Connect with us

ದಿನದ ಸುದ್ದಿ

ಮೊಳಕಾಲ್ಮೂರು ತಾಲ್ಲೂಕನ್ನು ಪ್ರಾಚೀನ ಬುಡಕಟ್ಟು ಕ್ಷೇತ್ರ ; ನೈಜ ವರದಿ ನೀಡುವಂತೆ ಮ್ಯಾಸಬೇಡ ಸಮಿತಿ ಮನವಿ

Published

on

ಸುದ್ದಿದಿನ ಡೆಸ್ಕ್ : ಮೊಳಕಾಲ್ಮೂರು ತಾಲ್ಲೂಕನ್ನು ಪ್ರಾಚೀನ ಬುಡಕಟ್ಟು ಕ್ಷೇತ್ರ (Primitive Tribes) ಎಂದು ವಿಶೇಷ ಸ್ಥಾನಮಾನ ನೀಡುವ ಸಂಬಂಧ ಅಧ್ಯಯನ ಕೈಗೊಳ್ಳಲು ಸರ್ಕಾರ ಆದೇಶ ಮಾಡಿದ್ದು, ಸದರಿ ಅಧ್ಯಯನವನ್ನು ಮಾನವಶಾಸ್ತ್ರಜ್ಞರು, ಬುಡಕಟ್ಟಿನ ಸಾಂಸ್ಕೃತಿಕ ಇತಿಹಾಸಕಾರರು, ಭಾಷಾಶಾಸ್ತ್ರಜ್ಞರು, ಮತ್ತು ಒಬ್ಬ ಮ್ಯಾಸ ನಾಯಕ ಬುಡಕಟ್ಟಿನ ಸದಸ್ಯರನ್ನೊಳಗೊಂಡ ಸಂಶೋದನಾ ಸಮಿತಿಯನ್ನು ನೆಮಕ ಮಾಡಿ ನೈಜ ವರದಿಯನ್ನು ನೀಡುವಂತೆ ಕ್ರಮಕೈಗೊಳ್ಳಲು ಕೋರಿ ಮ್ಯಾಸ ಬೇಡ ಸಮಿತಿ ಮೈಸೂರಿನ ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನ ಸಂಸ್ಥೆಯ ನಿರ್ದೇಶಕರಿಗೆ ಮನವಿ ಮಾಡಲಾಯಿತು.

ಮೂಲ ಲಕ್ಷಣ ಹೊಂದಿದ ಬುಡಕಟ್ಟು (Primitive Tribes) ನಾಯ್ಕಡ ಪಂಗಡದ ಮ್ಯಾಸ ನಾಯಕ, ಮ್ಯಾಸ ಬೇಡರ ಬುಡಕಟ್ಟು ಜನಾಂಗವನ್ನು ಭಾರತ ಸಂವಿಧಾನ ಭಾಗ 10ರ ವಿಧಿ 244(2) ಮತ್ತು 275(1) ಅನುಸೂಚಿ-6 ರಡಿ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲ್ಲೂಕುನ್ನು ಮೂಲ ಲಕ್ಷಣ ಹೊಂದಿದ ಬುಡಕಟ್ಟು ಕ್ಷೇತ್ರ ಅಥವಾ ಪ್ರಾಚೀನ ಬುಡಕಟ್ಟು ಕ್ಷೇತ್ರ (Primitive Tribes) ಎಂದು ವಿಶೇಷ ಸ್ಥಾನಮಾನ ನೀಡುವ ಸಂಬಂಧ ವಿವಿಧ ಹಟ್ಟಿ, ಅಡವಿ ಗ್ರಾಮಗಳಲ್ಲಿ ಅಧ್ಯಯನ ಕೈಗೊಳ್ಳಲು ಸರ್ಕಾರ ಆದೇಶ ಮಾಡಿರುತ್ತದೆ.

ಸದರಿ ಅಧ್ಯಯನವನ್ನು ಮಾನವಶಾಸ್ತ್ರಜ್ಞರು ಮತ್ತು ಬುಡಕಟ್ಟಿನ ಸಾಂಸ್ಕೃತಿಕ ಇತಿಹಾಸಕಾರರು, ಭಾಷಾಶಾಸ್ತ್ರಜ್ಞರು ಹಾಗೂ ಒಬ್ಬ ಮ್ಯಾಸ ನಾಯಕ ಬುಡಕಟ್ಟಿನ ಸದಸ್ಯರನ್ನೊಳಗೊಂಡ ಸಂಶೋದನ ಸಮಿತಿಯನ್ನು ನೆಮಕ ಮಾಡಿ ನೈಜ ವರದಿಯನ್ನು ನೀಡುವಂತೆ ಕ್ರಮಕೈಗೊಳ್ಳಲು ಕೋರಿ ಈ ಮನವಿ ಮೂಲಕ ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆಯನ್ನು ಒತ್ತಾಯಿಸುತ್ತೇವೆ.

