ ಅಥವಾ ತತ್ಸಮಾನ ಪದವಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-222117 ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ  ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ಘಟಕಗಳಿಂದ ರಾಜ್ಯದಾದ್ಯಂತ ಬರುವ ಭಕ್ತಾಧಿಗಳ ಅನುಕೂಲಕ್ಕಾಗಿ 25 ಹೆಚ್ಚುವರಿ ವಿಶೇಷ ವಾಹನ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

Continue Reading

ದಿನದ ಸುದ್ದಿ

ಕಾಗದ ರಹಿತ ನೋಂದಣಿ ವ್ಯವಸ್ಥೆಯ ತರಬೇತಿ

Published

on

ಸುದ್ದಿದಿನ,ದಾವಣಗೆರೆ:ಕಾಗದ ರಹಿತ ನೋಂದಣಿ ವ್ಯವಸ್ಥೆಯನ್ನು ಜಾರಿಗೊಳಿಸಿದ್ದು, ಜಿಲ್ಲಾ ನೋಂದಣಿ ಕಚೇರಿ ವ್ಯಾಪ್ತಿಗೆ ಬರುವ ದಸ್ತಾವೇಜು ಬರಹಗಾರರು, ವಕೀಲರು, ಕರ್ನಾಟಕ ಒನ್, ದಾವಣಗೆರೆ ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರ ಸಿಬ್ಬಂದಿ ವರ್ಗದವರಿಗೆ ತರಬೇತಿ ಆಯೋಜಿಸಲಾಗಿದೆ.
ತರಬೇತಿಯು ಜ.30 ರಂದು ಹೊನ್ನಾಳಿ ಉಪ ನೋಂದಣಿ ಕಚೇರಿ ಆವರಣ, ಜ.31 ರಂದು ಚನ್ನಗಿರಿ ಉಪ ನೋಂದಣಿ ಕಚೇರಿ ಆವರಣ, ಫೆ.2 ರಂದು ಹರಿಹರ ಉಪ ನೋದಣಿ ಕಚೇರಿ ಆವರಣ, ಫೆ.3 ರಂದು ದಾವಣಗೆರೆ ಉಪ ನೋಂದಣಿ ಕಚೇರಿ, ಫೆ.4 ರಂದು ಜಗಳೂರು ಉಪ ನೋಂದಣಿ ಕಚೇರಿ ಆವರಣಗಳಲ್ಲಿ ಮಧ್ಯಾಹ್ನ 1 ರಿಂದ 2 ಗಂಟೆಯವರೆಗೆ ನಡೆಯಲಿದೆ ಎಂದು ಜಿಲ್ಲಾ ನೋಂದಣಾಧಿಕಾರಿ ತಿಳಿಸಿದ್ದಾರೆ.

Continue Reading

Trending