Connect with us

ನೆಲದನಿ

ಜಾನಪದದ ಬೇರು, ಶಿಕ್ಷಣ-ರಂಗಭೂಮಿಯ ತೇರು ‘ಡಾ.ಎಂ.ಜಿ. ಈಶ್ವರಪ್ಪ’

Published

on

ಡಾ.ಎಂ.ಜಿ. ಈಶ್ವರಪ್ಪ
  • ಡಾ.ಗೀತಾ ಬಸವರಾಜು,ಉಪನ್ಯಾಸಕರು,ಎ.ವಿ.ಕೆ ಮಹಿಳಾ ಪದವಿ ಪೂರ್ವಕಾಲೇಜು,ದಾವಣಗೆರೆ

ರ್ನಾಟಕ ಕಲೆ, ಸಾಹಿತ್ಯ, ಸಂಸ್ಕೃತಿ, ಸಂಗೀತ, ವೈಚಾರಿಕತೆ ಮತ್ತು ಮಾನವೀಯತೆಯ ನೆಲೆವೀಡು. ಈ ನಾಡು ಪಂಪ, ರನ್ನ, ಪೊನ್ನ, ಜನ್ನ, ಹರಿಹರ, ರಾಘವಾಂಕ, ಕುಮಾರವ್ಯಾಸರಂತಹ ಅನೇಕ ಕವಿಗಳು ನೆಲೆಸಿದ್ದ ಪುಣ್ಯಭೂಮಿ. ಕನ್ನಡ ಸಾಹಿತ್ಯ ಪರಂಪರೆಯಲ್ಲಿಜನಪದಕ್ಕೆ ಶ್ರೀಸಾಮಾನ್ಯರ, ವಚನಕ್ಕೆ ಶರಣರ, ಕೀರ್ತನ ಸಾಹಿತ್ಯಕ್ಕೆದಾಸರಕೊಡುಗೆಅಪಾರವಾಗಿದ್ದು ದೇಸಿ ನೆಲೆಗಟ್ಟಿನೊಂದಿಗೆ ಮೌಲ್ಯಪ್ರಜ್ಞೆ ಬಿತ್ತುವಲ್ಲಿ ಸಿದ್ಧಹಸ್ತವಾಗಿವೆ. ಕವಿವಾಣಿ ಹೂವಾದರೆಜನವಾಣಿ ಬೇರಾಗಿ ಕಂಗೊಳಿಸುತ್ತದೆ.

ಇಂತಹಜನಪದ ಸಾಹಿತ್ಯವನ್ನು ಆಳವಾಗಿ ಅಧ್ಯಯನ ಮಾಡಿಜಾನಪದ ವಿದ್ವಾಂಸರಾಗಿ ಗುರುತಿಸಿಕೊಂಡಿರುವ ಹಲವರಲ್ಲಿ ಮಧ್ಯಕರ್ನಾಟಕದ ಹೃದಯ ಭಾಗವಾದದಾವಣಗೆರೆ ನಗರದಲ್ಲಿ ನೆಲೆಸಿರುವ ಜಾನಪದತಜ್ಞರಾದಡಾ.ಎಂ.ಜಿ.ಈಶ್ವರಪ್ಪ ಪ್ರಮುಖರು.

ಬಾಲ್ಯ ಮತ್ತು ಶಿಕ್ಷಣ

ಜ್ಞಾನದಿಂ ಮೇಲಿಲ್ಲ, ಶ್ವಾನನಿಂ ಕೀಳಿಲ್ಲ
ಭಾನುವಿನಿಂದಧಿಕ ಬೆಳಕಿಲ್ಲ ಜಗದೊಳಗೆ
ಜ್ಞಾನವೇ ಮಿಗಿಲು ಸರ್ವಜ್ಞ

ಎಂಬ ನುಡಿಗೆ ಪೂರಕವಾಗಿಜ್ಞಾನದ ಹಾದಿಯನ್ನು ಹಿಡಿದು ಶಿಕ್ಷಣ ತಜ್ಞರಾಗಿ, ಸಾಹಿತಿಯಾಗಿ, ಚಿಂತಕರಾಗಿ, ವಿದ್ಯಾರ್ಥಿಗಳ ಅಚ್ಚು ಮೆಚ್ಚಿನಅಧ್ಯಾಪಕರಾಗಿ, ಉತ್ತಮ ಮಾತುಗಾರರಾಗಿ, ಸರ್ವರ ಮನಸ್ಸನ್ನುಗೆದ್ದಿರುವಡಾ.ಎಂ.ಜಿ. ಈಶ್ವರಪ್ಪ ಶಿವಮೊಗ್ಗ ಜಿಲ್ಲೆಯ ಹಾಡೋನಹಳ್ಳಿ ಎಂಬ ಗ್ರಾಮದಲ್ಲಿ ಶ್ರೀಮತಿ ಗಿರಿಜಮ್ಮ ಮತ್ತು ಶ್ರೀ ರುದ್ರಪ್ಪ ದಂಪತಿಗಳ ಪುತ್ರರಾಗಿ 02-12-1950ರಲ್ಲಿ ಜನಿಸಿದರು.ತಂದೆ ಕೃಷಿ ಕಾಯಕವನ್ನು ಅವಲಂಬಿಸಿದ್ದರಿಂದ ಕೃಷಿ ಚಟುವಟಿಕೆಗಳನ್ನು ರೂಢಿಸಿಕೊಂಡು ಗ್ರಾಮೀಣ ಸೊಗಡನ್ನುಆಸ್ವಾದಿಸುತ್ತಿದ್ದರು.

ಪದವಿ ಶಿಕ್ಷಣವನ್ನು ವಿಜ್ಞಾನ ವಿಷಯದಲ್ಲಿ ಪೂರೈಸಿ ನಂತರ ಮೈಸೂರು ವಿಶ್ವವಿದ್ಯಾನಿಲಯದಿಂದಕನ್ನಡ ವಿಷಯದಲ್ಲಿಸ್ನಾತಕೋತ್ತರ ಪದವಿಯನ್ನು ಪಡೆದರು. ಕೃಷಿ ಕ್ಷೇತ್ರದಲ್ಲಿ ಆಸಕ್ತಿ ಹೊಂದಿದ್ದಇವರುಖ್ಯಾತಜಾನಪದ ವಿದ್ವಾಂಸರಾದ ಜಿ.ಶಂ.ಪರಮಶಿವಯ್ಯ ಅವರ ಮಾರ್ಗದರ್ಶನದಲ್ಲಿ ‘ವ್ಯವಸಾಯಜಾನಪದ’ ಎಂಬ ವಿಷಯದ ಮೇಲೆ ಪಿಹೆಚ್.ಡಿ ಪದವಿಯನ್ನು ಮೈಸೂರು ವಿಶ್ವವಿದ್ಯಾನಿಲಯದಿಂದ ಪಡೆದಿದ್ದಾರೆ.

ಅಧ್ಯಾಪಕರಾಗಿ ಎಂ.ಜಿ.ಈಶ್ವರಪ್ಪ

ಅರ್ಚಕಸ್ಯ ಪ್ರಭಾವೇನ ಶಿಲಾಭವತಿ ಶಂಕರಃ
ಆಚಾರ್ಯಸ್ಯ ಪ್ರಭಾವೇನ ಶಿಷ್ಯಭವತಿ ಸುಶಿಕ್ಷಿತಃ

ಎಂಬ ನುಡಿಯಂತೆ ವಿದ್ಯಾರ್ಥಿಗಳ ಮೆಚ್ಚಿನಅಧ್ಯಾಪಕರಾಗಿದಾವಣಗೆರೆಯ ಪ್ರತಿಷ್ಟಿತ ವಿದಾಕೇಂದ್ರವಾದ ಬಾಪೂಜಿ ವಿದ್ಯಾಸಂಸ್ಥೆಯಲ್ಲಿ 38 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಅಧ್ಯಾಪಕ ಸಂಘ, ವಿದ್ಯಾರ್ಥಿ ಸಂಘಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡ ಇವರುಎನ್,ಎಸ್.ಎಸ್‌ಅಧಿಕಾರಿಯಾಗಿ 11 ವರ್ಷಗಳ ಕಾಲ 6 ಶಿಬಿರಗಳನ್ನು ನಡೆಸಿ ಗ್ರಾಮೀಣಜನಜೀವನದ ಸಮಸ್ಯೆಗಳ ಪರಿಚಯವನ್ನು ಮಾಡಿಕೊಂಡರು. ನಂತರ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ್ದಾರೆ.