ಬೇಡಿಕೆಗಳು

1) ಪ್ರಾಚೀನ ಮ್ಯಾಸ ಬೇಡರ, ಮ್ಯಾಸ ನಾಯಕ, ಬುಡಕಟ್ಟು ಕ್ಷೇತ್ರ (Primitive Myasa Bedar, Myasa Nayaka Tribes Pocket) ಎಂಬ ಶೀರ್ಷಿಕೆ ಅಡಿಯಲ್ಲಿ ಅಧ್ಯಯನ ಕೈಗೊಳ್ಳಬೇಕು.

2) ಮಾನವಶಾಸ್ತ್ರಜ್ಙರು ಮತ್ತು ಬುಡಕಟ್ಟಿನ ಸಾಂಸ್ಕೃತಿಕ ಇತಿಹಾಸಕರರು, ಭಾಷಾಶಾಸ್ತ್ರಜ್ಞರು ಹಾಗೂ ಒಬ್ಬರು ಮ್ಯಾಸ ನಾಯಕ ಬುಡಕಟ್ಟಿನ ಸದಸ್ಯರನ್ನೊಳಗೊಂಡ ಸಂಶೋಧನ ಅಧ್ಯಯನ ಸಮಿತಿಯನ್ನು ರಚಿಸಿಬೇಕು.

3) ಚಿತ್ರದುರ್ಗ,ಬಳ್ಳಾರಿ ವಿಜಯನಗರ ದಾವಣಗೆರೆ ಜಿಲ್ಲೆಗಳಲ್ಲಿ ಮ್ಯಾಸ ನಾಯಕ ಬುಡಕಟ್ಟು ಜನರು ಬಹುಸಂಖ್ಯಾತರಿದ್ದು , ಸದರಿ ಜಿಲ್ಲೆಗಳಲ್ಲಿ ಮ್ಯಾಸ ನಾಯಕ-ಮ್ಯಾಸ ಬೇಡರ ಬುಡಕಟ್ಟಿನ ಗುಡಿಕಟ್ಟೆಗಳು, ಕಟ್ಟೆಮನೆಗಳು , ದೇವರ ಎತ್ತುಗಳು ಮತ್ತು “ಮ್ಯಾಸ ನಾಯಕರ ಸಾಂಸ್ಕೃತಿಕ ವೀರರು ನೆಲೆಸಿರುವ ಕ್ಷೇತ್ರಗಳಿರುತ್ತವೆ.

4) ಮ್ಯಾಸ ನಾಯಕ “ನಾಯಕ” ಸಮಾನಾರ್ಥಕ ಪದವಾದ “ಮ್ಯಾಸ ನಾಯಕ” ಪದವನ್ನು ಓಬಿಸಿಪಟ್ಟಿಗೆ ಸೇರ್ಪಡೆ ಮಾಡಿರುವುದನ್ನು ಈ ಕೂಡಲೇ ತೆಗೆದುಹಾಕಬೇಕು.

5) ಪರಿಶಿಷ್ಟ ಪಂಗಡದ ಪಟ್ಟಿಯಲ್ಲಿರುವ “ನಾಯಕ” ಸಮಾನಾರ್ಥಕ ಪದಗಳಾಗಿ “ಮ್ಯಾಸ ನಾಯ್ಕ”, “ಮ್ಯಾಸ ನಾಯಕ”, “ಮ್ಯಾಸ ಬೇಡ”, “ಮ್ಯಾಸ ಬ್ಯಾಡ್ರು”, “ಮ್ಯಾಸ ಬೇಡರ”, “ಮ್ಯಾಸರು” ಎಂಬ ಪದಗಳನ್ನು ಪರಿಶಿಷ್ಟ ಪಂಗಡದ ಪಟ್ಟಿಯಲ್ಲಿ ಸೇರ್ಪಡೆ ಮಾಡಲು ಈ ಕೂಡಲೇ ಕ್ರಮ ಕೈಗೊಳ್ಳಬೇಕು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಭಾನುವಾರವೂ ಕ್ಯಾಶ್ ಕೌಟರ್ ಓಪನ್ ; ವಿದ್ಯುತ್ ಬಿಲ್ ಬಾಕಿ ಪಾವತಿಸಿ : ಬೆಸ್ಕಾಂ