ಡಾ.ಗೀತಾ ಬಸವರಾಜು, ಉಪನ್ಯಾಸಕರು,
ಎ.ವಿ.ಕೆ ಮಹಿಳಾ ಕಾಲೇಜು, ದಾವಣಗೆರೆ

ರಂಗಭೂಮಿ ಮತ್ತುಈಶ್ವರಪ್ಪ

ಒಳ್ಳೆಯ ನಟ, ನಿರ್ದೇಶಕರಾಗಿಎಲ್ಲಾ ಕ್ಷೇತ್ರಗಳಲ್ಲೂ ಆಸಕ್ತಿ ಹೊಂದಿರುವಈಶ್ವರಪ್ಪನವರು ವಿದ್ಯಾರ್ಥಿದೆಸೆಯಿಂದಲೆ ರಂಗಭೂಮಿಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡವರು. ನಾಟಕಅಕಾಡೆಮಿಯ ಅಫಿಲಿಯೇಶನ್ ಪಡೆದಿರುವದಾವಣಗೆರೆಯ ಪ್ರತಿಷ್ಟಿತ ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ಸಂಸ್ಥೆಯಾದ “ಪ್ರತಿಮಾ ಸಭಾ” ದ ಕಾರ್ಯದರ್ಶಿಯಾಗಿ, ಉಪಾಧ್ಯಕ್ಷರಾಗಿ, ಅಧ್ಯಕ್ಷರಾಗಿ 25 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. 1979ರಲ್ಲಿ ವಿಶ್ವವಿದ್ಯಾನಿಲಯದಧನಸಹಾಯಆಯೋಗದಿಂದ ನಡೆದರಾಷ್ಟ್ರ ಮಟ್ಟದರಂಗಭೂಮಿ, ರಂಗನಟನೆ, ರಂಗ ನಿರ್ದೇಶನಕುರಿತಂತೆ ಕೇರಳದ ತ್ರಿಚೂರಿನ ಸ್ಕೂಲ್‌ಆಫ್‌ಡ್ರಾಮಾದಲ್ಲಿ ಭಾಗಿಯಾಗಿ, ಪ್ರತಿಮಾ ಸಭಾ ನಡೆಸಿದ ರಂಗ ಶಿಬಿರದಲ್ಲಿ ಕ್ರಿಯಾತ್ಮಕವಾಗಿ ಪಾಲ್ಗೊಂಡಿದ್ದಾರೆ.

ಈಡಿಪಸ್, ಸಂಕ್ರಾಂತಿ, ಸಂತೆಯಲ್ಲಿ ನಿಂತಕಬೀರ, ಸೆಜುವಾನಿನ ಸಾಧ್ವಿ, ಕೊಡೆಗಳು ಮುಂತಾದ ನಾಟಕಗಳಲ್ಲಿ ನಟಿಸಿದ್ದಾರೆ.ಜಾತ್ರೆ, ಸಾಯೋಆಟ, ಅಪ್ಪ, ಕಡೇಮನೆಕಡೇಗಲ್ಲಿ, ಹಳ್ಳಿಚಿತ್ರ, ಹಳ್ಳಿಮೇಷ್ಟು, ಮಾರೀಚನ ಬಂಧುಗಳು, ಇಲಿಬೋನು, ನಾಗನ ಕತೆ ಮುಂತಾದ ನಾಟಕಗಳನ್ನು ನಿರ್ದೇಶಿಸಿದ್ದಾರೆ.ನಾಗನ ಕತೆ ನಾಟಕಕ್ಕೆಕನ್ನಡ ಸಾಹಿತ್ಯ ಪರಿಷತ್ತು ನಡೆಸಿದ ಅಖಿಲ ಕರ್ನಾಟಕ ಮಕ್ಕಳ ಸಮ್ಮೇಳನದಲ್ಲಿ ಪ್ರಥಮ ಬಹುಮಾನ ಲಭಿಸಿದೆ.

1979 ರಲ್ಲಿ ಹೆಗ್ಗೋಡಿನಲ್ಲಿ ನಡೆದ ಚಲನಚಿತ್ರ ಸಹೃದಯ ಶಿಬಿರ, 1983 ರಲ್ಲಿರಂಗ ನಿರ್ದೇಶಕರ ಶಿಬಿರ, 1984ರಲ್ಲಿ ನಾಟಕಅಕಾಡೆಮಿಕೊಂಡಜ್ಜಿಯಲ್ಲಿ ನಡೆಸಿದ ನಾಟಕ ರಚನಾ ಶಿಬಿರದಲ್ಲಿ ಪಾಲ್ಗೊಂಡಿದ್ದಾರೆ. 1983ರಲ್ಲಿಕರ್ನಾಟಕ ನಾಟಕಅಕಾಡೆಮಿ ನೀಡಿದ ಧನಸಹಾಯದಿಂದ ದಿಗ್ಗಜ ಶ್ರೀ. ಬಿ.ವಿ ಕಾರಂತರ ಮಾರ್ಗದರ್ಶನದಲ್ಲಿ ಮಧ್ಯಪ್ರದೇಶದ ಭೋಪಾಲ್ ಮತ್ತುದೆಹಲಿಯಲ್ಲಿರಂಗಭೂಮಿಅಧ್ಯಯನ ನಡೆಸಿದ್ದಾರೆ.

1982 ರಲ್ಲಿ ಖ್ಯಾತ ಜಾನಪದ ವಿದ್ವಾಂಸರಾದ ಡಾ.ಜಿ.ಶಂ.ಪರಮಶಿವಯ್ಯ ಹಾಗೂ ದೆಹಲಿಯ ಜವಾಹರ್‌ಲಾಲ್ ನೆಹರು ವಿಶ್ವವಿದ್ಯಾನಿಲಯದ ವತಿಯಿಂದ ನಡೆದಚಿತ್ರದುರ್ಗ, ಬಳ್ಳಾರಿ, ಧಾರವಾಡ ಜಿಲ್ಲೆಗಳ ಜಾನಪದಕಲಾವಿದರು ಮತ್ತುತಂತಿ ವಾದ್ಯಗಳ ಸಮೀಕ್ಷೆಯಲ್ಲಿ ಭಾಗಿಯಾಗಿದ್ದಾರೆ.ಕರ್ನಾಟಕದ ಇತರೆಡೆಗಳಲ್ಲಿ ನಡೆದಜಾನಪದ ಸಾಹಿತ್ಯ ಸಮ್ಮೇಳನ ಮತ್ತು ಕಲಾಮೇಳಗಳಿಗೆ ಹಲವು ಬಾರಿಕಲಾವಿದರ ತಂಡಗಳ ನೇತೃತ್ವವನ್ನು ವಹಿಸಿದ್ದಾರೆ.

1986ರಲ್ಲಿಬೆಂಗಳೂರಿನಲ್ಲಿ ನಡೆದ ಸಾರ್ಕ್ ಸಮ್ಮೇಳನದಲ್ಲಿ ಚಿತ್ರದುರ್ಗಜಿಲ್ಲೆಯಕಿನ್ನರಿಜೋಗಿತಂಡದ ನೇತೃತ್ವವನ್ನು ವಹಿಸಿರುತ್ತಾರೆ.1987 ರಲ್ಲಿಕರ್ನಾಟಕ ವಿಶ್ವವಿದ್ಯಾನಿಲಯ ಮತ್ತು ಬಾಪೂಜಿ ವಿದ್ಯಾಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ನಡೆದಜಾನಪದ ಸಾಹಿತ್ಯ ಸಮ್ಮೇಳನ ಮತ್ತು ಕಲಾಮೇಳದ ಸಂಘಟನೆಯನ್ನು ಮಾಡಿಜಾನಪದರಂಗ ಪ್ರಕಾರಗಳನ್ನು ಆಧುನಿಕರಂಗಭೂಮಿಗೆ ಅಳವಡಿಸಿಕೊಳ್ಳಲು ಚಿಂತನೆ ನಡೆಸಿದ್ದಾರೆ.

ಅಷ್ಟೇ ಅಲ್ಲದೆಜಾನಪದರಂಗಭೂಮಿಕುರಿತು ಸಾಕಷ್ಟು ತಜ್ಞ ಉಪನ್ಯಾಸಗಳನ್ನು ಆಕಾಶವಾಣಿಯಲ್ಲಿ ನೀಡಿದ್ದಾರೆ.1986 ಮತ್ತು1990 ರಲ್ಲಿಕರ್ನಾಟಕಜಾನಪದ ಮತ್ತುಯಕ್ಷಗಾನಅಕಾಡೆಮಿ ನಡೆಸಿದ ಜಾನಪದತಜ್ಞರ ಸಮಾವೇಶದಲ್ಲಿ ಪಾಲ್ಗೊಂಡಿದ್ದಾರೆ.

ಸಾಹಿತ್ಯ ಸೇವೆ

ಪುಸ್ತಕಗಳು ಜ್ಞಾನದ ಭಂಡಾರವಿದ್ದಂತೆ ಅವು ಮನುಷ್ಯನನ್ನುಉತ್ತಮ ಭವಿಷ್ಯಕ್ಕೆಕೊಂಡೊಯ್ಯುವಲ್ಲಿ ಪ್ರಮುಖ ಪಾತ್ರವಹಿಸುತ್ತವೆ. ನಮ್ಮಜ್ಞಾನವನ್ನುತಣಿಸುವ ಆಲಯಗಳಿವು ಎಂಬುದನ್ನರಿತ ಶ್ರೀಯುತರು ಮ್ಯಾಸಬೇಡರು, ಬೇಸಾಯ ಪದ್ಧತಿ, ಬಂಗಾರಕೂದಲ ಜೈರಾಣಿ, ಜಾನಪದ ಇಬ್ಬನಿಗಳು, ಸಾಹಿತ್ಯ ಸಂಚಲನ, ಕೃಷಿ ಜಾನಪದ, ಹುನಗುಂದ ಬಾಬಣ್ಣ…..ಹೀಗೆ ಸುಮಾರು 18 ಪುಸ್ತಕಗಳನ್ನು ಸಾಹಿತ್ಯಕ್ಷೇತ್ರಕ್ಕೆಕೊಡುಗೆಯಾಗಿ ನೀಡಿದ್ದಾರೆ.ಅಲ್ಲದೆ ಹಲವಾರು ಲೇಖನಗಳನ್ನು ಪ್ರಕಟಿಸಿದ್ದಾರೆ.

ಜೊತೆಗೆಜನಪದ, ವಚನ, ಬಂಡಾಯ ಮತ್ತುದಲಿತ ಸಾಹಿತ್ಯ ವಿಷಯಗಳ ಮೇಲೆ ವಿದ್ಯಾರ್ಥಿಗಳು ಪ್ರೌಢಪ್ರಬಂಧವನ್ನು ರಚಿಸಿ ಪಿಹೆಚ್.ಡಿ ಪದವಿ ಪಡೆಯಲು ಕುವೆಂಪು ವಿಶ್ವವಿದ್ಯಾನಿಲಯದಿಂದ ಮಾರ್ಗದರ್ಶಕರಾಗಿಯೂ ಸೇವೆ ಸಲ್ಲಿಸಿದ್ದಾರೆ. ನಾಡಿನಎಲ್ಲ ಭಾಗಗಳಲ್ಲಿಯೂ ಸಂಚರಿಸಿ ಸಾಹಿತ್ಯಿಕ ಮತ್ತುಜಾನಪದ ವಿಷಯಗಳನ್ನು ಕುರಿತು ಉಪನ್ಯಾಸಗಳನ್ನು ನೀಡಿದ್ದಾರೆ. ಚಿತ್ರದುರ್ಗ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷರಾಗಿ 2 ಜಿಲ್ಲಾ ಸಮ್ಮೇಳನಗಳನ್ನು 2 ತಾಲೂಕು ಸಮ್ಮೇಳನಗಳನ್ನು ಹಾಗೂ ಗುಣಮಟ್ಟದ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಿರ್ವಹಿಸಿದ್ದಾರೆ.

ಸಂದ ಪ್ರಶಸ್ತಿಗಳು

ಶ್ರೀಯುತರ ಸಾಹಿತ್ಯ, ಜಾನಪದ ಹಾಗೂ ಶಿಕ್ಷಣ ಕ್ಷೇತ್ರದಲ್ಲಿನ ಸಾಧನೆಗೆ ಹಲವಾರು ಪ್ರಶಸ್ತಿ ಪುರಸ್ಕಾರಗಳು ಲಭಿಸಿವೆ.

  • 1993ರಲ್ಲಿ ಗುಂಡ್ಮಿಜಾನಪದ ಪ್ರಶಸ್ತಿ
  • 1995 ಕು.ಶಿ. ಹರಿದಾಸ ಭಟ್ಟ ಪ್ರಶಸ್ತಿ
  • 2000 ಕರ್ನಾಟಕ ನಾಟಕಅಕಾಡೆಮಿಗೌರವ ಫೆಲೋಷಿಪ್
  • 2003 ಕರ್ನಾಟಕಜಾನಪದಅಕಾಡೆಮಿಯತಜ್ಞ ಪ್ರಶಸ್ತಿ
  • 2010 ಹ.ಕ. ರಾಜೇಗೌಡಜಾನಪದ ಪ್ರಶಸ್ತಿ

    2011ರಂಗ ಸಂಸ್ಥಾನ ಜಾನಪದ ಪ್ರಶಸ್ತಿ

  • 2014ಮಹಲಿಂಗರಂಗ ಪ್ರಶಸ್ತಿ
  • 2020ಕರ್ನಾಟಕರಾಜ್ಯೋತ್ಸವ ಪ್ರಶಸ್ತಿ

ತನ್ನ ನೋಡಲಿ ಎಂದುಕನ್ನಡಿಯುಕರೆವುದೆ
ತನ್ನಲ್ಲಿ ಜ್ಞಾನವುದಿಸಿದ ಮಹಾತ್ಮನು
ಕನ್ನಡಿಯಂತೆ ಸರ್ವಜ್ಞ

ಎಂಬ ನುಡಿಗೆ ಪೂರಕವಾಗಿ ಬದುಕುತ್ತಿರುವ ಡಾ.ಎಂ.ಜಿಈಶ್ವರಪ್ಪ ಒಳ್ಳೆಯ ಅಧ್ಯಾಪಕರಾಗಿ, ಜಾನಪದ ವಿದ್ವಾಂಸರಾಗಿ, ಶಿಕ್ಷಣ ತಜ್ಞರಾಗಿ, ಸಾಹಿತಿಯಾಗಿ, ಸರ್ವರ ಮನಸ್ಸನ್ನುಗೆದ್ದಿರುವಇವರು ಸದಾಕಾಲ ಹಸನ್ಮುಖಿ.ಎಲ್ಲರನ್ನು ಪ್ರೀತಿತುಂಬಿದ ಮನಸ್ಸಿನಿಂದ ಮಾತನಾಡಿಸುವ ಸರಳ ಸಜ್ಜನಿಕೆಯ ವ್ಯಕ್ತಿತ್ವದವರು.

ನಮ್ಮಂತಹ ಅನೇಕ ಕಿರಿಯ ಅಧ್ಯಾಪಕರಿಗೆ ಮಾರ್ಗದರ್ಶಕರಾಗಿರುವ ಈಶ್ವರಪ್ಪನವರುರಾಜ್ಯಮಟ್ಟದ 5 ನೇ ಭಕ್ತಿ ಸಾಹಿತ್ಯ ಸಮ್ಮೇಳನ ಪಂ.ಪುಟ್ಟರಾಜ ಸಾಹಿತ್ಯೋತ್ಸವದ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿರುವುದು ಸಂತಸದ ವಿಷಯ. ಅಲ್ಲದೆ ನವೆಂಬರ್ 8 ರಂದು ಸಾಣೇಹಳ್ಳಿಯಲ್ಲಿ ನಡೆಯಲಿರುವರಾಷ್ಟ್ರೀಯ ನಾಟಕೋತ್ಸವ ಸಮಾರೋಪ ಸಮಾರಂಭದಲ್ಲಿ ಕೊಡಮಾಡುವ ಶ್ರೀ ಶಿವಕುಮಾರ ಪ್ರಶಸ್ತಿಗೆ ಭಾಜನರಾಗಿದ್ದಾರೆ ಪರಮಪೂಜ್ಯ ಡಾ.ಶ್ರೀ. ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಹಾಗೂ ಸನ್ಮಾನ್ಯ ಮುಖ್ಯ ಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿ ಸಮ್ಮುಖದಲ್ಲಿ ಪ್ರಶಸ್ತಿಯನ್ನು ಪಡೆಯುತ್ತಿರುವ ಡಾ.ಎಂ.ಜಿ.ಈಶ್ವರಪ್ಪನವರ ಸಾಧನೆಯ ಬದುಕು ನಮಗೆಲ್ಲ ಸ್ಫೂರ್ತಿಯಾಗಲಿ ಎಂಬ ಆಶಯದೊಂದಿಗೆ.

[ಅಕ್ಟೋಬರ್-30 ರಂದು ದಾವಣಗೆರೆಯಲ್ಲಿ ನಡೆಯಲಿರುವ 05ನೆಯ ರಾಜ್ಯಮಟ್ಟದ ಭಕ್ತಿ ಸಾಹಿತ್ಯ ಸಮ್ಮೇಳನ (ಪಂ.ಪುಟ್ಟರಾಜ ಸಾಹಿತ್ಯೋತ್ಸವ-2022)ದ ಸಮ್ಮೇಳನಾಧ್ಯಕ್ಷರಾಗಿ ಜಾನಪದ ವಿದ್ವಾಂಸ ಡಾ.ಎಂ.ಜಿ.ಈಶ್ವರಪ್ಪ ಆಯ್ಕೆಯಾಗಿದ್ದು ತನ್ನಿಮಿತ್ತ ಈ ಲೇಖನ]

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ

ಡಾ. ಆತ್ಮಾರಾಮನ ಆತ್ಮನಿವೇದನೆ | ಮೆಟ್ಟಿಲಿನವನು

Published

on

~ ಯೋಗೇಶ್ ಮಾಸ್ಟರ್

ಮೆಟ್ಟಿಲುಗಳ ಮೇಲೆ ನಿಂತು ದಿಟ್ಟಿಸುತ್ತಿರುವವನ ನೋಡುಗರು ಏನೆಂದು ತಿಳಿದಾರು? ಹತ್ತುತ್ತಿರುವನೆಂದೋ, ಇಳಿಯುತ್ತಿರುವನೆಂದೋ? ಯಾರೇನಾದರೂ ಅಂದುಕೊಳ್ಳಲಿ ಹೊರಗೆ ಹತ್ತುತ್ತಿರುವವನು ಇಳಿಯುತ್ತಿರಬಹುದು. ಇಳಿಯುತ್ತಿರುವವನು ಹತ್ತುತ್ತಿರಬಹುದು.

ಈಗ ಯಾರೂ ನೋಡುತ್ತಿಲ್ಲ. ನಾನು ಹತ್ತುತ್ತಿರುವೆನೋ ಇಳಿಯುತ್ತಿರುವೆನೋ ಯಾರೂ ನೋಡುತ್ತಿಲ್ಲ. ಯಾರೊಬ್ಬರೂ ಇಲ್ಲದಿರುವಾಗಲೂ ನಾನು ನನಗೆ ಪ್ರಾಮಾಣಿಕವಾಗಿ ಇರದಿದ್ದರೆ? ‘ಆತ್ಮಾರಾಮ್, ಈಗೇನು ನೀನು ಏರುತ್ತೀಯೋ, ಇಳಿಯುತ್ತೀಯೋ?’ ಬೇರೊಬ್ಬರು ಕೇಳುವ ಪ್ರಶ್ನೆಗಳಿಗೆ ಉತ್ತರಿಸಿಬಿಡಬಹುದು. ನಾನೇ ಹಾಕಿಕೊಳ್ಳುವ ಪ್ರಶ್ನೆಗೆ ನಾನೇ ಉತ್ತರಿಸುವ ಧೈರ್ಯ ಅಷ್ಟು ಸುಲಭದಲ್ಲಿ ಬರುವುದಿಲ್ಲ.
ನೂರಾರು ಆಪ್ತ ಸಮಾಲೋಚನೆಗಳಲ್ಲಿ ಸಾವಿರಾರು ಪ್ರೊಜೆಕ್ಟಿವ್ ಪ್ರಶ್ನೆಗಳನ್ನು ಕೇಳಿದ್ದೇನೆ. ನನಗೆ ನಾನೇ ಪ್ರೊಜೆಕ್ಟ್ ಮಾಡುವ ಪ್ರಶ್ನೆಯನ್ನು ನಾನು ಹಾಕಿಕೊಳ್ಳಲು ಇದುವರೆಗೂ ಆಗಿಲ್ಲ.

ಇವತ್ತು ಹಾಕಿಕೊಂಡೆ. ಅದ್ಯಾಕೋ ಮೆಟ್ಟಿಲುಗಳು ನನ್ನ ಪ್ರಶ್ನಿಸಿದವು. ಹೇ ಆತ್ಮಾರಾಮ್, ಈಗೇನು? ನೀನು ಏರುತ್ತೀಯೋ? ಇಳಿಯುತ್ತೀಯೋ?’ ಏರಿದ್ದೇನೆಂದುಕೊAಡು ಇಳಿದಿರುವ ನಾನು ಹೇಗೆ ಉತ್ತರಿಸಲಿ? ಮೆಲ್ಲನೆ ಕುಳಿತುಬಿಟ್ಟೆ.
ಹೌದು, ಈ ಮೆಟ್ಟಿಲುಗಳು ಬರೀ ಏರಲಲ್ಲ, ಇಳಿಯಲೂ ಅಲ್ಲ. ಕುಳಿತುಕೊಳ್ಳಲೂ ಹೌದು.

ಒಳಗಿರುವ ಮಾತುಗಳು ಹೊರಗೆಡವಲೂ ಅಲ್ಲ, ಒಳಗೆ ನುಂಗಿಕೊಳ್ಳಲೂ ಅಲ್ಲ. ಆದರೆ ಅವು ಬಹುಕಾಲದಿಂದ ಕಾಯುತ್ತಲೇ ಇವೆ. ಕಾದು ಕಾದು ಬಿಸಿಯೇರಿದೆ. ಈಗ ಹೊರಗೆಡಬೇಕು ಅಥವಾ ನುಂಗಬೇಕು. ಹಾಗೆಯೇ ತಣ್ಣಗಾಗುವ ಬಗೆಯೇನಾದರೂ ಇದೆಯಾ?

ನೋಡುಗರ ಕಣ್ಣಲ್ಲಿ ನಾನೊಂದು ಪರಮ ಶಾಂತಿ. ಆದರೆ ಅದು ನನ್ನೊಳಗೆ ಬರೀ ಭ್ರಾಂತಿ. ಒಳಗೆ ಪದೇ ಪದೇ ಪ್ರತಿಧ್ವನಿಸುತ್ತಿರುವ ಸದ್ದುಗಳ ಸೊಲ್ಲಡಗಿಸಿ ಸುಮ್ಮನಿರಿಸಲು ಹೇಗಾದೀತು? ಆಪ್ತ ಸಮಾಲೋಚನೆಗೆ ಬಂದವರು ಇದನ್ನು ಹೇಳಿದರೆ, “ಪದೇ ಪದೇ ಆಲೋಚನೆಗಳು ಬರುತ್ತಿದ್ದರೆ ಅದನ್ನು ಚಿಂತಾಚಕ್ರ ಅಥವಾ ಡಿumiಟಿಚಿಣioಟಿ ಎನ್ನುತ್ತೇವೆ. ಅದರಿಂದ ನೀವು ಹೊರಗೆ ಬರಬೇಕು” ಎಂದು ಎಂತದ್ದೋ ಒಂದಷ್ಟು ಸಲಹೆ ಸೂಚನೆಗಳನ್ನು ಕೊಟ್ಟು ಕಳುಹಿಸುತ್ತಿದ್ದೆ. ಆದರೆ ನನಗೆ ನಾನು ಎಂತದ್ದೋ ಒಂದಷ್ಟು ಸಲಹೆ ಸೂಚನೆಗಳನ್ನು ಕೊಟ್ಟುಕೊಳ್ಳಲು ಆಗದು.

ಸದ್ದಿಲ್ಲದ ಹಗಲಲ್ಲಿ, ಸದ್ದಡಗಿದಾಗ ರಾತ್ರಿಯಲ್ಲಿ ಹಳೆಯ ಮಾತುಕತೆಗಳು, ತಪುö್ಪಗಳು, ಬೇಸರಗಳು, ಪಶ್ಚಾತ್ತಾಪಗಳು ಮತ್ತು ವೈಫಲ್ಯಗಳು ಹಿಂದೆ ಹಿಂದೆಯೇ ಕಡಲ ತಡಿಗೆ ಬಂದಪ್ಪಳಿಸುವ ತಡೆಯಲಾಗದ ಅಲೆಗಳಾಗಿರುತ್ತವೆ. ಬೆಳಗಾದಾಗ ಗತ್ಯಂತರವಿಲ್ಲದೇ ಮಾಡುವ ಗದ್ದಲದಲ್ಲಿ ರಾತ್ರಿಗಾಗಿ ಕಾಯುತ್ತಾ ಒಳಗವಿತಿರುವ ಹೆಗ್ಗಣಗಳಂತೆ, ಜಿರಳೆಗಳಂತೆ ಅದೆಲ್ಲೋ ಬಿದ್ದಿರುತ್ತವೆ. ರಾತ್ರಿಯಾದರೆ ಸಾಕು ಮೆದುಳೆಂಬ ಒಡಕಲು ಪ್ರೊಜೆಕ್ಟರ್ ತನ್ನ ಮಾಸಲು ಸಿನಿಮಾವನ್ನು ತಂತಾನೆ ತೋರಿಸಲಾರಂಭಿಸುತ್ತವೆ.
ಅವರಿಗೆ ಇವರಿಗೆ ನಾನು ಹೇಳುವುದು ಅದೆಷ್ಟು ಕಪಟತನದ್ದು!
‘ಇದು trap of overthinking. ನೀವು ಹೊರಗೆ ಬರಬೇಕು.’
ನನಗೇ ಅವನ್ನು ನೋಡಿಕೊಳ್ಳಲು ಆಗಿಲ್ಲ. ನೋಡಿಕೊಳ್ಳಲು ಆಗಿಲ್ಲ ಎನ್ನುವುದಕ್ಕಿಂತ ನೋಡಿಕೊಳ್ಳಲು ಭಯ. ನನಗೆ ನನ್ನ ಮೇಲೆಯೇ ಜಿಗುಪ್ಸೆ ಬಂದುಬಿಟ್ಟೀತೆAಬ ಭಯ. ಆದರೆ ನೋಡಿಕೊಂಡರೆ ಬಾಧೆ ನಿವಾರಣೆಯಾಗಬಹುದು. ಚಿಂತಾಚಕ್ರ ತಿರುಗುತ್ತಿದ್ದಂತೆ, ಬಹುಕಾಲ ತಿರುಗುತ್ತಲೇ ಇದ್ದಂತೆ ಸವೆಯುವುದು. ಆ ಸವಕಳಿ ಚಿಂತಾಚಕ್ರವನ್ನು ಇಲ್ಲವಾಗಿಸದು. ಆದರೆ ಅದು ಸುತ್ತಲು ಮಧ್ಯದ ಕೀಲಾಗಿರುವ ನನ್ನ ಬಳಲಿಸುವುದು.

ಆ ಬಳಲಿಕೆಯೇ ನನ್ನ ವಯಸ್ಸಿಗಿಂತ ಹೆಚ್ಚು ಆಯಸ್ಸಾದಂತೆ ಕಾಣಿಸುವುದು. ಇರುವುದಕ್ಕಿಂತ ದೇಹ ಭಾರವಾಗಿರುವುದು.
ಹೌದಲ್ಲಾ, ಏರುತ್ತಲೋ, ಇಳಿಯುತ್ತಲೋ ಹೆಣಗಾಡುವ ಬದಲು ಕುಳಿತಾದ ಅಂದೆತದ್ದೋ ಪ್ರಶಾಂತತೆ ಒದಗಿದೆ ಇಂದು! ನನಗೆ ನಾನೇ ಹಳೆಯ ಸ್ನೇಹಿತನಾಗಿ ಕುಳಿತುಕೊಂಡು ನನ್ನದೇ ಮಾತುಗಳಿಗೆ ನಾನೇ ಕಿವಿಯಾಗುವ ಸರತಿ ಇಂದು ಒದಗಿತೇ?
ನನಗೆ ನಾನೇ ಹೇಳಿಕೊಳ್ಳುವುದು ಪರಕೀಯವೆನ್ನಿಸಿದರೂ ಒಂದಿಷ್ಟು ಉಸಿರಾಡಲು ಸರಾಗವೆನಿಸಿದೆ. ಕೈ ಮುಷ್ಟಿಗಟ್ಟಿದರೂ ಒಳಗೇ ಸಡಿಲವಾಯಿತು. ಮಡಿಸಿದ ಮೊಣಕೈ ತೊಡೆಯ ಮೇಲೆ ಒತ್ತುವುದನ್ನು ನಿಲ್ಲಿಸಿ ಹಗುರವಾಗಿ ಹತ್ತಿಯಂತೆ ಊರಿತು. ಮಧ್ಯಾಹ್ನದಲ್ಲೂ ತಂಗಾಳಿಯು ಮುಖಕ್ಕೆ ಮುತ್ತಿಡತೊಡಗಿತು.

ನಾಳೆ ಈ ಚಿಂತಾಚಕ್ರ ಮತ್ತೆ ತಿರುಗಣಿಯಾಗಬಹುದೇನೋ. ಆದರೆ ಚಿಂತೆಗಳ ನಡುನಡುವೆ ಒಂದಿಷ್ಟು ಉಸಿರುತೆಗೆದುಕೊಳ್ಳಲು ಸಾಧ್ಯವಾಗಿದ್ದು, ಏರುವುದನ್ನು, ಇಳಿಯುವುದನ್ನು ಬಿಟ್ಟು ಈ ಮೆಟ್ಟಿಲುಗಳ ಮೇಲೆ ಕೂತಿದ್ದಕ್ಕೆ.
‘ಹೌದು ಕಣೋ ಆತ್ಮಾ, ಹೌದು!’

Continue Reading

ಅಂತರಂಗ

ದಿಮಾಗಿ ನಕ್ಸಲ್-ನಗರ ನಕ್ಸಲ್

Published

on

~ರಹಮತ್ ತರೀಕೆರೆ, ಚಿಂತಕರು

ಕಾರ್ನಾಡರಲ್ಲಿ ನನಗೆ ಮೊದಲಿಂದಲೂ ವೈಯಕ್ತಿಕ ಸಂಪರ್ಕ ಇರಲಿಲ್ಲ. ಅನಂತಮೂರ್ತಿ ಅವರಂತೆ ಅವರು ಕಿರಿಯ ಲೇಖಕರ ಜತೆ ನಂಟಿರಿಸಿಕೊಂಡವರಲ್ಲ. ಯಾರಿಗಾದರೂ ಮುನ್ನುಡಿ ಬರೆದಿದ್ದೂ ನನಗೆ ತಿಳಿದಿಲ್ಲ. ತಾವಾಯಿತು ತಮ್ಮ ಬರೆಹ, ಸಿನಿಮಾ ಆಯಿತು ಎಂದಿದ್ದವರು. ಮಹಾರಾಷ್ಟ್ರದಲ್ಲಿ ಹುಟ್ಟಿ, ಜೀವಿತದ ಬಹುಕಾಲ ಕರ್ನಾಟಕದ ಹೊರಗಿದ್ದ ಅವರು, ಕರ್ನಾಟಕದ ಸಾರ್ವಜನಿಕ ಕಾರ್ಯಕ್ರಮಗಳಲ್ಲೂ ಹೆಚ್ಚು ಕಾಣಿಸಿದವರಲ್ಲ. ಸಮಕಾಲೀನರಾದ ತೇಜಸ್ವಿ ಲಂಕೇಶ್ ಅನಂತಮೂರ್ತಿ ಅವರಂತೆ ಪಬ್ಲಿಕ್ ಇಂಟಲೆಕ್ಚುವಲ್ ಕೆಲಸವನ್ನು ಮೈಮೇಲೆ ಹಾಕಿಕೊಂಡು, ಕರ್ನಾಟಕದ ಕಷ್ಟದ ದಿನಗಳಲ್ಲಿ ತಮ್ಮ ಮಾತು ಭಾಷಣ ಬರೆಹಗಳಿಂದ ಜನಾಭಿಪ್ರಾಯ ರೂಪಿಸಿದವರಲ್ಲ.

ಹೀಗಿದ್ದ ಕಾರ್ನಾಡರು ಬಾಳಿನ ಕೊನೆಯ ವರ್ಷಗಳಲ್ಲಿ ಆಶ್ಚರ್ಯಕರವಾಗಿ ಬದಲಾದರು; ಸಾರ್ವಜನಿಕ ಮಹತ್ವದ ಪ್ರಸಂಗಗಳಲ್ಲಿ ಮಾತಾಡಿದರು. ಹಠಬಿದ್ದಂತೆ ಬೀದಿಗಿಳಿದರು. ಈ ರೂಪಾಂತರಕ್ಕೆ ಕಾರಣ, ಪ್ರಭುತ್ವಗಳು ರಾಜಕೀಯ ಸೈದ್ದಾಂತಿಕ ಭಿನ್ನಮತಗಳನ್ನು ದಮನಿಸುವ ನಡೆಗಳಿರಬಹುದು; ಅನಂತಮೂರ್ತಿ ತೇಜಸ್ವಿ ಲಂಕೇಶ್ ತೀರಿಕೊಂಡ ಬಳಿಕ, ಉಂಟಾದ ರಿಕ್ತತೆ ಅವರನ್ನು ಈ ಹೊಸ ಪಾತ್ರ ನಿರ್ವಹಿಸುವಂತೆ ಆಹ್ವಾನಿಸಿರಬಹುದು. ಅವರು ತಮ್ಮ ಮಾತು, ಕೃತಿ, ಕ್ರಿಯೆಗಳಲ್ಲಿ ಭಾರತವನ್ನು ಆವರಿಸುತ್ತಿರುವ ಮತೀಯತೆ ಕುರಿತು ವ್ಯಗ್ರರಾಗಿದ್ದರು.

ಅವರು ಮಾಡಿದ ಸಾರ್ವಜನಿಕ ಪ್ರತಿರೋಧದ ಪ್ರಕರಣಗಳನ್ನು ಗಮನಿಸಬೇಕು. ಬಾಬರಿ ಮಸೀದಿಯ ಧ್ವಂಸವನ್ನು ವಿರೋಧಿಸಿದ್ದು; ನೈಪಾಲರ ಬಲಪಂಥೀಯವಾದ ಬೆಂಬಲಿಸುವ ನಿಲುವನ್ನು ಖಂಡಿಸಿದ್ದು; ಬಾಬಾಬುಡನಗಿರಿ ಚಳುವಳಿಯಲ್ಲಿ ಭಾಗವಹಿಸಿದ್ದು; ಟಿಪ್ಪು ನೆನಪಿನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು; ಟಿಪ್ಪು ಕುರಿತು ನಾಟಕ ಬರೆದಿದ್ದು; ಎಂ. ಎಫ್. ಹುಸೇನರ ಸೃಜನಶೀಲತೆ ಪರವಾಗಿ ನಿಂತಿದ್ದು; ಗೋರಕ್ಷಣೆ ಹೆಸರಲ್ಲಿ ನಡೆಯುತ್ತಿರುವ ಉಪಟಳ ವಿರೋಧಿಸಿ `ನಮ್ಮ ಆಹಾರ ನಮ್ಮ ಹಕ್ಕು’ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು. ಇಲ್ಲಿನ ಕೊನೆಯ ಕಾರ್ಯಕ್ರಮದಲ್ಲಿ ಅವರೊಟ್ಟಿಗೆ ಅನಂತಮೂರ್ತಿಯವರೂ ಇದ್ದರು. ಭಾರತದಲ್ಲಿ ಇಬ್ಬರು ಜ್ಞಾನಪೀಠ ಲೇಖಕರು ಇಂತಹದೊಂದು ಸಾರ್ವಜನಿಕ ಪ್ರತಿರೋಧದ ಕಾರ್ಯಕ್ರಮದಲ್ಲಿ ಒಟ್ಟಿಗೆ ಭಾಗವಹಿಸಿದ್ದು ಅಪೂರ್ವ ಸಂಗತಿ.

ನನಗೆ ಅವರ ಜತೆ ಮೊದಲ ಮುಖಾಬಿಲೆ ಆಗಿದ್ದು ಬಾಬಾಬುಡನಗಿರಿಗೆ ಮಾಡಿದ ಪಯಣದಲ್ಲಿ. ಸೂಫಿಗಳ ಮೇಲೆ ತುಸು ಅಧ್ಯಯನ ಮಾಡಿದವನೆಂದು ನನ್ನನ್ನು ಅವರೊಟ್ಟಿಗೆ ಕೂರಿಸಲಾಗಿತ್ತು. ಅವರ ಗಂಭೀರ ಸ್ವಭಾವದ ಬಗ್ಗೆ ತಿಳಿದಿದ್ದ ನಾನು, ಅವರಾಗಿ ಏನಾದರೂ ಕೇಳಿದರೆ ಮಾತ್ರ ಹೇಳಬೇಕೆಂದು, ಸಹಪಯಣದ ಖುಶಿಯನ್ನು ಅನುಭವಿಸುತ್ತ ಜತೆಗೆ ಕೂತಿದ್ದೆ. ಗಿರಿಯನ್ನು ವಾಹನ ಹತ್ತುವಾಗ, ನೆತ್ತಿಮೇಲಣ ಶಿಖರಗಳನ್ನೂ ಕೆಳಗಿನ ಕಣಿವೆಗಳನ್ನೂ ನೋಡುತ್ತ ಕಾರ್ನಾಡರು `ಓಹ್ ಎಷ್ಟೊಂದು ಸುಂದರವಾಗಿದೆಯಲ್ಲ’’ ಎಂದು ಉದ್ಗರಿಸುತ್ತ ಮಗುವಿನಂತೆ ಪುಟಿಯುತ್ತಿದ್ದರು.

ಅವರೊಬ್ಬ ಸೆಲೆಬ್ರಿಟಿಯಾದರೂ ಸರಳವ್ಯಕ್ತಿ. ಅಭಿನಯ ಅವರ ವೃತ್ತಿಯಾದರೂ ವ್ಯಕ್ತಿಯಾಗಿ ತೋರಿಕೆಯೇ ಇಲ್ಲದ ನೇರಗುಣದವರು. ಗೋಕರ್ಣದಲ್ಲಿ ನಡೆದ ಗೌರೀಶ ಕಾಯ್ಕಿಣಿಯವರ ಶತಮಾನೋತ್ಸವ ಕಾರ್ಯಕ್ರಮದಲ್ಲಿ ನಮ್ಮನ್ನು ತೋಟದ ಮನೆಯೊಂದರಲ್ಲಿ ಉಳಿಸಲಾಗಿತ್ತು. ಕಾರ್ನಾಡರು ನನಗಿಂತಲೂ ವೈದ್ಯೆಯಾದ ನನ್ನ ಮಗಳ ಜತೆ ಹೆಚ್ಚು ಮಾತನಾಡಿದರು. ಆದಿನ ನಾನು ಅವರ `ಆಡಾಡ್ತಾ ಆಯುಷ್ಯ’ ಒಳಗೊಂಡಂತೆ (ಬೆರಗು ಹುಟ್ಟಿಸುವ ಭಾಷೆಯುಳ್ಳ ವಿಶಿಷ್ಟ ಗದ್ಯಶೈಲಿಯ ಕೃತಿಯಿದು) ಕನ್ನಡದ ಆತ್ಮಕತೆಗಳ ಬಗ್ಗೆ ಉಪನ್ಯಾಸ ಮಾಡಿದೆ. ಬಸಳೆಸೊಪ್ಪಿನ ಹೊರೆಯನ್ನು ಅವರ ಕೈಯಿಂದ ಉಡುಗೊರೆ ಕೊಡಿಸಲಾಯಿತು. ಉಪನ್ಯಾಸದ ಬಳಿಕ ಕಾರ್ನಾಡರು ಕೇಳಿದರು: “ಭಾರತದ ಮೊಟ್ಟಮೊದಲ ಆತ್ಮಕಥೆ `ಅರ್ಧಕಥಾನಕ’ ಓದಿದ್ದೀರಾ?” “ಇಲ್ಲ” “ನೀವು ಓದಲೇಬೇಕು. ಅಪರೂಪದ ಪುಸ್ತಕ. 16ನೇ ಶತಮಾನದ್ದು’’. ಬೆಂಗಳೂರಿಗೆ ಹೋದೊಡನೆ ನೆರಳಚ್ಚನ್ನು ಕಳಿಸಿಕೊಟ್ಟರು. ವ್ಯವಹಾರ ಪ್ರಜ್ಞೆಯಿಲ್ಲದವನೂ ಕಾವ್ಯಪ್ರೇಮಿಯೂ ಆದ ಜೈನ ವ್ಯಾಪಾರಿಯೊಬ್ಬನ ರೋಚಕ ಅನುಭವಗಳ ಕಥನವದು.

ಹೀಗೆ ಸಣ್ಣಗೆ ಆರಂಭವಾದ ಪರಿಚಯ `ಅಮೀರ‍ಬಾಯಿ ಕರ್ನಾಟಕಿ’ ಪುಸ್ತಕದ ಸನ್ನಿವೇಶದಲ್ಲಿ ಧಕ್ಕೆಗೊಳಗಾಯಿತು. ನಾನು ಅಮೀರಬಾಯಿ ಸಂಶೋಧನೆಗೆಂದು ಪುಣೆ ಮುಂಬೈ ತಿರುಗಾಡುವಾಗ, ಮಹಾರಾಷ್ಟ್ರದಲ್ಲಿ ಕಾರ್ನಾಡರಿಗೆ ಸಿನಿಮಾ ಮತ್ತು ಸಾಹಿತ್ಯ ಕ್ಷೇತ್ರದಲ್ಲಿರುವ ಮರ್ಯಾದೆಯನ್ನು ಗಮನಿಸಿದ್ದೆ. ಮರಾಠಿ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾಡಿದ ದಿಟ್ಟ ಭಾಷಣವು-ಅದರಲ್ಲಿ ರಾಜಕೀಯ ಪಕ್ಷಗಳು ಸೈನೀಕರಣಗೊಳ್ಳುವುದರ ಬಗ್ಗೆ ಕಟುವಾದ ವಿಮರ್ಶೆಯಿದೆ- ಅಲ್ಲಿನ ಲೇಖಕರು ನೆನಪಿಟ್ಟಿದ್ದರು. ಕನ್ನಡ-ಮರಾಠಿ ಸಾಂಸ್ಕøತಿಕ ಬಾಂಧವ್ಯದ ಕೊಂಡಿಯಾಗಿದ್ದ ಅಮೀರಬಾಯಿ ಕುರಿತ ಹೊತ್ತಗೆಯನ್ನು ಅವರೇ ಬಿಡುಗಡೆ ಮಾಡಿದರೆ ಚೆನ್ನವೆನಿಸಿತು. ಹೇಗೂ `ಸಾಹಿತ್ಯ ಸಂಭ್ರಮ’ದ ಕಾರ್ಯಕ್ರಮಕ್ಕಾಗಿ ದಿನ ಮೊದಲೇ ಧಾರವಾಡಕ್ಕೆ ಬರುತ್ತಿದ್ದರು. ಹಿಂದಿನ ದಿನ ಸಂಜೆ ಬಿಡುಗಡೆ ಮಾಡಲು ಸಾಧ್ಯವೇ ಎಂದು ಕೇಳಿದೆ. ಕೂಡಲೇ ಒಪ್ಪಿದರು.

ಆದರೆ ಸಾಹಿತ್ಯ ಸಂಭ್ರಮ ಕಾರ್ಯಕ್ರಮದ ಸ್ವರೂಪದ ಬಗ್ಗೆ ಭಿನ್ನಮತ ವ್ಯಕ್ತಪಡಿಸಿ ನಾನು ಭಾಗವಹಿಸದೆ ಹೊರಗುಳಿದೆ. ಕಾರ್ನಾಡರು ಕರೆ ಮಾಡಿ “ನೀವು ಸಂಭ್ರಮಕ್ಕೆ ಬರಲು ನಿರಾಕರಿಸಿದರಂತೆ. ನಿಜವೇ?’’ ಎಂದು ಕೇಳಿದರು. ಹೌದೆಂದೆ. `ಹಾಗಿದ್ದಲ್ಲಿ ನಿಮ್ಮ ಕಾರ್ಯಕ್ರಮಕ್ಕೆ ಬರಲಾರೆ, ಕ್ಷಮಿಸಿ’ ಎಂದರು. `ಆಗಲಿ’ ಎಂದೆ. ಅವರಿಗೆ ತಾನು ಹಾಗೆ ಮಾಡಿದ್ದು ಸರಿಯಲ್ಲ ಅನಿಸಿರಬೇಕು. ಧಾರವಾಡದಲ್ಲಿರುವ ತಮ್ಮ ಒಡನಾಡಿ ಸುರೇಶ ಕುಲಕರ್ಣಿಯವರೊಟ್ಟಿಗೆ ತಮ್ಮ ಚಡಪಡಿಕೆ ಹಂಚಿಕೊಂಡರಂತೆ. ಆದರೆ ನಾನು ಕಾರ್ಯಕ್ರಮ ಮುಗಿದ ಬಳಿಕ ಪುಸ್ತಕದ ಗೌರವಪ್ರತಿ ಕಳಿಸಿಕೊಟ್ಟೆ. ಚೆನ್ನಾಗಿ ಬಂದಿದೆ ಎಂದು ಪತ್ರ ಬರೆದರು. ಅವರು ಆ ಘಟನೆಯನ್ನು ಮನಸ್ಸಿನಲ್ಲಿ ಇಟ್ಟುಕೊಂಡಂತೆ ಕಾಣಲಿಲ್ಲ. ತಮ್ಮ ಪರಿಚಿತರು ಯಾರಾದರೂ ಹಂಪಿ ನೋಡಬಯಸಿದರೆ, ನನ್ನ ಸಲಹೆ ಪಡೆಯಲು ಹೇಳುತ್ತಿದ್ದರು. ಒಮ್ಮೆ ಅವರ ನಾಟಕಗಳಲ್ಲಿ ನಟಿಸುವ ಬಂಗಾಳದ ನಟಿ ಹಂಪಿಯಲ್ಲಿ ಹಣ ಪಾಸ್‍ಪೋರ್ಟುಳ್ಳ ಪರ್ಸನ್ನು ಕಳೆದುಕೊಂಡರು. ಕಾರ್ನಾಡರು ಕರೆಮಾಡಿ ಆಕೆಗೆ ಬೆಂಗಳೂರಿನ ತನಕ ಬರಲು ಸಹಾಯ ಮಾಡುವುದು ಸಾಧ್ಯವೇ ಎಂದು ಕೇಳಿದರು.

ಸಂವಾದಕ್ಕೆ ಸದರವಾಗಿ ಸಿಗುವ ಲೇಖಕರಲ್ಲದ ಗಿರೀಶ್, ಬಾಳಿನ ಕೊನೆಯ ದಿನಗಳಲ್ಲಿ ತಮ್ಮ ಲಾಗಾಯ್ತಿನ ಸ್ವಭಾವಕ್ಕೆ ಪ್ರತಿಯಾಗಿ, ಸಾಂಸ್ಕøತಿಕ ನಾಯಕತ್ವದ ದನಿ ಮೊಳಗಿಸಿದರು. ತಮಗೆ ತಪ್ಪೆಂದು ಕಂಡ ವಿಷಯಗಳಲ್ಲಿ ಪರಿಣಾಮ ಲೆಕ್ಕಿಸದೆ ದಿಟ್ಟತನದ ನಿಲುವು ತೆಗೆದುಕೊಂಡರು. ತಮ್ಮ ತಾತ್ವಿಕ ರಾಜಕೀಯ ನಿಲುವಿಗೆ ವಿರುದ್ಧವಿರುವ ದೊಡ್ಡ ಸಾಧಕರನ್ನೂ ಲೆಕ್ಕಿಸದೆ ಶಾಬ್ದಿಕ ಹಿಂಸೆಗೆ ಗುರಿಪಡಿಸುವ ಈಚಿನ ಪದ್ಧತಿಗೆ ಬಲಿಯೂ ಆದರು. ಗೌರಿಲಂಕೇಶ್ ಸ್ಮರಣ ಕಾರ್ಯಕ್ರಮಕ್ಕೆ `ನಾನೂ ನಗರ ನಕ್ಸಲ್’ ಎಂದು ಕೊರಳಿಗೆ ಬೋರ್ಡು ಸಿಕ್ಕಿಸಿಕೊಂಡು ಬಂದ ಸನ್ನಿವೇಶ ನೆನಪಾಗುತ್ತಿದೆ. ಅದು ತೀರಾ ನಾಟಕೀಯವಾಗಿತ್ತು. ಆದರೆ ಅವರ ಸ್ಪಷ್ಟತೆ ಧೈರ್ಯ ಸಿಟ್ಟು ಹತಾಶೆ ಆಕ್ಟಿವಿಸಂಗಳ ಆತ್ಯಂತಿಕ ರೂಪಕವಾಗಿತ್ತು. ಆರೋಗ್ಯ ಸರಿಯಿರಲಿಲ್ಲ. ಕೈಯಲ್ಲಿ ಆಮ್ಲಜನಕದ ಸಿಲಿಂಡರನ್ನು ಹಿಡಿದಿದ್ದರು. ಅಪರಾಧಿಗಳ ಕೊರಳಿಗೆ ಫಲಕ ತೂಗುಹಾಕುವುದು ಕ್ರಮವಿದೆ. ಶಿಲುಬೆಗೇರಿದ ಕ್ರಿಸ್ತನ ಕೊರಳಿಗೂ `ನಜರೇತಿನ ಅರಸ’ ಎಂಬ ವ್ಯಂಗ್ಯದ ಫಲಕ ತೂಗಿಸಲಾಗಿತ್ತು. ಆದರೆ ಕಾರ್ನಾಡರು ಇದನ್ನು ಸ್ವತಃ ಧಾರಣಮಾಡಿದ್ದರು. `ವಿಚಾರ ಮಾಡುವುದು, ಪ್ರಭುತ್ವವನ್ನು ವಿಮರ್ಶಿಸುವುದು, ಮತಧರ್ಮದ ಹಿಂಸೆ ಖಂಡಿಸುವುದು ಅಪರಾಧವಾದರೆ ನಾನೂ ಅಪರಾಧಿ’ ಎಂಬ ನಾಟಕೀಯ ತಪ್ಪೊಪ್ಪಿಗೆಯನ್ನು ಅದು ಒಳಗೊಂಡಿತ್ತು. ಜನಪದ ಮಿತ್ ಮತ್ತು ಪುರಾಣಗಳನ್ನು ನಾಟಕಗಳಿಗೆ ದುಡಿಸಿಕೊಂಡ ಕಾರ್ನಾಡರು ನಾಗರಿಕ ಹಕ್ಕುಗಳ ವಿಷಯ ಬಂದರೆ, ಮುಕ್ತ ಸಮಾಜದ ಪರವಾದ ಆಕ್ಸಫರ್ಡ್ ಪದವೀಧರರೇ. ನಾಗರಿಕ ಸಮಾಜವೊಂದರಲ್ಲಿ ಸಹಜವಾಗಿ ಇರಬೇಕಾದ ಸ್ವಾತಂತ್ರ್ಯದ ಪರವಾಗಿ ಅವರು ಸದಾ ಆಲೋಚಿಸುತ್ತಿದ್ದರು. ಫಲಕದಲ್ಲಿರುವ ಬರೆಹವು ಸ್ವಹಸ್ತಾಕ್ಷರದಲ್ಲಿತ್ತು. ದೇಶದ ಸುದ್ದಿಯಾಗಬೇಕೆಂದೇ ಇಂಗ್ಲೀಶಿನಲ್ಲಿತ್ತು. ಅದರಲ್ಲಿ ದೇಶೀಭಾಷೆಯ ಲೇಖಕ ಎಂಬುದನ್ನು ದಾಖಲಿಸುವಂತೆ `ನಾನು ಕೂಡ’ ಎಂಬ ಎರಡು ಪದಗಳು ಕನ್ನಡದಲ್ಲಿದ್ದವು. ಉಸಿರ್ಗಟ್ಟಿಸುವ ಸನ್ನಿವೇಶಕ್ಕೆ ತುಡಿಯುವಂತೆ ಕೈಯಲ್ಲಿ ಆಕ್ಸಿಜನ್ ಸಿಲಿಂಡರಿತ್ತು.

ಅದೊಂದು ಅಭಿಮಾನ ಉಕ್ಕಿಸುವ ಮತ್ತು ಎದೆಕರಗಿಸುವ ಚಿತ್ರ; ಸಮಾಜದ ಹದುಳಕ್ಕಾಗಿ ತನ್ನ ಬೇನೆಯಲ್ಲೂ ಲೇಖಕ ರಿಸ್ಕ್ ತೆಗೆದುಕೊಳ್ಳುವ ಪ್ರತೀಕ. ಕಾರ್ನಾಡರಲ್ಲಿ ಲೆಕ್ಕಾಚಾರ ದ್ವಂದ್ವ ಇರಲಿಲ್ಲ. ಅಂತರಂಗಕ್ಕೆ ಸರಿಯೆನಿಸಿದ್ದನ್ನು ಹೇಳುವ-ಮಾಡುವ ಪ್ರಾಮಾಣಿಕತೆಯಿತ್ತು. ಇದು ಅವರ ಶವಸಂಸ್ಕಾರದಲ್ಲೂ ವ್ಯಕ್ತವಾಯಿತು. ಅವರು ಸತ್ತು ದೊಡ್ಡವರಾದವರು; ಅವರನ್ನು ಕೆಟ್ಟದಾಗಿ ನಡೆಸಿಕೊಂಡು ಬದುಕಿರುವ ನಾವು ಸಣ್ಣವರಾದೆವು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂತರಂಗ

ಪ್ರಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನ : ಸರ್ವ ಕ್ಷೇತ್ರದಲ್ಲಿಯೂ ರಾರಾಜಿಸುವ ಶಿಖರ ಶಿರೋಮಣಿಗಳು

Published

on

~ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ

ಆಗಸ್ಟ್ ದಿನಾಂಕ 8 ಮತ್ತು 9ನೇ ತಾರೀಕು,ಸಾಹಿತ್ಯದ ಬೃಹತ್ ಹಡಗೊಂದು ಶ್ರೀಮಂತನಗರಿ ದಾವಣಗೆರೆ. ಜ್ಞಾನದ ಗೂಡು ಸಾಹಿತ್ಯ ಕಲಾರಸಿಕರ ಬೀಡು. ವಿವಿಧ ಖಾದ್ಯಗಳ ರಸದೌತಣದ ನಾಡು,ಸರಸ್ವತಿ ನೆಲೆಸಿದ ನಾಡು ದಾವಣಗೆರೆ.

ಎಲ್ಲ ಕ್ಷೇತ್ರದಲ್ಲೂ ಮುಂಚೂಣಿಯಲ್ಲಿರುವ ಬಹು ತಾಳ್ಮೆಯ ಕುಟುಂಬವನ್ನು ನಿರ್ವಹಿಸಿಕೊಂಡು ಸಂಸಾರದ ನೌಕೆಯನ್ನು ಸಾಗಿಸುತ್ತಾ ಅದರ ಜೊತೆಗೆ ತಮ್ಮ ಮನೋರಂಜನೆ ಸಾಹಿತ್ಯ ಸಮಾಜ ಜ್ಞಾನ ವಿಜ್ಞಾನಗಳ ಸಕಲ ಕಲಾವಿದ್ಯೆಗಳಲ್ಲಿ ತೊಡಗಿಸಿಕೊಂಡಿರುವ ನಮ್ಮೆಲ್ಲರ ಮಹಿಳೆಯರ ಪರವಾಗಿ ಈ ನಮ್ಮ ಕನ್ನಡ ಸಾಹಿತ್ಯ ಪರಿಷತ್ತು ಒಂದು ಅತ್ಯದ್ಭುತವಾದ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.

ಕನ್ನಡ ಸಾಹಿತ್ಯ ಪರಿಷತ್ ಶ್ರೀ ಬಿ ವಾಮದೇವಪ್ಪ ತೊಗಲೇರಿ ಅಧ್ಯಕ್ಷರ ಸಮ್ಮುಖದಲ್ಲಿ ಈ ಮಹಿಳಾ ಸಾಹಿತ್ಯ ಸಮ್ಮೇಳನ ನಡೆಯುತ್ತಿದ್ದು . ಸಮ್ಮೇಳನದ ಅಧ್ಯಕ್ಷರು ಮಹಾಪೋಷಕರು ಡಾಕ್ಟರ್ ಪ್ರಭಾ ಮಲ್ಲಿಕಾರ್ಜುನ್, ಹಾಗೆಯೇ ಉದ್ಘಾಟಕರಾಗಿ ಮಹಿಳಾ ಆಯೋಗದ ಡಾಕ್ಟರ್ ನಾಗಲಕ್ಷ್ಮಿ ಚೌದರಿ, ಪ್ರಧಾನ ಸಂಚಾಲಕರು ರಾಜ ಯೋಗಿನಿ ಬ್ರಹ್ಮಕುಮಾರಿ ನೀಲಾಜಿ ಅವರೆಲ್ಲರಿಗೂ ಸ್ವಾಗತವನ್ನು ಬಯಸುತ್ತಾ ,
ಸ್ವಾಗತ ಸಮಿತಿ, ಹಣಕಾಸು ಸಮಿತಿ ,ಸಾಹಿತ್ಯ ಸಮಿತಿ, ಆಹಾರ ಸಮಿತಿ ,ಸಾಂಸ್ಕೃತಿಕ ಸಮಿತಿ ,ವೇದಿಕೆ ಸಮಿತಿ, ಸ್ಮರಣ ಸಂಚಿಕೆ ಸಮಿತಿ, ಪ್ರಚಾರ ಸಮಿತಿ, ಶಿಸ್ತು ಸಮಿತಿ ಮೆರವಣಿಗೆ ಸಮಿತಿ,ಪುಸ್ತಕ ಮಳಿಗೆ ಸಮಿತಿ ,ಅತಿಥಿ ಸತ್ಕಾರ ಸಮಿತಿ, ಸ್ಪರ್ಧಾ ಸಮಿತಿ, ಎಲ್ಲದಕ್ಕೂ ಸಹಕಾರ ಕೊಟ್ಟಂತಹ ಶ್ರೀ ಸಮರ್ಥ್ ಶಾಮನೂರ್ ಮಲ್ಲಿಕಾರ್ಜುನ್ ಶಾಸಕರು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ, ಶ್ರೀ ಸೋಮೇಶ್ವರ ಸಮೂಹ ಸಂಸ್ಥೆಗಳು.

 

ಎಲ್ಲ ಕಾರ್ಯಕ್ರಮಗಳನ್ನು ಸುಸಜ್ಜಿತವಾಗಿ ನಡೆಸಿ ಕೊಡುತ್ತಿರುವ ಶ್ರೀಮತಿ ಸುಮತಿ ಜಯಪ್ಪ, ಶ್ರೀಮತಿ ಯಶಾ ದಿನೇಶ್ ,ಶ್ರೀಮತಿ ವೀಣಾ ಕೃಷ್ಣಮೂರ್ತಿ , ಶ್ರೀಮತಿ ಸತ್ಯಭಾಮ ಮಂಜುನಾಥ್, ಶ್ರೀಮತಿ ಮಲ್ಲಮ್ಮ ಎಂ ಎಸ್ ,ಶ್ರೀಮತಿ ನೀಲಗುಂದ ಜಯಮ್ಮ, ಶ್ರೀಮತಿ ಜಯಲಕ್ಷ್ಮಿ ಮಹೇಶ್, ಶ್ರೀಮತಿ ಪ್ರೇಮ ಸೋಮಶೇಖರ್ ಹೇಮ ಗಣೇಶ್ ಶೇಟ್, ಸುನಿತಾ ಪ್ರಕಾಶ್, ವರದಿಗಾರರಾದ ಭಾರತಿ ಎಚ್ ,ಹಾಗೆ ಎ ಬಿ ರುದ್ರಮ್ಮ, ಆಮಂತ್ರಣ ಪತ್ರಿಕೆ ಎಲ್ಲಾ ಗೆಳತಿಯರು ಇವರೊೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕೊಡುತ್ತಿರುವ ಎಲ್ಲ ಪ್ರತಿಭೆಗಳಿಗೂ ಹಾಗೂ ಕವಿಗೋಷ್ಠಿ ಕವಿತೆಗಳನ್ನು ವಾಚಿಸುವವರೆಗೂ ಹಾಗೆಯೇ ಸಾಹಿತ್ಯ ರತ್ನ ಪ್ರಶಸ್ತಿ ಪ್ರಧಾನ, ಪಡೆಯುತ್ತಿರುವ ಎಲ್ಲ ಸಹೋದರಿಯರಿಗೂ ಅಭಿನಂದನೆಗಳು ಹಾಗೆ ಎಲ್ಲ ಮಹಿಳಾ ಮಣಿಗಳ ಆಗಮನಕ್ಕೆ ಶುಭವನ್ನು ಕೋರುತ್ತಿರುವ ಶ್ರೀಮತಿ ವೀಣಾ ಮಹಂತೇಶ್ ಬಿ ಎಮ್ ದಾವಣಗೆರೆ.

ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ.

Continue Reading

Trending