Published

on

ಸುದ್ದಿದಿನಡೆಸ್ಕ್:ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿರುವ ಗ್ರಾಹಕರು ವಿದ್ಯುತ್ ಸಂಪರ್ಕದ ಕಡಿತದಿಂದ ತೊಂದರೆಗೊಳಗಾಗದಂತೆ ನಾಳೆ ಮತ್ತು ಇದೇ 15ರ ಭಾನುವಾರವೂ ಬೆಸ್ಕಾಂ ಉಪ ವಿಭಾಗಗಳ ಕ್ಯಾಶ್ ಕೌಂಟರ್‌ಗಳು ತೆರೆದಿರಲಿವೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

ಬಿಲ್ ಬಾಕಿ ಉಳಿಸಿಕೊಂಡಿರುವ ಗ್ರಾಹಕರು ವಿದ್ಯುತ್ ಸಂಪರ್ಕ ಕಡಿತದಿಂದ ತೊಂದರೆಗೆ ಒಳಗಾಗಬಾರದು ಹಾಗೂ ಆನ್‌ಲೈನ್ ಪೇಮೆಂಟ್ ಬಳಸದವರ ಅನಕೂಲಕ್ಕಾಗಿ ಈ ವಿಶೇಷ ವ್ಯವಸ್ಥೆ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಬಿಲ್ ಬಂದ 30 ದಿನದೊಳಗೆ ವಿದ್ಯುತ್ ಶುಲ್ಕ ಪಾವತಿಸದಿದ್ದಲ್ಲಿ ಮತ್ತು ಹೆಚ್ಚುವರಿ ಭದ್ರತಾ ಠೇವಣಿ ಮೊತ್ತ ಪಾವತಿಸದಿದ್ದಲ್ಲಿ ಕೆಇಆರ್‌ಸಿ ನಿಯಮಾವಳಿ ಅನ್ವಯ ಗ್ರಾಹಕರ ವಿದ್ಯುತ್ ಸಂಪರ್ಕ ಕಡಿತಗೊಳಿಸಲು ನಿರ್ಧರಿಸಿದ್ದು, ಸೆಪ್ಟೆಂಬರ್ 1ರಿಂದಲೇ ಈ ನಿಯಮ ಜಾರಿಯಾಗಿದೆ ಎಂದು ಹೇಳಿದೆ.

ವಿದ್ಯುತ್ ಬಿಲ್ ಬಾಕಿ ಮೊತ್ತ ಮತ್ತು ಹೆಚ್ಚುವರಿ ಭದ್ರತಾ ಠೇವಣಿ ಮೊತ್ತ 100 ರೂಪಾಯಿ ಗಳಿಗಿಂತ ಅಧಿಕವಾಗಿದ್ದಲ್ಲಿ, ಅಂತಹ ಸ್ಥಾಪನಗಳ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲಾಗುತ್ತದೆ. ಗೃಹ ಜ್ಯೋತಿಯೋಜನೆ ಅಡಿ ಶೂನ್ಯ ಬಿಲ್ ಪಡೆಯುತ್ತಿರುವ ಗ್ರಾಹಕರ ಹಿಂಬಾಕಿ ಶೂನ್ಯವಿದ್ದಲ್ಲಿ ಈ ಬಗ್ಗೆ ಚಿಂತಿಸಬೇಕಿಲ್ಲ ಎಂದು ಪ್ರಕಟಣೆ ಸ್ಪಷ್ಟಪಡಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಹತ್ತು ವರ್ಷಗಳ ಬಳಿಕ ಕಲಬುರಗಿಯಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಸಲು ಸರ್ಕಾರ ನಿರ್ಧಾರ

Published

on

ಸುದ್ದಿದಿನಡೆಸ್ಕ್:ಹತ್ತು ವರ್ಷಗಳ ಬಳಿಕ ಕಲಬುರಗಿ ಜಿಲ್ಲೆಯಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಸಲು ಸರ್ಕಾರ ನಿರ್ಧರಿಸಿದೆ.

ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿ ಕುರಿತಂತೆ ಚರ್ಚೆ ನಡೆಸಿ, ನಿರ್ಣಯ ತೆಗೆದುಕೊಳ್ಳಲು ಸೆಪ್ಟೆಂಬರ್ 17ಕ್ಕೆ ಸಂಪುಟ ಸಭೆ ನಡೆಯಲಿದೆ.

ಜಿಲ್ಲೆಯ ಮಿನಿ ವಿಧಾನಸೌಧದಲ್ಲಿರುವ ಪ್ರಾದೇಶಿಕ ಆಯುಕ್ತರ ಕಾರ್ಯಾಲಯದ ಸಭಾಂಗಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆಯುವ ಸಂಪುಟ ಸಭೆಯಲ್ಲಿ ಕಲ್ಯಾಣ ಕರ್ನಾಟಕದ ಬಗ್ಗೆ ವಿಶೇಷ ಆದ್ಯತೆ ನೀಡಲು ನಿರ್ಧರಿಸಲಾಗಿದೆ. ಈ ಹಿಂದೆ 2014ರ ನವೆಂಬರ್ 28ರಂದು ಸಿದ್ದರಾಮಯ್ಯ ನೇತೃತ್ವದಲ್ಲಿ ಕಲಬುರಗಿಯಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆದಿತ್ತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಇಂದು ದೇಶಾದ್ಯಂತ ಗಣೇಶ ಹಬ್ಬದ ಸಂಭ್ರಮ

Published

on

ಸುದ್ದಿದಿನಡೆಸ್ಕ್:ಇಂದು ಗಣೇಶ ಚತುರ್ಥಿ, ದೇಶ ಸೇರಿ ನಾಡಿನದ್ಯಂತ ಹಿಂದೂ ಸಂಪ್ರದಾಯದಲ್ಲಿ ನಾಡಿನ ಜನತೆ ತಮ್ಮ ಒಳಿತಿಗಾಗಿ, ಜ್ಞಾನ ಸಮೃದ್ಧಿಗಾಗಿ ಶಿವನ ಪುತ್ರ ಗಣೇಶನ ಮೂರ್ತಿಗಳನ್ನು ಪ್ರತಿಷ್ಠಾಪನೆ ಮಾಡಿ ಅತ್ಯಂತ ಶ್ರದ್ದಾ ಭಕ್ತಿಯಿಂದ ಈ ಹಬ್ಬವನ್ನು ಆಚರಣೆ ಮಾಡುತ್ತಿದ್ದಾರೆ ಅದರಂತೆ ಬೆಂಗಳೂರು ಜನತೆ ಮನೆ ಮನೆಗಳಲ್ಲಿ ಪ್ರತಿಷ್ಠಾಪನೆ ಮಾಡಿರುವ ಗಣೇಶನ ಮೂರ್ತಿಗಳನ್ನು ಜಲ ಮೂಲಗಳಲ್ಲಿ ವಿಸರ್ಜಿಸಲು ಬೆಂಗಳೂರು ಮಹಾ ನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.

ಇನ್ನೂ ಗಣೇಶ ಚತುರ್ಥಿ ವಿಶೇಷವಾಗಿ ನಾಡಿನ ಜನತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸೇರಿದಂತ್ತೆ ಅನೇಕ ಸಚಿವರು ಹಾಗೂ ಗಣ್ಯರು ಶುಭ ಹಾರೈಸಿದ್ದಾರೆ.

ಗಣೇಶ ಹಬ್ಬದ ಆಚರಣೆಯ ಸಂದರ್ಭದಲ್ಲಿ ಮದ್ಯಪಾನಾಸಕ್ತರು ಗಲಭೆಮಾಡುವ ಸಾಧ್ಯತೆ ಇದ್ದು, ಈ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತಿ ಕಾಪಾಡುವ ದೃಷ್ಟಿಯಿಂದ ಕರ್ನಾಟಕ ಅಬಕಾರಿ ನಿಯಮಗಳಡಿ ಇಂದಿನಿಂದ ಉಡುಪಿ ಜಿಲ್ಲೆಯಾದ್ಯಂತ ಹಾಗೂ ಉಡುಪಿ ನಗರಸಭೆ ವ್ಯಾಪ್ತಿಯಲ್ಲಿ ಇದೇ 9 ಮತ್ತು ಸೆಪ್ಟೆಂಬರ್ 11 ರಂದು ಮಧ್ಯಾಹ್ನ 2 ರಿಂದ ಮದ್ಯರಾತ್ರಿ 12.00 ಗಂಟೆಯವರೆಗೆ ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.

ನೈಸರ್ಗಿಕವಾಗಿ ತಯಾರಿಸಿದ ಮಣ್ಣಿನ ಗಣೇಶನ ವಿಗ್ರಹಗಳನ್ನು ಮಾತ್ರ ಬಳಸುವ ಮೂಲಕ ಕೆರೆ, ನದಿ ಮೂಲಗಳು ಕಲುಷಿತಗೊಳಿಸದಂತೆ ಕಾಪಾಡುವುದು ನಮ್ಮ ಕರ್ತವ್ಯ ಎಂದು ಸಣ್ಣ ನೀರಾವರಿ ಖಾತೆ ಸಚಿವ ಎನ್.ಎಸ್.ಬೋಸರಾಜು ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending